Site icon Vistara News

Heart Attack: ಪತಿಗೆ ಹಾವು ಕಡಿದ ಸುದ್ದಿ ಕೇಳಿ ಪತ್ನಿ ಹೃದಯಾಘಾತದಿಂದ ಸಾವು

sesamma dies of heart attack

ಮಂಗಳೂರು: ಪತಿಗೆ ಹಾವು ಕಡಿತದ (Snake Bite) ಸುದ್ದಿ ಕೇಳಿ ಪತ್ನಿ ಹೃದಯಾಘಾತದಿಂದ (Heart attack) ಪ್ರಾಣ ಕಳೆದುಕೊಂಡ (women dead) ದಾರುಣ ಘಟನೆಯೊಂದು ದಕ್ಷಿಣ ಕನ್ನಡದಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ಈ ಘಟನೆ ನಡೆದಿದ್ದು, ಸೇಸಮ್ಮ (60) ಹೃದಯಾಘಾತದಿಂದ ಮೃತಪಟ್ಟ ಮಹಿಳೆ.

ನೆಲ್ಯಾಡಿಯ ಪದ್ಮಯ್ಯ ಎಂಬವರು ತೋಟದಲ್ಲಿ ಕೆಲಸ ಮಾಡುವಾಗ ಹಾವು ಕಡಿದಿತ್ತು. ತಕ್ಷಣ ಪದ್ಮಯ್ಯರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವಿಷಯ ತಿಳಿದ ಪತ್ನಿ ಸೇಸಮ್ಮ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಬದುಕುಳಿಯಲಿಲ್ಲ.

ಈ ನಡುವೆ ಹಾವು ಕಡಿತದಿಂದ ಅಸ್ವಸ್ಥರಾಗಿದ್ದ ಪದ್ಮಯ್ಯ ಅವರಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ.

ಬೈಕ್ ಹಾಗೂ ಟ್ರಾಕ್ಟರ್ ಡಿಕ್ಕಿ ಟ್ರಾಕ್ಟರ್ ಚಾಲಕ ಸಾವು

ಯಾದಗಿರಿ: ಬೈಕ್ ಹಾಗೂ ಟ್ರಾಕ್ಟರ್ ಡಿಕ್ಕಿಯಾಗಿ ಟ್ರಾಕ್ಟರ್ ಚಾಲಕ ಮೃತಪಟ್ಟಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರಸ್ತಾಪುರ ಕ್ರಾಸ್ ಸಮೀಪ ಈ ಘಟನೆ ನಡೆದಿದೆ.

ಉರುಳಿದ ಟ್ರಾಕ್ಟರ್

ವಡಗೇರಾ ತಾಲೂಕಿನ ಕೋಡಾಲ ಗ್ರಾಮದ ರೈತ ಮೈಬೂಬ್ ಸಾಬ್ (50) ಮೃತ ದುರ್ದೈವಿ. ಮೈಬೂಬ್ ಸಾಬ್ ಅವರು ಕೋಡಾಲ ಗ್ರಾಮದಿಂದ ಶಹಾಪುರ ಕಡೆಗೆ ಟ್ರಾಕ್ಟರ್ ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಈ ವೇಳೆ ಬೈಕ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ, ಸಂಭವಿಸಿದೆ.

ಬೈಕ್‌ಗೆ ಡಿಕ್ಕಿ ಹೊಡೆದ ಬಳಿಕ ಟ್ರಾಕ್ಟರ್‌ ನಿಯಂತ್ರಣ ಕಳೆದುಕೊಂಡು ಉರುಳಿದೆ. ಇದರಿಂದ ರಸ್ತೆಗೆ ಬಿದ್ದ ಮೈಬೂಬ್‌ ಸಾಬ್‌ ಅವರು ಪ್ರಾಣ ಕಳೆದುಕೊಂಡಿದ್ದಾರೆ. ಶಹಾಪುರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Road Accident : ಆಟೋ, ಮಾರುತಿ ಕಾರು ಮಧ್ಯೆ ಅಪಘಾತ ; ವ್ಯಾಪಾರಕ್ಕೆ ತೆರಳುತ್ತಿದ್ದ ದಂಪತಿ ದಾರುಣ ಸಾವು

Exit mobile version