ಹಾವೇರಿ ‘ಹೊಂಡ’ ಸಿಟಿ; ರಸ್ತೆಯಲ್ಲಿ ಗಾಡಿ ಪಲ್ಟಿ! Vistara News
Connect with us

ಹಾವೇರಿ

ಹಾವೇರಿ ‘ಹೊಂಡ’ ಸಿಟಿ; ರಸ್ತೆಯಲ್ಲಿ ಗಾಡಿ ಪಲ್ಟಿ!

ಕಬ್ಬಿಣದ ರಾಡ್ ಗಳನ್ನು ಹೆರಿಕೊಂಡು ಸಾಗುತ್ತಿದ್ದ ವಾಹನವೊಂದು ಹೊಂದಕ್ಕೆ ಹೋಗಿದ್ದು ಸಂಪೂರ್ಣ ಗಾಡಿ ಮಗಚಿಬಿದ್ದಿದೆ. ಗಾಯಗೊಂಡ ವಾಹನ ಚಾಲಕನನ್ನು ಅ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

VISTARANEWS.COM


on

ರಸ್ತೆ ಗುಂಡಿ
ಸಾಂದರ್ಭಿಕ ಚಿತ್ರ
Koo

ಹಾವೇರಿ: ಹಾವೇರಿಯಲ್ಲಿ ರಸ್ತೆ ಗುಂಡಿಯಾಗಿದ್ದು ಒಂದು ಟಂಟಂ ವಾಹನ ಬಿದ್ದ ಘಟನೆ ಸಾರ್ವಜನಿಕರಿಗೆ ರಸ್ತೆ ಕಾಮಗಾರಿಯ ಬಗ್ಗೆ ಅಸಡ್ಡೆ ಉಂಟುಮಾಡಿದೆ. ರಸ್ತೆಯಲ್ಲಿದ್ದ ಹೊಂಡದಲ್ಲಿ ಟಂಟಂ ವಾಹನ ಸಾಗಿದ್ದು, ವಾಹನ ಪಲ್ಟಿ ಯಾಗಿದೆ. 

ಗುತ್ತಲ ಪಟ್ಟಣದ ರಾಣೆಬೆನ್ನೂರು ರಸ್ತೆಯ ಪೆಟ್ರೋಲ್  ಬಂಕ್ ಎದುರು ಈ ಘಟನೆ ಸಂಭವಿಸಿದೆ. ಅಲ್ಲದೆ, ಈ ಅಪಘಾತದಲ್ಲಿ  ವಾಹನ ಚಾಲಕ ಸಂಪೂರ್ಣ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಬ್ಬಿಣದ ರಾಡ್ ಗಳನ್ನು ಹೆರಿಕೊಂಡು ಸಾಗುತ್ತಿದ್ದ ವಾಹನವೊಂದು ಹೊಂದಕ್ಕೆ ಹೋಗಿದ್ದು ಸಂಪೂರ್ಣ ಗಾಡಿ ಮಗಚಿಬಿದ್ದಿದೆ. 

ಈ ರೀತಿಯ ಘಟನೆ ಅನೇಕ ಬಾರಿ ಸಂಭವಸಿದ್ದು ಸ್ಥಳೀಯರು ಈ ಕುರಿತು ಜನಪ್ರತಿನಿಧಿಗಳಿಗೆ ದೂರು ನೀಡಿದ್ದರು. ಆದರೆ, ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಿಳಿದು ಬಂದಿದೆ. ಮಳೆ ಬಂದಾಗ ಹೊಂಡಗಳಲ್ಲಿ ನೀರು ತುಂಬಿಕೊಂಡು ಕೆರೆಯಂತಾಗುವ ರಸ್ತೆಗಳಲ್ಲಿ ಸುರಕ್ಷಿತವಾಗಿ ಸಂಚರಿಸುವುದು ಹೇಗೆ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ಕಳೆದ ಹತ್ತು ವರ್ಷಗಳಿಂದ ರಸ್ತೆ ಕಾಮಗಾರಿ ನಡೆದುದನ್ನು ಕಾಣದ ಸ್ಥಳೀಯರು ಈ ವಿಷಯದ ಬಗ್ಗೆ ಸರ್ಕಾರವು ಅಸಡ್ಡೆ ಮಾಡದೆ ಗಂಭೀರವಾಗಿ ಕಾರ್ಯನಿರ್ವಹಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. 

ಇದನ್ನೂ ಓದಿ: ಜೊಮ್ಯಾಟೋ ವಿರುದ್ಧ ದಾವಣಗೆರೆಯಲ್ಲಿ ಪ್ರತಿಭಟನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಉಡುಪಿ

Weather report : ಇನ್ನೆರಡು ದಿನ ಉತ್ತರ ಕರ್ನಾಟಕದ 7 ಜಿಲ್ಲೆ ಸೇರಿ ಕರಾವಳಿಯಲ್ಲಿ ಭಾರಿ ಮಳೆ

Weather report : ರಾಜ್ಯದಲ್ಲಿ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

Edited by

Woman Enjoying The Rain Outside A Grass Field
Koo

ಬೆಂಗಳೂರು: ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ಈ ಭಾಗದಲ್ಲಿ ಐಎಂಡಿ ಯೆಲ್ಲೋ ಅಲರ್ಟ್‌ ನೀಡಿದೆ. ಇದಲ್ಲದೆ, ಕರಾವಳಿ ಜಿಲ್ಲೆಗಳಲ್ಲಿ ಸಹ ಭಾರಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Weather report) ಹೇಳಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಜತೆಗೆ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನೊಂದಿಗೆ ಮಳೆಯಾಗುವ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.

ಇದನ್ನೂ ಓದಿ: Mandya Accident: ಕೆಎಸ್ಸಾರ್ಟಿಸಿ ಬಸ್‌ ಡಿಕ್ಕಿ ಹೊಡೆದ ಕಾರು; ನಾಲ್ವರು ಸ್ಥಳದಲ್ಲೇ ದುರ್ಮರಣ

ದಕ್ಷಿಣ ಒಳನಾಡಲ್ಲಿ ತಗ್ಗಿದ ಮಳೆ

ಬುಧವಾರ (ಸೆ. 27) ಮತ್ತು ಗುರುವಾರ (ಸೆ. 28) ದಕ್ಷಿಣ ಒಳನಾಡಿನ ಕೋಲಾರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ಹೇಳಿದೆ. ಉಳಿದ ಭಾಗಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಬೀಳಬಹುದು ಎಂದು ಅಂದಾಜಿಸಲಾಗಿದೆ. ಉತ್ತರ ಒಳನಾಡಿನ ಬೀದರ್, ವಿಜಯನಗರ ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗಲಿದೆ. ಹೆಚ್ಚಿನ ಸಮಯ ಮೋಡ ಕವಿದ ವಾತಾವರಣ ಇರಲಿದೆ.

ಮಲೆನಾಡಲ್ಲೂ ಸಣ್ಣ ಮಳೆ

ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಈ ಬಾರಿ ಭಾರಿ ಪ್ರಮಾಣದ ಮಳೆಯ ನಿರೀಕ್ಷೆ ಮಾಡುವಂತಿಲ್ಲ. ಇಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: Elephant Attack : ಹಾಲು ತರಲು ಹೋಗುತ್ತಿದ್ದ ವೃದ್ಧನ ಬೆನ್ನಟ್ಟಿ ದಾಳಿ ಮಾಡಿದ ಕಾಡಾನೆ ಹಿಂಡು, ಗಂಭೀರ ಗಾಯ

ಬೆಂಗಳೂರಿನಲ್ಲಿ ರಾತ್ರಿ ಮಳೆ ಭರ್ಜರಿ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ ಮತ್ತು ಗುರುವಾರ ಬೆಳಗ್ಗೆ ಹೆಚ್ಚಿನ ಸಮಯ ಬಿಸಿಲಿದ್ದರೂ ನಂತರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಸಂಜೆ ಅಥವಾ ರಾತ್ರಿಯಂದು ಭಾರಿ ಪ್ರಮಾಣದ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಹೀಗಾಗಿ ಸಂಜೆ ವೇಳೆಗೆ ಪ್ರಯಾಣ ಮಾಡುವವರು ಸೂಕ್ತ ತಯಾರಿ ಮಾಡಿಕೊಂಡಿರಲು ಸೂಚಿಸಲಾಗಿದೆ. ಇನ್ನು ಮಳೆ ವೇಳೆ ಸಂಚಾರ ದಟ್ಟಣೆ ಹೆಚ್ಚುವ ಸಂಭವವೂ ಇದೆ. ಗರಿಷ್ಠ ಉಷ್ಣಾಂಶ 30 ಡಿಗ್ರ ಸೆಲ್ಸಿಯಸ್‌ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಉಡುಪಿ

Weather report : ಉತ್ತರ, ಕರಾವಳಿಯಲ್ಲಿ ಮಳೆಗೆ ಬಲ; ದಕ್ಷಿಣದಲ್ಲಿ ದುರ್ಬಲ

Rain News : ರಾಜ್ಯದಲ್ಲಿ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ.

VISTARANEWS.COM


on

Edited by

Girls standing in road with rain
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ಐಎಂಡಿ ಯೆಲ್ಲೋ ಅಲರ್ಟ್‌ (Weather report) ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಜತೆಗೆ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.

ದಕ್ಷಿಣ ಒಳನಾಡಲ್ಲಿ ತಗ್ಗಿದ ಮಳೆ

ಸೆ. 27ರಂದು ದಕ್ಷಿಣ ಒಳನಾಡಿನ ಕೋಲಾರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮಾತ್ರ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಸಣ್ಣ ಮಳೆ ಬೀಳಬಹುದು. ಉತ್ತರ ಒಳನಾಡಿನ ಬೀದರ್, ವಿಜಯನಗರ ಜಿಲ್ಲೆಗಳಲ್ಲಿ ಹಗುರವಾದ ಮಳೆ ಇರಿಲಿದೆ.

ಮಲೆನಾಡಲ್ಲೂ ಸಣ್ಣ ಮಳೆ

ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದರೆ, ಮಧ್ಯಾಹ್ನ ಬಿಸಿಲಿನಿಂದ ಕೂಡಿರುತ್ತದೆ. ಸಂಜೆ ಅಥವಾ ರಾತ್ರಿಯಂದು ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Cauvery water dispute : ನಮಗೆ ನೀರಿಲ್ಲ, ತಮಿಳುನಾಡಿಗೆ‌ ನೀರು ಬಿಡೋದು ಹೇಗೆ? – ನಟಿ ರಾಗಿಣಿ ದ್ವಿವೇದಿ

ರಾಜ್ಯದಲ್ಲಿ ಸೆ. 25ರಂದು ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಕರಾವಳಿ ಬಹುತೇಕ ಸ್ಥಳಗಳಲ್ಲಿ ಮಳೆಯಾಗಿದ್ದು, ಉತ್ತರ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ತೊಂಡೇಭಾವಿ 5 ಸೆಂ.ಮೀ, ಗೋಕರ್ಣ, ಸಿಂದಗಿ, ಬೀದರ್, ಕಂಪ್ಲಿಯಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ.

ಹೊನಾವರ, ಆಳಂದ, ಕುಕನೂರು, ಮಾನ್ವಿ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಹೆಬ್ಬೂರಲ್ಲಿ ತಲಾ 3, ಕುಮಟಾ, ತಾಳಿಕೋಟೆ , ಫರಹತಾಬಾದ್, ಚಿಂಚೋಳಿ , ಕೆಂಭಾವಿ, ಬೆಂಗಳೂರು ಸಿಟಿ ಗೌರಿಬಿದನೂರು , ಕುರುಗೋಡು ಸೇರಿದಂತೆ ದೊಡ್ಡಬಳ್ಳಾಪುರದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಪುತ್ತೂರು, ಮಂಗಳೂರು , ಮಂಗಳೂರು ವಿಮಾನ ನಿಲ್ದಾಣ, ಅಂಕೋಲಾ, ಇಳಕಲ್, ನಿರ್ಣಾ , ಕಲಬುರ್ಗಿ, ಮಹಾಗೋನ್, ಗುಂಡಗುರ್ತಿ , ಶಹಪುರ, ಶೋರಾಪುರ ಕಕ್ಕೇರಿ, ಗಂಗಾವತಿ, ದೇವರಹಿಪ್ಪರಗಿ, ಇಂಡಿ , ಕುಡತಿನಿ, ಹೊಸಪೇಟೆ, ಬೆಂಗಳೂರು ಕೆಐಎಎಲ್ ತಲಾ 1 ಸೆಂ.ಮೀ ಮಳೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Cauvery Dispute: ರಾಜ್ಯದ ಹಲವೆಡೆ ಕಾವೇರಿ ಕಿಚ್ಚು; ಸರ್ಕಾರ, ಸಿಡಬ್ಲ್ಯುಎಂಎ ವಿರುದ್ಧ ಕರವೇ ಕಾರ್ಯಕರ್ತರ ಆಕ್ರೋಶ

Cauvery Dispute: ಬೆಂಗಳೂರು ಹೊರವಲಯದ ಆನೇಕಲ್‌ ತಾಲೂಕಿನ ಅತ್ತಿಬೆಲೆ ಗಡಿ ಭಾಗದಲ್ಲಿ ಹೆದ್ದಾರಿ ಬಂದ್‌ ಮಾಡಿ ಕರವೇ ನಾರಾಯಣಗೌಡ ಬಣದಿಂದ ಪ್ರತಿಭಟನೆ ನಡೆಸಲಾಯಿತು.

VISTARANEWS.COM


on

Edited by

Karnataka rakshana vedike protest
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಭಾಗದಲ್ಲಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.
Koo

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಒತ್ತಾಯಿಸಿ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಕರ್ನಾಟಕ ರಕ್ಷಣಾ ವೇದಿಕೆ ಸೇರಿ ಹಲವು ಕನ್ನಡ ಪರ ಸಂಘಟನೆಗಳು ಶುಕ್ರವಾರ ಪ್ರತಿಭಟನೆ ನಡೆಸಿದವು. ರಸ್ತೆ ತಡೆ ನಡೆಸಿ, ಪ್ರತಿಭಟನಾ ಮೆರವಣಿಗೆಯಿಂದ ಹೋರಾಟ ತೀವ್ರಗೊಂಡಿದ್ದರಿಂದ ಪರಿಸ್ಥಿತಿ ನಿಯಂತ್ರಿಸಲು ಹಲವೆಡೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕರವೇ ವಿಧಾನ ಸೌಧ ಮುತ್ತಿಗೆ ಯತ್ನ ವಿಫಲ

ಬೆಂಗಳೂರಿನಲ್ಲಿ ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಪಾದಯಾತ್ರೆ ನಡೆಸಿ, ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ಕಾರ್ಯಕರ್ತರು ನಿರ್ಧರಿಸಿದ್ದರು. ಈ ನಿಟ್ಟಿನಲ್ಲಿ ಕೆ.ಆರ್‌.ಪುರದಿಂದ ಪಾದಯಾತ್ರೆ ಆರಂಭಗೊಂಡಿತ್ತು. ಆದರೆ ಪಾದಯಾತ್ರೆ ಆರಂಭವಾದ ಬೆನ್ನಲ್ಲೇ ಪೊಲೀಸರು ತಡೆದರು. ಹೀಗಾಗಿ ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ಹಾಗೂ ಬೆಂಬಲಿಗರು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಹೀಗಾಗಿ ಅವರನ್ನು ಪೊಲೀಸರು ವಶಕ್ಕೆ ಪಡೆದರು.

ಈ ವೇಳೆ ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ಮಾತನಾಡಿ, ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಗೆಳಿಗೆ ಎಚ್ಚರಿಕೆ‌ ನೀಡುತ್ತಿದ್ದೇವೆ. ಈ ಹಿಂದೆ ಬಂಗಾರಪ್ಪರಂತೆ ಧಿಟ್ಟ ನಿರ್ಧಾರ ಕೈಗೊಂಡು ಅವರ ಮಾದರಿಯನ್ನು ಅನುಸರಿಸಬೇಕು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೂ ಎಚ್ಚರಿಕೆ ನೀಡಲು ಬಯಸುತ್ತೇವೆ. ನಗರದಲ್ಲೇ ಕುಡಿಯಲ್ಲಿ ನೀರಿಲ್ಲ, ಹೀಗಿರುವಾಗ ತಮಿಳುನಾಡಿಗೆ ನೀರು ಹರಿಸುವುದು ಸೂಕ್ತವಲ್ಲ. ಈ ಕೂಡಲೇ ನೀರು ಹರಿಸುವುದು ನಿಲ್ಲಿಸಬೇಕು. ಸುಪ್ರೀಂ ಕೋರ್ಟ್ ಆದೇಶ ಆದಾಗಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು. ನಮ್ಮ ರಾಜ್ಯದ ಸಂಸದರು ನಿದ್ದೆ ಮಾಡುತ್ತಿದ್ದಾರೆ. ನಾಳೆ ಅತ್ತಿಬೆಲೆ ಗೇಟ್ ಬಂದ್ ಮಾಡಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಅತ್ತಿಬೆಲೆ ಗಡಿಯಲ್ಲಿ ಹೆದ್ದಾರಿ ತಡೆದು ಆಕ್ರೋಶ

ಆನೇಕಲ್: ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದಿಂದ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಭಾಗದಲ್ಲಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಯಾವುದೇ ಕಾರಣಕ್ಕು ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದು ಎಂದು ಆಗ್ರಹಿಸಿದ ಕಾರ್ಯಕರ್ತರು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಇದೇ ವೇಳೆ ಹೆದ್ದಾರಿಯಲ್ಲಿ ತಮಿಳುನಾಡಿನಿಂದ ಬರುವ ವಾಹನಗಳನ್ನು ಅಡ್ಡಗಟ್ಟಿ ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ | Cauvery Dispute : ಕಾವೇರಿ ಹೋರಾಟಕ್ಕೆ ಧುಮುಕಿದ ಆದಿಚುಂಚನಗಿರಿ ಶ್ರೀ; ರೈತ ಪರ ನಿರ್ಧಾರ ತೆಗೆದುಕೊಳ್ಳಲು ಹಕ್ಕೊತ್ತಾಯ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಪ್ರತಿಕೃತಿ ದಹನ

ರಾಮನಗರ: ನಗರದ ಐಜೂರು ವೃತ್ತದಲ್ಲಿ ಕರವೇ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದರು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಭೂತದಹನ (ಪ್ರತಿಕೃತಿ ದಹನ) ಮಾಡಿ ಆಕ್ರೋಶ ಹೊರಹಾಕಿ, ಕಾವೇರಿ ಎಂದೆಂದೂ ನಮ್ಮದು ನಮ್ಮದು ಎಂದು ಘೋಷಣೆ ಕೂಗಿದರು.

ಹಾವೇರಿ ಸಂಸದರ ಕಚೇರಿ ಎದುರು ಹೋರಾಟ

ಹಾವೇರಿ: ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡದಂತೆ ಒತ್ತಾಯಿಸಿ ನಗರದಲ್ಲಿ ಸಂಸದ ಶಿವಕುಮಾರ ಉದಾಸಿ ಕಚೇರಿ ಎದುರು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಸಂಸದರು ಹಾಗೂ ಶಾಸಕರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ನೀರು ಬಿಟ್ಟರೆ ಉಗ್ರವಾದ ಹೋರಾಟ ಮಾಡುವುದಾಗಿ ಟಿ.ಎ.ನಾರಾಯಣಗೌಡ ಬಣದ ಕರವೇ ಕಾರ್ಯಕರ್ತರು ಎಚ್ಚರಿಕೆ ನೀಡಿದರು.

ಧಾರವಾಡದ ಜಿಲ್ಲಾಧಿಕಾರಿ ಕಚೇರಿ‌ ಬಳಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು

ಚಿತ್ರದುರ್ಗದ ಜಿಲ್ಲಾ ಅಂಚೆ ಕಚೇರಿ ಬಳಿ ಪ್ರತಿಭಟನೆ

ಚಿತ್ರದುರ್ಗ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ನಗರದ ಜಿಲ್ಲಾ ಅಂಚೆ ಕಚೇರಿ ಬಳಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪೋಸ್ಟ್ ಆಫೀಸ್ ಮುಂಭಾಗ ಮಲಗಿ ಅಕ್ರೋಶ ಹೊರಹಾಕಿದ ಬಳಿಕ ಗೇಟ್ ಒಳನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ಹೊಸಪೇಟೆಯಲ್ಲಿ ಕರವೇ ಜಿಲ್ಲಾಧ್ಯಕ್ಷ ತಾರಿಹಳ್ಳಿ ಹನುಮಂತಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು

ಇದನ್ನೂ ಓದಿ | Cauvery Dispute : ಕಾವೇರಿ ವಾಸ್ತವ ತಿಳಿಯಲು ಅನ್ಯ ರಾಜ್ಯದ ಅಧಿಕಾರಿಗಳ ತಂಡ ಕಳುಹಿಸಿ; ದೇವೇಗೌಡರ ಸಲಹೆ

ಚಾಮರಾಜನಗರದಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು
Continue Reading

ಕರ್ನಾಟಕ

Ganesha Chaturthi : ಬಣ್ಣ ಬಳಸದೆ ಸಿರಿಧಾನ್ಯದಿಂದಲೇ ಕಲರ್‌ಫುಲ್‌ ಗಣಪನ ಕ್ರಿಯೇಟ್‌ ಮಾಡಿದ ಹಾವೇರಿಯ ಗಣೇಶ

Ganesha Chaturthi: ಹಾವೇರಿಯ ಹವ್ಯಾಸಿ ಕಲಾವಿದರೊಬ್ಬರು ಸಿರಿ ಧಾನ್ಯದಿಂದ ಗಣಪನನ್ನು ಸೃಷ್ಟಿ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಇದಕ್ಕೆ ಯಾವ ಬಣ್ಣವನ್ನೂ ಬಳಸಿಲ್ಲ.

VISTARANEWS.COM


on

Edited by

Siridhanya Ganapa
Koo

ಹಾವೇರಿ: ಗಣೇಶ ಎಂದರೆ ಕಲರ್‌ಫುಲ್‌ (Colorful Ganesha). ಎಲ್ಲೆಡೆ ಪ್ರತಿಷ್ಠಾಪನೆ ಮಾಡುವ ಗಣಪ ಹಲವು ಬಣ್ಣಗಳಿಂದ ರಾರಾಜಿಸುತ್ತಾನೆ. ಆದರೆ, ಗಣಪನಿಗೆ ಬಣ್ಣ ತುಂಬಲು ಕೃತಕ ಬಣ್ಣಗಳೇ ಬೇಕಾಗಿಲ್ಲ (No need of Artificial color). ಕೇವಲ ಸಿರಿಧಾನ್ಯ ಬಳಸಿ ಕಲರ್‌ ಫುಲ್‌ ಗಣೇಶನನ್ನು ಸೃಷ್ಟಿಸಬಹುದು ಎಂದು ತೋರಿಸಿದ್ದಾರೆ ಹಾವೇರಿಯ ಒಬ್ಬ ಕಲಾವಿದ (Artist from Haveri). ಅಚ್ಚರಿ ಮತ್ತು ಕಾಕತಾಳೀಯವೆಂದರೆ ಅವರ ಹೆಸರು ಕೂಡಾ ಗಣೇಶ! ಗಣೇಶ ಚತುರ್ಥಿಯ ಅಂಗವಾಗಿ ಹಾವೇರಿಯ ಈ ಕಲಾವಿದ ಯಾವುದೇ ಬಣ್ಣಗಳನ್ನು ಬಳಸದೆ ಐದು ತರಹದ ಸಿರಿಧಾನ್ಯ ಬಳಸಿ ಶ್ರೀ ಗಣಪತಿಯ ಚಿತ್ರವನ್ನು ಬಿಡಿಸಿದ್ದಾರೆ (Ganesha from Siridhanya).

ಹಾವೇರಿಯ ಚಿನ್ನ ಬೆಳ್ಳಿ ಕೆಲಸಗಾರ ಹವ್ಯಾಸಿ ಯುವ ಕಲಾವಿದ ಗಣೇಶ ವೆಂಕಟೇಶ ರಾಯ್ಕರ್ ಅವರು ರಾಗಿ, ನವಣೆ, ಹಾರಕ , ಸಾಮೆ , ಕೊರಲೆ, ಕಾಳಮೆಣಸುಗಳನ್ನು ಉಪಯೋಗಿಸಿ ಎಂಟು ದಿನದಲ್ಲಿ ಗಣೇಶನನ್ನು ಕ್ರಿಯೇಟ್‌ ಮಾಡಿದ್ದಾರೆ. ದಿನದ ಎಲ್ಲ ಕೆಲಸ ಮುಗಿದ ಮೇಲೆ ರಾತ್ರಿ ವೇಳೆ 2 ಗಂಟೆ ಸಮಯ ಮೀಸಲಿಟ್ಟು ಚಿತ್ರವನ್ನು ಬಿಡಿಸಿದ್ದಾರೆ.

ಬಳಸಿದ ರಾಗಿ 2840! ಪ್ರತಿಯೊಂದಕ್ಕೂ ಲೆಕ್ಕ!

ಗಣೇಶ ಅವರು ತಾವು ಸಿರಿ ಧಾನ್ಯ ಬಳಸಿ ಗಣೇಶನ ಚಿತ್ರ ಬಿಡಿಸಿದ್ದು ಮಾತ್ರವಲ್ಲ, ಎಷ್ಟೆಷ್ಟು ಸಿರಿಧಾನ್ಯ ಬಳಸಿದ್ದೇನೆ ಎಂದು ಲೆಕ್ಕ ಕೂಡಾ ಇಟ್ಟಿದ್ದಾರೆ. ಶ್ರೀ ಗಣಪತಿಯ ಚಿತ್ರವನ್ನು ಬಿಡಿಸಲು 2840 ರಾಗಿ, 329 ನವಣೆ, 44 ಹಾರಕ, 65 ಸಾಮೆ, 33 ಕೊರಲೆ, 2 ಕಾಳಮೆಣಸು ಬಳಸಿದ್ದಾರೆ.

ಸಿರಿಧಾನ್ಯವನ್ನೇ ಬಳಸಿ ಚಿತ್ರ ಬರೆದಿದ್ದು ಯಾಕೆಂದರೆ..

ಸಿರಿಧಾನ್ಯಗಳನ್ನೇ ಯಾಕೆ ಬಳಸಿ ಚಿತ್ರವನ್ನು ಬರೆದಿದ್ದೀರಿ ಎನ್ನುವ ಪ್ರಶ್ನೆಗೆ ಅವರು ಹೇಳಿದ ಉತ್ತರ: ಹಿಂದಿನ ಕಾಲದಲ್ಲಿ ಸಿರಿಧಾನ್ಯದ ಮಹತ್ವ ತಿಳಿದು ಅದನ್ನೇ ಬಳಸುತ್ತಿದ್ದರು ಅದರಿಂದ ಆರೋಗ್ಯವಾಗಿದ್ದರು ಆದರೆ ಈಗಿನ ಕಾಲದಲ್ಲಿ ಬಹುತೇಕ ಜನರಿಗೆ ಅದರ ಮಹತ್ವ ಗೊತ್ತಿಲ್ಲ ಆದ ಕಾರಣ ನಾನು ಸಿರಿಧಾನ್ಯದಲ್ಲಿ ಚಿತ್ರ ರಚಿಸಿ ಸಿರಿಧಾನ್ಯದಲ್ಲಿ ಎಷ್ಟು ಸುಂದರ ಚಿತ್ರ ರಚನೆ ಆಗುತ್ತೆ ಅಂದರೆ ಆರೋಗ್ಯದ ಮೇಲೆ ಎಷ್ಟು ಪರಿಣಾಮ ಬೀರಬಾರದು ಎನ್ನುವ ಉದ್ದೇಶದಿಂದ ಸಿರಿಧಾನ್ಯದ ಚಿತ್ರ ರಚಿಸಿ ಜಾಗೃತಿ ಮೂಡಿಸುತ್ತಿದ್ದೇನೆ ಎಂದರು.

Siri Dhanya Ganapa

ಇದನ್ನೂ ಓದಿ: Ganesh Chaturthi: ಗಣಪ ನಮಗೇಕೆ ಇಷ್ಟು ಆಪ್ತ?

ಮಣ್ಣಿನ ಗಣಪತಿ ಮಾಡುವುದೂ ಗೊತ್ತು.. ಆದರೆ..

ಗಣೇಶ ಅವರು ಆರಂಭದಲ್ಲಿ ಮಣ್ಣಿನಲ್ಲಿ ಗಣಪತಿಯ ವಿಗ್ರಹಗಳನ್ನು ಮಾಡುತ್ತಿದ್ದರು. ಆದರೆ ಅವರು ಜಗತ್ತಿಗೆ ಏನಾದರೂ ಒಂದು ಹೊಸತನ್ನು ತೋರಿಸಬೇಕು ವಿಶೇಷವಾಗಿ ಏನನ್ನಾದರೂ ಮಾಡಬೇಕು ಎಂದು ಯೋಚಿಸಿದಾಗ ಹೊಳೆದದ್ದೇ ಸಿರಿಧಾನ್ಯಗಳಲ್ಲಿ ಬಿಡಿಸುವ ಚಿತ್ತಾರ .

‘ಕಲೆಯಲ್ಲಿ ಸ್ವಂತಿಕೆ ಇರಬೇಕು ಎಂದು ನನ್ನದೇ ಆದ ಪ್ರತ್ಯೇಕ ಶೈಲಿಯನ್ನು ರೂಢಿಸಿಕೊಂಡು ಸಿರಿಧಾನ್ಯಗಳ ಮೂಲಕ ಚಿತ್ರಗಳನ್ನು ಬಿಡಿಸುವ ಹವ್ಯಾಸದಲ್ಲಿ ಮಗ್ನನಾಗಿದ್ದೇನೆ ಎನ್ನುತ್ತಾರೆ ಗಣೇಶ. ಇವರ ಈ ಚಿತ್ರವನ್ನು ಅವರ ಬಂಗಾರದ ಅಂಗಡಿಯಲ್ಲಿ ನೋಡಬಹುದು.

Continue Reading
Advertisement
castor oil
ಆರೋಗ್ಯ10 mins ago

Hair Care Tips: ಹರಳೆಣ್ಣೆಯನ್ನು ಹೇಗೆ ಬಳಸುವ ಮೂಲಕ ಉದ್ದವಾದ ಕಪ್ಪುಗೂದಲು ಪಡೆಯಬಹುದು ಗೊತ್ತೇ?

Vistara Editorial, Indian Government must act against Khalistani Terrorists
ದೇಶ1 hour ago

ವಿಸ್ತಾರ ಸಂಪಾದಕೀಯ: ಖಲಿಸ್ತಾನಿ ಭಯೋತ್ಪಾದಕರ ಹೆಡೆಮುರಿ ಕಟ್ಟಲೇಬೇಕಿದೆ

dina bhavishya September 27
ಪ್ರಮುಖ ಸುದ್ದಿ2 hours ago

Dina Bhavishya : ಈ ರಾಶಿಯವರಿಗೆ ಇಂದು ಕಿರಿಕಿರಿ, ಆತಂಕದ ಭಾವವೇ ಹೆಚ್ಚು; ಸ್ವಲ್ಪ ಎಚ್ಚರವಹಿಸಿ!

Sphoorti Salu
ಸುವಚನ2 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

S somanath and HD DeveGowda
ಕರ್ನಾಟಕ7 hours ago

Honorary Doctorate: ಇಸ್ರೋ ಅಧ್ಯಕ್ಷ ಎಸ್‌. ಸೋಮನಾಥ್‌, ಎಚ್‌.ಡಿ ದೇವೇಗೌಡರಿಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್‌

Gujarat High Court
ದೇಶ7 hours ago

ಜಿಮೇಲ್ ಓಪನ್ ಆಗ್ಲಿಲ್ಲ, ಅದ್ಕೆ ಜೈಲಿನಿಂದ ಬಿಡಲಿಲ್ಲ! ಹೈಕೋರ್ಟ್ ಬೇಲ್ ನೀಡಿದ್ರೂ 3 ವರ್ಷ ಜೈಲಿನಲ್ಲೇ ಉಳಿದ ಯುವಕ!

World culture fest
ಕಲೆ/ಸಾಹಿತ್ಯ8 hours ago

World Culture Festival: ಸೆ.29ರಿಂದ ವಾಷಿಂಗ್ಟನ್‌ನಲ್ಲಿ ಸಾಂಸ್ಕೃತಿಕ ಒಲಿಂಪಿಕ್ಸ್; ಶ್ರೀ ರವಿಶಂಕರ್ ಗುರೂಜಿ ಮುಂದಾಳತ್ವ

credit cards
ದೇಶ8 hours ago

Flipkart, Amazon Sale: ಹಬ್ಬದ ಸೀಸನ್‌ ಆನ್‌ಲೈನ್ ಖರೀದಿ, ಕ್ರೆಡಿಟ್‌ ಕಾರ್ಡ್‌ದಾರರು ತಿಳಿದುಕೊಳ್ಳಬೇಕಾದ ಸಂಗತಿಗಳು

virat kohli dance
ಕ್ರಿಕೆಟ್8 hours ago

Viral Video: ಬ್ರೇಕ್​ ಪಡೆದ ಆಸೀಸ್​ ಆಟಗಾರರ ಮುಂದೆ ಬ್ರೇಕ್​ ಡ್ಯಾನ್ಸ್​ ಮಾಡಿದ ವಿರಾಟ್​ ಕೊಹ್ಲಿ

Knives
ಕರ್ನಾಟಕ8 hours ago

Kolar News: ಬಾರ್‌ನಲ್ಲಿ ಚೂರಿಯಿಂದ ಇರಿದು ವ್ಯಕ್ತಿಯ ಕೊಲೆ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

bangalore bandh
ಕರ್ನಾಟಕ2 days ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

dina bhavishya
ಪ್ರಮುಖ ಸುದ್ದಿ1 day ago

Dina Bhavishya : ನಿಮಗೆ ಆಗದವರು ಪಿತೂರಿ ಮಾಡ್ಬಹುದು ಎಚ್ಚರ!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ3 days ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ3 days ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ3 days ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ3 days ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ4 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ4 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

ಟ್ರೆಂಡಿಂಗ್‌