Hosanagara News: ಪತಿಯ ಸಾವಿನ ವಿಷಯ ತಿಳಿದು ಪತ್ನಿಗೆ ಹೃದಯಾಘಾತ; ಸಾವಿನಲ್ಲೂ ಒಂದಾದ ವೃದ್ಧ ದಂಪತಿ - Vistara News

ಕರ್ನಾಟಕ

Hosanagara News: ಪತಿಯ ಸಾವಿನ ವಿಷಯ ತಿಳಿದು ಪತ್ನಿಗೆ ಹೃದಯಾಘಾತ; ಸಾವಿನಲ್ಲೂ ಒಂದಾದ ವೃದ್ಧ ದಂಪತಿ

Hosanagara News: ಹೊಸನಗರ ತಾಲೂಕಿನ ಸಾವಂತೂರು ಗ್ರಾಮದ ವೃದ್ಧ ದಂಪತಿ ತುಂಬು ಜೀವನ ನಡೆಸಿ, ಸಾವಿನಲ್ಲೂ ಒಂದಾಗಿದ್ದಾರೆ.

VISTARANEWS.COM


on

husband and wife died on same day at savanthuru village
ಸಾವಿನಲ್ಲೂ ಒಂದಾದ ವೃದ್ಧ ದಂಪತಿ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸನಗರ: ತಾಲೂಕಿನ ಸಾವಂತೂರು ಗ್ರಾಮದ ವೃದ್ಧ ದಂಪತಿ ತುಂಬು ಜೀವನ ನಡೆಸಿ, ಸಾವಿನಲ್ಲೂ ಒಂದಾಗಿರುವ ಘಟನೆ ಹೊಸನಗರ (Hosanagara) ತಾಲೂಕಿನ ಸಾವಂತೂರು ಗ್ರಾಮದಲ್ಲಿ ಜರುಗಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಾವಂತೂರು ಗ್ರಾಮದ ಹೊಳೆಯಪ್ಪ (90) ಹಾಗೂ ಗಂಗಮ್ಮ(80) ದಂಪತಿ ಒಂದೇ ದಿನ ನಿಧನ ಹೊಂದಿದ್ದಾರೆ.

ಇದನ್ನೂ ಓದಿ: Job Alert: ಕರ್ನಾಟಕ ಪಂಚಾಯತ್‌ ರಾಜ್‌; ಸಂಯೋಜಕರ ನೇಮಕಾತಿಗೆ ಅರ್ಜಿ ಆಹ್ವಾನ

ಸಾವಂತೂರು ಗ್ರಾಮದ ಸಾಲತೋಡೆಯ ಕೃಷಿ ಕಾರ್ಮಿಕ ದಂಪತಿ ಗುರುವಾರ ಬೆಳಗಿನ ಜಾವ ಒಂದು ಗಂಟೆಯ ಅಂತರದಲ್ಲಿ ಮೃತಪಟ್ಟು ಸಾವಿನಲ್ಲೂ ಒಂದಾಗಿದ್ದಾರೆ. ಪತಿ ಹೊಳೆಯಪ್ಪ ಅವರು ಅನಾರೋಗ್ಯದಿಂದ ಮೃತಪಟ್ಟ ವಿಷಯ ತಿಳಿಯುತ್ತಿದ್ದಂತೆ ಪತ್ನಿ ಗಂಗಮ್ಮ ತೀವ್ರ ಹೃದಯಘಾತದಿಂದ ಪತಿಯೊಂದಿಗೆ ಇಹಲೋಕ ತ್ಯಜಿಸಿದ್ದಾರೆ.

ಮೃತ ದಂಪತಿ ಇಬ್ಬರು ಪುತ್ರರು, ಐವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಇದನ್ನೂ ಓದಿ: National Youth Day: ಜ.12ರಂದು ರಾಷ್ಟ್ರೀಯ ಯುವ ದಿನ ಆಚರಿಸುವುದೇಕೆ? ಇದರ ಉದ್ದೇಶ ಏನು?

ಮೃತ ದಂಪತಿಯ ನಿಧನಕ್ಕೆ ಮುಂಬಾರು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಸಂತಾಪ ವ್ಯಕ್ತಪಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Dengue Cases in Mysore: ಮೈಸೂರಿನಲ್ಲಿ ಡೆಂಗ್ಯೂಗೆ ಜಯದೇವ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಸಾವು

Dengue Cases in Mysore: ಮೂರು ದಿನಗಳ ಹಿಂದೆ ಹುಣಸೂರು ಸಮುದಾಯ ಆರೋಗ್ಯಾಧಿಕಾರಿ ಮೃತಪಟ್ಟ ಬೆನ್ನಲ್ಲೇ ಇದೀಗ ಮತ್ತೊಬ್ಬರು ಡೆಂಗ್ಯೂ ಜ್ವರದಿಂದ ಸಾವಿಗೀಡಾಗಿದ್ದಾರೆ.

VISTARANEWS.COM


on

Dengue Cases in Mysore
Koo

ಮೈಸೂರು: ಜಿಲ್ಲೆಯಲ್ಲಿ ಡೆಂಗ್ಯೂಗೆ ಎರಡನೇ ಬಲಿಯಾಗಿದೆ. ಜಯದೇವ ಹೃದ್ರೋಗ ಆಸ್ಪತ್ರೆ ಡಾಟಾ ಎಂಟ್ರಿ ಆಪರೇಟರ್ ಲಲಿತಾ ಮೃತಪಟ್ಟವರು. ಮೂರು ದಿನಗಳ ಹಿಂದೆ ಹುಣಸೂರು ಸಮುದಾಯ ಆರೋಗ್ಯಾಧಿಕಾರಿ ಮೃತಪಟ್ಟ ಬೆನ್ನಲ್ಲೇ ಇದೀಗ ಮತ್ತೊಬ್ಬರು ಡೆಂಗ್ಯೂ ಜ್ವರದಿಂದ (Dengue Cases in Mysore) ಸಾವಿಗೀಡಾಗಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. 3 ದಿನಗಳ ಹಿಂದೆ ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿತ್ತು. ಹುಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಮುದಾಯ ಆರೋಗ್ಯಾಧಿಕಾರಿ ನಾಗೇಂದ್ರ (32) ಮೃತ ಮೃತಪಟ್ಟಿದ್ದರು.

ಹಾಸನದಲ್ಲಿ ಶಂಕಿತ ಡೆಂಗ್ಯೂಗೆ 26 ವರ್ಷದ ಯುವತಿ ಬಲಿ

ಹಾಸನ: ಶಂಕಿತ ಡೆಂಗ್ಯೂಗೆ (Dengue Cases in Hassan) 26 ವರ್ಷದ ಯುವತಿ ಬಲಿಯಾಗಿರುವ ಘಟನೆ ಹಾಸನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಜಿಲ್ಲೆಯ ಅರಸೀಕೆರೆ ತಾಲೂಕಿನ ಮುದುಡಿ ತಾಂಡ್ಯ ಗ್ರಾಮದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಜೂಲೂನಾಯ್ಕ-ಸುಮಿತ್ರಾದೇವಿ ಎಂಬುವವರ ಪುತ್ರಿ ಸುಪ್ರಿತಾ (26) ಮೃತ ಯುವತಿ. ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುತ್ತಿರುವಾಗಲೇ ಸುಪ್ರಿತಾಗೆ ಬಹುಅಂಗಾಗ ವೈಫಲ್ಯವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸುಪ್ರಿತಾ ಮೃತಪಟ್ಟಿದ್ದಾಳೆ. ಇದರಿಂದ ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂ ಜ್ವರದಿಂದ ಸಾವಿನ ಸಂಖ್ಯೆ ಏಳಕ್ಕೆ ಏರಿದೆ.

ಇದನ್ನೂ ಓದಿ | Dengue fever: ಶಿರಸಿಯಲ್ಲಿ ಶಂಕಿತ ಡೆಂಗ್ಯೂ ಜ್ವರದಿಂದ ವಿದ್ಯಾರ್ಥಿನಿ ಸಾವು

Rat fever: ಡೆಂಗ್ಯೂ ರುದ್ರ ನರ್ತನದ ನಡುವೆ ಹಾವೇರಿಯಲ್ಲಿ ಬಾಲಕನಿಗೆ ಇಲಿ ಜ್ವರ!

ಹಾವೇರಿ: ಡೆಂಗ್ಯೂ ರುದ್ರ ನರ್ತನದ ನಡುವೆ ಜಿಲ್ಲೆಯಲ್ಲಿ ಇಲಿ ಜ್ವರ (Rat fever) ಪತ್ತೆಯಾಗಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಹಾವೇರಿ ತಾಲೂಕಿನ ಗ್ರಾಮವೊಂದರ 12 ವರ್ಷದ ಬಾಲಕನಿಗೆ ಇಲಿ ಜ್ವರ ದೃಢಪಟ್ಟಿದ್ದು, ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದೊಂದು ವಾರದಿಂದ ಬಾಲಕ ಜ್ವರದಿಂದ ಬಳಲುತ್ತಿದ್ದ . ದಿನ ಬಿಟ್ಟು ದಿನ ಜ್ವರ ಕಾಣಿಸಿಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಬಾಲಕನಿಗೆ ಇಲಿ ಜ್ವರ ಸೋಂಕು ತಗುಲಿರುವುದು ಪತ್ತೆಯಾಗಿದೆ. ಸದ್ಯ ಬಾಲಕನ ಆರೋಗ್ಯ ಸ್ಥಿರವಾಗಿದೆ.

ಈ ಬಗ್ಗೆ ಜಿಲ್ಲಾಸ್ಪತ್ರೆಯ ಡಾ.ಭಾಗ್ಯ ಪ್ರತಿಕ್ರಿಯಿಸಿ, ಬಾಲಕನಿಗೆ ಇಲಿ ಜ್ವರ ಬಂದಿರುವುದು ನೆನ್ನೆ ಗೊತ್ತಾಗಿದೆ. ಆತನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಬಾಲಕನ‌ ಆರೋಗ್ಯ ಸ್ಥಿರವಾಗಿದೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ. ಡೆಂಗ್ಯೂ ಜ್ವರದ ಲಕ್ಷಣಗಳೇ ಇಲಿ ಜ್ವರ ಕಾಣಿಸಿಕೊಂಡವರಲ್ಲೂ ಕಂಡುಬರುತ್ತವೆ ಎಂದು ತಿಳಿಸಿದರು.

ಏನಿದು ಇಲಿ ಜ್ವರ, ಹೇಗೆ ಹರಡುತ್ತದೆ?

ವೈಜ್ಞಾನಿಕವಾಗಿ ಲೆಪ್ಟೊಸ್ಪಿರೋಸಿಸ್ ಎಂದು ಕರೆಯಲ್ಪಡುವ ಇಲಿ ಜ್ವರ, ಲೆಪ್ಟೊಸ್ಪೈರಾ ಎಂಬ ಬ್ಯಾಕ್ಟೀರಿಯಗಳ ಮೂಲಕ ಪ್ರಾಣಿಗಳಿಂದ ಮಾನವರಿಗೆ ಹರಡುವ ರೋಗವಾಗಿದೆ. ಮುಖ್ಯವಾಗಿ ಇಲಿ, ಹೆಗ್ಗಣಗಳಿಂದ ಈ ರೋಗಾಣುಗಳು ಹರಡುವುದರಿಂದ ಇದಕ್ಕೆ ಇಲಿ ಜ್ವರವೆಂದು ಹೆಸರು. ಈ ರೋಗ ಕೇವಲ ಮನುಷ್ಯರನ್ನಷ್ಟೇ ಅಲ್ಲ ದನ, ಎಮ್ಮೆ, ಕುರಿ, ಮೇಕೆ, ಹಂದಿ, ನಾಯಿ, ಬೆಕ್ಕು, ವನ್ಯಮೃಗಗಳು ಹೀಗೆ ಬಹುತೇಕ ಪ್ರಾಣಿಗಳನ್ನು ಬಾಧಿಸುತ್ತದೆ.

ಹೆಚ್ಚಾಗಿ ಇಲಿ, ಹೆಗ್ಗಣಗಳ ಮೂಲಕ ಈ ರೋಗ ಹರಡುತ್ತದೆ. ರೋಗಪೀಡಿತ ಇಲಿಗಳು ಹಾಗೂ ಪ್ರಾಣಿಗಳ ಮೂತ್ರದ ಮೂಲಕ ಈ ಕಾಯಿಲೆ ಹರಡುತ್ತದೆ. ಆದರೆ ಮನುಷ್ಯನಿಂದ ಮನುಷ್ಯನಿಗೆ ಇದು ಹರಡುವುದಿಲ್ಲ. ಮಣ್ಣಿನಲ್ಲಿ ಈ ರೋಗಾಣುಗಳು ಸುಮಾರು 6 ಗಂಟೆವರೆಗೆ ಜೀವಂತವಿದ್ದರೆ, ನೀರಿನಲ್ಲಿ ಅರು ತಿಂಗಳವರೆಗೆ ಬದುಕಬಲ್ಲವು. ಹಾಗಾಗಿ ಮಳೆಗಾಲದಲ್ಲಿ ಈ ರೋಗದ ಹಾವಳಿ ಜಾಸ್ತಿ ಇರುತ್ತದೆ.

ಇದನ್ನೂ ಓದಿ | Dengue fever: ಹಾವೇರಿಯಲ್ಲಿ ಶಂಕಿತ ಡೆಂಗ್ಯೂಗೆ 9 ವರ್ಷದ ಮಗು ಬಲಿ

ಈ ಸೋಂಕು ತಗುಲಿದರೆ ಜ್ವರ, ತಲೆನೋವು, ಸ್ನಾಯು ನೋವು, ಆಯಾಸ ಮತ್ತು ವಾಂತಿಯಂತಹ ರೋಗಲಕ್ಷಣಗಳು ಇರುತ್ತವೆ. ಕೆಲವು ಪ್ರಕರಣಗಳಲ್ಲಿ ಇದು ಮೂತ್ರಪಿಂಡ ವೈಫಲ್ಯ ಅಥವಾ ಸಾವಿಗೆ ಕಾರಣವಾಗಬಹುದು. ಹೀಗಾಗಿ ಸಕಾಲದಲ್ಲಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುವುದು ಅಗತ್ಯವಾಗಿದೆ.

Continue Reading

ಕರ್ನಾಟಕ

Mahadayi Water Dispute: ಮಹದಾಯಿ ಜಲಾನಯನ ಪ್ರದೇಶಕ್ಕೆ ಕೇಂದ್ರದ ಪ್ರವಾಹ್ ತಂಡ ಭೇಟಿ; ನಾಲೆಗಳ ಪರಿಶೀಲನೆ

Mahadayi Water Dispute: ಮಹದಾಯಿ ಹೋರಾಟಗಾರರ ವಿರೋಧದ ನಡುವೆಯೂ ಬೆಳಗಾವಿಗೆ ಕೇಂದ್ರದ ತಂಡ ಆಗಮಿಸಿದೆ. ಸತತ ಮಳೆಯ ನಡುವೆ ಮಹದಾಯಿಗೆ ಸೇರುವ ಕಾಲುವೆಗಳು, ನಾಲೆಗಳನ್ನು ಪ್ರವಾಹ್‌ ತಂಡ ವೀಕ್ಷಿಸಿತು.

VISTARANEWS.COM


on

Mahadayi Water Dispute
Koo

ಬೆಳಗಾವಿ: ಮಹದಾಯಿ ಜಲಾನಯನ ಪ್ರದೇಶಕ್ಕೆ (Mahadayi Water Dispute) ಕೇಂದ್ರದ ಪ್ರವಾಹ್ ತಂಡ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು. ಸತತ ಮಳೆಯ ನಡುವೆ ಮಹದಾಯಿಗೆ ಸೇರುವ ಕಾಲುವೆಗಳು, ನಾಲೆಗಳನ್ನು ಪ್ರವಾಹ್‌ ತಂಡ ವೀಕ್ಷಿಸಿ, ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಮಹದಾಯಿ ಹೋರಾಟಗಾರರ ವಿರೋಧದ ನಡುವೆಯೂ ಬೆಳಗಾವಿಗೆ ಕೇಂದ್ರದ ತಂಡ ಆಗಮಿಸಿದೆ. ರಾಜ್ಯಕ್ಕೆ ಆಗಮಿಸಿದ ಕೇಂದ್ರದ ಮಹದಾಯಿ ಪ್ರವಾಹ್ ತಂಡಕ್ಕೆ ಬೆಳಗಾವಿಯ ಚೋರ್ಲಾ ಗಡಿಯಲ್ಲಿನಲ್ಲಿ ಅಧಿಕಾರಿಗಳು ಸ್ವಾಗತ ಕೋರಿದರು. ನೀರಾವರಿ ಇಲಾಖೆ ಅಧಿಕಾರಿಗಳು, ಸ್ಥಳೀಯ ಪೊಲೀಸರಿಂದ ಸ್ವಾಗತ ಕೋರಲಾಯಿತು. ಚೋರ್ಲ್ ಘಾಟ್ ಮತ್ತು ಹರತಾಳ ನಾಲಾ ವೀಕ್ಷಣೆ ಮಾಡಿದ ಅಧಿಕಾರಿಗಳು, ನಂತರ ಕಳಸಾ-ಬಂಡೂರಿ ನಾಲಾಗಳನ್ನು ವೀಕ್ಷಣೆ ಮಾಡಿದರು.

ಮಹದಾಯಿ ನದಿಯ ಹಲತ್ರಾ ನಾಲಾ ಮತ್ತು ಸೂರಲ್ ಕಾಲುವೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ನಿರಂತರ ಮಳೆ ಹಿನ್ನೆಲೆಯಲ್ಲಿ ಕೈಲಿ ಛತ್ರಿ ಹಿಡಿದು, ಗಮ್ ಶೂಗಳನ್ನು ಧರಿಸಿ ಅಧಿಕಾರಿಗಳು ನಾಲೆಗಳನ್ನು ವೀಕ್ಷಣೆ ಮಾಡಿದರು.

ಯಾವುದೇ ಪರವಾನಗಿ ಪಡೆಯದೇ ಕರ್ನಾಟಕ ಮಹದಾಯಿ ಯೋಜನೆ ಕಾಮಗಾರಿ ಆರಂಭಿಸಿದೆ ಎಂದು ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಆರೋಪಿಸಿದ್ದರು. ಸೆಂಟ್ರಲ್ ಟೀಂ ಭೇಟಿ ಬಳಿಕ ಕರ್ನಾಟಕದ ಬಣ್ಣ ಬಯಲಾಗಲಿದೆ ಎಂದು ಹೇಳಿದ್ದರು. ಇದರ ಬೆನ್ನಲ್ಲೆ ಪ್ರವಾಹ್‌ ತಂಡವು ರಾಜ್ಯಕ್ಕೆ ಭೇಟಿ ನೀಡಿದೆ. ಕಣಕುಂಬಿಯಲ್ಲಿ ಸತತ ಮಳೆ ಹಿನ್ನೆಲೆಯಲ್ಲಿ ಜಿಗಣೆ ಕಾಟಕ್ಕೆ ಅಧಿಕಾರಿಗಳು ಹೈರಾಣಾಗಿದ್ದು ಕಂಡುಬಂತು. ಜಿಗಣೆಗಳ ಕಾಟದ ನಡುವೆಯೂ ಪ್ರತಿಯೊಂದು ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದರು.

ಏನಿದು ಪ್ರವಾಹ್‌ ತಂಡ?

ಮಹದಾಯಿ ಜಲ ವಿವಾದದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನ ಸಂಬಂಧ ಮಹದಾಯಿ ಪ್ರವಾಹ್‌ (ಕಲ್ಯಾಣ ಮತ್ತು ಸಾಮರಸ್ಯಕ್ಕಾಗಿ ಪ್ರಗತಿಶೀಲ ನದಿ ಪ್ರಾಧಿಕಾರ) ಅನ್ನು ಕಳೆದ ವರ್ಷ ಕೇಂದ್ರ ಸರ್ಕಾರ ರಚನೆ ಮಾಡಿತ್ತು. ಗೋವಾ-ಕರ್ನಾಟಕ ನಡುವೆ ಮಹದಾಯಿ ನೀರಿನ ಹಂಚಿಕೆ ವಿವಾದ ಇರುವ ಹಿನ್ನೆಲೆಯಲ್ಲಿ ಮಹದಾಯಿ ಜಲಾನಯನ ಪ್ರದೇಶದಲ್ಲಿ ವಾಸ್ತವ ಸ್ಥಿತಿ ಪರಿಶೀಲನೆ ನಡೆಸಲು ಪ್ರವಾಹ್‌ ತಂಡ ಆಗಮಿಸಿದೆ.

ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಗದಗ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸಲು ಮಹದಾಯಿ ನದಿಯ ಉಪ ನದಿಗಳಾಗಿರುವ ಕಳಸಾ-ಬಂಡೂರಿಯ ಸುಮಾರು 7.56 ಟಿಎಂಸಿ ನೀರನ್ನು ಮಲಪ್ರಭಾ ನದಿಗೆ ತಿರುಗಿಸಲು ಕರ್ನಾಟಕ ಅನುಷ್ಠಾನ ಮಾಡಲು ಮುಂದಾಗಿರುವ ಕಳಸಾ-ಬಂಡೂರಿ ನಾಲಾ ಯೋಜನೆಗೆ ಗೋವಾ ವಿರೋಧ ವ್ಯಕ್ತಪಡಿಸುತ್ತಿದೆ. ಹೀಗಾಗಿ ಮಹದಾಯಿ ಜಲಾನಯನ ಪ್ರದೇಶದಲ್ಲಿ ವಾಸ್ತವ ಸ್ಥಿತಿ ಪರಿಶೀಲನೆ ನಡೆಸಲು ಪ್ರವಾಹ್‌ ತಂಡ ಆಗಮಿಸಿದೆ.

ಇದನ್ನೂ ಓದಿ | ಪಿಎಂ ಆವಾಸ್‌ ಯೋಜನೆಯ 40 ಸಾವಿರ ರೂ. ಪಡೆದು 11 ಸ್ತ್ರೀಯರು ಗೆಳೆಯರೊಂದಿಗೆ ಪರಾರಿ; ಕಂಗಾಲಾದ ಪತಿಯರು!

ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕದ ಅಧಿಕಾರಿಗಳ ಸಮ್ಮುಖದಲ್ಲಿ ಮಹದಾಯಿ ಜಲಾನಯನ ಪ್ರದೇಶದ ಪರಿಶೀಲನೆ ನಡೆಯಲಿದೆ. ನದಿ ನೀರನ್ನು ತಿರುಗಿಸಲು ಕರ್ನಾಟಕಕ್ಕೆ ಅನುಮತಿ ನೀಡಿದರೆ ಉಂಟಾಗುವ ಪರಿಣಾಮಗಳನ್ನು ಪರಿಶೀಲಿಸಲು ಜಲಪಾತಗಳು ಮತ್ತು ಅಣೆಕಟ್ಟುಗಳು ಸೇರಿದಂತೆ ಎಲ್ಲ ಪ್ರದೇಶಗಳಿಗೆ ಪ್ರವಾಹ್‌ ತಂಡದ ಸದಸ್ಯರು ಭೇಟಿ ನೀಡಲಿದ್ದಾರೆ.

Continue Reading

ಕಲಬುರಗಿ

Kalaburagi News : ಆಕ್ಸಿಜನ್ ಸೋರಿಕೆ! ತಾಲೂಕು ಆಸ್ಪತ್ರೆಯಿಂದ ಹೊರಗೆ ಓಡಿದ ರೋಗಿಗಳು

Kalaburagi News : ತಾಲೂಕು ಆಸ್ಪತ್ರೆ ಆವರಣದಲ್ಲಿದ್ದ ಘಟಕದಿಂದ ಆಕ್ಸಿಜನ್‌ ಸೋರಿಕೆ ಆಗಿತ್ತು. ಈ ವಿಷಯ ತಿಳಿದ ಆಸ್ಪತ್ರೆ ಸಿಬ್ಬಂದಿ ಹಾಗೂ ರೋಗಿಗಳು ಹೊರಗೆ ಓಡಿ ಬಂದಿದ್ದರು. ಮುನ್ನೆಚ್ಚರಿಕಾ ಕ್ರಮವಾಗಿ ಅಗ್ನಿಶಾಮಕ ದಳ, ಪೊಲೀಸರು ದೌಡಾಯಿಸಿದ್ದರು.

VISTARANEWS.COM


on

By

kalaburagi news
Koo

ಕಲಬುರಗಿ: ಕಲಬುರಗಿ ಜಿಲ್ಲೆಯ (Kalaburagi News) ಚಿಂಚೊಳ್ಳಿ‌ ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಸೋರಿಕೆ (Oxygen leakage) ಆಗಿದೆ ಎಂಬ ಸುದ್ದಿ ಕೇಳಿ ರೋಗಿಗಳು ಶಾಕ್‌ ಆಗಿದ್ದರು. ಆಸ್ಪತ್ರೆ ಹಿಂಭಾಗದಲ್ಲಿದ್ದ ಆಕ್ಸಿಜನ್ ಘಟಕದಿಂದ ಸೋರಿಕೆಯಾಗಿ ಅರ್ಧ ಕಿಮೀ ವ್ಯಾಪ್ತಿವರೆಗೂ ವಾಸನೆ ಮೂಗಿಗೆ ಬಡಿದಿತ್ತು.

ನೋಡನೋಡುತ್ತಿದ್ದ ಒಬ್ಬರಿಂದ ಒಬ್ಬರಿಗೆ ಆಕ್ಸಿಜನ್‌ ಸೋರಿಕೆ ಸುದ್ದಿ ಹರಿದಾಡಿದೆ. ಬಳಿಕ ಆಸ್ಪತ್ರೆಯೊಳಗೆ ಇದ್ದ ಸಿಬ್ಬಂದಿ, ರೋಗಿಗಳು ಭಯಭೀತರಾಗಿ ಹೊರಗೆ ಓಡಿ ಬಂದು ಆವರಣದೊಳಗೆ ಬಂದು ಕುಳಿತುಕೊಳ್ಳುವಂತಾಯಿತು. ಇತ್ತ ಆಕ್ಸಿಜನ್‌ ಟ್ಯಾಂಕ್‌ ಸ್ಫೋಟಗೊಂಡಿದೆ ಎಂಬ ಸುದ್ದಿಯಿಂದಾಗಿ ವೈದ್ಯರು ಮತ್ತು ಸಿಬ್ಬಂದಿ ತಗ್ಗಿದ ವಸತಿಗೃಹಗಳನ್ನು ಖಾಲಿ ಮಾಡಿದ್ದವು.

kalaburagi News

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಚಿಂಚೊಳ್ಳಿ ಪೊಲೀಸರು ದೌಡಾಯಿಸಿದ್ದರು. ಪರಿಶೀಲನೆ ನಡೆಸಿದಾಗ ಆಕ್ಸಿಜನ್‌ ಟ್ಯಾಂಕ್ ತುಂಬಿದ್ದರಿಂದ ಅದರ ಒತ್ತಡವನ್ನು ಹೊರಹಾಕಿದೆ ಎಂದು ಗೊತ್ತಾಗಿದೆ. ಈ ಕುರಿತು ಮಾಹಿತಿ ನೀಡಿರುವ ಕಲಬುರಗಿ ಡಿ.ಎಚ್.ಓ ಡಾ.ರತಿಕಾಂತ್ ಸ್ವಾಮಿ, ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂಬುದು ಸುಳ್ಳು ಸುದ್ದಿ. ಸಾರ್ವಜನಿಕರು ಆತಂಕ ಪಡಬೇಕಿಲ್ಲ ಎಂದು ಸ್ಪಷ್ಟಪಡಿಸಿದರು.

ಆಕ್ಸಿಜನ್‌ ಟ್ಯಾಂಕ್ ತುಂಬಿದ ನಂತರ ಅದರ ಒತ್ತಡವನ್ನು ಗ್ಯಾಸ್ ರೂಪದಲ್ಲಿ ಹೊರಹಾಕುವ ಸಾಮಾನ್ಯ ಪ್ರಕ್ರಿಯೆ ಆಗಿದೆ. ಆಸ್ಪತ್ರೆಯಲ್ಲಿನ 6 ಕೆ.ಎಲ್. ಸಾಮರ್ಥ್ಯದ ಟ್ಯಾಂಕಿಗೆ ಆಮ್ಲಜನಕ ಭರ್ತಿ ಮಾಡಿದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಎ, ಬಿ, ಸಿ ಎಂಬ ಸುರಕ್ಷತೆಯ ವಾಲ್‌ಗಳ ಮುಖೇನ ಹಂತ ಹಂತವಾಗಿ ಗ್ಯಾಸ್ ಲೀಕ್ ಮಾಡುತ್ತದೆ. ಹೀಗಾಗಿ ಸಾರ್ವಜನಿಕರು ಯಾರು ಆತಂಕ ಪಡಬೇಕಾಗಿಲ್ಲಾ ಎಂದರು.

ಇದನ್ನೂ ಓದಿ: Leopard attack : ರಾಯಚೂರಿನಲ್ಲಿ ಮೂವರ ಮೇಲೆ ದಾಳಿ ಮಾಡಿ ಕಾಲ್ಕಿತ್ತ ಚಿರತೆ!

ಐದು ಅಂತಸ್ತಿನ ಕಟ್ಟಡ ಧರಾಶಾಹಿ- ಏಳು ಜನ ದಾರುಣ ಸಾವು

ಅಹ್ಮದಾಬಾದ್‌: ಗೇಮಿಂಗ್‌ ಜೋನ್‌(Gaming zone)ನಲ್ಲಿ ಭಾರೀ ಬೆಂಕಿ ಅವಘಡ(Fire Accident)ದ ಬಳಿಕ ಗುಜರಾತ್‌(Gujarat)ನಲ್ಲಿ ಇದೀಗ ಮತ್ತೊಂದು ದುರಂತ ಸಂಭವಿಸಿದೆ. ಐದು ಅಂತಸ್ತಿನ ಕಟ್ಟಡ(Building Collapse) ಧರಾಶಾಹಿಯಾಗಿದ್ದು, ಏಳು ಜನ ಧಾರುಣವಾಗಿ ಮೃತಪಟ್ಟಿದ್ದಾರೆ. ಸೂರತ್‌ನಲ್ಲಿ ಈ ಘಟನೆ ನಡೆದಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಅವಶೇಷದಡಿಯಲ್ಲಿ ಹಲವು ಜನ ಸಿಲುಕಿರುವ ಸಾಧ್ಯತೆ ಇದೆ.

ಘಟನೆ ಬಗ್ಗೆ ಸೂರತ್‌ನ ಅಗ್ನಿಶಾಮಕ ಅಧಿಕಾರಿ ಬಸಂತ್‌ ಪರೀಕ್‌ ಮಾಹಿತಿ ನೀಡಿದ್ದು, ಶನಿವಾರ ರಾತ್ರಿ ಈ ದುರಂತ ಸಂಭವಿಸಿದೆ. ರಾತ್ರಿಯಿಡೀ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಏಳು ಮೃತ ದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಕನಿಷ್ಠ ಆರರಿಂದ ಏಳು ಜನರು ಇನ್ನೂ ಅವಶೇಷಗಳಲ್ಲಿ ಸಿಕ್ಕಿಬಿದ್ದಿರುವ ಭಯವಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಎಸ್‌ಡಿಆರ್‌ಎಫ್ (ರಾಜ್ಯ ವಿಪತ್ತು ನಿರ್ವಹಣಾ ಪಡೆ) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳು ನಡೆಸುತ್ತಿವೆ ಎಂದು ಹೇಳಿದ್ದಾರೆ.

ಸುಮಾರು ಐದು ಫ್ಲಾಟ್‌ಗಳಿಗಳನ್ನು ಹೊಂದಿರುವ ಈ ಕಟ್ಟಡವನ್ನು 2016-17ರಲ್ಲಿ ನಿರ್ಮಿಸಲಾಗಿದೆ. ಈ ಪ್ರದೇಶದಲ್ಲಿ ಕಾರ್ಖಾನೆಗಳಲ್ಲಿ ಕೆಲಸ ಮಾಡುವವರು ಈ ಫ್ಲ್ಯಾಟ್‌ನಲ್ಲಿ ವಾಸವಾಗಿದ್ದರು. ರಕ್ಷಣಾ ಕಾರ್ಯವನ್ನು ಪ್ರಾರಂಭಿಸಿದಾಗ, ಒಳಗೆ ಸಿಲುಕಿರುವವರ ಧ್ವನಿಯನ್ನು ನಾವು ಕೇಳಿದ್ದೇವೆ. ನಾವು ಮಹಿಳೆಯನ್ನು ಜೀವಂತವಾಗಿ ಅವಶೇಷಗಳಿಂದ ರಕ್ಷಿಸಿ ಆಸ್ಪತ್ರೆಗೆ ಕಳುಹಿಸಿದ್ದೇವೆ. ಸುಮಾರು ಐದು ಜನರು ಇನ್ನೂ ಒಳಗೆ ಸಿಲುಕಿರುವ ಶಂಕೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಗುಜರಾತ್‌ನ ರಾಜ್‌ಕೋಟ್‌ (Rajkot) ನಗರದಲ್ಲಿರುವ ಗೇಮಿಂಗ್‌ ಜೋನ್‌ (Gaming Zone) ಒಂದರಲ್ಲಿ ಮೇ 25ರಂದು ಸಂಜೆ ಭೀಕರ ಅಗ್ನಿ ದುರಂತ ಸಂಭವಿಸಿತ್ತು. ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. 9 ಮಕ್ಕಳು, ಮಹಿಳೆಯರು ಸೇರಿ 32 ಮಂದಿ ಮೃತಪಟ್ಟಿರುವ ಪ್ರಕರಣವು ದೇಶವನ್ನೇ ಬೆಚ್ಚಿಬೀಳಿಸಿತ್ತು.

ಗೇಮಿಂಗ್‌ ಜೋನ್‌ ಕಟ್ಟಡದಲ್ಲಿ ನೂರಾರು ಮಕ್ಕಳು ಹಾಗೂ ಅವರ ತಾಯಂದಿರು ಇದ್ದರು. ವೀಕೆಂಡ್‌ ಇರುವ ಕಾರಣ ಮಕ್ಕಳು ಆಟವಾಡಲಿ ಎಂಬುದಾಗಿ ಟಿಆರ್‌ಪಿ ಗೇಮಿಂಗ್‌ ಜೋನ್‌ಗೆ ಕರೆದುಕೊಂಡು ಹೋಗಿದ್ದರು. ಇದೇ ವೇಳೆ ಏಕಾಏಕಿ ಅಗ್ನಿ ದುರಂತ ಸಂಭವಿಸಿದ ಕಾರಣ 32 ಜನ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಇವರಲ್ಲಿ ಮಹಿಳೆಯರು ಹಾಗೂ ಮಕ್ಕಳು ಕೂಡ ಸೇರಿದ್ದಾರೆ. ಗೇಮಿಂಗ್‌ ಜೋನ್‌ನಲ್ಲಿ ಅಗ್ನಿ ದುರಂತ ಸಂಭವಿಸಲು ನಿಖರ ಕಾರಣ ತಿಳಿದುಬಂದಿಲ್ಲ.

ರಾಜ್‌ಕೋಟ್‌ ಅಗ್ನಿ ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ತಲಾ 4 ಲಕ್ಷ ರೂ. ಪರಿಹಾರ ನೀಡುವುದಾಗಿ ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಘೋಷಿಸಿದ್ದಾರೆ. ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನೂ ಘೋಷಣೆ ಮಾಡಿದ್ದಾರೆ. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನೂ (SIT) ರಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಯಚೂರು

Leopard attack : ರಾಯಚೂರಿನಲ್ಲಿ ಮೂವರ ಮೇಲೆ ದಾಳಿ ಮಾಡಿ ಕಾಲ್ಕಿತ್ತ ಚಿರತೆ!

Wild Animal Attack : ಜಮೀನಿಗೆ ತೆರಳುತ್ತಿದ್ದವರ ಮೇಲೆ ಚಿರತೆಯೊಂದು ದಾಳಿ (leopard attack) ಮಾಡಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು, ಚಿರತೆ ಸೆರೆಗೆ ಮುಂದಾಗಿದ್ದಾರೆ.

VISTARANEWS.COM


on

By

Leopard attack three in Raichur
Koo

ರಾಯಚೂರು: ಕಾಡುಪ್ರಾಣಿಗಳ ಹಾವಳಿ (Wild Animal Attack) ಹೆಚ್ಚಾಗಿದ್ದು, ಜನ-ಸಾಮಾನ್ಯರು ಆತಂಕದಲ್ಲೇ ಓಡಾಡುವಂತಾಗಿದೆ. ಆಹಾರ ಅರಸಿ ನಾಡಿಗೆ ಕಾಲಿಡುತ್ತಿರುವ ಪ್ರಾಣಿಗಳು ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡುತ್ತಿವೆ. ಜತೆಗೆ ಸಾಕುಪ್ರಾಣಿಗಳನ್ನು ಕೊಂದು ಎತ್ತಿಕೊಂಡು ಹೋಗುತ್ತಿವೆ. ಸದ್ಯ ರಾಯಚೂರಿನ ದೇವದುರ್ಗ ತಾಲ್ಲೂಕಿನ ಕಮದಾಳು ಗ್ರಾಮದಲ್ಲಿ ಮೂವರ ಮೇಲೆ ಚಿರತೆ (Leopard attack) ದಾಳಿ ನಡೆಸಿದೆ.

ಚಿರತೆ ದಾಳಿಯಿಂದಾಗಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮಲ್ಲಣ್ಣ, ರಂಗನಾಥ್‌, ಹನಮೇಶ ಕಮದಾಳ ಗಾಯಾಳುಗಳು. ಸದ್ಯ ಗಾಯಾಳುಗಳನ್ನು ದೇವದುರ್ಗ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಮೂವರು ಜಮೀನಿಗೆ ತೆರಳುತ್ತಿದ್ದಾಗ, ಹಿಂದಿನಿಂದ ಬಂದ ಚಿರತೆಯು ಮೂವರ ಮೇಲೂ ಎರಗಿ ದಾಳಿ ಮಾಡಿ ಗಾಯಗೊಳಿಸಿದೆ.

ಚಿರತೆ ಪ್ರತ್ಯಕ್ಷವಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿದೆ. ಇನ್ನೂ ಸ್ಥಳಕ್ಕೆ ಪೊಲೀಸ್ ಹಾಗೂ ಅರಣ್ಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಮದಾಳು,ಯರಮಸಾಳ, ಜೇರಬಂಡಿ, ಗುಂಡಗುರ್ತಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಕೂಡಲೇ ಸೆರೆಹಿಡಿಯುವಂತೆ ಜನರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Attempt To Murder: ಬಾಯಿಗೆ ಬಂದಂತೆ ಬೈದ್ರು ಅಂತ ಸಿಟ್ಟು; ಮಾಲೀಕನಿಗೆ ಹೊಡೆದು ಕೋಮಾಗೆ ಕಳಿಸಿದ ಸಪ್ಲೇಯರ್‌!

ನಾಡಿಗೆ ನುಗ್ಗಿದ ಕರಡಿಯನ್ನು ರಾತ್ರೋರಾತ್ರಿ ಕಾಡಿಗೆ ಅಟ್ಟಿದ ಅರಣ್ಯ ಇಲಾಖೆ ಸಿಬ್ಬಂದಿ

ವಿಜಯನಗರ: ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುದುರೆಡುವು ಗ್ರಾಮಕ್ಕೆ ನುಗ್ಗಿ ಕೆಲ ಕಾಲ ಆತಂಕ ಸೃಷ್ಟಿಸಿದ ಕರಡಿಯನ್ನು ಕೊನೆಗೂ ಅರಣ್ಯ ಇಲಾಖೆಯ ಸಿಬ್ಬಂದಿ ಕಾಡಿಗೆ ಅಟ್ಟಿದ್ದಾರೆ. ಕರಡಿ ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ (Wild Animals Attack).

ಕೂಡ್ಲಿಗಿ ತಾಲೂಕಿನ ಕುದುರೆಡವು ಗ್ರಾಮಕ್ಕೆ ಸಂಜೆ 6:30ಕ್ಕೆ ಬಂದಿದ್ದ ಕರಡಿ, ಹುಣಸೆ ಮರವೇರಿ ಕುಳಿತು ಬಿಟ್ಟಿತು. ಕರಡಿ ನೋಡಲು ನೂರಾರು ಗ್ರಾಮಸ್ಥರನ್ನು ನೆರೆದು ಗದ್ದಲದ ವಾತಾವಣ ಮೂಡಿದ್ದರಿಂದ ಬೆದರಿದ ಕರಡಿ ಮರ ಬಿಟ್ಟು ಕೆಳಗೆ ಇಳಿಯಲಿಲ್ಲ. ಆತಂಕಗೊಂಡ ಗ್ರಾಮಸ್ಥರು ಕೂಡಲೇ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದರು.

ನೆಮ್ಮದಿಯ ನಿಟ್ಟಿಸಿರು ಬಿಟ್ಟ ಗ್ರಾಮಸ್ಥರು

ಸ್ಥಳಕ್ಕಾಗಮಿಸಿದ ಗುಡೇಕೋಟೆ ಕರಡಿಧಾಮದ ಅರಣ್ಯಾಧಿಕಾರಿಗಳು, ಪೋಲೀಸರು ಕರಡಿಯನ್ನು ಕೆಳಗಿಳಿಸಲು ಹರಸಾಹಸ ಪಡಬೇಕಾಯಿತು. ʼʼಇದು ಗುಡೇಕೋಟೆ ಕರಡಿಧಾಮದಿಂದ ತಪ್ಪಿಸಿಕೊಂಡು ಬಂದ ಕರಡಿಯಾಗಿದ್ದು, ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳ ಹರಸಾಹಸ ಪಡಬೇಕಾಯಿತು. ಕಾರ್ಯಾಚರಣೆ ಆರಂಭಿಸಿದ ಅಧಿಕಾರಿಗಳು ರಾತ್ರಿ ಒಂದು ಗಂಟೆ ನಂತರ ಕರಡಿಯನ್ನು ಕಾಡಿಗೆ ಅಟ್ಟಿದರುʼʼ ಎಂದು ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿದರು. ಕರಡಿ ಏರಿದ್ದ ಮರದ ಸಮೀಪಕ್ಕೆ ತೆರಳಲು ಅಧಿಕಾರಿಗಳು ಸಾರ್ವಜನಿಕರಿಗೆ ಅವಕಾಶ ನೀಡಲಿಲ್ಲ. ಹೀಗಾಗಿ ಯಾವುದೇ ಅನಾಹುತ ಸಂಭವಿಸಿಲ್ಲ. ಕರಡಿ ಸುರಕ್ಷಿತವಾಗಿ ಕಾಡಿಗೆ ತೆರಳಿದ ಹಿನ್ನಲೆಯಲ್ಲಿ ಕುದುರೆಡವು ಗ್ರಾಮಸ್ಥರು ನೆಮ್ಮದಿಯ ನಿಟ್ಟಿಸಿರು ಬಿಟ್ಟಿದ್ದಾರೆ.

ಕಂಪ್ಲಿಯ ದೇವಸಮುದ್ರ ಗ್ರಾಮದಲ್ಲಿ ಎರಡು ಕರಡಿ ಪ್ರತ್ಯಕ್ಷ!

ಕಂಪ್ಲಿ: ಎರಡು ಕರಡಿಗಳು ಪ್ರತ್ಯಕ್ಷವಾದ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ದೇವಸಮುದ್ರ ಗ್ರಾಮದ ತುಂಗಾಭದ್ರಾ ಬಲದಂಡೆಯ ಕೆಳಮಟ್ಟದ ಕಾಲುವೆ ಬಳಿ ಮಂಗಳವಾರ ಬೆಳಗ್ಗೆ (Ballari News) ನಡೆದಿದೆ. ಗ್ರಾಮದ ತುಂಗಾಭದ್ರಾ ಬಲದಂಡೆಯ ಕೆಳಮಟ್ಟದ ಕಾಲುವೆ ಬಳಿ ಎರಡು ಕರಡಿಗಳು ಕಾಣಿಸಿಕೊಂಡಿದ್ದು, ಇದನ್ನು ಗಮನಿಸಿದ ಗ್ರಾಮಸ್ಥರು ತಕ್ಷಣ ಗ್ರಾಮಕ್ಕೆ ಮರಳಿ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಎರಡು ಕರಡಿಗಳು ಗ್ರಾಮದಲ್ಲೂ ಕಾಣಿಸಿಕೊಂಡಿವೆ.

ಗ್ರಾಮಸ್ಥರು ಕೂಗಾಡುತ್ತ ಗಲಾಟೆ ಮಾಡಿದ್ದರಿಂದ ಒಂದು ಕರಡಿ ದೇವಸಮುದ್ರ- ಕಂಪ್ಲಿ ಸಂಪರ್ಕಿಸುವ ಕ್ರಾಸ್ ಕಡೆ ಓಡಿ ಹೋದರೆ ಮತ್ತೊಂದು ಕರಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ, ತುರಮಂದಿ ಬಸವೇಶ್ವರ ದೇವಸ್ಥಾನದ ಕಡೆಗೆ ಓಡಿ ಹೋಗಿದೆ. ಗ್ರಾಮದಲ್ಲಿ ಕರಡಿ ಕಂಡಂತಹ ಕೆಲ ಜನರು ದಿಕ್ಕಾಪಲಾಗಿ ಓಡಿ ಹೋದರೆ ಇನ್ನು ಕೆಲ ಜನರ ಗುಂಪು ಅಲ್ಲಿಂದ ಚದುರಿಸಲು ಪ್ರಯತ್ನಿಸಿದಾಗ ಗ್ರಾಮದ ಹೊರ ವಲಯದ ಗೋದಾಮು ಬಳಿ ಬೇಲಿಯಲ್ಲಿ ಅವಿತು ಕುಳಿತಿದೆ. ಈ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ಪಡೆದು ಗ್ರಾಮಕ್ಕೆ ಆಗಮಿಸಿ ಕರಡಿ ಸೆರೆಗೆ ಬೋನ್ ಅಳವಡಿಸಿದ್ದಾರೆ. ಹೊಸಪೇಟೆ ವಲಯ ಅರಣ್ಯ ಅಧಿಕಾರಿ ಭರತ್‌ ರಾಜ್ ತಂಡದವರು ಕರಡಿ ಸೆರೆಗಾಗಿ ಸದ್ಯ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Tharun Sudhir Bigg update marriage
ಸ್ಯಾಂಡಲ್ ವುಡ್7 mins ago

Tharun Sudhir: ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ತರುಣ್ ಸುಧೀರ್; ಹುಡುಗಿ ಹೇಗಿರಬೇಕು ಅಂದ್ರೆ….

Dengue Cases in Mysore
ಕರ್ನಾಟಕ9 mins ago

Dengue Cases in Mysore: ಮೈಸೂರಿನಲ್ಲಿ ಡೆಂಗ್ಯೂಗೆ ಜಯದೇವ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಸಾವು

ishan Kishan
ಪ್ರಮುಖ ಸುದ್ದಿ15 mins ago

Ishan Kishan : ನನ್ನನ್ನು ಹೊರಗಿಟ್ಟಿರುವ ತೀರ್ಮಾನ ಮೂರ್ಖತನದ್ದು; ಜಯ್​ ಶಾಗೆ ಟಾಂಗ್​ ಕೊಟ್ಟ ಇಶಾನ್​ ಕಿಶನ್​

Rishab Shetty Birthday pragati shetty cute wish
ಸಿನಿಮಾ29 mins ago

Rishab Shetty: ನನ್ನ ಜೀವನದ ಆಧಾರಸ್ತಂಭ ಎಂದು ರಿಷಬ್ ಶೆಟ್ಟಿ ಹುಟ್ಟುಹಬ್ಬಕ್ಕೆ ಪತ್ನಿ ಕ್ಯೂಟ್‌ ವಿಶ್

Union Budget 2024
ದೇಶ39 mins ago

Union Budget 2024: ಆಯುಷ್ಮಾನ್‌ ಭಾರತ್‌ ಫಲಾನುಭವಿಗಳು ಡಬಲ್, ವಿಮೆ ಮೊತ್ತ 10 ಲಕ್ಷ ರೂ.ಗೆ ಏರಿಕೆ?

Mahadayi Water Dispute
ಕರ್ನಾಟಕ50 mins ago

Mahadayi Water Dispute: ಮಹದಾಯಿ ಜಲಾನಯನ ಪ್ರದೇಶಕ್ಕೆ ಕೇಂದ್ರದ ಪ್ರವಾಹ್ ತಂಡ ಭೇಟಿ; ನಾಲೆಗಳ ಪರಿಶೀಲನೆ

kalaburagi news
ಕಲಬುರಗಿ52 mins ago

Kalaburagi News : ಆಕ್ಸಿಜನ್ ಸೋರಿಕೆ! ತಾಲೂಕು ಆಸ್ಪತ್ರೆಯಿಂದ ಹೊರಗೆ ಓಡಿದ ರೋಗಿಗಳು

Kannada New Movie Firefly movie entry by achyuth kumar
ಸಿನಿಮಾ1 hour ago

Kannada New Movie: ಶಿವಣ್ಣನ ಪುತ್ರಿ ಜತೆ ಕೈ ಜೋಡಿಸಿದ ಅಚ್ಯುತ್ ಕುಮಾರ್!

Paris Olympics 2024
ಕ್ರೀಡೆ1 hour ago

Paris Olympics 2024: ಒಲಿಂಪಿಕ್ಸ್‌ಗೆ ಭಾರತದ ಎಲ್ಲ ಕ್ರೀಡಾಪಟುಗಳು ಫಿಟ್‌ ಎಂದ ಐಒಎ

Dolly Dhananjay zebra movie look out
ಸ್ಯಾಂಡಲ್ ವುಡ್1 hour ago

Dolly Dhananjay: ʻಜೀಬ್ರಾʼ ತಂಡದಿಂದ ಹೊರ ಬಿತ್ತು ʻಸತ್ಯದೇವ್ʼ ಫಸ್ಟ್‌ ಲುಕ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ10 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ22 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ1 day ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ1 day ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು1 day ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ1 day ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ1 day ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ2 days ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ2 days ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ2 days ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

ಟ್ರೆಂಡಿಂಗ್‌