Site icon Vistara News

Robbery Case : ಬೇಲೂರಿನಲ್ಲಿ ಪಿಸ್ತೂಲ್‌ ಹಿಡಿದು ಮನೆಗೆ ನುಗ್ಗಿದ ದರೋಡೆಕೋರರು; ಚಿನ್ನ ಕದ್ದು ಎಸ್ಕೇಪ್‌

Robbers break into house with pistols in Belur Gold stolen and escaped

ಹಾಸನ: ಹಾಸನದ ಬೇಲೂರು ತಾಲೂಕಿನ ಮುದಿಗೆರೆ ಕ್ರಾಸ್‌ನಲ್ಲಿ ಪಿಸ್ತೂಲ್ ಹಿಡಿದು ಮನೆಗೆ ನುಗ್ಗಿದ ದರೋಡೆಕೋರರು (Robbers) ಚಿನ್ನಾಭರಣ ಕಸಿದು ಎಸ್ಕೇಪ್‌ ಹಾಕಿದ್ದಾರೆ. ಮನೆಯ ಗೋಡೆಗೆ ಗುಂಡು ಹಾರಿಸಿ ಚಿನ್ನಾಭರಣ ಲೂಟಿ (Robbery Case) ಮಾಡಿದ್ದಾರೆ.

ರವಿ ಎಂಬುವವರ ಮನೆಯಲ್ಲಿ ದರೋಡೆ ನಡೆದಿದೆ. ಸಂಜೆ ವೇಳೆ ಮುಖಕ್ಕೆ ಕರ್ಚಿಫ್‌ ಹಾಕಿಕೊಂಡು ಬಂದ ಇಬ್ಬರು ದರೋಡೆಕೋರರು ಮನೆಗೆ ನುಗ್ಗಿದ್ದಾರೆ. ಈ ವೇಳೆ ಮನೆಯಲ್ಲಿದ್ದ ರವಿ ಅವರ ಪತ್ನಿ ಶೃತಿ ಹಾಗೂ ಅವರ ತಾಯಿ ಚಂದ್ರಮ್ಮರಿಗೆ ಪಿಸ್ತೂಲ್ ತೋರಿಸಿದ್ದಾರೆ. ಮೈಮೇಲಿದ್ದ ಚಿನ್ನಾಭರಣ ನೀಡುವಂತೆ ಹೆದರಿಸಿದ್ದಾರೆ. ಈ ವೇಳೆ ಚಿನ್ನಾಭರಣ ನೀಡದಿದ್ದಕ್ಕೆ ಗೋಡೆಗೆ ಗುಂಡು ಹಾರಿಸಿದ್ದಾರೆ.

ಪಿಸ್ತೂಲ್‌ನಿಂದ ಫೈಯರ್ ಆಗುತ್ತಿದ್ದಂತೆ ಹೆದರಿದ ಶೃತಿ ಹಾಗೂ ಚಂದ್ರಮ್ಮ ಮಕ್ಕಳನ್ನು ರೂಮಿಗೆ ಕಳಿಸಿದ್ದಾರೆ. ಬಳಿಕ ಒಂದು ಚಿನ್ನದ ತಾಳಿ, ಚಿನ್ನದ ಓಲೆ, ಎರಡು ಚಿನ್ನದ ಗುಂಡು ಹಾಗೂ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ. ಪಿಸ್ತೂಲ್ ಶಬ್ಧ ಕೇಳಿ ರವಿ ಅವರು ಓಡಿ ಬಂದ್ದಾರೆ. ಕಳ್ಳರನ್ನು ಹಿಡಿಯಲು ಮುಂದಾದ ವೇಳೆ ಮತ್ತೊಮ್ಮೆ ಗಾಳಿಯಲ್ಲಿ ಫೈಯರ್ ಮಾಡಿದ್ದಾರೆ.

ಕಳ್ಳರ ಓಡಾಟದ ದೃಶ್ಯವೆಲ್ಲ ಸಿಸಿಟಿಯಲ್ಲಿ ಸೆರೆಯಾಗಿದೆ. ಕಳ್ಳರು ಕನ್ನಡ ಭಾಷೆಯಲ್ಲೇ ಚಿನ್ನಾಭರಣ ನೀಡುವಂತೆ ಪಿಸ್ತೂಲ್‌ ತೋರಿಸಿ ಹೆದರಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸ್‌ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Crime News : ಮಧ್ಯರಾತ್ರಿ ಮನೆಗೆ ನುಗ್ಗಿ ಮಹಿಳೆಯ ಮೇಲೆ ಹಲ್ಲೆ, ಆಘಾತಕಾರಿ ವಿಡಿಯೊ ಇಲ್ಲಿದೆ

ಬೆಂಗಳೂರಿನಲ್ಲಿ ಶಾಲೆಯೊಂದಕ್ಕೆ ಬಾಂಬ್​ ಬೆದರಿಕೆ, ಆತಂಕ

ಬೆಂಗಳೂರು: ನಗರದಲ್ಲಿ ಮತ್ತೊಂದು ವಿದ್ಯಾ ಸಂಸ್ಥೆ ಮೇಲೆ ಬಾಂಬ್ ಇಟ್ಟು ಸ್ಫೋಟಿಸುವ ಬೆದರಿಕೆ (Bomb Threat) ಹಾಕಲಾಗಿದೆ. ಇಲ್ಲಿನ ಕೇಂದ್ರಿಯವಿದ್ಯಾಲಯ ಭಾರತೀಯ ವಿದ್ಯಾಸಂಸ್ಥೆಗೆ ಬಾಂಬ್ ಬೆದರಿಕೆ ಬಂದಿದೆ. ಈ ಮೇಲ್ ಮಾಡಿರುವ ದುಷ್ಕರ್ಮಿಗಳು ಸ್ಫೋಟ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

Sahukarisrinuvasarao65@gmail.com ಎಂಬ ಮೇಲ್ ಐಡಿಯಿಂದ ಬೆದರಿಕೆ ಕರೆ ಬಂದಿದೆ. ಸ್ಕೂಲ್ ಒಳಗೆ ಬಾಂಬ್ ಇಟ್ಟಿದ್ದೇವೆ. ಬೆಳಗ್ಗೆ 10:20 ಕ್ಕೆ ಸ್ಫೋಟಗೊಳ್ಳುತ್ತದೆ ಎಂದು ಮೇಲ್​ನಲ್ಲಿ ಬೆದರಿಕೆ ಹಾಕಲಾಗಿದೆ. ಪೊಲೀಸ್ ಹಾಗು ಬಾಂಬ್ ಸ್ಕ್ವಾಡ್ ನಿಂದ ಪರಿಶೀಲನೆ ಶಾಲೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಕೇಂದ್ರೀಯ ವಿದ್ಯಾಲಯ ಪ್ರಿನ್ಸಿಪಾಲ್ ಅಮೃತಬಾಲ ಅವರು ದೂರು ದಾಖಲಿಸಿದ್ದು, ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಎರಡು ತಿಂಗಳ ಹಿಂದೆ ತಲ್ಲಣ ಸೃಷ್ಟಿಸಿದ್ದ ಬೆದರಿಕೆ

2023ರ ಡಿಸೆಂಬರ್​ 1ರಂದು ಇದೇ ರೀತಿ ಬೆಂಗಳೂರಿನ ಹಲವಾರು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು. ಇದರಿಂದಾಗಿ ಶಾಲೆ ಆಡಳಿತ ಮಂಡಳಿಗಳು ಬೆಚ್ಚಿ ಬಿದ್ದಿದ್ದವು. ಬೆಂಗಳೂರಿನ (Bangalore News) 30ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್‌ ಬೆದರಿಕೆ (Bomb Threat to Schools) ಹಾಕಲಾಗಿತ್ತು. ಮಕ್ಕಳು, ಆಡಳಿತ ಮಂಡಳಿ ಮತ್ತು ಪೋಷಕರು ಆತಂಕಕ್ಕೀಡಾಗಿದ್ದರು. ಪೊಲೀಸರು ಶಾಲೆಗಳಿಗೆ ದೌಡಾಯಿಸಿದ್ದು, ಬಾಂಬ್‌ ತಪಾಸಣೆ (Bomb threat) ದಳಗಳೂ ಬಂದಿದ್ದವು. ಎಲ್ಲಾ ಶಾಲೆಗಳಿಂದ ಮಕ್ಕಳನ್ನು ಹೊರಗೆ ಕಳುಹಿಸಲಾಗಿದ್ದು, ಬಿಗಿ ಭದ್ರತಾ ವ್ಯವಸ್ಥೆ (Security to Bangalore Schools) ಮಾಡಲಾಗಿತ್ತು.

ಈ ಮೇಲ್‌ ಮೂಲಕ ಈ ಬಾಂಬ್‌ ಬೆದರಿಕೆ ಬಂದಿದೆ ಎಂದು ಹೇಳಲಾಗಿದ್ದು, ಬೆಳಗ್ಗೆ ಮೇಲ್‌ ಚೆಕ್‌ ಮಾಡುವಾಗ ಈ ವಿಷಯ ಗೊತ್ತಾಗಿದೆ. ಇದು ತಿಳಿಯುತ್ತಿದ್ದಂತೆಯೇ ಕೂಡಲೇ ಮಕ್ಕಳನ್ನು ಹೊರಗೆ ಕಳುಹಿಸಲಾಗಿತ್ತು. ಆಗಷ್ಟೇ ಒಳಗೆ ಬರುತ್ತಿದ್ದ ಮಕ್ಕಳನ್ನು ಒಳಗೆ ಬರದಂತೆ ಸೂಚಿಸಲಾಗಿತ್ತು. ಈ ವೇಳೆ ಹೆತ್ತವರು ಕೂಡಾ ಮಕ್ಕಳನ್ನು ಬಿಡಲು ಆಗಮಿಸಿದವರು ಅಲ್ಲೇ ಇದ್ದಿದ್ದರಿಂದ ಆತಂಕದ ವಾತಾವರಣ ಹೆಚ್ಚಾಯಿತು. ಕೆಲವರು ವಿಷಯ ತಿಳಿಯುತ್ತಿದ್ದಂತೆಯೇ ಓಡಿ ಬಂದಿದ್ದರು.

ಯಾವ್ಯಾವ ಶಾಲೆಗಳಿಗೆ ಬೆದರಿಕೆ?
ಬೆಂಗಳೂರಿನ ಬಸವೇಶ್ವರ ನಗರದಲ್ಲಿರುವ ನ್ಯಾಷನಲ್‌ ಅಕಾಡೆಮಿ ಸ್ಕೂಲ್, ವಿದ್ಯಾಶಿಲ್ಪ ಮತ್ತು ಆ ಪರಿಸರದ ಏಳಕ್ಕೂ ಅಧಿಕ ಶಾಲೆಗಳಿಗೆ ಬೆದರಿಕೆ ಹಾಕಲಾಗಿದೆ. ಯಲಹಂಕದಲ್ಲೂ ಒಂದು ಶಾಲೆಗೆ ಬೆದರಿಕೆ ಈ ಮೇಲ್‌ ಬಂದಿದ್ದವು. ಭಾರತಿ ನಗರ ಪೊಲೀಸ್ ಠಾಣೆಯ ಎದುರು ಇರುವ ಸೆಂಟ್ ಜಾನ್ಸ್ ಸ್ಕೂಲ್ ಗೂ ಬಾಂಬ್ ಬೆದರಿಕೆ ಹಾಕಲಾಗಿತ್ತು. ಈ ಎಲ್ಲ ಶಾಲೆಗಳಿಗೆ ಪೊಲೀಸರು ದೌಡಾಯಿಸಿದ್ದರು.

ಇದನ್ನೂ ಓದಿ : Crime News : ಮಧ್ಯರಾತ್ರಿ ಮನೆಗೆ ನುಗ್ಗಿ ಮಹಿಳೆಯ ಮೇಲೆ ಹಲ್ಲೆ, ಆಘಾತಕಾರಿ ವಿಡಿಯೊ ಇಲ್ಲಿದೆ

ಈ ನಡುವೆ, ಶಾಲೆಗಳು ತಮ್ಮ ಮಕ್ಕಳ ಹೆತ್ತವರಿಗೆ ವಾಟ್ಸ್‌ ಆಪ್‌ ಮೂಲಕ ಬಾಂಬ್‌ ಬೆದರಿಕೆಯ ಮಾಹಿತಿಯನ್ನು ನೀಡಿದ್ದು, ಮಕ್ಕಳು ಸುರಕ್ಷಿತವಾಗಿದ್ದು, ಅವರನ್ನು ಮನೆಗೆ ಕಳುಹಿಸಲಾಗುತ್ತಿದೆ ಎಂದು ಹೇಳಿದ್ದವು.

ಬೆಂಗಳೂರು ಹೊರವಲಯದ ಶಾಲೆಗಳಿಗೂ ಈಮೇಲ್‌ ಮೂಲಕ ಬೆದರಿಕೆ ಹಾಕಲಾಗಿದೆ. ಬನ್ನೇರುಘಟ್ಟ ಸಮೀಪದ ಗ್ಲೋಬಲ್ ಇಂಟರ್‌ ನ್ಯಾಷನಲ್‌ ಸ್ಕೂಲ್, ಗ್ರೀನ್ ಹುಡ್ ಹೈ ಸ್ಕೂಲ್, ಸಿಂಗೇನಾ ಅಗ್ರಹಾರ ಸಮೀಪದ ಎಬಿನೇಜರ್, ದೊಮ್ಮಸಂದ್ರ ಬಳಿಯ ಇನ್ವೆಂಚರ್ ಇಂಟರ್ನ್ಯಾಷನಲ್ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಶ್ವಾನದಳ, ಬಾಂಬ್ ಸ್ಕ್ವಾಡ್ ಸಹಿತ ದೌಡಾಯಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version