Site icon Vistara News

Heavy Rain | ನೀರಲ್ಲಿ ಕೊಚ್ಚಿ ಹೋಗಿದ್ದ ವೃದ್ಧ; ನಾಲ್ಕು ದಿನಗಳ ಬಳಿಕ ಶವವಾಗಿ ಪತ್ತೆ

heavy rain

ತುಮಕೂರು: ಇಲ್ಲಿನ ತುರುವೇಕೆರೆ ತಾಲೂಕಿನ ಕೊಂಡಜ್ಜಿ ಕ್ರಾಸ್ ಬಳಿ ಹರಿಯುವ ನೀರಲ್ಲಿ (Heavy Rain) ಒಮ್ನಿ ಕಾರ್‌ ಸಹಿತ ಕೊಚ್ಚಿ ಹೋಗಿದ್ದ ವೃದ್ಧ ನಾಲ್ಕು ದಿನಗಳ ಬಳಿಕ ಶವವಾಗಿ ಪತ್ತೆಯಾಗಿದ್ದಾರೆ.

ಕಳೆದ ಬುಧವಾರ (ಆ.3) ರಾತ್ರಿ ಮದುವೆ ಸಮಾರಂಭಕ್ಕೆ ಹೋಗಿ ವಾಪಸ್‌ ಬರುವಾಗ ನೀರಿನ ರಭಸಕ್ಕೆ ಒಮ್ನಿ ಕಾರ್‌ ಸಮೇತ ಪಟೇಲ್ ಕುಮಾರಸ್ವಾಮಿ ಎಂಬುವವರು ಕೊಚ್ಚಿ ಹೋಗಿದ್ದರು.

ಹರಿಯುವ ನೀರಲ್ಲಿ ಕೊಚ್ಚಿ ಹೋಗಿದ್ದ ಓಮಿನಿ ಕಾರು

ಸತತ ನಾಲ್ಕು ದಿನಗಳ ಕಾರ್ಯಾಚರಣೆ ನಡೆಸಿದ ಎನ್‌ಡಿಆರ್‌ಎಫ್, ಅಗ್ನಿಶಾಮಕ ಸಿಬ್ಬಂದಿ ಹಾಗೂ ತುರುವೇಕೆರೆ ಪೊಲೀಸರಿಗೆ ಘಟನಾ ಸ್ಥಳದಿಂದ ಸುಮಾರು ಅರ್ಧ ಕಿಲೋ ಮೀಟರ್ ದೂರದಲ್ಲಿ ಪಟೇಲ್ ಕುಮಾರಸ್ವಾಮಿಯವರ ಮೃತದೇಹ ಪತ್ತೆಯಾಗಿದೆ. ಘಟನೆಯಲ್ಲಿ ಕಾರು ಚಲಾಯಿಸುತ್ತಿದ್ದ ಪುಟ್ಟ ಸಿದ್ದಯ್ಯ ಪ್ರಾಣಪಾಯದಿಂದ ಪಾರಾಗಿದ್ದರೆ, ತಿಪಟೂರು ತಾಲೂಕಿನ ಗಡಬನಹಳ್ಳಿ ಗ್ರಾಮದ ಪಟೇಲ್ ಕುಮಾರಸ್ವಾಮಿ ಮೃತಪಟ್ಟಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ | Heavy Rain | ಸತತ ಮಳೆಗೆ ಭಟ್ಕಳದಲ್ಲಿ ಮತ್ತೆ ಗುಡ್ಡ ಕುಸಿತ; ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

Exit mobile version