HD Kumaraswamy: ಸಿಎಂ ಅವರೇ ಬೀಟೆ ಮರ ಕಡಿಸಿ ವಿಕ್ರಮ ಸಿಂಹ ಜಾಗದಲ್ಲಿ ಹಾಕಿಸಿದ್ದಾರೆ: ಎಚ್‌ಡಿಕೆ - Vistara News

ಕರ್ನಾಟಕ

HD Kumaraswamy: ಸಿಎಂ ಅವರೇ ಬೀಟೆ ಮರ ಕಡಿಸಿ ವಿಕ್ರಮ ಸಿಂಹ ಜಾಗದಲ್ಲಿ ಹಾಕಿಸಿದ್ದಾರೆ: ಎಚ್‌ಡಿಕೆ

HD Kumaraswamy: ಸಿಎಂ ಅವರೇ ಬೀಟೆ ಮರ ಕಡಿಸಿ ವಿಕ್ರಮ ಸಿಂಹ ಜಾಗದಲ್ಲಿ ಹಾಕಲು ಅರಣ್ಯ ಅಧಿಕಾರಿಗಳಿಗೆ ಹೇಳಿದ್ದಾರೆ. ಈ ಮೂಲಕ ಪ್ರತಾಪ್ ಸಿಂಹ ವಿರುದ್ಧ ಸಿಎಂ ಸೇಡು ತೀರಿಸಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

VISTARANEWS.COM


on

HD Kumaraswamy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ (Lok Sabha Election) ಗೆಲ್ಲುವ ಒಂದೇ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ರಾಮಭಕ್ತರನ್ನು ಹಾಗೂ ವಿರೋಧ ಪಕ್ಷದ ನಾಯಕರನ್ನು ಟಾರ್ಗೆಟ್ ಮಾಡಿ, ಕಿರುಕುಳ ನೀಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಗಂಭೀರ ಆರೋಪ ಮಾಡಿದರು.

ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಸೇಡು ತೀರಿಸಿಕೊಳ್ಳುವ ಹಾಗೂ ಅವರನ್ನು ಲೋಕಸಭೆ ಚುನಾವಣೆ ಕಣದಿಂದ ತಪ್ಪಿಸಲು ಸ್ವತಃ ಮುಖ್ಯಮಂತ್ರಿ ಅವರೇ ಷಡ್ಯಂತ್ರ ರೂಪಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಅವರು ನೇರ ಆರೋಪ ಮಾಡಿದರು.

ಹಿಂದು ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಹಾಗೂ ಸಂಸದ ಪ್ರತಾಪ್ ಸಿಂಹ ಅವರಿಗೆ ಸರ್ಕಾರ ಕಿರುಕುಳ ನೀಡುತ್ತಿರುವುದು ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಅವರ ಷಡ್ಯಂತ್ರದ ಭಾಗವಾಗಿದೆ ಎಂದು ಎಚ್.ಡಿ. ಕುಮಾರಸ್ವಾಮಿ ನೇರ ಆರೋಪ ಮಾಡಿದರು.

ಕಳೆದ 2-3 ದಿನಗಳಿಂದ ರಾಜ್ಯ ಸರ್ಕಾರದಿಂದ ಅಧಿಕಾರ ದುರ್ಬಳಕೆ ಆಗುತ್ತಿದೆ. ಮಾಧ್ಯಮಗಳಲ್ಲೂ ಸಹ ಬೇರೆ ಯಾವುದೇ ವಿಷಯಗಳಿಗೆ ಗಮನ ಕೊಡಲು ಆಗದಷ್ಟು ರೀತಿಯಲ್ಲಿ ಪ್ರಚಾರ ಸಿಗುತ್ತಿದೆ. ಕಾರಣ ಹುಬ್ಬಳ್ಳಿ ಘಟನೆ. 30 ವರ್ಷದ ಕೇಸ್‌ನಲ್ಲಿ ಕರ ಸೇವಕನ ಬಂಧನ ಆಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯ ನಮ್ಮ ಸ್ನೇಹಿತರು ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುತ್ತಿದ್ದಾರೆ. ಆದರೆ, ಸರ್ಕಾರ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದರು.

5 ಜನ ಅರಣ್ಯ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ. ಅಮಾನತು ಆದ ಕಾರಣ ಏನು? ಬೇಲೂರಿನ ಒಂದು ಗ್ರಾಮದಲ್ಲಿ ಪೂರ್ವ ಅನುಮತಿ ಇಲ್ಲದೆ ಮರ ಕಡಿದಿರುವ ಹಿನ್ನೆಲೆಯಲ್ಲಿ ವರದಿ ಹೋಗಿದೆ. ವರದಿಯಲ್ಲಿ ಸರ್ಕಾರದ ಭೂಮಿಯಲ್ಲಿ ಕಟ್ಟಿರೋ ಮನೆಗಳ ಸಕ್ರಮೀಕರಣ ಮಾಡುವುದಕ್ಕೆ ಮನೆಗಳ ಬಗ್ಗೆ ವರದಿ ತಹಸೀಲ್ದಾರರಿಗೆ ಕೊಟ್ಟಿದ್ದರು. 40 ಎಕರೆ ಭೂಮಿಯನ್ನು 16 ಜನಕ್ಕೆ ಹಕ್ಕುಪತ್ರಗಳನ್ನು ಕೊಟ್ಟಿದ್ದಾರೆ. 4 ಎಕರೆ 12 ಗುಂಟೆ ಗೋಮಾಳ ಆಗಿದೆ. ಸರ್ಕಾರದಿಂದ 16ನೇ ವ್ಯಕ್ತಿ ರಾಕೇಶ್ ಶೆಟ್ಟಿಗೆ 4 ಎಕರೆ ಭೂಮಿ ಕೊಟ್ಟಿದ್ದಾರೆ. ಅವರ ಮಗಳು ಜಯಮ್ಮ ವಿಕ್ರಮ ಸಿಂಹಗೆ ಶುಂಠಿ ಬೆಳೆಯೋಕೆ ಲೀಸ್ ಕೊಟ್ಟಿದ್ದಾರೆ‌. ಲೀಸ್ ಪ್ರಾರಂಭ ಆಗೋದು 2024 ಜನವರಿಯಿಂದಾಗಿದೆ. ಜಯಮ್ಮ ಮತ್ತು ರವಿ ಅನ್ನೋರು ಈ ಮಧ್ಯೆ ಮರ ಕಡಿದಿದ್ದಾರೆ. ಇದಕ್ಕೆ ವಿಕ್ರಂ ಸಿಂಗ್ ಕಾರಣ ಅಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ವಿಕ್ರಮ್‌ ಸಿಂಹ ಪ್ರಕರಣ; ಸರ್ಕಾರದ ಮೇಲೆ ಅನುಮಾನ

ಮರ ಕಡಿದ ಆರೋಪಕ್ಕೆ ಗುರಿ ಆಗಿರುವ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಮ್ ಸಿಂಹ ಅವರ ಮೇಲೆ ಸರಕಾರ ನಡೆಸುತ್ತಿರುವ ದಬ್ಬಾಳಿಕೆ ಬಗ್ಗೆ ಹಲವಾರು ಅನುಮಾನಗಳು ಇವೆ. ಎ1, ಎ2 ಎಂದು ಜಯಮ್ಮ, ರಾಕೇಶ್ ಶೆಟ್ಟಿ ಹೆಸರು ಉಲ್ಲೇಖ ಮಾಡಿದ್ದಾರೆ. ಕೇಸ್ ನಲ್ಲಿ ಎ3 ಇರಲಿಲ್ಲ. ಅಲ್ಲಿ ಸ್ಥಳೀಯ ಒಬ್ಬ ಪುಢಾರಿ ಸಿಎಂಗೆ ಮಾಹಿತಿ ಕೊಟ್ಟು ಪ್ರತಾಪ್ ಸಿಂಹಗೆ ಪಾಠ ಕಲಿಸಬೇಕು ಎಂದು ಅಂತ ತಲೆ ತಿಂದ. ವಿವೇಚನೆ ಕಳೆದುಕೊಂಡ ಸಿಎಂ ಸಿದ್ದರಾಮಯ್ಯ ಆಗ ಅಧಿಕಾರಿಗಳಿಗೆ ಕರೆ ಮಾಡಿ ಬೀಟೆ ಮರ ಕಡಿದು ಆ ಜಾಗದಲ್ಲಿ ಹಾಕುವಂತೆ ಹೇಳಿದ್ದರು ಎಂದು ಮುಖ್ಯಮಂತ್ರಿ ಮೇಲೆ ಎಚ್.ಡಿ. ಕುಮಾರಸ್ವಾಮಿ ನೇರ ಆರೋಪ ಮಾಡಿದರು.

ಸಿಎಂ ಸಿದ್ದರಾಮಯ್ಯ ಅವರು ಸಾಚಾ ಆಗಿದ್ದರೆ ಹೇಳಲಿ. ಅವರ ಪೋನ್ ಕಾಲ್ ಲಿಸ್ಟ್ ತೆಗೆಯಿರಿ, ಸತ್ಯ ಗೊತ್ತಾಗುತ್ತದೆ. ಅನಗತ್ಯವಾಗಿ ಪ್ರತಾಪ್ ಸಿಂಹ ಅವರ ಸಹೋದರನ ಮೇಲೆ ಕೇಸ್ ಹಾಕಿ ಜೈಲಿಗೆ ಹಾಕಿದ್ದಾರೆ. ಇದರ ಸತ್ಯಾಸತ್ಯತೆ ಏನಿದೆ ಎಂಬುದು ಹೊರಗೆ ಬರಲಿ. ಕಾಂಗ್ರೆಸ್‌ನವರು ವಿರೋಧಿಗಳ ದನಿ ಅಡಗಿಸೋಕೆ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕರ ಸೇವಕರ ಮೇಲೆ ದೌರ್ಜನ್ಯವು ನಾಚಿಕೆಗೇಡಿನ ಸಂಗತಿಯಾದರೆ, ವಿಕ್ರಮ್‌ ಸಿಂಹ ಮೇಲಿನ ಪ್ರಕರಣ ಅಧಿಕಾರ ದುರ್ಬಳಕೆಯ ಪರಮಾವಧಿ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.‌

ಸಿಎಂ ಉತ್ತರ ಕೊಡಬೇಕು

ಆ ಭೂಮಿಯನ್ನು ವಿಕ್ರಮ್ ಸಿಂಹ ಗುತ್ತಿಗೆಗೆ ತೆಗೆದುಕೊಂಡಿದ್ದರು. ಮರ ಕಡಿದಿದ್ದು ಜಯಮ್ಮ ಹಾಗೂ ಇನ್ನೊಬ್ಬ ವ್ಯಕ್ತಿ‌. ಬೀಟೆ ಮರವನ್ನು ವಿಕ್ರಮ್ ಸಿಂಹ ಜಾಗಕ್ಕೆ ತಂದು ಹಾಕಿ ಎಂದು ಅಧಿಕಾರಿಗಳಿಗೆ ಕುಮ್ಮಕ್ಕು ಕೊಟ್ಟಿದ್ದು ಸಿಎಂ. ಸಿಎಂ‌ ಸಿದ್ದರಾಮಯ್ಯ ಅವರೇ ಮರ ಕಡಿದು ಹಾಕಿ ಅಂತ ಹೇಳಿ ಬೀಟೆ ಮರ ಹಾಕಿಸಿದ್ದಾರೆ. ಮಂಡ್ಯದಲ್ಲಿ ವಿಧಾನ ಪರಿಷತ್ ಸದಸ್ಯರೊಬ್ಬರು ಸರ್ಕಾರಿ ಜಮೀನಿನಲ್ಲಿ ಮರ ಕಡಿದರು. ಅವರ ಮೇಲೆ ಯಾಕೆ ಕ್ರಮ ಆಗಿಲ್ಲ. ಇದಕ್ಕೆ ಸಿಎಂ, ಗೃಹ ಸಚಿವರೇ ಉತ್ತರ ಕೊಡಬೇಕು ಎಂದು ಎಚ್.ಡಿ. ಕುಮಾರಸ್ವಾಮಿ ಒತ್ತಾಯ ಮಾಡಿದರು.

ಸರ್ಕಾರ ಮಾಡಿದ ತಪ್ಪಿಗೆ ದಲಿತ ಅಧಿಕಾರಿಗೆ ಶಿಕ್ಷೆ ಕೊಡಲಾಗಿದೆ. ಅಮಾನತು ಆಗಿರುವ‌ ಡಿಎಫ್‌ಒ ದಲಿತ ಸಮುದಾಯದ ಅಧಿಕಾರಿ. ಯಾಕೆ ಈ ಅಧಿಕಾರಿಯನ್ನು ಅಮಾನತು ಮಾಡಿದಿರಿ? ಈತ ಪ್ರಾಮಾಣಿಕ ದಲಿತ ಅಧಿಕಾರಿ. ಅವರ ಮೇಲೆ ಯಾಕೆ ಕ್ರಮ ಆಯಿತು? ಹಾಸನಕ್ಕೆ ಯಾರ ಶಿಫಾರಸು ಮೇರೆಗೆ ಅವರನ್ನು ಪೋಸ್ಟಿಂಗ್ ಮಾಡಿದಿರಿ? ಅವರನ್ನು ಹಾಸನಕ್ಕೆ ಹಾಕಿಸಲು ಯಾವ ಎಂಎಲ್‌ಎ ಬಂದು ಕೂತಿದ್ದ? ಆ ಶಾಸಕ ಆ ಅಧಿಕಾರಿಯಿಂದ ಎಷ್ಟು ಹಣ ತೆಗೆದುಕೊಂಡ? ಯಶವಂತಪುರದಲ್ಲಿ ಹಣದ ವ್ಯವಹಾರ ಆಗಿದೆ. ಯಶವಂತಪುರದಲ್ಲಿ ಹಣದ ಡೀಲ್ ಆಗಿದೆ. ಅದನ್ನು ಹೊರಗೆ ತೆಗೆಯುವಿರಾ? ಎಂದು ಸಿದ್ದರಾಮಯ್ಯ ಅವರಿಗೆ ಎಚ್.ಡಿ. ಕುಮಾರಸ್ವಾಮಿ ನೇರ ಸವಾಲು ಹಾಕಿದರು.

ವಿಕ್ರಮ್ ಸಿಂಹ ಕೇಸ್ ರಾಜಕೀಯ ಪ್ರೇರಿತ ಎನ್ನುವುದಕ್ಕೆ ಎ1,ಎ2 ಗೆ ಅರಣ್ಯ ಇಲಾಖೆಯ ಅಧಿಕಾರಿಗಳೇ ಜಾಮೀನು ಕೊಡುತ್ತಾರೆ. ಆದರೆ,‌ ವಿಕ್ರಮ್‌ ಸಿಂಹ ಭೇಟಿ ಆಗಿ ಮಾಹಿತಿ ಕೊಟ್ಟು ಹೋದರೂ ಆ ಹುಡುಗನನ್ನು ಬಂಧನ ಮಾಡಿದರು. ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದಾಗ ನ್ಯಾಯಾಧೀಶರು ಇವರ ಮುಖಕ್ಕೆ ಮಂಗಳಾರತಿ ಮಾಡಿದರು. ವಿಕ್ರಮ್ ಸಿಂಹ ಅವರನ್ನು ಯಾಕೆ ಅರೆಸ್ಟ್ ಮಾಡಿದರು? ಎಂದು ಎಚ್.ಡಿ. ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದರು.

ಶಾಸಕ ಹಣ ಪಡೆದು‌ ಅರಣ್ಯಾಧಿಕಾರಿಯನ್ನು ವರ್ಗ ಮಾಡಿಸಿಕೊಂಡಿದ್ದಾರೆ. ಹಣ ಪಡೆದು ಡಿಎಫ್‌ಒ ಅವರನ್ನು ಹಾಸನಕ್ಕೆ ನೇಮಕ ಮಾಡಿದ್ದಾರೆ. ಪಾಪ ಆ ಅಧಿಕಾರಿ ಹಣಕೊಟ್ಟು ಈ ಅಮಾನತು ಆಗಿದ್ದಾರೆ. ವಿಕ್ರಮ ಸಿಂಹ ತಪ್ಪು ಮಾಡದೇ ಹೋದರು ಅರೆಸ್ಟ್ ಮಾಡ್ತೀರಾ? ಸಿಎಂ ಅವರೇ ಬೀಟೆ ಮರ ಕತ್ತರಿಸಿ ತಂದು ಅವರ ಜಾಗದಲ್ಲಿ ಹಾಕಿ ಎಂದು ಅಧಿಕಾರಿಗಳಿಗೆ ಹೇಳಿದ್ದಾರೆ. ನನಗೆ ಅಧಿಕಾರಿಗಳೇ ಮಾಹಿತಿ ಕೊಟ್ಟಿದ್ದಾರೆ. ಬೇಕಿದ್ದರೆ ಸಿಎಂ ಕಾಲ್ ಲಿಸ್ಟ್ ತೆಗೆಸಿ ನೋಡಿ. ಬೇಕಿದ್ದರೆ ನಾಗಮೋಹನ್ ದಾಸ್ ಕಮಿಟಿಗೆ ತನಿಖೆ ಮಾಡಿ. ಸಿಎಂ ಅವರೇ ಬೀಟೆ ಮರ ಕಡಿದು ಹಾಕಲು ಹೇಳಿದ್ದು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನೇರ ಆರೋಪ ಮಾಡಿದರು.

ಸಿಎಂ ಆದೇಶದಂತೆ ಬೀಟೆ ಮರವನ್ನು ಗೆಂಡೆಕೆರೆಯಿಂದ ಕಟ್ ಮಾಡಿಕೊಂಡು ಬಂದು ಇಲ್ಲಿ ಹಾಕೋಕೆ ಸಿಎಂ ಹೇಳಿದ್ದಾರೆ‌.ಪ್ರತಾಪ್ ಸಿಂಹನ ಸಹೋದರ ಮರ ಕಡಿದಿಲ್ಲ. ಸಿಎಂ ಹೇಳಿ ಮರ ಕಡಿಸಿ ಹಾಕಿಸಿ‌ ಪ್ರತಾಪ್ ಸಿಂಹ ಹೆದರಿಸೋಕೆ ಹೀಗೆ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಹಾಸನದ ಶಾಸಕರು ಯಾರು ಇದ್ದಾರೆ? ಯಾರು ಹಾಸನದಲ್ಲಿ ವರ್ಗಾವಣೆ ದಂಧೆ ನೋಡಿಕೊಳ್ತಿದ್ದಾರೆ, ಅವರೇ ಇದನ್ನು ಮಾಡಿದ್ದಾರೆ. ಅವರೇ DFO ಅವರಿಂದ ಹಣ ಪಡೆದಿದ್ದಾರೆ ಎಂದು ಅವರು ಆರೋಪ ಮಾಡಿದರು.

ಸೇಡು, ಅಧಿಕಾರ ದುರುಪಯೋಗ

ಇವತ್ತು ಅಯೋಧ್ಯೆ ದೇವಾಲಯ ಉದ್ಘಾಟನೆ ಬಗ್ಗೆ ದೇಶದಲ್ಲಿ ಚರ್ಚೆ ಆಗುತ್ತಿದೆ. ನಮ್ಮ ರಾಜ್ಯದಲ್ಲಿ ಹಲವು ಸಮಸ್ಯೆ ಎದುರಿಸುತ್ತಿದ್ದೇವೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಸರ್ಕಾರಕ್ಕೆ ಯಾವುದರ ಕಾಳಜಿ ಇಲ್ಲ. ಇಂತಹ ವಿಷಯ ಮುನ್ನಲೆಗೆ ತಂದು ವಿಷಯ ಡೈವರ್ಟ್ ಮಾಡ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀಕಾಂತ್ ಪೂಜಾರಿ ಪ್ರಕರಣ ದೊಡ್ಡದು ಮಾಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ದೂರಿದರು.

ಕರ ಸೇವಕರ ಮೇಲೆ ಸರ್ಕಾರ ದಬ್ಬಾಳಿಕೆ ಮಾಡುತ್ತಿದೆ. ಈದ್ಗಾ ಮೈದಾನದಲ್ಲಿ ಗಲಾಟೆ ಆಗಿದ್ದಾಗ ದೇವೇಗೌಡರು ಹೇಗೆ ನಿಭಾಯಿಸಿದರು ಅಂತ ಗೊತ್ತಿದೆ. ಈ ಸರ್ಕಾರ ವಿರೋಧಿಗಳ ಮೇಲೆ ದಬ್ಬಾಳಿಕೆ, ದಮನ ಮಾಡೋ ಕೆಲಸ ಸರ್ಕಾರ ಮಾಡುತ್ತಿದೆ. ಅಧಿಕಾರ ದುರುಪಯೋಗ, ಸುಳ್ಳು ಕೇಸ್ ಮೂಲಕ ಕರ ಸೇವಕರ ಬಂಧನ ವಿಚಾರವಾಗಿ ಸಿಎಂ, ಗೃಹ ಸಚಿವರು ಅದನ್ನೇ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಬಿ.ಕೆ. ಹರಿಪ್ರಸಾದ್‌ ಅವರ ಗೋಧ್ರಾ ಹೇಳಿಕೆ ಮಕ್ಕಳಾಟದಂತೆ ಇದೆ. ಪರ-ವಿರೋಧ ಚರ್ಚೆ ಎರಡೂ ಕಡೆ ನಡೆಯುತ್ತಿದೆ. ರಾಜ್ಯ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ. ಬಿಜೆಪಿ ನಾಯಕರು ಕಾರ್ಯಕರ್ತರು, ಸಂಘಟನೆಗಳ ವ್ಯಕ್ತಿಗಳ ಮೇಲೆ ಕೇಸ್ ಹಾಕಿ ಅಧಿಕಾರ ದುರುಪಯೋಗ ಮಾಡಲಾಗುತ್ತಿದೆ. ಇದಕ್ಕೆ ಬಿಜೆಪಿ ಪ್ರತಿಭಟನೆ ಪ್ರಾರಂಭ ಮಾಡಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: Nice Project: ಕೂಡಲೇ ನೈಸ್‌ ಯೋಜನೆಯನ್ನು ವಾಪಸ್‌ ಪಡೆಯಿರಿ; ಸಿಎಂ ವಿರುದ್ಧ ಗುಡುಗಿದ ದೇವೇಗೌಡ

ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್, ಮಾಜಿ ಸಂಸದ ಕುಪೆಂದ್ರ ರೆಡ್ಡಿ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್. ಎಂ.ರಮೇಶ್ ಗೌಡ, ಮಾಜಿ ಶಾಸಕರಾದ ಮಹದೇವು, ಅಶ್ವಿನ್ ಕುಮಾರ್, ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಮುಂತಾದವರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮೈಸೂರು

Drowned In water : ಈಜಲು 20 ಅಡಿ ಎತ್ತರದಿಂದ ನೀರಿನ ಬುಗ್ಗೆಗೆ ಜಿಗಿದವನು ಮತ್ತೆ ಏಳಲೇ ಇಲ್ಲ!

Drowned In water : ಪುತ್ತೂರು ಘಟನೆ ಮಾಸುವ ಮೈಸೂರಿನಲ್ಲೂ ಯುವಕನೊಬ್ಬ ಕೆರೆಯಲ್ಲಿ ಈಜಲು ಹೋಗಿ ನೀರುಪಾಲಾಗಿದ್ದಾನೆ. ಹರಿಯುತ್ತಿರುವ ಕೆರೆಗೆ ಸುಮಾರು 20 ಅಡಿ ಎತ್ತರದಿಂದ ಜಿಗಿದಿದ್ದಾನೆ. ಆದರೆ ಮತ್ತೆ ಮೇಲೆ ಬರಲಿಲ್ಲ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

VISTARANEWS.COM


on

By

Drowned in water mysuru
ಮೃತ ದುರ್ದೈವಿ
Koo

ಮೈಸೂರು: ರಣ ಬೇಸಿಗೆ ಹಿನ್ನೆಲೆಯಲ್ಲಿ ಸೆಕೆ ತಾಳಲಾರದೆ ಯುವಕನೊಬ್ಬ ಕೆರೆಯಲ್ಲಿ ಈಜಲು (Drowned In water) ಹೋಗಿ ನೀರುಪಾಲಾಗಿದ್ದಾನೆ. ಮೈಸೂರಿನ ನಂಜನಗೂಡು ತಾಲೂಕಿನ ಕೋಣನೂರು ಗ್ರಾಮದ ಕೆರೆಯಲ್ಲಿ ಘಟನೆ ನಡೆದಿದೆ. ಚಾಮರಾಜನಗರದ ರಾಮಸಮುದ್ರ ಗ್ರಾಮದ ದೊಡ್ಡ ಬೀದಿ ನಿವಾಸಿ ಗುಣಶೇಖರ್(22) ಮೃತ ದುರ್ದೈವಿ.

ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿದ್ದ ಗುಣಶೇಖರ್‌ ಕಪಿಲಾ ನದಿಯಿಂದ ಕೆರೆಗೆ ನೀರು ಹರಿಯುತ್ತಿತ್ತು. ಈ ವೇಳೆ ನೀರಿನ ಬುಗ್ಗೆಯ ಮೇಲೆ ಜಿಗಿದಿದ್ದಾನೆ. ಸುಮಾರು 20 ಅಡಿ ಎತ್ತರವಿದ್ದ ನೀರು ಚಿಮ್ಮುವ ಬುಗ್ಗೆಗೆ ಮೇಲಿನಿಂದ ಕೆಳಗೆ ಜಂಪ್ ಮಾಡಿದ್ದಾನೆ. ಮೇಲಿಂದ ಜಂಪ್ ಮಾಡಿದ ಪರಿಣಾಮ ಕೆಳಗಡೆ ಬಿದ್ದವನು ಮತ್ತೆ ಮೇಲೆ ಏಳಲೇ ಇಲ್ಲ.

ಸ್ಥಳಕ್ಕೆ ಕವಲಂದೆ ಪೊಲೀಸ್ ಠಾಣೆಯ ಪಿಎಸ್ಐ ಕೃಷ್ಣಕಾಂತ ಕೋಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮೇಲೆಯೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಲಿದ್ದಾರೆ. ಕವಲಂದೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಹೆತ್ತವರ ಕಣ್ಣೇದುರಿಗೆ ನೇತ್ರಾವತಿ ನದಿಯಲ್ಲಿ ಕೊಚ್ಚಿ ಹೋದರು ಪುತ್ರಿಯರು

ಪುತ್ತೂರು: ಪೋಷಕರ ಎದುರೇ ಮಕ್ಕಳಿಬ್ಬರು ನೀರುಪಾಲಾಗಿದ್ದಾರೆ. ದಕ್ಷಿಣ ಕನ್ನಡದ ಬಂಟ್ವಾಳದ ನಾವೂರು ಎಂಬಲ್ಲಿ ಈ ದುರಂತ (Drowned In water) ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಎಂಬುವವರ ಪುತ್ರಿ ಆಶ್ರಾ (11), ಇಲಿಯಾಸ್ ಎಂಬುವವರ ಪುತ್ರಿ ನಾಶಿಯಾ (14) ನೀರುಪಾಲಾಗಿದ್ದಾರೆ.

ಎರಡು ಕುಟುಂಬಗಳು ತಮ್ಮ ಮಕ್ಕಳೊಂದಿಗೆ ನೇತ್ರಾವತಿ ನದಿ ತೀರಕ್ಕೆ ತೆರಳಿದ್ದರು. ಈ ವೇಳೆ ನೀರಿನಲ್ಲಿ ಆಟವಾಡುವಾಗ ಏಕಾಏಕಿ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದಾರೆ. ಪೋಷಕರ ಮುಂದೆಯೇ ಬಾಲಕಿಯರು ನೀರುಪಾಲಾಗಿದ್ದಾರೆ. ಈಜು ಬಾರದ ಹಿನ್ನೆಲೆಯಲ್ಲಿ ಮಕ್ಕಳನ್ನು ರಕ್ಷಿಸಲಾಗದೆ ಪೋಷಕರು ಅಸಹಾಯಕರಾಗಿದ್ದರು.

ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಮೇಲಕ್ಕೆತ್ತಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ: Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮುಂಡರಗಿ ಬಳಿ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರ ಸಾವು

ಗದಗ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ನಡೆದಿದೆ. ತಂಗಿಯ ಮಗನೊಂದಿಗೆ ಮಹಿಳೆಯೊಬ್ಬರು ನೀರು ತರಲು‌ ಕೃಷಿ ಹೊಂಡಕ್ಕೆ ಹೋದಾಗ ಘಟನೆ ನಡೆದಿದೆ.

ಗೀತಾ ಹೆಸರೂರು (34), ಮನೋಜ ಕವಲೂರು (5) ಮೃತರು. ಮೊದಲಿಗೆ ಮನೋಜ್ ಹೊಂಡದಲ್ಲಿ ಕಾಲು‌ ಜಾರಿ ಬಿದ್ದಿದ್ದಾನೆ. ಬಾಲಕನ ರಕ್ಷಣೆಗೆ ಹೋಗಿದ್ದ ಗೀತಾ ಕೂಡ ನೀರಿನಲ್ಲಿ ಮುಳುಗಿದ್ದಾರೆ. ಶಾಲೆ ರಜೆ ಹಿನ್ನೆಲೆ ದೊಡ್ಡಮ್ಮನ ಮನೆಗೆ ಮನೋಜ್ ಬಂದಿದ್ದ. ಬಾಲಕನ ಜತೆಗೆ ಕೃಷಿ ಹೊಂಡಕ್ಕೆ ಗೀತಾ ಹೋಗಿದ್ದಾಗ ದುರ್ಘಟನೆ ನಡೆದಿದೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದಕ್ಷಿಣ ಕನ್ನಡ

Drowned In water : ಹೆತ್ತವರ ಕಣ್ಣೇದುರಿಗೆ ನೇತ್ರಾವತಿ ನದಿಯಲ್ಲಿ ಕೊಚ್ಚಿ ಹೋದರು ಪುತ್ರಿಯರು

Drowned In water : ಹೆತ್ತವರ ಕಣ್ಣೇದುರಿಗೆ ಇಬ್ಬರು ಪುತ್ರಿಯರು ನೀರುಪಾಲಾದ ದುರಂತ ನಡೆದಿದೆ. ನೇತ್ರಾವತಿ ನದಿ ತೀರಕ್ಕೆ ತೆರಳಿದವರು, ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

By

Drowned in water
ಸಾಂದರ್ಭಿಕ ಚಿತ್ರ
Koo

ಪುತ್ತೂರು: ಪೋಷಕರ ಎದುರೇ ಮಕ್ಕಳಿಬ್ಬರು ನೀರುಪಾಲಾಗಿದ್ದಾರೆ. ದಕ್ಷಿಣ ಕನ್ನಡದ ಬಂಟ್ವಾಳದ ನಾವೂರು ಎಂಬಲ್ಲಿ ಈ ದುರಂತ (Drowned In water) ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಎಂಬುವವರ ಪುತ್ರಿ ಆಶ್ರಾ (11), ಇಲಿಯಾಸ್ ಎಂಬುವವರ ಪುತ್ರಿ ನಾಶಿಯಾ (14) ನೀರುಪಾಲಾಗಿದ್ದಾರೆ.

ಎರಡು ಕುಟುಂಬಗಳು ತಮ್ಮ ಮಕ್ಕಳೊಂದಿಗೆ ನೇತ್ರಾವತಿ ನದಿ ತೀರಕ್ಕೆ ತೆರಳಿದ್ದರು. ಈ ವೇಳೆ ನೀರಿನಲ್ಲಿ ಆಟವಾಡುವಾಗ ಏಕಾಏಕಿ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದಾರೆ. ಪೋಷಕರ ಮುಂದೆಯೇ ಬಾಲಕಿಯರು ನೀರುಪಾಲಾಗಿದ್ದಾರೆ. ಈಜು ಬಾರದ ಹಿನ್ನೆಲೆಯಲ್ಲಿ ಮಕ್ಕಳನ್ನು ರಕ್ಷಿಸಲಾಗದೆ ಪೋಷಕರು ಅಸಹಾಯಕರಾಗಿದ್ದರು.

ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಮೇಲಕ್ಕೆತ್ತಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ: Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮುಂಡರಗಿ ಬಳಿ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರ ಸಾವು

ಗದಗ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ನಡೆದಿದೆ. ತಂಗಿಯ ಮಗನೊಂದಿಗೆ ಮಹಿಳೆಯೊಬ್ಬರು ನೀರು ತರಲು‌ ಕೃಷಿ ಹೊಂಡಕ್ಕೆ ಹೋದಾಗ ಘಟನೆ ನಡೆದಿದೆ.

ಗೀತಾ ಹೆಸರೂರು (34), ಮನೋಜ ಕವಲೂರು (5) ಮೃತರು. ಮೊದಲಿಗೆ ಮನೋಜ್ ಹೊಂಡದಲ್ಲಿ ಕಾಲು‌ ಜಾರಿ ಬಿದ್ದಿದ್ದಾನೆ. ಬಾಲಕನ ರಕ್ಷಣೆಗೆ ಹೋಗಿದ್ದ ಗೀತಾ ಕೂಡ ನೀರಿನಲ್ಲಿ ಮುಳುಗಿದ್ದಾರೆ. ಶಾಲೆ ರಜೆ ಹಿನ್ನೆಲೆ ದೊಡ್ಡಮ್ಮನ ಮನೆಗೆ ಮನೋಜ್ ಬಂದಿದ್ದ. ಬಾಲಕನ ಜತೆಗೆ ಕೃಷಿ ಹೊಂಡಕ್ಕೆ ಗೀತಾ ಹೋಗಿದ್ದಾಗ ದುರ್ಘಟನೆ ನಡೆದಿದೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Prajwal Revanna Case: ಗಂಡ, ಮಗನ ಕೇಸ್‌ನಿಂದ ಭವಾನಿ ರೇವಣ್ಣಗೂ ಕಾನೂನು ಕಂಟಕ?

Prajwal Revanna Case: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ ಈಗಾಗಲೇ ರೇವಣ್ಣ ಎಸ್‌ಐಟಿ ವಶದದಲ್ಲಿದ್ದಾರೆ. ಪ್ರಜ್ವಲ್‌ ಬಂಧನಕ್ಕೆ ಅಧಿಕಾರಿಗಳು ಹೊಂಚು ಹಾಕಿದ್ದಾರೆ. ಇತ್ತ ರೇವಣ್ಣ ಅವರ ಪತ್ನಿ ಭವಾನಿ ಅವರಿಗೂ ಕಾನೂನು ಕಂಟಕ ಎದುರಾಗುವ ಸಾಧ್ಯತೆ ಇದೆ. ಪ್ರಕರಣದಲ್ಲಿ ರೇವಣ್ಣ ಅವರ ಪತ್ನಿ ಭವಾನಿ ಹೆಸರೂ ಕೇಳಿ ಬಂದಿದ್ದು, ಅವರಿಗೂ ಸಂಕಷ್ಟ ಎದುರಾಗಲಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ(Hassan Pen Drive Case)ದಲ್ಲಿ ದಿನಕ್ಕೊಂಡು ಬೆಳವಣಿಗೆ ನಡೆಯುತ್ತದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಪ್ರಜ್ವಲ್‌ ತಂದೆ, ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದು ವಿಚಾರಣೆಯನ್ನು ತೀವ್ರಗೊಳಿಸಿದೆ. ಈ ಮಧ್ಯೆ ಪ್ರಕರಣದಲ್ಲಿ ರೇವಣ್ಣ ಅವರ ಪತ್ನಿ ಭವಾನಿ ಹೆಸರೂ ಕೇಳಿ ಬಂದಿದ್ದು, ಅವರಿಗೂ ಸಂಕಷ್ಟ ಎದುರಾಗಲಿದೆ.

ಎರಡು ಕೇಸ್‌ನಲ್ಲಿ ಸಂತ್ರಸ್ತೆಯರು ಭವಾನಿ ರೇವಣ್ಣ ಅವರ ಹೆಸರು ಉಲ್ಲೇಖಿಸಿದ್ದಾರೆ. ಲೈಂಗಿಕ ಕಿರುಕುಳ ಆರೋಪ ಮತ್ತು ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಹೆಸರು ಕೇಳಿ ಬಂದಿದೆ. ಅದರಲ್ಲಿಯೂ ಅಪಹರಣ ಕೇಸ್‌ನಲ್ಲಿ ನೇರವಾಗಿ ಭವಾನಿ ರೇವಣ್ಣ ಅವರ ವಿರುದ್ಧ ಆರೋಪ ಮಾಡಲಾಗಿದೆ. ಭವಾನಿ ರೇವಣ್ಣ ಕರೆದರು ಎಂದು ಹೇಳಿಯೇ ಅಪಹರಣ ಮಾಡಲಾಗಿದೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಕಿಡ್ನಾಪ್ ಕೇಸ್‌ನಲ್ಲಿ ಭವಾನಿ ರೇವಣ್ಣ ಅವರಿಗೆ ಕಾನೂನು ಕಂಟಕ ಎದುರಾಗುವ ಸಾಧ್ಯತೆ ಇದೆ.

ಪ್ರಕರಣ ಸಂಬಂಧ ತೀವ್ರ ತನಿಖೆ ನಡೆಸುತ್ತಿರುವ ಎಸ್‌ಐಟಿ ಈಗಾಗಲೇ ಭವಾನಿ ರೇವಣ್ಣ ಅವರಿಗೆ ನೋಟಿಸ್‌ ನೀಡಿ ಮಾಹಿತಿ ಪಡೆದಿದೆ. ತನಿಖೆ ವೇಳೆ ಅವರ ವಿರುದ್ಧ ಸಾಕ್ಷಿ ಕಂಡು ಬಂದರೆ ಅವರೂ ಕಾನೂನಿನ ಕೈಗೆ ಸಿಲುಕಿಕೊಳ್ಳಲಿದ್ದಾರೆ. ಸದ್ಯ ಭವಾನಿ ರೇವಣ್ಣ ಅವರ ಪಾತ್ರದ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜ್ವಲ್ ರೇವಣ್ಣಗಾಗಿ ತೀವ್ರ ಹುಡುಕಾಟ

ಇತ್ತ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ ರೇವಣ್ಣ ಅವರಿಗಾಗಿ ಎಸ್‌ಐಟಿ ತೀವ್ರ ಹುಡುಕಾಟ ನಡೆಸುತ್ತಿದೆ. ಬ್ಲೂ ಕಾರ್ನರ್ ನೋಟಿಸ್ ಜತೆಗೆ ರೆಡ್ ಕಾರ್ನರ್ ನೋಟಿಸ್‌ ಹೊರಡಿಸಲು ಸಿಬಿಐಗೆ ಎಸ್‌ಐಟಿ ಮನವಿ ಸಲ್ಲಿಸಿದೆ. ಪ್ರಜ್ವಲ್ ರೇವಣ್ಣ ಬಳಿ ಇರುವ ರಾಜತಾಂತ್ರಿಕ ಪಾಸ್‌ಪೋರ್ಟ್ ಸಹ ವಜಾಗೊಳಿಸಲು ಆಗ್ರಹಿಸಿದೆ. ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್‌ನಿಂದ ಕೊನೆಯ ಬಾರಿ ಯಾವ ದೇಶಕ್ಕೆ ಟಿಕೇಟ್ ಬುಕ್ ಅಗಿದೆ ಎಂಬ ಮಾಹಿತಿಯನ್ನೂ ಎಸ್‌ಐಟಿ ಕಲೆ ಹಾಕುತ್ತಿದೆ. ಕೊನೆಯ ಬಾರಿ ಯಾವ ಏರ್‌ಪೋರ್ಟ್‌ ತಲುಪಿದ್ದಾರೆ ಎನ್ನುವ ಮಾಹಿತಿ ನೀಡಲು ರೆಡ್ ಕಾರ್ನರ್ ನೊಟೀಸ್ ನೀಡಿ ಮನವಿ ಮಾಡಿದೆ.

ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿಲು ಎಲ್ಲ ರೀತಿಯಿಂದಲೂ ಎಸ್‌ಐಟಿ ಪ್ರಯತ್ನ ಪಡುತ್ತಿದೆ. ಪ್ರಜ್ವಲ್ ರೇವಣ್ಣ ಅವರು ಆಪ್ತರ ಜತೆ ಸಂಪರ್ಕದಲ್ಲಿರುವ ಹಿನ್ನೆಲೆಯಲ್ಲಿ ಆಪ್ತರು ಹಾಗೂ ಕುಟುಂಬದ ಸದಸ್ಯರ ಮೇಲೆಯೂ ನಿಗಾವಹಿಸಲಾಗಿದೆ. ರಾಜ್ಯದಲ್ಲಿ ಎರಡನೇ ಹಂತ ಮುಗಿದ ನಂತರ ಪ್ರಜ್ವಲ್‌ ಎಸ್‌ಐಟಿ ಮುಂದೆ ಶರಣಾಗುತ್ತಾರೆ ಎನ್ನುವ ಮಾತು ಕೂಡ ಕೇಳಿ ಬಂದಿದೆ. ಅದಾಗ್ಯೂ ದೇಶದ ಪ್ರಮುಖ ಏರ್‌ಪೋರ್ಟ್‌ಗಳಲ್ಲಿ ಎಸ್‌ಐಟಿ ಅಧಿಕಾರಿಗಳು ಮೇಲೆ ನಿಗಾ ವಹಿಸಿದ್ದಾರೆ. ಕರ್ನಾಟಕದಲ್ಲಿ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ.

Continue Reading

ಕರ್ನಾಟಕ

Prajwal Revanna Case: ಎಚ್‌.ಡಿ.ರೇವಣ್ಣರಿಗೆ ಇಂದು ಜಾಮೀನು ಸಿಗುತ್ತಾ?

Prajwal Revanna Case: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬಂಧನದಲ್ಲಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ವಿಚಾರಣೆಯನ್ನು ಎಸ್‌ಐಟಿ ತೀವ್ರಗೊಳಿಸಿದೆ. ಈ ಮಧ್ಯೆ ಇಂದು (ಮೇ 6) ರೇವಣ್ಣ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ. ಆದರೆ ಬೇಲ್‌ ಸಿಗುವ ಸಾಧ್ಯತೆ ಇಲ್ಲ ಎನ್ನಲಾಗುತ್ತದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಈಗಾಗಲೇ ಬಂಧನದಲ್ಲಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ವಿಚಾರಣೆಯನ್ನು ಎಸ್‌ಐಟಿ ತೀವ್ರಗೊಳಿಸಿದೆ. ಈ ಮಧ್ಯೆ ಇಂದು (ಮೇ 6) ರೇವಣ್ಣ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ.

ಈ ಹಿಂದೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದ್ದರಿಂದ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಆದರೆ ಇಂದು ಕೂಡ ಜಾಮೀನು ದೊರೆಯು ಸಾಧ್ಯತೆ ಕಡಿಮೆ ಎನ್ನಲಾಗಿದೆ. ಹೀಗಾಗಿ ಇನ್ನೂ ನಾಲ್ಕು ದಿನ ರೇವಣ್ಣ ಅವರು ಎಸ್‌ಐಟಿ ವಶದಲ್ಲಿರುವುದು ಅನಿವಾರ್ಯವಾಗಲಿದೆ.

ಭಾನುವಾರ ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಆ ವೇಳೆ ರೇವಣ್ಣ ಅವರನ್ನು ನ್ಯಾಯಾಧೀಶರು ನಾಲ್ಕು ದಿನ ಎಸ್ಐಟಿ ಕಸ್ಟಡಿಗೆ ನೀಡಿದ್ದರು. ಹೀಗಾಗಿ ತನಿಖಾ ಭಾಗವಾಗಿ ನಾಲ್ಕು ದಿನಗಳ ಕಾಲ ರೇವಣ್ಣ ಎಸ್‌ಐಟಿ ವಶದಲ್ಲಿ ಇರಲಿದ್ದಾರೆ.

ಇಂದು ರೇವಣ್ಣ ಪರ ವಕೀಲರು ಬೇಲ್ ಅರ್ಜಿ ಸಲ್ಲಿಸಿದರೆ ಎಸ್ಐಟಿ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದಾರೆ. ಕಸ್ಟಡಿಯಲ್ಲಿರುವ ಅವರಿಗೆ ಹಿನ್ನೆಲೆ ಜಾಮೀನು ಕೊಟ್ಟರೆ ತನಿಖೆಗೆ ಹಿನ್ನೆಡೆಯಾಗಬಹುದು ಎಂದು ಎಸ್‌ಐಟಿ ವಾದ ಮಂಡಿಸಲಿದೆ. ಇದೇ ಕಾರಣಕ್ಕೆ ರೇವಣ್ಣ ಅವರಿಗೆ ಇಂದು ಜಾಮೀನು ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಕಸ್ಟಡಿ ಅವಧಿ ನಂತರವೇ ಜಾಮೀನು ಭಾಗ್ಯ ಲಭಿಸಲಿದೆ ಎಂದು ಮೂಲಗಳು ತಿಳಿಸಿವೆ.

ಒತ್ತಡದಲ್ಲಿರುವ ರೇವಣ್ಣ

ಇನ್ನು ಎಸ್‌ಐಟಿ ವಶದಲ್ಲಿರುವ ರೇವಣ್ಣ ಅವರು ಮಾನಸಿಕವಾಗಿ ಕುಗ್ಗಿದ್ದಾರೆ. ಸುಸ್ತಾಗಿರುವಂತೆ ಅವರು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ನಿನ್ನೆ ತಡರಾತ್ರಿ ಎಸ್ಐಟಿ ಅಧಿಕಾರಿಗಳು ಯಾವುದೇ ವಿಚಾರಣೆ ನಡೆಸಲಿಲ್ಲ. ಇಂದು ಬೆಳಗ್ಗೆ ಮತ್ತೆ ಪ್ರಕರಣದ ಬಗ್ಗೆ ಪ್ರಶ್ನಿಸಲಿದ್ದಾರೆ.

ರೇವಣ್ಣ ಬಂಧನವಾಗಿ 24 ಗಂಟೆ ಕಳೆದರೂ ಅವರನ್ನು ಭೇಟಿಯಾಗಲು ಅವರ ಕುಟುಂಬಸ್ಥರು ಆಗಮಿಸಿಲ್ಲ. ಯಾವಾಗಲೂ ರಾಜಕೀಯ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ರೇವಣ್ಣ ಸದ್ಯ ಒಬ್ಬಂಟಿಯಾಗಿದ್ದಾರೆ. ಶನಿವಾರ ಬಂಧನವಾದಾಗಿನಿಂದ ಸರಿಯಾಗಿ ನಿದ್ದೆ ಮಾಡದೇ ತಲೆ ಕೆಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸ್ಥಳ ಮಹಜರು

ಇಂದು (ಮೇ 6) ಸ್ಥಳ ಮಹಜರಿಗೆ ರೇವಣ್ಣ ಅವರನ್ನು ಅಧಿಕಾರಿಗಳು ಕರೆದೊಯ್ಯುವ ಸಾಧ್ಯತೆ ಇದೆ. ಇದೇ ವೇಳೆ ಸಂತ್ರಸ್ತೆಯನ್ನು ಅಕ್ರಮವಾಗಿ ಕೂಡಿಟ್ಟಿ ಸ್ಥಳ ತೋಟದ ಮನೆಯಲ್ಲಿಯೂ ಮಹಜರು ಪ್ರಕ್ರಿಯೆ ನಡೆಯಲಿದೆ. ಈಗಾಗಲೇ ಸಂತ್ರಸ್ತೆಯರಿಗಾಗಿ ಹೆಲ್ಪ್‌ಲೈನ್‌ ಆರಂಭಿಸಿರುವ ಎಸ್‌ಐಟಿ ಹೇಳಿಕೆ ದಾಖಲಿಸಿಕೊಳ್ಳುತ್ತಿದೆ. ಈ ಮಧ್ಯೆ ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೊಗಳನ್ನು ಯಾರೇ ಆಗಲಿ ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಸೇರಿ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಶೇರ್‌ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

Continue Reading
Advertisement
Karan Johar upset with Kettan Singh's poor mimicry of him
ಸಿನಿಮಾ2 mins ago

Karan Johar: ‘ಕಳಪೆ’ ಮಿಮಿಕ್ರಿ ಕಂಡು ಕರಣ್ ಜೋಹರ್ ಗರಂ; ಕ್ಷಮೆಯಾಚಿಸಿದ ಹಾಸ್ಯನಟ!

Drowned in water mysuru
ಮೈಸೂರು5 mins ago

Drowned In water : ಈಜಲು 20 ಅಡಿ ಎತ್ತರದಿಂದ ನೀರಿನ ಬುಗ್ಗೆಗೆ ಜಿಗಿದವನು ಮತ್ತೆ ಏಳಲೇ ಇಲ್ಲ!

Drowned in water
ದಕ್ಷಿಣ ಕನ್ನಡ26 mins ago

Drowned In water : ಹೆತ್ತವರ ಕಣ್ಣೇದುರಿಗೆ ನೇತ್ರಾವತಿ ನದಿಯಲ್ಲಿ ಕೊಚ್ಚಿ ಹೋದರು ಪುತ್ರಿಯರು

ED Raid
ದೇಶ39 mins ago

ED Raid: ಇಡಿ ಭರ್ಜರಿ ಬೇಟೆ; ಕಾಂಗ್ರೆಸ್‌ ಮುಖಂಡನ ಆಪ್ತ ಕಾರ್ಯದರ್ಶಿ ಮನೆಯಿಂದ 25 ಕೋಟಿ ರೂ. ವಶ

Mahanati Show Gagana Comedy About Rishi actor
ಕಿರುತೆರೆ49 mins ago

Mahanati Show: ‘ಮಹಾನಟಿʼ ವೇದಿಕೆಯಲ್ಲಿ ನಟ ರಿಷಿ ಫೋನ್‌ ನಂಬರ್‌ ಕೇಳಿದ ಚಿತ್ರದುರ್ಗದ ಗಗನಾ!

amethi unrest
ದೇಶ1 hour ago

Amethi Unrest: ಕಾಂಗ್ರೆಸ್‌ ಕಚೇರಿ ಮೇಲೆ ಕಿಡಿಗೇಡಿಗಳಿಂದ ಅಟ್ಯಾಕ್‌; ಬಿಜೆಪಿಯ ದುಷ್ಕೃತ್ಯ ಎಂದು ಆರೋಪ

Paris Olympics
ಕ್ರೀಡೆ2 hours ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ​ಭಾರತದ ಪುರುಷರ & ಮಹಿಳೆಯರ ರಿಲೇ ತಂಡ

Prajwal Revanna Case
ಕರ್ನಾಟಕ2 hours ago

Prajwal Revanna Case: ಗಂಡ, ಮಗನ ಕೇಸ್‌ನಿಂದ ಭವಾನಿ ರೇವಣ್ಣಗೂ ಕಾನೂನು ಕಂಟಕ?

Boat Capsize
ವೈರಲ್ ನ್ಯೂಸ್2 hours ago

Boat Capsizes: ಜಲಾವೃತ ಸೇತುವೆಗೆ ದೋಣಿ ಡಿಕ್ಕಿ; ಶಾಕಿಂಗ್‌ ವಿಡಿಯೋ ವೈರಲ್‌

T20 World Cup 2024
ಕ್ರೀಡೆ2 hours ago

T20 World Cup 2024: ಟಿ20 ವಿಶ್ವಕಪ್​ಗೆ ಪಾಕ್​ ಉಗ್ರರಿಂದ ಭಯೋತ್ಪಾದಕ ದಾಳಿಯ ಎಚ್ಚರಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ7 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ16 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ18 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ18 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌