ಶಿಗ್ಗಾಂವಿ ರಾಜಶ್ರೀ ಥಿಯೇಟರ್‌ ಶೂಟೌಟ್ ಪ್ರಕರಣದ ಆರೋಪಿ ಬಂಧನ - Vistara News

ಕ್ರೈಂ

ಶಿಗ್ಗಾಂವಿ ರಾಜಶ್ರೀ ಥಿಯೇಟರ್‌ ಶೂಟೌಟ್ ಪ್ರಕರಣದ ಆರೋಪಿ ಬಂಧನ

ಶಿಗ್ಗಾಂವಿ ರಾಜಶ್ರೀ ಚಿತ್ರಮಂದಿರದಲ್ಲಿ ನಡೆದಿದ್ದ ಶೂಟೌಟ್‌ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಎಸ್ಪಿ ಹನುಮಂತರಾಯ ತಿಳಿಸಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾವೇರಿ: ಶಿಗ್ಗಾಂವಿ ರಾಜಶ್ರೀ ಥಿಯೇಟರ್‌ನಲ್ಲಿ ನಡೆದಿದ್ದ ಶೂಟೌಟ್ ಪ್ರಕರಣದ ಆರೋಪಿ ಮಂಜುನಾಥ್ ಅಲಿಯಾಸ್ ಮಲೀಕ್ ಪಾಟೀಲ್‌ನನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದ್ದಾರೆ.

ಏ.19ರಂದು ರಾಜಶ್ರೀ ಥಿಯೇಟರ್‌ನಲ್ಲಿ ಕೆ.ಜಿ.ಎಫ್ ಚಿತ್ರ ವೀಕ್ಷಣೆ ವೇಳೆ ನಡೆದ ಗಲಾಟೆಯಲ್ಲಿ ಶಿಗ್ಗಾಂವಿ ತಾಲೂಕು ಮುಗಳಿ ಗ್ರಾಮದ ಯುವಕ ವಸಂತ್ ಕುಮಾರ್ ಎಂಬುವವರ ಮೇಲೆ ಆರೋಪಿ ಮಂಜುನಾಥ್ ನಾಡ ಬಂದೂಕಿನಿಂದ ಫೈರ್‌ ಮಾಡಿದ್ದ. ದಾಳಿಯಲ್ಲಿ ವಸಂತ್ ಕುಮಾರ್ ತೀವ್ರ ಗಾಯಗೊಂಡಿದ್ದರಿಂದ
ಅವರನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಸದ್ಯ ವಸಂತ್ ಕುಮಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇದನ್ನೂ ಓದಿ | ಬಜರಂಗದಳ ಶಸ್ತ್ರಾಸ್ತ್ರ ತರಬೇತಿ ಖಂಡಿಸಿ‌ದ ಎಸ್‌ಡಿಪಿಐ

ಈ ಕುರಿತು ಮಾಹಿತಿ ನೀಡಿರುವ ಹನುಮಂತರಾಯ, ವಸಂತ್ ಕುಮಾರ್ ಸ್ನೇಹಿತ ನೀಡಿದ ದೂರಿನ ಮೇರೆಗೆ ಆರೋಪಿಯ ಬಂಧನಕ್ಕೆ ತನಿಖೆ ಶುರು ಮಾಡಿದೆವು. ನಂತರ ಮೂರು ತಂಡಗಳನ್ನ ರಚಿಸಿ, ಶಿಗ್ಗಾಂವಿ ಪೊಲೀಸರ ತಂಡ, ವಿಶೇಷ ಅಪರಾಧ ತಂಡ ರಚಿಸಿ ಚುರುಕಿನ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

ಗೋವಾ, ಬೆಂಗಳೂರು, ವಿಜಯಪುರ, ದಾಂಡೇಲಿ, ಮುಂಡಗೋಡ ಸುತ್ತಮುತ್ತ ಆರೋಪಿಗಾಗಿ ಹುಡಕಿದ ನಂತರ ಮುಂಡಗೋಡ ಬಸ್ ನಿಲ್ದಾಣದಲ್ಲಿ ಮಂಜುನಾಥ್‌ ಇರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಆತನನ್ನು ಬಂಧಿಸಿ, 15 ಬುಲೆಟ್, ನಾಡ ಬಂದೂಕು ವಶಕ್ಕೆ ಪಡೆದಿದ್ದೇವೆ. ಆತನ ಹತ್ತಿರ ಪಿಸ್ತೂಲ್ ಬಳಸುವುದಕ್ಕೆ ಯಾವುದೇ ರೀತಿಯ ಲೈಸೆನ್ಸ್ ಇಲ್ಲ, ಆತನಿಗೆ ಆಶ್ರಯ ನೀಡಿದ ಇಸ್ಮಾಯಿಲ್ ಬಂಕಾಪುರ ಎಂಬಾತನನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Cyber Crime | ಲಕ್ಷ ಹಣ ಕಳೆದುಕೊಂಡ ಬಿಎಸ್‌ಎಫ್‌ ಯೋಧ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Jai Sriram Slogan: ಜೈ ಶ್ರೀರಾಮ್‌ ಹೇಳಿದ್ದಕ್ಕೆ ಮುಸ್ಲಿಂ ಯುವಕರಿಂದ ಹಲ್ಲೆ; ಇನ್ನೊಂದು ಘಟನೆ

Jai Sriram Slogan: ಬಾರ್‌ನಲ್ಲಿ ʼಜೈ ಶ್ರೀರಾಮ್‌ʼ ಎಂದು ಕೂಗಿದಾಗ 20 ಜನ ಮುಸ್ಲಿಂ ಯುವಕರು ಘೇರಾಯಿಸಿ ಸೇರಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

VISTARANEWS.COM


on

jai sriram slogan koppal crime news
Koo

ಕೊಪ್ಪಳ: ʼಜೈ ಶ್ರೀರಾಮ್ʼ ಎಂದ (Jai Sriram Slogan) ವ್ಯಕ್ತಿಯ ಮೇಲೆ ಮುಸ್ಲಿಂ ಯುವಕರು ಹಲ್ಲೆ (Assault Case) ನಡೆಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕೊಪ್ಪಳ (Koppal news) ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರದ ಶೈನ್ ಬಾರ್‌ನಲ್ಲಿ ಈ ಘಟನೆ (Crime news) ನಡೆದಿದ್ದು, ಮದ್ಯ ಸೇವನೆಯ ವೇಳೆ ʼಜೈ ಶ್ರೀರಾಮ್‌ʼ ಎಂದಿದ್ದಕ್ಕೆ ಹಲ್ಲೆ ನಡೆಸಲಾಗಿದೆ ಎಂಬುದು ಆರೋಪ.

ಶ್ರೀರಾಮ ನಗರದ ಕುಮಾರ್ ರಾಠೋಡ್ ಎಂಬವರ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹಲ್ಲೆಯಲ್ಲಿ ಗಾಯಗೊಂಡಿರುವ ಕುಮಾರ್ ರಾಠೋಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾರ್‌ನಲ್ಲಿ ʼಜೈ ಶ್ರೀರಾಮ್‌ʼ ಎಂದು ಕೂಗಿದಾಗ 20 ಜನ ಮುಸ್ಲಿಂ ಯುವಕರು ಘೇರಾಯಿಸಿ ಸೇರಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಶ್ರೀರಾಮನವಮಿ (Sri Ram Navami) ಸಂದರ್ಭದಲ್ಲಿ ಜೈ ಶ್ರೀರಾಮ್‌ ಘೋಷಣೆ ಕೂಗಿದ್ದ ಯುವಕರನ್ನು ಅಡ್ಡಗಟ್ಟಿ ಕೆಲ ಮುಸ್ಲಿಂ ಯುವಕರು ಗೂಂಡಾಗಿರಿ ನಡೆಸಿದ್ದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದಿತ್ತು. ಹಿಂದು ಯುವಕರ ಮೇಲೆ ಹಲ್ಲೆ ಪ್ರಕರಣ ಸಂಬಂಧ ಡಿ. ಪವನ್ ಕುಮಾರ್ ನೀಡಿದ ದೂರಿನ ಮೇರೆಗೆ ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಕೆಲವರನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಲಾಗಿದೆ.

ಗುಜರಿ ಅಂಗಡಿ ಮಾಲೀಕನಿಗೆ ಬೆದರಿಸಿ ಹಣ ಪೀಕಿದ ಪೊಲೀಸ್‌ 

ಬೆಂಗಳೂರು: ಮಾರತ್ತಹಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ಸುಳ್ಳು ಆರೋಪಗಳನ್ನು ಮಾಡಿ ಗುಜರಿ ಅಂಗಡಿ ಮಾಲೀಕನಿಂದ ಹಣ ವಸೂಲಿ (Fraud Case) ಮಾಡಿರುವ ಆರೋಪವೊಂದು ಕೇಳಿ ಬಂದಿದೆ. ಗುಜರಿ ಅಂಗಡಿ ಮಾಲೀಕ ಅಖ್ತಿರ್ ಅಲಿ ಮಂಡಲ್‌ ಎಂಬುವವರು ಈ ಸಂಬಂಧ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ಅಖ್ತರ್ ಅವರು ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಲ್ಲೂರಳ್ಳಿಯಲ್ಲಿ ಗುಜರಿ ಅಂಗಡಿ ಇಟ್ಟುಕೊಂಡಿದ್ದರು. ಕಳೆದ ಏಪ್ರಿಲ್ 17ರ ಮಧ್ಯಾಹ್ನ 12ಗಂಟೆಗೆ ಗುಜುರಿ ಬಳಿ ಪೊಲೀಸ್ ಸಿಬ್ಬಂದಿ, ಇನ್ಫಾರ್ಮರ್ ಎಸ್.ನಿವಾಸ್ ಎಂಬಾತನ ಜತೆಗೆ ಆಗಮಿಸಿದ್ದರು. ಹೀಗೆ ಬಂದವರೇ ನಾವು ಪೊಲೀಸರು ನೀವು ದಂಧೆ ನಡೆಸುತ್ತಿದ್ದೀರಾ? ಗಾಂಜಾ ಮಾರಾಟ ಮಾಡುತ್ತೀದ್ದೀರಾ ಎಂದು ಬೆದರಿಕೆ ಹಾಕಿದ್ದಾರೆ.

ಕೆಲಸಗಾರರ ಮೇಲೆ ಹಲ್ಲೆ ಮಾಡಿ ಅಖ್ತರ್ ಬಳಿ ಸುಮಾರು 2 ಲಕ್ಷ ರೂ. ಹಣವನ್ನು ಇನ್ಫಾರ್ಮರ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಮೊದಲು 20 ಸಾವಿರ ನಗದು ಪಡೆದುಕೊಂಡು ಬಳಿಕ ಬ್ಯಾಂಕ್ ಖಾತೆಯಿಂದ 80 ಸಾವಿರ ರೂ. ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ ಹೋಗುವಾಗ ಬೆದರಿಕೆ ಹಾಕಿ ಎಟಿಎಂ ಕಾರ್ಡ್ ಹಾಗೂ ಪಿನ್ ನಂಬರ್‌ ಪಡೆದುಕೊಂಡಿದ್ದಾರೆ. ಬಳಿಕ ಎಟಿಎಂನಿಂದ 50 ಸಾವಿರ ಹಣ ಡ್ರಾ ಮಾಡಿಕೊಂಡಿದ್ದಾರೆ.

ಮರುದಿನ ವಾಪಸ್‌ ಗುಜುರಿ ಅಂಗಡಿಗೆ ಬಂದಿದ್ದ ಆರೋಪಿಗಳು, ಎಟಿಎಂ ಕಾರ್ಡ್ ಕೊಟ್ಟು ಮತ್ತೆ 50 ಸಾವಿರ ಹಣ ಪಡೆದುಕೊಂಡು ಹೋಗಿದ್ದಾರೆ. ಮತ್ತೊಮ್ಮೆ 50 ಸಾವಿರ ರೂ. ಕೊಡಬೇಕು ಇಲ್ಲದಿದ್ದರೆ ಬೈಕ್ ತೆಗೆದುಕೊಂಡು ಹೋಗುವುದಾಗಿ ಬೆದರಿಕೆ ಹಾಕಿದ್ದಾರೆ. ಇವರ ಕಾಟ ತಾಳಲಾರದೆ ಅಖ್ತಿರ್‌ ವೈಟ್ ಫೀಲ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ನಿವಾಸ್ ಎಂಬಾತನನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಮೂವರು ಆರೋಪಿಗಳಿಗೆ ಹುಡುಕಾಟ ನಡೆಸಿದ್ದಾಗಿ ವೈಟ್ ಫೀಲ್ಡ್ ಡಿಸಿಪಿ ಶಿವಕುಮಾರ್ ಗುಣಾರೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Road Accident : ಮಿಡ್‌ನೈಟ್‌ನಲ್ಲಿ ರಸ್ತೆ ಕಾಣದೆ ಡಿವೈಡರ್‌ಗೆ ಬೈಕ್‌ ಡಿಕ್ಕಿ; ಹಾರಿ ಬಿದ್ದ ಸವಾರ ಸ್ಥಳದಲ್ಲೇ ಸಾವು

Continue Reading

ಹುಬ್ಬಳ್ಳಿ

Neha Murder Case: ಫಯಾಜ್‌ ಜೈಲಲ್ಲಿ ಇರೋವಾಗ ಮೊಬೈಲ್ ಫೋಟೊ ಲೀಕ್ ಆಗಲು ಹೇಗೆ ಸಾಧ್ಯ?

Neha Murder Case: ಆರೋಪಿ ಜೈಲಲ್ಲಿ ಇರೋವಾಗ ಮೊಬೈಲ್ ಫೋಟೋ ಲೀಕ್ ಆಗಲು ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿರುವ ಕೇಂದ್ರ ಪ್ರಲ್ಹಾದ್ ಜೋಶಿ‌, ಕಾಂಗ್ರೆಸ್ ಸರ್ಕಾರದಿಂದಲೇ ಫಯಾಜ್ ಮೊಬೈಲ್‌ನಲ್ಲಿದ್ದ ಫೋಟೊಗಳನ್ನು ಲೀಕ್‌ ಮಾಡಲಾಗಿದೆ ಎಂದು ಆರೋಪ ಮಾಡಿದ್ದಾರೆ. ನೇಹಾ ಹತ್ಯೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ಸರಿಯಾಗಿ ನಿಭಾಯಿಸಲಿಲ್ಲ. ನಿರಂಜನ್ ಕುಟುಂಬದ ಬೇಡಿಕೆಯಂತೆ ತನಿಖೆ ನಡೆಸಬೇಕು ಎಂದು ಒತ್ತಾಯ ಮಾಡಿದ್ದಾರೆ.

VISTARANEWS.COM


on

Neha Murder Case How can a mobile photo be leaked when accused Fayaz is in jail
Koo

ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣದಲ್ಲಿ (Neha Murder Case) ಜೈಲಲ್ಲಿ ಇರುವ ಆರೋಪಿ ಮೊಬೈಲ್‌ನಲ್ಲಿ ಇದ್ದ ಫೋಟೊವನ್ನು ಹರಿಬಿಟ್ಟವರು ಯಾರು? ರಾಜ್ಯ ಸರ್ಕಾರವೇ ಇದನ್ನು ಮಾಡಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಗಂಭೀರ ಆರೋಪ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಂಗಳವಾರ (ಏಪ್ರಿಲ್‌ 23) ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಲ್ಹಾದ್‌ ಜೋಶಿ, ಆರೋಪಿ ಫಯಾಜ್ ಪೊಲೀಸ್ ಕಸ್ಟಡಿಯಲ್ಲಿರುವಾಗ ಯಾರು ಹೇಗೆ ಫೋಟೋ ಲೀಕ್ ಮಾಡಲು ಸಾಧ್ಯ? ಸರ್ಕಾರವೇ ಇದನ್ನು ಮಾಡಿಸಿದೆ ಎಂದು ಆರೋಪಿಸಿದರು.

ಕುಟುಂಬದ ಬೇಡಿಕೆಯಂತೆ ತನಿಖೆ ನಡೆಸಲಿ

ನೇಹಾ ಹತ್ಯೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ಸರಿಯಾಗಿ ನಿಭಾಯಿಸಲಿಲ್ಲ. ಈ ಬಗ್ಗೆ ಆಕೆಯ ತಂದೆ, ಕಾರ್ಪೋರೇಟರ್‌ ನಿರಂಜನ್‌ ಹಿರೇಮಠ ಅವರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಿರಂಜನ್ ಕುಟುಂಬದ ಬೇಡಿಕೆಯಂತೆ ತನಿಖೆ ನಡೆಸಬೇಕು ಎಂದು ಪ್ರಲ್ಹಾದ್‌ ಜೋಶಿ ಒತ್ತಾಯಿಸಿದರು.

Neha Murder Case How can a mobile photo be leaked when accused Fayaz is in jail

ಮತ್ತೊಂದು ಹುಡುಗಿ ಮೇಲೆ ಹಲ್ಲೆ

ನೇಹಾ ಹತ್ಯೆ ಪ್ರಕರಣದ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಮತ್ತೊಂದು ಹುಡುಗಿ ಮೇಲೆ ಹಲ್ಲೆ ನಡೆದಿದೆ. ಮತಾಂತರಕ್ಕೆ ಒಪ್ಪದಿದ್ದಾಗ ಯುವತಿಯನ್ನು ಮನಬಂದಂತೆ ಥಳಿಸಿದ್ದಾರೆ. ಹಿಂದೂ ನೆಲೆಗಟ್ಟಿನ ಹುಬ್ಬಳ್ಳಿಯಲ್ಲೇ ಹೀಗಾದರೆ ಹೇಗೆ? ಹಿಂದೂ ನೆಲೆಗಟ್ಟಿನ, ಹಿಂದೂ ಸಮಾಜ-ಸಂಘಟನೆ ಗಟ್ಟಿಯಾಗಿರುವ ಹುಬ್ಬಳ್ಳಿ ನೆಲದಲ್ಲೇ ಹೀಗಾಗಿರುವಾಗ ಇನ್ನು ರಾಜ್ಯದ ಬೇರೆಡೆ ಸ್ಥಿತಿ ಏನಾಗಿರಬೇಡ? ಎಂದು ಸಚಿವ ಜೋಶಿ ಆತಂಕ ವ್ಯಕ್ತಪಡಿಸಿದರು.

ತುಷ್ಟೀಕರಣ ಮಾಡುವವರನ್ನು ಮೊದಲು ಕಿತ್ತೊಗೆಯಬೇಕು

ತುಷ್ಟೀಕರಣ ರಾಜಕಾರಣ ಮಾಡುವವರನ್ನು ಮೊದಲು ಅಧಿಕಾರದಿಂದ ಕಿತ್ತು ಹಾಕಬೇಕು. ಇಲ್ಲದಿದ್ದರೆ ನಮ್ಮ ಮನೆಗಳಲ್ಲೂ ನಾವು ಹಿಂದೂ ಧರ್ಮ-ಸಂಸ್ಕೃತಿಯನ್ನು ಉಳಿಸಿಕೊಳ್ಳುವುದು ಕಷ್ಟವಾಗುತ್ತದೆ ಎಂದು ಸಚಿವ ಪ್ರಲ್ಹಾದ ಜೋಶಿ ಎಚ್ಚರಿಸಿದರು.

ನೇಹಾ ಕೊಲೆ ಪ್ರಕರಣ ಸಿಐಡಿ ಹೆಗಲಿಗೆ; ಆಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ

ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಅವರ ಭೀಕರ ಕೊಲೆ (Neha Murder Case) ಪ್ರಕರಣದ ಕುರಿತು ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಕೊಲೆ ಆರೋಪಿ ಫಯಾಜ್‌ನನ್ನು (Fayaz) ಎನ್‌ಕೌಂಟರ್‌ ಮಾಡಬೇಕು ಎಂಬುದಾಗಿ ನೇಹಾ ಹಿರೇಮಠ ಅವರ ತಂದೆ ನಿರಂಜನ್‌ ಹಿರೇಮಠ ಅವರು ಆಗ್ರಹಿಸಿದ್ದಾರೆ. ಪ್ರಕರಣದ ಕುರಿತು ಸಿಬಿಐ ತನಿಖೆಯಾಗಬೇಕು ಎಂಬುದಾಗಿ ಬಿಜೆಪಿ ನಾಯಕರು ಆಗ್ರಹಿಸುತ್ತಿದ್ದಾರೆ. ಈಗ ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸೋಮವಾರ (ಏಪ್ರಿಲ್‌ 22) ಶಿವಮೊಗ್ಗದಲ್ಲಿ ಹೇಳಿದ್ದಾರೆ.

“ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುತ್ತೇವೆ. ಪ್ರಕರಣದ ಕುರಿತು ಕೂಲಂಕಷ ತನಿಖೆಯಾಗಲಿ ಎಂಬ ದೃಷ್ಟಿಯಿಂದ ಸಿಐಡಿ ತನಿಖೆಗೆ ವಹಿಸಲು ತೀರ್ಮಾನಿಸಿದ್ದೇವೆ” ಎಂಬುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು.

ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ಲವ್‌ ಜಿಹಾದ್‌ ಆರೋಪವೂ ಕೇಳಿಬಂದಿವೆ. ಅದರಲ್ಲೂ, ನೇಹಾ ಹಿರೇಮಠ ಪ್ರಕರಣವು ಚುನಾವಣೆ ಹೊತ್ತಿನಲ್ಲಿ ರಾಜ್ಯ ಸರ್ಕಾರಕ್ಕೆ ಮುಜುಗರ ತಂದಿದೆ. ಹಾಗಾಗಿ, ರಾಜ್ಯ ಸರ್ಕಾರವು ಕೊಲೆ ಪ್ರಕರಣದ ತನಿಖೆಯ ಹೊಣೆಯನ್ನು ಸಿಐಡಿಗೆ ನೀಡಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

9 ಸಲ ಅಲ್ಲ 14 ಬಾರಿ ಇರಿದು ಕೊಂದ ಫಯಾಜ್

ವಿದ್ಯಾರ್ಥಿನಿ ನೇಹಾಳಿಗೆ ಪಾಗಲ್‌ ಫಯಾಜ್‌ 9 ಬಾರಿ ಅಲ್ಲ, 14 ಬಾರಿ ಇರಿದು ಕೊಲೆ ಮಾಡಿದ್ದಾನೆ ಎಂಬುದಾಗಿ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಬಹಿರಂಗವಾಗಿದೆ. ಇದಕ್ಕೂ ಮೊದಲು, ನೇಹಾ ಹಿರೇಮಠ್‌ಗೆ ಫಯಾಜ್‌ 9 ಬಾರಿ ಚಾಕು ಇರಿದು ಕೊಲೆ ಮಾಡಿದ್ದ ಎಂಬುದಾಗಿ ಹೇಳಲಾಗಿತ್ತು. ಆದರೆ, ಈಗ 14 ಬಾರಿ ಚಾಕು ಇರಿದು ಕೊಲೆ ಮಾಡಿದ್ದಾಣೆ ಎಂದು ಮರಣೋತ್ತರ ವರದಿ ತಿಳಿಸಿದೆ. ಏಪ್ರಿಲ್‌ 19ರಂದು ಬಿವಿಬಿ ಕಾಲೇಜು ಆವರಣದಲ್ಲಿ ಭೀಕರವಾಗಿ ಕೊಲೆ ನಡೆದಿತ್ತು.

ಇದನ್ನೂ ಓದಿ: HD Kumaraswamy: ಜನರ ಕಣ್ಣಿಗೆ ಮಣ್ಣೆರಚಬೇಡಿ; ಮಂಡ್ಯಕ್ಕೆ ಕಾವೇರಿ ಗ್ಯಾರಂಟಿ ಕೊಡಿ: ಕಾಂಗ್ರೆಸ್‌ಗೆ ಎಚ್‌ಡಿಕೆ ಸವಾಲು

ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನೇಹಾ ಹಿರೇಮಠ ಮೇಲೆ ದಾಳಿ ಮಾಡಿದ್ದ ಫಯಾಜ್‌ ಕೇವಲ 30 ಸೆಕೆಂಡ್‌ಗಳಲ್ಲಿ 14 ಬಾರಿ ಇರಿದಿದ್ದಾನೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ನೇಹಾ ದೇಹದ ಮೇಲೆ 14 ಗಾಯಗಳ ಗುರುತು ಪತ್ತೆಯಾಗಿದೆ. ಪ್ರೀತಿ ನಿರಾಕರಿಸಿದ ನೇಹಾಳ ಹೃದಯಕ್ಕೆ ಮೊದಲು ಚಾಕು ಇರಿದ ಆತ, 30 ಸೆಕೆಂಡ್‌ಗಳಲ್ಲೇ 14 ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಕತ್ತಿನ ಬಳಿ ಚಾಕು ಇರಿಯುತ್ತಿದ್ದಂತೆ ರಕ್ತನಾಳ ಕತ್ತರಿಸಿದ್ದು, ಇದರಿಂದ ತೀವ್ರ ರಕ್ತಸ್ರಾವ ಉಂಟಾಗಿದೆ. ಅತಿಯಾದ ರಕ್ತಸ್ರಾವದಿಂದ ನೇಹಾ ಹಿರೇಮಠ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

Continue Reading

ಕರ್ನಾಟಕ

Road Accident: ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು; ಅಪಘಾತದ ಬಳಿಕ ಹೊತ್ತಿ ಉರಿದ ಬಸ್

Road Accident: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಸರ್ಕಲ್ ಬಳಿ ಮಂಗಳವಾರ ಅಪಘಾತದ ನಡೆದಿದೆ. ಹಿಂಬದಿಯಿಂದ ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಇಬ್ಬರು ಸವಾರರು ಮೃತಪಟ್ಟಿದ್ದಾರೆ.

VISTARANEWS.COM


on

Road Accident
Koo

ಹಾಸನ: ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ನಡೆದು, ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ (Road Accident) ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಸರ್ಕಲ್ ಬಳಿ ಮಂಗಳವಾರ ನಡೆದಿದೆ. ಅಪಘಾತದ ನಂತರ ರಸ್ತೆಯಲ್ಲಿ ಕೆ‌ಎಸ್‌ಆರ್‌ಟಿಸಿ ಬಸ್ ಹೊತ್ತಿ ಉರಿದಿದೆ.

ಬೆಂಗಳೂರು ಕಡೆಯಿಂದ ಬರುತ್ತಿದ್ದ ಸಾರಿಗೆ ಬಸ್, ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್‌ನಲ್ಲಿದ್ದವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಮೃತದೇಹಗಳು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಮೃತರ ಗುರುತು ಪತ್ತೆಯಾಗಿಲ್ಲ.

ಇದನ್ನೂ ಓದಿ | Murder Case : ಕೊಲೆಯಾದ ಮಹಿಳೆಗೆ 20 ಹುಡುಗರ ಸಹವಾಸ! ಅವರಿಗೆ ಆಕೆ ಇಟ್ಟಿದ್ದ ಹೆಸರು ಆರೆಂಜ್, ಆ್ಯಪಲ್, ಬನಾನಾ ಇತ್ಯಾದಿ!

ಅಪಘಾತದ ನಂತರ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ರಸ್ತೆಯಲ್ಲೇ ಚಾಲಕ ಬಸ್ ನಿಲ್ಲಿಸಿದ್ದು, ಬಸ್‌ನಿಂದ ಕೆಳಗಿಳಿದು ಪ್ರಯಾಣಿಕರು ಓಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕೆಲಸ ಮಾಡಿದರು. ಬೆಂಕಿಗೆ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೀರು ತರುತ್ತಿದ್ದ ಹನುಮ ಮಾಲಾಧಾರಿಗಳಿಗೆ ಬೊಲೆರೋ ಡಿಕ್ಕಿ, 3 ಸಾವು

bolero hit 3 death road accident raichur

ರಾಯಚೂರು: ಹನುಮ ಮಾಲಾಧಾರಿಗಳಿಗೆ (Hanuman Devotees) ಬೊಲೇರೋ ವಾಹನ (Bolero Hit) ಡಿಕ್ಕಿಯಾಗಿ ಸ್ಥಳದಲ್ಲಿಯೇ (Road Accident) ಮೂರು ಜನ ಸಾವಿಗೀಡಾಗಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ರಾಯಚೂರಿನ ಶಕ್ತಿನಗರದ ಯಾದವ ನಗರ ಕ್ರಾಸ್ ಬಳಿ ಘಟನೆ ನಡೆದಿದೆ. ಹನುಮಮಾಲಾಧಾರಿಗಳು ಹನುಮಜಯಂತಿ ಪ್ರಯುಕ್ತ ಕೃಷ್ಣಾ ನದಿಗೆ ನೀರು ತರಲು ಬಂದಾಗ ಘಟನೆ ನಡೆದಿದೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಯಮಸ್ವರೂಪಿ ಬೊಲೆರೋ ಮಾಲಾಧಾರಿಗಳಿಗೆ ಡಿಕ್ಕಿ ಹೊಡೆದಿದೆ.

ಅಯ್ಯನಗೌಡ (28) ಮಹೇಶ (22), ಉದಯಕುಮಾರ (28) ಮೃತ ದುರ್ದೈವಿಗಳು. ರಮೇಶ ಭೂಷಣ ಎಂಬ ಇಬ್ಬರಿಗೆ ಗಂಭೀರ ಗಾಯವಾಗಿದೆ. ಎಲ್ಲರೂ ರಾಯಚೂರಿನ ಹೆಗಸನಹಳ್ಳಿ ನಿವಾಸಿಗಳು. ಕೋಳಿ ತುಂಬಿಕೊಂಡು ಬರುತ್ತಿದ್ದ ಬುಲೇರೋ ವಾಹನ ಚಾಲಕ ನಿರ್ಲಕ್ಷ್ಯದಿಂದ ಹಾಗೂ ವೇಗವಾಗಿ ಚಲಾಯಿಸಿ ಅಪಘಾತಕ್ಕೆ ಕಾರಣನಾಗಿದ್ದಾನೆ. ಘಟನಾ ಸ್ಥಳಕ್ಕೆ ಶಕ್ತಿ ನಗರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ವಿಮಾನದಲ್ಲಿ ಬಂತು 10 ಅನಕೊಂಡ! ಬ್ಯಾಂಕಾಕ್‌ನಿಂದ ಅಕ್ರಮ ಆಮದು, ಬಂಧನ

ಬೆಂಗಳೂರು: ಬೆಂಗಳೂರು ಏರ್ ಕಸ್ಟಮ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ, ಬ್ಯಾಂಕಾಕ್‌ನಿಂದ ಅಕ್ರಮವಾಗಿ ಕದ್ದು ತರಲಾಗುತ್ತಿದ್ದ 10 ಅನಕೊಂಡಗಳು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿವೆ.

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ತರಲಾಗಿದ್ದ 10 ಹಳದಿ ಆನಕೊಂಡಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬ್ಯಾಂಕಾಕ್‌ನಿಂದ ಪ್ರಯಾಣಿಕರೊಬ್ಬರು ಅಕ್ರಮವಾಗಿ ಲಗೇಜ್ ಬ್ಯಾಗ್‌ನಲ್ಲಿ ಈ ಆನಕೊಂಡಗಳನ್ನು ತಂದಿದ್ದರು. ಏರ್ ಕಸ್ಟಮ್ ಅಧಿಕಾರಿಗಳ ಪರಿಶೀಲನೆ ವೇಳೆ ಇವು ಪತ್ತೆಯಾಗಿವೆ. ಸದ್ಯ ಅನಕೊಂಡಗಳನ್ನು ರಕ್ಷಿಸಿ ಆರೋಪಿಯನ್ನು ಏರ್ ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ. ಹಳದಿ ಬಣ್ಣ ಉಳ್ಳ ಆನಕೊಂಡ ಹಾವುಗಳನ್ನು ರಕ್ಷಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ. ಅರಣ್ಯ ಸಂರಕ್ಷಣಾ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ.

ಹಳದಿ ಅನಕೊಂಡವನ್ನು ಪರಾಗ್ವೆಯನ್ ಅನಕೊಂಡ ಎಂದೂ ಕರೆಯುತ್ತಾರೆ. ಇದು ದಕ್ಷಿಣ ಅಮೆರಿಕಾಕ್ಕೆ ಸೇರಿದ ಬೋವಾ ಜಾತಿಯ ಹಾವು. ಇದು ವಿಶ್ವದ ಅತಿದೊಡ್ಡ ಹಾವುಗಳಲ್ಲಿ ಒಂದು. ಆದರೆ ಅದರ ಹತ್ತಿರದ ಸಂಬಂಧಿ ಹಸಿರು ಅನಕೊಂಡಕ್ಕಿಂತ ಚಿಕ್ಕದು. ಇವುಗಳ ಮರಿಗಳನ್ನು ಕದ್ದು ಸಾಗಿಸುವ ವ್ಯಾಪಕ ಜಾಲ ಅಂತಾರಾಷ್ಟ್ರೀಯವಾಗಿ ಸಕ್ರಿಯವಾಗಿದೆ. ಈ ನಿಟ್ಟಿನಲ್ಲಿ ಕಸ್ಟಮ್‌ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಭಾರತದಲ್ಲಿ ವಿದೇಶದ ವಿಶಿಷ್ಟ ಪ್ರಾಣಿಗಳನ್ನು (Exotic Animals) ಆಮದು ಮಾಡುವುದು ಹಾಗೂ ಸಾಕುವುದನ್ನು ನಿಷೇಧಿಸಲಾಗಿದೆ.

ʻಚುನಾವಣೆ ಪ್ರಚಾರ ಮಾಡಿದ್ರೆ ಹುಷಾರ್!‌ʼ ಎಂದು ಲಾಂಗ್‌ ಝಳಪಿಸಿದ ಜೆಡಿಎಸ್‌ ನಾಯಕ

ಚಿಕ್ಕಬಳ್ಳಾಪುರ: ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ‌ ಚಿಂತಾಮಣಿಯಲ್ಲಿ ಜೆಡಿಎಸ್‌ ನಾಯಕನೊಬ್ಬ ಎದುರಾಳಿಗಳ ಮುಂದೆ ಲಾಂಗ್‌ ಝಳಪಿಸಿ ಆವಾಜ್ ಹಾಕಿದ್ದಾನೆ. ಚುನಾವಣೆ ಪ್ರಚಾರ, ಮತದಾನದಲ್ಲಿ ಪಾಲ್ಗೊಂಡರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.

ಚಿಂತಾಮಣಿ ತಾಲ್ಲೂಕಿನ ಕೋನಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಜೆಡಿಎಸ್ ಮುಖಂಡನಿಂದ ಕಾಂಗ್ರೆಸ್ ಬೆಂಬಲಿಗರಿಗೆ ಬೆದರಿಕೆ ಹಾಕಿದ ಆರೋಪವಿದೆ. ಗ್ರಾಮದಲ್ಲಿ ನಡೆಯುತ್ತಿದ್ದ ಪಲ್ಲಕ್ಕಿ ಉತ್ಸವದಲ್ಲಿ ಲಾಂಗು ಹಿಡಿದು ಬೆದರಿಕೆ ಹಾಕಿದ್ದಾನೆ. ಇದರ ವಿಡಿಯೋ ಸಾಕ್ಷಿ ಲಭ್ಯವಾಗಿದೆ.

ಕೋದಂಡಸ್ವಾಮಿ ಜಾತ್ರಾ ಮಹೋತ್ಸವ ಹಿನ್ನೆಲೆ ನಡೆಯುತಿದ್ದ ಪಲ್ಲಕ್ಕಿ ಉತ್ಸವದ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಕೆ.ವಿ‌ ಶ್ರೀನಿವಾಸರೆಡ್ಡಿ (ಕೆವಿಎಸ್) ಎಂಬಾತ ಲಾಂಗ್‌ ತೋರಿಸಿ ಬೆದರಿಕೆ ಹಾಕಿದ್ದಾನೆ. “ಏ ನನ್ನ ಮಕ್ಳಾ, ಚುನಾವಣಾ ಪ್ರಚಾರ ಅಥವಾ ಮತದಾನದಲ್ಲಿ ಪಾಲ್ಗೊಂಡರೆ‌ ಕತ್ತರಿಸುತ್ತೇನೆ” ಎಂದು ಬೆದರಿಕೆ‌ ಹಾಕಿದ್ದಾನೆ ಎನ್ನಲಾಗಿದೆ. ಎದುರಾಳಿಗಳಾದ ಕಲ್ಯಾಣ್‌ ರೆಡ್ಡಿ ಹಾಗು ಆತನ ಕುಟುಂಬದವರನ್ನು ಅಟ್ಟಾಡಿಸಿ ಬೆದರಿಸಿದ್ದಾನೆ.

ಇದನ್ನೂ ಓದಿ: Car Accident: ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಮಗು ಸಾವು; ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಈ ಕುರಿತು ಶ್ರೀನಿವಾಸರೆಡ್ಡಿ ವಿರುದ್ಧ ಕಲ್ಯಾಣ್ ಕುಮಾರ್ ಪ್ರಾಣಬೆದರಿಕೆ ದೂರು ದಾಖಲಿಸಿದ್ದಾರೆ. ಕಲ್ಯಾಣ್ ಕುಮಾರ್ ಹಾಲಿ ಸಚಿವ ಡಾ. ಎಂ. ಸಿ‌ ಸುಧಾಕರ್ ಬೆಂಬಲಿಗರಾಗಿದ್ದು, ಚಿಂತಾಮಣಿ‌ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Continue Reading

ಬೆಂಗಳೂರು

Murder Case : ಕೊಲೆಯಾದ ಮಹಿಳೆಗೆ 20 ಹುಡುಗರ ಸಹವಾಸ! ಅವರಿಗೆ ಆಕೆ ಇಟ್ಟಿದ್ದ ಹೆಸರು ಆರೆಂಜ್, ಆ್ಯಪಲ್, ಬನಾನಾ ಇತ್ಯಾದಿ!

Murder case : ಅತಿಯಾದ ಲೈಂಗಿಕ ಕ್ರಿಯೆಗೆ ಒತ್ತಾಯಿಸಿಸುತ್ತಿದ್ದ ಮಹಿಳೆಯನ್ನು ಕೊಂದು ಪರಾರಿ ಆಗಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. 20 ಹುಡುಗರ ಸಹವಾಸ ಮಾಡಿದ್ದ ಮಹಿಳೆಯ ಹಿಸ್ವರಿ ಕೇಳಿ ಪೊಲೀಸರೇ ದಂಗಾಗಿದ್ದಾರೆ.

VISTARANEWS.COM


on

By

Murder case In Bengaluur
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ತನ್ನ ಮನೋಕಾಮನೆ ತಣಿಸಲು 48ರ ಮಹಿಳೆ, ಹುಡುಗರನ್ನು ಬಟ್ಟೆ ಬದಲಾಯಿಸುವಂತೆ ಬದಲಿಸುತ್ತಿದ್ದಳು. 20 ಹುಡುಗರ ಸಹವಾಸ ಹೊಂದಿದ್ದ ಆಕೆ ಅವರಿಗೆಲ್ಲ ಆರೆಂಜ್, ಆ್ಯಪಲ್, ಬನಾನಾ ಇತ್ಯಾದಿ ಹೆಸರು ಇಟ್ಟಿದ್ದಳು. ಆದರೆ ಕೊನೆಗೆ ಆಕೆಗೆ ಅದುವೇ ಮುಳುವಾಯಿತು. ಕಳೆದ ಏ. 19ರಂದು ಬೆಂಗಳೂರಿನ ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್‌ನ ಗಣೇಶ ನಗರದಲ್ಲಿ ಒಂಟಿ ಮಹಿಳೆಯ ಬರ್ಬರ (Murder Case) ಹತ್ಯೆಯಾಗಿತ್ತು. ಶೋಭಾ (48) ಎಂಬಾಕೆಯ ಮೃತದೇಹವು ಬೆಡ್‌ ರೂಮಿನಲ್ಲಿ ನಗ್ನ ಸ್ಥಿತಿಯಲ್ಲಿ ಬಿದ್ದಿತ್ತು. ಇದೀಗ ಕೊಲೆ ಪ್ರಕರಣವನ್ನು ಭೇದಿಸಿರುವ ಕೊಡಿಗೇಹಳ್ಳಿ ಪೊಲೀಸರು ಹೇರೋಹಳ್ಳಿ ಮೂಲದ ನವೀನ್ ಎಂಬಾತನನ್ನು ಬಂಧಿಸಿದ್ದಾರೆ. ತನಿಖೆಯಲ್ಲಿ ಮಹಿಳೆಯ ಕಾಮಕಥೆ ಕೇಳಿ ಪೊಲೀಸರೇ ಸುಸ್ತಾಗಿದ್ದಾರೆ.

ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಕೊಟ್ಟಿದ್ದ ಶೋಭಾ, ಕೊಡಿಗೆಹಳ್ಳಿಯಲ್ಲಿ ಮನೆ ಮಾಡಿಕೊಂಡು ಒಂಟಿಯಾಗಿ ವಾಸವಾಗಿದ್ದಳು. ಇತ್ತ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ನವೀನ್‌, ಕಾಲ್ ಗರ್ಲ್‌ಗಾಗಿ ಆ್ಯಪ್‌ಗಳನ್ನು ಬಳಕೆ ಮಾಡುವುದು, ಅವರ ಜತೆ ಚಾಟ್ ಮಾಡುವುದು ಮಾಡುತ್ತಿದ್ದ. ಈ ವೇಳೆ ಶೋಭಾಳ ಪರಿಚಯವಾಗಿತ್ತು. ಮೊದ ಮೊದಲು ನವೀನ್‌ಗೆ ಶೋಭಾಳ ಸಂಗ ಚೆನ್ನಾಗಿಯೇ ಇತ್ತು. ಆದರೆ ಶೋಭಾಳ ವಿಕೃತತೆ ಹೆಚ್ಚಾಗುತ್ತಲೇ ಹೋಗಿತ್ತು. ಪದೇಪದೆ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದಳು. ಕೊಲೆ ನಡೆದ ದಿನವೂ ಶೋಭಾ ಮನೆಗೆ ನವೀನ್ ಬಂದಿದ್ದ. ಏ.19ರಂದು ಇಬ್ಬರು ದೈಹಿಕ ಸಂರ್ಪಕವನ್ನು ಬೆಳೆಸಿದ್ದರು. ಆ ನಂತರ ಶೋಭಾ ಮತ್ತೆ ನವೀನ್‌ಗೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಳು. ಈಕೆ ಅತಿಯಾಗಿ ಸೆಕ್ಸ್‌ಗೆ ಒತ್ತಾಯಿಸಿದ್ದಕ್ಕೆ ಸಿಟ್ಟಾದ ನವೀನ್‌ ಉಸಿರುಗಟ್ಟಿಸಿ ಕೊಂದು ಪರಾರಿ ಆಗಿದ್ದ.

ಫೋಟೋ ತೋರಿಸಿ ಹುಡುಗರಿಗೆ ಬ್ಲಾಕ್‌ಮೇಲ್‌

ಇನ್ನು ಶೋಭಾ ಹಿನ್ನೆಲೆ ಕೇಳಿ ಪೊಲೀಸರೇ ಶಾಕ್ ಆಗಿದ್ದಾರೆ. 48ರ ಶೋಭಾಳಿಗೆ ಯುವಕರೆಂದರೆ ಹುಚ್ಚು ಅಂತೆ. ಒಬ್ಬೊಬ್ಬ ಹುಡುಗರಿಗೂ ಒಂದೊಂದು ಹಣ್ಣಿನ ಹೆಸರಿಟ್ಟಿರುವ ಶೋಭಾ, ನವೀನ್‌ಗೆ ಆ್ಯಪಲ್ ಎಂದು ಹೆಸರಿಟ್ಟಿದ್ದಳಂತೆ ಆ್ಯಪಲ್, ಆರೆಂಜ್, ಬನಾನ ಹೆಸರಿನಲ್ಲಿ ಹುಡುಗರ ಹೆಸರು ಸೇವ್ ಮಾಡಿಕೊಳ್ಳುತ್ತಿದ್ದಳು. ಕಾಲ್‌ ಗರ್ಲ್‌ ಆ್ಯಪ್‌ಗಳಲ್ಲಿಯೂ ಆ್ಯಕ್ಟಿವ್ ಆಗಿದ್ದ ಶೋಭಾ ಸುಮಾರು 20ಕ್ಕೂ ಹೆಚ್ಚು ಹುಡುಗರನ್ನು ಖೆಡ್ಡಾಗೆ ಬೀಳಿಸಿಕೊಂಡಿದ್ದಳು.

ಈಕೆ ಕರೆದಾಗ ಯುವಕರು ಏನಾದರೂ ಬಾರದೆ ಇದ್ದರೆ ಅವರ ಮನೆ ಬಳಿಯೇ ಹೋಗುತ್ತಿದ್ದಳು. ನಂತರ ಕಾರಿನ ಹಾರ್ನ್ ಜೋರಾಗಿ ಹಾಕುತ್ತಿದ್ದಳು. ಇಷ್ಟಕ್ಕೂ ಜಗ್ಗದೆ ಹೋದರೆ ಮನೆಯವರಿಗೆ ಖಾಸಗಿ ಫೋಟೊವನ್ನು ತೋರಿಸುವುದಾಗಿ ಬೆದರಿಕೆ ಹಾಕುತ್ತಿದ್ದಳು. ಅಷ್ಟೆ ಅಲ್ಲದೆ ಅವರೇನಾದರೂ ಬೇರೆಯವರನ್ನು ಮದುವೆ ಆಗಲು ಮುಂದಾದರೆ ಅದನ್ನು ತಪ್ಪಿಸುತ್ತಿದ್ದಳು. ನೀ ಮದುವೆ ಆಗಬಾರದು, ನಾನು ಕರೆದಾಗ ಬರಬೇಕು ಎಂದು ಧಮ್ಕಿ ಹಾಕುತ್ತಿದ್ದಳು. ಹೀಗೆ ನಾಲ್ವರು ಯುವಕರ ಮದುವೆಯನ್ನು ನಿಲ್ಲಿಸಿದ್ದಾಳೆ.

Murder Case
ಕೊಲೆಯಾದ ಶೋಭಾ ಹಾಗೂ ಆರೋಪಿ ನವೀನ್

ಒಳ್ಳೆ ಕುಟುಂಬದಿಂದ ಬಂದಿದ್ದ ನವೀನ್‌ನ ಹಿಂದೆ ಬಿದ್ದ ಶೋಭಾ ಕಾಟ ಕೊಟ್ಟಿದ್ದಳು. ಮನೆಗೆ ಕರೆದಾಗ
ಬಂದಿಲ್ಲ ಎಂದರೆ ಬೆದರಿಕೆ ಹಾಕುತ್ತಿದ್ದಳು ಎನ್ನಲಾಗಿದೆ. ಆಕೆಗೆ ಹೆದರಿ ನವೀನ್‌ ಬಂದು ಹೋಗುತ್ತಿದ್ದ. ಇನ್ನೂ
ಕೊಲೆಯಾದ ದಿನವೂ ನವೀನ್‌ಗೆ ಬ್ಲಾಕ್ ಮೇಲ್ ಮಾಡಿ ಕರೆಸಿಕೊಂಡಿದ್ದಳು. ನವೀನ್‌ ಎಡಗೈಗೆ ಗಾಯವಾಗಿತ್ತು, ಗಾಯದ ಮೇಲೆ ಕೂತು ನೀನು‌ ಮದುವೆ ಆಗಬಾರದು, ಹೀಗೆ ನನ್ನ ಜತೆ ಇರಬೇಕು. ಮದುವೆ ಆದರೆ ಅಲ್ಲೆ ಬಂದು ಗಲಾಟೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಳು. ಇದರಿಂದ ಬೇಸತ್ತ ನವೀನ್‌, ಶೋಭಾಳ ಕತ್ತು ಹಿಸುಕಿ ಕೊಲೆ‌ ಮಾಡಿದ್ದಾಗಿ ವಿಚಾರಣೆ ವೇಳೆ ಹೇಳಿದ್ದಾನೆ. ಸದ್ಯ ಆರೋಪಿಯನ್ನು ಬಂಧಿಸಿರುವ ಕೊಡಿಗೇಹಳ್ಳಿ ಠಾಣೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
jai sriram slogan koppal crime news
ಕ್ರೈಂ26 mins ago

Jai Sriram Slogan: ಜೈ ಶ್ರೀರಾಮ್‌ ಹೇಳಿದ್ದಕ್ಕೆ ಮುಸ್ಲಿಂ ಯುವಕರಿಂದ ಹಲ್ಲೆ; ಇನ್ನೊಂದು ಘಟನೆ

ಪ್ರಮುಖ ಸುದ್ದಿ1 hour ago

Rajkumar Birthday: ಸೋತಾಗ ಧೈರ್ಯ ತುಂಬುವ ಅಣ್ಣಾವ್ರ 7 ಹಾಡುಗಳು!

bhagavanth khuba poster lok sabha election 2024
ಬೀದರ್‌1 hour ago

Lok Sabha Election 2024: ಪೋಸ್ಟರ್‌ ಮೂಲಕ ಸಚಿವ ಭಗವಂತ ಖೂಬಾ ಅವಹೇಳನ, ದೂರು

dashamukha column madness
ಅಂಕಣ2 hours ago

ದಶಮುಖ ಅಂಕಣ: ಮರುಳಿಗೆ ಅರಳುವ ಅರ್ಥಗಳನ್ನು ಹುಡುಕುತ್ತಾ…

bengaluru karaga in darga
ಬೆಂಗಳೂರು2 hours ago

Bengaluru Karaga: ವೈಭವದ ಕರಗ ಮಹೋತ್ಸವ ಸಂಪನ್ನ; ಲಕ್ಷಾಂತರ ಭಕ್ತರ ನಡುವೆ ಮಸ್ತಾನ್ ಸಾಬ್ ದರ್ಗಾಗೆ ಭೇಟಿ

gukesh dommaraju rajamarga column
ಅಂಕಣ2 hours ago

ರಾಜಮಾರ್ಗ ಅಂಕಣ: ವಿಶ್ವವಿಜೇತನಾಗುವ ತವಕದಲ್ಲಿರುವ ಚೆಸ್ ಆಟಗಾರ ದೊಮ್ಮರಾಜು ಗುಕೇಶ್

, Dr. Rajkumar's birthday
ಪ್ರಮುಖ ಸುದ್ದಿ2 hours ago

Rajkumar Birthday : ಇಂದು ಡಾ. ರಾಜ್​ಕುಮಾರ್ ಜನುಮದಿನ; ವರನಟನಿಗೆ ಕನ್ನಡಿಗರ ನಮನ

Karnataka Weather Forecast
ಮಳೆ2 hours ago

Karnataka Weather : ಸುಳಿಗಾಳಿ ಪ್ರಭಾವ; ರಭಸ ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಎಚ್ಚರಿಕೆ

Benefits of Bamboo Shoots
ಆರೋಗ್ಯ3 hours ago

Benefits of Bamboo Shoots: ಮೂಳೆಗಳ ನೋವು, ಮಲಬದ್ಧತೆ ನಿವಾರಣೆಗೆ ಎಳೆಯ ಬಿದಿರು ಸೇವನೆ ಮದ್ದು

Dina Bhavishya
ಭವಿಷ್ಯ4 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌