Site icon Vistara News

ಧ್ವಜ ಸಂಹಿತೆ ತಿದ್ದುಪಡಿಯಿಂದ ದೇಶಕ್ಕೆ ಅನ್ಯಾಯ: ಬಿ.ಕೆ. ಹರಿಪ್ರಸಾದ್

ಹುಬ್ಬಳ್ಳಿ: ಧ್ವಜ ಸಂಹಿತೆ ತಿದ್ದುಪಡಿ ಮಾಡುವ ಮೂಲಕ ಕೇಂದ್ರ ಸರ್ಕಾರ ದೇಶಕ್ಕೆ ಅನ್ಯಾಯ ಮಾಡುತ್ತಿದೆ. ಖಾದಿಯಿಂದ ತಯಾರಿಸಬೇಕಾದ ಧ್ವಜವನ್ನು ಪಾಲಿಯೆಸ್ಟರ್ ಬಟ್ಟೆಯಲ್ಲೂ ತಯಾರಿಸಲು ಕೇಂದ್ರ ಸರ್ಕಾರ ತಿದ್ದುಪಡಿ ತಂದಿದೆ. ರಾಷ್ಟ್ರಧ್ವಜ ಸಂಹಿತೆ ತಿದ್ದುಪಡಿಯಿಂದ ಕೋಟ್ಯಂತರ ಉದ್ಯೋಗಿಗಳು ನಿರುದ್ಯೋಗಿಗಳಾಗುತ್ತಾರೆಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.

ಹುಬ್ಬಳ್ಳಿಯ ಬೆಂಗೇರಿ ಖಾದಿ ಗ್ರಾಮೋದ್ಯೋಗ ಘಟಕಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧ್ವಜ ಸಂಹಿತೆ ತಿದ್ದುಪಡಿಯಿಂದ ಕೇಂದ್ರ ಸರ್ಕಾರ ಕಾರ್ಮಿಕರಿಗೆ ಅನ್ಯಾಯ ಮಾಡುತ್ತಿದೆ. ಕೆಂದ್ರ ಸರ್ಕಾರ ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡುವ ಕೆಲಸ ಮಾಡುತ್ತಿದೆ. ಇದು ದೇಶಕ್ಕೆ ಗೌರವ ಕೊಡುವ ಕೆಲಸವಲ್ಲ ಎಂದು ಎಂದಿದ್ದಾರೆ.

ಹುಬ್ಬಳ್ಳಿಯ ಬೆಂಗೇರಿ ಖಾದಿ ಗ್ರಾಮೋದ್ಯೋಗದಲ್ಲಿ ಅನೇಕ‌ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಈ ತಿದ್ದುಪಡಿ ಮಾಡುವ ಮೂಲಕ ಉದ್ಯೋಗದಲ್ಲಿ ಇರುವವರನ್ನು ನಿರುದ್ಯೋಗಿಗಳನ್ನಾಗಿ ಮಾಡುತ್ತಿದ್ದಾರೆ. ಕೂಡಲೇ ಧ್ವಜ ಸಂಹಿತೆ ತಿದ್ದುಪಡಿಯನ್ನು ಸರ್ಕಾರ ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಪಾಲಿಯೆಸ್ಟರ್ ಬಟ್ಟೆಯಲ್ಲಿ ಧ್ವಜ ತಯಾರು ಮಾಡುವುದು ಸರಿಯಲ್ಲ. ರಾಷ್ಟ್ರಧ್ವಜ ಖಾದಿ ಬಟ್ಟೆಯಿಂದಲೇ ತಯಾರಾಗಬೇಕು. ಧ್ವಜ ಸಂಹಿತೆ ತಿದ್ದುಪಡಿ ಹಿಂಪಡೆಯುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದವರು ತಿಳಿಸಿದ್ದಾರೆ.

ಇದನ್ನೂ ಓದಿ| ಆಗಸ್ಟ್‌ನಲ್ಲಿ ಮನೆ ಮನೆಯಲ್ಲಿ ರಾಷ್ಟ್ರಧ್ವಜ ಅಭಿಯಾನ

Exit mobile version