ಹುಬ್ಬಳ್ಳಿ ಗಲಭೆ ಆರೋಪಿಗಳು ಬೆಂಗಳೂರಿನಲ್ಲಿ ಅರೆಸ್ಟ್‌: ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು - Vistara News

ಉಡುಪಿ

ಹುಬ್ಬಳ್ಳಿ ಗಲಭೆ ಆರೋಪಿಗಳು ಬೆಂಗಳೂರಿನಲ್ಲಿ ಅರೆಸ್ಟ್‌: ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

ಪಿಯು ವಿದ್ಯಾರ್ಥಿಯೊಬ್ಬ ಇಸ್ಲಾಂ ವಿರುದ್ಧ ಹಾಕಿದ್ದ ಪೋಸ್ಟ್‌ ನೆಪವಾಗಿಸಿ ಆರಂಭವಾದ ಪ್ರತಿಭಟನೆ, ನಂತರ ಪೊಲೀಸರು ಹಾಗೂ ಸಾರ್ವಜನಿಕರ ಆಸ್ತಿಪಾಸ್ತಿ ಹಾನಿಯಾಗುವ ಹಂತ ತಲುಪಿತ್ತು.

VISTARANEWS.COM


on

ಸಂಗ್ರಹ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹುಬ್ಬಳ್ಳಿಯಲ್ಲಿ ಗಲಭೆ ನಂತರ ಕಳೆದೊಂದು ವಾರದಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನಲ್ಲಿ ಶನಿವಾರ ಬಂಧಿಸಲಾಗಿದೆ. ಬೆಂಗಳೂರಿನ ಕಾಟನ್‌ಪೇಟೆಯಲ್ಲಿರುವ ಹೋಟೆಲ್‌ನಿಂದ ಅಬ್ದುಲ್‌ ಮಲ್ಲಿಕ್‌ ಬೇಫಾರಿ ಹಾಗೂ ತೂಫೇಲ್‌ ಮುಲ್ಲ ಇಬ್ಬರನ್ನೂ ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಏಪ್ರಿಲ್‌ 17ರಂದು ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆ ಬಳಿ ಗಲಭೆ ನಡೆದಿತ್ತು. ಪಿಯು ವಿದ್ಯಾರ್ಥಿಯೊಬ್ಬ ಇಸ್ಲಾಂ ವಿರುದ್ಧ ಹಾಕಿದ್ದ ಪೋಸ್ಟ್‌ ನೆಪವಾಗಿಸಿ ಆರಂಭವಾದ ಪ್ರತಿಬಟನೆ, ನಂತರ ಪೊಲೀಸರು ಹಾಗೂ ಸಾರ್ವಜನಿಕರ ಆಸ್ತಿಪಾಸ್ತಿ ಹಾನಿಯಾಗುವ ಹಂತ ತಲುಪಿತ್ತು. ಪ್ರಕರಣದ ನಂತರ ಇಲ್ಲಿವರೆಗೆ ಎಐಎಂಐಎಂ ಕಾರ್ಪೊರೇಟರ್‌ ಪತಿ ಸೇರಿ 126 ಜನರನ್ನು ಬಂಧಿಸಿದ್ದು, 12 ಆರೋಫಿಗಳ ವಿರುದ್ಧ ಎಫ್‌ಐಆರ್‌ ದಾಖಲು ಮಾಡಲಾಗಿದೆ. ಪೊಲೀಸ್‌ ಜೀಪಿನ ಮೇಲೇರಿ ಗಲಭೆಕೋರರಿಗೆ ಪ್ರಚೋದನೆ ನೀಡುತ್ತಿದ್ದ ಎನ್ನಲಾಗುತ್ತಿರುವ ಆರೋಪಿ ವಾಸೀಂ ಪಠಾಣ್‌ನನ್ನು ಈಗಾಗಲೆ ಬಂಧಿಸಿರುವ ಪೊಲೀಸರು, ಮತ್ತೊಬ್ಬ ಪ್ರಮುಖ ಆರೋಪಿ ಮೊಹಮ್ಮದ್‌ ಆರಿಫ್‌ನನ್ನೂ ವಶಕ್ಕೆ ಪಡೆದಿದ್ದಾರೆ.

ಪ್ರಕರಣದಲ್ಲಿ ಬೇಕಾಗಿದ್ದ ಅಬ್ದುಲ್‌ ಮಲ್ಲಿಕ್‌ ಬೇಫಾರಿ ಹಾಗೂ ತೂಫೇಲ್‌ ಮುಲ್ಲಾ ಮೊಬೈಲ್‌ ಲೊಕೇಷನ್‌ಗಳನ್ನು ಹುಬ್ಬಳ್ಳಿ ಪೊಲೀಸರು ಟ್ರ್ಯಾಕ್‌ ಮಾಡುತ್ತಿದ್ದರು. ಇಬ್ಬರು ಆರೋಪಿಗಳೂ ಬೆಂಗಳೂರಿನಲ್ಲಿದ್ದಾರೆ ಎಂದು ತಿಳಿದು ಹಿರಿಯ ಅಧಿಕಾರಿ ಲಾಬೂರಾಮ್‌ ಅವರಿಗೆ ಮಾಹಿತಿ ನೀಡಿದ್ದಾರೆ. ಡಿಸಿಪಿ ಸಂಜೀವ್‌ ಪಾಟೀಲ್‌ ಅವರ ತಂಡ ಕಾಟನ್‌ ಪೇಟೆ ಬಳಿಯ ಹೋಟೆಲ್‌ನಿಂದ ಇಬ್ಬರು ಆರೋಪಿಗಳನ್ನೂ ಬಂಧಿಸಿದ್ದಾರೆ.

ಇದನ್ನೂ ಓದಿ: ಖಡಕ್‌ CM ಅಂದರೆ ಏನು?: ಪ್ರತಿಪಕ್ಷಗಳಿಗೆ ಬಸವರಾಜ ಬೊಮ್ಮಾಯಿ ಪ್ರಶ್ನೆ

ಎಲ್ಲ ಆರೋಪಿಗಳನ್ನೂ ಬಂಧಿಸಬೇಕೆಂಬ ಯೋಜನೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹುಬ್ಬಳ್ಳಿಯ ಕೇಶವಾಪುರ ಜಗದೀಶ್‌ ಅಂಚಿನಾಳ್‌ ಗಲಭೆ ಸಂಬಂಧಿಸಿದ ಆರೋಪಿಗ ಹುಡುಕಾಟದಲ್ಲಿದ್ದರು. ಗಲಭೆ ನಂತರ ಹುಬ್ಬಳ್ಳಿಯಿಂದ ಪರಾರಿಯಾಗಿದ್ದ ಒಟ್ಟು ನಾಲ್ವರು ಆರೋಪಿಗಳು ಹಾವೇರಿಯ ಬಂಕಾಪುರ ಬಸ್ಟಾಪ್‌ನಲ್ಲಿ ಇಳಿದು ಬೇರೆಡೆ ತೆರಳಿದ್ದರು. ಇಬ್ಬರು ಬೇರೆಡೆ ತೆರಳಿದರೆ ಮತ್ತಿಬ್ಬರು ಬೆಂಗಳೂರಿಗೆ ಆಗಮಿಸಿದ್ದರು.

ನಟೋರಿಯಸ್ ರೌಡಿಶೀಟರ್ ಅಬ್ದುಲ್ ಮಲ್ಲಿಕ್ ಬೇಫಾರಿ ಹಾಗೂ ತೂಫೇಲ್‌ ಮುಲ್ಲಾ ಎರಡು ದಿನದ ಹಿಂದೆ ಬೆಂಗಳೂರಿಗೆ ಬಂದಿರುವ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಮಂಗಳವಾರ ಒಂದು ರೂಮ್‌ ಮಾಡಿಕೊಂಡ ಆರೋಪಿಗಳು ಅಂದು ರಾತ್ರಿ ಮತ್ತೊಂದು ರೂಮ್‌ ಪಡೆದಿದ್ದರು. ಬುಧವಾರ ಬೆಳಿಗ್ಗೆ ರಂಜಾನ್‌ಗೆ ಬಟ್ಟೆ ಖರೀದಿ ಮಾಡಿದ್ದರು. ಸಂಜೆ ನಂತರ ತವಕಲ್ ಮಸೀದಿ ಬಳಿ ಇದ್ದ ಲಾಡ್ಜ್‌ನಲ್ಲಿ ರೂಮ್‌ ಪಡೆದಿದ್ದರು. ಅಷ್ಟರಲ್ಲಾಗಲೇ ಸಾಕಷ್ಟು ಬಳಲಿದ್ದ ಆರೋಪಿಗಳು ಹೋಟೆಲ್‌ನಲ್ಲಿ ಊಟಕ್ಕೆ ತೆರಳಿದ್ದರು. ಅಷ್ಟರಲ್ಲಿ ಸ್ಥಳೀಯ ಪೊಲೀಸರು ಆರೋಫಿಗಳ ನಿಖರ ಸ್ಥಳದ ಮಾಹಿತಿ ಪಡೆದು, ಇಬ್ಬರನ್ನೂ ಬಂಧಿಸಿದ್ದಾರೆ.

ಗಲಭೆಗಳ ಕುರಿತು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಶಿವಮೊಗ್ಗ ಹಾಗೂ ಹುಬ್ಬಳ್ಳಿಯಲ್ಲಿ ಪೊಲೀಸ್‌ ಠಾಣೆ ಮೇಲೆ ಹಾಗೂ ಪೊಲೀಸರ ಮೇಲೆ ದಾಳಿ ಮಾಡಲಾಗಿದೆ. ಇದು ಅವರ ದಾರ್ಷ್ಟ್ಯ, ಅಹಂಕಾರವನ್ನು ತೋರಿಸುತ್ತಿದೆ. ನಮ್ಮ ಸಂಖ್ಯೆ ಹೆಚ್ಚಾದರೆ ಪೊಲೀಸರನ್ನೂ ಎದುರಿಸುತ್ತೇವೆ ಎಂಬ ಸಂದೇಶ ನೀಡಲು ಹೊರಟಿದ್ದಾರೆ. ಅಲ್ಪಸಂಖ್ಯಾತರು ಬಹುಸಂಖ್ಯಾತರು ಎನ್ನದೆ ಎಲ್ಲರೂ ಒಟ್ಟಾಗಿ ಬದುಕಬೇಕು ಎನ್ನುವುದು ನಮ್ಮ ಆಶಯ. ಇಂತಹ ಗಲಭೆಗಳಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಖಾಸಗಿ ಹೋಟೆಲ್‌ನಿಂದ ಇಬ್ಬರು ಆರೋಪಿಗಳನ್ನೂ ಪೊಲೀಸರು ಬಂಧಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶ್ರದ್ಧಾಂಜಲಿ

Subramanya Dhareshwar: ಜೇನುದನಿಯ ಗಾನಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಭಾಗವತರ ಅಂತ್ಯಕ್ರಿಯೆ ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ. ಸುಮಾರು 46 ವರ್ಷಗಳ ಕಾಲ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಅವರು, ಪತ್ನಿ, ಪುತ್ರ ಹವ್ಯಾಸಿ ಕಲಾವಿದ ಕಾರ್ತಿಕ್ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

VISTARANEWS.COM


on

Subramanya Dhareshwar
Koo

ಉಡುಪಿ: ʼಗಾನಕೋಗಿಲೆʼ ಎಂದೇ ಅಭಿಮಾನಿಗಳ ಮನದಲ್ಲಿ ನೆಲೆಯೂರಿರುವ, ಯಕ್ಷಗಾನದ (Yakshagana) ಬಡಗುತಿಟ್ಟಿನ ಶ್ರೇಷ್ಠ ಭಾಗವತ (Bhagavatha) ಸುಬ್ರಹ್ಮಣ್ಯ ಧಾರೇಶ್ವರ (Subramanya Dhareshwar) ಇನ್ನಿಲ್ಲ. ಅವರು ತಮ್ಮ 67ನೇ ವಯಸ್ಸಿನಲ್ಲಿ ಬೆಂಗಳೂರಿನ ಮನೆಯಲ್ಲಿ ಏ.25ರಂದು ಬೆಳಗ್ಗೆ ನಿಧನ ಹೊಂದಿದರು.

ಭಾಗವತರ ಅಂತ್ಯಕ್ರಿಯೆ ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ. ಸುಮಾರು 46 ವರ್ಷಗಳ ಕಾಲ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಅವರು, ಪತ್ನಿ, ಪುತ್ರ ಹವ್ಯಾಸಿ ಕಲಾವಿದ ಕಾರ್ತಿಕ್ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

1957ರ ಸೆ.5ರಂದು ಜನಿಸಿದ ಅವರನ್ನು ಯಕ್ಷರಂಗದ ತಜ್ಞ ಭಾಗವತರೆಂದೇ ಗುರುತಿಸಲಾಗುತ್ತಿತ್ತು. ಯಕ್ಷಗಾನದ ಹೊಸ ಹಾಗೂ ಹಳೆಯ ಪ್ರಸಂಗಗಳ ಪರಿಣಿತರಾಗಿದ್ದರು. ಕೋಟ ಅಮೃತೇಶ್ವರಿ ಮೇಳ, ಪೆರ್ಡೂರು ಮೇಳಗಳಲ್ಲಿ ಭಾಗವತರಾಗಿ, ಹೊಸರಾಗಗಳನ್ನು ಹೊಸ ತಾಂತ್ರಿಕತೆಯನ್ನು ಯಕ್ಷರಂಗದಲ್ಲಿ ಯಶಸ್ವಿಯಾಗಿ ಬಳಸಿದರು. ಸುಮಾರು 400ಕ್ಕಿಂತಲೂ ಅಧಿಕ ಯಕ್ಷಗಾನದ ಆಡಿಯೋ ಕ್ಯಾಸೆಟ್ ಗಳಲ್ಲಿ ಧಾರೇಶ್ವರರ ಧ್ವನಿ ಇದೆ.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಹಿತ ಹಲವಾರು ಪ್ರಶಸ್ತಿ, ಸನ್ಮಾನಗಳಿಗೆ ಪಾತ್ರರಾಗಿರುವ ಧಾರೇಶ್ವರ ಅವರು ಗುರುಗಳಾದ ನಾರಾಯಣಪ್ಪ ಉಪ್ಪೂರರನ್ನು ಸದಾ ಸ್ಮರಿಸುತ್ತಿದ್ದರು. ಸಾಂಪ್ರದಾಯಿಕ ರಾಗಗಳೊಂದಿಗೆ ಹೊಸ ರಾಗಗಳನ್ನು ತಂದು ಪೌರಾಣಿಕ ಹಾಗೂ ಸಾಮಾಜಿಕ ಪ್ರಸಂಗಗಳನ್ನು ಚೆನ್ನಾಗಿ ನಿರ್ವಹಿಸುತ್ತಿದ್ದ ಸುಬ್ರಹ್ಮಣ್ಯ ಧಾರೇಶ್ವರರು, ಕಾಳಿಂಗ ನಾವಡರರ ನಂತರ ಯಕ್ಷಗಾನ ರಂಗದಲ್ಲಿ ತನ್ನ ಇಂಪಾದ ಕಂಠದಿಂದ ಜನಪ್ರಿಯರಾದವರು.

ಮೂಲತಃ ಎಲೆಕ್ಟ್ರಿಕಲ್ ಅಂಗಡಿ ಮಾಡಿಕೊಂಡಿದ್ದ ಸುಬ್ರಹ್ಮಣ್ಯ ಧಾರೇಶ್ವರ ಕೋಟದಲ್ಲಿ ಯಕ್ಷಗಾನ ಕೇಂದ್ರಕ್ಕೆ ಸೇರಿ ಅಲ್ಲಿ ಭಾಗವತಿಕೆಯ ಮಟ್ಟುಗಳನ್ನು ಕಲಿತರು. ಉಪ್ಪೂರರಿಂದ ಭಾಗವತಿಕೆಯ ಎಲ್ಲ ಪಟ್ಟುಗಳನ್ನು ಕಲಿತರು. ಆರಂಭದಲ್ಲಿ ಎಲೆಕ್ಟ್ರಿಶಿಯನ್ ಆಗಿ ಅಮೃತೇಶ್ವರಿ ಮೇಳಕ್ಕೆ ಸೇರಿದರು. ಈ ಸಂದರ್ಭ ಗುರುಗಳಾದ ಉಪ್ಪೂರರ ಒತ್ತಾಸೆಯಿಂದ ಭಾಗವತಿಕೆ ಮಾಡಲು ಆರಂಭಿಸಿದರು. ಪೀಠಿಕೆ ಸ್ತ್ರೀವೇಷದವರೆಗೆ ಪದ್ಯ ಹೇಳಿ, ಎಲೆಕ್ಟ್ರಿಶಿಯನ್ ಆಗಿ, ಹಗಲು ಮೈಕ್ ಜಾಹೀರಾತು ನೀಡುವ ಕೆಲಸವನ್ನು ಮಾಡುತ್ತಿದ್ದ ಧಾರೇಶ್ವರರು, ಬಳಿಕ ಭಾಗವತಿಕೆಯಲ್ಲೇ ತೊಡಗಿಸಿಕೊಂಡು ಜನಪ್ರಿಯರಾದರು. ಪೆರ್ಡೂರು ಮೇಳದಲ್ಲಿ ಸುಮಾರು 26ಕ್ಕೂ ಅಧಿಕ ವರ್ಷಗಳ ತಿರುಗಾಟ ಸಹಿತ ಧಾರೇಶ್ವರ ಚಾರಿಟೇಬಲ್ ಟ್ರಸ್ಟ್ ಮೂಲಕ ಯಕ್ಷಗಾನ ಸೇವೆ ಮಾಡಿದ್ದಾರೆ.

ಸುಮಾರು 300ಕ್ಕೂ ಅಧಿಕ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಪ್ರಸಂಗಗಳನ್ನು ನಿರ್ದೇಶಿಸಿದ ಕೀರ್ತಿ ಧಾರೇಶ್ವರ ಅವರಿಗಿದೆ. ಪುರಂದರದಾಸ, ಕನಕದಾಸ, ಬಸವಣ್ಣ, ಚೆನ್ನಮಲ್ಲಿಕಾರ್ಜುನರ ಕೀರ್ತನೆಗಳನ್ನೂ ಅವರು ಹಾಡಿದ್ದಾರೆ. ಕುವೆಂಪು, ಬೇಂದ್ರೆಯವರ ಹಾಡುಗಳೂ ಯಕ್ಷಗಾನದ ಹಾಡುಗಳಾಗಿದ್ದು ಧಾರೇಶ್ವರರ ಕಂಠದಲ್ಲಿ. ಅಮೃತ ವರ್ಷಿಣಿ, ಸಿಂಧೂರ ಭಾಗ್ಯ, ರಕ್ತ ತಿಲಕ, ಶೂದ್ರ ತಪಸ್ವಿನಿ, ಚಾರು ಚಂದ್ರಿಕೆ, ಗಗನ ಗಾಮಿನಿ, ವಸಂತ ಸೇನೆ ನಿರ್ದೇಶಿಸಿದ ಎಲ್ಲ ಪ್ರಸಂಗಗಳೂ ಸೂಪರ್ ಹಿಟ್ ಆಗಿವೆ.

ಇದನ್ನೂ ಓದಿ: Hariprakash Konemane: ಯಕ್ಷಗಾನ ಅಕಾಡೆಮಿಯಲ್ಲಿ ಉತ್ತರ ಕನ್ನಡ ಕಡೆಗಣನೆ; ಹರಿಪ್ರಕಾಶ್‌ ಕೋಣೆಮನೆ ಖಂಡನೆ

Continue Reading

Lok Sabha Election 2024

Lok Sabha Election 2024: ಏಪ್ರಿಲ್‌ 26ಕ್ಕೆ ಮೊದಲ ಹಂತದ ಮತದಾನ; ಸಾರ್ವತ್ರಿಕ ರಜೆ ಘೋಷಿಸಿದ ರಾಜ್ಯ ಸರ್ಕಾರ

Lok Sabha Election 2024: ಅರ್ಹ ಮತದಾರರಾಗಿರುವ ಎಲ್ಲ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳು 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ಪ್ರಕಾರ ಮತ ಚಲಾಯಿಸಲು ಅವಕಾಶ ಮಾಡಿ ಕೊಡಬೇಕಾಗುತ್ತದೆ. ಆದ್ದರಿಂದ, ಮತದಾನ ನಡೆಯಲಿರುವ ಕ್ಷೇತ್ರದಲ್ಲಿ ಅರ್ಹರಿರುವ ಎಲ್ಲ ಕಾರ್ಮಿಕ ಮತದಾರರಿಗೆ ಏಪ್ರಿಲ್‌ 26ರಂದು ವೇತನ ಸಹಿತ ರಜೆ ನೀಡಿ, ಎಲ್ಲ ಅರ್ಹ ಕಾರ್ಮಿಕರು ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುವು ಮಾಡಿಕೊಡಲು ಸೂಚಿಸಲಾಗಿದೆ.

VISTARANEWS.COM


on

Lok Sabha Election 2024 General holiday for first phase of polling on April 26
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಮತದಾನ (Voting in Karnataka) ನಡೆಯಲಿದೆ. ಅಂದು ಎಲ್ಲ ಕಾರ್ಮಿಕರು, ಅರ್ಹ ಮತದಾರರು (Labour Voters) ಮತದಾನ ಮಾಡುವ ಸಲುವಾಗಿ ಸಾರ್ವತ್ರಿಕ ರಜೆ (General holiday for voting) ಘೋಷಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ.

ಈ ಬಗ್ಗೆ ಕಾರ್ಮಿಕ ಆಯುಕ್ತರು ಆದೇಶವನ್ನು ಹೊರಡಿಸಿದ್ದು, ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆ ದಿನಾಂಕವನ್ನು 2024ರ ಮಾರ್ಚ್‌ 16ರಂದು ಘೋಷಿಸಿದ್ದು, ಅದರಂತೆ ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗದಿಯಾಗಿರುತ್ತದೆ. ಏಪ್ರಿಲ್‌ 26ರ ಶುಕ್ರವಾರ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಹಾಗೂ ಮೇ 07ರ ಮಂಗಳವಾರ ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಕಾರ್ಮಿಕರು ಸಹ ಮತದಾನ ಮಾಡಬೇಕಿದೆ. ಹಾಗಾಗಿ ಅಂದು ಕಾರ್ಮಿಕರಿಗೆ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಆದೇಶದಲ್ಲೇನಿದೆ?

ಸದರಿ ದಿನಾಂಕದಂದು ಮತದಾನ ನಡೆಯಲಿರುವ ಕ್ಷೇತ್ರದ ವ್ಯಾಪ್ತಿಯಲ್ಲಿ ನೋಂದಾಯಿತರಾದ ಅರ್ಹ ಮತದಾರರಾಗಿರುವ ಎಲ್ಲ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳು 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ಪ್ರಕಾರ ಮತ ಚಲಾಯಿಸಲು ಅವಕಾಶ ಮಾಡಿ ಕೊಡಬೇಕಾಗುತ್ತದೆ. ಆದ್ದರಿಂದ, ಮತದಾನ ನಡೆಯಲಿರುವ ಕ್ಷೇತ್ರದಲ್ಲಿ ಅರ್ಹರಿರುವ ಎಲ್ಲ ಕಾರ್ಮಿಕ ಮತದಾರರಿಗೆ ಏಪ್ರಿಲ್‌ 26ರಂದು ವೇತನ ಸಹಿತ ರಜೆ ನೀಡಿ, ಎಲ್ಲ ಅರ್ಹ ಕಾರ್ಮಿಕರು ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುವು ಮಾಡಿಕೊಡಲು ಸೂಚಿಸಲಾಗಿದೆ.

ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

ವಿದ್ಯುನ್ಮಾನ ಮತಯಂತ್ರಗಳ (EVM- ಇವಿಎಂ) ಕುರಿತು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಕಾನೂನು ಹೋರಾಟದ ನಡುವೆಯೇ ಲೋಕಸಭೆ ಚುನಾವಣೆ (Lok Sabha Election 2024) ಮೊದಲ ಹಂತದ ಮತದಾನ (1st phase Voting) ನಡೆಯುತ್ತಿದೆ. ಇವಿಎಂಗಳಲ್ಲಿ ಚಲಾವಣೆಯಾದ 100% ಮತಗಳನ್ನೂ ವಿವಿಪ್ಯಾಟ್ (VVPAT) ವ್ಯವಸ್ಥೆಯ ಮೂಲಕ ಪರಿಶೀಲಿಸುವ ವ್ಯವಸ್ಥೆ ಜಾರಿ ಮಾಡಬೇಕು (VVPAT Verification) ಎಂದು ಅರ್ಜಿದಾರರು ಕೋರಿದ್ದಾರೆ. ಈ ಸಂದರ್ಭದಲ್ಲಿ, ಇವಿಎಂ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ, ವಿವಿಪ್ಯಾಟ್‌ ಮೂಲಕ ಅದರ ಪರಿಶೀಲನೆ ಹೇಗೆ, ಎಂಬುದನ್ನು ವಿವರವಾಗಿ ತಿಳಿಯೋಣ.

ಕೋರ್ಟ್‌ನಲ್ಲಿ ನಡೆಸದ ವಾದವಿವಾದಗಳ ಸಮಯದಲ್ಲಿ, ಬ್ಯಾಲೆಟ್ ವೋಟಿಂಗ್ ಸಿಸ್ಟಮ್‌ಗೆ ಹಿಂತಿರುಗಲು ಸಲಹೆಗಳು ಬಂದಿವೆ. ಅರ್ಜಿದಾರರು ಯುರೋಪಿಯನ್ ರಾಷ್ಟ್ರಗಳ ಉದಾಹರಣೆ ತೋರಿಸಿದ್ದಾರೆ. ಆದರೆ, “ಪಶ್ಚಿಮ ಬಂಗಾಳದ ಜನಸಂಖ್ಯೆಯೇ ಜರ್ಮನಿಗಿಂತ ಹೆಚ್ಚಿರುವುದನ್ನು ಗಮನಿಸಿ. ಇಂತಹ ಹೋಲಿಕೆಗಳನ್ನು ಮಾಡಬೇಡಿ” ಎಂದು ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ. ನಿನ್ನೆ, ಭಾರತೀಯ ಚುನಾವಣಾ ಆಯೋಗದ ವಕೀಲರು ಇವಿಎಂ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ರೀತಿಯ ಟ್ಯಾಂಪರಿಂಗ್ ವಿರುದ್ಧ ಹೇಗೆ ದೋಷರಹಿತವಾಗಿದೆ ಎಂಬುದನ್ನು ವಿವರಿಸಿದರು.

ಇವಿಎಂ ಕೆಲಸ ಮಾಡುವುದು ಹೇಗೆ?

EVM ಎರಡು ಘಟಕಗಳನ್ನು ಹೊಂದಿದೆ- ನಿಯಂತ್ರಣ ಘಟಕ ಮತ್ತು ಮತದಾನ ಘಟಕ. ಇವುಗಳನ್ನು ಕೇಬಲ್ ಮೂಲಕ ಸಂಪರ್ಕಿಸಲಾಗಿದೆ. ಇವಿಎಂ ನಿಯಂತ್ರಣ ಘಟಕವು ಪೋಲಿಂಗ್ ಆಫೀಸರ್‌ ಬಳಿ ಇರುತ್ತದೆ. ಮತಯಂತ್ರ ಸಾಮಾನ್ಯವಾಗಿ ಮತದಾರನ ಖಾಸಗಿತನಕ್ಕಾಗಿ ಮುಚ್ಚಿದ ಆವರಣದೊಳಗೆ ಇರುತ್ತದೆ.

ಮತಗಟ್ಟೆಯಲ್ಲಿ, ಮತಗಟ್ಟೆ ಅಧಿಕಾರಿಯು ನಿಮ್ಮ ಗುರುತನ್ನು ಪರಿಶೀಲಿಸುತ್ತಾರೆ. ನಂತರ ನೀವು ಮತ ​​ಚಲಾಯಿಸಲು ಅನುವು ಮಾಡಿಕೊಡುವ ಬ್ಯಾಲೆಟ್ ಬಟನ್ ಅನ್ನು ಒತ್ತುತ್ತಾರೆ. ಬ್ಯಾಲೆಟ್ ಯೂನಿಟ್‌ನಲ್ಲಿ ಅಭ್ಯರ್ಥಿಗಳ ಹೆಸರುಗಳು ಮತ್ತು ಚಿಹ್ನೆಗಳು ಅವುಗಳ ಪಕ್ಕದಲ್ಲಿ ನೀಲಿ ಬಟನ್‌ಗಳಿರುತ್ತವೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತಬೇಕು.

ಮತದಾನ ಪ್ರಕ್ರಿಯೆ

ಮತಗಟ್ಟೆ ಅಧಿಕಾರಿಯ ನಿಯಂತ್ರಣ ಘಟಕವು ಬಹು ಬಟನ್‌ಗಳನ್ನು ಹೊಂದಿದೆ. ಅವುಗಳಲ್ಲಿ ಒಂದು ʼballot’ ಎಂಬ ಶೀರ್ಷಿಕೆಯಿದು. ಒಮ್ಮೆ ಅಧಿಕಾರಿಯು ಈ ಗುಂಡಿಯನ್ನು ಒತ್ತಿದರೆ, ʼಬ್ಯುಸಿ’ ಎಂಬ ಶೀರ್ಷಿಕೆಯ ಕೆಂಪು ದೀಪವು ಬೆಳಗುತ್ತದೆ. ಒಂದು ಮತವನ್ನು ದಾಖಲಿಸಲು ನಿಯಂತ್ರಣ ಘಟಕ ಸಿದ್ಧವಾಗಿದೆ ಎಂದು ಇದು ಸೂಚಿಸುತ್ತದೆ. ಮತದಾರ ಇರುವ ಬ್ಯಾಲೆಟ್ ಯೂನಿಟ್‌ನಲ್ಲಿ ಹಸಿರು ದೀಪ ಆನ್ ಆಗಿದ್ದು, ಮತದಾನಕ್ಕೆ ಯಂತ್ರ ಸಿದ್ಧವಾಗಿದೆ ಎಂದು ಸಂಕೇತಿಸುತ್ತದೆ. ನಂತರ ಮತದಾರನು ತನ್ನ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತುತ್ತಾನೆ. ಬ್ಯಾಲೆಟ್ ಯೂನಿಟ್ ದೃಷ್ಟಿಹೀನ ಮತದಾರರಿಗೆ ಬ್ರೈಲ್ ಲಿಪಿಯನ್ನು ಸಹ ಹೊಂದಿದೆ.

ಮತದಾರರು ಮತದಾನ ಮಾಡಿದ ನಂತರ, ನಿಯಂತ್ರಣ ಘಟಕವು ಬೀಪ್ ಧ್ವನಿಯನ್ನು ಹೊರಸೂಸುತ್ತದೆ. ಇದು ಮತದಾನ ಪೂರ್ಣಗೊಂಡಿದೆ ಎಂದು ಸೂಚಿಸುತ್ತದೆ. ನಿಯಂತ್ರಣ ಘಟಕವು ಎಲ್‌ಇಡಿ ಪರದೆ ಮತ್ತು ಬಟನ್‌ಗಳನ್ನು ಹೊಂದಿದ್ದು, ಅದರಲ್ಲಿ ದಾಖಲಾಗಿರುವ ಒಟ್ಟು ಮತಗಳ ಸಂಖ್ಯೆಯನ್ನು ನೋಡಲು ಬಳಸಬಹುದು. ಎಲ್ಲಾ ಮತಗಳು ದಾಖಲಾದ ನಂತರ, ಮತಗಟ್ಟೆ ಅಧಿಕಾರಿಯು ನಿಯಂತ್ರಣ ಘಟಕದ ಬದಿಯಲ್ಲಿರುವ ಗುಂಡಿಯನ್ನು ಒತ್ತಿ, ಯಂತ್ರವನ್ನು ಮುಚ್ಚುತ್ತಾರೆ. ಎಣಿಕೆಯ ದಿನದಂದು, ಪ್ರತಿ ಅಭ್ಯರ್ಥಿ ಪಡೆದ ಒಟ್ಟು ಮತಗಳನ್ನು ನೋಡಲು ʼresult’ ಶೀರ್ಷಿಕೆಯ ಬಟನ್ ಅನ್ನು ಬಳಸಲಾಗುತ್ತದೆ. ನಿಯಂತ್ರಣ ಘಟಕದಿಂದ ಎಲ್ಲಾ ಡೇಟಾವನ್ನು ಅಳಿಸಲು ಬಳಸಬಹುದಾದ ʼclear’ ಬಟನ್ ಕೂಡ ಇದೆ.

VVPAT ಎಂದರೇನು?

VVPAT ಎಂದರೆ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್. ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಮತ್ತು ಮತದಾರ ಚಲಾಯಿಸಿದ ಅಭ್ಯರ್ಥಿಗೇ ಆ ಮತ ಹೋಗಿದೆಯೇ ಎಂದು ನೋಡಲು ಅವಕಾಶವಿರುವ ಯಂತ್ರ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒಮ್ಮೆ ಒತ್ತಿದರೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‌ಗೆ ಸಂಪರ್ಕಗೊಂಡಿರುವ VVPAT, ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುವ ಕಾಗದದ ಸ್ಲಿಪ್ ಅನ್ನು ಉತ್ಪಾದಿಸುತ್ತದೆ. ಅದರ ನಂತರ, ಪೇಪರ್ ಸ್ಲಿಪ್ VVPAT ಯಂತ್ರದಲ್ಲಿರುವ ಡ್ರಾಪ್ ಬಾಕ್ಸ್‌ಗೆ ಬೀಳುತ್ತದೆ.

ಪ್ರಸ್ತುತ, ಪ್ರತಿ ಅಸೆಂಬ್ಲಿ ವಿಭಾಗದಲ್ಲಿಯೂ 5 ವಿವಿಪ್ಯಾಟ್ ಯಂತ್ರಗಳಲ್ಲಿ ದಾಖಲಾದ ಮತಗಳನ್ನು ಇವಿಎಂಗಳೊಂದಿಗೆ ಕ್ರಾಸ್-ಚೆಕ್ ಮಾಡಲಾಗುತ್ತದೆ. 100 ಶೇಕಡ ಇವಿಎಂಗಳಲ್ಲಿ ದಾಖಲಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಕ್ರಾಸ್ ಚೆಕ್ ಮಾಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಬಯಸಿವೆ. ವಿವಿಪ್ಯಾಟ್‌ನಲ್ಲಿ ಏಳು ಸೆಕೆಂಡ್ ಲೈಟ್ ಆನ್ ಆಗಿದ್ದು, ಮತದಾರರು ತಮ್ಮ ಮತವನ್ನು ಸರಿಯಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಬಹುದು ಎಂದು ಅರ್ಜಿದಾರರು ಕೋರಿದ್ದಾರೆ. ಪೇಪರ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಸಲಹೆಯಾಗಿದೆ. ಚುನಾವಣಾ ಆಯೋಗ ಇದನ್ನು ವಿರೋಧಿಸಿದೆ. ಇದು ಮತದಾನದ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ದುರ್ಬಳಕೆಯಾಗಬಹುದು ಎಂದು ಹೇಳಿದೆ.

ಇದನ್ನೂ ಓದಿ: VVPAT Verification: ಇವಿಎಂ-ವಿವಿಪ್ಯಾಟ್‌ ತಾಳೆಯ ಪ್ರಕ್ರಿಯೆ ತಿಳಿಸಿ; ಆಯೋಗಕ್ಕೆ ಸುಪ್ರೀಂ ಸೂಚನೆ

ಸಮಯ ಉಳಿಕೆ

ಚುನಾವಣಾ ಆಯೋಗದ ಪ್ರಕಾರ ಇವಿಎಂ ವ್ಯವಸ್ಥೆ ಫೂಲ್ ಪ್ರೂಫ್ ಆಗಿದೆ. ಇದು ಮತ ಎಣಿಕೆ ಸಮಯವನ್ನು ಉಳಿಸುತ್ತದೆ, ಟ್ಯಾಂಪರ್ ಪ್ರೂಫ್ ಮತ್ತು ಬಳಕೆದಾರ ಸ್ನೇಹಿಯಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಇವಿಎಂಗಳು ಹಗುರವಾಗಿವೆ ಮತ್ತು ಸದೃಢವಾಗಿವೆ- ಮತಗಟ್ಟೆ ಅಧಿಕಾರಿಗಳು ದೂರದ ಕುಗ್ರಾಮಗಳು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು ಟ್ರೆಕ್ಕಿಂಗ್‌ ಮಾಡಬೇಕಾದ ದೇಶದಲ್ಲಿ ಇದು ನಿರ್ಣಾಯಕವಾಗಿದೆ.

ಎಲ್ಲರ ಸಮ್ಮುಖದಲ್ಲಿ ಪರಿಶೀಲನೆ

ಇವಿಎಂಗಳಿಗೆ ವಿದ್ಯುತ್ ಅಗತ್ಯವಿಲ್ಲ ಮತ್ತು ಬ್ಯಾಟರಿ/ಪವರ್ ಪ್ಯಾಕ್‌ ಇದರೊಂದಿಗೆ ಬರುತ್ತದೆ. ಸ್ಥಿರವಾದ ವಿದ್ಯುತ್ ಸರಬರಾಜನ್ನು ಹೊಂದಿರದ ಪ್ರದೇಶಗಳಲ್ಲಿ ಮತದಾನವನ್ನು ಸಕ್ರಿಯಗೊಳಿಸಲು ಇದು ಮತ್ತೊಂದು ನಿರ್ಣಾಯಕ ವೈಶಿಷ್ಟ್ಯ. ಪ್ರತಿ ಚುನಾವಣೆಗೂ ಮುನ್ನ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೊದಲ ಹಂತದ ತಪಾಸಣೆ (ಎಫ್‌ಎಲ್‌ಸಿ) ನಡೆಸಲಾಗುತ್ತದೆ. ಈ ಪರಿಶೀಲನೆಯ ಸಮಯದಲ್ಲಿ, ಇವಿಎಂಗಳಲ್ಲಿನ ಡೇಟಾವನ್ನು ಅಳಿಸಲಾಗುತ್ತದೆ ಮತ್ತು ವಿವಿಧ ಘಟಕಗಳ ಕಾರ್ಯವನ್ನು ಪ್ರದರ್ಶಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಸಲಾಗುತ್ತದೆ.

Continue Reading

ಮಳೆ

Karnataka Weather : ಸುಳಿಗಾಳಿ ಪ್ರಭಾವ; ರಭಸ ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಎಚ್ಚರಿಕೆ

Karnataka Weather Forecast : ಸುಳಿಗಾಳಿ ಪ್ರಭಾವದಿಂದಾಗಿ ಹಲವೆಡೆ ವ್ಯಾಪಕ ಮಳೆಯಾಗುವ (Rain News) ಸಾಧ್ಯತೆ ಇದೆ. ಕೆಲವೆಡೆ ರಭಸವಾಗಿ ಗಾಳಿ ಬೀಸಲಿದೆ. ಗುಡುಗು, ಮಿಂಚಿನ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮಧ್ಯ‌ ಮಹಾರಾಷ್ಟ್ರದಿಂದ ಕರ್ನಾಟಕ ಸೇರಿ ಕೇರಳದವರೆಗೆ ಸುಳಿಗಾಳಿಯ ಚಲನೆಯಿಂದ ಹವಾಮಾನದಲ್ಲಿ ವೈಪರಿತ್ಯ ಉಂಟಾಗಿದೆ. ಇದರ ಪ್ರಭಾವದಿಂದಾಗಿ ಇನ್ನೆರಡು ದಿನಗಳು ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ. ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ (Rain News) ಇದ್ದು, ಗಾಳಿ ವೇಗವು 30-40 ಕಿ.ಮೀ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲೂ ಗುಡುಗುನೊಂದಿಗೆ ಮಳೆ ಸಾಧ್ಯತೆ ಇದೆ. ಉಡುಪಿ ಜಿಲ್ಲೆಯ ಶುಷ್ಕ ಹವಾಮಾನ ಇರಲಿದೆ.

ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣಹವೆ ಮೇಲುಗೈ ಸಾಧಿಸಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಶುಷ್ಕ ವಾತಾವರಣ ಮುಂದುವರಿಯಲಿದೆ. ಉತ್ತರ ಒಳನಾಡಿನ ಹಾವೇರಿ, ಬೆಳಗಾವಿ, ಧಾರವಾಡ, ವಿಜಯಪುರ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಉಳಿದೆಡೆ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Murder Case : ಒಂಟಿ ಮಹಿಳೆ ಕೊಲೆ ಕೇಸ್‌; ಅತಿಯಾದ ಸೆಕ್ಸ್‌ಗೆ ಒತ್ತಾಯಿಸಿದವಳನ್ನು ಬೆಡ್‌ ರೂಂನಲ್ಲೇ ಕೊಂದ ಯುವಕ

ಆರೆಂಜ್ ಮತ್ತು ಯೆಲ್ಲೋ ಅಲರ್ಟ್

ಕೆಲವೆಡೆ ಮಳೆ ನಡುವೆಯು ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ನೀಡಿದೆ. ಈ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಆಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ನೀಡಿದೆ. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಬುಧವಾರ ಬೆಳಗ್ಗೆವರೆಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ನಾಲ್ಕು ದಿನಗಳಿಗೆ ಹೀಟ್‌ ವೇವ್‌ ಅಲರ್ಟ್‌

ಮೊದಲ ದಿನ 24ರಂದು ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

25ರಂದು ರಾಯಚೂರು,ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಗದಗ, ದಾವಣಗೆರೆ ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

26ರಂದು ರಾಯಚೂರು,ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಗದಗ, ದಾವಣಗೆರೆ ತುಮಕೂರು ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

27ರಂದು ರಾಯಚೂರು,ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಗದಗ, ದಾವಣಗೆರೆ ತುಮಕೂರು ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

ಬಿಸಿ ಮತ್ತು ಆರ್ದ್ರತೆ

ಏಪ್ರಿಲ್ 24 ರಿಂದ 27 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬಿರುಗಾಳಿ ಮಳೆಗೆ ಜನರು ತತ್ತರ; ಸಿಡಿಲಿಗೆ ಎತ್ತುಗಳು ಬಲಿ, ನೆಲಕಚ್ಚಿದ ಬೆಳೆಗಳು

Karnataka Weather Forecast : ಬಿರುಗಾಳಿ ಸಹಿತ ಸುರಿದ ಮಳೆಗೆ (Rain News) ಬೀದರ್‌, ವಿಜಯನಗರ, ದಾವಣಗೆರೆ ರೈತರು ತತ್ತರಿಸಿ ಹೋಗಿದ್ದಾರೆ. ಸಾಲಸೋಲ ಮಾಡಿ ಖರೀದಿಸಿದ್ದ ಎತ್ತುಗಳು ಸಿಡಿಲಿಗೆ ಬಲಿಯಾದರೆ, ನೀರಿಲ್ಲದಿದ್ದರೂ ಟ್ಯಾಂಕರ್‌ ಮೂಲಕ ಕಷ್ಟ ಪಟ್ಟು ಬೆಳೆದಿದ್ದ ಬೆಳೆಯು ನೆಲಕಚ್ಚಿದೆ. ಸದ್ಯ ಬುಧವಾರದಂದು ಎಲ್ಲೆಲ್ಲಿ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಅಬ್ಬರಕ್ಕೆ ಜನ-ಜೀವನ ಅಸ್ತವ್ಯಸ್ತವಾಗಿದೆ. ಮುಂದಿನ 24 ಗಂಟೆಯಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ (Rain News) ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಮಧ್ಯ‌ ಮಹಾರಾಷ್ಟ್ರದಿಂದ ಕರ್ನಾಟಕ ಸೇರಿ ಕೇರಳದವರೆಗೆ ಸುಳಿಗಾಳಿಯ ಚಲನೆಯಿಂದ ಹವಾಮಾನದಲ್ಲಿ ವೈಪರಿತ್ಯ ಉಂಟಾಗಿದೆ. ಇದರ ಪ್ರಭಾವದಿಂದಾಗಿ ಇನ್ನೆರಡು ದಿನಗಳು ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ.

ಪ್ರಮುಖವಾಗಿ ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಬಾಗಲಕೋಟೆ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಸೇರಿ ದಕ್ಷಿಣ ಒಳನಾಡಿನ ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗಲಿದೆ. ಇನ್ನೂ 30-40 ಕಿಮೀ ವೇಗದಲ್ಲಿ ಬಿರುಸಿನ ಗಾಳಿ ಬೀಸಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಇದನ್ನೂ ಓದಿ:Murder Case : ಕೊಲೆಯಾದ ಮಹಿಳೆಗೆ 20 ಹುಡುಗರ ಸಹವಾಸ! ಅವರಿಗೆ ಆಕೆ ಇಟ್ಟಿದ್ದ ಹೆಸರು ಆರೆಂಜ್, ಆ್ಯಪಲ್, ಬನಾನಾ ಇತ್ಯಾದಿ!

ಸಿಡಿಲಿಗೆ ಎತ್ತುಗಳು ಬಲಿ

ಬೀದರ್‌ನ ಔರಾದ್ ತಾಲೂಕಿನ ಕೊಳ್ಳೂರ ಗ್ರಾಮದಲ್ಲಿ ಸಿಡಿಲು ಬಡಿದು 2 ಎತ್ತುಗಳು ಮೃತಪಟ್ಟಿರುವ ಘಟನೆ ನಡೆದಿದೆ. ಸೋಮವಾರ ತಡರಾತ್ರಿಯಲ್ಲಿ ಭಾರಿ ಮಳೆಯೊಂದಿಗೆ ಸಿಡಿಲು ಬಡಿದಿದೆ. ಪರಿಣಾಮ ಸಾಗರ ಬಸವರಾಜ ಪಾಟೀಲ ಎಂಬುವವರಿಗೆ ಸೇರಿದ ಎತ್ತುಗಳು ಮೃತಪಟ್ಟಿವೆ.

ವಿಜಯನಗರದಲ್ಲಿ ಗಾಳಿ-ಮಳೆಗೆ ಹಾರಿದ ಶಾಮಿಯಾನ

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಸೀತಾರಾಮ್ ತಾಂಡಾದ ಗ್ರಾಮದ ಬಳಿಯ ಆಂಜನೇಯ ದೇಗುಲದಲ್ಲಿ ಹನುಮ ಜಯಂತಿ ನಿಮಿತ್ತ ಶಾಮಿಯಾನ, ಲೈಟಿಂಗ್ ಹಾಕಲಾಗಿತ್ತು. ಆದರೆ ಜೋರಾಗಿ ಬೀಸಿದ ಗಾಳಿ, ಮಳೆಗೆ ಶಾಮಿಯಾನ, ಲೈಟಿಂಗ್ಸ್‌ ಹಾರಿ ಹೋಗಿತ್ತು. ಇದರಿಂದಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿತ್ತು.

ತಡರಾತ್ರಿ ಬಿರುಗಾಳಿ ಸಹಿತ ಮಳೆಗೆ ಹತ್ತಾರು ಎಕರೆ ಪಪ್ಪಾಯಿ ಬೆಳೆ ನೆಲಕ್ಕೆ ಉರುಳಿದೆ. ಹಗರಿಬೊಮ್ಮನಹಳ್ಳಿ ತಾಲೂಕಿನ ವಟ್ಟಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ವಟ್ಟಮ್ಮನಹಳ್ಳಿ ಗ್ರಾಮದ ಮೂಗಪ್ಪ ಎಂಬುವರಿಗೆ ಸೇರಿದ 5 ಎಕರೆ ಪಪ್ಪಾಯಿ ಬೆಳೆ ಹಾಳಾಗಿದೆ. ಇದರಿಂದ ಅಂದಾಜು 5 ರಿಂದ 7 ಲಕ್ಷ ರೂಪಾಯಿ ಬೆಲೆ ಬಾಳುವ ಪಪ್ಪಾಯಿ ಬೆಳೆಗೆ ಹಾನಿಯಾಗಿದೆ. ಇದೇ ಗ್ರಾಮದ ಪತ್ರಿಗೌಡ ಹೊನ್ನೆಹಳ್ಳಿ ಎನ್ನುವವರ 3 ಎಕರೆ, ಕುಸುಮ ಅವರ 4 ಎಕರೆ ಪಪ್ಪಾಯಿ ಬೆಳೆ ನಷ್ಟವಾಗಿದೆ. ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೂಕ್ತ ಪರಿಹಾರಕ್ಕೆ ರೈತರು ಆಗ್ರಹಿಸಿದ್ದಾರೆ.

ದಾವಣಗೆರೆಯಲ್ಲಿ ಬಾಳೆ ಬೆಳೆ ನಾಶ

ಸೋಮವಾರ ಸಂಜೆ ಸುರಿದ ಗಾಳಿ ಮಳೆಗೆ ಅಪಾರ ಪ್ರಮಾಣದ ಬಾಳೆ ಬೆಳೆ ನಾಶವಾಗಿವೆ. ದಾವಣಗೆರೆಯ ಜಗಳೂರು ತಾಲೂಕಿನ ಕಟ್ಟಿಗೆಹಳ್ಳಿ, ಜಮ್ಮಪುರ, ಹರಿಶಿನಗುಂಡಿ ಸೇರಿದಂತೆ ಹಲವು ಕಡೆ ಬೆಳೆ ನಾಶವಾಗಿದೆ. ಕಟ್ಟಿಗೆಹಳ್ಳಿ ಗ್ರಾಮದ ಸಿದ್ದಮ್ಮ, ಬಸವರಾಜಪ್ಪ ಎಂಬುವರಿಗೆ ಸೇರಿದ 20 ಎಕರೆ ಬಾಳೆ ತೋಟ ನೆಲಕಚ್ಚಿದೆ. ಬರಗಾಲದಲ್ಲಿ ಟ್ಯಾಂಕರ್ ನೀರು ಖರೀದಿ ಮಾಡಿ ಬಾಳೆ ಬೆಳೆಸಿದ್ದರು. ಆದರೆ ಗಾಳಿ ಮಳೆಗೆ ಬಾಳೆಯು ನೆಲಸಮವಾಗಿದೆ. ಕೂಡಲೇ ಹಾನಿಗೊಂಡ ಬೆಳೆಗೆ ಸರ್ಕಾರ ಪರಿಹಾರ ‌ನೀಡುವಂತೆ ಒತ್ತಾಯಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Neha Murder Case in hubblli
ಹುಬ್ಬಳ್ಳಿ9 mins ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ16 mins ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

ICICI Bank
ದೇಶ16 mins ago

ICICI Bank: ಐಸಿಐಸಿಐ ಬ್ಯಾಂಕ್‌ ಗ್ರಾಹಕರೇ ಎಚ್ಚರ; 17 ಸಾವಿರ ಜನರ ಕಾರ್ಡ್‌ ಮಾಹಿತಿ ಸೋರಿಕೆ!

Kannada Serials TRP Lakshmi Nivasa In Top Amruthadhaare in Top 5
ಕಿರುತೆರೆ24 mins ago

Kannada Serials TRP: ಈ ವಾರ ಟಿಆರ್‌ಪಿಯಲ್ಲಿ ʻಲಕ್ಷ್ಮೀ ನಿವಾಸʼಕ್ಕೆ ಎರಡನೇ ಸ್ಥಾನ: ಟಾಪ್‌ 5ನಲ್ಲಿ ʻಅಮೃತಧಾರೆʼ!

Lok Sabha Election 2024 No names of election officials in voter list Protest in front of the polling booth
Lok Sabha Election 202428 mins ago

Lok Sabha Election 2024: ವೋಟರ್‌ ಲಿಸ್ಟ್‌ನಲ್ಲಿ ಚುನಾವಣಾ ಅಧಿಕಾರಿಗಳ ಹೆಸರೇ ಇಲ್ಲ; ಮತಗಟ್ಟೆ ಮುಂದೆಯೇ ಪ್ರೊಟೆಸ್ಟ್!

Reliance Smart Bazar
ವಾಣಿಜ್ಯ37 mins ago

Reliance Smart Bazar: ರಿಲಯನ್ಸ್ ಸ್ಮಾರ್ಟ್ ಬಜಾರ್ ಗ್ರಾಹಕರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ; ಯಾವೆಲ್ಲ ವಸ್ತುಗಳಿಗೆ ಹೆಚ್ಚಿನ ಬೇಡಿಕೆ?

Ethnic Collection
ಫ್ಯಾಷನ್1 hour ago

Ethnic Collection: ‘ಹೀರಾಮಂಡಿ’ ವೆಬ್ ಸೀರಿಸ್‌ ಪ್ರೇರಿತ ಸಾಂಪ್ರದಾಯಿಕ ಫ್ಯಾಷನ್ ಕಲೆಕ್ಷನ್‌ ಬಿಡುಗಡೆ ಮಾಡಿದ ಅಜಿಯೋ

Self Harming in Bengaluru
ಬೆಂಗಳೂರು1 hour ago

Self Harming : ಬೆಂಗಳೂರಲ್ಲಿ ರೈಲಿಗೆ ಸಿಲುಕಿ ಮೂವರು ಸಾವು; ಚೆಲ್ಲಾಪಿಲ್ಲಿಯಾಗಿ ಬಿದ್ದ ಮೃತದೇಹಗಳು

Voting awareness by the newly married couple at the reception
ಕರ್ನಾಟಕ1 hour ago

Lok Sabha Election 2024: ಆರತಕ್ಷತೆಯಲ್ಲಿ ವಧು-ವರರಿಂದ ಮತದಾನ ಜಾಗೃತಿ

Tamannaah Bhatia and Sanjay Dutt
ಕ್ರೀಡೆ1 hour ago

IPL Streaming Case: ಏನಿದು ಐಪಿಎಲ್​ ಲೈವ್ ಸ್ಟ್ರೀಮಿಂಗ್ ಕೇಸ್​; ತಮನ್ನಾ,ಜಾಕ್ವೆಲಿನ್, ಸಂಜಯ್​ ದತ್​ಗೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದೇಕೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case in hubblli
ಹುಬ್ಬಳ್ಳಿ9 mins ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ16 mins ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ4 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20245 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

ಟ್ರೆಂಡಿಂಗ್‌