Dead Body Found : ಪಾರ್ಕ್‌ನ ಪೊದೆಯಲ್ಲಿತ್ತು ನಿವೃತ್ತ ಬ್ಯಾಂಕ್ ನೌಕರನ ಕೊಳೆತ ಶವ - Vistara News

ಹಾಸನ

Dead Body Found : ಪಾರ್ಕ್‌ನ ಪೊದೆಯಲ್ಲಿತ್ತು ನಿವೃತ್ತ ಬ್ಯಾಂಕ್ ನೌಕರನ ಕೊಳೆತ ಶವ

Dead Body Found: ಸಂಜೆ ವಾಕಿಂಗ್‌ಗೆ ಎಂದು ಮನೆಯಿಂದ ಹೊರ ಹೋದ ನಿವೃತ್ತ ಬ್ಯಾಂಕ್ ನೌಕರ ಏಕಾಏಕಿ ನಾಪತ್ತೆಯಾಗಿದ್ದರು. ಕುಟುಂಬಸ್ಥರು ಎಷ್ಟೇ ಹುಡುಕಾಡಿದರೂ ಸುಳಿವು ಸಿಕ್ಕಿರಲಿಲ್ಲ. ಇದೀಗ ನಾಪತ್ತೆಯಾಗಿದ್ದ ನೌಕರ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.

VISTARANEWS.COM


on

Dead body Found in Hasana
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ನಾಪತ್ತೆಯಾಗಿದ್ದ ನಿವೃತ್ತ ಬ್ಯಾಂಕ್ ನೌಕರ ಶವವಾಗಿ (Dead Body Found) ಪತ್ತೆಯಾಗಿದ್ದಾರೆ. ಮಂಜುನಾಥ್ (70) ಅನುಮಾನಾಸ್ಪದವಾಗಿ ಮೃತಪಟ್ಟವರು. ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ಘಟನೆ ನಡೆದಿದೆ.

ಅರಸೀಕೆರೆ ನಗರದ ಲಕ್ಷ್ಮಿಪುರ ಬಡಾವಣೆಯ ನಿವಾಸಿಯಾದ ಮಂಜುನಾಥ್, ಕಳೆದ ಮಾ.27 ರಂದು ಸಂಜೆ ಸಮಯ ವಾಕಿಂಗ್‌ಗೆ ಎಂದು ಮನೆಯಿಂದ ತೆರಳಿದ್ದರು. ರಾತ್ರಿ ಕಳೆದರು ಮಂಜುನಾಥ್‌ ಮನೆಗೆ ವಾಪಸ್ ಬಾರದೇ ಇದ್ದಾಗ, ಮನೆ ಮಂದಿ ಎಲ್ಲ ಕಡೆ ಹುಡುಕಾಡಿದ್ದಾರೆ. ನಂತರ ಯಾವುದೇ ಸುಳಿವು ಸಿಗದೇ ಇದ್ದಾಗ ಮಂಜುನಾಥ್‌ ಪತ್ನಿ ಸರೋಜಾ ನಿಂಬಣ್ಣನವರ್‌ ಮರುದಿನ ಮಾ.28 ರಂದು ಅರಸೀಕೆರೆ ನಗರ ಪೊಲೀಸ್ ಠಾಣೆಗೆ ಮಿಸ್ಸಿಂಗ್ ಕಂಪ್ಲೆಂಟ್ ನೀಡಿದ್ದರು.

ಇದೀಗ ಏ.2ರಂದು ಕಂತೇನಹಳ್ಳಿ ಕೆರೆ ಪಕ್ಕದ ಪಾರ್ಕ್‌ನಲ್ಲಿ ಗಬ್ಬು ನಾರುವ ವಾಸನೆ ಬರುತ್ತಿತ್ತು. ಈ ವೇಳೆ ಪರಿಶೀಲನೆ ನಡೆಸಿದಾಗ ಪೊದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಂಜುನಾಥ್ ಅವರ ಮೃತದೇಹ ಪತ್ತೆಯಾಗಿದೆ. ಕೂಡಲೇ ವಾಯು ವಿಹಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಜುನಾಥ್ ಅವರ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮರಣೋತ್ತರ ವರದಿ ಬಂದ ಮೇಲೆ ಇದು ಕೊಲೆನಾ ಅಥವಾ ಆಕಸ್ಮಿಕ ಸಾವಾ ಎಂಬುದುರ ಕುರಿತು ತಿಳಿಯಲಿದೆ. ಸದ್ಯ ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Cow Smugglers: ಕಂಟೇನರ್‌ ವಾಹನದಲ್ಲಿ ಅಕ್ರಮ ಗೋ ಸಾಗಣೆ; ಕಟುಕರ ಪಾಲಾಗುತ್ತಿದ್ದ ಗೋವುಗಳ ರಕ್ಷಣೆ

ಆಸ್ತಿ ವಿಚಾರಕ್ಕೆ ಕೊಡಲಿಯಿಂದ ಕೊಚ್ಚಿ ಅಣ್ಣನನ್ನೇ ಕೊಲೆಗೈದ ತಮ್ಮ!

ಬಾಗಲಕೋಟೆ: ತೋಟಕ್ಕೆ ಮೇವು ತರಲು ಹೊಗಿದ್ದ ವೇಳೆ ಕೊಡಲಿಯಿಂದ ಕೊಚ್ಚಿ ಅಣ್ಣನನ್ನೇ ತಮ್ಮ ಕೊಲೆಗೈದಿರುವ ಘಟನೆ ಜಿಲ್ಲೆಯ ಮುಧೋಳ ತಾಲೂಕಿನ ಜಾಲಿಬೇರ ಗ್ರಾಮದಲ್ಲಿ ನಡೆದಿದೆ. ಬೈಕ್‌ನಲ್ಲಿ ಹೊಗುತ್ತಿದ್ದಾಗ ಕುತ್ತಿಗೆಗೆ ಕೊಡಲಿಯಿಂದ ಕೊಚ್ಚಿ ಕೊಲೆ (Murder Case) ಮಾಡಲಾಗಿದೆ.

ಉತ್ತಮ ಯಾದವ್ (55) ಕೊಲೆಯಾದ ವ್ಯಕ್ತಿ. ಆನಂದ ಯಾದವ್ ಕೊಲೆ ಆರೋಪಿ. ಜಮೀನು ವಿಚಾರಕ್ಕೆ ಸಹೋದರನನ್ನೇ ವ್ಯಕ್ತಿ ಮಾಡಿದ್ದಾನೆ. ತೋಟದಲ್ಲಿ ಮೇವು ತರಲು ಹೋಗಿದ್ದಾಗ ಅಣ್ಣನ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿ ತಮ್ಮ ಕೊಂದಿದ್ದಾನೆ. ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅರ್ಧಂಬರ್ಧ ಸುಟ್ಟ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ

ತುಮಕೂರು: ಸುಟ್ಟ ಸ್ಥಿತಿಯಲ್ಲಿ ಯುವತಿಯೊಬ್ಬಳ ಮೃತದೇಹವು (Dead Body Found) ಪತ್ತೆಯಾಗಿದೆ. ತುಮಕೂರಿನ (Tumkur News) ಗುಬ್ಬಿ ತಾಲೂಕಿನ ದೊಡ್ಡಗುಣಿ ಬಳಿಯ ಶಿವಮೊಗ್ಗ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 206ರ (Highway Road) ಪಕ್ಕದಲ್ಲಿ ಘಟನೆ ನಡೆದಿದೆ.

ಸುಮಾರು 25 ವರ್ಷದ ಯುವತಿಯನ್ನು ಕೊಲೆ ಮಾಡಿ ಬಳಿಕ ಗುರುತು ಸಿಗಬಾರೆಂದು ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿದೆ. ಅರ್ಧಂಬರ್ಧ‌ ಸುಟ್ಟಿರುವ ಯುವತಿ ಶವ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಯುವತಿ ಮುಖವು ಸಂಪೂರ್ಣ ಸುಟ್ಟು ಹೋಗಿದ್ದು, ಗುರುತು ಪತ್ತೆ ಹಚ್ಚಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಸದ್ಯ ಚೇಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ವಾರಾಂತ್ಯದಲ್ಲಿ ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ ಅಬ್ಬರ

Karnataka Weather Forecast : ವಾರಾಂತ್ಯದಲ್ಲಿ ಬೆಂಗಳೂರು ಸೇರಿದಂತೆ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain alert) ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬಿರುಗಾಳಿ ವೇಗವು 50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ 40-50 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ (Karnataka weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಚಿತ್ರದುರ್ಗ, ಕೋಲಾರದಲ್ಲೂ ಮಳೆಯು ಅಬ್ಬರಿಸಲಿದೆ.

ಉತ್ತರ ಒಳನಾಡಿನ ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಚದುರಿದಂತೆ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Self Harming : ಕೊಡಗಿನಲ್ಲಿ ಬಾಲಕಿಯ ರುಂಡ ಕತ್ತರಿಸಿದ್ದ ಪ್ರೇಮಿ ನೇಣಿಗೆ ಶರಣು

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾದರೆ, ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾದರೆ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಸಾಧಾರಣ ಮಳೆ

ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮುಂಜಾನೆ ಮೋಡ ಕವಿದ ವಾತಾವರಣದೊಂದಿಗೆ ತಂಪು ಗಾಳಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು 32 ಮತ್ತು 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Prajwal Revanna case: ಪ್ರಜ್ವಲ್‌ ರೇವಣ್ಣ ವಿರುದ್ಧ ರೆಡ್‌ ಕಾರ್ನರ್ ಬ್ರಹ್ಮಾಸ್ತ್ರ; ಯಾವ ದೇಶದಲ್ಲಿದ್ದರೂ ಅರೆಸ್ಟ್‌ ಮಾಡಲು ಸಿದ್ಧತೆ?

Prajwal Revanna case: ಮೂರು ಕೇಸ್ ದಾಖಲಾಗಿದ್ದರೂ ಪ್ರಜ್ವಲ್‌ ರೇವಣ್ಣ ಇನ್ನೂ ಪತ್ತೆಯಾಗಿಲ್ಲ. ಈಗ ಇನ್ನೂ ಕೆಲ ಸಂತ್ರಸ್ತೆಯರು ಪ್ರಜ್ವಲ್ ವಿರುದ್ಧ ದೂರು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಪೆನ್‌ಡ್ರೈವ್‌ ಕೇಸ್ ಸಂತ್ರಸ್ತರಿದ್ದರೆ ಹೆಲ್ಪ್‌ಲೈನ್‌ಗೂ ಕಾಲ್‌ ಮಾಡಿ ಎಂದು ಎಸ್‌ಐಟಿ ಹೇಳಿದೆ. ಅದಕ್ಕೆ ಹಲವು ಕರೆಗಳು ಬರುತ್ತಿವೆ ಎನ್ನಲಾಗಿದೆ. ಇನ್ನೊಂದೆಡೆ ಈಗಾಗಲೇ ಪ್ರಜ್ವಲ್ ಬಂಧನಕ್ಕೆ ಬ್ಲೂಕಾರ್ನರ್ ನೋಟಿಸ್ ಅನ್ನು ಜಾರಿ ಮಾಡಲಾಗಿತ್ತು. ಆದರೆ, 15 ದಿನವಾದರೂ ಪ್ರಜ್ವಲ್‌ ಸುಳಿವು ಇಲ್ಲದೇ ಇರುವ ಕಾರಣ ರೆಡ್‌ ಕಾರ್ನರ್‌ ನೋಟಿಸ್‌ ನೀಡಿ ಅರೆಸ್ಟ್‌ ಮಾಡಲು ಎಸ್‌ಐಟಿ ಸಿದ್ಧತೆಯನ್ನು ನಡೆಸಿದೆ ಎಂದು ಹೇಳಲಾಗಿದೆ.

VISTARANEWS.COM


on

Prajwal Revanna case SIT to issue Red Corner Notice against Prajwal
Koo

ಬೆಂಗಳೂರು: ಈಗಾಗಲೇ ಲೈಂಗಿಕ ದೌರ್ಜನ್ಯ (Physical abuse) ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna case) ವಿರುದ್ಧ ಒಟ್ಟು ಮೂರು ಅತ್ಯಾಚಾರ ಕೇಸ್‌ಗಳು ದಾಖಲಾಗಿವೆ. ಆದರೆ, ಅವರು ವಿದೇಶದಲ್ಲಿ ತಲೆಮರೆಸಿಕೊಂಡು ಇರುವ ಕಾರಣ ಈಗಾಗಲೇ ಬ್ಲೂಕಾರ್ನರ್ ನೋಟಿಸ್ ನೀಡಲಾಗಿತ್ತು. ಆದರೆ, ಶತಾಯಗತಾಯ ಅವರನ್ನು ಬಂಧಿಸಿ ಕರೆತರಲೇಬೇಕು ಎಂದು ತೀರ್ಮಾನಿಸಿರುವ ಎಸ್‌ಐಟಿ ಈಗ ರೆಡ್‌ ಕಾರ್ನರ್ ಬ್ರಹ್ಮಾಸ್ತ್ರ ಬಿಡಲು ಮುಂದಾಗಿದೆ.

ಮೂರು ಕೇಸ್ ದಾಖಲಾಗಿದ್ದರೂ ಪ್ರಜ್ವಲ್‌ ರೇವಣ್ಣ ಇನ್ನೂ ಪತ್ತೆಯಾಗಿಲ್ಲ. ಈಗ ಇನ್ನೂ ಕೆಲ ಸಂತ್ರಸ್ತೆಯರು ಪ್ರಜ್ವಲ್ ವಿರುದ್ಧ ದೂರು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಪೆನ್‌ಡ್ರೈವ್‌ ಕೇಸ್ ಸಂತ್ರಸ್ತರಿದ್ದರೆ ಹೆಲ್ಪ್‌ಲೈನ್‌ಗೂ ಕಾಲ್‌ ಮಾಡಿ ಎಂದು ಎಸ್‌ಐಟಿ ಹೇಳಿದೆ. ಅದಕ್ಕೆ ಹಲವು ಕರೆಗಳು ಬರುತ್ತಿವೆ ಎನ್ನಲಾಗಿದೆ. ಇನ್ನೊಂದೆಡೆ ಈಗಾಗಲೇ ಪ್ರಜ್ವಲ್ ಬಂಧನಕ್ಕೆ ಬ್ಲೂಕಾರ್ನರ್ ನೋಟಿಸ್ ಅನ್ನು ಜಾರಿ ಮಾಡಲಾಗಿತ್ತು. ಆದರೆ, 15 ದಿನವಾದರೂ ಪ್ರಜ್ವಲ್‌ ಸುಳಿವು ಇಲ್ಲದೇ ಇರುವ ಕಾರಣ ರೆಡ್‌ ಕಾರ್ನರ್‌ ನೋಟಿಸ್‌ ನೀಡಿ ಅರೆಸ್ಟ್‌ ಮಾಡಲು ಎಸ್‌ಐಟಿ ಸಿದ್ಧತೆಯನ್ನು ನಡೆಸಿದೆ ಎಂದು ಹೇಳಲಾಗಿದೆ.

ರೆಡ್‌ ಕಾರ್ನರ್‌ ಜಾರಿಯಾದರೆ ಏನಾಗುತ್ತೆ?

ಪ್ರಜ್ವಲ್ ರೇವಣ್ಣ ಬಂಧನಕ್ಕೆ ರೆಡ್ ಕಾರ್ನರ್ ನೋಟಿಸ್ ಹೊರಡಿಸಲು ಮನವಿ ಮಾಡಲು ಎಸ್‌ಐಟಿ ಚಿಂತನೆ ನಡೆಸಿದೆ. ಇದಕ್ಕೆ ಮೊದಲು ಸಿಬಿಐ ಸಂಸ್ಥೆಯು ಇಂಟರ್‌ಪೋಲ್‌ ಅನ್ನು ಸಂಪರ್ಕಿಸಿ ರೆಡ್ ಕಾರ್ನರ್ ನೋಟಿಸ್‌ಗೆ ಬೇಡಿಕೆ ಸಲ್ಲಿಸಬೇಕು. ರೆಡ್ ಕಾರ್ನರ್ ನೋಟಿಸ್ ಜಾರಿಯಾದರೆ, ಯಾವ ದೇಶದಲ್ಲಿದ್ದರೂ ಆ ದೇಶದ ಪೊಲೀಸರು ಆರೋಪಿಯನ್ನು ಬಂಧಿಸಿ ಸಂಬಂಧಪಟ್ಟ ದೇಶಕ್ಕೆ ಮಾಹಿತಿ ನೀಡುತ್ತಾರೆ. ನಂತರ ಇಲ್ಲಿನ ಪೊಲೀಸರು ಹೋಗಿ ಆತನನ್ನು ಕರೆತರುತ್ತಾರೆ. ಹೀಗಾಗಿ ಪ್ರಜ್ವಲ್‌ ವಿರುದ್ಧ ಈ ಕ್ರಮಕ್ಕೆ ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ ಎನ್ನಲಾಗಿದೆ.

ಬ್ಲ್ಯೂ ಕಾರ್ನರ್‌ ನೋಟಿಸ್‌ ಏಕೆ?

ಬ್ಲೂ ಕಾರ್ನರ್ ನೋಟಿಸ್‌ ಜಾರಿಯಾದ ಬಳಿಕ ಇಂಟರ್‌ಪೋಲ್ ಇತರ ಕಡೆಗಳಿಗೂ ಆರೋಪಿಯ ಮಾಹಿತಿಯನ್ನು ಕಳಿಸಿ, ಆರೋಪಿಯ ನೆಲೆಯ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುತ್ತದೆ. ಆರೋಪಿ ಯಾವ ದೇಶದಲ್ಲಿ ಇದ್ದಾರೆ? ಎಲ್ಲಿ ಲೊಕೇಟ್ ಆಗಿದ್ದಾರೆ ಅನ್ನುವ ಚಲನವಲನಗಳನ್ನು ಈ ಮೂಲಕ ಪತ್ತೆ ಮಾಡುತ್ತಾರೆ. ಬಳಿಕ ಸಿಬಿಐಗೆ ಆರೋಪಿಯ ಚಲನವಲನ ಬಗ್ಗೆ ಮಾಹಿತಿ ನೀಡುತ್ತಾರೆ. ಸಿಬಿಐ ಮೂಲಕ ಎಸ್ಐಟಿಗೆ ಪ್ರಜ್ವಲ್ ಎಲ್ಲಿದ್ದಾರೆ ಅನ್ನುವ ಮಾಹಿತಿ ಸಿಗುತ್ತದೆ. ಹೀಗಾಗಿ ಈ ನೋಟಿಸ್‌ ನೀಡಲಾಗಿದ್ದು, ಇದು ಸುಳಿವು ಪಡೆಯಲು ಮುಖ್ಯವಾಗಿದೆ. ಆದರೆ, ಇದರಿಂದ ಪ್ರಜ್ವಲ್‌ ಬಗ್ಗೆ ಸರಿಯಾದ ಮಾಹಿತಿ ಸಿಗುತ್ತಿಲ್ಲ ಎನ್ನಲಾಗಿದೆ.

ಕಠಿಣ ಸೆಕ್ಷನ್‌ ಜಡಿದ SIT! ಯಾವುದಕ್ಕೆ ಎಷ್ಟು ವರ್ಷ ಜೈಲು?

ಎರಡು ದಿನದ ಹಿಂದಷ್ಟೇ ಪ್ರಜ್ವಲ್‌ ರೇವಣ್ಣ ಮೇಲೆ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಮೂರನೇ ಎಫ್ಐಆರ್‌ನಲ್ಲಿ ಒಂದಕ್ಕಿಂತ ಒಂದು ಕಠಿಣ ಸೆಕ್ಷನ್‌ಗಳನ್ನು ಹಾಕಲಾಗಿದೆ. ಹೀಗಾಗಿ ಪ್ರಜ್ವಲ್‌ ಒಂದು ವೇಳೆ ಅರೆಸ್ಟ್‌ ಆಗಿ ಅಪರಾಧ ಸಾಬೀತಾದರೆ ಜೈಲು ಶಿಕ್ಷೆ ಗ್ಯಾರಂಟಿ ಎನ್ನಲಾಗಿದೆ.

ಸಿಐಡಿಯ ಸೈಬರ್ ಕ್ರೈಂನಲ್ಲಿ ದಾಖಲಾಗಿರುವ ಈ ಪ್ರಕರಣದಲ್ಲೂ ಸಾಕಷ್ಟು ಗಂಭೀರವಾದ ಸೆಕ್ಷನ್‌ಗಳನ್ನು ಹಾಕಲಾಗಿದೆ. ಇದೇ ಮೇ 8ರಂದು ದಾಖಲಾಗಿರುವ ಎಫ್ಐಆರ್ ಇದಾಗಿದ್ದು, ಐಪಿಸಿ 376(2)(N), 376(2)(K), 354(A) 354(B), 354(C) ಹಾಗೂ 506 ಸೆಕ್ಷನ್‌ಗಳನ್ನು ಹಾಕಲಾಗಿದೆ. ಅದರಲ್ಲಿ 376(2)(n) ಅನ್ನು ಸೆಕ್ಷನ್ ನಿರಂತರವಾಗಿ ಅತ್ಯಾಚಾರವನ್ನು ನಡೆಸಲಾಗಿದೆ ಎಂದು ದಾಖಲು ಮಾಡಲಾಗಿದೆ.

ಇನ್ನು ಇತ್ತ ಇದೇ ವಿಚಾರವಾಗಿ ಇಬ್ಬರು ಸರ್ಕಾರಿ ಅಧಿಕಾರಿಗಳನ್ನೂ ಕೂಡ ಎಸ್‌ಐಟಿ ತನಿಖೆ ವೇಳೆ ವಿಚಾರಣೆ ನಡೆಸಿದೆ.‌ ವರ್ಗಾವಣೆ ಮಾಡಿಸುತ್ತೇನೆ ಎಂದು ಹೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬುದು ಸಂತ್ರಸ್ತೆಯಾದ ಸರ್ಕಾರಿ ಅಧಿಕಾರಿಯ ಆರೋಪವಾಗಿದೆ. ಮೊದಲಿಗೆ ಈ ವಿಚಾರದಲ್ಲಿ ನಮ್ಮನ್ನು ಎಳಿಯಬೇಡಿ ಎಂದಿದ್ದ ಸಂತ್ರಸ್ತೆಯರು ಕೊನೆಗೂ ಎಸ್‌ಐಟಿ ಮುಂದೆ ಹಾಜರಾಗಿ ಕೆಲವು ವಿಷಯಗಳನ್ನು ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ.

ಇತ್ತ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ಕಿಡ್ನ್ಯಾಪ್ ಮಾಡಿದ್ದು ಮೂರು ಜನರಲ್ಲ ಏಳು ಜನ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎನ್ನಲಾಗಿದೆ. ಕರೆದೊಯ್ಯಲು ಒಬ್ಬರು, ಕೂಡಿ ಹಾಕಲು ಒಬ್ಬರು ಎಂಬಂತೆ ಒಟ್ಟಾರೆಯಾಗಿ ಏಳು ಜನರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಎಸ್‌ಐಟಿ ಹೇಳುತ್ತಿದೆ. ಈ ವಿಚಾರವಾಗಿ ತನಿಖೆ ನಡೆಯುತ್ತಿದೆ.

ಯಾವ ಯಾವ ಸೆಕ್ಷನ್‌ ಏನು ಹೇಳುತ್ತದೆ?

  • 376(2)(N)- ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ.
    ಶಿಕ್ಷೆ – ಕನಿಷ್ಠ 10 ವರ್ಷ ಹಾಗೂ ಗರಿಷ್ಠ ಜೀವಾವಧಿ ಶಿಕ್ಷೆ
  • ಸೆಕ್ಷನ್‌ – IPC 376(2)(K) – ಜನಪ್ರತಿನಿಧಿಯಾಗಿ ಅಧಿಕಾರ ದುರ್ಬಳಕೆ, ಅತ್ಯಾಚಾರ
    ಶಿಕ್ಷೆ – ಕನಿಷ್ಠ 7ರಿಂದ 10 ವರ್ಷ ಹಾಗೂ ಗರಿಷ್ಠ ಜೀವಾವಧಿ ಶಿಕ್ಷೆ
  • ಸೆಕ್ಷನ್‌ – IPC 354(A) – ಲೈಂಗಿಕ ಕೃತ್ಯಕ್ಕೆ ಆಮಿಷವೊಡ್ಡಿದ ರೀತಿ ನಡವಳಿಕೆ, ದೌರ್ಜನ್ಯ
    ಶಿಕ್ಷೆ – ಗರಿಷ್ಠ 3 ವರ್ಷ ಜೈಲು ಶಿಕ್ಷೆ
  • ಸೆಕ್ಷನ್‌ – IPC 354(B) – ಮಹಿಳೆಯ ಬಟ್ಟೆ ಹಿಡಿದು ಎಳೆದಾಡಿ ಮಾನಭಂಗ ಯತ್ನ
    ಶಿಕ್ಷೆ – ಗರಿಷ್ಠ ಮೂರು ವರ್ಷ ಜೈಲು ಶಿಕ್ಷೆ
  • ಸೆಕ್ಷನ್‌ – IPC 354(C)-ಖಾಸಗಿ ಚಿತ್ರ ಸೆರೆಹಿಡಿದು ವೀಕ್ಷಣೆ ಮಾಡುವುದು
    ಶಿಕ್ಷೆ – ಗರಿಷ್ಠ ಏಳು ವರ್ಷ ಜೈಲು ಶಿಕ್ಷೆ
  • ಸೆಕ್ಷನ್‌ – IPC 506 – ಬೆದರಿಕೆ ಹಾಕಿರುವುದಾಗಿ ಪ್ರಜ್ವಲ್‌ ವಿರುದ್ಧ FIRನಲ್ಲಿ ಉಲ್ಲೇಖ
    ಶಿಕ್ಷೆ – ಕನಿಷ್ಠ 2 ವರ್ಷ ಅಥವಾ ಏಳು ವರ್ಷ ಜೈಲು ಶಿಕ್ಷೆ

ಹೀಗೆ ಮೂರನೇ ಎಫ್ಐಆರ್‌ನಲ್ಲಿ ಕಠಿಣ ಸೆಕ್ಷನ್‌ಗಳನ್ನು ಎಸ್ಐಟಿ ಹಾಕಿದ್ದು, ಪ್ರಜ್ವಲ್‌ಗೆ ಭಾರಿ ಉರುಳಾಗಲಿದೆ.

ಸುಳ್ಳು ಕೇಸ್‌ ಹಾಕಲು ಮಹಿಳೆಯನ್ನು SIT ಸಂಪರ್ಕ ಮಾಡಿಲ್ಲ; ಕಾಟ ಕೊಟ್ಟವನನ್ನು ಬಿಡಲ್ಲ!

ಈಗಾಗಲೇ ಲೈಂಗಿಕ ದೌರ್ಜನ್ಯ (Physical abuse) ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna case) ವಿರುದ್ಧ ಸುಳ್ಳು ಕೇಸ್ (Fake case) ಹಾಕಲು ತನಗೆ ಒತ್ತಾಯಿಸಲಾಗುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (National Commission for Women) ಮಹಿಳೆಯೊಬ್ಬರು ನೀಡಿರುವ ದೂರು ಹೊಸ ತಿರುವನ್ನು ಪಡೆದುಕೊಂಡಿದೆ. ಎಸ್‌ಐಟಿಯಿಂದ ಯಾರೂ ಆಕೆಯನ್ನು ಸಂಪರ್ಕಿಸಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ. ಆದರೆ, ಸಂಪರ್ಕ ಮಾಡಿದವರ ಬಗ್ಗೆ ಪತ್ತೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ತಿಳಿಸಿದೆ.

ಸಂತ್ರಸ್ತ ಮಹಿಳೆಗೆ ಎಸ್ಐಟಿ ಅಧಿಕಾರಿ ಎಂದು ಕರೆ ಮಾಡಿ ತೊಂದರೆ ಮಾಡಿರುವ ಆರೋಪ ವಿಚಾರವಾಗಿ ಎಸ್ಐಟಿ ಉನ್ನತ ಮೂಲಗಳು ಸ್ಪಷ್ಟನೆ ನೀಡಿದೆ. ಅಲ್ಲದೆ, ಎನ್‌ಸಿಡಬ್ಲ್ಯು ದೂರನ್ನು ಎಸ್‌ಐಟಿಗೆ ರವಾನಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್‌ಐಟಿ, ಗುರುವಾರವಷ್ಟೇ ಈ ಮಹಿಳೆಯ ಬಗ್ಗೆ ಎಸ್‌ಐಟಿಗೆ ತಿಳಿದುಬಂದಿದೆ.

ಎಸ್‌ಐಟಿಯಿಂದ ಯಾರೂ ಆಕೆಯನ್ನು ಈ ಹಿಂದೆ ಸಂಪರ್ಕಿಸಿಲ್ಲ. ಮಹಿಳಾ ಆಯೋಗಕ್ಕೆ ದೂರು ನೀಡಿದ ಮಹಿಳೆಯು ನಮಗೆ ಯಾವುದೇ ದೂರು ನೀಡಿಲ್ಲ. ಮಹಿಳೆಗೆ ಕರೆ ಮಾಡಿದ ವ್ಯಕ್ತಿಯ ಗುರುತು ತಿಳಿಯಲು ಎಸ್‌ಐಟಿ ವಿಚಾರಣೆ ಆರಂಭಿಸಿದೆ. ಅಂತಹವರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತೆ ಕೋರಿ ಮಹಿಳಾ ಆಯೋಗಕ್ಕೆ ಪತ್ರ ಬರೆದಿರುವ ಮಹಿಳೆ

ಪ್ರಜ್ವಲ್‌ ರೇವಣ್ಣ ಹಾಗೂ ಎಚ್‌.ಡಿ ರೇವಣ್ಣ (HD revanna jailed) ಅವರ ವಿರುದ್ಧ ರಾಜಕೀಯ ಪ್ರೇರಿತ ಸುಳ್ಳು ದೂರುಗಳನ್ನು ದಾಖಲಿಸಲಾಗುತ್ತಿದೆ ಎಂದು ಜೆಡಿಎಸ್‌ (JDS) ಪ್ರತಿಭಟನೆ ನಡೆಸುತ್ತಿರುವುದರ ಹಿನ್ನೆಲೆಯಲ್ಲಿ ಈ ದೂರು ಮಹತ್ವ ಪಡೆದುಕೊಂಡಿದೆ. ಸೂಕ್ತ ಭದ್ರತೆಗೆ ಕೋರಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆಯೊಬ್ಬರು ಪತ್ರ ಬರೆದಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡುವಂತೆ ನನಗೆ ಒತ್ತಡ ಹಾಕಲಾಗುತ್ತಿದೆ. ಮೂವರು ಸಿವಿಲ್ ಡ್ರೆಸ್‌ನಲ್ಲಿ ಬಂದವರು ಒತ್ತಡ ಹಾಕಿದ್ದು, ಇಲ್ಲದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಬೆದರಿಕೆ ಹಾಕಿದ್ದಾರೆ. ನನ್ನ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆ ಪತ್ರ ಬರೆದಿದ್ದಾರೆ.

ಮಹಿಳೆ ಪತ್ರ ಬರೆದಿರುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ಮಾಹಿತಿ ನೀಡಿದೆ. ಹಾಸನ ಮೂಲದ ಮಹಿಳೆ ಪತ್ರ ಬರೆದಿದ್ದು, ಪತ್ರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮಾಹಿತಿ ನೀಡಲಾಗಿದೆ. ದೂರಿನ ಪ್ರತಿ ಹಾಗೂ ಸೂಕ್ತ ಭದ್ರತೆಗೆ ಮನವಿ ಮಾಡಲಾಗಿದೆ.

ಇದನ್ನೂ ಓದಿ: Lok Sabha Election 2024: ಲೋಕಸಭಾ ಪ್ರಚಾರಕ್ಕೆ 26 ಸಾವಿರ ಕಿಲೋ ಮೀಟರ್ ಸಂಚಾರ, ದಿನಕ್ಕೆ ಸರಾಸರಿ 14-18 ಗಂಟೆ ಸಿಎಂ ಪ್ರಚಾರ!

ಪ್ರಜ್ವಲ್ ಕೇಸ್‌ನಲ್ಲಿ ಮಹಿಳೆಗೆ ದೂರು ನೀಡುವಂತೆ ಒತ್ತಡ ಹಾಕಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಆಯೋಗದಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಇಂದು ಮತ್ತೆ ಪತ್ರ ಬರೆಯುತ್ತೇವೆ. ಆಯೋಗದ ಅಧಿಕಾರಿಗಳು ಪತ್ರ ಬರೆದ ಮಹಿಳೆಯನ್ನು ಭೇಟಿ ಮಾಡುತ್ತೇವೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ.

Continue Reading

ಕ್ರೈಂ

Prajwal Revanna case: ಪ್ರಜ್ವಲ್‌ ಮೇಲೆ ಒಟ್ಟು ಮೂರು FIR; ಮೂರರಲ್ಲೂ ವಾಂಟೆಡ್‌ ಲಿಸ್ಟ್‌ನಲ್ಲಿ ಸಂಸದ!

Prajwal Revanna case: ದೇಶ ಬಿಟ್ಟು ಪರಾರಿಯಾದ ಪ್ರಜ್ವಲ್‌ ಸದ್ಯಕ್ಕೆ 3 ಕೇಸ್‌ಗಳಲ್ಲಿ ವಾಂಟೆಡ್‌ ಆಗಿದ್ದಾರೆ. ಅವರ ಮೇಲೆ ಯಾವ ಯಾವ ದಿನ ಕೇಸ್‌ ಅನ್ನು ಹಾಕಲಾಗಿದೆ ಎಂಬುದನನ್ನು ನೋಡುವುದಾದರೆ, ಏಪ್ರಿಲ್ 28ರಂದು ಹೊಳೆನರಸೀಪುರ ಠಾಣೆಯಲ್ಲಿ ಮೊದಲ ಎಫ್‌ಐಆರ್, ಮೇ 1ರಂದು ಬೆಂಗಳೂರಿನ ಸಿಐಡಿ ಠಾಣೆಯಲ್ಲಿ ಎರಡನೇ ಎಫ್‌ಐಆರ್ ಹಾಗೂ ಮೇ 8ರಂದು ಬೆಂಗಳೂರಿನ ಸಿಐಡಿ ಠಾಣೆಯಲ್ಲಿ ಮತ್ತೊಂದು ಕೇಸ್‌ ಅನ್ನು ದಾಖಲು ಮಾಡಲಾಗಿದೆ. ಹೀಗಾಗಿ ಈ ಕೇಸ್‌ಗಳು ಪ್ರಜ್ವಲ್‌ಗೆ ಖಂಡಿತವಾಗಿಯೂ ಮುಳುವಾಗುವ ಲಕ್ಷಣಗಳೂ ಕಾಣಿಸುತ್ತಿವೆ.

VISTARANEWS.COM


on

Prajwal Revanna case Three FIRs against Prajwal Wanted list in all three
Koo

ಬೆಂಗಳೂರು: ಈಗಾಗಲೇ ಲೈಂಗಿಕ ದೌರ್ಜನ್ಯ (Physical abuse) ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna case) ವಿರುದ್ಧ ಈಗ ಮೂರು ಕೇಸ್‌ಗಳು ದಾಖಲಾಗಿವೆ. ಅಲ್ಲದೆ, ಈ ಮೂರೂ ಕೇಸ್‌ಗಳಲ್ಲಿ ಅವರು ವಾಂಟೆಡ್‌ ಲಿಸ್ಟ್‌ನಲ್ಲಿದ್ದಾರೆ.

ಪೆನ್‌ಡ್ರೈವ್ ಪಾಪಕೂಪದಲ್ಲಿ ಪ್ರಜ್ವಲ್‌ ಮೇಲೆ ಕೇಸ್ ಮೇಲೆ ಕೇಸ್‌ ಅನ್ನು ಹಾಕಲಾಗಿದೆ. ಅವರ ಮೇಲೆ ದೂರು ನೀಡಲು ಸಂತ್ರಸ್ತೆಯರು ಮೊದಲು ಹಿಂದೇಟು ಹಾಕಿದ್ದಾರಾದರೂ ಈಗ ಮಹಿಳಾ ಅಧಿಕಾರಿಗಳೂ ಸೇರಿದಂತೆ ಹಲವರು ಮುಂದೆ ಬರುತ್ತಿದ್ದಾರೆ. ಹೀಗಾಗಿ ಈ ಕೇಸ್‌ಗಳು ಪ್ರಜ್ವಲ್‌ಗೆ ಖಂಡಿತವಾಗಿಯೂ ಮುಳುವಾಗುವ ಲಕ್ಷಣಗಳೂ ಕಾಣಿಸುತ್ತಿವೆ.

ಪ್ರಜ್ವಲ್ ರೇವಣ್ಣ ವಿರುದ್ಧ ಇದುವರೆಗೂ ಮೂರು FIR ದಾಖಲಾಗಿದೆ. ಮೇ 8ರ ಬುಧವಾರ ಸಿಐಡಿ ಠಾಣೆಯಲ್ಲಿ ಹೊಸ ಎಫ್‌ಐಆರ್ ಅನ್ನು ದಾಖಲು ಮಾಡಲಾಗಿತ್ತು. ಇದು ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾದ ಲೇಟೆಸ್ಟ್ ರೇಪ್ ಕೇಸ್ ಆಗಿದೆ. ಇದರಲ್ಲಿ IPC 376(2)(N), 376(2)(K), 354(A), 354(B) ಹಾಗೂ 354C ಹಾಗೂ 506 ಅಡಿಯಲ್ಲಿ ಕೇಸ್‌ ಅನ್ನು ಬುಕ್‌ ಮಾಡಲಾಗಿದೆ.

ವಾಂಟೆಡ್ ಪ್ರಜ್ವಲ್!

ದೇಶ ಬಿಟ್ಟು ಪರಾರಿಯಾದ ಪ್ರಜ್ವಲ್‌ ಸದ್ಯಕ್ಕೆ 3 ಕೇಸ್‌ಗಳಲ್ಲಿ ವಾಂಟೆಡ್‌ ಆಗಿದ್ದಾರೆ. ಅವರ ಮೇಲೆ ಯಾವ ಯಾವ ದಿನ ಕೇಸ್‌ ಅನ್ನು ಹಾಕಲಾಗಿದೆ ಎಂಬುದನನ್ನು ನೋಡುವುದಾದರೆ, ಏಪ್ರಿಲ್ 28ರಂದು ಹೊಳೆನರಸೀಪುರ ಠಾಣೆಯಲ್ಲಿ ಮೊದಲ ಎಫ್‌ಐಆರ್, ಮೇ 1ರಂದು ಬೆಂಗಳೂರಿನ ಸಿಐಡಿ ಠಾಣೆಯಲ್ಲಿ ಎರಡನೇ ಎಫ್‌ಐಆರ್ ಹಾಗೂ ಮೇ 8ರಂದು ಬೆಂಗಳೂರಿನ ಸಿಐಡಿ ಠಾಣೆಯಲ್ಲಿ ಮತ್ತೊಂದು ಕೇಸ್‌ ಅನ್ನು ದಾಖಲು ಮಾಡಲಾಗಿದೆ.

ಕಠಿಣ ಸೆಕ್ಷನ್‌ ಜಡಿದ SIT! ಯಾವುದಕ್ಕೆ ಎಷ್ಟು ವರ್ಷ ಜೈಲು?

ಎರಡು ದಿನದ ಹಿಂದಷ್ಟೇ ಪ್ರಜ್ವಲ್‌ ರೇವಣ್ಣ ಮೇಲೆ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಮೂರನೇ ಎಫ್ಐಆರ್‌ನಲ್ಲಿ ಒಂದಕ್ಕಿಂತ ಒಂದು ಕಠಿಣ ಸೆಕ್ಷನ್‌ಗಳನ್ನು ಹಾಕಲಾಗಿದೆ. ಹೀಗಾಗಿ ಪ್ರಜ್ವಲ್‌ ಒಂದು ವೇಳೆ ಅರೆಸ್ಟ್‌ ಆಗಿ ಅಪರಾಧ ಸಾಬೀತಾದರೆ ಜೈಲು ಶಿಕ್ಷೆ ಗ್ಯಾರಂಟಿ ಎನ್ನಲಾಗಿದೆ.

ಸಿಐಡಿಯ ಸೈಬರ್ ಕ್ರೈಂನಲ್ಲಿ ದಾಖಲಾಗಿರುವ ಈ ಪ್ರಕರಣದಲ್ಲೂ ಸಾಕಷ್ಟು ಗಂಭೀರವಾದ ಸೆಕ್ಷನ್‌ಗಳನ್ನು ಹಾಕಲಾಗಿದೆ. ಇದೇ ಮೇ 8ರಂದು ದಾಖಲಾಗಿರುವ ಎಫ್ಐಆರ್ ಇದಾಗಿದ್ದು, ಐಪಿಸಿ 376(2)(N), 376(2)(K), 354(A) 354(B), 354(C) ಹಾಗೂ 506 ಸೆಕ್ಷನ್‌ಗಳನ್ನು ಹಾಕಲಾಗಿದೆ. ಅದರಲ್ಲಿ 376(2)(n) ಅನ್ನು ಸೆಕ್ಷನ್ ನಿರಂತರವಾಗಿ ಅತ್ಯಾಚಾರವನ್ನು ನಡೆಸಲಾಗಿದೆ ಎಂದು ದಾಖಲು ಮಾಡಲಾಗಿದೆ.

ಇನ್ನು ಇತ್ತ ಇದೇ ವಿಚಾರವಾಗಿ ಇಬ್ಬರು ಸರ್ಕಾರಿ ಅಧಿಕಾರಿಗಳನ್ನೂ ಕೂಡ ಎಸ್‌ಐಟಿ ತನಿಖೆ ವೇಳೆ ವಿಚಾರಣೆ ನಡೆಸಿದೆ.‌ ವರ್ಗಾವಣೆ ಮಾಡಿಸುತ್ತೇನೆ ಎಂದು ಹೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬುದು ಸಂತ್ರಸ್ತೆಯಾದ ಸರ್ಕಾರಿ ಅಧಿಕಾರಿಯ ಆರೋಪವಾಗಿದೆ. ಮೊದಲಿಗೆ ಈ ವಿಚಾರದಲ್ಲಿ ನಮ್ಮನ್ನು ಎಳಿಯಬೇಡಿ ಎಂದಿದ್ದ ಸಂತ್ರಸ್ತೆಯರು ಕೊನೆಗೂ ಎಸ್‌ಐಟಿ ಮುಂದೆ ಹಾಜರಾಗಿ ಕೆಲವು ವಿಷಯಗಳನ್ನು ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ.

ಇತ್ತ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ಕಿಡ್ನ್ಯಾಪ್ ಮಾಡಿದ್ದು ಮೂರು ಜನರಲ್ಲ ಏಳು ಜನ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎನ್ನಲಾಗಿದೆ. ಕರೆದೊಯ್ಯಲು ಒಬ್ಬರು, ಕೂಡಿ ಹಾಕಲು ಒಬ್ಬರು ಎಂಬಂತೆ ಒಟ್ಟಾರೆಯಾಗಿ ಏಳು ಜನರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಎಸ್‌ಐಟಿ ಹೇಳುತ್ತಿದೆ. ಈ ವಿಚಾರವಾಗಿ ತನಿಖೆ ನಡೆಯುತ್ತಿದೆ.

ಯಾವ ಯಾವ ಸೆಕ್ಷನ್‌ ಏನು ಹೇಳುತ್ತದೆ?

  • 376(2)(N)- ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ.
    ಶಿಕ್ಷೆ – ಕನಿಷ್ಠ 10 ವರ್ಷ ಹಾಗೂ ಗರಿಷ್ಠ ಜೀವಾವಧಿ ಶಿಕ್ಷೆ
  • ಸೆಕ್ಷನ್‌ – IPC 376(2)(K) – ಜನಪ್ರತಿನಿಧಿಯಾಗಿ ಅಧಿಕಾರ ದುರ್ಬಳಕೆ, ಅತ್ಯಾಚಾರ
    ಶಿಕ್ಷೆ – ಕನಿಷ್ಠ 7ರಿಂದ 10 ವರ್ಷ ಹಾಗೂ ಗರಿಷ್ಠ ಜೀವಾವಧಿ ಶಿಕ್ಷೆ
  • ಸೆಕ್ಷನ್‌ – IPC 354(A) – ಲೈಂಗಿಕ ಕೃತ್ಯಕ್ಕೆ ಆಮಿಷವೊಡ್ಡಿದ ರೀತಿ ನಡವಳಿಕೆ, ದೌರ್ಜನ್ಯ
    ಶಿಕ್ಷೆ – ಗರಿಷ್ಠ 3 ವರ್ಷ ಜೈಲು ಶಿಕ್ಷೆ
  • ಸೆಕ್ಷನ್‌ – IPC 354(B) – ಮಹಿಳೆಯ ಬಟ್ಟೆ ಹಿಡಿದು ಎಳೆದಾಡಿ ಮಾನಭಂಗ ಯತ್ನ
    ಶಿಕ್ಷೆ – ಗರಿಷ್ಠ ಮೂರು ವರ್ಷ ಜೈಲು ಶಿಕ್ಷೆ
  • ಸೆಕ್ಷನ್‌ – IPC 354(C)-ಖಾಸಗಿ ಚಿತ್ರ ಸೆರೆಹಿಡಿದು ವೀಕ್ಷಣೆ ಮಾಡುವುದು
    ಶಿಕ್ಷೆ – ಗರಿಷ್ಠ ಏಳು ವರ್ಷ ಜೈಲು ಶಿಕ್ಷೆ
  • ಸೆಕ್ಷನ್‌ – IPC 506 – ಬೆದರಿಕೆ ಹಾಕಿರುವುದಾಗಿ ಪ್ರಜ್ವಲ್‌ ವಿರುದ್ಧ FIRನಲ್ಲಿ ಉಲ್ಲೇಖ
    ಶಿಕ್ಷೆ – ಕನಿಷ್ಠ 2 ವರ್ಷ ಅಥವಾ ಏಳು ವರ್ಷ ಜೈಲು ಶಿಕ್ಷೆ

ಹೀಗೆ ಮೂರನೇ ಎಫ್ಐಆರ್‌ನಲ್ಲಿ ಕಠಿಣ ಸೆಕ್ಷನ್‌ಗಳನ್ನು ಎಸ್ಐಟಿ ಹಾಕಿದ್ದು, ಪ್ರಜ್ವಲ್‌ಗೆ ಭಾರಿ ಉರುಳಾಗಲಿದೆ.

ಸುಳ್ಳು ಕೇಸ್‌ ಹಾಕಲು ಮಹಿಳೆಯನ್ನು SIT ಸಂಪರ್ಕ ಮಾಡಿಲ್ಲ; ಕಾಟ ಕೊಟ್ಟವನನ್ನು ಬಿಡಲ್ಲ!

ಈಗಾಗಲೇ ಲೈಂಗಿಕ ದೌರ್ಜನ್ಯ (Physical abuse) ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna case) ವಿರುದ್ಧ ಸುಳ್ಳು ಕೇಸ್ (Fake case) ಹಾಕಲು ತನಗೆ ಒತ್ತಾಯಿಸಲಾಗುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (National Commission for Women) ಮಹಿಳೆಯೊಬ್ಬರು ನೀಡಿರುವ ದೂರು ಹೊಸ ತಿರುವನ್ನು ಪಡೆದುಕೊಂಡಿದೆ. ಎಸ್‌ಐಟಿಯಿಂದ ಯಾರೂ ಆಕೆಯನ್ನು ಸಂಪರ್ಕಿಸಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ. ಆದರೆ, ಸಂಪರ್ಕ ಮಾಡಿದವರ ಬಗ್ಗೆ ಪತ್ತೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ತಿಳಿಸಿದೆ.

ಸಂತ್ರಸ್ತ ಮಹಿಳೆಗೆ ಎಸ್ಐಟಿ ಅಧಿಕಾರಿ ಎಂದು ಕರೆ ಮಾಡಿ ತೊಂದರೆ ಮಾಡಿರುವ ಆರೋಪ ವಿಚಾರವಾಗಿ ಎಸ್ಐಟಿ ಉನ್ನತ ಮೂಲಗಳು ಸ್ಪಷ್ಟನೆ ನೀಡಿದೆ. ಅಲ್ಲದೆ, ಎನ್‌ಸಿಡಬ್ಲ್ಯು ದೂರನ್ನು ಎಸ್‌ಐಟಿಗೆ ರವಾನಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್‌ಐಟಿ, ಗುರುವಾರವಷ್ಟೇ ಈ ಮಹಿಳೆಯ ಬಗ್ಗೆ ಎಸ್‌ಐಟಿಗೆ ತಿಳಿದುಬಂದಿದೆ.

ಎಸ್‌ಐಟಿಯಿಂದ ಯಾರೂ ಆಕೆಯನ್ನು ಈ ಹಿಂದೆ ಸಂಪರ್ಕಿಸಿಲ್ಲ. ಮಹಿಳಾ ಆಯೋಗಕ್ಕೆ ದೂರು ನೀಡಿದ ಮಹಿಳೆಯು ನಮಗೆ ಯಾವುದೇ ದೂರು ನೀಡಿಲ್ಲ. ಮಹಿಳೆಗೆ ಕರೆ ಮಾಡಿದ ವ್ಯಕ್ತಿಯ ಗುರುತು ತಿಳಿಯಲು ಎಸ್‌ಐಟಿ ವಿಚಾರಣೆ ಆರಂಭಿಸಿದೆ. ಅಂತಹವರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತೆ ಕೋರಿ ಮಹಿಳಾ ಆಯೋಗಕ್ಕೆ ಪತ್ರ ಬರೆದಿರುವ ಮಹಿಳೆ

ಪ್ರಜ್ವಲ್‌ ರೇವಣ್ಣ ಹಾಗೂ ಎಚ್‌.ಡಿ ರೇವಣ್ಣ (HD revanna jailed) ಅವರ ವಿರುದ್ಧ ರಾಜಕೀಯ ಪ್ರೇರಿತ ಸುಳ್ಳು ದೂರುಗಳನ್ನು ದಾಖಲಿಸಲಾಗುತ್ತಿದೆ ಎಂದು ಜೆಡಿಎಸ್‌ (JDS) ಪ್ರತಿಭಟನೆ ನಡೆಸುತ್ತಿರುವುದರ ಹಿನ್ನೆಲೆಯಲ್ಲಿ ಈ ದೂರು ಮಹತ್ವ ಪಡೆದುಕೊಂಡಿದೆ. ಸೂಕ್ತ ಭದ್ರತೆಗೆ ಕೋರಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆಯೊಬ್ಬರು ಪತ್ರ ಬರೆದಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡುವಂತೆ ನನಗೆ ಒತ್ತಡ ಹಾಕಲಾಗುತ್ತಿದೆ. ಮೂವರು ಸಿವಿಲ್ ಡ್ರೆಸ್‌ನಲ್ಲಿ ಬಂದವರು ಒತ್ತಡ ಹಾಕಿದ್ದು, ಇಲ್ಲದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಬೆದರಿಕೆ ಹಾಕಿದ್ದಾರೆ. ನನ್ನ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆ ಪತ್ರ ಬರೆದಿದ್ದಾರೆ.

ಮಹಿಳೆ ಪತ್ರ ಬರೆದಿರುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ಮಾಹಿತಿ ನೀಡಿದೆ. ಹಾಸನ ಮೂಲದ ಮಹಿಳೆ ಪತ್ರ ಬರೆದಿದ್ದು, ಪತ್ರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮಾಹಿತಿ ನೀಡಲಾಗಿದೆ. ದೂರಿನ ಪ್ರತಿ ಹಾಗೂ ಸೂಕ್ತ ಭದ್ರತೆಗೆ ಮನವಿ ಮಾಡಲಾಗಿದೆ.

ಇದನ್ನೂ ಓದಿ: Lok Sabha Election 2024: ಲೋಕಸಭಾ ಪ್ರಚಾರಕ್ಕೆ 26 ಸಾವಿರ ಕಿಲೋ ಮೀಟರ್ ಸಂಚಾರ, ದಿನಕ್ಕೆ ಸರಾಸರಿ 14-18 ಗಂಟೆ ಸಿಎಂ ಪ್ರಚಾರ!

ಪ್ರಜ್ವಲ್ ಕೇಸ್‌ನಲ್ಲಿ ಮಹಿಳೆಗೆ ದೂರು ನೀಡುವಂತೆ ಒತ್ತಡ ಹಾಕಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಆಯೋಗದಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಇಂದು ಮತ್ತೆ ಪತ್ರ ಬರೆಯುತ್ತೇವೆ. ಆಯೋಗದ ಅಧಿಕಾರಿಗಳು ಪತ್ರ ಬರೆದ ಮಹಿಳೆಯನ್ನು ಭೇಟಿ ಮಾಡುತ್ತೇವೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ.

Continue Reading

ಪ್ರಮುಖ ಸುದ್ದಿ

Prajwal Revanna Case: ಸ್ಫೋಟಕ ಆಡಿಯೊ ರಿಲೀಸ್‌ ಮಾಡಿದ ಬೆನ್ನಲ್ಲೇ ವಕೀಲ ದೇವರಾಜೇಗೌಡ ವಶಕ್ಕೆ

Prajwal Revanna Case: ಹಾಸನ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿ ಸ್ಫೋಟಕ ಆಡಿಯೊ ರಿಲೀಸ್‌ ಮಾಡಿದ ಬೆನ್ನಲ್ಲೇ ವಕೀಲ ದೇವರಾಜೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸ್ಫೋಟಕ ಆಡಿಯೊ ಹೊರಬಿದ್ದಿದೆ. ಇತ್ತೀಚೆಗೆ ಈ ಹಗರಣದಲ್ಲಿ ಡಿಸಿಎಂ ಡಿಕೆಶಿ ಕೈವಾಡ ಎಂದು ಆರೋಪಿಸಿದ್ದ ವಕೀಲ ದೇವರಾಜೇಗೌಡ, ಇದೀಗ ಮತ್ತೊಂದು ಆಡಿಯೊ ಬಾಂಬ್‌ ಹಾಕಿದ್ದಾರೆ. ದೇವರಾಜೇಗೌಡ-ಶಿವರಾಮೇಗೌಡ ನಡುವಿನ ಮಾತುಕತೆಯ 36 ಸೆಕೆಂಡ್ಸ್‌ ಆಡಿಯೊ ವೈರಲ್‌ ಆಗಿದೆ. ಇದರ ಬೆನ್ನಲ್ಲೇ ವಕೀಲ ದೇವರಾಜೇಗೌಡ ಅವರನ್ನು ಹಿರಿಯೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಿರಿಯೂರಿನಲ್ಲಿ ವಕೀಲ ದೇವರಾಜೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಎಸ್‌ಐಟಿಗೆ ಒಪ್ಪಿಸಲು ತಯಾರಿ ನಡೆಸಿದ್ದಾರೆ. ಹೊಳೆನರಸೀಪುರ ಪೊಲೀಸರು ನೀಡಿದ ಮಾಹಿತಿ ಮೇರೆಗೆ ಬೆಂಗಳೂರಿನಿಂದ ಬಳ್ಳಾರಿಗೆ ಹೋಗುತ್ತಿದ್ದಾಗ ಅವರನ್ನು ವಶಕ್ಕೆ ಪಡೆಯಲಾಗಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಠಾಣೆಯಲ್ಲಿ ದೇವರಾಜೇಗೌಡ ವಿರುದ್ಧ ಏ.1ರಂದು ಕೇಸ್‌ ದಾಖಲಾಗಿತ್ತು.

ಆಡಿಯೊ ವೈರಲ್‌

ಪೊಲೀಸರು ವಶಕ್ಕೆ ಪಡೆಯುವ ಮುನ್ನ ವಿಡಿಯೊದಲ್ಲಿ ಮಾತನಾಡಿರುವ ವಕೀಲ ದೇವರಾಜೇಗೌಡ, ನಾನು ಎಲ್ಲೂ ಕಾಣೆ ಆಗಿಲ್ಲಾ. ಮೂರು ದಿನ ರಜೆ ಇರುವುದರಿಂದ ದೇವಾಲಯಕ್ಕೆ ಹೊಗುತ್ತಿದ್ದೇನೆ. ಕಾಣೆ ಆಗುವ ಪರಿಸ್ಥಿತಿ ನನಗೆ ಬಂದಿಲ್ಲ. ಕುಟುಂಬ ಸಮೇತ ದೇವಸ್ಥಾನಕ್ಕೆ ತೆರಳಿದ್ದೇನೆ. ಆಗಾಗಿ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಇನ್ನು ಇದೇ ವೇಳೆ ಹಾಸನ ಅಶ್ಲೀಲ‌ ವಿಡಿಯೋ ಪ್ರಕರಣದ ಸಂಬಂಧ ಅಜ್ಞಾತ ಸ್ಥಳದಿಂದ ದೇವರಾಜೇಗೌಡ ಮೂರು ಆಡಿಯೊ ಕ್ಲಿಪ್ ಬಿಡುಗಡೆ ಮಾಡಿದ್ದಾರೆ. ಮಾಜಿ ಸಂಸದ ಶಿವರಾಮೇಗೌಡ ಜತೆ ಮಾತನಾಡಿರುವ ಎನ್ನಲಾದ ಎರಡು ಆಡಿಯೊ ತುಣುಕು ವೈರಲ್‌ ಆಗಿದೆ.

ಹನಿಟ್ರ್ಯಾಪ್ ಸಂಬಂಧ ಮಹಿಳೆ ಗಂಡನ ಜತೆ ಮಾತನಾಡಿದ ಒಂದು ಆಡಿಯೊ ಇದೆ. ಇನ್ನು ಡಿಕೆಶಿ ವಿಚಾರ ಶಿವರಾಮೇಗೌಡ ಜತೆ ದೇವರಾಜೇಗೌಡ ಮಾತನಾಡುತ್ತಿರುವ ಆಡಿಯೊ ಕೂಡ ಇದ್ದು, ಎಸ್‌ಐಟಿ ವಿಚಾರಣೆಯಲ್ಲಿ ಡಿಕೆಶಿ ಹೆಸರೇಳದಂತೆ ಶಿವರಾಮೇಗೌಡ ಸೂಚಿಸಿದ್ದಾರೆ.

ಇದನ್ನೂ ಓದಿ | Prajwal Revanna case: ಪ್ರಜ್ವಲ್‌ ಮೇಲೆ ಮತ್ತೊಂದು ಅತ್ಯಾಚಾರ ಕೇಸ್‌; ಕಠಿಣ ಸೆಕ್ಷನ್‌ ಜಡಿದ SIT! ಯಾವುದಕ್ಕೆ ಎಷ್ಟು ವರ್ಷ ಜೈಲು?

ದೇವರಾಜೇಗೌಡ-ಶಿವರಾಮೇಗೌಡ ನಡುವಿನ ಮಾತುಕತೆಯ 36 ಸೆಕೆಂಡ್ಸ್‌ ಆಡಿಯೊ ವೈರಲ್‌ ಆಗಿದ್ದು, ಇದರಲ್ಲಿ ನಮಗೆ ಏನಾದರೂ ಎಸ್‌ಐಟಿ ನೋಟಿಸ್‌ ಕೊಡುತ್ತಾರಾ ಎಂದು ವಕೀಲ ಕೇಳಿದ್ದಾರೆ. ಆಗ ಈ ಹಿಂದಿನಿಂದ ರೇವಣ್ಣ ಫ್ಯಾಮಿಲಿ ವಿರುದ್ಧ ಹೋರಾಡುತ್ತಿದ್ದೀನಿ, ಕೋರ್ಟ್‌ನಲ್ಲೂ ಹೋರಾಟ ಮಾಡುತ್ತಿದ್ದೀನಿ ಅಂತ ಹೇಳು ಎಂದು ದೇವರಾಜೇಗೌಡಗೆ ಶಿವರಾಮೇಗೌಡ ಕಿವಿಮಾತು ಹೇಳಿರುವುದು ಆಡಿಯೊದಲ್ಲಿ ಇದೆ.

Continue Reading
Advertisement
Actor Upendra
ಸಿನಿಮಾ8 mins ago

Actor Upendra: ಉಪೇಂದ್ರ ಅಭಿಮಾನಿಗಳಿಗೆ ಗುಡ್‌ನ್ಯೂಸ್‌; ರಿ-ರಿಲೀಸ್‌ ಆಗಲಿದೆ ಈ ಕ್ಲಾಸಿಕ್‌ ಸಿನಿಮಾ

Bengaluru News
ಬೆಂಗಳೂರು34 mins ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Madhu Bangarappa
ಕರ್ನಾಟಕ44 mins ago

ನಿಗದಿಗಿಂತ ಹೆಚ್ಚಿನ ಫೀಸ್ ತೆಗೆದುಕೊಂಡರೆ ಕ್ರಮ; ಖಾಸಗಿ ಶಾಲೆಗಳಿಗೆ ಮಧು ಬಂಗಾರಪ್ಪ ಖಡಕ್‌ ಎಚ್ಚರಿಕೆ

Navneet Rana
ದೇಶ53 mins ago

Navneet Rana: ಮೋದಿಯವರ ಸಿಂಹಗಳು, ರಾಮಭಕ್ತರು ಗಲ್ಲಿ ಗಲ್ಲಿಯಲ್ಲಿದ್ದಾರೆ ಹುಷಾರ್‌!- ಓವೈಸಿಗೆ ಮತ್ತೆ ನವನೀತ್‌ ರಾಣಾ ಟಾಂಗ್

Murder Case in kodagu
ಕೊಡಗು2 hours ago

Murder Case : ಕೊಡಗು ಹತ್ಯೆ ಕೇಸ್‌; ಬಾಲಕಿ ರುಂಡ ಕಂಡು ವಿಚಿತ್ರವಾಗಿ ವರ್ತಿಸಿದ ಸಹೋದರ! ಬೆಚ್ಚಿ ಬಿದ್ದ ಪೊಲೀಸರು

Arvind Kejriwal
ದೇಶ2 hours ago

Arvind Kejriwal: ಜೈಲಿನಿಂದ ಬಂದ ಕೇಜ್ರಿವಾಲ್‌ಗೆ ಆರತಿ ಬೆಳಗಿ, ಹೂ ಹಾರ ಹಾಕಿ ಸ್ವಾಗತಿಸಿದ ತಾಯಿ! ವಿಡಿಯೊ ನೋಡಿ

Siddaramaiah
ಕರ್ನಾಟಕ2 hours ago

Siddaramaiah: ಮೋದಿ ಸುಳ್ಳಿನ ಸರದಾರ, ಭಾವನಾತ್ಮಕ ಆಟ ನಡೆಯಲ್ಲ; ಸಿದ್ದರಾಮಯ್ಯ ತಿರುಗೇಟು

accident case
ಕ್ರೈಂ2 hours ago

Accident Case : ಬ್ಯಾನರ್‌ ಕಟ್ಟುವಾಗ ಕರೆಂಟ್‌ ಶಾಕ್‌ಗೆ ವ್ಯಕ್ತಿ ಸಾವು; ಡಿವೈಡರ್‌ಗೆ ಗುದ್ದಿ ಪಲ್ಟಿಯಾದ ಕಾರು

Chinese app
ವಿದೇಶ2 hours ago

Chinese Apps: ಟಿಕ್‌ಟಾಕ್‌ ಮಾತ್ರ ಅಲ್ಲ.. ಚೀನಾದ ಈ ಆಪ್‌ಗಳೂ ಅಷ್ಟೇ ಡೇಂಜರಸ್‌; ಶಾಕಿಂಗ್‌ ವರದಿ ಔಟ್‌

Jyoti Rai
ಕಿರುತೆರೆ3 hours ago

Jyoti Rai: ನೋವಿನ ನಡುವೆಯೂ ಸಹಾಯ ಹಸ್ತ ಚಾಚಿದ ನಟಿ ಜ್ಯೋತಿ ರೈ; ವಿಡಿಯೊ ವೈರಲ್‌ ಮಾಡುವಂತೆ ಸವಾಲು ಹಾಕಿದ್ದೇಕೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ1 day ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ1 day ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ1 day ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ1 day ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ2 days ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

ಟ್ರೆಂಡಿಂಗ್‌