Honorary doctorate : ಮಾಜಿ ಸಿಎಂ ಬಿಎಸ್‌ವೈ ಅವರು ಇನ್ನು ಡಾ. ಬಿ.ಎಸ್‌ ಯಡಿಯೂರಪ್ಪ - Vistara News

ಕರ್ನಾಟಕ

Honorary doctorate : ಮಾಜಿ ಸಿಎಂ ಬಿಎಸ್‌ವೈ ಅವರು ಇನ್ನು ಡಾ. ಬಿ.ಎಸ್‌ ಯಡಿಯೂರಪ್ಪ

Honorary Doctorate : ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಇನ್ನು ಡಾಕ್ಟರ್‌ ಆಗಲಿದ್ದಾರೆ. ಅವರಿಗೆ ಶಿವಮೊಗ್ಗ ಕೃಷಿ ವಿವಿ ಗೌರವ ಡಾಕ್ಟರೇಟ್‌ ಪದವಿ ನೀಡಲು ನಿರ್ಧರಿಸಿದೆ.

VISTARANEWS.COM


on

BS Yediyurappa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಬಿಜೆಪಿಯ ಹಿರಿಯ ನಾಯಕ ಬಿಎಸ್‌ ಯಡಿಯೂರಪ್ಪ (BS Yediyurappa) ಅವರು ಇನ್ನು ಮುಂದೆ ಡಾಕ್ಟರ್‌ ಬಿ.ಎಸ್‌. ಯಡಿಯೂರಪ್ಪ (Dr. BS Yediyurappa) ಆಗಲಿದ್ದಾರೆ. ಶಿವಮೊಗ್ಗದ ಇರುವಕ್ಕಿ ಕೆಳದಿ ಶಿವಪ್ಪ ಕೃಷಿ ಮತ್ತು ತೋಟಗಾರಿಕೆ ವಿಶ್ವ ವಿದ್ಯಾನಿಲಯ ಅವರಿಗೆ ಗೌರವ ಡಾಕ್ಟರೇಟ್‌ (Honorary doctorate) ಪ್ರದಾನ ಮಾಡಲಿದೆ.

ಇರುವಕ್ಕಿ ಕೆಳದಿ ಶಿವಪ್ಪ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ ಆವರಣದಲ್ಲಿ ಶುಕ್ರವಾರ ನಡೆಯಲಿರುವ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಪಾಲ್ಗೊಳ್ಳಲಿದ್ದು, ಈ ಸಮಯದಲ್ಲಿ ಬಿಎಸ್‌ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್‌ ಅನ್ನು ಪ್ರದಾನ ಮಾಡಲಿದ್ದಾರೆ ಎಂದು ವಿಶ್ವವಿದ್ಯಾನಿಲಯದ ಕುಲಪತಿ ಡಾ. ಜಗದೀಶ್‌ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬಿ.ಎಸ್‌. ಯಡಿಯೂರಪ್ಪ ಅವರು ಭಾರತೀಯ ಜನತಾ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಶಕ್ತಿಯಾಗಿ ಬೆಳೆದವರು. ನಗರಪಾಲಿಕೆ ಮಟ್ಟದಿಂದ ಹಂತ ಹಂತವಾಗಿ ಏರುತ್ತಾ ಸಿಎಂ ಪಟ್ಟವನ್ನು ಅಲಂಕರಿಸಿದವರು. ಸುದೀರ್ಘ ರಾಜಕೀಯ ಅನುಭವದೊಂದಿಗೆ ಮುತ್ಸದ್ಧಿಯಾಗಿ ಬೆಳೆದು ನಿಂತಿರುವ ಯಡಿಯೂರಪ್ಪ ಅವರು ಇತ್ತೀಚೆಗೆ ಚುನಾವಣಾ ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದರು. ಅದರೆ, ಸಕ್ರಿಯ ರಾಜಕಾರಣದಲ್ಲಿ ಮುಂದುವರಿದಿದ್ದಾರೆ. ಇದೀಗ ಅವರಿಗೆ ಗೌರವ ಡಾಕ್ಟರೇಟ್‌ ನೀಡಲಾಗುತ್ತಿದೆ.

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿವಿ ಆಯ್ಕೆ ಸಮಿತಿಯು ಗೌರವ ಡಾಕ್ಟರೇಟ್‌ಗೆ ಯಡಿಯೂರಪ್ಪ ಹೆಸರನ್ನು ಆಯ್ಕೆ ಮಾಡಿ ವಿವಿ ಕುಲಾಧಿಪತಿಯೂ ಆಗಿರುವ ರಾಜ್ಯಪಾಲರಿಗೆ ಕಳೆದ ಜುಲೈ 17ರಂದು ರಾಜ್ಯಪಾಲರಿಗೆ ಪತ್ರ ಬರೆದಿತ್ತು. ರಾಜ್ಯಪಾಲರು ಮರುದಿನವೇ ಪತ್ರ ಬರೆದು ಸಮ್ಮತಿ ಸೂಚಿಸಿದ್ದಾರೆ.

ಗೌರವ ಡಾಕ್ಟರೇಟ್‌ ಇದು ಮೊದಲ ಸಲವೇನಲ್ಲ

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಗೌರವ ಡಾಕ್ಟರೇಟ್‌ ಸ್ವೀಕರಿಸುತ್ತಿರುವುದು ಇದು ಎರಡನೇಯ ಬಾರಿ ಈ ಹಿಂದೆ 2008ರಲ್ಲಿ ಅಮೆರಿಕದ ಮಿಷಿಗನ್‌ನ ಸ್ಯಾಗಿನೌ ವ್ಯಾಲಿ ಸ್ಟೇಟ್‌ ಯುನಿವರ್ಸಿಟಿ ಅವರಿಗೆ ಗೌರವ ಡಾಕ್ಟರೇಟ್‌ ನೀಡಿ ಗೌರವಿಸಿತ್ತು.

ಬಿಎಸ್‌ವೈ ಅವರೇ ಪಿಎಚ್‌ಡಿ ಅಧ್ಯಯನ ವಿಷಯ!

ಹೌದು, ಈಗ ಗೌರವ ಡಾಕ್ಟರೇಟ್‌ ಪಡೆದಿರುವ ಬಿ.ಎಸ್‌. ಯಡಿಯೂರಪ್ಪ ಅವರ ಮೇಲೆ ಪಿಎಚ್‌ಡಿ ಅಧ್ಯಯನ ನಡೆದಿದೆ. ಯಡಿಯೂರಪ್ಪನವರ ರಾಜಕೀಯ ಹೋರಾಟ, ಅವರು ಸವೆಸಿರುವ ಕಲ್ಲುಮುಳ್ಳಿನ ಹಾದಿಯ ಕುರಿತು ಶಿವಮೊಗ್ಗದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ರಾಜಕೀಯ ಶಾಸ್ತ್ರದಲ್ಲಿ ಪ್ರೊಫೆಸರ್ ಆಗಿರುವ ಮೂಲತಃ ಶಿಕಾರಿಪುರದ ಪ್ರಸನ್ನ ಕುಮಾರ್ ಅವರು ಪಿಎಚ್‌ಡಿ ಮಾಡಿದ್ದಾರೆ.

ಪ್ರಸನ್ನ ಕುಮಾರ್‌ ಅವರು ‘B S Yeddyurappa”s Political Leadership: A Case Study’ ವಿಷಯಾಧಾರಿತ ಡಾಕ್ಟರೇಟ್ ಥೀಸಿಸ್ ಅನ್ನು ಮೈಸೂರು ವಿವಿಯಲ್ಲಿ ಮಂಡಿಸಿದ್ದಾರೆ. ರಾಜ್ಯದಲ್ಲಿ ಎಚ್ ಡಿ ದೇವೇಗೌಡ, ಜೆಎಚ್ ಪಟೇಲ್, ಎಸ್ ಬಂಗಾರಪ್ಪ ಮತ್ತು ಎಸ್ಎಂ ಕೃಷ್ಣ ಮೊದಲಾದ ರಾಜಕಾರಣಿಗಳ ಬದುಕಿನ ಬಗ್ಗೆ ಪಿಎಚ್‌.ಡಿ ಅಧ್ಯಯನ ನಡೆದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Rain News: ಮಳೆ ಆರ್ಭಟ: ಸಿಡಿಲು ಬಡಿದು ಇಬ್ಬರ ಸಾವು, ಮತ್ತಿಬ್ಬರಿಗೆ ಗಾಯ; ನೆಲಕಚ್ಚಿದ ಬಾಳೆ ತೋಟ

Rain News: ಪ್ರತ್ಯೇಕ ಮಳೆ ಅವಘಡಗಳಲ್ಲಿ ಇಬ್ಬರು ಮೃತಪಟ್ಟು, ಮತ್ತಿಬ್ಬರಿಗೆ ಗಾಯಗಳಾಗಿದ್ದು, ಹಲವೆಡೆ ಬೆಳೆಗಳು ಹಾನಿಯಾಗಿವೆ. ಹಲವೆಡೆ ಧಾರಕಾರವಾಗಿ ಸುರಿದ ಮಳೆಯು ಅವಾಂತರ ಸೃಷ್ಟಿಸಿದೆ.

VISTARANEWS.COM


on

Rain News
Koo

ಬೆಂಗಳೂರು: ರಾಜ್ಯದ ದಕ್ಷಿಣ ಕನ್ನಡ, ಚಾಮರಾಜನಗರ, ಬೆಳಗಾವಿ, ಧಾರವಾಡ ಸೇರಿ ವಿವಿಧೆಡೆ ಶನಿವಾರವೂ ಭಾರಿ ಮಳೆ (Rain News) ಸುರಿಯಿತು. ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಸಿಡಿಲು ಬಡಿದು ಕಾರ್ಮಿಕ ಮೃತಪಟ್ಟು, ಇಬ್ಬರಿಗೆ ಗಾಯಗಳಾಗಿದೆ. ಅದೇ ರೀತಿ ಕೊಪ್ಪಳದಲ್ಲಿ ಸಿಡಿಲಿಗೆ ರೈತ ಬಲಿಯಾಗಿದ್ದು, ಚಾಮರಾಜನಗರ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಗೆ ಬಾಳೆ ತೋಟ ನೆಲಕಚ್ಚಿದೆ. ಇನ್ನು ಹಲವೆಡೆ ಧಾರಕಾರವಾಗಿ ಸುರಿದ ಮಳೆಯು ಅವಾಂತರ ಸೃಷ್ಟಿಸಿದ್ದು, ಇದರಿಂದ ಜನಜೀವನ ಅಸ್ತವ್ಯಸ್ತವಾಗಿದೆ.

ಸಿಡಿಲು ಬಡಿದು ಕಾರ್ಮಿಕ ಸಾವು, ಇಬ್ಬರಿಗೆ ಗಾಯ

ಮಂಗಳೂರು: ಸಿಡಿಲು ಬಡಿದು ಕಾರ್ಮಿಕ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ನಡೆದಿದೆ. ನದಿ ಬದಿಯ ಶೆಡ್‌ನಲ್ಲಿದ್ದ ವೇಳೆ ಅವಘಡ ನಡೆದಿದೆ. ಮರಳು ತೆಗೆಯುವ ಬಿಹಾರ ಮೂಲದ ಕಾರ್ಮಿಕ ಮೃತಪಟ್ಟಿದ್ದು, ಘಟನೆಯಲ್ಲಿ ಮತ್ತಿಬ್ಬರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಡಿಲು ಬಡಿದು ರೈತ ಸ್ಥಳದಲ್ಲೇ ಸಾವು

ಕೊಪ್ಪಳ: ಸಿಡಿಲು ಬಡಿದು ರೈತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಐ ಕುಷ್ಟಗಿ ತಾಲೂಕಿನ ಹಿರೇಮುಕರ್ತಿನಾಳ ಬಳಿ ನಡೆದಿದೆ. ಕನಕರಾಯಪ್ಪ ಕಾಟಾಪುರ (28) ಮೃತ ರೈತ. ತಾವರಗೇರಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Heavy Rain: ಧಾರಾಕಾರ ಮಳೆಯಿಂದ ಮನೆಗೆ ನುಗ್ಗಿದ ನೀರು; ಮರ ಉರುಳಿ ವಾಹನಗಳು ಜಖಂ

ಕುಂದಾನಗರಿಯಲ್ಲಿ ‌ಮನೆ, ಮಳಿಗೆಗಳಿಗೆ ನುಗ್ಗಿದ ನೀರು

ಬೆಳಗಾವಿ: ಕುಂದಾನಗರಿಯಲ್ಲಿ ‌ಧಾರಾಕಾರವಾಗಿ ಸುರಿದ ಮೊದಲ‌‌ ಮಳೆ ಭಾರಿ ಅವಾಂತರ ಸೃಷ್ಟಿ ಮಾಡಿದೆ. ಧಾರಾಕಾರ ಮಳೆಯಿಂದ ರಸ್ತೆಗಳು ನದಿಯಂತಾಗಿದ್ದು, ಹಲವೆಡೆ ಮರಗಳು ಧರೆಗುರಳಿವೆ. ಇನ್ನು ಅನೇಕ ಮನೆ, ಮಳಿಗೆಗಳಿಗೆ ನೀರು ನುಗ್ಗಿದ್ದರಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಬೆಳಗಾವಿ ನಗರದ ಪಾಂಗೋಲ್‌ ಗಲ್ಲಿ, ಬೆಂಡಿ ಬಜಾರ್‌ ಏರಿಯಾದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಚರಂಡಿ ನೀರು‌ ರಸ್ತೆಗೆ ಬಂದು ಸಂಚಾರಕ್ಕೆ ಅಡಚಣೆಯಾಯಿತು. ಒಂದು ಗಂಟೆಗಳ ಕಾಲ ಸುರಿದ ಭಾರೀ ಮಳೆಯಿಂದ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಹಣ್ಣಿನ ಮಾರುಕಟ್ಟೆಗೂ ನೀರು ನುಗ್ಗಿ ವ್ಯಾಪಾರಿಗಳು ತೊಂದರೆ ಅನುಭವಿಸುವಂತಾಯಿತು. ‌

ಚಿಕ್ಕೋಡಿ ತಾಲೂಕಿನ ವಿವಿಧೆಡೆ ಭಾರಿ ಮಳೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಭಾರಿ ಮಳೆ ಸುರಿದಿದೆ. ಭಾರಿ‌ ಮಳೆಯಿಂದ ರಸ್ತೆಗಳ ಮೇಲೆ ದೊಡ್ಡ ಪ್ರಮಾಣದ ನೀರು ಹರಿಯಿತು. ಅಕಾಲಿಕ ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಗಾಳಿ ಮಳೆಗೆ ನೆಲಕಚ್ಚಿದ ಬಾಳೆ ತೋಟ

ಚಾಮರಾಜನಗರ: ಗಾಳಿ ಮಳೆಗೆ ಬಾಳೆ ತೋಟ ನೆಲಕಚ್ಚಿದ ಘಟನೆ ತಾಲೂಕಿನ ಉತ್ತುಹಳ್ಳಿಯಲ್ಲಿ ನಡೆದಿದೆ. ಗ್ರಾಮದ ರವಿ ಎಂಬುವವರ ಬಾಳೆ ತೋಟದಲ್ಲಿ ಸಂಜೆ ಸುರಿದ ಗಾಳಿ ಮಳೆಗೆ ಸುಮಾರು 3 ಸಾವಿರ ಬಾಳೆ ಗಿಡ ನಾಶವಾಗಿವೆ. ಇದರಿಂದ ಸುಮಾರು 6 ತಿಂಗಳ ಶ್ರಮ 6 ನಿಮಿಷದಲ್ಲಿ ನಾಶವಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ತೆಂಗಿನ ಮರಕ್ಕೆ ಬಡಿದ ಸಿಡಿಲು

ಧಾರವಾಡ: ಧಾರಾಕಾರ ಮಳೆ ಹಿನ್ನೆಲೆ ರಸ್ತೆಯಲ್ಲಿ ಮಳೆ ನೀರು ನಿಂತು ವಾಹನ ಸವಾರರು ಪರದಾಡಿದ ಘಟನೆ ನಗರದ ಎನ್‌ಟಿಟಿಎಫ್ ಬಳಿ ಕಂಡುಬಂತು. ಮತ್ತೊಂದೆಡೆ ತೆಂಗಿನ ಮರಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿಕೊಂಡ ಘಟನೆ ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮದಲ್ಲಿ ನಡೆದಿದೆ. ಇನ್ನು ಜಿಲ್ಲೆಯ ಹಲವು ಭಾಗಗಳಲ್ಲಿ ಭರ್ಜರಿ ಮಳೆಯಾಗಿದೆ.

ಧಾರವಾಡದಲ್ಲಿ ರಸ್ತೆ ಜಲಾವೃತವಾಗಿರುವುದು.

ಸಿಡಿಲುಗೆ ಮೇಕೆ ಬಲಿ, ವ್ಯಕ್ತಿಗೆ ಗಂಭೀರ ಗಾಯ

ರಾಯಚೂರು: ಸಿಡಿಲು ಬಡಿದು ಮೇಕೆ ಮೃತಪಟ್ಟು, ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಲಿಂಗಸುಗೂರು ತಾಲೂಕಿನ ಜಂಗಿರಾಂಪೂರ ತಾಂಡಾದಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿಗೆ ಲಿಂಗಸುಗೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ‌ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ಮೇಕೆಗೆ ಪರಿಹಾರ ಹಾಗೂ ಗಾಯಗೊಂಡ ವ್ಯಕ್ತಿ ಚಿಕಿತ್ಸೆಗೆ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

Continue Reading

ನೌಕರರ ಕಾರ್ನರ್

7th Pay Commission: 7ನೇ ವೇತನ ಆಯೋಗ; ವರದಿ ಜಾರಿಯಾದ್ರೆ ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಲಿದೆ?

7th Pay Commission: 7ನೇ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರಿ ನೌಕರರಿಗೆ ಆಗಬಹುದಾದ ವೇತನ ರಚನೆ ಮತ್ತು ವೇತನ ವ್ಯತ್ಯಾಸದ ಮಾಹಿತಿ ಲಭ್ಯವಾಗಿದ್ದು, ಯಾರಿಗೆ ಎಷ್ಟು ವೇತನ ಹೆಚ್ಚಳವಾಗಲಿದೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

VISTARANEWS.COM


on

7th Pay Commission
Koo

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು (7th Pay Commission) ಮಾರ್ಚ್‌ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿತ್ತು. ವರದಿ ಸ್ವೀಕರಿಸಿದ ನಂತರ ಅದರಲ್ಲಿರುವ ಅಂಶಗಳನ್ನು ಪರಿಶೀಲಿಸಿ, ಬಳಿಕ ವೇತನ ಹೆಚ್ಚಳದ ಸಂಬಂಧಿತ ಶಿಫಾರಸು ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದರು. ಇದೀಗ 7ನೇ ವೇತನ ಆಯೋಗ ಶಿಫಾರಸಿನಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಆಗಬಹುದಾದ ವೇತನ ರಚನೆ ಮತ್ತು ವೇತನ ವ್ಯತ್ಯಾಸದ ಮಾಹಿತಿ ಲಭ್ಯವಾಗಿದ್ದು, ಯಾರಿಗೆ ಎಷ್ಟು ವೇತನ ಹೆಚ್ಚಳವಾಗಲಿದೆ (Salary Hike) ಎಂಬ ಮಾಹಿತಿ ಇಲ್ಲಿದೆ.

ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ ಏಳನೇ ವೇತನ ಆಯೋಗವು ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿತ್ತು. ಈ ಮೊದಲು ನೌಕರರಿಗೆ ಶೇ.40ರಷ್ಟು ವೇತನ ಹೆಚ್ಚಳ ಮಾಡಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ನೇತೃತ್ವದಲ್ಲಿ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದರು. ಆದರೆ, ವರದಿಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನವನ್ನು ಶೇ. 27ರಷ್ಟು ಹೆಚ್ಚಿಸಲು ಶಿಫಾರಸು ಮಾಡಲಾಗಿತ್ತು. ಇದರ ಜತೆಗೆ ಮೂಲ ವೇತನವನ್ನು (Basic salary) 27,000 ರೂ.ಗಳಿಗೆ ಹೆಚ್ಚಿಸುವಂತೆಯೂ ಶಿಫಾರಸು ಮಾಡಲಾಗಿತ್ತು.

ಎ ವಲಯದಲ್ಲಿ ಕರ್ತವ್ಯ ನಿರ್ವಹಿಸುವ ಸಿ ಮತ್ತು ಡಿ ದರ್ಜೆ ನೌಕರರಿಗೆ 2022ರ ಜುಲೈ 1ರಂದು ಮೂಲ ವೇತನ 17,000 ರೂ. ಇದ್ದರೆ, ತುಟ್ಟಿಭತ್ಯೆ ಶೇ. 31 (5,270 ರೂ.) ಹಾಗೂ ಶೇ.27.50 (4,675 ರೂ. ) ಫಿಟ್ಮೆಂಟ್‌ ಸೇರಿ ಒಟ್ಟು 26,945 ಸಿಗುತ್ತಿತ್ತು. ಇನ್ನು 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಮೂಲ ವೇತನ 27,000 ಇದ್ದರೆ, ಅಂದಾಜು ತುಟ್ಟಿ ಭತ್ಯೆ ಶೇ.8.5 (2295 ರೂ), ಮನೆ ಬಾಡಿಗೆ ಭತ್ಯೆ ಶೇ.20 (5,400 ರೂ.), ವೈದ್ಯಕೀಯ 500, ನಗರ ಪರಿಹಾರ ಭತ್ಯೆ (ಸಿಸಿಎ) 750 ರೂ. ಸೇರಿ ಒಟ್ಟು 35,945 (01-01-2024ಕ್ಕೆ) ರೂ. ಸಿಗಲಿದೆ. 6ನೇ ವೇತನ ಆಯೋಗದಲ್ಲಾದರೆ ಒಟ್ಟು 29,005 ರೂ. ಸಿಗುತ್ತಿತ್ತು. ಪರಿಷ್ಕೃತ ವೇತನದಲ್ಲಿ 6940 ರೂ. ಹೆಚ್ಚಳವಾಗಲಿದೆ.

ಅದೇ ರೀತಿ ಎ ವಲಯದಲ್ಲಿ ಕಾರ್ಯ ನಿರ್ವಹಿಸುವ ಎ ಮತ್ತು ಬಿ ದರ್ಜೆ ನೌಕರರಿಗೆ 2022ರ ಜುಲೈ 1ರಂದು 17,000 ರೂ. ವೇತನ ಇದ್ದರೆ, ಶೇ. 31 ತುಟ್ಟಿ ಭತ್ಯೆ (5270 ರೂ.), ಫಿಟ್ಮೆಂಟ್‌ ಶೇ.27.50 (4675 ರೂ.) ಸೇರಿ ಒಟ್ಟು 26945 ರೂ ವೇತನ ಸಿಗುತ್ತಿತ್ತು. ಆದರೆ, 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಮೂಲ ವೇತನ 27000 ಇದ್ದರೆ, ತುಟ್ಟಿ ಭತ್ಯೆ ಶೇ.8.5 (2298 ರೂ.), ಮನೆ ಬಾಡಿಗೆ ಭತ್ಯೆ ಶೇ.20 (5400 ರೂ.), ನಗರ ಪರಿಹಾರ ಭತ್ಯೆ(ಸಿಸಿಎ) 900 ಸೇರಿ ಒಟ್ಟು 35,595 ವೇತನ ಸಿಗಲಿದೆ. ಇದು 6ನೇ ವೇತನ ಆಯೋಗದ ಅವಧಿಯಲ್ಲಿ 27,545 ರೂ. ಆಗಿದೆ. ಪರಿಷ್ಕೃತ ವೇತನದಲ್ಲಿ 8,050 ರೂ. ಹೆಚ್ಚಳವಾಗಲಿದೆ.

ವೇತನ ರಚನೆ ಮತ್ತು ವ್ಯತ್ಯಾಸದ ಪಟ್ಟಿ ಇಲ್ಲಿದೆ

ಇದನ್ನೂ ಓದಿ | 7th Pay Commission: 7ನೇ ವೇತನ ಆಯೋಗದ ವರದಿ ಸ್ವೀಕಾರ; ಸಿಎಂಗೆ ರಾಜ್ಯ ಸರ್ಕಾರಿ ನೌಕರರ ಸಂಘ ಅಭಿನಂದನೆ

Continue Reading

ಮಳೆ

Karnataka Rain: ಶನಿವಾರ ಸಂಜೆ ಅಬ್ಬರಿಸಿದ ಗಾಳಿ ಮಳೆಗೆ ತೊಯ್ದು ತೊಪ್ಪೆಯಾದ ಮಂದಿ; ರಸ್ತೆಗೆ ಬಿದ್ದ ಮರಗಳು

Karnataka Rain: ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಶನಿವಾರ ಸಂಜೆ ಗಾಳಿಯೊಂದಿಗೆ ಸುರಿದ ಭಾರಿ ಮಳೆಗೆ ಜನರು ತೊಯ್ದು ತೊಪ್ಪೆಯಾದರು. ವಿಜಯಪುರ, ಹುಬ್ಬಳ್ಳಿ, ರಾಯಚೂರು ಸೇರಿ ಚಿಕ್ಕಮಗಳೂರಲ್ಲೂ ಮಳೆಯು (Heavy Rain alert) ಅಬ್ಬರಿಸಿತ್ತು. ರಸ್ತೆ ಮೇಲೆ ನೀರು ಹರಿದುಮ ಕೆಲವೆಡೆ ಕೆರೆಯಂತಾಗಿತ್ತು. ಇನ್ನೂ ನಾಲ್ಕೈದು ದಿನಗಳು ಗುಡುಗು ಸಹಿತ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka rain
Koo

ವಿಜಯಪುರ/ಹುಬ್ಬಳ್ಳಿ: ಶನಿವಾರ ಹಲವೆಡೆ ದಿಢೀರ್‌ ಸುರಿದ ಮಳೆಗೆ (Rain News) ಜನರು ತತ್ತರಿಸಿ ಹೋಗಿದ್ದರು. ಉತ್ತರ ಒಳನಾಡಿನ ವಿಜಯಪುರ, ರಾಯಚೂರು, ಹುಬ್ಬಳ್ಳಿ, ಧಾರವಾಡ ಹಾಗೂ ಮಲೆನಾಡಿನ ಚಿಕ್ಕಮಗಳೂರಿನಲ್ಲೂ ವರುಣಾರ್ಭಟ (Karnataka Rain) ಜೋರಾಗಿತ್ತು. ಮೇ 15ರವರೆಗೆ ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

ವಿಜಯಪುರ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸುರಿದ ಮಳೆಯು ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ತಂಪು ತಂದಿತ್ತು. ಬಿರು ಬಿಸಿಲಿಗೆ ಕಂಗೆಟ್ಟು ಹೋಗಿದ್ದ ಜನರು, ಶನಿವಾರ ಸುರಿದ ಅರ್ಧ ಗಂಟೆಗೂ ಆಧಿಕ ಕಾಲ ಮಳೆಗೆ ಸಂತಸಗೊಂಡರು. ಇನ್ನೂ ರೈತರು ಮುಂಗಾರು ಹಂಗಾಮಿಗೆ ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಈವರೆಗೂ ಮಳೆಯಿಂದ ಯಾವುದೇ ಹಾನಿಯಾದ ವರದಿಯಾಗಿಲ್ಲ.

Karnataka Rain

ಹುಬ್ಬಳ್ಳಿ, ಬೆಳಗಾವಿಯಲ್ಲಿ ಗುಡುಗು -ಸಿಡಿಲಿನ ಮಳೆ ಅಬ್ಬರ

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಯಾಗಿದೆ. ಕೆಲವೆಡೆ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆಯಾಗಿದೆ. ಎಡೆಬಿಡದೆ ಆರ್ಭಟಿಸುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿತ್ತು. ರಸ್ತೆಗಳಲ್ಲಿ ನೀರು ತುಂಬಿ ಹರಿದು ಸಂಚಾರಕ್ಕೆ ಅಡ್ಡಿಯಾಗಿತ್ತು. ಇತ್ತ ಬೆಳಗಾವಿಯಲ್ಲಿ ಗುಡುಗು ಸಿಡಿಲು ಮಿಶ್ರಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿನ ಬೇಗೆಗೆ ಬೇಸೆತ್ತು ಹೋಗಿದ್ದ ಕುಂದಾನಗರಿ ಜನರಿಗೆ ವರುಣ ತಂಪೆರೆದಿದ್ದಾನೆ. ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ.

ಇದನ್ನೂ ಓದಿ: Heavy Rain: ಬೆಂಗಳೂರಿನಲ್ಲಿ ಮಳೆಯ ಅಬ್ಬರ; ಹಲವೆಡೆ ರಸ್ತೆಯಲ್ಲೇ ಹರಿದ ನೀರು, ಸಂಚಾರ ಅಸ್ತವ್ಯಸ್ತ

ಜೋರು‌ ಮಳೆಯಲ್ಲೇ ಶನಿವಾರದ ಸಂತೆ ಸಂಭ್ರಮ

ರಾಯಚೂರು ಜಿಲ್ಲೆ ದೇವದುರ್ಗ ಪಟ್ಟಣದಲ್ಲಿ ವರುಣಾರ್ಭಟದ ನಡುವೆಯೇ ಶನಿವಾರದ ಸಂತೆ ಜೋರಾಗಿತ್ತು. ಧಾರಾಕಾರ ಮಳೆ‌‌ಯಲ್ಲೇ ವ್ಯಾಪಾರಸ್ಥರು ಸಂತೆ ಮಾಡಿದರು. ಮಳೆಗೆ ಡೋಂಟ್ ಕೇರ್ ಎಂದ ಸಾವಿರಾರು ಜನರು ಖರೀದಿಯಲ್ಲಿ ಬ್ಯುಸಿಯಾಗಿದ್ದರು.

ಧಾರವಾಡದಲ್ಲಿ ಮಳೆ ಗಾಳಿಗೆ ಜಖಂ ಆದ ಬಸ್‌ಗಳು

ಧಾರವಾಡದಲ್ಲಿ ಗಾಳಿ ಸಹಿತ ಧಾರಾಕಾರವಾಗಿ ಮಳೆಗೆ ನಗರದ ಬಹುತೇಕ ಕಡೆ ಮರಗಳು ನೆಲಕ್ಕುರುಳಿದ್ದವು. ಮಳೆ ಗಾಳಿಗೆ ಬಸ್‌ಗಳು ಜಖಂ ಆಗಿದ್ದವು. ನಿರ್ಮಾಣ ಹಂತದಲ್ಲಿದ್ದ ಈಜುಕೊಳದ ಕಟ್ಟಿಗೆ ಸೆಂಟ್ರಿಂಗ್ ಬಿದ್ದು ಖಾಸಗಿ ಬಸ್ ಜಖಂಗೊಂಡಿತ್ತು. ನಗರದ ಡಿಸಿ ಕಂಪೌಂಡ್‌ಗೆ ಹೊಂದಿಕೊಂಡಿರುವ ನಿರ್ಮಾಣ ಹಂತದ ಕಟ್ಟಡದಲ್ಲಿ ಘಟನೆ ನಡೆದಿತ್ತು.

Karnataka Rain

ಚಿಕ್ಕಮಗಳೂರಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ

ಕಾಫಿನಾಡು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಗುಡುಗು-ಸಿಡಿಲಿನೊಂದಿಗೆ ಎಡಬಿಡದೆ ಮಳೆ ಸುರಿಯುತ್ತಿದೆ. ರಸ್ತೆಯಲ್ಲಿ ನೀರು ನದಿಯಂತೆ ಹರಿಯುತ್ತಿದೆ. ಚಿಕ್ಕಮಗಳೂರು ನಗರ, ಜಯಪುರ, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ ಭಾಗದಲ್ಲಿ ಮಳೆ ಜತೆ ಭಾರಿ ಗಾಳಿ ಬೀಸುತ್ತಿದೆ. ಇನ್ನೂ ಕಳೆದೊಂದು ಗಂಟೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ವಿದ್ಯುತ್ ತಂತಿ ಮೇಲೆ ಮರ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಭಾರೀ ಗಾಳಿ-ಮಳೆಯಿಂದ ವಿದ್ಯುತ್ ಸಂಪರ್ಕವಿಲ್ಲದೆ ಕುಗ್ರಾಮಗಳು ಕತ್ತಲಲ್ಲಿವೆ. ಮಳೆ ಕಂಡು ರೈತರು, ಅಡಿಕೆ-ಕಾಫಿ-ಮೆಣಸು ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ.

ಮಂಗಳೂರಿನ ಕುಕ್ಕೆ ಸುಬ್ರಹ್ಮಣ್ಯದಲ್ಲೂ ಗಾಳಿ,ಗುಡುಗು ಸಹಿತ ಮಳೆಯಾಗುತ್ತಿದೆ. ಸುಮಾರು ಅರ್ಧಗಂಟೆಗಳ ಕಾಲ ಮಳೆಯು ಸುರಿದಿದೆ. ಬಿಸಿಲ ಬೇಗೆಯಿಂದ ತತ್ತರಿಸಿದ ಸುಬ್ರಹ್ಮಣ್ಯದಲ್ಲಿ ಹಠಾತ್‌ ಮಳೆಯು ಕ್ಷೇತ್ರಕ್ಕೆ ಆಗಮಿಸಿದ ಭಕ್ತರಲ್ಲಿ ಸಂತಸ ಮೂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Akshaya Tritiya: ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಲ್ಲಿ ಬಾಲ ರಾಮನ ಬೆಳ್ಳಿ ವಿಗ್ರಹದ ಪೂಜೆ ಸಂಪನ್ನ

Akshaya Tritiya: ಬೆಂಗಳೂರಿನ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಅಯೋಧ್ಯೆಯಲ್ಲಿ ಪೂಜಿಸಲ್ಪಟ್ಟ ಬಾಲ ರಾಮನ ವಿಗ್ರಹದ ಪೂಜಾ ಕಾರ್ಯಕ್ರಮ ನೆರವೇರಿತು.

VISTARANEWS.COM


on

Akshaya Tritiya
Koo

ಬೆಂಗಳೂರು: ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನಲ್ಲಿ ಅಕ್ಷಯ ತೃತೀಯ (Akshaya Tritiya) ಶುಭದಿನದಂದು ಅಯೋಧ್ಯೆಯ ಶ್ರೀ ರಾಮನ ಸನ್ನಿಧಾನದಲ್ಲಿ ಪೂಜಿಸಲ್ಪಟ್ಟ ಶ್ರೀ ಬಾಲ ರಾಮನ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಈ ವೇಳೆ ಎಂಎಲ್‌ಸಿ ಹಾಗೂ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನ ಮಾಲೀಕರಾದ ಟಿ.ಎ. ಶರವಣ ಅವರೊಂದಿಗೆ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನ ರಾಯಭಾರಿಯಾದ ಬಿಗ್ ಬಾಸ್ ಖ್ಯಾತಿಯ ನಮ್ರತಾ ಗೌಡಮತ್ತು ಕನ್ನಡ ಕಿರುತೆರೆ ನಟಿ ಪೂರ್ಣಿಮಾ ಅವರು ಭಾಗಿಯಾಗಿದ್ದರು.

ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ 50,000 ಮೇಲ್ಪಟ್ಟು ಖರೀದಿಸಿದ ಗ್ರಾಹಕರಿಗೆ ಅಯೋಧ್ಯೆಯ ಶ್ರೀ ಬಾಲ ರಾಮರ ಸನ್ನಿಧಾನದಲ್ಲಿ ಪೂಜಿಸಲ್ಪಟ್ಟ ಬೆಳ್ಳಿ ವಿಗ್ರಹವನ್ನು ಉಡುಗೊರೆಯಾಗಿ ನೀಡಲಾಯಿತು.

ಇದನ್ನೂ ಓದಿ | Gold Rate Today: ಚಿನ್ನದ ಮಾರುಕಟ್ಟೆ ಇಳಿಮುಖ; 22 ಮತ್ತು 24 ಕ್ಯಾರಟ್‌ ಬಂಗಾರದ ದರಗಳಲ್ಲಿ ಇಳಿಕೆ

Continue Reading
Advertisement
Rain News
ಮಳೆ5 mins ago

Rain News: ಮಳೆ ಆರ್ಭಟ: ಸಿಡಿಲು ಬಡಿದು ಇಬ್ಬರ ಸಾವು, ಮತ್ತಿಬ್ಬರಿಗೆ ಗಾಯ; ನೆಲಕಚ್ಚಿದ ಬಾಳೆ ತೋಟ

ICMR Dietary Guidelines
ಆರೋಗ್ಯ34 mins ago

ICMR Dietary Guidelines: ನಿಮ್ಮ ಆರೋಗ್ಯ ಚೆನ್ನಾಗಿರಬೇಕೆ? ತಜ್ಞ ಸಮಿತಿಯ ಈ ಆಹಾರ ಸಲಹೆ ಪಾಲಿಸಿ

Dwarka Tour
ಪ್ರವಾಸ41 mins ago

Dwarka Tour: ದ್ವಾರಕೆಗೆ ಹೋದಾಗ ಏನೇನು ನೋಡಬಹುದು?

Narendra Modi
ದೇಶ43 mins ago

Narendra Modi: 75 ವರ್ಷ ದಾಟಿದರೂ ಮೋದಿ ಪ್ರಧಾನಿ ಸ್ಥಾನದಲ್ಲಿರುತ್ತಾರಾ? ಅಮಿತ್‌ ಶಾ ಹೇಳಿದ್ದಿಷ್ಟು

IPL 2024
ಪ್ರಮುಖ ಸುದ್ದಿ56 mins ago

IPL 2024 : ಆರ್​ಸಿಬಿ ವಿರುದ್ಧದ ಪಂದ್ಯಕ್ಕೆ ಡೆಲ್ಲಿ ತಂಡದ ನಾಯಕ ಬದಲು; ಮಾಹಿತಿ ಬಹಿರಂಗ

7th Pay Commission
ನೌಕರರ ಕಾರ್ನರ್2 hours ago

7th Pay Commission: 7ನೇ ವೇತನ ಆಯೋಗ; ವರದಿ ಜಾರಿಯಾದ್ರೆ ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಲಿದೆ?

James Anderson
ಪ್ರಮುಖ ಸುದ್ದಿ2 hours ago

James Anderson : ಕೋಚ್ ಒತ್ತಡಕ್ಕೆ ಮಣಿದು ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​

Sleeping tips
ಆರೋಗ್ಯ2 hours ago

Sleeping Tips: ನಿಮಗೆ ರಾತ್ರಿ ನಿದ್ದೆ ಬರುತ್ತಿಲ್ಲವೆ? ಮಲಗುವ ಮುನ್ನ ಈ ಪೇಯಗಳನ್ನು ಕುಡಿಯಿರಿ!

Lok Sabha Election
ದೇಶ2 hours ago

Lok Sabha Election: 3ನೇ ಹಂತದಲ್ಲಿ 65% ಮತದಾನ; ಕರ್ನಾಟಕದಲ್ಲಿ ಶೇ.71.84ರಷ್ಟು ಹಕ್ಕು ಚಲಾವಣೆ

Babar Azam
ಪ್ರಮುಖ ಸುದ್ದಿ2 hours ago

Babar Azam : ವಿರಾಟ್ ಕೊಹ್ಲಿಯ ದಾಖಲೆ ಸರಿಗಟ್ಟಿದ ಪಾಕ್​ ನಾಯಕ ಅಜಮ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru News
ಬೆಂಗಳೂರು5 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ15 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ1 day ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ1 day ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ1 day ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

ಟ್ರೆಂಡಿಂಗ್‌