Rama Mandir : ರಾಮ ಮಂದಿರ ಲೋಕಾರ್ಪಣೆಗೆ ದಿನಗಣನೆ; ಹಾಸನದಲ್ಲಿ ಕಂಡಿತು ಒಂದು ಅಚ್ಚರಿ - Vistara News

ಕರ್ನಾಟಕ

Rama Mandir : ರಾಮ ಮಂದಿರ ಲೋಕಾರ್ಪಣೆಗೆ ದಿನಗಣನೆ; ಹಾಸನದಲ್ಲಿ ಕಂಡಿತು ಒಂದು ಅಚ್ಚರಿ

Rama Mandir : ಹಾಸನ ಜಿಲ್ಲೆಯ ಕಾಗನೂರಿನ ಹೇಮಾವತಿ ನದಿ ದಂಡೆಯ ಕಲ್ಲಿನಲ್ಲಿ ರಾಮನ ಪಾದ, ಈಶ್ವರನ ಲಿಂಗ ಕಂಡಿದೆ. ಜನರು ಇಲ್ಲಿ ದೇವಸ್ಥಾನ ಕಟ್ಟಬೇಕು ಎಂದು ಆಗ್ರಹಿಸುತ್ತಿದ್ದಾರೆ.

VISTARANEWS.COM


on

Ramana pada Hasana
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ (Sri Rama Janmabhumi) ಜನವರಿ 22ರಂದು ಭವ್ಯ ಶ್ರೀ ರಾಮಮಂದಿರ (Rama Mandir) ಲೋಕಾರ್ಪಣೆಗೊಳ್ಳಲಿದೆ. ಹೀಗಾಗಿ ಲೋಕಾದ್ಯಂತ ಅದರ ಕುರಿತೇ ಚರ್ಚೆಗಳು ನಡೆಯುತ್ತಿದೆ. ಅದರ ನಡುವೆಯೇ ಹಾಸನದಲ್ಲಿ ಶ್ರೀರಾಮನ ಕುರಿತ ಅಚ್ಚರಿಯ ಸಂಗತಿಯೊಂದು ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆಯ (Hasana News) ಆಲೂರು ತಾಲೂಕಿನ ಕಾಗನೂರು ಪರಿಸರದಲ್ಲಿ ಶ್ರೀರಾಮ ಓಡಾಡಿದ್ದ ಎಂಬುದಕ್ಕೆ ಪೂರಕವಾಗಿ ಕೆಲವು ಪುರಾವೆಗಳು (foot prints of Sri Rama) ಸಿಕ್ಕಿವೆ.

ಆಲೂರು ತಾಲೂಕಿನ ಕಾಗನೂರಿನಲ್ಲಿ ಹೇಮಾವತಿ ನದಿ ಹರಿಯುತ್ತಿದ್ದು ಅದರ ದಡದಲ್ಲಿರುವ ಬೃಹದಾಕಾರದ ಬಂಡೆಯ ಮೇಲೆ ಶ್ರೀರಾಮದ ಪಾದದ ಗುರುತು ಕಂಡಿದೆ. ಅಷ್ಟೇ ಅಲ್ಲ ಆಂಜನೇಯ ಪಾದ ಹಾಗೂ ಶಿವಲಿಂಗ ಮೂರ್ತಿ ಕೂಡ ಕಂಡಿದೆ. ವಿಶೇಷವೆಂದರೆ ಶ್ರೀರಾಮನ ಪಾದ ಕಂಡ ಜಾಗದಿಂದ ಅರ್ದ ಕಿಲೋಮೀಟರ್ ದೂರದಲ್ಲಿ ಆಂಜನೇಯನ ದೇವಸ್ಥಾನವೂ ಇದೆ.

Ramana pada Hasana1
Ramana pada Hasana1

ನೀರಿನಲ್ಲಿ ಮುಳುಗಿದ್ದ ಬಂಡೆಯಲ್ಲಿ ರಾಮನ ಪಾದ

ಹೇಮಾವತಿ ನದಿ ದಂಡೆಯಲ್ಲಿರುವ ಈ ಬೃಹತ್‌ ಬಂಡೆಯ ಮೇಲೆ ಹಿಂದಿನಿಂದಲೂ ಪಾದದ ಗುರುತು ಇತ್ತು. ಅಲ್ಲಿ ಪೂಜೆಯೂ ನಡೆಯುತ್ತಿತ್ತು. ಆದರೆ, 70ರ ದಶಕದಲ್ಲಿ ಈ ಸ್ಥಳದಲ್ಲಿ ಜಲಾಶಯ ನಿರ್ಮಾಣ ಮಾಡಿದ ಬಳಿಕ ಈ ಕಲ್ಲು ಇರುವ ಪ್ರದೇಶದಲ್ಲಿ ನೀರು ತುಂಬಿಕೊಂಡಿತ್ತು. ಈ ಬಾರಿ ಮಳೆ ಕಡಿಮೆ ಆದ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ನೀರು ಕಡಿಮೆಯಾಗಿ ಮತ್ತೆ ಬಂಡೆ ಗೋಚರಿಸಿದೆ. ಹೀಗಾಗಿ ಜನರು ಸುಮಾರು 50 ವರ್ಷಗಳ ಬಳಿಕ ರಾಮ ಪಾದ ಈಶ್ವರ ಲಿಂಗವನ್ನು ಕಂಡು ಪುಳಕಿತರಾಗಿದ್ದಾರೆ. ಪೂಜೆಯನ್ನೂ ನಡೆಸುತ್ತಿದ್ದಾರೆ.

ಇಲ್ಲಿ ದೇವಸ್ಥಾನ ಕಟ್ಟಬೇಕು ಎಂದು ಆಗ್ರಹ

ಲಂಕೆಯಲ್ಲಿ ರಾವಣನ ಸಂಹಾರದ ಬಳಿಕ ಬ್ರಹ್ಮ ಹತ್ಯೆ ದೋಷ ಪರಿಹಾರಕ್ಕಾಗಿ ಲೋಕ ಸಂಚಾರದಲ್ಲಿದ್ದ ರಾಮ‌ ಲಕ್ಷ್ಮಣ ಸೀತೆಯರು ಪುಣ್ಯ ನದಿ ಹೇಮಾವತಿ ದಂಡೆಯಲ್ಲಿ ಸ್ವಲ್ಪ ಕಾಲ ವಾಸಿಸಿದ್ದರು ಎಂದು ಹೇಳಲಾಗುತ್ತಿದೆ. ಈ ಸಂದರ್ಭದಲ್ಲಿ ರಾಮ ಈಶ್ವರ ಲಿಂಗವನ್ನು ಪ್ರತಿಷ್ಠಾಪನೆ ಮಾಡಿ ಪೂಜೆ ಮಾಡಿದ್ದ ಎನ್ನಲಾಗುತ್ತಿದೆ. ಇಲ್ಲೇ 500 ಮೀಟರ್‌ ದೂರದಲ್ಲಿ ಹನುಮನ ವಿಗ್ರಹವೂ ಇರುವುದು ಭಕ್ತಿಯನ್ನು ವರ್ಧಿಸಿದೆ.

ಇದನ್ನೂ ಓದಿ: Sonia Gandhi: ರಾಮನ ದರ್ಶನ ಪಡೆಯಲಿರುವ ಸೋನಿಯಾ ಗಾಂಧಿ; ಕಾರ್ಯಕ್ರಮದಲ್ಲಿ ಭಾಗಿ ನಿಶ್ಚಿತ

ಇದೀಗ ಜನರು ಈ ರಾಮನ ಪಾದ, ಈಶ್ವರನ ಲಿಂಗ ಕಾಣಿಸಿಕೊಂಡಿರುವ ಜಾಗದಲ್ಲಿ ಒಂದು ದೇವಾಲಯವನ್ನು ಸ್ಥಾಪಿಸಿ ನಿತ್ಯ ಪೂಜೆಗೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ. ಸರ್ಕಾರ ಇದರ ಬಗ್ಗೆ ಏನು ಕ್ರಮ ಕೈಗೊಳ್ಳುತ್ತದೆ ಕಾದು ನೋಡಬೇಕಾಗಿದೆ.

ಭಕ್ತರಂತೂ ಅರ್ಚಕರನ್ನು ಕರೆಸಿ ನಿತ್ಯ ಪೂಜೆಯನ್ನು ಮಾಡುತ್ತಿದ್ದಾರೆ. ಈಶ್ವರ ಲಿಂಗಕ್ಕೆ ಒಂದು ಸಣ್ಣ ಕಲ್ಲಿನ ಚಾವಣಿಯನ್ನೂ ಮಾಡಲಾಗಿದೆ. ಪಾದಗಳಿಗೆ ಹೂವಿನಿಂದ ಅರ್ಚನೆ ಮಾಡಲಾಗುತ್ತಿದೆ. ದಿನವೂ ನೂರಾರು ಭಕ್ತರು ಬಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Rajakaluve Encroachment : ರಾಜಕಾಲುವೆ ಒತ್ತುವರಿ ತೆರವಿಗೆ ಮುಹೂರ್ತ ಫಿಕ್ಸ್; ಮತ್ತೆ ಗರ್ಜಿಸಲಿದೆ ಬುಲ್ಡೋಜರ್

Rajakaluve Encroachment: ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಸಂಬಂಧ ಬಿಬಿಎಂಪಿ ಡೆಮಾಲಿಷನ್ ಡ್ರೈವ್ ಮತ್ತೆ ಶುರು ಮಾಡಲು ಮುಂದಾಗಿದೆ. ಹಿಂದೊಮ್ಮೆ ಸ್ಟೇ ಆರ್ಡರ್‌ ಬರುತ್ತಿದ್ದಂತೆ, ಅಧಿಕಾರಿಗಳು ಠುಸ್‌ ಪಟಾಕಿ ಆಗಿದ್ದರು. ಇದೀಗ ಮತ್ತೆ ಡೆಮಾಲಿಷನ್‌ ಕೆಲಸಕ್ಕೆ ಕೈಹಾಕಿದೆ.

VISTARANEWS.COM


on

By

Rajakaluve Encroachment
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬೃಹತ್‌ ಬೆಂಗಳೂರು ಪಾಲಿಕೆ ವ್ಯಾಪ್ತಿಯ ರಾಜಕಾಲುವೆ, ಕೆರೆಗಳನ್ನು ಒತ್ತುವರಿ ಮಾಡಿದ ಕಟ್ಟಡ ಮಾಲೀಕರಿಗೆ (Rajakaluve Encroachment) ಅಧಿಕಾರಿಗಳು ಶಾಕ್ ಕೊಡಲಿದ್ದಾರೆ. ಕಳೆದ ವಾರ ಸುರಿದ ಭಾರಿ ಮಳೆಗೆ ರಾಜಕಾಲುವೆಗಳ ನೀರು ರಸ್ತೆಗೆ ಹರಿದಿತ್ತು. ಇದರಿಂದ ಸರ್ಕಾರಕ್ಕೆ ಹಾಗೂ ಬಿಬಿಎಂಪಿಗೆ ಜನ ಇಡಿ ಶಾಪ ಹಾಕಿದ್ದರು, ಇದು ಸರ್ಕಾರಕ್ಕೆ ಮುಜುಗರ ಉಂಟಾಗಿತ್ತು. ಇತ್ತ ಖುದ್ದು ಡಿಸಿಎಂ ಶಿವಕುಮಾರ್‌ ಕೂಡ ಒತ್ತುವರಿ ತೆರವಿಗೆ ಆದೇಶ ನೀಡಿದ್ದರು.

ಈ ಹಿನ್ನೆಲೆಯಲ್ಲಿ ರಾಜಕಾಲುವೆ, ಕೆರೆ ಒತ್ತುವರಿ ಮಾಡಿದ ಕಟ್ಟಡ ಮಾಲೀಕರಿಗೆ ಬಿಸಿ ಮುಟ್ಟಿಸಲು ಬಿಬಿಎಂಪಿ ಮುಂದಾಗಿದೆ. ಈಗಾಗಲೇ 1,712 ಕಟ್ಟಡಗಳು ರಾಜಕಾಲುವೆ ಒತ್ತುವರಿ ಮಾಡಿರುವ ವರದಿ ಸಿದ್ದವಾಗಿದೆ. ಅದರಲ್ಲಿ 196 ಕಟ್ಟಡಗಳ ಕೇಸ್ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿ ಇದೆ. ಉಳಿದಂತೆ 167 ಕಟ್ಟಡಗಳ ಸರ್ವೆ ಕಾರ್ಯ ಮುಗಿದಿದೆ. ತಹಸೀಲ್ದಾರರು ಆದೇಶ ನೀಡಿದ್ರೆ ಒತ್ತುವರಿ ತೆರವಿಗೆ ಬಿಬಿಎಂಪಿ ಮುಂದಾಗಲಿದೆ.

ಸದ್ಯ 1712 ಒತ್ತುವರಿ ಪ್ರಕರಣಗಳಲ್ಲಿ 300 ಕಡೆ ಖಾಲಿ ನಿವೇಶನ ಇದ್ದು, ಈಗಾಗಲೇ ಒತ್ತುವರಿ ತೆರವು ಮಾಡಲಾಗಿದೆ. ಉಳಿದ 800 ಕಡೆ ಒತ್ತುವರಿ ತೆರವು ಬಾಕಿ ಇದೆ. ಯಾವ್ಯಾವ ವಲಯಗಳಲ್ಲಿ ಒತ್ತುವರಿ ಆಗಿದೆ ಎಂದು ನೋಡುವುದಾದರೆ, ಪೂರ್ವ ವಲಯದಲ್ಲಿ 123, ಪಶ್ಚಿಮ 46, ದಕ್ಷಿಣ 46, ಕೋರಮಂಗಲ ಕಣೆವೆ 104, ಹಾಗೂ ಯಲಹಂಕ 359, ಮಹಾದೇವಪುರ 492, ಬೊಮ್ಮನಹಳ್ಳಿ 201, ಆರ್ ಆರ್ ನಗರ 104 ಸೇರಿದಂತೆ ದಾಸರಹಳ್ಳಿ 207

Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading

ಬೆಂಗಳೂರು

KEA: ನಾಳೆ ಕನ್ನಡ ಕಡ್ಡಾಯ ಪರೀಕ್ಷೆ; ಅ.27ಕ್ಕೆ ಬಿಗಿ ಬಂದೋಬಸ್ತ್ ನಡೆಯಲಿದೆ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

KEA : ಕನ್ನಡ ಕಡ್ಡಾಯ ಪರೀಕ್ಷೆ ಅ.26ಕ್ಕೆ, ಅ.27ಕ್ಕೆ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆಯು ಬಿಗಿ ಪೊಲೀಸ್‌ ಬಂದೋಬಸ್ತ್‌ನಲ್ಲಿ ನಡೆಯಲಿದೆ.

VISTARANEWS.COM


on

By

kea
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿಯ ಒಂದು ಸಾವಿರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅ.27ರಂದು ಮುಖ್ಯ ಪರೀಕ್ಷೆ ನಡೆಸುತ್ತಿದ್ದು ಸಕಲ ರೀತಿಯ ಬಿಗಿ ಕ್ರಮಗಳನ್ನು ಕೈಗೊಂಡಿದೆ.

ವಯೋಮಿತಿ ಸಡಿಲಿಕೆ ನಂತರ ಅರ್ಜಿ ಸಲ್ಲಿಸಿದ ಸುಮಾರು 63 ಸಾವಿರ ಮಂದಿಗೆ ಕನ್ನಡ ಕಡ್ಡಾಯ ಪರೀಕ್ಷೆ, ಅ.26ಕ್ಕೆ ರಾಜ್ಯದ 153 ಕೇಂದ್ರಗಳಲ್ಲಿ ನಡೆಯಲಿದೆ. ಇದರಲ್ಲಿ ಜಿಟಿಟಿಸಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ 2,300 ಮಂದಿಯೂ ಸೇರಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ತಿಳಿಸಿದ್ದಾರೆ.

ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಮುಖ್ಯ ಪರೀಕ್ಷೆ ಅ.27ರಂದು ನಡೆಯಲಿದ್ದು, ಅದನ್ನು ಬರೆಯಲು 4.8 ಲಕ್ಷ ಅಭ್ಯರ್ಥಿಗಳು ಅರ್ಹರಾಗಿದ್ದಾರೆ. ಈ ಸಲುವಾಗಿ 1,173 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಅವರು ವಿವರಿಸಿದರು. ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ. ವಸ್ತ್ರ ಸಂಹಿತೆ ಕೂಡ ಇದ್ದು, ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಹೇಳಿದ್ದಾರೆ.

ಓಎಂಆರ್ ನೋಂದಣಿ ಎಚ್ಚರ

ಸೆ.26ರಂದು ನಡೆದ ಕಡ್ಡಾಯ ಕನ್ನಡ ಪರೀಕ್ಷೆಯ ಓಎಂಆರ್ ಶೀಟ್ ನಲ್ಲಿ ನೋಂದಣಿ ಸಂಖ್ಯೆ‌ ಮತ್ತು ವರ್ಶನ್ ಕೋಡ್ ನಮೂದಿಸುವಾಗ ಸುಮಾರು ಒಂಬತ್ತು ಸಾವಿರ ಮಂದಿ ತಪ್ಪು ಮಾಡಿದ್ದು ಪುನಃ ಆ ರೀತಿ ಆಗಬಾರದು ಎನ್ನುವ ಕಾರಣಕ್ಕೆ ಅಭ್ಯಾಸ ಸಲುವಾಗಿ ಈ ಬಾರಿ ಮಾದರಿ ಓಎಂಆರ್ ಶೀಟ್ ನೀಡಲಾಗಿತ್ತು. ಸರಿಯಾಗಿ ಅಭ್ಯಾಸ ಮಾಡಿಕೊಂಡು ಬನ್ನಿ. ಪುನಃ ತಪ್ಪು ಗಳಾದರೆ ಅದಕ್ಕೆ ಪ್ರಾಧಿಕಾರ ಜವಾಬ್ದಾರಿಯಲ್ಲ.‌ ಮಾದರಿ ಓಎಂಆರ್ ಶೀಟ್ ಅನ್ನು ಪರೀಕ್ಷಾ ಕೇಂದ್ರಕ್ಕೆ ತರುವುದು ಬೇಡ ಎಂದೂ‌ ಅವರು ಸಲಹೆ ನೀಡಿದ್ದಾರೆ.

Continue Reading

ಕೊಡಗು

Assault case: ಟ್ರಾಫಿಕ್‌ ಪೊಲೀಸ್‌ ಮೇಲೆಯೇ ಕಾರು ಹರಿಸಿ ಪರಾರಿ ಆಗಿದ್ದ ಚಾಲಕ ಅರೆಸ್ಟ್‌

Assault case: ಕರ್ತವ್ಯ ನಿರತ ಸಂಚಾರಿ ಪೊಲೀಸ್ ಮೇಲೆ ಕಾರು ಹರಿಸಲು ಮುಂದಾದ ಕಾರು ಚಾಲಕನನ್ನು ಕೊಡಗು ಪೊಲೀಸರು ಬಂಧಿಸಿ, ಜೈಲಿಗೆ ಅಟ್ಟಿದ್ದಾರೆ.

VISTARANEWS.COM


on

By

assault Case
Koo

ಕೊಡಗು: ಮಡಿಕೇರಿ ಸಮೀಪ ಎರಡು ಶಿಫ್ಟ್‌ ಕಾರುಗಳ ನಡುವೆ ಅಪಘಾತ (Road Accident) ಸಂಭವಿಸಿತ್ತು. ಈ ವೇಳೆ ಜಿಟಿ ಸರ್ಕಲ್‌ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ‌ ಸಂಜು ಅವರು ಸ್ಥಳಕಾಗಮಿಸಿ ಪರಿಶೀಲನೆ ನಡೆಸಲು ಮುಂದಾಗಿದ್ದರು. ಈ ವೇಳೆ ಮತ್ತೊಂದು ಶಿಫ್ಟ್‌ ಕಾರನ್ನು ಬದಿಗೆ ಸರಿಸುವಂತೆ ಸೂಚಿಸುವ ಸಂದರ್ಭದಲ್ಲಿ ಕಾರು ಚಾಲಕ ವಾಹನವನ್ನು ನಿಲ್ಲಿಸದೆ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಸ್ಟೇಬಲ್‌ ಮೇಲೆ ವಾಹನ ಹರಿಸಿ (Assault case) ತಪ್ಪಿಸಿಕೊಂಡಿದ್ದ.

ಸಂಚಾರಿ ಪೊಲೀಸ್ ಸಿಬ್ಬಂದಿ ಸಂಜು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸ್ ಮೇಲೆ ಕಾರು ಹರಿಸಲು ಮುಂದಾದ ದೃಶ್ಯ ‌ಸ್ಥಳೀಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇನ್ನು ಆತನ ಬೆನ್ನಟ್ಟಿದಾಗ ಪೊಲೀಸರ ಕಣ್ಣು ತಪ್ಪಿಸಿ ಕಾರು ಚಾಲಕ ಪರಾರಿ ಆಗಿದ್ದ.

ಪೊಲೀಸ್ ಸಿಬ್ಬಂದಿ ಮೇಲೆ ಕಾರು ಹರಿಸಿದ ಪ್ರಕರಣ ಸಂಬಂಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿ, ಪರಾರಿಯಾಗಿದ್ದ ಕಾರು ಚಾಲಕ ಬಂಟ್ವಾಳ ಮೂಲದ ನಜೀರ್ ಎಂಬಾತನನ್ನು ಬಂಧಿಸಿ, ಜೈಲಿಗೆ ಅಟ್ಟಿದ್ದಾರೆ. ಕೊಡಗು ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ನಿರ್ದೇಶನದ ಮೇರೆಗೆ, ಸಂಚಾರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶ್ರೀಧರ್ ನೇತೃತ್ವದಲ್ಲಿ ತಂಡ ರಚಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸರ ಈ ಮಿಂಚಿನ ಕಾರ್ಯಾಚರಣೆಗೆ ಕೊಡಗು ಎಸ್ಪಿ ಕೂಡ ಶ್ಲಾಘನೆಗೆ ವ್ಯಕ್ತಪಡಿಸಿದ್ದಾರೆ‌.

Continue Reading
Advertisement
Rajakaluve Encroachment
ಬೆಂಗಳೂರು43 ನಿಮಿಷಗಳು ago

Rajakaluve Encroachment : ರಾಜಕಾಲುವೆ ಒತ್ತುವರಿ ತೆರವಿಗೆ ಮುಹೂರ್ತ ಫಿಕ್ಸ್; ಮತ್ತೆ ಗರ್ಜಿಸಲಿದೆ ಬುಲ್ಡೋಜರ್

karnataka Weather Forecast
ಮಳೆ6 ಗಂಟೆಗಳು ago

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

dina bhavishya
ಭವಿಷ್ಯ7 ಗಂಟೆಗಳು ago

Dina Bhavishya: ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನಾಡಿ ಅಪಾಯ ತಂದುಕೊಳ್ಳಬೇಡಿ

kea
ಬೆಂಗಳೂರು20 ಗಂಟೆಗಳು ago

KEA: ನಾಳೆ ಕನ್ನಡ ಕಡ್ಡಾಯ ಪರೀಕ್ಷೆ; ಅ.27ಕ್ಕೆ ಬಿಗಿ ಬಂದೋಬಸ್ತ್ ನಡೆಯಲಿದೆ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

assault Case
ಕೊಡಗು22 ಗಂಟೆಗಳು ago

Assault case: ಟ್ರಾಫಿಕ್‌ ಪೊಲೀಸ್‌ ಮೇಲೆಯೇ ಕಾರು ಹರಿಸಿ ಪರಾರಿ ಆಗಿದ್ದ ಚಾಲಕ ಅರೆಸ್ಟ್‌

actor darshan
ಪ್ರಮುಖ ಸುದ್ದಿ23 ಗಂಟೆಗಳು ago

Actor Darshan : ದರ್ಶನ್‌ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌; ನ.8ರಂದು ನವಗ್ರಹ ಸಿನಿಮಾ ರೀ-ರಿಲೀಸ್‌

Bengaluru News
ಬೆಂಗಳೂರು24 ಗಂಟೆಗಳು ago

Bengaluru News : ಪ್ರಿಯಕರನ ಕಣ್ಮುಂದೆಯೇ ಯುವತಿ ಮೇಲೆ ಎರಗಿದ್ದ ಕಾಮುಕರಿಗೆ ಜೀವಾವಧಿ ಶಿಕ್ಷೆ

Dina Bhavishya
ಭವಿಷ್ಯ1 ದಿನ ago

Dina Bhavishya : ಕುಟುಂಬದ ಆಪ್ತರೊಂದಿಗೆ ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರ

Dina Bhavishya
ಭವಿಷ್ಯ2 ದಿನಗಳು ago

Dina Bhavishya : ಈ ದಿನ ಹೂಡಿಕೆ ವ್ಯವಹಾರದಿಂದ ದೂರವಿರಿ

Dina bhavishya
ಭವಿಷ್ಯ3 ದಿನಗಳು ago

Dina Bhavishya: ಈ ರಾಶಿಯವರಿಗೆ ಉತ್ಸಾಹದ ವಾತಾವರಣ; ಆಪ್ತರೊಂದಿಗೆ ಪ್ರಯಾಣ ಸಾಧ್ಯತೆ

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ11 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ3 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌