Site icon Vistara News

Lokayukta Raid: ಜಾಮೀನು ಕೋರಿ ಪ್ರಶಾಂತ್ ಮಾಡಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.13ಕ್ಕೆ ಮುಂದೂಡಿಕೆ

Prashant Madal's bail plea rejected, third accused Surendra granted bail in Corruption case

Prashant Madal's bail plea rejected, third accused Surendra granted bail in Corruption case

ಬೆಂಗಳೂರು: ಟೆಂಡರ್‌ಗಾಗಿ ಲಂಚ ಪ್ರಕರಣದ ಬಂಧಿತ (Lokayukta Raid) ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮಾರ್ಚ್‌ 13ಕ್ಕೆ ಮುಂದೂಡಲಾಗಿದೆ.

ಪ್ರಶಾಂತ್ ಮಾಡಾಳ್‌ ಪರ ವಕೀಲ ಸಂದೀಪ್ ಪಾಟೀಲ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆಕ್ಷೇಪಣೆ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ನೊಟೀಸ್ ನೀಡಿ, ವಿಚಾರಣೆ ಮಾರ್ಚ್ 13ಕ್ಕೆ ಮುಂದೂಡಿದೆ.

ಇದನ್ನೂ ಓದಿ | Lokayukta Raid: ನಾನು ಮಾಡಾಳು ಮನೆಯಲ್ಲೇ ಇದ್ದೆ; ನಾನೊಬ್ಬ ಸಜ್ಜನ ರಾಜಕಾರಣಿ: ಮಾಡಾಳು ವಿರೂಪಾಕ್ಷಪ್ಪ ಸಮರ್ಥನೆ

ನ್ಯಾ. ಜಯಂತ್ ಕುಮಾರ್ ಅವರು ಅರ್ಜಿ ವಿಚಾರಣೆ ನಡೆಸಿದ್ದಾರೆ. ಇದೇ ವೇಳೆ ಆರೋಪಿಗಳಾದ ಆಲ್ಬರ್ಟ್​​ ನಿಕೋಲಸ್ ಹಾಗೂ ಗಂಗಾಧರ್ ಸಹ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಎಲ್ಲಾ ಅರ್ಜಿಗಳ ವಿಚಾರಣೆಯನ್ನು ಮಾರ್ಚ್ 13ಕ್ಕೆ ಮುಂದೂಡಲಾಗಿದೆ.

Exit mobile version