Domestic Violence : ಕಿರುಕುಳ ಎಂದು ದೂರು ಕೊಡಲು ಹೋದರೆ ಠಾಣೆಯಲ್ಲೇ ಕತ್ತು ಕೊಯ್ದ ಗಂಡ Vistara News

ಕರ್ನಾಟಕ

Domestic Violence : ಕಿರುಕುಳ ಎಂದು ದೂರು ಕೊಡಲು ಹೋದರೆ ಠಾಣೆಯಲ್ಲೇ ಕತ್ತು ಕೊಯ್ದ ಗಂಡ

Domestic Violence : ಗಂಡ ಮನೆಯಲ್ಲಿ ವಿಪರೀತ ಹಿಂಸೆ ನೀಡುತ್ತಿದ್ದಾನೆ ಎಂದು ಆಕೆ ಪೊಲೀಸ್‌ ಠಾಣೆಗೆ ದೂರು ನೀಡಿದರೆ, ಅವನು ಅಲ್ಲಿಯೂ ಬಿಡದೆ ಕುತ್ತಿಗೆಗೆ ಚೂರಿಯಿಂದ ಇರಿದಿದ್ದಾನೆ.

VISTARANEWS.COM


on

Husband attacks wife in HAsana
ಗಾಯಾಳು ಶಿಲ್ಪಾ ಮತ್ತು ಹರೀಶ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ಮನೆಯಲ್ಲಿ ವಿಪರೀತ ಹಿಂಸೆ (Domestic Violence) ಕೊಡುತ್ತಿದ್ದ ಗಂಡನ ವಿರುದ್ಧ ಮಹಿಳೆಯೊಬ್ಬರು ಧೈರ್ಯ ಮಾಡಿ ಠಾಣೆಗೆ ದೂರು ನೀಡಲು ಹೋದರೆ ಗಂಡ ಪೊಲೀಸರ ಮುಂದೆಯೇ ಆಕೆಯ ಕತ್ತು ಕೊಯ್ದ (Husband attacks wife) ಭಯಾನಕ ಘಟನೆ ಹಾಸನ ಮಹಿಳಾ ಪೊಲೀಸ್‌ ಠಾಣೆಯಲ್ಲಿ (Hasana womens police station) ನಡೆದಿದೆ.

ಹರೀಶ್‌ ಎಂಬಾತನೇ ತನ್ನ ಹೆಂಡತಿ ಶಿಲ್ಪಾ ಅವರನ್ನು ಪೊಲೀಸ್‌ ಠಾಣೆಯಲ್ಲೇ ಕತ್ತು ಕೊಯ್ದು ದಾರ್ಷ್ಟ್ಯ ಮೆರೆದ ಗಂಡ. ಆತ ಪೊಲೀಸ್‌ ಠಾಣೆಯಲ್ಲಿ ಪೊಲೀಸರ ಮುಂದೆಯೇ ತನ್ನ ಪತ್ನಿಯ ಕತ್ತನ್ನು ಚಾಕುವಿನಿಂದ ಕೊಯ್ದು ಕೊಲೆಗೆ ಯತ್ನಿಸಿದ್ದಾನೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿರುವಾಗಲೇ ಕೊಲೆ ಮಾಡಲು ಮುಂದಾಗಿದ್ದಾನೆ.

ಶಿಲ್ಪಾ ಮತ್ತು ಹರೀಶ್‌ ನಡುವೆ ಆರು ವರ್ಷದ ಹಿಂದೆ ಮದುವೆ ನಡೆದಿತ್ತು. ಇಬ್ಬರೂ ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯಲ್ಲಿ ವಾಸಿಸುತ್ತಿದ್ದರು. ಹರೀಶ್‌ ಒಬ್ಬ ಅನುಮಾನ ಪಿಶಾಚಿ. ಆತ ಪ್ರತಿ ಹಂತದಲ್ಲೂ ಹೆಂಡತಿಯ ಮೇಲೆ ಅನುಮಾನಿಸುತ್ತಿದ್ದ. ಹೀಗಾಗಿ ಪ್ರತಿ ನಿತ್ಯ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಅವನು ಬಂದು ಹೊಡೆಯುತ್ತಿದ್ದ. ಇತ್ತ ಶಿಲ್ಪಾಗೂ ಗಂಡನ ಮೇಲೆ ಅನುಮಾನ ಇತ್ತು. ಹೀಗಾಗಿ ಮನೆಯಲ್ಲಿ ಜಗಳ ಎನ್ನುವುದು ಸಾಮಾನ್ಯವಾಗಿತ್ತು.

ಇದನ್ನೂ ಓದಿ : Bride ends life : ಮದುವೆಗೆ ಇನ್ನು ಎರಡೇ ದಿನ ಬಾಕಿ; ವರನ ಮನೆಯಲ್ಲೇ ಯುವತಿ ಆತ್ಮಹತ್ಯೆ

ಹಲವಾರು ಬಾರಿ ಪರಸ್ಪರ ಹಲ್ಲೆ, ಕೊಲೆಯತ್ನಗಳು ನಡೆದಾಗ ಇನ್ನು ಕೊಂದೇ ಬಿಡುತ್ತಾನೆ ಅನಿಸಿದಾಗ ಶಿಲ್ಪಾ ಆತನ ವಿರುದ್ದ ಹಾಸನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ಗಂಡ ತೊಂದರೆ ಕೊಡುತ್ತಿದ್ದಾನೆ ಎಂಬ ಶಿಲ್ಪಾ ದೂರಿನ ಅನ್ವಯ ಪೊಲೀಸರು ಎಚ್ಚರಿಕೆ ನೀಡಲೆಂದು ಹರೀಶ್‌ ನನ್ನು ಬರ ಹೇಳಿದ್ದರು. ಶಿಲ್ಪಾ ಕೂಡಾ ಬಂದಿದ್ದಳು. ಪಿಎಸ್‌ಐ ಉಮಾ ಅವರು ಹರೀಶ್‌ ನನ್ನು ವಿಚಾರಣೆ ನಡೆಸಿದ್ದರು.

ಹೀಗೆ ವಿಚಾರಣೆ ನಡೆಸಿದ ಬೆನ್ನಿಗೇ ಹರೀಶ್‌ ಠಾಣೆಯಲ್ಲೇ ಇದ್ದ ಪತ್ನಿಯ ಮೇಲೆ ಏರಿಹೋಗಿದ್ದಾನೆ. ತಾನು ಮೊದಲೇ ತಂದಿದ್ದ ಚಾಕುವನ್ನು ಬಳಸಿ ಪತ್ನಿಯ ಕುತ್ತಿಗೆಯನ್ನೇ ಕೊಯ್ದಿದ್ದಾನೆ. ಕೊನೆಗೆ ಪೊಲೀಸರು ಮಧ್ಯ ಪ್ರವೇಶ ಮಾಡಿ ಆತನ ಕೈಯಲ್ಲಿದ್ದ ಚಾಕುವನ್ನು ಕಿತ್ತುಕೊಂಡಿದ್ದಾರೆ.

ಗಾಯಾಳು ಶಿಲ್ಪಾಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ನಡುವೆ, ಹರೀಶ್‌ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

HD Kumaraswamy: ವೈಯಕ್ತಿಕವಾಗಿ ಕೆಣಕಿದರೆ ನಾನು ಸುಮ್ಮನಿರಲ್ಲ ಎಂದ ಎಚ್‌ಡಿಕೆ

HD Kumaraswamy:

VISTARANEWS.COM


on

HD Kumaraswamy
Koo

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆಗಳು ಸೇರಿ ರಾಜ್ಯ ಎದುರಿಸುತ್ತಿರುವ ತೀವ್ರ ಬರದ ಬಗ್ಗೆ ಕಲಾಪದಲ್ಲಿ ಚರ್ಚೆ ಮಾಡುವುದು ನನ್ನ ಉದ್ದೇಶ. ಆದರೆ, ನನ್ನನ್ನು ವೈಯಕ್ತಿಕವಾಗಿ ಕೆಣಕಿದರೆ ನಾನು ಸುಮ್ಮನಿರುವ ಪ್ರಶ್ನೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

ಸುವರ್ಣಸೌಧದಲ್ಲಿ ಕಲಾಪದಲ್ಲಿ ಭಾಗಿಯಾಗುವ ಮುನ್ನ ಮಾತನಾಡಿದ ಅವರು, ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸುವುದು ನನ್ನ ಆದ್ಯತೆ. ಬರ, ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ನನ್ನ ಮಹತ್ವ ಇರುತ್ತದೆ. ಈ ಚಳಿಗಾಲ ಅಧಿವೇಶನದಲ್ಲಿ ಆ ಬಗ್ಗೆ ಚರ್ಚೆ ಮಾಡುತ್ತೇ‌ನೆ. ಈ ಭಾಗದ ಜನರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂದರು.

ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ನಾವು ಮತ್ತು ಬಿಜೆಪಿ ಜಂಟಿಯಾಗಿ ಹೋರಾಟ ಮಾಡುತ್ತೇವೆ. ಬಿಜೆಪಿ ಅಧಿಕೃತವಾದ ವಿರೋಧ ಪಕ್ಷ. ಜನವರಿಯಲ್ಲಿ ಜಂಟಿ ಅಧಿವೇಶನ ನಡೆಯಲಿದೆ, ಅಲ್ಲಿ ಬೇರೆ ಬೇರೆ ವಿಚಾರಗಳ‌ ಬಗ್ಗೆ ಮಾತನಾಡುತ್ತೇನೆ. ವರ್ಗಾವಣೆ ದಂಧೆ ಸೇರಿದಂತೆ ಬೇರೆ ಬೇರೆ ವಿಚಾರಗಳ ಬಗ್ಗೆ ಅವತ್ತು ಮಾತನಾಡುತ್ತೇನೆ, ಒಂದು ವೇಳೆ ಏನಾದರೂ ವೈಯಕ್ತಿಕವಾಗಿ ಕೆಣಕಿದರೆ ನಾನು ಸುಮ್ಮನೆ ಇರಲ್ಲ ಎಂದು ಅವರು ತಿಳಿಸಿದರು.

ಇದನ್ನೂ ಓದಿ | Belagavi Winter Session: ಸಿದ್ದರಾಮಯ್ಯಗೆ ಮಾಟ – ಮಂತ್ರ; ಗಾಳಿ ಬಿಡಿಸಲು ರೇವಣ್ಣಗೆ ಅಶೋಕ್‌ ಮನವಿ!

ಈ ಸರ್ಕಾರ ಬಂದು ಆರು ತಿಂಗಳು ಆಗಿದೆ. ಇನ್ನು ನಾಲ್ಕೂವರೆ ವರ್ಷ ಸರ್ಕಾರ ಇರುತ್ತದೆ. ಹಂತ ಹಂತವಾಗಿ ಎಲ್ಲ ವಿಚಾರದ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದರು.

ಸಿಎಂ ಓಲೈಕೆ ರಾಜಕಾರಣ ಸರಿ ಅಲ್ಲ

ನಿರ್ದಿಷ್ಟ ಒಂದು ಸಮುದಾಯವನ್ನು ಓಲೈಸುವ ನಿಟ್ಟಿನಲ್ಲಿ ಸಿದ್ದರಾಮಯ್ಯನವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ಸಿಎಂ ಹೇಳಿಕೆ ಮುಸ್ಲಿಂ ಓಲೈಕೆ ಅಲ್ಲದೇ ಮತ್ತೇನು? ಒಂದು ಸಮುದಾಯವನ್ನು ಓಲೈಕೆ ಮಾಡಲು ಸರ್ಕಾರ ಇರೋದಲ್ಲ. ಎಲ್ಲರನ್ನೂ ಸಮಾನವಾಗಿ ನೋಡಬೇಕು. ಅಧಿವೇಶನದಲ್ಲಿ ಬಿಜೆಪಿ ಜತೆ ಜಂಟಿಯಾಗಿ ಹೋರಾಟ ಮಾಡುತ್ತೇನೆ, ಜನಪರ ವಿಚಾರಗಳ ಬಗ್ಗೆ ಸದನದಲ್ಲಿ ಚರ್ಚೆ ಮಾಡಲಾಗುವುದು. ರಾಜ್ಯಪಾಲರಿಗೆ ದೂರು ಕೊಟ್ಟ ವಿಚಾರದ ಬಗ್ಗೆ ಮುಂದೆ ಹೇಳುತ್ತೇನೆ. ಮುಂದೆ ಎಲ್ಲವೂ ನಿಮಗೇ ಗೊತ್ತಾಗುತ್ತದೆ ಎಂದು ಕುಮಾರಸ್ವಾಮಿ ಅವರು ಮಾರ್ಮಿಕವಾಗಿ ಹೇಳಿದರು.

ಇದನ್ನೂ ಓದಿ | 5 ಕೋಟಿ ವೆಚ್ಚದಲ್ಲಿ‌ ಇಟಗಿ-ಸಾಸಲವಾಡ ಏತ ನೀರಾವರಿ ಯೋಜನೆ ಪೂರ್ಣ: ಸಚಿವ ರಾಮಲಿಂಗಾ ರೆಡ್ಡಿ

ಇದೇ ವೇಳೆ ದೆಹಲಿ ಪ್ರವಾಸ ಮತ್ತು ಪಂಚರಾಜ್ಯ ಚುನಾವಣೆ ಬಗ್ಗೆ ಕುಮಾರಸ್ವಾಮಿ ಮಾತನಾಡಿದ್ದು, ಮೂರು ರಾಜ್ಯಗಳ ಬಿಜೆಪಿ ಮುಖ್ಯಮಂತ್ರಿಗಳ ಆಯ್ಕೆಯಲ್ಲಿ ವರಿಷ್ಠರು ತೊಡಗಿದ್ದಾರೆ. ಅದಾದ ಬಳಿಕ ದೆಹಲಿಗೆ ತೆರಳುವ ಬಗ್ಗೆ ಯೋಚನೆ ಮಾಡುತ್ತೇನೆ. ಮುಂದಿನ ಲೋಕಸಭಾ ಚುನಾವಣೆಗೆ ಈ ಫಲಿತಾಂಶ ದಿಕ್ಸೂಚಿಯಾಗಿದೆ‌. ಅನೇಕರು ಈ ಬಗ್ಗೆ ಹೇಳಿದ್ದಾರೆ. ಬಲಿಷ್ಠ ನಾಯಕತ್ವ ಬೇಕು ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ ಎಂದು ತಿಳಿಸಿದರು.

Continue Reading

ಕರ್ನಾಟಕ

5 ಕೋಟಿ ವೆಚ್ಚದಲ್ಲಿ‌ ಇಟಗಿ-ಸಾಸಲವಾಡ ಏತ ನೀರಾವರಿ ಯೋಜನೆ ಪೂರ್ಣ: ಸಚಿವ ರಾಮಲಿಂಗಾ ರೆಡ್ಡಿ

Belgavi Winter Session: 5 ಕೋಟಿ ರೂ ವೆಚ್ಚದಲ್ಲಿ‌ ಇಟಗಿ-ಸಾಸಲವಾಡ ಏತ ನೀರಾವರಿ ಯೋಜನೆ ಪೂರ್ಣಗೊಳಿಸಲಾಗುವುದು ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

VISTARANEWS.COM


on

Minister Ramalinga Reddy statement
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ.
Koo

ಬೆಳಗಾವಿ: ಇಟಗಿ-ಸಾಸಲವಾಡ ಏತ ನೀರಾವರಿ ಯೋಜನೆಯ ಬಾಕಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM D.K. Shivakumar) ಅವರ ಪರವಾಗಿ ಸಚಿವ ರಾಮಲಿಂಗಾ ರೆಡ್ಡಿ, ವಿಧಾನಸಭೆಗೆ ಮಂಗಳವಾರ ತಿಳಿಸಿದರು.

ಪ್ರಶ್ನೋತ್ತರ ವೇಳೆ ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಅವರು, “ಇಟಗಿ- ಸಾಸಲವಾಡ ಏತ ನೀರಾವರಿ ಯೋಜನೆ‌ ಕಳೆದ 3 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿಲ್ಲ. ಕೆರೆಗಳಿಗೆ ನೀರು ತುಂಬುವ ಕೆಲಸ ಆಗುತ್ತಿಲ್ಲ, ಯಾವಾಗ ಪೂರೈಸುತ್ತೀರಿ ” ಎಂದು ಕೇಳಿದ ಪ್ರಶ್ನೆಗೆ ಜಲಸಂಪನ್ಮೂಲ ಸಚಿವರ ಪರವಾಗಿ ರಾಮಲಿಂಗಾರೆಡ್ಡಿ ಉತ್ತರಿಸಿದರು.

ಶಿರಹಟ್ಟಿ, ಮುಂಡರಗಿ ಹಾಗೂ ಹಾವೇರಿ ತಾಲೂಕುಗಳ 1983 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಒದಗಿಸಲು 2011 ರಲ್ಲಿ ಇಟಗಿ ಸಾಸಲವಾಡ ನೀರಾವರಿ ಯೋಜನೆಯನ್ನು ಲೋಕಾರ್ಪಣೆ ಮಾಡಲಾಗಿದ್ದು, ಒಟ್ಟು 29.88 ಕೋಟಿ ರೂ. ವೆಚ್ಚ ಮಾಡಲಾಗಿದೆ.

ಇದನ್ನೂ ಓದಿ: Money Guide: ಆನ್‌ಲೈನ್‌ ಸಾಲದ ವಂಚನೆಯ ಕೂಪಕ್ಕೆ ಬೀಳದಿರಲು ಏನು ಮಾಡಬೇಕು?

2015 ರಲ್ಲಿ ಇದರ ಉಸ್ತುವಾರಿ ಮತ್ತು ನಿರ್ವಹಣೆಯನ್ನು ಮುನಿರಾಬಾದ್ ನೀರಾವರಿ ವಲಯಕ್ಕೆ ಹಸ್ತಾಂತರಿಸಲಾಗಿತ್ತು. ನಿರ್ವಹಣೆ ಕಾರ್ಯ ಗುತ್ತಿಗೆ ಚಾಲ್ತಿಯಲ್ಲಿದ್ದ ಕಾರಣ ಹಸ್ತಾಂತರ ಪ್ರಕ್ರಿಯೆ ಸಂಪೂರ್ಣವಾಗಿಲ್ಲ ಎಂದ ಅವರು, ತುಂಗಾ ಮೇಲ್ದಂಡೆ ಯೋಜನೆಗೆ ಶಿವಮೊಗ್ಗ ವಲಯದ ರಾಣೆಬೆನ್ನೂರು ಭಾಗಕ್ಕೆ 2019-20 ರಲ್ಲಿ ನೀರು ಹರಿಸಲಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ: BCCI : ಬಿಸಿಸಿಐಗೆ ದೊಡ್ಡ ಮೊತ್ತ ಬಾಕಿ, ಬೈಜೂಸ್​ಗೆ ಮತ್ತೊಂದು ಸಂಕಷ್ಟ

2023 ರ ಆಗಸ್ಟ್‌ 14 ರಂದು ಮುನಿರಾಬಾದ್ ನೀರಾವರಿ ಕೇಂದ್ರಕ್ಕೆ ಮತ್ತೆ ಹಸ್ತಾಂತರಗೊಂಡಿದೆ. ಪ್ರಸ್ತುತ ಸ್ಥಳ ಮತ್ತು ಲಿಫ್ಟ್ ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಪಂಪ್ ದುರಸ್ತಿ, ವಿದ್ಯುತ್ ಸಂಪರ್ಕ, ಹೂಳು ತುಂಬಿರುವ, ಕಾಲುವೆ ಜಂಗಲ್ ಮುಂತಾದ ನ್ಯೂನ್ಯತೆ‌ಗಳು ಕಂಡಿಬಂದಿದೆ. ಇದರ ಪುನಶ್ಚೇತನಕ್ಕೆ 5 ಕೋಟಿ ರೂ ವೆಚ್ಚವಾಗಲಿದೆ. ಇದಕ್ಕೆ ಅನುಮೋದನೆ ಪಡೆದು ಶೀಘ್ರವೇ ಯೋಜನೆ ಪೂರ್ಣಗೊಳಿಸಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

Continue Reading

ಶಿವಮೊಗ್ಗ

Shivamogga News: ಪ್ರಶಸ್ತಿ, ಸನ್ಮಾನಗಳಿಂದ ಸಮಾಜಮುಖಿ ಕಾರ್ಯಕ್ಕೆ ಪ್ರೇರಣೆ: ರವಿ ಹೆಗಡೆ

Shivamogga News: ಸೊರಬ ಪಟ್ಟಣದ ಡಾ. ರಾಜ್ ರಂಗಮಂದಿರದಲ್ಲಿ ಸುರಭಿ ಸೇವಾ ಚಾರಿಟೆಬಲ್ ಟ್ರಸ್ಟ್ ವತಿಯಿಂದ ರಾಜ್ಯ ಸುರಭಿಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸುರಭಿವಾಣಿ ಪತ್ರಿಕೆಯ ದಶಮಾನೋತ್ಸವ ಕಾರ್ಯಕ್ರಮ ಜರುಗಿತು.

VISTARANEWS.COM


on

Senior journalist Ravi Hegde spoke at the 10th anniversary program of Surabhivani newspaper in Soraba
ಸೊರಬ ಪಟ್ಟಣದ ಡಾ. ರಾಜ್ ರಂಗಮಂದಿರದಲ್ಲಿ ಸುರಭಿ ಸೇವಾ ಚಾರಿಟೆಬಲ್ ಟ್ರಸ್ಟ್ ವತಿಯಿಂದ ನಡೆದ ಸುರಭಿವಾಣಿ ಪತ್ರಿಕೆಯ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ರವಿ ಹೆಗಡೆ ಮಾತನಾಡಿದರು.
Koo

ಸೊರಬ: ಸಮಾಜಮುಖಿ ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸಿ, ಸಮಾಜ ತಿದ್ದುವ ಕೆಲಸದಲ್ಲಿ ನಿರತರಾಗುವಂತೆ ಪ್ರೇರಣೆ ನೀಡುವ ಕೆಲಸವನ್ನು ಪ್ರಶಸ್ತಿ (Award), ಸನ್ಮಾನಗಳು ಮಾಡುತ್ತವೆ ಎಂದು ಹಿರಿಯ ಪತ್ರಕರ್ತ ರವಿ ಹೆಗಡೆ ಹೇಳಿದರು.

ಪಟ್ಟಣದ ಡಾ. ರಾಜ್ ರಂಗಮಂದಿರದಲ್ಲಿ ಸುರಭಿ ಸೇವಾ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಕೊಡಮಾಡುವ ಸುರಭಿಶ್ರೀ ರಾಜ್ಯ ಪ್ರಶಸ್ತಿ ಸ್ವೀಕರಿಸಿ, ಸುರಭಿವಾಣಿ ಪತ್ರಿಕೆಯ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಶಸ್ತಿ ಸ್ವೀಕರಿಸಿದವರು ಜವಾಬ್ದಾರಿಯನ್ನು ಹೊತ್ತು ಸರಿ ದಾರಿಯಲ್ಲಿ ನಡೆದಾಗ ಪ್ರಶಸ್ತಿಗಳಿಗೆ ಅರ್ಥ ಮೂಡುತ್ತದೆ ಮತ್ತು ಅದರ ಆಶಯದಂತೆ ನಡೆದುಕೊಳ್ಳುವುದು ಪುರಸ್ಕೃತರ ಜವಾಬ್ದಾರಿಯೂ ಆಗಿದೆ. ಗ್ರಾಮೀಣ ಮಟ್ಟದಿಂದ ಬೆಳೆದ ಒಂದು ಪತ್ರಿಕೆ ದಶಮಾನೋತ್ಸವ ಆಚರಿಸುತ್ತಿರುವುದು ಶ್ಲಾಘನೀಯ ಎಂದರು.

ಇದನ್ನೂ ಓದಿ: Teachers Recruitment: ಪ್ರಾಥಮಿಕ, ಪ್ರೌಢ ಶಾಲೆ ಶಿಕ್ಷಕರ ನೇಮಕ; ಒಟ್ಟು ಎಷ್ಟು ಹುದ್ದೆ ನಿರೀಕ್ಷೆ?

ಶಿಕಾರಿಪುರ ತಾಲೂಕು ದುಗ್ಲಿ ಕಡೇನಂದಿಹಳ್ಳಿ ಮಠದ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆತ್ಮಕ್ಕೆ ಎಂದಿಗೂ ಸಾವಿಲ್ಲ. ಹಾಗಾಗಿ ಪ್ರತಿಯೊಬ್ಬ ಮನುಷ್ಯನೂ ಸಮಾಜದ ಒಳಿತಿಗಾಗಿ ದುಡಿದಾಗ ಮೋಕ್ಷ ಪ್ರಾಪ್ತಿಯಾಗುತ್ತದೆ. ಕ್ಷಣಿಕ ಜೀವನದಲ್ಲಿ ಸಾರ್ಥಕ ಬದುಕಿನೆಡೆಗೆ ನಡೆಯಲು ಗುರುವಿನ ಆಶೀರ್ವಾದವೂ ಲಭ್ಯವಾಗಬೇಕು. ಆಗ ಮಾತ್ರ ಬದುಕನ್ನು ಸರಿದಾರಿಗೆ ತರಲು ಸಾಧ್ಯ. ಇದಕ್ಕೆ ಧಾರ್ಮಿಕ ಚಿಂತನೆ ಬೆಳೆಸಿಕೊಂಡು ಆತ್ಮವನ್ನು ಭಗವಂತನ ಪಾದಕ್ಕೆ ಅರ್ಪಿಸಿದಾಗ ಮನುಷ್ಯ ಜನ್ಮ ಸಾರ್ಥಕತೆ ಪಡೆಯುತ್ತದೆ ಎಂದರು.

ಸುರಭಿವಾಣಿ ದಶಮಾನೋತ್ಸವದ ವಿಶೇಷ ಸಂಚಿಕೆ ಬಿಡುಗಡೆ ಮಾಡಿದ ಜಡೆ ಸಂಸ್ಥಾನ ಮಠದ ಡಾ. ಮಹಾಂತ ಸ್ವಾಮೀಜಿ ಮಾತನಾಡಿ, ಮೌಢ್ಯವನ್ನು ಅಳಿಸಿ ಮೌಲ್ಯವನ್ನು ಬಿತ್ತುವ ಕಾರ್ಯ ಪತ್ರಿಕೆಗಳಿಂದ ಮಾತ್ರ ಸಾಧ್ಯವಾಗುತ್ತಿದೆ. ಸಮಾಜದಲ್ಲಿನ ಒಳಿತು- ಕೆಡುಕುಗಳನ್ನು ಬಿತ್ತರಿಸುವ ಪತ್ರಿಕೆಗಳಿಂದ ಆಸ್ವಾದಿಸುವ ಮತ್ತು ಯಾವುದನ್ನು ಗ್ರಹಿಸಬೇಕು ಎನ್ನುವ ಮನೋಧರ್ಮ ನಮ್ಮ ಮೇಲಿದೆ ಎಂದರು.

ಇದನ್ನೂ ಓದಿ: Fishermen Rescued: ಅರಬ್ಬಿ ಸಮುದ್ರದಲ್ಲಿ ನಾಪತ್ತೆಯಾಗಿದ್ದ ಬೋಟ್‌ ಪತ್ತೆ; 27 ಮೀನುಗಾರರ ರಕ್ಷಣೆ

ಕಾರ್ಯಕ್ರಮದಲ್ಲಿ ಹೊನ್ನಾವರ ಶ್ರೀ ಕ್ಷೇತ್ರ ಕರ್ಕಿ ಜ್ಞಾನೇಶ್ವರಿ ಪೀಠದ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಮಹಾಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯ ಪತ್ರಕರ್ತ ಎಸ್.ಚಂದ್ರಕಾಂತ್, ಯೋಧ ಎನ್. ಜಗದೀಶ, ಡಾ. ಗಂಗಾಧರ ವ.ಮ. ಆತ್ರೇಯ ಸಾಗರ, ಅರುಣ್ ವಿನಾಯಕ ಶೇಟ್ ಹೊಸಾಡು (ಇಳಕಲ್), ಎನ್.ವಿ. ಈರೇಶ್ ಶಿಕಾರಿಪುರ, ಬಿ.ವಿ. ಗಣಪತಿ ಭಟ್ ಬೆಂಗಳೂರು, ರಾಜು ಎಂ. ರೇವಣಕರ್ ರಾಣೇಬೆನ್ನೂರು, ಮಹೇಂದ್ರಕುಮಾರ ಜೈನ್ ಶಿರಾಳಕೊಪ್ಪ, ಪ್ರದೀಪ್ ಎಲ್ಲನಕರ ಶಿರಸಿ, ಸತ್ಯನಾರಾಯಣ ರಾಯ್ಕರ್ ದಾವಣಗೆರೆ, ಸಂತೋಷ್ ಮಧುಕರ ಶೇಟ್ ಶಿರಸಿ, ಬಸವನಗೌಡ ಎಂ. ಮಲ್ಲಾಪುರ, ಗಜಾನನ ಎಸ್. ಅಣ್ವೇಕರ್ ಹುಬ್ಬಳ್ಳಿ ಅವರಿಗೆ ಸುರಭಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇದನ್ನೂ ಓದಿ: karnataka Weather :‌ ಮುಂದಿನ 24 ಗಂಟೆಯಲ್ಲಿ 18 ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

ಈ ವೇಳೆ ಲಕ್ಕವಳ್ಳಿ ಜೈನಮಠದ ವೃಷಭಸೇನ ಭಟ್ಟಾಕರ, ಟ್ರಸ್ಟ್‌ನ ನಾರಾಯಣಭಟ್ ಮರಾಠ, ಯು.ಎಲ್. ಸಂದೀಪ್, ವಾಣಿಶ್ರೀ ಉಪಸ್ಥಿತರಿದ್ದರು. ಸುರಭಿ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಎಸ್.ಜಿ. ರಾಮಚಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಎನ್. ಷಣ್ಮುಖಾಚಾರ್ ಕಾರ್ಯಕ್ರಮ ನಿರೂಪಿಸಿದರು.

Continue Reading

ಕರ್ನಾಟಕ

Murder Case: ಮಚ್ಚಿನಿಂದ ಕೊಚ್ಚಿ ಮಗನನ್ನೇ ಕೊಲೆಗೈದ ತಂದೆ

Murder Case: ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿದಾಗ ಮಗನನ್ನು ತಂದೆಯೇ ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ.

VISTARANEWS.COM


on

Crime Logo
Koo

ಆನೇಕಲ್: ಮಚ್ಚಿನಿಂದ ಕೊಚ್ಚಿ ಮಗನನ್ನು ತಂದೆಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್‌ ಸಮೀಪದ ನಾರಾಯಣಪುರದಲ್ಲಿ ನಡೆದಿದೆ. ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿದಾಗ ಮಗನನ್ನು ತಂದೆ ಹತ್ಯೆ (Murder Case) ಮಾಡಿದ್ದಾರೆ.

ಸುರೇಶ್ (35) ಕೊಲೆಯಾದ ವ್ಯಕ್ತಿ. ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಸುರೇಶ್, ನಿತ್ಯ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ. ಅದೇ ರೀತಿ ಮಂಗಳವಾರವೂ ಕುಡಿದು ಬಂದು ಗಲಾಟೆ ಮಾಡಿದ್ದ. ತಾಯಿಯನ್ನ ಹಿಡಿದು ಹೊಡೆಯುತ್ತಿದ್ದ ಹಿನ್ನೆಲೆಯಲ್ಲಿ ಗಲಾಟೆ ಬಿಡಿಸಲು ತಂದೆ ಮುಂದಾಗಿದ್ದಾರೆ. ಆದರೆ, ಗಲಾಟೆ ವಿಕೋಪಕ್ಕೆ ತಿರುಗಿದಾಗ ತಂದೆ ಮಚ್ಚಿನಿಂದ ಸುರೇಶ್‌ಗೆ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮಗನನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ, ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.

ಆನೇಕಲ್ ಸರ್ಕಾರಿ ಆಸ್ಪತ್ರೆ ಶವಗಾರಕ್ಕೆ ಮೃತದೇಹ ರವಾನೆ ಮಾಡಲಾಗಿದ್ದು, ಆನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Fraud Case : ಚಂದದ ಹುಡುಗಿ ಅಂತ ಆಸೆಪಟ್ಟು ರೂಮಿಗೆ ಹೋದರೆ ಅಲ್ಲಿ ಕಂಡಿದ್ದೇ ಬೇರೆ!

ಬಾಸ್ಕೆಟ್ ಬಾಲ್ ಆಡುತ್ತಿದ್ದ ವಿದ್ಯಾರ್ಥಿನಿ ಸಾವು

ಆನೇಕಲ್: ಬಾಸ್ಕೆಟ್ ಬಾಲ್ ಆಟವಾಡುವಾಗ ದಿಢೀರನೇ ಕುಸಿದು ಬಿದ್ದು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಎಸ್ಎಫ್ಎಸ್ ಶಾಲೆಯಲ್ಲಿ ನಡೆದಿದೆ. ಚಾರ್ವಿ (16) ಮೃತ ಬಾಲಕಿ. ಮಧ್ಯಾಹ್ನ ಆಟವಾಡುತ್ತಿದ್ದಾಗ ಕುಸಿದು ಬಾಲಕಿಗೆ ಮೂಗಿನಿಂದ ರಕ್ತಸ್ರಾವವಾಗಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾಳೆ. ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕ್ರೇನ್‌ ಸೀಲಿಂಗ್‌ ಕಟ್‌ ಆಗಿ ಬಾವಿಗೆ ಬಿದ್ದ ಕಾರ್ಮಿಕ ಸಾವು, ಮತ್ತೊಬ್ಬ ಗಂಭೀರ!

ಚಿಕ್ಕೋಡಿ: ಬಾವಿಯಲ್ಲಿ ಕೆಲಸ ಮಾಡುವಾಗ ಕ್ರೇನ್ ಸೀಲಿಂಗ್ (Ceiling collapses) ಕಟ್ಟಾಗಿ ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜಂಬಗಿ ಗ್ರಾಮದಲ್ಲಿ ಘಟನೆ (Crane collapses) ನಡೆದಿದೆ. ಮಧ್ಯಪ್ರದೇಶದ ಸಂತೋಷ ಮುಣ್ಣಾ ವಿಶ್ವಕರ್ಮ (28) ಮೃತ ದುರ್ದೈವಿ.

ಶಾವಂತ ಪಾಟೀಲ್ ಎಂಬ ರೈತರ ಜಮೀನಿನಲ್ಲಿ ಮಧ್ಯಪ್ರದೇಶದ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಕೆಳಗೆ ಇಳಿಯುವಾಗ ಕ್ರೇನ್ ಸಿಲ್ಲಿಂಗ್ ಕಟ್ಟಾಗಿ ಇಬ್ಬರು ಕಾರ್ಮಿಕರು ಬಾವಿಯ ಆಳಕ್ಕೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಸಂತೋಷ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.

ಇದನ್ನೂ ಓದಿ | Fishermen Rescued: ಅರಬ್ಬಿ ಸಮುದ್ರದಲ್ಲಿ ನಾಪತ್ತೆಯಾಗಿದ್ದ ಬೋಟ್‌ ಪತ್ತೆ; 27 ಮೀನುಗಾರರ ರಕ್ಷಣೆ

ಗಾಯಗೊಂಡ ವ್ಯಕ್ತಿಯನ್ನು ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಅಥಣಿ ಅಗ್ನಿಶಾಮಕ ದಳ ಆಗಮಿಸಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಸ್ಥಳಕ್ಕೆ ಅಥಣಿ ಪೊಲೀಸರು ಪರಿಶೀಲನೆ ನಡೆಸಿ ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Continue Reading
Advertisement
BJP knew the result two days earlier vote count Says Congress
ದೇಶ14 mins ago

ಬಿಜೆಪಿಗೆ ರಿಸಲ್ಟ್ ಎರಡು ದಿನ ಮೊದ್ಲೇ ಗೊತ್ತಿತ್ತು! ಕಾಂಗ್ರೆಸ್ ಹೊಸ ವರಾತ್

HD Kumaraswamy
ಕರ್ನಾಟಕ14 mins ago

HD Kumaraswamy: ವೈಯಕ್ತಿಕವಾಗಿ ಕೆಣಕಿದರೆ ನಾನು ಸುಮ್ಮನಿರಲ್ಲ ಎಂದ ಎಚ್‌ಡಿಕೆ

Rahul Dravid
ಕ್ರಿಕೆಟ್20 mins ago

Rahul Dravid : ರಿಚ್ಮಂಡ್​ ಸರ್ಕಲ್ ಫ್ಲೈಓವರ್​ ಕೆಳಗಡೆ ಕ್ರಿಕೆಟ್​ ಅಡಿದ ದ್ರಾವಿಡ್​, ಕುಂಬ್ಳೆ, ಶ್ರೀನಾಥ್​…

Minister Ramalinga Reddy statement
ಕರ್ನಾಟಕ32 mins ago

5 ಕೋಟಿ ವೆಚ್ಚದಲ್ಲಿ‌ ಇಟಗಿ-ಸಾಸಲವಾಡ ಏತ ನೀರಾವರಿ ಯೋಜನೆ ಪೂರ್ಣ: ಸಚಿವ ರಾಮಲಿಂಗಾ ರೆಡ್ಡಿ

Senior journalist Ravi Hegde spoke at the 10th anniversary program of Surabhivani newspaper in Soraba
ಶಿವಮೊಗ್ಗ34 mins ago

Shivamogga News: ಪ್ರಶಸ್ತಿ, ಸನ್ಮಾನಗಳಿಂದ ಸಮಾಜಮುಖಿ ಕಾರ್ಯಕ್ಕೆ ಪ್ರೇರಣೆ: ರವಿ ಹೆಗಡೆ

Crime Logo
ಕರ್ನಾಟಕ1 hour ago

Murder Case: ಮಚ್ಚಿನಿಂದ ಕೊಚ್ಚಿ ಮಗನನ್ನೇ ಕೊಲೆಗೈದ ತಂದೆ

CM Siddaramaiah and Black magic
ಕರ್ನಾಟಕ1 hour ago

Belagavi Winter Session: ಸಿದ್ದರಾಮಯ್ಯಗೆ ಮಾಟ – ಮಂತ್ರ; ಗಾಳಿ ಬಿಡಿಸಲು ರೇವಣ್ಣಗೆ ಅಶೋಕ್‌ ಮನವಿ!

Gautam adani wealth increased by 10 billion dollars in a week
ದೇಶ1 hour ago

Gautam Adani: ಒಂದೇ ವಾರದಲ್ಲಿ ಅದಾನಿ ಸಂಪತ್ತಿನಲ್ಲಿ 10 ಶತಕೋಟಿ ಡಾಲರ್ ಏರಿಕೆ!

onion flower
ಆರೋಗ್ಯ1 hour ago

Weight Loss Tips: ದೇಹ ತೂಕ ಇಳಿಸಲು ಸಹಕಾರಿ ಈ ಈರುಳ್ಳಿ ಹೂವು!

R Ashok in assembly session
ಕರ್ನಾಟಕ2 hours ago

Belagavi Winter Session: ಟಿಸಿ ಬದಲಾಯಿಸಲು ಹಣ ಕೇಳ್ತಾರೆ, ರೈತರು ಬದುಕೋದು ಬೇಡವಾ? ಅಶೋಕ್‌ ಕ್ಲಾಸ್‌

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

CM Siddaramaiah and Black magic
ಕರ್ನಾಟಕ1 hour ago

Belagavi Winter Session: ಸಿದ್ದರಾಮಯ್ಯಗೆ ಮಾಟ – ಮಂತ್ರ; ಗಾಳಿ ಬಿಡಿಸಲು ರೇವಣ್ಣಗೆ ಅಶೋಕ್‌ ಮನವಿ!

R Ashok in assembly session
ಕರ್ನಾಟಕ2 hours ago

Belagavi Winter Session: ಟಿಸಿ ಬದಲಾಯಿಸಲು ಹಣ ಕೇಳ್ತಾರೆ, ರೈತರು ಬದುಕೋದು ಬೇಡವಾ? ಅಶೋಕ್‌ ಕ್ಲಾಸ್‌

R Ashok
ಕರ್ನಾಟಕ2 hours ago

Belagavi Winter Session: ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ17 hours ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ2 days ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ2 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ3 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ3 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ4 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

ಟ್ರೆಂಡಿಂಗ್‌