ಉಡುಪಿ
ಹುಬ್ಬಳ್ಳಿ ಗಲಭೆ ಆರೋಪಿಗಳು ಬೆಂಗಳೂರಿನಲ್ಲಿ ಅರೆಸ್ಟ್: ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು
ಪಿಯು ವಿದ್ಯಾರ್ಥಿಯೊಬ್ಬ ಇಸ್ಲಾಂ ವಿರುದ್ಧ ಹಾಕಿದ್ದ ಪೋಸ್ಟ್ ನೆಪವಾಗಿಸಿ ಆರಂಭವಾದ ಪ್ರತಿಭಟನೆ, ನಂತರ ಪೊಲೀಸರು ಹಾಗೂ ಸಾರ್ವಜನಿಕರ ಆಸ್ತಿಪಾಸ್ತಿ ಹಾನಿಯಾಗುವ ಹಂತ ತಲುಪಿತ್ತು.
ಬೆಂಗಳೂರು: ಹುಬ್ಬಳ್ಳಿಯಲ್ಲಿ ಗಲಭೆ ನಂತರ ಕಳೆದೊಂದು ವಾರದಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನಲ್ಲಿ ಶನಿವಾರ ಬಂಧಿಸಲಾಗಿದೆ. ಬೆಂಗಳೂರಿನ ಕಾಟನ್ಪೇಟೆಯಲ್ಲಿರುವ ಹೋಟೆಲ್ನಿಂದ ಅಬ್ದುಲ್ ಮಲ್ಲಿಕ್ ಬೇಫಾರಿ ಹಾಗೂ ತೂಫೇಲ್ ಮುಲ್ಲ ಇಬ್ಬರನ್ನೂ ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಏಪ್ರಿಲ್ 17ರಂದು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಬಳಿ ಗಲಭೆ ನಡೆದಿತ್ತು. ಪಿಯು ವಿದ್ಯಾರ್ಥಿಯೊಬ್ಬ ಇಸ್ಲಾಂ ವಿರುದ್ಧ ಹಾಕಿದ್ದ ಪೋಸ್ಟ್ ನೆಪವಾಗಿಸಿ ಆರಂಭವಾದ ಪ್ರತಿಬಟನೆ, ನಂತರ ಪೊಲೀಸರು ಹಾಗೂ ಸಾರ್ವಜನಿಕರ ಆಸ್ತಿಪಾಸ್ತಿ ಹಾನಿಯಾಗುವ ಹಂತ ತಲುಪಿತ್ತು. ಪ್ರಕರಣದ ನಂತರ ಇಲ್ಲಿವರೆಗೆ ಎಐಎಂಐಎಂ ಕಾರ್ಪೊರೇಟರ್ ಪತಿ ಸೇರಿ 126 ಜನರನ್ನು ಬಂಧಿಸಿದ್ದು, 12 ಆರೋಫಿಗಳ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಪೊಲೀಸ್ ಜೀಪಿನ ಮೇಲೇರಿ ಗಲಭೆಕೋರರಿಗೆ ಪ್ರಚೋದನೆ ನೀಡುತ್ತಿದ್ದ ಎನ್ನಲಾಗುತ್ತಿರುವ ಆರೋಪಿ ವಾಸೀಂ ಪಠಾಣ್ನನ್ನು ಈಗಾಗಲೆ ಬಂಧಿಸಿರುವ ಪೊಲೀಸರು, ಮತ್ತೊಬ್ಬ ಪ್ರಮುಖ ಆರೋಪಿ ಮೊಹಮ್ಮದ್ ಆರಿಫ್ನನ್ನೂ ವಶಕ್ಕೆ ಪಡೆದಿದ್ದಾರೆ.
ಪ್ರಕರಣದಲ್ಲಿ ಬೇಕಾಗಿದ್ದ ಅಬ್ದುಲ್ ಮಲ್ಲಿಕ್ ಬೇಫಾರಿ ಹಾಗೂ ತೂಫೇಲ್ ಮುಲ್ಲಾ ಮೊಬೈಲ್ ಲೊಕೇಷನ್ಗಳನ್ನು ಹುಬ್ಬಳ್ಳಿ ಪೊಲೀಸರು ಟ್ರ್ಯಾಕ್ ಮಾಡುತ್ತಿದ್ದರು. ಇಬ್ಬರು ಆರೋಪಿಗಳೂ ಬೆಂಗಳೂರಿನಲ್ಲಿದ್ದಾರೆ ಎಂದು ತಿಳಿದು ಹಿರಿಯ ಅಧಿಕಾರಿ ಲಾಬೂರಾಮ್ ಅವರಿಗೆ ಮಾಹಿತಿ ನೀಡಿದ್ದಾರೆ. ಡಿಸಿಪಿ ಸಂಜೀವ್ ಪಾಟೀಲ್ ಅವರ ತಂಡ ಕಾಟನ್ ಪೇಟೆ ಬಳಿಯ ಹೋಟೆಲ್ನಿಂದ ಇಬ್ಬರು ಆರೋಪಿಗಳನ್ನೂ ಬಂಧಿಸಿದ್ದಾರೆ.
ಇದನ್ನೂ ಓದಿ: ಖಡಕ್ CM ಅಂದರೆ ಏನು?: ಪ್ರತಿಪಕ್ಷಗಳಿಗೆ ಬಸವರಾಜ ಬೊಮ್ಮಾಯಿ ಪ್ರಶ್ನೆ
ಎಲ್ಲ ಆರೋಪಿಗಳನ್ನೂ ಬಂಧಿಸಬೇಕೆಂಬ ಯೋಜನೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹುಬ್ಬಳ್ಳಿಯ ಕೇಶವಾಪುರ ಜಗದೀಶ್ ಅಂಚಿನಾಳ್ ಗಲಭೆ ಸಂಬಂಧಿಸಿದ ಆರೋಪಿಗ ಹುಡುಕಾಟದಲ್ಲಿದ್ದರು. ಗಲಭೆ ನಂತರ ಹುಬ್ಬಳ್ಳಿಯಿಂದ ಪರಾರಿಯಾಗಿದ್ದ ಒಟ್ಟು ನಾಲ್ವರು ಆರೋಪಿಗಳು ಹಾವೇರಿಯ ಬಂಕಾಪುರ ಬಸ್ಟಾಪ್ನಲ್ಲಿ ಇಳಿದು ಬೇರೆಡೆ ತೆರಳಿದ್ದರು. ಇಬ್ಬರು ಬೇರೆಡೆ ತೆರಳಿದರೆ ಮತ್ತಿಬ್ಬರು ಬೆಂಗಳೂರಿಗೆ ಆಗಮಿಸಿದ್ದರು.
ನಟೋರಿಯಸ್ ರೌಡಿಶೀಟರ್ ಅಬ್ದುಲ್ ಮಲ್ಲಿಕ್ ಬೇಫಾರಿ ಹಾಗೂ ತೂಫೇಲ್ ಮುಲ್ಲಾ ಎರಡು ದಿನದ ಹಿಂದೆ ಬೆಂಗಳೂರಿಗೆ ಬಂದಿರುವ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಮಂಗಳವಾರ ಒಂದು ರೂಮ್ ಮಾಡಿಕೊಂಡ ಆರೋಪಿಗಳು ಅಂದು ರಾತ್ರಿ ಮತ್ತೊಂದು ರೂಮ್ ಪಡೆದಿದ್ದರು. ಬುಧವಾರ ಬೆಳಿಗ್ಗೆ ರಂಜಾನ್ಗೆ ಬಟ್ಟೆ ಖರೀದಿ ಮಾಡಿದ್ದರು. ಸಂಜೆ ನಂತರ ತವಕಲ್ ಮಸೀದಿ ಬಳಿ ಇದ್ದ ಲಾಡ್ಜ್ನಲ್ಲಿ ರೂಮ್ ಪಡೆದಿದ್ದರು. ಅಷ್ಟರಲ್ಲಾಗಲೇ ಸಾಕಷ್ಟು ಬಳಲಿದ್ದ ಆರೋಪಿಗಳು ಹೋಟೆಲ್ನಲ್ಲಿ ಊಟಕ್ಕೆ ತೆರಳಿದ್ದರು. ಅಷ್ಟರಲ್ಲಿ ಸ್ಥಳೀಯ ಪೊಲೀಸರು ಆರೋಫಿಗಳ ನಿಖರ ಸ್ಥಳದ ಮಾಹಿತಿ ಪಡೆದು, ಇಬ್ಬರನ್ನೂ ಬಂಧಿಸಿದ್ದಾರೆ.
ಗಲಭೆಗಳ ಕುರಿತು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಶಿವಮೊಗ್ಗ ಹಾಗೂ ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆ ಮೇಲೆ ಹಾಗೂ ಪೊಲೀಸರ ಮೇಲೆ ದಾಳಿ ಮಾಡಲಾಗಿದೆ. ಇದು ಅವರ ದಾರ್ಷ್ಟ್ಯ, ಅಹಂಕಾರವನ್ನು ತೋರಿಸುತ್ತಿದೆ. ನಮ್ಮ ಸಂಖ್ಯೆ ಹೆಚ್ಚಾದರೆ ಪೊಲೀಸರನ್ನೂ ಎದುರಿಸುತ್ತೇವೆ ಎಂಬ ಸಂದೇಶ ನೀಡಲು ಹೊರಟಿದ್ದಾರೆ. ಅಲ್ಪಸಂಖ್ಯಾತರು ಬಹುಸಂಖ್ಯಾತರು ಎನ್ನದೆ ಎಲ್ಲರೂ ಒಟ್ಟಾಗಿ ಬದುಕಬೇಕು ಎನ್ನುವುದು ನಮ್ಮ ಆಶಯ. ಇಂತಹ ಗಲಭೆಗಳಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಉಡುಪಿ
Weather report : ಇನ್ನೆರಡು ದಿನ ಉತ್ತರ ಕರ್ನಾಟಕದ 7 ಜಿಲ್ಲೆ ಸೇರಿ ಕರಾವಳಿಯಲ್ಲಿ ಭಾರಿ ಮಳೆ
Weather report : ರಾಜ್ಯದಲ್ಲಿ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರು: ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ಈ ಭಾಗದಲ್ಲಿ ಐಎಂಡಿ ಯೆಲ್ಲೋ ಅಲರ್ಟ್ ನೀಡಿದೆ. ಇದಲ್ಲದೆ, ಕರಾವಳಿ ಜಿಲ್ಲೆಗಳಲ್ಲಿ ಸಹ ಭಾರಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Weather report) ಹೇಳಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಜತೆಗೆ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನೊಂದಿಗೆ ಮಳೆಯಾಗುವ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.
ಇದನ್ನೂ ಓದಿ: Mandya Accident: ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ ಹೊಡೆದ ಕಾರು; ನಾಲ್ವರು ಸ್ಥಳದಲ್ಲೇ ದುರ್ಮರಣ
ದಕ್ಷಿಣ ಒಳನಾಡಲ್ಲಿ ತಗ್ಗಿದ ಮಳೆ
ಬುಧವಾರ (ಸೆ. 27) ಮತ್ತು ಗುರುವಾರ (ಸೆ. 28) ದಕ್ಷಿಣ ಒಳನಾಡಿನ ಕೋಲಾರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ಹೇಳಿದೆ. ಉಳಿದ ಭಾಗಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಬೀಳಬಹುದು ಎಂದು ಅಂದಾಜಿಸಲಾಗಿದೆ. ಉತ್ತರ ಒಳನಾಡಿನ ಬೀದರ್, ವಿಜಯನಗರ ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗಲಿದೆ. ಹೆಚ್ಚಿನ ಸಮಯ ಮೋಡ ಕವಿದ ವಾತಾವರಣ ಇರಲಿದೆ.
ಮಲೆನಾಡಲ್ಲೂ ಸಣ್ಣ ಮಳೆ
ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಈ ಬಾರಿ ಭಾರಿ ಪ್ರಮಾಣದ ಮಳೆಯ ನಿರೀಕ್ಷೆ ಮಾಡುವಂತಿಲ್ಲ. ಇಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದನ್ನೂ ಓದಿ: Elephant Attack : ಹಾಲು ತರಲು ಹೋಗುತ್ತಿದ್ದ ವೃದ್ಧನ ಬೆನ್ನಟ್ಟಿ ದಾಳಿ ಮಾಡಿದ ಕಾಡಾನೆ ಹಿಂಡು, ಗಂಭೀರ ಗಾಯ
ಬೆಂಗಳೂರಿನಲ್ಲಿ ರಾತ್ರಿ ಮಳೆ ಭರ್ಜರಿ
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ ಮತ್ತು ಗುರುವಾರ ಬೆಳಗ್ಗೆ ಹೆಚ್ಚಿನ ಸಮಯ ಬಿಸಿಲಿದ್ದರೂ ನಂತರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಸಂಜೆ ಅಥವಾ ರಾತ್ರಿಯಂದು ಭಾರಿ ಪ್ರಮಾಣದ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಹೀಗಾಗಿ ಸಂಜೆ ವೇಳೆಗೆ ಪ್ರಯಾಣ ಮಾಡುವವರು ಸೂಕ್ತ ತಯಾರಿ ಮಾಡಿಕೊಂಡಿರಲು ಸೂಚಿಸಲಾಗಿದೆ. ಇನ್ನು ಮಳೆ ವೇಳೆ ಸಂಚಾರ ದಟ್ಟಣೆ ಹೆಚ್ಚುವ ಸಂಭವವೂ ಇದೆ. ಗರಿಷ್ಠ ಉಷ್ಣಾಂಶ 30 ಡಿಗ್ರ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ
Weather report : ಉತ್ತರ, ಕರಾವಳಿಯಲ್ಲಿ ಮಳೆಗೆ ಬಲ; ದಕ್ಷಿಣದಲ್ಲಿ ದುರ್ಬಲ
Rain News : ರಾಜ್ಯದಲ್ಲಿ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ.
ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ಐಎಂಡಿ ಯೆಲ್ಲೋ ಅಲರ್ಟ್ (Weather report) ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಜತೆಗೆ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.
ದಕ್ಷಿಣ ಒಳನಾಡಲ್ಲಿ ತಗ್ಗಿದ ಮಳೆ
ಸೆ. 27ರಂದು ದಕ್ಷಿಣ ಒಳನಾಡಿನ ಕೋಲಾರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮಾತ್ರ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಸಣ್ಣ ಮಳೆ ಬೀಳಬಹುದು. ಉತ್ತರ ಒಳನಾಡಿನ ಬೀದರ್, ವಿಜಯನಗರ ಜಿಲ್ಲೆಗಳಲ್ಲಿ ಹಗುರವಾದ ಮಳೆ ಇರಿಲಿದೆ.
ಮಲೆನಾಡಲ್ಲೂ ಸಣ್ಣ ಮಳೆ
ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದರೆ, ಮಧ್ಯಾಹ್ನ ಬಿಸಿಲಿನಿಂದ ಕೂಡಿರುತ್ತದೆ. ಸಂಜೆ ಅಥವಾ ರಾತ್ರಿಯಂದು ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Cauvery water dispute : ನಮಗೆ ನೀರಿಲ್ಲ, ತಮಿಳುನಾಡಿಗೆ ನೀರು ಬಿಡೋದು ಹೇಗೆ? – ನಟಿ ರಾಗಿಣಿ ದ್ವಿವೇದಿ
ರಾಜ್ಯದಲ್ಲಿ ಸೆ. 25ರಂದು ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಕರಾವಳಿ ಬಹುತೇಕ ಸ್ಥಳಗಳಲ್ಲಿ ಮಳೆಯಾಗಿದ್ದು, ಉತ್ತರ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ತೊಂಡೇಭಾವಿ 5 ಸೆಂ.ಮೀ, ಗೋಕರ್ಣ, ಸಿಂದಗಿ, ಬೀದರ್, ಕಂಪ್ಲಿಯಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ.
ಹೊನಾವರ, ಆಳಂದ, ಕುಕನೂರು, ಮಾನ್ವಿ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಹೆಬ್ಬೂರಲ್ಲಿ ತಲಾ 3, ಕುಮಟಾ, ತಾಳಿಕೋಟೆ , ಫರಹತಾಬಾದ್, ಚಿಂಚೋಳಿ , ಕೆಂಭಾವಿ, ಬೆಂಗಳೂರು ಸಿಟಿ ಗೌರಿಬಿದನೂರು , ಕುರುಗೋಡು ಸೇರಿದಂತೆ ದೊಡ್ಡಬಳ್ಳಾಪುರದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಪುತ್ತೂರು, ಮಂಗಳೂರು , ಮಂಗಳೂರು ವಿಮಾನ ನಿಲ್ದಾಣ, ಅಂಕೋಲಾ, ಇಳಕಲ್, ನಿರ್ಣಾ , ಕಲಬುರ್ಗಿ, ಮಹಾಗೋನ್, ಗುಂಡಗುರ್ತಿ , ಶಹಪುರ, ಶೋರಾಪುರ ಕಕ್ಕೇರಿ, ಗಂಗಾವತಿ, ದೇವರಹಿಪ್ಪರಗಿ, ಇಂಡಿ , ಕುಡತಿನಿ, ಹೊಸಪೇಟೆ, ಬೆಂಗಳೂರು ಕೆಐಎಎಲ್ ತಲಾ 1 ಸೆಂ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ
Weather Report : ಉತ್ತರ ಕರ್ನಾಟಕದಲ್ಲಿ ಮಳೆ ಚುರುಕು; ಬೆಂಗಳೂರಲ್ಲಿ ಹೇಗೆ?
Rain News : ಉತ್ತರ ಒಳನಾಡಲ್ಲಿ ಮುಂಗಾರು ಚುರುಕುಗೊಂಡಿದ್ದು, ಸೆ. 26ರಂದು ಹಲವೆಡೆ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು (Weather report) ಐಎಂಡಿ ನೀಡಿದೆ. 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರು: ಉತ್ತರ ಒಳನಾಡಿನ ಹಲವು ಕಡೆ ಭಾರಿ ಮಳೆಯಾಗುವ (Rain News) ಮುನ್ಸೂಚನೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಲಘುವಾಗಿ, ಬೆಂಗಳೂರಲ್ಲಿ ಸಂಜೆ ವೇಳೆಗೆ ಸಾಧಾರಣ ಮಳೆ (Weather report) ಸುರಿಯಲಿದೆ. ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ನಾಲ್ಕು ಜಿಲ್ಲೆಗಳಿಗೆ ಅಲರ್ಟ್
ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.
ಒಳನಾಡಲ್ಲಿ ಹಗುರ ಮಳೆ
ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯದಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರದಲ್ಲಿ ಅತಿ ಕಡಿಮೆ ಮಳೆಯಾಗಲಿದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಉತ್ತರ ಒಳನಾಡಿನ ರಾಯಚೂರು, ಬೀದರ್, ಬೆಳಗಾವಿ, ಧಾರವಾಡದ ಹಲವೆಡೆ ಅಲ್ಲಲ್ಲಿ ಹಗುರ ಮಳೆಯಾಗಲಿದೆ. ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಟಿ ಜಿಟಿ ಮಳೆ ಸುರಿಯಲಿದೆ
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 29 ಡಿ.ಸೆ – 21 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 20 ಡಿ.ಸೆ
ಗದಗ: 31 ಡಿ.ಸೆ – 20 ಡಿ.ಸೆ
ಹೊನ್ನಾವರ: 30 ಡಿ.ಸೆ- 23 ಡಿ.ಸೆ
ಕಲಬುರಗಿ: 29 ಡಿ.ಸೆ – 23 ಡಿ.ಸೆ
ಬೆಳಗಾವಿ: 29 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ
Weather Report : ಮಾಸಾಂತ್ಯದವರೆಗೂ ಮಳೆ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Rain News : ಉತ್ತರ ಕರ್ನಾಟಕದ ಹಲವು ಕಡೆ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಐಎಂಡಿ ನೀಡಿದೆ. 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿದ್ದು, ಸೆ. 26ರಂದು ಉತ್ತರ ಒಳನಾಡಿನ ಹಲವು ಕಡೆ ಭಾರಿ ಮಳೆಯಾಗುವ (Rain News) ಮುನ್ಸೂಚನೆ ಇದೆ. ಬೆಂಗಳೂರಲ್ಲಿ ಸಂಜೆ ವೇಳೆಗೆ ಸಾಧಾರಣ ಮಳೆ ಸುರಿಯಲಿದೆ. ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ (weather report) ಸಾಧ್ಯತೆ ಇದೆ.
ಭಾರೀ ಮಳೆ ಮುನ್ನೆಚ್ಚರಿಕೆ
ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.
ಬೆಂಗಳೂರಲ್ಲಿ ಸಾಧಾರಣ ಮಳೆ
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯದಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರದಲ್ಲಿ ಅತಿ ಕಡಿಮೆ ಮಳೆಯಾಗಲಿದೆ.
ಉತ್ತರ ಒಳನಾಡಿನ ರಾಯಚೂರು, ಬೀದರ್, ಬೆಳಗಾವಿ, ವಿಜಯಪುರ, ಯಾದಗಿರಿ, ಧಾರವಾಡದ ಹಲವೆಡೆ ಅಲ್ಲಲ್ಲಿ ಹಗುರ ಮಳೆಯಾಗಲಿದೆ. ಕೊಪ್ಪಳದಲ್ಲಿ ಅಲ್ಲಲ್ಲಿ ಅತಿ ಕಡಿಮೆ ಮಳೆ ಬೀಳಲಿದೆ. ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಟಿ ಜಿಟಿ ಮಳೆ ಸುರಿಯಲಿದೆ.
ಇದನ್ನೂ ಓದಿ:Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ
ರಾಜ್ಯದಲ್ಲಿ ಭಾನುವಾರದಂದು ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ, ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ. ಭಾರಿ ಮಳೆಯು ಶಹಪುರದಲ್ಲಿ 7 ಸೆಂ.ಮೀ ವರದಿ ಆಗಿದೆ. ಅಂಕೋಲಾ, ಹೆಬ್ಬೂರಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಕುಮಟಾ, ಗೇರ್ಸೊಪ್ಪ, ಗೋಕರ್ಣ, ಮಂಕಿಯಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ.
ಕುಂದಾಪುರ, ಕೋಟ, ಸಿದ್ದಾಪುರ, ಬೇಲಿಕೇರಿ, ಹೊನ್ನಾವರ, ಖಜೂರಿ, ಮೈಸೂರು, ರಾಯಲ್ಪಾಡದಲ್ಲಿ ತಲಾ 3 ಸೆಂ.ಮೀ, ಉಡುಪಿ, ಕಾರ್ಕಳ , ಮಂಗಳೂರು, ಉಪ್ಪಿನಂಗಡಿ, ಮೂಲ್ಕಿ, ಕದ್ರಾ, ಕೆಂಭಾವಿ, ಮುನಿರಾಬಾದ್ , ಗಬ್ಬೂರು ಹಾಗೂ ಆಳಂದ, ಸೇಡಂ, ಕಳಸ, ಗುಬ್ಬಿ, ತಿಪಟೂರು, ಚಿತ್ರದುರ್ಗ, ಕುಡತಿನಿಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.
ಕಾರವಾರ, ಮಂಗಳೂರು, ಧರ್ಮಸ್ಥಳ, ಬೆಳ್ತಂಗಡಿ, ಕಿರವತ್ತಿ, ಮುಂಡಗೋಡ ಯಲ್ಲಾಪುರ, ಮಂಚಿಕೆರೆ, ಜಾಲಹಳ್ಳಿ, ಮಹಾಗೋಣ, ಮುಧೋಳೆ, ಗುಂಡಗುರ್ತಿ, ಆಡಕಿ, ಕವಡಿಮಟ್ಟಿ ಅರ್ಗ, ಭಾಲ್ಕಿ , ಮಂಠಾಳ, ಹಾವೇರಿ, ಚಿಕ್ಕಬಳ್ಳಾಪುರ, ಕಡೂರು, ಕೋಲಾರ, ಲಿಂಗನಮಕ್ಕಿ ಎಚ್ಎಂಎಸ್, ತಾಳಗುಪ್ಪ, ತ್ಯಾಗರ್ತಿ, ಯಗಟಿ , ಹೊಸಕೋಟೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
-
ಪ್ರಮುಖ ಸುದ್ದಿ23 hours ago
Iraq Fire Accident: ಮದುವೆ ಮನೆಯಲ್ಲಿ ಅಗ್ನಿ ದುರಂತ; ಮದುಮಕ್ಕಳು ಸೇರಿ 114 ಜನರ ಸಾವು!
-
ಪ್ರಮುಖ ಸುದ್ದಿ13 hours ago
German Shepherd: ಸೀಕ್ರೆಟ್ ಸರ್ವಿಸ್ ಏಜೆಂಟ್ನಿಗೆ ಕಚ್ಚಿದ ಅಮೆರಿಕ ಅಧ್ಯಕ್ಷ ಬೈಡನ್ ಅವರ ‘ಕಮಾಂಡರ್’!
-
ವಿದೇಶ14 hours ago
Most expensive wedding: ಜಗತ್ತಿನ ದುಬಾರಿ ವಿವಾಹ ಯಾವುದು ಗೊತ್ತೆ? ಖರ್ಚಾಗಿದ್ದು ಇಷ್ಟು ಕೋಟಿ ರೂ.
-
ಸುವಚನ2 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಕ್ರೈಂ18 hours ago
ಲೈಂಗಿಕ ದೌರ್ಜನ್ಯ; ರಕ್ತಸಿಕ್ತ ಬಾಲಕಿ ಮನೆಮನೆಗೆ ತೆರಳಿ ಗೋಳಾಡಿದರೂ ಸಹಾಯ ಮಾಡದ ನಿರ್ದಯಿಗಳು!
-
ಕರ್ನಾಟಕ15 hours ago
Car Accident: ಮರಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಸಾವು
-
ದೇಶ15 hours ago
Venus Mission: ಇಸ್ರೋಗೆ ‘ಶುಕ್ರ’ದೆಸೆ; ಚಂದ್ರ, ಸೂರ್ಯನ ಬಳಿಕ ಶುಕ್ರನತ್ತ ಚಿತ್ತ; ಉಡಾವಣೆ ಯಾವಾಗ?
-
ಕರ್ನಾಟಕ10 hours ago
PSI Recruitment Scam: ಕೊನೆಗೂ ಅಮೃತ್ ಪಾಲ್ ಸೆಂಟ್ರಲ್ ಜೈಲಿನಿಂದ ಬಿಡುಗಡೆ