Election Boycott: ಗೃಹ ಸಚಿವ ಆರಗ ಜ್ಞಾನೇಂದ್ರ ಕ್ಷೇತ್ರದಲ್ಲಿ ಚುನಾವಣೆ ಬಹಿಷ್ಕಾರ; ಹುಂಚದಕಟ್ಟೆ ಗ್ರಾಪಂನಲ್ಲಿ ನಿರ್ಧಾರ - Vistara News

ಕರ್ನಾಟಕ

Election Boycott: ಗೃಹ ಸಚಿವ ಆರಗ ಜ್ಞಾನೇಂದ್ರ ಕ್ಷೇತ್ರದಲ್ಲಿ ಚುನಾವಣೆ ಬಹಿಷ್ಕಾರ; ಹುಂಚದಕಟ್ಟೆ ಗ್ರಾಪಂನಲ್ಲಿ ನಿರ್ಧಾರ

Election Boycott: ಹುಂಚದಕಟ್ಟೆ ಗ್ರಾ ಪಂ ವ್ಯಾಪ್ತಿಯಲ್ಲಿ ರಸ್ತೆ ಹದಗೆಟ್ಟಿದ್ದು, ಜನಪ್ರತಿನಿಧಿಗಳ ಬಳಿ ಹೇಳಿದರೂ ಪ್ರಯೋಜವಾಗದಿರುವುದರಿಂದ ಚುನಾವಣಾ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ.

VISTARANEWS.COM


on

Election Boycott ripponpet Hunchadakatte
ಬ್ಯಾನರ್‌ ಹಿಡಿದುಕೊಂಡು ಚುನಾವಣೆ ಬಹಿಷ್ಕರಿಸುವುದಾಗಿ ಘೋಷಿಸಿದ ಗ್ರಾಮಸ್ಥರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಿಪ್ಪನ್‌ಪೇಟೆ: ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಹುಂಚದಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ ಹದಗೆಟ್ಟಿದೆ. ಇದು 2 ದಶಕದ ವ್ಯಥೆಯಾಗಿದ್ದು, ಜನಪ್ರತಿನಿಧಿಗಳು ಬಂದಾಗಲೆಲ್ಲ ದುರಸ್ತಿಗಾಗಿ ಮನವಿ ಮಾಡಿದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಎಂದು ಆಕ್ರೋಶಗೊಂಡಿರುವ ಗ್ರಾಮದ ನಾಗರಿಕರು ಚುನಾವಣಾ ಬಹಿಷ್ಕಾರಕ್ಕೆ (Election Boycott) ಮುಂದಾಗಿದ್ದಾರೆ.

ಹುಂಚದಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಂಬ್ಳೆಬೈಲು, ಮಾದ್ಲುಮನೆ, ಸಣ್ಣಮನೆ, ಹೊಸಕೊಪ್ಪ, ಕಪ್ಪೆಹೊಂಡ, ಆಲೂರು, ಹತ್ತಳ್ಳಿ, ಚಿಕ್ಕಮತ್ತಿಗ, ಕಲ್ಲಳ್ಳಿ, ಶಿವಳ್ಳಿಕೊಪ್ಪ, ದೇಮ್ಲಾಪುರ, ಮಳಲಿಮಕ್ಕಿ, ಕೋಣಂದೂರು ಸಂಪರ್ಕಿಸುವ ನಾಲ್ಕೈದು ಕಿ.ಮೀ. ರಸ್ತೆಯು ಸಂಪೂರ್ಣ ಹದಗೆಟ್ಟ ಕಾರಣ ಕಾಲ್ನಡಿಗೆಯಲ್ಲೂ ಹೋಗುವುದು ಕಷ್ಟವಾಗಿದೆ.

ಇದನ್ನೂ ಓದಿ: Karnataka BJP: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧೆಗೆ ಬಿಜೆಪಿ ಚಿಂತನೆ: ಖಚಿತಪಡಿಸಿದ ಬಿ.ಎಸ್‌. ಯಡಿಯೂರಪ್ಪ

ತುರ್ತು ಪರಿಸ್ಥಿತಿಯಲ್ಲಿ ಯಾವ ಆಟೋ ಚಾಲಕರು, ಆ್ಯಂಬುಲೆನ್ಸ್, ಶಾಲಾ ವಾಹನಗಳು, ಈ ರಸ್ತೆಯಲ್ಲಿ ಬರಲು ಒಪ್ಪದೆ ಇರುವುದರಿಂದ ನಿತ್ಯ ಸಂಕಷ್ಟದಲ್ಲಿ ದಿನ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರಕು ಸಾಮಾನುಗಳನ್ನು ತಲೆ ಮೇಲೆ ಹೊತ್ತುಕೊಂಡು ಹೋಗುವ ಪರಿಸ್ಥಿತಿ ಇದೆ. ಹೀಗಾಗಿ ಚುನಾವಣೆ ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Video Viral: ಬ್ಯಾಲೆಟ್‌ ಪೇಪರ್‌ ಕಳ್ಳ ಮತದಾನದ ರಹಸ್ಯ ಬಿಚ್ಚಿಟ್ಟ ಪರಮೇಶ್ವರ್;‌ ಕಾಂಗ್ರೆಸ್‌ EVM ಬೇಡ ಎನ್ನಲು ಇದೇ ಕಾರಣವೆಂದ ಜೆಡಿಎಸ್!

Video Viral: ತುಮಕೂರಿನಲ್ಲಿ ಏಪ್ರಿಲ್‌ 16ರಂದು ನಡೆದಿದ್ದ ಯಾದವ ಸಮುದಾಯದ ಸಭೆಯಲ್ಲಿ ಮಾತನಾಡಿದ್ದ ಡಾ. ಜಿ. ಪರಮೇಶ್ವರ್, ಇವಿಎಂ ಬರುವ ಮೊದಲು ಚುನಾವಣೆ ಹೇಗೆ ನಡೆಯುತ್ತಿತ್ತು ಎಂಬುದನ್ನು ವಿವರಿಸಿದ್ದರು. ಯಾದವ ಸಮುದಾಯ ತಮ್ಮ ಮೇಲೆ ಇಟ್ಟಿದ್ದ ಪ್ರೀತಿಯ ಬಗ್ಗೆ ಹೇಳುವ ಸಂದರ್ಭದಲ್ಲಿ ಈ ಹೇಳಿಕೆಯನ್ನು ನೀಡಿ ಈಗ ವಿವಾದಕ್ಕೆ ಸಿಲುಕಿದ್ದಾರೆ. ಈ ಹಿಂದೆ ಬ್ಯಾಲೆಟ್‌ ಪೇಪರ್‌ ಇದ್ದಾಗ ಒಬ್ರೋ ಇಬ್ರೋ ಕುಳಿತುಕೊಂಡು ಊರವರೆಲ್ಲರ ವೋಟು ಹಾಕುತ್ತಿದ್ದರು ಎಂದು ಹೇಳಿರುವ ವಿಡಿಯೊ ಸಖತ್‌ ವೈರಲ್‌ ಆಗಿದೆ.

VISTARANEWS.COM


on

Video Viral Parameshwara statement on ballot paper bogus voting
Koo

ಬೆಂಗಳೂರು/ತುಮಕೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯ ಭರದಿಂದ ಸಾಗಿದೆ. ತುಮಕೂರಿನಲ್ಲಿ ನಡೆದ ಯಾದವ ಸಮುದಾಯದ ಸಭೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ (Dr G Parameshwara) ಅವರು ಈ ಹಿಂದಿನ ಬ್ಯಾಲೆಟ್‌ ಮತದಾನ (Ballot paper voting) ಹಾಗೂ ಈಗಿನ ಇವಿಎಂ ಮತದಾನದ (EVM Voting) ಬಗ್ಗೆ ಸ್ಮರಿಸುತ್ತಾ ಆಡಿದ ಮಾತುಗಳು ಈಗ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಈಡು ಮಾಡಿದ್ದಲ್ಲದೆ, ವೈರಲ್‌ (Video Viral) ಆಗಿದೆ. ಜತೆಗೆ, ಕಾಂಗ್ರೆಸ್‌ ಪಕ್ಷವನ್ನು ಮುಜುಗರಕ್ಕೀಡು ಮಾಡಿದೆ. “ಈ ಹಿಂದೆ ಬ್ಯಾಲೆಟ್‌ ಪೇಪರ್‌ ಇದ್ದಾಗ ಒಬ್ರೋ ಇಬ್ರೋ ಕುಳಿತುಕೊಂಡು ಊರವರೆಲ್ಲರ ವೋಟು ಹಾಕುತ್ತಿದ್ದರು” ಎಂಬ ಪರಮೇಶ್ವರ್‌ ಹೇಳಿಕೆ ಈಗ ಸಖತ್‌ ವೈರಲ್‌ ಆಗಿದೆ. ಈ ವಿಡಿಯೊವನ್ನು ಜೆಡಿಎಸ್‌ ರಾಜ್ಯ ಘಟಕವು ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಅಪ್ಲೋಡ್‌ ಮಾಡಿದ್ದು, ಇವಿಎಂ ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆ ಜಾರಿ ಮಾಡಬೇಕು ಎಂದು ಕಾಂಗ್ರೆಸ್ ಆಗ್ರಹಿಸುತ್ತಿರುವುದು ಇದೇ ಕಾರಣಕ್ಕೆ ಎಂದು ಕಿಡಿಕಾರಿದೆ.

ವೈರಲ್‌ ಆಯ್ತು ಗೃಹ ಸಚಿವರ ಹೇಳಿಕೆ!

ತುಮಕೂರಿನಲ್ಲಿ ಏಪ್ರಿಲ್‌ 16ರಂದು ನಡೆದಿದ್ದ ಯಾದವ ಸಮುದಾಯದ ಸಭೆಯಲ್ಲಿ ಮಾತನಾಡಿದ್ದ ಡಾ. ಜಿ. ಪರಮೇಶ್ವರ್, ಇವಿಎಂ ಬರುವ ಮೊದಲು ಚುನಾವಣೆ ಹೇಗೆ ನಡೆಯುತ್ತಿತ್ತು ಎಂಬುದನ್ನು ವಿವರಿಸಿದ್ದರು. ಯಾದವ ಸಮುದಾಯ ತಮ್ಮ ಮೇಲೆ ಇಟ್ಟಿದ್ದ ಪ್ರೀತಿಯ ಬಗ್ಗೆ ಹೇಳುವ ಸಂದರ್ಭದಲ್ಲಿ ಈ ಹೇಳಿಕೆಯನ್ನು ನೀಡಿ ಈಗ ವಿವಾದಕ್ಕೆ ಸಿಲುಕಿದ್ದಾರೆ.

ಪರಮೇಶ್ವರ್‌ ಹೇಳಿದ್ದೇನು?

ಮೊದಲೆಲ್ಲ ಮತದಾನಕ್ಕಾಗಿ ಎಲ್ಲವೂ ಒತ್ತೋದು. ಈ ಇವಿಎಂ ಇರಲಿಲ್ಲ. ಅವಾಗ ಒಬ್ಬರೋ ಇಬ್ಬರೋ ಸೇರಿಕೊಂಡು ಒತ್ತಿಬಿಡ್ರೋ ಅತ್ಲಾಗೆ ಅನ್ನೋರು. ಅನೇಕ ಸಂದರ್ಭದಲ್ಲಿ ನಾನು ಅದನ್ನು ಜ್ಞಾಪಿಸಿಕೊಳ್ಳುತ್ತೇನೆ. ನಮ್ಮ ಮಧುಚಂದ್ರ ಇವಾಗಲೂ ಇದ್ದಾನೆ. ನಮ್ಮ ಹಟ್ಟಿ ಒಳಗೆ ಒಬ್ರೋ ಇಬ್ರೋ ಕುಳಿತುಕೊಂಡು ಮತಕ್ಕೆ ಸಂಬಂಧಿಸಿ ಸೀಲ್‌ ಒತ್ತಿ ಅಂತಾ ಕಳುಹಿಸೋರು. ಇವತ್ತಿಗೂ ಸಹ ಯಾದವ ಸಮುದಾಯದವರು ನನ್ನನ್ನು ಕರೆಯೋದು ನಮ್ಮಯಪ್ಪ ಅಂತಲೇ. ಅದಕ್ಕಾಗಿ ನಾನು ಯಾದವ ಸಮುದಾಯದ ಖುಣ ತೀರಿಸುವ ಕೆಲಸವನ್ನು ಮಾಡಬೇಕಿದೆ. ಆ ಕೆಲಸವನ್ನು ನಾನು ಮಾಡಿಯೇ ತೀರುತ್ತೇನೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಈ ವಿಡಿಯೊ ಸಖತ್‌ ವೈರಲ್‌ ಆಗಿದೆ.

ಕಾಂಗ್ರೆಸ್‌ ಗೆಲುವಿನ ಫಾರ್ಮುಲಾ ಈ ಕಳ್ಳವೋಟು; ಜೆಡಿಎಸ್‌ ಕಿಡಿ

ಈ ಬಗ್ಗೆ ಜೆಡಿಎಸ್‌ ರಾಜ್ಯ ಘಟಕವು ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದೆ. ಡಾ. ಜಿ. ಪರಮೇಶ್ವರ್‌ ಅವರು ಕಾರ್ಯಕ್ರಮದಲ್ಲಿ ಮಾತನಾಡಿದ ವಿಡಿಯೊವನ್ನು ಸಹ ಅಪ್ಲೋಡ್‌ ಮಾಡಿದೆ. ಕಾಂಗ್ರೆಸ್‌ ಗೆಲುವಿನ ಫಾರ್ಮೂಲಾದ ಸೀಕ್ರೆಟ್‌ ಇದೇ ಆಗಿದೆ ಎಂದು ಕಿಡಿಕಾರಿದೆ. ಅಂದಹಾಗೆ ಇದನ್ನು ನಾವು ಹೇಳುತ್ತಿರುವುದಲ್ಲ, ಸ್ವತಃ ರಾಜ್ಯದ ಗೃಹ ಮಂತ್ರಿ ಪರಮೇಶ್ವರ್‌ ಅವರು ನೀಡಿರುವ ಹೇಳಿಕೆ ಇದಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ: Neha Murder Case: ಕಾಂಗ್ರೆಸ್‌ನಿಂದ ಜಿಹಾದಿ ಕರ್ನಾಟಕ ಸೃಷ್ಟಿ, ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಆರ್. ಅಶೋಕ್‌ ಗುಡುಗು

ಜೆಡಿಎಸ್‌ ಪೋಸ್ಟ್‌ನಲ್ಲೇನಿದೆ?

“ಕಳ್ಳ ವೋಟು was the secret Winning Formula of @INCIndia!” ಇದನ್ನು ನಾವು ಹೇಳಿದಲ್ಲ, ಸ್ವತಃ ನಮ್ಮ ರಾಜ್ಯದ ಗೃಹಮಂತ್ರಿಗಳಾದ ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ. ಇದು ಅವರು ಬಯಲು ಮಾಡಿರುವ ಸತ್ಯ. ಈ ಹೇಳಿಕೆಯು ಕಾಂಗ್ರೆಸ್‌ ಪಕ್ಷದ ಅಸಲಿ ಮುಖವನ್ನು ಬಯಲು ಮಾಡಿದೆ.

ಇವಿಎಂ ಬರುವ ಮುಂಚೆ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದವರು ಒಬ್ಬರೋ ಇಬ್ಬರನ್ನೋ ಕೂರಿಸಿ ಕಳ್ಳ ಮತದಾನ ಮಾಡಿಸಿಕೊಂಡು, ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುತ್ತಿತ್ತು. ಈ ಸತ್ಯವನ್ನು ಸಚಿವರೇ ಒಪ್ಪಿಕೊಂಡಿದ್ದಾರೆ.

ಇವಿಎಂ ಬದಲು ಮರಳಿ ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆ ಜಾರಿ ಮಾಡಬೇಕು ಎಂದು ಕಾಂಗ್ರೆಸ್ ಆಗ್ರಹಿಸುತ್ತಿರುವುದು ಇದೇ ಕಾರಣಕ್ಕೆ!!” ಎಂದು ಜೆಡಿಎಸ್‌ ಆಕ್ರೋಶ ವ್ಯಕ್ತಪಡಿಸಿದೆ.

Continue Reading

ಕರ್ನಾಟಕ

‌Assault Case: ಮೋದಿ ಹಾಡು ಬರೆದ ಯುವಕನ ಮೇಲೆ ಹಲ್ಲೆ; ಐವರ ವಿರುದ್ಧ ಎಫ್ಐಆರ್

‌Assault Case: ಮೈಸೂರಿನ ಸರ್ಕಾರಿ ಗೆಸ್ಟ್‌ ಹೌಸ್‌ ಬಳಿ ಶುಕ್ರವಾರ ಮಧ್ಯಾಹ್ನ ಲಕ್ಷ್ಮಿನಾರಾಯಣ್ ಎಂಬ ಯುವಕನ ಮೇಲೆ ಹಲ್ಲೆ ನಡೆದಿತ್ತು. ಮೋದಿ ಹಾಡು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಯುವಕನನ್ನು ಥಳಿಸಲಾಗಿತ್ತು. ಈ ಸಂಬಂಧ ಐವರ ವಿರುದ್ಧ ಕೇಸ್‌ ದಾಖಲಾಗಿದೆ.

VISTARANEWS.COM


on

‌Assault Case
Koo

ಮೈಸೂರು: ಮೋದಿ ಹಾಡು ಬಿಡುಗಡೆ ಮಾಡಿದ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ (‌Assault Case) ಸಂಬಂಧಿಸಿ ನಗರದ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಲ್ಲೆಗೊಳಗಾದ ಯುವಕ ನೀಡಿದ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಲೀಂ, ಜಾವೀದ್, ಪಾಷಾ ಸೇರಿ ಐವರ ಮೇಲೆ ಎಫ್ಐಆರ್ ದಾಖಲಾಗಿದೆ. ಹಳ್ಳಿಕೆರೆಹುಂಡಿ ಗ್ರಾಮದ ಲಕ್ಷ್ಮಿನಾರಾಯಣ್ ಎಂಬ ಯುವಕನ ಮೇಲೆ ಮೈಸೂರಿನ ಸರ್ಕಾರಿ ಗೆಸ್ಟ್‌ ಹೌಸ್‌ ಬಳಿ ಶುಕ್ರವಾರ ಮಧ್ಯಾಹ್ನ ಹಲ್ಲೆ ನಡೆದಿತ್ತು.

ಮೂರನೇ ಬಾರಿ ಮೋದಿ ಅಧಿಕಾರಕ್ಕೆ ಏಕೆ ಬರಬೇಕು ಎಂದು ಯುವಕ ಹಾಡು ರಚಿಸಿದ್ದ. ಸಾಮಾಜಿಕ ಜಾಲತಾಣದಲ್ಲಿ ವೀಕ್ಷಕರ ಸಂಖ್ಯೆ ಹೆಚ್ಚಿಸಲು ಸಾರ್ವಜನಿಕವಾಗಿ ವಿಡಿಯೊ ನೋಡುವಂತೆ ಮನವಿ ಮಾಡುತ್ತಿದ್ದ.
ಮೈಸೂರಿನ ಸರ್ಕಾರಿ ಅತಿಥಿ ಗೃಹದ ಆವರಣದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ವಿಡಿಯೊ ನೋಡುವಂತೆ ಹೇಳಿದ್ದ. ನಂತರ ಆತನ ಮೇಲೆ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿತ್ತು. ಇದೀಗ ಗಾಯಾಳು ಲಕ್ಷ್ಮೀನಾರಾಯಣನ ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಪಾಕ್‌ ಪರ ಘೋಷಣೆ ಕೂಗಲು ಒತ್ತಾಯ

ಪ್ರಧಾನಿ ಮೋದಿ ಕುರಿತ ಹಾಡು ಬಿಡುಗಡೆ ಮಾಡಿದ್ದಕ್ಕೆ ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಹಿಂದು ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿತ್ತು. ಇದೇ ವೇಳೆ ಪಾಕ್‌ ಪರ ಮತ್ತು ಅಲ್ಲಾಹು ಅಕ್ಬರ್‌ ಎಂದು ಪರ ಘೋಷಣೆ (Pro Pak Slogan) ಕೂಗುವಂತೆ ಯುವಕನಿಗೆ ಒತ್ತಾಯ ಮಾಡಲಾಗಿತ್ತು.

ಮೋದಿ ಹಾಡು ರಿಲೀಸ್‌ ಮಾಡಿದ್ದೀಯ, ನಿನ್ನ ಸಾಯಿಸುತ್ತೇವೆ ಎಂದು ಅಪರಿಚಿತ ಮುಸ್ಲಿಂ ಯುವಕರ ಗುಂಪು, ಹಿಂದು ಯುವಕನ ಬಟ್ಟೆ ಹರಿದು ಹಲ್ಲೆ ನಡೆಸಿ ಪರಾರಿಯಾಗಿತ್ತು. ಹಲ್ಲೆ ವೇಳೆ ಪಾಕಿಸ್ತಾನ ಹಾಗೂ ಅಲ್ಲಾಹ್‌ ಪರ ಘೋಷಣೆ ಕೂಗುವಂತೆ ಯುವಕನಿಗೆ ಒತ್ತಾಯ ಮಾಡಿದ್ದರು. ನಂತರ ಹಲ್ಲೆಗೊಳಗಾದ ಯುವಕನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಘಟನೆ ಬಗ್ಗೆ ವಿಡಿಯೊ ಮೂಲಕ ಲಕ್ಷ್ಮಿನಾರಾಯಣ್ ಮಾಹಿತಿ ನೀಡಿದ್ದ.

ಇದನ್ನೂ ಓದಿ | Karnataka Weather : ಕೊಪ್ಪಳದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು; ಹೊತ್ತಿ ಉರಿದ ತೆಂಗಿನ ಮರ, ಧರೆಗುರುಳಿದ ಮರಗಳು, ವಿದ್ಯುತ್‌ ಕಂಬ

ಘಟನೆ ಬಗ್ಗೆ ಗಾಯಾಳು ಲಕ್ಷ್ಮಿನಾರಾಯಣ್‌ ಪ್ರತಿಕ್ರಿಯಿಸಿ, ನಾನು ಕಳೆದ ವಾರ ಮೋದಿ ಸಾಂಗ್‌ ರಿಲೀಸ್‌ ಮಾಡಿದ್ದೆ. ಪರಿಚಯಸ್ಥರ ಬಳಿ ನಮ್ಮ ಯುಟ್ಯೂಟ್‌ ಚಾನೆಲ್‌ ಸಬ್‌ಸ್ಕ್ರೈಬ್‌ ಮಾಡಿಸುತ್ತಿದ್ದೆ. ಸರ್ಕಾರಿ ಗೆಸ್ಟ್‌ ಹೌಸ್‌ ಬಳಿ ಮುಸ್ಲಿಂ ವ್ಯಕ್ತಿಯೊಬ್ಬರು ಬಂದರು. ಅವರು ಮುಸ್ಲಿಂ ಎಂದು ನನಗೆ ಗೊತ್ತಿರಲಿಲ್ಲ. ನಂತರ ಆ ವ್ಯಕ್ತಿ ವಿಡಿಯೊ ನೋಡಿದ. ನಂತರ ನನ್ನನ್ನು ಒಳಗೆ ಕರೆದುಕೊಂಡು ಹೋಗಿ, ಮೋದಿ ಬಗ್ಗೆ ಸಾಂಗ್‌ ಮಾಡಿದ್ದೀಯಾ, ನಿನ್ನ ಇಲ್ಲೇ ಕೊಲ್ಲುತ್ತೇವೆ ಎಂದು ಸಹಚರರ ಜತೆ ಸೇರಿ ಹಲ್ಲೆ ಮಾಡಿದರು. ನನ್ನ ಕೈಯಲ್ಲಿ ಇದ್ದ ಶ್ರೀರಾಮನ ಫೋಟೊ, ಧ್ವಜವನ್ನು ಕಿತ್ತು ಬಿಸಾಡಿದರು. ನಂತರ ಅವಾಚ್ಯ ಶಬ್ದಗಳಿಂದ ಬೈಯ್ದು ನನ್ನ ಮೇಲೆ ಬಿಯರ್‌ ಎರಚಿ, ಮೂತ್ರ ವಿಸರ್ಜನೆ ಮಾಡಿ, ಸಿಗರೇಟ್‌ನಿಂದ ಸುಟ್ಟು ಅಮಾನುಷವಾಗಿ ಹಲ್ಲೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

Continue Reading

ಉತ್ತರ ಕನ್ನಡ

Uttara Kannada News: ಬನವಾಸಿಯ ಐತಿಹಾಸಿಕ ಶ್ರೀ ಉಮಾಮಧುಕೇಶ್ವರ ದೇವರ ಮಹಾರಥೋತ್ಸವ

Uttara Kannada News: ಬನವಾಸಿಯ ಐತಿಹಾಸಿಕ ಮಾತೋಬರ ಶ್ರೀ ಉಮಾಮಧುಕೇಶ್ವರ ದೇವರ ಮಹಾರಥೋತ್ಸವು ಭಕ್ತ ಸಾಗರದ ಮಧ್ಯೆ ವಿಜೃಂಭಣೆಯಿಂದ ನಡೆಯಿತು.

VISTARANEWS.COM


on

Mathobara Sri Umamadhukeshwara devara Maharathotsava at Banavasi
Koo

ಬನವಾಸಿ: ಬನವಾಸಿಯ ಐತಿಹಾಸಿಕ ಮಾತೋಬರ ಶ್ರೀ ಉಮಾಮಧುಕೇಶ್ವರ ದೇವರ ಮಹಾರಥೋತ್ಸವು ಭಕ್ತ ಸಾಗರದ ಮಧ್ಯೆ ವಿಜೃಂಭಣೆಯಿಂದ (Uttara Kannada News) ನಡೆಯಿತು.

ಮಹಾರಥೋತ್ಸವದ ಅಂಗವಾಗಿ ಗುರುವಾರ ಬೆಳಗ್ಗೆ ಶ್ರೀ ಮಧುಕೇಶ್ವರ ದೇವರಿಗೆ ವಿಶೇಷ ಪೂಜೆ ನೆರವೇರಿಸಿ, ಬಳಿಕ ದೇವರ ಉತ್ಸವ ಮೂರ್ತಿಯನ್ನು ಅಲಂಕೃತ ಪಲ್ಲಕ್ಕಿಯಲ್ಲಿಟ್ಟು ವಿವಿಧ ವಾದ್ಯ ಮೇಳದೊಂದಿಗೆ ಮೆರವಣಿಗೆ ಮಾಡಲಾಯಿತು. ರಥಕ್ಕೆ ಪೂಜೆ ಸಲ್ಲಿಸಿದ ಬಳಿಕ ಶ್ರೀ ಉಮಾಮಧುಕೇಶ್ವರ ದೇವರ ಉತ್ಸವ ಮೂರ್ತಿಯನ್ನು ಮನ್ಮಹಾಸ್ಯಂದನ ರಥದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು.

ಇದನ್ನೂ ಓದಿ: Jackfruit Benefits: ಈ ಬೇಸಿಗೆಯಲ್ಲಿ ಹಲಸಿನಹಣ್ಣನ್ನು ಯಾಕೆ ತಿನ್ನಲೇಬೇಕು ಗೊತ್ತೆ? ಇಲ್ಲಿವೆ 10 ಕಾರಣಗಳು!

ಪ್ರತಿಷ್ಟಾಪನೆಯ ನಂತರ ಭಕ್ತರಿಗೆ ದರ್ಶನಕ್ಕಾಗಿ ಅವಕಾಶ ಕಲ್ಪಿಸಲಾಗಿತ್ತು. ಸಾವಿರಾರು ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು, ಭಕ್ತಿ ಸಮರ್ಪಿಸಿದರು. ರಾತ್ರಿ 12 ಗಂಟೆಯವರೆಗೆ ಸಾವಿರಾರು ಭಕ್ತರು ದರ್ಶನ ಪಡೆದರು.

ಬಳಿಕ ರಾತ್ರಿ 12-30ಕ್ಕೆ ಮಹಾಮಂಗಳಾರತಿ ನೆರವೇರಿದ ಬಳಿಕ ಭಕ್ತರ ಹರ್ಷೋದ್ಗಾರದ ನಡುವೆ ಶ್ರೀ ಮಧುಕೇಶ್ವರ ದೇವರ ಮಹಾರಥೋತ್ಸವ ಆರಂಭಗೊಂಡಿತು. ಬೃಹತ್ ರುದ್ರಾಕ್ಷಿ ಮಾಲೆ, ವಿವಿಧ ಫಲ-ಪುಷ್ಪ, ವಿದ್ಯುತ್ ದೀಪಗಳಿಂದ ಅಲಂಕರಿಸಿದ ಮಹಾರಥವನ್ನು ಭಕ್ತ ಸಮೂಹ ಹರಹರ ಮಹಾದೇವ ಎಂಬ ಜಯ ಘೋಷ ಮೊಳಗಿಸುತ್ತ ಎಳೆಯುತ್ತ ಸಾಗಿದರು.

ಇದನ್ನೂ ಓದಿ: Wipro Q4 Results: ಐಟಿ ದೈತ್ಯ ವಿಪ್ರೋದ ನಿವ್ವಳ ಲಾಭದಲ್ಲಿ ಶೇ. 8ರಷ್ಟು ಕುಸಿತ

ನೆರೆದಿದ್ದ ಸಾವಿರಾರು ಭಕ್ತರು ಹೂ, ಬಾಳೆಹಣ್ಣು ರಥಕ್ಕೆ ಎಸೆದು ಭಕ್ತಿ ಸಮರ್ಪಿಸಿದರು. ಮಹಾ ರಥೋತ್ಸವವು ಶುಕ್ರವಾರ ಬೆಳಿಗ್ಗೆ 5 ಗಂಟೆ ವೇಳೆಗೆ ಸಂಪನ್ನಗೊಂಡಿತು.

Continue Reading

ಮಂಡ್ಯ

Lok Sabha Election 2024: ರೈತನ ಮಗ ಸ್ಟಾರ್ ಚಂದ್ರು ಗೆಲ್ಲಿಸಿ, ಜಿಲ್ಲೆಯ ಸ್ವಾಭಿಮಾನ ಉಳಿಸಿ: ಶಾಸಕ ನರೇಂದ್ರಸ್ವಾಮಿ

Lok Sabha Election 2024: ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯಿತಿಗಳಲ್ಲಿ ಶಾಸಕ ನರೇಂದ್ರಸ್ವಾಮಿ ಮತಯಾಚನೆ ನಡೆಸಿದರು.

VISTARANEWS.COM


on

MLA Narendraswamy Election campaign in various places at Malavalli Assembly Constituency
Koo

ಮಳವಳ್ಳಿ: ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಇದೇ ಜಿಲ್ಲೆಯ ರೈತನ ಮಗ. ಹಳ್ಳಿಗಾಡಿನಲ್ಲಿ ಓದಿ, ನಗರದಲ್ಲಿ ಉದ್ಯಮಿಯಾಗಿ ಬೆಳೆದು ಈಗ ಹುಟ್ಟೂರಿನ ಋಣ ತೀರಿಸಲು ರಾಜಕೀಯಕ್ಕೆ ಬಂದಿದ್ದಾರೆ. ರೈತನ ಮಗನಾದ ಸ್ಟಾರ್ ಚಂದ್ರು ಅವರನ್ನು ಗೆಲ್ಲಿಸಿ, ಜಿಲ್ಲೆಯ ಸ್ವಾಭಿಮಾನ ಉಳಿಸಬೇಕು ಎಂದು ಶಾಸಕ ನರೇಂದ್ರಸ್ವಾಮಿ ಮತದಾರರಲ್ಲಿ ಮನವಿ (Lok Sabha Election 2024) ಮಾಡಿದರು.

ಮಳವಳ್ಳಿ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯಿತಿಗಳಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರ ಪರವಾಗಿ ಮತಯಾಚಿಸಿ ಮಾತನಾಡಿದರು.

ಇದನ್ನೂ ಓದಿ: Wipro Q4 Results: ಐಟಿ ದೈತ್ಯ ವಿಪ್ರೋದ ನಿವ್ವಳ ಲಾಭದಲ್ಲಿ ಶೇ. 8ರಷ್ಟು ಕುಸಿತ

ಮೋದಿ ಶ್ರೀಮಂತರ ಸಾಲಮನ್ನಾ ಮಾಡ್ತಾರೆ, ರೈತರ ಸಾಲಮನ್ನಾ ಮಾಡಲ್ಲ. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಸಾಲಮನ್ನಾ ಮಾಡುತ್ತದೆ. ಉದ್ಯೋಗದ ಭದ್ರತೆ ನಾವು ಕೊಡುತ್ತೇವೆ. ಜನರ ಬದುಕನ್ನು ಹಸನು ಮಾಡುವ ಕೆಲಸವನ್ನು ಕಾಂಗ್ರೆಸ್ ಮಾಡಲಿದೆ ಎಂದರು.

ರಾಜ್ಯದಲ್ಲಿ ಐದು ಗ್ಯಾರಂಟಿಗಳನ್ನು ನೀಡಿದ ಪರಿಣಾಮ ಬರಗಾಲದಲ್ಲಿ ಬಡವರಿಗೆ ಕಾಂಗ್ರೆಸ್ ನೆರವಾಗಿದೆ ಎಂದ ಅವರು, ಅಭ್ಯರ್ಥಿ ಸ್ಟಾರ್ ಚಂದ್ರು ಅವರನ್ನು ಬೆಂಬಲಿಸಿ, ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: Karnataka Weather : ವರ್ಷಾಘಾತಕ್ಕೆ ಉತ್ತರ ಕರ್ನಾಟಕ ಸುಸ್ತು; ರಾತ್ರಿಯೆಲ್ಲ ಗಾಳಿ ಸಹಿತ ಮಳೆಯಾರ್ಭಟ

ವಿಧಾನಪರಿಷತ್ ಮಾಜಿ ಸದಸ್ಯ ಮರಿತಿಬ್ಬೇಗೌಡ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ವಿವರಿಸಿದರು.

Continue Reading
Advertisement
Video Viral Parameshwara statement on ballot paper bogus voting
ವೈರಲ್ ನ್ಯೂಸ್1 min ago

Video Viral: ಬ್ಯಾಲೆಟ್‌ ಪೇಪರ್‌ ಕಳ್ಳ ಮತದಾನದ ರಹಸ್ಯ ಬಿಚ್ಚಿಟ್ಟ ಪರಮೇಶ್ವರ್;‌ ಕಾಂಗ್ರೆಸ್‌ EVM ಬೇಡ ಎನ್ನಲು ಇದೇ ಕಾರಣವೆಂದ ಜೆಡಿಎಸ್!

Money Guide
ಮನಿ-ಗೈಡ್25 mins ago

Money Guide: ಮ್ಯೂಚುವಲ್‌ ಫಂಡ್‌ನಲ್ಲಿ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಇದರಲ್ಲಿನ ವಿಧಗಳ ಬಗ್ಗೆ ಇಲ್ಲಿದೆ ಮಾಹಿತಿ

‌Assault Case
ಕರ್ನಾಟಕ26 mins ago

‌Assault Case: ಮೋದಿ ಹಾಡು ಬರೆದ ಯುವಕನ ಮೇಲೆ ಹಲ್ಲೆ; ಐವರ ವಿರುದ್ಧ ಎಫ್ಐಆರ್

Char Dham Yatra 2024
Latest39 mins ago

Char Dham Yatra 2024: ಈ ಬೇಸಿಗೆಯಲ್ಲಿ ಚಾರ್ ಧಾಮ್ ಯಾತ್ರೆಗೆ ಸಿದ್ಧರಾಗಿ! ನೋಂದಣಿ ಮಾಹಿತಿ ಇಲ್ಲಿದೆ

Diabetic Controle
ಲೈಫ್‌ಸ್ಟೈಲ್49 mins ago

Diabetic Controle: ಕಾಡುವ ಮಧುಮೇಹ ನಿಯಂತ್ರಣಕ್ಕೆ ಇಲ್ಲಿದೆ ಸುಲಭ ತಂತ್ರ

Banned Films
ಸಿನಿಮಾ50 mins ago

Banned Film: ಈ 9 ಹಾಲಿವುಡ್ ಚಿತ್ರಗಳು ಭಾರತದಲ್ಲಿ ಬ್ಯಾನ್!

Workers protest
ವಿದೇಶ55 mins ago

Workers protest: ಇಸ್ರೇಲ್​ ಜತೆಗಿನ ಒಪ್ಪಂದ ವಿರೋಧಿಸಿ ಪ್ರತಿಭಟಿಸಿದ್ದ ಗೂಗಲ್​​ನ 28​ ಉದ್ಯೋಗಿಗಳ ವಜಾ

Cardiac Arrest
ಲೈಫ್‌ಸ್ಟೈಲ್1 hour ago

Cardiac Arrest: ಮಹಿಳೆಯರೇ ಹುಷಾರು; ನೀವು ಮಾಡುವ ಈ ತಪ್ಪುಗಳೇ ಹೃದಯಾಘಾತಕ್ಕೆಕಾರಣ!

Mathobara Sri Umamadhukeshwara devara Maharathotsava at Banavasi
ಉತ್ತರ ಕನ್ನಡ1 hour ago

Uttara Kannada News: ಬನವಾಸಿಯ ಐತಿಹಾಸಿಕ ಶ್ರೀ ಉಮಾಮಧುಕೇಶ್ವರ ದೇವರ ಮಹಾರಥೋತ್ಸವ

MLA Narendraswamy Election campaign in various places at Malavalli Assembly Constituency
ಮಂಡ್ಯ1 hour ago

Lok Sabha Election 2024: ರೈತನ ಮಗ ಸ್ಟಾರ್ ಚಂದ್ರು ಗೆಲ್ಲಿಸಿ, ಜಿಲ್ಲೆಯ ಸ್ವಾಭಿಮಾನ ಉಳಿಸಿ: ಶಾಸಕ ನರೇಂದ್ರಸ್ವಾಮಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ5 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ15 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌