Site icon Vistara News

Murder Case : ಮತ್ತೊಬ್ಬನ ಮೋಹಕ್ಕೆ ಸಿಲುಕಿ ಗಂಡನ ಕೊಂದಳು ಮೂರು ಮಕ್ಕಳ ತಾಯಿ

Wife kills husband for having illicit relationship with lover

ಹುಬ್ಬಳ್ಳಿ: ಮತ್ತೊಬ್ಬನ ಮೋಹಕ್ಕೆ ಸಿಲುಕಿದ ಮೂರು ಮಕ್ಕಳ ತಾಯಿ, ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನೇ ಹತ್ಯೆ (Murder Case) ಮಾಡಿದ್ದಾಳೆ. ಕಳೆದ ಜನವರಿ 10ರಂದು ಎಪಿಎಂಸಿ ಮಾರಡಗಿ ರಸ್ತೆಯಲ್ಲಿ ವ್ಯಕ್ತಿಯೊಬ್ಬನ ಮೃತದೇಹವು ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಎಪಿಎಂಸಿ ನವನಗರ ಠಾಣೆ ಪೊಲೀಸರು, ಕೊಲೆ ರಹಸ್ಯವನ್ನು ಭೇದಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ.

ಹುಬ್ಬಳ್ಳಿಯ ಎಪಿಎಂಸಿ ಮಾರಡಗಿ ರಸ್ತೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹವು ಪತ್ತೆಯಾಗಿತ್ತು. ಮೃತನನ್ನು ಬಂಜಾರ ಕಾಲೋನಿ ನಿವಾಸಿ ಚಂದ್ರಶೇಖರ ಲಮಾಣಿ (40) ಎಂದು ಗುರುತಿಸಲಾಗಿತ್ತು. ತನಿಖೆ ನಡೆಸಿದಾಗ ಚಂದ್ರಶೇಖರನ ಪತ್ನಿ ಮಂಜುಳಾ ಮತ್ತು ಪ್ರಿಯಕರ ರಿಯಾಜ್ ಅಹ್ಮದ್ ಸೇರಿ ಕೊಲೆ ಮಾಡಿರುವುದು ತಿಳಿದು ಬಂದಿದೆ.

ಕೊಲೆ ಆರೋಪಿಗಳು

ಇವರಿಬ್ಬರ ಅನೈತಿಕ ಸಂಬಂಧವನ್ನು ಚಂದ್ರಶೇಖರ್‌ ವಿರೋಧಿಸಿದ್ದಕ್ಕೆ ಕೊಲೆ ಮಾಡಿದ್ದಾಗಿ ಪೊಲೀಸರ ಎದುರು ಬಾಯ್ಬಿಟ್ಟಿದ್ದಾರೆ. ಸದ್ಯ ಮಂಜುಳಾ ಮತ್ತು ರಿಯಾಜ್ ಅಹ್ಮದ್‌ರನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇತ್ತ ತಂದೆ ಕೆಳದುಕೊಂಡು, ತಾಯಿ ಇಲ್ಲದೇ ಮೂವರು ಮಕ್ಕಳು ಅನಾಥರಾಗಿದ್ದಾರೆ.

ಇದನ್ನೂ ಓದಿ: Rahul Gandhi: ನಾಯಿ ಪ್ಲೇಟ್‌ನಿಂದ ಬಿಸ್ಕೆಟ್‌ ತೆಗೆದು ಕಾಂಗ್ರೆಸ್‌ ಕಾರ್ಯಕರ್ತನಿಗೆ ಕೊಟ್ರಾ ರಾಹುಲ್‌ ಗಾಂಧಿ!

ಬಾಲಕಿ ಮೇಲೆ ಅತ್ಯಾಚಾರ ಆರೋಪ; ಅರ್ಜುನ ಪ್ರಶಸ್ತಿ ಹಾಕಿ ಆಟಗಾರನ ವಿರುದ್ಧ ಬೆಂಗಳೂರಿನಲ್ಲಿ ಪ್ರಕರಣ ದಾಖಲು

ನವದೆಹಲಿ: ಮದುವೆಯಾಗುವುದಾಗಿ ನಂಬಿಸಿ ಬೆಂಗಳೂರಿನ 22 ವರ್ಷದ ಯುವತಿಗೆ ವಂಚಿಸಿದ ಆರೋಪ ಹಿನ್ನೆಲೆ ಭಾರತೀಯ ಹಾಕಿ(Hockey Player Varun Kumar) ತಂಡದ ಡಿಫೆಂಡರ್ ವರುಣ್ ಕುಮಾರ್ (Varun Kumar) ಮೇಲೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ (Jnanabharathi Police Station) ಎಫ್ಐಆರ್ ದಾಖಲಾಗಿದೆ.

ವರುಣ್ ಕುಮಾರ್ ವಿರುದ್ಧ ಯುವತಿ ಅತ್ಯಾಚಾರ ಆರೋಪ ಮಾಡಿದ್ದು, ಪೋಕ್ಸೋ (Pocso) ಪ್ರಕರಣ ದಾಖಲಾಗಿದೆ. ಯುವತಿ 17ನೇ ವಯಸ್ಸಿನಲ್ಲಿ ಇರುವಾಗ ಮದುವೆಯಾಗುವುದಾಗಿ ನಂಬಿಸಿ ಆಕೆಯ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿರುವುದಾಗಿ ಯುವತಿ ಆರೋಪ ಮಾಡಿದ್ದಾಳೆ. ವರುಣ್ ಕುಮಾರ್ 2021ನೇ ಸಾಲಿನ ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದರು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತ ಹಾಕಿ ತಂಡ ಕಂಚಿನ ಪದಕ ಗೆದ್ದ ತಂಡದ ಸದಸ್ಯರಾಗಿದ್ದ ವರುಣ್​ಗೆ ಹಿಮಾಚಲ ಪ್ರದೇಶ ಸರ್ಕಾರ 1 ಲಕ್ಷ ಬಹುಮಾನ ನೀಡಿ ಗೌರವಿಸಿತ್ತು.

ಇದನ್ನೂ ಓದಿ Physical Abuse: ಕೋಚಿಂಗ್‌ಗೆ ತೆರಳುತ್ತಿದ್ದ ಅಪ್ರಾಪ್ತೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ

ಹಾಕಿ ಪಂದ್ಯಗಳಿಗಾಗಿ ಬೆಂಗಳೂರಿನ ಸಾಯಿ ಸ್ಟೇಡಿಯಂಗೆ ಭೇಟಿ ನೀಡಿದ ಸಂದರ್ಭದಲ್ಲಿ ವರುಣ್ ಕುಮಾರ್ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ. ಯುವತಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನಲ್ಲಿ ವರಣು ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಹಿಮಾಚಲ ಪ್ರದೇಶದವರಾದ ವರುಣ್ ಕುಮಾರ್ ಪಂಜಾಬ್‌ನ ಜಲಂಧರ್‌ನಲ್ಲಿ ವಾಸಿಸುತ್ತಿದ್ದರು. ಸದ್ಯ ಪರಾರಿಯಾಗಿರುವ ಅವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

ಅಪ್ರಾಪ್ತೆಯಾಗಿದ್ದ ಯುವತಿಗೆ ಸಾಮಾಜಿಕ ಜಾಲತಾಣದ ಮೂಲಕ ವರುಣ್ ಕುಮಾರ್ ಪರಿಚಯವಾಗಿತ್ತು. 17 ವರ್ಷದವಳಾಗಿದ್ದ ದೂರುದಾರಳನ್ನ ಪ್ರೀತಿಸುವುದಾಗಿ ನಂಬಿಸಿದ್ದ ವರಣ್​ ‘ಮನೆಯವರನ್ನು ಒಪ್ಪಿಸಿ ಮದುವೆಯಾಗುತ್ತೇನೆ. ಅಲ್ಲಿಯವರೆಗೂ ಪ್ರೇಮಿಗಳಾಗಿ ಇರೋಣ’ ಎಂದು ನಂಬಿಸಿ ದೈಹಿಕ ಸಂಪರ್ಕ ಮಾಡಿದ್ದ. ಆದರೆ, ಈಗ ಮದುವೆಯಾಗದೇ ವಂಚನೆ ಮಾಡಿದ್ದಾನೆ ಎಂದು ಯುವತಿ ತನ್ನ ದೂರಿನಲ್ಲಿ ತಿಳಿಸಿದ್ದಾಳೆ.

2019ರಲ್ಲಿ ನೈಟ್ ಡಿನ್ನರ್ ನೆಪದಲ್ಲಿ ಜಯನಗರಕ್ಕೆ ಕರೆದೊಯ್ದು ಬಲವಂತವಾಗಿ‌ ದೈಹಿಕ ಸಂಪರ್ಕ ಬೆಳಸಿದ್ದ. ಇದಾದ ಬಳಿಕವೂ ಆಗಾಗ ದೈಹಿಕ ಸಂಪರ್ಕ ಮಾಡಿದ್ದ. ಒಂದು ವರ್ಷದ ಹಿಂದೆ ನನ್ನ ತಂದೆ ಮೃತಪಟ್ಟಾಗ ಮನೆ ಬಳಿ ಬಂದು ಸಾಂತ್ವನ ಹೇಳಿ ಹೋಗಿದ್ದ. ಆದರೆ ಈಗ ಸಂಪರ್ಕಕ್ಕೆ ಸಿಗದೇ ವಂಚಿಸುತ್ತಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ದೂರುದಾರ ಯುವತಿ ವಾಲಿಬಾಲ್ ಕ್ರೀಡೆಯಲ್ಲಿ ಆಯ್ಕೆಯಾಗಿ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ದಕ್ಷಿಣ ವಿಭಾಗದ ತರಬೇತಿ ಪಡೆಯುತ್ತಿದ್ದರು. ಈ ವೇಳೆ ಇಬ್ಬರ ಮಧ್ಯೆ ಪ್ರೇಮಾಂಕುರವಾಗಿ ಬಳಿಕ ದೈಹಿಕ ಸಂಬಂಧ ಹೊಂದಿದ್ದರು.

ಯಾರು ಈ ವರುಣ್ ಕುಮಾರ್?

ಭಾರತ ಹಾಕಿ ತಂಡದ ಡಿಫೆಂಡರ್ ಆಗಿರುವ ವರುಣ್ ಮೂಲತಃ ಹಿಮಾಚಲ ಪ್ರದೇಶದವನು. 2017ರಲ್ಲಿ‌ ಭಾರತ ತಂಡದ ಪರ ಪದಾರ್ಪಣೆ ಮಾಡಿದ ಅವರು 2022ರ ಬರ್ಮಿಂಗ್ ಹ್ಯಾಂ – ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. 2022 ರ ಏಷ್ಯನ್ ಗೇಮ್ಸ್‌ ನಲ್ಲಿ ಚಿನ್ನ ಗೆದ್ದ ತಂಡದಲ್ಲಿದ್ದರು. ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಭಾರತ ತಂಡದ ಸದಸ್ಯನೂ ಕೂಡ ಆಗಿದ್ದರು. ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version