ಕನ್ನಡ ಸಾಹಿತ್ಯ ಸಮ್ಮೇಳನ | ಸ್ತ್ರೀವಾದವು ಸಮಾಜವನ್ನು ವಿಂಗಡಿಸುತ್ತಿದೆ: ಇದು ಸುಸ್ಥಿರ ಮಾದರಿ ಅಲ್ಲ ಎಂದ ಕ್ಷಮಾ ನರಗುಂದ್‌ - Vistara News

ಕ ಸಾ ಪ

ಕನ್ನಡ ಸಾಹಿತ್ಯ ಸಮ್ಮೇಳನ | ಸ್ತ್ರೀವಾದವು ಸಮಾಜವನ್ನು ವಿಂಗಡಿಸುತ್ತಿದೆ: ಇದು ಸುಸ್ಥಿರ ಮಾದರಿ ಅಲ್ಲ ಎಂದ ಕ್ಷಮಾ ನರಗುಂದ್‌

ಮಹಿಳೆಯರಿಗೆ ಈಗ ಸಾಕಷ್ಟು ಅವಕಾಶಗಳಿದ್ದರೂ ಇನ್ನೂ ಸಾಗಬೇಕಾದ ಮಾರ್ಗ ಬಹಳಷ್ಟಿದೆ ಎನ್ನುವುದರ ಕುರಿತು ಗೋಷ್ಠಿ ಗಮನ ಸೆಳೆಯಿತು.

VISTARANEWS.COM


on

Women conversation in kannada sahitya sammelana
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾವೇರಿ: ಇತ್ತೀಚಿನ ವರ್ಷಗಳಲ್ಲಿ ಮಾತನಾಡುತ್ತಿರುವ ಸ್ತ್ರೀವಾದವು ಸಮಾಜವನ್ನು ಎರಡು ಗುಂಪುಗಳಾಗಿ ವಿಂಗಡಿಸುತ್ತಿದೆ ಹಾಗೂ ಇದು ಸುಸ್ಥಿರವಾದ ಮಾದರಿ ಅಲ್ಲ ಎಂದು ವಕೀಲೆ ಕ್ಷಮಾ ನರಗುಂದ್‌ ಅಭಿಪ್ರಾಯಪಟ್ಟರು.

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ʼಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆʼಯಲ್ಲಿ ಭಾನುವಾರ ಆಯೋಜಿಸಿದ್ದ ʼವರ್ತಮಾನದಲ್ಲಿ ಮಹಿಳೆʼ ಗೋಷ್ಠಿಯ ಆಶಯ ನುಡಿಗಳನ್ನಾಡಿದರು.

ವರ್ತಮಾನ ಹಾಗೂ ಮಹಿಳೆ ಎಂಬ ಕುರಿತು ಯೋಚಿಸಿದಾಗ ಅನೇಕ ವಿಚಾರಗಳು ಹಾಗೂ ಕಾಲಘಟ್ಟಗಳು ಕಣ್ಣಮುಂದೆ ಬರುತ್ತವೆ. ದೇಶವನ್ನು ಮುನ್ನಡೆಸುವವಳು ಮಹಿಳೆಯೋ ಅಥವಾ ಮನೆಯನ್ನು ನಡೆಸುವವಳು ಮಹಿಳೆಯೋ? ಕಾಲೇಜಿಗೆ ಹೋಗುವವಳು ಮಹಿಳೆಯೋ ಅಥವಾ ಉದ್ಯಮ ಮಾಡುವವಳು ಮಹಿಳೆಯೋ ಎಂಬಂತಹ ಅನೇಕ ಪ್ರಶ್ನೆಗಳು ಬರುತ್ತವೆ.

ಒಂದು ಕಡೆ ಮಹಿಳೆ ಉತ್ತುಂಗಕ್ಕೆ ಏರುತ್ತಿರುವಾಗಲೇ ಅವಳಿಗೆ ಅನೇಕ ಸಮಸ್ಯೆಗಳೂ ಇವೆ. ಮಹಿಳೆಯರ ಏಳಿಗೆಗೆ ಸಮಾಜ ಅನೇಕ ಕಾರ್ಯ ಮಾಡಿದೆ. ಮಹಿಳಾ ಸಾಕ್ಷರತೆ ಪ್ರಮಾಣ ಹೆಚ್ಚಾಗಿದೆ. ಆದರೆ ಒಟ್ಟಾರೆ ಸಾಕ್ಷರತೆ ಪ್ರಮಾಣ ಕಡಿಮೆ ಇದೆ. ಚುನಾಯಿತ ಸಂಸ್ಥೆಗಳಲ್ಲಿ ಮೀಸಲಾತಿ ನಂತರ ಅನೇಕ ಮಹಿಳೆಯರು ಅವಕಾಶ ಪಡೆದರು. ಒಟ್ಟಾರೆ ನೋಡಿದಾಗ ಪ್ರಾತಿನಿಧಿತ್ವ ಕಡಿಮೆ ಇದೆ. ಆದರೂ, ಅಭಿವೃದ್ಧಿ ಕಡೆಗೆ ಸಾಗುತ್ತಿದ್ದೇವೆ ಎಂದು ಹೇಳಬಹುದು.

ಮಹಿಳಾ ಪರ ಕಾನೂನುಗಳಿಂದ ಉಪಯೋಗ ಆಗಿದೆ. ಇಂದಿನ ವರ್ತಮಾನದಲ್ಲಿ ಮಹಿಳೆಯೇ ಸಮಸ್ಯೆ ಆಗುತ್ತಿರುವುದು ಸತ್ಯ. ಆದರೆ ಅದು ಒಟ್ಟಾರೆ ಸಮಾಜದಿಂದ ಸಮಸ್ಯೆ ಆಗುತ್ತಿದೆಯೇ ಅಥವಾ ಗಂಡಸರಿಂದ ಆಗುತ್ತಿದೆಯೇ ಎಂದು ಪ್ರಶ್ನೆ ಕೇಳಬೇಕು. ನಾವು ಮಹಿಳೆಯರು ಗುಂಪು ಮಾಡಿಕೊಂಡು ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ ಎಂದು ಹೇಳುವುದು ಭ್ರಮೆ. ಇಲ್ಲಿ ಪರಸ್ಪರ ಅವಲಂಬನೆ ಅನಿವಾರ್ಯ. ನಮ್ಮ ಹಕ್ಕುಗಳನ್ನು ಕೇಳುವುದಕ್ಕಿಂತಲೂ, ಅಸ್ಮಿತೆಯನ್ನು ಉಳಿಸಿಕೊಳ್ಳುವುದು ಮುಖ್ಯ. ಕೇವಲ ಮಹಿಳೆಯರಿರುವ ಸಮಾಜದಲ್ಲಿ ಮಹಿಳೆಗೆ ಯಾವುದೇ ಸಮಸ್ಯೆ ಇರುವುದಿಲ್ಲವೇ? ಇಂದಿನ ಸ್ತ್ರೀವಾದದಲ್ಲಿ ಇದಕ್ಕೆ ಉತ್ತರ ಇಲ್ಲ. ಇಂದಿನ ಸ್ತ್ರೀವಾದವು ಸಮಾಜವನ್ನು ಎರಡು ಗುಂಪುಗಳನ್ನಾಗಿ ನೋಡುತ್ತಿದೆ. ಈ ಮಾದರಿಯು ಸುಸ್ಥಿರವಾದದ್ದಲ್ಲ ಎಂದರು.

ಒಂದು ಗುಂಪಿಗೆ ಮಾತ್ರ ಸ್ವಾವಲಂಬನೆ ಬರುವುದು ಸರಿಯಲ್ಲ. ಪರಸ್ಪರ ಅವಲಂಬನೆ, ಪೂರಕವಾಗಿದ್ದಾಗ ಮಾತ್ರ ಸಮಾಜವನ್ನು ಮುನ್ನಡೆಸಬಹುದು ಎನ್ನುವುದು ಎಲ್ಲರೂ ಒಪ್ಪಬಹುದಾದ ವಿಚಾರ. ಸಮಾಜ ಒಂದು ಪಕ್ಷಿ, ಗಂಡು-ಹೆಣ್ಣು ಅದರ ಎರಡು ರೆಕ್ಕೆಗಳು ಎಂದು ಸ್ವಾಮಿ ವಿವೇಕಾನಂದರು ಹೇಳುತ್ತಾರೆ. ಸಮಸ್ಯೆಯನ್ನು ಮಾತ್ರ ಗಮನದಲ್ಲಿ ಇರಿಸಿಕೊಂಡು ಹೋದರೆ, ಆ ಸಮಸ್ಯೆಯ ಸ್ವರೂಪ ಬದಲಾದಾಗ, ರೂಪಿಸಿದ ಎಲ್ಲ ಯೋಜನೆಗಳೂ ನಿಷ್ಪ್ರಯೋಜಕವಾಗುತ್ತವೆ. ಸಮಸ್ಯೆಯನ್ನು ಮಾತ್ರ ಬಗೆಹರಿಸಲು ವರದಕ್ಷಿಣೆ ನಿಷೇಧ ಕಾನೂನು ರೂಪಿಸಿದರೂ ಸಮಾಜದಲ್ಲಿ ಮಾನಸಿಕವಾಗಿ ಯಾವುದೇ ಬದಲಾವಣೆ ಮಾಡಲು ಆಗಲಿಲ್ಲ ಎಂದರು.

ಗ್ರಾಮೀಣ ಮಹಿಳೆಯರ ಸಾಧನೆ ಕುರಿತು ಡಾ. ಈ. ವೀಣಾ ಮಾತನಾಡಿ, ಮಹಿಳೆ ಎಂದರೆ ದ್ವಿತೀಯ ದರ್ಜೆಯ ಪ್ರಭೆ ಎಂದು ಗುರುತಿಸುವ ರೀತಿ ಇದೆ. ಅವರು ಸಾಕಷ್ಟು ಅವಕಾಶಗಳಿಂದ ವಂಚಿತರಾಗಿದ್ದಾರೆ, ಪುರುಷರಿಗೆ ಹೋಲಿಸಿದರೆ ಪ್ರಾತಿನಿಧ್ಯ ಕಡಿಮೆ ಇದೆ ಎನ್ನುವುದು ಆ ಮಾತು. ವೃಕ್ಷಮಾತೆ ತುಳಸಿ ಗೌಡ, ಸಾಲುಮರದ ತಿಮ್ಮಕ್ಕ, ಮಹಾತಾಯಿ ಸೂಲಗಿತ್ತಿ ನರಸಮ್ಮ ಸೇರಿ ಅನೇಕ ಕ್ಷೇತ್ರಗಳಲ್ಲಿ ಮಹಿಳೆಯರು ಸಾಧನೆ ಮಾಡಿದ್ದಾರೆ. ಮಹಿಳೆಯರನ್ನು ಗುರುತಿಸಬೇಕಿದೆ. ಮಹಿಳೆ ಅವಕಾಶ ವಂಚಿತೆ, ಆಕೆಯನ್ನು ಗುರುತಿಸಬೇಕು ಎಂಬ ಪ್ರವೃತ್ತಿಯು ಕಂಡುಬಂದಿದೆ. ಅನೇಕ ದೇಶಗಳಲ್ಲಿ ಮಹಿಳೆಯರಿಗೆ ಮತದಾನದ ಹಕ್ಕು ನೀಡಬೇಕೊ ಬೇಡವೋ ಎಂಬ ಚಿಂತನೆ ನಡೆಯುತ್ತಿದ್ದರೂ, ಭಾರತದಲ್ಲಿ ಅಂತಹ ಚರ್ಚೆಗೆ ಆಸ್ಪದ ಇಲ್ಲದೆ ಅವಕಾಶ ನೀಡಲಾಯಿತು. ಹಾಗಾಗಿ ಪಾಶ್ಚಿಮಾತ್ಯ ದೃಷ್ಟಿಕೋನದಲ್ಲಿ ನಮ್ಮ ದೇಶದ ಸಮಸ್ಯೆಯನ್ನು ನೋಡಬಾರದು ಎಂದರು.

ಸಾಹಿತ್ಯ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆಗಳು ಕುರಿತು ಮಾತನಾಡಿದ ಡಾ. ಕವಿತಾ ಕುಸಗಲ್ಲು, ನೆಸ್ಟ್‌ ಆಫ್‌ ಸಿಂಗಿಂಗ್‌ ಬರ್ಡ್ಸ್‌ ಎಂದು ಹೆಸರಾಗಿದ್ದ ಶೇಕ್ಸ್‌ಪಿಯರ್‌ ಕಾಲದಲ್ಲಿ, ಪಂಪ-ರನ್ನ-ಜನ್ನರ ಕಾಲದಲ್ಲಿ, ವಚನ ಆಂದೋಲನಕ್ಕೂ ಮುಂಚೆ ಬಂದ ಜಗತ್ತಿನ ಶ್ರೇಷ್ಠ ಕಾವ್ಯಗಳಲ್ಲಿ ಮಹಿಳೆ ಸಾಹಿತಿ ಸಿಗುವುದಿಲ್ಲ. ಮಹಿಳೆಯರು ಬರೆಯಲೇ ಇಲ್ಲ ಎಂದುಕೊಳ್ಳಲು ಆಗುವುದಿಲ್ಲ. ಈ ಕುರಿತು ವಿಚಾರ ಮಾಡಬೇಕು. ಕನ್ನಡದ ಸಾಹಿತ್ಯದಲ್ಲಿ ಬಹುದೊಡ್ಡ ಹೆಸರು ಮಾಡಿದವರು, ಸಾಧನೆ ಮಾಡಿದ ಅನೇಕರು ಸಾಂಪ್ರದಾಯಿಕ ಹಿನ್ನೆಲೆಯಿಂದಲೇ ಬಂದವರು. ಬರವಣಿಗೆ ಆರಂಭವಾಗುವ ಮುನ್ನ ಜನಪದ ಸಾಹಿತ್ಯವನ್ನು ನೋಡಿದರೆ 90%ಕ್ಕಿಂತ ಹೆಚ್ಚು ಮಹಿಳಾ ಸಾಹಿತ್ಯವೇ ಇದೆ. ಆದರೆ ಬರವಣಿಗೆ ಸಾಹಿತ್ಯದಲ್ಲಿ ಹಿಂದೆ ಹಿಂದೆ ಹೋದಾಗ ಮಹಿಳೆ ಏಕೆ ಬರುವುದಿಲ್ಲ ಎನ್ನುವುದು ಪ್ರಶ್ನೆ ಎಂದರು.

ಗೋಷ್ಠಿಯ ಅಧ್ಯಕ್ಷ ಸ್ಥಾನ ವಹಿಸಿದ್ದ. ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿವಿ ಕುಲಪತಿ ಡಾ. ಬಿ.ಕೆ. ತುಳಸಿಮಾಲಾ ಮಾತನಾಡಿ, ಮಹಿಳೆಯರ ಭಾಗವಹಿಸುವಿಕೆ ಈಗ ಹೆಚ್ಚಾಗುತ್ತಿದೆ. ಅದಷ್ಟೇ ಸಾಲದು. ಮಹಿಳೆಗೆ ಅಗತ್ಯ ಅವಕಾಶ, ಕೌಶಲ್ಯಗಳನ್ನೂ ನೀಡಬೇಕು. ನಮ್ಮ ಎಲ್ಲ ಅಭಿವೃದ್ಧಿ ಮಾದರಿಯಲ್ಲಿ ಮಹಿಳೆಯರನ್ನು ಒಳಗೊಳ್ಳಬೇಕು. 50% ಇರುವ ಮಹಿಳೆಯರನ್ನು ಹೊರತುಪಡಿಸಿ ಸುಸ್ಥಿರ ಅಭಿವೃದ್ಧಿ ಸಾಧ್ಯವಿಲ್ಲ. ಇದರಿಂದ ಒಟ್ಟಾರೆ ಸಮಾಜ ಹಾಗೂ ಗ್ರಾಮೀಣ ಅಭಿವೃದ್ಧಿಗೂ ಸಹಕಾರವಾಗುತ್ತದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಹಾಗೂ ನಾಯಕತ್ವ ಸ್ಥಾನಗಳಲ್ಲಿಯೂ ಮಹಿಳೆಯರನ್ನು ಒಳಗೊಳ್ಳುವ ಕೆಲಸಗಳು ಆಗಬೇಕು ಎಂದರು.

ಇದನ್ನೂ ಓದಿ | ಕನ್ನಡ ಸಾಹಿತ್ಯ ಸಮ್ಮೇಳನ | ಏಲಕ್ಕಿ ನಾಡಿನಿಂದ ಸಕ್ಕರೆ ನಾಡಿಗೆ ಸವಿನುಡಿ ತೇರು: ಮಂಡ್ಯದಲ್ಲಿ 87ನೇ ಸಾಹಿತ್ಯ ಸಮ್ಮೇಳನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ ಸಾ ಪ

ಕನ್ನಡಿಗರು ಯುದ್ಧ ಟ್ಯಾಂಕರ್ ಇದ್ದಂಗೆ, ಎದುರಿಗೆ ಬಂದ್ರೆ ಅಪ್ಪಚ್ಚಿ: ಟಿ.ಎ. ನಾರಾಯಣ ಗೌಡ

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕರವೇ ಸಂಸ್ಥಾಪಕ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡರಿಗೆ ಮಂಗಳವಾರ ಸಂಜೆ ಪ್ರತಿಷ್ಠಿತ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼ ಪ್ರದಾನ ಮಾಡಲಾಯಿತು.

VISTARANEWS.COM


on

Kuvempu Sirigannada Endowment Award to TA Narayana Gowda
Koo

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡ (TA Narayana Gowda) ಅವರಿಗೆ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ‘ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ’ದಲ್ಲಿ ಮಂಗಳವಾರ ಪ್ರತಿಷ್ಠಿತ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼ ಪ್ರದಾನ ಮಾಡಲಾಯಿತು.

ಈ ವೇಳೆ ಮಾತನಾಡಿದ ಕರವೇ ಸಂಸ್ಥಾಪಕ ಅಧ್ಯಕ್ಷ ಟಿ.ಎ. ನಾರಾಯಣ ಗೌಡ ಅವರು, ನಾನು ಹೋರಾಟದ ಹಾದಿಯಲ್ಲಿ ಬರಲು ರಾಷ್ಟ್ರಕವಿ ಕುವೆಂಪು ಅವರ ಸಾಹಿತ್ಯ ಹಾಗೂ ಡಾ. ರಾಜಕುಮಾರ್‌ ಅವರ ಚಿತ್ರಗಳು ಕಾರಣ. ಕುವೆಂಪು ಅವರು ಕರ್ನಾಟಕ ರಕ್ಷಣಾ ವೇದಿಕೆಯ ಬಹುದೊಡ್ಡ ಆದರ್ಶವಾಗಿದ್ದಾರೆ. ಅವರ ಸಾಹಿತ್ಯ, ವಿಚಾರಧಾರೆಗಳನ್ನು ನಮ್ಮ ಕಾರ್ಯಕರ್ತರೊಂದಿಗೆ ಹಂಚಿಕೊಳ್ಳುತ್ತೇವೆ ಎಂದು ತಿಳಿಸಿದರು.

ಕನ್ನಡದ ಶತ್ರುಗಳಿಗೆ ಒಂದು ಮಾತು ಹೇಳುತ್ತಿರುತ್ತೇನೆ. ಕನ್ನಡದ ನಾಡು, ನುಡಿ ವಿಚಾರದಲ್ಲಿ ನಾನು ಯುದ್ಧ ಟ್ಯಾಂಕರ್‌ ಇದ್ದ ಹಾಗೆ, ಅಡ್ಡಿ ಬರಬೇಡಿ ಅಪ್ಪಚ್ಚಿ ಆಗಿಬಿಡುತ್ತೀರಾ ಎಂದು ಕುವೆಂಪು ಅವರು ಹೇಳುತ್ತಿದ್ದರು. ಕುವೆಂಪು ಪದ್ಯ ʼಮನುಜ ಮತ ವಿಶ್ವಪಥʼ ನನ್ನ ಅಚ್ಚುಮೆಚ್ಚಿನದ್ದಾಗಿದೆ. ಸಿಲುಕದಿರಿ ಮತವೆಂಬ ಮೋಹದಜ್ಞಾನಕ್ಕೆ, ಮತಿಯಿಂದ ದುಡಿಯಿರೈ ಲೋಕಹಿತಕೆ, ಆ ಮತದ ಈ ಮತದ ಹಳೆ ಮತದ ಸಹವಾಸ ಸಾಕಿನ್ನು ಸೇರಿರೈ ಮನುಜ ಮತಕೆ; ಓ ಬನ್ನಿ ಸೋದರರೇ ವಿಶ್ವಪಥಕ್ಕೆ! ಎಂಬ ಅವರ ಪದ್ಯದ ನುಡಿಗಳು ನನಗೆ ಬಹಳ ಇಷ್ಟ. ಇಂತಹ ರೋಮಾಂಚನಕಾರಿ ಪದ್ಯಗಳ ನುಡಿಗಳು ನನ್ನಂತಹವರಿಗೆ ಹೋರಾಟದ ಕಿಚ್ಚು ತುಂಬಿವೆ ಎಂದು ಹೇಳಿದರು.

ದಲಿತ, ರೈತ, ಕಮ್ಯುನಿಸ್ಟ್‌ ಸೇರಿ ಎಲ್ಲ ಚಳವಳಿಗೆ ಆದರ್ಶ ಎಂದು ಯಾರಾದರೂ ಇದ್ದರೆ ಅದು ಕುವೆಂಪು ಅವರು ಮಾತ್ರ. ಅವರು ಎಲ್ಲ ಹೋರಾಟಗಾರರಿಗೆ ಸ್ಫೂರ್ತಿ. ಕನ್ನಡಕ್ಕೆ ಪ್ರಥಮ ಜ್ಞಾನಪೀಠ ಪ್ರಶಸ್ತಿ ದೊರಕಿಸಿಕೊಟ್ಟ ಅಂತಹ ಮಹಾಕವಿಯ ಹೆಸರಿನ ಪ್ರಶಸ್ತಿಯನ್ನು ನಾನು ಸ್ವೀಕರಿಸಿರುವುದು ನನ್ನ ಜೀವನದಲ್ಲಿ ಎಂದಿಗೂ ಮರೆಯಲಾರಂದತಹ, ಸುವರ್ಣ ಅಕ್ಷರಗಳಲ್ಲಿ ಬರೆದಿಡುವ ಗಳಿಗೆಯಾಗಿದೆ. ಈ ಪ್ರಶಸ್ತಿಯನ್ನು ನನಗೆ ಜನ್ಮ ಕೊಟ್ಟ ತಂದೆ-ತಾಯಿ ಅರ್ಪಿಸುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ | ಮಾನವೀಯ ಮೌಲ್ಯದ ಮೇರು ಸಂತ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ

ನಾರಾಯಣ ಗೌಡ ಅವರಿಗೆ ಅವರೇ ಹೋಲಿಕೆ: ಕೋಡಿಮಠ ಶ್ರೀ

ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಮಾತನಾಡಿ, ನಮ್ಮ ಕನ್ನಡನಾಡಿನಲ್ಲಿ ಅನೇಕ ಸಾಹಿತಿಗಳು, ವೀರರು, ಶೂರರು, ಹೋರಾಟಗಾರರು, ಧೀರರು ಆಗಿ ಹೋಗಿದ್ದಾರೆ. ಅಂತಹವರಲ್ಲಿ ನಮ್ಮ ನಾರಾಯಣ ಗೌಡರು ಕೂಡ ಒಬ್ಬರು. ಅವರ ತಂದೆಯವರು ಕೂಡ ಬಹಳ ವಿನಯವಂತರು. ಅದೇ ಗುಣ ನಮ್ಮ ನಾರಾಯಣ ಗೌಡರಲ್ಲಿದೆ. ಆದರೆ, ಸ್ವಲ್ಪ ವ್ಯತ್ಯಾಸವಾದರೆ ಆತ ಹುಲಿಯಾಗುತ್ತಾನೆ. ನಮ್ಮ ದೃಷ್ಟಿಯಲ್ಲಿ ವಾರಿಧಿ ವಾರಿಧಿಯೇ, ಆಕಾಶ, ಆಕಾಶವೇ. ಸಮುದ್ರ ಮತ್ತು ಆಕಾಶವನ್ನು ಹೋಲಿಕೆ ಮಾಡಲು ಆಗಲ್ಲ. ಹೀಗಾಗಿ ನಾರಾಯಣ ಗೌಡ ಅವರಿಗೆ ಅವರೇ ಹೋಲಿಕೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕನ್ನಡ ನೆಲ, ಜಲಕ್ಕಾಗಿ ಹೋರಾಟ ಮಾಡಿದ ಡಾ. ರಾಜಕುಮಾರ್‌ ಅವರನ್ನು ಬಿಟ್ಟರೆ ನಮ್ಮ ನಾರಾಯಣಗೌಡರೇ ಅಂತಹ ಸ್ಥಾನ ಪಡೆದಿದ್ದಾರೆ. ಇನ್ನು ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ತಾವು ಮಾಡಿದ ಒಳ್ಳೆ ಕೆಲಸಗಳನ್ನು ಮುಂದುವರಿಸಲು ನಾರಾಯಣಗೌಡರ ರೂಪದಲ್ಲಿ ಕೆಂಪೇಗೌಡರೇ ಬಂದಿದ್ದಾರೆ. ನಾಡು, ನುಡಿ, ಜಲದ ರಕ್ಷಣೆಗೆ ನಾರಾಯಣ ಗೌಡರು ಕಟಿಬದ್ಧರಾಗಿದ್ದು, ಅವರಿಗೆ ಎಲ್ಲ ದೈವಗಳ ಆಶೀರ್ವಾದ ಇರುತ್ತದೆ ತಿಳಿಸಿದರು.

ಕಸಾಪ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹುಕ್ಕೇರಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ವಿದ್ವಾಂಸರಾದ ಪಂಪ ನಾಗರಾಜಯ್ಯ, ನ್ಯಾಯಮೂರ್ತಿ ಅರಳಿ ನಾಗರಾಜ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಟಿ.ಎ. ನಾರಾಯಣ ಗೌಡರು ಸ್ವೀಕರಿಸಿದ ಮೊಟ್ಟ ಮೊದಲ ಪ್ರಶಸ್ತಿ

ಕನ್ನಡಕ್ಕೆ ಸದಾ ಮಿಡಿವ ಚೈತನ್ಯದ ಚಿಲುಮೆ, ನಾಡಿನ ಅಪರೂಪದ ಕನ್ನಡ ಸೇನಾನಿ, ಕನ್ನಡ ನೆಲ, ಜಲ, ಕನ್ನಡಿಗರ ನೆಮ್ಮದಿಯ ಬದುಕಿಗಾಗಿ ಕಳೆದ 35 ವರ್ಷಗಳಿಂದ ಹೋರಾಟ ನಡೆಸುತ್ತಿರುವ ಟಿ.ಎ. ನಾರಾಯಣ ಗೌಡರು ಇದುವರೆಗೂ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಯಾವುದೇ ಪುರಸ್ಕಾರವನ್ನೂ ಸ್ವೀಕರಿಸಿಲ್ಲ. ಆದರೆ, ಕನ್ನಡ ಸಾಹಿತ್ಯ ಪರಿಷತ್ತಿನ ಮೇಲಿನ ಅಭಿಮಾನ ಮತ್ತು ಕುವೆಂಪು ಅವರ ಸಾಹಿತ್ಯ, ವರನಟ ರಾಜಕುಮಾರ್ ಅವರ ಸಿನಿಮಾಗಳ ಪ್ರೇರಣೆಯಿಂದ ಹೋರಾಟಕ್ಕೆ ಬಂದ ಹಿನ್ನೆಲೆ ತಮ್ಮ ಜೀವನದ ಮೊಟ್ಟ ಮೊದಲ ಪ್ರಶಸ್ತಿಯಾಗಿ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

Continue Reading

ಕ ಸಾ ಪ

ಡಿ. 26ರಂದು ಟಿ.ಎ. ನಾರಾಯಣ ಗೌಡರಿಗೆ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼ ಪ್ರದಾನ

ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಡಿ.26 ರಂದು ಸಂಜೆ 5.30ಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡ ಅವರಿಗೆ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

VISTARANEWS.COM


on

TA Narayana Gowda
Koo

ಬೆಂಗಳೂರು: ನಾಡಿನ ಅಪರೂಪದ ಕನ್ನಡ ಸೇನಾನಿ, ಕನ್ನಡಕ್ಕೆ ಸದಾ ಮಿಡಿವ ಚೈತನ್ಯದ ಚಿಲುಮೆ, ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡ (TA Narayana Gowda) ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼಗೆ ಆಯ್ಕೆಯಾಗಿದ್ದಾರೆ. ಇವರಿಗೆ ಡಿಸೆಂಬರ್ 26 ರಂದು ಸಂಜೆ 5.30ಕ್ಕೆ ನಗರದ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ‘ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ’ದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಕನ್ನಡ ನೆಲ, ಜಲ, ಕನ್ನಡಿಗರ ನೆಮ್ಮದಿಯ ಬದುಕಿಗಾಗಿ ಕಳೆದ 35 ವರ್ಷಗಳಿಂದ ಹೋರಾಟ ನಡೆಸುತ್ತಿರುವ ಟಿ.ಎ. ನಾರಾಯಣ ಗೌಡರು ಇದುವರೆಗೂ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಯಾವುದೇ ಪುರಸ್ಕಾರವನ್ನೂ ಸ್ವೀಕರಿಸಿಲ್ಲ. ಆದರೆ, ಕನ್ನಡ ಸಾಹಿತ್ಯ ಪರಿಷತ್ತಿನ ಮೇಲಿನ ಅಭಿಮಾನ ಮತ್ತು ಕುವೆಂಪು ಅವರ ಸಾಹಿತ್ಯ, ವರನಟ ರಾಜಕುಮಾರ್ ಅವರ ಸಿನಿಮಾಗಳ ಪ್ರೇರಣೆಯಿಂದ ಹೋರಾಟಕ್ಕೆ ಬಂದ ಹಿನ್ನೆಲೆಯಿಂದ ತಮ್ಮ ಜೀವನದ ಮೊಟ್ಟ ಮೊದಲ ಪ್ರಶಸ್ತಿಯಾಗಿ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಯನ್ನು ಸ್ವೀಕರಿಸುತ್ತಿದ್ದಾರೆ.

ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿಯವರು ವಹಿಸಲಿದ್ದು, ಡಾ.ಹಂಪನಾಗರಾಜಯ್ಯನವರು ಉದ್ಘಾಟಿಸಲಿದ್ದಾರೆ. ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ನ್ಯಾಯಮೂರ್ತಿ ಅರಳಿ ನಾಗರಾಜ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡರು ಅಭಿನಂದನಾ ನುಡಿಗಳನ್ನು ಆಡಲಿದ್ದಾರೆ. ಕೋಡಿ ಮಠದ ಶ್ರೀಗಳಾದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿ ಮತ್ತು ಹುಕ್ಕೇರಿಯ ಶ್ರೀ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಕರ್ನಾಟಕ ಜನಪದ ಸೇವಾಟ್ರಸ್ಟ್‌ ಸಹಕಾರದೊಂದಿಗೆ ಈ ಕಾರ್ಯಕ್ರಮವನ್ನು ಕಸಾಪ ಹಮ್ಮಿಕೊಂಡಿದೆ.

ಇದನ್ನೂ ಓದಿ | Raja Marga Column : ಸಾವಿರದ ಹಾಡುಗಳ ಅಮರ ಕವಿ ಶೈಲೇಂದ್ರ; ಎಲ್ಲ 900 ಹಾಡು ಸೂಪರ್‌ಹಿಟ್

ಕಾರ್ಯಕ್ರಮಕ್ಕೂ ಮುನ್ನಾ ಸಂಜೆ 4:30ಕ್ಕೆ ಖ್ಯಾತ ಗಾಯಕರಾದ ಡಾ.ಶಮಿತಾ ಮಲ್ನಾಡ್ ಮತ್ತು ಆನಂದ ಮಾದಲಗೆರೆಯವರ ತಂಡದಿಂದ ಗೀತ ಗಾಯನ ಕಾರ್ಯಕ್ರಮವಿದ್ದು, ದಿವ್ಯಾ ಆಲೂರು ಜೊತೆಯಲ್ಲಿ ಟಿ. ತಿಮ್ಮೇಶ್ ಈ ಕಾರ್ಯಕ್ರಮದ ನಿರೂಪಣೆಯನ್ನು ಮಾಡಲಿದ್ದಾರೆ. ಕಸಾಪ ಗೌರವ ಕಾರ್ಯದರ್ಶಿಗಳಾದ ನೇ ಭ ರಾಮಲಿಂಗಶೆಟ್ಟಿ ಮತ್ತು ಡಾ ಪದ್ಮಿನಿ ನಾಗರಾಜು ಹಾಗೂ ಕೋಶಾಧ್ಯಕ್ಷರಾದ ಬಿ. ಎಂ. ಪಟೇಲ್ ಪಾಂಡು ಮತ್ತಿತರರು ಉಪಸ್ಥಿತರಿರಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ ಸಾ ಪ

HD Deve Gowda: ಎಚ್.ಡಿ. ದೇವೇಗೌಡರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ

HD Deve Gowda: ಬೆಂಗಳೂರಿನ ನಿವಾಸದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರಿಗೆ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

VISTARANEWS.COM


on

Ex PM HD Devegowda
Koo

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ (HD Deve Gowda) ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಬಹುಮುಖ್ಯ ದತ್ತಿ ಪ್ರಶಸ್ತಿಯಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಯನ್ನು ಸೋಮವಾರ ಪ್ರದಾನ ಮಾಡಲಾಯಿತು. ಮಾಜಿ ಪ್ರಧಾನಿಗಳ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ ಹಾಗೂ ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಈ ವೇಳೆ ಮಾತನಾಡಿದ ನ್ಯಾ. ಎಂ.ಎನ್. ವೆಂಕಟಾಚಲಯ್ಯ ಅವರು, ನಾಡಿನ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ ಮೈಸೂರು ಸಂಸ್ಥಾನದ ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನ ಪ್ರಶಸ್ತಿ ದೇಶದ ಮೊದಲ ಕನ್ನಡಿಗ ಪ್ರಧಾನಮಂತ್ರಿ, ರಾಜಕೀಯ ಮುತ್ಸದ್ಧಿ ಮತ್ತು ದೂರದೃಷ್ಟಿಯ ಆಡಳಿತಗಾರ ದೇವೇಗೌಡರಿಗೆ ಸಂದಿರುವುದು ನನಗೆ ಬಹಳ ಸಂತಸ ಉಂಟು ಮಾಡಿದೆ. ಅತ್ಯುನ್ನತ ಸಾಧಕರಿಗೆ ಪ್ರಶಸ್ತಿ ಸಂದಿದೆ ಎಂದು ಹೇಳಿದರು.

ನಾಡೋಜ ಮಹೇಶ್ ಜೋಶಿ ಅವರು ಮಾತನಾಡಿ, ರಾಜ್ಯ, ದೇಶಕ್ಕೆ ಮಹಾನ್ ಕೊಡುಗೆ ನೀಡಿದ ದೇವೇಗೌಡರಿಗೆ ನಾಲ್ವಡಿ ಪ್ರಶಸ್ತಿ ನೀಡುತ್ತಿರುವುದು ಆ ಪ್ರಶಸ್ತಿಯ ಗೌರವವನ್ನು ಮತ್ತಷ್ಟು ಹೆಚ್ಚಿಸಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಅಭಿವೃದ್ಧಿಯ ಹರಿಕಾರರಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅಜರಾಮರರಾದರೆ, ದೇವೇಗೌಡರು ಸ್ವಾತಂತ್ರೋತ್ತರ ಭಾರತದಲ್ಲಿ ಆರು ದಶಕಗಳ ತಮ್ಮ ಸುದೀರ್ಘ ರಾಜಕೀಯ ಬದುಕಿನಲ್ಲಿ ನಾಡು, ದೇಶದ ಅಭಿವೃದ್ಧಿಗೆ ಆವಿಸ್ಮರಣೀಯ ಕೊಡುಗೆ ನೀಡಿದ್ದಾರೆ ಎಂದರು.

ಮಾಜಿ ಪ್ರಧಾನಿ ಸಂತಸ

ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಯನ್ನು ಸಂತೋಷದಿಂದ ಸ್ವೀಕಾರ ಮಾಡಿದ್ದೇನೆ. ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಬೇಕಿತ್ತು. ಅನಾರೋಗ್ಯದ ಕಾರಣಕ್ಕೆ ವೈದ್ಯರ ಸಲಹೆಯ ಮೇರೆಗೆ ನಾನು ಆ ಕಾರ್ಯಕ್ರಮಕ್ಕೆ ಹಾಜರಾಗುವುದು ಕಷ್ಟ ಸಾಧ್ಯವಿತ್ತು. ಹೀಗಾಗಿ ನ್ಯಾ. ಎಂ.ಎನ್. ವೆಂಕಟಾಚಲಯ್ಯ, ನಾಡೋಜ ಮಹೇಶ್ ಜೋಶಿ ಅವರು ನನ್ನ ಮನೆಗೇ ಬಂದು ಪ್ರಶಸ್ತಿ ನೀಡಿದ್ದಾರೆ. ಇವರಿಬ್ಬರಿಗೂ ನಾನು ಕೃತಜ್ಞನಾಗಿದ್ದೇನೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು.

ಇದನ್ನೂ ಓದಿ | CM Siddaramaiah : ಪ್ರಧಾನಿ ರಾಜಕೀಯ ಭಾಷಣ ಸುಳ್ಳಿನ ಕಂತೆ; ಇಂದು ದೇಶವೇ ದಿವಾಳಿಯಾಗಿದೆ ಎಂದ ಸಿದ್ದರಾಮಯ್ಯ

ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ವಿವಿಧ ಪದಾಧಿಕಾರಿಗಳು, ಕನ್ನಡದ ಕಟ್ಟಾಳುಗಳು ಹಾಜರಿದ್ದು, ಮಾಜಿ ಪ್ರಧಾನಿಗಳಿಗೆ ಶುಭ ಕೋರಿದರು.

Continue Reading

ಕ ಸಾ ಪ

ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ನಾ. ಡಿಸೋಜ ಹಾಗೂ ದು. ಸರಸ್ವತಿ ಆಯ್ಕೆ

Kannada sahitya parishat: ಸಂಚಲನ ಬಳಗದವರು ಆಶಯದಂತೆ ಒಬ್ಬ ಕನ್ನಡ ಕ್ರೈಸ್ತ ಸಾಧಕರಿಗೆ ಹಾಗೂ ಇನ್ನೊಬ್ಬರು ಕನ್ನಡ ಪರ ಹೋರಾಟಗಾರಿಗೆ ಫಾದರ್‌ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

VISTARANEWS.COM


on

By

DSouza and Du Saraswati
ಸಾಮಾಜಿಕ ಹೋರಾಟಗಾರ್ತಿ ದು. ಸರಸ್ವತಿ ಮತ್ತು ಹಿರಿಯ ಸಾಹಿತಿ ನಾ. ಡಿಸೋಜ
Koo

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು‌ (Kannada Sahitya Parishat) 2023ನೇ ಸಾಲಿನ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ ಹಿರಿಯ ಸಾಹಿತಿ ನಾ. ಡಿಸೋಜ ಹಾಗೂ ಸಾಮಾಜಿಕ ಹೋರಾಟಗಾರ್ತಿ ದು. ಸರಸ್ವತಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ (Dr. Nadoja Mahesh Joshi) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಬಾರಿ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ, ಪರಿಷತ್ತಿನ ಪಂಪ ಸಭಾಭವನದಲ್ಲಿ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ನೇತೃತ್ವದಲ್ಲಿ ಆಯ್ಕೆ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ದತ್ತಿ ದಾನಿಗಳ ಆಶಯದಂತೆ ಪ್ರತಿ ವರ್ಷ ಇಬ್ಬರು ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಒಬ್ಬರು ಕನ್ನಡ ಕ್ರೈಸ್ತ ಸಾಧಕರಿಗೆ ಮತ್ತು ಇನ್ನೊಬ್ಬರು ಕನ್ನಡ ಜನಪರ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದವರನ್ನು ಆಯ್ಕೆ ಮಾಡಲಾಗುತ್ತದೆ.

ಅದರಂತೆ ಈ ಬಾರಿಯ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ ಹಿರಿಯ ಕಥೆಗಾರ, ಸಾಹಿತಿಗಳಾಗಿರುವ ಕ್ರೈಸ್ತ ಧರ್ಮಕ್ಕೆ ಸೇರಿದ ಶಿವಮೊಗ್ಗದ ಸಾಗರದ ನಾ. ಡಿಸೋಜ ಹಾಗೂ ಕನ್ನಡ ಪರ ಹೋರಾಟಗಾರ್ತಿ, ರಂಗಕರ್ಮಿ ಬೆಂಗಳೂರಿನ ದು. ಸರಸ್ವತಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ ಹತ್ತು ಸಾವಿರ ರೂ.ನಗದು, ಫಲ ತಾಂಬೂಲ ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

ಈ ಸಂಬಂಧ ಮಾತನಾಡಿರುವ ಅವರು ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಯನ್ನು ಸಂಚಲನ ಬಳಗದವರು 2017ರಲ್ಲಿ ಈ ದತ್ತಿ ನಿಧಿ ಸ್ಥಾಪಿಸಿದ್ದರು. ಇದುವರೆಗೆ 12 ಜನರಿಗೆ ಕನ್ನಡ ಸಾಹಿತ್ಯ ಪರಿಷತ್ತು ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರದಾನ ಮಾಡಲಾಗಿದೆ. ಪ್ರಸ್ತುತ ದತ್ತಿ ಪ್ರಶಸ್ತಿಯನ್ನು ದತ್ತಿ ದಾನಿಗಳು ಆಶಯದಂತೆ ಒಬ್ಬ ಕನ್ನಡ ಕ್ರೈಸ್ತ ಸಾಧಕರಿಗೆ ಹಾಗೂ ಇನ್ನೊಬ್ಬರು ಕನ್ನಡ ಪರ ಹೋರಾಟಗಾರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

ಇದನ್ನೂ ಓದಿ: ಕನ್ನಡ ಚಳುವಳಿ ವೀರಸೇನಾನಿ ಮ. ರಾಮಮೂರ್ತಿ ದತ್ತಿ ಪ್ರಶಸ್ತಿಗೆ ಜಿ.ಕೆ. ಸತ್ಯ ಆಯ್ಕೆ

ನಿತ್ಯ ಬದುಕಿನಲ್ಲಿ ಕನ್ನಡ ನಾಡು- ನುಡಿಯ ಕುರಿತು ಅಪಾರ ಗೌರವ ಹೊಂದಿರುವ ಹಿರಿಯ ಸಾಧಕರಿಗೆ ಕನ್ನಡ ಸಾಹಿತ್ಯ ಪರಿಷತ್ತು ಅಭಿನಂದಿಸುತ್ತದೆ. ಪ್ರಶಸ್ತಿ ಪುರಸ್ಕಾರ ಪಡೆದ ಇಬ್ಬರೂ ತಮ್ಮ ಕ್ಷೇತ್ರದಲ್ಲಿ ನಿರಂತರ ಸೇವೆ ಮಾಡುತ್ತಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿ ಪುರಸ್ಕೃತರಿಂದ, ಕನ್ನಡ ನಾಡಿನ ನೆಲಮೂಲ ಸಂಸ್ಕೃತಿಯನ್ನು ಉಳಿಸಿ- ಬೆಳೆಸುವಲ್ಲಿ ನಿರಂತರ ಪ್ರಯತ್ನ ಮುಂದುವರಿಯಲಿದೆ ಎಂದು ತಿಳಿಸಿದರು.

ಈ ಆಯ್ಕೆ ಸಮಿತಿಯಲ್ಲಿ ದತ್ತಿ ದಾನಿಗಳಾದ ಸಂಚಲನ ಬಳಗದವರ ಪರವಾಗಿ ರೀಟಾ ರೀನಿ ಹಾಗೂ ರಫಾಯಲ್ ರಾಜ್ ಸೇರಿ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ.ಪಟೇಲ್ ಪಾಂಡು ಅವರು ಉಪಸ್ಥಿತರಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
Shata Chandika Yaga
ಚಿಕ್ಕಬಳ್ಳಾಪುರ32 mins ago

ಚಿಕ್ಕಬಳ್ಳಾಪುರದ ವಾಯುದೇವ, ರಾಮಕೃಷ್ಣ ದೇವರ ಸನ್ನಿಧಾನದಲ್ಲಿ ಶತ ಚಂಡಿಕಾ ಯಾಗ ಸಂಪನ್ನ

Prajwal Revanna Case
ಕರ್ನಾಟಕ58 mins ago

Prajwal Revanna Case: ಸಂಸದ ಪ್ರಜ್ವಲ್ ರೇವಣ್ಣ ಗೆಸ್ಟ್ ಹೌಸ್‌ನಲ್ಲಿಲ್ಲ ಸಿಸಿ ಕ್ಯಾಮೆರಾ?; ಹಲವು ಅನುಮಾನ

Danesh Palyani
ವಿದೇಶ1 hour ago

Danesh Palyani: ಪಾಕಿಸ್ತಾನದಲ್ಲಿ ಹಿಂದು ಯುವತಿಯರ ಮತಾಂತರ; ಕರಾಳ ಮುಖ ಬಿಚ್ಚಿಟ್ಟ ಸಂಸದ!

Bangalore University
ಕರ್ನಾಟಕ2 hours ago

Bangalore University: ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ಪಿಎಚ್‌ಡಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

Prajwal Revanna
ಕರ್ನಾಟಕ2 hours ago

Prajwal Revanna: ಜರ್ಮನಿಯಲ್ಲಿ ಪ್ರಜ್ವಲ್‌ ಅಜ್ಞಾತವಾಸ, ಮಲೇಷ್ಯಾದಲ್ಲಿ ಕಾರ್ತಿಕ್‌ ಹಾಲಿಡೇಸ್?

CSK vs PBKS
ಕ್ರೀಡೆ2 hours ago

CSK vs PBKS: ಚೆನ್ನೈಗೆ ತವರಿನಲ್ಲೇ ಆಘಾತವಿಕ್ಕಿ ಪ್ಲೇ ಆಫ್​ ಆಸೆ ಜೀವಂತವಿರಿಸಿದ ಪಂಜಾಬ್​

Neha Murder Case
ಕರ್ನಾಟಕ2 hours ago

Neha Murder Case: ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಿ: ಅಮಿತ್‌ ಶಾಗೆ ನೇಹಾ ತಂದೆ ಮನವಿ

Love Jihad
ದೇಶ2 hours ago

Love Jihad: ಹಿಂದು ಎಂಬಂತೆ ಬಿಂಬಿಸಿ, ಯುವತಿಯನ್ನು ನಂಬಿಸಿ, ಕೊನೆಗೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

Union Minister Pralhad Joshi election campaign in kalaghatagi
ಧಾರವಾಡ3 hours ago

Lok Sabha Election 2024: ಕಾಂಗ್ರೆಸ್ಸಿನ 1 ಲಕ್ಷ ರು. ಬೋಗಸ್ ಗ್ಯಾರಂಟಿ: ಪ್ರಲ್ಹಾದ್‌ ಜೋಶಿ

Ikbal hussain
ಕರ್ನಾಟಕ3 hours ago

Iqbal Hussain: ಯುವತಿ ಜತೆ ಶಾಸಕ ಇಕ್ಬಾಲ್ ಹುಸೇನ್ ವಿಡಿಯೊ ಕಾಲ್ ವೈರಲ್; ಎಫ್‌ಐಆರ್‌ ದಾಖಲು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌