BJP-JDS Alliance: ಜೆಡಿಎಸ್‌ನಲ್ಲಿ ಭಿನ್ನಮತ ಶಮನಕ್ಕೆ ಅಖಾಡಕ್ಕಿಳಿದ ಎಚ್‌.ಡಿ.ದೇವೇಗೌಡ; ಮುಖಂಡರ ಸಭೆಗೆ ಇಬ್ರಾಹಿಂ ಗೈರು - Vistara News

ಕರ್ನಾಟಕ

BJP-JDS Alliance: ಜೆಡಿಎಸ್‌ನಲ್ಲಿ ಭಿನ್ನಮತ ಶಮನಕ್ಕೆ ಅಖಾಡಕ್ಕಿಳಿದ ಎಚ್‌.ಡಿ.ದೇವೇಗೌಡ; ಮುಖಂಡರ ಸಭೆಗೆ ಇಬ್ರಾಹಿಂ ಗೈರು

BJP-JDS Alliance: ಪಕ್ಷ ತಾಯಿಗೆ ಸಮಾನ, ದಯಮಾಡಿ ದ್ರೋಹ ಮಾಡಬೇಡಿ. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಎಲ್ಲರೂ ಪ್ರತಿಜ್ಞೆ ಸ್ವೀಕರಿಸಬೇಕು ಎಂದು ಶಾಸಕ ಜಿ.ಟಿ.ದೇವೇಗೌಡ ಅವರು ಸಭೆಯಲ್ಲಿ ಮನವಿ ಮಾಡಿದ್ದಾರೆ.

VISTARANEWS.COM


on

H D Deve gowda
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮನಗರ: ಲೋಕಸಭಾ ಚುನಾವಣೆ ಎದುರಿಸಲು ಬಿಜೆಪಿ ಜತೆ ಮೈತ್ರಿ (BJP-JDS Alliance) ಮಾಡಿಕೊಂಡಿರುವುದರಿಂದ ಜೆಡಿಎಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಹೀಗಾಗಿ ಭಿನ್ನಮತ ಶಮನಗೊಳಿಸಲು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಅಖಾಡಕ್ಕೆ ಇಳಿದಿದ್ದಾರೆ. ಇದಕ್ಕಾಗಿ ಬಿಡದಿಯ ತೋಟದ ಮನೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಭಾನುವಾರ ಜೆಡಿಎಸ್ ಹಾಲಿ ಶಾಸಕರು, ಎಂಎಲ್‌ಸಿಗಳು ಹಾಗೂ ಮುಖಂಡರ ಸಭೆ ಏರ್ಪಡಿಸಲಾಗಿತ್ತು.

ಮೈತ್ರಿಯ ಉದ್ದೇಶ ಹಾಗೂ ಪಕ್ಷದ ಮುಂದಿನ ನಿಲುವುಗಳ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಯಿತು. ಮೈತ್ರಿಯಿಂದ ಜೆಡಿಎಸ್‌ಗೆ ಆಗುವ ಲಾಭದ ಬಗ್ಗೆ ಪ್ರಸ್ತಾಪ ಮಾಡಲಾಗಿದೆ. ಸಭೆಯಲ್ಲಿ ಶಾಸಕರಾದ ಜಿ.ಟಿ. ದೇವೇಗೌಡ, ಎಚ್.ಡಿ ರೇವಣ್ಣ, ಕರೆಮ್ಮ,‌ ಹರೀಶ್ ಗೌಡ, ಸುರೇಶ್ ಬಾಬು, ಸಮೃದ್ಧಿ ಮಂಜುನಾಥ್, ವೆಂಕಟಶಿವಾರೆಡ್ಡಿ, ಶಾರದ ಪಿ. ನಾಯ್ಕ್, ಎಚ್. ಟಿ. ಮಂಜುನಾಥ್, ಸ್ವರೂಪ್, ನಿಖಿಲ್ ಕುಮಾರಸ್ವಾಮಿ, ಮಾಜಿ ಶಾಸಕ ಗೌರಿಶಂಕರ್ ಭಾಗಿಯಾಗಿದ್ದಾರೆ. ಆದರೆ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಶರಣ್ ಗೌಡ ಕಂದಕೂರ್ ಗೈರಾಗಿದ್ದರು.

ಇದನ್ನೂ ಓದಿ | Lingayat CM : ಶಾಮನೂರು ಹೇಳಿಕೆಗೆ ಪೂರ್ಣ ಬೆಂಬಲವೆಂದ ಬಿಎಸ್‌ವೈ; ನಮ್ಮದು ಜಾತ್ಯತೀತ ಸರ್ಕಾರ ಎಂದ ಸಿಎಂ

ಬಿಜೆಪಿ-ಜೆಡಿಎಸ್‌ ಮೈತ್ರಿ ಹಿನ್ನೆಲೆಯಲ್ಲಿ ಜೆಡಿಎಸ್‌ನ ಹಲವು ಅಲ್ಪಸಂಖ್ಯಾತ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಅದೇ ರೀತಿ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಕೂಡ ಬಹಿರಂಗವಾಗಿ ಬೇಸರ ಹೊರಹಾಕಿದ್ದರು. ಬೆಂಬಲಿಗರ ಜತೆ ಚರ್ಚಿಸಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದರು. ಹೀಗಾಗಿ ಅವರು ದೇವೇಗೌಡರು ಕರೆದಿರುವ ಸಭೆಗೂ ಹಾಜರಾಗಿರಲಿಲ್ಲ.

ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿ: ಶಾಸಕ ಜಿ.ಟಿ.ದೇವೇಗೌಡ

ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಕೊಟ್ಟ ಕಾರ್ಯಕ್ರಮಗಳು, ಗ್ರಾಮ ವಾಸ್ತವ್ಯ ಜನಮಾನಸದಲ್ಲಿ ಉಳಿದಿದೆ. ಚುನಾವಣೆಗೆ ನಿಂತು ಸೋತ ಅಭ್ಯರ್ಥಿಗಳು ಕಂಗೆಟ್ಟಿಲ್ಲ. ಕಲಬುರಗಿ, ಕೊಪ್ಪಳ ಭಾಗದಲ್ಲಿ ನಮ್ಮ ಸಭೆಗೆ ಸಹಸ್ರಾರು ಮಂದಿ ಸೇರಿದ್ದರು. ಕುಮಾರಸ್ವಾಮಿ ಅವರನ್ನು ಸುತ್ತುವರಿದು ಬಂದು ಹಾರ ಹಾಕಿ ಹೋಗೊದಲ್ಲ. ಪಕ್ಷ ಸಂಘಟನೆಗೆ ಮುಖಂಡರು ಶ್ರಮಿಸಬೇಕು ಎಂದು ಕರೆ ನೀಡಿದರು.

ಉತ್ತರ ಕರ್ನಾಟಕ ಭಾಗದ ಜನರಿಗೆ ದೇವೆಗೌಡರು ಆ ಭಾಗದ ಜನರಿಗೆ ದೇವರಂತೆ ಕಾಣುತ್ತಾರೆ. ಬಿಳಿ ಬಟ್ಟೆ ಹಾಕಿಕೊಂಡು ಬರುವುದಲ್ಲ. 25 ಜನರನ್ನು ಕರೆದುಕೊಂಡು ಬರುವುದಕ್ಕಾಗಲ್ಲವೇ? ಬಿಜೆಪಿಯಲ್ಲಿ ಒಂದು ಕರೆ ಕೊಟ್ಟರೆ ನೂರಾರು ಜನ ಬರುತ್ತಾರೆ. ಆದರೆ ನಮ್ಮಲ್ಲಿ ಕರೆ ಕೊಟ್ಟರೆ ಪಾಲಿಸುತ್ತೀರಾ ಎಂದು ಅಸಮಾಧಾನ ಹೊರಹಾಕಿದರು.

ಅಲ್ಪಸಂಖ್ಯಾತರು ಜೆಡಿಎಸ್ ಬಿಟ್ಟೆ ಹೋದರು ಎನ್ನುತ್ತೀರಲ್ಲಾ, ನೋಡಿ ಇಲ್ಲಿ ಇಷ್ಟೊಂದು ನಾಯಕರು ಬಂದಿಲ್ಲವೇ? ಎಂದ ಅವರು, ಕಾವೇರಿ ಹೋರಾಟ ಮಾಡಿದರೆ 144 ಸೆಕ್ಷನ್ ಹಾಕುತ್ತಾರೆ. ಹಿಂದೆ ನವಲಗುಂದ ಹೋರಾಟದಲ್ಲಿ ಜ‌‌ನ ರೊಚ್ಚಿಗೆದ್ದ ಪರಿಣಾಮ ಗುಂಡೂರಾವ್ ಸರ್ಕಾರವೇ ಉರುಳಿತು. ಅಧ್ಯಕ್ಷ ಪಟ್ಟ, ವಿಸಿಟಿಂಗ್ ಕಾರ್ಡ್ ಇಟ್ಕೊಂಡು ಬಂದರೆ ಸಾಲದು. ಕುಮಾರಣ್ಣ ಶ್ರೀಕೃಷ್ಣ ಇದ್ದ ಹಾಗೆ, ಎಲ್ಲರಿಗೂ ಆಶೀರ್ವಾದ ಮಾಡುತ್ತಾರೆ. ಬ್ಯುಸಿನೆಸ್‌ಗಾಗಿ ಬೇಡ, ದೇವೇಗೌಡರ ಹೆಸರು ಉಳಿಸಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತೆಗೆಯಬೇಕು. ಬಿಬಿಎಂಪಿ ಹಣ ಯಾವುದಕ್ಕೆ ಬಿಡುಗಡೆ ಮಾಡಿದ್ದಾರೆ. ಒಂದು ಪ್ರತಿಭಟನೆ ಮಾಡಿದ್ದೀರಾ? ಬೀದಿಗಿಳಿಯವೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ನೆನ್ನೆಯವರೆಗೂ ಆದ ಘಟನೆಗಳನ್ನು ಮರೆತುಬಿಡಿ. ನಮ್ಮವರನ್ನು ನಾವೇ ಸೋಲಿಸಿದರೂ ಮರೆತು ಬಿಡಿ. ಪಕ್ಷ ತಾಯಿಗೆ ಸಮಾನ, ದಯಮಾಡಿ ದ್ರೋಹ ಮಾಡಬೇಡಿ. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಪ್ರತಿಜ್ಞೆ ಸ್ವೀಕರಿಸಬೇಕು ಎಂದು ಎಲ್ಲರಿಗೂ ಪ್ರತಿಜ್ಞಾವಿಧಿ ಬೋಧಿಸಿದರು.

ಪಕ್ಷದಲ್ಲಿ ಕೆಲಸ ಮಾಡದೇ ಇದ್ದವರು ಪಕ್ಷ ಬಿಟ್ಟಿದ್ದಾರೆ

ಮುಸ್ಲಿಂ ಮುಖಂಡ ರಝಾಕ್ ಮಾತನಾಡಿ, ಅಲ್ಪಸಂಖ್ಯಾತರು ಪಕ್ಷ ಬಿಟ್ಟು ಹೋಗುತ್ತಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಅವೆಲ್ಲಾ ಸುಳ್ಳು. ಪಕ್ಷದಲ್ಲಿ ಕೆಲಸ ಮಾಡದೇ ಇದ್ದವರು ಪಕ್ಷ ಬಿಟ್ಟಿದ್ದಾರೆ. ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸ ಬಾರದು ಎಂದು ಹೇಳಿದರು.

ಕುಮಾರಸ್ವಾಮಿ ಬಗ್ಗೆ ಅಪಪ್ರಚಾರ

ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಮುಖಂಡ ರಫೀಕ್ ಮಾತನಾಡಿ, ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಆಯ್ತು ಅಂತ ಕೆಲವರು ಮುಸ್ಲಿಂ ನಾಯಕರು ಪಕ್ಷ ಬಿಟ್ಟು ಹೋಗಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ ನಮ್ಮ ಪಕ್ಷ ಬಿಟ್ಟು ಯಾರು ಅಲ್ಪಸಂಖ್ಯಾತರು ಬಿಟ್ಟು ಹೋಗಿಲ್ಲ. ಕುಮಾರಸ್ವಾಮಿ ಅವರ ಮೇಲೆ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ | Lingayat CM : ಶಾಮನೂರು ಶಿವಶಂಕರಪ್ಪರಿಗೆ ಸಿಎಂ ಸ್ಪಷ್ಟ ಉತ್ತರ ಕೊಡಬೇಕು: ಬಸವರಾಜ ಬೊಮ್ಮಾಯಿ

ಅಲ್ಪಸಂಖ್ಯಾತರ ಹಿತರಕ್ಷಣೆಗೆ ಜೆಡಿಎಸ್‌ ಬದ್ಧ

ಎಂಎಲ್ಸಿ ಬಿ.ಎಂ.ಫಾರೂಕ್ ಮಾತನಾಡಿ, ಬಿಜೆಪಿ ಜತೆ ಯಾವ ಪಕ್ಷ ಮೈತ್ರಿ ಮಾಡಿಕೊಂಡಿಲ್ಲ ಹೇಳಿ. ಶಿವಸೇನೆ, ಶರತ್ ಪವಾರ್, ನಿತೀಶ್ ಕುಮಾರ್ ಕೂಡಾ ಮೈತ್ರಿ ಮಾಡಿಕೊಂಡಿದ್ದರು. ಈ ಹಿಂದೆ ನಮ್ಮ ಜಮೀರ್ ಗೆ ಮಂತ್ರಿ ಸ್ಥಾನ ಕೊಡಲಿಲ್ವಾ.? ಈಗಲೂ ಮೈತ್ರಿಯಿಂದ ಯಾವುದೇ ಗೊಂದಲ ಇಲ್ಲ. ಮೈತ್ರಿಯ ಪ್ರತಿ ಹಂತದಲ್ಲೂ ಇಬ್ರಾಹಿಂ ಜತೆ ಚರ್ಚೆ ಮಾಡಿದ್ದಾರೆ. ಮೈತ್ರಿ ಮಾತುಕತೆ ಎಲ್ಲಾ ಹಂತದಲ್ಲೂ ಇಬ್ರಾಹಿಂ ಅವರನ್ನು ವಿಶ್ವಾಸಕ್ಕೆ ಪಡೆದಿದ್ದಾರೆ. ಜೆಡಿಎಸ್ ನಿಂದ ಅಲ್ಪಸಂಖ್ಯಾತರು ದೂರ ಆಗುತ್ತಿಲ್ಲ. ಅಲ್ಪಸಂಖ್ಯಾತರ ಹಿತರಕ್ಷಣೆಗೆ ಪಕ್ಷ ಬದ್ಧವಾಗಿದೆ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Anjali Murder Case: ನನ್ನ ಮಗ ಮಾಡಿದ್ದು ತಪ್ಪು, ಕೋರ್ಟ್ ಅವನಿಗೆ ಯಾವ ಶಿಕ್ಷೆಯಾದ್ರೂ ಕೊಡಲಿ: ಆರೋಪಿ ಗಿರೀಶ್ ತಾಯಿ

Anjali Murder Case: ಈ ಹಿಂದೆ ಕಳ್ಳತನ ಮಾಡಿದಾಗ ಬುದ್ಧಿವಾದ ಹೇಳಿದ್ದೆ. ಈಗ ಇಂತಹ ಕೆಲಸ ಮಾಡುತ್ತಾನೆ ಎಂದು ಊಹಿಸಿರಲಿಲ್ಲ ಎಂದು ಅಂಜಲಿ ಕೊಲೆ ಪ್ರಕರಣದ ಬಗ್ಗೆ ಆರೋಪಿ ಗಿರೀಶ್‌ ತಾಯಿ ಸವಿತಾ ಸಾವಂತ್ ಹೇಳಿದ್ದಾರೆ.

VISTARANEWS.COM


on

Girish's mother
Koo

ಹುಬ್ಬಳ್ಳಿ: ನನ್ನ ಮಗ ಗಿರೀಶ್ ಮಾಡಿದ್ದು ತಪ್ಪು, ಆತನಿಗೆ ಕೋರ್ಟ್ ಏನು ಶಿಕ್ಷೆ ಕೊಡುತ್ತೆ ಕೊಡಲಿ. ಅಂಜಲಿ (Anjali Murder Case) ನನ್ನನ್ನು ಮಮ್ಮಿ ಅಂತ ಕರೆಯುತ್ತಿದ್ದಳು, ಅಂಜಲಿ ಮತ್ತು ಗಿರೀಶ್ ಪರಸ್ಪರ ಪ್ರೀತಿಸುತ್ತಿದ್ದರು. ನನ್ನ ಮಗ ಅಂಜಲಿ ಜತೆ ಮದುವೆಯಾಗುತ್ತೇನೆ ಅಂದಿದ್ದ. ಆದರೆ, ಇತ್ತೀಚೆಗೆ ಇಬ್ಬರ ನಡುವೆ ಹೊಂದಾಣಿಕೆ ಇರಲಿಲ್ಲ. ಅವನು ಈ ಹಂತಕ್ಕೆ ಹೋಗುತ್ತಾನೆ ಅಂತ ಗೊತ್ತಿರಲಿಲ್ಲ ಎಂದು ಆರೋಪಿ ಗಿರೀಶ್ ತಾಯಿ ಸವಿತಾ ಸಾವಂತ್ ಹೇಳಿದ್ದಾರೆ.

ಅಂಜಲಿ ಹತ್ಯೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಇಬ್ಬರೂ ಹೇಗಾದರೂ ಚೆನ್ನಾಗಿರಿ ಅಂತ ಹೇಳಿದ್ದೆ. ಕಳೆದ ಆರು ತಿಂಗಳಿಂದ ಮಗ ಮನೆಗೆ ಬಂದಿಲ್ಲ. ಅಂಜಲಿ ಫೋನ್‌ನಲ್ಲಿ ಬೇರೆಯವರ ಜತೆ ಮಾತನಾಡುತ್ತಾಳೆ ಮಮ್ಮಿ ಅಂತ ಹೇಳಿದ್ದ. ಆಕೆಗೆ ಇಷ್ಟ ಇಲ್ಲದಿದ್ದರೆ ಬಿಟ್ಟು ಬಿಡು ಅಂದಿದ್ದೆ. ಆದರೆ ಈ ರೀತಿ ಮಾಡುತ್ತಾನೆ ಅಂತ ಗೊತ್ತಿರಲಿಲ್ಲ ಎಂದರು ತಿಳಿಸಿದ್ದಾರೆ.

ಇದನ್ನೂ ಓದಿ | Anjali Murder Case: ರೈಲಿನಲ್ಲಿ ಮತ್ತೊಬ್ಬ ಮಹಿಳೆ ಕೊಲೆಗೆ ಯತ್ನಿಸಿದ ಅಂಜಲಿ ಹಂತಕ!

ಅವನು ನನಗೆ ಒಂದು ಪೈಸೆಯೂ ಮನೆ ಖರ್ಚಿಗೆ ಕೊಡುತ್ತಿರಲಿಲ್ಲ. ಈ ಹಿಂದೆ ಕಳ್ಳತನ ಮಾಡಿದಾಗ ಬುದ್ಧಿವಾದ ಹೇಳಿದ್ದೆ. ನನಗೆ ಯಾರೂ ಇಲ್ಲ, ನಾನು ಕೆಲಸ ಮಾಡದೆ ಮನೆ ನಡೆಯಲ್ಲ. ಬಾಡಿಗೆ ಮನೆಯವರು ಮನೆ ಖಾಲಿ ಮಾಡು ಅಂತಿದ್ದಾರೆ. ಯಾವ ಸಂಬಂಧಿಕರೂ ನನ್ನ ಸಹಾಯಕ್ಕೆ ಬಂದಿಲ್ಲ. ನಾನು ಮಗನನ್ನ ನೋಡಲು ಕಿಮ್ಸ್‌ಗೆ ಹೋಗಲ್ಲ. ಅವನಿಗೆ ಬೇಲ್ ಸೇರಿದಂತೆ, ಯಾವುದೇ ಸಹಾಯವನ್ನು ಮಾಡಲ್ಲ. ನ್ಯಾಯಾಲಯ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ತೆಗೆದುಕೊಳ್ಳಲಿ ಎಂದು ಹೇಳಿದ್ದಾರೆ.

ಅಂಜಲಿ ಕೊಂದವನ ಎನ್‌ಕೌಂಟರ್ ಮಾಡಿ: ಸಹೋದರಿ ಪೂಜಾ ಆಗ್ರಹ

Anjali Murder Case

ಧಾರವಾಡ: ಅಂಜಲಿ ಹತ್ಯೆ ಪ್ರಕರಣದ (Anjali Murder Case) ಆರೋಪಿ ಗಿರೀಶ್‌ನನ್ನು ಎನ್‌ಕೌಂಟರ್ ಮಾಡಬೇಕು. ಯಾವುದೇ ಕಾರಣಕ್ಕೂ ಆರೋಪಿಗೆ ಚಿಕಿತ್ಸೆ ಕೊಡಬಾರದು, ಅವನನ್ನು ಆದಷ್ಟು ಬೇಗ ಎನ್ ಕೌಂಟರ್ ಮಾಡಬೇಕು. ನಮ್ಮ ಅಕ್ಕ ಹೇಗೆ ರಕ್ತ ಸುರಿದು ಪ್ರಾಣ ಬಿಟ್ಟಳೋ ಅದೇ ರೀತಿ ಅವನು ಸಾಯಬೇಕು ಎಂದು ಅಂಜಲಿ ಸಹೋದರಿ ಪೂಜಾ ಆಗ್ರಹಿಸಿದ್ದಾರೆ.

ವಿಸ್ತಾರ ನ್ಯೂಸ್‌ ಜತೆ ಶುಕ್ರವಾರ ಮಾತನಾಡಿರುವ ಅಂಜಲಿ ಸಹೋದರಿ ಪೂಜಾ, ನಮ್ಮ ಅಕ್ಕನಿಗೂ ಅವನಿಗೂ ಯಾವುದೇ ಸಂಬಂಧ ಇಲ್ಲ. ಏನೇನೋ ಹೇಳಿ ದಿಕ್ಕು ತಪ್ಪಿಸುತ್ತಿದ್ದಾರೆ. ಪೊಲೀಸರು ಹೇಗೆ ಬೇಕೋ ಹಾಗೆ ಮಾಡುವ ವಿಚಾರದಲ್ಲಿದ್ದಾರೆ. ಇದನ್ನು ಆದಷ್ಟು ಬೇಗ ತನಿಖೆ ಮಾಡಬೇಕು. ಬೆಳಗ್ಗೆ ಮಾತನಾಡಲು ಬಂದವನು ಚಾಕು ಹಾಕಿದ. ನಾವು ನಮ್ಮ ಅಕ್ಕನ ಜತೆ ಮಾತನಾಡಲು ಸಹ ಆಗಲಿಲ್ಲ. ಕೊನೆ ಗಳಿಗೆಯಲ್ಲಿ ಪೊಲೀಸರು ಬಂದು ಡಾಕ್ಟರ್ ಸಹ ಕರೆಯಲಿಲ್ಲ. ಕೇವಲ ಪೋಟೋ ತೆಗೆದುಕೊಂಡು ಹೋದರು. ಅವನಿಗೆ ಅದೇ ರೀತಿ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.

ನಮ್ಮ ಅಕ್ಕನ ಜತೆಗೆ ಏನೇನೋ ಸಂಬಂಧ ಕಲ್ಪಿಸುತ್ತಿದ್ದಾರೆ. ಹಾಗಾದರೆ ನೆನ್ನೆಯೂ ಸಹ ಅವನು ಯಾರದೋ ಜೊತೆ ಜಗಳ ಮಾಡಿದ್ದ. ಅವರಿಗೂ ಸಂಬಂಧ ಇದೆಯಾ ಎಂದು ಸಹೋದರಿ ಪ್ರಶ್ನೆ ಮಾಡಿದ್ದಾರೆ.

ಹಲ್ಲೇ ಮಾಡಿ ಓಡಿ ಹೋದ

ದಾವಣಗೆರೆ: ಮಹಿಳೆಗೆ ಅಂಜಲಿ ಹಂತಕನಿಂದ ಚಾಕು ಇರಿತ ಪ್ರಕರಣದ ಬಗ್ಗೆ ಗಾಯಾಳು ಮಹಿಳೆಯ ಪತಿ ಪ್ರತಿಕ್ರಿಯಿಸಿದ್ದಾರೆ. ನಾವು ಟ್ರೈನ್‌ನಲ್ಲಿ ಇರುವಾಗ ಅರೋಪಿ ಗಿರೀಶ್ ಹಿಂದೆ ಹಿಂದೆಯೇ ಬರುತ್ತಿದ್ದ. ರೆಸ್ಟ್ ರೂಂನ ಡೋರ್ ಓಪನ್ ಮಾಡಿ ಒಳ ನುಗ್ಗಲು ಯತ್ನಿಸಿದ. ಹೊಟ್ಟೆಗೆ ಚಾಕು ಚುಚ್ಚಲು ಮುಂದಾದಾಗ ನಾನು ಕೈ ಅಡ್ಡ ಹಿಡಿದೆ. ಕೈಗೆ ಗಾಯವಾಗುತ್ತಿದ್ದಂತೆ ಕೂಗಿಕೊಂಡೆ, ಆತ ಓಡಿಹೋದ ಎಂದು ಗದಗ ಮೂಲದ ಲಕ್ಷ್ಮೀ ಪತಿ ಮಹಾಂತೇಶ್ ತಿಳಿಸಿದ್ದಾರೆ. ಸದ್ಯ ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದಾರೆ.

5 ಸಾವಿರ ಅಡ್ವಾನ್ಸ್ ತೆಗೆದುಕೊಂಡು ಹೋದವನು ಮತ್ತೆ ಬಂದಿಲ್ಲ

ಅಂಜಲಿ ಹತ್ಯೆ ಕೊಲೆ ಪ್ರಕರಣದ ಆರೋಪಿ ಗಿರೀಶ್ ಕಳೆದ ನಾಲ್ಕು ತಿಂಗಳಿನಿಂದ ಮೈಸೂರಿನ ಮಹಾರಾಜ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಎಂಬುವುದು ತಿಳಿದುಬಂದಿದೆ. ಈ ಬಗ್ಗೆ ಮಹಾರಾಜ ಹೋಟೆಲ್ ಮಾಲೀಕ ಗೋವರ್ಧನ್ ಪ್ರತಿಕ್ರಿಯಿಸಿ, ವಿನಾಯಕ ನರ್ಸಿಂಗ್ ಕೇರ್ ಏಜೆನ್ಸಿ ಮೂಲಕ ನಮ್ಮ ತಂದೆ ನೋಡಿಕೊಳ್ಳಲು ಆರೋಪಿ ಗಿರೀಶ್‌ ಬಂದಿದ್ದ. ರೂಂ ಬಾಯ್, ಸಪ್ಲೈಯರ್ ಆಗಿ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Prajwal Revanna Case: ದೇವರಾಜೇಗೌಡರಿಗೆ ಮೆಂಟಲ್‌ ಟ್ರೀಟ್ಮೆಂಟ್‌ ಕೊಡಿಸಬೇಕಿದೆ: ಕಾಂಗ್ರೆಸ್‌ ವ್ಯಂಗ್ಯ

ಗಿರೀಶ್ ಸರಿಯಾಗಿ ಕೆಲಸಕ್ಕೆ ಬರುತ್ತಿರಲಿಲ್ಲ. ಒಮ್ಮೆ 10 ದಿನ, 5‌ ದಿನ ಹೀಗೆ ರಜಾ ತೆಗೆದುಕೊಳ್ಳುತ್ತಿದ್ದ. ಏಜೆನ್ಸಿ ಮೂಲಕ ಬಂದ ಕಾರಣ ಹೆಚ್ಚು ರಜಾ ತೆಗೆದುಕೊಂಡರೂ ನಾನು ಅವನ ಬಗ್ಗೆ ಕೇಳುತ್ತಿರಲಿಲ್ಲ. ಮಂಗಳವಾರ ಸಂಜೆ 5 ಸಾವಿರ ರೂ. ಹಣ ಅಡ್ವಾನ್ಸ್ ತೆಗೆದುಕೊಂಡು ಹೋದವನು ಮತ್ತೆ ವಾಪಸ್ ಬಂದಿಲ್ಲ ಎಂದು ಹೇಳಿದ್ದಾರೆ.

ಮರುದಿನ ಪೊಲೀಸರು ನನಗೆ ಕರೆ ಮಾಡಿದಾಗಲೇ ಗಿರೀಶ್‌ ಕೊಲೆ ಮಾಡಿದ್ದಾನೆ ಎಂಬುದು ತಿಳಿಯಿತು. ನಮ್ಮ ಹೋಟೆಲ್‌ನಲ್ಲಿ ಕೆಲಸ ಮಾಡುವ ಸಿಬ್ಬಂದಿ, ಮೊಬೈಲ್‌ನಲ್ಲಿ ಹೆಚ್ಚು ಮಾತನಾಡುತ್ತಿದ್ದ ಎಂದು ಅವನ ಬಗ್ಗೆ ಹೇಳಿದ್ದರು. ಜತೆಗೆ ಕಂಪನಿಯ ಫೋನ್‌ನಿಂದ ಹೆಚ್ಚು ದಿನ ಮಾತನಾಡಿದ್ದಾನೆ. ಘಟನೆ ನಡೆಯುವ ಹಿಂದಿನ ದಿನ ಜೋರಾಗಿ ಕೂಗಾಡಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದನಂತೆ. ನಮ್ಮ ಹೋಟೆಲ್‌ಗೆ ಏಳು ಪೊಲೀಸರು ಬಂದಿದ್ದರು. ನೆನ್ನೆ ರಾತ್ರಿಯವರೆಗೂ ಪೊಲೀಸರಿ ನಮ್ಮ ಹೋಟೆಲ್‌ನಲ್ಲಿ ಇದ್ದರು. ಆತ ದಾವಣಗೆರೆಯಲ್ಲಿ ಸಿಕ್ಕ ಬಳಿಕ ಮಧ್ಯರಾತ್ರಿ ಪೊಲೀಸರು ಇಲ್ಲಿಂದ ತೆರಳಿದರು ಎಂದು ತಿಳಿಸಿದ್ದಾರೆ.

Continue Reading

ಕರ್ನಾಟಕ

ಮೋದಿಯವರೇ, 3ನೇ ಬಾರಿ ಪ್ರಧಾನಿಯಾಗಿ ದೇಶ ಮುನ್ನಡೆಸಿ; ಜನುಮ ದಿನದ ಶುಭಾಶಯ ಕೋರಿದ ಪ್ರಧಾನಿಗೆ ದೇವೇಗೌಡರ ಕೃತಜ್ಞತೆ

HD Deve Gowda: ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಶನಿವಾರ ತಮ್ಮ ಹುಟ್ಟುಹಬ್ಬವನ್ನು ದೇವಾಲಯ ಭೇಟಿಯೊಂದಿಗೆ ಸರಳವಾಗಿ ಆಚರಿಸಿಕೊಂಡಿದ್ದಾರೆ. ಮೊಮ್ಮಗ ನೀಡಿದ ಏಟಿನಿಂದ ಇನ್ನೂ ಪೂರ್ಣವಾಗಿ ಚೇತರಿಸಿಕೊಳ್ಳದ ದೇವೇಗೌಡರು, ದೇವರ ಮುಂದೆ ಈ ಅವಮಾನದಿಂದ ಪಾರು ಮಾಡೆಂದು ಮೌನವಾಗಿ ಪ್ರಾರ್ಥಿಸಿದರು. ಮೋದಿ ಅವರು ಕೂಡ ದೇವೇಗೌಡರಿಗೆ ಶುಭಾಶಯ ತಿಳಿಸಿದರು. ಇದಕ್ಕೆ ಗೌಡರು ಧನ್ಯವಾದ ತಿಳಿಸಿದ್ದಾರೆ.

VISTARANEWS.COM


on

HD Deve Gowda
Koo

ಬೆಂಗಳೂರು: ಮಾಜಿ ಪ್ರಧಾನಿ, ಮಣ್ಣಿನ ಮಗ, ಕರ್ನಾಟಕದ ಹಿರಿಯ ರಾಜಕಾರಣಿ ಎಚ್‌.ಡಿ.ದೇವೇಗೌಡ (HD Deve Gowda) ಅವರು ಶನಿವಾರ (ಮೇ 18) 93ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ದೇವೇಗೌಡರ ಜನ್ಮದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದ ಹಿಡಿದು ನೂರಾರು ನಾಯಕರು ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. ಇನ್ನು, ಬರ್ತ್‌ಡೇಗೆ ವಿಶ್‌ ಮಾಡಿದ ಹಿನ್ನೆಲೆಯಲ್ಲಿ ಮೋದಿ ಅವರಿಗೆ ದೇವೇಗೌಡರು ಥ್ಯಾಂಕ್ಸ್‌ ಹೇಳಿದ್ದಾರೆ. ಹಾಗೆಯೇ, “ಮೂರನೇ ಬಾರಿಗೆ ಗೆದ್ದು, ನೀವು ದೇಶವನ್ನು ಮುನ್ನಡೆಸಿ” ಎಂಬುದಾಗಿಯೂ ಗೌಡರು ಆಶೀರ್ವಾದ ಮಾಡಿದ್ದಾರೆ.

“ನನ್ನ ಜನ್ಮದಿನದಂದು ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ನಿಮ್ಮ ಶುಭ ಹಾರೈಕೆಗಳು ನನ್ನ ಮನಸ್ಸನ್ನು ಮತ್ತಷ್ಟು ಉಲ್ಲಾಸಗೊಳಿಸಿವೆ. ನೀವು ಶೀಘ್ರದಲ್ಲೇ ಮೂರನೇ ಬಾರಿಗೆ ದೇಶವನ್ನು ಮುನ್ನಡೆಸುವಂತಾಗಲಿ ಎಂಬುದಾಗಿ ಶುಭ ಕೋರುತ್ತೇನೆ” ಎಂದು ದೇವೇಗೌಡರು ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

ಎಚ್‌.ಡಿ. ದೇವೇಗೌಡರ ಹುಟ್ಟುಹಬ್ಬಕ್ಕೆ ಶನಿವಾರ ಬೆಳಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ ನರೇಂದ್ರ ಮೋದಿ ಶುಭಾಶಯ ತಿಳಿಸಿದರು. ದೇಶಕ್ಕೆ ದೇವೇಗೌಡ ಸೇವೆ ಗಣನೀಯವಾಗಿದ್ದು, ರಾಜಕೀಯ ವಲಯದಲ್ಲಿ ಅವರನ್ನು ಗೌರವದಿಂದ ಕಾಣಲಾಗುತ್ತದೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಯಲ್ಲಿ ಅವರ ಆಸಕ್ತಿ ಗಮನಾರ್ಹವಾಗಿದೆ. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಪೋಸ್ಟ್‌ ಮಾಡಿದ್ದರು.

ಹಲಸಿನ ಹಣ್ಣು ಕೊಟ್ಟ ಕಾರ್ಯಕರ್ತ

ಕಟ್ಟಾ ಅಭಿಮಾನಿಯೊಬ್ಬ ದೇವೇಗೌಡರಿಗೆ ಹಲಸಿನ ಹಣ್ಣನ್ನು ಉಡುಗೊರೆಯಾಗಿ ನೀಡಿದ್ದಾನೆ. ಅದನ್ನು ಅಷ್ಟೇ ಪ್ರೀತಿಪೂರ್ವಕವಾಗಿ, ಖುಷಿ ಖುಷಿಯಿಂದ ದೇವೇಗೌಡ ಅವರು ಸ್ವೀಕರಿಸಿದರು. ಅಲ್ಲದೆ, ಆ ಹಲಸಿನ ಹಣ್ಣಿನ ಬಳಿಗೆ ತಮ್ಮ ಮೂಗನ್ನು ಇಟ್ಟು ಅದರ ಪರಿಮಳವನ್ನು ಆಸ್ವಾದಿಸಿದರು. ಕಾರ್ಯಕರ್ತನ ಗಿಫ್ಟ್‌ ಬಗ್ಗೆ ಬಹಳವೇ ಖುಷಿಪಟ್ಟರು.

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಶನಿವಾರ ತಮ್ಮ ಹುಟ್ಟುಹಬ್ಬವನ್ನು ದೇವಾಲಯ ಭೇಟಿಯೊಂದಿಗೆ ಸರಳವಾಗಿ ಆಚರಿಸಿಕೊಂಡಿದ್ದಾರೆ. ಮೊಮ್ಮಗ ನೀಡಿದ ಏಟಿನಿಂದ ಇನ್ನೂ ಪೂರ್ಣವಾಗಿ ಚೇತರಿಸಿಕೊಳ್ಳದ ದೇವೇಗೌಡರು, ದೇವರ ಮುಂದೆ ಈ ಅವಮಾನದಿಂದ ಪಾರು ಮಾಡೆಂದು ಮೌನವಾಗಿ ಪ್ರಾರ್ಥಿಸಿದರು.

ಮೊಮ್ಮಗ ಪ್ರಜ್ವಲ್‌ ಪ್ರಕರಣ ತಂದಿಟ್ಟ ಸಂಕಷ್ಟದಿಂದ ನೊಂದಿರುವ ಗೌಡರು 92 ವರ್ಷದಲ್ಲಿ ಮೊದಲ ಬಾರಿಗೆ ಗಡ್ಡಧಾರಿಯಾಗಿದ್ದರು. ಇಂದು ಮನೆಯಿಂದ ಹೊರಗೆ ಬಂದು ದೇವಾಲಯಕ್ಕೆ ಹೊರಟ ಸಂದರ್ಭದಲ್ಲಿ ಮತ್ತೆ ನೀಟ್‌ ಶೇವ್‌ ಮಾಡಿಕೊಂಡಿದ್ದಾರೆ. ಇಂದು ಮುಂಜಾನೆ ಅವರು ಬೆಂಗಳೂರಿನ ಜೆಪಿ ನಗರ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನಕ್ಕೆ ತೆರೆಳಿ ವಿಶೇಷ ಪೂಜೆ ಸಲ್ಲಿಸಿದರು. ಪೂಜೆಯ ಬಳಿಕ ಅವರು ಮತ್ತೆ ಮನೆ ಸೇರಿಕೊಂಡರು.

ಇದನ್ನೂ ಓದಿ: Mallikarjun Kharge: ಬುಲ್ಡೋಜರ್‌ ಹೇಳಿಕೆ ನೀಡಿದ ಮೋದಿ ವಿರುದ್ಧ ಕ್ರಮ ಕೈಗೊಳ್ಳಿ; ಚುನಾವಣಾ ಆಯೋಗಕ್ಕೆ ಖರ್ಗೆ

Continue Reading

ಹಾಸನ

Prajwal Revanna Case: ಅಶ್ಲೀಲ ವಿಡಿಯೊ ವೈರಲ್ ಕೇಸ್‌; ವಕೀಲ ದೇವರಾಜೇಗೌಡ ಎಸ್‌ಐಟಿ ಕಸ್ಟಡಿ ಅವಧಿ 2 ವಿಸ್ತರಣೆ

Prajwal Revanna Case: ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊಗಳುಳ್ಳ ಪೆನ್‌ಡ್ರೈವ್‌ ವೈರಲ್‌ ಕೇಸ್‌ಗೆ ಸಂಬಂಧಪಟ್ಟಂತೆ ದೇವರಾಜೇಗೌಡ ಅವರ ಕಸ್ಟಡಿ ಅವಧಿ ಮುಕ್ತಾಯವಾಗಿತ್ತು. ಹೀಗಾಗಿ ಅವರನ್ನು ಇಂದು ಪುನಃ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಮತ್ತೆ ಎರಡು ದಿನ ಕಸ್ಟಡಿಗೆ ಕೇಳಿದ್ದರು. ಹೀಗಾಗಿ ಮೇ 20ರ ಸಂಜೆ ಐದು ಗಂಟೆಗೆ ಕೋರ್ಟ್ ಮುಂದೆ ಹಾಜರು ಪಡಿಸುವಂತೆ ನ್ಯಾಯಾಲಯ ಸೂಚಿಸಿ, ಎರಡು ದಿನ ಕಸ್ಟಡಿಯನ್ನು ಮುಂದುವರಿಸಿ ಆದೇಶಿಸಿದೆ.

VISTARANEWS.COM


on

Prajwal Revanna Case obscene video goes viral Advocate Devarajegowda SIT custody extended by 2 days
Koo

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ವೈರಲ್ ಪ್ರಕರಣದಲ್ಲಿ (Prajwal Revanna Case) ಎಂಟನೇ ಆರೋಪಿಯಾಗಿರುವ ವಕೀಲ ದೇವರಾಜೇಗೌಡ (Devarajegowda) ಅವರನ್ನೂ ಮತ್ತೂ ಎರಡು ದಿನ ಪೊಲೀಸ್‌ ಕಸ್ಟಡಿಗೆ ನೀಡಿ 5ನೇ ಅಧಿಕ ಸಿವಿಲ್ ನ್ಯಾಯಾಲಯ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಆದೇಶಿಸಿದೆ.

ಏಪ್ರಿಲ್ 23 ರಂದು ಹಾಸನ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ನಲ್ಲಿ 8ನೇ ಆರೋಪಿಯಾಗಿ ದೇವರಾಜೇಗೌಡ ಅವರ ಹೆಸರು ಸೇರ್ಪಡೆ ಮಾಡಲಾಗಿದೆ. ಹೀಗಾಗಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದೇವರಾಜೇಗೌಡ ಅವರನ್ನು ವಿಚಾರಣೆಗಾಗಿ ಶುಕ್ರವಾರ ಒಂದು ದಿನದ ಮಟ್ಟಿಗೆ ಎಸ್‌ಐಟಿ ವಶಕ್ಕೆ ಪಡೆಯಲಾಗಿತ್ತು.

ದೇವರಾಜೇಗೌಡ ಅವರ ಕಸ್ಟಡಿ ಅವಧಿ ಮುಕ್ತಾಯವಾಗಿದ್ದರಿಂದ ಪುನಃ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಮತ್ತೆ ಎರಡು ದಿನ ಕಸ್ಟಡಿಗೆ ಕೇಳಿದ್ದರು. ಹೀಗಾಗಿ ಮೇ 20ರ ಸಂಜೆ ಐದು ಗಂಟೆಗೆ ಕೋರ್ಟ್ ಮುಂದೆ ಹಾಜರು ಪಡಿಸುವಂತೆ ನ್ಯಾಯಾಲಯ ಸೂಚಿಸಿ, ಎರಡು ದಿನ ಕಸ್ಟಡಿಯನ್ನು ಮುಂದುವರಿಸಿ ಆದೇಶಿಸಿದೆ.

ಎರಡೆರಡು ಕೇಸ್‌

ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ (physical Abuse) ಕೇಸ್‌ ಆರೋಪಿ ವಕೀಲ ದೇವರಾಜೇಗೌಡ (Devarajegowda) ಅವರ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದರಿಂದ ಅವರನ್ನು ಶುಕ್ರವಾರ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಮೇ 14 ರಂದು ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದ ಹೊಳೆನರಸೀಪುರ ನಗರ ಪೊಲೀಸರು, ಗುರುವಾರವೂ ಒಂದು ದಿನ ಕಸ್ಟಡಿಗೆ ಪಡೆದುಕೊಂಡಿದ್ದರು. ಶುಕ್ರವಾರ ಕೋರ್ಟ್‌ ಮುಂದೆ ಹಾಜರುಪಡಿಸಿದ ಹಿನ್ನೆಲೆಯಲ್ಲಿ ಅವರಿಗೆ ನ್ಯಾಯಾಂಗ ಬಂಧನವಿರಿಸಿ ಆದೇಶಿಸಲಾಗಿತ್ತು. ಸದ್ಯ ನ್ಯಾಯಾಂಗ ಬಂಧನದಲ್ಲಿದ್ದ ವಕೀಲರನ್ನು ಪೆನ್‌ಡ್ರೈವ್‌ ಪ್ರಕರಣದಲ್ಲಿ ಶುಕ್ರವಾರ ಎಸ್‌ಐಟಿ ಕಸ್ಟಡಿಗೆ ಪಡೆದುಕೊಂಡಿತ್ತು. ಈಗ ಮತ್ತೆ ಎರಡು ದಿನ ಕಸ್ಟಡಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಸಾಕ್ಷ್ಯ ಬಿಡುಗಡೆಗೆ ಮುಂದಾಗಿದ್ದ ದೇವರಾಜೇಗೌಡ ಅವರು ಬೇರೆ ಕೇಸ್‌ನಲ್ಲಿ ಬಂಧನವಾಗಿದ್ದಾರೆ. ಒಟ್ಟು ನಾಲ್ಕು ದಿನ ಪೊಲೀಸ್ ಕಸ್ಟಡಿಯಲ್ಲಿದ್ದ ದೇವರಾಜೇಗೌಡ ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.

ದೇವರಾಜೇಗೌಡ ಮೇ 11ರಂದು ಬಂಧನಕ್ಕೆ ಒಳಗಾಗಿದ್ದರು. ಇವರ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪಗಳನ್ನು ಹೊರಿಸಲಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆಗಾಗಿ ಹೊಳೆನರಸೀಪುರ ನಗರ ಠಾಣೆ ಪೊಲೀಸರು ಅವರನ್ನು ಕಸ್ಟಡಿಗೆ ಪಡೆದುಕೊಂಡಿದ್ದರು. ಹೊಳೆನರಸೀಪುರ, ಹಾಸನ ಸೇರಿ ಇತರ ಅಗತ್ಯ ಸ್ಥಳಗಳಿಗೆ ಕರೆದೊಯ್ದು ವಿಚಾರಣೆಯನ್ನು ಕೈಗೊಂಡಿದ್ದರು.

ಸರ್ಕಾರದ ವಿರುದ್ಧ ತೊಡೆ ತಟ್ಟಿದ್ದ ದೇವರಾಜೇಗೌಡ

ವಕೀಲ ದೇವರಾಜೇಗೌಡ ಬಂಧನವಾಗಿರುವುದು ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಾದರೂ ಹಾಸನ ಪೆನ್ ಡ್ರೈವ್ ಪ್ರಕರಣಕ್ಕೇ ತಳುಕು ಹಾಕಿಕೊಂಡಿದೆ. ಈಗಾಗಲೇ ಮಾಜಿ ಸಂಸದ ಶಿವರಾಮೇಗೌಡ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಲ್ಲದೆ, ಅವರ ಜತೆಗಿನ ಮಾತುಕತೆ ಎನ್ನಲಾದ ಆಡಿಯೊವನ್ನು ಬಿಡುಗಡೆ ಮಾಡಿದ್ದರು. ಇದಲ್ಲದೆ, ಸಾಕಷ್ಟು ವಿಡಿಯೊಗಳು, ಸಾಕ್ಷಿಗಳು ಸಹ ತಮ್ಮ ಬಳಿ ಇದೆ ಎಂದು ಹೇಳಿಕೊಂಡಿದ್ದರು. ಸಾಕ್ಷ್ಯಗಳನ್ನು ಮುಂದಿನ ದಿನಗಳಲ್ಲಿ ಸಿಬಿಐ ಮುಂದೆ ಇಡುತ್ತೇನೆ ಎಂದು ಸಹ ಸುದ್ದಿಗೋಷ್ಠಿ ನಡೆಸಿ ನೇರವಾಗಿ ರಾಜ್ಯ ಸರ್ಕಾರದ ವಿರುದ್ಧ ಸವಾಲು ಹಾಕಿದ್ದರು. ಆದರೆ, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಅವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: DK Shivakumar: ದೇವರಾಜೇಗೌಡ ಮೆಂಟಲ್‌ ಕೇಸ್‌; 100 ಕೋಟಿ ರೂ. ಆಫರ್‌ ಮಾಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಲಿ ಎಂದ ಡಿಕೆಶಿ

ಪತಿಯು ಮಾಲೀಕತ್ವದ ಸೈಟ್ ವಿಚಾರವಾಗಿ ದೇವರಾಜೇಗೌಡ ಅವರನ್ನು ಮಹಿಳೆಯೊಬ್ಬರು ಭೇಟಿಯಾಗಿದ್ದರು. ಆ ಪರಿಚಯವನ್ನು ದುರ್ಬಳಕೆ ಮಾಡಿಕೊಂಡು ಲೈಂಗಿಕವಾಗಿ ಬಳಸಿಕೊಂಡಿರುವ ಆರೋಪ ದೇವರಾಜೇಗೌಡ ವಿರುದ್ಧ ಕೇಳಿ ಬಂದಿದೆ.

Continue Reading

ಮಳೆ

Karnataka Weather : ಮಲೆನಾಡಿನಲ್ಲಿ ಮಳೆ ಮೋಡಿ; ಭಾನುವಾರವೂ ಅಬ್ಬರ ಇರಲಿದೆ ನೋಡಿ

Heavy rain : ಶನಿವಾರದಂದು ಚಿಕ್ಕಮಗಳೂರು, ಹಾಸನ, ತುಮಕೂರಲ್ಲಿ ಭಾರಿ ಮಳೆಯಾಗುತ್ತಿದ್ದು, ರಸ್ತೆ ಮೇಲೆ ನದಿಯಂತೆ ನೀರು ಹರಿಯುತ್ತಿದೆ. ರಾಜ್ಯಾದ್ಯಂತ ಇನ್ನೊಂದು ವಾರ ಮಳೆ (Rain News) ಜೋರಾಗಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast Rain alert
Koo

ಚಿಕ್ಕಮಗಳೂರು/ಹಾಸನ: ರಾಜ್ಯಾದ್ಯಂತ ಗುಡುಗು ಸಹಿತ ಮಳೆಯು (Karnataka Weather Forecast) ಅಬ್ಬರಿಸುತ್ತಿದೆ. ಚಿಕ್ಕಮಗಳೂರಿನಲ್ಲಿ ಮಳೆ (Rain News) ಆರ್ಭಟ ಮುಂದುವರಿದಿದೆ. ರಾತ್ರಿಯಿಡೀ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದ್ದು ಹಳ್ಳ ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಕಳಸಾ ಪುರ, ಗಾಳಿ ಹಳ್ಳಿ, ಮಾಗಡಿ, ಬೆಳವಾಡಿ, ಲಕ್ಯಾ, ಸಿಂದಿಗೆರೆ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ರಸ್ತೆ, ಸೇತುವೆ ಮೇಲೆ ನದಿಯಂತೆ ನೀರು ಹರಿಯುತ್ತಿರುದೆ.

ಇನ್ನೂ ಭಾರಿ ಮಳೆಗೆ ಸುತ್ತಮುತ್ತಲಿನ ತೋಟ, ಗದ್ದೆಯು ಸಂಪೂರ್ಣ ಜಲಾವೃತಗೊಂಡಿದೆ. ಕೆರೆಗಳು ಸಂಪೂರ್ಣ ತುಂಬುವ ಹಂತ ತಲುಪಿದೆ. ಚಿಕ್ಕಮಗಳೂರು ತಾಲೂಕಿನ ಐತಿಹಾಸಿಕ ಮಾಗಡಿ ದೊಡ್ಡ ಕೆರೆಗೂ ಭಾರಿ ಪ್ರಮಾಣ ನೀರು ಹರಿದಿದೆ.

ಹಾಸನದಲ್ಲಿ ಸುರಿದ ಧಾರಾಕಾರ ಮಳೆ

ಹಾಸನ ನಗರದ ಹಲವೆಡೆ ಬಿಟ್ಟು ಬಿಡದೆ ಧಾರಾಕಾರವಾಗಿ ಮಳೆ ಸುರಿದಿದೆ. ಶನಿವಾರ ಕಳೆದೊಂದು ಗಂಟೆಯಿಂದ ಹಲವೆಡೆ ಮಳೆ ಆರ್ಭಟಿಸಿದ್ದು, ಜನ ಜೀವನ ಅಸ್ತವ್ಯಸ್ತವಾಗಿತ್ತು. ಭಾರಿ ಮಳೆಗೆ ಹಾಸನ ನಗರದಲ್ಲಿ ಪಾದಾಚಾರಿಗಳು ವಾಹನ ಸವಾರರು ಪರದಾಡಿದರು. ಚನ್ನರಾಯಪಟ್ಟಣ, ಹೊಳೆನರಸೀಪುರ, ಸಕಲೇಶಪುರ, ಆಲೂರು ಭಾಗಗಳಲ್ಲೂ ಮಳೆಯಾಗಿದೆ.

ತುಮಕೂರಿನಲ್ಲಿ ಗುಡುಗು ಸಹಿತ ಮಳೆ

ಶನಿವಾರ ಸಂಜೆಯಾಗುತ್ತಿದ್ದಂತೆ ತುಮಕೂರಿನಲ್ಲಿ ವರುಣನ ಆರ್ಭಟ ಜೋರಾಗಿತ್ತು. ಗುಡುಗು, ಸಿಡಿಲು, ಬಿರುಗಾಳಿ ಸಹಿತ ಮಳೆಯಾಗಿದೆ. ತುಮಕೂರು ನಗರ, ಗ್ರಾಮಾಂತರ, ಗುಬ್ಬಿ ಸೇರಿದಂತೆ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದೆ. ತುಮಕೂರು ನಗರದ ರಸ್ತೆ ಮೇಲೆ ಹಳ್ಳದಂತೆ ಹರಿಯುತ್ತಿರುವ ನೀರಿನಿಂದಾಗಿ ವಾಹನ ಸವಾರರ ಪರದಾಡಬೇಕಾಯಿತು. ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಇದನ್ನೂ ಓದಿ: Koppal Tragedy : ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರು ಸಾವು; ಈಜಲು ಹೋದ ಯುವಕ ನೀರುಪಾಲು

ಭಾನುವಾರವೂ ಇರಲಿದೆ ಮಳೆ ಮೋಡಿ

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಜಿಲ್ಲೆಗಳ ಒಂದು ಅಥವಾ ಸ್ಥಳಗಳಲ್ಲಿ ಮಳೆಯು ಅಬ್ಬರಿಸಲಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವೆಡೆ ಬಿರುಗಾಳಿ (30-40 kmph) ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಹಗುರ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Virat Kohli
ಕ್ರೀಡೆ21 mins ago

Virat Kohli: ಚೆನ್ನೈ ವಿರುದ್ಧದ ಪಂದ್ಯಕ್ಕೂ ಮುನ್ನ ಐಪಿಎಲ್​ ನಿಯಮದ ಬಗ್ಗೆ ಅಸಮಾಧಾನ ಹೊರಹಾಕಿದ ಕೊಹ್ಲಿ

Girish's mother
ಕರ್ನಾಟಕ35 mins ago

Anjali Murder Case: ನನ್ನ ಮಗ ಮಾಡಿದ್ದು ತಪ್ಪು, ಕೋರ್ಟ್ ಅವನಿಗೆ ಯಾವ ಶಿಕ್ಷೆಯಾದ್ರೂ ಕೊಡಲಿ: ಆರೋಪಿ ಗಿರೀಶ್ ತಾಯಿ

HD Deve Gowda
ಕರ್ನಾಟಕ41 mins ago

ಮೋದಿಯವರೇ, 3ನೇ ಬಾರಿ ಪ್ರಧಾನಿಯಾಗಿ ದೇಶ ಮುನ್ನಡೆಸಿ; ಜನುಮ ದಿನದ ಶುಭಾಶಯ ಕೋರಿದ ಪ್ರಧಾನಿಗೆ ದೇವೇಗೌಡರ ಕೃತಜ್ಞತೆ

Viral Video
ದೇಶ43 mins ago

Viral Video: ಐಸ್ ಕ್ರೀಮ್‌ನಲ್ಲಿ ಚಿನ್ನದ ಉಂಗುರ ಅಡಗಿಸಿಕೊಟ್ಟ ಪ್ರಿಯತಮ! ಮುಂದೇನಾಯ್ತು?

Prajwal Revanna Case obscene video goes viral Advocate Devarajegowda SIT custody extended by 2 days
ಹಾಸನ43 mins ago

Prajwal Revanna Case: ಅಶ್ಲೀಲ ವಿಡಿಯೊ ವೈರಲ್ ಕೇಸ್‌; ವಕೀಲ ದೇವರಾಜೇಗೌಡ ಎಸ್‌ಐಟಿ ಕಸ್ಟಡಿ ಅವಧಿ 2 ವಿಸ್ತರಣೆ

RCB vs CSK:
ಕ್ರೀಡೆ50 mins ago

RCB vs CSK: ಗೆದ್ದರೂ ಆರ್​ಸಿಬಿಗೆ ಪ್ಲೇ ಆಫ್​ ಖಚಿತವಲ್ಲ; ಹೀಗಿದೆ ರನ್​ರೇಟ್​ ಲೆಕ್ಕಾಚಾರ!

Karnataka Weather Forecast Rain alert
ಮಳೆ56 mins ago

Karnataka Weather : ಮಲೆನಾಡಿನಲ್ಲಿ ಮಳೆ ಮೋಡಿ; ಭಾನುವಾರವೂ ಅಬ್ಬರ ಇರಲಿದೆ ನೋಡಿ

Koppal tragedy
ಕೊಪ್ಪಳ2 hours ago

Koppal Tragedy : ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರು ಸಾವು; ಈಜಲು ಹೋದ ಯುವಕ ನೀರುಪಾಲು

Prajwal Revanna case Devaraje Gowda should be given mental treatment says Congress
ರಾಜಕೀಯ2 hours ago

Prajwal Revanna Case: ದೇವರಾಜೇಗೌಡರಿಗೆ ಮೆಂಟಲ್‌ ಟ್ರೀಟ್ಮೆಂಟ್‌ ಕೊಡಿಸಬೇಕಿದೆ: ಕಾಂಗ್ರೆಸ್‌ ವ್ಯಂಗ್ಯ

Health Tips in Kannada tomato juice is good for health
ಆರೋಗ್ಯ2 hours ago

Health Tips in Kannada: ಟೊಮ್ಯಾಟೊ ಜ್ಯೂಸ್‌ ಆರೋಗ್ಯಕ್ಕೇಕೆ ಒಳ್ಳೆಯದು ಗೊತ್ತೆ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ22 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌