Site icon Vistara News

Snake Bite | ಆಟ ಆಡುವಾಗ ಹಾವು ಕಚ್ಚಿ ಎರಡು ವರ್ಷದ ಬಾಲಕ ಸಾವು

Snake Bite

ಹಾವೇರಿ: ಹಿರೇಕೆರೂರ ತಾಲೂಕಿನ ಹಿರೇಕೊಣ್ತಿ ಗ್ರಾಮದಲ್ಲಿ ಮಂಗಳವಾರ ಹಾವು ಕಚ್ಚಿ(Snake Bite) ಎರಡು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಹಿರೇಕೊಣ್ತಿಯ ಶ್ರೇಯಸ್ ಅಶೋಕ ಅಣ್ಣಪ್ಪನವರ (2) ಮೃತ ಬಾಲಕ. ಬಾಲಕ ಮನೆಯ ಅಂಗಳದಲ್ಲಿ ಆಟ ಆಡುವಾಗ ಹಾವು ಕಚ್ಚಿದ್ದು, ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಬಾಲಕ ಮೃತಪಟ್ಟಿದ್ದಾನೆ. ಹಂಸಭಾವಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುರುಡೇಶ್ವರದಲ್ಲಿ ಹಾವು ಕಚ್ಚಿ ಬಾಲಕನಿಗೆ ಗಾಯ
ಕಾರವಾರ: ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ನ್ಯಾಷನಲ್ ಕಾಲನಿಯ ಸರ್ಕಾರಿ ಶಾಲೆಯಲ್ಲಿ ಹಾವು ಕಚ್ಚಿ 12 ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

5ನೇ ತರಗತಿಯ ವಿದ್ಯಾರ್ಥಿ ಅಲ್ಫಾಝ್ ಸರ್ತಾಝ್ ಹಾವಿನ ಕಡಿತಕ್ಕೊಳಗಾದ ವಿದ್ಯಾರ್ಥಿ. ತರಗತಿಯಲ್ಲಿದ್ದ ವೇಳೆ ಕಿಟಕಿಯ ಹೊರಗೆ ಪೆನ್ಸಿಲ್ ಬಿದ್ದಿದ್ದು, ಅದನ್ನು ತರಲು ಹೊರಗೆ ಹೋಗುತ್ತಿದ್ದಾಗ ಹಾವು ಬಾಲಕನ ಕಾಲಿಗೆ ಕಚ್ಚಿದೆ ಎನ್ನಲಾಗಿದೆ. ಕೂಡಲೇ ವಿದ್ಯಾರ್ಥಿಯನ್ನು ಮುರ್ಡೇಶ್ವರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿಂದ ಭಟ್ಕಳ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಹಾವು ಕಚ್ಚಿದ ಬಗ್ಗೆ ಮಾಹಿತಿ ಪಡೆದ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸರ್ಕಾರಿ ಆಸ್ಪತ್ರೆಗೆ ಆಗಮಿಸಿ ವಿದ್ಯಾರ್ಥಿಯ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಇದನ್ನೂ ಓದಿ | ತುಂಗಭದ್ರಾ ನದಿಯಲ್ಲಿ ಕೊಚ್ಚಿಹೋಗಿದ್ದ ಇಬ್ಬರ ಪೈಕಿ ಒಬ್ಬ ಯುವತಿ ಮೃತದೇಹ ಪತ್ತೆ

Exit mobile version