Heavy rains lash Bengaluru, Traffic jam scares motoristsBengaluru Rain: ಬೆಂಗಳೂರಿನಲ್ಲಿ ಭಾರಿ ಮಳೆ; ಮುಂದಿನ 48 ಗಂಟೆಯಲ್ಲಿ ರಾಜ್ಯದ ಹಲವೆಡೆ ವರುಣನ ಆರ್ಭಟ - Vistara News

ಕರ್ನಾಟಕ

Bengaluru Rain: ಬೆಂಗಳೂರಿನಲ್ಲಿ ಭಾರಿ ಮಳೆ; ಮುಂದಿನ 48 ಗಂಟೆಯಲ್ಲಿ ರಾಜ್ಯದ ಹಲವೆಡೆ ವರುಣನ ಆರ್ಭಟ

Bengaluru Rain: ಮುಂದಿನ 48 ಗಂಟೆವರೆಗೆ ರಾಜ್ಯದ ವಿವಿಧೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

VISTARANEWS.COM


on

Heavy rains lash Bengaluru, Traffic jam scares motorists
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ವಿವಿಧೆಡೆ ಶುಕ್ರವಾರ ಭಾರಿ ಮಳೆಯಾಗಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲೂ (Bengaluru Rain) ವಿವಿಧೆಡೆ ಹೆಚ್ಚಿನ ಮಳೆಯಾಗಿದ್ದು, ಬಿಸಿಲಿನ ಬೇಗೆ ಮಧ್ಯೆ ವರುಣ ತಂಪೆರೆದಿದ್ದಾನೆ. ಮೆಜೆಸ್ಟಿಕ್, ಟೌನ್ ಹಾಲ್, ಶಾಂತಿನಗರ, ಬಸವನಗುಡಿ, ಜಯನಗರ ಭಾಗದಲ್ಲಿ ಬಿರುಸಿನ ಮಳೆಯಾಯಿತು. ಹೀಗಾಗಿ ರಸ್ತೆಗಳು ಜಲಾವೃತವಾಗಿದ್ದರಿಂದ ಸಂಚಾರ ದಟ್ಟಣೆ ಉಂಟಾಯಿತು. ಇದರಿಂದ ವಾಹನ ಸವಾರರು ಪರದಾಡಬೇಕಾಯಿತು.

ಇನ್ನು ಕೆಲಸ ಕಾರ್ಯ ಮುಗಿಸಿಕೊಂಡು ಮನೆಗಳಿಗೆ ತೆರಳುತ್ತಿದ್ದ ಜನರು ಮಳೆಯಿಂದ ಹೈರಾಣಾದರು. ಮಳೆಯಿಂದ ತಪ್ಪಿಸಿಕೊಳ್ಳಲು ಬೈಕ್‌ ಸವಾರರು ಬಸ್‌ ತಂಗುದಾಣ, ಕಟ್ಟಡಗಳ ಬಳಿ ಆಶ್ರಯ ಪಡೆದರು. ಕೆ.ಆರ್‌.ಮಾರ್ಕೆಟ್‌ನ ಟೌನ್ ಹಾಲ್ ಮುಂಭಾಗ ದೊಡ್ಡ ಪ್ರಮಾಣದಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಕಿಲೋ‌ ಮೀಟರ್‌ಗಟ್ಟಲೇ ವಾಹನಗಳು ನಿಂತಿದ್ದರಿಂದ ಸವಾರರು ಪರದಾಡಿದರು.

ಚಿಕ್ಕಮಗಳೂರು, ಧಾರವಾಡ ಸೇರಿ ಹಲವೆಡೆ ಭಾರಿ ಮಳೆ, 22 ಜಿಲ್ಲೆಗಳಲ್ಲಿ ಹೈ ಅಲರ್ಟ್‌

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಕ್ರವಾರ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದೆ. ಚಿಕ್ಕಮಗಳೂರು, ಧಾರವಾಡ, ವಿಜಯಪುರ, ಬಾಗೇಪಲ್ಲಿ ಸೇರಿದಂತೆ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ರಾಜ್ಯದಲ್ಲಿ ಶನಿವಾರ ಮತ್ತು ಭಾನುವಾರವೂ ಗುಡುಗು ಸಹಿತ ಮಳೆಯಾಗುವ (Karnataka Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ರಾಜ್ಯದ 22 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ | Karnataka Elections 2023 : ನಮ್ಮಲ್ಲಿ ಸಿಕ್ಕಾಪಟ್ಟೆ ಲೀಡರ್‌ಗಳಿದ್ದಾರೆ, ನಾನು ಯಾರಿಗೂ ಪ್ರತಿಸ್ಪರ್ಧಿ ಅಲ್ಲ ಎಂದ ಬಿ.ಎಲ್‌. ಸಂತೋಷ್‌

ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಉಕ್ಕಿದ ಹಳ್ಳಗಳು

ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದ್ದು, ಒಂದು ಗಂಟೆಗಿಂದಲೂ ಹೆಚ್ಚು ಕಾಲ ವರ್ಷಧಾರೆ ಹರಿಯಿತು. ಚಿಕ್ಕಮಗಳೂರು ತಾಲೂಕಿನ ನಲ್ಲೂರು, ತೇಗೂರು, ಮುಳ್ಳಯ್ಯನಗಿರಿ, ಚಿಕ್ಕಮಗಳೂರು ನಗರದಲ್ಲಿ ಮಳೆ ಅಬ್ಬರ ಜೋರಾಗಿದ್ದು, ಮಳೆಯ ಆರ್ಭಟಕ್ಕೆ ಹಳ್ಳ ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ರೈತರ ಜಮೀನು ಜಲಾವೃತವಾಗಿದ್ದು, ಚಿಕ್ಕಮಗಳೂರು ನಗರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಧಾರವಾಡ, ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ

ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಮಳೆ ಅಬ್ಬರಿಸಿದೆ. ಧಾರವಾಡದ ವಿದ್ಯಾಕಾಶಿಯಲ್ಲಿ ಆಲಿಕಲ್ಲು ಮಳೆ ಆಗಿದೆ. ಗಾಳಿ ಸಹಿತ ಗುಡುಗು ಸಿಡಿಲಿನಿಂದ ಕುಡಿದ ಮಳೆಯಾಗುತ್ತಿದೆ. ಕಳೆದ ಅರ್ಧ ಗಂಟೆಯಿಂದ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಇತ್ತ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಗುಡುಗು ಮಿಂಚು ಬಿರುಗಾಳಿ‌ ಸಮೇತ ಆಗಿದೆ.

ಚಿಕ್ಕಮಗಳೂರು ತಾಲೂಕಿನ ನಲ್ಲೂರು, ತೇಗೂರು, ಮುಳ್ಳಯ್ಯನಗಿರಿ, ಚಿಕ್ಕಮಗಳೂರು ನಗರದಲ್ಲಿ ಮಳೆ ಅಬ್ಬರಿಸಿದೆ. ಕಳೆದ ಒಂದು ಗಂಟೆಯಿಂದ ಸುರಿಯುತ್ತಿರುವ ಭಾರಿ ಮಳೆಗೆ ಹಳ್ಳ ಕೊಳ್ಳಗಳು ಉಕ್ಕಿ ಹರಿದಿದೆ. ಮಳೆಯ ಆರ್ಭಟಕ್ಕೆ ರೈತರ ಜಮೀನು ಜಲಾವೃತವಾಗಿತ್ತು. ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿ ಹೋಗಿದ್ದು, ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ.

ಎಲ್ಲೆಲ್ಲಿ ಮಳೆ ಮುನ್ಸೂಚನೆ?

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ರಾಯಚೂರು, ಯಾದಗಿರಿ ಹಾಗೂ ಕೊಪ್ಪಳ, ಗದಗ, ಬಾಗಲಕೋಟೆ, ಕಲಬುರಗಿ, ಬೀದರ್‌ ಸೇರಿದಂತೆ ಕೊಪ್ಪಳ ಜಿಲ್ಲೆಯಲ್ಲಿ ಮುಂದಿನ 48 ಗಂಟೆವರೆಗೆ ಗುಡುಗು, ಮಿಂಚಿನ (Latest Rain Alert) ಮಳೆಯಾಗಲಿದೆ. ಹಾಗೆಯೇ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ, ಹಾಸನ, ಕೊಡಗು,ಮಂಡ್ಯ, ಮೈಸೂರು ಸೇರಿದಂತೆ ರಾಮನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ | Malleswaram Blast: ಮಲ್ಲೇಶ್ವರ ಬಾಂಬ್‌ ಸ್ಫೋಟ ಪ್ರಕರಣ; ಇಬ್ಬರಿಗೆ 7 ವರ್ಷ ಜೈಲು

ಜತೆಗೆ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದ ಭಾಗದಲ್ಲೂ ಮಳೆಯಾಗಲಿದೆ. ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 34 ಹಾಗೂ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಗರಿಷ್ಠ ಉಷ್ಣಾಂಶದ ಎಚ್ಚರಿಕೆ

ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಏರಿಕೆ ಆಗಲಿದೆ. ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಧಾರವಾಡ

Lok Sabha Election 2024: ಕಾಂಗ್ರೆಸ್ಸಿನ 1 ಲಕ್ಷ ರು. ಬೋಗಸ್ ಗ್ಯಾರಂಟಿ: ಪ್ರಲ್ಹಾದ್‌ ಜೋಶಿ

Lok Sabha Election 2024: ಒಂದು ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಇಂದು ತನ್ನ ಸೀಟುಗಳಿಗಾಗಿ ಮೈತ್ರಿ ಪಕ್ಷಗಳಲ್ಲಿ ಭಿಕ್ಷೆ ಬೇಡುವಂತಹ ಪರಿಸ್ಥಿತಿ ಬಂದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಲೇವಡಿ ಮಾಡಿದ್ದಾರೆ.

VISTARANEWS.COM


on

Union Minister Pralhad Joshi election campaign in kalaghatagi
Koo

ಹುಬ್ಬಳ್ಳಿ: ಕಾಂಗ್ರೆಸ್ (Congress) ತನ್ನ ಪ್ರಣಾಳಿಕೆಯಲ್ಲಿ ಬಡವರಿಗೆ 1 ಲಕ್ಷ ರು. ಘೋಷಿಸಿದ್ದು ಹೊಸದೊಂದು ಬೋಗಸ್ ಗ್ಯಾರೆಂಟಿ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Lok Sabha Election 2024) ಆರೋಪಿಸಿದರು.

ಕಲಘಟಗಿ ವಿಧಾನಸಭಾ ಕ್ಷೇತ್ರದ ಬೆಲವಂತರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಹೀಗೆ ಬಡವರನ್ನು ವಂಚಿಸಲು ಮತ್ತು ಆಗ ಹೋಗದ ಗ್ಯಾರೆಂಟಿ ಘೋಷಿಸುವ ಇವರಿಗೆ ಏನಾದರೂ ಜವಾಬ್ದಾರಿ ಇದೆಯೇ? ಎಂದು ಕಿಡಿ ಕಾರಿದರು.

ಕಾಂಗ್ರೆಸ್ ಪಕ್ಷದ ಪ್ರಕಾರ 6.5 ಕೋಟಿ ಬಡವರಿದ್ದಾರೆ. ತಲಾ 1 ಲಕ್ಷವೆಂದರೆ, 65 ಲಕ್ಷ ಕೋಟಿ ಬೇಕಾಗುತ್ತದೆ. ಆದರೆ, ವಾಸ್ತವದಲ್ಲಿ ದೇಶದ ಬಜೆಟ್ ಗಾತ್ರವೇ ಅಷ್ಟಿರುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: Lok Sabha Election 2024: ಕಳೆದ ಚುನಾವಣೆಯಲ್ಲಿ ನನ್ನ ಜತೆ ಸ್ವತಃ ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡಿದ್ದರು: ರೆಡ್ಡಿ ಸ್ಫೋಟಕ ಹೇಳಿಕೆ

ಭಾರತದ ಬಜೆಟ್ ಈಗ 35- 36 ಲಕ್ಷ ಕೋಟಿ ಇದೆ. ಹಾಗಿರುವಾಗ 65 ಲಕ್ಷ ಕೋಟಿ ಬಡವರಿಗೆ ಹೇಗೆ ಹಂಚುತ್ತಾರೆ? ನೀವೂ ಸ್ವಲ್ಪ ಪ್ರಬುದ್ಧರಾಗಿ ಯೋಚಿಸಿ ನೋಡಿ ಇದು ಬೋಗಸ್ ಗ್ಯಾರೆಂಟಿ ಎಂಬುದು ಖಚಿತವಾಗುತ್ತದೆ ಎಂದು ತಿಳಿಸಿದರು.

ಸರ್ಕಾರ ರಚಿಸದೆ ಹೇಗೆ ಕೊಡ್ತಾರೆ?

ಸರ್ಕಾರ ರಚನೆಗೆ 273 ಸಂಸದರ ಬಲ ಬೇಕು. ಆದರೆ, ಕಾಂಗ್ರೆಸ್ ಸ್ಪರ್ಧಿಸಿದ್ದೇ 230 ಕ್ಷೇತ್ರಗಳಿಗೆ. ಅದರಲ್ಲಿ ಗೆಲ್ಲುವುದೆಷ್ಟೋ.. ಸೋಲುವುದೆಷ್ಟೋ? ಸರ್ಕಾರ ರಚನೆಯೇ ಅಸಾಧ್ಯವಾಗಿದೆ. ಇನ್ನು 1 ಲಕ್ಷ ರು. ಗ್ಯಾರೆಂಟಿ ಹೇಗೆ ಕೊಡ್ತಾರೆ? ಯೋಚಿಸಿ. ಜನರ ದಾರಿ ತಪ್ಪಿಸೋ ಕೆಲಸ ಮಾಡುತ್ತಿದ್ದಾರೆ ಅಷ್ಟೇ ಎಂದು ಸಚಿವ ಜೋಶಿ ಆರೋಪಿಸಿದರು.

ಸೀಟಿಗಾಗಿ ಭಿಕ್ಷೆ ಬೇಡಿದ್ರು

ಇಂದು ಒಂದು ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ತನ್ನ ಸೀಟುಗಳಿಗಾಗಿ ಮೈತ್ರಿ ಪಕ್ಷಗಳಲ್ಲಿ ಭಿಕ್ಷೆ ಬೇಡುವಂತಹ ಪರಿಸ್ಥಿತಿ ಬಂದಿದೆ ಎಂದು ಲೇವಡಿ ಮಾಡಿದರು.

ರಾಜ್ಯದಲ್ಲಿ ತುಷ್ಟೀಕರಣ ರಾಜಕಾರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಬೇಡವಾದದ್ದನ್ನೆಲ್ಲ ಮಾಡುತ್ತಿದೆ. ಒಬಿಸಿ ಮೀಸಲಾತಿ ಮುಸ್ಲಿಂ ಪಾಲು ಮಾಡುತ್ತಿದೆ ಎಂದು ಹರಿಹಾಯ್ದರು.

ಸ್ವಚ್ಛ ಭಾರತ್ ಯೋಜನೆಯಡಿ ಧಾರವಾಡ ಕ್ಷೇತ್ರದಲ್ಲಿ 1.5 ಲಕ್ಷ ಶೌಚಗೃಹಗಳನ್ನು ನಿರ್ಮಿಸಲಾಗಿದೆ. ಈ ಮೂಲಕ ಬಯಲು ಶೌಚಕ್ಕೆ ಮುಕ್ತಿ ನೀಡಿದ್ದಾರೆ. ಇಂಥ ಯೋಜನೆಗಳಿಂದ ಜನಕ್ಕೆ ಗೌರವದ ಜೀವನ ಕಲ್ಪಿಸಿದ್ದಾರೆ ಪ್ರಧಾನಿ ಮೋದಿ ಅವರು ಎಂದು ಬಣ್ಣಿಸಿದರು.

ಸಭೆಗೂ ಮುನ್ನ ಸೂಳಿಕಟ್ಟಿಯ ಗ್ರಾಮದೇವತೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಪ್ರಚಾರ ಕೈಗೊಂಡರು.

ಇದನ್ನೂ ಓದಿ: Viral Video: ಕಾಲಿನ ಗಾಯವನ್ನು ಲೆಕ್ಕಿಸದೆ ರೋಲರ್ ಓಡಿಸಿ ಪಿಚ್​ ಸಿದ್ಧಪಡಿಸಿದ ಮೊಹಮ್ಮದ್​ ಶಮಿ

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ, ಮುಖಂಡರಾದ ಐಸಿ ಗೋಕುಲ‌, ಸದಾನಂದ ಚಿಂತಾಮಣಿ, ಮಲ್ಲಯ್ಯ ಸ್ವಾಮಿ ಗೋಡಿಮನೆ, ಸಿ.ಎಫ್.ಪಾಟೀಲ್ ಸೇರಿದಂತೆ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Iqbal Hussain: ಯುವತಿ ಜತೆ ಶಾಸಕ ಇಕ್ಬಾಲ್ ಹುಸೇನ್ ವಿಡಿಯೊ ಕಾಲ್ ವೈರಲ್; ಎಫ್‌ಐಆರ್‌ ದಾಖಲು

Iqbal Hussain: ರಾಮನಗರ ಕಾಂಗ್ರೆಸ್ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಅವರು, ಯುವತಿಯೊಬ್ಬರ ಜತೆ ವಾಟ್ಸ್‌ಆ್ಯಪ್‌ ವಿಡಿಯೊ ಕಾಲ್‌ನಲ್ಲಿ ಮಾತನಾಡಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೊ ಎಡಿಟ್‌ ಮಾಡಿ ದುರ್ಬಳಕೆ ಮಾಡಲಾಗಿದೆ ಎಂದು ಯುವತಿ ದೂರು ನೀಡಿದ್ದಾರೆ.

VISTARANEWS.COM


on

Ikbal hussain
Koo

ರಾಮನಗರ: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣದ ಬೆನ್ನಲ್ಲೇ ರಾಮನಗರ ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನ್ (Iqbal Hussain) ಅವರು ವಾಟ್ಸ್‌ಆ್ಯಪ್‌ನಲ್ಲಿ ಯುವತಿಯೊಂದಿಗೆ ಮಾತನಾಡಿರುವ ವಿಡಿಯೊ ವೈರಲ್ ಆದ ಹಿನ್ನೆಲೆಯಲ್ಲಿ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಕಾಂಗ್ರೆಸ್ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಯುವತಿಯೊಬ್ಬರೊಂದಿಗೆ ವಾಟ್ಸ್‌ಆ್ಯಪ್‌ ವಿಡಿಯೊ ಕಾಲ್‌ನಲ್ಲಿ ಮಾತನಾಡಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದು ರಾಮನಗರದಲ್ಲಿ ಸಂಚಲನ ಮೂಡಿಸಿದೆ. ಇಕ್ಬಾಲ್ ಹುಸೇನ್ ಅವರು ಕಾಂಗ್ರೆಸ್ ಪದಾಧಿಕಾರಿ ಎನ್ನಲಾದ ಯುವತಿ ಜತೆಗಿನ 2 ನಿಮಿಷ 27 ಸೆಕೆಂಡ್‌ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಯುವತಿಯಿಂದ ದೂರು ದಾಖಲು

ಇಕ್ಬಾಲ್‌ ಹುಸೇನ್‌ ಅವರ ವಿಡಿಯೊ ವೈರಲ್ ಸಂಬಂಧ ರಾಮನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಶಾಸಕ ಯುವತಿಯೊಂದಿಗೆ ಅಶ್ಲೀಲವಾಗಿ ಚರ್ಚೆ ಮಾಡಿದ್ದಾರೆಂದು ಆರೋಪಗಳು ಕೇಳಿಬಂದಿದ್ದವು. ಆದರೆ, ವಿಡಿಯೊವನ್ನು ಎಡಿಟ್‌ ಮಾಡಿ ವೈರಲ್‌ ಮಾಡಲಾಗಿದೆ. ನನ್ನ ಹಾಗೂ ಇಕ್ಬಾಲ್ ಹುಸೇನ್ ಅವರದ್ದು ತಂದೆ-ಮಗಳ ಸಂಬಂಧ. ವಿಡಿಯೊ ಕಾಲ್ ಅನ್ನ ದುರುಪಯೋಗ ಮಾಡಲಾಗಿದೆ ಎಂದು ಸಂತ್ರಸ್ತ ಯುವತಿ ದೂರು ನೀಡಿದ್ದಾಳೆ.

ಒಳ ಉಡುಪಿನಲ್ಲಿ ಇರುವ ಹಾಗೆ ವಿಡಿಯೊ ಸೃಷ್ಟಿಸಲಾಗಿದೆ ಎಂದು ಆರೋಪಿಸಿರುವ ಸಂತ್ರಸ್ತ ಯುವತಿ, ತಮ್ಮಣ್ಣಗೌಡ ಗುಂಡ್ಕಲ್ ಎಂಬುವರ ಫೇಸ್ ಬುಕ್ ಖಾತೆಯಲ್ಲಿ ವಿಡಿಯೊ ಹರಿಬಿಡಲಾಗಿದೆ. ವಿಡಿಯೊದಲ್ಲಿ ನಾನು ಮಾತನಾಡಿರುವುದನ್ನು ತಿರುಚಲಾಗಿದೆ. ಈ ಬಗ್ಗೆ ಕ್ರಮವಹಿಸಬೇಕು ಎಂದು ಯುವತಿ ಮನವಿ ಮಾಡಿದ್ದಾಳೆ.

ಇದನ್ನೂ ಓದಿ | Prajwal Revanna Case: ಸಿಂಗಾಪುರ ಮಾಧ್ಯಮಗಳಲ್ಲೂ ಪ್ರಜ್ವಲ್‌ ರೇವಣ್ಣ ಕೇಸ್‌ ಸದ್ದು!

ವಿಡಿಯೊ ನನ್ನದೇ ಎಂದು ಒಪ್ಪಿಕೊಂಡ ಶಾಸಕ ಇಕ್ಬಾಲ್!

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೊ ನನ್ನದೇ ಎಂದು ಒಪ್ಪಿಕೊಂಡಿರುವ ಶಾಸಕ ಇಕ್ಬಾಲ್‌ ಹುಸೇನ್ ಅವರು, ಯಾರದೊ ಕೋಪವನ್ನು ತೀರಿಸಿಕೊಳ್ಳಲು ನನ್ನನ್ನು ಸಿಲುಕಿಸುವ ಪ್ರಯತ್ನ ಮಾಡಲಾಗಿದೆ. ಸಮಸ್ಯೆಗಳನ್ನು ಹೇಳಿಕೊಳ್ಳಲು ಹಲವಾರು ಮಂದಿ ಕರೆ ಮಾಡುತ್ತಾರೆ. ವಿಡಿಯೊ ಕಾಲ್ ಮಾಡಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ. ಈ ಕರೆ ಸುಮಾರು ಒಂದೂವರೆ ವರ್ಷ ಹಿಂದಿನದು ಎಂದಿರುವ ಶಾಸಕ, ಹೀಗೆ ಕಾಲ್ ರೆಕಾರ್ಡ್ ಮಾಡಿಕೊಂಡು ಈಗ ನನ್ನ ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

Continue Reading

ಕರ್ನಾಟಕ

Prajwal Revanna Case: ವಿಡಿಯೊ ಬಿಟ್ಟ ಕಾರ್ತಿಕ್‌ ಎಲ್ಲಿ? ಆತನನ್ನು ಮಲೇಷ್ಯಾಗೆ ಕಳುಹಿಸಿದ್ದು ಯಾರು?: ಎಚ್‌ಡಿಕೆ ಕಿಡಿ

Prajwal Revanna Case: ಪ್ರಜ್ವಲ್‌ ಬಗ್ಗೆ ವಿಡಿಯೊ ಬಿಟ್ಟಿದ್ದ ಕಾರ್ತಿಕ್‌ ಎಲ್ಲಿದ್ದಾನೆ? ಆತನನ್ನು ಮಲೇಷ್ಯಾಗೆ ಕಳುಹಿಸಿದ್ದು ಯಾರು ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಿಂದ (Prajwal Revanna Case) ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಸಾಕಷ್ಟು ಇರಿಸುಮುರಿಸು ಉಂಟಾಗಿದೆ. ಪದ್ಮನಾಭನಗರದ ನಿವಾಸದ ಗೇಟ್‌ ಮುಂಭಾಗ ಪ್ರಕರಣದ ಬಗ್ಗೆ ಪ್ರಶ್ನಿಸಿದ ಮಾಧ್ಯಮಗಳ ವಿರುದ್ಧ ಗರಂ ಆಗಿರುವ ಅವರು, ಪದೇಪದೇ ಏನು ಕೇಳುತ್ತೀರಿ, ನಿಮಗೆ ಏನು ಕೆಲಸ, ಇಲ್ಲಿ ಯಾಕೆ ಬಂದಿದ್ದೀರಾ? ಸುದ್ದಿ ಬಿಡುವವರ ಜತೆ ಹೋಗಿ ಎಂದು ಕಿಡಿಕಾರಿದ್ದಾರೆ.

ನೆನ್ನೆ ಡ್ರೈವರ್ ಒಬ್ಬ ವಿಡಿಯೋ ಮಾಡಿ ಹೇಳಿದನಲ್ಲಾ? ಯಾರು ಆ ವಿಡಿಯೊ ಮಾಡಿದ್ದು? ಇಲ್ಲಿ ಚಿಲ್ಲರೆ ಅಣ್ಣ ತಮ್ಮ ಇದ್ದಾರಲ್ಲವೇ? ಅವರು ಏನ್ ಹೇಳಿದರು? ಕುಮಾರಸ್ವಾಮಿ ಬಿಟ್ಟಿದ್ದು ಎನ್ನುತ್ತಾರೆ. ಡ್ರೈವರ್ ಕಾರ್ತಿಕ್ ಎಲ್ಲಿದ್ದಾನೆ ಈಗ? ಮಲೇಷ್ಯಾದಲ್ಲಿ ಇದಾನೆ, ಆತನನ್ನು ಮಲೇಷ್ಯಾಗೆ ಕಳುಹಿಸಿದ್ದು ಯಾರು ಎಂದು ಪ್ರಶ್ನಿಸಿದ್ದಾರೆ.

ಆ ಡ್ರೈವರ್‌ ಕಾರ್ತಿಕ್ ಏನು ಹೇಳಿಕೆ ಕೊಟ್ಟಾ? ದೇವರಾಜೇಗೌಡ ಕೈಯಲ್ಲಿ ಪೆನ್ ಡ್ರೈವ್ ಕೊಟ್ಟಿದ್ದೆ ಅಂತ ಹೇಳಿದ್ದ. ಇಂದು ಬೆಳಗ್ಗೆ ಈ ಚಿಲ್ಲರೆ ಅಣ್ಣ ತಮ್ಮ ಇದಾರಲ್ವಾ (ಡಿಕೆಶಿ ಹಾಗೂ ಡಿ.ಕೆ ಸುರೇಶ್), ಕುಮಾರಸ್ವಾಮಿನೇ ಬಿಟ್ಟಿರಬೇಕು ಅಂತ ಹೇಳಿಕೆ ಕೊಟ್ಟಿದ್ದಾರೆ. ಕುಮಾರಸ್ವಾಮಿಯನ್ನು ಈ ಮೊದಲು ದೇವರಾಜೇಗೌಡ ಭೇಟಿಯಾಗಿದ್ದ ಎಂದು ಈ 420ಗಳು ಹೇಳಿದ್ದಾರೆ. ಹಾಗಾದರೆ ಎಲ್ಲಿದ್ದಾನೆ ಈ ಕಾರ್ತಿಕ್? ಯಾರು ಕಳುಹಿಸಿದರು? ಎಲ್ಲಿಂದ ವಿಡಿಯೋ ಮಾಡಿ ಬಿಟ್ಟದ್ದಾನೆ, ಅದನ್ನು ಮೊದಲು ತಿಳಿದುಕೊಳ್ಳಿ. ನನ್ನ ಕೆಣಕಿದ್ದಾರೆ, ಸುಮ್ಮನೆ ಬಿಡಲ್ಲ ನಾನು ಎಂದು ಡಿಕೆ ಬ್ರದರ್ಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ | Prajwal Revanna Case: ಸಿಂಗಾಪುರ ಮಾಧ್ಯಮಗಳಲ್ಲೂ ಪ್ರಜ್ವಲ್‌ ರೇವಣ್ಣ ಕೇಸ್‌ ಸದ್ದು!

ವಿದೇಶಕ್ಕೆ ಹಾರಿದ್ರಾ ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್?

ಎಸ್‌ಐಟಿಯಿಂದ ಪ್ರಜ್ವಲ್‌ ರೇವಣ್ಣ ಪೆನ್ ಡ್ರೈವ್ ಪ್ರಕರಣ ತನಿಖೆ ವೇಗ ಪಡೆದ ಬೆನ್ನಲ್ಲೇ ಪ್ರಜ್ವಲ್ ಮಾಜಿ ಕಾರು ಚಾಲಕ, ಪೆನ್ ಡ್ರೈವ್ ಕಿಂಗ್ ಪಿನ್ ಕಾರ್ತಿಕ್ ವಿದೇಶಕ್ಕೆ ಹಾರಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಎಸ್‌ಐಟಿ ತನಿಖೆಗೆ ಹಾಜರಾಗುತ್ತಿದ್ದೇನೆ ಎಂದು ಕಾರ್ತಿಕ್ ವಿಡಿಯೊ ಮಾಡಿ ಹರಿಬಿಟ್ಟಿದ್ದರು. ಆದರೆ, ಈಗ ತನಿಖೆ ದಿಕ್ಕು ತಪ್ಪಿಸಲು ಕಾರ್ತಿಕ್ ವಿಡಿಯೊ ಮಾಡಿದ್ದರಾ ಎಂಬ ಅನುಮಾನಗಳು ಮೂಡಿವೆ.

ವಕೀಲ ದೇವರಾಜೇಗೌಡರಿಗೆ ಮಾತ್ರ ವಿಡಿಯೋ ನೀಡಿದ್ದಾಗಿ ಕಾರ್ತಿಕ್ ಹೇಳಿಕೆ ಕೊಟ್ಟಿದ್ದರು. ಆದರೆ ನನಗಿಂತ ಮೊದಲೇ ಡಿ.ಕೆ.ಶಿವಕುಮಾರ್‌ಗೆ ಕಾರ್ತಿಕ್ ವಿಡಿಯೊ ತಲುಪಿಸಿದ್ದ ಎಂದು ವಕೀಲ ಹೇಳಿದ್ದರು. ಈ ಮೂಲಕ ವಿಡಿಯೊ ಹರಿಬಿಟ್ಟ ಆರೋಪದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ.

ಪ್ರಜ್ವಲ್ ಅವರದ್ದು ಎನ್ನಲಾದ ವಿಡಿಯೊವನ್ನು ಪ್ರಥಮವಾಗಿ ತನ್ನ ಬಳಿಯೇ ಕಾರ್ತಿಕ್ ಇಟ್ಟುಕೊಂಡಿದ್ದರು. ಇದೀಗ ವೀಡಿಯೊ ವೈರಲ್ ಆದ ನಂತರ ಎಸ್ಕೇಪ್ ಆಗಲು ಯತ್ನಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಚುನಾವಣೆ ಮತದಾನದ ಸಂದರ್ಭದಲ್ಲೇ ವಿಡಿಯೊಗಳು ವೈರಲ್‌ ಆಗಿದ್ದವು. ಹೀಗಾಗಿ ಯಾರು ವಿಡಿಯೊ ಹರಿಬಿಟ್ಟರು ಎಂಬ ಬಗ್ಗೆ ತಿಳಿಯಲು ಎಸ್‌ಐಟಿ ತನಿಖೆ ತೀವ್ರಗೊಳಿಸಿದೆ.

Continue Reading

ಉತ್ತರ ಕನ್ನಡ

Lok Sabha Election 2024: ಹಿಂದಿನ ಚುನಾವಣೆಗಳಿಗಿಂತ ಈ ಬಾರಿ ಬಿಜೆಪಿಗೆ ಅಧಿಕ ಬಹುಮತ ನಿಶ್ಚಿತ: ಹರಿಪ್ರಕಾಶ್‌ ಕೋಣೆಮನೆ

Lok Sabha Election 2024: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್‌ ಕೋಣೆಮನೆ ಹಾಗೂ ಮಂಡಲ ಪ್ರಮುಖರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಯಲ್ಲಾಪುರ ಪಟ್ಟಣದಾದ್ಯಂತ ಬುಧವಾರ ಮನೆ ಮನೆ ಪ್ರಚಾರ ನಡೆಸಿದರು.

VISTARANEWS.COM


on

BJP State Spokesperson Hariprakash konemane and leaders Election Campaign for BJP Candidate Vishweshwar Hegde Kageri in Yallapura
Koo

ಯಲ್ಲಾಪುರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್‌ ಕೋಣೆಮನೆ ಹಾಗೂ ಮಂಡಲ ಪ್ರಮುಖರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಯಲ್ಲಾಪುರ ಪಟ್ಟಣದಾದ್ಯಂತ ಬುಧವಾರ ಮನೆ ಮನೆ ಪ್ರಚಾರ (Lok Sabha Election 2024) ನಡೆಸಿದರು.

ಮಹಾಸಂಪರ್ಕ ಅಭಿಯಾನದ ಅಂಗವಾಗಿ ಪಟ್ಟಣದ ಅಂಗಡಿಗಳು, ಸಂತೆ ಮಾರುಕಟ್ಟೆ, ರಿಕ್ಷಾ ನಿಲ್ದಾಣ ಹಾಗೂ ಮನೆ ಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಪರ ಪ್ರಚಾರ ನಡೆಸಲಾಯಿತು.

ಇದನ್ನೂ ಓದಿ: Karnataka Weather : ಮಳೆಗಾಗಿ ಕಪ್ಪೆಗಳಿಗೆ ಮದುವೆ; ಶಾಖದ ಹೊಡೆತಕ್ಕೆ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಈ ವೇಳೆ ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್‌ ಕೋಣೆಮನೆ ಮಾತನಾಡಿ, ಎಲ್ಲರ ಬಾಯಲ್ಲಿ ‘ಮೋದಿ ಮತ್ತೊಮ್ಮೆ’ ಘೋಷಣೆ ಮೊಳಗುತ್ತಿದೆ. ಎಲ್ಲ ಕಡೆಗಳಲ್ಲಿ ಜನರಿಂದ ಉತ್ತಮ ಸ್ಪಂದನೆ ದೊರಕುತ್ತಿದ್ದು ಬಿಜೆಪಿ ಈ ಲೋಕಸಭಾ ಚುನಾವಣೆಯಲ್ಲಿ ಹಿಂದಿನ ಚುನಾವಣೆಗಳಿಗಿಂತ ಹೆಚ್ಚು ಬಹುಮತ ಪಡೆದು ಗೆಲ್ಲುವುದು ನಿಶ್ಚಿತ. ಅದರಲ್ಲಿಯೂ ಯಲ್ಲಾಪುರ-ಮುಂಡಗೋಡ ಕ್ಷೇತ್ರದಿಂದ ಅತ್ಯಧಿಕ ಬಹುಮತ ದೊರೆಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: Ballari News: ಬಾಯಿಯೊಳಗೆ ತ್ರಿಶೂಲ; ಬೆನ್ನಿಗೆ ಕೊಕ್ಕೆ ಕಟ್ಟಿಕೊಂಡು ಕಾರು, ರಿಕ್ಷಾ ಎಳೆದ ಭಕ್ತರು!

ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ಪ್ರಸಾದ ಹೆಗಡೆ, ಪ್ರಮುಖರಾದ ಉಮೇಶ ಭಾಗ್ವತ್, ಜಿ.ಎನ್. ಗಾಂವ್ಕರ್, ಗಣಪತಿ ಮಾನಿಗದ್ದೆ, ರಾಘವೇಂದ್ರ ಭಟ್ಟ ಹಾಸಣಗಿ, ರಾಮು ನಾಯ್ಕ, ಸೋಮೇಶ್ವರ ನಾಯ್ಕ, ರಾಜೇಶ್ ಭಟ್ಟ, ಶ್ರೀನಿವಾಸ ಭಟ್ಟ ಹಾಗೂ ಕಾರ್ಯಕರ್ತರು, ಇತರರು ಪಾಲ್ಗೊಂಡಿದ್ದರು.

Continue Reading
Advertisement
Love Jihad
ದೇಶ27 mins ago

Love Jihad: ಹಿಂದು ಎಂಬಂತೆ ಬಿಂಬಿಸಿ, ಯುವತಿಯನ್ನು ನಂಬಿಸಿ, ಕೊನೆಗೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

Union Minister Pralhad Joshi election campaign in kalaghatagi
ಧಾರವಾಡ29 mins ago

Lok Sabha Election 2024: ಕಾಂಗ್ರೆಸ್ಸಿನ 1 ಲಕ್ಷ ರು. ಬೋಗಸ್ ಗ್ಯಾರಂಟಿ: ಪ್ರಲ್ಹಾದ್‌ ಜೋಶಿ

Ikbal hussain
ಕರ್ನಾಟಕ1 hour ago

Iqbal Hussain: ಯುವತಿ ಜತೆ ಶಾಸಕ ಇಕ್ಬಾಲ್ ಹುಸೇನ್ ವಿಡಿಯೊ ಕಾಲ್ ವೈರಲ್; ಎಫ್‌ಐಆರ್‌ ದಾಖಲು

T20 Rankings
ಕ್ರೀಡೆ1 hour ago

T20 Rankings: ಅಗ್ರಸ್ಥಾನದಲ್ಲೇ ಮುಂದುವರಿದ ಸೂರ್ಯ; ಒಂದು ಸ್ಥಾನ ಏರಿಕೆ ಕಂಡ ಬಾಬರ್​

Pakistan Teen
ದೇಶ1 hour ago

ಪಾಕ್‌ ಯುವತಿಗೆ ಭಾರತದ ಹಿಂದು ವ್ಯಕ್ತಿ ಹೃದಯದ ಕಸಿ; ತಕರಾರು ತೆಗೆದ ನೆರೆ ರಾಷ್ಟ್ರದ ಇಸ್ಲಾಂ ಧರ್ಮಗುರು!

Prajwal Revanna Case
ಕರ್ನಾಟಕ2 hours ago

Prajwal Revanna Case: ವಿಡಿಯೊ ಬಿಟ್ಟ ಕಾರ್ತಿಕ್‌ ಎಲ್ಲಿ? ಆತನನ್ನು ಮಲೇಷ್ಯಾಗೆ ಕಳುಹಿಸಿದ್ದು ಯಾರು?: ಎಚ್‌ಡಿಕೆ ಕಿಡಿ

KL Rahul
ಕ್ರಿಕೆಟ್2 hours ago

KL Rahul: ಟಿ20 ವಿಶ್ವಕಪ್​ನಲ್ಲಿ ರಾಹುಲ್​ಗೆ ಅವಕಾಶ ಸಿಗದಿರಲು ಕಾರಣ ತಿಳಿಸಿದ ಮಾಜಿ ಆಟಗಾರ

Rahul Gandhi
ದೇಶ2 hours ago

Rahul Gandhi: ರಾಹುಲ್‌ ಗಾಂಧಿಯನ್ನು ಹೊಗಳಿದ ಪಾಕ್‌ ಮಾಜಿ ಸಚಿವ; ತಿರುಗೇಟು ಕೊಟ್ಟ ಬಿಜೆಪಿ

BJP State Spokesperson Hariprakash konemane and leaders Election Campaign for BJP Candidate Vishweshwar Hegde Kageri in Yallapura
ಉತ್ತರ ಕನ್ನಡ3 hours ago

Lok Sabha Election 2024: ಹಿಂದಿನ ಚುನಾವಣೆಗಳಿಗಿಂತ ಈ ಬಾರಿ ಬಿಜೆಪಿಗೆ ಅಧಿಕ ಬಹುಮತ ನಿಶ್ಚಿತ: ಹರಿಪ್ರಕಾಶ್‌ ಕೋಣೆಮನೆ

MLA G Janardan Reddy latest statement in Gangavathi
ಕರ್ನಾಟಕ3 hours ago

Lok Sabha Election 2024: ಕಳೆದ ಚುನಾವಣೆಯಲ್ಲಿ ನನ್ನ ಜತೆ ಸ್ವತಃ ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡಿದ್ದರು: ರೆಡ್ಡಿ ಸ್ಫೋಟಕ ಹೇಳಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌