Pralhad Joshi : ಮೇಕೆದಾಟು ವಿರೋಧಿ ಡಿಎಂಕೆಯನ್ನು ಕೈ ಬಿಡುತ್ತದೆಯೇ ಕಾಂಗ್ರೆಸ್: ಪ್ರಹ್ಲಾದ್‌ ಜೋಶಿ ಪ್ರಶ್ನೆ - Vistara News

ಹುಬ್ಬಳ್ಳಿ

Pralhad Joshi : ಮೇಕೆದಾಟು ವಿರೋಧಿ ಡಿಎಂಕೆಯನ್ನು ಕೈ ಬಿಡುತ್ತದೆಯೇ ಕಾಂಗ್ರೆಸ್: ಪ್ರಹ್ಲಾದ್‌ ಜೋಶಿ ಪ್ರಶ್ನೆ

Pralhad Joshi : ಮೇಕೆದಾಟು ಯೋಜನೆಯನ್ನು ತಡೆಯುವುದಾಗಿ ಘೋಷಿಸಿರುವ ಡಿಎಂಕೆಯನ್ನು INDI ಒಕ್ಕೂಟದಿಂದ ಹೊರಗಿಡುತ್ತೀರಾ ಎಂದು ಕಾಂಗ್ರೆಸನ್ನು ಪ್ರಶ್ನೆ ಮಾಡಿದ್ದಾರೆ ಪ್ರಹ್ಲಾದ್‌ ಜೋಶಿ.

VISTARANEWS.COM


on

Pralhad Joshi Mekedatu Project
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ಇಂಡಿಯಾ ಮೈತ್ರಿಕೂಟ (INDIA Bloc) ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಯನ್ನು (Mekedatu Project) ತಡೆಯುವುದಾಗಿ ಡಿಎಂಕೆ ಪ್ರಣಾಳಿಕೆಯಲ್ಲೇ (DMK Manifesto) ಹೇಳಿದೆ. ಹಾಗಿದ್ದರೆ ಕಾಂಗ್ರೆಸ್‌ ಇಂಡಿಯಾ ಒಕ್ಕೂಟದಿಂದ ಡಿಎಂಕೆಯನ್ನು ಕೈ ಬಿಡುತ್ತದೆಯೇ? ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ (Pralhad Joshi) ಪ್ರಶ್ನಿಸಿದ್ದಾರೆ. ಶುಕ್ರವಾರ ಶಿಗ್ಗಾವಿಯಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಇಂಡಿಯಾ ಮೈತ್ರಿಕೂಟದ ಪ್ರಮುಖ ಪಕ್ಷ ಕಾಂಗ್ರೆಸ್ ತನ್ನ ನಿಲುವೇನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಅಗ್ರಹಿಸಿದರು.

ಮೇಕೆದಾಟು ತಡೆಯುವ ಡಿಎಂಕೆ ಪ್ರಣಾಳಿಕೆ ಇಂಡಿಯಾ ಮೈತ್ರಿಕೂಟದ ಪ್ರಣಾಳಿಕೆಯೂ ಆಗುತ್ತದೆ. ಹಾಗಾಗಿ ಕಾಂಗ್ರೆಸ್ ತನ್ನ ನಿಲುವನ್ನು ತಿಳಿಸಬೇಕೆಂದು ಪ್ರಹ್ಲಾದ ಜೋಶಿ ಒತ್ತಾಯಿಸಿದರು.

ಮೇಕೆದಾಟು ಸಂಬಂಧ ನಮ್ಮ ನೀರು ನಮ್ಮ ಹಕ್ಕು ಎನ್ನುತ್ತ ಕಾಂಗ್ರೆಸ್ ಪಕ್ಷ ಈ ಹಿಂದೆ ದಿಲ್ಲಿ ಪಾದಯಾತ್ರೆ ನಡೆಸಿತ್ತು. ಕೋವಿಡ್ ಸಂದರ್ಭದಲ್ಲಿ ಕೋರ್ಟ್ ಸೂಚನೆ ಇದ್ದರೂ ನಿಯಮ ಧಿಕ್ಕರಿಸಿ ಪ್ರತಿಭಟನೆ ನಡೆಸಿತ್ತು. ಈಗ ಅದರ ಅಂಗ ಪಕ್ಷ ಡಿಎಂಕೆ ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಗೆ ತಡೆ ಎಂದು ಪ್ರಣಾಳಿಕೆಯಲ್ಲೇ ಹೇಳಿದೆ. ಕಾಂಗ್ರೆಸ್ ಈಗ ಯಾವ ನಿಲುವು ತಗೆದುಕೊಳ್ಳುತ್ತದೆ? ಎಂದು ಜೋಶಿ ಪ್ರಶ್ನಿಸಿದರು.

ಕಾಂಗ್ರೆಸ್ ಅವಕಾಶವಾದಿ ರಾಜಕಾರಣ ಮಾಡುತ್ತಿದೆ

ಕಾಂಗ್ರೆಸ್ ಅವಕಾಶವಾದಿ ರಾಜಕಾರಣ ಮಾಡುತ್ತಿದೆ. ಮಹದಾಯಿ ವಿಚಾರದಲ್ಲಿ ಸಹ ಸೋನಿಯಾ ಗಾಂಧಿ ಕರ್ನಾಟಕಕ್ಕೆ ಹನಿ ನೀರು ಕೊಡುವುದಿಲ್ಲ ಎಂದು ಗೋವಾಕ್ಕೆ ಹೋಗಿ ಹೇಳಿದ್ದರು. ಈಗ ಮೇಕೆದಾಟು ವಿಚಾರದಲ್ಲೂ ಅದೇ ರೀತಿ ನಾಟಕವಾಡುತ್ತಿದೆ ಎಂದು ಜೋಶಿ ಆರೋಪಿಸಿದರು.

ಇದನ್ನೂ ಓದಿ : Mekedatu Project : I.N.D.I.A ಕೂಟ ಗೆದ್ರೆ ಮೇಕೆದಾಟು ಬಂದ್‌; ಡಿಎಂಕೆ ಪ್ರಣಾಳಿಕೆ ಯಿಂದ ಕಾಂಗ್ರೆಸ್‌ಗೆ ಮುಖಭಂಗ

ಸಿಎಂ, ಡಿಸಿಎಂ ಢೋಂಗಿತನ, ನೆಲ, ಜಲ ಸಂಸ್ಕೃತಿ ಮೇಲೆ ಕಾಳಜಿ ಇಲ್ಲ

ನಮ್ಮ ನೀರು ನಮ್ಮ ಹಕ್ಕು ನಮ್ಮ ತೆರಿಗೆ ನಮ್ಮ ಹಕ್ಕು ಎಂದೆಲ್ಲಾ ಹೋರಾಟ ಮಾಡಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಈಗೇನು ಹೇಳುತ್ತಾರೆ? ಡಿಎಂಕೆ ನಡೆ ಖಂಡಿಸುತ್ತಾರೆಯೇ? ಇವರಿಗೆ ನಿಜವಾಗಿ ರಾಜ್ಯದ ನೆಲ, ಜಲ, ಸಂಸ್ಕೃತಿ ಮೇಲೆ ಕಾಳಜಿ ಇಲ್ಲ. ಸುಮ್ಮನೆ ಡೋಂಗಿತನ ಪ್ರದರ್ಶಿಸುತ್ತಾರೆ ಎಂದು ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.

ಅಂದು ದಿಲ್ಲಿ ಪಾದಯಾತ್ರೆ ಪ್ರತಿಭಟನೆ ಮಾಡಿದ್ರಿ. ಇಂದೂ ಹೋಗಿ ಪ್ರತಿಭಟನೆ ಮಾಡಿ. ಇಲ್ಲವೇ, ಡಿಎಂಕೆ ಯನ್ನು ಇಂಡಿಯಾ ಒಕ್ಕೂಟದಿಂದ ಕೈ ಬಿಡಿ ನೋಡೋಣ. ಇದಕ್ಕೇನು ಹೇಳುತ್ತಾರೆ ಸಿಎಂ-ಡಿಸಿಎಂ? ಮತ್ತು ರಾಹುಲ್ ಗಾಂಧಿ ಅವರು ಎಂದು ಸಚಿವ ಪ್ರಹ್ಲಾದ ಜೋಶಿ ಪ್ರಶ್ನಿಸಿದರು.

ಮೇಕೆದಾಟು ಯೋಜನೆ ಏನು? ಯಾಕೆ ಇದು ಅಗತ್ಯ?

ಬೆಂಗಳೂರಿನಿಂದ 90 ಕಿ.ಮೀ. ದೂರದಲ್ಲಿರುವ ಮೇಕೆದಾಟುವಿನಲ್ಲಿ ಜಲಾಶಯ ನಿರ್ಮಿಸಿ ಮಳೆಗಾಲದಲ್ಲಿ ಹೆಚ್ಚುವರಿಯಾಗಿ ಹರಿದು ಹೋಗುವ ನೀರನ್ನು ಸಂರಕ್ಷಿಸಿ ಕುಡಿಯುವ ನೀರಿಗೆ ಬಳಸುವ ಯೋಜನೆ ಇದಾಗಿದೆ. 9,000 ಕೋಟಿಯ ಈ ಯೋಜನೆಯಿಂದ ಬೆಂಗಳೂರು ಹಾಗೂ ರಾಜ್ಯದ ಕೆಲವೊಂದು ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಬಹುದು. ಜತೆಗೆ ತಮಿಳುನಾಡಿಗೂ ಇಲ್ಲಿಂದ ಅಗತ್ಯವಿರುವ ನೀರು ಬಿಡುಗಡೆ ಮಾಡಬಹುದು ಎನ್ನುವುದು ಕರ್ನಾಟಕ ಸರ್ಕಾರದ ಲೆಕ್ಕಾಚಾರ. ಆದರೆ, ಇದು ತಮಿಳುನಾಡಿಗೆ ಹರಿದು ಹೋಗುತ್ತಿರುವ ನೀರನ್ನು ತಡೆ ಹಿಡಿಯುವ ಯೋಜನೆ ಎಂಬ ಕಾರಣಕ್ಕಾಗಿ ತಮಿಳುನಾಡು ವಿರೋಧಿಸುತ್ತಿದೆ. ಸುಪ್ರೀಂಕೋರ್ಟ್‌ನಲ್ಲಿ ಈ ಯೋಜನೆಗೆ ಅನುಮತಿ ಕೊಡುವ ವಿಚಾರದಲ್ಲಿ ವಿವಾದ ಜಾರಿಯಲ್ಲಿದೆ. ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳು ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದು ಹೇಳಲಾಗುತ್ತಿತ್ತು. ಆದರೆ, ಡಿಎಂಕೆ ಪ್ರಣಾಳಿಕೆ ಇದಕ್ಕೆ ತಣ್ಣೀರು ಎರಚಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

Karnataka Weather Forecast : ರಾಜ್ಯಾದ್ಯಂತ ತಾಪಮಾನ ಏರಿಕೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜನ-ಸಾಮಾನ್ಯರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ (Dry Weather) ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಏಪ್ರಿಲ್‌ 30ರವರೆಗೆ ಹೀಟ್‌ ವೇವ್‌ (heat Wave) ಪ್ರಭಾವ ಇರಲಿದೆ.

ಪ್ರಮುಖವಾಗಿ ಉತ್ತರ ಒಳನಾಡಿ ಬೀದರ್, ಕಲಬುರಗಿ, ವಿಯಜಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ ಹಾಗೂ ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಜತೆಗೆ ಹೀಟ್‌ ವೇವ್‌ ಹೆಚ್ಚಾಗುವ ಸಾಧ್ಯತೆ ಇದೆ.

ಬಿಸಿ ಗಾಳಿ ಎಚ್ಚರಿಕೆ

ಏಪ್ರಿಲ್ 27 ರಿಂದ ಮೇ 1ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 23 ಡಿ.ಸೆ ಇರುವ ಸಾಧ್ಯತೆ ಇದೆ.

ಇದನ್ನೂ ಓದಿ: Murder Case : ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

ಸೂರ್ಯನ ತಾಪವು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಬೇವರಿಸುವ ಸೂರ್ಯನ ಶಾಖವು ಜನರು ಆರೋಗ್ಯದ ಮೇಲೂ ಪರಿಣಾಮ (Health Tips) ಬೀರುತ್ತಿದೆ. ಸಾರ್ವಜನಿಕರು ಏನು ಮಾಡಬೇಕು ಏನು ಮಾಡಬಾರದು ಎಂಬ ಮಾಹಿತಿ ಇಲ್ಲದೆ.

ತಾಪಮಾನದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳೇನು?

ಸಾಮಾನ್ಯವಾಗಿ ದೇಹದ ಉಷ್ಣತೆಯು 36.4 ಡಿ.ಸೆ ನಿಂದ 37.2 ಡಿ.ಸೆ ಇರಲಿದೆ. ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ ಉಷ್ಣತೆಯಿಂದಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಸಾಧಾರಣದಿಂದ ತೀವ್ರ ಜ್ವರ, ಗಂಧೆಗಳು (prickly heat), ಊತಗಳು ( ಕೈ-ಕಾಲುಗಳು ಹಾಗೂ ಮೊಣಕಾಲು), ಉಷ್ಣತೆಯಿಂದ ಸೆಳೆತ (ಸ್ನಾಯುಗಳ ಸೆಳೆತ), ಪ್ರಜ್ಞೆ ತಪ್ಪುವುದು, ಸುಸ್ತಾಗುವುದು ಹಾಗೂ ಪಾಶ್ವವಾಯು ಉಂಟಾಗಲಿದೆ. ಕೆಲವೊಮ್ಮೆ ಅತಿಯಾದ ಉಷ್ಣತೆಯಿಂದಾಗಿ ಹೃದ್ರೋಗ, ಉಸಿರಾಟದ ಸಮಸ್ಯೆಗಳು ಹಾಗೂ ಕಿಡ್ನಿ ಸಮಸ್ಯೆಗಳು ಹೆಚ್ಚಾಗುತ್ತದೆ. ಅತಿಯಾದ ಬಾಯಾರಿಕೆ, ವಾಕರಿಕೆ ಅಥವಾ ವಾಂತಿಯಾಗುವುದು, ತಲೆನೋವು ಹಾಗೂ ಮೂತ್ರ ವಿಸರ್ಜನೆ ಪ್ರಮಾಣದಲ್ಲಿ ಕಡಿಮೆಯಾಗುವುದು ಹಾಗೂ ಹಳದಿ ಬಣ್ಣದ ಮೂತ್ರ, ಏರು ಗತಿಯ ಉಸಿರಾಟ ಹಾಗೂ ಹೃದಯದ ಬಡಿತ ಹೆಚ್ಚಾಗಲಿದೆ.

ಏನು ಮಾಡಬೇಕು?
-ತಕ್ಷಣವೇ ತಂಪಾದ ಸ್ಥಳಕ್ಕೆ ತೆರಳಿ ಮತ್ತು ದ್ರವಾಹಾರವನ್ನು ಸೇವಿಸಿ. ನೀರಿನ ಸೇವನೆ ಅತ್ಯುತ್ತಮ.
-ಹೆಚ್ಚು ನೀರು ಕುಡಿಯುವುದು. ಬಾಯಾರಿಕೆ ಇಲ್ಲದಿದ್ದರೂ ಆಗಾಗ ನೀರು ಸೇವಿಸಿ. ಜತೆಗೆ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ, ಲಸ್ಸಿ ಹಾಗು ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮ.
-ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟೂಸ್, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.
-ತಿಳಿ ಬಣ್ಣದ, ಅಳಕವಾದ (loose fitting) ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ.
-ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ/ಹ್ಯಾಟ್, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸಿ ಬಿಸಿಲಿನಿಂದ ರಕ್ಷಣೆ ಪಡೆಯಿರಿ.
-ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ / ಚಪ್ಪಲಿ ಅಥವಾ ಶೂಸ್‌ಗಳನ್ನು ಧರಿಸಬೇಕು.
-ಸಾಧ್ಯವಾದಷ್ಟು ಒಳಾಂಗಣದಲ್ಲಿದ್ದು, ಉತ್ತಮ ಗಾಳಿ ಬೀಸುವ ಹಾಗೂ ತಣ್ಣಗಿರುವ ಪ್ರದೇಶದಲ್ಲಿರಿ. ನೇರವಾಗಿ ಸೂರ್ಯನ ಬೆಳಕು ಹಾಗೂ ಬಿಸಿ ಗಾಳಿಯು ಮನೆಯ ಒಳಗೆ ಬರದಂತೆ ತಡೆಯಲು ಹಗಲು ಹೊತ್ತಿನಲ್ಲಿ ಕಿಟಕಿಗಳನ್ನು ಪರದೆಗಳಿಂದ ಮುಚ್ಚಿ.

ಈ ಕೆಲಸವನ್ನು ಮಾಡಬಾರದು

-ಬಿಸಿಲಿನಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಿ.
-ಮಧ್ಯಾಹ್ನದ ಸಮಯದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ.
-ಮಧ್ಯಾಹ್ನ ಅಡುಗೆ ಮಾಡುವುದು ತಪ್ಪಿಸಿ. ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲುಗಳನ್ನು ತೆರೆದಿಡಿ.
-ಮಧ್ಯಪಾನ, ಟೀ, ಕಾಫಿ ಮತ್ತು ಕಾರ್ಬೋನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ. ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.
-ಹೆಚ್ಚು ಪ್ರೊಟೀನ್ ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.
-ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನಾಪಮಾನವು ಅಪಾಯಕಾರಿಯಾಗಬಹುದು.
-ಕೆಲಸದ ಸ್ಥಳದಲ್ಲಿ ಕೆಲಸಗಾರರಿಗೆ ಕುಡಿಯಲು ತಣ್ಣನೆಯ ನೀರಿನ ವ್ಯವಸ್ಥೆ ಮಾಡಬೇಕು. 20 ನಿಮಿಷಗಳಿಗೊಮ್ಮೆ ಒಂದು ಗ್ಲಾಸ್‌ ಅಥವಾ ಅದಕ್ಕಿಂತ ಹೆಚ್ಚಿನ ನೀರು ಕುಡಿಬೇಕು

Heat wave

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

karnataka Weather : ದೂರ ಸರಿದ ಮಳೆ; ಬೆಂಗಳೂರಲ್ಲಿ 39ರ ಗಡಿದಾಟಲಿದೆ ಗರಿಷ್ಠ ಉಷ್ಣಾಂಶ! 15 ಜಿಲ್ಲೆಗಳಿಗೆ ಅಲರ್ಟ್‌

Temperature Warning: ಈ ವರ್ಷ ಬೆಂಗಳೂರು ತನ್ನೆಲ್ಲ ಹಳೆಯ ದಾಖಲೆಗಳನ್ನು ಮುರಿಯುತ್ತಾ ಬಂದಿದ್ದು, ಗರಿಷ್ಠ ತಾಪಮಾನವು ಮತ್ತಷ್ಟು ದುಪ್ಪಟ್ಟು ಆಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಈ ನಡುವೆ 15 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌ (Heat Wave alert) ನೀಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಮಳೆಯು ದೂರ ಸರಿದಿದ್ದು, ಒಣಹವೆ (Karnataka Weather forecast) ಆವರಿಸಿದೆ. ರಾಜಧಾನಿ ಬೆಂಗಳೂರಲ್ಲಿ (temperature rising) ದಾಖಲೆಯ ಪ್ರಮಾಣದಲ್ಲಿ ಗರಿಷ್ಠ ಉಷ್ಣಾಂಶ ಏರಿಕೆ ಆಗುತ್ತಿದೆ. ಮಾರ್ಚ್‌ನಲ್ಲಿ ಹಳೆಯ ಎಲ್ಲ ದಾಖಲೆ ಮುರಿದಿದ್ದ ಬೆಂಗಳೂರಲ್ಲಿ ಇದೀಗ ಏಪ್ರಿಲ್‌ 28ರಂದು ಗರಿಷ್ಠ ಉಷ್ಣಾಂಶವು 39 ಡಿ.ಸೆಗೆ ಏರಿಕೆ ಆಗಲಿದೆ ಎಂದು ಹವಾಮಾನ ಇಲಾಖೆ (Bengaluru weather) ಮಾಹಿತಿ ನೀಡಿದೆ. ತಾಪಮಾನ (Bengaluru temperature) ಏರಿಕೆಯಿಂದ ಜನರು ಪರಿತಪಿಸುವಂತಾಗಿದೆ

ಕೂಲ್‌ ಸಿಟಿ (Cool city Bengaluru) ಎಂದು ಕರೆಸಿಕೊಳ್ಳುವ ಬೆಂಗಳೂರು ಹಾಟ್‌ ಸಿಟಿಯಾಗಿ (Bengaluru temperature) ಬದಲಾಗುತ್ತಿದೆ. ಬೆಂಗಳೂರಿನಲ್ಲೀಗ ದಾಖಲೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ (Temperature Warning) ಸಿಟಿ ಜನರು ತತ್ತರಿಸಿ ಹೋಗಿದ್ದಾರೆ. ಬಿಸಿಲನಾಡು ಎಂದು ಕರೆಸಿಕೊಳ್ಳುವ ಉತ್ತರ ಒಳನಾಡಿನ ಜಿಲ್ಲೆಗಳಿಗೂ ರಾಜಧಾನಿ ಬೆಂಗಳೂರು ಅಕ್ಷರಶಃ ಸೆಡ್ಡು ಹೊಡೆಯುತ್ತಿದೆ.

ಮಾರ್ಚ್‌ ಬಳಿಕ ಏಪ್ರಿಲ್‌ ಮೊದಲ ವಾರದಲ್ಲೇ ಬೆಂಗಳೂರಿನಲ್ಲಿ ದಾಖಲೆಯ ಮಟ್ಟದಲ್ಲಿ ಗರಿಷ್ಠ ತಾಪಮಾನವು (Bengaluru heatwave) ದಾಖಲಾಗಿತ್ತು. ಇದೀಗ ಏಪ್ರಿಲ್‌ ಅಂತ್ಯದಲ್ಲೂ ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಹಗಲಿನಲ್ಲಿ ತಾಪಮಾನ 38 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಕಂಡಿದೆ. ಇದರಿಂದಾಗಿ ಬಿಸಿಲ ಬೇಗೆಗೆ ತೇವಾಂಶದ ಕೊರತೆಯಿಂದಾಗಿ ಒಣ ಹವೆ (Bengaluru heat) ಮುಂದುವರಿದಿದೆ. ಇಷ್ಟೊಂದು ತಾಪಮಾನದಲ್ಲಿ ಜನರು ತಿರುಗಾಡಿದರೆ ಖಂಡಿತವಾಗಿಯೂ ಅನಾರೋಗ್ಯಕ್ಕೆ ತುತ್ತಾಗಲಿದ್ದಾರೆ.

ಇದನ್ನೂ ಓದಿ: Home Remedy For Cracked Heels: ಒಡೆದ ಹಿಮ್ಮಡಿಗಳಿಗೆ ಕರ್ಪೂರದ ಎಣ್ಣೆ ಪರಿಣಾಮಕಾರಿ

ಹೀಟ್‌ ವೇವ್‌ ಶಾಕ್‌

ರಾಜ್ಯದಲ್ಲಿ ಏ.28ರಂದು ಒಣಹವೆ ಮುಂದುವರಿಯಲಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹೀಟ್‌ ವೇವ್‌ ಹೆಚ್ಚಾಗಲಿದೆ. ಹೀಗಾಗಿ ಈ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಮುನ್ನೆಚ್ಚರಿಕೆಯನ್ನು ವಹಿಸುವಂತೆ ಸೂಚಿಸಲಾಗಿದೆ. ಜತೆಗೆ ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಇನ್ನೂ ಶುಕ್ರವಾರದಂದು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಇತ್ತು. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 42.2 ಡಿ.ಸೆ ದಾಖಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹುಬ್ಬಳ್ಳಿ

Lok Sabha Election 2024: ರಾಮಕೃಷ್ಣ ಹೆಗಡೆಯಂತೆ ಲಿಂಗಾಯತರ ಪರ ಗಟ್ಟಿಯಾಗಿ ನಿಂತ ನಾಯಕ ಪ್ರಲ್ಹಾದ್ ಜೋಶಿ ಎಂದ ಯತ್ನಾಳ್

Lok Sabha Election 2024: ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಾರ್ಟಿ ಲಿಂಗಾಯತರ ಪ್ರಬಲ ವಿರೋಧಿ. ಬೆಳಗಾವಿ ಅಧಿವೇಶನದಲ್ಲಿ ಲಿಂಗಾಯತ ಮೀಸಲಾತಿ ಬಗ್ಗೆ ಚರ್ಚಿಸಲು ಅವಕಾಶ ಕೊಡಲೇ ಇಲ್ಲ ಇವರು ಎಂದು ಮಾಜಿ ಸಚಿವ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.

VISTARANEWS.COM


on

Vijayapur MLA Basanagowda Patil Yatnal latest statement in Dharwad
Koo

ಹುಬ್ಬಳ್ಳಿ: ಪ್ರಲ್ಹಾದ್‌ ಜೋಶಿ (Pralhad Joshi) ಯಾವತ್ತೂ ಲಿಂಗಾಯತ ಪರ ಗಟ್ಟಿ ನಿಂತಿದ್ದಾರೆ. ಅಪಪ್ರಚಾರಕ್ಕೆಲ್ಲ ಕಿವಿಗೊಡಬೇಡಿ ಎಂದು ಮಾಜಿ ಸಚಿವ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಲಿಂಗಾಯತ-ವೀರಶೈವ ಸಮುದಾಯಕ್ಕೆ ಕರೆ (Lok Sabha Election 2024) ನೀಡಿದರು.

ಧಾರವಾಡದ ಮೊರಬದಲ್ಲಿ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಪರ ರೋಡ್ ಶೋ, ಮತಯಾಚನೆ ನಡೆಸಿ ಅವರು ಮಾತನಾಡಿದರು.

ಕರ್ನಾಟಕದಲ್ಲಿ ಹಿಂದೆ ರಾಮಕೃಷ್ಣ ಹೆಗಡೆ, ಅನಂತ ಕುಮಾರ್ ಈಗ ಪ್ರಲ್ಹಾದ್‌ ಜೋಶಿ ಅವರು ಲಿಂಗಾಯತರ ಪರ ಗಟ್ಟಿಯಾಗಿ ನಿಂತವರಾಗಿದ್ದಾರೆ. ಕೆಲವರು ಏನೇನೋ ಅಪಪ್ರಚಾರ ಮಾಡುತ್ತಾರೆ. ಅಂಥದ್ದಕ್ಕೆ ಲಿಂಗಾಯತ, ವೀರಶೈವ ಸಮಾಜದವರು ಕಿವಿಗೊಡಬಾರದು ಎಂದು ಹೇಳಿದರು.

ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಬೊಮ್ಮಾಯಿ ಅವರ ಅವಧಿಯಲ್ಲಿ ನಡೆದ ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ವೇಳೆ ಕೇಂದ್ರದ ಮಟ್ಟದಲ್ಲಿ ಸಚಿವ ಪ್ರಲ್ಹಾದ್‌ ಜೋಶಿ ಸಹ ಪ್ರಯತ್ನ ನಡೆಸಿದರು. ಅದರ ಪರಿಣಾಮ ಕೊನೆಗೆ 2ಡಿ ಸೃಷ್ಟಿಸಿ ಅವಕಾಶ ಕಲ್ಪಿಸಲು ಕೇಂದ್ರದ ವರಿಷ್ಠರು ಸಮ್ಮತಿಸಿದ್ದರು ಎಂದು ಯತ್ನಾಳ್ ತಿಳಿಸಿದರು.

ಸಿಎಂ ಸಿದ್ದರಾಮಯ್ಯ,ಕಾಂಗ್ರೆಸ್ ಪಾರ್ಟಿ ಲಿಂಗಾಯತರ ಪ್ರಬಲ ವಿರೋಧಿ

ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಾರ್ಟಿ ಲಿಂಗಾಯತರ ಪ್ರಬಲ ವಿರೋಧಿ. ಬೆಳಗಾವಿ ಅಧಿವೇಶನದಲ್ಲಿ ಲಿಂಗಾಯತ ಮೀಸಲಾತಿ ಬಗ್ಗೆ ಚರ್ಚಿಸಲು ಅವಕಾಶ ಕೊಡಲೇ ಇಲ್ಲ ಇವರು ಎಂದು ಯತ್ನಾಳ್ ಗಂಭೀರ ಆರೋಪ ಮಾಡಿದರು.

ಸಿಎಂ ಭೇಟಿಗೂ ಸಿಗಲಿಲ್ಲ

ಪ್ರವರ್ಗ 2ಡಿ ಬಗ್ಗೆ ಮಾತನಾಡಲು ಸಿಎಂ ಭೇಟಿಗೆ ಸಮಯ ಕೇಳಿದರೆ ಕೊನೆಗೂ ಕೊಡಲಿಲ್ಲ ಎಂದ ಅವರು, ಕಾಂಗ್ರೆಸ್ ಪಕ್ಷ ಮತ್ತು ಸಿಎಂ ಲಿಂಗಾಯತ ವಿರೋಧಿ ಆಗಿದ್ದಾರೆ. ಅವಕಾಶ ಸಿಗಲ್ಲ ಬಿಡಿ ಎಂದು ಆ ಪಕ್ಷದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೇ ನನಗೆ ಹೇಳಿದ್ರು ಎಂದೂ ಇದೇ ವೇಳೆ ತಿಳಿಸಿದರು.

ಕಿತ್ತೂರು ಚೆನ್ನಮ್ಮ ಪ್ರತಿಮೆ ಮುಂದೆ ಆಣೆ ಮಾಡುವೆ

ಸಿಎಂ ಸಿದ್ದರಾಮಯ್ಯ ಮತ್ತು ತಮ್ಮ ಪಕ್ಷ ಲಿಂಗಾಯತ ವಿರೋಧಿ ಎಂಬುದನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ ಬಗ್ಗೆ ಬೇಕಿದ್ದರೆ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿ ಮುಂದೆ ಪ್ರಮಾಣ ಮಾಡಿ ಹೇಳುತ್ತೇನೆ ಎಂದೂ ಯತ್ನಾಳ್ ಸವಾಲು ಹಾಕಿದರು.

ಪಂಚಮಸಾಲಿ ಸಿಎಂ ನಿರ್ಣಯ

ಮುಂದಿನ ದಿನಗಳಲ್ಲಿ ಪಂಚಮಸಾಲಿ ಸಮಾಜದ ನಾಯಕರನ್ನು ಸಿಎಂ ಮಾಡುವ ನಿರ್ಣಯ ಆಗುತ್ತದೆ. ಆ ಕಾಲ ಬರುತ್ತದೆ ಸ್ವಲ್ಪ ಕಾಯಿರಿ ಎಂದು ಯತ್ನಾಳ್ ಸೂಚ್ಯವಾಗಿ ಹೇಳಿದರು.

ಇದನ್ನೂ ಓದಿ: Snake Bite: ತೋಟದ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯ ಕಚ್ಚಿದ ಹಾವು; ಕ್ಷಣಾರ್ಧದಲ್ಲೆ ಹಾರಿಹೋಯ್ತು ಪ್ರಾಣ

ಬಿಜೆಪಿ ಸರ್ಕಾರ ಇದ್ದಾಗ ಯಾರಿಗೂ ಅನ್ಯಾಯ ಆಗದಂತೆ ವರ್ಗೀಕರಣ ಮಾಡಿತ್ತು. 2ಡಿ ಸೃಷ್ಟಿಸಿ ಅದರಲ್ಲಿ ವೀರಶೈವ, ಪಂಚಮಸಾಲಿ ಲಿಂಗಾಯತ ಎಂದು ಸ್ಪಷ್ಟವಾಗಿ ಬರೆದಿದೆ. ಶೇ.7ರಷ್ಟು ಮೀಸಲಾತಿ ಕಲ್ಪಿಸಿದ್ದಾಗಿ ಅವರು ತಿಳಿಸಿದರು.

ಮುಸ್ಲಿಂರಿಗೆ 2ಎ, 2ಬಿ ಅಲ್ಲದೇ, ಪ್ರವರ್ಗ 1 ರಲ್ಲಿ ಶೇ.10 ರಷ್ಟು ಮೀಸಲಾತಿ ಇತ್ತು. ಆದರೆ, ಪಂಚಮಸಾಲಿ, ಒಕ್ಕಲಿಗ, ಜಂಗಮ, ಬಣಜಿಗರಲ್ಲಿಯೂ ಬಡವರಿದ್ದಾರೆ. ಹಾಗಾಗಿ ಯಾರಿಗೂ ಅನ್ಯಾಯವಾಗದಂತೆ ಬೊಮ್ಮಾಯಿ ಸಿಎಂ ಆಗಿದ್ದಾಗ ಮೀಸಲಾತಿ ಹಂಚಿಕೆ ಮಾಡಲಾಗಿತ್ತು ಎಂದರು.

ಇದನ್ನೂ ಓದಿ: Gold Rate Today: 22 ಕ್ಯಾರಟ್‌, 24 ಕ್ಯಾರಟ್‌ ಚಿನ್ನದ ಬೆಲೆ ಇಂದು ಹೀಗಿವೆ; ತುಸುವೇ ಏರಿಕೆ

ಈಗ ಸಿಎಂ ಸಿದ್ದರಾಮಯ್ಯ ಒಬಿಸಿ, ದಲಿತರ ಮೀಸಲಾತಿ ಕಿತ್ತು ಮುಸ್ಲಿಂರಿಗೆ ಕೊಡಲು ಹೊರಟಿದ್ದಾರೆ ಎಂದು ಯತ್ನಾಳ್ ಆರೋಪಿಸಿದರು.

Continue Reading

ಹುಬ್ಬಳ್ಳಿ

Neha Murder case : ನ್ಯಾಯಾಧೀಶರ ಎದುರೆ ನೇಹಾ ಕೊಲೆ ಆರೋಪಿ ಫಯಾಜ್‌ನ DNA ಮಾದರಿ ಸಂಗ್ರಹ!

Neha Murder case : ನೇಹಾ ಕೊಲೆ ಆರೋಪಿ ಫಯಾಜ್‌ನನ್ನು ಸಿಐಡಿ ತಂಡ ಆರು ದಿನಗಳ ಕಾಲ ಕಸ್ಟಡಿಗೆ ಪಡೆದಿದೆ. ಶನಿವಾರ ಫಯಾಜ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಡಿಎನ್ಎ ಟೆಸ್ಟ್‌ಗೆ (DNA Test) ಅನುಮತಿ ಪಡೆಯಲಿದ್ದಾರೆ.

VISTARANEWS.COM


on

By

Neha Murder Case neha And fayas
ಕೊಲೆಯಾದ ನೇಹಾ ಹಾಗೂ ಸ್ಥಳ ಮಹಜರು ಮಾಡಿದ್ದ ಸಿಐಡಿ ಅಧಿಕಾರಿಗಳು
Koo

ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ (Neha Murder Case) ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ತನಿಖೆಯು ಮುಂದುವರಿದಿದೆ. ಆರೋಪಿ ಫಯಾಜ್‌ನ ಡಿಎನ್‌ಎ (DNA Test) ಟೆಸ್ಟ್‌ಗೆ ಸಿಐಡಿ ಅಧಿಕಾರಿಗಳು ಅನುಮತಿ ಕೇಳಿದ್ದಾರೆ. ಈ ಸಂಬಂಧ 1ನೇ ಆ್ಯಡಿಷನಲ್ ಸಿವಿಲ್ ಜಡ್ಡ್ ನ್ಯಾಯಾಲಯದಲ್ಲಿ ಕೋರಿಕೆಯ ಅರ್ಜಿ ಸಲ್ಲಿಸಿದ್ದಾರೆ.

ನ್ಯಾಯಾಲಯವು ಮಧ್ಯಾಹ್ನ 1 ಗಂಟೆಗೆ ಆರೋಪಿಯ ಹಾಜರಾತಿಗೆ ಸೂಚಿಸಿತ್ತು. ಆದರೆ ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಸಮಯ ಬದಲಾವಣೆಗೆ ನ್ಯಾಯಾಧೀಶರ ಬಳಿ ಸಿಐಡಿ ಅಧಿಕಾರಿಗಳು ಮನವಿ ಮಾಡಿದ್ದರು. ಸಿಐಡಿ ಮನವಿ ಮೇರೆಗೆ ಆರೋಪಿಯ ಹಾಜರಾತಿಗೆ ಮಧ್ಯಾಹ್ನ 3 ಗಂಟೆಯ ಸಮಯವನ್ನು ನಿಗದಿ ಮಾಡಲಾಗಿದೆ. ಇನ್ನೂ ವೈದ್ಯರು ನ್ಯಾಯಾಧೀಶರ ಎದುರೆ ಫಯಾಜ್‌ನ ಡಿಎನ್‌ಎ ಮಾದರಿಯನ್ನು ಸಂಗ್ರಹಿಸಲಿದ್ದಾರೆ.

ಇದನ್ನೂ ಓದಿ: Road Accident : ಲಾರಿ- ಬೈಕ್‌ ಅಪಘಾತ; ಪತ್ನಿ ಕಣ್ಣೇದುರೇ ಒದ್ದಾಡಿ ಪ್ರಾಣಬಿಟ್ಟ ಪತಿ

ನೇಹಾ ಹತ್ಯೆ ಮಾಡಿದ ಹಂತಕನ ಎನ್‌ಕೌಂಟರ್‌ ಮಾಡಿ- ಮಾಜಿ ಸಚಿವ ರಾಜುಗೌಡ

ನೇಹಾ ಹತ್ಯೆ ಮಾಡಿದ್ದ ಹಂತಕನನ್ನು ಎನ್‌ಕೌಂಟರ್ ಮಾಡಿ ಎಂದು ಯಾದಗಿರಿ ಜಿಲ್ಲೆಯ ಸುರಪುರನಲ್ಲಿ ಮಾಜಿ ಸಚಿವ ರಾಜುಗೌಡ ಹೇಳಿಕೆ ನೀಡಿದ್ದಾರೆ. ನೇಹಾ ಹತ್ಯೆ ಘಟನೆ ಬಗ್ಗೆ ಸಿಎಂ ಹಾಗೂ ಗೃಹ ಸಚಿವರು ಬೇಜವಾಬ್ದಾರಿತನ ಹೇಳಿಕೆ ನೀಡಿರುವುದು ಸರಿಯಲ್ಲ. ಯಾರು ಇಂತಹ ಹೇಳಿಕೆ ಕೊಡಬಾರದು ಎಂದು ಕಿಡಿಕಾರಿದರು.

ಇಂತಹ ಘಟನೆಗಳಿಂದ ಪೋಷಕರು ಕಾಲೇಜುಗಳಿಗೆ ಮಕ್ಕಳಿಗೆ ಕಳುಹಿಸಲು ಭಯಪಡುತ್ತಿದ್ದಾರೆ. ಯಾರೆ ತಪ್ಪು ಮಾಡಿದರೂ ಆರೋಪಿಗಳಿಗೆ ಎನ್‌ಕೌಂಟರ್ ಮಾಡಿದರೆ ಭಯ ಇರುತ್ತದೆ. ಯಾವುದೇ ಕೋಮಿನ ಮಹಿಳೆ ಮೇಲೆ ದೌರ್ಜನ್ಯ ಮಾಡಿದರೆ ತಕ್ಕ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

ನೇಹಾ ಅವರ ತಂದೆ ನೋವಿನಲ್ಲಿದ್ದಾರೆ, ಹೆಣ್ಣು ಹೆತ್ತವರಿಗೆ ನೋವು ಇರುತ್ತದೆ. ಸಂತೋಷ ಲಾಡ್‌ಗೆ ಹೆಣ್ಣುಮಕ್ಕಳು ಇಲ್ಲ ಹೀಗಾಗಿ ಅವರು ಬಾಯಿಗೆ ಬಂದಾಗ ಮಾತನಾಡುತ್ತಾರೆ. ಯಾರೆ ಆದರೂ ಮಕ್ಕಳು ಮಕ್ಕಳೇ ಅಲ್ವಾ, ನೇಹಾ ತಂದೆ ನೋವಿನಲ್ಲಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ ರಾಜುಗೌಡ ಒತ್ತಾಯಿಸಿದರು.

ಏನಿದು ನೇಹಾ ಹತ್ಯೆ ಪ್ರಕರಣ?

ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್‌ ಎಂಬಾತ ಕಾರ್ಪೋರೇಟರ್‌ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದು ಎಸ್ಕೇಪ್‌ ಆಗಲು ಯತ್ನಿಸಿದ್ದ. ಏ.18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲೇ ಈ ಹತ್ಯೆ ನಡೆದಿತ್ತು. ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳು ನೇಹಾ ಹಿರೇಮಠ ಬರ್ಬರವಾಗಿ ಕೊಲೆಯಾಗಿದ್ದಳು.

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಳು. ಅದೇ ಕಾಲೇಜಿನಲ್ಲಿ ಓದುತ್ತಿದ್ದ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಳು ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಆತ ಏ.18ರ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದ, ಆದರೆ ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ.

ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿ ಫಯಾಜ್‌ ಏಕಾಏಕಿ ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದ. ಆತನಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದ ನೇಹಾಳನ್ನು ಹಿಡಿದುಕೊಂಡ ಪಾಗಲ್‌ ಪ್ರೇಮಿ, ಮನಬಂದಂತೆ ಚಾಕುವಿನಿಂದ ಇರಿದಿದ್ದ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದರಿಂದ ನೇಹಾಳಿಗೆ ತೀವ್ರ ರಕ್ತಸ್ರಾವವಾಗಿತ್ತು. ಕೂಡಲೇ ಅಲ್ಲಿದ್ದವರು ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದರು. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದರು. ಇತ್ತ ಹತ್ಯೆ ಮಾಡಿ ಎಸ್ಕೇಪ್‌ ಆಗುತ್ತಿದ್ದ ಫಯಾಜ್‌ನನ್ನು ವಿದ್ಯಾರ್ಥಿಗಳೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
ವೈರಲ್ ನ್ಯೂಸ್6 mins ago

Viral Video: ಹೆಂಡತಿನ ಚೆನ್ನಾಗಿ ಥಳಿಸಿ ಫ್ಲೈ ಓವರ್‌ನಿಂದ ತಳ್ಳೋಕೆ ಯತ್ನಿಸಿದ ಪಾಪಿ ಗಂಡ; ಆಮೇಲೆ ಆಗಿದ್ದೇನು?

Lok sabaha election
ದೇಶ16 mins ago

Lok Sabha Election: ಮತದಾನ ಪ್ರಮಾಣ ಕುಸಿತ; ಬಿಜೆಪಿಗೆ ಆತಂಕ!

PM Narendra Modi Live in Sirsi campaign meeting here
Lok Sabha Election 202419 mins ago

PM Narendra Modi Live : ಪ್ರಧಾನಿ ಮೋದಿಯ ಶಿರಸಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Samantha Ruth Prabhu shocking secrets
ಟಾಲಿವುಡ್22 mins ago

Samantha Ruth Prabhu: ಸಮಂತಾಗೆ ಜನುಮ ದಿನದ ಸಂಭ್ರಮ! ಈ ನಟಿಯ ಸೀಕ್ರೆಟ್‌ ಸಂಗತಿಗಳಿವು!

PM Narendra Modi Cm Siddaramaiah many questions to PM Modi Challenge for answer
Lok Sabha Election 202446 mins ago

PM Narendra Modi: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಕೇಳಿದ 10 ಪ್ರಶ್ನೆ; ಉತ್ತರಕ್ಕಾಗಿ ಸವಾಲು!

Priyanka Gandhi Rahul Gandhi
ದೇಶ1 hour ago

Lok Sabha Election 2024: ಅಮೇಥಿ, ರಾಯ್‌ಬರೇಲಿಗೆ ರಾಹುಲ್‌, ಪ್ರಿಯಾಂಕಾ ಫಿಕ್ಸ್‌? ಖರ್ಗೆ ನಿರ್ಧಾರ ಫೈನಲ್‌

Ranbir Kapoor stunned as photographer abuses in front of him
ಬಾಲಿವುಡ್1 hour ago

Ranbir Kapoor: ರಣಬೀರ್​ ಕಪೂರ್‌ಗೆ​ ಅಶ್ಲೀಲವಾಗಿ ಬೈಯ್ದ್ರಾ ಫೋಟೋಗ್ರಾಫರ್‌? ವಿಡಿಯೊದಲ್ಲಿ ಏನಿದೆ?

pralhad Joshi
ಪ್ರಮುಖ ಸುದ್ದಿ1 hour ago

Pralhad Joshi : ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್​ನಿಂದ ನಾಟಕ; ಪ್ರಲ್ಹಾದ್ ಜೋಶಿ ಲೇವಡಿ

If Congress comes to power all your assets will belong to Government says PM Narendra Modi
Lok Sabha Election 20241 hour ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

If Congress comes to power all your assets will belong to Government says PM Narendra Modi
Lok Sabha Election 20241 hour ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ5 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ9 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202421 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

ಟ್ರೆಂಡಿಂಗ್‌