VISTARA TOP 10 NEWS : ಮಂಡ್ಯದಲ್ಲಿ ಕಾವೇರಿ ಕಿಚ್ಚು, ಚಂದ್ರಯಾನವನ್ನು ಲೇವಡಿ ಮಾಡಿದ ಪ್ರಕಾಶ್​ ರಾಜ್ ಬೆಂಡೆತ್ತಿದ ನೆಟ್ಟಿಗರು ಇತ್ಯಾದಿ ಪ್ರಮುಖ ಸುದ್ದಿಗಳು - Vistara News

ಕರ್ನಾಟಕ

VISTARA TOP 10 NEWS : ಮಂಡ್ಯದಲ್ಲಿ ಕಾವೇರಿ ಕಿಚ್ಚು, ಚಂದ್ರಯಾನವನ್ನು ಲೇವಡಿ ಮಾಡಿದ ಪ್ರಕಾಶ್​ ರಾಜ್ ಬೆಂಡೆತ್ತಿದ ನೆಟ್ಟಿಗರು ಇತ್ಯಾದಿ ಪ್ರಮುಖ ಸುದ್ದಿಗಳು

VISTARA TOP 10 NEWS : ಇಂದಿರಾ ಕ್ಯಾಂಟೀನ್ ಊಟದ ದರವನ್ನು ಏಕಾಏಕಿ ಏರಿಸಲಾಗಿದೆ. ಇದೂ ಸೇರಿದಂತೆ ದಿನದ ಪ್ರಮುಖ ಬೆಳವಣಿಗೆಗಳಲ್ಲಿ ಟಾಪ್‌ 10 ಸುದ್ದಿಗಳ ಗುಚ್ಛ ಇದು ವಿಸ್ತಾರ ಟಾಪ್‌ 10 ನ್ಯೂಸ್‌

VISTARANEWS.COM


on

Top 10 Aug 21
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1. Education Policy : ರಾಜ್ಯದಲ್ಲಿ NEP ರದ್ದು; ಹೊಸ ರಾಜ್ಯ ಶಿಕ್ಷಣ ನೀತಿ CBSE, ICSEಗೆ ಅನ್ವಯ ಆಗುತ್ತಾ?
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (National Education Policy – NEP) ಅಧಿಕೃತವಾಗಿ ರದ್ದು ಮಾಡುವ ತೀರ್ಮಾನವನ್ನು ರಾಜ್ಯ ಸರ್ಕಾರ ಸೋಮವಾರ (ಆಗಸ್ಟ್‌ 21) ಪ್ರಕಟಿಸಿದೆ. ಅಲ್ಲದೆ, ನೂತನ ರಾಜ್ಯ ಶಿಕ್ಷಣ ನೀತಿಯನ್ನು (State Education Policy -SEP) ಕರ್ನಾಟಕದಲ್ಲಿ ಅಳವಡಿಸುವುದಾಗಿಯೂ ಘೋಷಣೆ ಮಾಡಿದೆ. ಆದರೆ, ರಾಜ್ಯ ಶಿಕ್ಷಣ ನೀತಿಯು ಸಿಬಿಎಸ್‌ಇ, ಐಸಿಎಸ್‌ಇ ಬೋರ್ಡ್‌ಗೆ (CBSE, ICSE Board)ಅನ್ವಯ ಆಗುವುದಿಲ್ಲ. ಅದು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವುದರಿಂದ ಅದರಲ್ಲಿ ಯಾವುದೇ ಹಸ್ತಕ್ಷೇಪ ಮಾಡಲು ರಾಜ್ಯಕ್ಕೆ ಅಧಿಕಾರ ಇಲ್ಲ. ಇದರ ಜತೆಗೆ ಕೇಂದ್ರೀಯ ವಿವಿಗಳು, ಖಾಸಗಿ ವಿವಿಗಳಿಗೂ ಈ ನೀತಿ ಅನ್ವಯ ಆಗುವುದಿಲ್ಲ. ಹಾಗಾಗಿ ನೂತನ ಶೈಕ್ಷಣಿಕ ನೀತಿ (Education Policy) ಬಗ್ಗೆ ಎಲ್ಲರೂ ಭಯ ಬೀಳಬೇಕಿಲ್ಲ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ: Education Policy : ರಾಜ್ಯದಲ್ಲಿ NEP ಇನ್ನಿಲ್ಲ, SEP ಜಾರಿ ಎಂದ ಸರ್ಕಾರ; ಸಿಡಿದೆದ್ದ ಬಿಜೆಪಿಯಿಂದ ಪ್ರತಿತಂತ್ರ

2. Cauvery Water Dispute: ಮಂಡ್ಯದಲ್ಲಿ ಧಗಧಗಿಸಿದ ಕಾವೇರಿ ಕಿಚ್ಚು; ಹೆದ್ದಾರಿ ತಡೆದು ಬಿಜೆಪಿ ಕಾರ್ಯಕರ್ತರ ಆಕ್ರೋಶ
ಮಂಡ್ಯ: ಕೃಷ್ಣರಾಜ ಸಾಗರ ಜಲಾಶಯದಿಂದ (ಕೆಆರ್‌ಎಸ್‌) ತಮಿಳುನಾಡಿಗೆ ಕಾವೇರಿ ಬಿಡುಗಡೆ ಮಾಡುತ್ತಿರುವುದನ್ನು ಖಂಡಿಸಿ ನಗರದಲ್ಲಿ ಬಿಜೆಪಿಯಿಂದ ಸೋಮವಾರ ಬೃಹತ್‌ ಪ್ರತಿಭಟನೆ (Cauvery Water Dispute) ನಡೆಸಲಾಯಿತು. ಸಂಜಯ್‌ ವೃತ್ತದಲ್ಲಿ ಹೆದ್ದಾರಿ ತಡೆ ನಡೆಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

3. Prakash Raj: ಚಂದ್ರಯಾನ 3 ಯಶಸ್ಸಿಗೆ ಪ್ರಾರ್ಥನೆ ಬೆನ್ನಲ್ಲೇ ಪ್ರಕಾಶ್‌ ರಾಜ್‌ ವ್ಯಂಗ್ಯ; ರೋಗಿಷ್ಟ ಮನಸ್ಥಿತಿ ಅಂದ್ರು ಜನ
ಬೆಂಗಳೂರು: ನಟನೆಗಿಂತ ಇತ್ತೀಚೆಗೆ ವಿವಾದಗಳಿಂದಲೇ ಜಾಸ್ತಿ ಸುದ್ದಿಯಲ್ಲಿರುವ ಬಹುಭಾಷಾ ನಟ ಪ್ರಕಾಶ್‌ ರಾಜ್‌ (Prakash Raj) ಅವರೀಗ ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ. ಚಂದ್ರಯಾನ 3 (Chandrayaan 3) ಮಿಷನ್‌ ಕಳುಹಿಸಿದ ಫೋಟೊ ಎಂದು ಇಸ್ರೋ ಮಾಜಿ ಅಧ್ಯಕ್ಷ ಕೆ.ಶಿವನ್‌ (K Sivan) ಅವರನ್ನು ಅಣಕ ಮಾಡಲು ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ (X) ಫೋಟೊ ಹಂಚಿಕೊಂಡ ಕಾರಣ ಜನ ಅವರಿಗೆ ಟೀಕೆಗಳ ಮೂಲಕ ಚಳಿ ಬಿಡಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಚಂದ್ರಯಾನ ಕುರಿತ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

4. ಮೈಚಳಿ ಬಿಡಿ, ಸರ್ಕಾರಕ್ಕೆ ಬಿಸಿ ಮುಟ್ಟಿಸಲು 224 ಕ್ಷೇತ್ರದಲ್ಲಿ ಪ್ರತಿಭಟಿಸಿ; ಕೋರ್‌ ಕಮಿಟಿಯಲ್ಲಿ ಬಿಎಸ್‌ವೈ ಗುಡುಗು
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ (Karnataka Politics) ಆಪರೇಷನ್‌ ಹಸ್ತ ಭಾರಿ ಸದ್ದು ಮಾಡುತ್ತಿದೆ. ಬಿಜೆಪಿಯಿಂದ ಕೆಲವು ಹಾಲಿ ಹಾಗೂ ಮಾಜಿ ಶಾಸಕರು ಪಕ್ಷ ಬಿಡುತ್ತಾರೆ ಎಂಬ ಬಗ್ಗೆಯೂ ಸುದ್ದಿಯಾಗಿತ್ತು. ಅಲ್ಲದೆ, ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ (BJP Politics) ಎಂಬಂತೆ ಚರ್ಚೆ ಹುಟ್ಟಿಕೊಂಡ ಬೆನ್ನಲ್ಲೇ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ (Former CM BS Yediyurappa) ಅಖಾಡಕ್ಕೆ ಧುಮುಕಿದ್ದರು. ಈಗ ಬಿಜೆಪಿ ಕೋರ್ ಕಮಿಟಿ ಸಭೆ (BJP core committee meeting) ನಡೆಸಿ, ಪಕ್ಷದ ನಾಯಕರಿಗೆ ಬಿಸಿ ಮುಟ್ಟಿಸಿದ್ದಾರೆ. ಪಕ್ಷ ಸಂಘಟನೆ ವಿಚಾರದಲ್ಲಿ ಆಗುತ್ತಿರುವ ತಾತ್ಸಾರದ ವಿರುದ್ಧ ಕೆಂಡಕಾರಿದ್ದಾರೆ. ಆಡಳಿತ ಪಕ್ಷಕ್ಕೆ ನಾವೇ ಆಹಾರವಾಗುವುದು ಎಂದರೆ ಏನು? ಅವರ ವೈಫಲ್ಯ ಮುಚ್ಚಿಕೊಳ್ಳಲು ಆಪರೇಷನ್‌ ಭೂತವನ್ನು ಛೂ ಬಿಟ್ಟಿದ್ದಾರೆ. ಇನ್ನಾದರೂ ಸಜ್ಜಾಗಿ, ಜ್ವಲಂತ ಸಮಸ್ಯೆಗಳನ್ನು ಕೈಗೆತ್ತಿಕೊಳ್ಳಿ, ಈಗ ಸರ್ಕಾರದ ಚಳಿ ಬಿಡಿಸುವ ಕಾಲ ಬಂದಿದೆ. ಸರ್ಕಾರದ ವೈಫಲ್ಯವನ್ನು 224 ಕ್ಷೇತ್ರದಲ್ಲೂ ಜನರಿಗೆ ಮುಟ್ಟಿಸಲು ಪ್ರತಿಭಟನೆ ನಡೆಸಿ ಎಂದು ಕರೆ ಕೊಟ್ಟಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.

5.ಏಷ್ಯಾಕಪ್‌ಗೆ ಭಾರತ ತಂಡ ಪ್ರಕಟ; ಇಬ್ಬರು ಕನ್ನಡಿಗರಿಗೆ ಒಲಿದ ಅದೃಷ್ಟ, ಇಲ್ಲಿದೆ ಪಟ್ಟಿ
ಮುಂಬೈ: ಆಗಸ್ಟ್‌ 30ರಿಂದ ಆರಂಭವಾಗುವ ಏಷ್ಯಾ ಕಪ್‌ ಕ್ರಿಕೆಟ್‌ ಟೂರ್ನಿಗೆ (Asia Cup 2023) ಭಾರತ ತಂಡವನ್ನು ಪ್ರಕಟಿಸಲಾಗಿದೆ. 17 ಆಟಗಾರರಿರುವ ಟೀಮ್‌ ಇಂಡಿಯಾವನ್ನು ಆಯ್ಕೆ ಸಮಿತಿಯು ಘೋಷಿಸಿದ್ದು, ಕನ್ನಡಿಗರಾದ ಕೆ.ಎಲ್‌.ರಾಹುಲ್‌ (K L Rahul) ಹಾಗೂ ಪ್ರಸಿದ್ಧ್‌ ಕೃಷ್ಣ ಸ್ಥಾನ ಪಡೆದಿದ್ದಾರೆ. ಐಪಿಎಲ್‌ ವೇಳೆ ಗಾಯಗೊಂಡಿದ್ದ ಕೆ.ಎಲ್‌.ರಾಹುಲ್‌ ಅವರು ಚೇತರಿಸಿಕೊಂಡಿದ್ದು, ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ: KL Rahul : ತಂಡಕ್ಕೆ ಆಯ್ಕೆಗೊಂಡರೂ ರಾಹುಲ್​ ತಂಡದಲ್ಲಿ ಸ್ಥಾನ ಪಡೆಯೋದು ಡೌಟು?

6. Nag Panchami : ಹಾವಿನ ಡಾಕ್ಟ್ರ ಮನೆಯಲ್ಲಿ ಹಾವಿಗೇ ಪೂಜೆ; ಜಲಾಭಿಷೇಕ, ಆರತಿಗೆ ಫುಲ್‌ ಖುಷ್‌!

7. Mobile App : ಈ ಆ್ಯಪ್​ಗಳು ನಿಮ್ಮ ಮೊಬೈಲ್​ನಲ್ಲಿ ಇದ್ದರೆ ತಕ್ಷಣ ಡಿಲೀಟ್​ ಮಾಡಿ ಎನ್ನುತ್ತಿದೆ ಗೂಗಲ್​ ಪ್ಲೇಸ್ಟೋರ್​​

8. Donald Trump: ಗೆದ್ದು ಬಂದರೆ ಭಾರತಕ್ಕೆ ಸೇಡಿನ ತೆರಿಗೆ ವಿಧಿಸುವೆ: ಡೊನಾಲ್ಡ್‌ ಟ್ರಂಪ್

9. Kashmir Encounter: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ಲಷ್ಕರೆ ಕಮಾಂಡರ್‌ ಸೇರಿ ಇಬ್ಬರು ಉಗ್ರರ ಮಟಾಶ್

10. ಅಜ್ಜಿ I Love you! ಒಂಟಿಯಾಗಿರುವೆ ಜಂಟಿಯಾಗು ಎಂದು ಪಟಾಯಿಸಿದ್ದ ಅಜ್ಜ ಕೈಕೊಟ್ಟʼನಲ್ಲʼ!
ಮತ್ತಷ್ಟು ವೈರಲ್‌ ಸುದ್ದಿಗಳಿಗಾಗಿ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

CM Siddaramaiah: ನಾಳೆ ದಿಲ್ಲಿಗೆ ಸಿಎಂ- ಡಿಸಿಎಂ ದೌಡು; ಸಚಿವ ಸಂಪುಟದಲ್ಲಿ ಬದಲಾವಣೆ ಫಿಕ್ಸ್?

CM Siddaramaiah: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೇತೃತ್ವದಲ್ಲಿ ಮೀಟಿಂಗ್‌ ನಡೆಯಲಿದ್ದು, ಮೈತ್ರಿ ಪಕ್ಷಗಳು ಮಾಡುತ್ತಿರುವ ಆರೋಪದ ಬಗ್ಗೆ ಚರ್ಚೆ ನಡೆಸಿ ಮೈತ್ರಿ ಪಕ್ಷಗಳ ವಿರುದ್ಧ ಹೋರಾಟದ ರೂಪುರೇಷೆ ರೂಪಿಸಲಿದ್ದಾರೆ.

VISTARANEWS.COM


on

cm siddaramaiah mallikarjun kharge dk shivakumar
Koo

ಹೊಸದಿಲ್ಲಿ: ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಇಬ್ಬರಿಗೆ ಕಾಂಗ್ರೆಸ್‌ ಹೈಕಮಾಂಡ್‌ (Congress high command) ಬುಲಾವ್‌ ನೀಡಿದ್ದು, ನಾಳೆ ಅವರು ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ. ರಾಜ್ಯ ಸಚಿವ ಸಂಪುಟದಲ್ಲಿ (State cabinet) ಮೇಜರ್‌ ಬದಲಾವಣೆ, ಮೈತ್ರಿ ಪಕ್ಷಗಳ ಪಾದಯಾತ್ರೆಗೆ ಸಡ್ಡು ಹೊಡೆಯುವ ಬಗ್ಗೆ ಚಿಂತನೆ ಇತ್ಯಾದಿಗಳ ಬಗ್ಗೆ ಹೈಕಮಾಂಡ್‌ ಚರ್ಚಿಸಲು ಉದ್ದೇಶಿಸಿದೆ.

ಒಂದೆಡೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ- ಜೆಡಿಎಸ್‌ (BJP- JDS) ಮೈತ್ರಿ ಪಕ್ಷಗಳು ರಣಕಹಳೆ ಮೊಳಗಿಸಿವೆ. ಸರ್ಕಾರದ ವಿರುದ್ಧ ವಿಧಾನಮಂಡಲ ಅಧಿವೇಶನದ (Assembly Session) ಒಳಗೆ ಮುಗಿಬಿದ್ದಿದ್ದ ವಿಪಕ್ಷಗಳು ಅಧಿವೇಶನದ ಹೊರಗೂ ಇದರ ಲಾಭ ಪಡೆಯಲು ಪ್ಲಾನ್ ಮಾಡಿವೆ. ಹೀಗಾಗಿ ಪಾದಯಾತ್ರೆ ಪಾಲಿಟಿಕ್ಸ್ ಮಾಡಲು ಮುಂದಾಗಿವೆ. ವಾಲ್ಮೀಕಿ ನಿಗಮದ ಅವ್ಯವಹಾರ (Valmiki Corporation Scam) ಪ್ರಕರಣ ಹಾಗೂ ಸಿಎಂ ವಿರುದ್ಧ ಕೇಳಿ ಬಂದಿರುವ ಮುಡಾ ಹಗರಣವನ್ನು (MUDA Scam) ಗಂಭೀರವಾಗಿ ಪರಿಗಣಿಸಿದ ಮೈತ್ರಿ ಪಕ್ಷಗಳು ಇತ್ತ ರಾಜ್ಯದಲ್ಲೂ ಅತ್ತ ದೆಹಲಿಯಲ್ಲೂ ಸರ್ಕಾರದ ವಿರುದ್ಧ ಹೋರಾಟ ಜೋರು ಮಾಡಿವೆ. ಮೈತ್ರಿ ಪಕ್ಷಗಳ ನಡೆಯಿಂದ ಹೈಕಮಾಂಡ್ ವಿಚಲಿತಗೊಂಡಿದೆ.

ಹೀಗಾಗಿ ಸಿಎಂ, ಡಿಸಿಎಂ ಸೇರಿದಂತೆ ಆಯ್ದ ಸಚಿವರಿಗೆ ಹೈಕಮಾಂಡ್‌ ಬುಲಾವ್ ನೀಡಿದೆ. ಇಬ್ಬರೂ ಮಂಗಳವಾರ ದಿಲ್ಲಿಗೆ ತೆರಳಿ ಬುಧವಾರ ಸಂಜೆ ವಾಪಸು ಆಗಲಿದ್ದಾರೆ. ಕೆಲ ಸಚಿವರು ಇಂದೇ ದೆಹಲಿಗೆ ದೌಡಾಯಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೇತೃತ್ವದಲ್ಲಿ ಮೀಟಿಂಗ್‌ ನಡೆಯಲಿದ್ದು, ಮೈತ್ರಿ ಪಕ್ಷಗಳು ಮಾಡುತ್ತಿರುವ ಆರೋಪದ ಬಗ್ಗೆ ಚರ್ಚೆ ನಡೆಸಿ ಮೈತ್ರಿ ಪಕ್ಷಗಳ ವಿರುದ್ಧ ಹೋರಾಟದ ರೂಪುರೇಷೆ ರೂಪಿಸಲಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸಂಘಟನೆ ಚುರುಕುಗೊಳಿಸುವುದು, ಮುಂದೆ ಬರುತ್ತಿರುವ ಚುನಾವಣೆಗಳಿಗೆ ಸಿದ್ಧತೆ, ಉಪಚುನಾವಣೆ ಸೇರಿದಂತೆ ಇತರೆ ಚುನಾವಣೆಗಳ ಬಗ್ಗೆ ಚರ್ಚೆ, ಸರ್ಕಾರದಲ್ಲಿ ಇರುವ ಸಮಸ್ಯೆಗಳನ್ನು ಬಗೆಹರಿಸುವುದು, ಬಣ ಬಡಿದಾಟಕ್ಕೆ ಬ್ರೇಕ್ ಹಾಕುವ ಬಗ್ಗೆ ಚರ್ಚೆ ಮಾಡುವುದು, ಮಹಿಳಾ ಘಟಕದ ಅಧ್ಯಕ್ಷೆ ನೇಮಕದ ಬಗ್ಗೆ ಒಪಿನಿಯನ್ ಕಲೆಕ್ಟ್ ಮಾಡುವುದು ಹೈಕಮಾಂಡ್ ಉದ್ದೇಶವಾಗಿದೆ.

ಸಚಿವ ಸಂಪುಟ ಪುನಾರಚನೆ

ರಾಜ್ಯ ಸಚಿವ ಸಂಪುಟ, ಕೆಪಿಸಿಸಿ ಪುನಾರಚನೆ ಕುರಿತು ಪ್ರಾಥಮಿಕ ಹಂತದ ಮಾತುಕತೆಯ ಸಾಧ್ಯತೆ ಇದೆ ಎನ್ನಲಾಗಿದೆ. ಈ ಕುರಿತು ಕಾಂಗ್ರೆಸ್ ಪಾಳಯದಲ್ಲಿ ಗುಸುಗುಸು ಟಾಕ್ ಶುರುವಾಗಿದೆ. ಸಚಿವ ಸಂಪುಟದಲ್ಲಿ ಒಂದಷ್ಟು ಬದಲಾವಣೆಗೆ, ಸಚಿವರ ಖಾತೆ ಅದಲು ಬದಲು ಮಾಡುವ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚಿಂತನೆ ನಡೆಸಲಾಗುತ್ತಿದ್ದು, ಕೆಲವು ಹಿರಿಯ ಸಚಿವರಿಂದಲೂ ಖಾತೆ ಬದಲಾವಣೆಗೆ ಸಲಹೆ ಬಂದಿದೆ.

ಲೋಕಸಭೆ ಫಲಿತಾಂಶ ಗಮನದಲ್ಲಿರಿಸಿಕೊಂಡು ಬದಲಾವಣೆ ಮಾಡುವ ಬಗ್ಗೆ ಅಭಿಪ್ರಾಯ ಪಡೆಯಲಾಗಿದೆ. 6-7 ಸಚಿವರ ಖಾತೆಗಳ ಅದಲು ಬದಲು ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚಿಂತನೆ‌ ನಡೆದಿದೆ. ಈ ಬಗ್ಗೆ ಸಿಎಂ, ಡಿಸಿಎಂ ದೆಹಲಿ ಭೇಟಿ ಬಳಿಕವೇ ಸ್ಪಷ್ಟನೆ ಸಿಗಲಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಕೂಗೂ ಕೆಲವರಿಂದ ಕೇಳಿ ಬಂದಿದೆ. ಕೆಪಿಸಿಸಿ ನೂತನ ಅಧ್ಯಕ್ಷರಾಗಬೇಕು ಎಂದು ಹಲವು ಮುಖಂಡರು ಈಗಾಗಲೇ ಪ್ರಭಾವ ಬಳಸುತ್ತಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕೆಲವು ಸಚಿವರ ಸ್ವಕ್ಷೇತ್ರಗಳಲ್ಲಿ ಲೀಡ್ ಕಡಿಮೆ ಆಗಿದೆ. ಲೀಡ್ ಕಡಿಮೆ ಕೊಟ್ಟ ಸಚಿವರ ತಲೆದಂಡಕ್ಕೆ ಸಚಿವ ಸ್ಥಾನ ಆಕಾಂಕ್ಷಿಗಳಿಂದ ಒತ್ತಡವಿದೆ. ಕೊಟ್ಟ ಖಾತೆಯನ್ನು ಸಮರ್ಥವಾಗಿ ನಿಭಾಯಿಸಿಲ್ಲ ಎಂಬ ಅಭಿಪ್ರಾಯ ಮೂಡಿದ್ದು, ಅಂತಹ ಸಚಿವರಿಂದ ಸರ್ಕಾರದ ಇಮೇಜ್ ಹೆಚ್ಚಾಗಿಲ್ಲ. ಜೊತೆಗೆ ಪಕ್ಷಕ್ಕೂ ಯಾವುದೇ ಲಾಭವಿಲ್ಲ. ಹಾಗಾಗಿ ಕೆಲ ಸಚಿವರನ್ನು ಕೈ ಬಿಡಬೇಕು ಎಂದು ಶಾಸಕರು ಒತ್ತಾಯ‌ ಮಾಡಿದ್ದರು.

ಇದನ್ನೂ ಓದಿ: HD Kumaraswamy: ರಾಜ್ಯದಲ್ಲಿ ನಾಳೆ ಚುನಾವಣೆ ನಡೆದ್ರೂ ಕಾಂಗ್ರೆಸ್‌ ಮನೆಗೆ; ಭವಿಷ್ಯ ನುಡಿದ ಕುಮಾರಸ್ವಾಮಿ

Continue Reading

ಬಾಗಲಕೋಟೆ

Drowned In River : ಆಟವಾಡುವಾಗ ಕೃಷ್ಣಾ ನದಿ ಹಿನ್ನೀರಿಗೆ ಬಿದ್ದ ಬಾಲಕಿ ಸಾವು; ಅಂಗಾಂಗ ದಾನ ಮಾಡಿ 6 ಜೀವ ಉಳಿಸಿದ ಬಾಲೆ

Drowned In River : ಆಟವಾಡುತ್ತಾ ಕೃಷ್ಣಾ ನದಿ ಹಿನ್ನೀರಿ ಬಳಿ ಹೋದ ಬಾಲಕಿ ನೀರುಪಾಲಾಗಿದ್ದಾಳೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

By

Drowned in river
Koo

ಬಾಗಲಕೋಟೆ: ಆಟವಾಡಲು ಹೋದ ಬಾಲಕಿಯೊಬ್ಬಳು ಕೃಷ್ಣಾ ನದಿ (Drowned In River) ಪಾಲಾಗಿದ್ದಾಳೆ. ಕೃಷ್ಣಾ ನದಿ ಹಿನ್ನೀರಿನಲ್ಲಿ ಮುಳುಗಿ ಬಾಲಕಿ ಮೃತಪಟ್ಟಿದ್ದಾಳೆ. ಬಾಗಲಕೋಟೆಯ ಜಮಖಂಡಿ ತಾಲೂಕಿನ ಕಡಕೋಳ ಗ್ರಾಮದಲ್ಲಿ ಘಟನೆ ನಡೆದಿದೆ.

ಸಮೃದ್ಧಿ ಉರ್ಫ್ ಬಂದವ್ವ ತಿಮ್ಮಪ್ಪನವರ (5) ಮೃತ ದುರ್ದೈವಿ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಜಮಖಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ನಿನ್ನೆ ಭಾನುವಾರ ಸಂಜೆ ಘಟನೆ ನಡೆದಿದೆ.

ತಹಶೀಲ್ದಾರ ಸದಾಶಿವ ಮುಕ್ಕೋಜಿ, ಜಮಖಂಡಿ ಗ್ರಾಮೀಣ ಠಾಣೆಯ ಪಿಎಸ್‌ಐ ಎಚ್.ಎಮ್ ಹೊಸಮನಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಲಕಿ ಕೃಷ್ಣಾ ನದಿ ಹಿನ್ನೀರಿನ ಕಡೆ ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾ ನದಿಯ ಹಿನ್ನೀರಿನಲ್ಲಿ ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ.

Drowned in river
Drowned in river

ಅಗ್ನಿಶಾಮಕ ದಳ, ಪೊಲೀಸ್‌ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ಕಾರ್ಯಾಚರಣೆ ನಡೆಸಿ ಹಿನ್ನೀರಿನಿಂದ ಬಾಲಕಿ ಶವ ಹೊರತೆಗೆದಿದ್ದಾರೆ.

ಇದನ್ನೂ ಓದಿ: Road Accident : ಬಸ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬೈಕ್‌; ಚೆಲ್ಲಾಪಿಲ್ಲಿಯಾಗಿ ಬಿದ್ದ ಇಬ್ಬರು ಸಾವು

ಮಗಳ ಸಾವಿನ ನೋವಿನಲ್ಲೂ ಸಾರ್ಥಕತೆ ಮರೆದ ಪೋಷಕರು

ಮಗಳ ಸಾವಿನ ನೋವಿನಲ್ಲೂ ಪೋಷಕರು ಸಾರ್ಥಕತೆ ಮರೆದಿದ್ದಾರೆ. ಜು.23 ರಂದು ಸ್ಕೂಲ್ ಮುಗಿಸಿ ವಾಪಸ್ ಬರುವಾಗ ತುಮಕೂರಿನ ತಿಪಟೂರಿನಲ್ಲಿ ಅಪಘಾತ ಸಂಭವಿಸಿತ್ತು. ಚಂದನಾ ತುಮಕೂರು ಜಿಲ್ಲೆಯ ತಿಪಟೂರಿನ ಶ್ರೀ ವಿವೇಕಾನಂದ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಓದುತ್ತಿದ್ದಳು. ತಿಪಟೂರು ನಗರದ ಹಳೇಪಾಳ್ಯದ ನಿವಾಸಿ ಚಂದನಾ (12) ರಸ್ತೆ ದಾಟುವಾಗ ಲಾರಿಯೊಂದು ಡಿಕ್ಕಿ ಹೊಡೆದಿತ್ತು.

ಅಪಘಾತದ ಬಳಿಕ ಹಾಸನ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಅಪಘಾತದಲ್ಲಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಳು. ಆದರೆ ತಲೆಗೆ ಪೆಟ್ಟಾಗಿ ಮೆದುಳು ನಿಷ್ಕ್ರಿಯಗೊಂಡಿತ್ತು. ಹೀಗಾಗಿ ಮಗಳ ಅಗಲಿಕೆಯ ನೋವಿನಲ್ಲೂ ಚಂದನಾ ಪೋಷಕರು ಅಂಗಾಂಗ ದಾನಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಪೋಷಕರ ನಿರ್ಧಾರಕ್ಕೆ ಆಸ್ಪತ್ರೆ ಸಿಬ್ಬಂದಿ ಗೌರವ ಸಲ್ಲಿಸಿದ್ದು, ಚಂದನಾಳ ಅಂಗಾಂಗಗಳನ್ನು ಮೈಸೂರು ಹಾಗೂ ಬೆಂಗಳೂರಿನ 6 ಮಕ್ಕಳಿಗೆ ಜೋಡಣೆ ಮಾಡಿದ್ದಾರೆ. ಸೋಮವಾರ ಸಂಜೆ ಚಂದನಾಳ ಅಂತ್ಯಸಂಸ್ಕಾರವನ್ನು ತಿಪಟೂರಿನ ಹಳೆಪಾಳ್ಯದಲ್ಲಿ ನೆರವೇರಿಸಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕಲಬುರಗಿ

Road Accident : ಬಸ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬೈಕ್‌; ಚೆಲ್ಲಾಪಿಲ್ಲಿಯಾಗಿ ಬಿದ್ದ ಇಬ್ಬರು ಸಾವು

Road Accident : ಕಲಬುರಗಿಯಲ್ಲಿ ಬಸ್‌ಗೆ ಬೈಕ್‌ವೊಂದು ಡಿಕ್ಕಿ ಹೊಡೆದು ಬಳಿಕ ಹೊತ್ತಿ ಉರಿದಿದೆ. ಅಪಘಾತದಲ್ಲಿ ಬೈಕ್‌ ಸವಾರ ಸೇರಿ ಇನ್ನೊಬ್ಬ ವ್ಯಕ್ತಿಯು ಮೃತಪಟ್ಟಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.

VISTARANEWS.COM


on

By

Road Accident
Koo

ಕಲಬುರಗಿ: ಕಲಬುರಗಿಯಲ್ಲಿ (kalaburagi News) ಭೀಕರ ರಸ್ತೆ ಅಪಘಾತಕ್ಕೆ (Road Accident) ಇಬ್ಬರು ಬಲಿಯಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಕಲಬುರಗಿಯ ನಂದಿ‌ಕೂರ್ ಬಸ್ ನಿಲ್ದಾಣ ಹತ್ತಿರದ ಪೇಟ್ರೊಲ್ ಪಂಪ್ ಬಳಿ ಅಪಘಾತ ಸಂಭವಿಸಿದೆ. ತನೋಜ್(18) ,ಅಭಿಷೇಕ್(19)ಮೃತ ದುರ್ದೈವಿಗಳು.

ಬಸ್‌ಗೆ ಬೈಕ್‌ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಸವಾರ ಹಾರಿ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೈಕ್ ಸವಾರ ಸೇರಿ ಇಬ್ಬರು ಮೃತಪಟ್ಟರೆ, ಓರ್ವ ಗಂಭೀರ ಗಾಯಗೊಂಡಿದ್ದಾನೆ. ಗಾಯಾಳನ್ನು ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಬೈಕ್ ಡಿಕ್ಕಿ‌ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಸುಟ್ಟುಕರಕಲಾಗಿದೆ. ಬಸ್‌ ಜೇವರ್ಗಿಯಿಂದ ಕಲಬುರಗಿ ಹೊರಟಿದ್ದರೆ, ಬೈಕ್‌ ಕಲಬುರಗಿಯಿಂದ ಜೇವರ್ಗಿಗೆ ಹೊರಟಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಜೇವರ್ಗಿ ತಾಲೂಕಿನ ಶಾಖಾಪುರ ಗ್ರಾಮದ ನಿವಾಸಿಗಳಾದ ತನೋಜ್(18) ,ಅಭಿಷೇಕ್(19) ಕಾಶಿಯಿಂದ ಬಂದಿದ್ದ ಸ್ನೇಹಿತನನ್ನು ಕರೆಯಲು ಕಲಬುರಗಿಗೆ ಬಂದಿದ್ದರು. ಯಶ್ ಪಾಲ್ ರೆಡ್ಡಿ ಎಂಬಾತನನ್ನು
ಕರೆದುಕೊಂಡು ಹೋಗುವಾಗ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಸಂಚಾರಿ‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ:Road Accident: ಕುಡಿದ ಮತ್ತಿನಲ್ಲಿ ಕಾರು ಹರಿಸಿದ ಚಾಲಕ, ಒಬ್ಬನ ಸಾವು, ಇಬ್ಬರಿಗೆ ಗಾಯ

ಬೆಂಗಳೂರಿನಲ್ಲಿ ಕಸದ ಲಾರಿಯ ಆರ್ಭಟಕ್ಕೆ ಇಬ್ಬರು ಟೆಕ್ಕಿಗಳು ಬಲಿ

ಬೆಂಗಳೂರು: ರಾಜಧಾನಿಯಲ್ಲಿ ಬಿಬಿಎಂಪಿ ಕಸದ ಲಾರಿ (BBMP Lorry) ಮತ್ತೆರಡು ಬಲಿ (Road Accident) ಪಡೆದುಕೊಂಡಿದೆ. ನಗರದ ಹೃದಯ ಭಾಗದ ಕೆಆರ್ ಸರ್ಕಲ್ (KR Circle) ಬಳಿ ಈ ದುರ್ಘಟನೆ ನಡೆದಿದೆ. ಮೃತರಿಬ್ಬರೂ ಟೆಕ್ಕಿಗಳಾಗಿದ್ದು, ಟಿಸಿಎಸ್‌ನಲ್ಲಿ (TCS) ಕೆಲಸ ಮಾಡುತ್ತಿದ್ದರು.

ರಾತ್ರಿ 8.45ರ ಸುಮಾರಿಗೆ ಈ ಭೀಕರ ಅಪಘಾತ ನಡೆದಿದೆ. ಪ್ರಶಾಂತ್ (25), ಬಯನ್ನಗಾರಿ ಶಿಲ್ಪ (27) ಮೃತ ದುರ್ದೈವಿಗಳು. ಪ್ರಶಾಂತ್ ಮೂಲತಃ ಬೆಂಗಳೂರಿನ ಬಾಣಸವಾಡಿಯ ಯುವಕ. ಶಿಲ್ಪ ಆಂಧ್ರ ಮೂಲದವಳು. ಪ್ರಶಾಂತ್ ಮತ್ತು ಯುವತಿ ಇಬ್ಬರು ಸಹೋದ್ಯೋಗಿಗಳಾಗಿದ್ದು, ಐಟಿಪಿಎಲ್ ಟಿಸಿಎಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಪಿಜಿಯಲ್ಲಿ ವಾಸ ಮಾಡುತ್ತಿದ್ದ ಯುವತಿ ಶಿಲ್ಪ, ಊಟಕ್ಕೆ ಎಂದು ಹೊರಗೆ ಬಂದಾಗ ಅಪಘಾತವಾಗಿದೆ.

ಮೆಜೆಸ್ಟಿಕ್‌ದ ಕೆಆರ್ ಸರ್ಕಲ್ ಮಾರ್ಗವಾಗಿ ಇವರಿಬ್ಬರೂ ಬೈಕ್‌ನಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಸಿಐಡಿ ಸಿಗ್ನಲ್ ಮಾರ್ಗದಿಂದ ಕೆಆರ್ ಸರ್ಕಲ್ ಕಡೆ ಕಸದ ಲಾರಿ ತೀವ್ರ ವೇಗದಿಂದ ಬಂದಿದೆ. ತಿರುವು ಇದ್ದ ಮಾರ್ಗದಲ್ಲಿ ಲಾರಿ ವೇಗವಾಗಿ ಬಂದ ಕಾರಣ ಕಸದ ಲಾರಿಯ ವೇಗದಿಂದ ತಪ್ಪಿಸಿಕೊಳ್ಳಲಾಗದೇ ಬೈಕ್‌ ಲಾರಿ ಕೆಳಗೆ ಸಿಲುಕಿಕೊಂಡಿದೆ.

ಮೃತರ ಮೇಲೆ ಹರಿದ ಕಸದ ಲಾರಿ ಸುಮಾರು 10 ಮೀಟರ್‌ನಷ್ಟು ದೂರ ದೇಹಗಳನ್ನು ಎಳೆದೊಯ್ದಿದೆ. ರಸ್ತೆ ಮೇಲೆ ರಕ್ತ ಚೆಲ್ಲಾಡಿದೆ ಎಂದು ಪ್ರತ್ಯಕ್ಷದರ್ಶಿಗಳು ವಿವರಿಸಿದ್ದಾರೆ. ಅಪಘಾತದ ಬಳಿಕ ಕಸದ ಲಾರಿ ಚಾಲಕ ಪರಾರಿಯಾಗಿದ್ದಾನೆ. ಕೂಡಲೇ ಅಪಘಾತಕ್ಕೊಳಗಾದವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗದಲ್ಲಿಯೇ ಇಬ್ಬರೂ ಮೃತ ಪಟ್ಟರು. ಮೃತದೇಹಗಳನ್ನು ಬೌರಿಂಗ್ ಆಸ್ಪತ್ರೆಗೆ ಒಯ್ಯಲಾಗಿದೆ.

ಸ್ಥಳಕ್ಕೆ ಹಲಸೂರು ಗೇಟ್ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಗನನ್ನು ಕಳೆದುಕೊಂಡು ತಂದೆ ತಾಯಿ ಕಣ್ಣೀರು ಹಾಕಿದ್ದು, ಆಸ್ಪತ್ರೆಯಲ್ಲಿ ಪ್ರಶಾಂತ್ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. “ಬಿಬಿಎಂಪಿ ವಾಹನ ಅಪಘಾತ ಆಗಿದೆ. ನನ್ನ ಮಗ ಹಾಗೂ ಯುವತಿ ಸಾವನ್ನಪ್ಪಿದ್ದಾರೆ. ಮೊದಲು ಪೊಲೀಸರು ಸರಿಯಾಗಿ ರೆಸ್ಪಾನ್ಸ್ ಕೂಡ ಮಾಡಿಲ್ಲ. ನಮಗೆ ನ್ಯಾಯ ಬೇಕಾಗಿದೆ. ಅಪಘಾತ ಮಾಡಿದ ಚಾಲಕನ ಬಂಧನ ಆಗಬೇಕು. ನ್ಯಾಯ ಸಿಗದಿದ್ದರೆ ನಾನು ನನ್ನ ಪತ್ನಿ ಮತ್ತು ಮಗಳು ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಳ್ತೇವೆ. ನನ್ನ ಮಗ ಮಾರ್ಥಾಸ್ ಆಸ್ಪತ್ರೆಯಲ್ಲಿಯೇ ಜನಿಸಿದ್ದ. ಇದೇ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾನೆ” ಎಂದು ಮೃತ ಪ್ರಶಾಂತ್ ತಂದೆ ಲೋಕೇಶ್ ಹೇಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Robbery Case: ಐಟಿ ದಾಳಿ ಮಾದರಿಯಲ್ಲಿ ಬಂದು ದರೋಡೆಗೆ ಯತ್ನಿಸಿದ ಖದೀಮರು! ಲೂಟಿ ವಿಫಲಗೊಳಿಸಿದ ಲೈವ್‌ ಸೆಕ್ಯುರಿಟಿ

Robbery Case: ಸುಮಾರು 6-8 ಜನರು ಇದ್ದ ಈ ದುಷ್ಕರ್ಮಿಗಳ ಟೀಮ್‌ನಲ್ಲಿ ಎಲ್ಲರೂ ಟಿಪ್‌ಟಾಪಾಗಿ ದಿರಿಸು ತೊಟ್ಟಿದ್ದರು. ಅವರಲ್ಲಿ ಒಬ್ಬಾತ ಪೊಲೀಸ್ ಪೇದೆಯಂತೆ ಡ್ರೆಸ್‌ ಧರಿಸಿದ್ದ. ಸಿಸಿಟಿವಿಯಲ್ಲಿ ಮುಖ ಕಾಣದಂತೆ ನೋಡಿಕೊಳ್ಳಲು ಇವರು ಯತ್ನಿಸಿದ್ದಾರೆ.

VISTARANEWS.COM


on

robbery case brahmavara
Koo

ಉಡುಪಿ:‌ ಐಟಿ ದಾಳಿ (IT Raid) ಮಾದರಿಯಲ್ಲಿ ತಂಡ ಕಟ್ಟಿಕೊಂಡು ಬಂದ ಅಪರಿಚಿತ ದುಷ್ಕರ್ಮಿಗಳು (Miscreants) ಮನೆ ಲೂಟಿಗೆ (Robbery Case) ಪ್ರಯತ್ನಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಆದರೆ ಸೈನ್‌ ಇನ್‌ ಸೆಕ್ಯುರಿಟಿ (Sign In Security) ಸಂಸ್ಥೆಯ ಲೈವ್ ಸರ್ವೈಲೆನ್ಸ್‌ (Live Surveillance) ಹಾಗೂ ತಕ್ಷಣ ಅಲರ್ಟ್‌ ನೀಡಿದ ಪರಿಣಾಮ ಮನೆಯವರು ಬಾಗಿಲು ತೆಗೆಯದೇ ಇದ್ದುದರಿಂದ, ಸಂಭಾವ್ಯ ದರೋಡೆಯಿಂದ ಪಾರಾಗಿದ್ದಾರೆ.

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಮಣೂರಿನಲ್ಲಿ ಘಟನೆ ನಡೆದಿದೆ. ಕವಿತಾ ಎಂಬವರ ಮನೆಗೆ ಅಪರಿಚಿತ ದುಷ್ಕರ್ಮಿಗಳು ಎರಡು ಇನ್ನೋವಾ ಹಾಗೂ ಸ್ವಿಫ್ಟ್‌ ಕಾರುಗಳಲ್ಲಿ ಸರ್ಕಾರಿ ಅಧಿಕಾರಿಗಳಂತೆ ಆಗಮಿಸಿದ್ದಾರೆ. ಜುಲೈ 25ರ ಬೆಳಗ್ಗೆ 8.30ರ ವೇಳೆಗೆ, ಮಳೆ ಸುರಿಯುತ್ತಿದ್ದಾಗ ಹಾಗೂ ಯಾರೂ ಇಲ್ಲದ ಸಮಯ ನೋಡಿ ತಂಡ ಆಗಮಿಸಿತ್ತು. ಗೇಟ್‌ ತಳ್ಳಿ ತೆರೆಯಲು ಯತ್ನಿಸಿ, ಅದು ತೆರೆದುಕೊಳ್ಳದೆ ಇದ್ದಾಗ ಮುರಿಯಲು ನೋಡಿದ್ದಾರೆ.

ಗೇಟ್‌ ತೆರೆಯದೆ ಇದ್ದಾಗ ಇನ್ನೊಂದು ಕಡೆಯಿಂದ ಕಂಪೌಂಡ್ ಜಿಗಿದು ಆವರಣ ಪ್ರವೇಶಿಸಿ ಬಾಗಿಲು ಬಡಿದು ಮನೆಯವರನ್ನು ಕರೆದಿದ್ದಾರೆ. ಆದರೆ ಈ ಮನೆಗೆ ಸೈನ್‌ ಇನ್‌ ಸೆಕ್ಯುರಿಟಿ ಸಂಸ್ಥೆಯ ಲೈವ್ ಸರ್ವೈಲೆನ್ಸ್‌ ಅಳವಡಿಸಿದ್ದ ಕಾರಣ, ಸಂಸ್ಥೆಯವರು ಕೂಡಲೇ ಮನೆ ಮಾಲಕಿಗೆ ಅಲರ್ಟ್‌ ನೀಡಿದ್ದಾರೆ. ಯಾರೋ ಅಕ್ರಮವಾಗಿ ಕೌಂಪೌಂಡ್‌ ಪ್ರವೇಶಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಎಚ್ಚೆತ್ತುಕೊಂಡ ಮಾಲಕಿ ಬಾಗಿಲು ತೆರೆದಿಲ್ಲ. ಸ್ವಲ್ಪ ಹೊತ್ತು ಕಾದು ಈ ಪುಂಡರ ತಂಡ ಮರಳಿ ಹೋಗಿದೆ.

ಸಿಸಿಟಿವಿಯಲ್ಲಿ ಅಪರಿಚಿತ ತಂಡದ ಕೃತ್ಯದ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಕುಂದಾಪುರ ವ್ಯಾಪ್ತಿಯಲ್ಲಿ ಹಲವು ಕಳ್ಳತನಗಳನ್ನು ಸೈನ್ ಇನ್ ಸೆಕ್ಯೂರಿಟಿ ವಿಫಲಗೊಳಿಸಿದೆ. ಇದು ಸಿಸಿಟಿವಿ ಅಳವಡಿಸಿರುವ ಮನೆಗೆ 24 ಗಂಟೆಯೂ ಭದ್ರತೆ ನೀಡುತ್ತದೆ. ಯಾವುದಾದ್ರೂ ಅನಪೇಕ್ಷಿತ ಬೆಳವಣಿಗೆ ಕಂಡರೆ ಅಲರ್ಟ್ ಮಾಡುತ್ತದೆ.

ಸುಮಾರು 6-8 ಜನರು ಇದ್ದ ಈ ದುಷ್ಕರ್ಮಿಗಳ ಟೀಮ್‌ನಲ್ಲಿ ಎಲ್ಲರೂ ಟಿಪ್‌ಟಾಪಾಗಿ ದಿರಿಸು ತೊಟ್ಟಿದ್ದರು. ಅವರಲ್ಲಿ ಒಬ್ಬಾತ ಪೊಲೀಸ್ ಪೇದೆಯಂತೆ ಡ್ರೆಸ್‌ ಧರಿಸಿದ್ದ. ಸಿಸಿಟಿವಿಯಲ್ಲಿ ಮುಖ ಕಾಣದಂತೆ ನೋಡಿಕೊಳ್ಳಲು ಇವರು ಯತ್ನಿಸಿದ್ದಾರೆ. ಮನೆ ಮಾಲಕಿ ಕವಿತಾ ಅವರು ಈ ಬಗ್ಗೆ ದೂರು ನೀಡಿದ್ದಾರೆ. ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಕಸದ ಲಾರಿಯ ಆರ್ಭಟಕ್ಕೆ ಇಬ್ಬರು ಟೆಕ್ಕಿಗಳು ಬಲಿ

ಬೆಂಗಳೂರು: ರಾಜಧಾನಿಯಲ್ಲಿ ಬಿಬಿಎಂಪಿ ಕಸದ ಲಾರಿ (BBMP Lorry) ಮತ್ತೆರಡು ಬಲಿ (Road Accident) ಪಡೆದುಕೊಂಡಿದೆ. ನಗರದ ಹೃದಯ ಭಾಗದ ಕೆಆರ್ ಸರ್ಕಲ್ (KR Circle) ಬಳಿ ಈ ದುರ್ಘಟನೆ ನಡೆದಿದೆ. ಮೃತರಿಬ್ಬರೂ ಟೆಕ್ಕಿಗಳಾಗಿದ್ದು, ಟಿಸಿಎಸ್‌ನಲ್ಲಿ (TCS) ಕೆಲಸ ಮಾಡುತ್ತಿದ್ದರು.

ರಾತ್ರಿ 8.45ರ ಸುಮಾರಿಗೆ ಈ ಭೀಕರ ಅಪಘಾತ ನಡೆದಿದೆ. ಪ್ರಶಾಂತ್ (25), ಬಯನ್ನಗಾರಿ ಶಿಲ್ಪ (27) ಮೃತ ದುರ್ದೈವಿಗಳು. ಪ್ರಶಾಂತ್ ಮೂಲತಃ ಬೆಂಗಳೂರಿನ ಬಾಣಸವಾಡಿಯ ಯುವಕ. ಶಿಲ್ಪ ಆಂಧ್ರ ಮೂಲದವಳು. ಪ್ರಶಾಂತ್ ಮತ್ತು ಯುವತಿ ಇಬ್ಬರು ಸಹೋದ್ಯೋಗಿಗಳಾಗಿದ್ದು, ಐಟಿಪಿಎಲ್ ಟಿಸಿಎಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಪಿಜಿಯಲ್ಲಿ ವಾಸ ಮಾಡುತ್ತಿದ್ದ ಯುವತಿ ಶಿಲ್ಪ, ಊಟಕ್ಕೆ ಎಂದು ಹೊರಗೆ ಬಂದಾಗ ಅಪಘಾತವಾಗಿದೆ.

ಮೆಜೆಸ್ಟಿಕ್‌ದ ಕೆಆರ್ ಸರ್ಕಲ್ ಮಾರ್ಗವಾಗಿ ಇವರಿಬ್ಬರೂ ಬೈಕ್‌ನಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಸಿಐಡಿ ಸಿಗ್ನಲ್ ಮಾರ್ಗದಿಂದ ಕೆಆರ್ ಸರ್ಕಲ್ ಕಡೆ ಕಸದ ಲಾರಿ ತೀವ್ರ ವೇಗದಿಂದ ಬಂದಿದೆ. ತಿರುವು ಇದ್ದ ಮಾರ್ಗದಲ್ಲಿ ಲಾರಿ ವೇಗವಾಗಿ ಬಂದ ಕಾರಣ ಕಸದ ಲಾರಿಯ ವೇಗದಿಂದ ತಪ್ಪಿಸಿಕೊಳ್ಳಲಾಗದೇ ಬೈಕ್‌ ಲಾರಿ ಕೆಳಗೆ ಸಿಲುಕಿಕೊಂಡಿದೆ.

ಮೃತರ ಮೇಲೆ ಹರಿದ ಕಸದ ಲಾರಿ ಸುಮಾರು 10 ಮೀಟರ್‌ನಷ್ಟು ದೂರ ದೇಹಗಳನ್ನು ಎಳೆದೊಯ್ದಿದೆ. ರಸ್ತೆ ಮೇಲೆ ರಕ್ತ ಚೆಲ್ಲಾಡಿದೆ ಎಂದು ಪ್ರತ್ಯಕ್ಷದರ್ಶಿಗಳು ವಿವರಿಸಿದ್ದಾರೆ. ಅಪಘಾತದ ಬಳಿಕ ಕಸದ ಲಾರಿ ಚಾಲಕ ಪರಾರಿಯಾಗಿದ್ದಾನೆ. ಕೂಡಲೇ ಅಪಘಾತಕ್ಕೊಳಗಾದವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗದಲ್ಲಿಯೇ ಇಬ್ಬರೂ ಮೃತ ಪಟ್ಟರು. ಮೃತದೇಹಗಳನ್ನು ಬೌರಿಂಗ್ ಆಸ್ಪತ್ರೆಗೆ ಒಯ್ಯಲಾಗಿದೆ.

ಇದನ್ನೂ ಓದಿ: Police Firing: ದರೋಡೆ, ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಸೆರೆ

Continue Reading
Advertisement
OBC Reservation
ದೇಶ2 mins ago

OBC Reservation: ಒಬಿಸಿ ಮೀಸಲಾತಿ ಹೆಚ್ಚಳಕ್ಕೆ ಸುಪ್ರೀಂ ಕೋರ್ಟ್‌ ತಡೆ; ನಿತೀಶ್‌ ಕುಮಾರ್‌ಗೆ ಮುಖಭಂಗ!

Rajendra Nagar Tragedy
ದೇಶ4 mins ago

Rajendra Nagar Tragedy: ದೆಹಲಿ ಕೋಚಿಂಗ್‌ ಸೆಂಟರ್‌ನಲ್ಲಿ ವಿದ್ಯಾರ್ಥಿಗಳ ಸಾವಿನ ಪ್ರಕರಣ; 7 ಮಂದಿಯ ಬಂಧನ

cm siddaramaiah mallikarjun kharge dk shivakumar
ಪ್ರಮುಖ ಸುದ್ದಿ16 mins ago

CM Siddaramaiah: ನಾಳೆ ದಿಲ್ಲಿಗೆ ಸಿಎಂ- ಡಿಸಿಎಂ ದೌಡು; ಸಚಿವ ಸಂಪುಟದಲ್ಲಿ ಬದಲಾವಣೆ ಫಿಕ್ಸ್?

Carrie Fisher Iconic Golden Bikini Rs 1.46 Crore
ಸಿನಿಮಾ20 mins ago

Carrie Fisher: ಹಾಲಿವುಡ್‌ ಖ್ಯಾತ ನಟಿ ಧರಿಸಿದ ಬಿಕಿನಿ ಬರೋಬ್ಬರಿ 1.46 ಕೋಟಿ ರೂಪಾಯಿಗೆ ಹರಾಜು!

Drowned in river
ಬಾಗಲಕೋಟೆ23 mins ago

Drowned In River : ಆಟವಾಡುವಾಗ ಕೃಷ್ಣಾ ನದಿ ಹಿನ್ನೀರಿಗೆ ಬಿದ್ದ ಬಾಲಕಿ ಸಾವು; ಅಂಗಾಂಗ ದಾನ ಮಾಡಿ 6 ಜೀವ ಉಳಿಸಿದ ಬಾಲೆ

Gold Rate Today
ಚಿನ್ನದ ದರ48 mins ago

Gold Rate Today: ಮತ್ತೆ ಏರಿಕೆಯಾದ ಚಿನ್ನದ ದರ; ಇಂದಿನ ಬೆಲೆ ಗಮನಿಸಿ

Arvind Kejriwal
ದೇಶ56 mins ago

Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ಮತ್ತೊಂದು ಸಂಕಷ್ಟ; ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಿದ ಸಿಬಿಐ

Dhruva Sarja``KD'' Sanjay Dutt First Look Out of
ಸ್ಯಾಂಡಲ್ ವುಡ್57 mins ago

Dhruva Sarja: ʻಕೆಡಿʼ ಚಿತ್ರದಿಂದ ಹೊರ ಬಿತ್ತು ಸಂಜಯ್ ದತ್ ಫಸ್ಟ್ ಲುಕ್; ಫ್ಯಾನ್ಸ್‌ ಫಿದಾ!

Actor Darshan case Vinod Raj said that he did not go to negotiations Renukaswamy family
ಕ್ರೈಂ1 hour ago

Actor Darshan: ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬೆನ್ನಲ್ಲೇ ಸಂಧಾನಕ್ಕೆ ಹೋಗಿದ್ದಲ್ಲ ಎಂದ ವಿನೋದ್‌ ರಾಜ್‌ !

Road Accident
ಕಲಬುರಗಿ1 hour ago

Road Accident : ಬಸ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬೈಕ್‌; ಚೆಲ್ಲಾಪಿಲ್ಲಿಯಾಗಿ ಬಿದ್ದ ಇಬ್ಬರು ಸಾವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Tungabhadra Dam
ಕೊಪ್ಪಳ18 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ20 hours ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ22 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ23 hours ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ3 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ3 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ3 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

ಟ್ರೆಂಡಿಂಗ್‌