Site icon Vistara News

Police Suspend | ಶಿರಾಡಿ ಘಾಟ್‌ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ಲೋಪ; 6 ಪೊಲೀಸರ ಅಮಾನತು

ಶಿರಾಡಿಘಾಟ್‌ನಲ್ಲಿ

ಹಾಸನ: ಶಿರಾಡಿ ಘಾಟ್‌ನಲ್ಲಿ ವಾಹನಗಳ ಓಡಾಟಕ್ಕೆ ನಿರ್ಬಂಧ ಇದ್ದರೂ ಪೊಲೀಸರು ಅವಕಾಶ ಕಲ್ಪಿಸಿಕೊಟ್ಟು, ಕರ್ತವ್ಯ ಲೋಪ ಎಸಗಿದ ಕಾರಣಕ್ಕೆ ಈಗ ಆರು ಪೊಲೀಸರ ಅಮಾನತು (Police Suspend) ಮಾಡಿ ಆದೇಶಿಸಲಾಗಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಾಲ್ ಮತ್ತು ಮಾರನಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ನಿಯೋಜನೆಗೊಂಡಿದ್ದ ಪೊಲೀಸರು ಎಂದು ತಿಳಿದು ಬಂದಿದೆ. ಹಾಸನ ಎಸ್‌ಪಿ ಹರಿರಾಂ ಶಂಕರ್ ಅಮಾನತು ಆದೇಶ ಹೊರಡಿಸಿದ್ದಾರೆ.

ಭಾರಿ ಮಳೆ ಕಾರಣದಿಂದ ಎರಡು ಕಡೆ ಭೂಕುಸಿತ ಹಾಗೂ ರಸ್ತೆ ಕುಸಿತದಿಂದ ಶಿರಾಡಿ ಘಾಟ್ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿತ್ತು. ಸಂಜೆ 6ರಿಂದ ಬೆಳಗ್ಗೆ 6 ಗಂಟೆವರೆಗೆ ತುರ್ತು ವಾಹನಗಳನ್ನು ಬಿಟ್ಟು ಎಲ್ಲ ತರಹದ ವಾಹನಗಳ ಸಂಚಾರ ಬಂದ್ ಮಾಡಲಾಗಿತ್ತು. ಆದರೆ, ಶಿರಾಡಿ ಘಾಟ್‌ ರಸ್ತೆ ಚೆಕ್‌ಪೋಸ್ಟ್‌ನಲ್ಲಿ ಸಕಲೇಶಪುರ ಗ್ರಾಮಾಂತರ ಠಾಣೆಯ 6 ಪೊಲೀಸ್ ಸಿಬ್ಬಂದಿ ಕರ್ತವ್ಯ ಲೋಪ ಎಸೆಗಿದ್ದರು.

ಇದನ್ನೂ ಓದಿ | ಶಿರಾಡಿ ಘಾಟ್‌ ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ | ಹಾಸನ ಜಿಲ್ಲಾಧಿಕಾರಿ ಆದೇಶ

Exit mobile version