Site icon Vistara News

Ganeshotsav | ಹುಬ್ಬಳ್ಳಿಯಲ್ಲಿ ಬೃಹತ್‌ ಗಣಪತಿ ಮೂರ್ತಿಗಳ ವಿಸರ್ಜನೆ

Ganeshotsav

ಹುಬ್ಬಳ್ಳಿ: ನಗರದ ದುರ್ಗದಬೈಲ್, ದಾಜೀಬಾನ್ ಪೇಟ್, ಮರಾಠಾ ಗಲ್ಲಿ ಸೇರಿ ವಿವಿಧ ಪ್ರದೇಶಗಳಲ್ಲಿ ಪ್ರತಿಷ್ಠಾಪಿಸಲಾಗಿದ್ದ ಬೃಹತ್ ಗಣೇಶ ಮೂರ್ತಿಗಳ ವಿಸರ್ಜನೆಯೊಂದಿಗೆ ಸಾರ್ವಜನಿಕ ಗಣೇಶೋತ್ಸವಕ್ಕೆ(Ganeshotsav) ಶುಕ್ರವಾರ ತೆರೆಬಿದ್ದಿದೆ.

ವಿಸರ್ಜನೆ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು. ರಸ್ತೆಯುದ್ದಕ್ಕೂ ಡಿಜೆ ಸದ್ದಿಗೆ ಹುಚ್ಚೆದ್ದು ಕುಣಿಯುವ ಮೂಲಕ ಯುವ ಸಮೂಹ ಗಮನ ಸೆಳೆಯಿತು. ಒಂದೆಡೆ ಡಿಜೆ ಮತ್ತೊಂದೆಡೆ ವಿವಿಧ ವಾದ್ಯಗಳು ಮೆರವಣಿಗೆ ಮೆರುಗು ನೀಡಿದವು. ಡೊಳ್ಳು ಕುಣಿತ, ಜಾಂಜ್, ಗೆಜ್ಜೆಮಜಲು, ಡೋಲು ಸೇರಿ ವಿವಿಧ ಕಲಾ ತಂಡಗಳು ಭಾಗವಹಿಸಿದ್ದವು.

ಸಾರ್ವಜನಿಕರ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು.

ಇದನ್ನೂ ಓದಿ | Ganeshotsav | ಶಿವಮೊಗ್ಗದಲ್ಲಿ ಬಿಗಿ ಭದ್ರತೆ ನಡುವೆ ಅದ್ಧೂರಿ ಗಣೇಶ ರಾಜಬೀದಿ ಉತ್ಸವ

Exit mobile version