ಕರ್ನಾಟಕ
Ganesha Chaturthi : ಬಣ್ಣ ಬಳಸದೆ ಸಿರಿಧಾನ್ಯದಿಂದಲೇ ಕಲರ್ಫುಲ್ ಗಣಪನ ಕ್ರಿಯೇಟ್ ಮಾಡಿದ ಹಾವೇರಿಯ ಗಣೇಶ
Ganesha Chaturthi: ಹಾವೇರಿಯ ಹವ್ಯಾಸಿ ಕಲಾವಿದರೊಬ್ಬರು ಸಿರಿ ಧಾನ್ಯದಿಂದ ಗಣಪನನ್ನು ಸೃಷ್ಟಿ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಇದಕ್ಕೆ ಯಾವ ಬಣ್ಣವನ್ನೂ ಬಳಸಿಲ್ಲ.
ಹಾವೇರಿ: ಗಣೇಶ ಎಂದರೆ ಕಲರ್ಫುಲ್ (Colorful Ganesha). ಎಲ್ಲೆಡೆ ಪ್ರತಿಷ್ಠಾಪನೆ ಮಾಡುವ ಗಣಪ ಹಲವು ಬಣ್ಣಗಳಿಂದ ರಾರಾಜಿಸುತ್ತಾನೆ. ಆದರೆ, ಗಣಪನಿಗೆ ಬಣ್ಣ ತುಂಬಲು ಕೃತಕ ಬಣ್ಣಗಳೇ ಬೇಕಾಗಿಲ್ಲ (No need of Artificial color). ಕೇವಲ ಸಿರಿಧಾನ್ಯ ಬಳಸಿ ಕಲರ್ ಫುಲ್ ಗಣೇಶನನ್ನು ಸೃಷ್ಟಿಸಬಹುದು ಎಂದು ತೋರಿಸಿದ್ದಾರೆ ಹಾವೇರಿಯ ಒಬ್ಬ ಕಲಾವಿದ (Artist from Haveri). ಅಚ್ಚರಿ ಮತ್ತು ಕಾಕತಾಳೀಯವೆಂದರೆ ಅವರ ಹೆಸರು ಕೂಡಾ ಗಣೇಶ! ಗಣೇಶ ಚತುರ್ಥಿಯ ಅಂಗವಾಗಿ ಹಾವೇರಿಯ ಈ ಕಲಾವಿದ ಯಾವುದೇ ಬಣ್ಣಗಳನ್ನು ಬಳಸದೆ ಐದು ತರಹದ ಸಿರಿಧಾನ್ಯ ಬಳಸಿ ಶ್ರೀ ಗಣಪತಿಯ ಚಿತ್ರವನ್ನು ಬಿಡಿಸಿದ್ದಾರೆ (Ganesha from Siridhanya).
ಹಾವೇರಿಯ ಚಿನ್ನ ಬೆಳ್ಳಿ ಕೆಲಸಗಾರ ಹವ್ಯಾಸಿ ಯುವ ಕಲಾವಿದ ಗಣೇಶ ವೆಂಕಟೇಶ ರಾಯ್ಕರ್ ಅವರು ರಾಗಿ, ನವಣೆ, ಹಾರಕ , ಸಾಮೆ , ಕೊರಲೆ, ಕಾಳಮೆಣಸುಗಳನ್ನು ಉಪಯೋಗಿಸಿ ಎಂಟು ದಿನದಲ್ಲಿ ಗಣೇಶನನ್ನು ಕ್ರಿಯೇಟ್ ಮಾಡಿದ್ದಾರೆ. ದಿನದ ಎಲ್ಲ ಕೆಲಸ ಮುಗಿದ ಮೇಲೆ ರಾತ್ರಿ ವೇಳೆ 2 ಗಂಟೆ ಸಮಯ ಮೀಸಲಿಟ್ಟು ಚಿತ್ರವನ್ನು ಬಿಡಿಸಿದ್ದಾರೆ.
ಬಳಸಿದ ರಾಗಿ 2840! ಪ್ರತಿಯೊಂದಕ್ಕೂ ಲೆಕ್ಕ!
ಗಣೇಶ ಅವರು ತಾವು ಸಿರಿ ಧಾನ್ಯ ಬಳಸಿ ಗಣೇಶನ ಚಿತ್ರ ಬಿಡಿಸಿದ್ದು ಮಾತ್ರವಲ್ಲ, ಎಷ್ಟೆಷ್ಟು ಸಿರಿಧಾನ್ಯ ಬಳಸಿದ್ದೇನೆ ಎಂದು ಲೆಕ್ಕ ಕೂಡಾ ಇಟ್ಟಿದ್ದಾರೆ. ಶ್ರೀ ಗಣಪತಿಯ ಚಿತ್ರವನ್ನು ಬಿಡಿಸಲು 2840 ರಾಗಿ, 329 ನವಣೆ, 44 ಹಾರಕ, 65 ಸಾಮೆ, 33 ಕೊರಲೆ, 2 ಕಾಳಮೆಣಸು ಬಳಸಿದ್ದಾರೆ.
ಸಿರಿಧಾನ್ಯವನ್ನೇ ಬಳಸಿ ಚಿತ್ರ ಬರೆದಿದ್ದು ಯಾಕೆಂದರೆ..
ಸಿರಿಧಾನ್ಯಗಳನ್ನೇ ಯಾಕೆ ಬಳಸಿ ಚಿತ್ರವನ್ನು ಬರೆದಿದ್ದೀರಿ ಎನ್ನುವ ಪ್ರಶ್ನೆಗೆ ಅವರು ಹೇಳಿದ ಉತ್ತರ: ಹಿಂದಿನ ಕಾಲದಲ್ಲಿ ಸಿರಿಧಾನ್ಯದ ಮಹತ್ವ ತಿಳಿದು ಅದನ್ನೇ ಬಳಸುತ್ತಿದ್ದರು ಅದರಿಂದ ಆರೋಗ್ಯವಾಗಿದ್ದರು ಆದರೆ ಈಗಿನ ಕಾಲದಲ್ಲಿ ಬಹುತೇಕ ಜನರಿಗೆ ಅದರ ಮಹತ್ವ ಗೊತ್ತಿಲ್ಲ ಆದ ಕಾರಣ ನಾನು ಸಿರಿಧಾನ್ಯದಲ್ಲಿ ಚಿತ್ರ ರಚಿಸಿ ಸಿರಿಧಾನ್ಯದಲ್ಲಿ ಎಷ್ಟು ಸುಂದರ ಚಿತ್ರ ರಚನೆ ಆಗುತ್ತೆ ಅಂದರೆ ಆರೋಗ್ಯದ ಮೇಲೆ ಎಷ್ಟು ಪರಿಣಾಮ ಬೀರಬಾರದು ಎನ್ನುವ ಉದ್ದೇಶದಿಂದ ಸಿರಿಧಾನ್ಯದ ಚಿತ್ರ ರಚಿಸಿ ಜಾಗೃತಿ ಮೂಡಿಸುತ್ತಿದ್ದೇನೆ ಎಂದರು.
ಇದನ್ನೂ ಓದಿ: Ganesh Chaturthi: ಗಣಪ ನಮಗೇಕೆ ಇಷ್ಟು ಆಪ್ತ?
ಮಣ್ಣಿನ ಗಣಪತಿ ಮಾಡುವುದೂ ಗೊತ್ತು.. ಆದರೆ..
ಗಣೇಶ ಅವರು ಆರಂಭದಲ್ಲಿ ಮಣ್ಣಿನಲ್ಲಿ ಗಣಪತಿಯ ವಿಗ್ರಹಗಳನ್ನು ಮಾಡುತ್ತಿದ್ದರು. ಆದರೆ ಅವರು ಜಗತ್ತಿಗೆ ಏನಾದರೂ ಒಂದು ಹೊಸತನ್ನು ತೋರಿಸಬೇಕು ವಿಶೇಷವಾಗಿ ಏನನ್ನಾದರೂ ಮಾಡಬೇಕು ಎಂದು ಯೋಚಿಸಿದಾಗ ಹೊಳೆದದ್ದೇ ಸಿರಿಧಾನ್ಯಗಳಲ್ಲಿ ಬಿಡಿಸುವ ಚಿತ್ತಾರ .
‘ಕಲೆಯಲ್ಲಿ ಸ್ವಂತಿಕೆ ಇರಬೇಕು ಎಂದು ನನ್ನದೇ ಆದ ಪ್ರತ್ಯೇಕ ಶೈಲಿಯನ್ನು ರೂಢಿಸಿಕೊಂಡು ಸಿರಿಧಾನ್ಯಗಳ ಮೂಲಕ ಚಿತ್ರಗಳನ್ನು ಬಿಡಿಸುವ ಹವ್ಯಾಸದಲ್ಲಿ ಮಗ್ನನಾಗಿದ್ದೇನೆ ಎನ್ನುತ್ತಾರೆ ಗಣೇಶ. ಇವರ ಈ ಚಿತ್ರವನ್ನು ಅವರ ಬಂಗಾರದ ಅಂಗಡಿಯಲ್ಲಿ ನೋಡಬಹುದು.
ಕರ್ನಾಟಕ
Gold Rate Today: ಏರಿದ ಬಂಗಾರದ ದರ, ರಾಜ್ಯದಲ್ಲಿ ಇಂದು ಬೆಲೆ ಹೀಗಿದೆ
22 ಕ್ಯಾರಟ್ ಮತ್ತು 24 ಕ್ಯಾರಟ್ ಚಿನ್ನದ ಬೆಲೆ (Gold Rate Today) ಶನಿವಾರ ಬೆಂಗಳೂರಿನಲ್ಲಿ ಕ್ರಮವಾಗಿ ₹10 ಹಾಗೂ ₹11 ಏರಿಕೆಯಾಗಿದೆ.
ಬೆಂಗಳೂರು: 22 ಕ್ಯಾರಟ್ ಮತ್ತು 24 ಕ್ಯಾರಟ್ ಚಿನ್ನದ ಬೆಲೆ (Gold Rate Today) ಶನಿವಾರ ಬೆಂಗಳೂರಿನಲ್ಲಿ ಕ್ರಮವಾಗಿ ₹10 ಹಾಗೂ ₹11 ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ನೀವಿಂದು ಒಂದು ಗ್ರಾಂ 22 ಕ್ಯಾರಟ್ ಚಿನ್ನವನ್ನು ₹5,495ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹43,960 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್ ಚಿನ್ನವನ್ನು ₹ 54,950 ಮತ್ತು ₹ 5,49,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್ ಚಿನ್ನದ ಬೆಲೆ ₹5,995 ಆಗಿದ್ದರೆ, ಎಂಟು ಗ್ರಾಂ ಬೆಲೆ ₹47,960 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 59,950 ಮತ್ತು ₹ 5,99,500 ವೆಚ್ಚವಾಗಲಿದೆ.
ಒಂದು ಗ್ರಾಂ ಬೆಳ್ಳಿಯ ಬೆಲೆ ₹ 79.30, ಎಂಟು ಗ್ರಾಂ ₹ 634.40 ಮತ್ತು 10 ಗ್ರಾಂ ₹ 793ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹ 7,930 ಮತ್ತು 1 ಕಿಲೋಗ್ರಾಂಗೆ ₹ 79,300 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.
ನಗರ | 22 ಕ್ಯಾರಟ್ | 24 ಕ್ಯಾರಟ್ |
ದಿಲ್ಲಿ | 54,990 | 59,930 |
ಮುಂಬಯಿ | 54,950 | 59,950 |
ಬೆಂಗಳೂರು | 54,950 | 59,950 |
ಚೆನ್ನೈ | 55,210 | 60,320 |
ಚಿನ್ನದ ದರದ ಮೇಲೆ ಪರಿಣಾಮ ಬೀರುವ ಕೆಲವು ಅಂಶಗಳು ಇಲ್ಲಿವೆ:
ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.
ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.
ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.
ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.
ಉಡುಪಿ
Weather Report : ನಾಳೆವರೆಗೂ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ
Rain News : ಉತ್ತರ ಕರ್ನಾಟಕಕ್ಕೆ ಭಾರಿ ಮಳೆ ಮುನ್ಸೂಚನೆ ಇದ್ದು, ಮುಂಗಾರು ಚುರುಕುಗೊಂಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಲ್ಲಿ (Weather report) ಸಾಮಾನ್ಯವಾಗಿರಲಿದೆ.
ಬೆಂಗಳೂರು: ಸೆ.23-24ರಂದು ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಆದರೆ ಉತ್ತರ ಒಳನಾಡಲ್ಲಿ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.
ಉತ್ತರ ಕರ್ನಾಟಕದಲ್ಲಿ ಬಿಡುವೇ ಇಲ್ಲ
ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚೆನಯನ್ನು (weather report) ನೀಡಲಾಗಿದೆ. ಎಡಬಿಡದೆ ಮಳೆ ಸುರಿಯಲಿದ್ದು, ಜತೆಗೆ ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.
ದಕ್ಷಿಣ ಒಳನಾಡಲ್ಲಿ ಲಘು ಮಳೆ
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿಯಲ್ಲಿ ತಗ್ಗಿದ ಅಬ್ಬರ
ಕರಾವಳಿಯಲ್ಲಿ ಮಳೆ ಅಬ್ಬರ ತಗ್ಗಿದೆ. ಆದಾಗ್ಯೂ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗಲಿದೆ. ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ. ಮೀನುಗಾರರಿಗೆ ಯಾವುದೇ ಎಚ್ಚರಿಕೆ ಇಲ್ಲ.
ಬೆಂಗಳೂರಲ್ಲಿ ಸಂಜೆಗೆ ಮಳೆ ಕಾಟ
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಬಿಸಿಲಿನ ತಾಪ ಜಾಸ್ತಿ ಇದ್ದರೆ, ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Cauvery Protest: ಕಾವೇರಿ ಕಿಚ್ಚು: ಮಂಡ್ಯ ಬಂದ್; ಹೆದ್ದಾರಿಯಲ್ಲಿ ಉರುಳುಸೇವೆ, ರೈತರ ಜತೆ ಸೇರಿದ ಬಿಜೆಪಿ, ಜೆಡಿಎಸ್
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 29 ಡಿ.ಸೆ – 20 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 21 ಡಿ.ಸೆ
ಗದಗ: 31 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 31 ಡಿ.ಸೆ – 23 ಡಿ.ಸೆ
ಬೆಳಗಾವಿ: 28 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ
ಸೆಪ್ಟೆಂಬರ್ 23ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ
ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯ | ಗರಿಷ್ಠ ಮಟ್ಟ (ಅಡಿಗಳಲ್ಲಿ) | ಇಂದಿನ ಮಟ್ಟ (ಅಡಿಗಳಲ್ಲಿ) | ಒಳ ಹರಿವು (ಕ್ಯೂಸೆಕ್) | ಹೊರ ಹರಿವು (ಕ್ಯೂಸೆಕ್) |
ಕೆಆರ್ಎಸ್ ಜಲಾಶಯ (KRS Dam) | 38.04 | 20.61 | 6016 | 5735 |
ಆಲಮಟ್ಟಿ ಜಲಾಶಯ (Almatti Dam) | 519.6 | 114.73 | 405 | 405 |
ಮಲಪ್ರಭಾ ಜಲಾಶಯ (Malaprabha Dam) | 633.80 | 21.44 | 0 | 194 |
ಘಟಪ್ರಭಾ ಜಲಾಶಯ (Ghataprabha Dam) | 662.91 | 42.40 | 2311 | 181 |
ತುಂಗಾಭದ್ರಾ ಜಲಾಶಯ (Tungabhadra Dam) | 497.71 | 62.92 | 4378 | 10316 |
ಭದ್ರಾ ಜಲಾಶಯ (Bhadra Dam) | 657.73 | 43.23 | 290 | 290 |
ಕಬಿನಿ ಜಲಾಶಯ (Kabini Dam) | 696.13 | 14.80 | 3166 | 4390 |
ಹಾರಂಗಿ (Harangi Dam) | 871.38 | 8.06 | 1335 | 2791 |
ಲಿಂಗನಮಕ್ಕಿ (Linganamakki Dam) | 554.44 | 68.30 | 5493 | 5393 |
ಹೇಮಾವತಿ (Hemavathi Dam) | 890.58 | 17.66 | 4986 | 1300 |
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಕರ್ನಾಟಕ
Ganesha Festival : ಹಿಂದು ಮಹಾಸಭಾ ಗಣೇಶೋತ್ಸವದಲ್ಲಿ ತುಂಡು ಬಟ್ಟೆ ತೊಟ್ಟು ಯುವತಿ ಪ್ರಚೋದಕ ಡ್ಯಾನ್ಸ್!
Ganesha Festival : ಕೊಪ್ಪಳದ ಹಗರಿಬೊಮ್ಮನಹಳ್ಳಿಯಲ್ಲಿ ಗಣೇಶೋತ್ಸವದ ವೇಳೆ ಯುವತಿಯೊಬ್ಬಳ ಪ್ರಚೋದಕ ಡ್ಯಾನ್ಸ್ ಸುದ್ದಿ ಮಾಡಿದೆ. ಕೆಲವರು ವಿರೋಧಿಸಿದರೆ ಇನ್ನು ಕೆಲವರು ಇದು ಕಾಮನ್ ಅಂದಿದ್ದಾರೆ.
ಕೊಪ್ಪಳ: ಹಿಂದು ಮಹಾಸಭಾ (Koppala Hindu Mahasabha) ಆಯೋಜಿಸಿರುವ ಕೊಪ್ಪಳ ಗಣೇಶೋತ್ಸವದಲ್ಲಿ (Koppala Ganeshothsava) ಯುವತಿಯೊಬ್ಬಳು ತುಂಡು ಬಟ್ಟೆ ತೊಟ್ಟು ಡ್ಯಾನ್ಸ್ (Young lady dance in Half dress) ಮಾಡಿದ್ದು ಭಾರಿ ಚರ್ಚೆಗೆ ಕಾರಣವಾಗಿದೆ. ಸಂಸ್ಕೃತಿ ಬಗ್ಗೆ ಮಾತನಾಡುವವರು ತುಂಡು ಬಟ್ಟೆ ಡ್ಯಾನ್ಸ್ಗೆ (Obscene dance) ಹೇಗೆ ಅನುಮತಿ ಕೊಟ್ಟರು (Ganesha festival) ಎಂಬ ಜನ ಪ್ರಶ್ನೆ ಮಾಡುತ್ತಿದ್ದಾರೆ.
ಕೊಪ್ಪಳದ ಕಾವ್ಯಾನಂದ ಪಾರ್ಕಿನಲ್ಲಿ ಪ್ರತಿಷ್ಠಾಪಿಸಿರುವ ಗಣೇಶನ ಉತ್ಸವದ ಸಂದರ್ಭದಲ್ಲಿ ಸಾರ್ವಜನಿಕರಿಗಾಗಿ ಮನೋರಂಜನೆ ಕಾರ್ಯಕ್ರಮ (Entertainment Programme) ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಯುವತಿಯೊಬ್ಬಳು ತುಂಡು ಬಟ್ಟೆ ತೊಟ್ಟು ಹಿಂದಿ ಹಾಡಿಗೆ ಪ್ರಚೋದಕವಾಗಿ ಕುಣಿದಿದ್ದಳು (Provocative dance). ಸಂಸ್ಕೃತಿಯ ಬಗ್ಗೆ ಮಾತನಾಡುವವರು ತುಂಡು ಬಟ್ಟೆಯ ಡ್ಯಾನ್ಸ್ ಆಯೋಜನೆ ಮಾಡಿದ್ದು ಎಷ್ಟು ಸರಿ, ಇದಕ್ಕೆಲ್ಲ ಗಣೇಶನ ವೇದಿಕೆಯೇ ಬೇಕಾಗಿತ್ತಾ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಡ್ಯಾನ್ಸ್ ಆಯೋಜನೆ ಕುರಿತು ಅಸಮಾಧಾನ ವ್ಯಕ್ತವಾಗಿದೆ.
ಯುವತಿಯ ತಪ್ಪಿಲ್ಲ, ಆಯೋಜಕರದೇ ತಪ್ಪು
ಡ್ಯಾನ್ಸ್ ಮಾಡಿದ ಯುವತಿಯ ತಪ್ಪಿಲ್ಲ, ಈ ರೀತಿಯ ನೃತ್ಯಗಳು ಈಗ ಎಲ್ಲ ಕಡೆ ಸಾಮಾನ್ಯವಾಗಿದೆ. ಮಕ್ಕಳು ಇವುಗಳನ್ನು ಪ್ರದರ್ಶಿಸುತ್ತಾರೆ. ಆದರೆ, ಇದನ್ನು ಗಣೇಶೋತ್ಸವದ ವೇದಿಕೆಯಲ್ಲಿ ನಡೆಸಲು ಆಯೋಜಕರು ಹೇಗೆ ಪರ್ಮಿಷನ್ ಕೊಟ್ಟರು ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಇನ್ನು ಕೆಲವರು ಆಯೋಜಕರಿಗೆ ಯಾವ ರೀತಿಯ ನೃತ್ಯ ಎನ್ನುವ ಬಗ್ಗೆ ಆರಂಭದಲ್ಲಿ ಮಾಹಿತಿ ಇರುವುದಿಲ್ಲ, ನೃತ್ಯ ಮಾಡುವವರು ವೇದಿಕೆ, ಸಮಯ, ಸಂದರ್ಭ ನೋಡಿಕೊಂಡು ತಮ್ಮ ಕಲೆಯನ್ನು ಪ್ರದರ್ಶನ ಮಾಡಬೇಕು ಎಂಬ ವಾದವನ್ನೂ ಮಂಡಿಸಿದ್ದಾರೆ. ಇದೇ ವೇಳೆ ಕೆಲವರು ಇಂಥದ್ದೆಲ್ಲ ನಡೀತದೆ, ಇದರಲ್ಲಿ ತಲೆ ಹೋಗುವಂತದ್ದು ಏನೂ ಇಲ್ಲ. ನಮ್ಮ ಮಕ್ಕಳೇ ಅಲ್ಲವೇ ಡ್ಯಾನ್ಸ್ ಮಾಡಿದ್ದು ಎಂದು ಸಮಾಧಾನ ಹೇಳಿದ್ದಾರೆ. ಒಟ್ಟಿನಲ್ಲಿ ಗಣೇಶನ ವೇದಿಕೆಯ ಮುಂದಿನ ಪ್ರಚೋದಕ ಡ್ಯಾನ್ಸ್ ಸುದ್ದಿ ಮಾಡಿದೆ.
ಇದನ್ನೂ ಓದಿ: Communal Harmony : ದರ್ಗಾದಲ್ಲೇ ಗಣಪತಿ ಪ್ರತಿಷ್ಠಾಪನೆ; ಘಂಟೆ ಬಡಿದು ಜೈ ಗಣೇಶ ಎಂದ ಮುಸ್ಲಿಮರು, ಎಂಥಾ ಸೌಹಾರ್ದ!
ಹಗರಿಬೊಮ್ಮನಹಳ್ಳಿಯಲ್ಲಿ ಡಿಜೆ ಸದ್ದಿಗೆ ಹಾರಿ ಹೋಯಿತು ಯುವಕನ ಪ್ರಾಣ
ಇದು ಕೊಪ್ಪಳದ ಕಥೆಯಾದರೆ ಅತ್ತ ವಿಜಯನಗರ ಜಿಲ್ಲೆ ಹಗರಿಬೊಮ್ಮನ ಹಳ್ಳಿ ಪಟ್ಟಣದ ಭೋವಿ ಕಾಲನಿಯಲ್ಲಿ ಗಣೇಶೋತ್ಸವದ ಶೋಭಾಯಾತ್ರೆ ಸಂದರ್ಭದಲ್ಲಿ ಡಿ.ಜೆ. ಸೌಂಡ್ಗೆ ಯುವಕನ ಪ್ರಾಣವೇ ಹಾರಿ ಹೋಗಿದೆ.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಬೋವಿ ಕಾಲೊನಿಯಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ಡಿಜೆಗೆ ಡ್ಯಾನ್ಸ್ ಮಾಡುತ್ತಿದ್ದ ಜಮೀರ್ ಪಿಂಜಾರ( 22) ಎಂಬ ಯುವಕ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿ ಅತಿಯಾಗಿ ಮದ್ಯ ಸೇವನೆ ಮಾಡಿದ್ದ ಎನ್ನಲಾಗಿದೆ. BSNL ಕಚೇರಿ ಬಳಿ ಮೆರವಣಿಗೆಯಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಯುವಕರು ತಾಲೂಕಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಮಾರ್ಗಮದ್ಯದಲ್ಲಿ ಮೃತಪಟ್ಟಿದ್ದಾನೆ. ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇತ್ತ ಹೊಸಪೇಟೆಯಲ್ಲಿ ಗಣೇಶೋತ್ಸವದ ವೇಳೆ ಯುವಕರ ರಣೋತ್ಸಾಹವನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.
ಡಿಜೆ ಸೌಂಡ್ ಗೆ ಕುಣಿದು ಕುಪ್ಪಳಿಸಿದ ಯುವಕರನ್ನು ನಿಯಂತ್ರಿಸಲು ಸ್ವತಃ ವಿಜಯನಗರ ಎಸ್ಪಿ ಶ್ರೀ ಹರಿಬಾಬು ಬಿಎಲ್, ಡಿವೈಎಸ್ಪಿ ಮಂಜುನಾಥ್ ತಳವಾರ್, ಹೊಸಪೇಟೆ ಸಿಪಿಐ ಬಾಲನಗೌಡ ಅವರೇ ಕಣಕ್ಕೆ ಇಳಿಬೇಕಾಯಿತು. ಎಸ್ಪಿ ಶ್ರೀಹರಿಬಾಬು ಬಿಎಲ್ ಸ್ವತಃ ತಾವೇ ಯುವಕರನ್ನು ಹೊರದಬ್ಬಿದ ದೃಶ್ಯಗಳು ವೈರಲ್ ಆಗಿವೆ.
Live News
Karnataka live news: ರಾಜ್ಯದ ಇಂದಿನ ಮಹತ್ವದ ಸುದ್ದಿಗಳು: ವಿಸ್ತರಿಸುತ್ತಿದೆ ಕಾವೇರಿ ಹೋರಾಟ, ಮಂಡ್ಯ ಬಂದ್
ಇಂದು ಮಂಡ್ಯ ಬಂದ್ ನಡೆದಿದೆ. ರಾಜದಾನಿಯೂ ಸೇರಿದಂತೆ ಇಡೀ ರಾಜ್ಯಕ್ಕೆ ಹೋರಾಟ (Cauvery protest) ವಿಸ್ತರಿಸುತ್ತಿದೆ. ರಾಜ್ಯದ ಇಂದಿನ ಇನ್ನಷ್ಟು ಮಹತ್ವದ ಸುದ್ದಿಗಳನ್ನು (Karnataka live news) ಓದಲು ಇಲ್ಲಿ ಗಮನಿಸಿ.
ಬೆಂಗಳೂರು: ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯ ಖಂಡಿಸಿ ಇಂದು ಮಂಡ್ಯ ಬಂದ್ ನಡೆದಿದೆ. ರಾಜದಾನಿಯೂ ಸೇರಿದಂತೆ ಇಡೀ ರಾಜ್ಯಕ್ಕೆ ಹೋರಾಟ (Cauvery protest) ವಿಸ್ತರಿಸುತ್ತಿದೆ. ರಾಜ್ಯದ ಇಂದಿನ ಇನ್ನಷ್ಟು ಮಹತ್ವದ ಸುದ್ದಿಗಳನ್ನು (Karnataka live news) ಓದಲು ಇಲ್ಲಿ ಗಮನಿಸಿ.
-
ಪ್ರಮುಖ ಸುದ್ದಿ16 hours ago
Ipsos poll Survey: ಟ್ರುಡೋ ಜನಪ್ರಿಯತೆ ಕುಸಿತ, ಕೆನಡಾ ಪಿಎಂ ಆಗಲು ಪ್ರತಿಪಕ್ಷ ನಾಯಕನೇ ಬೆಸ್ಟ್!
-
ಉಡುಪಿ22 hours ago
FB Profile Deleted: 20ಕ್ಕೂ ಅಧಿಕ ಹಿಂದು ಜಾಗರಣ ವೇದಿಕೆ ನಾಯಕರ ಫೇಸ್ ಬುಕ್ ಪ್ರೊಫೈಲ್ ಏಕಕಾಲದಲ್ಲಿ ಡಿಲೀಟ್!
-
ಸುವಚನ6 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಗ್ಯಾಜೆಟ್ಸ್19 hours ago
YouTube: ಯುಟ್ಯೂಬ್ ವಿಡಿಯೋ ಮಾಡುವುದು ಇನ್ನೂ ಸುಲಭ! ಹೊಸ ಎಡಿಟಿಂಗ್ ಆ್ಯಪ್ ಲಾಂಚ್
-
ದೇಶ18 hours ago
Prisoners Escape: ವ್ಯಾನ್ನಿಂದ ಜಿಗಿದು ಇಬ್ಬರು ಕೈದಿಗಳು ಪರಾರಿ; ಕತ್ತೆ ಕಾಯುತ್ತಿದ್ದ ಪೊಲೀಸರು!
-
ಕ್ರೈಂ18 hours ago
Assault Case : ಕೈ ತಾಗಿದ್ದಕ್ಕೆ ಯುವಕರ ಮಧ್ಯೆ ಕಿರಿಕ್; ಖಾನಾಪುರದಲ್ಲಿ ಬಿಗುವಿನ ವಾತಾವರಣ
-
ಉಡುಪಿ15 hours ago
Dr HS Shetty : ಯಶಸ್ವೀ ಉದ್ಯಮಿ ಡಾ. ಎಚ್.ಎಸ್ ಶೆಟ್ಟಿ ಅವರಿಗೆ ಹುಟ್ಟೂರ ಸನ್ಮಾನ; ಸಾಧನೆ, ಸೇವೆಯ ವಿಸ್ತಾರಕ್ಕೆ ನಮಿಸಿದ ಜನ
-
ಕರ್ನಾಟಕ12 hours ago
Heart Attack: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡಿಜೆ ಸದ್ದಿಗೆ ಹಾರಿಹೋಯ್ತು ಯುವಕನ ಪ್ರಾಣ!