Hubballi News: ದಿಂಗಾಲೇಶ್ವರ ಶ್ರೀಗಳ ನಡೆ ಬಗ್ಗೆ ನಾನು ಯಾರ ಮೊರೆಯೂ ಹೋಗಿಲ್ಲ: ಪ್ರಲ್ಹಾದ್‌ ಜೋಶಿ - Vistara News

ಹುಬ್ಬಳ್ಳಿ

Hubballi News: ದಿಂಗಾಲೇಶ್ವರ ಶ್ರೀಗಳ ನಡೆ ಬಗ್ಗೆ ನಾನು ಯಾರ ಮೊರೆಯೂ ಹೋಗಿಲ್ಲ: ಪ್ರಲ್ಹಾದ್‌ ಜೋಶಿ

Hubballi News: ದಿಂಗಾಲೇಶ್ವರ ಶ್ರೀಗಳ ಸ್ವತಂತ್ರ ಸ್ಪರ್ಧೆ ಬಗ್ಗೆ ಧಾರವಾಡ ಮುರುಘಾ ಮಠದ ಶ್ರೀಗಳು ಕೊಟ್ಟ ಪತ್ರಿಕಾ ಪ್ರಕಟಣೆ ಮತ್ತು ಮರುದಿನ ಹೇಳಿದ ಹೇಳಿಕೆ ಓದಿದ್ದೇನೆ. ಆದರೆ ಈ ಬಗ್ಗೆ ತಮಗೆ ಹೆಚ್ಚಿನದೇನೂ ಗೊತ್ತಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದರು.

VISTARANEWS.COM


on

Minister Pralhad Joshi latest statement in hubballi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಹುಬ್ಬಳ್ಳಿ: ದಿಂಗಾಲೇಶ್ವರ ಸ್ವಾಮೀಜಿ ನಡೆ ಬಗ್ಗೆ ನಾನು ಯಾರ ಮೊರೆಯೂ ಹೋಗಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್‌ ಜೋಶಿ (Hubballi News) ಸ್ಪಷ್ಟಪಡಿಸಿದರು.

ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮುರುಘಾ ಮಠವಾಗಲಿ ಮತ್ತು ತಿಪಟೂರು ಷಡಕ್ಷರಿ ರುದ್ರಮುನಿ ಸ್ವಾಮೀಜಿ ಮಾತ್ರವಲ್ಲ, ಯಾರ ಮೊರೆಯೂ ಹೋಗಿಲ್ಲ, ಮಾತನಾಡಿಲ್ಲ ಎಂದು ತಿಳಿಸಿದರು.

ದಿಂಗಾಲೇಶ್ವರ ಶ್ರೀಗಳು ತಮಗೆ ಕ್ಷೇತ್ರ ಬದಲಾವಣೆ ಬಗ್ಗೆ ಕೊಟ್ಟ ಗಡುವು ನಾಳೆಗೆ ಮುಗಿಯುತ್ತದೆಯಲ್ಲ ಎಂಬ ಪ್ರಶ್ನೆಗೆ ನೋಡೋಣವಂತೆ ಗಡುವು ಮುಗಿದ ಮೇಲೆ ಎಂದು ಉತ್ತರಿಸಿದರು.

ಇದನ್ನೂ ಓದಿ: Job Alert: ಸಿಬಿಎಸ್‌ಇಯಲ್ಲಿದೆ ಉದ್ಯೋಗಾವಕಾಶ; ಏಪ್ರಿಲ್ 11ರೊಳಗೆ ಅರ್ಜಿ ಸಲ್ಲಿಸಿ

ದಿಂಗಾಲೇಶ್ವರ ಶ್ರೀಗಳ ಸ್ವತಂತ್ರ ಸ್ಪರ್ಧೆ ಬಗ್ಗೆ ಧಾರವಾಡ ಮುರುಘಾ ಮಠದ ಶ್ರೀಗಳು ಕೊಟ್ಟ ಪತ್ರಿಕಾ ಪ್ರಕಟಣೆ ಮತ್ತು ಮರುದಿನ ಹೇಳಿದ ಹೇಳಿಕೆ ಓದಿದ್ದೇನೆ ಆದರೆ ಈ ಬಗ್ಗೆ ತಮಗೆ ಹೆಚ್ಚಿನದೇನು ಗೊತ್ತಿಲ್ಲ ಎಂದು ಈ ವೇಳೆ ತಿಳಿಸಿದರು.

ಅತೃಪ್ತಿ ಸರಿಪಡಿಸುತ್ತೇವೆ

ಚಿತ್ರದುರ್ಗ ಮಾತ್ರವಲ್ಲ, ಬಿಜೆಪಿ ಅಭ್ಯರ್ಥಿಗಳ ಬಗ್ಗೆ ಅತೃಪ್ತಿ ಇರುವ ಎಲ್ಲೆಡೆಯೂ ವಿಶೇಷ ಗಮನಹರಿಸಿ ಸಮಸ್ಯೆ ಬಗೆಹರಿಸುತ್ತೇವೆ ಎಂದ ಅವರು, ಗೆಲ್ಲುವ ಪಕ್ಷದೊಳಗೆ ಸಣ್ಣ ಪುಟ್ಟ ಗೊಂದಲಗಳು ಸಹಜ. ನಿನ್ನೆಯಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಲ್ಲಿ ಚರ್ಚಿಸಿದ್ದೇನೆ. ರಾಜ್ಯದಲ್ಲಿ ಸಮಸ್ಯೆ ಇರುವೆಡೆ ವಿಶೇಷ ಗಮನಹರಿಸಿ ಬಗೆಹರಿಸುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: Martand Sun temple : ಜಮ್ಮು-ಕಾಶ್ಮೀರದಲ್ಲಿರುವ ಅತ್ಯಂತ ಪುರಾತನ ಸೂರ್ಯ ದೇವಸ್ಥಾನಕ್ಕೆ ನೀವು ಹೋಗಬಹುದು? ಹೇಗೆ ಗೊತ್ತಾ?

ಚಿತ್ರದುರ್ಗಕ್ಕೆ ಗೋವಿಂದ ಕಾರಜೋಳ ಅವರನ್ನು ಇತ್ತೀಚಿಗೆ ಅಭ್ಯರ್ಥಿಯನ್ನಾಗಿ ಘೋಷಿಸಿದ್ದು, ಅಲ್ಲಿನ ಎಲ್ಲಾ ಪ್ರಮುಖರನ್ನು ಮಾತನಾಡಿಸಿ, ವಿಶ್ವಾಸಕ್ಕೆ ತೆಗೆದುಕೊಂಡು ಪರಿಹರಿಸುತ್ತೇವೆ ಎಂದು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಫ್ಲೈ-91 ವಿಮಾನದಲ್ಲಿ ಮತ್ತೆ ಲ್ಯಾಂಡಿಂಗ್ ಸಮಸ್ಯೆ: ಹುಬ್ಬಳ್ಳಿ ಆಗಸದಲ್ಲಿ ಪ್ರಯಾಣಿಕರ ತಳಮಳ

VISTARANEWS.COM


on

ಹುಬ್ಬಳ್ಳಿ: ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ ಫ್ಲೈ-91 (Fly91) ವಿಮಾನದಲ್ಲಿ ಮತ್ತೆ ಲ್ಯಾಂಡಿಂಗ್ ಸಮಸ್ಯೆ ಕಾಣಿಸಿಕೊಂಡಿದ್ದು, ಸುಮಾರು 70ಕ್ಕೂ ಹೆಚ್ಚು ಪ್ರಯಾಣಿಕರು ಎರಡು ಗಂಟೆಗಳ ಕಾಲ ಆಗಸದಲ್ಲೇ ಜೀವ ಬಿಗಿಹಿಡಿದು ಕುಳಿತುಕೊಳ್ಳುವಂತಾದ ಘಟನೆ ನಡೆದಿದೆ. ಮಂಗಳವಾರ ಸಂಜೆ 6 ಗಂಟೆಗೆ ಬೆಂಗಳೂರಿನಿಂದ ಹೊರಟಿದ್ದ IC3412 ಸಂಖ್ಯೆಯ ವಿಮಾನವು ನಿಗದಿತ ಸಮಯದಂತೆ 6:50ಕ್ಕೆ ಹುಬ್ಬಳ್ಳಿ ತಲುಪಿತ್ತಾದರೂ, ತಾಂತ್ರಿಕ ಕಾರಣಗಳಿಂದಾಗಿ ರನ್‌ವೇ ಮೇಲೆ ಇಳಿಯಲು ಸಾಧ್ಯವಾಗಲಿಲ್ಲ. ಇದರಿಂದಾಗಿ ವಿಮಾನವು ಸತತ ಎರಡು ಗಂಟೆಗಳ ಕಾಲ ನಗರದ ಆಗಸದಲ್ಲೇ ಸುತ್ತಾಟ ನಡೆಸಬೇಕಾಯಿತು, ಅಂತಿಮವಾಗಿ ರಾತ್ರಿ 9:15ಕ್ಕೆ ವಿಮಾನವು ಸುರಕ್ಷಿತವಾಗಿ ಭೂಸ್ಪರ್ಶ ಮಾಡಿತು.

ಕೇವಲ ಐದು ದಿನಗಳ ಅಂತರದಲ್ಲಿ ಫ್ಲೈ-91 ಸಂಸ್ಥೆಯ ವಿಮಾನಕ್ಕೆ ಎದುರಾದ ಎರಡನೇ ಲ್ಯಾಂಡಿಂಗ್ ಸಮಸ್ಯೆ ಇದಾಗಿದ್ದು, ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಕಳೆದ ವಾರವಷ್ಟೇ ಹೈದರಾಬಾದ್‌ನಿಂದ ಬಂದಿದ್ದ ಇದೇ ಸಂಸ್ಥೆಯ ವಿಮಾನವು ಹವಾಮಾನ ವೈಪರಿತ್ಯದ ನೆಪವೊಡ್ಡಿ ಮೂರು ಗಂಟೆಗಳ ಕಾಲ ಹಾರಾಟ ನಡೆಸಿತ್ತು. ಆದರೆ ಮಂಗಳವಾರದ ಘಟನೆಯ ವೇಳೆ ವಿಮಾನ ನಿಲ್ದಾಣದಲ್ಲಿ ಹವಾಮಾನವು ಸಹಜವಾಗಿಯೇ ಇತ್ತು. ಅದೇ ಸಮಯದಲ್ಲಿ ಇತರ ಸಂಸ್ಥೆಗಳ ವಿಮಾನಗಳು ಯಾವುದೇ ಅಡೆತಡೆಯಿಲ್ಲದೆ ಟೇಕಾಫ್ ಮತ್ತು ಲ್ಯಾಂಡಿಂಗ್ ನಡೆಸುತ್ತಿದ್ದುದು, ಫ್ಲೈ-91 ವಿಮಾನಗಳ ಸುರಕ್ಷತೆಯ ಬಗ್ಗೆ ಸಾರ್ವಜನಿಕರಲ್ಲಿ ದೊಡ್ಡ ಮಟ್ಟದ ಅನುಮಾನಗಳನ್ನು ಹುಟ್ಟುಹಾಕಿದೆ.

ವಿಮಾನವು ಆಗಸದಲ್ಲೇ ಗಿರಕಿ ಹೊಡೆಯುತ್ತಿದ್ದಾಗ ಒಳಗಿದ್ದ ಪ್ರಯಾಣಿಕರು ತೀವ್ರ ಭಯಭೀತರಾಗಿ ದೇವರ ಮೊರೆ ಹೋಗಿದ್ದರು. ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗುವವರೆಗೆ ಪ್ರಯಾಣಿಕರು ಅನುಭವಿಸಿದ ಮಾನಸಿಕ ಒತ್ತಡವು ವಿಮಾನ ನಿಲ್ದಾಣದಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿರುವುದು ವಿಮಾನಯಾನ ಸಂಸ್ಥೆಯ ನಿರ್ವಹಣಾ ಲೋಪವೇ ಅಥವಾ ತಾಂತ್ರಿಕ ದೋಷವೇ ಎಂಬ ಪ್ರಶ್ನೆ ಕಾಡುತ್ತಿದ್ದು, ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಈ ಬಗ್ಗೆ ತನಿಖೆ ನಡೆಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

karnataka Weather Forecast

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.

VISTARANEWS.COM


on

Karnataka Rain

ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.

Karnataka Rain

ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.

karnataka Rain

ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.

Karnataka Rain

ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್‌, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.

Heavy rains lash Bengaluru

ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.

Karnataka rain

ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.

Continue Reading

ಮಳೆ

Karnataka Rain :ಸತತ ಮಳೆಗೆ ಬೆಂಗಳೂರು ಥಂಡಾ; ಶಾಲೆಗಳಿಗೆ ಇಂದು ರಜೆ ಘೋಷಣೆ

Karnataka Rain : ಸತತ ಮಳೆ ಹಿನ್ನೆಲೆಯಲ್ಲಿ ಜನ-ಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನ ಶಾಲೆಗಳಿಗೆ ಇಂದು ಸೋಮವಾರ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

Karnataka Rain

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ (Karnataka Rain) ನಿರಂತರವಾಗಿ ಮಳೆಯಾಗುತ್ತಿದ್ದು, ರಸ್ತೆಗಳು ಕೆರೆಯಂತಾಗಿ ಮಾರ್ಪಾಡಾಗಿದೆ. ಈ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಜಿ ಮೌಖಿಕವಾಗಿ ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.

ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Continue Reading
Advertisement
Latest5 hours ago

ಮೇ 15ಕ್ಕೆ ಸಿಗುತ್ತಾ ಗುಡ್​ ನ್ಯೂಸ್?​ ಸಂಭ್ರಮಾಚರಣೆ ಬೇಡವೆಂದು ಬೆಂಬಲಿಗರಿಗೆ ಖಡಕ್​ ಸೂಚನೆ! ಡಿ ಕೆ ಬ್ರದರ್ಸ್‌ ಪ್ಲ್ಯಾನ್‌ಗೆ ಟಕ್ಕರ್‌ ಕೊಡ್ತಾರಾ ಸಿಎಂ

Latest5 hours ago

ಮುಂದೆ ಕಾದಿದೆ ಘೋರ ವಿಪತ್ತು: ಹವಾಮಾನ ವೈಪರಿತ್ಯ, ಅನ್ನ-ನೀರಿಗೂ ಹಾಹಾಕಾರ! ಕೋಡಿ ಶ್ರೀಗಳ ಭಯಾನಕ ಭವಿಷ್ಯಕ್ಕೆ ನಡುಗಿದ ನಾಡು

Latest5 hours ago

ಮುಂದಿನ ಪಂದ್ಯದಿಂದ ‘ಯಂಗ್ ಸೆನ್ಸೇಷನ್’ ಔಟ್? ವೈಭವ್ ಸೂರ್ಯವಂಶಿ ಬಗ್ಗೆ ಕೋಚ್ ಕೊಟ್ಟ ಅಪ್ಡೇಟ್ ಏನು?

Latest6 hours ago

ಅಧ್ಯಕ್ಷ ಹುದ್ದೆ ಇಷ್ಟು ಡೇಂಜರ್ ಅಂತ ಗೊತ್ತಿರಲಿಲ್ಲ!”: ಗುಂಡಿನ ದಾಳಿಯಿಂದ ಬಚಾವಾದ ಬೆನ್ನಲ್ಲೇ ಟ್ರಂಪ್ ವ್ಯಂಗ್ಯ

Latest7 hours ago

ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಹೊಸ ಬಲ: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಿದ ಶಿಕ್ಷಣ ಇಲಾಖೆ

Latest7 hours ago

‘ಟಾಕ್ಸಿಕ್’ ಬೋಲ್ಡ್ ದೃಶ್ಯದ ವಿವಾದಕ್ಕೆ ರಾಕಿಂಗ್ ಸ್ಟಾರ್ ಖಡಕ್ ರಿಯಾಕ್ಷನ್: ಟೀಕಾಕಾರರಿಗೆ ತಮ್ಮದೇ ಸ್ಟೈಲ್‌ನಲ್ಲಿ ಉತ್ತರ ಕೊಟ್ಟ ಯಶ್

Latest7 hours ago

ಬದುಕು ಸುಂದರವಾಗಿರಲು ಮದುವೆ-ಮಕ್ಕಳೇ ಬೇಕಿಲ್ಲ! ವೈಯಕ್ತಿಕ ಜೀವನದ ಬಗ್ಗೆ ನಿತ್ಯಾ ಮೆನನ್ ಹಂಚಿಕೊಂಡ ಮನದಾಳದ ಮಾತು

Latest9 hours ago

ಆರ್‌ಸಿಬಿ ಪ್ಲೇಯಿಂಗ್ 11 ಅಪ್‌ಡೇಟ್: ಡೆಲ್ಲಿ ವಿರುದ್ಧದ ಪಂದ್ಯಕ್ಕೆ ಇಬ್ಬರು ಸ್ಟಾರ್ ಆಟಗಾರರು ಡೌಟ್?

Latest9 hours ago

ಬಿಗಿ ಭದ್ರತೆಯ ನಡುವೆಯೂ ಟ್ರಂಪ್ ಪಾರ್ಟಿಗೆ ಅತಿಥಿಯಂತೆ ಬಂದಿದ್ದ ದಾಳಿಕೋರ! ಸೀಕ್ರೆಟ್ ಸರ್ವಿಸ್ ಕಣ್ಣು ತಪ್ಪಿಸಿದ್ದು ಹೇಗೆ?

ಕರ್ನಾಟಕ10 hours ago

ಹುಬ್ಬಳ್ಳಿಯಲ್ಲಿ ವಾರದಲ್ಲಿ ಮೂರನೇ ಬಾರಿ ವಿಮಾನ ಲ್ಯಾಂಡಿಂಗ್ ಸಮಸ್ಯೆ; ಕೂದಲೆಳೆ ಅಂತರದಲ್ಲಿ ಪಾರಾದ ಪ್ರಯಾಣಿಕರು

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌