Rain News: ಚಿಕ್ಕಮಗಳೂರು, ಬೆಳಗಾವಿ ಸೇರಿ ವಿವಿಧೆಡೆ ಭಾರಿ ಮಳೆ; ನೆಲಕ್ಕುರುಳಿದ ಮರ, ವಿದ್ಯುತ್‌ ಕಂಬಗಳು - Vistara News

ಕರ್ನಾಟಕ

Rain News: ಚಿಕ್ಕಮಗಳೂರು, ಬೆಳಗಾವಿ ಸೇರಿ ವಿವಿಧೆಡೆ ಭಾರಿ ಮಳೆ; ನೆಲಕ್ಕುರುಳಿದ ಮರ, ವಿದ್ಯುತ್‌ ಕಂಬಗಳು

Rain News: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಬುಧವಾರ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

VISTARANEWS.COM


on

Tree uprooted in Khanapur
ಬೆಳಗಾವಿಯ ಖಾನಾಪುರ ತಾಲೂಕಿನ ಗ್ರಾಮವೊಂದರಲ್ಲಿ ಭಾರಿ ಮಳೆಗೆ ವಿದ್ಯುತ್‌ ಕಂಬದ ಮೇಲೆ ಮರ ಉರುಳಿ ಬಿದ್ದಿದ್ದರಿಂದ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದ ವಿವಿಧೆಡೆ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಭಾರಿ ಅವಾಂತರ ಸೃಷ್ಟಿಸಿದೆ. ಕೆಲವೆಡೆ ಬಿರುಗಾಳಿ ಮಳೆಗೆ ವಿದ್ಯುತ್‌ ಕಂಬಗಳು, ಮರಗಳು ನೆಲಕ್ಕುರುಳಿರುವುದರಿಂದ ವಿದ್ಯುತ್‌ ಸಂಪರ್ಕ ಕಡಿತವಾಗಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಅದೇ ರೀತಿ ನಿರಂತರ ಮಳೆಯಿಂದ (Rain News) ಮನೆಗಳು, ಬೆಳೆಗಳಿಗೆ ಹಾನಿಯಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಮನೆಯ ಸೀಲಿಂಗ್‌ ಕುಸಿದು ನಾಲ್ವರಿಗೆ ಗಾಯ

The ceiling of the house collapsed

ಬಾಗಲಕೋಟೆ: ಎರಡು ದಿನಗಳಿಂದ ನಿರಂತರ ಮಳೆ ಹಿನ್ನೆಲೆಯಲ್ಲಿ ಮನೆಯ ಚಾವಣಿಯ ಸೀಲಿಂಗ್ ಕುಸಿದು ನಾಲ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ಜಿಲ್ಲೆಯ ಸಾವಳಗಿ ಗ್ರಾಮದಲ್ಲಿ ಘಟನೆ. ತಾಯಿ ದೀಪಾ, ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆಯಿಂದ ಮನೆಯಲ್ಲಿದ್ದ ವಸ್ತುಗಳಿಗೂ ಹಾನಿಯಾಗಿದೆ.

ಖಾನಾಪುರ-ಹೆಮ್ಮಡಗಾ ಸಂಪರ್ಕ ಕಡಿತ

Khanapur Hemmadaga route closed

ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಖಾನಾಪುರದಿಂದ ಹೆಮ್ಮಡಗಾ ಅರಣ್ಯ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗವನ್ನು ಬಂದ್ ಮಾಡಲಾಗಿದೆ. ಖಾನಾಪುರ ತಾಲೂಕಿನ ಹೆಮ್ಮಡಗಾ ಮಾರ್ಗದ ಹಾಲತ್ರಿ ನದಿಯ ಹಳ್ಳ ಸಂಪೂರ್ಣ ತುಂಬಿ ಹರಿಯುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿ, ಯಾರೂ ಸಂಚಾರ ಮಾಡದಂತೆ ಬ್ಯಾರಿಕೇಡ್ ಹಾಕಿ‌ ರಸ್ತೆ ಬಂದ್ ಮಾಡಲಾಗಿದೆ.

Electricity pole collapses in Khanapur taluk

ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ, ಕಣಕುಂಬಿ, ಹಬ್ಬಾನಟ್ಟಿ,‌ ಹೆಮ್ಮಡಗಾ, ಗವಾಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಗಾಳಿ ಮಳೆಗೆ ವಿದ್ಯುತ್ ಕಂಬಗಳು ಉರುಳಿದ್ದರಿಂದ ವಿದ್ಯುತ್‌ ಸಂಪರ್ಕ ಕಡಿತವಾಗಿದೆ.

ಹೊರನಾಡು ರಸ್ತೆಗೆ ಅಡ್ಡಲಾಗಿ ಉರುಳಿದ ಮರ

A tree fell across horanadu road

ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆ-ಗಾಳಿ ಅಬ್ಬರ ಮುಂದುವರೆದಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರನಾಡು-ಕೊಟ್ಟಿಗೆಹಾರ ಮಧ್ಯದ ಬಾಳೂರು ಎಸ್ಟೇಟ್ ಬಳಿ ರಸ್ತೆಗೆ ಅಡ್ಡಲಾಗಿ ಮರ ಉರುಳಿ ಬಿದ್ದಿದ್ದರಿಂದ ಒಂದು ಗಂಟೆಗೂ ಹೆಚ್ಚು ಕಾಲ ಹೊರನಾಡು ಸಂಪರ್ಕ ಬಂದ್ ಆಗಿತ್ತು. ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ, ಸ್ಥಳೀಯರಿಂದ ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

The retaining wall of the house in Kalasa taluk has collapsed

ಜಿಲ್ಲೆಯ ಕಳಸ ತಾಲೂಕು ಓಣಿಗಂಡಿ ಗ್ರಾಮದಲ್ಲಿ ಕಳೆದ ವರ್ಷ ಮನೆಯ ಅಡಿಪಾಯಕ್ಕೆ ಅಡ್ಡಲಾಗಿ ನಿರ್ಮಿಸಿದ್ದ ತಡೆಗೋಡೆ ಕುಸಿದಿದೆ. ಭಾಸ್ಕರ್ ಡೋಂಗ್ರೆ ಎಂಬುವರ ಮನೆ ಅಡಿಪಾಯಕ್ಕೆ ನಿರ್ಮಿಸಿದ್ದ ತಡೆಗೋಡೆ ಕುಸಿದಿದೆ ಹೀಗಾಗಿ ಮನೆ ಕುಸಿತದ ಭೀತಿಯಲ್ಲಿ ಕುಟುಂಬಸ್ಥರು ಇದ್ದಾರೆ.

ಕಾಲು ಜಾರಿ ನದಿಗೆ ಬಿದ್ದು ವೃದ್ಧೆ ಸಾವು

ಧಾರಾಕಾರ ಮಳೆಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಎರಡನೇ ಬಲಿಯಾಗಿದೆ. ಭತ್ತದ ಗದ್ದೆಗೆ ತೆರಳುವಾಗ ಕಾಲು ಜಾರಿ ಹೇಮಾವತಿ ನದಿಗೆ ಬಿದ್ದು ವೃದ್ಧೆ ಮೃತಪಟ್ಟಿದ್ದು, ಬುಧವಾರ ಮೃತದೇಹ ಪತ್ತೆಯಾಗಿದೆ. ರಭಸವಾಗಿ ಹರಿಯುತ್ತಿದ್ದ ನದಿಗೆ ಬಿದ್ದಿದ್ದರಿಂದ ವೃದ್ಧೆ ಕೊಚ್ಚಿಕೊಂಡು ಹೋಗಿದ್ದರು. ದಾರದಹಳ್ಳಿ ಗ್ರಾಮದ ದೇವಮ್ಮ (61) ಮೃತರು.

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ರಸ್ತೆ ಬದಿ ಭೂ ಕುಸಿತ

Road side landslide on NH 75

ಹಾಸನ: ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು ತಾಲೂಕಿನ ಹಲವು ಕಡೆ ಭಾರಿ ಮಳೆಯಾಗಿದೆ. ಸಕಲೇಶಪುರ ತಾಲೂಕಿನಲ್ಲಿ ಮಳೆ ಆರ್ಭಟ ಹಿನ್ನೆಲೆಯಲ್ಲಿ ಮಂಗಳೂರು – ಬೆಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ರಸ್ತೆ ಬದಿ ಭೂ ಕುಸಿತವಾಗಿದೆ. ಸಕಲೇಶಪುರ ಸಮೀಪದ ಆನೆಮಹಲ್ ಬಳಿ ರಸ್ತೆ ಕುಸಿದಿದೆ. ಆತಂಕದಲ್ಲಿ ವಾಹನ ಸವಾರರು ಓಡಾಟ ನಡೆಸುತ್ತಿದ್ದಾರೆ. ಹೆದ್ದಾರಿಯ ಎರರೂ ಬದಿಯಲ್ಲೂ ಕುಸಿತವಾಗಿದೆ. ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆ ಕುಸಿದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Lok Sabha Election: ನಾಳೆ ವೋಟಿಂಗ್; ನಿಮ್ಮ ‘ಮತ’ ಕಳವಾದರೆ ಏನು ಮಾಡಬೇಕು? ಇಲ್ಲಿದೆ ಉತ್ತರ

Lok Sabha Election 2024: ಬೇರೆಯವರು ನಮ್ಮ ಮತ ಚಲಾಯಿಸಲು ಸಾಧ್ಯವಿಲ್ಲ. ಒಂದು ವೇಳೆ ಚಲಾಯಿಸಿದ್ದರೆ ಅಂತಹ ಪರಿಸ್ಥಿತಿಯಲ್ಲಿ ಚುನಾವಣಾ ಆಯೋಗದಿಂದ ಒಂದು ನಿಬಂಧನೆಯನ್ನು ಮಾಡಲಾಗಿದೆ. ಮತದಾರನ ಬಳಿ ವೋಟರ್ ಐಡಿ ಮತ್ತು ವೋಟಿಂಗ್ ಸ್ಲಿಪ್ ಇದ್ದರೆ ಮತದಾನ ಮಾಡಲು ಅವಕಾಶ ನೀಡಲಾಗುತ್ತದೆ. ಅಂತಹ ಸಂದರ್ಭದಲ್ಲಿ ಏನು ಮಾಡಬೇಕು ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Lok Sabha Election
Koo

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ (Lok Sabha Election 2024) ಎರಡನೇ ಹಂತದ ಮತದಾನವು ಮಂಗಳವಾರ (ಮೇ 7) ನಡೆಯಲಿದೆ. ಹಾಗಾಗಿ, ಇನ್ನೂ ಮತದಾರರಲ್ಲಿ (voters) ಹಲವು ಪ್ರಶ್ನೆಗಳು, ಗೊಂದಲಗಳು ಕಾಡುತ್ತಿರುತ್ತವೆ. ಇದರಲ್ಲಿ ನಮ್ಮ ಮತವನ್ನು (vote) ಬೇರೆಯವರು ಚಲಾವಣೆ ಮಾಡಿದರೆ ಏನಾಗುತ್ತದೆ, ಈ ಸಂದರ್ಭದಲ್ಲಿ ನಾವು ಏನು ಮಾಡಬೇಕು ಎಂಬುದು ಕೂಡ ಒಂದು.

ದೇಶದ ಬಹುದೊಡ್ಡ ಚುನಾವಣೆಗಾಗಿ ಚುನಾವಣಾ ಅಧಿಕಾರಿಗಳು (election officers), ವಿವಿಧ ಪಕ್ಷಗಳ ಅಭ್ಯರ್ಥಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಈಗಾಗಲೇ ಕರ್ತವ್ಯದಲ್ಲಿ ನಿರತರಾಗಿದ್ದಾರೆ. ಆದರೆ ಇದರಲ್ಲಿ ಬಹುದೊಡ್ಡ ಪಾಲುದಾರ ಪ್ರತಿಯೊಬ್ಬ ಮತದಾರ. ಅವರ ಅಧಿಕಾರ, ಹಕ್ಕನ್ನು ಬೇರೆಯವರು ಚಲಾಯಿಸಲು ಸಾಧ್ಯವಿಲ್ಲ. ಒಂದು ವೇಳೆ ಅಕ್ರಮವಾಗಿ ಅಥವಾ ಆಕಸ್ಮಿಕವಾಗಿ ನಮ್ಮ ಮತವನ್ನು ಬೇರೆಯವರು ಚಲಾಯಿಸಿಸಿದರೆ ಏನು ಮಾಡಬೇಕು, ಹೀಗಾದಾಗ ನಮ್ಮ ಮತದಾನದ ಹಕ್ಕನ್ನು ನಾವು ಮತ್ತೆ ಚಲಾಯಿಸಲು ಸಾಧ್ಯವೇ ? ಈ ಸಂದರ್ಭದಲ್ಲಿ ನಾವು ಏನು ಕ್ರಮ ಕೈಗೊಳ್ಳಬಹುದು ಮೊದಲಾದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

Voter Slip

ಬೇರೆಯವರು ನಮ್ಮ ಮತ ಚಲಾಯಿಸಬಹುದೇ?

ಬೇರೆಯವರು ನಮ್ಮ ಮತ ಚಲಾಯಿಸಲು ಸಾಧ್ಯವಿಲ್ಲ. ಒಂದು ವೇಳೆ ಚಲಾಯಿಸಿದ್ದರೆ ಅಂತಹ ಪರಿಸ್ಥಿತಿಯಲ್ಲಿ ಚುನಾವಣಾ ಆಯೋಗದಿಂದ ಒಂದು ನಿಬಂಧನೆಯನ್ನು ಮಾಡಲಾಗಿದೆ. ಮತದಾರನ ಬಳಿ ವೋಟರ್ ಐಡಿ ಮತ್ತು ವೋಟಿಂಗ್ ಸ್ಲಿಪ್ ಇದ್ದರೆ ಮತದಾನ ಮಾಡಲು ಅವಕಾಶ ನೀಡಲಾಗುತ್ತದೆ. ಆದರೆ ನಿಮ್ಮ ಮತವನ್ನು ಟೆಂಡರ್ಡ್ ಬ್ಯಾಲೆಟ್ ಪೇಪರ್ ಎಂದು ಗುರುತಿಸಲಾಗುತ್ತದೆ ಮತ್ತು ಪ್ರತ್ಯೇಕವಾಗಿ ಇರಿಸಲಾಗುತ್ತದೆ.

ತಕ್ಷಣ ದೂರು ನೀಡಿ

ಮತಗಟ್ಟೆ ಅಧಿಕಾರಿಯು ಮತಗಟ್ಟೆಯೊಳಗೆ ಬರುವಾಗ ನಿಮ್ಮ ಮತವು ಈಗಾಗಲೇ ಚಲಾವಣೆಯಾಗಿದೆ ಎಂದು ತಿಳಿಸಿದರೆ ಭಾರತೀಯ ಚುನಾವಣಾ ಕಾಯಿದೆ 1961ರ ಅಡಿಯಲ್ಲಿ ಯಾರಾದರೂ ನಿಮ್ಮ ಹೆಸರಿನಲ್ಲಿ ಮತ ಚಲಾಯಿಸಿದರೆ ತಕ್ಷಣ ಸ್ಥಳದಲ್ಲಿರುವ ಪ್ರಿಸೈಡಿಂಗ್ ಅಧಿಕಾರಿಗೆ ದೂರು ನೀಡಿ. ಆಗ ಟೆಂಡರ್ಡ್ ಮತವನ್ನು ಚಲಾಯಿಸಲು ಕಾನೂನು ನಿಮಗೆ ಅವಕಾಶ ನೀಡುತ್ತದೆ.

ಚುನಾವಣಾ ನಿಯಮಗಳ ನಿಯಮ 49ಪಿ ಪ್ರಕಾರ ಟೆಂಡರ್ಡ್ ಬ್ಯಾಲೆಟ್ ಪೇಪರ್ ಅನ್ನು ನಿಮಗೆ ನೀಡಲಾಗುತ್ತದೆ ಮತ್ತು ಟೆಂಡರ್ ಮಾಡಿದ ಮತಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಸಹಿ ಮಾಡಬೇಕಾಗುತ್ತದೆ. ವಿದ್ಯುನ್ಮಾನ ಮತಯಂತ್ರದಲ್ಲಿ ಇದನ್ನು ಮಾಡಲು ಸಾಧ್ಯವಿಲ್ಲ. ಟೆಂಡರ್ ಮಾಡಿದ ಮತಪತ್ರವು ಬ್ಯಾಲೆಟ್ ಯೂನಿಟ್‌ನಲ್ಲಿ ಪ್ರದರ್ಶಿಸಲಾದ ಬ್ಯಾಲೆಟ್ ಪೇಪರ್‌ನಂತೆಯೇ ಇರುತ್ತದೆ. ಟೆಂಡರ್ಡ್ ಬ್ಯಾಲೆಟ್ ಪೇಪರ್ ಅನ್ನು ಪ್ರಿಸೈಡಿಂಗ್ ಅಧಿಕಾರಿಗೆ ಮರಳಿ ನೀಡಬೇಕು.

ಹೇಗೆ ಮತ ಹಾಕುವುದು?

ಬಾಣದ ಕ್ರಾಸ್ ಮಾರ್ಕ್ ರಬ್ಬರ್ ಸ್ಟಾಂಪ್ ಸಹಾಯದಿಂದ ನಿಮ್ಮ ಅಭ್ಯರ್ಥಿಯ ಆಯ್ಕೆಯನ್ನು ಗುರುತಿಸಿದ ಅನಂತರ ನೀವು ಟೆಂಡರ್ ಮಾಡಿದ ಮತಪತ್ರವನ್ನು ಪ್ರಿಸೈಡಿಂಗ್ ಅಧಿಕಾರಿಗೆ ಹಸ್ತಾಂತರಿಸಬೇಕು. ಅವರು ಅದನ್ನು ಪ್ರತ್ಯೇಕ ಕವರ್‌ನಲ್ಲಿ ಇಡುತ್ತಾರೆ.

ಚಾಲೆಂಜ್ಡ್ ವೋಟ್

ಟೆಂಡರ್ ಮಾಡಿದ ಬ್ಯಾಲೆಟ್ ಪೇಪರ್ ಅನ್ನು ಚಾಲೆಂಜ್ಡ್ ವೋಟ್ ಎಂದೂ ಕರೆಯುತ್ತಾರೆ. ಬಳಿಕ ನಿಮ್ಮ ಜಾಗದಲ್ಲಿ ಯಾರು ಮತ ಹಾಕಿದ್ದಾರೆ ಎಂಬುದನ್ನು ಚುನಾವಣಾ ಅಧಿಕಾರಿಗಳು ಪರಿಶೀಲಿಸಿ ಅದನ್ನು ತೆಗೆದು ನಿಮ್ಮ ಮತವನ್ನು ಎಣಿಕೆಗೆ ಹಾಕಲಾಗುತ್ತದೆ.

ಗುರುತಿನ ಪುರಾವೆ ನೀಡಬೇಕು

ಮತದಾರರಾಗಿ ನಿಮ್ಮ ಗುರುತಿನ ಬಗ್ಗೆ ಯಾವುದೇ ಅಭ್ಯರ್ಥಿಯ ಪೋಲಿಂಗ್ ಏಜೆಂಟ್‌ ಪ್ರಶ್ನಿಸಿದರೆ ಚುನಾವಣಾ ಅಧಿಕಾರಿಗಳು ನಿಮ್ಮ ಗುರುತಿನ ಪುರಾವೆಯನ್ನು ಕೇಳುತ್ತಾರೆ. ಇದಕ್ಕಾಗಿ ನೀವು ಎಪಿಕ್ ಅಥವಾ ಪಾಸ್‌ಪೋರ್ಟ್, ರೇಷನ್ ಕಾರ್ಡ್‌ನಂತಹ ಯಾವುದೇ ದಾಖಲೆಯನ್ನು ಹೊಂದಿರಬೇಕು. ಆದರೂ ಅವರು ಸವಾಲು ಮಾಡಿ ಮತದಾನಕ್ಕೆ ಅನುಮತಿ ನೀಡದೇ ಇದ್ದರೆ ಪ್ರಿಸೈಡಿಂಗ್ ಅಧಿಕಾರಿಯಿಂದ ಲಿಖಿತ ದೂರನ್ನು ಪೊಲೀಸರಿಗೆ ಹಸ್ತಾಂತರಿಸಲಾಗುತ್ತದೆ.

ಎಷ್ಟು ಮತದಾರರು?

ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಸುಮಾರು 97 ಕೋಟಿ ಭಾರತೀಯರು ಮತ ಚಲಾಯಿಸಲು ಅರ್ಹರಾಗಿದ್ದಾರೆ ಎಂದು ಭಾರತೀಯ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಭಾರತದಲ್ಲಿ 96.88 ಕೋಟಿ ಜನರು ಮುಂಬರುವ ಸಾರ್ವತ್ರಿಕ ಚುನಾವಣೆಗಳಿಗೆ ಮತ ಚಲಾಯಿಸಲು ನೋಂದಾಯಿಸಿಕೊಂಡಿದ್ದಾರೆ, ಇದು ವಿಶ್ವದ ಅತಿದೊಡ್ಡ ಮತದಾರರ ಪೂಲ್ ಆಗಿದೆ. ಆಯೋಗದ ಪ್ರಕಾರ, 2019 ರ ಲೋಕಸಭಾ ಚುನಾವಣೆ ಬಳಿಕ ನೋಂದಾಯಿತ ಮತದಾರರ ಸಂಖ್ಯೆ ಶೇ. 6ರಷ್ಟು ಹೆಚ್ಚಾಗಿದೆ.

ಇದನ್ನೂ ಓದಿ: ನಾಳೆ ಎರಡನೇ ಹಂತದ ಮತದಾನ; ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

Continue Reading

ಕರ್ನಾಟಕ

Self Harming: ಕಬ್ಬಿಗೆರೆ ಗೊಲ್ಲರಹಟ್ಟಿಯಲ್ಲಿ ಸಾಲದ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Self Harming: ಸಾಲದ ಬಾಧೆ ತಾಳಲಾರದೇ ರೈತ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಕಬ್ಬಿಗೆರೆ ಗೊಲ್ಲರಹಟ್ಟಿ ಗ್ರಾಮದಲ್ಲಿ ಜರುಗಿದೆ. ರಾಜಣ್ಣ (38) ಮೃತಪಟ್ಟ ರೈತ. ಜಮೀನಿನಲ್ಲಿ ಬೋರ್‌ವೆಲ್ ಕೊರೆಸಲು ರೈತ ರಾಜಣ್ಣ ಹಲವು ಫೈನಾನ್ಸ್ ಗಳಲ್ಲಿ 12 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದು ಜಮೀನಿನಲ್ಲಿ 5 ಕ್ಕೂ ಹೆಚ್ಚು ಕೊಳವೆ ಬಾವಿಗಳನ್ನು ಕೊರೆಸಿದ್ದು ನೀರು ಸಿಗದ ಕಾರಣ ಮನನೊಂದಿದ್ದರು ಎಂದು ಹೇಳಲಾಗಿದೆ.

VISTARANEWS.COM


on

farmer commits suicide in Kabbigere Gollarhatti village
Koo

ಕೊರಟಗೆರೆ: ಸಾಲದ ಬಾಧೆ ತಾಳಲಾರದೇ ರೈತ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಕಬ್ಬಿಗೆರೆ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.

ರಾಜಣ್ಣ (38) ಮೃತಪಟ್ಟ ರೈತ. ಜಮೀನಿನಲ್ಲಿ ಬೋರ್‌ವೆಲ್ ಕೊರೆಸಲು ರೈತ ರಾಜಣ್ಣ ಹಲವು ಖಾಸಗಿ ಫೈನಾನ್ಸ್‌ಗಳಲ್ಲಿ 12 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದು, ಜಮೀನಿನಲ್ಲಿ 5ಕ್ಕೂ ಹೆಚ್ಚು ಕೊಳವೆ ಬಾವಿಗಳನ್ನು ಕೊರೆಸಿದ್ದು ನೀರು ಸಿಗದ ಕಾರಣ ಮನನೊಂದಿದ್ದರು ಎಂದು ಹೇಳಲಾಗಿದೆ.

ಇದನ್ನೂ ಓದಿ: Female Foeticide: ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಗರ್ಭಪಾತ ಮಾಡುವಾಗಲೇ ದಾಳಿ, ಮೂವರ ಅರೆಸ್ಟ್‌!

ತನ್ನ ಸ್ನೇಹಿತರ ಬಳಿಯೂ ಸಾಲ ಪಡೆದಿದ್ದು, ಕಳೆದ ಭಾನುವಾರ ತಡರಾತ್ರಿ ತನ್ನ ಜಮೀನಿನಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಪೊಲೀಸ್ ಆಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಕೈಗಳನ್ನು ಕಟ್ಟಿಹಾಕಿ ಸಿಗರೇಟ್‌ನಿಂದ ಗಂಡನ ಗುಪ್ತಾಂಗ ಸುಟ್ಟ ಹೆಂಡತಿ! ಭೀಕರ ವಿಡಿಯೊ ಇಲ್ಲಿದೆ!

ಎರಡು ವರ್ಷದಿಂದ ಮಳೆ ಇಲ್ಲದೆ ಬೆಳೆಗಳೆಲ್ಲವೂ ನಾಶವಾಗಿ ರೈತ ಮಾಡಿರುವ ಸಾಲ ತೀರಿಸಲಾಗದೆ ನೇಣು ಹಾಕಿಕೊಳ್ಳುತ್ತಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ನಡೆಯುತ್ತಿವೆ. ಹಣದ ವಸೂಲಿಗೆ ಬರುತ್ತಿರುವ ಮೈಕ್ರೋ ಫೈನಾನ್ಸ್ ಹಾಗೂ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕಬೇಕು. ಮಳೆ ಇಲ್ಲದೆ ಬೆಳೆ ಇಲ್ಲದೆ ರೈತ ಎಲ್ಲಿಂದ ಸಾಲವನ್ನು ಕಟ್ಟುತ್ತಾನೆ? ಈ ಘಟನೆಗಳ ಬಗ್ಗೆ ಕೊಡಲೇ ಸರ್ಕಾರ ಗಮನ ಹರಿಸಬೇಕು. ರೈತರ ಪ್ರಾಣವನ್ನು ಉಳಿಸಬೇಕು ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಸಿದ್ದರಾಜು ಆಗ್ರಹಿಸಿದ್ದಾರೆ.

Continue Reading

ಉತ್ತರ ಕನ್ನಡ

Lok Sabha Election 2024: ಲೋಕಸಭಾ ಚುನಾವಣೆಗೆ ಯಲ್ಲಾಪುರದಲ್ಲಿ ಸಕಲ ಸಿದ್ಧತೆ: ಅಜ್ಜಪ್ಪ ಸೊಗಲದ

Lok Sabha Election 2024: ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 233 ಮತಗಟ್ಟೆಗಳಿದ್ದು, 93961 ಪುರುಷ ಹಾಗೂ 92784 ಮಹಿಳೆಯರು ಸೇರಿ ಒಟ್ಟು 186745 ಮತದಾರಿದ್ದಾರೆ. ಈ ಪೈಕಿ 5065 ಯುವ ಮತದಾರರು ಮೇ 7 ರಂದು ಮಂಗಳವಾರ ಮತಚಲಾಯಿಸಲಿದ್ದಾರೆ ಎಂದು ಸಹಾಯಕ ಚುನಾವಣಾಧಿಕಾರಿ ಅಜ್ಜಪ್ಪ ಸೊಗಲದ ತಿಳಿಸಿದ್ದಾರೆ.

VISTARANEWS.COM


on

All preparations in Yallapur assembly constituency for Lok Sabha election says Ajjappa Sogalada
Koo

ಯಲ್ಲಾಪುರ: ಲೋಕಸಭಾ ಚುನಾವಣೆಯ (Lok Sabha Election 2024) 2ನೇ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಅಜ್ಜಪ್ಪ ಸೊಗಲದ ತಿಳಿಸಿದರು.

ಇದನ್ನೂ ಓದಿ: Akshaya Tritiya 2024: ಅಕ್ಷಯ ತೃತೀಯದಂದು ಏನು ಮಾಡಬೇಕು, ಏನು ಮಾಡಬಾರದು?

ಈ ಕುರಿತು ಮಾಹಿತಿ ನೀಡಿ ಮಾತನಾಡಿದ ಅವರು, ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 233 ಮತಗಟ್ಟೆಗಳಿದ್ದು, 93961 ಪುರುಷ ಹಾಗೂ 92784 ಮಹಿಳೆಯರು ಸೇರಿ ಒಟ್ಟು 186745 ಮತದಾರಿದ್ದಾರೆ. ಈ ಪೈಕಿ 5065 ಯುವ ಮತದಾರರು ಮೇ 7ರಂದು ಮಂಗಳವಾರ ಮತ ಚಲಾಯಿಸಲಿದ್ದಾರೆ.

ಚುನಾವಣಾ ಕರ್ತವ್ಯಕ್ಕಾಗಿ 932 ಮತಗಟ್ಟೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, 233 ಗ್ರೂಪ್‌ ಡಿ ನೌಕರರು ಹಾಗೂ 414 ಪೊಲೀಸ್‌ ಸಿಬ್ಬಂದಿಗಳು ಸೇರಿದಂತೆ 1579 ಸಿಬ್ಬಂದಿಗಳು ಕಾರ್ಯ ನಿರ್ವಹಿಸಲಿದ್ದಾರೆ. ಸಿಬ್ಬಂದಿಗಳಿಗಾಗಿ 37 ಕೆ.ಎಸ್‌.ಆರ್‌.ಟಿ.ಸಿ. ಬಸ್‌ ಸೇರಿದಂತೆ ಒಟ್ಟು 69 ವಾಹನಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Kodagu News: ಸೋಮವಾರಪೇಟೆಯಲ್ಲಿ ಮರ ಬಿದ್ದು ಕಾರ್ಮಿಕ ಸಾವು

ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಮಸ್ಟರಿಂಗ್‌ ಹಾಗೂ ಡಿ-ಮಸ್ಟರಿಂಗ್‌ ಕೇಂದ್ರವನ್ನು ಮಾಡಲಾಗಿದ್ದು, ಸೋಮವಾರ ಮಧ್ಯಾಹ್ನ ಸಿಬ್ಬಂದಿಗಳು, ಇವಿಎಂ ಮತಯಂತ್ರದೊಂದಿಗೆ ತಮಗೆ ನಿಯೋಜಿಸಲಾದ ಮತಗಟ್ಟೆಯ ಕಡೆಗೆ ತೆರಳಿದರು.

Lok Sabha Election 2024: ಮತದಾನ ಮಾಡಲು ದುಬೈನಿಂದ ಗಂಗಾವತಿಗೆ ಆಗಮಿಸಿದ ದಂಪತಿ

ಗಂಗಾವತಿ: ಲೋಕಸಭಾ ಚುನಾವಣೆ-2024 ಹಿನ್ನೆಲೆಯಲ್ಲಿ ಮೇ 7 ರಂದು ಮತದಾನ ನಡೆಯಲಿದ್ದು, ಮತದಾನದ ಮಹತ್ವ ಅರಿತಿರುವ ದಂಪತಿ, ದುಬೈನಿಂದ ಗಂಗಾವತಿಗೆ ಮತದಾನಕ್ಕಾಗಿ ಆಗಮಿಸಿದ್ದಾರೆ.

ನಗರದ ಎಪಿಎಂಸಿ ಸಮೀಪದ ನಿವಾಸಿಯಾಗಿರುವ ಉದ್ಯಮಿ ಆರ್ಹಾಳ ಶರಣಪ್ಪ ಅವರ ಪುತ್ರಿ ಐಶ್ವರ್ಯ ಗೌಡರ್ ಮತ್ತು ಅಳಿಯ ಕಿರಣ್ ಪಾಟೀಲ್ ದಂಪತಿ ದುಬೈನಲ್ಲಿ ನೆಲೆಸಿದ್ದಾರೆ, ಲೋಕಸಭಾ ಚುನಾವಣೆಗೆ ಮತದಾನ ಮಾಡುವ ಉದ್ದೇಶಕ್ಕಾಗಿಯೇ ದುಬೈನಿಂದ ಗಂಗಾವತಿಗೆ ಆಗಮಿಸಿದ್ದಾರೆ.

ಕಿರಣ್ ಪಾಟೀಲ್ ಕೂಡ ಗಂಗಾವತಿಯ ಕುವೆಂಪು ಬಡಾವಣೆಯ ನಿವಾಸಿಯಾಗಿದ್ದು, ಕಳೆದ ಒಂದೂವರೆ ವರ್ಷದಿಂದ ದುಬೈನಲ್ಲಿ ನೆಲೆಸಿದ್ದಾರೆ. ಕಳೆದ ಡಿಸಂಬರ್‌ನಲ್ಲಿ ಐಶ್ವರ್ಯ ಮತ್ತು ಕಿರಣ್ ಪಾಟೀಲ್‌ಗೆ ವಿವಾಹವಾಗಿದ್ದು, ಇಬ್ಬರೂ ದುಬೈನಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

ಇಲ್ಲಿನ ಎಪಿಎಂಸಿ ಮುಂಭಾಗದ ಟಿಎಪಿಸಿಎಂಎಸ್‌ನ ಮತಗಟ್ಟೆಯಲ್ಲಿ ಐಶ್ವರ್ಯ ಮತದಾನ ಮಾಡಲಿದ್ದು, ಬೆಂಡರವಾಡಿಯ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಕಿರಣ್ ಪಾಟೀಲ್ ಮತದಾನ ಮಾಡಲಿದ್ದಾರೆ. ಮತದಾನದ ಬಳಿಕ ಈ ದಂಪತಿ ಮತ್ತೆ ದುಬೈಗೆ ತೆರಳಲಿದ್ದಾರೆ.

ಇದನ್ನೂ ಓದಿ: Weight Loss Tips Kannada: ಈ ಐದರಲ್ಲಿ ಒಂದು ಜ್ಯೂಸ್‌ ಕುಡಿಯುತ್ತಿದ್ದರೂ ಸಾಕು, ನಿಮ್ಮ ದೇಹ ತೂಕ ಇಳಿಯುತ್ತದೆ!

`ಭಾರತ ಬದಲಾಗುತ್ತಿದ್ದು, ಅಭಿವೃದ್ಧಿಗೆ ವೇಗ ಸಿಕ್ಕಿದೆ. ವಿದೇಶಗಳಲ್ಲೂ ಭಾರತದ ಬಗ್ಗೆ ಗೌರವ ಭಾವ ಮೂಡಿದೆ. ಹೀಗಾಗಿ ಭಾರತದ ಪ್ರಜೆಗಳೆಂದು ಹೇಳಿಕೊಳ್ಳಲು ನಮಗೆ ಹೆಮ್ಮೆ ಎನಿಸುತ್ತಿದೆ. ಭಾರತದ ಪೌರರಾಗಿ ಮತದಾನ ಮಾಡಲು ಬಂದಿದ್ದಾಗಿ ಐಶ್ವರ್ಯ ಮತ್ತು ಕಿರಣ್ ದಂಪತಿ ತಿಳಿಸಿದ್ದಾರೆ.

Continue Reading

ದೇಶ

Innova Crysta: ಇನ್ನೋವಾ ಕ್ರಿಸ್ಟಾ ನೂತನ ಸರಣಿಯ GX+ ಪರಿಚಯಿಸಿದ ಟಿಕೆಎಂ; ವೈಶಿಷ್ಟ್ಯಗಳೇನು? ದರ ಎಷ್ಟು?

Innova Crysta: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಇನ್ನೋವಾ ಕ್ರಿಸ್ಟಾ ಸರಣಿಯಲ್ಲಿ ನೂತನ ಗ್ರೇಡ್ GX+ ಅನ್ನು ಪರಿಚಯಿಸಿದ್ದು, ರಿಯರ್ ಕ್ಯಾಮೆರಾ, ಆಟೋ-ಫೋಲ್ಡ್ ಮಿರರ್ಸ್, ಡಿವಿಆರ್, ಡೈಮಂಡ್-ಕಟ್ ಅಲಾಯ್ಸ್, ವುಡನ್ ಪ್ಯಾನೆಲ್ ಮತ್ತು ಪ್ರೀಮಿಯಂ ಫ್ಯಾಬ್ರಿಕ್ ಸೀಟ್ಸ್ ಸೇರಿದಂತೆ ಹಲವಾರು ಅತ್ಯಾಕರ್ಷಕ ಮತ್ತು ಸುಧಾರಿತ ವೈಶಿಷ್ಟ್ಯಗಳನ್ನು ಇದು ಒಳಗೊಂಡಿದೆ. ಇನ್ನೋವಾ ಕ್ರಿಸ್ಟಾ GX+ ಗ್ರೇಡ್ ಐದು ಅತ್ಯಾಕರ್ಷಕ ಬಣ್ಣಗಳಲ್ಲಿ ಲಭ್ಯವಿದ್ದು, ಸೂಪರ್ ವೈಟ್, ಆಟಿಟ್ಯೂಡ್ ಬ್ಲ್ಯಾಕ್ ಮೈಕಾ, ಅವಂತ್-ಗಾರ್ಡೆ ಬ್ರೋನ್ಜ್ ಮೆಟಾಲಿಕ್, ಪ್ಲಾಟಿನಂ ವೈಟ್ ಪರ್ಲ್ ಮತ್ತು ಸಿಲ್ವರ್ ಮೆಟಾಲಿಕ್ ಬಣ್ಣಗಳಲ್ಲಿ ನೂತನ ವಾಹನ ಹೊರಬರಲಿದೆ.

VISTARANEWS.COM


on

Innova Crysta new grade GX+ introduced by Toyota Kirloskar Motor
Koo

ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಇಂದು ಇನ್ನೋವಾ ಕ್ರಿಸ್ಟಾ (Innova Crysta) ಸರಣಿಯಲ್ಲಿ ನೂತನ ಗ್ರೇಡ್ GX+ ಅನ್ನು ಪರಿಚಯಿಸಿದ್ದು, ರಿಯರ್ ಕ್ಯಾಮೆರಾ, ಆಟೋ-ಫೋಲ್ಡ್ ಮಿರರ್ಸ್, ಡಿವಿಆರ್, ಡೈಮಂಡ್-ಕಟ್ ಅಲಾಯ್ಸ್, ವುಡನ್ ಪ್ಯಾನೆಲ್ ಮತ್ತು ಪ್ರೀಮಿಯಂ ಫ್ಯಾಬ್ರಿಕ್ ಸೀಟ್ಸ್ ಸೇರಿದಂತೆ ಹಲವಾರು ಅತ್ಯಾಕರ್ಷಕ ಮತ್ತು ಸುಧಾರಿತ ವೈಶಿಷ್ಟ್ಯಗಳನ್ನು ಇದು ಒಳಗೊಂಡಿದೆ.

ಇನ್ನೋವಾ ಕ್ರಿಸ್ಟಾ GX+ ಗ್ರೇಡ್ ಐದು ಅತ್ಯಾಕರ್ಷಕ ಬಣ್ಣಗಳಲ್ಲಿ ಲಭ್ಯವಿದ್ದು, ಸೂಪರ್ ವೈಟ್, ಆಟಿಟ್ಯೂಡ್ ಬ್ಲ್ಯಾಕ್ ಮೈಕಾ, ಅವಂತ್-ಗಾರ್ಡೆ ಬ್ರೋನ್ಜ್ ಮೆಟಾಲಿಕ್, ಪ್ಲಾಟಿನಂ ವೈಟ್ ಪರ್ಲ್ ಮತ್ತು ಸಿಲ್ವರ್ ಮೆಟಾಲಿಕ್ ಬಣ್ಣಗಳಲ್ಲಿ ನೂತನ ವಾಹನ ಹೊರಬರಲಿದೆ. ಇನ್ನೋವಾ ಕ್ರಿಸ್ಟಾ GX+ ಗ್ರೇಡ್ 14 ಹೆಚ್ಚುವರಿ ವೈಶಿಷ್ಟ್ಯಗಳನ್ನು ಹೊಂದಿದೆ.

ಇದನ್ನೂ ಓದಿ: Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಸೇಲ್ಸ್-ಸರ್ವೀಸ್-ಯೂಸ್ಡ್ ಕಾರ್ ಬಿಸಿನೆಸ್‌ನ ಉಪಾಧ್ಯಕ್ಷ ಶಬರಿ ಮನೋಹರ್ ಈ ಕುರಿತು ಮಾತನಾಡಿ, ನೂತನವಾಗಿ ಪರಿಚಯಿಸಲಾದ ಇನ್ನೋವಾ ಕ್ರಿಸ್ಟಾ GX+ ಗ್ರೇಡ್ ನಮ್ಮ ಅಸ್ತಿತ್ವದಲ್ಲಿರುವ ಇನ್ನೋವಾ ಕ್ರಿಸ್ಟಾ ಶ್ರೇಣಿಗೆ ಪೂರಕವಾಗಿದೆ. ಹೊಸದಾಗಿ ಪರಿಚಯಿಸಲಾದ ವರ್ಧಿತ ವೈಶಿಷ್ಟ್ಯಗಳು ಮತ್ತು ಮಲ್ಟಿ ಫಂಕ್ಷನಾಲಿಟಿಯ ಮೂಲಕ ಹೆಚ್ಚಿನ ಮೌಲ್ಯವನ್ನು ನೀಡುವ ವಿಷಯದಲ್ಲಿ ಒಂದು ಹೆಜ್ಜೆಯಾಗಿದೆ. ಹೊಸ ಪರಿಚಯವು ಗ್ರಾಹಕರ ವ್ಯಾಪಕ ಪ್ರೇಕ್ಷಕರನ್ನು ಆಕರ್ಷಿಸುವುದನ್ನು ಮುಂದುವರಿಸುತ್ತದೆ ಎಂದು ನಮಗೆ ವಿಶ್ವಾಸವಿದೆ, ಇದರಿಂದಾಗಿ ಭಾರತದ ಅತ್ಯಂತ ಪ್ರೀತಿಯ ಎಂಪಿವಿ ಎಂಬ ಇನ್ನೋವಾ ಪರಂಪರೆಯನ್ನು ಬಲಪಡಿಸುತ್ತದೆ ಎಂದು ತಿಳಿಸಿದ್ದಾರೆ.

ಎಕ್ಸ್ ಶೋರೂಂ ಬೆಲೆ (ಗ್ರೇಡ್ ವಾರು)

Variant Ex Showroom Price (W.E.F 06th May 2024), Innova Crysta GX+ 7s Rs 21,39,000, Innova Crysta GX+ 8s ರೂ. 21,44,000 ಗಳಾಗಿದೆ.

ದೃಢವಾದ ಕಾರ್ಯಕ್ಷಮತೆ

ಇನ್ನೋವಾ ಕ್ರಿಸ್ಟಾ GX+ 2.4 ಲೀಟರ್ ಡೀಸೆಲ್ ಎಂಜಿನ್, ಇಕೋ ಮತ್ತು ಪವರ್ ಡ್ರೈವ್ ಮೋಡ್ , 5 ಸ್ಪೀಡ್ ಮ್ಯಾನುವಲ್ ಟ್ರಾನ್ಸ್‌ಮಿಷನ್‌ನೊಂದಿಗೆ ಲಭ್ಯವಿದೆ. ಶಕ್ತಿಶಾಲಿ ಜಿಡಿ ಡೀಸೆಲ್ ಎಂಜಿನ್ ಕಡಿಮೆ ಮತ್ತು ಮಧ್ಯಮ ವೇಗದ ಶ್ರೇಣಿಗಳಲ್ಲಿ ಗಣನೀಯ ವರ್ಧಿತ ಟಾರ್ಕ್‌ ಅನ್ನು ಹೊಂದಿದೆ. ಹೆಚ್ಚುವರಿಯಾಗಿ ವಾಹನವು ಪಿಚ್ ಮತ್ತು ಬೌನ್ಸ್ ನಿಯಂತ್ರಣದೊಂದಿಗೆ ಸುಧಾರಿತ ಸಸ್ಪೆಂಷನ್ ಅನ್ನು ಖಚಿತಪಡಿಸುತ್ತಿದ್ದು, ಕ್ಯಾಬಿನ್ ಚಲನೆಯನ್ನು ಕನಿಷ್ಠವಾಗಿರಿಸುತ್ತದೆ ಮತ್ತು ಒರಟಾದ ರಸ್ತೆಗಳಲ್ಲಿ ಸುಗಮ ಸವಾರಿಯನ್ನು ನಿರ್ವಹಿಸುತ್ತದೆ.

ಇದನ್ನೂ ಓದಿ: Akshaya Tritiya 2024: ಅಕ್ಷಯ ತೃತೀಯದಂದು ಏನು ಮಾಡಬೇಕು, ಏನು ಮಾಡಬಾರದು?

ಟಫ್ ಎಕ್ಸ್‌ಟೀರಿಯರ್

ಎಕ್ಸ್‌ಟೀರಿಯರ್ ಟಫ್ ಮತ್ತು ಅತ್ಯಾಧುನಿಕತೆಯ ಹೊಂದಾಣಿಕೆಯನ್ನು ಇದು ಹೊಂದಿದ್ದು, ನಯವಾದ ಮತ್ತು ಸಮಕಾಲೀನ ವಿನ್ಯಾಸದೊಂದಿಗೆ ಇನ್ನೋವಾ ಕ್ರಿಸ್ಟಾ ಪ್ರತಿ ಪ್ರಯಾಣದಲ್ಲಿ ಸೊಬಗು ಮತ್ತು ಪರಿಷ್ಕರಣೆಯನ್ನು ನೀಡುತ್ತದೆ. ಇದರ ನಿಖರವಾದ ಪರಿಷ್ಕರಿಸಿದ ಎಕ್ಸ್‌ಟೀರಿಯರ್ ವೈಶಿಷ್ಟ್ಯಗಳಾದ ಬೋಲ್ಡ್ ಫ್ರಂಟ್ ಗ್ರಿಲ್ ಮತ್ತು ಗಟ್ಟಿಮುಟ್ಟಾದ ಬಂಪರ್ ಲುಕ್ ಅನ್ನು ಹೆಚ್ಚಿಸುತ್ತದೆ. ಕಾರ್ಯಕ್ಷಮತೆಯನ್ನು ಹೆಚ್ಚಿಸುವುದಲ್ಲದೆ ರಸ್ತೆಯಲ್ಲಿ ಕಮಾಂಡಿಂಗ್ ಉಪಸ್ಥಿತಿಯನ್ನು ಖಚಿತಪಡಿಸುತ್ತದೆ. ಇನ್ನೋವಾ ಕ್ರಿಸ್ಟಾ GX+ ಅನ್ನು ಮತ್ತಷ್ಟು ಪ್ರತ್ಯೇಕಿಸುವ ಅಂಶವೆಂದರೆ ಅದರ ಭವ್ಯವಾದ ಸಿಲ್ವರ್ ಸರೌಂಡ್ ಪಿಯಾನೋ ಬ್ಲ್ಯಾಕ್ ಗ್ರಿಲ್ ಮತ್ತು ಆಕರ್ಷಕ ಡೈಮಂಡ್-ಕಟ್ ಅಲಾಯ್ಸ್ ವಾಹನದ ಆಕರ್ಷಣೆಯನ್ನು ಹೆಚ್ಚಿಸುತ್ತದೆ.

ಆರಾಮದಾಯಕ ಇಂಟೀರಿಯರ್

ಇನ್ನೋವಾ ಕ್ರಿಸ್ಟಾ GX+ ನ ಇಂಟೀರಿಯರ್ ನವೀನ ವೈಶಿಷ್ಟ್ಯಗಳೊಂದಿಗೆ ಆರಾಮ ಮತ್ತು ಅನುಕೂಲತೆಯಲ್ಲಿ ಉದಾಹರಣೆಯಾಗಿದೆ. ಇತರ ಇನ್ನೋವಾಗಳಂತೆ, ಐಷಾರಾಮಿ ಮತ್ತು ಆರಾಮವು ಹೊಸ ಇನ್ನೋವಾ ಕ್ರಿಸ್ಟಾ GX+ನ ಪ್ರಮುಖ ಅಂಶವಾಗಿದ್ದು ವುಡ್ ಫಿನಿಶ್ ಇಂಟೀರಿಯರ್ ಪ್ಯಾನೆಲ್ಸ್ , ಆಟೋ-ಫೋಲ್ಡ್ ಮಿರರ್ಸ್, ಡಿವಿಆರ್, ಸಾಟಿಯಿಲ್ಲದ ಪರಿಷ್ಕರಣೆ ಮತ್ತು ಕ್ಲಾಸ್ ಅನ್ನು ಹೊಂದಿದೆ.

ಇದನ್ನೂ ಓದಿ: Lok Sabha Election 2024: ಮತದಾನ ಮಾಡಲು ದುಬೈನಿಂದ ಗಂಗಾವತಿಗೆ ಆಗಮಿಸಿದ ದಂಪತಿ

ಸುಧಾರಿತ ಸುರಕ್ಷತಾ ಕೊಡುಗೆಗಳು

ಸುರಕ್ಷತೆಯು ಟೊಯೊಟಾಗೆ ಉನ್ನತ ಆದ್ಯತೆಯಾಗಿದೆ. ಇನ್ನೋವಾ ಕ್ರಿಸ್ಟಾ GX+ ಇದಕ್ಕೆ ಹೊರತಾಗಿಲ್ಲ. ರಿಯರ್ ಕ್ಯಾಮೆರಾ, ಎಸ್‌ಆರ್‌ಎಸ್ ಏರ್ ಬ್ಯಾಗ್ಸ್, ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್ ಮತ್ತು ಹಿಲ್-ಸ್ಟಾರ್ಟ್ ಅಸಿಸ್ಟ್ ಕಂಟ್ರೋಲ್ ಸೇರಿದಂತೆ ಸಮಗ್ರ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್ (ಎಬಿಎಸ್) ಮತ್ತು ಹೆಚ್ಚಿನ ಸಾಮರ್ಥ್ಯದ GOA ಬಾಡಿ ಸ್ಟ್ರಕ್ಚರ್ ಪ್ರತಿ ಪ್ರಯಾಣದಲ್ಲಿ ಸುರಕ್ಷತೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ.

Continue Reading
Advertisement
Lok Sabha Election
ಕರ್ನಾಟಕ4 mins ago

Lok Sabha Election: ನಾಳೆ ವೋಟಿಂಗ್; ನಿಮ್ಮ ‘ಮತ’ ಕಳವಾದರೆ ಏನು ಮಾಡಬೇಕು? ಇಲ್ಲಿದೆ ಉತ್ತರ

farmer commits suicide in Kabbigere Gollarhatti village
ಕರ್ನಾಟಕ8 mins ago

Self Harming: ಕಬ್ಬಿಗೆರೆ ಗೊಲ್ಲರಹಟ್ಟಿಯಲ್ಲಿ ಸಾಲದ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

All preparations in Yallapur assembly constituency for Lok Sabha election says Ajjappa Sogalada
ಉತ್ತರ ಕನ್ನಡ11 mins ago

Lok Sabha Election 2024: ಲೋಕಸಭಾ ಚುನಾವಣೆಗೆ ಯಲ್ಲಾಪುರದಲ್ಲಿ ಸಕಲ ಸಿದ್ಧತೆ: ಅಜ್ಜಪ್ಪ ಸೊಗಲದ

Innova Crysta new grade GX+ introduced by Toyota Kirloskar Motor
ದೇಶ14 mins ago

Innova Crysta: ಇನ್ನೋವಾ ಕ್ರಿಸ್ಟಾ ನೂತನ ಸರಣಿಯ GX+ ಪರಿಚಯಿಸಿದ ಟಿಕೆಎಂ; ವೈಶಿಷ್ಟ್ಯಗಳೇನು? ದರ ಎಷ್ಟು?

Press Freedom
Latest17 mins ago

Press Freedom: ಚೀನಾ ಸೇರಿದಂತೆ ಈ ದೇಶಗಳು ಪತ್ರಕರ್ತರಿಗೆ ಸುರಕ್ಷಿತವಲ್ಲ

Rape victim kidnapping in Prajwal Revanna Case What are the options before HD Revanna
ಕ್ರೈಂ17 mins ago

Prajwal Revanna Case: ‌ಅತ್ಯಾಚಾರ ಸಂತ್ರಸ್ತೆ ಅಪಹರಣ ಕೇಸ್; ರೇವಣ್ಣ ಮುಂದಿರುವ ಆಯ್ಕೆಗಳೇನು?

Anand Mahindra
ಪ್ರಮುಖ ಸುದ್ದಿ26 mins ago

Anand Mahindra: ತಂದೆ ಸಾವಿನ ಬಳಿಕ ಕಷ್ಟದಲ್ಲಿದ್ದ ಬಾಲಕನ ಶಿಕ್ಷಣಕ್ಕೆ ಆನಂದ್‌ ಮಹೀಂದ್ರಾ ನೆರವು!

Asha Sobhana
ಕ್ರೀಡೆ36 mins ago

Asha Sobhana : ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ ಆರ್​ಸಿಬಿ ಆಟಗಾರ್ತಿ

Lok Sabha Election-2024
ಕರ್ನಾಟಕ1 hour ago

ನಾಳೆ ಎರಡನೇ ಹಂತದ ಮತದಾನ; ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ3 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ16 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 day ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ1 day ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌