Home loan: ಮನೆಕೊಳ್ಳಲು ಇದು ಸೂಕ್ತ ಸಮಯ, ಆದರೆ ಈ ವಿಷಯಗಳನ್ನು ಮರೆಯಬೇಡಿ! - Vistara News

ಕರ್ನಾಟಕ

Home loan: ಮನೆಕೊಳ್ಳಲು ಇದು ಸೂಕ್ತ ಸಮಯ, ಆದರೆ ಈ ವಿಷಯಗಳನ್ನು ಮರೆಯಬೇಡಿ!

ಗೃಹಸಾಲದ (Home loan) ಮೇಲಿನ ಬಡ್ಡಿದರ ಕಡಿಮೆ ಇರುವುದರಿಂದ ಮನೆ ಖರೀದಿಗೆ ಇದು ಸೂಕ್ತ ಸಮಯ ಎಂದು ತಜ್ಞರು ಹೇಳುತ್ತಿದ್ದಾರೆ. ಈ ನಿರ್ಧಾರ ಕೈಗೊಳ್ಳುವ ಮುನ್ನ ಗಮನಿಸಬೇಕಾದ ವಿಷಯಗಳ ಮಾಹಿತಿ ಇಲ್ಲಿದೆ

VISTARANEWS.COM


on

home loan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಸ್ವಂತ ಮನೆ ಹೊಂದಬೇಕೆಂಬುದು ನಗರಗಳಲ್ಲಿ ವಾಸಿಸುವ ಬಹುತೇಕರ ಕನಸು. ಕೊರೊನಾ ಕಾಲಘಟ್ಟದಲ್ಲಿನ ಲಾಕ್‌ಡೌನ್‌ ಮತ್ತು ವರ್ಕ್‌ ಫ್ರಮ್‌ ಹೋಮ್‌ ಬಹುತೇಕರಿಗೆ ಸ್ವಂತ ಮನೆಯ ಅವಶ್ಯಕತೆಯನ್ನು ಮನದಟ್ಟು ಮಾಡಿಸಿದೆ. ಅಲ್ಲದೆ ಬ್ಯಾಂಕುಗಳು ಗೃಹಸಾಲದ (home loan) ಮೇಲಿನ ಬಡ್ಡಿದರವನ್ನು ದಾಖಲೆ ಪ್ರಮಾಣದಲ್ಲಿ ಇಳಿಸಿ ಹಾಗೂ ಸರ್ಕಾರ ಮುದ್ರಾಂಕ ಶುಲ್ಕವನ್ನು ಕಡಿತಮಾಡಿ ಮನೆಕೊಳ್ಳುವವರಿಗೆ ಉತ್ತೇಜನ ನೀಡುತ್ತಿವೆ.

ʼʼಕೊರೊನಾ ನಂತರ ದೇಶದ ಆರ್ಥಿಕತೆ ಮತ್ತೆ ಹಳಿಗೆ ಮರಳಿದ್ದು, ಬಹುತೇಕ ವ್ಯವಹಾರಗಳು ಈ ಹಿಂದಿನಂತೆ ನಡೆಯುತ್ತಿವೆ. ರಿಯಾಲ್ಟಿ ಚಟುವಟಿಕೆ ಕೂಡ ಗರಿಗೆದರಿವೆ. ಉದ್ಯೋಗಾವಕಾಶಗಳು ಹೆಚ್ಚಿದ್ದು, ವೇತನ ಕೂಡ ನಿರೀಕ್ಷೆಗೂ ಮೀರಿ ಹೆಚ್ಚಳವಾಗುತ್ತಿದೆ. ಹೀಗಾಗಿ ಮನೆ ಖರೀದಿಗೆ  ಇದು ಸೂಕ್ತ ಸಮಯʼʼ ಎನ್ನುತ್ತಾರೆ ರಿಯಾಲ್ಟಿ ತಜ್ಞ ಅನುರೂಪ್‌ ಕೆ. ವಿ.

ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ (ಆರ್‌ಬಿಐ) ರೆಪೊ ದರವನ್ನು ಈಗಾಗಲೇ ಹೆಚ್ಚಿಸಲು ಆರಂಭಿಸಿದೆ. ಮುಂದೆ ಕೂಡ ಹಣದುಬ್ಬರವನ್ನು ಇಳಿಸುವ ಉದ್ದೇಶದಿಂದ ಇನ್ನಷ್ಟು ಹೆಚ್ಚಿಸಬಹುದು. ಆಗ ಸಹಜವಾಗಿ ಗೃಹ ಸಾಲದ (home loan) ಮೇಲಿನ ಬಡ್ಡಿದರವೂ ಹೆಚ್ಚಲಿದೆ. ಹೀಗಾಗಿ ತಡ ಮಾಡದೆ ಈಗಲೇ ನಿರ್ಧಾರ ತೆಗೆದುಕೊಂಡರೆ ಹೆಚ್ಚು ಲಾಭವಾಗುತ್ತದೆ ಎಂದು ಅವರು ಹೇಳಿದ್ದಾರೆ.

ಸರಿಯಾಗಿ ಪ್ಲಾನ್‌ ಮಾಡಿ

ನಿಮಗೂ ತಜ್ಞರ ಈ ಮಾತು ಸತ್ಯ ಎನಿಸಿರಬಹುದು. ಸ್ವಂತ ಮನೆ ಖರೀದಿಗೆ ನೀವು ನಿರ್ಧರಿಸಿದ್ದೀರಿ ಎಂದಾದರೆ ಮೊದಲು ಹಣಕಾಸಿನ ಬಗ್ಗೆ ಸರಿಯಾಗಿ ಪ್ಲಾನ್‌ ಮಾಡಿಕೊಳ್ಳಿ. ಸ್ವಂತ ಮನೆ ಅಥವಾ ಅಪಾರ್ಟ್‌ಮೆಂಟ್‌ ಖರೀದಿಗೆ ಎಷ್ಟು ಹಣ ಬೇಕಾಗಬಹುದು, ಈ ಹಣವನ್ನು ಹೊಂದಿಸುವುದು ಹೇಗೆ? ಉಳಿತಾಯ ಮಾಡಿದ ಹಣ ಎಷ್ಟಿದೆ ಎಂದೆಲ್ಲಾ ಲೆಕ್ಕಾಚಾರ ಹಾಕಿ. ಎಷ್ಟು ಸಾಲಮಾಡಿದರೆ ತೀರಿಸಲು ಸಾಧ್ಯ , ಮುಂದೆ  ಏನೆಲ್ಲಾ ಖರ್ಚುಗಳು (ಮಕ್ಕಳ ವಿದ್ಯಾಭ್ಯಾಸ, ಮದುವೆ ಇತ್ಯಾದಿ) ಹೆಚ್ಚುವರಿಯಾಗಿ ಬರುತ್ತವೆ, ಅನಾರೋಗ್ಯದ ಸಮಸ್ಯೆ ಎದುರಾದರೆ ಖರ್ಚಿಗೆ ಹಣ ಹೊಂದಿಸಲು ಸಾಧ್ಯವೇ… ಹೀಗೆ ಎಲ್ಲವನ್ನೂ ಯೋಚಿಸಿಯೇ ಮುಂದುವರಿಯಿರಿ.

ನಿಮಗೆ ಗೃಹಸಾಲ ಸಿಗದಿರಬಹದು!

ಹೌದು, ನೀವು ಮನೆ ಖರೀದಿಯ ತೀರ್ಮಾನ ತೆಗೆದುಕೊಂಡು ಒಂದೊಳ್ಳೆಯ ಮನೆ ನೋಡಿ, ಡೀಲ್‌ ಕೂಡ ಫೈನಲ್‌ ಹಂತಕ್ಕೆ ಬಂದಿದೆ ಎಂದಿಟ್ಟುಕೊಳ್ಳಿ. ನಿಮ್ಮ ಜೀವನದ ಕನಸು ನನಸಾಗುವ ದಿನಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ ಸಮಯದಲ್ಲಿ ಬ್ಯಾಂಕ್‌ ನಿಮಗೆ ಗೃಹ ಸಾಲ ನೀಡಲು ನಿರಾಕರಿಸುವ ಸಾಧ್ಯತೆಗಳೂ ಇವೆ.

Home loan

ಏಕೆ ಹೀಗಾಗುತ್ತದೆ ಎಂದರೆ ಗೃಹಸಾಲಕ್ಕೆ ಅರ್ಹತೆ ಇದೆಯೇ ಇಲ್ಲವೇ ಎಂದು ತಿಳಿದುಕೊಳ್ಳದೇ ನೀವು ಮುಂದವರಿದಿದ್ದೀರಿ. ಕೆಲವರಿಗೆ ಈ ಹಂತದಲ್ಲಿ ಕ್ರೆಡಿಟ್‌ ಅಥವಾ ಸಿಬಿಲ್‌ ಸ್ಕೋರ್‌ ಕಡಿಮೆ ಇರುವ ಕಾರಣಕ್ಕೆ ಸಾಲದ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ. ಈ ಬಗ್ಗೆಯು ನೀವು ಪರಿಶೀಲಿಸಿಕೊಳ್ಳಿ. ಈ ಹಿಂದೆ ನಾನು ಮಾಡಿದ್ದ ಸಾಲಗಳನ್ನು ಸರಿಯಾಗಿ ಪಾವತಿಸಿದ್ದೇನೆಯೇ? ಕ್ರಿಡಿಟ್‌ ಕಾರ್ಡ್‌ ಬಿಲ್‌ಗಳನ್ನು ನಿಗದಿತ ಸಮಯದಲ್ಲಿ ಪಾವತಿಸಿದ್ದೇನೆಯೇ? ನನ್ನ ಕ್ರೆಡಿಟ್‌ ಸ್ಕೋರ್‌ ಎಷ್ಟಿದೆ ಎಂಬುದುನ್ನು ನೋಡಿಕೊಂಡೇ ಸಾಲದ ಕುರಿತು ಯೋಚಿಸಿ. ಒಂದು ವೇಳೆ ಕ್ರೆಡಿಟ್‌ ಸ್ಕೋರ್‌ ಕಡಿಮೆ ಇದ್ದರೆ ಅದನ್ನು ಉತ್ತಮಪಡಿಸಿಕೊಂಡು ಸಾಲಕ್ಕೆ ಅರ್ಜಿ ಸಲ್ಲಿಸುವುದೇ ಇದಕ್ಕಿರುವ ಪರಿಹಾರ.

ಇನ್ನು ಸೂಕ್ತವಾದ ದಾಖಲೆಪತ್ರಗಳನ್ನು ನೀಡದೇ ಇದ್ದರೂ ನಿಮ್ಮ ಅರ್ಜಿ ತಿರಸ್ಕೃತವಾಗಬಹುದು. ಸಾಲಕ್ಕೆ ಅರ್ಜಿ ಸಲ್ಲಿಸುವ ಮೊದಲೇ ಯಾವೆಲ್ಲ ದಾಖಲೆಗಳು ಬೇಕಾಗಬಹುದು ಎಂದು ತಿಳಿದುಕೊಂಡು, ಅರ್ಜಿಯೊಂದಿಗೆ ಅವುಗಳನ್ನು ಲಗತ್ತಿಸಿ. ಕೆಲವು ಮನೆಗಳಿಗೆ ಸಂಬಂಧಿಸಿದ ದಾಖಲೆಗಳು ಸರಿಯಾಗಿರದಿರಬಹುದು. ಹೀಗಾಗಿ ಮನೆಯೊಂದನ್ನು ಕೊಳ್ಳುವ ನಿರ್ಧಾರವನ್ನು ಅಂತಿಮಗೊಳಿಸುವ ಮುನ್ನ ತಜ್ಞ ವಕೀಲರಿಂದ ದಾಖಲೆಗಳನ್ನುಪರಿಶೀಲನೆಗೊಳಪಡಿಸಿ, ಬ್ಯಾಂಕಿನವರೂ ಇವುಗಳನ್ನು ಪರಿಶೀಲಿಸಿಯೇ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೆನಪಿನಲ್ಲಿಡಿ.

ವಿವಿಧ ಶುಲ್ಕಗಳ ಬಗ್ಗೆ ಮಾಹಿತಿ ಇರಲಿ

ಇನ್ನು ಮನೆ ಖರೀದಿಗೆ ಹಣ ಹೊಂದಿಸುವ ಕುರಿತು ನೀವು ಎಷ್ಟೇ ಪ್ಲಾನ್‌ ಮಾಡಿಕೊಂಡರೂ ಕೆಲವೊಂದು ಖರ್ಚುಗಳು ಅನಿರೀಕ್ಷಿತವಾಗಿ ಎದುರಾಗುತ್ತವೆ. ಗೃಹಸಾಲ ಪಡೆಯುವಾಗ ಬ್ಯಾಂಕುಗಳು ವಿಧಿಸುವ ಶುಲ್ಕಗಳು. ಗೃಹಸಾಲ ಪಡೆದಾಗ ಕೇವಲ ಬಡ್ಡಿ ಮಾತ್ರ ಪಾವತಿಸಿದರೆ ಸಾಕು ಎಂಬ ಲೆಕ್ಕಾಚಾರ ನಿಮ್ಮದಾಗಿರಬಹುದು. ಬ್ಯಾಂಕಿನವರು ಹೆಚ್ಚುವರಿ ಶುಲ್ಕ ಪಾವತಿಸಬೇಕು ಎಂದಾದಾಗ ನಿಮಗೆ ಲೆಕ್ಕಾಚಾರ ತಲೆಕೆಳಗಾದಂತೆ ಅನ್ನಿಸಬಹದು. ಇದಕ್ಕೆ ಗೃಹಸಾಲದ ವಿಚಾರಣೆಗೆ ಹೋದಾಗಲೇ ವಿವಿಧ ಶುಲ್ಕಗಳ ಬಗ್ಗೆಯೂ ಕೇಳಿ ತಿಳಿಯಬೇಕಾದದು ಅಗತ್ಯ. ಮುಖ್ಯವಾಗಿ ವಿವಿಧ ಮರೆಮಾಚಿದ ಶುಲ್ಕಗಳು ಇರುತ್ತವೆ.

home loan

ಈ ಬಗ್ಗೆ ಬಿಡಿಸಿ ಕೇಳಿ ಮಾಹಿತಿ ಪಡೆದುಕೊಳ್ಳಬೇಕು. ಸಂಸ್ಕರಣಾ ಶುಲ್ಕ, ಕಾನೂನು ಶುಲ್ಕಗಳು, ದಾಖಲೆಗಳಿಗೆ ಸಂಬಂಧಪಟ್ಟ ಶುಲ್ಕಗಳು, ಆಸ್ತಿ ಮೌಲ್ಯಮಾಪನ ಶುಲ್ಕ ಸೇರಿದಂತೆ ಹತ್ತು ಹಲವು ಶುಲ್ಕಗಳನ್ನು ಬ್ಯಾಂಕ್‌ಗಳು ವಿಧಿಸುತ್ತವೆ. ಈ ಬಗ್ಗೆ ಮೊದಲೇ ಮಾಹಿತಿ ಪಡೆದುಕೊಂಡರೆ ದುಡ್ಡಿನ ವಿಚಾರದಲ್ಲಿ ಲೆಕ್ಕತಪ್ಪುವ ಸಾಧ್ಯತೆಗಳಿರುವುದಿಲ್ಲ.

ವ್ಯಾಲ್ಯೂವೇಷನ್‌ನಲ್ಲಿ ವ್ಯತ್ಯಾಸ
ನೀವು ಒಂದು ಮನೆಯನ್ನು ಅಥವಾ ನಿವೇಶನವನ್ನು 90 ಲಕ್ಷ ರೂ. ನೀಡಿ ಖರೀದಿಸಲು ಮುಂದಾಗಿದ್ದೀರಿ ಎಂದಿಟ್ಟುಕೊಳ್ಳಿ. ಆದರೆ, ಬ್ಯಾಂಕ್‌ ತನ್ನ ಮೌಲ್ಯಮಾಪನ ಸಂದರ್ಭದಲ್ಲಿ ಆ ಪ್ರಾಪರ್ಟಿಗೆ ಅಷ್ಟೇ ದರ ನಿಗದಿಪಡಿಸುತ್ತದೆ ಎಂದು ಹೇಳಲಾಗದು. ಪ್ರಾಪರ್ಟಿ ಮೌಲ್ಯಮಾಪನದಲ್ಲಿ ಶೇ 5-10ರಷ್ಟು ವ್ಯತ್ಯಾಸ ಬರಬಹುದು. ಇದರಿಂದ ನಿಮಗೆ ಕಡಿಮೆ ಪ್ರಮಾಣದಲ್ಲಿ ಸಾಲ ದೊರಕಬಹುದು. ಈ ಬಗ್ಗೆಯೂ ನೀವು ಮೊದಲೇ ಯೋಚಿಸಿದ್ದರೆ ಕೊನೆಯ ಕ್ಷಣದಲ್ಲಿ ಗೊಂದಲಕ್ಕೆ ಬೀಳುವುದು ತಪ್ಪುತ್ತದೆ. ಇಂತಹ ಸಂದರ್ಭ ಬಂದರೆ ಇತರೆ ಬ್ಯಾಂಕ್‌ಗಳು, ಎಚ್‌ಎಫ್‌ಸಿಗಳಲ್ಲಿ ಸಾಲಕ್ಕೆ ಪ್ರಯತ್ನಿಸಬಹುದು. ಏಕೆಂದರೆ ಪ್ರಾಪರ್ಟಿ ವ್ಯಾಲ್ಯೂವೇಷನ್‌ ಪ್ರಮಾಣವು ಬ್ಯಾಂಕ್‌ನಿಂದ ಬ್ಯಾಂಕ್‌ಗೆ ವ್ಯತ್ಯಾಸವಾಗಿರುತ್ತದೆ.

ಇದನ್ನೂ ಓದಿ| Explainer: Land in moon- ಹೋಗಲಾಗದ ಚಂದ್ರನ ಮೇಲೆ ಜಮೀನು ಖರೀದಿ ಯಾಕೆ?

ಇನ್ನು ಬ್ಯಾಂಕುಗಳು ನಿಮಗೆ ಬೇಕಾದಷ್ಟು ಮೊತ್ತವನ್ನು ಸಾಲ ನೀಡುವುದಿಲ್ಲ. ನೀವು ಕೊಳ್ಳುವ ಮನೆ ಅಥವಾ ಅಪಾರ್ಟ್‌ಮೆಂಟ್‌ನ ಮೌಲ್ಯದ ಶೇ. 80-85ರಷ್ಟೇ ಸಾಲ ನೀಡಬಹುದು. ಉಳಿದ ಹಣವನ್ನು ನೀವೇ ಹೊಂದಿಸಿಕೊಳ್ಳಬೇಕಾಗಿರುತ್ತದೆ. ಇದೆಲ್ಲವನ್ನು ನೋಡಿಕೊಂಡೇ ನೀವು ಮನೆ ಕೊಳ್ಳುವ ನಿರ್ಧಾರವನ್ನು ಅಂತಿಮಗೊಳಿಸಿದರೆ ಯಾವುದೇ ಗೊಂದಲವಿಲ್ಲದೆ ನಿಮ್ಮ ಕನಸನ್ನು ಈಡೇರಿಸಿಕೊಳ್ಳಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading

ಚಿತ್ರದುರ್ಗ

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್‌ ಅವರ ಅಗಲಿಕೆಯಿಂದ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ. ಸುಧಾಕರ್‌ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಸುಧಾಕರ್‌ ಅವರು ಜನಪರ ನಾಯಕನಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ” ಎಂದು ಹೇಳಿದರು.

ಸುಧಾಕರ್‌ ಅವರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. “ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಸಿಎಂ ಪ್ರಾರ್ಥಿಸಿದರು.

ಡಿ. ಸುಧಾಕರ್‌ ಅವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಅವರ ನಿಧನ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ.

ನಾಳೆ ಸಂಜೆ 4 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Continue Reading

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading
Advertisement
Latest3 hours ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest7 hours ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest7 hours ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest1 day ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest1 day ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ1 day ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest1 day ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest1 day ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

Latest1 day ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest2 days ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌