HSRP Number Plate: ಹಳೇ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್‌ ಪ್ಲೇಟ್‌ ಪಡೆಯೋದು ಹೇಗೆ? ಅಳವಡಿಸದಿದ್ರೆ ಭಾರಿ ದಂಡ! - Vistara News

ಆಟೋಮೊಬೈಲ್

HSRP Number Plate: ಹಳೇ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್‌ ಪ್ಲೇಟ್‌ ಪಡೆಯೋದು ಹೇಗೆ? ಅಳವಡಿಸದಿದ್ರೆ ಭಾರಿ ದಂಡ!

HSRP Number Plate: ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ದ್ವಿಚಕ್ರ, ತ್ರಿಚಕ್ರ ಸೇರಿ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಸುವುದು ಕಡ್ಡಾಯವಾಗಿದೆ. ಎಚ್‌ಎಸ್‌ಆರ್‌ಪಿ ಪಡೆಯುವುದು ಹೇಗೆ ಎಂಬ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ.

VISTARANEWS.COM


on

HSRP Number Plate
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ಎಲ್ಲಾ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಕಡ್ಡಾಯವಾಗಿ ಅಳವಡಿಸಬೇಕು ಎಂದು ಈಗಾಗಲೇ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗಾಗಿ ಅರ್ಜಿ ಸಲ್ಲಿಸಲು ಇನ್ನು ಕೆಲವೇ ದಿನಗಳು ಅವಕಾಶವಿದೆ. ಹೀಗಾಗಿ ಗಡುವಿನೊಳಗೆ ವಾಹನ ಮಾಲೀಕರು ಹೊಸ ಮಾದರಿಯ ನಂಬರ್‌ ಪ್ಲೇಟ್‌ ಅಳವಡಿಸಿಕೊಳ್ಳಬೇಕು, ಇಲ್ಲದಿದ್ದರೆ 500ರಿಂದ 1000 ರೂ. ದಂಡ ಕಟ್ಟಬೇಕಾಗುತ್ತದೆ.

2019ರ ಏಪ್ರಿಲ್‌ 1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕವನ್ನು (High Security Registration Plate-ಎಚ್‌ಎಸ್‌ಆರ್‌ಪಿ) ಕಡ್ಡಾಯವಾಗಿ ಅಳವಡಿಸಬೇಕು ಎಂದು ಆಗಸ್ಟ್‌ 17ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಅದೇ ರೀತಿ ಆ.18ರಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದರು. ಹೀಗಾಗಿ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕಾಗಿದೆ.

ಅರ್ಜಿ ಸಲ್ಲಿಕೆಗೆ ನವೆಂಬರ್‌ 17 ಕೊನೇ ದಿನ

ಯೋಗೇಶ್ ಎ ಎಂ

ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನ, ಪ್ರಯಾಣಿಕ ಕಾರು, ಮಧ್ಯಮ ಮತ್ತು ಭಾರೀ ವಾಣಿಜ್ಯ ವಾಹನ, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ಅಳವಡಿಸುವುದು ಕಡ್ಡಾಯವಾಗಿದೆ ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತ ಯೋಗೇಶ್ ಎ.ಎಂ ಅವರು ವಿಸ್ತಾರ ನ್ಯೂಸ್‌ಗೆ ಮಾಹಿತಿ ನೀಡಿದ್ದಾರೆ.

ಏನಿದು ಎಚ್ಎಸ್ಆರ್‌ಪಿ ನಂಬರ್‌ ಪ್ಲೇಟ್‌?

ಎಚ್‌ಎಸ್‌ಆರ್‌ಪಿ ಎಂದರೆ ಅತಿ ಸುರಕ್ಷಿತ ನೋಂದಣಿ ಫಲಕವಾಗಿದೆ. ಇವುಗಳನ್ನು ಅಲ್ಯೂಮಿನಿಯಂ ಲೋಹದಿಂದ ಮಾಡಿರುತ್ತಾರೆ. ಈ ಪ್ಲೇಟ್‌ನ ಮೇಲ್ಭಾಗದ ಎಡಬದಿಯಲ್ಲಿ ಅಶೋಕ ಚಕ್ರ ಮುದ್ರೆಯ 20X20 ಮಿ.ಮೀ ಅಳತೆಯ ಕ್ರೋಮಿಯಂ ಹೋಲೋಗ್ರಾಮ್‌ ಇರುತ್ತದೆ. ಇಂಗ್ಲಿಷ್ ಅಕ್ಷರಗಳು ಹಾಗೂ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತವೆ. ಈ ನಂಬರ್‌ ಪ್ಲೇಟ್‌ಗಳನ್ನು ಎರಡು ಲಾಕ್‌ ಪಿನ್‌ಗಳನ್ನು ಬಳಸಿ ಅಳವಡಿಸುತ್ತಾರೆ. ಇದರಿಂದ ಒರಿಜಿನಲ್‌ ಯಾವುದು, ನಕಲಿ ಯಾವುದು ಎಂದು ಸುಲಭವಾಗಿ ಗುರುತಿಸಬಹುದು.

ಎಚ್ಎಸ್ಆರ್‌ಪಿ ಪಡೆಯುವುದು ಹೇಗೆ?

  1. ಕರ್ನಾಟಕ ಸಾರಿಕೆ ಇಲಾಖೆ ವೆಬ್‌ಸೈಟ್‌ ಅಥವಾ ಸೊಸೈಟಿ ಆಫ್‌ ಇಂಡಿಯನ್‌ ಆಟೋಮೊಬೈಲ್‌ ಮ್ಯಾನುಫ್ಯಾಕ್ಚರರ್ಸ್‌ (ಎಸ್‌ಐಎಎಂ) ವೆಬ್‌ಸೈಟ್‌ ಭೇಟಿ ನೀಡಿ ಮತ್ತು Book HSRP ಅನ್ನು ಕ್ಲಿಕ್‌ ಮಾಡಿ.
  2. ನಿಮ್ಮ ವಾಹನ ತಯಾರಕರನ್ನು ಆಯ್ಕೆ ಮಾಡಿ.
  3. ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
  4. HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆ ಮಾಡಿ.
  5. HSRP ಶುಲ್ಕವನ್ನು ಅನ್‌ಲೈನ್‌ನಲ್ಲಿ ಪಾವತಿಸಿ, ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
  6. ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ ರವಾನಿಸಲಾಗುವುದು.
  7. ನಿಮ್ಮ ಅನುಕೂಲಕ್ಕೆ ತಕ್ಕಂತಹ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.
  8. ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.
  9. ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ.

ಇದನ್ನೂ ಓದಿ | HSRP Number Plate : ಹಳೆ ವಾಹನಗಳಿಗೂ ಇನ್ನು HSRP ನಂಬರ್‌ ಪ್ಲೇಟ್‌ ಕಡ್ಡಾಯ; ನ. 17ರ ನಂತ್ರ ಬೀಳುತ್ತೆ ದಂಡ!

ಪ್ರಮುಖ ಅಂಶಗಳು

  1. ಕರ್ನಾಟಕ ಸಾರಿಗೆ ಇಲಾಖೆ ವೆಬ್‌ಸೈಟ್‌ ಅಥವಾ ಎಸ್‌ಐಎಎಂ ವೆಬ್‌ಸೈಟ್‌ ಮೂಲಕ HSRP ಅಳವಡಿಕೆಗೆ ಕಾಯ್ದಿರಿಸಿಕೊಳ್ಳಿ.
  2. ಯಾವುದೇ ತೆರೆದ ಮಾರುಕಟ್ಟೆಯ ರಸ್ತೆ ಬದಿಯ ಮಾರಾಟಗಾರರಿಂದ ನಕಲಿ ಹೊಲೊಗ್ರಾಮ್ / IND ಮಾರ್ಕ್ ಇಂಡಿಯಾ ಎಂದು ಕೆತ್ತಲಾದ ಅಥವಾ ಕೆತ್ತಿದಂತಹ ಅನುಕರಣೆಯ HSRP, ಒಂದೇ ರೀತಿಯ ಪ್ಲೇಟ್‌ಗಳು, ಸ್ಮಾರ್ಟ್ ನಂಬರ್ ಪ್ಲೇಟ್‌ಗಳನ್ನು ಅಳವಡಿಸುವಂತಿಲ್ಲ. ಅವುಗಳು HSRP ಫಲಕಗಳಾಗಿರುವುದಿಲ್ಲ.
  3. HSRP ಅಳವಡಿಸದ ಹೊರತು, ವಾಹನ ಮಾಲೀಕತ್ವ ವರ್ಗಾವಣೆ, ವಿಳಾಸ ಬದಲಾವಣೆ, ಕಂತು ಕರಾರು, ನಮೂದು, ರದ್ದತಿ, ಅರ್ಹತಾಪತ್ರ ನವೀಕರಣ ಇತ್ಯಾದಿ ಯಾವುದೇ ಸೇವೆಗಳಿಗೆ ಅನುಮತಿಸುವುದಿಲ್ಲ.
  4. ಶುಲ್ಕ ಪಾವತಿಸಿರುವ ಪ್ರಕರಣದಲ್ಲಿ HSRP ಅಳವಡಿಕೆಗೆ ನಿಗದಿತ ದಿನಾಂಕದಿಂದ 30 ದಿನಗಳವರೆಗೆ ಮಾನ್ಯವಾದ ಎಚ್‌ಎಸ್‌ಆರ್‌ಪಿ ರಸೀದಿಯನ್ನು ಪ್ರಸ್ತುತಪಡಿಸುವ ವಾಹನಗಳಿಗೆ ಯಾವುದೇ ದಂಡವಿರುವುದಿಲ್ಲ.
  5. HSRP ಅಳವಡಿಕೆಗೆ ನವೆಂಬರ್‌ 17 ಆಗಿದ್ದು, ಕೂಡಲೇ ಅರ್ಜಿ ಸಲ್ಲಿಸಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆಟೋಮೊಬೈಲ್

Maruti Suzuki: ಶೀಘ್ರ ರಸ್ತೆಗಿಳಿಯಲಿದೆ ಬರೋಬ್ಬರಿ 26 ಕಿ.ಮೀ ಮೈಲೇಜ್ ಕೊಡುವ ಮಾರುತಿ ಸ್ವಿಫ್ಟ್​; ಶುರುವಾಗಿದೆ ಬುಕಿಂಗ್​

ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ಮಾರುತಿ ಸುಜುಕಿಯ (Maruti Suzuki) 4ನೇ-ಜನ್ ಸ್ವಿಫ್ಟ್‌ ಗಾಗಿ 1,450 ಕೋಟಿ ರೂ. ಹೂಡಿಕೆ ಮಾಡಿದ್ದು,2030 ರ ವೇಳೆಗೆ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಉತ್ಪಾದನೆಯು 10 ಲಕ್ಷ ವರೆಗೆ ಬೆಳೆಯುವ ನಿರೀಕ್ಷೆ ಇದೆ. ಹೊಸ ಸ್ವಿಫ್ಟ್ ಹೊಸ ಎಂಜಿನ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಬರಲಿದೆ.

VISTARANEWS.COM


on

By

Maruti Suzuki
Koo

ನವದೆಹಲಿ: ಮಾರುತಿ ಸುಜುಕಿ (Maruti Suzuki) ಇಂಡಿಯಾ ಲಿಮಿಟೆಡ್ (MSIL) ತನ್ನ ಜನಪ್ರಿಯ ಪ್ರೀಮಿಯಂ ಹ್ಯಾಚ್‌ಬ್ಯಾಕ್ (hatchback) ಸ್ವಿಫ್ಟ್‌ನ ಹೊಸ-ಪೀಳಿಗೆ ಮಾದರಿಯನ್ನು (4th-gen Swift) ಶೀಘ್ರ ಮಾರುಕಟ್ಟೆಗೆ ಇಳಿಸಲಿದೆ. ಕಾರನ್ನು ಈಗಾಗಲೇ ಕಂಪನಿ ಪರಿಚಯಿಸಿದ್ದು ಬುಕಿಂಗ್ ಕೂಡ ಆರಂಭಗೊಂಡಿದೆ. ಈ ಕಾರಿನ ಮಾಡೆಲ್​ಗಾಗಿ ಕಂಪನಿಯು ಸುಮಾರು 1,450 ಕೋಟಿ ರೂ. ಹೂಡಿಕೆ ಮಾಡಿದ್ದು, ಇದು ಹೊಸ Z-ಸರಣಿ 1.2L ಎಂಜಿನ್‌ ಜತೆಗೆ ಹಲವಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸ್ವಿಫ್ಟ್ ನ 4 ನೇ ಪೀಳಿಗೆಯ ಬೆಲೆಗಳು 6.49 ಲಕ್ಷ ರೂ. ನಿಂದ ಪ್ರಾರಂಭವಾಗಿ 9.64 ಲಕ್ಷ ರೂ. ವರೆಗೆ ಇರುತ್ತದೆ. ಇದು ಎಕ್ಸ್​ ಶೋರೂಮ್​ ಬೆಲೆಯಾಗಿದೆ.

ಆರು ಏರ್‌ಬ್ಯಾಗ್‌ಗಳು, ಎಲ್ಲಾ ಆಸನಗಳಿಗೆ 3 ಪಾಯಿಂಟ್ ಸೀಟ್‌ಬೆಲ್ಟ್‌ಗಳೊಂದಿಗೆ ರಿಮೈಂಡರ್‌ಗಳು, ಎಬಿಎಸ್ ಸೇರಿದಂತೆ ಹಲವು ಸುರಕ್ಷತಾ ಫೀಚರ್​ಗಳು ಹೊಚ್ಚ ಹೊಸ ಜೆನ್​ 4 ಸ್ವಿಫ್ಟ್​ನಲ್ಲಿ ಇರಲಿವೆ. ಪ್ರತಿ ಲೀಟರ್‌ಗೆ 25.75 ಕಿ.ಮೀ. ವರೆಗೆ ಮೈಲೇಜ್​ ನೀಡುವ ಮೂಲಕ ಸ್ವಿಫ್ಟ್​ ಗ್ರಾಹಕರಿಗೆ ಇನ್ನಷ್ಟು ಹತ್ತಿರವಾಗುವುದು ಖಾತರಿ. ಹೊಸ ಮಾದರಿಯ ಸ್ವಿಫ್ಟ್​​ನ ಬುಕಿಂಗ್ ಮೇ 1ರಿಂದ ಆರಂಭಗೊಂಡಿದ್ದು, 11,000 ರೂಪಾಯಿ ಟೋಕನ್ ಮೊತ್ತ ನೀಡಿ ಕಾಯ್ದಿರಿಸಬಹುದು.

ಹ್ಯಾಚ್​ ಬ್ಯಾಕ್​ ಸೆಗ್ಮೆಂಟ್​ನಲ್ಲಿ ಸ್ವಿಫ್ಟ್​ ಪ್ರಾಬಲ್ಯ

19 ವರ್ಷಗಳಿಂದ ಭಾರತದ ರಸ್ತೆಗಳಲ್ಲಿ ಓಡುತ್ತಿರುವ ಸಿಫ್ಟ್ ಕಾರಿನ ಮೊದಲ ಮಾಡೆಲ್​ ಅನ್ನು 2005 ರಲ್ಲಿ ಬಿಡುಗಡೆ ಮಾಡಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೆ 29 ಲಕ್ಷ ಸ್ವಿಫ್ಟ್ ಮಾರಾಟ ಮಾಡಿರುವುದಾಗಿ ಕಂಪನಿ ಹೇಳಿಕೊಂಡಿದೆ. 2011 ರಲ್ಲಿ 2 ನೇ ಪೀಳಿಗೆಯ ಸ್ವಿಫ್ಟ್​ ಪರಿಚಯಿಸಲಾಯಿತು. ನಂತರ 2018 ರಲ್ಲಿ 3ನೇ ಪೀಳಿಗೆಯನ್ನು ರಸ್ತೆಗೆ ಇಳಿಯಿತು. ಸ್ವಿಫ್ಟ್ ತನ್ನ ಮೊದಲ 10 ಲಕ್ಷ ಯೂನಿಟ್​ಗಳ ಮಾರಾಟವನ್ನು 2013 ರಲ್ಲಿ ಪೂರ್ಣಗೊಳಿಸಿತ್ತು ಮತ್ತು 2018 ರ ವೇಳೆಗೆ 20 ಲಕ್ಷದ ಗಡಿ ದಾಟಿ ಈ ಸೆಗ್ಮೆಂಟ್​ನಲ್ಲಿ ಪ್ರಾಬಲ್ಯ ಸಾಧಿಸಿತು.

2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ. ಆದ್ದರಿಂದ ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಆರ್ಥಿಕ ಚಟುವಟಿಕೆ ಹೆಚ್ಚಾಗಲಿದ್ದು ಆಟೋಮೊಬೈಲ್ ಕ್ಷೇತ್ರಕ್ಕೆ ಹೆಚ್ಚಿನ ಬೇಡಿಕೆ ಉಂಟಾಗುವ ಸಾಧ್ಯತೆ ಇದೆ. ಭಾರತದಲ್ಲಿ ಬೆಳೆಯಲು ಸಾಕಷ್ಟು ಅವಕಾಶಗಳಿವೆ. ಕಾರಿನ ಮಾಲೀಕತ್ವ ಹೆಚ್ಚಾದಂತೆ ಹ್ಯಾಚ್‌ಬ್ಯಾಕ್ ವಿಭಾಗವು ಗ್ರಾಹಕರಿಗೆ ಹೆಚ್ಚು ಪ್ರಿಯವಾಗಲಿದೆ. ಹೀಗಾಗಿ ಹ್ಯಾಚ್‌ಬ್ಯಾಕ್ ಕಾರುಗಳ ಅಭಿವೃದ್ಧಿಯನ್ನು ವಿಸ್ತರಿಸುತ್ತಿದ್ದೇವೆ ಎಂದು ಮಾರುತಿ ಸುಜುಕಿಯ ಎಂಡಿ ಮತ್ತು ಸಿಇಒ ಹಿಸಾಶಿ ಟೇಕುಚಿ ಹೇಳಿದರು.


ಸುಜುಕಿಗೆ ಪ್ರಮುಖ ಮಾರುಕಟ್ಟೆ

ಭಾರತವು ಸುಜುಕಿಗೆ ಪ್ರಮುಖ ಮಾರುಕಟ್ಟೆಯಾಗಿದೆ. ವೈವಿಧ್ಯಮಯ ಗ್ರಾಹಕರ ಬೇಡಿಕೆಗಳನ್ನು ಪೂರೈಸುವುದು ಮುಖ್ಯವಾಗಿರುವುದರಿಂದ ಹ್ಯಾಚ್​ಬ್ಯಅಕ್​ ವಿಭಾಗದ ಮೇಲೆ ನಮ್ಮ ಹೆಚ್ಚಿನ ಗಮನವಿದೆ. ಹೊಸ ಸ್ವಿಫ್ಟ್ ಈ ವಿಭಾಗದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಪಡೆಯಲಿದೆ ಎಂದು ಅವರು ತಿಳಿಸಿದರು.

ಸ್ಪರ್ಧೆಯಲ್ಲಿ ಹಲವು ಕಾರುಗಳು

ಹ್ಯಾಚ್‌ಬ್ಯಾಕ್ ಸ್ವಿಫ್ಟ್‌ ಗೆ ಪ್ರತಿ ಸ್ಪರ್ಧಿಯಾಗಿ ಹ್ಯುಂಡೈ ಗ್ರಾಂಡ್ ಐ10 ನಿಯೋಸ್, ಟಾಟಾ ಆಲ್ಟ್ರೋಜ್ . ಹ್ಯುಂಡೈ ಎಕ್ಸ್‌ಟರ್ ಮತ್ತು ಟಾಟಾ ಪಂಚ್ ಸೇರಿದಂತೆ ಮೈಕ್ರೋ ಎಸ್‌ಯುವಿಗಳು ಮಾರುಕಟ್ಟೆಯಲ್ಲಿವೆ. ಇವುಗಳು ಇದೇ ಶ್ರೇಣಿಯಲ್ಲಿನ ಬೆಲೆಯನ್ನು ಹೊಂದಿವೆ.

ಕಳೆದ 3- 4 ವರ್ಷಗಳಲ್ಲಿ ಒಟ್ಟು ಪ್ರಯಾಣಿಕ ವಾಹನ ಮಾರಾಟ ಶೇಕಡಾ 47 ರಷ್ಟಿದ್ದು, ಇದರಲ್ಲಿ ಸಣ್ಣ ಕಾರು ಮಾರುಕಟ್ಟೆಯ ಪಾಲು 2024ನೇ ಹಣಕಾಸು ವರ್ಷದಲ್ಲಿ ಸುಮಾರು ಶೇ. 28ರಷ್ಟಾಗಿದೆ. ಮಾರುತಿ ಸುಜುಕಿ ಹ್ಯಾಚ್‌ಬ್ಯಾಕ್ ವಿಭಾಗದ ಬೇಡಿಕೆ 2026 ಅಂತ್ಯ ಅಥವಾ 2027 ರ ವೇಳೆಗೆ ಪುನರುಜ್ಜೀವನಗೊಳ್ಳುವ ನಿರೀಕ್ಷೆಯಿದೆ ಎಂದು ಹಿಸಾಶಿ ಟೇಕುಚಿ ಹೇಳಿದರು.

ಇದನ್ನೂ ಓದಿ: Tata Motors: Tata Ace EV 1000 ಬಿಡುಗಡೆ ಮಾಡಿದ ಟಾಟಾ ಮೋಟರ್ಸ್‌; ಏನಿದರ ವಿಶೇಷತೆ? ದರ ಎಷ್ಟು?

ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನ ಬೆಳವಣಿಗೆ ಭಾರತದಲ್ಲಿನ ಒಟ್ಟು ಪ್ರಯಾಣಿಕ ವಾಹನಗಳ ಮಾರಾಟದಲ್ಲಿ ಶೇ. 28ರಷ್ಟು ಪಾಲನ್ನು ಪಡೆದುಕೊಳ್ಳುತ್ತವೆ. ಹಿರಿಯ ಕಾರ್ಯನಿರ್ವಾಹಕ ಅಧಿಕಾರಿ ಪಾರ್ಥೋ ಬ್ಯಾನರ್ಜಿ ಪ್ರಕಾರ, ಪ್ರಸ್ತುತ ಒಟ್ಟು 7 ಲಕ್ಷ ವಾರ್ಷಿಕ ಉತ್ಪಾದನೆ ಹೊಂದಿರುವ ಪ್ರೀಮಿಯಂ ಹ್ಯಾಚ್‌ಬ್ಯಾಕ್ ವಿಭಾಗವು 2030 ರ ವೇಳೆಗೆ 10 ಲಕ್ಷಕ್ಕೆ ಬೆಳೆಯಬಹುದು. ಮಾರುತಿ ಪ್ರಸ್ತುತ ಸ್ವಿಫ್ಟ್ ಮತ್ತು ಬಲೆನೊದಂತಹ ಮಾದರಿಗಳೊಂದಿಗೆ ಪ್ರೀಮಿಯಂ ಹ್ಯಾಚ್‌ಬ್ಯಾಕ್ ವಿಭಾಗದಲ್ಲಿ ಶೇ. 62ರಷ್ಟು ಪಾಲನ್ನು ಹೊಂದಿದೆ.

Continue Reading

ವಾಣಿಜ್ಯ

Tata Motors: Tata Ace EV 1000 ಬಿಡುಗಡೆ ಮಾಡಿದ ಟಾಟಾ ಮೋಟರ್ಸ್‌; ಏನಿದರ ವಿಶೇಷತೆ? ದರ ಎಷ್ಟು?

Tata Motors: ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಿಕಾ ಸಂಸ್ಥೆಯಾಗಿರುವ ಟಾಟಾ ಮೋಟರ್ಸ್ ಹೊಚ್ಚ ಹೊಸದಾದ ಏಸ್ ಇವಿ 1000 (Ace EV 1000) ಯನ್ನು ಬಿಡುಗಡೆ ಮಾಡಿದ್ದು, ಈ ಮೂಲಕ ತನ್ನ ಇ-ಕಾರ್ಗೊ ಸಾರಿಗೆ ಪರಿಹಾರಗಳನ್ನು ಇನ್ನಷ್ಟು ಬಲಪಡಿಸಿಕೊಂಡಿದೆ. ಇದು ಶೂನ್ಯ ಮಾಲಿನ್ಯ ಹೊರಹೊಮ್ಮುವ ಮಿನಿ ಟ್ರಕ್ ಆಗಿದೆ.

VISTARANEWS.COM


on

New Tata Ace EV 1000 launched by Tata Motors
Koo

ಬೆಂಗಳೂರು: ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಿಕಾ ಸಂಸ್ಥೆಯಾಗಿರುವ ಟಾಟಾ ಮೋಟರ್ಸ್ (Tata Motors) ಹೊಚ್ಚ ಹೊಸದಾದ ಏಸ್ ಇವಿ 1000 (Ace EV 1000) ಬಿಡುಗಡೆ ಮಾಡಿದ್ದು, ಈ ಮೂಲಕ ತನ್ನ ಇ-ಕಾರ್ಗೊ ಸಾರಿಗೆ ಪರಿಹಾರಗಳನ್ನು ಇನ್ನಷ್ಟು ಬಲಪಡಿಸಿಕೊಂಡಿದೆ. ಕಟ್ಟಕಡೆಯ ಮೈಲು ತಲುಪಲು ಪೂರಕವಾಗಿ ಈ ವಾಹನವನ್ನು ಕ್ರಾಂತಿಕಾರಕವಾಗಿ ಅಭಿವೃದ್ಧಿಪಡಿಸಲಾಗಿದೆ.

ಏಸ್ ಇವಿ ವಿಶೇಷತೆ ಏನು?

ಹೊಸದಾದ ಏಸ್ ಇವಿ ವಾಹನವು ಶೂನ್ಯ ಮಾಲಿನ್ಯ ಹೊರಹೊಮ್ಮುವ ಮಿನಿ ಟ್ರಕ್ ಆಗಿದ್ದು, 1 ಟನ್‌ವರೆಗೆ ಪೇಲೋಡ್ ಅನ್ನು ಹೊತ್ತೊಯ್ಯುವ ಸಾಮರ್ಥ್ಯವನ್ನು ಹೊಂದಿದೆ. ಒಂದು ಬಾರಿ ಚಾರ್ಜ್ ಮಾಡಿದರೆ 161 ಕಿಲೋಮೀಟರ್‌ವರೆಗೆ ಕ್ರಮಿಸಬಲ್ಲದು. ತನ್ನ ಗ್ರಾಹಕರಿಂದ ಅತ್ಯಮೂಲ್ಯವಾದ ಸಲಹೆಗಳನ್ನು ಪಡೆದುಕೊಂಡು ಅದಕ್ಕೆ ತಕ್ಕಂತೆ ಈ ಏಸ್ ಇವಿಯನ್ನು ಅಭಿವೃದ್ಧಿಪಡಿಸಲಾಗಿದೆ. ಈ ಹೊಸ ಶ್ರೇಣಿಯ ವಾಹನವು ಎಫ್ಎಂಸಿಜಿ, ಬೇವರೇಜಸ್, ಪೇಂಟ್ಸ್ & ಲ್ಯೂಬ್ರಿಕೆಂಟ್ಸ್, ಎಲ್‌ಪಿಜಿ & ಡೈರಿ ಉತ್ಪನ್ನಗಳ ಸಾಗಣೆ ಅಗತ್ಯತೆಗಳನ್ನು ಪೂರೈಸಲಿದೆ.

ಇದನ್ನೂ ಓದಿ: UGCET 2024: ಯುಜಿಸಿಇಟಿ ಅರ್ಜಿ ತಿದ್ದುಪಡಿಗೆ ಅಂತಿಮ ಅವಕಾಶ ನೀಡಿದ ಕೆಇಎ; ಕೊನೆಯ ದಿನಾಂಕ ಯಾವಾಗ?

ದೇಶಾದ್ಯಂತ 150ಕ್ಕೂ ಹೆಚ್ಚು ಎಲೆಕ್ಟ್ರಿಕ್ ವೆಹಿಕಲ್ ಸಪೋರ್ಟ್ ಸೆಂಟರ್‌ಗಳ ಬೆಂಬಲದೊಂದಿಗೆ ಈ ಏಸ್ ಇವಿ ವಾಹನವು ಅತ್ಯಾಧುನಿಕ, ಸುಧಾರಿತ ಬ್ಯಾಟರಿ ಮ್ಯಾನೇಜ್ಮೆಂಟ್ ಸಿಸ್ಟಂ, ಫ್ಲೀಟ್ ಎಡ್ಜ್ ಟೆಲಿಮ್ಯಾಟಿಕ್ಸ್ ಸಿಸ್ಟಂ ಮತ್ತು ಅತ್ಯುತ್ತಮ ಸಾಮರ್ಥ್ಯವನ್ನು ಹೊಂದಿದ ವಾಹನವಾಗಿದೆ.

ಟಾಟಾ ಸಮೂಹ ಸಂಸ್ಥೆಗಳ ಅಂಗವಾಗಿರುವ Tata UniEVerse ಅಗಾಧವಾದ ಸಾಮರ್ಥ್ಯಗಳನ್ನು ಬಳಸಿಕೊಂಡು ಈ ಏಸ್ ಇವಿಯನ್ನು ಸಿದ್ಧಪಡಿಸಲಾಗಿದೆ. ಗ್ರಾಹಕರಿಗೆ ಸಮಗ್ರ ಇ-ಕಾರ್ಗೊ ಮೊಬಿಲಿಟಿ ಪರಿಹಾರವನ್ನು ನೀಡಲು ದೇಶದ ಪ್ರಮುಖ ಹಣಕಾಸು ಸಂಸ್ಥೆಗಳ ಪಾಲುದಾರಿಕೆಯನ್ನೂ ಸಹ ಹೊಂದಲಾಗಿದೆ. ಇದು ಬಹುಮುಖ ಕಾರ್ಗೊ ಡೆಕ್‌ಗಳೊಂದಿಗೆ ಲಭ್ಯವಿದೆ ಮತ್ತು ದೇಶಾದ್ಯಂತ ಎಲ್ಲಾ ಟಾಟಾ ಮೋಟರ್ಸ್ ವಾಣಿಜ್ಯ ವಾಹನಗಳ ಡೀಲರ್ ಶಿಪ್‌ಗಳಲ್ಲಿ ಮಾರಾಟವಾಗಲಿದೆ. ಇದರ ಬೆಲೆ ಸುಮಾರು 9 ಲಕ್ಷ ರೂ. ಆಗುತ್ತದೆ.

ಇದನ್ನೂ ಓದಿ: Money Guide: ಭಾರತದಲ್ಲಿಯೂ ಆರಂಭವಾಯ್ತು ಬಹು ನಿರೀಕ್ಷಿತ ಗೂಗಲ್ ವ್ಯಾಲೆಟ್‌; ಇದು ಗೂಗಲ್‌ ಪೇಗಿಂತ ಹೇಗೆ ಭಿನ್ನ?

ಟಾಟಾ ಮೋಟರ್ಸ್ ವಾಣಿಜ್ಯ ವಾಹನಗಳ ಎಸ್‌ಸಿವಿ & ಪಿಯು ವಿಭಾಗದ ಉಪಾಧ್ಯಕ್ಷ & ಬ್ಯುಸಿನೆಸ್ ಹೆಡ್ ವಿನಯ್ ಪಾಠಕ್ ಈ ಕುರಿತು ಮಾತನಾಡಿ, ಕಳೆದ ಎರಡು ವರ್ಷಗಳಲ್ಲಿ ನಮ್ಮ ಏಸ್ ಇವಿ ಗ್ರಾಹಕರು ಸರಿಸಾಟಿಯಿಲ್ಲದ ಅನುಭವವನ್ನು ಪಡೆಯುವ ಮೂಲಕ ಅತ್ಯಮೂಲ್ಯ ಪ್ರಯೋಜನಗಳನ್ನು ಪಡೆದುಕೊಂಡಿದ್ದಾರೆ. ಇದೇ ವೇಳೆ ಅವರು ಲಾಭವನ್ನು ಮತ್ತು ಸುಸ್ಥಿರತೆಯನ್ನು ಪಡೆದುಕೊಂಡಿದ್ದಾರೆ. ಕ್ರಾಂತಿಕಾರಕ ಶೂನ್ಯ ಮಾಲಿನ್ಯದ ಕಟ್ಟಕಡೆಯ ಸಾರಿಗೆ ಪರಿಹಾರಗಳ ರಾಯಭಾರಿಗಳಾಗಿ ಈ ಗ್ರಾಹಕರು ಹೊರಹೊಮ್ಮಿದ್ದಾರೆ.

ಇದೀಗ ಏಸ್ ಇವಿ 1000 ಬಿಡುಗಡೆಯೊಂದಿಗೆ ಗ್ರಾಹಕರಿಗೆ ಸುಧಾರಿತ ಅನುಭವವನ್ನು ನೀಡುತ್ತಿದ್ದೇವೆ. ಈ ಮೂಲಕ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುವುದರೊಂದಿಗೆ ಆರ್ಥಿಕತೆಯನ್ನು ಸುಧಾರಣೆ ಮಾಡಲಾಗುತ್ತಿದೆ. ಏಸ್ ಇವಿ 1000 ಉತ್ಕೃಷ್ಟ ಮೌಲ್ಯ ಮತ್ತು ಕಡಿಮೆ ವೆಚ್ಚದ ಮಾಲೀಕತ್ವವನ್ನು ನೀಡುವ ಮೂಲಕ ಹಸಿರು ಭವಿಷ್ಯಕ್ಕೆ ಕೊಡುಗೆ ನೀಡಲಿದೆ ಎಂಬ ವಿಶ್ವಾಸ ನಮ್ಮದಾಗಿದೆ ಎಂದು ತಿಳಿಸಿದ್ದಾರೆ.

ಏಸ್ ಇವಿಯು EVOGEN ಪವರ್ ಟ್ರೇನ್‌ನಿಂದ ಚಾಲಿತವಾಗಿದ್ದು, ಇದು 7 ವರ್ಷಗಳ ಬ್ಯಾಟರಿ ವಾರಂಟಿ ಮತ್ತು 5 ವರ್ಷದ ಸಮಗ್ರ ನಿರ್ವಹಣೆ ಪ್ಯಾಕೇಜ್‌ನೊಂದಿಗೆ ಸರಿಸಾಟಿಯಿಲ್ಲದ ಚಾಲನಾ ಅನುಭವವನ್ನು ನೀಡುತ್ತದೆ. ಇದು ಚಾಲನಾ ಶ್ರೇಣಿಯನ್ನು ಹೆಚ್ಚಿಸಲು ಸುಧಾರಿತ ಬ್ಯಾಟರಿ ಕೂಲಿಂಗ್ ಸಿಸ್ಟಂ ಮತ್ತು ಪುನರುತ್ಪಾದಕ ಬ್ರೇಕಿಂಗ್ ಸಿಸ್ಟಂನೊಂದಿಗೆ ಸುರಕ್ಷಿತ, ಎಲ್ಲಾ ಹವಾಮಾನ ಕಾರ್ಯಾಚರಣೆಗಳನ್ನು ನೀಡುತ್ತದೆ.

ಇದನ್ನೂ ಓದಿ: IPL 2024 : ಆರ್​ಸಿಬಿಯ ಪ್ಲೇಆಫ್​ ಚಾನ್ಸ್​ ಇದೆಯೇ? ಇಲ್ಲಿದೆ ನೋಡಿ ಲೆಕ್ಕಾಚಾರ

ಇದು ಹೆಚ್ಚಿನ ಸಮಯಕ್ಕಾಗಿ ನಿಯಮಿತ ಮತ್ತು ವೇಗದ ಚಾರ್ಜಿಂಗ್ ಸಾಮರ್ಥ್ಯಗಳನ್ನು ಹೊಂದಿದೆ. ಇದು 27kW (36hp) ಮೋಟರ್ ನಿಂದ 130Nm ಪೀಕ್ ಟಾರ್ಕ್ ನೊಂದಿಗೆ ಚಾಲಿತವಾಗಿದೆ. ಬೆಸ್ಟ್-ಇನ್-ಕ್ಲಾಸ್ ಪಿಕಪ್ ಮತ್ತು ಗ್ರೇಡ್ ಸಾಮರ್ಥ್ಯವನ್ನು ಖಚಿತಪಡಿಸಿಕೊಳ್ಳಲು ಸಂಪೂರ್ಣವಾಗಿ ಲೋಡ್ ಮಾಡಲಾದ ಪರಿಸ್ಥಿತಿಗಳಲ್ಲಿ ಸುಲಭವಾಗಿ ಸಾಗಲು ಅನುವು ಮಾಡಿಕೊಡುತ್ತದೆ ಎಂದು ತಿಳಿಸಿದೆ.

Continue Reading

ಆಟೋಮೊಬೈಲ್

Nissan India : ಉಚಿತ ಏಸಿ ರಿಪೇರಿ ಮಾಡಿಸಿಕೊಳ್ಳಲು ನಿಸ್ಸಾನ್ ಕಾರು ಮಾಲೀಕರಿಗೆ ಇಲ್ಲಿದೆ ಅವಕಾಶ

Nissan India: ಉಚಿತ ಏಸಿ ತಪಾಸಣಾ ಕಾರ್ಯಾಗಾರ ಏಪ್ರಿಲ್ 15ರಿಂದಲೇ ಆರಂಭಗೊಂಡಿದ್ದು ಜೂನ್ 15ರವರೆಗೆ ನಡೆಯಲಿದೆ. ನಿಸ್ಸಾನ್ ಗ್ರಾಹಕರು ವಿವಿಧ ಶ್ರೇಣಿಗಳ ಸರ್ವೀಸ್ ಗಳು ಮತ್ತು ರಿಯಾಯಿತಿ ಪಡೆಯುವ ಭಾರತದಾದ್ಯಂತ ಇರುವ ಎಲ್ಲಾ ನಿಸ್ಸಾನ್ ಅಧಿಕೃತ ಸರ್ವೀಸ್ ವರ್ಕ್ ಶಾಪ್ ಗಳಲ್ಲಿ ಈ ಸೌಲಭ್ಯ ಲಭ್ಯವಿದೆ.

VISTARANEWS.COM


on

Nissan India
Koo

ಬೆಂಗಳೂರು: ನಿಸ್ಸಾನ್ ಮೋಟಾರ್ ಇಂಡಿಯಾ (Nissan India) ದೇಶಾದ್ಯಂತ ಇರುವ ತನ್ನ ಗ್ರಾಹಕರಿಗೆ ಎರಡು ತಿಂಗಳ ಕಾಲ ಉಚಿತ ಏಸಿ ತಪಾಸಣಾ ಕಾರ್ಯಾಗಾರ ಆಯೋಜಿಸಿದೆ. ಆ ಮೂಲಕ ಗ್ರಾಹಕ ತೃಪ್ತಿಯನ್ನು ಬಯಸು ತನ್ನ ಬದ್ಧತೆಯನ್ನು ಪ್ರದರ್ಶಿಸಿದೆ. ನಿಸ್ಸಾನ್ ಉಚಿತ ಏಸಿ ತಪಾಸಣಾ ಕಾರ್ಯಾಗಾರ ಏಪ್ರಿಲ್ 15ರಿಂದಲೇ ಆರಂಭಗೊಂಡಿದ್ದು ಜೂನ್ 15ರವರೆಗೆ ನಡೆಯಲಿದೆ. ನಿಸ್ಸಾನ್ ಗ್ರಾಹಕರು ವಿವಿಧ ಶ್ರೇಣಿಗಳ ಸರ್ವೀಸ್ ಗಳು ಮತ್ತು ರಿಯಾಯಿತಿ ಪಡೆಯುವ ಭಾರತದಾದ್ಯಂತ ಇರುವ ಎಲ್ಲಾ ನಿಸ್ಸಾನ್ ಅಧಿಕೃತ ಸರ್ವೀಸ್ ವರ್ಕ್ ಶಾಪ್ ಗಳಲ್ಲಿ ಈ ಸೌಲಭ್ಯ ಲಭ್ಯವಿದೆ. ನಿಸ್ಸಾನ್‌ನ ನುರಿತ ಮತ್ತು ತರಬೇತಿ ಪಡೆದ ಸರ್ವೀಸ್ ಉದ್ಯೋಗಿಗಳು ನಿಸ್ಸಾನ್ ನಿಜವಾದ ಬಿಡಿಭಾಗಗಳನ್ನು ಬಳಸಿಕೊಂಡು ಏಸಿ ತಪಾಸಣೆ ಶಿಬಿರವನ್ನು ನಡೆಸಿಕೊಡುತ್ತಾರೆ.

ಎಲ್ಲಾ ನಿಸ್ಸಾನ್ ಮತ್ತು ಡಾಟ್ಸನ್ ವಾಹನ ಮಾಲೀಕರು ನಿಸ್ಸಾನ್ ಒನ್ ಆ್ಯಪ್ ಅಥವಾ ನಿಸ್ಸಾನ್ ಮೋಟಾರ್ ಇಂಡಿಯಾ ವೆಬ್‌ಸೈಟ್ (www.nissan.in) ಮೂಲಕ ತಪಾಸಣೆ ಪಡೆಯಲು ಸರ್ವೀಸ್ ಅಪಾಯಿಂಟ್‌ಮೆಂಟ್ ಅನ್ನು ಪಡೆಯಬಹುದು. ಇದರಿಂದಾಗಿ ಗ್ರಾಹಕರು ಯಾವುದೇ ತೊಂದರೆ ಇಲ್ಲದೆ ನಿಸ್ಸಾನ್ ಮಾಲೀಕತ್ವವನ್ನು ಅನುಭವಿಸುವ ಸೌಕರ್ಯ ಪಡೆಯುವುದಲ್ಲದೆ, ಈ ಉಪಕ್ರಮವು ಬ್ರಾಂಡ್ ಮೇಲೆ ಗ್ರಾಹಕರು ಇಟ್ಟಿರುವ ವಿಶ್ವಾಸಕ್ಕೆ ಸಣ್ಣ ಪ್ರಮಾಣದ ಕೊಡುಗೆಯೂ ಆಗಿದೆ. ಈ ಸರ್ವೀಸ್ ಶಿಬಿರಗಳು ಎಲ್ಲಾ ನಿಸ್ಸಾನ್ ಮತ್ತು ಡಾಟ್ಸನ್ ಬ್ರಾಂಡ್ ವಾಹನಗಳಿಗೆ ಸರ್ವೀಸ್ ಒದಗಿಸುವ ಕಂಪನಿಯ ವ್ಯಾಪಕವಾದ 120 ಸರ್ವೀಸ್ ವರ್ಕ್ ಶಾಪ್ ಗಳಲ್ಲಿಯೂ ನಡೆಯಲಿದೆ.

ಇದನ್ನೂ ಓದಿ: Air Purifier: ಕಾರುಗಳಲ್ಲಿ ಏರ್ ಪ್ಯೂರಿಫೈಯರ್‌ ಏಕೆ ಅಗತ್ಯ ಗೊತ್ತೆ?

ಶಿಬಿರವು ಉಚಿತ ಕಾರ್ ಟಾಪ್ ವಾಶ್ ಅನ್ನು ಕೂಡ ಒಳಗೊಂಡಿದೆ. ಜೊತೆಗೆ ಸಮಗ್ರ 20-ಪಾಯಿಂಟ್ ತಪಾಸಣೆಯನ್ನು ಮಾಡಲಾಗುತ್ತದೆ. ಪಿಎಂಎಸ್ (ಪೀರಿಯಾಡಿಕಲ್ ಮೇಂಟನೆನ್ಸ್ ಸರ್ವೀಸ್) ಆಯ್ಕೆ ಮಾಡುವ ಗ್ರಾಹಕರಿಗೆ ಉಚಿತ ಪಿಕ್-ಅಪ್ ಮತ್ತು ಡ್ರಾಪ್ ಸೌಲಭ್ಯ ಕೂಡ ನೀಡಲಾಗುತ್ತದೆ. ಹೆಚ್ಚುವರಿಯಾಗಿ, ಗ್ರಾಹಕರು ಶೇ.20ರವರೆಗೆ ಭಾಗಗಳು/ಪರಿಕರಗಳ ಮೇಲೆ ರಿಯಾಯಿತಿ (ಡೀಲರ್ ತೀರ್ಮಾನದ ಪ್ರಕಾರ) ಪಡೆಯಬಹುದು. ಕಾರ್ಮಿಕ ಶುಲ್ಕಗಳ ಮೇಲೆ 20% ವರೆಗೆ ಮತ್ತು ಮೌಲ್ಯವರ್ಧಿತ ಸೇವೆಗಳ ಮೇಲೆ (ವಿಎಎಸ್) 10% ವರೆಗೆ ರಿಯಾಯಿತಿ ಪಡೆಯಬಹುದು. ಕಂಪನಿಯು ಎಲ್ಲಾ ನಿಸ್ಸಾನ್ ಮತ್ತು ಡಾಟ್ಸನ್ ವಾಹನಗಳು ಈ ವಿಶೇಷ ಕೊಡುಗೆಗಳ ಲಾಭವನ್ನು ಪಡೆಯಬೇಕು ಮತ್ತು ಅದರಿಂದ ವಾಹನಗಳ ಕಾರ್ಯಕ್ಷಮತೆ ಉತ್ತಗೊಳಿಸಬೇಕು, ವಾಹನಗಳು ಆಯುಷ್ಯ ಹೆಚ್ಚಿಸಬೇಕು ಎಂದು ಹೇಳಿದೆ.

Continue Reading

ಆಟೋಮೊಬೈಲ್

Air Purifier: ಕಾರುಗಳಲ್ಲಿ ಏರ್ ಪ್ಯೂರಿಫೈಯರ್‌ ಏಕೆ ಅಗತ್ಯ ಗೊತ್ತೆ?

ಕಾರಿನಲ್ಲಿರುವ ಏರ್ ಪ್ಯೂರಿಫೈಯರ್ ಗಾಳಿಯ ಗುಣಮಟ್ಟವನ್ನು ಸುಧಾರಿಸುವಲ್ಲಿ ಮತ್ತು ಆರೋಗ್ಯವನ್ನು ರಕ್ಷಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಕಾರುಗಳಲ್ಲಿ ಏರ್ ಪ್ಯೂರಿಫೈಯರ್‌ಗಳು (Air Purifier) ಅಗತ್ಯವಾಗಿರುವುದಕ್ಕೆ ಕೆಲವು ಪ್ರಮುಖ ಕಾರಣಗಳೂ ಇವೆ. ಕಾರಿನಲ್ಲಿ ಓಡಾಡುವವರಿಗೆ ಏರ್‌ ಪ್ಯೂರಿಫೈಯರ್‌ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

By

Air Purifier
Koo

ವಾಯು ಮಾಲಿನ್ಯವು (Air pollution) ಈಗ ಜಾಗತಿಕವಾಗಿ ಒಂದು ಸಮಸ್ಯೆಯಾಗಿದೆ. ಹೊರಾಂಗಣ ಪರಿಸರವನ್ನು ಮಾತ್ರವಲ್ಲದೆ ಇದು ನಮ್ಮ ಮನೆ (home) ಮತ್ತು ವಾಹನಗಳ (vehicles) ಒಳಗಿನ ಗಾಳಿಯ ಮೇಲೂ ಪರಿಣಾಮ ಬೀರುತ್ತಿದೆ. ಒಳಾಂಗಣ ವಾಯು ಮಾಲಿನ್ಯವನ್ನು ಎದುರಿಸಲು ಅನೇಕ ಜನರು ತಮ್ಮ ಮನೆಗಳಲ್ಲಿ ಏರ್ ಪ್ಯೂರಿಫೈಯರ್‌ಗಳನ್ನು (Air Purifier) ಬಳಸಲು ಪ್ರಾರಂಭಿಸಿದ್ದಾರೆ. ಆದರೆ ಕಾರುಗಳಲ್ಲಿ ಏರ್ ಪ್ಯೂರಿಫೈಯರ್‌ಗಳ ಅಗತ್ಯವನ್ನು ಸಾಮಾನ್ಯವಾಗಿ ಹೆಚ್ಚಿನವರು ಕಡೆಗಣಿಸುತ್ತಾರೆ.

ಕಲುಷಿತ ಗಾಳಿಯು ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಈ ಬಗ್ಗೆ ಜಾಗೃತಿ ಹೆಚ್ಚಾಗುತ್ತಿದ್ದು, ವಾಹನಗಳಲ್ಲಿ ಏರ್ ಪ್ಯೂರಿಫೈಯರ್ ಗಳ ಪ್ರಾಮುಖ್ಯತೆಯು ಎಲ್ಲರ ಗಮನ ಸೆಳೆಯುತ್ತಿದೆ. ಸ್ವಂತ ವಾಹನ ಚಾಲನೆ ಮಾಡುವಾಗ ವಿಶೇಷವಾಗಿ ಭಾರೀ ವಾಹನ ದಟ್ಟಣೆಯ ಪ್ರದೇಶಗಳಲ್ಲಿ ಸುತ್ತಮುತ್ತ ನಿರಂತರವಾಗಿ ಹಾನಿಕಾರಕ ಅನಿಲಗಳು ಮತ್ತು ಕಣಗಳು ಹೊರಸೂಸುತ್ತಿರುತ್ತದೆ. ಈ ಮಾಲಿನ್ಯಕಾರಕಗಳು ಕಾರಿನ ಕ್ಯಾಬಿನ್ ಅನ್ನು ಪ್ರವೇಶಿಸಬಹುದು. ಇದು ಒಳಗೆ ಕಲುಷಿತ ಗಾಳಿಯ ಸಂಗ್ರಹಕ್ಕೆ ಕಾರಣವಾಗುತ್ತದೆ. ಪರಿಸರದಲ್ಲಿರುವ ಧೂಳು, ಹೊಗೆ, ಬ್ಯಾಕ್ಟೀರಿಯಾ, ವೈರಸ್‌ಗಳು ಮತ್ತು ಅಲರ್ಜಿನ್‌ಗಳಂತಹ ಅಂಶಗಳಿಂದ ಇದು ಮತ್ತಷ್ಟು ಹದಗೆಡುತ್ತದೆ.
ಕಾರಿನಲ್ಲಿರುವ ಏರ್ ಪ್ಯೂರಿಫೈಯರ್ ಗಾಳಿಯ ಗುಣಮಟ್ಟವನ್ನು ಸುಧಾರಿಸುವಲ್ಲಿ ಮತ್ತು ಆರೋಗ್ಯವನ್ನು ರಕ್ಷಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಕಾರುಗಳಲ್ಲಿ ಏರ್ ಪ್ಯೂರಿಫೈಯರ್‌ಗಳು ಅಗತ್ಯವಾಗಿರುವುದಕ್ಕೆ ಕೆಲವು ಪ್ರಮುಖ ಕಾರಣಗಳೂ ಇವೆ.


1. ಮಾಲಿನ್ಯಕಾರಕಗಳನ್ನು ಕಡಿಮೆ ಮಾಡುತ್ತದೆ

ಗಾಳಿಯ ಶುದ್ಧೀಕರಣವು ಕಾರಿನೊಳಗಿನ ಗಾಳಿಯಿಂದ ಧೂಳು, ಹೊಗೆ, ಪರಾಗ, ಬ್ಯಾಕ್ಟೀರಿಯಾ ಮತ್ತು ವೈರಸ್‌ಗಳಂತಹ ಮಾಲಿನ್ಯಕಾರಕಗಳನ್ನು ಪರಿಣಾಮಕಾರಿಯಾಗಿ ಫಿಲ್ಟರ್ ಮಾಡುತ್ತದೆ. ಚಾಲನೆ ಮಾಡುವಾಗ ನೀವು ಉಸಿರಾಡುವ ಹಾನಿಕಾರಕ ಕಣಗಳ ಸಾಂದ್ರತೆಯನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ.

2. ಅಲರ್ಜಿಕಾರಕಗಳನ್ನು ತೆಗೆದು ಹಾಕುತ್ತದೆ

ಅಲರ್ಜಿ ಅಥವಾ ಆಸ್ತಮಾದಂತಹ ಉಸಿರಾಟದ ತೊಂದರೆ ಹೊಂದಿರುವ ವ್ಯಕ್ತಿಗಳಿಗೆ ಕಲುಷಿತ ಗಾಳಿಯು ಅಸ್ವಸ್ಥತೆ ಮತ್ತು ಆರೋಗ್ಯ ಸಮಸ್ಯೆಗಳನ್ನು ಪ್ರಚೋದಿಸುತ್ತದೆ. ಏರ್ ಪ್ಯೂರಿಫೈಯರ್ ಗಾಳಿಯಿಂದ ಅಲರ್ಜಿಯನ್ನು ತೆಗೆದುಹಾಕುತ್ತದೆ. ಸೂಕ್ಷ್ಮ ವ್ಯಕ್ತಿಗಳಿಗೆ ಸ್ವಚ್ಛ ಮತ್ತು ಸುರಕ್ಷಿತ ವಾತಾವರಣವನ್ನು ಸೃಷ್ಟಿಸುತ್ತದೆ.

3. ವಾಸನೆ ತೊಡೆದು ಹಾಕುವುದು

ಮಾಲಿನ್ಯಕಾರಕಗಳ ಜೊತೆಗೆ ಏರ್ ಪ್ಯೂರಿಫೈಯರ್‌ಗಳು ಕಾರಿನೊಳಗಿನ ಅಹಿತಕರ ವಾಸನೆಯನ್ನು ತೆಗೆದು ಹಾಕುತ್ತದೆ. ಅದು ಹೊಗೆ, ಆಹಾರ ಅಥವಾ ಇತರ ವಾಸನೆಯ ಪದಾರ್ಥಗಳು ತೊಡೆದು ಹಾಕಿ ಗಾಳಿ ಶುದ್ಧೀಕರಣ ಮಾಡಿ ಸುವಾಸನೆಯನ್ನು ಬೀರುತ್ತದೆ. ವಾಹನ ಚಾಲನೆಯ ಅನುಭವವನ್ನು ಹೆಚ್ಚಿಸುತ್ತದೆ.

4. ಆರೋಗ್ಯದ ಅಪಾಯಗಳ ವಿರುದ್ಧ ರಕ್ಷಣೆ

ಕಲುಷಿತ ಗಾಳಿಗೆ ದೀರ್ಘಕಾಲದವರೆಗೆ ಒಡ್ಡಿಕೊಳ್ಳುವುದರಿಂದ ಉಸಿರಾಟದ ಸಮಸ್ಯೆಗಳು, ಅಲರ್ಜಿಗಳು, ಆಸ್ತಮಾ ಮತ್ತು ಹೃದಯರಕ್ತನಾಳದ ಕಾಯಿಲೆಗಳು ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಕಾರಿನೊಳಗಿನ ಗಾಳಿಯನ್ನು ಶುದ್ಧೀಕರಿಸುವ ಮೂಲಕ ಈ ಆರೋಗ್ಯದ ಅಪಾಯಗಳನ್ನು ಕಡಿಮೆ ಮಾಡಲು ಮತ್ತು ಆರೋಗ್ಯಕರ ಚಾಲನಾ ವಾತಾವರಣವನ್ನು ಉತ್ತೇಜಿಸಲು ಏರ್ ಪ್ಯೂರಿಫೈಯರ್ ಸಹಾಯ ಮಾಡುತ್ತದೆ.

5. ಚಾಲನಾ ಸೌಕರ್ಯವನ್ನು ಹೆಚ್ಚಿಸುವುದು

ಕಾರಿನೊಳಗೆ ಶುದ್ಧ ಮತ್ತು ತಾಜಾ ಗಾಳಿಯು ಹೆಚ್ಚು ಆರಾಮದಾಯಕ ಮತ್ತು ಆನಂದದಾಯಕ ಚಾಲನಾ ಅನುಭವಕ್ಕೆ ಕೊಡುಗೆ ನೀಡುತ್ತದೆ. ವಿಶೇಷವಾಗಿ ದೀರ್ಘ ಪ್ರಯಾಣದ ಸಮಯದಲ್ಲಿ ಅಥವಾ ಸವಾಲಿನ ಚಾಲನಾ ಪರಿಸ್ಥಿತಿಗಳಲ್ಲಿ ಇದು ಗಮನ ಮತ್ತು ಜಾಗರೂಕತೆಯನ್ನು ಸುಧಾರಿಸುತ್ತದೆ.

ಇದನ್ನೂ ಓದಿ: Xiaomi EV: ತಿಂಗಳಲ್ಲಿ 75 ಸಾವಿರ ಆರ್ಡರ್ ಸ್ವೀಕರಿಸಿದ ಕ್ಸಿಯೋಮಿ ಎಸ್‌ಯು 7 ಎಲೆಕ್ಟ್ರಿಕ್‌ ಕಾರು; ಟೆಸ್ಲಾಗಿಂತ ಅಗ್ಗ!

6. ಕಾರುಗಳಲ್ಲಿ ಏರ್ ಪ್ಯೂರಿಫೈಯರ್‌

ಕಾರು ತಯಾರಕರು ಈಗ ತಮ್ಮ ವಾಹನದ ವೈಶಿಷ್ಟ್ಯಗಳ ಭಾಗವಾಗಿ ಇನ್‌ಬಿಲ್ಟ್‌ ಆಗಿ ಏರ್ ಪ್ಯೂರಿಫೈಯರ್‌ಗಳನ್ನು ನೀಡುತ್ತಿದ್ದಾರೆ. ಹೆಚ್ಚುವರಿಯಾಗಿ ಕಾರುಗಳಲ್ಲಿ ಬಳಸಲು ನಿರ್ದಿಷ್ಟವಾಗಿ ವಿನ್ಯಾಸಗೊಳಿಸಲಾದ ಪೋರ್ಟಬಲ್ ಮತ್ತು ಕಾಂಪ್ಯಾಕ್ಟ್ ಏರ್ ಪ್ಯೂರಿಫೈಯರ್‌ಗಳು ಇವೆ. ಚಾಲಕರು ತಮ್ಮ ವಾಹನದ ಮಾದರಿಯನ್ನು ಲೆಕ್ಕಿಸದೆಯೇ ಶುದ್ಧ ಗಾಳಿಯನ್ನು ಆನಂದಿಸಲು ಇದು ಅನುವು ಮಾಡಿಕೊಡುತ್ತದೆ.

Continue Reading
Advertisement
Road Accident
ಕ್ರೈಂ11 mins ago

Road Accident: ಸ್ಕೂಟರ್‌ಗೆ ಟ್ರಕ್‌, ಲಾರಿಗೆ ಬಸ್‌, ಡಿವೈಡರ್‌ಗೆ ಕಾರು ಡಿಕ್ಕಿ; ಅಪಾಯದಿಂದ ಜಸ್ಟ್‌ ಮಿಸ್‌

HD Revanna released from jail Revanna Go straight to HD Deve Gowda house
ಕ್ರೈಂ25 mins ago

HD Revanna Released: ಜೈಲಿಂದ ಬಿಡುಗಡೆಯಾದ ಎಚ್.ಡಿ. ರೇವಣ್ಣ; ನೇರವಾಗಿ ದೇವೇಗೌಡರ ಮನೆಗೆ ದೌಡು

Viral video
ವೈರಲ್ ನ್ಯೂಸ್33 mins ago

Viral video: ರಿಂಕು ಸಿಂಗ್​ ಜೆರ್ಸಿ ತೊಟ್ಟು ಚೆಂಡು ಕದಿಯಲು ಯತ್ನಿಸಿ ಸಿಕ್ಕಿ ಬಿದ್ದ ಭೂಪ!; ಪೊಲೀಸರಿಂದ ಬಿತ್ತು ಹಿಗ್ಗಾಮುಗ್ಗಾ ಗೂಸಾ

Vaishnavi Gowda
ಕಿರುತೆರೆ37 mins ago

Vaishnavi Gowda: ನಟಿ ವೈಷ್ಣವಿ ಗೌಡಗೆ ನೋಟಿಸ್‌ ಕೊಟ್ಟ ಟ್ರಾಫಿಕ್‌ ಪೊಲೀಸರು; ಸೀತಮ್ಮ ಮಾಡಿದ ತಪ್ಪೇನು?

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202443 mins ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

pm narendra modi nomination
ಪ್ರಮುಖ ಸುದ್ದಿ50 mins ago

PM Narendra Modi: ಪಿಎಂ ಮೋದಿ ನಾಮಪತ್ರ ಅನುಮೋದಿಸಿದ ನಾಲ್ವರ ಹಿನ್ನೆಲೆ ಏನು?

Viral Video
Latest57 mins ago

Viral Video: ಇಲ್ಲಿ ಸಿಗೋದು ಡಿಸೇಲ್ ಪರಾಠಾ!

Love Failure
ಬೆಂಗಳೂರು ಗ್ರಾಮಾಂತರ59 mins ago

Love Failure : ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

HD Revanna Bail I am not happy that Revanna has been released says HD Kumaraswamy
ರಾಜಕೀಯ1 hour ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

Bomb threat
ದೇಶ1 hour ago

Bomb Threat: ದಿಲ್ಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮೂಲಕ ಸಂದೇಶ ರವಾನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202443 mins ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 hour ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ9 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ19 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ19 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ20 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ20 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ21 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಟ್ರೆಂಡಿಂಗ್‌