Site icon Vistara News

ಸಿದ್ಧಾರೂಢ ಮಠದ ಗೇಟಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ

hang

ಹಾವೇರಿ: ಸಿದ್ಧಾರೂಢ ಮಠದ ಗೇಟಿಗೆ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಖಂಡೆರಾಯನಹಳ್ಳಿ ತಾಂಡಾದಲ್ಲಿ ಘಟನೆ ನಡೆದಿದೆ. ಮಂಜಪ್ಪ ಲಮಾಣಿ (50) ಮೃತ ವ್ಯಕ್ತಿ. ಮಠದ ಟ್ರಸ್ಟ್ ಮತ್ತು ಮಂಜಪ್ಪ ಲಮಾಣಿ ನಡುವೆ ಜಾಗದ ವಿಚಾರವಾಗಿ ಹಲವು ವರ್ಷಗಳಿಂದ ತಗಾದೆ ಇತ್ತು. ಸಿದ್ಧಾರೂಢ ಮಠದ ಟ್ರಸ್ಟ್‌ನವರು ಮಂಜಪ್ಪ ಅವರ ಭೂಮಿಯನ್ನು ಬಳಸಿಕೊಂಡಿದ್ದಾರೆ ಎನ್ನುವ ಆರೋಪವಿತ್ತು. ಈ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ರಾಣೆಬೇನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಠದ ಮುಂದೆ ಕುಟುಂಬಸ್ಥರು ಕುಳಿತು ಆಕ್ರಂದಿಸುತ್ತಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ | ಹಣಕ್ಕಾಗಿ ವೃದ್ಧೆ ಕೊಲೆ, ಪಕ್ಕದ ಮನೆಯವರೇ ಆರೋಪಿಗಳು

Exit mobile version