Araga Jnanendra | ಆರಂಭದಲ್ಲಿ ಸ್ವಲ್ಪ ಮುಜುಗರ ಆಗಿದ್ದು ನಿಜ, ಈಗ Expert ಆಗಿದ್ದೇನೆ ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ - Vistara News

ಕರ್ನಾಟಕ

Araga Jnanendra | ಆರಂಭದಲ್ಲಿ ಸ್ವಲ್ಪ ಮುಜುಗರ ಆಗಿದ್ದು ನಿಜ, ಈಗ Expert ಆಗಿದ್ದೇನೆ ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ

ಗೃಹ ಸಚಿವನಾಗಿ ಆರಂಭದ ಕಾಲದಲ್ಲಿ ಸ್ವಲ್ಪ ಮಟ್ಟಿಗೆ ಮುಜುಗರ ಇತ್ತು ಎಂದು ಸಚಿವ ಆರಗ ಜ್ಞಾನೇಂದ್ರ ಒಪ್ಪಿಕೊಂಡಿದ್ದಾರೆ. ಈಗ ಎಲ್ಲ ಅರೆದು ಕುಡಿದಿದ್ದೇನೆ ಎಂದೂ ಹೇಳಿದ್ದಾರೆ.

VISTARANEWS.COM


on

ಆರಗ ಜ್ಞಾನೇಂದ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ರಾಜ್ಯದಲ್ಲಿ ಗೃಹ ಸಚಿವರನ್ನು ಕಾಡುವಷ್ಟು ವಿಷಯಗಳು ಬೇರೆ ಯಾರಿಗೂ ಇಲ್ಲ. ಈ ವಿಚಾರದಲ್ಲಿ ಹೆಚ್ಚಿನ ಅನುಭಗಳಿಲ್ಲದೆ ಇದ್ದ ನನಗೆ ಆರಂಭದಲ್ಲಿ ಸಂಕೋಚವಾಗುತ್ತಿತ್ತು. ಆಯನೂರು ಮಂಜುನಾಥರಂಥವರು ನಿನಗ್ಯಾಕೆ ಗೃಹ ಖಾತೆ ಅಂತಲೂ ಕೇಳಿದ್ದಾರೆ. ಆದರೆ, ಈಗ ನಾನು ಎಕ್ಸ್‌ಪರ್ಟ್‌ ಆಗಿದ್ದೇನೆ- ಹೀಗೆಂದು ಆತ್ಮವಿಶ್ವಾಸದಿಂದ ಹೇಳಿದರು ಗೃಹ ಸಚಿವ ಆರಗ ಜ್ಞಾನೇಂದ್ರ.

ಶಿವಮೊಗ್ಗದಲ್ಲಿ ಪೂರ್ವ ಸಂಚಾರ ಠಾಣೆ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅವರೊಂದಿಗೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಎಮ್ಮೆಲ್ಸಿ ಆಯನೂರು ಮಂಜುನಾಥ್, ಐಜಿಪಿ ಕೆ.ತ್ಯಾಗರಾಜನ್, ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಕೂಡಾ ಇದ್ದರು.

ಆರಂಭದಲ್ಲಿ ಮಾತನಾಡಿದ ಬಿಜೆಪಿ ಮೇಲ್ಮನೆ ಸದಸ್ಯ ಆಯನೂರು ಮಂಜುನಾಥ ಅವರು ಸ್ವಲ್ಪ ಮಟ್ಟಿಗೆ ಗೃಹ ಸಚಿವರನ್ನು ತಿವಿದರು. ತಮ್ಮನ್ನು ಕೊನೆ ಗಳಿಗೆಯಲ್ಲಿ ಆಹ್ವಾನಿಸಿದ ವಿಚಾರದಲ್ಲಿ ಅವರಿಗೆ ಸ್ವಲ್ಪ ಸಿಟ್ಟು ಇದ್ದಂತಿತ್ತು.

ʻʻಶಿವಮೊಗ್ಗದಲ್ಲಿ ಪೊಕ್ಸೊ ಪ್ರಕರಣ ಹೆಚ್ಚುತ್ತಿದೆ. ನಿಯಂತ್ರಣಕ್ಕೆ ಪೊಲೀಸ್ ಬಲ ಹೆಚ್ಚಿಸಬೇಕು. ಠಾಣೆಗಳಿಗೆ ಅಗತ್ಯ ಸೌಕರ್ಯ, ಸಿಬ್ಬಂದಿ ಹೆಚ್ಚಿಸಬೇಕುʼʼ ಎಂದು ಹೇಳಿದ ಅವರು ನಂತರ, ʻʻನನ್ನನ್ನು ಈ ಕಾರ್ಯಕ್ರಮಕ್ಕೆ ಕೊನೇ ಗಳಿಗೆಯಲ್ಲಿ ಆಹ್ವಾನಿಸಿದ್ದೀರಿ. ನಗರದಲ್ಲಿ ನಾಲ್ಕೈದು ಶಾಸಕರಿದ್ದಾರೆ. ಮುಂಚಿತವಾಗಿ ಕರೆದಿದ್ದರೆ ಎಲ್ಲರೂ ಬರುತ್ತಿದ್ದರು. ಗೃಹಸಚಿವರಿಗೆ ಸುತ್ತಮುತ್ತ ಪೊಲೀಸರಿದ್ದರೆ ಸಾಕೇನೊ?ʼʼ ಎಂದು ಚುಚ್ಚಿದರು.

ಆರಗ ಜ್ಞಾನೇಂದ್ರ ಪ್ರತ್ಯುತ್ತರ
ಆಯನೂರು ಮಂಜುನಾಥ ಅವರ ಮಾತುಗಳನ್ನು ಗಮನದಲ್ಲಿಟ್ಟುಕೊಂಡೇ ತಮ್ಮ ಭಾಷಣದಲ್ಲಿ ಪ್ರತಿಕ್ರಿಯಿಸಿದ ಆರಗ ಜ್ಞಾನೇಂದ್ರ ಅವರು, ʻʻನಾನೇನೂ ಐದು ವರ್ಷದಿಂದ ಮಂತ್ರಿಯಾಗಿದ್ದವನಲ್ಲ. ಕೇವಲ ಒಂದೂವರೆ ವರ್ಷದಲ್ಲಿ ಗೃಹಮಂತ್ರಿಯಾಗಿ ಕೆಲಸ ಮಾಡುತ್ತಿದ್ದೇನೆ. ಇರುವ ಅವಧಿಯಲ್ಲಿ ಜಿಲ್ಲೆಗೆ ಗರಿಷ್ಠ ಅನುದಾನ ಕೊಟ್ಟಿದ್ದೇನೆʼʼ ಎಂದರು.

ʻʻಸೆಂಟ್ರಲ್ ಜೈಲ್ ಅಭಿವೃದ್ಧಿಗೆ 108 ಕೋಟಿ ರೂ ಮಂಜೂರು ಮಾಡಿದ್ದೇನೆ. 10 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗಕ್ಕೆ ಎಫ್ ಎಸ್ ಎಲ್ ಕೇಂದ್ರ ಸ್ಥಾಪನೆ ಆಗುತ್ತಿದೆ. ಪೊಲೀಸ್ ವಸತಿ ಗೃಹಗಳ ನಿರ್ಮಾಣಕ್ಕೆ ಆದ್ಯತೆ ನೀಡಿದ್ದೇನೆ. ಪ್ರತಿ ಠಾಣೆಗೆ ಸೈಬರ್ ಕ್ರೈಮ್ ತಜ್ಞರ ನೇಮಕ ಮಾಡಲಾಗಿದೆ. ಇಲಾಖೆಗೆ ಹೊಸ ವಾಹನ ಕೊಟ್ಟಿದ್ದೇವೆʼʼ ಎಂದು ಲೆಕ್ಕ ನೀಡಿದರು.

ಮಂತ್ರಿಯಾದ ಬಳಿಕ ಎದುರಾದ ಸವಾಲುಗಳನ್ನು ವಿವರಿಸಿದ ಅವರು, ʻʻಹಿಜಾಬ್ ಸೇರಿದಂತೆ ಎಲ್ಲ ಸವಾಲು ನನ್ನ ಅವಧಿಯಲ್ಲಿ ನಡೆಯಿತು. ಪಿಎಸ್ ಐ ನೇಮಕಾತಿ ಹಗರಣ ಕೂಡಾ ಸವಾಲಾಗಿತ್ತು. ಬೇಲಿಯೇ ಎದ್ದು ಮೇಯ್ದ ಪರಿಸ್ಥಿತಿ ಅದು. ಆದರೂ ನಮ್ಮ ಇಲಾಖೆ ಪಾರದರ್ಶಕವಾಗಿ ತನಿಖೆ ಮಾಡಿದೆ. ಇತಿಹಾಸದಲ್ಲಿ ಮೊದಲ ಬಾರಿಗೆ ಐಪಿಎಸ್ ಅಧಿಕಾರಿಯನ್ನು ಜೈಲಿಗೆ ಕಳಿಸಿದ್ದೇವೆ. ಗೃಹ ಇಲಾಖೆ ಸಮರ್ಥವಾಗಿ ಕೆಲಸ ಮಾಡುತ್ತಿದೆ. ಇದರ ಕ್ರೆಡಿಟ್ ಸಾಮಾನ್ಯ ಪೇದೆಯಿಂದ ಅಧಿಕಾರಿಗಳವರೆಗೆ ಸಲ್ಲುತ್ತದೆʼʼ ಎಂದರು.

ʻʻಪ್ರತಿಪಕ್ಷಗಳು ವಿತಂಡವಾದ ಮಾಡುತ್ತಿವೆ. ಆರೋಪಿಗಳಿಗೆ ರಕ್ಷಣೆ ನೀಡುತ್ತಿವೆ. ಶಿವಮೊಗ್ಗದಲ್ಲಿ ನಡೆದ ಹಿಂದು ಹರ್ಷ ಕೊಲೆ ಖಂಡಿಸುವುದನ್ನು ಬಿಟ್ಟು ಈಶ್ವರಪ್ಪ ವಿರುದ್ಧ ಮಾತನಾಡಲಾಯಿತು. ಮೈಸೂರಿನಲ್ಲಿ ನಡೆದ ಅತ್ಯಾಚಾರ ಖಂಡಿಸುವುದು ಬಿಟ್ಟು ನನ್ನ ಮೇಲೆ ಹರಿಹಾಯ್ದರುʼʼ ಎಂದ ಅವರು, ʻʻಶಿವಮೊಗ್ಗ ರೌಡಿಗಳ ರಾಜ್ಯವಾಗಿತ್ತು. ಈಗ ಯಾರೂ ಬಾಲ ಬಿಚ್ಚುತ್ತಿಲ್ಲ. ಶಿವಮೊಗ್ಗ, ಭದ್ರಾವತಿಯಲ್ಲಿ ಇನ್ನು ರೌಡಿಗಳ ಆಟ ನಡೆಯದುʼʼ ಎಂದು ಎಚ್ಚರಿಸಿದರು.

ಆರಂಭದಲ್ಲಿ ಗೃಹ ಸಚಿವನಾಗಿ ಕೆಲವೊಂದು ವಿಚಾರಗಳನ್ನು ಅರ್ಥ ಮಾಡಿಕೊಳ್ಳುವುದು ಕಷ್ಟವಾಗುತ್ತಿತ್ತು ಎಂದು ಒಪ್ಪಿಕೊಂಡ ಆರಗ ಜ್ಞಾನೇಂದ್ರ ಅವರು, ಈಗ ತಾನು ಎಲ್ಲವನ್ನೂ ತಿಳಿದುಕೊಂಡಿದ್ದಾಗಿ ಹೇಳಿದರು.

ಇದನ್ನೂ ಓದಿ | ಅಡಕೆ ಬೆಳೆ ಪ್ರದೇಶ ಹೀಗೇ ವಿಸ್ತರಣೆ ಆಗುತ್ತಿದ್ದರೆ ಒಂದಲ್ಲ ಒಂದು ದಿನ ಬೆಲೆ ಕುಸಿದು ಬೀಳಲಿದೆ ಎಂದ ಆರಗ ಜ್ಞಾನೇಂದ್ರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Robbery Case: ಮನೆ ಮಾಲೀಕರಿಗೆ ಪಿಸ್ತೂಲ್ ತೋರಿಸಿ 40 ಲಕ್ಷ ರೂ. ದರೋಡೆ

Robbery Case: ವರ್ನಾ ಕಾರಿನಲ್ಲಿ ಬಂದಿದ್ದ ದರೋಡೆ‌ ಗ್ಯಾಂಗ್ ಕಾರ್ಯವೈಖರಿ ಎರಡು‌ ತಿಂಗಳ ಹಿಂದೆ ನಡೆದ ದರೋಡೆಯನ್ನು ನೆನಪಿಸಿದೆ. ಅಲ್ಲಿಯೂ ಇದೇ ರೀತಿ ಮನೆಯೊಂದಕ್ಕೆ ನುಗ್ಗಿ 2 ಕೋಟಿ ರೂ.ಗಳಷ್ಟು ಮೌಲ್ಯದ ಸೊತ್ತನ್ನು ಗ್ಯಾಂಗ್‌ ದೋಚಿತ್ತು.

VISTARANEWS.COM


on

sahakara nagar robbery case
Koo

ಬೆಂಗಳೂರು: ರಾಜಧಾನಿಯಲ್ಲಿ (Bangalore crime) ಗನ್ ತೋರಿಸಿ 40 ಲಕ್ಷ ರೂಪಾಯಿಗಳನ್ನು ದರೋಡೆ (Robbery Case) ಮಾಡಲಾಗಿದೆ. ಸಹಕಾರನಗರ ಕಾವೇರಿ ಸ್ಕೂಲ್ ಹಿಂಭಾಗದ ಮನೆಯಲ್ಲಿ ರಾತ್ರಿ 8:30ರ ಸುಮಾರಿಗೆ ಈ ಘಟನೆ ನಡೆದಿದ್ದು, ಡಕಾಯಿತರ (Dacoits) ಗ್ಯಾಂಗ್‌ ಮನೆಗೆ ನುಗ್ಗಿ ಪಿಸ್ತೂಲ್‌ (pistol) ತೋರಿಸಿ ದರೋಡೆ ಮಾಡಿದೆ.

ವರ್ನಾ ಕಾರಿನಲ್ಲಿ ಬಂದಿದ್ದ ದರೋಡೆ‌ ಗ್ಯಾಂಗ್ ಕಾರ್ಯವೈಖರಿ ಎರಡು‌ ತಿಂಗಳ ಹಿಂದೆ ನಡೆದ ದರೋಡೆಯನ್ನು ನೆನಪಿಸಿದೆ. ಅಲ್ಲಿಯೂ ಇದೇ ರೀತಿ ಮನೆಯೊಂದಕ್ಕೆ ನುಗ್ಗಿ 2 ಕೋಟಿ ರೂ.ಗಳಷ್ಟು ಮೌಲ್ಯದ ಸೊತ್ತನ್ನು ಗ್ಯಾಂಗ್‌ ದೋಚಿತ್ತು. ಅದೇ ಗುಂಪು ಈ ಕೃತ್ಯ ನಡೆಸಿದೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಕೊಡಿಗೆಹಳ್ಳಿ ಪೊಲೀಸರು ಭೇಟಿ ನೀಡಿದ್ದು ಪರಿಶೀಲಿಸಿದ್ದಾರೆ. ಈ ಹಿಂದಿನ ಪ್ರಕರಣವೂ ಕೊಡಿಗೇಹಳ್ಳಿ ಠಾಣೆಯಲ್ಲಿ ದಾಖಲಾಗಿತ್ತು.

ಸಹಕಾರ ನಗರದಲ್ಲಿರುವ ಡಾ. ಉಮಾಶಂಕರ್ ಎಂಬವರ ಮನೆಯಲ್ಲಿ ದರೋಡೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲ ಎಂದುಕೊಂಡು ಮೂರು ಜನ ಮುಸುಕುಧಾರಿಗಳ ಗುಂಪು ಎಂಟ್ರಿಯಾಗಿತ್ತು. ಅದಾಗಲೇ ಮನೆಯೊಳಗೆ ಹುಡುಕಾಡಿ ಗಂಟುಮೂಟೆ ಕಟ್ಟಿಕೊಂಡು ದರೋಡೆಕೋರರು ಹೊರಟಿದ್ದು, ಆ ಸಂದರ್ಭದಲ್ಲಿ ಮನೆ ಮಾಲೀಕ ಉಮಾಶಂಕರ್‌ ಬಂದಿದ್ದಾರೆ. ಆ ಸಮಯದಲ್ಲಿ ಮಾಲೀಕರಿಗೆ ಪಿಸ್ತೂಲ್ ತೋರಿಸಿ (gun point) ಹೆದರಿಸಿ ಗುಂಪು ಪರಾರಿಯಾಗಿದೆ. 40 ಲಕ್ಷ ರೂ. ಸ್ವತ್ತನ್ನು ತನ್ನೊಂದಿಗೆ ಕೊಂಡೊಯ್ದಿದೆ.

ನಿನ್ನೆ ರಾತ್ರಿ ಸರಿಯಾಗಿ 8ರಿಂದ 8:10ರ ಒಳಗೆ ದರೋಡೆ ನಡೆದಿದೆ. ದಿನಸಿ ತರಲೆಂದು ಉಮಾಶಂಕರ್‌ ಅಂಗಡಿಗೆ ಹೋಗಿದ್ದರು. ಅಂಗಡಿ ಹತ್ತಿರವೇ ಇರುವುದರಿಂದ ಮನೆ ಗೇಟ್‌ಗೆ ಬೀಗ ಹಾಕದೆ ಹೋಗಿದ್ದರು. ಈ ವೇಳೆ ಆರೋಪಿಗಳು ಏಕಾಏಕಿ ಮನೆಗೆ ನುಗ್ಗಿದ್ದರು. ಮನೆಯೊಳಗಿರುವ ಬೀರುಗಳನ್ನು ಒಡೆದುಹಾಕಿ ಬ್ಯಾಗಿನಲ್ಲಿ ಹಣ ತುಂಬಿಕೊಳ್ಳುತ್ತಿದ್ದಾಗ ಮನೆಗೆ ಮರಳಿದ ಉಮಾಶಂಕರ್ ಇದನ್ನು ನೋಡಿ ಶಾಕ್ ಆಗಿದ್ದಾರೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಹಿಂದಿನ ದರೋಡೆಯನ್ನು ಉತ್ತರಪ್ರದೇಶ ಮೂಲದ ಕಳ್ಳರ ಗ್ಯಾಂಗ್ ನಡೆಸಿರಬಹುದೆಂದು ಶಂಕಿಸಲಾಗಿತ್ತು. ಕಳೆದ ತಿಂಗಳು ದರೋಡೆಗೆ ಬಳಸಿದ ವರ್ನಾ ಕಾರಿನಲ್ಲೇ ನಿನ್ನೆ ರಾತ್ರಿ ಕೂಡ ಗುಂಪು ಬಂದು ದರೋಡೆ ನಡೆಸಿದೆ ಎನ್ನಲಾಗಿದೆ. ಈ ಬಗ್ಗೆ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ದರೋಡೆ ಪರಿಚಯಸ್ಥರಿಂದಲೇ ನಡೆದಿರುವ ಶಂಕೆ ಮೂಡಿದೆ. ದರೋಡೆಕೋರರು ಪ್ರೀ ಪ್ಲಾನ್ ಮಾಡಿಕೊಂಡು ಹಲವು ದಿನಗಳಿಂದ ಮನೆಯನ್ನು ಅಬ್ಸರ್ವ್ ಮಾಡಿದ ಶಂಕೆಯಿದೆ. ಮನೇಲಿ ಯರ್ಯಾರಿದಾರೆ, ಎಷ್ಟೊತ್ತಿಗೆ ಹೊರಗಡೆ ಹೋಗ್ತಾರೆ, ಯಾವ ಟೈಮಲ್ಲಿ ಹಣ ಕದಿಯಬಹುದು ಎಂದು ಪ್ಲಾನ್ ಮಾಡಿಕೊಂಡಿದ್ದಾರೆ. ಮಾಸ್ಕ್ ಹಾಕೊಂಡು ಪಿಸ್ತೂಲ್ ಸಮೇತ ಬಂದಿದ್ದಾರೆ.

ಮನೆ ಮಾಲೀಕರ ಹಣದ ವ್ಯವಹಾರ, ಇತ್ತೀಚೆಗೆ ಯಾವುದಾದರೂ ವ್ಯವಹಾರದಲ್ಲಿ ಜಗಳ ಆಗಿತ್ತಾ, ಹಣ ಎಲ್ಲಿಂದ ತರಲಾಗಿತ್ತು, ಯಾರ ಮೇಲಾದರೂ ಅನುಮಾನ ಇದೆಯಾ ಎಂಬ ಮಾಹಿತಿ ಕಲೆ ಹಾಕಲಾಗುತ್ತಿದೆ. ಸಹಕಾರನಗರದಲ್ಲಿ ಪದೇ ಪದೆ ಇದೇ ರೀತಿಯ ದರೋಡೆ ಪ್ರಕರಣಗಳು ನಡೆಯುತ್ತಿದ್ದು, ಒಂದೇ ಗ್ಯಾಂಗ್‌ನ ಕೈವಾಡ ಇರಬಹುದಾ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಕರಗ ಮಹೋತ್ಸವದ ವೇಳೆ ಹಲ್ಲೆ, ಯುವಕ ಸಾವು

ಬೆಂಗಳೂರು: ನಿನ್ನೆ ನಡೆದ ಬೆಂಗಳೂರಿನ ಐತಿಹಾಸಿಕ ಕರಗ (Bengaluru karaga) ಮೆರವಣಿಗೆಯ ಸಂದರ್ಭದಲ್ಲಿಯೇ ಯುವಕನೊಬ್ಬನ ಕೊಲೆ (Murder Case) ಆಗಿದೆ. ಮೆರವಣಿಗೆ ವೇಳೆ ಯುವಕರ ನಡುವೆ ಸೃಷ್ಟಿಯಾದ ಗಲಾಟೆ, ಕೊಲೆಯಲ್ಲಿ ಅಂತ್ಯವಾಗಿದೆ.

ವಿವಿ ಗಿರಿ ಕಾಲೋನಿಯ ಯುವಕ ಡಿ.ಸಾರದಿ, ಕೊಲೆಯಾದ ಯುವಕ. ಏಪ್ರಿಲ್‌ 24ರ ಬೆಳಿಗ್ಗೆ 3.30ರ ಸುಮಾರಿಗೆ ಅಣ್ಣಮ್ಮ ದೇಗುಲದ ಮುಂದೆಯೇ ಈ ಘಟನೆ ನಡೆದಿದೆ. ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಒಬ್ಬ ವ್ಯಕ್ತಿ ಸಾರದಿ ಮತ್ತು ಸ್ನೇಹಿತರನ್ನು ಟಚ್ ಮಾಡಿದ್ದಾನೆ. ಟಚ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಮೂರ್ನಾಲ್ಕು ಹುಡುಗರಿಂದ ಹಲ್ಲೆ ನಡೆದಿದೆ.

ಈ ವೇಳೆ ಸಾರದಿ ಮೇಲೆ ಮಾರಣಾಂತಿಕವಾಗಿ ಹಲ್ಲೆಯಾಗಿದೆ. ತಕ್ಷಣವೇ ಸಾರದಿಯನ್ನು ಮಲ್ಲೇಶ್ವರಂ ಕೆ.ಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಚಿಕಿತ್ಸೆ ಫಲಿಸದೆ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾರದಿ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಇದ್ದರೂ ಜತೆಗೆ, ಸತ್ತರೂ ಜತೆಗೆ; ಅಪಘಾತದಲ್ಲಿ ಪತ್ನಿ ಸಾವು, ನೊಂದ ಪತಿ ನೇಣಿಗೆ ಶರಣು

Continue Reading

ಕ್ರೈಂ

Election Officer Raid: ನಟಿ ಅಮೂಲ್ಯ ಮಾವ, ಬಿಜೆಪಿ ಮುಖಂಡನ ಮನೆ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ

ಚುನಾವಣಾ ಅಧಿಕಾರಿಗಳು, ಅಬಕಾರಿ ಪೊಲೀಸ್, ವಾಣಿಜ್ಯ ತೆರಿಗೆ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದಾರೆ ಎಂದು ಗೊತ್ತಾಗಿದೆ. ದಾಳಿ ವೇಳೆ ಯಾವುದೇ ಅಕ್ರಮ ಹಣವಾಗಲಿ, ಅಕ್ರಮ ಲಿಕ್ಕರ್ ಆಗಲಿ, ಅಕ್ರಮ ಚಿನ್ನಾಭರಣವಾಗಲೀ ಪತ್ತೆಯಾಗಿಲ್ಲ.

VISTARANEWS.COM


on

actress amulya father in law election officers ride
Koo

ಬೆಂಗಳೂರು: ನಟಿ ಅಮೂಲ್ಯ (Actress Amulya) ಅವರ ಮಾವ, ಮಾಜಿ ಕಾರ್ಪೊರೇಟರ್‌ (corporater) ಹಾಗೂ ಬಿಜೆಪಿ ಮುಖಂಡ (BJP leader) ಆಗಿರುವ ರಾಮಚಂದ್ರ ಅವರ ಮನೆ ಮೇಲೆ ಚುನಾವಣಾ ಅಧಿಕಾರಿಗಳು ನಿನ್ನೆ ತಡರಾತ್ರಿ ದಾಳಿ (Election Officer Raid) ನಡೆಸಿದ್ದಾರೆ. ಆರ್.ಆರ್ ನಗರದಲ್ಲಿರುವ ಅವರ ನಿವಾಸದ ಮೇಲೆ ರಾತ್ರಿ ‌10 ಗಂಟೆ ಸುಮಾರಿಗೆ ದಾಳಿ ನಡೆದಿದ್ದು, ಮುಂಜಾನೆಯವರೆಗೂ ಪರಿಶೀಲನೆ ನಡೆಯಿತು.

10 ವಾಹನಗಳಲ್ಲಿ ಬಂದಿರುವ ಸುಮಾರು 30ಕ್ಕೂ ಹೆಚ್ಚು ಅಧಿಕಾರಿಗಳಿಂದ ಪರಿಶೀಲನೆ ನಡೆಯಿತು. ರಾಮಚಂದ್ರ ಅವರು ನಟಿ ಅಮೂಲ್ಯ ಅವರ ಮಾವನಾಗಿದ್ದು, ಸದ್ಯ ರಾಮಚಂದ್ರ, ನಟಿ ಅಮೂಲ್ಯ ಮತ್ತು ಅವರ ಪತಿ ಜಗದೀಶ್ ಮನೆಯಲ್ಲೇ ಇದ್ದಾರೆ.

ನಿರಂತರ ಪರಿಶೀಲನೆಯ ನಂತರ ಮನೆ ಕೆಲಸದವರನ್ನು ಒಬ್ಬೊಬ್ಬರನ್ನಾಗಿ ಮನೆ ಒಳಗಿನಿಂದ ಹೊರ ಬಿಡಲಾಯಿತು. ಸತತ 4 ಗಂಟೆಗಳ ಕಾಲ‌ ಶೋಧ‌ ಕಾರ್ಯ ನಡೆದ ಬಳಿಕ ಚುನಾವಣಾ ಅಧಿಕಾರಿಗಳ‌ ದಾಳಿ ಅಂತ್ಯ‌ವಾಗಿದ್ದು, ಕೆಲವು ದಾಖಲೆಗಳನ್ನು ಪಡೆದು ಅಧಿಕಾರಿಗಳು ತೆರಳಿದ್ದಾರೆ.

ಚುನಾವಣಾ ಅಧಿಕಾರಿಗಳು, ಅಬಕಾರಿ ಪೊಲೀಸ್, ವಾಣಿಜ್ಯ ತೆರಿಗೆ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದಾರೆ ಎಂದು ಗೊತ್ತಾಗಿದೆ. ದಾಳಿ ವೇಳೆ ಯಾವುದೇ ಅಕ್ರಮ ಹಣವಾಗಲಿ, ಅಕ್ರಮ ಲಿಕ್ಕರ್ ಆಗಲಿ, ಅಕ್ರಮ ಚಿನ್ನಾಭರಣವಾಗಲೀ ಪತ್ತೆಯಾಗಿಲ್ಲ.

ದಾಳಿ ಮಾಹಿತಿ ತಿಳಿದು ಬಿಜೆಪಿ ಕಾರ್ಯಕರ್ತರು ಮನೆ ಬಳಿ ಜಮಾಯಿಸಿದ್ದರು. ದಾಳಿ‌ ಮುಗಿಸಿ ಹೊರಟ ಅಧಿಕಾರಿಗಳಿಗೆ “ಚೊಂಬು ಸಿಗ್ತಾ, ಚೊಂಬು- ಡಿಕೆ ಚೊಂಬು” ಎಂದು ಬಿಜೆಪಿ ಕಾರ್ಯಕರ್ತರು ವ್ಯಂಗ್ಯ ಮಾಡಿದರು. ಮನೆ ಮುಂದೆ ಜಮಾಯಿಸಿದ್ದ ಕಾರ್ಯಕರ್ತರು ಕಾಂಗ್ರೆಸ್‌ಗೆ ಧಿಕ್ಕಾರ ಕೂಗಿ‌ ಅಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್‌ನಿಂದ ಅಧಿಕಾರ ದುರುಪಯೋಗ

ಕಾಂಗ್ರೆಸ್‌ನವರು ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಮನೆ ಮೇಲೆ ದಾಳಿ ಮಾಡಿಸಿದ್ದಾರೆ” ಎಂದು ಬಿಜೆಪಿ ಮುಖಂಡ‌ ರಾಮಚಂದ್ರ ಈ ಕುರಿತು ಹೇಳಿಕೆ ನೀಡಿದ್ದಾರೆ. “ಕಾಂಗ್ರೆಸ್‌ನವರು ಈ ಭಾಗದಲ್ಲಿ ಇಂದು ಹಣ ಹಂಚಿಕೆ‌ ಮಾಡ್ತಿದ್ರು. ಅದಕ್ಕೆ ನಾವು ಅಡ್ಡಿ ಪಡಿಸುತ್ತೇವೆ ಅಂತ ನಮ್ಮ ಮನೆ ಮೇಲೆ‌ ದಾಳಿ ಮಾಡಿದ್ದಾರೆ. ದಾಳಿ ವೇಳೆ ಆರ್‌ಓಗೆ ಪದೇ ಪದೆ ಪೋನ್ ಬರ್ತಾನೆ ಇತ್ತು. ಅವ್ರನ್ನು ಎರಡು ದಿನಕ್ಕಾದ್ರು ಒಳಕ್ಕೆ ‌ಹಾಕಿಸಿ ಅಂತ ಫೋನ್‌ನಲ್ಲಿ ಹೇಳ್ತಿದ್ರು” ಎಂದು ರಾಮಚಂದ್ರ ಹೇಳಿದ್ದಾರೆ.

“ಏನೋ‌ ದೊಡ್ಡದಾಗಿ‌ ಸಿಗುತ್ತೆ, ಕೂಲ್ ಆಗುತ್ತೆ ಅಂತ ಬಂದ್ರು, ಹಾಟ್ ಆಗಿ ಹೋದ್ರು. ಮೊಮ್ಮಕ್ಕಳ ಹುಟ್ಟುಹಬ್ಬಕ್ಕಾಗಿ ಲಿಕ್ಕರ್ ತರಿಸಿದ್ದೆ. ‌‌ಚುನಾವಣೆ ಸಮಯದಲ್ಲಿ ದೊಡ್ಡ ಮಟ್ಟದಲ್ಲಿ ಹುಟ್ಟುಹಬ್ಬ ಮಾಡಬಾರದು ಅಂತಾ ಸುಮ್ನೇ ಇದ್ದೆವು. ಅದನ್ನು ವಶಕ್ಕೆ ಪಡೆದಿದ್ದಾರೆ. ಏನು ವಶಕ್ಕೆ ಪಡೆದಿದ್ದೇವೆ ಅಂತ ಒಂದು ಸಹಿ ಪಡೆದಿದ್ದಾರೆ” ಎಂದಿದ್ದಾರೆ. “ಈ ಭಾಗದಲ್ಲಿ ಬಿಜೆಪಿಗೆ ಲೀಡ್ ಬರುತ್ತೆ. ಕಳೆದ ಬಾರಿ 18 ಸಾವಿರ ಲೀಡ್ ಬಂದಿತ್ತು. ಅದನ್ನು ಸಹಿಸಲಾಗದೆ ಅಧಿಕಾರ ಮಿಸ್‌ಯೂಸ್ ಮಾಡಿದ್ದಾರೆ” ಎಂದು ರಾಮಚಂದ್ರ ಆರೋಪಿಸಿದರು.

ಇದನ್ನೂ ಓದಿ: Lok Sabha Election: ಕರ್ನಾಟಕ ಸೇರಿ 13 ರಾಜ್ಯದಲ್ಲಿ ನಾಳೆ 2ನೇ ಹಂತದ ಮತದಾನ; ಪಿನ್‌ ಟು ಪಿನ್‌ ಮಾಹಿತಿ ಇಲ್ಲಿದೆ

Continue Reading

ಕರ್ನಾಟಕ

Lok Sabha Election: ಕರ್ನಾಟಕ ಸೇರಿ 13 ರಾಜ್ಯದಲ್ಲಿ ನಾಳೆ 2ನೇ ಹಂತದ ಮತದಾನ; ಪಿನ್‌ ಟು ಪಿನ್‌ ಮಾಹಿತಿ ಇಲ್ಲಿದೆ

Lok Sabha Election: ಕರ್ನಾಟಕವೂ ಒಳಗೊಂಡಂತೆ ದೇಶದ 13 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ. ಶಾಂತಿಯುತ ಹಾಗೂ ಪಾರದರ್ಶಕ ಮತದಾನಕ್ಕಾಗಿ ಚುನಾವಣೆ ಆಯೋಗವು ಸಕಲ ಸಿದ್ಧತೆ ಮಾಡಿಕೊಂಡಿದೆ. ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲು ಚುನಾವಣೆ ಆಯೋಗ ತೀರ್ಮಾನಿಸಿದೆ.

VISTARANEWS.COM


on

Lok Sabha Election
Koo

ಬೆಂಗಳೂರು/ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ಎರಡನೇ ಹಂತದ ಮತದಾನಕ್ಕೆ ಕರ್ನಾಟಕ, ಕೇರಳ ಸೇರಿ ದೇಶದ 13 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸಜ್ಜಾಗಿವೆ. ಕರ್ನಾಟಕದ (Karnataka) 14 ಲೋಕಸಭೆ ಕ್ಷೇತ್ರಗಳು ಸೇರಿ ಎರಡನೇ ಹಂತದಲ್ಲಿ ಶುಕ್ರವಾರ (ಏಪ್ರಿಲ್‌ 26) ಒಟ್ಟು 88 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಇದಕ್ಕಾಗಿ ಚುನಾವಣೆ ಆಯೋಗವು (Election Commission) ಸಕಲ ಸಿದ್ಧತೆ ಮಾಡಿಕೊಂಡಿದೆ. ಮತಗಟ್ಟೆಗಳಲ್ಲಿ ಸಕಲ ಸೌಕರ್ಯ, ಸಿಬ್ಬಂದಿಗೆ ವಾಹನದ ವ್ಯವಸ್ಥೆ, ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿ ನಿಯೋಜನೆ ಸೇರಿ ಎರಡನೇ ಹಂತದ ಮತದಾನಕ್ಕೆ (2nd Phase Voting) ಸಕಲ ರೀತಿಯ ವ್ಯವಸ್ಥೆ ಮಾಡಿಕೊಂಡಿದೆ.

ಕರ್ನಾಟಕದ 14 ಕ್ಷೇತ್ರಗಳಲ್ಲಿ ವೋಟಿಂಗ್‌

ಕೋಲಾರ, ಮಂಡ್ಯ, ಉಡುಪಿ-ಚಿಕ್ಕಮಗಳೂರು, ಹಾಸನ, ಮೈಸೂರು, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರ ಕೇಂದ್ರ, ಬೆಂಗಳೂರು ಉತ್ತರ, ದಕ್ಷಿಣ ಕನ್ನಡ, ಚಾಮರಾಜನಗರ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಮತಗಟ್ಟೆಗಳಲ್ಲಿ ಹೆಚ್ಚಿನ ಜನರ ಸರತಿ ಸಾಲು ಇದ್ದರೆ ಮತದಾನದ ಸಮಯವನ್ನು ಒಂದು ಗಂಟೆವರೆಗೆ ವಿಸ್ತರಣೆ ಮಾಡಲಾಗುತ್ತದೆ.

ಯಾವ ರಾಜ್ಯದ ಎಷ್ಟು ಕ್ಷೇತ್ರಗಳಲ್ಲಿ ಮತದಾನ?

ಕೇರಳದ ಎಲ್ಲ 20, ಕರ್ನಾಟಕ 14, ರಾಜಸ್ಥಾನ 13, ಉತ್ತರ ಪ್ರದೇಶ ಹಾಗೂ ಮಹಾರಾಷ್ಟ್ರದ ತಲಾ 8, ಮಧ್ಯಪ್ರದೇಶ 6, ಬಿಹಾರ ಹಾಗೂ ಅಸ್ಸಾಂನ ತಲಾ 5, ಛತ್ತೀಸ್‌ಗಢ ಹಾಗೂ ಪಶ್ಚಿಮ ಬಂಗಾಳದ ತಲಾ 3, ತ್ರಿಪುರ, ಜಮ್ಮು-ಕಾಶ್ಮೀರ ಹಾಗೂ ಮಣಿಪುರದ ತಲಾ 1 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಒಟ್ಟು 7 ಹಂತಗಳಲ್ಲಿ ನಡೆಯುವ ಚುನಾವಣೆಯು ಜೂನ್‌ 1ರಂದು ಮುಕ್ತಾಯವಾಗಲಿದೆ. ಜೂನ್‌ 4ರಂದು ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.

ಕಣದಲ್ಲಿರುವ ಪ್ರಮುಖರು

ಕೇರಳದಲ್ಲಿ ರಾಹುಲ್‌ ಗಾಂಧಿ, ಕೆ.ಸಿ. ವೇಣುಗೋಪಾಲ್‌, ಶಶಿ ತರೂರ್‌, ರಾಜೀವ್‌ ಚಂದ್ರಶೇಖರ್‌, ರಾಜಸ್ಥಾನದಲ್ಲಿ ಓಂ ಬಿರ್ಲಾ, ಗಜೇಂದ್ರ ಸಿಂಗ್‌ ಶೇಖಾವತ್‌, ಉತ್ತರ ಪ್ರದೇಶದಲ್ಲಿ ಹೇಮಾ ಮಾಲಿನಿ, ಡ್ಯಾನಿಶ್‌ ಅಲಿ, ಮಧ್ಯಪ್ರದೇಶದಲ್ಲಿ ವಿಜೇಂದ್ರ ಕುಮಾರ್‌ ಖಾತಿಕ್‌, ಸಿದ್ಧಾರ್ಥ್‌ ಸುಖಲಾಲ್‌ ಕುಶ್ವಾಹ ಕಣದಲ್ಲಿರುವ ಪ್ರಮುಖರಾಗಿದ್ದಾರೆ. ಹಾಗೆಯೇ, ಪ್ರಕಾಶ್‌ ಅಂಬೇಡ್ಕರ್‌ (ವಿಬಿಎ ಪಕ್ಷ), ನವನೀತ್‌ ಕೌರ್‌ ರಾಣಾ, ಪಪ್ಪು ಯಾದವ್‌ ಸೇರಿ ಇತರ ಗಣ್ಯರು ಚುನಾವಣೆಯಲ್ಲಿ ಸ್ಪರ್ಧೆಗೆ ಇಳಿದಿದ್ದಾರೆ.

2019ರ ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 88 ಕ್ಷೇತ್ರಗಳ ಪೈಕಿ 61 (ಬಿಜೆಪಿ 52, ಶಿವಸೇನೆ 4, ಜೆಡಿಯು 4, ಸ್ವತಂತ್ರ 1) ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಇನ್ನು ಕಾಂಗ್ರೆಸ್‌ ನೇತೃತ್ವದ ಯುಪಿಎ 24 (ಕಾಂಗ್ರೆಸ್‌ 18, ಐಯುಎಂಎಲ್‌ 2, ಜೆಡಿಎಸ್‌ 1, ಕೇರಳ ಕಾಂಗ್ರೆಸ್‌ ಮಣಿ 1, ಆರ್‌ಎಸ್‌ಪಿ 1, ಸ್ವತಂತ್ರ 1) ಸ್ಥಾನಗಳನ್ನು ತನ್ನದಾಗಿಸಿಕೊಂಡಿತ್ತು.

ಇದನ್ನೂ ಓದಿ: PM Narendra Modi: ಪ್ರಧಾನಿ ಮೋದಿಗೆ ‘ಪ್ರಾಮಿಸ್ಡ್ ನೇಷನ್’ ಪುಸ್ತಕ ಅರ್ಪಣೆ

Continue Reading

ಶ್ರದ್ಧಾಂಜಲಿ

Subramanya Dhareshwar: ಜೇನುದನಿಯ ಗಾನಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಭಾಗವತರ ಅಂತ್ಯಕ್ರಿಯೆ ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ. ಸುಮಾರು 46 ವರ್ಷಗಳ ಕಾಲ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಅವರು, ಪತ್ನಿ, ಪುತ್ರ ಹವ್ಯಾಸಿ ಕಲಾವಿದ ಕಾರ್ತಿಕ್ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

VISTARANEWS.COM


on

Subramanya Dhareshwar
Koo

ಉಡುಪಿ: ʼಗಾನಕೋಗಿಲೆʼ ಎಂದೇ ಅಭಿಮಾನಿಗಳ ಮನದಲ್ಲಿ ನೆಲೆಯೂರಿರುವ, ಯಕ್ಷಗಾನದ (Yakshagana) ಬಡಗುತಿಟ್ಟಿನ ಶ್ರೇಷ್ಠ ಭಾಗವತ (Bhagavatha) ಸುಬ್ರಹ್ಮಣ್ಯ ಧಾರೇಶ್ವರ (Subramanya Dhareshwar) ಇನ್ನಿಲ್ಲ. ಅವರು ತಮ್ಮ 67ನೇ ವಯಸ್ಸಿನಲ್ಲಿ ಬೆಂಗಳೂರಿನ ಮನೆಯಲ್ಲಿ ಏ.25ರಂದು ಬೆಳಗ್ಗೆ ನಿಧನ ಹೊಂದಿದರು.

ಭಾಗವತರ ಅಂತ್ಯಕ್ರಿಯೆ ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ. ಸುಮಾರು 46 ವರ್ಷಗಳ ಕಾಲ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಅವರು, ಪತ್ನಿ, ಪುತ್ರ ಹವ್ಯಾಸಿ ಕಲಾವಿದ ಕಾರ್ತಿಕ್ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

1957ರ ಸೆ.5ರಂದು ಜನಿಸಿದ ಅವರನ್ನು ಯಕ್ಷರಂಗದ ತಜ್ಞ ಭಾಗವತರೆಂದೇ ಗುರುತಿಸಲಾಗುತ್ತಿತ್ತು. ಯಕ್ಷಗಾನದ ಹೊಸ ಹಾಗೂ ಹಳೆಯ ಪ್ರಸಂಗಗಳ ಪರಿಣಿತರಾಗಿದ್ದರು. ಕೋಟ ಅಮೃತೇಶ್ವರಿ ಮೇಳ, ಪೆರ್ಡೂರು ಮೇಳಗಳಲ್ಲಿ ಭಾಗವತರಾಗಿ, ಹೊಸರಾಗಗಳನ್ನು ಹೊಸ ತಾಂತ್ರಿಕತೆಯನ್ನು ಯಕ್ಷರಂಗದಲ್ಲಿ ಯಶಸ್ವಿಯಾಗಿ ಬಳಸಿದರು. ಸುಮಾರು 400ಕ್ಕಿಂತಲೂ ಅಧಿಕ ಯಕ್ಷಗಾನದ ಆಡಿಯೋ ಕ್ಯಾಸೆಟ್ ಗಳಲ್ಲಿ ಧಾರೇಶ್ವರರ ಧ್ವನಿ ಇದೆ.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಹಿತ ಹಲವಾರು ಪ್ರಶಸ್ತಿ, ಸನ್ಮಾನಗಳಿಗೆ ಪಾತ್ರರಾಗಿರುವ ಧಾರೇಶ್ವರ ಅವರು ಗುರುಗಳಾದ ನಾರಾಯಣಪ್ಪ ಉಪ್ಪೂರರನ್ನು ಸದಾ ಸ್ಮರಿಸುತ್ತಿದ್ದರು. ಸಾಂಪ್ರದಾಯಿಕ ರಾಗಗಳೊಂದಿಗೆ ಹೊಸ ರಾಗಗಳನ್ನು ತಂದು ಪೌರಾಣಿಕ ಹಾಗೂ ಸಾಮಾಜಿಕ ಪ್ರಸಂಗಗಳನ್ನು ಚೆನ್ನಾಗಿ ನಿರ್ವಹಿಸುತ್ತಿದ್ದ ಸುಬ್ರಹ್ಮಣ್ಯ ಧಾರೇಶ್ವರರು, ಕಾಳಿಂಗ ನಾವಡರರ ನಂತರ ಯಕ್ಷಗಾನ ರಂಗದಲ್ಲಿ ತನ್ನ ಇಂಪಾದ ಕಂಠದಿಂದ ಜನಪ್ರಿಯರಾದವರು.

ಮೂಲತಃ ಎಲೆಕ್ಟ್ರಿಕಲ್ ಅಂಗಡಿ ಮಾಡಿಕೊಂಡಿದ್ದ ಸುಬ್ರಹ್ಮಣ್ಯ ಧಾರೇಶ್ವರ ಕೋಟದಲ್ಲಿ ಯಕ್ಷಗಾನ ಕೇಂದ್ರಕ್ಕೆ ಸೇರಿ ಅಲ್ಲಿ ಭಾಗವತಿಕೆಯ ಮಟ್ಟುಗಳನ್ನು ಕಲಿತರು. ಉಪ್ಪೂರರಿಂದ ಭಾಗವತಿಕೆಯ ಎಲ್ಲ ಪಟ್ಟುಗಳನ್ನು ಕಲಿತರು. ಆರಂಭದಲ್ಲಿ ಎಲೆಕ್ಟ್ರಿಶಿಯನ್ ಆಗಿ ಅಮೃತೇಶ್ವರಿ ಮೇಳಕ್ಕೆ ಸೇರಿದರು. ಈ ಸಂದರ್ಭ ಗುರುಗಳಾದ ಉಪ್ಪೂರರ ಒತ್ತಾಸೆಯಿಂದ ಭಾಗವತಿಕೆ ಮಾಡಲು ಆರಂಭಿಸಿದರು. ಪೀಠಿಕೆ ಸ್ತ್ರೀವೇಷದವರೆಗೆ ಪದ್ಯ ಹೇಳಿ, ಎಲೆಕ್ಟ್ರಿಶಿಯನ್ ಆಗಿ, ಹಗಲು ಮೈಕ್ ಜಾಹೀರಾತು ನೀಡುವ ಕೆಲಸವನ್ನು ಮಾಡುತ್ತಿದ್ದ ಧಾರೇಶ್ವರರು, ಬಳಿಕ ಭಾಗವತಿಕೆಯಲ್ಲೇ ತೊಡಗಿಸಿಕೊಂಡು ಜನಪ್ರಿಯರಾದರು. ಪೆರ್ಡೂರು ಮೇಳದಲ್ಲಿ ಸುಮಾರು 26ಕ್ಕೂ ಅಧಿಕ ವರ್ಷಗಳ ತಿರುಗಾಟ ಸಹಿತ ಧಾರೇಶ್ವರ ಚಾರಿಟೇಬಲ್ ಟ್ರಸ್ಟ್ ಮೂಲಕ ಯಕ್ಷಗಾನ ಸೇವೆ ಮಾಡಿದ್ದಾರೆ.

ಸುಮಾರು 300ಕ್ಕೂ ಅಧಿಕ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಪ್ರಸಂಗಗಳನ್ನು ನಿರ್ದೇಶಿಸಿದ ಕೀರ್ತಿ ಧಾರೇಶ್ವರ ಅವರಿಗಿದೆ. ಪುರಂದರದಾಸ, ಕನಕದಾಸ, ಬಸವಣ್ಣ, ಚೆನ್ನಮಲ್ಲಿಕಾರ್ಜುನರ ಕೀರ್ತನೆಗಳನ್ನೂ ಅವರು ಹಾಡಿದ್ದಾರೆ. ಕುವೆಂಪು, ಬೇಂದ್ರೆಯವರ ಹಾಡುಗಳೂ ಯಕ್ಷಗಾನದ ಹಾಡುಗಳಾಗಿದ್ದು ಧಾರೇಶ್ವರರ ಕಂಠದಲ್ಲಿ. ಅಮೃತ ವರ್ಷಿಣಿ, ಸಿಂಧೂರ ಭಾಗ್ಯ, ರಕ್ತ ತಿಲಕ, ಶೂದ್ರ ತಪಸ್ವಿನಿ, ಚಾರು ಚಂದ್ರಿಕೆ, ಗಗನ ಗಾಮಿನಿ, ವಸಂತ ಸೇನೆ ನಿರ್ದೇಶಿಸಿದ ಎಲ್ಲ ಪ್ರಸಂಗಗಳೂ ಸೂಪರ್ ಹಿಟ್ ಆಗಿವೆ.

ಇದನ್ನೂ ಓದಿ: Hariprakash Konemane: ಯಕ್ಷಗಾನ ಅಕಾಡೆಮಿಯಲ್ಲಿ ಉತ್ತರ ಕನ್ನಡ ಕಡೆಗಣನೆ; ಹರಿಪ್ರಕಾಶ್‌ ಕೋಣೆಮನೆ ಖಂಡನೆ

Continue Reading
Advertisement
Voter ID
Lok Sabha Election 20242 mins ago

Voter ID: ವೋಟರ್‌ ಐಡಿ ಕಾರ್ಡ್‌ ಸಿಕ್ಕಿಲ್ಲವೆ? ಡೋಂಟ್‌ ವರಿ. ಈ 12 ದಾಖಲೆಗಳಲ್ಲಿ ಒಂದಿದ್ದರೆ ಸಾಕು!

sahakara nagar robbery case
ಕ್ರೈಂ5 mins ago

Robbery Case: ಮನೆ ಮಾಲೀಕರಿಗೆ ಪಿಸ್ತೂಲ್ ತೋರಿಸಿ 40 ಲಕ್ಷ ರೂ. ದರೋಡೆ

Kiara Advani Joins Salaar 2
ಟಾಲಿವುಡ್14 mins ago

Kiara Advani: ಪ್ರಭಾಸ್ ನಟನೆಯ ʻಸಲಾರ್ 2ʼ ಸಿನಿಮಾದಲ್ಲಿ ಕಿಯಾರಾ ಆಡ್ವಾಣಿ?

IPL 2024
ಕ್ರೀಡೆ30 mins ago

IPL 2024: ಧೋನಿ, ಚೆನ್ನೈ ಪಂದ್ಯ ನೋಡಲು ದೆಹಲಿ ವರೆಗೂ ನಡೆದುಕೊಂಡು ಹೋಗುವೆ ಎಂದ ಶತಾಯುಷಿ ಅಭಿಮಾನಿ; ವಿಡಿಯೊ ವೈರಲ್​

Break Up
ದೇಶ39 mins ago

ಇದ್ದರೂ ಜತೆಗೆ, ಸತ್ತರೂ ಜತೆಗೆ; ಅಪಘಾತದಲ್ಲಿ ಪತ್ನಿ ಸಾವು, ನೊಂದ ಪತಿ ನೇಣಿಗೆ ಶರಣು

IPL 2024
ಕ್ರೀಡೆ1 hour ago

IPL 2024: ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆಯಲು ಸಜ್ಜಾದ ಆರ್​ಸಿಬಿ

Pakistan Teen
ದೇಶ1 hour ago

ಪಾಕಿಸ್ತಾನದ ಯುವತಿಯ ಪ್ರಾಣ ಉಳಿಸಿತು ಭಾರತದ ಹೃದಯ; ‘ಹಾರ್ಟ್‌’ ಟಚಿಂಗ್ ಸ್ಟೋರಿ ಇದು!

Comedy Khiladigalu Premier League From 27th April On Zee Kannada
ಕಿರುತೆರೆ1 hour ago

Comedy Khiladigalu Premier League: ಹೇಗಿರಲಿದೆ ಹೊಸ ಶೋ ʻಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ʼ?

Pushpa The Rule first single on May 1
ಟಾಲಿವುಡ್1 hour ago

Pushpa The Rule: ಬಿಗ್‌ ಅಪ್‌ಡೇಟ್‌ ಹಂಚಿಕೊಂಡ ʻಪುಷ್ಪ 2ʼ: ಮೇ 1ಕ್ಕೆ ತಂಡದಿಂದ ಗುಡ್‌ ನ್ಯೂಸ್‌!

actress amulya father in law election officers ride
ಕ್ರೈಂ2 hours ago

Election Officer Raid: ನಟಿ ಅಮೂಲ್ಯ ಮಾವ, ಬಿಜೆಪಿ ಮುಖಂಡನ ಮನೆ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ5 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20245 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌