How Many Women Candidates have won in Karnataka Election 2023Karnataka Election Results: ವಿಧಾನಸೌಧದಲ್ಲಿ ನಾರಿ ಶಕ್ತಿ; ಚುನಾವಣೆಯಲ್ಲಿ ಗೆದ್ದ ಮಹಿಳೆಯರು ಎಷ್ಟು? - Vistara News

ಕರ್ನಾಟಕ

Karnataka Election Results: ವಿಧಾನಸೌಧದಲ್ಲಿ ನಾರಿ ಶಕ್ತಿ; ಚುನಾವಣೆಯಲ್ಲಿ ಗೆದ್ದ ಮಹಿಳೆಯರು ಎಷ್ಟು?

Karnataka Election Results: ರಾಜ್ಯದಲ್ಲಿ ಈ ಬಾರಿ 184 ಮಹಿಳೆಯರು ಸ್ಪರ್ಧಿಸಿದ್ದರು. ಇವರಲ್ಲಿ 10 ಮಹಿಳೆಯರು ಮಾತ್ರ ಗೆಲುವು ಸಾಧಿಸಿದ್ದಾರೆ. ಅವರ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Karnataka Election Results
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ (Karnataka Election Results) ನಾರಿಶಕ್ತಿಯು ಕೂಡ ಮುನ್ನಡೆ ಸಾಧಿಸಿದ್ದು, ಈ ಬಾರಿ 10 ಮಹಿಳೆಯರು ಗೆಲುವು ಸಾಧಿಸಿದ್ದಾರೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್‌ ಜತೆಗೆ ಜೆಡಿಎಸ್‌ ಹಾಗೂ ಪಕ್ಷೇತರವಾಗಿ ಸ್ಪರ್ಧಿಸಿದ ಮಹಿಳೆಯರೂ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ನ ನಾಲ್ವರು, ಬಿಜೆಪಿಯ ಮೂವರು, ಜೆಡಿಎಸ್‌ನ ಇಬ್ಬರು ಹಾಗೂ ಒಬ್ಬ ಪಕ್ಷೇತರ ಮಹಿಳೆಯರು ಗೆದ್ದಿದ್ದಾರೆ.

ರಾಜ್ಯದಲ್ಲಿ 2,613 ಅಭ್ಯರ್ಥಿಗಳು ಕಣದಲ್ಲಿದ್ದರು. ಇವರಲ್ಲಿ 184 ಮಹಿಳೆಯರು ಕೂಡ ಇದ್ದರು. ಕಣದಲ್ಲಿದ್ದ 184 ಮಹಿಳೆಯರಲ್ಲಿ 10 ಮಹಿಳೆಯರು ಗೆಲುವು ಸಾಧಿಸಿದ್ದಾರೆ. ಅಂದರೆ, ಶೇ.6ರಷ್ಟು ಮಹಿಳೆಯರು ಗೆಲುವು ಸಾಧಿಸಿದಂತಾಗಿದೆ. ಕಳೆದ ಬಾರಿ ಆರು ಮಹಿಳೆಯರು ವಿಧಾನಸಭೆ ಪ್ರವೇಶಿಸಿದ್ದರು. ಈ ಬಾರಿ ಸಂಖ್ಯೆ ಹೆಚ್ಚಾಗಿರುವುದು ಸಕಾರಾತ್ಮಕ ಬೆಳವಣಿಗೆಯಾಗಿದೆ.

ಗೆದ್ದ ಮಹಿಳೆಯರು ಯಾರು?

  1. ರೂಪಕಲಾ ಎಂ (ಕಾಂಗ್ರೆಸ್‌): ಕೆಜಿಎಫ್‌
  2. ಕನೀಜ್‌ ಫಾತಿಮಾ (ಕಾಂಗ್ರೆಸ್‌): ಕಲಬುರಗಿ ಉತ್ತರ
  3. ಲಕ್ಷ್ಮೀ ಹೆಬ್ಬಾಳ್ಕರ್ (ಕಾಂಗ್ರೆಸ್‌): ಬೆಳಗಾವಿ ಗ್ರಾಮೀಣ
  4. ನಯನಾ ಮೋಟಮ್ಮ‌ (ಕಾಂಗ್ರೆಸ್‌): ಮೂಡಿಗೆರೆ
  5. ಶಶಿಕಲಾ ಜೊಲ್ಲೆ (ಬಿಜೆಪಿ): ನಿಪ್ಪಾಣಿ
  6. ಭಾಗೀರಥಿ ಮುರುಳ್ಯ (ಬಿಜೆಪಿ): ಸುಳ್ಯ
  7. ಮಂಜುಳಾ ಅರವಿಂದ್‌ ಲಿಂಬಾವಳಿ (ಬಿಜೆಪಿ): ಮಹದೇವಪುರ
  8. ಶಾರದಾ ಪೂರ್ಯಾ ನಾಯ್ಕ (ಜೆಡಿಎಸ್‌): ಶಿವಮೊಗ್ಗ ಗ್ರಾಮಾಂತರ
  9. ಜಿ. ಕರೆಮ್ಮ (ಜೆಡಿಎಸ್‌): ದೇವದುರ್ಗ
  10. ಲತಾ ಮಲ್ಲಿಕಾರ್ಜುನ (ಪಕ್ಷೇತರ): ಹರಪನಹಳ್ಳಿ

ಇದನ್ನೂ ಓದಿ: Karnataka Election Results: ಕೈ – ಕಮಲ ಅದಲು ಬದಲಾದ ಸ್ಥಿತಿ, ಯಾವ ವಲಯದಲ್ಲಿ ಯಾವ ಪಕ್ಷಕ್ಕೆ ಹೆಚ್ಚಿನ ಸ್ಥಾನ?

ಹೊಸ ಮುಖಗಳಿಗೆ ಮಣೆ

ರಾಜ್ಯದಲ್ಲಿ ಮತದಾರರು ಮೊದಲ ಬಾರಿ ಸ್ಪರ್ಧಿಸಿದ ಮಹಿಳೆಯರನ್ನು ಗೆಲ್ಲಿಸಿದ್ದಾರೆ. ಮೋಟಮ್ಮ ಪುತ್ರಿ ನಯನಾ ಮೋಟಮ್ಮ, ಲತಾ ಮಲ್ಲಿಕಾರ್ಜುನ್‌ ಹಾಗೂ ಮಂಜುಳಾ ಲಿಂಬಾವಳಿ ಅವರು ಮೊದಲ ಪ್ರಯತ್ನದಲ್ಲಿಯೇ ಗೆಲುವು ಸಾಧಿಸಿದ್ದಾರೆ. ಇನ್ನು ಕಾಂಗ್ರೆಸ್‌ನ ಅಂಜಲಿ ನಿಂಬಾಳ್ಕರ್‌, ಕೆ.ಪೂರ್ಣಿಮಾ, ಕುಸುಮಾ ಹಾಗೂ ಸೌಮ್ಯಾ ರೆಡ್ಡಿ ಅವರು ಸೋತ ಪ್ರಮುಖರಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Rapido Bike Taxi: ಏ.26ರಂದು ಬೆಂಗಳೂರು ಸೇರಿ 3 ನಗರಗಳಲ್ಲಿ ಮತದಾರರಿಗೆ ರ‍್ಯಾಪಿಡೋದಿಂದ ಉಚಿತ ರೈಡ್‌ ಆಫರ್‌

Rapido Free Ride: ವಿಶೇಷವಾಗಿ ಬೆಂಗಳೂರಿನಲ್ಲಿ ಬಿಬಿಎಂಪಿ ಸಹಯೋಗದೊಂದಿಗೆ ವಿಶೇಷಚೇತನರು ಮತ್ತು ಹಿರಿಯ ನಾಗರಿಕ ಮತದಾರರಿಗೆ ಪ್ರತ್ಯೇಕವಾಗಿ ರ‍್ಯಾಪಿಡೋದ ಉಚಿತ ಆಟೋ ಮತ್ತು ಕ್ಯಾಬ್ ಸೇವೆಗಳನ್ನು ವಿಸ್ತರಿಸಲಾಗಿದೆ.

VISTARANEWS.COM


on

Koo

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಮತದಾನ ಪ್ರೋತ್ಸಾಹಿಸಲು ಉಚಿತ ಹಾಗೂ ರಿಯಾಯಿತಿ ದರದಲ್ಲಿ ಊಟ, ತಿಂಡಿ ವಿತರಣೆಗೆ ಹಲವು ಹೋಟೆಲ್‌ಗಳಲ್ಲಿ ಮುಂದಾಗಿದೆ. ಅದೇ ರೀತಿ ಮತದಾರರು ತಮ್ಮ ಹಕ್ಕು ಚಲಾವಣೆ ಮಾಡಲು ಅನುಕೂಲವಾಗಲು ಭಾರತದ ಅಗ್ರಗಣ್ಯ ಪ್ರಯಾಣ ಅಪ್ಲಿಕೇಶನ್ ರ‍್ಯಾಪಿಡೋ ಸಂಸ್ಥೆ “ಸವಾರಿ ಜಿಮ್ಮೆದಾರಿ ಕಿ” ಉಪಕ್ರಮದ ಭಾಗವಾಗಿ ಏ.26ರಂದು ಬೆಂಗಳೂರು, ಮೈಸೂರು ಹಾಗೂ ಮಂಗಳೂರು ನಗರದಲ್ಲಿ ಮತದಾರರಿಗೆ ರ‍್ಯಾಪಿಡೋ ಉಚಿತ ಬೈಕ್‌ ಸವಾರಿ (Rapido Bike Taxi) ಒದಗಿಸುವಾಗಿ ಘೋಷಿಸಿದೆ. ವಿಶೇಷವಾಗಿ ಬೆಂಗಳೂರಿನಲ್ಲಿ ವಿಶೇಷಚೇತನರು ಮತ್ತು ಹಿರಿಯ ನಾಗರಿಕ ಮತದಾರರಿಗೆ ಉಚಿತ ಆಟೋ ಮತ್ತು ಕ್ಯಾಬ್ ರೈಡ್‌ ಸೌಲಭ್ಯ ಸಿಗಲಿದೆ.

ಭಾರತದ ಚುನಾವಣಾ ಆಯೋಗ (ಇಸಿಐ) ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಹಯೋಗದೊಂದಿಗೆ ರ‍್ಯಾಪಿಡೋ, ಭಾರತದ ಸಾರ್ವತ್ರಿಕ ಚುನಾವಣೆ-2024 ಸಂದರ್ಭದಲ್ಲಿ ಬೆಂಗಳೂರಿನಲ್ಲಿರುವ ವಿಶೇಷಚೇತನರು ಮತ್ತು ಹಿರಿಯ ನಾಗರಿಕ ಮತದಾರರಿಗೆ ಉಚಿತ ಆಟೋ ಮತ್ತು ಕ್ಯಾಬ್ ರೈಡ್‌ ಒದಗಿಸಲು ನಿರ್ಧರಿಸಿದೆ. ಹೀಗಾಗಿ ಏ.26ರಂದು ಬೆಂಗಳೂರಿನ ಮತದಾರರು ರ‍್ಯಾಪಿಡೋ ಉಚಿತ ಸವಾರಿ ಅನುಕೂಲ ಪಡೆಯಬಹುದಾಗಿದೆ.

ಮತದಾನದ (ಏ.26) ದಿನದಂದು, ಮತದಾರರು ‘VOTENOW’ ಕೋಡ್ ಅನ್ನು ಬಳಸಿಕೊಂಡು ರ‍್ಯಾಪಿಡೋ ಅಪ್ಲಿಕೇಶನ್‌ನಲ್ಲಿ ಉಚಿತ ಸವಾರಿಗಳನ್ನು ಪಡೆಯಬಹುದು ಮತ್ತು ತಮ್ಮ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಬಹುದು. ಈ ಉಪಕ್ರಮವು ನಿವಾಸಿಗಳ ಮತದಾನದ ಹಕ್ಕು ಚಲಾವಣೆ ಸುಲಭಗೊಳಿಸುವ ಗುರಿ ಹೊಂದಿದೆ. ಚುನಾವಣಾ ದಿನದಂದು ಉಚಿತ ಸವಾರಿಗಳನ್ನು ಒದಗಿಸಲು 100ಕ್ಕೂ ಹೆಚ್ಚು ನಗರಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಕ್ಯಾಪ್ಟನ್‌ಗಳನ್ನು ರ‍್ಯಾಪಿಡೋ ನಿಯೋಜಿಸುತ್ತದೆ. ಭಾರತದ ಚುನಾವಣಾ ಆಯೋಗ ಬೆಂಬಲದೊಂದಿಗೆ, ರ‍್ಯಾಪಿಡೋ ಕರ್ನಾಟಕದ ಮತದಾರರಿಗೆ ಬೆಂಗಳೂರು, ಮೈಸೂರು ಮತ್ತು ಮಂಗಳೂರು ನಗರಗಳಾದ್ಯಂತ ಚುನಾವಣಾ ದಿನದಂದು ಉಚಿತ ಬೈಕ್ ಟ್ಯಾಕ್ಸಿ ಸವಾರಿಗಳನ್ನು ನೀಡಲಿದೆ.

ಕರ್ನಾಟಕ ರಾಜ್ಯ ಚುನಾವಣಾ ಆಯೋಗದೊಂದಿಗಿನ ರ‍್ಯಾಪಿಡೋ ಪಾಲುದಾರಿಕೆಯು ಉತ್ತಮ ಸಮಾಜಕ್ಕಾಗಿ ಧನಾತ್ಮಕ ಬದಲಾವಣೆಯನ್ನು ಪ್ರೇರೇಪಿಸುವ ಬದ್ಧತೆ ಹೊಂದಿದೆ. ಈ ಕುರಿತು ರ‍್ಯಾಪಿಡೋ ಸಹ-ಸಂಸ್ಥಾಪಕ ಪವನ್ ಗುಂಟುಪಲ್ಲಿ ಮಾತನಾಡಿ, “ಭಾರತೀಯ ಸಾರ್ವತ್ರಿಕ ಚುನಾವಣೆ 2024 ರಲ್ಲಿ ಮತದಾನ ಮಾಡುವ ಮೂಲಕ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನ ಪ್ರತಿಯೊಬ್ಬ ಮತದಾರರು ತಮ್ಮ ನಾಗರಿಕ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಲು ನಾವು ಈ ಉಪಕ್ರಮವನ್ನು ಕೈಗೊಳ್ಳುತ್ತಿದ್ದೇವೆ. ಬೆಂಗಳೂರಿನ ಮತದಾರರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವುದನ್ನು ಖಚಿತಪಡಿಸಿಕೊಳ್ಳಲು ನಾವು ಲಭ್ಯವಿರುವ ಎಲ್ಲಾ ಸಂಪನ್ಮೂಲಗಳನ್ನು ನಿಯೋಜಿಸಿದ್ದೇವೆ. ವಿಶೇಷವಾಗಿ ವಿಶೇಷಚೇತನರು ಮತ್ತು ಹಿರಿಯ ನಾಗರಿಕ ಮತದಾರರು ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಚಲಾಯಿಸಲು ಸಮಾನ ಅವಕಾಶ ಹೊಂದಿದ್ದಾರೆ ಎಂದು ನಾವು ನಿರ್ದಿಷ್ಟವಾಗಿ ಖಚಿತಪಡಿಸಿಕೊಳ್ಳಲು ಬಯಸುತ್ತೇವೆ. ಅವರಿಗೆ ಉಚಿತ ಆಟೋ ಮತ್ತು ಕ್ಯಾಬ್ ಸವಾರಿಗಳನ್ನು ವಿಸ್ತರಿಸುವ ಮೂಲಕ, ನಾವು ಒಳಗೊಳ್ಳುವಿಕೆ ಮತ್ತು ಸಾಮಾಜಿಕ ಜವಾಬ್ದಾರಿಗೆ ನಮ್ಮ ಬದ್ಧತೆಯನ್ನು ದ್ವಿಗುಣಗೊಳಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಮುಂದುವರೆದು, ಈ ಉಚಿತ ಸವಾರಿಗಳನ್ನು ನೀಡುವ ಮೂಲಕ, ನಾವು ಕರ್ನಾಟಕದಲ್ಲಿ ನಮ್ಮ ರ‍್ಯಾಪಿಡೋ ನಾಯಕರು ಕೇವಲ ಚಾಲಕರಿಗಿಂತ ಹೆಚ್ಚಿನ ಮತದಾರರು, ಹೆಚ್ಚಿನ ಮತದಾನವನ್ನು ಸಕ್ರಿಯಗೊಳಿಸುತ್ತಾರೆ ಮತ್ತು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ ಹೆಚ್ಚು ಪ್ರಾತಿನಿಧಿಕ ಚುನಾವಣಾ ವ್ಯವಸ್ಥೆಯನ್ನು ಉತ್ತೇಜಿಸುತ್ತಾರೆ ಎಂದರು.

ಕರ್ನಾಟಕ ರಾಜ್ಯ ಚುನಾವಣಾ ಆಯೋಗದೊಂದಿಗೆ ರ‍್ಯಾಪಿಡೋ ಪಾಲುದಾರಿಕೆಯು ಉತ್ತಮ ಸಮಾಜಕ್ಕಾಗಿ ಬದಲಾವಣೆಯನ್ನು ಪ್ರೇರೇಪಿಸುವ ಬ್ರಾಂಡ್ ಆಗಿರುವ ಅದರ ಬದ್ಧತೆಯನ್ನು ಒತ್ತಿಹೇಳುತ್ತದೆ. ಈ ರೀತಿಯ ಉಪಕ್ರಮಗಳ ಮೂಲಕ, ರ‍್ಯಾಪಿಡೋ ದೇಶಾದ್ಯಂತ ಜನರ ಜೀವನದಲ್ಲಿ ಅರ್ಥಪೂರ್ಣ ಬದಲಾವಣೆಯನ್ನು ಮಾಡುವ ತನ್ನ ಸಮರ್ಪಣೆಯನ್ನು ಪ್ರದರ್ಶಿಸುವುದನ್ನು ಮುಂದುವರೆಸಿದೆ. ಈ ಉಪಕ್ರಮವು ತಮ್ಮ ಮತ ಚಲಾಯಿಸುವ ಮೂಲಕ ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಚಲಾಯಿಸಲು ಕರ್ನಾಟಕದ ಮತದಾರರ ಜನಸಂಖ್ಯೆಯನ್ನು ಸಶಕ್ತಗೊಳಿಸಲು ಮತ್ತು ಉತ್ತೇಜಿಸಲು ರ‍್ಯಾಪಿಡೋ ಅವರ ಸಮರ್ಪಣೆಯನ್ನು ಒತ್ತಿಹೇಳುತ್ತದೆ.

ಇದನ್ನೂ ಓದಿ | Bike Taxi Services: ಬೈಕ್ ಟ್ಯಾಕ್ಸಿ ಸವಾರರಿಗೆ ಕಿರುಕುಳ ನೀಡುವವರ ವಿರುದ್ಧ ಕ್ರಮಕ್ಕೆ ಹೈಕೋರ್ಟ್‌ ಸೂಚನೆ

ನಾಗರಿಕ ಒಗ್ಗೂಡುವಿಕೆ ಪೂರ್ವಭಾವಿ ಹೆಜ್ಜೆಯಲ್ಲಿ, ರ‍್ಯಾಪಿಡೋ ತನ್ನ ಎಲ್ಲಾ ಸಂಪನ್ಮೂಲಗಳನ್ನು ಭಾರತೀಯ ಚುನಾವಣಾ ಆಯೋಗದೊಂದಿಗೆ (ಇಸಿಐ) ಕೈಜೋಡಿಸುವ ಮೂಲಕ ಬೆಂಗಳೂರಿನ ಮತದಾರರಿಗೆ ಉಚಿತ ಬೈಕ್ ಟ್ಯಾಕ್ಸಿ, ಆಟೋ ಮತ್ತು ಕ್ಯಾಬ್ ರೈಡ್‌ಗಳನ್ನು ನೀಡುತ್ತಿದೆ

Continue Reading

Lok Sabha Election 2024

Lok Sabha Election 2024: ಇಂದಿನಿಂದ 3 ದಿನ ಬೆಂಗಳೂರಲ್ಲಿ ಮದ್ಯ ಮಾರಾಟ ಇಲ್ಲ; ಮತ್ತೂ 1 ದಿನ ಸಿಗಲ್ಲ ಎಣ್ಣೆ!

Lok Sabha Election 2024: ಈ ಸಮಯದಲ್ಲಿ ಅಂಗಡಿಗಳು, ಬಾರ್‌ಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳು ಸೇರಿದಂತೆ ಯಾವುದೇ ಸಂಸ್ಥೆಗಳು ಮದ್ಯ ಮಿಶ್ರಿತ ಪಾನೀಯಗಳನ್ನು ಮಾರಾಟ ಮಾಡುವಂತಿಲ್ಲ. ಈ ಎಲ್ಲದಕ್ಕೂ ನಿರ್ಬಂಧವನ್ನು ವಿಧಿಸಲಾಗಿದೆ. ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳು ಆಹಾರ ಮತ್ತು ಆಲ್ಕೊಹಾಲ್‌ಯುಕ್ತವಲ್ಲದ ಪಾನೀಯಗಳನ್ನು ನೀಡಲು ಅನುಮತಿ ಇದೆ ಎಂದು ಆದೇಶದಲ್ಲಿ ಹೇಳಲಾಗಿದೆ.

VISTARANEWS.COM


on

Lok Sabha Election 2024 No sale of liquor in Bengaluru for 3 days from today
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಏಪ್ರಿಲ್ 26ರಂದು ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ (First phase of polling) ನಡೆಯಲಿದೆ. ಈ ವೇಳೆ 14 ಲೋಕಸಭಾ ಕ್ಷೇತ್ರಗಳಿಗೆ ಕೆಲವು ನಿಯಮಗಳು ಅನ್ವಯವಾಗಲಿದೆ. ಈ ಸಂಬಂಧ ಈಗ ಬೆಂಗಳೂರು ನಗರದಲ್ಲಿ ಬುಧವಾರ (ಏಪ್ರಿಲ್‌ 24) ಸಂಜೆ 5 ಗಂಟೆಯಿಂದ ಏಪ್ರಿಲ್‌ 26ರ ಮಧ್ಯರಾತ್ರಿ ವರೆಗೆ ಎಲ್ಲ ರೀತಿಯ ಮದ್ಯ ಮಾರಾಟವನ್ನು (Sale of liquor) ನಿಷೇಧಿಸಿ ಆದೇಶಿಸಲಾಗಿದೆ.

ಬೆಂಗಳೂರು ನಗರ ಪೊಲೀಸ್ ಇಲಾಖೆ ಈ ನಿರ್ದೇಶನವನ್ನು ನೀಡಿದೆ. ಏಪ್ರಿಲ್ 24ರ ಬುಧವಾರ ಸಂಜೆ 5 ರಿಂದ ಏಪ್ರಿಲ್ 26 ರ ಮಧ್ಯರಾತ್ರಿವರೆಗೆ ಎಲ್ಲ ಮದ್ಯದ ಅಂಗಡಿಗಳನ್ನು ಮುಚ್ಚಲಾಗುವುದು ಎಂದು ನಿರ್ದೇಶನದಲ್ಲಿ ಉಲ್ಲೇಖಿಸಲಾಗಿದೆ.

ಮತ ಎಣಿಕೆ ದಿನವೂ ಬೆಂಗಳೂರಲ್ಲಿ ಇಲ್ಲ ಮದ್ಯ ಮಾರಾಟ

ಬೆಂಗಳೂರಿನಲ್ಲಿ ಮತ ಎಣಿಕೆ ದಿನವೂ ಒಂದಿಡೀ ದಿನ ಮದ್ಯ ಮಾರಾಟವನ್ನು ನಿಷೇಧಿಸಿ ಆದೇಶವನ್ನು ಹೊರಡಿಸಲಾಗಿದೆ. ಜೂನ್ 3ರ ಮಧ್ಯರಾತ್ರಿ 12 ಗಂಟೆಯಿಂದ ಜೂನ್ 4 ರ ಮಧ್ಯರಾತ್ರಿ 12 ಗಂಟೆವರೆಗೆ ಮದ್ಯ ಮಾರಾಟವನ್ನು ಸ್ಥಗಿತಗೊಳಿಸಿ ಆದೇಶಿಸಲಾಗಿದೆ.

ಈ ಸಮಯದಲ್ಲಿ ಅಂಗಡಿಗಳು, ಬಾರ್‌ಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳು ಸೇರಿದಂತೆ ಯಾವುದೇ ಸಂಸ್ಥೆಗಳು ಮದ್ಯ ಮಿಶ್ರಿತ ಪಾನೀಯಗಳನ್ನು ಮಾರಾಟ ಮಾಡುವಂತಿಲ್ಲ. ಈ ಎಲ್ಲದಕ್ಕೂ ನಿರ್ಬಂಧವನ್ನು ವಿಧಿಸಲಾಗಿದೆ. ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳು ಆಹಾರ ಮತ್ತು ಆಲ್ಕೊಹಾಲ್‌ಯುಕ್ತವಲ್ಲದ ಪಾನೀಯಗಳನ್ನು ನೀಡಲು ಅನುಮತಿ ಇದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಆದೇಶದಲ್ಲೇನಿದೆ?

“ನಾನು, ಡೆಪ್ಯುಟಿ ಕಮಿಷನರ್ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು, ಸರ್ಕಾರದ ಕರ್ನಾಟಕ ಅಬಕಾರಿ ಕಾಯಿದೆಗಳ (ಸಾಮಾನ್ಯ ಷರತ್ತುಗಳು) ನಿಯಮಗಳು, 1967 ರ ನಿಯಮ-10 (ಬಿ) ಸೆಕ್ಷನ್ 135 (ಸಿ) ಮೂಲಕ ಪ್ರದಾನ ಮಾಡಲಾದ ಅಧಿಕಾರಗಳನ್ನು ಚಲಾಯಿಸುವಾಗ ಮತ್ತು ಪ್ರಜಾಪ್ರತಿನಿಧಿ ಕಾಯಿದೆ, 1951 ಮತದಾನದ ದಿನಾಂಕ: 24-04-2024 ರಿಂದ ಸಂಜೆ 5.00 ರವರೆಗೆ ದಿನಾಂಕ: 26-04-2024 12.00 ಮಧ್ಯರಾತ್ರಿ ಮತ್ತು ಎಣಿಕೆ ದಿನಾಂಕ: 03-06-2024 12.00 ಮಧ್ಯರಾತ್ರಿಯಿಂದ 12.04-4 ಮಧ್ಯರಾತ್ರಿ 6 ರಂದು 24-04-2024 ರವರೆಗೆ ಬೆಂಗಳೂರು ನಗರ ಜಿಲ್ಲೆ (ಪೊಲೀಸ್ ಕಮಿಷನರೇಟ್ ಪ್ರದೇಶ ಹೊರತುಪಡಿಸಿ) ಎಲ್ಲ ರೀತಿಯ ಮದ್ಯ ಉತ್ಪಾದನೆ, ಮಾರಾಟ, ವಿತರಣೆ, ಸಾಗಣೆ, ಸಂಗ್ರಹಣೆ ಇತ್ಯಾದಿಗಳನ್ನು ನಿಷೇಧಿಸಿ ಆದೇಶವನ್ನು ಜಾರಿಗೊಳಿಸಿ ಮತ್ತು ‘ಡ್ರೈ ಡೇಸ್’ ಎಂದು ಘೋಷಿಸಲಾಗಿದೆ” ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ಏಪ್ರಿಲ್‌ 26ಕ್ಕೆ ಮೊದಲ ಹಂತದ ಮತದಾನ; ಸಾರ್ವತ್ರಿಕ ರಜೆ ಘೋಷಿಸಿದ ರಾಜ್ಯ ಸರ್ಕಾರ

ಬೆಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಏಪ್ರಿಲ್ 24 ರಂದು ಸಂಜೆ 6 ರಿಂದ ಏಪ್ರಿಲ್ 26 ರ ಮಧ್ಯರಾತ್ರಿಯವರೆಗೆ ಸಿಆರ್‌ಪಿಸಿಯ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Continue Reading

ಕರ್ನಾಟಕ

Muslims OBC Quota: ಎಲ್ಲ ಮುಸ್ಲಿಮರನ್ನು ಒಬಿಸಿಗೆ ಸೇರಿಸಿದ ಸಿದ್ದರಾಮಯ್ಯ ಸರ್ಕಾರ; ರಾಷ್ಟ್ರೀಯ ಆಯೋಗ ಕೆಂಡ!

Muslims OBC Quota: ಕರ್ನಾಟಕದ ಎಲ್ಲ ಮುಸ್ಲಿಮರನ್ನು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಒಬಿಸಿ ಮೀಸಲಾತಿ ವ್ಯಾಪ್ತಿಗೆ ಸೇರಿಸಿದೆ. ಈ ಕುರಿತು ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗವು ಮಾಹಿತಿ ನೀಡಿದೆ. ಆದರೆ, ಒಬಿಸಿ ಮೀಸಲಾತಿಯು ಸಮುದಾಯಗಳಿಗೆ ಸೇರಿದೆಯೇ ಹೊರತು, ಇಡೀ ಧರ್ಮಕ್ಕೆ ನೀಡುವುದು ಸರಿಯಲ್ಲ ಎಂದು ಆಯೋಗವು ಅಸಮಾಧಾನ ವ್ಯಕ್ತಪಡಿಸಿದೆ. ಇದು ಈಗ ಚರ್ಚೆಗೆ ಗ್ರಾಸವಾಗಿದೆ.

VISTARANEWS.COM


on

Muslims OBC Quota
Koo

ಬೆಂಗಳೂರು/ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹೊತ್ತಿನಲ್ಲಿಯೇ ಕರ್ನಾಟಕ ಸರ್ಕಾರವು (Karnataka Government) ಮಹತ್ವದ ತೀರ್ಮಾನವೊಂದು ತೆಗೆದುಕೊಂಡಿದೆ. ಹೌದು, ಉದ್ಯೋಗ ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಮೀಸಲಾತಿ ನೀಡುವ ದಿಸೆಯಲ್ಲಿ ರಾಜ್ಯ ಸರ್ಕಾರವು ಮುಸ್ಲಿಮರನ್ನು ಇತರೆ ಹಿಂದುಳಿದ ವರ್ಗಗಳ (Muslims OBC Quota) ಕೆಟಗರಿಗೆ ಸೇರಿದೆ. ಆದರೆ, ಇದಕ್ಕೆ ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗವು (NCBC) ಆಕ್ರೋಶ ವ್ಯಕ್ತಪಡಿಸಿದೆ.

ಕರ್ನಾಟಕ ಸರ್ಕಾರವು ಮುಸ್ಲಿಮರಿಗೆ ಮೀಸಲಾತಿ ನೀಡುವ ದಿಸೆಯಲ್ಲಿ ಆ ಧರ್ಮದ ಎಲ್ಲರನ್ನೂ ಒಬಿಸಿಗೆ ಸೇರಿಸಿರುವ ಕುರಿತು ಎನ್‌ಸಿಬಿಸಿಯೇ ಮಾಹಿತಿ ನೀಡಿದೆ. “ಮೀಸಲಾತಿ ನೀಡಲು ಕರ್ನಾಟಕ ಸರ್ಕಾರವು ಮುಸ್ಲಿಮರನ್ನು ಒಬಿಸಿ ಕೆಟಗರಿಗೆ ಸೇರಿಸಿದೆ. ಇದು ಸಾಮಾಜಿಕ ನ್ಯಾಯ ತತ್ವಕ್ಕೆ ವಿರುದ್ಧವಾಗಿದೆ. ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ಒಬಿಸಿ ಮೀಸಲಾತಿ ನೀಡಬೇಕೇ ಹೊರತು, ಇಡೀ ಧರ್ಮವನ್ನೇ ಒಬಿಸಿಗೆ ಸೇರಿಸಿರುವುದು ಸರಿಯಲ್ಲ” ಎಂದು ಎನ್‌ಸಿಬಿಸಿ ಅಸಮಾಧಾನ ವ್ಯಕ್ತಪಡಿಸಿದೆ.

ಕರ್ನಾಟಕ ಸರ್ಕಾರವು ಮುಸ್ಲಿಮರನ್ನು ಒಬಿಸಿಗೆ ಸೇರಿಸಿರುವ ಕುರಿತು ಎನ್‌ಸಿಬಿಸಿಯು ದಾಖಲೆಗಳನ್ನೂ ನೀಡಿದೆ. ಮಾಹಿತಿ ಪ್ರಕಾರ, “ಕರ್ನಾಟಕಲ್ಲಿ ಮುಸ್ಲಿಮರ ಸಂಖ್ಯೆ ಶೇ.12.92ರಷ್ಟಿದೆ. ಕೆಟಗರಿ II-B ಅನ್ವಯ ಕರ್ನಾಟಕದಲ್ಲಿರುವ ಎಲ್ಲ ಮುಸ್ಲಿಮರು ಒಬಿಸಿ ಕೆಟಗರಿ ವ್ಯಾಪ್ತಿಗೆ ಸೇರುತ್ತಾರೆ. ಕೆಟಗರಿ 1ರಲ್ಲಿ 17 ಮುಸ್ಲಿಂ ಸಮುದಾಯಗಳು, 2ಎ ಕೆಟಗರಿಯಲ್ಲಿ 19 ಮುಸ್ಲಿಂ ಸಮುದಾಯಗಳು ಬರುತ್ತವೆ. ಇದು ಸಾಮಾಜಿಕ ನ್ಯಾಯ ತತ್ವದ ವಿರುದ್ಧದ ತೀರ್ಮಾನವಾಗಿದೆ” ಎಂಬುದಾಗಿ ಎನ್‌ಸಿಬಿಸಿ ತಿಳಿಸಿದೆ.

“ಹಿಂದುಗಳು, ಮುಸ್ಲಿಮರು ಸೇರಿ ಎಲ್ಲ ಧರ್ಮಗಳಲ್ಲಿಯೇ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯದವರಿಗೆ ಮಾತ್ರ ಒಬಿಸಿ ಮೀಸಲಾತಿ ನೀಡಲಾಗುತ್ತಿದೆ. ಆದರೆ, ಒಂದಿಡೀ ಧರ್ಮಕ್ಕೇ ಒಬಿಸಿ ಮೀಸಲಾತಿ ನೀಡುವುದು ಆ ಮೀಸಲಾತಿಯ ತತ್ವಕ್ಕೆ ವಿರುದ್ಧವಾಗಿದೆ. ಆದರೆ, ಎಲ್ಲ ಮುಸ್ಲಿಂ ಸಮುದಾಯದವರನ್ನು ಒಬಿಸಿಗೆ ಸೇರ್ಪಡೆ ಮಾಡುವ ಮೂಲಕ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಒಬಿಸಿ ಕೆಟಗರಿ ವ್ಯಾಪ್ತಿಯ ಹಿಂದುಳಿದ ಸಮುದಾಯದವರ ಹಕ್ಕುಗಳನ್ನು ಕಸಿದುಕೊಂಡಿದೆ. ಹಾಗೆಯೇ, ಮೀಸಲಾತಿ ನೀಡಿರುವ ಕುರಿತು ಯಾವುದೇ ಮಾಹಿತಿಯನ್ನೂ ರಾಜ್ಯ ಸರ್ಕಾರ ಒದಗಿಸಿಲ್ಲ” ಎಂಬುದಾಗಿ ಎನ್‌ಸಿಬಿಸಿ ಅಸಮಾಧಾನ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಬೆಂಗಾಲಿ ಮುಸ್ಲಿಮರು ಬಹುಪತ್ನಿತ್ವ ತ್ಯಜಿಸಬೇಕು; ಹಿಮಂತ ಬಿಸ್ವಾ ಶರ್ಮಾ ಕಂಡಿಷನ್ಸ್‌ ಹೀಗಿವೆ

Continue Reading

Lok Sabha Election 2024

Lok Sabha Election 2024: ಡಿ.ಕೆ. ಸುರೇಶ್‌ ಆಪ್ತರ ಮನೆ ಮೇಲೆ ಐಟಿ ರೇಡ್;‌ ಕಾಂಗ್ರೆಸ್‌ ಪ್ರತಿಭಟನೆ, ವಾಗ್ವಾದ

Lok Sabha Election 2024: ಕೋಣನಕುಂಟೆ, ಅಂಜಾನಪುರ ಹಾಗೂ ಅವಲಹಳ್ಳಿ ಭಾಗದಲ್ಲಿ ಐಟಿ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಗಂಗಾಧರ್‌ ಮಾತ್ರವಲ್ಲದೆ ಇನ್ನೂ ಹಲವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇವರೆಲ್ಲರೂ ಡಿ.ಕೆ. ಸುರೇಶ್​ ಆಪ್ತರು ಎಂದು ತಿಳಿದುಬಂದಿದೆ. ಗೊಟ್ಟಿಗೆರೆ ಬ್ಲ್ಯಾಕ್ ಕಾಂಗ್ರೆಸ್ ‌ಅಧ್ಯಕ್ಷ ಶ್ರೀಧರ್, ಡಿ.ಕೆ. ಸುರೇಶ್ ಆಪ್ತ ಸಹಾಯಕ ಸುಜಯ್, ಚಂದ್ರು, ಲಕ್ಷ್ಮಣ್, ಬಾಬು ಸೇರಿ ಮತ್ತಿತರರ ಮನೆಗಳ ಮೇಲೆ ಐಟಿ ರೇಡ್‌ ನಡೆದಿದೆ.

VISTARANEWS.COM


on

Lok Sabha Election 2024 DK Shivakumar IT raids on Suresh close aides and Congress protests
ಮಾಜಿ ಕಾರ್ಪೊರೇಟರ್ ಗಂಗಾಧರ್ ಮನೆ ಮುಂದೆ ಜಮಾಯಿಸಿರುವ ಕಾಂಗ್ರೆಸ್ ಕಾರ್ಯಕರ್ತರು
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಐಟಿ ದಾಳಿಗಳು ಮುಂದುವರಿದಿವೆ. ಚುನಾವಣೆ ಸಂದರ್ಭದಲ್ಲಿ ಅಕ್ರಮವಾಗಿ ಹಣದ ವಹಿವಾಟು ನಡೆಯುವ ಹಿನ್ನೆಲೆಯಲ್ಲಿ ಪೊಲೀಸರ ಸಹಿತ ಚುನಾವಣಾ ಆಯೋಗವು ಹದ್ದಿನ ಕಣ್ಣಿಟ್ಟಿದೆ. ಇನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ (ಏಪ್ರಿಲ್‌ 24) ಮುಂಜಾನೆ ಸಂಸದ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್​ (DK Suresh) ಆಪ್ತ, ಕೋಣನಕುಂಟೆ ಬ್ಲಾಕ್ ಮಾಜಿ ಕಾರ್ಪೊರೇಟರ್ ಗಂಗಾಧರ್ ಎಂಬುವವರ​ ಮನೆ ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ ದಾಳಿ (IT Raid) ಮಾಡಿದ್ದಾರೆ.

ಮುಂಜಾನೆ 4 ಗಂಟೆ ವೇಳೆಗೆ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ. ಗಂಗಾಧರ್‌ ಅವರ ಮನೆಯಲ್ಲಿ ಕೆಲವು ಗಂಟೆಗಳ ಕಾಲ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಆದರೆ, ಯಾವೆಲ್ಲ ದಾಖಲೆಗಳು ಲಭ್ಯವಾಗಿವೆ? ಹಣ ಸಿಕ್ಕಿವೆಯಾ? ಮುಂದಿನ ಕ್ರಮ ಏನು ಎಂಬ ಬಗ್ಗೆ ಇನ್ನೂ ಮಾಹಿತಿ ಬಂದಿಲ್ಲ.

ಇದನ್ನೂ ಓದಿ: Lok Sabha Election 2024: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನಿಮ್ಮ ಆಸ್ತಿ ಸರ್ವೆ; ಹೆಚ್ಚಿದ್ದರೆ ವಶಕ್ಕೆ;‌ ಕೇಂದ್ರ ಸಚಿವರ ಎಚ್ಚರಿಕೆ

ಯಾರ ಯಾರ ಮನೆ ಮೇಲೆ‌ ಐಟಿ ರೇಡ್

ಕೋಣನಕುಂಟೆ, ಅಂಜಾನಪುರ ಹಾಗೂ ಅವಲಹಳ್ಳಿ ಭಾಗದಲ್ಲಿ ಐಟಿ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಗಂಗಾಧರ್‌ ಮಾತ್ರವಲ್ಲದೆ ಇನ್ನೂ ಹಲವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇವರೆಲ್ಲರೂ ಡಿ.ಕೆ. ಸುರೇಶ್​ ಆಪ್ತರು ಎಂದು ತಿಳಿದುಬಂದಿದೆ. ಗೊಟ್ಟಿಗೆರೆ ಬ್ಲ್ಯಾಕ್ ಕಾಂಗ್ರೆಸ್ ‌ಅಧ್ಯಕ್ಷ ಶ್ರೀಧರ್, ಡಿ.ಕೆ. ಸುರೇಶ್ ಆಪ್ತ ಸಹಾಯಕ ಸುಜಯ್, ಚಂದ್ರು, ಲಕ್ಷ್ಮಣ್, ಬಾಬು ಸೇರಿ ಮತ್ತಿತರರ ಮನೆಗಳ ಮೇಲೆ ಐಟಿ ರೇಡ್‌ ನಡೆದಿದೆ.

ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಕಾಂಗ್ರೆಸ್ ಮುಖಂಡ, ಡಿ.ಕೆ. ಸುರೇಶ್ ಅವರ ಆಪ್ತರಾದ ಗಂಗಾಧರ್ ಹಾಗೂ ಇತರರ ಮನೆ ಮೇಲೆ ಐಟಿ ದಾಳಿ ನಡೆದಿದ್ದು, ಇದು ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಟ್ಟಿಹಾಕುವ ಪ್ರಯತ್ನ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕೋಣನಕುಂಟೆ ಬ್ಲಾಕ್‌ನಲ್ಲಿರುವ ಮಾಜಿ ಕಾರ್ಪೊರೇಟರ್ ಗಂಗಾಧರ್ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಧರಣಿ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಕಟ್ಟುತ್ತಿದ್ದೇವೆ. ಬಿಜೆಪಿಗೆ ಸೋಲಿನ ಭಯ ಕಾಡುತ್ತಿದೆ. ಹೀಗಾಗಿ ಕಾಂಗ್ರೆಸ್ ಮುಖಂಡರು ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಮನೆ ಮೇಲೆ ಐಟಿ ದಾಳಿಗಳು ನಡೆಯುತ್ತಿವೆ. ಗಂಗಾಧರ್ ಅವರು ಹಣಕಾಸಿನ ವಿಚಾರದಲ್ಲಿ ಅನುಕೂಲಸ್ಥರು. ಸಾಕಷ್ಟು ಜಮೀನು ಇದೆ. ಬೇರೆ ಪಕ್ಷದಲ್ಲಿ ಇವರಿಗಂತೆ ಶ್ರೀಮಂತರು ಇದ್ದಾರೆ. ಅವರ ಮನೆಗಳ ಮೇಲೆ ದಾಳಿಯಾಗಿಲ್ಲ. ಕೇವಲ ಕಾಂಗ್ರೆಸ್ ನಾಯಕರ ಮೇಲೆ ದಾಳಿ ನಡೆಯುತ್ತಿದೆ. ಡಿ.ಕೆ ಸುರೇಶ್ ಹಾಗೂ ಡಿ.ಕೆ. ಶಿವಕುಮಾರ್ ಅವರ ಆಪ್ತರನ್ನು ಗುರಿಯಾಗಿಸಿ ದಾಳಿ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್‌ ಕಾರ್ಯಕರ್ತರು ಕಿಡಿಕಾರಿದ್ದಾರೆ.

ಇದನ್ನೂ ಓದಿ: Namma Metro: ಏಪ್ರಿಲ್‌ 26ರಂದು ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ತಡರಾತ್ರಿವರೆಗೂ ಸೇವೆ ವಿಸ್ತರಣೆ

ಗಂಗಾಧರ್ ಅವರ ಜತೆಗೆ ಗೊಟ್ಟಿಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್, ಸುರೇಶ್ ಅವರ ಆಪ್ತ ಸಹಾಯಕ ಸುಜಯ್, ಚಂದ್ರು, ಲಕ್ಷ್ಮಣ್, ಬಾಬು ಸೇರಿದಂತೆ ಹಲವರ ಮನೆ ಮೇಲೆ ದಾಳಿ ಮಾಡಲಾಗಿದೆ. ಇದು ಉದ್ದೇಶಪೂರ್ವಕ ದಾಳಿ ಎಂಬುದು ಇದರಿಂದಲೇ ತಿಳಿಯುತ್ತದೆ ಎಂದು ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಮುಖಂಡರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಐಡಿ ರೇಡ್;‌ 2 ದಿನದಲ್ಲಿ 21.15 ಕೋಟಿ ರೂ. ಚಿನ್ನಾಭರಣ ವಶ!

ಕಳೆದ 3 ದಿನಗಳಿಂದ 16 ಕಡೆ ಐಟಿ ಅಧಿಕಾರಿಗಳು ದಾಳಿ (IT Raid) ನಡೆಸಿದ್ದಾರೆ. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಪತ್ತೆಯಾಗಿವೆ. ಒಟ್ಟಾರೆ 21.15 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಳಲಾಗಿದೆ.

ಉದ್ಯಮಿಗಳು, ಚಿನ್ನಾಭರಣ ಮಳಿಗೆ ಮಾಲೀಕರ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹದಿನಾರು ಕಡೆ ಸೇರಿ ರಾಜ್ಯದ ಇಪ್ಪತ್ತಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿಯನ್ನು ನಡೆಸಲಾಗಿದೆ. ಆದರೆ, ಬೆಂಗಳೂರು ದಕ್ಷಿಣ ಕ್ಷೇತ್ರವೊಂದರಲ್ಲೇ ಕೋಟ್ಯಂತರ ರೂಪಾಯಿ ಮೌಲ್ಯದ ದಾಖಲೆಗಳು ಇಲ್ಲದ ಚಿನ್ನಾಭರಣಗಳು ಪತ್ತೆಯಾಗಿವೆ.

2 ದಿನಗಳಲ್ಲಿ 16 ಕಡೆ ದಾಳಿ; ಸಿಕ್ಕ ಚಿನ್ನ, ನಗದು ಎಷ್ಟು?

1) 3 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ 4 ಕೆಜಿ 400 ಗ್ರಾಂ ಚಿನ್ನಾಭರಣ ಪತ್ತೆ
– ಶಂಕರಪುರ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

2) 3 ಕೋಟಿ 39 ಲಕ್ಷ ರೂಪಾಯಿ ಮೌಲ್ಯದ 4 ಕೆಜಿ 800 ಗ್ರಾಂ ಚಿನ್ನ ಪತ್ತೆ
ಶಾರದಾದೇವಿ ರಸ್ತೆ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

3) 2 ಕೋಟಿ 13 ಲಕ್ಷ ರೂಪಾಯಿ ಮೌಲ್ಯದ 3 ಕೆಜಿ 400 ಗ್ರಾಂ ಪತ್ತೆ
ಮರ್ಕೈಂಟಲ್ ಬ್ಯಾಂಕ್ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

4) 5 ಕೋಟಿ 33 ಲಕ್ಷ ರೂಪಾಯಿ ಮೌಲ್ಯದ 7 ಕೆಜಿ 598 ಗ್ರಾಂ ಚಿನ್ನ ಪತ್ತೆ
ಜಯನಗರ 3ನೇ ಬ್ಲಾಕ್ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

5) 84 ಲಕ್ಷ ಮೌಲ್ಯದ 1 ಕೆಜಿ 200 ಗ್ರಾಂ ಚಿನ್ನದ ಗಟ್ಟಿ ಪತ್ತೆ
ಸಾರಸ್ವತ ಬ್ಯಾಂಕ್, ಚಾಮರಾಜಪೇಟೆ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

6) 3 ಲಕ್ಷ 34 ಸಾವಿರ ರೂಪಾಯಿ ಮೌಲ್ಯದ 6.38 ಕ್ಯಾರೆಟ್ ವಜ್ರ ಪತ್ತೆ
ಅಂಚೆ ಕಚೇರಿ ಬಳಿ, ಬಸವನಗುಡಿ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

7) 3 ಲಕ್ಷದ 14 ಸಾವಿರ ಮೌಲ್ಯದ 5.99 ಕ್ಯಾರೆಟ್ ವಜ್ರ ಪತ್ತೆ
ಮಾತಾ ಶಾರದಾ ದೇವಿ ರಸ್ತೆ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

8) 6 ಕೋಟಿ 40 ಲಕ್ಷ ಮೌಲ್ಯದ 202.83 ಕ್ಯಾರೆಟ್ ವಜ್ರ ಪತ್ತೆ
ಜಯನಗರ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

ಇದನ್ನೂ ಓದಿ: VVPAT Verification: ಇವಿಯಂ-ವಿವಿಪ್ಯಾಟ್‌ ತಾಳೆ ಪ್ರಕರಣ; ಇಂದು ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಸೇರಿದಂತೆ ಹಲವು ಕಡೆ ದಾಳಿ ನಡೆದಿದ್ದು, ಈ ಕ್ಷೇತ್ರವೊಂದರಲ್ಲೇ ಸರಿ ಸುಮಾರು 21.15 ಕೋಟಿ ರೂಪಾಯಿಯಷ್ಟು ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ಆದರೆ, ಎಷ್ಟು ನಗದು ಪತ್ತೆಯಾಗಿದೆ ಎಂಬ ಬಗ್ಗೆ ಇನ್ನೂ ಐಟಿ ಅಧಿಕಾರಿಗಳು ಮಾಹಿತಿಯನ್ನು ಹಂಚಿಕೊಂಡಿಲ್ಲ.

Continue Reading
Advertisement
ಕರ್ನಾಟಕ16 mins ago

Rapido Bike Taxi: ಏ.26ರಂದು ಬೆಂಗಳೂರು ಸೇರಿ 3 ನಗರಗಳಲ್ಲಿ ಮತದಾರರಿಗೆ ರ‍್ಯಾಪಿಡೋದಿಂದ ಉಚಿತ ರೈಡ್‌ ಆಫರ್‌

Kotak Mahindra Bank
ದೇಶ17 mins ago

Kotak Mahindra Bank: ಹೊಸ ಕ್ರೆಡಿಟ್ ಕಾರ್ಡ್ ನೀಡದಂತೆ ಕೊಟಕ್‌ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧ; ಕಾರಣ ಇಲ್ಲಿದೆ

Lok Sabha Election 2024 No sale of liquor in Bengaluru for 3 days from today
Lok Sabha Election 202420 mins ago

Lok Sabha Election 2024: ಇಂದಿನಿಂದ 3 ದಿನ ಬೆಂಗಳೂರಲ್ಲಿ ಮದ್ಯ ಮಾರಾಟ ಇಲ್ಲ; ಮತ್ತೂ 1 ದಿನ ಸಿಗಲ್ಲ ಎಣ್ಣೆ!

Muslims OBC Quota
ಕರ್ನಾಟಕ25 mins ago

Muslims OBC Quota: ಎಲ್ಲ ಮುಸ್ಲಿಮರನ್ನು ಒಬಿಸಿಗೆ ಸೇರಿಸಿದ ಸಿದ್ದರಾಮಯ್ಯ ಸರ್ಕಾರ; ರಾಷ್ಟ್ರೀಯ ಆಯೋಗ ಕೆಂಡ!

Lok Sabha Election 2024 DK Shivakumar IT raids on Suresh close aides and Congress protests
Lok Sabha Election 202442 mins ago

Lok Sabha Election 2024: ಡಿ.ಕೆ. ಸುರೇಶ್‌ ಆಪ್ತರ ಮನೆ ಮೇಲೆ ಐಟಿ ರೇಡ್;‌ ಕಾಂಗ್ರೆಸ್‌ ಪ್ರತಿಭಟನೆ, ವಾಗ್ವಾದ

RCB vs SRH
ಕ್ರೀಡೆ45 mins ago

RCB vs SRH: 300 ರನ್​ ಹೊಡೆಸಿಕೊಳ್ಳದಿರಲಿ ಆರ್​ಸಿಬಿ; ನಾಳೆ ಸನ್​ರೈಸರ್ಸ್ ವಿರುದ್ಧ ಕಣಕ್ಕೆ

Mens Neck Chains Fashion
ಫ್ಯಾಷನ್46 mins ago

Mens Neck Chains Fashion: ಹುಡುಗರ ಕ್ರೇಜಿ ಫ್ಯಾಷನ್‌ಗೆ ಬಂತು ಫಂಕಿ ನೆಕ್‌ ಚೈನ್ಸ್‌

Summer Tour
ಪ್ರವಾಸ50 mins ago

Summer Tour: ಬೇಸಿಗೆ ಪ್ರವಾಸಕ್ಕೆ ಸೂಕ್ತ ಈ 5 ಅದ್ಭುತ ಗಿರಿಧಾಮಗಳು!

Congress leader Rahul Gandhi election campaign on April 26 in Ballari
ಬಳ್ಳಾರಿ54 mins ago

Lok Sabha Election 2024: ಏ.26ರಂದು ರಾಹುಲ್‌ ಗಾಂಧಿ ಬಳ್ಳಾರಿಗೆ; ಕಾಂಗ್ರೆಸ್‌ ಅಭ್ಯರ್ಥಿ ತುಕಾರಾಂ ಪರ ಪ್ರಚಾರ

on April 26 Namma Metro Service extended till late night
Lok Sabha Election 20241 hour ago

Namma Metro: ಏಪ್ರಿಲ್‌ 26ರಂದು ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ತಡರಾತ್ರಿವರೆಗೂ ಸೇವೆ ವಿಸ್ತರಣೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌