HD Kumaraswamy: ಎಚ್‌ಡಿಕೆ ಭೇಟಿಯಾದ ಉಕ್ಕು ಪ್ರಾಧಿಕಾರದ ಅಧ್ಯಕ್ಷ; ವಿಐಎಸ್‌ಎಲ್ ಪುನಶ್ಚೇತನದ ಬಗ್ಗೆ ಚರ್ಚೆ - Vistara News

ಕರ್ನಾಟಕ

HD Kumaraswamy: ಎಚ್‌ಡಿಕೆ ಭೇಟಿಯಾದ ಉಕ್ಕು ಪ್ರಾಧಿಕಾರದ ಅಧ್ಯಕ್ಷ; ವಿಐಎಸ್‌ಎಲ್ ಪುನಶ್ಚೇತನದ ಬಗ್ಗೆ ಚರ್ಚೆ

HD Kumaraswamy: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಭಾರತೀಯ ಉಕ್ಕು ಪ್ರಾಧಿಕಾರದ ಬಗ್ಗೆ ಮಾಹಿತಿ ಅಧಿಕಾರಿಗಳು ಮಾಹಿತಿ ನೀಡಿದ್ದು, ಕಬ್ಬಿಣ ಮತ್ತು ಉಕ್ಕು ತಯಾರಿಕಾ ಘಟಕಗಳಿಗೆ ಭೇಟಿ ನೀಡಲು ಮನವಿ ಮಾಡಿದ್ದಾರೆ.

VISTARANEWS.COM


on

HD Kumaraswamy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಅವರನ್ನು ಭಾರತೀಯ ಉಕ್ಕು ಪ್ರಾಧಿಕಾರದ (Steel Authority of India Limited (SAIL)) ಅಧ್ಯಕ್ಷ ಅಮರೀಂದು ಪ್ರಕಾಶ್ ಸೇರಿ ವಿವಿಧ ಅಧಿಕಾರಿಗಳು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ನೂತನ ಸಚಿವರಿಗೆ ಭಾರತೀಯ ಉಕ್ಕು ಪ್ರಾಧಿಕಾರದ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಗಳು, ಸಂಸ್ಥೆಯ ಯೋಜನೆಗಳು, ಚಟುವಟಿಕೆಗಳ ಬಗ್ಗೆ ತಿಳಿಸಿದ್ದಾರೆ. ಬಿಲಾಯ್ ಸೇರಿ ಇನ್ನಿತರೆ ಉಕ್ಕು ತಯಾರಿಕಾ ಘಟಕಗಳಿಗೆ ಭೇಟಿ ನೀಡುವಂತೆ ಸಚಿವರನ್ನು ಅಧಿಕಾರಿಗಳು ಕೋರಿದ್ದಾರೆ. ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (VISL) ಪುನಶ್ಚೇತನದ ಬಗ್ಗೆಯೂ ಅಧಿಕಾರಿಗಳ ಜತೆ ಪ್ರಮುಖವಾಗಿ ಸಚಿವ ಎಚ್‌.ಡಿ.ಕುಮಾರಸ್ವಾಮಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ | Modi 3.0 Cabinet: ಜೋಶಿಗೆ ಆಹಾರ, ಎಚ್‌ಡಿಕೆಗೆ ಬೃಹತ್ ಕೈಗಾರಿಕೆ‌, ನಿರ್ಮಲಾಗೆ ವಿತ್ತ, ಸೋಮಣ್ಣಗೆ ಡಬಲ್‌ ಖುಷಿ, ಶೋಭಾಗೆ MSME

ಸೋಮವಾರ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ನೀಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದ ಎಚ್‌.ಡಿ.ಕುಮಾರಸ್ವಾಮಿ ಅವರು, ನಿರುದ್ಯೋಗ ಸೇರಿ ದೇಶದ ಇತರ ಸಮಸ್ಯೆಗಳನ್ನು ಬಗೆಹರಿಸುವ ಸವಾಲು ನಮ್ಮ ಮುಂದಿದೆ. ಮುಂದಿನ 15 ದಿನದಲ್ಲಿ ಬೃಹತ್ ಕೈಗಾರಿಕಾ ಇಲಾಖೆ ಕುರಿತು ವಿಷನ್ ಡಾಕ್ಯುಮೆಂಟ್ ಸಿದ್ದಪಡಿಸಲಿದ್ದೇನೆ. ಪ್ರಧಾನಿ ಮೋದಿ ಅವರ ಮಾರ್ಗದರ್ಶನ ಪಡೆದು ಅವರ ಕನಸು ನನಸು ಮಾಡುವ ನಿಟ್ಟಿನಲ್ಲಿ ಸಚಿವನಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದರು.

ಉತ್ಪಾದನಾ ಕ್ಷೇತ್ರದಲ್ಲಿ ಬಹಳಷ್ಟು ನಿರೀಕ್ಷೆಗಳಿವೆ. ಇಲಾಖೆಯಲ್ಲೂ ಹೊಸ ಬದಲಾವಣೆ ತರಲು ಪ್ರಯತ್ನ ಮಾಡು ತ್ತೇನೆ. ಇದಕ್ಕಾಗಿ ದೇಶಾದ್ಯಂತ ಸುತ್ತಾ ಡಲು ನಿರ್ಧರಿಸಿದ್ದೇನೆ. ಉದ್ಯಮಿಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ. ನನ್ನ ಮುಂದೆ ದೊಡ್ಡ ಸವಾಲಿದೆ. ಕೈಗಾರಿಕಾ ಕ್ಷೇತ್ರಕ್ಕೆ ಸಂಬಂಧಿಸಿ ಕರ್ನಾಟಕದಲ್ಲೂ ವಿಐಎಸ್‌ಎಲ್ ಸೇರಿ ಹಲವಾರು ಸಮಸ್ಯೆಗಳಿವೆ. ದೇಶದ ಪ್ರಗತಿಗೆ ಕೆಲಸ ಮಾಡಬೇಕಿದೆ. ಪ್ರಾಮಾಣಿಕವಾಗಿ ಕ್ಷಣ ವ್ಯರ್ಥಮಾಡದೆ ಕೆಲಸ ಮಾಡುತ್ತೇನೆ. ನನ್ನದೇ ಕಲ್ಪನೆಯಲ್ಲಿ ಕೆಲಸ ಮಾಡಲು ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

V Somanna: ಹೆಜ್ಜಾಲ- ಚಾಮರಾಜನಗರ ರೈಲ್ವೆ ಕಾರ್ಯ ಶೀಘ್ರದಲ್ಲಿ: ಸಚಿವ ಸೋಮಣ್ಣ

V Somanna: 1996-97ರಲ್ಲಿ ಈ ಯೋಜನೆ ಪ್ರಪೋಸಲ್ ಇತ್ತು. ಈಗ ನನಗೆ ಅವಕಾಶ ಸಿಕ್ಕಿದೆ. 697 ಎಕರೆ ಜಮೀನು ಬೇಕಾಗಬಹುದು. ಇದರಲ್ಲಿ ಅರಣ್ಯ ಜಮೀನು ಬರುವುದಿಲ್ಲ. ರೈತರ ಜಮೀನಿನ ಮೇಲೆ ಹೋಗುತ್ತದೆ. ಇನ್ನು ಹದಿನೈದು ದಿನಗಳಲ್ಲಿ ಇದಕ್ಕಾಗಿ ಸರ್ವೇ ಕಾರ್ಯ ಆರಂಭಿಸುತ್ತೇವೆ ಎಂದು ಅವರು ಹೇಳಿದ್ದಾರೆ.

VISTARANEWS.COM


on

V Somanna
Koo

ಬೆಂಗಳೂರು: ಹೆಜ್ಜಾಲದಿಂದ ಆರಂಭಿಸಿ ಕನಕಪುರ, ಸಾತನೂರು, ಹಲಗೂರು , ಕೊಳ್ಳೇಗಾಲ- ಚಾಮರಾಜನಗರದವರೆಗೆ ಬರಲಿರುವ 142 km ರೈಲು ಮಾರ್ಗದ (Railway Line) ಸರ್ವೇ ಕಾರ್ಯ (Survey) ಮತ್ತೆ ಕೈಗೆತ್ತಿಕೊಳ್ಳಲಾಗುವುದು. 2019ರಲ್ಲೇ ಸರ್ವೆ ಆಗಿ ಸ್ಥಗಿತ ಆಗಿತ್ತು, ಈಗ ಮತ್ತೆ ಸರ್ವೇ ಮಾಡುತ್ತೇವೆ. ಈ ಯೋಜನೆಗೆ ರಾಜ್ಯ ಸರ್ಕಾರ (Karnataka Govt) ಜಾಗ ಕೊಡಬೇಕಿದೆ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ (Central minister) ವಿ. ಸೋಮಣ್ಣ (V Somanna) ಹೇಳಿದ್ದಾರೆ.

ರೈಲ್ವೆ ಯೋಜನೆಗಳ ಕುರಿತು ಕೇಂದ್ರ ಸಚಿವ ವಿ. ಸೋಮಣ್ಣ ನೇತೃತ್ವದ ಸಭೆ ಮುಕ್ತಾಯಗೊಂಡ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಚಾರ ತಿಳಿಸಿದರು. 1996-97ರಲ್ಲಿ ಈ ಯೋಜನೆ ಪ್ರಪೋಸಲ್ ಇತ್ತು. ಈಗ ನನಗೆ ಅವಕಾಶ ಸಿಕ್ಕಿದೆ. 697 ಎಕರೆ ಜಮೀನು ಬೇಕಾಗಬಹುದು. ಇದರಲ್ಲಿ ಅರಣ್ಯ ಜಮೀನು ಬರುವುದಿಲ್ಲ. ರೈತರ ಜಮೀನಿನ ಮೇಲೆ ಹೋಗುತ್ತದೆ. ಇನ್ನು ಹದಿನೈದು ದಿನಗಳಲ್ಲಿ ಇದಕ್ಕಾಗಿ ಸರ್ವೇ ಕಾರ್ಯ ಆರಂಭಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು ಕಂಟೋನ್ಮೆಂಟ್ ಹಾಗೂ ಯಶವಂತಪುರ ಸ್ಟೇಷನ್‌ಗಳನ್ನು ವಿಶ್ವದರ್ಜೆಗೆ ಏರಿಸಲು 2022-23ರಲ್ಲಿ ಮಂಜೂರಾತಿ ನೀಡಲಾಗಿದೆ. ಇದರ ಯೋಜನೆಯ ಮೊತ್ತ ಬೆಂಗಳೂರು ಕಂಟೋನ್ಮೆಂಟ್ 485 ಕೋಟಿ ರೂ. ಹಾಗೂ ಯಶವಂತಪುರ ಸ್ಟೇಷನ್ 387 ಕೋಟಿ ರೂ. ಈ ಎರಡೂ ನಿಲ್ದಾಣ ಪುನರಾಭಿವೃದ್ಧಿ ಕಾರ್ಯವೂ 2025ರಲ್ಲಿ ಪೂರೈಸಲಾಗುವುದು. 2018-19ರ ಯಶವಂತಪುರ – ಚನ್ನಸಂದ್ರ 25 km ಹಾಗೂ ಬೈಯಪ್ಪನಹಳ್ಳಿ – ಹೊಸೂರು 48 km ಡಬಲಿಂಗ್ ಯೋಜನೆಗಳನ್ನು ಕ್ರಮವಾಗಿ ರೂ 314 ಕೋಟಿ ಹಾಗೂ ರೂ 500 ಕೋಟಿ ಮೊತ್ತದಲ್ಲಿ ಮಂಜೂರು ಮಾಡಲಾಗಿದ್ದು, ಕಾಮಗಾರಿ ಮುಂದುವರೆದಿದೆ ಎಂದಿದ್ದಾರೆ ಸೋಮಣ್ಣ.

ಯಶವಂತಪುರ – ಚನ್ನಸಂದ್ರ ಯೋಜನೆಯಲ್ಲಿ ಈಗಾಗಲೇ ಯಶವಂತಪುರ ಹೆಬ್ಬಾಳ 10.3 km ಗಳನ್ನೂ ಪೂರ್ಣಗೊಳಿಸಲಾಗಿದೆ. ಮೇ 2025ರಲ್ಲಿ ಈ ಯೋಜನೆ ಪೂರ್ಣಗೊಳಿಸುವ ಗುರಿ ಹೊಂದಿದೆ. 1997-98 ರಲ್ಲಿ ಮಂಜೂರಾದ, ನೆನೆನಗುದಿಗೆ ಬಿದ್ದಿದ್ದ ಮಹತ್ವದ ಬೆಂಗಳೂರು – ವೈಟ್‌ಫೀಲ್ಡ್ 38 km ಕ್ವಾಡ್ರುಪ್ಲಿಂಗ್ ಯೋಜನೆಗಳನ್ನು ಈಗ ಕೈಗೆತ್ತಿಗೊಂಡು ಕಾಮಗಾರಿಗೆ ವೇಗ ನೀಡಲಾಗಿದ್ದು, ಬೆಂಗಳೂರು ದಂಡು – ಬೈಯಪ್ಪನಹಳ್ಳಿ ನಡುವೆ 13 ಕಾಮಗಾರಿ ನಡೆಯುತ್ತಿದೆ. ಇದರ ಯೋಜನೆ ಮೊತ್ತ ರೂ. 492 ಕೋಟಿ. ಜೂನ್ 2025ರಲ್ಲಿ ಈ ಯೋಜನೆಯನ್ನು ಪೂರ್ಣ ಮಾಡುವ ಗುರಿಯಿದೆ. ನನ್ನ ಮತ ಕ್ಷೇತ್ರದ ವಿಜಯನಗರ, ನಾಯಂಡಹಳ್ಳಿ, ಯೂನಿವರ್ಸಿಟಿಯಲ್ಲಿ ಕಾಮಗಾರಿಗಳನ್ನು ಸರಿಪಡಿಸುತ್ತೇವೆ ಎಂದು ಸೋಮಣ್ಣ ತಿಳಿಸಿದರು.

11ರಂದು ಖಾತೆ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ಅಧಿಕಾರಿಗಳ ಜೊತ ಚರ್ಚೆ ಮಾಡಿದ್ದೇನೆ. ಇಲಾಖೆಯ ಸಾಧಕ ಭಾದಕಗಳ ಅರಿಯುವ ಕೆಲಸ ಮಾಡ್ತಿದ್ದೇನೆ. ರೈಲ್ವೆ ಇಲಾಖೆಗೆ ರಾಜ್ಯದಿಂದ ಅತಿರಥ ಮಹಾರಥರು ಮಂತ್ರಿಗಳಾಗಿ ಕೊಡುಗೆ ಕೊಟ್ಟಿದ್ದಾರೆ. ಅಶ್ವಿನಿ ವೈಷ್ಣವ್ ಹಾಗೂ ಜಲಶಕ್ತಿ ಸಚಿವ ಸಿ. ಆರ್ ಪಾಟೀಲ್ ನನಗೆ ಹೆಚ್ಚಿನ ಹುಮ್ಮಸ್ಸು ಕೊಟ್ಟಿದ್ದಾರೆ. ಐವತ್ತು ವರ್ಷಗಳಲ್ಲಿ ಆಗದಿರುವುದನ್ನು ಹತ್ತು ವರ್ಷಗಳಲ್ಲಿ ರೈಲ್ವೆ ಇಲಾಖೆ ಮಾಡಿ ತೋರಿಸಿದೆ. ರೈಲ್ವೆ ಇಲಾಖೆಯ ಕಾರ್ಯವೈಖರಿ ಒಂದು ರೀತಿ ಮಿಲಿಟರಿ ಇದ್ದಂತೆ. ಇನ್ನೂ ಎರಡು ವರ್ಷಗಳಲ್ಲಿ ಕರ್ನಾಟಕ, ವಿಭಿನ್ನ ರೀತಿಯಲ್ಲಿ ರೈಲ್ವೆ ಇಲಾಖೆಯಲ್ಲಿ ಬದಲಾವಣೆ ಆಗುತ್ತದೆ. ನನ್ನ ನಲವತ್ತು ವರ್ಷಗಳ ಅನುಭವದೊಂದಿಗೆ ಬದಲಾವಣೆ ಆಗುತ್ತದೆ. ರೈಲ್ವೆ ಮೇಲ್ಸುತುವೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅರ್ಧ ಅರ್ಧ ಹಣ ಕೊಡಬೇಕು. ಜಾಗವನ್ನು ರಾಜ್ಯ ಸರ್ಕಾರ ಕೊಡಬೇಕು ಎಂದಿದ್ದಾರೆ ಸೋಮಣ್ಣ.

ಈಗಾಗಲೇ ಪೂರ್ಣಗೊಂಡ ಕಾಮಗಾರಿಗಳ ಮಾಹಿತಿ ಅವರು ನೀಡಿದರು.
ಹಾಸನ – ಬೆಂಗಳೂರು ಹೊಸ ಲೈನ್ : 166 km ರೂ 2010 ಕೋಟಿ ವೆಚ್ಚದಲ್ಲಿ 2017 ರಲ್ಲಿ ನಿರ್ಮಾಣಗೊಂಡಿದೆ
ಯಲಹಂಕ – ದೇವರಪಲ್ಲಿ ಡಬಲಿಂಗ್ : 72 km ರೂ 882 ಕೋಟಿ ವೆಚ್ಚದಲ್ಲಿ 2021ರಲ್ಲಿ ಪೂರ್ಣ ಗೊಂಡಿದೆ
2016 ರಲ್ಲಿ ರೂ 167 ಕೋಟಿ ವೆಚ್ಚದಲ್ಲಿ ಯಲಹಂಕ – ಚನ್ನಸಂದ್ರ 13km ಡಬಲಿಂಗ್
95 ಕೋಟೆ ವೆಚ್ಚದಲ್ಲಿ ಯಲಹಂಕ – ಯಶವಂತಪುರ 7km ಡಬಲಿಂಗ್ ಪೂರ್ಣಗೊಂಡಿದೆ
ಪ್ರಧಾನಿ ಮೋದಿಯವರ ಸಂಕಲ್ಪದಂತೆ ಸಾಮಾನ್ಯ ರೈಲ್ವೆ ಪ್ರಯಾಣಿಕರಿಗೂ ಉತ್ತಮ್ಮ ಸೌಲಭ್ಯ ಕಲ್ಪಿಸುವ ದೃಷ್ಟಿಯಿಂದ ಬೈಯಪ್ಪನಹಳ್ಳಿಯಲ್ಲಿ ರೂ 314 ಕೋಟಿ ವೆಚ್ಚದಲ್ಲಿ 2022ರಲ್ಲಿ ವಿಶ್ವೇಶ್ವರಯ್ಯ ಟರ್ಮಿನಲ್ ನಿರ್ಮಾಣಗೊಂಡಿದೆ.
ರೂ 280 ಕೋಟಿ ವೆಚ್ಚದಲ್ಲಿ 11 RUB ಗಳ ಹಾಗೂ ರೂ 285 ಕೋಟಿ ವೆಚ್ಚದಲ್ಲಿ 12 ROB ಗಳ ನಿರ್ಮಾಣಗೊಂಡಿದೆ.

ಇದನ್ನೂ ಓದಿ: V Somanna : ತಮ್ಮನ್ನು ಕಡೆಗಣಿಸಿದ ಜಿಲ್ಲಾಧಿಕಾರಿ, ಸಿಇಒಗೆ ಕೇಂದ್ರ ಸಚಿವ ಸೋಮಣ್ಣ ತರಾಟೆ

Continue Reading

ಕರ್ನಾಟಕ

R Ashok: ಪ್ರತಿ ಕುಟುಂಬದಿಂದ 8-10 ಸಾವಿರ ರೂ. ದರೋಡೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ್ ಆರೋಪ

R Ashok: ಸಿಎಂ ಸ್ಥಾನದ ಕುರಿತು ಕಾಂಗ್ರೆಸ್‌ ಪಕ್ಷದೊಳಗೆ ಒಡಕು ಉಂಟಾಗಿದೆ. ಈ ಬಗ್ಗೆ ಒಕ್ಕಲಿಗ ಸ್ವಾಮೀಜಿ ಕೂಡ ಮಾತಾಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಹಾಗೂ ಮೂರು ಡಿಸಿಎಂ ಮಾಡುವಲ್ಲಿ ಎಲ್ಲರೂ ಮುಳುಗಿದ್ದು, ಅಭಿವೃದ್ಧಿ ಕೆಲಸ ಮಾಡಲು ಯಾರೂ ಮುಂದಾಗುತ್ತಿಲ್ಲ. ಈ ಸರ್ಕಾರಕ್ಕೆ ಕುಡಿಯುವ ನೀರು ಕೊಡುವ ಯೋಗ್ಯತೆಯೂ ಇಲ್ಲವಾಗಿ, ಜನರು ಕಲುಷಿತ ನೀರು ಸೇವಿಸಿ ಸಾಯುತ್ತಿದ್ದಾರೆ. ಡೆಂಘೀ ಸೋಂಕು ಹರಡಿ ಜನರು ತೊಂದರೆಗೊಳಗಾಗಿದ್ದರೂ ಅದಕ್ಕೆ ಸೂಕ್ತ ಕ್ರಮ ವಹಿಸಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆರೋಪಿಸಿದ್ದಾರೆ.

VISTARANEWS.COM


on

Opposition party leader r ashok latest statement in chikkaballapur
Koo

ಚಿಕ್ಕಬಳ್ಳಾಪುರ: ಕಾಂಗ್ರೆಸ್‌ ಸರ್ಕಾರದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸ್ಥಾನದ ಕುರಿತು ಕಚ್ಚಾಟ ನಡೆಯುತ್ತಿದ್ದು, ಅಭಿವೃದ್ಧಿ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕಾಗಿ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನದ ಕುರಿತು ಕಾಂಗ್ರೆಸ್‌ ಪಕ್ಷದೊಳಗೆ ಒಡಕು ಉಂಟಾಗಿದೆ. ಈ ಬಗ್ಗೆ ಒಕ್ಕಲಿಗ ಸ್ವಾಮೀಜಿ ಕೂಡ ಮಾತಾಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಹಾಗೂ ಮೂರು ಡಿಸಿಎಂ ಮಾಡುವಲ್ಲಿ ಎಲ್ಲರೂ ಮುಳುಗಿದ್ದು, ಅಭಿವೃದ್ಧಿ ಕೆಲಸ ಮಾಡಲು ಯಾರೂ ಮುಂದಾಗುತ್ತಿಲ್ಲ. ಈ ಸರ್ಕಾರಕ್ಕೆ ಕುಡಿಯುವ ನೀರು ಕೊಡುವ ಯೋಗ್ಯತೆಯೂ ಇಲ್ಲವಾಗಿ, ಜನರು ಕಲುಷಿತ ನೀರು ಸೇವಿಸಿ ಸಾಯುತ್ತಿದ್ದಾರೆ. ಡೆಂಘೀ ಸೋಂಕು ಹರಡಿ ಜನರು ತೊಂದರೆಗೊಳಗಾಗಿದ್ದರೂ ಅದಕ್ಕೆ ಸೂಕ್ತ ಕ್ರಮ ವಹಿಸಿಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ: Run4Research: ಬೆಂಗಳೂರಿನಲ್ಲಿ ಜೂ.30ರಂದು ʼರನ್4ರೀಸರ್ಚ್ʼ ಓಟ

ಈಗ ಒಕ್ಕಲಿಗರು ಹಾಗೂ ಲಿಂಗಾಯತರು ಮಾತಾಡುತ್ತಿದ್ದಾರೆ. ಮುಂದೆ ಕುರುಬ ಸಮುದಾಯದವರು ಮಾತಾಡುತ್ತಾರೆ. ಜಾತಿಗಳ ನಡುವೆ ಕಾಂಗ್ರೆಸ್‌ ಕಚ್ಚಾಟ ಹುಟ್ಟುಹಾಕಿರುವುದು ಒಳ್ಳೆಯದಲ್ಲ. ಜಾತಿಗಳನ್ನು ಒಡೆಯುವ ಕೆಲಸವನ್ನು ಸಿದ್ದರಾಮಯ್ಯ ಮಾಡಿದ್ದಾರೆ ಎಂದು ದೂರಿದರು.

ಒಂದು ಕುಟುಂಬಕ್ಕೆ 2,000 ರೂ. ನೀಡುತ್ತೇವೆಂದು ಹೇಳಿದ ಕಾಂಗ್ರೆಸ್‌, 8-10 ಸಾವಿರ ರೂ. ದರೋಡೆ ಮಾಡುತ್ತಿದೆ. ಹಾಲಿನ ದರವನ್ನು ಕಳೆದ ವರ್ಷ 3 ರೂ. ಹೆಚ್ಚಿಸಿ, ಈಗ 2 ರೂ. ಹೆಚ್ಚಿಸಿದ್ದಾರೆ. ಪೆಟ್ರೋಲ್‌-ಡೀಸೆಲ್‌ ದರವನ್ನು ನಿರ್ದಾಕ್ಷಿಣ್ಯವಾಗಿ ಏರಿಸಿದ್ದರಿಂದ ಎಲ್ಲ ದರಗಳು ಏರಿಕೆಯಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಾದ ಕೂಡಲೇ ಬಸ್‌ ಟಿಕೆಟ್‌ ದರ ಹೆಚ್ಚಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಸಾರಿಗೆ ನಿಗಮಗಳಿಗೆ ಇನ್ನೂ ಹಣ ಬಾಕಿ ಉಳಿಸಿಕೊಳ್ಳಲಾಗಿದೆ. ಹಾಲಿನ ಪೋತ್ಸಾಹಧನವೂ ಬಾಕಿ ಇದೆ ಎಂದರು.

ಇದನ್ನೂ ಓದಿ: Air Wing NCC: ಏರ್ ವಿಂಗ್ ಎನ್‌ಸಿಸಿ ಸೇರಲು ಅರ್ಜಿ ಆಹ್ವಾನ; ಜುಲೈ 9 ಕೊನೆಯ ದಿನ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಚೊಂಬು ನೀಡುತ್ತಿದೆ ಎಂದು ಕಾಂಗ್ರೆಸ್‌ ತೋರಿಸಿತ್ತು. ಆದರೆ ವಾಸ್ತವದಲ್ಲಿ ಕಾಂಗ್ರೆಸ್‌ ಸರ್ಕಾರವೇ ಜನರಿಗೆ ಚೊಂಬು ನೀಡುತ್ತಿದೆ. ಕೇಂದ್ರ ಸರ್ಕಾರದ ಬಳಿ ಹೋಗಿ ಅಲ್ಲಿಯೂ ದ್ವೇಷದ ಕಿಡಿ ಕಾರುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಟಾಚಾರಕ್ಕೆ ಸಂಸದರ ಸಭೆ ಕರೆದು ಮಾತಾಡಿದ್ದಾರೆ. ಕೇಂದ್ರ ಸರ್ಕಾರ ಯಾವುದೇ ಯೋಜನೆಗೆ ಅನುದಾನ ನೀಡಿದರೆ, ಅದಕ್ಕೆ ಸಮನಾಗಿ ತಮ್ಮ ಪಾಲನ್ನು ನೀಡಲು ಕೂಡ ರಾಜ್ಯ ಸರ್ಕಾರದ ಬಳಿ ಹಣವಿಲ್ಲ. ಇಡೀ ಆರ್ಥಿಕ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Continue Reading

ಉತ್ತರ ಕನ್ನಡ

Uttara Kannada News: ಜಿಲ್ಲೆಯ ಮಾಜಿ ಸೈನಿಕರು, ಅಶಕ್ತರಿಗೆ ಭೂಮಿ ಒದಗಿಸಲು ಕ್ರಮ: ಡಿಸಿ ಗಂಗೂಬಾಯಿ ಮಾನಕರ್‌

Uttara Kannada News: ಉತ್ತರ ಕನ್ನಡ ಜಿಲ್ಲೆಯಲ್ಲಿನ ಮಾಜಿ ಯೋಧರು, ಅಶಕ್ತರು ಮತ್ತು ವಸತಿ ಹೀನರಿಗೆ ಜೀವನ ನಿರ್ವಹಣೆಗೆ ಭೂಮಿ ಒದಗಿಸುವ ಕುರಿತಾಗಿ, ಜಿಲ್ಲೆಯ ಎಲ್ಲಾ ತಾಲೂಕುಗಳ ತಹಸೀಲ್ದಾರ್‌ಗಳು ತಮ್ಮ ವ್ಯಾಪ್ತಿಯಲ್ಲಿ ಲಭ್ಯವಿರುವ ಖಾಲಿ ಜಮೀನಿನ ಕುರಿತು ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ ಸೂಚಿಸಿದ್ದಾರೆ.

VISTARANEWS.COM


on

Video conference meeting with Tehsildars by DC Gangubai Manakar
Koo

ಕಾರವಾರ: ಜಿಲ್ಲೆಯಲ್ಲಿನ ಮಾಜಿ ಯೋಧರು, ಅಶಕ್ತರು ಮತ್ತು ವಸತಿ ಹೀನರಿಗೆ ಜೀವನ ನಿರ್ವಹಣೆಗೆ ಭೂಮಿ ಒದಗಿಸುವ ಕುರಿತಾಗಿ, ಜಿಲ್ಲೆಯ (Uttara Kannada News) ಎಲ್ಲಾ ತಾಲೂಕುಗಳ ತಹಸೀಲ್ದಾರ್‌ಗಳು ತಮ್ಮ ವ್ಯಾಪ್ತಿಯಲ್ಲಿ ಲಭ್ಯವಿರುವ ಖಾಲಿ ಜಮೀನಿನ ಕುರಿತು ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ ಸೂಚಿಸಿದರು.

ಜಿಲ್ಲೆಯ ಎಲ್ಲಾ ತಹಸೀಲ್ದಾರ್‌ಗಳೊಂದಿಗೆ ಶುಕ್ರವಾರ ನಡೆದ, ವಿಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತೀ ವರ್ಷ ಜುಲೈ 1 ಕ್ಕೆ ಜಿಲ್ಲೆಯಲ್ಲಿ ಲಭ್ಯವಿರುವ ಖಾಲಿ ಜಮೀನಿನ ಕುರಿತಂತೆ ಘೋಷಣೆ ಮಾಡುವುದು ಅತ್ಯಗತ್ಯವಾಗಿದ್ದು, ಇದರಿಂದಾಗಿ ಲಭ್ಯವಿರುವ ಖಾಲಿ ಭೂಮಿಯನ್ನು, ದೇಶ ಸೇವೆಗಾಗಿ ಜೀವನ ಮುಡಿಪಾಗಿಟ್ಟು ನಿವೃತ್ತರಾದ ಮತ್ತು ವಿವಿಧ ಕಾರ್ಯಚರಣೆಗಳಲ್ಲಿ ಭಾಗವಹಿಸಿ ವಿಕಲಚೇತನರಾದ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಜಿಲ್ಲೆಯಲ್ಲಿನ ಅಶಕ್ತರು ಮತ್ತು ವಸತಿಹೀನರಿಗೆ ಅವರು ಕೋರಿಕೆಗೆ ತಕ್ಕಂತೆ ಅಲ್ಲವಾದರೂ ಕನಿಷ್ಠ ಅವಶ್ಯಕತೆ ಪೂರೈಸಿಕೊಳ್ಳಲು ಅಗತ್ಯವಿರುವ ಪ್ರಮಾಣದ ಭೂಮಿ ನೀಡಲು ಸಾಧ್ಯವಾಗುತ್ತದೆ. ಆದ್ದರಿಂದ ಜಿಲ್ಲೆಯ ಎಲ್ಲಾ ತಹಸೀಲ್ದಾರ್‌ಗಳು ಜುಲೈ 1 ರೊಳಗೆ ತಮ್ಮ ವ್ಯಾಪ್ತಿಯಲ್ಲಿ ಲಭ್ಯವಿರುವ ಖಾಲಿ ಜಮೀನಿನ ಘೋಷಣೆ ಮಾಡುವಂತೆ ತಿಳಿಸಿದರು.

ಇದನ್ನೂ ಓದಿ: Air Wing NCC: ಏರ್ ವಿಂಗ್ ಎನ್‌ಸಿಸಿ ಸೇರಲು ಅರ್ಜಿ ಆಹ್ವಾನ; ಜುಲೈ 9 ಕೊನೆಯ ದಿನ

ತಹಸೀಲ್ದಾರ್‌ಗಳು ತಮ್ಮ ವ್ಯಾಪ್ತಿಯಲ್ಲಿನ ಖಾಲಿ ಇರುವ ಸರ್ಕಾರಿ ಭೂಮಿಯನ್ನು ಸರ್ಕಾರಿ ಉದ್ದೇಶಗಳಿಗೆ ಅಗತ್ಯವಿದ್ದಲ್ಲಿ, ಆ ಯೋಜನೆಗೆ ಅಗತ್ಯವಿರುವ ಪ್ರಮಾಣದ ಭೂಮಿಯನ್ನು ಕಾಯ್ದಿರಿಸಿ, ಉಳಿದ ಭೂಮಿಯನ್ನು ಘೋಷಣೆ ಮಾಡುವಂತೆ ಹಾಗೂ ಯಾವುದೇ ಕಾರಣಕ್ಕೂ ಲಭ್ಯ ಜಮೀನಿನ ಮಾಹಿತಿಯನ್ನು ಮರೆಮಾಚದಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಶೇ.80 ರಷ್ಟು ಅರಣ್ಯ ಪ್ರದೇಶವಿದ್ದು, ಶೇ.20 ರಷ್ಟು ಮಾತ್ರ ಭೂ ಪ್ರದೇಶವಿದ್ದು, ಇರುವ ಭೂ ಪ್ರದೇಶವನ್ನು ಅರ್ಹರಿಗೆ, ನ್ಯಾಯಯುತವಾಗಿ, ಸಾಧ್ಯವಾದಷ್ಟು ಪ್ರಮಾಣದಲ್ಲಿ ಹಂಚಿಕೆ ಮಾಡುವಲ್ಲಿ ಹೆಚ್ಚಿನ ಮುತುವರ್ಜಿ ವಹಿಸುವಂತೆ ಅವರು ತಿಳಿಸಿದರು.

ಪ್ರಸ್ತುತ ಮಳೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಜೀವ ಹಾನಿಯಾಗದಂತೆ ಎಚ್ಚರವಹಿಸಿ. ಈಗಾಗಲೇ ಗುರುತಿಸಲಾಗಿರುವ ಗುಡ್ಡ ಕುಸಿತ ಮತ್ತು ಅಪಾಯಕಾರಿ ಪ್ರದೇಶದಲ್ಲಿ ವಾಸಿಸುತ್ತಿರುವವರಿಗೆ ಅಗತ್ಯ ಎಚ್ಚರಿಕೆ ನೀಡಿ, ಅವರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತಿಳಿಸಿ. ಅವರಿಗೆ ಅವರ ವಾಸದ ಸಮೀಪದಲ್ಲಿನ ಸೂಕ್ತ ಸುರಕ್ಷಿತ ಸ್ಥಳಗಳನ್ನು ಗುರುತಿಸಿ ಮಾಹಿತಿ ನೀಡಿ, ಆ ಸ್ಥಳಗಳಲ್ಲಿ ಅವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಮನೆ ಕುಸಿತ, ಕೊಟ್ಟಿಗೆ ಹಾನಿ ಮತ್ತು ಜಾನುವಾರು ಸಾವು ಪ್ರಕರಣಗಳಿಗೆ ಶೀಘ್ರದಲ್ಲಿ ಪರಿಹಾರ ವಿತರಿಸುವಂತೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ವಿಕೋಪ ಪರಿಹಾರ ಧನ ವಿತರಣೆಗೆ ಯಾವುದೇ ಅನುದಾನದ ಕೊರತೆಯಿಲ್ಲ, ಎಲ್ಲಾ ತಾಲೂಕುಗಳಲ್ಲಿ ಪ್ರಸ್ತುತ ಲಭ್ಯವಿರುವ ಅನುದಾನವನ್ನು ವೆಚ್ಚ ಮಾಡಿ, ಹೆಚ್ಚಿನ ಅನುದಾನದ ಅಗತ್ಯವಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಕೋರಿಕೆ ಸಲ್ಲಿಸಿದಲ್ಲಿ, ಕೂಡಲೇ ಬಿಡುಗಡೆ ಮಾಡಲಾಗುವುದು ಎಂದರು.

ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ತುರ್ತು ರಕ್ಷಣೆಗಾಗಿ ತೆರದಿರುವ ಕಂಟ್ರೋಲ್ ರೂಂ ಗಳಲ್ಲಿ ಸಿಬ್ಬಂದಿ 24*7 ಕಾರ್ಯನಿರ್ವಹಿಸುವಂತೆ ಹಾಗೂ ಯಾವುದೇ ಪ್ರಾಕೃತಿಕ ವಿಕೋಪಗಳು ಸಂಭವಿಸಿದಲ್ಲಿ ಪಂಚಾಯಿತಿ ಅಭಿವೃಧ್ದಿ ಅಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಯ ಅಧಿಕಾರಿಗಳು ತಕ್ಷಣ ಕಾರ್ಯ ಪ್ರವೃತ್ತರಾಗಿ, ಸಮನ್ವಯದಿಂದ ಕಾರ್ಯ ನಿರ್ವಹಿಸಿ, ಸಾರ್ವಜನಿಕರಿಗೆ ಅಗತ್ಯ ನೆರವು ನೀಡುವಂತೆ ತಿಳಿಸಿದರು.

ಇದನ್ನೂ ಓದಿ: Heavy Rain: ಭಾರೀ ಮಳೆಗೆ ಕುಸಿದು ಬಿದ್ದ ರಾಜ್‌ಕೋಟ್‌ ವಿಮಾನ ನಿಲ್ದಾಣ ಹೊರಭಾಗದ ಛಾವಣಿ

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಹಾಗೂ ಜಿಲ್ಲೆಯ ತಹಸೀಲ್ದಾರ್‌ಗಳು ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿದ್ದರು.

Continue Reading

ಕರ್ನಾಟಕ

VSK Media Awards 2024: ಬೆಂಗಳೂರಿನಲ್ಲಿ ಜೂ.30 ರಂದು “ವಿಎಸ್‌ಕೆ ಮಾಧ್ಯಮ ಪ್ರಶಸ್ತಿ” ಪ್ರದಾನ

VSK Media Awards 2024: ವಿಶ್ವ ಸಂವಾದ ಕೇಂದ್ರ, ಕರ್ನಾಟಕ ವತಿಯಿಂದ ಬೆಂಗಳೂರು ನಗರದ ಬಸವನಗುಡಿಯ ಬಿ.ಎಂ.ಎಸ್‌. ಎಂಜಿನಿಯರಿಂಗ್‌ ಕಾಲೇಜು ಸಭಾಂಗಣದಲ್ಲಿ ಇದೇ ಜೂ.30 ರಂದು ಭಾನುವಾರ ಬೆಳಿಗ್ಗೆ 10.30 ಗಂಟೆಗೆ ವಿಎಸ್‌ಕೆ ಮೀಡಿಯಾ ಅವಾರ್ಡ್ಸ್‌ (VSK Media Awards) ಮಾಧ್ಯಮ ಪ್ರಶಸ್ತಿ 2024 ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ.

VISTARANEWS.COM


on

VSK Media Awards 2024 Programme in Bengaluru on June 30
Koo

ಬೆಂಗಳೂರು: ವಿಶ್ವ ಸಂವಾದ ಕೇಂದ್ರ, ಕರ್ನಾಟಕ ವತಿಯಿಂದ ಬೆಂಗಳೂರು ನಗರದ ಬಸವನಗುಡಿಯ ಬಿ.ಎಂ.ಎಸ್‌. ಎಂಜಿನಿಯರಿಂಗ್‌ ಕಾಲೇಜು ಸಭಾಂಗಣದಲ್ಲಿ ಇದೇ ಜೂ.30 ರಂದು ಭಾನುವಾರ ಬೆಳಿಗ್ಗೆ 10.30 ಗಂಟೆಗೆ ವಿಎಸ್‌ಕೆ ಮೀಡಿಯಾ ಅವಾರ್ಡ್ಸ್‌ (VSK Media Awards 2024) ಮಾಧ್ಯಮ ಪ್ರಶಸ್ತಿ 2024 ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ.

ಇದನ್ನೂ ಓದಿ: Air Wing NCC: ಏರ್ ವಿಂಗ್ ಎನ್‌ಸಿಸಿ ಸೇರಲು ಅರ್ಜಿ ಆಹ್ವಾನ; ಜುಲೈ 9 ಕೊನೆಯ ದಿನ

ಕಾರ್ಯಕ್ರಮದಲ್ಲಿ ಆರ್ಗನೈಸರ್‌ ಪತ್ರಿಕೆಯ ಸಂಪಾದಕ ಪ್ರಫುಲ್ಲ ಕೇತ್ಕರ್‌, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರಿಯ ಸಂಘಚಾಲಕ ಡಾ. ಪಿ. ವಾಮನ್‌ ಶೆಣೈ ಉಪಸ್ಥಿತರಿರುವರು.

ಪ್ರಶಸ್ತಿ ಪುರಸ್ಕೃತರು

ತಿ.ತಾ. ಶರ್ಮ ಪತ್ರಿಕೋದ್ಯಮ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಸಂಪಾದಕ ಸುದರ್ಶನ್‌ ಚನ್ನಂಗಿಹಳ್ಳಿ, ಚಂದ್ರಶೇಖರ ಭಂಡಾರಿ ಪತ್ರಿಕೋದ್ಯಮ ಪ್ರಶಸ್ತಿಗೆ ಸುವರ್ಣ ನ್ಯೂಸ್ ಸಂಪಾದಕ ಅಜಿತ್‌ ಹನುಮಕ್ಕನವರ್‌, ಬೆ.ಸು.ನಾ. ಮಲ್ಯ ಪತ್ರಿಕೋದ್ಯಮ ಪ್ರಶಸ್ತಿಗೆ ಶೋಭಾ ಎಚ್‌.ಜಿ., ಹೊ.ವೆ. ಶೇಷಾದ್ರಿ ಅಂಕಣಕಾರ ಪ್ರಶಸ್ತಿಗೆ ಪ್ರೊ. ಪ್ರೇಮಶೇಖರ, ವಿ.ಎಸ್.ಕೆ. ಡಿಜಿಟಲ್‌ ಮಾಧ್ಯಮ ಪ್ರಶಸ್ತಿಗೆ ಡಾ. ಪೂರ್ವಿ ಜಯರಾಮ್‌ ಭಾಜನರಾಗಿದ್ದಾರೆ.

ಇದನ್ನೂ ಓದಿ: Gold Rate Today: ತುಸು ಏರಿಕೆ ಕಂಡ ಚಿನ್ನದ ಬೆಲೆ; ಇಷ್ಟಿದೆ ಇಂದಿನ ದರ

Continue Reading
Advertisement
V Somanna
ಪ್ರಮುಖ ಸುದ್ದಿ2 mins ago

V Somanna: ಹೆಜ್ಜಾಲ- ಚಾಮರಾಜನಗರ ರೈಲ್ವೆ ಕಾರ್ಯ ಶೀಘ್ರದಲ್ಲಿ: ಸಚಿವ ಸೋಮಣ್ಣ

Actor Darshan Renuka swamy case chitral support by vinay gowda
ಸ್ಯಾಂಡಲ್ ವುಡ್6 mins ago

Actor Darshan: ʻಚಿತ್ರಾಲ್ʼ ಬಿಕಿನಿ ಮಾಡೆಲ್‌, ಕೆಟ್ಟ ಕಮೆಂಟ್‌ ಮಾಡಬೇಡಿ ಎಂದ ವಿನಯ್ ಗೌಡ !

Opposition party leader r ashok latest statement in chikkaballapur
ಕರ್ನಾಟಕ8 mins ago

R Ashok: ಪ್ರತಿ ಕುಟುಂಬದಿಂದ 8-10 ಸಾವಿರ ರೂ. ದರೋಡೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ್ ಆರೋಪ

Video conference meeting with Tehsildars by DC Gangubai Manakar
ಉತ್ತರ ಕನ್ನಡ9 mins ago

Uttara Kannada News: ಜಿಲ್ಲೆಯ ಮಾಜಿ ಸೈನಿಕರು, ಅಶಕ್ತರಿಗೆ ಭೂಮಿ ಒದಗಿಸಲು ಕ್ರಮ: ಡಿಸಿ ಗಂಗೂಬಾಯಿ ಮಾನಕರ್‌

VSK Media Awards 2024 Programme in Bengaluru on June 30
ಕರ್ನಾಟಕ10 mins ago

VSK Media Awards 2024: ಬೆಂಗಳೂರಿನಲ್ಲಿ ಜೂ.30 ರಂದು “ವಿಎಸ್‌ಕೆ ಮಾಧ್ಯಮ ಪ್ರಶಸ್ತಿ” ಪ್ರದಾನ

Prajwal Revanna Case
ಪ್ರಮುಖ ಸುದ್ದಿ26 mins ago

Prajwal Revanna Case: ಪ್ರಜ್ವಲ್ ರೇವಣ್ಣಗೆ ಜುಲೈ 8ರವರೆಗೆ ನ್ಯಾಯಾಂಗ ಬಂಧನ

Stabbing
ದೇಶ26 mins ago

Stabbing: ಕೋಪದ ಕೈಗೆ ಬುದ್ದಿ ಕೊಟ್ರೆ ಹೀಗೇ ಆಗೋದು! ಸಹಪಾಠಿಯನ್ನೇ ಇರಿದು ಕೊಂದ ವಿದ್ಯಾರ್ಥಿ

IND vs SA Final
ಕ್ರೀಡೆ31 mins ago

IND vs SA Final: ಭಾರತ ಸೋತರೆ ರೋಹಿತ್ ಈ ಅನಾಹುತ ಮಾಡಿಕೊಳ್ಳಬಹುದು; ಮಾಜಿ ನಾಯಕನಿಂದ ಶಾಕಿಂಗ್​ ಹೇಳಿಕೆ ​

Road Accident
ಕ್ರೈಂ36 mins ago

Road Accident : ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್‌ಗೆ ಗುದ್ದಿ ಹಳ್ಳಕ್ಕೆ ಜಿಗಿದ ಕೆಎಸ್‌ಆರ್‌ಟಿಸಿ; ಶಿರಾಡಿಘಾಟ್‌ನಲ್ಲಿ ಸರಣಿ ಅಪಘಾತ

Job Alert
ಉದ್ಯೋಗ1 hour ago

Job Alert: 10ನೇ ತರಗತಿ ಪಾಸಾದವರಿಗೆ ಗುಡ್‌ನ್ಯೂಸ್‌; SSCಯಿಂದ ಬರೋಬ್ಬರಿ 8,326 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ6 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ22 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

ಟ್ರೆಂಡಿಂಗ್‌