CM Siddaramaiah : ಎಲ್ಲರಲ್ಲೂ ಕೊಳ್ಳುವ ಶಕ್ತಿ ತುಂಬುವುದೇ ಧ್ಯೇಯ; ಗ್ಯಾರಂಟಿ ಸಮರ್ಥಿಸಿದ ಸಿಎಂ - Vistara News

ಕರ್ನಾಟಕ

CM Siddaramaiah : ಎಲ್ಲರಲ್ಲೂ ಕೊಳ್ಳುವ ಶಕ್ತಿ ತುಂಬುವುದೇ ಧ್ಯೇಯ; ಗ್ಯಾರಂಟಿ ಸಮರ್ಥಿಸಿದ ಸಿಎಂ

CM Siddaramaiah : ಎಲ್ಲರಿಗೂ ಕೊಳ್ಳುವ ಶಕ್ತಿಯನ್ನು ತುಂಬುವುದೇ ಸರ್ಕಾರದ ಉದ್ದೇಶ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳನ್ನುಸಮರ್ಥಿಸಿಕೊಂಡಿದ್ದಾರೆ.

VISTARANEWS.COM


on

CM Siddaramaiah Siddarameshwara Jayanti
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕ ಬಾಸೂರು (ಹಾವೇರಿ) : ಸಾರ್ವತ್ರಿಕ ಮೂಲ ಆದಾಯದ ತತ್ವದ ಆಧಾರದ ಮೇಲೆ ಎಲ್ಲರಿಗೂ ಕೊಳ್ಳುವ ಶಕ್ತಿ ಬರಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಅವರು ಸೋಮವಾರ ಶ್ರೀ ನೊಳಂಬ ಲಿಂಗಾಯತ ಸಂಘ (Nolamba Lingayatha Sangha) ಬೆಂಗಳೂರು ವತಿಯಿಂದ ಆಯೋಜಿಸಿದ್ದ ಶ್ರೀ ಗುರು ಶಿವಯೋಗಿ ಸಿದ್ದರಾಮೇಶ್ವರರ (Shivayogi Siddarameshwara Jayanti) 851 ನೇ ಜಯಂತಿ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಸರ್ಕಾರ ಎಲ್ಲಾ ಸಮಾಜದಲ್ಲಿನ ಬಡವರನ್ನು ಮುಖ್ಯ ವಾಹಿನಿಗೆ ತಂದು, ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಬೇಕು ಎಂದು ಪ್ರಯತ್ನ ಮಾಡುತ್ತಿದೆ. ಅನುಭವ ಮಂಟಪದಲ್ಲಿ ಸಮಸಮಾಜ ನಿರ್ಮಾಣ ಮಾಡುವ ಬಗ್ಗೆ ಚರ್ಚೆಗಳಾಗುತ್ತಿತ್ತು. ಅಂಥ ಸಮಾಜವನ್ನು ಬಸವಾದಿ ಶರಣರು, ಸಿದ್ದರಾಮೇಶ್ವರರು ಬಯಸಿದ್ದರು ಎಂದರು.

ಬದುಕಿನ ಸಾರ್ಥಕತೆಯ ಬಗ್ಗೆ ಆತ್ಮಾವಲೋಕನ ಅಗತ್ಯ

ಶಿವಯೋಗಿ ಸಿದ್ದರಾಮೇಶ್ವರರು ಬಸವಣ್ಣನವರ ಸಮಕಾಲೀನರು. ವಚನ ಸಾಹಿತ್ಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 12 ನೇ ಶತಮಾನದಲ್ಲಿ ಶರಣರು ವಚನಗಳನ್ನು ರಚಿಸಿ ಜೀವನದ ಮೌಲ್ಯಗಳನ್ನು ತಿಳಿಸುವ ಪ್ರಯತ್ನ ಮಾಡಿದ್ದಾರೆ. ಜೀವನ ಮೌಲ್ಯಗಳನ್ನು ಮಾವು ಅರಿಯಬೇಕು. ಹುಟ್ಟು ಆಕಸ್ಮಿಕ, ಸಾವು ಖಚಿತವಾದರೂ ಹುಟ್ಟು ಸಾವುಗಳ ಮಧ್ಯೆ ನಮ್ಮ ಬದುಕನ್ನು ಸಾರ್ಥಕ ಮಾಡಿಕೊಳ್ಳಬೇಕು. ನಮ್ಮ ಬದುಕಿನ ಅವಧಿಯಲ್ಲಿ ನಮ್ಮ ಬದುಕನ್ನು ನಾವು ಸಾರ್ಥಕಗೊಳಿಸಿಕೊಂಡಿದ್ದೇವೆಯೇ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು. ಬಸವಾದಿ ಶರಣರು ಮನುಷ್ಯರಾಗಿ ಬದುಕಬೇಕೆಂದು ಹೇಳಿದ್ದಾರೆ. ಜೀವನದ ಸಾರವನ್ನು ಜನರ ಮುಂದಿಡುವ ಪ್ರಯತ್ನ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

CM Siddaramaiah Siddarameshwara Jayanti
ಸಿದ್ದರಾಮೇಶ್ವರ ಜಯಂತಿ ಉತ್ಸವದ ವೇಳೆ ಸನ್ಮಾನ

ವಿಶ್ವ ಸಾಹಿತ್ಯಕ್ಕೂ ದೊಡ್ಡ ಕೊಡುಗೆ ನೀಡಿದ ವಚನ ಸಾಹಿತ್ಯ

ವಚನ ಸಾಹಿತ್ಯ ಕನ್ನಡ ಸಾಹಿತ್ಯದಲ್ಲಿ ಮಾತ್ರವಲ್ಲದೆ ವಿಶ್ವ ಸಾಹಿತ್ಯಕ್ಕೂ ದೊಡ್ಡ ಕೊಡುಗೆ ನೀಡಿದೆ. ಧರ್ಮಾಚರಣೆ, ಆಧ್ಯಾತ್ಮ ಜನರ ಭಾಷೆಯಲ್ಲಿ ಲಭ್ಯವಿರಲಿಲ್ಲ. ಸಾಮಾನ್ಯ ಜನರಿಗೆ ಓದು ಅರ್ಥ ಮಾಡಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಜನರ ಭಾಷೆಯಲ್ಲಿ ಇದನ್ನು ತಿಳಿಸಿದ್ದು ಬಸವಣ್ಣ ಎಂದರು.

ಶರಣ ಸಾಹಿತ್ಯದಲ್ಲಿ ಬಸವಣ್ಣ, ಚೆನ್ನಬಸವಣ್ಣ, ಅಕ್ಕಮಹಾದೇವಿ ಅಲ್ಲಮಪ್ರಭು, ಸಿದ್ದರಾಮೇಶ್ವರರು ಪ್ರಮುಖರು. ಬಸವಾದಿ ಶರಣರು ಮುಖ್ಯವಾಗಿ ನೀಡಿದ ಮೌಲ್ಯ ಕಾಯಕ ಮತ್ತು ದಾಸೋಹ. ಸತ್ಯವೇ ಸ್ವರ್ಗ, ಮಿತ್ಯವೆ ನರಕ ಎಂದ ಶರಣರು, ಮೌಢ್ಯಗಳನ್ನು ತಿರಸ್ಕರಿಸಿದ್ದರು. ಬಸವಾದಿ ಶರಣರು ವೈಚಾರಿಕ, ವೈಜ್ಞಾನಿಕ ವಿಚಾರಗಳನ್ನು ಜನರ ಮುಂದಿಟ್ಟಿದ್ದಾರೆ. ಕಂದಾಚಾರ, ಮೂಢನಂಬಿಕೆ, ಮೌಢ್ಯಗಳನ್ನು ತಿರಸ್ಕಾರ ಮಾಡಿದ್ದಾರೆ ಎಂದರು.

ಸಿದ್ದರಾಮೇಶ್ವರರ ಬೋಧನೆಯನ್ನು ಅಳವಡಿಸಿಕೊಳ್ಳುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ. ಮನುಷ್ಯರು ಚಾತುರ್ವರ್ಣ ವ್ಯವಸ್ಥೆಯನ್ನು ತಮ್ಮ ಸ್ವಾರ್ಥಕ್ಕಾಗಿ ಮಾಡಿಕೊಂಡಿದ್ದಾರೆ. ಯಾವ ದೇವಸ್ಥಾನದೊಳಗೆ ಪ್ರವೇಶವಿಲ್ಲವೋ ಆ ದೇವಸ್ಥಾನದೊಳಗೆ ಪ್ರವೇಶಿಸಬೇಡಿ, ನೀವೇ ದೇಗುಲ ನಿರ್ಮಿಸಿ ಪೂಜಿಸಿ ಎಂದು ನಾರಾಯಣ ಗುರುಗಳು ಕರೆ ನೀಡಿದ್ದರು. ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ಮನುಷ್ಯರಾಗಿರಬೇಕು ಎಂದು ಹೇಳಿದರೆ ಕೆಲವರಿಗೆ ಕೋಪ ಬರುತ್ತದೆ ಎಂದರು ಸಿದ್ದರಾಮಯ್ಯ.

ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಹಾಸನದಲ್ಲಿ ಸುಮಾರು 40,000 ಶಾಖೆಗಳಿದ್ದು, ಅನುದಾನ ಕೋರಿರುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.

CM Siddaramaiah Siddarameshwara Jayanti2

ಎರಡು ದಿನಗಳ ಕಾಲ ನಡೆದ ಸಿದ್ದರಾಮೇಶ್ವರ ಜಯಂತಿ ಉತ್ಸವ

ಶರಣ ಚಳವಳಿಯ (Sharana Movement) ಕಾಯಕ ಪ್ರತಿನಿಧಿ ಎಂದೇ ಹೆಸರಾದ ಶ್ರೀ ಗುರು ಶಿವಯೋಗಿ ಸಿದ್ದರಾಮೇಶ್ವರರ (Shivayogi Siddarameshwara) 851ನೇ ಜಯಂತಿ ಮಹೋತ್ಸವವನ್ನು ಜನವರಿ 14 ಮತ್ತು 15ರಂದು ಎರಡು ದಿನಗಳ ಕಾಲ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಚಿಕ್ಕಬಾಸೂರಿನಲ್ಲಿ ಆಚರಿಸಲಾಯಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (BS Yediyurappa) ಅವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರೆ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaih) ಅವರು ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದರು.

ಇದನ್ನೂ ಓದಿ : ಶಿವಯೋಗಿ ಸಿದ್ದರಾಮೇಶ್ವರ ಜಯಂತಿ : ಹಾವೇರಿಯಲ್ಲಿ 2 ದಿನದ ಸಂಭ್ರಮಕ್ಕೆ ಚಾಲನೆ; ನಾಳೆ ಸಿಎಂ ಭಾಗಿ

ಜನವರಿ 14ರಂದು ಬೆಳಗ್ಗೆ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದ್ದು, ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೊಳಂಬ ಶ್ರೀ ಪ್ರಶಸ್ತಿ ಪ್ರದಾನ ಮಾಡಿದರು.

ಮಧ್ಯಾಹ್ನ 3ಕ್ಕೆ ಶರಣ ಸಾಹಿತ್ಯ ಗೋಷ್ಠಿಯನ್ನು ಶಾಸಕ ಶಾಮನೂರು ಶಿವಶಂಕರಪ್ಪ ಉದ್ಘಾಟಿಸಿದ್ದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬಿಟ್ಟು ಬಂದಳ್ಳಿಯ ಕಥೆಗಳು’ ಗ್ರಂಥ ಬಿಡುಗಡೆ, ಚಿತ್ರನಟ ಡಾಲಿ ಧನಂಜಯ ಕ್ಯಾಲೆಂಡರ್‌ ಬಿಡುಗಡೆಗೊಳಿಸಿದರು. ಜ.15ರಂದು ಮಹಿಳಾ ಗೋಷ್ಠಿ ಕೃಷಿ ಗೋಷ್ಠಿ ನಡೆಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Milk Price: ನಂದಿನಿ ಹಾಲು ದರ ಏರಿಕೆ ಶಾಕ್‌; ಅರ್ಧ ಲೀಟರ್‌ಗೂ ₹2, ಒಂದು ಲೀಟರ್‌ಗೂ ₹2 ಬೆಲೆ ಏರಿಕೆ!

Milk Price hike: ಇಷ್ಟು ದಿನ 1000 ml ಹಾಲು 42 ರೂ.ಗೆ ಮಾರಾಟವಾಗುತ್ತಿತ್ತು. ಆದರೆ ನಾಳೆಯಿಂದ 50 ml ಹಾಲನ್ನು ಹೆಚ್ಚುವರಿಯಾಗಿ ಸೇರಿಸಿ, ಅದರ ದರ 2 ರೂ.ಗಳನ್ನು ಸೇರಿಸಿ ನಾಳೆಯಿಂದ ಮಾರಾಟ ಮಾಡಲಾಗುತ್ತದೆ. ಒಟ್ಟು 1050 ml ಹಾಲಿನ ದರ 44 ರೂ. ಆಗುತ್ತಿದೆ ಎಂದು KMF ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದಾರೆ.

VISTARANEWS.COM


on

milk price hike
Koo

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟದ (KMF) ನಂದಿನಿ ಹಾಲಿನ (Nandini milk) ದರಗಳನ್ನು (milk price hike) ಏರಿಸಲಾಗಿದೆ. ಲೀಟರ್‌ಗೆ 2 ರೂ. ಏರಿಕೆ ಮಾಡಲಾಗಿದ್ದು, ಒಂದು ಲೀಟರ್‌ ಹಾಲಿನ ದರ ನಾಳೆಯಿಂದ 44 ರೂ. ಆಗುತ್ತಿದೆ. ಈ ಮೂಲಕ ತೈಲ ಬೆಲೆ ಏರಿಕೆ (petrol price hike) ಬೆನ್ನಲ್ಲೇ ಜನ ಸಾಮಾನ್ಯರಿಗೆ ಮತ್ತೊಂದು ಶಾಕ್ ನೀಡಿದೆ ರಾಜ್ಯ ಸರಕಾರ.

ಇಷ್ಟು ದಿನ 1000 ml ಹಾಲು 42 ರೂ.ಗೆ ಮಾರಾಟವಾಗುತ್ತಿತ್ತು. ಆದರೆ ನಾಳೆಯಿಂದ 50 ml ಹಾಲನ್ನು ಹೆಚ್ಚುವರಿಯಾಗಿ ಸೇರಿಸಿ, ಅದರ ದರ 2 ರೂ.ಗಳನ್ನು ಸೇರಿಸಿ ನಾಳೆಯಿಂದ ಮಾರಾಟ ಮಾಡಲಾಗುತ್ತದೆ. ಒಟ್ಟು 1050 ml ಹಾಲಿನ ದರ 44 ರೂ. ಆಗುತ್ತಿದೆ ಎಂದು KMF ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದಾರೆ.

ಆದರೆ ಅರ್ಧ ಲೀಟರ್ ಪ್ಯಾಕೇಟ್ ಹಾಲಿಗೂ 2 ರೂಪಾಯಿ ಏರಿಕೆ ಮಾಡಲಾಗುತ್ತಿದೆ. ಯಾಕೆಂದರೆ ಅರ್ಧ ಲೀಟರ್‌ ಹಾಲಿನ ಪ್ಯಾಕೆಟ್‌ಗೂ 50 ml ಹಾಲನ್ನು ಹೆಚ್ಚುವರಿಯಾಗಿ ಸೇರಿಸಲಾಗುತ್ತಿದೆ. ಪ್ರತಿಯೊಂದು ಪ್ಯಾಕೆಟ್‌ಗೂ 50 ML ಹಾಲು ಹೆಚ್ಚುವರಿಯಾಗಿ ಸೇರಿಸುವುದರಿಂದ 2 ರೂಪಾಯಿ ಏರಿಕೆ ಮಾಡಲಾಗುತ್ತಿದೆ. ಈ ಲೆಕ್ಕಾಚಾರದಲ್ಲಿ ಅರ್ಧ ಲೀಟರ್‌ ಹಾಲಿನ ಎರಡು ಪ್ಯಾಕೆಟ್‌ಗಳನ್ನು ತೆಗೆದುಕೊಳ್ಳುವುದಕ್ಕಿಂತಲೂ, ಒಂದು ಲೀಟರ್‌ ಹಾಲಿನ ಪ್ಯಾಕೆಟ್‌ ತೆಗೆದುಕೊಳ್ಳುವುದು ಅಗ್ಗವಾಗಲಿದೆ.

“ಕೆಎಂಎಫ್‌ ಇಡೀ ರಾಷ್ಟ್ರದಲ್ಲಿ ಅತಿ ದೊಡ್ಡ ಎರಡನೇ ದೊಡ್ಡ ಹಾಲಿನ ಮಂಡಲಿ. 98 ಲಕ್ಷದ 17 ಸಾವಿರ ಲೀಟರ್ ಹಾಲು ನಮ್ಮಲ್ಲಿ ಶೇಖರಣೆ ಆಗುತ್ತಿದೆ. ಒಂದು ಕೋಟಿ ಲೀಟರ್ ಹಾಲಿನ ಶೇಖರಣೆ ಮಾಡಲು ಸಿದ್ಧರಾಗಿದ್ದೇವೆ. 27 ಲಕ್ಷ ಹಾಲು ಉತ್ಪಾದಕ ರೈತರಿಂದ ನಮಗಿದು ಸಾಧ್ಯವಾಗಿದೆ. 30 ಲಕ್ಷ ಲೀಟರ್ ಹಾಲು, ಹಾಲಿನ ಪೌಡರ್‌ಗೆ ಮೀಸಲಾಗಿದೆ” ಎಂದು ಭೀಮಾ ನಾಯ್ಕ್‌ ಮಾಹಿತಿ ನೀಡಿದ್ದಾರೆ.

ಹೊಸ ದರಗಳು ಹೀಗಿವೆ:

  • ನೀಲಿ ಪ್ಯಾಕೆಟ್ ಹಾಲು 42 ರಿಂದ 44 ರೂ
  • ನೀಲಿ ಪ್ಯಾಕೆಟ್ (ಟೋನ್ಡ್ ಹಾಲು) 43 ರಿಂದ 45ರೂ
  • ಆರೆಂಜ್ ಪ್ಯಾಕೆಟ್ ಹಾಲು 46ರಿಂದ 48 ರೂ
  • ಆರೆಂಜ್ ಸ್ಪೆಷಲ್ ಹಾಲು 48 ರಿಂದ 50 ರೂ
  • ಶುಭಂ ಹಾಲು 48ರಿಂದ 50 ರೂ
  • ಸಮೃದ್ದಿ ಹಾಲು 51ರಿಂದ 53ರೂ
  • ಶುಭಂ (ಟೋನ್ಡ್ ಹಾಲು) 49ರಿಂದ 51ರೂ
  • ಸಂತೃಪ್ತಿ ಹಾಲು 55 ರಿಂದ 57 ರೂ
  • ಶುಭಂ ಗೋಲ್ಡ್ ಹಾಲು 49ರಿಂದ 51ರೂ
  • ಶುಭಂ ಡಬಲ್ ಟೋನ್ಡ್ ಹಾಲು 41 ರಿಂದ 43 ರೂ ಗೆ ಏರಿಕೆ

ಇದನ್ನೂ ಓದಿ: Milk Products: ಹಾಲು, ಹಾಲಿನ ಉತ್ಪನ್ನ ಸೇವಿಸಿದರೆ ಲಾಭವೋ ನಷ್ಟವೋ?

Continue Reading

ಪ್ರಮುಖ ಸುದ್ದಿ

CM Siddaramaiah: ಡಿಸಿಎಂ ವಿಚಾರದಲ್ಲಿ ಮತ್ತೆ ಒಡೆದುಹೋದ ಕಾಂಗ್ರೆಸ್‌; ಸಿದ್ದು- ಡಿಕೆಶಿ ಬಣದ ನಡುವೆ ಡಿಶುಂ ಡಿಶುಂ

CM Siddaramaiah: ಸಿಎಂ ಸಿದ್ದರಾಮಯ್ಯ ಬಣದಿಂದ ಸಮುದಾಯಕ್ಕೊಂದು ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಕೆ.ಎನ್ ರಾಜಣ್ಣ, ತಿಮ್ಮಾಪುರ್, ಜಮೀರ್ ಅಹಮದ್ ಖಾನ್ ಅವರಿಂದ ಡಿಸಿಎಂ ಹುದ್ದೆ ಜಪ ಮುಂದುವರಿದಿದೆ.

VISTARANEWS.COM


on

cm siddaramaiah DK Shivakumar power fight
Koo

ಬೆಂಗಳೂರು: ಲೋಕಸಭೆ ಚುನಾವಣೆಯ (Lok Sabha Election 2024) ಸಂದರ್ಭದಲ್ಲಿ ಮೈತ್ರಿ ಪಕ್ಷಗಳನ್ನು ಎದುರಿಸಲು ತಾತ್ಕಾಲಿಕವಾಗಿ ಒಂದಾಗಿದ್ದ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ಬಣ ಮತ್ತೆ ಎರಡಾಗಿ ಹೋಗಿದ್ದು, ಡಿಸಿಎಂ (DCM) ನೇಮಕಾತಿ ವಿಚಾರದಲ್ಲಿ ಗುದ್ದಾಡತೊಡಗಿವೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಡಿಸಿಎಂ ಹುದ್ದೆ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ ಇದೀಗ ಬಣ ಪಾಲಿಟಿಕ್ಸ್ ರಂಗೇರಿದೆ. ಇನ್ನಷ್ಟು ಡಿಸಿಎಂ ಹುದ್ದೆ ಸೃಷ್ಟಿ ಆಗಬೇಕು ಅಂತ ಒಂದು ಬಣ ಪಟ್ಟು ಹಿಡಿದಿದ್ದರೆ, ಅದಕ್ಕೆ ತಡೆ ಹಾಕಲು ಮತ್ತೊಂದು ಬಣ ಬೇರೊಂದು ಪಟ್ಟು ಹಾಕುತ್ತಿದೆ.

ಸಿಎಂ ಸಿದ್ದರಾಮಯ್ಯ ಬಣದಿಂದ ಸಮುದಾಯಕ್ಕೊಂದು ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಕೆ.ಎನ್ ರಾಜಣ್ಣ, ತಿಮ್ಮಾಪುರ್, ಜಮೀರ್ ಅಹಮದ್ ಖಾನ್ ಅವರಿಂದ ಡಿಸಿಎಂ ಹುದ್ದೆ ಜಪ ಮುಂದುವರಿದಿದೆ. ಸಮುದಾಯಕ್ಕೊಂದು ಡಿಸಿಎಂ ಹುದ್ದೆ ಕೊಟ್ಟರೆ ಚುನಾವಣೆ ಸಂದರ್ಭದಲ್ಲಿ ಅನುಕೂಲ. ಅಧಿಕಾರ ಕೆಲ ಸಮುದಾಯಗಳಿಗೆ ಮಾತ್ರ ಸೀಮಿತವಾಗಬಾರದು. ದಲಿತ, ಮುಸ್ಲಿಂ, ಲಿಂಗಾಯತ ಸಮುದಾಯಗಳನ್ನು ಸೆಳೆಯಲು ಡಿಸಿಎಂ ಹುದ್ದೆ ಅನಿವಾರ್ಯ ಎಂದು ಪಟ್ಟು ಹಿಡಿದಿದ್ದಾರೆ.

ದಿನಕ್ಕೊಬ್ಬ ಸಚಿವರು ಈ ಬಗ್ಗೆ ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಈ ಮೂವರು ಸಚಿವರು ಸಹ ಸಿದ್ದರಾಮಯ್ಯ ಬಣಕ್ಕೆ ಸೇರಿದವರು. ಇದರ ಹಿಂದೆ, ಡಿಕೆಶಿ ಪ್ರಭಾವವನ್ನು ಕಡಿಮೆ ಮಾಡುವ ಚಿಂತನೆಯೂ ಇದೆ ಎನ್ನಲಾಗಿದೆ.

ಇತ್ತ ಸಿದ್ದರಾಮಯ್ಯ ಬಣದಿಂದ ಹೇಳಿಕೆ ಬಂದ ತಕ್ಷಣ ಡಿಕೆಶಿ ಬಣದಿಂದಲೂ ತಿರುಗೇಟು ಬರಲಾರಂಭಿಸಿದೆ. ಡಿಕೆ ಸುರೇಶ್ ಕೂಡಲೇ ಕೌಂಟರ್ ನೀಡಿದ್ದಾರೆ. ಮೂರಲ್ಲ ಐದಕ್ಕೂ ಹೆಚ್ಚು ಡಿಸಿಎಂ ಹುದ್ದೆ ಸೃಷ್ಟಿ ಆಗಬೇಕು ಎಂದಿದ್ದಾರೆ. ಜಮೀರ್ ಅಹಮದ್ ಖಾನ್, ರಾಜಣ್ಣ, ತಿಮ್ಮಾಪುರ, ಕೃಷ್ಣ ಬೈರೇಗೌಡ, ಚಲುವರಾಯಸ್ವಾಮಿಗೂ ಡಿಸಿಎಂ ಹುದ್ದೆ ಕೊಡಬೇಕು ಎಂದು ವ್ಯಂಗ್ಯವಾಡಿದ್ದಾರೆ.

ಅತ್ತ ಪ್ರಿಯಾಂಕ್ ಖರ್ಗೆ ಅವರಿಂದಲೂ ತಿರುಗೇಟು ಬಂದಿದೆ. ಸಚಿವರಲ್ಲದವರನ್ನೆಲ್ಲ ಡಿಸಿಎಂ ಮಾಡೋಣ, ಕೆಲಸ ಮಾಡೋದು ಬೇಡ- ಡಿಸಿಎಂ ಹುದ್ದೆ ಕೋಡೋಣ ಎಂದು ಪ್ರಿಯಾಂಕ್ ಖರ್ಗೆ ಟಾಂಗ್‌ ಕೊಟ್ಟಿದ್ದಾರೆ.

ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಹೆಚ್ಚಿನ ಡಿಸಿಎಂ ಹುದ್ದೆ ಸೃಷ್ಟಿ ವಿಚಾರ ಗೊಂದಲವೆಬ್ಬಿಸಿದೆ. ಅತ್ತ ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ ಆದ ತಕ್ಷಣ ಕಾಂಗ್ರೆಸ್‌ನಲ್ಲಿ ಬಣ ಬಡಿದಾಟ ಭುಗಿಲೆದ್ದಿದೆ. ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಮಾಡಿ ಸಮುದಾಯಗಳಿಗೆ ಮಣೆ ಹಾಕಿ ಅಂತ ಪಟ್ಟು ಹಿಡಿಯಲಾಗಿದೆ. ಪಕ್ಷದ ಪರವಾಗಿ ನಿಲ್ಲದ ಸಮುದಾಯಕ್ಕೆ ಮಣೆ ಹಾಕುವುದಕ್ಕಿಂತಲೂ, ಪಕ್ಷದ ಪರವಾಗಿ ನಿಂತ ಸಮುದಾಯಗಳಿಗೆ ಮಣೆ ಹಾಕುವಂತೆ ಒತ್ತಾಯ

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಆದರೆ ಡಿಕೆಶಿ ಅವರ ಪ್ರಭಾವವನ್ನು ಕಡಿಮೆ ಮಾಡಬಹುದು ಎನ್ನುವ ಚಿಂತನೆ ಸಿದ್ದರಾಮಯ್ಯ ಬಳಗದಲ್ಲಿದೆ. ಇತ್ತ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಮಾಡದಂತೆ ಡಿಕೆಶಿ ಬಣದಿಂದ ತಿರುಗೇಟು ನೀಡಲಾಗುತ್ತಿದೆ. ಅತ್ತ ಬಿಜೆಪಿ ಕೂಡ ಕಾಂಗ್ರೆಸ್‌ನೊಳಗಿನ ಡಿಸಿಎಂ ವಿವಾದವನ್ನು ತನ್ನ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳಲು ಮುಂದಾಗಿದ್ದು, ಈ ವಿವಾದವನ್ನು ಜೀವಂತವಾಗಿಡಲು ಶ್ರಮಿಸುತ್ತಿದೆ.

ʼಈ ಸಂಘರ್ಷ ಕೆಲವೇ ತಿಂಗಳಲ್ಲಿ ತಾರ್ಕಿಕ ಅಂತ್ಯ ತಲಪಲಿದೆʼ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. “ಡಿಸಿಎಂ ವಿಚಾರ ಇದೇ ಮೊದಲ ಬಾರಿ ಅಲ್ಲ, ಹಲವು ಬಾರಿ ಚರ್ಚೆ ಆಗಿದೆ. ಆದರೆ ಇವತ್ತು ನಡೆಯುತ್ತಿರುವ ಡಿಸಿಎಂ ಗುದ್ದಾಟ ಆಂತರಿಕ ಗುಂಪಿನದ್ದು. ಕಾಂಗ್ರೆಸ್‌ನಲ್ಲಿ ಎರಡು ಆಂತರಿಕ ಗುಂಪು ಇದೆ. ಒಂದು ಗುಂಪು ಮುಖ್ಯಮಂತ್ರಿಗಳದ್ದು, ಮತ್ತೊಂದು ಗುಂಪು ಉಪಮುಖ್ಯಮಂತ್ರಿಗಳದ್ದು. ಒಂದು ಗುಂಪು ಅಧಿಕಾರ ಉಳಿಸಿಕೊಳ್ಳಲು ಪ್ರಯತ್ನ ಮಾಡ್ತಿದೆ. ಮತ್ತೊಂದು ಗುಂಪು ಹೆಚ್ಚಿನ ಅಧಿಕಾರ ಪಡೆದುಕೊಳ್ಳಲು ಪ್ರಯತ್ನ ಮಾಡ್ತಿದೆ. ಈ ಸಂಘರ್ಷ ಕೆಲವೇ ತಿಂಗಳಲ್ಲಿ ತಾರ್ಕಿಕ ಅಂತ್ಯ ತಲಪಲಿದೆ” ಎಂದಿದ್ದಾರೆ.

ಇದನ್ನೂ ಓದಿ: DK Shivakumar: ವಿವಿಧ ಸಮಸ್ಯೆ ಹೊತ್ತು ಬಂದವರಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದ ಡಿ.ಕೆ. ಶಿವಕುಮಾರ್

Continue Reading

ಕರ್ನಾಟಕ

Udhayanidhi Stalin: ಸನಾತನ ಧರ್ಮದ ವಿರುದ್ಧ ಹೇಳಿಕೆ; ಇಂದು ಬೆಂಗಳೂರು ಕೋರ್ಟ್‌ನಲ್ಲಿ ಉದಯನಿಧಿ ಸ್ಟಾಲಿನ್‌ ವಿಚಾರಣೆ

Udhayanidhi Stalin: ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ವಿಚಾರಕ್ಕೆ ಸಂಬಂಧಿಸಿ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ (Udhayanidhi Stalin) ಇಂದು (ಜೂನ್‌ 25) ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಉದಯನಿಧಿ ಸ್ಟಾಲಿನ್ ಕಳೆದ ವರ್ಷ ನೀಡಿದ್ದ ಹೇಳಿಕೆ ಸಂಬಂಧ ಪರಮೇಶ್ ಎಂಬವರು ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

VISTARANEWS.COM


on

Udhayanidhi Stalin
Koo

ಬೆಂಗಳೂರು: ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ವಿಚಾರಕ್ಕೆ ಸಂಬಂಧಿಸಿ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ (Udhayanidhi Stalin) ಇಂದು (ಜೂನ್‌ 25) ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಉದಯನಿಧಿ ಸ್ಟಾಲಿನ್ ಕಳೆದ ವರ್ಷ ನೀಡಿದ್ದ ಹೇಳಿಕೆ ಸಂಬಂಧ ಪರಮೇಶ್ ಎಂಬವರು ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಕೋರ್ಟ್‌ ಸಮನ್ಸ್ ಜಾರಿ ಮಾಡಿತ್ತು. ಹೀಗಾಗಿ ಉದಯನಿಧಿ ಸ್ಟಾಲಿನ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಉದಯನಿಧಿ ಸ್ಟಾಲಿನ್ ಆಗಮನದ ಹಿನ್ನೆಲೆಯಲ್ಲಿ ಕೋರ್ಟ್‌ ಆವರಣದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮೂವರು ಇನ್ಸ್‌ಪೆಕ್ಟರ್‌ ಸೇರಿದಂತೆ 70ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

ಏನಿದು ವಿವಾದ?

ತಮಿಳುನಾಡಿನ ಸಿಎಂ ಎಂ.ಕೆ.‌ ಸ್ಟಾಲಿನ್ ಪುತ್ರ ಹಾಗೂ ಕ್ರೀಡಾ ಸಚಿವರಾಗಿರುವ ಉದಯನಿಧಿ ಸ್ಟಾಲಿನ್‌ 2023ರ ಸೆ. 4ರಂದು ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಪ್ರಗತಿಪರ ಲೇಖಕರು, ಕಲಾವಿದರ ಸಂಘದಿಂದ ಆಯೋಜಿಸಿದ್ದ “ಸನಾತನ ನಿರ್ಮೂಲನಾ ಸಮಾವೇಶ”ದಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್‌ ಸನಾತನ ಧರ್ಮದ ಉಲ್ಲೇಖ ಮಾಡಿದ್ದರು. “ ಸನಾತನ ಧರ್ಮ ಕೊರೊನಾ, ಡೆಂಗ್ಯೂ, ಮಲೇರಿಯಾ ಇದ್ದಂತೆ. ಇಂತಹ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಲು ನನಗೆ ಅವಕಾಶ ನೀಡಿದ್ದಕ್ಕಾಗಿ ಧನ್ಯವಾದಗಳು. ನೀವು “ಸನಾತನ ವಿರೋಧಿ ಸಮ್ಮೇಳನ” ಎಂಬುದಾಗಿ ಆಯೋಜಿಸುವ ಬದಲು “ಸನಾತನ ನಿರ್ಮೂಲನಾ ಸಮ್ಮೇಳನ” ಎಂಬುದಾಗಿ ಕಾರ್ಯಕ್ರಮ ಆಯೋಜಿಸಿದ್ದು ನನಗೆ ಇಷ್ಟವಾಯಿತು” ಎಂದು ಹೇಳಿದ್ದರು.

ಉದಯನಿಧಿ ಸ್ಟಾಲಿನ್‌ ಅವರು ಈ ಹೇಳಿಕೆ ನೀಡಿದ ಬಳಿಕ ದೇಶಾದ್ಯಂತ ಸಂಚಲನ ಮೂಡಿಸಿತ್ತು. ಪರ-ವಿರೋಧ ಚರ್ಚೆಗಳು ಆರಂಭವಾಗಿದ್ದವು. ಬಿಜೆಪಿ ನಾಯಕರಂತೂ ಉದಯನಿಧಿ ಸ್ಟಾಲಿನ್‌ ಅವರ ಮೇಲೆ ಮುಗಿಬಿದ್ದಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರೇ, “ಸನಾತನ ಧರ್ಮವನ್ನು ನಿರ್ಮೂಲನೆ ಮಾಡಲೆಂದೇ ಪ್ರತಿಪಕ್ಷಗಳು ಒಗ್ಗೂಡಿ ಇಂಡಿಯಾ ಎಂಬ ಒಕ್ಕೂಟ ರಚಿಸಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ನಂತರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದ ಉದಯನಿಧಿ ಸ್ಟಾಲಿನ್‌, ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ಕಾನೂನು ಹೋರಾಟಕ್ಕೂ ಸಿದ್ಧನಾಗಿದ್ದೇನೆ ಎಂದು ಹೇಳಿದ್ದರು.

ಈ ವಿವಾದ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಉದಯನಿಧಿ ಸ್ಟಾಲಿನ್‌ ಹಾಗೂ ತಮಿಳುನಾಡು ಸರ್ಕಾರ ಸೇರಿ 16 ಜನರಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿಗೊಳಿಸಿತ್ತು. ತಮಿಳುನಾಡು ಸರ್ಕಾರ, ಉದಯನಿಧಿ ಸ್ಟಾಲಿನ್‌, ಮತ್ತೊಬ್ಬ ಸಚಿವ ಎ. ರಾಜಾ ಸೇರಿ 16 ಜನರಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿಗೊಳಿಸಿತ್ತು. ಇವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ಪ್ರತಿಕ್ರಿಯೆ ನೀಡುವಂತೆ ತಮಿಳುನಾಡು ಸರ್ಕಾರ ಹಾಗೂ 15 ಜನರಿಗೆ ನೋಟಿಸ್‌ ಜಾರಿಗೊಳಿಸಿತ್ತು. ಎ.ರಾಜಾ ಕೂಡ ಸನಾತನ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇವರ ವಿರುದ್ಧ ಚೆನ್ನೈ ಮೂಲದ ಬಿ. ಜಗನ್ನಾಥ್‌ ಕೋರ್ಟ್‌ ಮೊರೆ ಹೋಗಿದ್ದರು.

ಇದನ್ನೂ ಓದಿ: Udhayanidhi Stalin: ಸಂಸತ್‌ಗೆ ಮುರ್ಮುರನ್ನು ಆಹ್ವಾನಿಸದಿರುವುದೇ ಸನಾತನ ಧರ್ಮ ಎಂದ ಉದಯನಿಧಿ

Continue Reading

ಕ್ರೈಂ

Physical Abuse: ಅಪ್ರಾಪ್ತ ಮಗಳನ್ನು ಗರ್ಭಿಣಿ ಮಾಡಿದ ಕಾಮಪಿಶಾಚಿ ಅಪ್ಪನಿಗೆ ಗೂಸಾ

Physical Abuse: ಮಂಡ್ಯ ನಗರದ ಗುತ್ತಲಿನಲ್ಲಿ ಈ ಘಟನೆ ನಡೆದಿದೆ. ಮುನೀರ್ ತನ್ನ ಅಪ್ರಾಪ್ತ ಮಗಳನ್ನು ಪುಸಲಾಯಿಸಿ ಆಕೆಯ ಮೇಲೆ ಅತ್ಯಾಚಾರ ಮಾಡಿ ಗರ್ಭ ಧರಿಸುವಂತೆ ಮಾಡಿದ್ದಾನೆ. ಗರ್ಭಿಣಿಯಾದ ಬಾಲಕಿ ನಿನ್ನೆ ಈ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು, ಇದನ್ನು ಕೇಳಿ ಕೆರಳಿ ಕೆಂಡವಾದ ಗ್ರಾಮಸ್ಥರು ಮುನೀರ್‌ಗೆ ನಡು ರಸ್ತೆಯಲ್ಲೇ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.

VISTARANEWS.COM


on

physical abuse mandya
Koo

ಮಂಡ್ಯ: ಅಪ್ರಾಪ್ತ ವಯಸ್ಸಿನ ಮಗಳನ್ನು ಅಪ್ಪನೇ ಗರ್ಭಿಣಿ (Physical abuse) ಮಾಡಿರುವ ಆರೋಪ ಮಂಡ್ಯ (Mandya news) ಗುತ್ತಲಿನ ಮುನೀರ್‌ ಎಂಬಾತನ ಮೇಲೆ ಬಂದಿದೆ. ಈ ಕೃತ್ಯದಿಂದ ರೊಚ್ಚಿಗೆದ್ದ ಗ್ರಾಮಸ್ಥರು ಮುನೀರ್‌ನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಂಡ್ಯ ನಗರದ ಗುತ್ತಲಿನಲ್ಲಿ ಈ ಘಟನೆ ನಡೆದಿದೆ. ಮುನೀರ್ ತನ್ನ ಅಪ್ರಾಪ್ತ ಮಗಳನ್ನು ಪುಸಲಾಯಿಸಿ ಆಕೆಯ ಮೇಲೆ ಅತ್ಯಾಚಾರ ಮಾಡಿ ಗರ್ಭ ಧರಿಸುವಂತೆ ಮಾಡಿದ್ದಾನೆ. ಗರ್ಭಿಣಿಯಾದ ಬಾಲಕಿ ನಿನ್ನೆ ಈ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು, ಇದನ್ನು ಕೇಳಿ ಕೆರಳಿ ಕೆಂಡವಾದ ಗ್ರಾಮಸ್ಥರು ಮುನೀರ್‌ಗೆ ನಡು ರಸ್ತೆಯಲ್ಲೇ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.

ಮುನೀರ್‌ನನ್ನು ಪ್ರಶ್ನಿಸಿದಾಗ ಆತ ತಪ್ಪೊಪ್ಪಿಕೊಂಡಿದ್ದಾನೆ. ವಿಚಾರ ತಿಳಿದ ಮಂಡ್ಯ ಈಸ್ಟ್ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಸಾರ್ವಜನಿಕರ ಕೈಯಿಂದ ಆರೋಪಿ ಮುನೀರ್‌ನನ್ನು ಬಿಡಿಸಿ ತಮ್ಮ ವಶಕ್ಕೆ ಪಡೆದಿದ್ದಾರೆ. ಮಗಳಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ.

ಇಸ್ಪೀಟ್‌ ಅಡ್ಡೆ ಮೇಲೆ ದಾಳಿ; 11 ಜನ ಆರೋಪಿಗಳ ಬಂಧನ

ಶಿರಾ: ಇಸ್ಪೀಟ್‌ ಜೂಜಾಟದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ, 11 ಆರೋಪಿಗಳನ್ನು ಬಂಧಿಸಿ, 1,06,180 ರೂ. ನಗದು, 13 ಮೊಬೈಲ್ ಹಾಗೂ 7 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಮಾಗೋಡು ಕೆರೆ ಬಳಿಯ ದೊಡ್ಡನಹಳ್ಳಿ ಗ್ರಾಮದ ಸಮೀಪದಲ್ಲಿ ಭಾನುವಾರ (Gambling Case) ಈ ಘಟನೆ ನಡೆದಿದೆ.

ಖಚಿತ ಮಾಹಿತಿಯ ಮೇರೆಗೆ ತುಮಕೂರು ಸೆನ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಮಕೃಷ್ಣಯ್ಯ ಅವರ ನೇತೃತ್ವದಲ್ಲಿ ಪೊಲೀಸರು ದಾಳಿ ಮಾಡಿ, ಇಸ್ಪೀಟ್‌ ಜೂಜಾಟದಲ್ಲಿ ತೊಡಗಿದ್ದ 11 ಜನ ಆರೋಪಿಗಳನ್ನು ಬಂಧಿಸಿ, ಅವರಿಂದ 1,06,180 ರೂ. ನಗದು, 13 ಮೊಬೈಲ್‌ಗಳು ಹಾಗೂ ಏಳು ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ತುಮಕೂರು ಸೆನ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಮಕೃಷ್ಣಯ್ಯ ಹಾಗೂ ಸಿಬ್ಬಂದಿ ನಡೆಸಿದ ಈ ದಾಳಿಗೆ ಶಿರಾ ತಾಲೂಕಿನ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಶಿರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

Continue Reading
Advertisement
milk price hike
ಪ್ರಮುಖ ಸುದ್ದಿ10 mins ago

Milk Price: ನಂದಿನಿ ಹಾಲು ದರ ಏರಿಕೆ ಶಾಕ್‌; ಅರ್ಧ ಲೀಟರ್‌ಗೂ ₹2, ಒಂದು ಲೀಟರ್‌ಗೂ ₹2 ಬೆಲೆ ಏರಿಕೆ!

Viral News
ಕ್ರೈಂ19 mins ago

ಜಮೀನಿನಲ್ಲಿ ಕೆಲಸ ಮಾಡಲು ನಿರಾಕರಿಸಿದ ಮಹಿಳೆಯ ಮೇಲೆ ಹಲ್ಲೆ; ಖಾಸಗಿ ಅಂಗಕ್ಕೆ ಖಾರದ ಪುಡಿ ಎರಚಿ ವಿಕೃತಿ ಮೆರೆದ ಸಂಬಂಧಿಕರು

AFG vs BAN
ಕ್ರೀಡೆ20 mins ago

AFG vs BAN: ‘ನಿಧಾನವಾಗಿ ಆಡಿ, ಮಳೆ ಬರುತ್ತೆ’; ಆಫ್ಘನ್​ ಆಟಗಾರರಿಗೆ ಸಲಹೆ ನೀಡಿದ ಕೋಚ್​; ವಿಡಿಯೊ ವೈರಲ್​

cm siddaramaiah DK Shivakumar power fight
ಪ್ರಮುಖ ಸುದ್ದಿ48 mins ago

CM Siddaramaiah: ಡಿಸಿಎಂ ವಿಚಾರದಲ್ಲಿ ಮತ್ತೆ ಒಡೆದುಹೋದ ಕಾಂಗ್ರೆಸ್‌; ಸಿದ್ದು- ಡಿಕೆಶಿ ಬಣದ ನಡುವೆ ಡಿಶುಂ ಡಿಶುಂ

Viral Video
Latest50 mins ago

Viral Video: ವೃದ್ಧ ರೋಗಿಯ ಮೇಲೆ ದರ್ಪ ತೋರಿದ ಆಸ್ಪತ್ರೆ ಸಿಬ್ಬಂದಿ; ಆಘಾತಕಾರಿ ವಿಡಿಯೊ

LeT Associate killed
ದೇಶ57 mins ago

LeT Associate killed: ಪ್ರಚೋದನಕಾರಿ ಧರ್ಮ ಪ್ರಚಾರಕ ಖ್ವಾರಿ ಇದ್ರಿಸ್‌ ಹತ್ಯೆ; ವಿಷಪೂರಿತ ಸೂಜಿಯಿಂದ ದಾಳಿ!

Udhayanidhi Stalin
ಕರ್ನಾಟಕ1 hour ago

Udhayanidhi Stalin: ಸನಾತನ ಧರ್ಮದ ವಿರುದ್ಧ ಹೇಳಿಕೆ; ಇಂದು ಬೆಂಗಳೂರು ಕೋರ್ಟ್‌ನಲ್ಲಿ ಉದಯನಿಧಿ ಸ್ಟಾಲಿನ್‌ ವಿಚಾರಣೆ

AFG vs BAN
ಕ್ರೀಡೆ1 hour ago

AFG vs BAN: ರೋಚಕ ಗೆಲುವು ಸಾಧಿಸಿ ಸೆಮಿಫೈನಲ್​ಗೆ ಲಗ್ಗೆಯಿಟ್ಟ ಆಫ್ಘನ್​; ಟೂರ್ನಿಯಿಂದ ಹೊರಬಿದ್ದ ಆಸೀಸ್​

Mamata Banerjee
ದೇಶ2 hours ago

Mamata Banerjee: ಬಾಂಗ್ಲಾದೇಶದೊಂದಿಗೆ ಜಲ ಹಂಚಿಕೆಯ ಮಾತುಕತೆ: ಮಮತಾ ಬ್ಯಾನರ್ಜಿ ವಿರೋಧ; ಪ್ರಧಾನಿಗೆ ಪತ್ರ

physical abuse mandya
ಕ್ರೈಂ2 hours ago

Physical Abuse: ಅಪ್ರಾಪ್ತ ಮಗಳನ್ನು ಗರ್ಭಿಣಿ ಮಾಡಿದ ಕಾಮಪಿಶಾಚಿ ಅಪ್ಪನಿಗೆ ಗೂಸಾ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ18 hours ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ4 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ4 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ5 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌