ಹಾಸನದಲ್ಲಿ ಬಿಜೆಪಿ ಬಲವರ್ಧನೆಗೆ ಒತ್ತು: ಉಸ್ತುವಾರಿ ಸಚಿವ ಗೋಪಾಲಯ್ಯ ಹೇಳಿಕೆ - Vistara News

ರಾಜಕೀಯ

ಹಾಸನದಲ್ಲಿ ಬಿಜೆಪಿ ಬಲವರ್ಧನೆಗೆ ಒತ್ತು: ಉಸ್ತುವಾರಿ ಸಚಿವ ಗೋಪಾಲಯ್ಯ ಹೇಳಿಕೆ

ಹಾಸನ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಗೋಪಾಲಯ್ಯ ಮಾತನಾಡಿದರು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಹಾಸನ: ಬಿಜೆಪಿ ವರಿಷ್ಠರ ಸೂಚನೆ ಮೇರೆಗೆ ಹಾಸನ ಜಿಲ್ಲೆಯಲ್ಲಿ ಪಕ್ಷವನ್ನು ಬಲಪಡಿಸುವ ಕೆಲಸ ಮಾಡಲಾಗುವುದು ಎಂದು ಜಿಲ್ಲಾ ‌ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ನೇತ್ರತ್ವದಲ್ಲಿ ಮೂರು ತಂಡಗಳನ್ನು ರಚಿಸಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇವೆ. ಪಕ್ಷವನ್ನು ಸಂಘಟಿಸುವ ಕೆಲಸ ಈಗಾಗಲೇ ಆರಂಭಗೊಂಡಿದೆ. ಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯಲಿದೆ.

ಕೇಂದ್ರದಲ್ಲಿ ನರೇಂದ್ರ ಮೋದಿಯವರ ಸರ್ಕಾರ , ರಾಜ್ಯದಲ್ಲಿ ಈ ಹಿಂದೆ ಆಡಳಿತ ಮಾಡಿದ ಬಿ.ಎಸ್.ಯಡಿಯೂರಪ್ಪ ಮತ್ತು ಈಗಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನೀಡಿರುವ ಜನಪರ ಕೆಲಸಗಳನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ.‌ ಇದೇ ಅಂಶಗಳನ್ನು ಮುಂದಿಟ್ಟುಕೊಂಡು ಜಿಲ್ಲೆಯಲ್ಲಿ ಪಕ್ಷದ ಬಲವರ್ಧನೆ ಮಾಡಲಾಗುವುದು.

ಹಾಸನ‌ ಜಿಲ್ಲೆಯಲ್ಲಿ ಈ ಹಿಂದೆ ನಮ್ಮ ಪಕ್ಷ ನಾಲ್ಕು ಸ್ಥಾನಗಳನ್ನು ಗೆದ್ದಿತ್ತು, ಲೋಕಸಭಾ ಚುನಾವಣೆಯಲ್ಲಿ ಮತದಾರರು ಬಹುದೊಡ್ಡ ಸಂಖ್ಯೆಯಲ್ಲಿ ಪಕ್ಷವನ್ನು ಬೆಂಬಲಿಸಿದ್ದಾರೆ.‌ ಈಗ ಇರುವ ಒಂದು ಶಾಸಕ ಸ್ಥಾನವನ್ನು ಹೆಚ್ಚಿಸುವ ಪ್ರಯತ್ನ ನಡೆಯಲಿದೆ. ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಡಿಕೆಶಿ ಪದೇ ಪದೇ ದೆಹಲಿಗೆ ಹೋಗುತ್ತಿರುವುದೇಕೆ? ಸತೀಶ್ ಜಾರಕಿಹೊಳಿ ನೀಡಿದ ಆ ಗೊಂದಲದ ಹೇಳಿಕೆಯಲ್ಲಿದೆಯೇ ದೊಡ್ಡ ಸುಳಿವು

VISTARANEWS.COM


on

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆಯ ಚರ್ಚೆಗಳು ಈಗ ಹೊಸ ತಿರುವು ಪಡೆದಿವೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸತತವಾಗಿ ದೆಹಲಿಗೆ ಪ್ರವಾಸ ಕೈಗೊಳ್ಳುತ್ತಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. “ಹೈಕಮಾಂಡ್ ಏನು ತೀರ್ಮಾನ ಮಾಡಿದೆಯೋ, ಅದು ಸಮಯ ಬಂದಾಗ ಜಾರಿಗೆ ಬರಲಿದೆ” ಎಂದು ಡಿಕೆಶಿ ನೀಡಿರುವ ಮಾರ್ಮಿಕ ಹೇಳಿಕೆಯು, ಅಧಿಕಾರ ಹಸ್ತಾಂತರದ ಪ್ರಕ್ರಿಯೆ ಚುರುಕಾಗಿದೆಯೇ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಅವರು ನಡೆಸಿದ ಸುದೀರ್ಘ ಮಾತುಕತೆ ಈ ಗುಮಾನಿಯನ್ನು ಮತ್ತಷ್ಟು ಗಟ್ಟಿಗೊಳಿಸಿದೆ.

ಇನ್ನೊಂದೆಡೆ, ಸಚಿವ ಸತೀಶ್ ಜಾರಕಿಹೊಳಿ ಅವರು ಪಕ್ಷದೊಳಗೆ ‘ಗೊಂದಲ’ ಇರುವುದನ್ನು ಬಹಿರಂಗವಾಗಿಯೇ ಒಪ್ಪಿಕೊಂಡಿರುವುದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. “ನಾಯಕತ್ವ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟ ವಿಚಾರ” ಎಂದು ಅವರು ಹೇಳಿದ್ದರೂ, ಪಕ್ಷದ ಒಳಗಿನ ಆಂತರಿಕ ಅಸಮಾಧಾನ ಮತ್ತು ಗೊಂದಲಗಳ ಬಗ್ಗೆ ಅವರು ನೀಡಿರುವ ಸುಳಿವು ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಬದಲಾವಣೆಯ ಮುನ್ಸೂಚನೆಯಂತೆ ಕಾಣುತ್ತಿದೆ. ಸಿದ್ದರಾಮಯ್ಯ ಬಣ ಮತ್ತು ಡಿಕೆಶಿ ಬಣದ ನಡುವಿನ ಈ ಹಗ್ಗಜಗ್ಗಾಟ ಈಗ ಕ್ಲೈಮಾಕ್ಸ್ ಹಂತಕ್ಕೆ ತಲುಪಿದಂತೆ ಭಾಸವಾಗುತ್ತಿದೆ.

ಮೇ 4 ರಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, ಆ ನಂತರ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಬದಲಾವಣೆಗಳಾಗಲಿವೆ ಎಂದು ವಿಶ್ಲೇಷಿಸಲಾಗುತ್ತಿದೆ. ಡಿಕೆಶಿ ಬಣವು ಹಳೆಯ ವಾಗ್ದಾನಗಳನ್ನು ಈಡೇರಿಸುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದರೆ, ಸಿದ್ದರಾಮಯ್ಯ ಬಣವು ತನ್ನದೇ ಆದ ರಕ್ಷಣಾತ್ಮಕ ತಂತ್ರಗಳನ್ನು ಹೆಣೆಯುತ್ತಿದೆ. ಒಟ್ಟಿನಲ್ಲಿ, ಮೇ 15 ರ ಡಿ.ಕೆ. ಶಿವಕುಮಾರ್ ಅವರ ಹುಟ್ಟುಹಬ್ಬದ ಸುಮಾರಿಗೆ ಕಾಂಗ್ರೆಸ್ ಪಾಳಯದಲ್ಲಿ ಒಂದು ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಯಿದ್ದು, ಅಲ್ಲಿಯವರೆಗೆ ಈ ಕುತೂಹಲ ಮುಂದುವರಿಯಲಿದೆ.

Continue Reading

Latest

ಪರಮಾಣು ಶಸ್ತ್ರಾಸ್ತ್ರಗಳು ಶಾಂತಿಯ ಉದ್ದೇಶಕ್ಕೆ ಬಳಕೆಯಾಗಲಿ: ವಿಶ್ವಸಂಸ್ಥೆ ಕಳಕಳಿ

VISTARANEWS.COM


on

ನ್ಯೂಯಾರ್ಕ್:‌ ಜಗತ್ತು ಚೆರ್ನೋಬಿಲ್ ದುರಂತದ 40 ನೇ ವಾರ್ಷಿಕೋತ್ಸವ ಆಚರಿಸುತ್ತಿದೆ. ಈ ವೇಳೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಪರಮಾಣು ಶಸ್ತ್ರಾಸ್ತ್ರಗಳ ಶಾಂತಿಯುತ ಬಳಕೆಗೆ ಕರೆ ನೀಡಿದೆ.


ಚೆರ್ನೋಬಿಲ್‌ ದುರಂತದ ಸ್ಮರಣಾರ್ಥ ಶುಕ್ರವಾರ ಇಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷೆ ಅನ್ನಾಲೆನಾ ಬೇರ್ಬಾಕ್ ಅವರು, ಚೆರ್ನೋಬಿಲ್‌ನ ಪ್ರಮಾಣವು, ಪರಮಾಣು ತಂತ್ರಜ್ಞಾನವನ್ನು ಶಾಂತಿಯುತವಾಗಿ ಬಳಸಿದಾಗಲೂ ಇತರ ತಂತ್ರಜ್ಞಾನಗಳಿಗಿಂತ ಮೂಲಭೂತವಾಗಿ ಭಿನ್ನವಾಗಿದೆ ಎಂದು ಒತ್ತಿ ಹೇಳಿದರು.


ಏಪ್ರಿಲ್ 26, 1986 ರಂದು ಚೆರ್ನೋಬಿಲ್ ಪರಮಾಣು ವಿದ್ಯುತ್ ಸ್ಥಾವರ ಇತಿಹಾಸದಲ್ಲಿಯೇ ಅತ್ಯಂತ ಭೀಕರವಾದ ಪರಮಾಣು ಅಪಘಾತಗಳಲ್ಲಿ ಒಂದನ್ನು ಕಂಡಿತು. ಆ ದಿನ, ಸರಣಿ ಸ್ಫೋಟಕಗಳು ನಂ. 4 ರಿಯಾಕ್ಟರ್ ಅನ್ನು ಹಾಳು ಮಾಡಿ, ಉಕ್ರೇನ್, ಬೆಲಾರಸ್ ಮತ್ತು ಯುರೋಪಿನ ಇತರ ಭಾಗಗಳಲ್ಲಿ ವಿಕಿರಣಶೀಲ ಮಾಲಿನ್ಯವನ್ನು ಹರಡಿತು.


8 ಮಿಲಿಯನ್‌ಗಿಂತಲೂ ಹೆಚ್ಚು ಜನರು ವಿಕಿರಣಕ್ಕೆ ಒಡ್ಡಿಕೊಂಡರು, ಸಾವಿರಾರು ಜನರು ಸತ್ತರು ಮತ್ತು ಮಕ್ಕಳು ಲ್ಯುಕೇಮಿಯಾ ಮತ್ತು ಇತರ ಕಾಯಿಲೆಗಳನ್ನು ಬೆಳೆಸಿಕೊಂಡರು ಎಂದು ಬೇರ್‌ಬಾಕ್ ಹೇಳಿದರು, ಅನೇಕರಿಗೆ ಅವರ ಉಳಿದ ಜೀವನವನ್ನು ರೂಪಿಸುವ ದೀರ್ಘಾವಧಿಯ ಆರೈಕೆಯ ಅಗತ್ಯವಿತ್ತು.


ಯುಎನ್ ಕಾರ್ಯದರ್ಶಿ, ಜನರಲ್ ಆಂಟೋನಿಯೊ ಗುಟೆರೆಸ್ ಇದನ್ನು ಇತಿಹಾಸದಲ್ಲಿ ಅತ್ಯಂತ ಮಹತ್ವದ ಪರಮಾಣು ಅಪಘಾತ ಎಂದು ಬಣ್ಣಿಸಿದರು. ಚೆರ್ನೋಬಿಲ್ ರಾಷ್ಟ್ರೀಯ ದುರಂತ ಮಾತ್ರವಲ್ಲ, ಪರಮಾಣು ಅಪಘಾತಗಳ ಪರಿಣಾಮಗಳನ್ನು ಅಂತರರಾಷ್ಟ್ರೀಯ ಸಮುದಾಯವ ಹಂಚಿಕೊಳ್ಳುತ್ತದೆ ಎಂಬ ಪಾಠವಾಗಿದೆ ಎಂದು ಅವರು ಹೇಳಿದರು.


ವಿಶ್ವಸಂಸ್ಥೆಯ ರಷ್ಯಾದ ಉಪ ಖಾಯಂ ಪ್ರತಿನಿಧಿ ಡಿಮಿಟ್ರಿ ಚುಮಾಕೋವ್, ಸರಿಯಾದ ವಿವೇಕವಿಲ್ಲದೆ ಯಾವುದೇ ತಂತ್ರಜ್ಞಾನಗಳು, ಉತ್ತಮ ಉದ್ದೇಶವನ್ನು ಹೊಂದಿರುವವುಗಳು ಸಹ ಬೆದರಿಕೆಯ ಮೂಲವಾಗಬಹುದು ಎಂದು ಹೇಳಿದರು.

Continue Reading

Latest

ಒಳಮೀಸಲಾತಿ ಜಾರಿ: ಕೊಟ್ಟ ಮಾತು ಈಡೇರಿಸಿದ ದಲಿತರಾಮಯ್ಯ; ಸಚಿವ ಆರ್.ಬಿ. ತಿಮ್ಮಾಪುರ

VISTARANEWS.COM


on

ಬೆಂಗಳೂರು: ಒಳ ಮೀಸಲಾತಿ ಜಾರಿಗೊಳಿಸುವ ಮೂಲಕ ಐತಿಹಾಸಿಕ ತೀರ್ಮಾನ ಕೈಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ, ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ನೇತೃತ್ವದ ನಿಯೋಗ ಕೃತಜ್ಞತೆ ಅರ್ಪಿಸಿತು.

ಶನಿವಾರ ಸಿಎಂ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಸಚಿವ ತಿಮ್ಮಾಪೂರರವರು ಹಾಗೂ ನೂರಾರು ದಲಿತ ಎಡ ಸಮುದಾಯದ ನಾಯಕರು, ಮೂವತ್ತು ವರ್ಷಗಳ ಬೇಡಿಕೆ ಈಡೇರಿಸಿದ್ದಕ್ಕೆ ಸಿಹಿ ತಿನ್ನಿಸಿ ಧನ್ಯವಾದ ತಿಳಿಸಿದರು.

ನಮ್ಮ ಒಳ ಮೀಸಲಾತಿ ಹೋರಾಟ 30-40 ವರ್ಷಗಳದ್ದು. ಹಲವು ಸರ್ಕಾರಗಳು, ಮುಖ್ಯಮಂತ್ರಿಗಳಿಂದ ಸಾಧ್ಯವಾಗದ ಕೆಲಸವನ್ನ ಸನ್ಮಾನ್ಯ ಸಿದ್ದರಾಮಯ್ಯರವರು ಮಾಡಿ ತೋರಿಸಿದ್ದಾರೆ‌. ಸಿದ್ದರಾಮಯ್ಯ ಸಾಹೇಬರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ಸರ್ವ ಜನಾಂಗ ಒಪ್ಪುವಂತೆ ಮಾಡಿ, ಎಲ್ಲಾ ಕ್ಯಾಬಿನೆಟ್ ಸಚಿವರ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಮೂಲಕ ನಮ್ಮ ಸಮುದಾಯಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ನಮ್ಮ ಇಡೀ ಸಮುದಾಯ ಸಿದ್ದರಾಮಯ್ಯರನ್ನ ನೆನಪಿಟ್ಟುಕೊಳ್ಳಲಿದೆ. ಇಡೀ ಸಮುದಾಯ ಅವರಿಗೆ ಕೃತಜ್ಞರಾಗಿಲಿದೆ ಎಂದು ಸಚಿವ ತಿಮ್ಮಾಪೂರ ಅವರು ಹೇಳಿದರು.

Continue Reading

Latest

ಕೇಜ್ರಿವಾಲ್‌ ನೀಲಿಕಣ್ಣಿನ ಹುಡಗನಿಗೆ ಕೇಂದ್ರ ಮಂತ್ರಿ ಸ್ಥಾನ ಸುಲಭ ಸಾಧ್ಯವೇ?

VISTARANEWS.COM


on

ಬೆಂಗಳೂರು: ರಾಘವ್‌ ಚಡ್ಡಾ. ರಾಜ್ಯಸಭೆಯಲ್ಲಿ ಆಫ್ ಪಕ್ಷದ ಉಪನಾಯಕರಾಗಿರುವ ಇವರು, ಶುಕ್ರವಾರವಷ್ಟೇ ಬಿಜೆಪಿಗೆ ಸೇರ್ಪಡೆಯಾದರು. ಆಪ್‌ ಪಕ್ಷ ಕಟ್ಟುವ ನಿಟ್ಟಿನಲ್ಲಿ ಇವರದು ಪ್ರಮುಖ ಪಾತ್ರವಿದೆ. ರಾಜ್ಯಸಭೆಯಲ್ಲಿ ಆಪ್‌ ಪಕ್ಷದ ಉಪನಾಯಕರಾಗಿದ್ದ ರಾಘವ್‌, ಈಚೆಗೆ ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದರು. ನಿರೀಕ್ಷೆಯಂತೆ ಶುಕ್ರವಾರ ಬಿಜೆಪಿ ಪಕ್ಷವನ್ನು ಆಪ್‌ ಪಕ್ಷದ ಇತರೆ 7 ಮಂದಿ ರಾಜ್ಯ ಸಭೆ ಸದಸ್ಯರೊಂದಿಗೆ ಬಿಜೆಪಿಗೆ ಪಾದಾರ್ಪಣೆ ಮಾಡಿದ್ದಾರೆ.


ಹಾಗೆ‌ ನೋಡಿದರೆ, ಆಮ್ ಆದ್ಮಿ ಪಕ್ಷದಲ್ಲಿ ಆರಂಭದ ದಿನಗಳಿಂದಲೂ ಪಕ್ಷ ಕಟ್ಟಲು ಮುಖ್ಯ ಪಾತ್ರ ವಹಿಸಿದ್ದ ರಾಘವ್ ಚಡ್ಡಾ, ಲಂಡನ್​​ನಲ್ಲಿ ಸಿಎ ಪದವಿ ಪಡೆದವರು. 23ನೇ ವಯಸ್ಸಿನಲ್ಲಿಯೇ ಅರವಿಂದ್ ಕೇಜ್ರಿವಾಲ್ ಅವರ ಪಕ್ಷ ಸೇರಿಕೊಂಡು ರಾಜಕೀಯಕ್ಕೆ ಎಂಟ್ರಿಯಾದರು. ಅಂದಿನಿಂದ 15 ವರ್ಷ ಆಪ್​​ನಲ್ಲಿಯೇ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದ ರಾಘವ್ ಚಡ್ಡಾ ದೆಹಲಿ ಬಳಿಕ ಪಂಜಾಬ್​​ನಲ್ಲಿ ಆಮ್ ಆದ್ಮಿ ಪಕ್ಷ ನೆಲೆಯೂರಲು ಮುಖ್ಯಪಾತ್ರ ವಹಿಸಿದ್ದರು.


ಕೇಜ್ರಿವಾಲ್‌ರ ನೀಲಿಕಣ್ಣಿನ ಹುಡುಗ


ಅರವಿಂದ್ ಕೇಜ್ರಿವಾಲ್ ಅವರ ಅತ್ಯಾಪ್ತ ಬಣದಲ್ಲಿ ಗುರುತಿಸಿಕೊಂಡಿದ್ದ ರಾಘವ್ ಚಡ್ಡಾ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯಾಗುತ್ತಾರೆ ಎಂಬ ನಿರೀಕ್ಷೆ ಹಲವರಿಗಿತ್ತು. ಆದರೆ, ರಾಘವ್ ಚಡ್ಡಾ ಅವರನ್ನು ಪಕ್ಷದಲ್ಲಿ ಮೂಲೆಗುಂಪು ಮಾಡಲಾಯಿತು. ರಾಜ್ಯಸಭಾ ಉಪನಾಯಕನ ಸ್ಥಾನದಿಂದಲೂ ಅವರನ್ನು ವಜಾಗೊಳಿಸಲಾಯಿತು. ಅರವಿಂದ್ ಕೇಜ್ರಿವಾಲ್ ಜೈಲಿಗೆ ಹೋದ ನಂತರ ಪಕ್ಷದೊಳಗೆ ನಾನಾ ಬದಲಾವಣೆಗಳಾದವು. ಇದರಿಂದ ಬೇಸರಗೊಂಡಿದ್ದ ರಾಘವ್ ಚಡ್ಡಾ ಪಕ್ಷದೊಳಗೇ ಇದ್ದರೂ ಪಕ್ಷದಿಂದ ಕೊಂಚ ಅಂತರ ಕಾಯ್ದುಕೊಂಡಿದ್ದರು.


ಕೇಜ್ರಿವಾಲ್ ಅವರೊಂದಿಗಿನ ಆಪ್ತ ಸಂಬಂಧದ ಕಾರಣಕ್ಕೆ ರಾಘವ್ ಚಡ್ಡಾ ಅವರನ್ನು ಕೇಜ್ರಿವಾಲ್​ರ “ನೀಲಿ ಕಣ್ಣಿನ ಹುಡುಗ” ಎಂದು ಕರೆಯಲಾಗುತ್ತಿತ್ತು. 2022ರಲ್ಲಿ ರಾಘವ್ ಪಂಜಾಬ್‌ನಿಂದ ರಾಜ್ಯಸಭೆ ಸಂಸದರಾದರು. 33ನೇ ವಯಸ್ಸಿನಲ್ಲಿ ಅವರು ರಾಜ್ಯಸಭೆಯ ಕಿರಿಯ ಸದಸ್ಯರಾಗಿ ಸಂಸತ್ ಪ್ರವೇಶಿಸಿದರು. 2023ರಲ್ಲಿ ಅವರನ್ನು ಸಂಜಯ್ ಸಿಂಗ್ ಬದಲಿಗೆ ರಾಜ್ಯಸಭೆಯಲ್ಲಿ ಎಎಪಿಯ ನಾಯಕರನ್ನಾಗಿ ನೇಮಿಸಲಾಯಿತು.


ಅರವಿಂದ್ ಕೇಜ್ರಿವಾಲ್ ಜಾಮೀನಿನ ಮೇಲೆ ಬಿಡುಗಡೆಯಾಗಿ ಬಂದ ನಂತರವೂ ಆಮ್ ಆದ್ಮಿ ಪಕ್ಷದಲ್ಲಿ ರಾಘವ್ ಚಡ್ಡಾ ಅವರನ್ನು ನಿರ್ಲಕ್ಷ್ಯ ಮಾಡಲಾಯಿತು. ರಾಜ್ಯಸಭಾ ಉಪನಾಯಕನ ಹುದ್ದೆಯಿಂದ ಅವರನ್ನು ವಜಾಗೊಳಿಸಿದ ನಂತರ ಪಕ್ಷದೊಳಗಿನ ಆಂತರಿಕ ಸಮರ ಎಲ್ಲರ ಎದುರು ಬಯಲಾಗಿತ್ತು. ಅದಕ್ಕೂ ಮೊದಲಿನಿಂದಲೂ ರಾಘವ್ ಚಡ್ಡಾ ಪಕ್ಷದ ಪ್ರಮುಖ ಕಾರ್ಯಕ್ರಮಗಳು ಮತ್ತು ಪ್ರಚಾರದಿಂದ ಗೈರುಹಾಜರಾಗಿದ್ದರು. ಪಂಜಾಬ್‌ನ ಉಸ್ತುವಾರಿ ಸ್ಥಾನದಿಂದಲೂ ಅವರನ್ನು ತೆಗೆದುಹಾಕಲಾಯಿತು. ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಬಂಧನದಂತಹ ನಿರ್ಣಾಯಕ ಸಮಯದಲ್ಲಿ ರಾಘವ್ ಪಕ್ಷವನ್ನು ಬೆಂಬಲಿಸಲಿಲ್ಲ ಎಂದು ಎಎಪಿ ನಾಯಕರು ಆರೋಪಿಸಿದರು. ಪಂಜಾಬ್ ಸರ್ಕಾರದ ವ್ಯವಹಾರಗಳಲ್ಲಿ ಅವರು ಅತಿಕ್ರಮಣ ಮಾಡಿದ್ದಾರೆ ಎಂಬ ಆರೋಪವೂ ಇತ್ತು.


ಇದೆಲ್ಲದರ ಪರಿಣಾಮ ಎಂಬಂತೆ ಇದೀಗ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಸೇರುವ ಮುನ್ನ ಅವರು ಆಫ್‌ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ. ಆದರೆ ಇದೀಗ ಅಲ್ಲಿ ಸಿದ್ದಾಂತಗಳೊಂದಿಗೆ ರಾಜಿ ಮಾಡಿಕೊಳ್ಳುವ ಗುಣ ಬೆಳೆದಿದೆ ಎಂದಿದ್ದಾರೆ. ಹಾಗಿದ್ದರೆ ಈಗ ತಾವು ಕಾಲಿಟ್ಟಿರುವ ಬಿಜೆಪಿಯಲ್ಲಿ ಸಿದ್ದಾಂತಗಳ ರಾಜಿ ಆಗುವುದಿಲ್ಲವೇ ? ಎಂಬ ಪ್ರಶ್ನೆ ಸಹಜವಾಗಿಯೇ ಮೂಡುತ್ತದೆ.
ಹಾಗೆ ನೋಡಿದರೆ ಆಪ್‌ ಪಕ್ಷದಿಂದ ಪ್ರಶಾಂತ್‌ ಭೂಷನ್‌, ಯೋಗೇಂದ್ರಯಾದವ್‌ , ಆಶಿತೋಷ್‌ ಮೊದಲಾದವರು ಹೊರ ಬಂದರು. ಆದರೆ ಅವರು ಯಾವುದೇ ಪಕ್ಷ ಸೇರಲಿಲ್ಲ, ತಮ್ಮ ಪಾಡಿಗೆ ತಾವು ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡರು. ಆದರೆ ಆಫ್‌ ಪಕ್ಷದಿಂದ ಹೊರ ಬಂದ ರಾಘವ್‌ ಚಡ್ಡಾ ಸೇರಿದಂತೆ ಒಂದು ವರ್ಗದ ನಾಯಕರು ಮಾತ್ರ ಬಿಜೆಪಿಗೆ ಸೇರ್ಪಡೆಯಾಗಿರುವುದು ಗಮನಾರ್ಹವಾಗಿದೆ.


ರಾಘವ್‌ ಚಡ್ಡಾ ಸೇರ್ಪಡೆ: ಬಿಜೆಪಿಗೆ ಲಾಭವೇ ?


ಆಪ್‌ ಪಕ್ಷ ಅಧಿಕಾರದಲ್ಲಿರುವ ಪಂಜಾಬ್‌ ನಲ್ಲಿ ಇದರ ಪ್ರಭಾವ ಬೀರದೇ ಇರದು. ಇದೀಗ ರಾಘವ್‌ ಚಡ್ಡಾ ಅವರೊಂದಿಗೆ ಬಿಜೆಪಿ ಸೇರಿರುವ ರಾಜ್ಯ ಸಭೆಯ ಸಂಸದರ ಪೈಕಿ ಸಂದೀಪ್‌ ಪಾಠಕ್‌ ಅವರು ಪ್ರಮುಖರು. ಚುನಾವಣಾ ತಂತ್ರ-ರಣತಂತ್ರ ರೂಪಿಸುವಲ್ಲಿ ಇವರ ಪಾತ್ರ ಮಹತ್ತರವಾದದ್ದು. ಪಂಜಾಬ್‌ ಸಿಎಂ ಕಚೇರಿ ನಿರ್ವಹಣೆಯಲ್ಲಿಯೂ ಇವರ ಪಾತ್ರ ಹಿರಿದು. ಅದನ್ನು ಹೊರತುಪಡಿಸಿದರೆ ಪರಿಣಿತಿ ಚಡ್ಡಾ ಅವರ ಪತಿ ರಾಘವ್‌ ಚಡ್ಡಾ ಕೂಡ ಬಿಜೆಪಿಗೆ ವರವಾಗಬಲ್ಲರು. ಆದರೆ ಇವರೊಂದಿಗೆ ಬಿಜೆಪಿ ಸೇರ್ಪಡೆಯಾಗಿರುವ ಇತರರು ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನಲಾಗುತ್ತಿದೆ.


ರಾಘವ್‌ ಚಡ್ಡಾ ಏಳು ಮಂದಿ ಸಂಸದರನ್ನು ತಮ್ಮೊಂದಿಗೆ ಕೇಸರಿ ಪಕ್ಷಕ್ಕೆ ಕರೆತಂದ ಹಿನ್ನೆಲೆಯಲ್ಲಿ ಅವರನ್ನು ಕೇಂದ್ರ ಮಂತ್ರಿ ಮಂಡಲದಲ್ಲಿ ಸ್ಥಾನವಕಾಶ ದೊರೆಯಬಹುದು. ಏಕೆಂದರೆ ಪ್ರಸ್ತುತ ರಾಘವ್‌ ಅವರ ರಾಜ್ಯಸಭೆ ಕಾಲಾವಧಿ ಇನ್ನೇರಡು ವರ್ಷವರೆಗೆ ಬಾಕಿ ಇದೆ. ಮತ್ತೆ ಅವರನ್ನು ರಾಜ್ಯಸಭೆಯಲ್ಲಿ ಸ್ಥಾನವಕಾಶ ಕಲ್ಪಿಸಬಹುದು ಆದರೆ ಸದ್ಯಕ್ಕೆ ಆ ಸಾಧ್ಯತೆ ಕಡಿಮೆ ಎಂದೇ ಬಿಜೆಪಿ ಮೂಲಗಳ ಅಭಿಪ್ರಾಯ.


ರಾಜ್ಯಸಭೆಯಲ್ಲಿ ಬಿಜೆಪಿಯ ಬಲ ಇದೀಗ 142ಕ್ಕೇರಿದಂತಾಗಿದೆ. ಮೂರನೇ ಎರಡರಷ್ಟು ಬಹುಮತಕ್ಕಾಗಿ ಬಿಜೆಪಿಗೆ ರಾಜ್ಯಸಭೆಯಲ್ಲಿ ಇನ್ನೂ 20 ಸದಸ್ಯರ ಬಲ ಅವಶ್ಯ. ಇದರಲ್ಲಿ ಬಿಜೆಪಿ ಸಫಲವಾದರೆ ಲೋಕಸಭೆ ಮತ್ತು ರಾಜ್ಯಸಭೆ ಈ ಎರಡೂ ಸದನಗಳಲ್ಲಿ ಅಂದರೆ ಸಂಸತ್ತಿನ ಉಭಯ ಸದನಗಳಲ್ಲಿ ಯಾವುದೇ ವಿಧೇಯಕ ಪಾಸು ಮಾಡಿಕೊಳ್ಳುವುದು ಬಿಜೆಪಿ ಸುಲಭಸಾಧ್ಯವಾಗಲಿದೆ. ಸಂತ್ತಿನ ಮೇಲ್ಮನೆಯಲ್ಲಿ ಪ್ರಸ್ತುತ ವಿಪಕ್ಷಗಳ ಸ್ಥಾನ 113ರಷ್ಟಿದೆ. ಆದರೆ ರಾಜ್ಯಸಭೆಯಲ್ಲಿ ಕೊರತೆ ಇರುವ ಇನ್ನೂ 20 ಸದಸ್ಯರನ್ನು ಸೆಳೆಯುವುದು ಕೇಸರಿ ಪಕ್ಷಕ್ಕೆ ಅಷ್ಟು ಸುಲಭಸಾಧ್ಯವಲ್ಲ ಎಂದೂ ಹೇಳಲಾಗುತ್ತಿದೆ.


ಒಟ್ಟಾರೆ, ರಾಘವ್‌ ಚಡ್ಡಾ ಅವರ ಬಿಜೆಪಿ ಸೇರ್ಪಡೆ ಆಪ್‌ ಪಕ್ಷದ ಮುಖ್ಯಸ್ಥ ಅರವಿಂದ್‌ ಕೇಜ್ರಿವಾಲ್‌ ಮತ್ತು ಪಠಾಲಂಗೆ ದೊಡ್ಡ ಆಘಾತವೇ ಸರಿ ಎನ್ನುವುದರಲ್ಲಿ ಎರಡು ಮಾತಿಲ್ಲ.

Continue Reading
Advertisement
Latest2 hours ago

ಇತಿಹಾಸ ಬರೆಯಲು ಸಜ್ಜಾದ ರನ್ ಮಷೀನ್: ಐಪಿಎಲ್ ಕ್ರಿಕೆಟ್‌ನಲ್ಲಿ ಕೊಹ್ಲಿ ಹೊಸ ರೆಕಾರ್ಡ್‌

Latest2 hours ago

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿದ NIA ನ್ಯಾಯಾಲಯ

Latest2 hours ago

ಪಾಕಿಸ್ತಾನಕ್ಕೆ ಮತ್ತೊಂದು ಆರ್ಥಿಕ ಪೆಟ್ಟು: 3.5 ಬಿಲಿಯನ್ ಡಾಲರ್ ಸಾಲ ಮರುಪಾವತಿಗೆ ಯುಎಇ ಸೂಚನೆ

ಸಿನಿಮಾ3 hours ago

ಎಲೆಕ್ಷನ್ ಮುಗಿದರೂ ಮುಗಿಯದ ದಳಪತಿ ಆಸ್ತಿ ಸಂಘರ್ಷ: ಹೆಂಡತಿಗೆ ಕೊಟ್ಟ 12 ಕೋಟಿ ಸಾಲದ ರಹಸ್ಯವೇನು?

Latest4 hours ago

ಹರಿಹರ ಪೀಠದಲ್ಲಿ ಲೆಕ್ಕ ಸಮರ: ವಚನಾನಂದ ಶ್ರೀ, ಟ್ರಸ್ಟಿಗಳ ನಡುವೆ ಆರೋಪ-ಪ್ರತ್ಯಾರೋಪ.

Latest5 hours ago

RCB v/s GT ಪಂದ್ಯದ ವೇಳೆ ಭದ್ರತಾ ವೈಫಲ್ಯ: 240 ಸಿಸಿಟಿವಿಗಳನ್ನು ನಿಷ್ಕ್ರಿಯಗೊಳಿಸಿದ್ದೇಕೆ? ಹೊರಬಿತ್ತು ಶಾಕಿಂಗ್‌ ಸತ್ಯ!

Latest5 hours ago

ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ: ಮೇ 1ರಿಂದ ಬದಲಾಗಲಿವೆ ಎಲ್‌ಪಿಜಿ ನಿಯಮಗಳು

Latest7 hours ago

ಮೇನಲ್ಲಿ ನಡೆಯಲಿದೆ ಪ್ಯಾನ್-ಐಐಟಿ ಬೆಂಗಳೂರು ಸಮ್ಮಿಟ್-2026

ಕರ್ನಾಟಕ8 hours ago

ಡಿಕೆಶಿ ಪದೇ ಪದೇ ದೆಹಲಿಗೆ ಹೋಗುತ್ತಿರುವುದೇಕೆ? ಸತೀಶ್ ಜಾರಕಿಹೊಳಿ ನೀಡಿದ ಆ ಗೊಂದಲದ ಹೇಳಿಕೆಯಲ್ಲಿದೆಯೇ ದೊಡ್ಡ ಸುಳಿವು

Latest9 hours ago

ಇರಾನ್‌ನಿಂದ ಹೊಸ ಶಾಂತಿ ಸಂಧಾನ: ಹಾರ್ಮುಜ್ ಜಲಸಂಧಿ ಮುಕ್ತಗೊಳಿಸಲು ಅಮೆರಿಕಕ್ಕೆ ಷರತ್ತುಬದ್ಧ ಪ್ರಸ್ತಾವನೆ ಸಲ್ಲಿಕೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌