GT Devegowda : ಜೆಡಿಎಸ್‌ ಕೇಳಿದ್ದು ಮೂರಲ್ಲ ಆರು! ನಿಖಿಲ್‌ ಸ್ಪರ್ಧೆ ಇಲ್ಲ ಎಂದ ಜಿಟಿಡಿ - Vistara News

ಹುಬ್ಬಳ್ಳಿ

GT Devegowda : ಜೆಡಿಎಸ್‌ ಕೇಳಿದ್ದು ಮೂರಲ್ಲ ಆರು! ನಿಖಿಲ್‌ ಸ್ಪರ್ಧೆ ಇಲ್ಲ ಎಂದ ಜಿಟಿಡಿ

GT Devegowda : ಬಿಜೆಪಿ ಜೆಡಿಎಸ್‌ ಮೈತ್ರಿ ವಿಚಾರದಲ್ಲಿ ಹಿರಿಯ ನಾಯಕ ಜಿ.ಟಿ. ದೇವೇಗೌಡ ಅವರು ಹಲವು ಒಳಸುಳಿಗಳನ್ನು ಬಿಟ್ಟುಕೊಟ್ಟಿದ್ದಾರೆ. ಜೆಡಿಎಸ್‌ ಆರು ಸ್ಥಾನಗಳಿಗೆ ಬೇಡಿಕೆ ಇಟ್ಟಿದೆ ಎಂದು ಅವರು ಹೇಳಿದ್ದಾರೆ. ಜತೆಗೆ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ ಇಲ್ಲ ಎಂದಿದ್ದಾರೆ.

VISTARANEWS.COM


on

GT Devegowda Nikhil Kumaraswamy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ (BJP-JDS Alliance) ಮುಂದಿನ ಲೋಕಸಭಾ ಚುನಾವಣೆಗೆ (Parliament Elections 2024) ಸಂಬಂಧಿಸಿ ಎಷ್ಟು ಸ್ಥಾನಗಳಿಗೆ ಬೇಡಿಕೆ ಇಟ್ಟಿದೆ ಎಂಬ ಬಗ್ಗೆ ಕ್ಲ್ಯಾರಿಟಿ ಸಿಕ್ಕಿದೆ. ಹೆಚ್ಚಿನವರು ಜೆಡಿಎಸ್‌ ಮೂರು ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿದೆ ಎಂದು ಹೇಳುತ್ತಿದ್ದರೆ ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷರಾಗಿರುವ ಜಿ.ಟಿ. ದೇವೇಗೌಡ (GT Devegowda) ಅವರು ನಾವು ಕೇಳುತ್ತಿರುವುದು ಮೂರು ಕ್ಷೇತ್ರವಲ್ಲ ಆರು (Demand for six seats) ಎಂದು ಸ್ಪಷ್ಟಪಡಿಸಿದ್ದಾರೆ.

ನಾವು ಮತ್ತು ನಮ್ಮ ಪಕ್ಷ ಕಾರ್ಯಕರ್ತರು ಆರು ಕ್ಷೇತ್ರಗಳನ್ನು ಕೇಳಬೇಕು ಎಂದು ಮಾಜಿ ಪ್ರಧಾನಿಗಳಾದ ಎಚ್.‌ಡಿ. ದೇವೇಗೌಡರು ಮತ್ತು ಎಚ್‌.ಡಿ ಕುಮಾರಸ್ವಾಮಿ ಅವರಿಗೆ ಹೇಳಿದ್ದೇವೆ. 28 ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿದ್ದೇವೆ ಎಂದು ಹೇಳಿರುವ ಜಿ.ಟಿ. ದೇವೇಗೌಡರ ಅವರು, ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಕೂಟ ಎಲ್ಲ 28 ಕ್ಷೇತ್ರಗಳನ್ನು ಗೆಲ್ಲಲಿದೆ ಎಂದಿದ್ದಾರೆ. ಅವರು ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು.

ಹಾಗಿದ್ದರೆ ಜೆಡಿಎಸ್‌ ಕೇಳಿದ ಕ್ಷೇತ್ರಗಳು ಯಾವುವು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ತುಮಕೂರು, ಹಾಸನ, ಮಂಡ್ಯ, ಮೈಸೂರು, ಕೋಲಾರ ಸೇರಿ ಆರು ಕ್ಷೇತ್ರ ಕೇಳಿದ್ದೇವೆ ಎಂದರು. ಇನ್ನೊಂದು ಚಿಕ್ಕಬಳ್ಳಾಪುರ ಎಂಬ ಸುದ್ದಿ ಇದೆ.

ಇದನ್ನೂ ಓದಿ : Lok Sabha Election 2024: ಮಂಡ್ಯ ಟಿಕೆಟ್‌ ಕಿರಿಕ್;‌ ನಮಗೇ ಬೇಕು ಎಂದ ಬಿಜೆಪಿ! ಸುಮಲತಾ ಕಥೆ ಏನು?

ಸುಮಲತಾ ಕಾಂಗ್ರೆಸ್‌ಗೆ ಹೋಗಬಹುದು ಎಂದ ಜಿ.ಟಿ. ದೇವೇಗೌಡ

ಮಂಡ್ಯ ಕ್ಷೇತ್ರದ ವಿಚಾರದಲ್ಲಿ ಸೃಷ್ಟಿಯಾಗಿರುವ ವಿವಾದಕ್ಕೆ ಪ್ರತಿಕ್ರಿಯಿಸಿದ ಅವರು, ಒಂದೊಮ್ಮೆ ‌ ಮಂಡ್ಯ ಕ್ಷೇತ್ರ ಬಿಜೆಪಿ ಪಾಲಾದರೆ ಸುಮಲತಾ ಅವರಿಗೆ ಟಿಕೆಟ್‌ ಸಿಗಬಹುದು. ಸಿಗದೆ ಇದ್ದರೆ ಅವರು ಕಾಂಗ್ರೆಸ್‌ ಸೇರುವುದು ಗ್ಯಾರಂಟಿ ಎಂದಿದ್ದಾರೆ.

ಮಾಜಿ ಸಚಿವರಾಗಿರುವ ಕೆ.ಸಿ. ನಾರಾಯಣ ಗೌಡ ಅವರು ಇದೀಗ ಸಿದ್ದರಾಮಯ್ಯ ಮನೆಯಲ್ಲಿ ಕುಳಿತಿದ್ದಾರೆ. ಹಾಗಾಗಿ ಸುಮಲತಾ ಕಾಂಗ್ರೆಸ್ ಗೆ ಹೋಗಬಹುದುʼʼ ಎಂದರು.

GT Devegowda: ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ ಇಲ್ಲ ಎಂದ ಜಿ.ಟಿ ದೇವೇಗೌಡ

ಗೌಡರ ಕುಟುಂಬದಿಂದ ಇಬ್ಬರು ಅಭ್ಯರ್ಥಿಗಳು ಇರಬಹುದು, ಒಂದು ಎಚ್.ಡಿ ಕುಮಾರಸ್ವಾಮಿ, ಇನ್ನೊಬ್ಬರು ಪ್ರಜ್ವಲ್ ರೇವಣ್ಣ ಅವರು ಅಭ್ಯರ್ಥಿಗಳಾಗಬಹುದು ಎಂದು ಜಿ.ಟಿ. ದೇವೇಗೌಡರು ಹೇಳಿದರು. ಒಂದು ವೇಳೆ ಕುಮಾರಸ್ವಾಮಿ ಅವರು ಸ್ಪರ್ಧಿಸದೆ ಇದ್ದರೆ ಪ್ರಜ್ವಲ್‌ ರೇವಣ್ಣ ಮಾತ್ರ ಸ್ಪರ್ಧೆ ಮಾಡಲಿದ್ದಾರೆ. ನಿಖಿಲ್‌ ಕುಮಾರಸ್ವಾಮಿ ಅವರು ಸ್ಪರ್ಧಿಸುವುದಿಲ್ಲ. ಅವರು ರಾಜ್ಯಾದ್ಯಂತ ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ ಎಂದು ತಿಳಿಸಿದರು.

GT Devegowda : ಮೈತ್ರಿ ಲೋಕಸಭೆಗೆ ಮಾತ್ರ ಸೀಮಿತ ಅಲ್ಲ

ಬಿಜೆಪಿಯವರು ಯಾರೂ ನಮ್ಮ ಮೈತ್ರಿ ವಿರೋಧ ಮಾಡಿಲ್ಲ. ಲೋಕಸಭೆ ಅಷ್ಟೆ ಅಲ್ಲ ಮುಂದಿನ ವಿಧಾನಸಭೆ ಚುನಾವಣೆಗೂ ಹೊಂದಾಣಿಕೆ ಆಗಬೇಕು ಎಂಬ ಅಭಿಪ್ರಾಯವಿದೆ. ಯಾಕೆಂದರೆ ರಾಜ್ಯದಲ್ಲಿ ಕಾಂಗ್ರೆಸ್ ದೌರ್ಜನ್ಯ ದಬ್ಬಾಳಿಕೆ ಜಾಸ್ತಿಯಾಗಿದೆ. ಐದು ಗ್ಯಾರಂಟಿ ವಿಫಲವಾಗಿದೆ. ಮೋದಿ ಹಣ ಮಾತ್ರ ಸಲೀಸಾಗಿ ಹೋಗುತ್ತಿದೆ ಎಂದು ಜಿ.ಟಿ. ದೇವೇಗೌಡ ವಿವರಿಸಿದರು.

ನಮ್ಮ ಹೊಂದಾಣಿಕೆ ಮೋದಿಗಾಗಿ, ತತ್ವ, ಸಿದ್ಧಾಂತದಲ್ಲಿ ರಾಜಿ ಇಲ್ಲ

ಮಂಡ್ಯದಲ್ಲಿ ನಡೆದ ಪ್ರತಿಭಟನೆಯ ವೇಳೆ ಎಚ್.ಡಿ ಕುಮಾರಸ್ವಾಮಿ ಅವರು ಕೇಸರಿ ಶಾಲು ಧರಿಸಿದ್ದು ಮತ್ತು ಅದಕ್ಕೆ ಎಚ್.ಡಿ. ದೇವೇಗೌಡರೇ ಬೇಸರ ವ್ಯಕ್ತಪಡಿಸಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಜಿ.ಟಿ. ದೇವೇಗೌಡರು, ಆವತ್ತು ಹನುಮ ಭಕ್ತರು ಬಂದು ಕೇಸರಿ ಶಾಲು ಹಾಕಿದರು. ಕೇಸರಿ ಏನೂ ಬಿಜೆಪಿಯ ಸಿಂಬಲ್ ಅಲ್ಲ. ಕುಮಾರಸ್ವಾಮಿ ಬಿಜೆಪಿಯ ಸಿಂಬಲ್ ಇರುವ ಶಾಲು ಹಾಕಿಲ್ಲ. ಅದು ಆಂಜನೇಯನ ಧ್ವಜ ಎಂದು ಸಮರ್ಥಿಸಿದರು. ನಮ್ಮ ಪಕ್ಷದ ತತ್ವ ಸಿದ್ಧಾಂತ ಬೇರೆ. ಬಿಜೆಪಿ ತತ್ವ ಸಿದ್ಧಾಂತ ಬೇರೆ. ಮೋದಿ ಕಾರಣಕ್ಕೆ ನಾವು ಹೊಂದಾಣಿಕೆ ಆಗಿದ್ದೇವೆ. ಬಿಜೆಪಿಯ ಯಾವ ತತ್ವ ಸಿದ್ಧಾಂತವನ್ನೂ ನಾವು ಜೆಡಿಎಸ್ ಪಕ್ಷದ ಒಳಗಡೆ ಬಿಟ್ಟುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು. “ನಮ್ಮ ಸಿದ್ಧಾಂತ ಬೇರೆ, ಬಿಜೆಪಿಯ ಸಿದ್ಧಾಂತ ಬೇರೆ. ಯಾವುದೇ ಹಂತದಲ್ಲಿ ಸಿದ್ಧಾಂತದಲ್ಲಿ ನಮ್ಮದು ರಾಜಿಯಿಲ್ಲ” ಎಂದು ಹೇಳಿದ್ದರು.

ತನ್ನ ಭಾರದಿಂದಲೇ ಕುಸಿಯಲಿದೆ ಕಾಂಗ್ರೆಸ್‌ ಸರ್ಕಾರ

ಕೇಂದ್ರ ಸರ್ಕಾರ ಅನುದಾನ ಕೊಟ್ಟಿಲ್ಲ ಎನ್ನುವುದು ಕಾಂಗ್ರೆಸ್‌ನ ಸುಳ್ಳು ಪ್ರಚಾರ. ಈ ಸಿದ್ಧರಾಮಯ್ಯ ಅವರು ಶಾಸಕರಿಗೆ ಏನು ಕೊಟ್ಟಿದ್ದಾರೆ. 224 ಶಾಸಕರಿಗೆ ಕೇವಲ 50 ಲಕ್ಷ ರೂ. ಕೊಟ್ಟಿದ್ದಾರೆ ಎಂದು ಹೇಳಿದ ಜಿ.ಟಿ. ದೇವೇಗೌಡರು, ನಾವು ಯಾರೂ ಕಾಂಗ್ರೆಸ್‌ ಸರ್ಕಾರವನ್ನು ಉರುಳಿಸುವುದಿಲ್ಲ. ಅದರ ಭಾರದಿಂದಲೇ ಅದು ಕುಸಿಯಬೇಕು‌. ಕುಮಾರಸ್ವಾಮಿ ಸರ್ಕಾರವನ್ನು ಯಾರು ತೆಗೆದರೋ, ಹಾಗೇ ಆಗಬಹುದು ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ 5ನೇ ಆರೋಪಿಗೆ ಲಷ್ಕರ್–ಎ–ತಯ್ಬಾ ಜತೆ ಲಿಂಕ್‌!

Rameshwaram Cafe Blast: ದಿ ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್‌ಐಎ ಅಧಿಕಾರಿಗಳು ದಿನೇ ದಿನೆ ತಮ್ಮ ತನಿಖೆಯನ್ನು ಚುರುಕುಗೊಳಿಸುತ್ತಾ ಬಂದಿದ್ದರು. ಮೂರು ದಿನಗಳ ಹಿಂದೆ ಎನ್.ಐ.ಎ ಅಧಿಕಾರಿಗಳು ಹುಬ್ಬಳ್ಳಿಯಲ್ಲಿ ನಡೆಸಿದ್ದ ದಾಳಿಯಲ್ಲಿ ಇಬ್ಬರು ಆರೋಪಿಗಳು ಲಾಕ್ ಆಗಿದ್ದರು. ಅವರಲ್ಲಿ ಹುಬ್ಬಳ್ಳಿ ಮೂಲದ ಶೋಯಬ್‌ ಅಹ್ಮದ್ ಮಿರ್ಜಾ @ಛೋಟು ಬಂಧಿತ ಆರೋಪಿಯಾಗಿದ್ದಾನೆ. ಈತ ಈಗ ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ 5ನೇ ಆರೋಪಿಯಾಗಿದ್ದಾನೆ.

VISTARANEWS.COM


on

Koo

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ (Rameshwaram Cafe Blast) ಸಂಬಂಧ ಹುಬ್ಬಳ್ಳಿ ನಗರದಲ್ಲಿ ಮೂರು ದಿನಗಳ ಹಿಂದೆ ಇಬ್ಬರು ಆರೋಪಿಗಳನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಈ ಇಬ್ಬರ ವಿಚಾರಣೆ ವೇಳೆ ಆಘಾತಕಾರಿ ವಿಚಾರವೊಂದು ಬಯಲಾಗಿದೆ. ವಶಕ್ಕೆ ಪಡೆದವರಲ್ಲಿ ಒಬ್ಬ ಈ ಹಿಂದೆ ಲಷ್ಕರ್‌ ಇ ತೋಯ್ಬಾ (Lashkar-e-Taiba) ಪ್ರಕರಣದಲ್ಲಿ ಬಂಧಿತನಾಗಿ ಬಿಡುಗಡೆಯಾಗಿದ್ದ ಎಂಬುದು ಗೊತ್ತಾಗಿದೆ.

ದಿ ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್‌ಐಎ ಅಧಿಕಾರಿಗಳು ದಿನೇ ದಿನೆ ತಮ್ಮ ತನಿಖೆಯನ್ನು ಚುರುಕುಗೊಳಿಸುತ್ತಾ ಬಂದಿದ್ದರು. ಮೂರು ದಿನಗಳ ಹಿಂದೆ ಎನ್.ಐ.ಎ ಅಧಿಕಾರಿಗಳು ಹುಬ್ಬಳ್ಳಿಯಲ್ಲಿ ನಡೆಸಿದ್ದ ದಾಳಿಯಲ್ಲಿ ಇಬ್ಬರು ಆರೋಪಿಗಳು ಲಾಕ್ ಆಗಿದ್ದರು. ಅವರಲ್ಲಿ ಹುಬ್ಬಳ್ಳಿ ಮೂಲದ ಶೋಯಬ್‌ ಅಹ್ಮದ್ ಮಿರ್ಜಾ @ಛೋಟು ಬಂಧಿತ ಆರೋಪಿಯಾಗಿದ್ದಾನೆ. ಈತ ಈಗ ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ 5ನೇ ಆರೋಪಿಯಾಗಿದ್ದಾನೆ.

ಅಲ್ಲದೆ, ಶೋಯಬ್‌ ಅಹ್ಮದ್ ಮಿರ್ಜಾನನ್ನು ಈ ಹಿಂದೆ ಲಷ್ಕರ್–ಎ–ತಯ್ಬಾಕ್ಕೆ (ಎಲ್‌ಇಟಿ) ಸಂಬಂಧಪಟ್ಟಂತೆ ಪ್ರಕರಣವೊಂದರಲ್ಲಿ ಬಂಧಿಸಿ, ಸೂಕ್ತ ಸಾಕ್ಷ್ಯಾಧಾರಗಳಿಲ್ಲದೆ ಬಿಡುಗಡೆ ಮಾಡಲಾಗಿತ್ತು ಎಂದು ತಿಳಿದುಬಂದಿದೆ.

ಬ್ಲಾಸ್ಟ್ ಪ್ರಕರಣದ ಮಾಸ್ಟರ್‌ ಮೈಂಡ್‌ ಅಬ್ದುಲ್‌ ಮತೀನ್ ತಾಹನ ಸ್ನೇಹಿತನಾಗಿದ್ದ ಶೋಯೆಬ್‌ ಅಹ್ಮದ್ ರಾಮೇಶ್ವರಂ ಕೆಫೆ ಬ್ಲಾಸ್ಟ್‌ಗೆ ಸಹಕರಿಸಿದ್ದ. ಈತ ವಿದೇಶಿ ಮೂಲದ ಹ್ಯಾಂಡ್ಲರ್‌ಗಳನ್ನು ಪರಿಚಯಿಸಿದ್ದ ಎಂದು ತಿಳಿದುಬಂದಿದೆ. ಹ್ಯಾಂಡ್ಲರ್ ಮತ್ತು ಮತೀನ್ ತಾಹ ನಡುವೆ ಇ-ಮೇಲ್‌ ಮುಖಾಂತರ ಸಂಪರ್ಕಿಸುತ್ತಿದ್ದ ಎಂದು ತಿಳಿದುಬಂದಿದೆ.

ಇನ್ನೊಬ್ಬ ಅಜೀಜ್ ಅಹಮದ್ ಮಿರ್ಜಾ

ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶೋಯಬ್ ಮಿರ್ಜಾನನ್ನು ಬಂಧಿಸಲಾಗಿದ್ದ, ಆತನ ಜತೆಗಿದ್ದ ಸಹೋದರ ಅಜೀಜ್ ಅಹಮದ್ ಮಿರ್ಜಾ ಎಂಬಾತನನ್ನೂ ವಶಕ್ಕೆ ಪಡೆಯಲಾಗಿತ್ತು. ಈಗ ಈತನ ಪಾತ್ರ ಏನಿದೆ ಎಂಬ ಬಗ್ಗೆಯೂ ತೀವ್ರವಾಗಿ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: Excise revenue: ಇದು ಎಣ್ಣೆ ಮಹಿಮೆ! ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

ಹುಬ್ಬಳ್ಳಿ ಸೇರಿ 4 ರಾಜ್ಯಗಳ ಹಲವೆಡೆ ದಾಳಿ ನಡೆಸಿ 11 ಶಂಕಿತ ಉಗ್ರರು ವಶಕ್ಕೆ ಪಡೆದಿದ್ದ ಎನ್‌ಐಎ

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳವು ಮಂಗಳವಾರ (ಮೇ 21) ಕರ್ನಾಟಕ ಸೇರಿ 4 ರಾಜ್ಯಗಳ 11 ಸ್ಥಳಗಳಲ್ಲಿ ದಾಳಿ ನಡೆಸಿ, 11 ಶಂಕಿತ ಉಗ್ರರನ್ನು ವಶಕ್ಕೆ ಪಡೆದಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಸಂಚುಕೋರರನ್ನು ಪತ್ತೆ ಮಾಡಲು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ.

ಕರ್ನಾಟಕ, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶದ 11 ಸ್ಥಳಗಳಲ್ಲಿ ಶೋಧ ನಡೆಸಲಾಗಿತ್ತು. ಮಂಗಳವಾರ ಪತ್ತೆಯಾದ 11 ಮಂದಿ ಶಂಕಿತರಲ್ಲಿ ಬೆಂಗಳೂರು ಮತ್ತು ಹುಬ್ಬಳ್ಳಿ ಜಿಲ್ಲೆಗಳಲ್ಲಿ 2012ರ ಲಷ್ಕರ್–ಎ–ತಯ್ಬಾ (ಎಲ್‌ಇಟಿ) ಪಿತೂರಿ ಪ್ರಕರಣದಲ್ಲಿ ಶಿಕ್ಷೆಗೊಳಗಾದ ವ್ಯಕ್ತಿಗಳೂ ಸೇರಿದ್ದಾರೆ. ದಾಳಿ ವೇಳೆ ಡಿಜಿಟಲ್ ಪರಿಕರಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇನ್ನು ಎನ್‌ಐಎ ಈ ಕೇಸ್‌ ಸಂಬಂಧ ದೇಶಾದ್ಯಂತ 29 ಸ್ಥಳಗಳಲ್ಲಿ ಶೋಧ ನಡೆಸಿದೆ.

Continue Reading

ಮಳೆ

Karnataka Weather : ಕೈಯಲ್ಲಿ ಛತ್ರಿ ಹಿಡಿದು ಬಸ್ ಡ್ರೈವಿಂಗ್; ಮಳೆಗೆ ಕುಸಿದು ಬಿದ್ದ ಮಾಳಿಗೆ ಮನೆ

Karnataka Weather Forecast : ಮಳೆ ಅವಾಂತರವು ಮುಂದುವರಿದಿದೆ. ನಿರಂತರ ಮಳೆಗೆ (Rain News) ಕೆಎಸ್‌ಆರ್‌ಟಿಸಿ ಬಸ್ಸಿನೊಳಗೆ ನೀರು ಸೋರುತ್ತಿರುವ ಕಾರಣಕ್ಕೆ ಚಾಲಕನೊಬ್ಬ ಕೈಯಲ್ಲಿ ಛತ್ರಿ ಹಿಡಿದು ಚಲಾಯಿಸಿದ್ದಾರೆ. ಇತ್ತ ವ್ಯಾಪಕ ಮಳೆಗೆ ಮಾಳಿಗೆ ಮನೆ ಕುಸಿದಿದ್ದು, ಮನೆಯಲ್ಲಿದ್ದ ಮಕ್ಕಳಿಬ್ಬರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

VISTARANEWS.COM


on

By

Karnataka Weather Forecast
Koo

ಧಾರವಾಡ/ದಾವಣಗೆರೆ: ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಮಳೆ (Rain News) ಬಂದರು ಕಷ್ಟ ಬಾರದೆ ಇದ್ದರೂ ನಷ್ಟ ಎನ್ನುವಂತಾಗಿದೆ. ಮಳೆಯಿಂದಾಗಿ (karnataka Weather Forecast) ಅವಾಂತರವೇ ಸೃಷ್ಟಿಯಾಗಿದ್ದು, ಸಾವು-ನೋವು ಸಂಭವಿಸಿದೆ. ಧಾರವಾಡದಲ್ಲಿ ಭಾರಿ ಮಳೆಗೆ ಸಾರಿಗೆ ಬಸ್‌ನಲ್ಲಿ ನೀರು ಸೋರುತ್ತಿದ್ದ ಕಾರಣಕ್ಕೆ, ಚಾಲಕರೊಬ್ಬರು ಒಂದು ಕೈಯಲ್ಲಿ ಛತ್ರಿ ಹಿಡಿದು ಮತ್ತೊಂದು ಕೈಯಲ್ಲಿ ಬಸ್ ಡ್ರೈವಿಂಗ್ ಮಾಡಿದ್ದಾರೆ.

ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿಗೆ ಗ್ರಾಮಕ್ಕೆ ಸಂಚರಿಸುವ ಸಾರಿಗೆ ಬಸ್‌ ಇದಾಗಿದ್ದು, ಭಾರಿ ಮಳೆಗೆ ಎಲ್ಲ ಕಡೆಯು ನೀರು ಸೋರಿದೆ. ಮಳೆಯಿಂದ ರಕ್ಷಣೆ ಪಡೆಯುವ ಸಲುವಾಗಿ ಚಾಲಕ ಛತ್ರಿ ಹಿಡಿದುಕೊಂಡು ಬಸ್‌ ಅನ್ನು ಚಾಲನೆ ಮಾಡಿದ್ದಾರೆ. ಈ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ. ಚಾಲಕ ಛತ್ರಿ ಹಿಡಿದ ದೃಶ್ಯವನ್ನು ನಿರ್ವಾಹಕಿ ವಿಡಿಯೊ ಮಾಡಿದ್ದಾರೆ ಎನ್ನಲಾಗಿದೆ.

karnataka Weather Forecast

ದಾವಣಗೆರೆಯಲ್ಲಿ ಕುಸಿದು ಬಿದ್ದ ಮಾಳಿಗೆ ಮನೆ

ಭಾರಿ ಮಳೆಗೆ ಮಾಳಿಗೆ ಮನೆಯೊಂದು ಕುಸಿದು ಬಿದ್ದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹುಚ್ಚವ್ವನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಶುಕ್ರವಾರ ಬೆಳಗ್ಗೆ ಸುರಿದ ಮಳೆಯಿಂದ ಮಾಳಿಗೆ ಮನೆ ಕುಸಿದಿದೆ. ಕುಟುಂಬಸ್ಥರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಚ್ಚವ್ವನಹಳ್ಳಿ ಗ್ರಾಮದ ಸನಾವುಲ್ಲಾ ಎಂಬುವರಿಗೆ ಸೇರಿದ ಮಾಳಿಗೆ ಮನೆಯಲ್ಲಿ ಮಕ್ಕಳು ಪಾರಾಗಿದ್ದು, ಸನಾವುಲ್ಲಾ ಅವರಿಗೆ ಸಣ್ಣ-ಪುಟ್ಟ ಗಾಯವಾಗಿದೆ. ಚಿಕಿತ್ಸೆಗಾಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ: Karnataka Rain : ಸಿಡಿಲಾಘಾತಕ್ಕೆ ವಿದ್ಯಾರ್ಥಿ ಬಲಿ; ಗಾಳಿ-ಮಳೆಗೆ ಮರ ಮುರಿದು ಬಿದ್ದು ಜಾನುವಾರು ಸಾವು

ಹಾಸನದಲ್ಲಿ ಮಳೆ ಗಾಳಿಗೆ ರಸ್ತೆಗೆ ಬಿದ್ದ ಮರ

ಹಾಸನ ನಗರದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿದಿದೆ. ಸತತ ಒಂದು ಗಂಟೆಗಳ ಕಾಲ ಸುರಿದ ಗಾಳಿ ಮಳೆಗೆ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು. ಇದರಿಂದಾಗಿ ಒಂದು ಕಾರು ಜಖಂ ಆಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಹಾಸನ ನಗರದ ಹೌಸಿಂಗ್ ಬೋರ್ಡ್‌ ಬಡಾವಣೆಯಲ್ಲಿ ಈ ಘಟೆನೆ ನಡೆದಿದೆ. ಇತ್ತ ನಗರದ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿತ್ತು. ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಯಿಂದಾಗಿ ಹಾಸನ ನಗರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.

ಚಿಕ್ಕಬಳ್ಳಾಪುರದಲ್ಲಿ ಧರೆಗುರುಳಿದ 50 ವರ್ಷದ ಅರಳಿ ಮರ

ಬಿರುಗಾಳಿ ಸಹಿತ‌ ಮಳೆಗೆ ಬೃಹತ್ ಗಾತ್ರದ ಮರವೊಂದು ಧರೆಗುರುಳಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅರಳಿಕಟ್ಟೆಯಲ್ಲಿದ್ದ 50 ವರ್ಷಗಳಿಗೂ ಹಳೆಯ ಅರಳಿ ಮರ ಉರುಳಿ ಬಿದ್ದಿದೆ. ಅದೃಷ್ಟವಶಾತ್‌ ಆ ಸಮಯದಲ್ಲಿ ಯಾರು ಇಲ್ಲದ ಕಾರಣಕ್ಕೆ ಅಪಾಯವೊಂದು ತಪ್ಪಿದೆ. ಇಶಾ ಫೌಂಡೇಶನ್ ಸುತ್ತಮುತ್ತ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಬಿರುಗಾಳಿಗೆ ಜಾಹೀರಾತು ಫಲಕಗಳು ನೆಲಕ್ಕೆ ಬಿದ್ದಿವೆ. ಚಿಕನ್ ಹಾಗೂ ಚಾಟ್ಸ್ ಅಂಗಡಿ ಮೇಲೆ ಫಲಕ ಬಿದ್ದಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಸಿಡಿಲಾಘಾತಕ್ಕೆ ವಿದ್ಯಾರ್ಥಿ ಬಲಿ; ಗಾಳಿ-ಮಳೆಗೆ ಮರ ಮುರಿದು ಬಿದ್ದು ಜಾನುವಾರು ಸಾವು

Karnataka Rain : ಉಡುಪಿಯಲ್ಲಿ ಸಿಡಿಲಾಘಾತಕ್ಕೆ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದಾನೆ. ಹಲವೆಡೆ ಭಾರಿ ಮಳೆ-ಗಾಳಿಯಿಂದಾಗಿ ಮರಗಳು ಧರೆಗುರುಳುತ್ತಿವೆ. ಪರಿಣಾಮ ಅನಾಹುತಗಳು ಸಂಭವಿಸುತ್ತಿವೆ. ಮರದ ಬೃಹತ್‌ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಜಾನುವಾರವೊಂದು ಮೃತಪಟ್ಟಿದೆ. ಕೆಲವೆಡೆ ಮನೆಯ ಶೆಡ್‌ಗಳು ಹಾರಿ ಹೋಗಿವೆ.

VISTARANEWS.COM


on

By

Karnataka Rain
Koo

ಉಡುಪಿ/ಬೆಳಗಾವಿ: ರಾಜ್ಯಾದ್ಯಂತ ಗುಡುಗು, ಸಿಡಿಲು ಸಹಿತ ಮಳೆಯಾಗುತ್ತಿದ್ದು, ಸಾವು- ನೋವು (Karnataka Rain) ಸಂಭವಿಸುತ್ತಿದೆ. ಉಡುಪಿಯಲ್ಲಿ ಸಿಡಿಲಾಘಾತಕ್ಕೆ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದಾನೆ. ಉಡುಪಿಯ ಶಿರ್ವ ಪಂಚಾಯತ್ ವ್ಯಾಪ್ತಿಯ ಮಾಣಿಬೆಟ್ಟು ಬಳಿ ಘಟನೆ ನಡೆದಿದೆ. ಶಿರ್ವ ಮಾಣೆಬೆಟ್ಟು ನಿವಾಸಿ ರಕ್ಷಿತ್ ಪೂಜಾರಿ ಮೃತ ದುರ್ದೈವಿ.

ರಕ್ಷಿತ್‌ ಶಿರ್ವ ಎಂಎಸ್‌ಆರ್‌ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿಯಾಗಿದ್ದ. ಗುರುವಾರ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದಾಗ ಸಿಡಿಲು ಬಡಿದಿದೆ. ನೆಲದಲ್ಲಿ ಬಿದ್ದಿದ್ದ ರಕ್ಷಿತ್‌ನನ್ನು ಕೂಡಲೇ ಕುಟುಂಬಸ್ಥರು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10 ಗಂಟೆಗೆ ಮೃತಪಟ್ಟಿದ್ದಾನೆ.

ಬೆಳಗಾವಿಯಲ್ಲಿ ಮರದಡಿ ನಿಂತಿದ್ದ ಆಕಳು ಸಾವು

ಬೆಳಗಾವಿಯ ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಗಾಳಿಯೊಂದಿಗೆ ಭಾರಿ‌ ಮಳೆಯಾಗಿದೆ. ಮಳೆಗೆ ಬೃಹತ್ ಗಾತ್ರದ ಮರ ಧರೆಗುರುಳಿದೆ. ಗುರುವಾರ ಸಂಜೆ ಸುರಿದ ಮಳೆಯಿಂದ ಮನೆ ಮುಂದಿದ್ದ ಮರ ಬಿದ್ದಿದೆ. ಮರದ ಕೆಳಗೆ ಕಟ್ಟಿದ್ದ ಆಕಳು ಮೇಲೆ ಬೃಹತ್‌ ಗಾತ್ರದ ಕೊಂಬೆ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದೆ. ರೈತ ಶಂಕರ್ ರೊಡ್ಡಣ್ಣವರ್ ಎಂಬುವವರಿಗೆ ಸೇರಿದ ಆಕಳು ಮೃತಪಟ್ಟಿದೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಳೆಗೆ ಮನೆ ಬಿದ್ದು ಬೀದಿಗೆ ಬಂದ ಕುಟುಂಬ

ಕಳೆದ ರಾತ್ರಿ ಸುರಿದ ಭಾರಿ ಮಳೆ ಗಾಳಿಗೆ ಎಲ್ಲವನ್ನೂ ಕಳೆದುಕೊಂಡು ಕುಟುಂಬವೊಂದು ಬೀದಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರ ಗ್ರಾಮದಲ್ಲಿ ಭಾರಿ ಮಳೆಗೆ ಲಕ್ಷ್ಮೀ ಮಾದರ್ ಎಂಬುವವರ ಮನೆಯ ಚಾವಣಿ ಹಾರಿ ಹೋಗಿದೆ. ಲಕ್ಷ್ಮಿ ಅವರ ಕೈ ಮೇಲೂ ಚಾವಣಿ ಬಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿದ್ದ ಎಲ್ಲ ಸಾಮಾಗ್ರಿಗಳಿಗೂ ಹಾನಿಯಾಗಿವೆ. ಸರ್ಕಾರದಿಂದ ಸೂಕ್ತ ಪರಿಹಾರಕ್ಕೆ ಲಕ್ಷ್ಮೀ ಮನವಿ ಮಾಡಿದ್ದಾರೆ. ಇನ್ನೂ ಭಾರಿ ಬಿರುಗಾಳಿಗೆ 5ಕ್ಕೂ ಹೆಚ್ಚು ಶೆಡ್‌ಗಳ ಚಾವಣಿ, 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಮನೆಗಳಿಗೆ ಹಾನಿ ಹಿನ್ನೆಲೆ ಇಬ್ಬರಿಗೆ ಗಾಯವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಾಗಲಕೋಟೆಯಲ್ಲಿ ನೆಲಕ್ಕುರುಳಿದ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌

ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಬಾಗಲಕೋಟೆಯ ತುಳಸಿಗೇರಿ ಗ್ರಾಮದಲ್ಲಿ ಬಿರುಗಾಳಿಗೆ ಮರ ಮುರಿದು ಬಿದ್ದು, ಚಾವಣಿಗೆ ಹಾರಿಹೋಗಿದೆ. ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ನೆಲಕ್ಕುರಳಿದೆ. ನೋಡ ನೋಡುತ್ತಿದ್ದಂತೆ ಶೆಡ್‌ನ ಚಾವಣಿ ಶಿಟ್ ಗಾಳಿಯಲ್ಲಿ ಹಾರಾಡಿದ್ದವು. ಕಾಯಿ ಅಂಗಡಿಗಳ ಮೇಲೆ ಮರದ ಕೊಂಬೆ ಮುರಿದು ಬಿದ್ದ ಹಾನಿಯಾಗಿತ್ತು.

ಇದನ್ನೂ ಓದಿ: Karnataka Weather : ಕರಾವಳಿಯಲ್ಲಿ ಬಿರುಗಾಳಿ ಮಳೆ; ಕಡಲಿಗಿಳಿಯದಂತೆ ಮೀನುಗಾರರಿಗೆ ಅಲರ್ಟ್!‌

ಕುಸಿದು ಬಿದ್ದ ಕಳವಾಡಿ ಈಶ್ವರ ಮಾರಿಕಾಂಬಾ ದೇವಳದ ಅನ್ನಛತ್ರ

ಭಾರಿ ಗಾಳಿ ಮಳೆಗೆ ದೇವಳದ ಅನ್ನಛತ್ರ ಕುಸಿದು ಭಾರಿ ಅನಾಹುತ ತಪ್ಪಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಳವಾಡಿ ಈಶ್ವರ ಮಾರಿಕಾಂಬಾ ದೇವಳದ ಅನ್ನಛತ್ರದಲ್ಲಿ ಘಟನೆ ನಡೆದಿದೆ. ಕೊಲ್ಲೂರು ರಸ್ತೆಯಲ್ಲಿ ಮರ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ವಿದ್ಯುತ್ ತಂತಿಯ ಮೇಲೆ ಮರ ಬಿದ್ದು, ತಡರಾತ್ರಿಯವರಗೂ ಹಲವೆಡೆ ವಿದ್ಯುತ್ ವ್ಯತ್ಯಯವಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದರು.

ಚಿಕ್ಕಮಗಳೂರಲ್ಲಿ ಮರ ಬಿದ್ದು ಐವರು ಕೂದಲೆಳೆ ಅಂತರದಲ್ಲಿ ಪಾರು

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಭಾರಿ ಬಿರುಗಾಳಿ ಮಳೆಗೆ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದೆ. ಇದೇ ವೇಳೆ ಮನೆಯಲ್ಲಿದ್ದ ಐವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಚಿಕ್ಕಮಗಳೂರಿನ ಕಳಸ ತಾಲೂಕಿನ ಬಾಳೆಹೊಳೆ ಕಗ್ಗನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಮಲಗಿದ್ದಾಗ ಮಂಚದ ಮೇಲೆಯೇ ಬೃಹತ್ ಗಾತ್ರದ ಕೊಂಬೆ ಬಿದ್ದಿದೆ. ಮನೆಯಲ್ಲಿದ್ದ ಕುಟುಂಬಸ್ಥರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಮನೆಯೊಳಗೆ ಸಿಲುಕಿದ್ದವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮನೆ ಸಂಪೂರ್ಣ ಜಖಂಗೊಂಡಿದ್ದು, ಪಿಠೋಪಕರಣಗಳಿಗೆ ಹಾನಿಯಾಗಿದೆ. ಮನೆಯಲ್ಲಿ ಸಂಗ್ರಹಿಸಿದ್ದ ಆಹಾರ ಪದಾರ್ಥಗಳು ಮಣ್ಣು ಪಾಲಾಗಿದೆ. ಬೆಳಗಿನ ಜಾವ ನಾಲ್ಕು ಗಂಟೆಗೆ ಈ ಅವಘಡ ಸಂಭವಿಸಿದೆ. ಬೃಹತ್ ಗಾತ್ರದ ಮರ ಬಿದ್ದರೂ ಐವರು ಉಳಿದಿದ್ದೆ ಪವಾಡ ಎಂದಿದ್ದಾರೆ.

ಮಳೆ ಅನಾಹುತಕ್ಕೆ ಶುಂಠಿ ಬೆಳೆ ನಾಶ

ಮೈಸೂರಿನಲ್ಲಿ ಮಳೆ ಅನಾಹುತ ಮುಂದುವರಿದಿದೆ. ಸರಗೂರು ತಾಲೂಕಿನ ಬಾಡಿಗೆ ಗ್ರಾಮದಲ್ಲಿ ರೈತ ಜವರಯ್ಯ ಹಾಗೂ ಪುಟ್ಟತಾಯಮ್ಮ ಅವರಿಗೆ ಸೇರಿದ ಶುಂಠಿ ಬೆಳೆ ನಾಶವಾಗಿದೆ. ಇದರಿಂದಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಜಮೀನಿನಲ್ಲಿ ಮಳೆ ನೀರು ನಿಂತಿದ್ದರಿಂದ ಪುಟ್ಟತಾಯಮ್ಮ ಕಣ್ಣೀರಿಟ್ಟು, ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ರಾಯಚೂರಲ್ಲಿ ಸುರಿದ ಒಂದೇ ಮಳೆಗೆ ಜಮೀನು ಜಲಾವೃತ

ರಾಯಚೂರು ತಾಲೂಕಿನ ಕೆರೆಬೂದೂರು ಗ್ರಾಮದ ಬಳಿ ಒಂದೇ ಮಳೆಗೆ ಜಮೀನು ಜಲಾವೃತಗೊಂಡಿದೆ. ಮಳೆಯಿಂದಾಗಿ ನೂರಾರು ಎಕರೆ ಜಮೀನು ಜಲಾವೃತಗೊಂಡಿದ್ದರಿಂದ ಬಿತ್ತನೆಗೆ ತಯಾರಿ ನಡೆಸಿದ್ದ ರೈತರಿಗೆ ಭಾರೀ‌ ನಿರಾಸೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

Pralhad Joshi: ಕೇಜ್ರಿವಾಲ್‌ಗೆ ಸಿಎಂ ಆಗಿ ಮುಂದುವರಿಯುವ ನೈತಿಕ ಹಕ್ಕಿಲ್ಲ: ಪ್ರಲ್ಹಾದ್‌ ಜೋಶಿ

Pralhad Joshi: ಎಎಪಿ ಇಂದು ಭ್ರಷ್ಟಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳ ಪರ ನಿಲ್ಲುವ ಪಕ್ಷವಾಗಿ ಮಾರ್ಪಟ್ಟಿದ್ದು, ನಿಜಕ್ಕೂ ನಾಚಿಕೆಗೇಡಿನ ಸಂಗತಿ ಎಂದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು ಕೇಜ್ರಿವಾಲ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

VISTARANEWS.COM


on

Union Minister Pralhad Joshi latest statement in Hubli
Koo

ಹುಬ್ಬಳ್ಳಿ: ದೆಹಲಿ ಮುಖ್ಯಮಂತ್ರಿ ಆಗಿರಲು ಅರವಿಂದ ಕೇಜ್ರಿವಾಲ್ ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಟೀಕಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣದ ಹಿನ್ನೆಲೆಯಲ್ಲಾದರೂ ಅರವಿಂದ್‌ ಕೇಜ್ರಿವಾಲ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Monsoon : ಮಳೆ ವರದಿ; ಕರ್ನಾಟಕದಲ್ಲಿ ಜೂನ್ 1ರಂದೇ ಮಾನ್ಸೂನ್ ಮಳೆ ಆರಂಭ

ತತ್ವಗಳಿಲ್ಲದ ಆಪ್‌

ಎಎಪಿ ಯಾವುದೇ ತತ್ವಗಳಿಲ್ಲದ ಪಕ್ಷವಾಗಿದೆ. ಭ್ರಷ್ಟಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧ ಬಂಡಾಯವೆದ್ದು ಅಸ್ತಿತ್ವಕ್ಕೆ ಬಂದ ಪಕ್ಷ ಇಂದು ತಾನೇ ಆ ಹಾದಿ ತುಳಿದಿದೆ ಎಂದು ಜೋಶಿ ಆರೋಪಿಸಿದರು.

ಆಪ್‌ ಇಂದು ಭ್ರಷ್ಟಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳ ಪರ ನಿಲ್ಲುವ ಪಕ್ಷವಾಗಿ ಮಾರ್ಪಟ್ಟಿದ್ದು, ನಿಜಕ್ಕೂ ನಾಚಿಕೆಗೇಡಿನ ಸಂಗತಿ. ಆಪ್‌ ನಾಯಕಿ ಸ್ವಾತಿ ಮಲಿವಾಲ್ ಅವರನ್ನು ಬಾಯಿ ಮುಚ್ಚಿಸುವ ಪ್ರಯತ್ನ ಫಲಿಸದ ಕಾರಣ ಆಕೆಯ ಚಾರಿತ್ರ್ಯದ ಮೇಲೆ ಉಳಿದ ಆಪ್‌ ನಾಯಕರು ಈಗ ಮಸಿ ಬಳಿಯುತ್ತಿದ್ದಾರೆ ಎಂದು ದೂರಿದರು.

ಇದನ್ನೂ ಓದಿ: koti kannada movie : ಕಾಂಚಾಣದ ಕನಸು; ಕೋಟಿ ಸಿನಿಮಾದ ‘ಜನತಾ ಸಿಟಿ’ ಹಾಡು ಬಿಡುಗಡೆ

ಕೇಜ್ರಿವಾಲ್ ಮನೆಯಲ್ಲಿದ್ದಾಗಲೇ ಸ್ವಾತಿ ಮಲಿವಾಲ್ ಅವರ ಮೇಲೆ ಹಲ್ಲೆ ನಡೆದಿರುವುದು ನಾಚಿಕೆಗೇಡಿನ ಸಂಗತಿ. ಸಿಎಂ ಕೇಜ್ರಿವಾಲ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಸಚಿವ ಪ್ರಲ್ಹಾದ್‌ ಜೋಶಿ ಒತ್ತಾಯಿಸಿದರು.

Continue Reading
Advertisement
Narendra Modi
ದೇಶ5 hours ago

Narendra Modi: ನನ್ನನ್ನು ನಾಶಪಡಿಸಲು ಯಾರಿಂದಲೂ ಸಾಧ್ಯವಿಲ್ಲ; ಮಮತಾ ಬ್ಯಾನರ್ಜಿಗೆ ಮೋದಿ ಚಾಟಿ

ಕರ್ನಾಟಕ5 hours ago

Driving Bus With Umbrella: ಛತ್ರಿ ಹಿಡಿದು ಬಸ್ ಚಾಲನೆ; ಮೋಜಿಗಾಗಿ ವಿಡಿಯೊ ಮಾಡಿದ ಡ್ರೈವರ್‌, ಕಂಡಕ್ಟರ್‌ ಸಸ್ಪೆಂಡ್‌!

Vistara editorial
ಬೆಂಗಳೂರು5 hours ago

ವಿಸ್ತಾರ ಸಂಪಾದಕೀಯ: ಕಸ ವಿಲೇವಾರಿಗೆ ಹೊಸ ಸಂಸ್ಥೆ, ಜಾರಿಕೊಳ್ಳುವ ನೆಪ ಆಗದಿರಲಿ

SRH vs RR
ಕ್ರೀಡೆ5 hours ago

SRH vs RR: ಹೈದರಾಬಾದ್​ಗೆ ಗೆಲುವಿನ ‘ಸನ್​ರೈಸ್’; ಫೈನಲ್​ನಲ್ಲಿ ಕೆಕೆಆರ್ ವಿರುದ್ಧ ಕಣಕ್ಕೆ​

Electric Shock
ಕ್ರೈಂ6 hours ago

Electric Shock: ಲಿಂಗಸುಗೂರಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

Prajwal Revanna Case
ಕರ್ನಾಟಕ6 hours ago

Prajwal Revanna Case: ರಾಜ್ಯಕ್ಕೆ ಬಂದು ಕಾನೂನು ಗೌರವಿಸಿ; ಪ್ರಜ್ವಲ್‌ಗೆ ವಿಸ್ತಾರ ನ್ಯೂಸ್‌ ಬಹಿರಂಗ ಪತ್ರ

Kangana Ranaut
ದೇಶ7 hours ago

Kangana Ranaut: ಈ ಗುಲಾಬಿಯು ನಿಮಗಾಗಿ; ಮೋದಿಗೆ ಕೆಂಪು ಗುಲಾಬಿ ಕೊಟ್ಟು ಸ್ವಾಗತಿಸಿದ ಕಂಗನಾ! Photo ಇದೆ

T20 World Cup 2024
ಕ್ರೀಡೆ7 hours ago

T20 World Cup 2024: ಕೊನೆಗೂ ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಭಾರತದ ಬದ್ಧ ಎದುರಾಳಿ ಪಾಕಿಸ್ತಾನ

Prajwal Revanna Case
ಕರ್ನಾಟಕ7 hours ago

Prajwal Revanna Case: ವಕೀಲ ದೇವರಾಜೇಗೌಡಗೆ ಇನ್ನೂ 14 ದಿನ ಜೈಲೇ ಗತಿ; ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

Yuzvendra Chahal
ಕ್ರಿಕೆಟ್7 hours ago

Yuzvendra Chahal: ಸಿಕ್ಸರ್​ ಹೊಡೆಸಿಕೊಂಡು ಐಪಿಎಲ್​ನಲ್ಲಿ ಕೆಟ್ಟ ದಾಖಲೆ ಬರೆದ ಚಹಲ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌