ಹಸೆಮಣೆಯೇರಿದ ಹತ್ತೇ ಗಂಟೆಯಲ್ಲಿ ಮದುಮಗ ಹೃದಯಾಘಾತದಿಂದ ಸಾವು - Vistara News

ಪ್ರಮುಖ ಸುದ್ದಿ

ಹಸೆಮಣೆಯೇರಿದ ಹತ್ತೇ ಗಂಟೆಯಲ್ಲಿ ಮದುಮಗ ಹೃದಯಾಘಾತದಿಂದ ಸಾವು

ಹಾವೇರಿ: ಶಿಗ್ಗಾವಿ ತಾಲೂಕಿನ ಶ್ಯಾಡ೦ಬಿ ಗ್ರಾಮದಲ್ಲಿ, ಮಂಗಳವಾರ ಎರಡು ಕುಟುಂಬಸ್ಥರ ಸಮ್ಮುಖದಲ್ಲಿ ಹಸೆಮಣೆ ತುಳಿದಿದ್ದ 34 ವರ್ಷದ ಶ್ಯಾಡಂಬಿಯ ಶಿವಾನಂದ ಶೇಖಪ್ಪ ಸುಣಗಾರ ಬುಧವಾರ ಮದುವೆಯಾದ 10 ಗಂಟೆಯಲ್ಲಿ ಹೃದಯಾಘಾತದಿಂದ ಮರಣ ಹೊಂದಿದ್ದಾನೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾವೇರಿ: ಹೊಸ ಬಾಳಿನ ಹೊಸ ಕನಸುಗಳೊಂದಿಗೆ ಹಸೆ ಮಣೆ ಏರಿದ್ದ ಯುವಕನೊಬ್ಬ ಮದುವೆಯಾದ ಕೇವಲ ಹತ್ತೇ ಗಂಟೆಯಲ್ಲಿ ಮೃತಪಟ್ಟ ಘಟನೆ ಶಿಗ್ಗಾವಿ ತಾಲೂಕಿನ ಶ್ಯಾಡ೦ಬಿ ಗ್ರಾಮದಲ್ಲಿ ನಡೆದಿದೆ.

ಮಂಗಳವಾರ ಎರಡು ಕುಟುಂಬಸ್ಥರ ಸಮ್ಮುಖದಲ್ಲಿ ಹಸೆಮಣೆ ತುಳಿದಿದ್ದ 34 ವರ್ಷದ ಶ್ಯಾಡಂಬಿಯ ಶಿವಾನಂದ ಶೇಖಪ್ಪ ಸುಣಗಾರ ಮೃತಪಟ್ಟ ದುರ್ದೈವಿ.

ಶಿವಾನಂದ ಶೇಖಪ್ಪ ಸುಣಗಾರ ಅವರು ಬಿಎ, ಡಿಎಡ್ ಪದವೀಧರ. ಇವರ ವಿವಾಹ ಮತ್ತಿಘಟ್ಟದ ದಿ. ಯಲ್ಲಪ್ಪ ಬಾರಕೇರ ಅವರ ಪುತ್ರಿ ಜ್ಯೋತಿಯೊಂದಿಗೆ ಸ್ವಗೃಹದಲ್ಲಿ ನಡೆದಿತ್ತು. ಮದುಮಗನ ಮರಣದಿ೦ದ ಮದುವೆ ಮನೆಯಲ್ಲಿ ಸೂತಕದ ಛಾಯೆ ಹಬ್ಬಿದೆ.

ಇದನ್ನೂ ಓದಿರೋಹಿತ್‌ ರನ್‌ ಹೊಡೆಯುತ್ತಾರೆ: ಹುಟ್ಟುಹಬ್ಬದ ಸಂಭ್ರಮದಲ್ಲಿರುವ ʼಹಿಟ್‌ ಮ್ಯಾನ್‌ʼಮೇಲೆ ʼದಾದಾʼ ವಿಶ್ವಾಸ – 

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಪ್ರಮುಖ ಸುದ್ದಿ

Karnataka Weather : ರಾಜ್ಯಾದ್ಯಂತ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ

Karnataka Weather : ರಾಜ್ಯಾದ್ಯಂತ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಮಳೆಯಾರ್ಭಟ (Rain News) ಜೋರಾಗಿ ಇರಲಿದೆ.. ದಕ್ಷಿಣ ಒಳನಾಡಿನಲ್ಲಿ ಲಘುವಾಗಿ ಸಾಧಾರಣ ಮಳೆಯೊಂದಿಗೆ ವ್ಯಾಪಕವಾಗಿ ಚದುರಿದಂತೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಗಾಳಿ ವೇಗದೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast ) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ಮಂಡ್ಯ, ಚಾಮರಾಜನಗರ, ಮೈಸೂರು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ತಕ್ಕಮಟ್ಟಿಗೆ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುತ್ತದೆ. ಉತ್ತರ ಒಳನಾಡಿನಲ್ಲಿ ಸುತ್ತಮುತ್ತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಚದುರಿದಂತೆ ಅಲ್ಲಲ್ಲಿ ತುಂಬಾ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಅಲ್ಲಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಸುತ್ತಮುತ್ತ ಗುಡುಗು ಸಹಿತ ಲಘುವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಭವಿಷ್ಯ

Dina Bhavishya : ಆತ್ಮೀಯರೊಂದಿಗೆ ಕಾಲ ಕಳೆಯುವಿರಿ; ಉದ್ಯೋಗಿಗಳಿಗೆ ಕೆಲಸದಲ್ಲಿ ನಿರಾಳತೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷದ ದ್ವಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಸಿಂಹ ರಾಶಿಯಿಂದ ಭಾನುವಾರ ಬೆಳಗ್ಗೆ 05:41ಕ್ಕೆ ಕನ್ಯಾರಾಶಿಗೆ ಪ್ರವೇಶಿಸುತ್ತಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬದ ಸದಸ್ಯರ ಸಕಾಲಿಕ ಬೆಂಬಲ ಬಯಸಿದ ಫಲಿತಾಂಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಕೊಂಚ ಕೆಲಸದ ನಿರಾಳತೆ ಸಿಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (29-09-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ.
ತಿಥಿ: ದ್ವಾದಶಿ 16:47 ವಾರ: ಭಾನುವಾರ
ನಕ್ಷತ್ರ: ಮಘಾ 30:17 ಯೋಗ: ಸಾಧ್ಯ 24:26
ಕರಣ: ತೈತುಲ 16:47 ಅಮೃತಕಾಲ: ಮಧ್ಯರಾತ್ರಿ 03:39 ರಿಂದ 05:25
ದಿನದ ವಿಶೇಷ: ಪ್ರದೋಷ, ಮಲ್ಲೇಶ್ವರದ ಸಿದ್ದಿಪ್ರದ ಗಣಪತಿ ಮಹಾಭಿಷೇಕ, ಯತಿ ಮಹಾಲಯ

ಸೂರ್ಯೋದಯ : 06:09   ಸೂರ್ಯಾಸ್ತ : 06:11

ರಾಹುಕಾಲ: ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ:
ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬದ ಸದಸ್ಯರ ಸಕಾಲಿಕ ಬೆಂಬಲ ಬಯಸಿದ ಫಲಿತಾಂಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಕೊಂಚ ಕೆಲಸದ ನಿರಾಳತೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವರ್ತಿಸಿ, ಅಚಾತುರ್ಯದಿಂದ ಆಡಿದ ಮಾತುಗಳು ಅಪಾಯ ತರುವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ಸಿಗಲಿದೆ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಹೂಡಿಕೆ ವ್ಯವಹಾರಗಳ ಕುರಿತು ಆಲೋಚನೆ ಮಾಡುವಿರಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಅತಿಥಿಗಳ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಅತಿಯಾದ ಕೆಲಸದ ಒತ್ತಡದಿಂದ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ನಿಮ್ಮ ಕ್ರಿಯಾಶೀಲ ಕಾರ್ಯ ಯೋಜನೆ ಸಫಲತೆಯನ್ನು ತಂದು ಕೊಡಲಿದೆ. ಆಪ್ತರು ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ ಅದರ ಹೊರತಾಗಿಯೂ ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿ . ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ಬಿಡುವಿಲ್ಲದ ಕಾರ್ಯದಿಂದ ಆಯಾಸ, ಇದರಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ ಆದಷ್ಟು ವಿಶ್ರಾಂತಿ ಪಡೆಯಿರಿ.ಅನಗತ್ಯ ಖರ್ಚು ಇರಲಿದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಂತೋಷ ತುಂಬಿದ ವಾತಾವರಣ ಇರಲಿದೆ. ಮಕ್ಕಳಿಗಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಈ ದಿನ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮಲ್ಲಿರುವ ನಾಯಕತ್ವ ಗುಣವನ್ನು ಗುರುತಿಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಇಂದು ಕೈಗೊಂಡ ಧರ್ಮಾರ್ಥ ಕಾರ್ಯವು ಮಾನಸಿಕ ಶಾಂತಿ ಮತ್ತು ಆರಾಮ ತರುತ್ತದೆ. ಹಣಕಾಸು ವ್ಯವಹಾರ ಖಂಡಿತವಾಗಿಯೂ ವೃದ್ಧಿಯಾಗುತ್ತದೆ. ಆದರೆ ಅದೇ ಸಮಯದಲ್ಲಿ ಖರ್ಚು ತುಂಬಾ ಹೆಚ್ಚಾಗುತ್ತದೆ. ನಿಮ್ಮ ಬಗೆಗೆ ಕಾಳಜಿ ಮಾಡುವವರ ಬಗ್ಗೆ ಉದಾಸೀನತೆ ಬೇಡ. ದೀರ್ಘಕಾಲದ ಪ್ರಯತ್ನಕ್ಕೆ ಯಶಸ್ಸು ಕಟ್ಟಿಟ್ಟ ಬುತ್ತಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ವಿನಾಕಾರಣ ವಿಚಾರ ಮಾಡಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಗತ್ಯವಾಗಿ ಹಣವನ್ನು ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಸಲಹೆ ಹಿತಕರವೆನಿಸುವುದು. ಆತ್ಮೀಯರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

Actor Darshan : ನಟ ದರ್ಶನ್ ಬಿಡುಗಡೆಗೆ ಮುಹೂರ್ತ ಫಿಕ್ಸ್; ಜನ್ಮ ಜಾತಕದ ಪ್ರಕಾರ ಶುಭ ಸಮಯ ಶುರು

Actor Darshan : ದರ್ಶನ್ ಬಿಡುಗಡೆ ಬಗ್ಗೆ ಜ್ಯೋತಿಷ್ಯ ಹೇಳುತ್ತಿರುವಾಗಲೇ ತಾಯಿ ಮೂಕಾಂಬಿಕಾ ದೇವಿ ಬಲಗಡೆ ಹೂ ಪ್ರಸಾದ ಕೊಟ್ಟಿದೆ. ದೇವಿಯ ಹೂ ಪ್ರಸಾದದಿಂದ ದರ್ಶನ್ ಬಿಡುಗಡೆಯನ್ನು ಜ್ಯೋತಿಷಿ ಡಾ ಲಕ್ಷ್ಮೀಕಾಂತ ಆಚಾರ್ಯ ದೃಢೀಕರಿಸಿದ್ದಾರೆ.

VISTARANEWS.COM


on

By

Actor darshan
Koo

ತುಮಕೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ (Actor Darshan) ಆಶ್ವೀಜ-ಕಾರ್ತಿಕ ಮಾಸದ ಮಧ್ಯ ಭಾಗದಲ್ಲಿ ಬಿಡುಗಡೆ ಆಗುತ್ತಾರೆ ಎಂದು ಸ್ಫೋಟಕ ಭವಿಷ್ಯವನ್ನು ಜ್ಯೋತಿಷಿ ಡಾ.ಲಕ್ಷ್ಮಿಕಾಂತ ಆಚಾರ್ಯ ನುಡಿದಿದ್ದಾರೆ. 2027ಕ್ಕೆ ಶನಿ ದಶಾಬುಕ್ತಿ ಪ್ರಾರಂಭವಾಗಲಿದ್ದು, ದರ್ಶನ್ ರಾಜಕೀಯ ಜೀವನ ತುಂಬಾ ಚೆನ್ನಾಗಿರಲಿದೆ. ತುಮಕೂರು ಸನಿಹದ ಚಿನಗ ಗ್ರಾಮದಲ್ಲಿ ನೆಲೆಸಿರುವ ಶ್ರೀ ಮೂಕಾಂಬಿಕಾ ದೇವಿ ಹೂ ಪ್ರಸಾದ ಕೊಡುವ ಮೂಲಕ ದರ್ಶನ್ ಬಿಡುಗಡೆಗೆ ಮುನ್ಸೂಚನೆ ಕೊಟ್ಟಿದ್ದಾಳೆ.

Actor darshan
ದರ್ಶನ್‌ ಕುರಿತು ಜ್ಯೋತಿಷ್ಯ ಹೇಳುವಾಗಲೇ ಬಲಗಡೆಯಿಂದ ಹೂ ಪ್ರಸಾದ ಕೊಟ್ಟ ದೇವಿ

ಮೂಕಾಂಬಿಕಾ ದೇವಿ ಆರಾಧಕರು, ಜ್ಯೋತಿಷಿ ಡಾ. ಲಕ್ಷ್ಮೀಕಾಂತ ಆಚಾರ್ಯ ಅವರು ಈ ಬಗ್ಗೆ ಮಾತಾನಾಡಿದ್ದಾರೆ. ದರ್ಶನ್ ಬಿಡುಗಡೆ ಬಗ್ಗೆ ಜ್ಯೋತಿಷ್ಯ ಹೇಳುತ್ತಿರುವಾಗಲೇ ತಾಯಿ ಮೂಕಾಂಬಿಕಾ ದೇವಿ ಬಲಗಡೆ ಹೂ ಪ್ರಸಾದ ಕೊಟ್ಟಿದೆ. ದೇವಿಯ ಹೂ ಪ್ರಸಾದದಿಂದ ದರ್ಶನ್ ಬಿಡುಗಡೆ ದೃಢೀಕರಿಸಿದ್ದಾರೆ. ಕಾರ್ತಿಕ್ ಮಾಸದ ಅಂತ್ಯದೊಳಗೆ ನಟ ದರ್ಶನ್ ಬಿಡುಗಡೆ ಆಗುತ್ತಾರೆ. ದರ್ಶನ್ ಅವರ ಜನ್ಮ ಜಾತಕದ ಪ್ರಕಾರ ಶುಭ ಸಮಯ ಪ್ರಾರಂಭವಾಗಿದೆ. ದೇವಿಯ ಆಶೀರ್ವಾದ ಸಂಪೂರ್ಣ ಇದ್ದು, ಎಲ್ಲವೂ ಶುಭ ಆಗುತ್ತದೆ. ದರ್ಶನ್‌ರ ದಶಾಬುಕ್ತಿಗಳು ಅಂತ್ಯವಾಗಿ, ಶುಭ ದಶಾಬುಕ್ತಿಗಳು ಪ್ರಾರಂಭವಾಗಿವೆ. ಅಭಿಮಾನಿಗಳಿಗೆ ಯಾವುದೇ ರೀತಿಯ ಆತಂಕ ಬೇಡ. ಪೂಜೆ-ಪುನಸ್ಕಾರ ಎಲ್ಲವನ್ನೂ ನಡೆಸಿಕೊಂಡು ಬಂದಿರುವುದರಿಂದ ಆ ದೇವಿಯ ಅನುಗ್ರಹ ಇರುತ್ತದೆ. ಇದರಲ್ಲಿ ಯಾವುದೇ ರೀತಿಯ ಅನುಮಾನ ಬೇಡ ಎಂದು ಜ್ಯೋತಿಷಿ ಡಾ.ಲಕ್ಷ್ಮೀಕಾಂತ ಆಚಾರ್ಯ ತಿಳಿಸಿದ್ದಾರೆ.

Actor darshan
Actor Darshan

ಈ ದೇವಿ ಹೂ ಪ್ರಸಾದ ಕೊಟ್ಟರೆ ಇಲ್ಲಿವರೆಗೂ ಯಾವುದೂ ಕೂಡ ಸುಳ್ಳಾಗಿಲ್ಲ. ಸಾಕಷ್ಟು ರೀತಿಯಲ್ಲಿ ಒಳ್ಳೆಯದಾಗಿದೆ ಎಂದು ಭಕ್ತಾಧಿಗಳು ಹೇಳಿಕೊಂಡು ಬಂದಿದ್ದಾರೆ. ಇದಕ್ಕೆ ಸಾಕಷ್ಟು ಉದಾಹರಣೆ ಕೂಡ ಇದೆ. ನಟ ದರ್ಶನ್‌ಗೆ ಇಷ್ಟು ದಿವಸ ಜನ್ಮ‌ ಜಾತಕದಲ್ಲಿ ಗುರುದಶಾಬುಕ್ತಿ ನಡೆಯುತ್ತಿತ್ತು. 2027ಕ್ಕೆ ಶನಿ ದಶಾಬುಕ್ತಿ ಪ್ರಾರಂಭವಾಗಲಿದೆ. ದರ್ಶನ್ ರಾಜಕೀಯ ಜೀವನ ತುಂಬಾ ಚೆನ್ನಾಗಿರಲಿದೆ. 2027ರ ನಂತರ ರಾಜಕೀಯದಲ್ಲಿ ಉನ್ನತ ಸ್ಥಾನ ಪಡೆಯುತ್ತಾರೆ. ಹಾಗಾಗಿ ಇದರಲ್ಲಿ ಯಾವುದೇ ಅನುಮಾನ ಬೇಡ. 2027ರ ನಂತರ ದರ್ಶನ್ ಜೀವನ ಶೈಲಿ ಬದಲಾಗಲಿದೆ. ಈಗ 2024ರ ಅಂತ್ಯದಲ್ಲಿ ಇದ್ದೇವೆ, 2025-2026ರ ನಂತರ 2027ರಿಂದ ಒಳ್ಳೆಯ ಸಮಯ ಪ್ರಾರಂಭವಾಗುತ್ತದೆ. ಒಳ್ಳೆಯ ರೀತಿಯ ಜೀವನ ಕಲ್ಪಿಸಿಕೊಡುತ್ತಾಳೆ. ರಾಜಕೀಯ ಪ್ರವೇಶದ ಯೋಗ ಕೂಡ ದರ್ಶನ್‌ಗೆ ಇದೆ. ದಶಾಬುಕ್ತಿಗಳು ಮನುಷ್ಯನ ಜೀವನ ಶೈಲಿಯನ್ನೇ ಬದಲಾಯಿಸಿ ಬಿಡುತ್ತದೆ.

Actor darshan
Actor Darshan

ಒಳ್ಳೆಯದು ಪ್ರಾರಂಭ ಆಗಬೇಕು ಅಂದಾಗ ಕೆಟ್ಟದು ನಮ್ಮ‌ ಕಣ್ಣಿಗೆ ಯಾವುದು ಕಾಣಿಸಲ್ಲ. ದೇವಿಯು ಆಶೀರ್ವಾದ ಮಾಡಿರುವುದರಿಂದ ಅವರ ಜೀವನ ಸುಗಮವಾಗಿ ನಡೆಯುತ್ತದೆ. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಚಂಡಿಕಾ ಯಾಗ ಮಾಡಿಸಿದ್ದರು. ಆದಾದ ನಂತರ ಕುಮಾರಸ್ವಾಮಿ ಮುಖ್ಯಮಂತ್ರಿ ಆದರು. ಕ್ಷೇತ್ರಕ್ಕೆ ಸಿರಾದ ದಿವಂಗತ ಸತ್ಯನಾರಾಯಣ್, ವಾಸು, ಬೆಮೆಲ್ ಕಾಂತರಾಜು, ಗೌರಿಶಂಕರ್, ಸುರೇಶ್‌ಗೌಡ ಹಾಗೂ ಪರಮೇಶ್ವರ, ಮುದ್ದಹನುಮೇಗೌಡ ಸಾಕಷ್ಟು ರೀತಿಯ ರಾಜಕೀಯ ವ್ಯಕ್ತಿಗಳು ದೇವಿಯ ಆಶೀರ್ವಾದ ಪಡೆದಿದ್ದಾರೆ. ಎಲ್ಲರಿಗೂ ಒಳ್ಳೆಯದಾಗಿರುವ ನಿದರ್ಶನಗಳಿವೆ ಎಂದು ತುಮಕೂರಿನಲ್ಲಿ ಜ್ಯೋತಿಷಿ ಡಾ. ಲಕ್ಷ್ಮೀಕಾಂತ ಆಚಾರ್ಯ ತಿಳಿಸಿದ್ದಾರೆ.

Actor Darshan
Actor Darshan

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿಕ್ಕೋಡಿ

Physical Abuse: ಬಾಲಕಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಅತ್ಯಾಚಾರವೆಸಗಿ ಕೊಂದಿದ್ದ ನೀಚನಿಗೆ ಗಲ್ಲುಶಿಕ್ಷೆ ವಿಧಿಸಿದ ಕೋರ್ಟ್‌

Physical Abuse: ಬಾಲಕಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಅತ್ಯಾಚಾರವೆಸಗಿ ಕೊಂದಿದ್ದ ನೀಚನಿಗೆ ಕೋರ್ಟ್‌ ಗಲ್ಲುಶಿಕ್ಷೆ ಹಾಗೂ ದಂಡವನ್ನು ವಿಧಿಸಿದೆ.

VISTARANEWS.COM


on

By

ಸಾಂದರ್ಭಿಕ ಚಿತ್ರ
Koo

ಚಿಕ್ಕೋಡಿ: ಬಾಲಕಿಯ ಮೇಲೆ ಎರಗಿ ತನ್ನ ಕಾಮದಾಸೆಯನ್ನು (Physical Abuse) ತೀರಿಸಿಕೊಂಡು ಕೊಂದು (murder case) ಹಾಕಿದ್ದ ಕಾಮುಕನಿಗೆ ಗಲ್ಲುಶಿಕ್ಷೆ ಪ್ರಕಟವಾಗಿದೆ. ಬೆಳಗಾವಿಯ ಪೋಕ್ಸೊ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಆದೇಶ ಹೊರಡಿಸಿದೆ. ಆರೋಪಿ ಉದ್ದಪ್ಪ ರಾಮಪ್ಪ ಗಾಣಿಗೇರ(32) ಎಂಬಾತನಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

2017ರಲ್ಲಿ ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಅಪ್ರಾಪ್ತೆ ಮೇಲೆ ತನ್ನ‌ ಕಾಮದ ಕಣ್ಣಿಟ್ಟಿದ್ದ ಕಾಮುಕ ಉದ್ದಪ್ಪ ರಾಮಪ್ಪ , ಯಾರು ಇಲ್ಲದೆ ಇರುವಾಗ ಬಾಲಕಿಗೆ ಚಾಕೋಲೇಟ್ ಆಸೆ ತೋರಿಸಿದ್ದ. ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಚಾಕೋಲೇಟ್‌ ಕೊಡಿಸಿ ಪುಸಲಾಯಿಸಿದ್ದ ಕೀಚಕ ಬಳಿಕ ಕಬ್ಬಿನ ಗದ್ದೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದ. ತನ್ನ ಕೃತ್ಯ ಎಲ್ಲಿ ಹೊರಬರುತ್ತೋ ಎಂದು ನಂತರ ಮಗುವಿನ ಕಣ್ಣು, ಮೂಗಿಗೆ ಮಣ್ಣು ಹಾಕಿ ಕೊಲೆ ಮಾಡಿದ್ದ.

Physical Abuse
Physical Abuse

ಪ್ರಕರಣದ ಕೂಲಂಕುಷ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಅಪರಾಧಿಗೆ ಗಲ್ಲು ಶಿಕ್ಷೆ ಮತ್ತು 45 ಸಾವಿರ ದಂಡ ವಿಧಿಸಿ ಆದೇಶಿಸಿದೆ. ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಬಾಲಕಿ ಪೋಷಕರಿಗೆ 3 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಹಾರೂಗೇರಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಇದಾಗಿದೆ.

ರಾಯಚೂರಿನಲ್ಲಿ ಮನೆ ಮಾಲೀಕಿಯನ್ನು ಕೊಂದ ಬಾಡಿಗೆದಾರ

ರಾಯಚೂರಿನಲ್ಲಿ ಬಾಡಿಗೆದಾರನಿಂದ ಮಹಿಳೆಯೊಬ್ಬರ ಕೊಲೆ ಆಗಿದೆ. ರಾಯಚೂರು ನಗರದ ಉದಯ್ ನಗರದಲ್ಲಿ ಘಟನೆ ನಡೆದಿದೆ. ಶೋಭಾ ಪಾಟೀಲ್(60) ಕೊಲೆಯಾದವರು. ಇದೇ ಸೆಪ್ಟೆಂಬರ್25 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೊಲೆ ಮಾಡಿ ಸ್ವ ಗ್ರಾಮದಲ್ಲಿ ಆರೋಪಿ ತಲೆಮರೆಸಿಕೊಂಡಿದ್ದ. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಆರೋಪಿ ಶಿವು ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ವೃದ್ಧೆ ಶೋಭಾ ಮನೆಯಲ್ಲಿ ಶಿವು ಬಾಡಿಗೆಗೆ ಇದ್ದ. ಬೆಂಗಳೂರಿನಲ್ಲಿ ಮಕ್ಕಳ ಜತೆ ಇದ್ದ ಶೋಭಾ ಇತ್ತೀಚೆಗೆ ರಾಯಚೂರಿಗೆ ಬಂದಿದ್ದರು. ಮನೆ‌ ಖಾಲಿ ಮಾಡುವಂತೆ ಆರೋಪಿ ಶಿವುಗೆ ತಿಳಿಸಿದ್ದರು. ಘಟನಾ ದಿನ ಶೋಭಾರ ಮನೆಗೆ ಬಂದಿದ್ದ. ಮಲಗಿದ್ದ ವೃದ್ಧೆಯನ್ನು ಉಸಿರುಗಟ್ಟಿಸಿ ಕೊಂದು, ಚಿನ್ನಾಭರಣ, ಫೋನ್ ಕದ್ದೊಯ್ದಿದ್ದ. ಬಳಿಕ ತಾನೇನು ಮಾಡಿಲ್ಲ ಎಂಬಂತೆ ಮೃತ ಮಹಿಳೆ ಕುಟುಂಬಸ್ಥರ ಜತೆಗೆ ಓಡಾಡಿಕೊಂಡಿದ್ದ. ಶೋಭಾ ಅಂತ್ಯಕ್ರಿಯೆ ಬಳಿಕ ಆಕೆ ಚಿನ್ನಾಭರಣ ಕಾಣದೇ ಇದ್ದಾಗ ಪೊಲೀಸರಿಗೆ ದೂರು ನೀಡಿದ್ದರು. ಸಿಸಿಟಿವಿ ಒಂದರಲ್ಲಿ ಆತ ಓಡಾಡಿದ್ದ ದೃಶ್ಯ ಸೆರೆ ಆಗಿತ್ತು. ಅದರ ಆಧಾರದಲ್ಲಿ ಆರೋಪಿ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿದೆ. ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
karnataka weather Forecast
ಪ್ರಮುಖ ಸುದ್ದಿ2 ನಿಮಿಷಗಳು ago

Karnataka Weather : ರಾಜ್ಯಾದ್ಯಂತ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ

Dina Bhavishya
ಭವಿಷ್ಯ17 ನಿಮಿಷಗಳು ago

Dina Bhavishya : ಆತ್ಮೀಯರೊಂದಿಗೆ ಕಾಲ ಕಳೆಯುವಿರಿ; ಉದ್ಯೋಗಿಗಳಿಗೆ ಕೆಲಸದಲ್ಲಿ ನಿರಾಳತೆ

Actor darshan
ಪ್ರಮುಖ ಸುದ್ದಿ11 ಗಂಟೆಗಳು ago

Actor Darshan : ನಟ ದರ್ಶನ್ ಬಿಡುಗಡೆಗೆ ಮುಹೂರ್ತ ಫಿಕ್ಸ್; ಜನ್ಮ ಜಾತಕದ ಪ್ರಕಾರ ಶುಭ ಸಮಯ ಶುರು

KEA UGCET 2024
ಬೆಂಗಳೂರು12 ಗಂಟೆಗಳು ago

UGCET 2024 : ದ್ವಿತೀಯ ಪಿಯುಸಿ 3ನೇ ಪರೀಕ್ಷೆಯಲ್ಲಿ ಅರ್ಹರಾದವರಿಗೆ ಆಪ್ಷನ್‌ ದಾಖಲಿಸಲು ಲಿಂಕ್‌ ಓಪನ್‌

ಚಿಕ್ಕೋಡಿ12 ಗಂಟೆಗಳು ago

Physical Abuse: ಬಾಲಕಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಅತ್ಯಾಚಾರವೆಸಗಿ ಕೊಂದಿದ್ದ ನೀಚನಿಗೆ ಗಲ್ಲುಶಿಕ್ಷೆ ವಿಧಿಸಿದ ಕೋರ್ಟ್‌

BBMP plans to make arrangements for food in areas where stray dogs do not get food
ಬೆಂಗಳೂರು13 ಗಂಟೆಗಳು ago

Street Dogs : ಬೀದಿನಾಯಿಗಳ ಹಸಿವು ನೀಗಿಸಲು ಮುಂದಾದ ಬಿಬಿಎಂಪಿ; ಸಾರ್ವಜನಿಕರು ಕೈ ಜೋಡಿಸುವಂತೆ ಮನವಿ

Cm Siddaramaiah
ಬೆಂಗಳೂರು13 ಗಂಟೆಗಳು ago

CM Siddaramaiah : ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ದ್ವಿಸದಸ್ಯ ಪೀಠಕ್ಕೆ ಅಪೀಲು ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ತೀರ್ಮಾನ

Mahalaya Amavasya on Gandhi Jayanti Poultry Association demands withdrawal of ban on sale of meat
ಬೆಂಗಳೂರು14 ಗಂಟೆಗಳು ago

Mahalaya Amavasya 2024: ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ; ಮಾಂಸ ಮಾರಾಟ ನಿಷೇಧ ಹಿಂಪಡೆಯುವಂತೆ ಒತ್ತಾಯ

Road Accident
ಬೆಂಗಳೂರು15 ಗಂಟೆಗಳು ago

Road Accident : ಆಟೋಗೆ ಲೋಡ್‌ ತುಂಬಿದ್ದ ಲಾರಿ ಡಿಕ್ಕಿ; ಚಾಲಕನ ನಿದ್ರೆ ಮಂಪರಿಗೆ ಜೀವ ಬಿಟ್ಟಳು ಯುವತಿ

Techie robbery plans to delete her photo video from lovers mobile phone
ಬೆಂಗಳೂರು16 ಗಂಟೆಗಳು ago

Robbery case : ಲವ್ವರ್ ಮೊಬೈಲ್‌ನಲ್ಲಿದ್ದ ತನ್ನ ಫೋಟೊ, ವಿಡಿಯೊ ಡಿಲೀಟ್‌ ಮಾಡಿಸಲು ಟೆಕ್ಕಿಯ ಖರ್ತನಾಕ್‌ ರಾಬರಿ ಪ್ಲ್ಯಾನ್‌

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌