485ರೂ.ಗಾಗಿ ಕೊಲೆಯಾದ ಇಬ್ಬರು ಕಾವಲುಗಾರರು; ಹುಣಸೂರು ಜೋಡಿ ಹತ್ಯೆಯ ಒಬ್ಬ ಆರೋಪಿ ಅರೆಸ್ಟ್​ Vistara News
Connect with us

ಕರ್ನಾಟಕ

485ರೂ.ಗಾಗಿ ಕೊಲೆಯಾದ ಇಬ್ಬರು ಕಾವಲುಗಾರರು; ಹುಣಸೂರು ಜೋಡಿ ಹತ್ಯೆಯ ಒಬ್ಬ ಆರೋಪಿ ಅರೆಸ್ಟ್​

ಮರದ ಮಿಲ್​ಗೆ ನಿಜವಾದ ಕಾವಲುಗಾರ ವೆಂಕಟೇಶ್​ ಆಗಿದ್ದ. ಷಣ್ಮುಗ ಬುದ್ಧಿಮಾಂದ್ಯನಾಗಿದ್ದು, ಸದಾ ವೆಂಕಟೇಶ್ ಜತೆಗೇ ಇರುತ್ತಿದ್ದ. ಅವನನ್ನೂ ವಾಚ್​ಮ್ಯಾನ್​ ಎಂದೇ ಪರಿಗಣಿಸಲಾಗಿತ್ತು. ಇವರಿಬ್ಬರೂ ಹತ್ಯೆಯಾಗಿದ್ದು ಅನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು.

VISTARANEWS.COM


on

Shanmukh Venkatesh And Abhishek
ಕೊಲೆಯಾಷ ಷಣ್ಮಗ, ವೆಂಕಟೇಶ್​ ಮತ್ತು ಆರೋಪಿ ಅಭಿಷೇಕ್​
Koo

ಮೈಸೂರು: ಕಳೆದ ಮೂರು ದಿನಗಳ ಹಿಂದೆ ಹುಣಸೂರಲ್ಲಿ (Hunsuru News) ನಡೆದಿದ್ದ ಭೀಕರ ಜೋಡಿ ಕೊಲೆ (Double Murder) ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕೇವಲ 485 ರೂಪಾಯಿಯಾಗಿ ಈ ಡಬಲ್​ ಮರ್ಡರ್​ ನಡೆದಿದೆ. ಒಬ್ಬ ಆರೋಪಿ ಅಭಿಷೇಕ್​ (23) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಇನ್ನಿಬ್ಬರು ಆರೋಪಿಗಳು ನಾಪತ್ತೆಯಾಗಿದ್ದು, ಅವರನ್ನು ಪೊಲೀಸರು ಹುಡುಕುತ್ತಿದ್ದಾರೆ. ಹುಣಸೂರು ಪಟ್ಟಣದ ಸರಸ್ವತಿಪುರಂ ಬಡಾವಣೆಯಲ್ಲಿರುವ ಮಿಸ್ಬಾ ಸಾಮಿಲ್‌ನಲ್ಲಿದ್ದ ಇಬ್ಬರು ಕಾವಲುಗಾರರಾದ ವೆಂಕಟೇಶ (75), ಷಣ್ಮುಗ (65) ಎಂಬುವರ ಹತ್ಯೆ ಮೂರು ದಿನಗಳ ಹಿಂದೆ ನಡೆದಿತ್ತು. ಇವರ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿತ್ತು (Murder Case). ಈ ಪ್ರಕರಣವನ್ನೀಗ ಪೊಲೀಸರು ಬೇಧಿಸಿದ್ದಾರೆ.

ಕೊಲೆ ಆರೋಪಿ ಅಭಿಷೇಕ್ ಸುಲಿಗೆ,​ ದರೋಡೆ, ಕಳ್ಳತನ, ವಸೂಲಿಯನ್ನೇ ಕಾಯಕ ಮಾಡಿಕೊಂಡಿದ್ದ. ಹಲವು ಕೇಸ್​ಗಳಲ್ಲಿ ಪೊಲೀಸರಿಗೆ ಬೇಕಾದವನು ಆಗಿದ್ದ. ಅವನಿಗೆ ಶೋಕಿಗಾಗಿ ಹಣ ಬೇಕಿತ್ತು. ನ್ಯಾಯವಾಗಿ ದುಡಿಯುವುದು ಗೊತ್ತಿಲ್ಲದ ಈತ ತನ್ನ ಸಹಚರರೊಂದಿಗೆ ಸೇರಿ ಕಳ್ಳತನದ ಪ್ಲ್ಯಾನ್ ಹಾಕಿದ್ದ. ಇಬ್ಬರು ವ್ಯಾಚ್​ಮ್ಯಾನ್​ಗಳಿದ್ದ ಸಾಮಿಲ್​​ಗೆ ನುಗ್ಗಿದ್ದರು. ಅಲ್ಲಿ ಹೋಗಿ ಅವರಿಬ್ಬರನ್ನೂ ಬೆದರಿಸಿ ಹಣ ಕೊಡುವಂತೆ ಹೇಳಿದ್ದಾರೆ. ಇಬ್ಬರ ಜೇಬನ್ನೂ ಹುಡುಕಿದಾಗ ಸಿಕ್ಕಿದ್ದು 485ರೂಪಾಯಿ. ಇದರಿಂದ ಕೋಪಗೊಂಡ ಅಭಿಷೇಕ್ ಮತ್ತು ಸಹಚರರು ಕಾವಲುಗಾರರನ್ನು ಕೊಂದು ಹಾಕಿದ್ದಾರೆ.

ಇದನ್ನೂ ಓದಿ: Murder Case: ಹುಣಸೂರು ಪಟ್ಟಣದಲ್ಲಿ ಜೋಡಿ ಕೊಲೆ, ಕಾವಲುಗಾರರೇ ಮರ್ಡರ್‌

ಈ ಮರದ ಮಿಲ್​ಗೆ ನಿಜವಾದ ಕಾವಲುಗಾರ ವೆಂಕಟೇಶ್​ ಆಗಿದ್ದ. ಷಣ್ಮುಗ ಬುದ್ಧಿಮಾಂದ್ಯನಾಗಿದ್ದು, ಸದಾ ವೆಂಕಟೇಶ್ ಜತೆಗೇ ಇರುತ್ತಿದ್ದ. ಅವನನ್ನೂ ವಾಚ್​ಮ್ಯಾನ್​ ಎಂದೇ ಪರಿಗಣಿಸಲಾಗಿತ್ತು. ಇವರಿಬ್ಬರೂ ಹತ್ಯೆಯಾಗಿದ್ದು ಅನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಇದೀಗ ಆರೋಪಿ ಅಭಿಷೇಕ್​​ನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇನ್ನಿಬ್ಬರು ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

BJP JDS alliance : ಸೆಕ್ಯುಲರಿಸಂ ಅನ್ನು ನಾಶ ಮಾಡಿದ್ದೇ ಕಾಂಗ್ರೆಸ್‌: ಎಚ್.ಡಿ. ಕುಮಾರಸ್ವಾಮಿ ಕಿಡಿ

BJP JDS alliance : ಕೋಮುವಾದಿ ಬಿಜೆಪಿ ಜತೆ ಜೆಡಿಎಸ್‌ ಮೈತ್ರಿ ಮಾಡಿಕೊಳ್ಳುತ್ತಿದೆ ಎಂದು ಆರೋಪ ಮಾಡಿರುವ ಕಾಂಗ್ರೆಸ್‌ ನಾಯಕರ ವಿರುದ್ಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮುಗಿಬಿದ್ದಿದ್ದಾರೆ. ಅಲ್ಲದೆ, ಜಾತ್ಯತೀತತೆಯನ್ನು ನಾಶ ಮಾಡಿದ್ದೇ ಕಾಂಗ್ರೆಸ್‌ ಎಂದು ಕಿಡಿಕಾರಿದ್ದಾರೆ.

VISTARANEWS.COM


on

Edited by

HD Kumaraswamy Press meet vs congress government
Koo

ಬೆಂಗಳೂರು: ಎಲ್ಲೆಲ್ಲಿ ಸೆಕ್ಯುಲರಿಸಂ ಇತ್ತೋ ಅದನ್ನು ಕಾಂಗ್ರೆಸ್‌ನವರೇ ನಾಶ ಮಾಡಿದರು. ಅಧಿಕಾರಕ್ಕಾಗಿ ಏನನ್ನೆಲ್ಲ ಮಾಡಿದರು? ಫಾರೂಕ್ ಅಬ್ದುಲ್ಲ (Farooq Abdullah) ಅವರನ್ನು ಯಾವ ಸಿದ್ಧಾಂತ ಉಳಿಸುವುದಕ್ಕೆ ಅವರು ಸೋಲಿಸಿದರು? ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು (Former Prime Minister HD DeveGowda) ಇದನ್ನೆಲ್ಲ ನೋಡಿ, ನೋವು ಅನುಭವಿಸಿದ್ದಾರೆ. ಒಂದು ಸಮಾಜಕ್ಕೆ ಸಹಾಯ ಮಾಡಬೇಕು ಅಂತ ದೇವೇಗೌಡರು ಮಾಡಿದ ಹಾಗೆ ಯಾರೂ ಮಾಡಿಲ್ಲ. ಈಗಾಗಲೇ ಇಬ್ರಾಹಿಂ ಅವರಿಗೆ ಎಲ್ಲ ಮಾಹಿತಿ ಕೊಟ್ಟಿದ್ದೇವೆ. ಮುಸ್ಲಿಮರಿಗೆ ನಾನು ಗೌರವ ಕೊಟ್ಟಿದ್ದೇನೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದರು. ಈ ಮೂಲಕ ಬಿಜೆಪಿ – ಜೆಡಿಎಸ್‌ ಮೈತ್ರಿ (BJP JDS alliance) ಬಗ್ಗೆ ಪ್ರಸ್ತಾಪ ಮಾಡಿರುವ ಕಾಂಗ್ರೆಸ್‌ ನಾಯಕರಿಗೆ ತಿರುಗೇಟು ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ನನ್ನ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಾಢ್ಯವಾಗಿದ್ದರೆ, ನನಗೆ ವೋಟ್ ಹಾಕುತ್ತಿರಲಿಲ್ಲ. ನಾನು ಯಾರಿಗೂ ಅಗೌರವಯುತವಾಗಿ ನಡೆದುಕೊಂಡಿಲ್ಲ. ಇಬ್ರಾಹಿಂ ಜೊತೆ ಹಲವು ವಿಷಯ ಚರ್ಚೆ ಮಾಡಿದ್ದೇನೆ. ಇವತ್ತು ದೇಶಕ್ಕೆ ಅವಶ್ಯಕತೆ ಇರುವ ಬಗ್ಗೆ ಲೆಕ್ಕ ಹಾಕಿದ್ದೇವೆ. ಹಾಗಾಗಿ ಈ ಮೈತ್ರಿಯನ್ನು ಮಾಡಿಕೊಳ್ಳುತ್ತಿದ್ದೇವೆ ಎಂದು ಹೇಳಿದರು.

ಸಿಎಂ ಮಾಡಿ ಎಂದು ನಾವು ಕೇಳಿದ್ದೆವಾ?

ಈಗ ಬಿಜೆಪಿ ಬಿ ಟೀಂ ಅನ್ನೋದನ್ನು ದೇವೇಗೌಡರು ಪ್ರೂವ್ ಮಾಡಿದ್ದರು ಅಂತಿದ್ದಾರಲ್ಲ ಅವತ್ತು ದೇವೇಗೌಡರು ನಮ್ಮ ಪಕ್ಷಕ್ಕೆ ಮುಖ್ಯಮಂತ್ರಿ ಸ್ಥಾನ ಬೇಡ ಅಂದಿದ್ದರು. ಆಗ ನಾವು ಅಧಿಕಾರಕ್ಕಾಗಿ ಕಾಂಗ್ರೆಸ್ ಜತೆ ಸೇರಿರಲಿಲ್ಲ. ಆದರೆ, ನನ್ನನ್ನೇ ಮುಖ್ಯಮಂತ್ರಿ ಮಾಡಬೇಕು ಎಂದು ಮುಂದೆ ಬಂದಿದ್ದು ಯಾರು? ಅಂದು ನನಗೆ ಬಿಜೆಪಿಯಿಂದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ, ನಡ್ಡಾ ಅವರಿಂದ ಫೋನ್ ಬಂದಿತ್ತು. ಆಗ ನಾನು ಬಿಜೆಪಿ ಜತೆ ಸೇರಿದ್ದರೆ 5 ವರ್ಷದ ಆಡಳಿತ ನಮ್ಮದಾಗಿರುತ್ತಿತ್ತು ಎಂದು ಎಚ್.ಡಿ. ಕುಮಾರಸ್ವಾಮಿ ಗುಡುಗಿದರು.

ಹಾಸನದಲ್ಲಿ ರಾಹುಲ್ ಗಾಂಧಿ ಕರೆದುಕೊಂಡು ಬಂದು ಭಾಷಣ ಮಾಡಿಸಿದ್ದರು. ಸಿದ್ದರಾಮಯ್ಯ ಅವರು ಜಾತ್ಯತೀತತೆಯನ್ನು ಉಳಿಸುತ್ತೇನೆ ಎಂದು ಹೇಳುತ್ತಾರೆ. ಆದರೆ, ಅಂದು ನನ್ನ ಸರ್ಕಾರವನ್ನು ಬೀಳಿಸುವಾಗ 5 ಶಾಸಕರನ್ನು ಕರೆತಂದರೆ, ಅತ್ತ ಕಡೆಯಿಂದ ಮತ್ತೆ ಐವರನ್ನು ಕಳುಹಿಸಿಕೊಡುತ್ತೇನೆ ಎಂದು ಹೇಳಿದ್ದವರು ಯಾರು? ಜಾತ್ಯತೀತೆ ಉಳಿಸುವ ಕಾಂಗ್ರೆಸ್ ಸರ್ಕಾರವನ್ನು ಇದೀಗ ನೋಡುತ್ತಿದ್ದೀರಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ಕಾವೇರಿ ತಟದಲ್ಲಿ ರೈತರ ಉಳಿವಿಗೆ ದೇವೇಗೌಡರೇ ಕಾರಣ

ನೀರಾವರಿ ಸಮಸ್ಯೆ ಬಗೆಹರಿಸಲು ದೇವೇಗೌಡರು ಹಳ್ಳಿ ಹಳ್ಳಿ ಸುತ್ತಿದ್ದಾರೆ. ನೀರಾವರಿಗೆ ದೇವೇಗೌಡರು ಮಾಡಿರುವುದನ್ನು ಯಾರೊಬ್ಬರೂ ಮಾಡಿಲ್ಲ. ಚರ್ಚೆ ಮಾಡುವ ಸಂಘಟನೆಗಳಿಗೆ ಒಂದು ಮಾತು ಹೇಳುತ್ತೇನೆ. ಕಾವೇರಿ ತಟದಲ್ಲಿ ರೈತರು ಉಳಿದಿರುವುದಕ್ಕೆ ದೇವೇಗೌಡರೇ ಕಾರಣ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಪ್ರಿಯಾಂಕ್ ಖರ್ಗೆ ಮಾತಿಗೆ ತಿರುಗೇಟು

ನಮ್ಮ ಪಕ್ಷ ಉಳಿಸಿಕೊಳ್ಳಲು ಕಾಲು ಹಿಡಿದುಕೊಂಡರು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಜನತಾದಳಕ್ಕೆ ಇನ್ನು ಆ ದುರ್ಗತಿ ಬಂದಿಲ್ಲ. ಮಲ್ಲಿಕಾರ್ಜುನ ಖರ್ಗೆಯವರು ಯಾಕೆ ಕಾವೇರಿ ಬಗ್ಗೆ ಧ್ವನಿ ಎತ್ತಲಿಲ್ಲ? ಕಾವೇರಿ ವಿಚಾರವಾಗಿ ಯಾಕೆ ಕಾಂಗ್ರೆಸ್ ಧ್ವನಿ ಎತ್ತುತ್ತಿಲ್ಲ? ಕೆಆರ್‌ಎಸ್‌ ನೀರಿನ ಬಗ್ಗೆ ನಾನು ಮಾಹಿತಿ ಪಡೆದಿದ್ದೇನೆ. ಈ ಸರ್ಕಾರ ಇಷ್ಟು ಕೇವಲವಾಗಿ ನಡೆದುಕೊಳ್ಳುತ್ತಿದೆ. ವಿಷಯವನ್ನು ಡೈವರ್ಟ್ ಮಾಡುತ್ತಿದೆ. ಪಕ್ಷದ ಬಗ್ಗೆ ಹೆಸರು ಕೆಡಿಸಲು ಹೊರಟಿದ್ದಾರೆ. ನನಗೇನೂ ಶಾಕ್ ಕೊಡುವ ವಿಷಯವಲ್ಲ ಇದು. ಈಗಾಗಲೇ ನನಗೆ ಸಾಕಷ್ಟು ಶಾಕ್ ಕೊಟ್ಟಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಗುಡುಗಿದರು.

ಮೈನಾರಿಟಿಗೆ ತೊಂದರೆ ಮಾಡಲ್ಲ: ಎಚ್.ಡಿ. ದೇವೇಗೌಡ

ನಾನು ಇವತ್ತು ನೀರಾವರಿ ಮಂತ್ರಿಗಳ ಯಾವ ಮಾತಿಗೂ ಗಮನ ಕೊಡಲ್ಲ. ಬಾಂಗ್ಲಾದೇಶದ ನೀರಿನ ಸಮಸ್ಯೆ ಬಗೆಹರಿಸಿದ್ದೆ. ನಮ್ಮ ಮುಂದೆ ಇರೋದು ಮೈನಾರಿಟಿ ಮಾತು ಅಷ್ಟೇ. ನಾವು ಮೈನಾರಿಟಿ ಎಲ್ಲೇ ಇದ್ದರೂ ತೊಂದರೆ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ ಎಂದು ಎಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದರು. ಆಗ ಮಧ್ಯ ಪ್ರವೇಶಿಸಿದ ಎಚ್.ಡಿ. ಕುಮಾರಸ್ವಾಮಿ, ಮೈನಾರಿಟಿ ಮಾತ್ರ ಅಲ್ಲ ಇಡೀ ಕರ್ನಾಟಕದ ರಕ್ಷಣೆ ನಮ್ಮ ಗುರಿಯಾಗಿದೆ. ನಾಟ್ ಓನ್ಲಿ ಮೈನಾರಿಟಿ ಬ್ರದರ್, ಎಂಟೈರ್ ಕರ್ನಾಟಕ ರಕ್ಷಣೆ ಮಾಡುತ್ತೇವೆ ಎಂದು ಗುಡುಗಿದರು.

ಇದನ್ನೂ ಓದಿ: BJP JDS alliance : ವಿಜಯದಶಮಿ ನಂತರ ಜೆಡಿಎಸ್‌ ಸೀಟು ಹಂಚಿಕೆ ಅಂತಿಮ ಮಾತುಕತೆ!

ಕಾವೇರಿ ನೀರಿನ ವಿಷಯದಲ್ಲಿ ಈಗ ಬಂದಿರುವ ಆದೇಶವು ನನ್ನ ರಾಜ್ಯದ ಜನತೆಯ ಮರಣ ಶಾಸನವಾಗಿದೆ ಎಂದು ಎಚ್.ಡಿ. ದೇವೇಗೌಡ ಬೇಸರವನ್ನು ಹೊರಹಾಕಿದರು.

Continue Reading

ಕರ್ನಾಟಕ

CM Siddaramaiah: CWRC ಆದೇಶಕ್ಕೆ ಆಕ್ಷೇಪಣೆ ಸಲ್ಲಿಸಲು ನಿರ್ಧಾರ ಎಂದ ಸಿದ್ದರಾಮಯ್ಯ

CM Siddaramaiah: ಮತ್ತೆ 18 ದಿನ 3000 ಕ್ಯುಸೆಕ್‌ ನೀರು ಬಿಡಬೇಕು ಎಂಬ ಆದೇಶವನ್ನು ಪ್ರಶ್ನೆ ಮಾಡಲಾಗುವುದು ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ.

VISTARANEWS.COM


on

Edited by

CM siddaramaiah at Chamarajanagar
Koo

ಚಾಮರಾಜನಗರ (ಹನೂರು): ಕಾವೇರಿ ನೀರು ನಿಯಂತ್ರಣ ಸಮಿತಿಯು (Cauvery water regulation Committee) ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರನ್ನು (3000 Cusec water) ಹರಿಸಲು ಆದೇಶಿಸಿದೆ. ಈ ಬಗ್ಗೆ ಕಾನೂನು ತಂಡದೊಂದಿಗೆ ಚರ್ಚಿಸಿದ್ದು ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಕಾನೂನು ತಂಡ ಸಲಹೆ ನೀಡಿದೆ. ನೀರು ಬಿಡಲು ನಮ್ಮ ಬಳಿ ನೀರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಅವರು ಶ್ರೀ ಮಲೈ ಮಹದೇಶ್ವರ ಬೆಟ್ಟದ (Male mahadeshwara betta) ಬಳಿ ಮಾಧ್ಯಮದವರಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.

ಕಾವೇರಿ ನೀರು ನಿಯಂತ್ರಣ ಸಮಿತಿಯು ಮಂಗಳವಾರ ನೀಡಿದ ಆದೇಶದಲ್ಲಿ ಸೆ. 28ರಿಂದ ಅಕ್ಟೋಬರ್‌ 15ರವರೆಗೆ ಪ್ರತಿದಿನವೂ 3000 ಕ್ಯೂಸೆಕ್‌ ನೀರು ಬಿಡಲು ಆದೇಶ ನೀಡಿತ್ತು. ಇದನ್ನು ಪ್ರಾಧಿಕಾರದ ಮುಂದೆ ಪ್ರಶ್ನಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸಿವೆ.

ಸಿಎಂ ಮತ್ತು ಡಿಸಿಎಂ ಇಬ್ಬರೂ ನಮ್ಮಲ್ಲಿ ನೀರು ಇಲ್ಲ ಎಂದು ಹೇಳುತ್ತಲೇ ಪ್ರಾಧಿಕಾರ ಹೇಳಿದಷ್ಟು ನೀರು ಬಿಡುಗಡೆ ಮಾಡಿದ್ದೇ ಸಮಿತಿಗೆ ಸರಾಗ ಆದೇಶ ನೀಡಲು ಕಾರಣವಾಗಿದೆ ಎಂದು ಆರೋಪಿಸಲಾಗಿದೆ. ಇದೀಗ ಸೆ. 29ರಂದು ಇದರ ವಿರುದ್ಧ ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಮಳೆಗಾಗಿ ಮಹದೇಶ್ವರನಲ್ಲಿ ಪ್ರಾರ್ಥನೆ

ಮಳೆ ಕೈಕೊಟ್ಟು 195 ತಾಲ್ಲೂಕು ಗಳನ್ನು ಬರಪೀಡಿತ ಎಂದು ಘೋಷಿಸಿದ್ದು, ಮಹದೇಶ್ವರನಲ್ಲಿ ಮಳೆಗಾಗಿ, ರಾಜ್ಯದ ಜನರಿಗೆ, ರೈತರಿಗೆ ಸೌಖ್ಯವಾಗಲಿ ಎಂದು ಪ್ರಾರ್ಥಿಸಿರುವುದಾಗಿ ಸಿದ್ದರಾಮಯ್ಯ ತಿಳಿಸಿದರು.

ಮೂಢನಂಬಿಕೆ, ಮೌಢ್ಯ, ಕಂದಾಚಾರದಲ್ಲಿ ನಂಬಿಕೆ ಇಲ್ಲ

ಮೂಢನಂಬಿಕೆ, ಮೌಢ್ಯ, ಕಂದಾಚಾರದಲ್ಲಿ ನಂಬಿಕೆ ಇಲ್ಲ. ಅದಕ್ಕಾಗಿಯೇ ಹಿಂದೆ ಮುಖ್ಯಮಂತ್ರಿ ಯಾದ ಕೂಡಲೇ ಚಾಮರಾಜನಗರಕ್ಕೆ ಭೇಟಿ ನೀಡಿದೆ. ಸುಮಾರು 12 ಬಾರಿ ಭೇಟಿ ನೀಡಿದ್ದು, 5 ವರ್ಷ ಗಟ್ಟಿಯಾಗಿ ಇದ್ದೆ. ಚಾಮರಾಜನಗರ ಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯ ಈಗ ಹೋಗಿದೆ ಎಂದರು.

ಬಂದ್‌ನಿಂದ ಯಾರಿಗೂ ತೊಂದರೆಯಾಗಬಾರದು

ಸೆಪ್ಟೆಂಬರ್ 29 ರಂದು ಕರ್ನಾಟಕ ಬಂದ್ ಗೆ ಕರೆನೀಡಿರುವ ಬಗ್ಗೆ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಗೆ ಅವಕಾಶವಿದೆ. ಆದರೆ ಇತರರಿಗೆ ತೊಂದರೆಯಾಗಬಾರದು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ನಾವು ಈ ಆದೇಶ ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುತ್ತೇವೆ ಎಂದರು.

ಇದನ್ನೂ ಓದಿ: CM Siddaramaiah: ಕೃಷಿಗೆ ಸಾಲ ಮಾಡಿ ಮದುವೆ ಛಮಾಡುವುದನ್ನು ನಿಲ್ಲಿಸಿ: ಸಿಎಂ ಸಿದ್ದರಾಮಯ್ಯ ಮನವಿ

Continue Reading

ಕರ್ನಾಟಕ

BJP JDS alliance : ವಿಜಯದಶಮಿ ನಂತರ ಜೆಡಿಎಸ್‌ ಸೀಟು ಹಂಚಿಕೆ ಅಂತಿಮ ಮಾತುಕತೆ!

BJP JDS alliance : ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆಗೆ ಸೀಟು ಹಂಚಿಕೆ ಯಾವಾಗ ಎಂಬ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. ವಿಜಯದಶಮಿ ನಂತರ ಈ ಬಗ್ಗೆ ಬಿಜೆಪಿ ವರಿಷ್ಠರೊಂದಿಗೆ ಚರ್ಚೆ ನಡೆಸುವುದಾಗಿ ಹೇಳಿಕೆ ನೀಡಿದ್ದಾರೆ.

VISTARANEWS.COM


on

Edited by

HD DeveGowda HD Kumaraswamy and PM Narendra Modi on BJP JDS alliance
Koo

ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆ (Lok Sabha Election 2024) ಸಂಬಂಧ ಬಿಜೆಪಿ ಜತೆ ಕೈಜೋಡಿಸಿರುವ ಜೆಡಿಎಸ್‌ ರಾಜ್ಯದಲ್ಲಿ ಹಲವಾರು ರಾಜಕೀಯ ತಂತ್ರಗಳನ್ನು (Political Strategy) ಹೆಣೆಯುತ್ತಿದೆ. ಈ ಸಂಬಂಧ ಮಾಜಿ ಪ್ರಧಾನಿ‌, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ (Former Prime Minister and JDS supremo HD DeveGowda) ಅವರು ಬುಧವಾರ (ಸೆಪ್ಟೆಂಬರ್‌ 27) ಸುದ್ದಿಗೋಷ್ಠಿ ನಡೆಸಿ ತಾವು ಗೃಹ ಸಚಿವ ಅಮಿತ್‌ ಶಾ (Home Minister Amit Shah) ಅವರ ಜತೆ ಮೈತ್ರಿ (BJP JDS alliance) ಕುರಿತಾಗಿ ಮೊದಲು ಚರ್ಚೆ ನಡೆಸಿದ್ದಾಗಿ ಹೇಳಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಬಳಿ ಈ ಬಗ್ಗೆ ಮಾತನಾಡಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ಸೀಟು ಹಂಚಿಕೆ ಬಗ್ಗೆ ಪ್ರಶ್ನೆ ಕೇಳಿದಾಗ ವಿಜಯದಶಮಿ ಹಬ್ಬದ (Vijayadashami Festival) ಬಳಿಕ ಬಿಜೆಪಿಯೊಂದಿಗೆ ಈ ಬಗ್ಗೆ ಮಾತುಕತೆ ನಡೆಸಲಾಗುವುದು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಸ್ಪಷ್ಟಪಡಿಸಿದ್ದಾರೆ. ಇದರ ಜತೆಗೆ ಆ ಸನ್ನಿವೇಶ ಬಂದಾಗ ಚರ್ಚೆ ಮಾಡುತ್ತೇವೆ ಎಂದು ದೇವೇಗೌಡರು ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ ಅವರು, ಮೈತ್ರಿ ಸೀಟು ಹಂಚಿಕೆ ಸಂಬಂಧ ವಿಜಯದಶಮಿ ಮುಗಿದ ಬಳಿಕ ಬಿಜೆಪಿ ವರಿಷ್ಠರ ಜತೆ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ. ಅದಕ್ಕೆ ಜೆಡಿಎಸ್‌ ವರಿಷ್ಠ ಎಚ್.ಡಿ ದೇವೇಗೌಡ ಸಹ ಧನಿಗೂಡಿಸಿದ್ದು, ಆ ಸನ್ನಿವೇಶ ಬರಲಿ, ಆಗ ಚರ್ಚೆ ಮಾಡುತ್ತೇವೆ ಎಂದು ಸೂಚ್ಯವಾಗಿ ಉತ್ತರಿಸಿದ್ದಾರೆ.

ಮೈತ್ರಿಕೂಟ ಸೇರಿದ್ದಷ್ಟೇ

ಈಚೆಗೆ ನವದೆಹಲಿಗೆ ಎಚ್.ಡಿ. ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾಗ ಗೃಹ ಸಚಿವ ಅಮಿತ್‌ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಜತೆ ಪ್ರಾಥಮಿಕ ಹಂತದ ಮಾತುಕತೆಯನ್ನು ನಡೆಸಿದ್ದರು. ಇದರ ಭಾಗವಾಗಿ ಅಂದೇ ಬಿಜೆಪಿ – ಜೆಡಿಎಸ್‌ ಮೈತ್ರಿ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಾಗಿತ್ತು. ಎನ್‌ಡಿಎ ಮೈತ್ರಿಕೂಟವನ್ನು ಜೆಡಿಎಸ್‌ ಸೇರಿದೆ ಎಂದು ಅಧಿಕೃತವಾಗಿ ಪ್ರಕಟಿಸಲಾಗಿತ್ತು. ಆದರೆ, ಇದರ ನಂತರ ಸೀಟು ಹಂಚಿಕೆ ಸಂಬಂಧ ಯಾವುದೇ ರೀತಿಯ ಅಂತಿಮ ಹಂತದ ಚರ್ಚೆ ಆಗಿಲ್ಲ ಎಂದು ಹೇಳಲಾಗಿದೆ.

ಐದು ಕ್ಷೇತ್ರ ಕೇಳಿರುವ ಜೆಡಿಎಸ್‌

ಮೂಲಗಳ ಪ್ರಕಾರ ಜೆಡಿಎಸ್‌ ಒಟ್ಟು ಐದು ಲೋಕಸಭಾ ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ರಾಯಚೂರು ಸೇರಿದಂತೆ ಇತ್ತ ಮಂಡ್ಯ, ಹಾಸನ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಕೇಳಿತ್ತು. ಆದರೆ, ಈ ಸಂಬಂಧ ಬಿಜೆಪಿ ನಾಯಕರಲ್ಲಿ ಒಮ್ಮತ ಮೂಡಿಲ್ಲ.

ಇದನ್ನೂ ಓದಿ: BJP JDS alliance : ಜೆಡಿಎಸ್‌ಗೆ ಕಾಂಗ್ರೆಸ್‌ ಮಾಡಿದ ಮೋಸದ ಬಗ್ಗೆ 100 ಕಾರಣ ಹೇಳುವೆ: ಗುಡುಗಿದ ದೇವೇಗೌಡ

ಬಿಜೆಪಿ ನಾಯಕರ ವಿರೋಧ

ಜೆಡಿಎಸ್‌ಗೆ ಯಾವುದೇ ಕಾರಣಕ್ಕೂ ಐದು ಸೀಟನ್ನು ಬಿಟ್ಟುಕೊಡುವುದು ಬೇಡ. ಮೂರು ಕ್ಷೇತ್ರವನ್ನು ಬಿಟ್ಟುಕೊಟ್ಟರೆ ಸಾಕು. ಉಳಿದ ಕಡೆ ಅವರಿಗೆ ಕೊಟ್ಟರೆ ಸೋಲು ನಿಶ್ಚಿತ. ಇದು ಬಿಜೆಪಿಗೆ ನಷ್ಟವನ್ನುಂಟು ಮಾಡುತ್ತದೆ ಎಂದು ರಾಜ್ಯದ ಕೆಲವು ನಾಯಕರು ಈಗಾಗಲೇ ವರದಿ ಒಪ್ಪಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ವಿಜಯ ದಶಮಿ ನಂತರ ನಡೆಯುವ ಮಾತುಕತೆ ಕುತೂಹಲ ಮೂಡಿಸಿದೆ.

Continue Reading

ಕರ್ನಾಟಕ

Murder Case : ಕುಡಿದ ಮತ್ತಿನಲ್ಲಿ ಮೂತ್ರ ಸಿಡಿಸಿದ; ಪ್ರಶ್ನೆ ಮಾಡಿದ ವ್ಯಾಪಾರಿಯ ಮನೆಗೆ ನುಗ್ಗಿ ಕೊಂದ ಕಿರಾತಕ!

Murder Case: ತನ್ನ ಮೇಲೆ ಮೂತ್ರ ಮಾಡಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ಧೂರ್ತನೊಬ್ಬ ಕೊಲೆಯನ್ನೇ ಮಾಡಿದ್ದಾನೆ. ಅದೂ ಆತನ ಮನೆಗೆ ನುಗ್ಗಿ. ಒಬ್ಬ ಸಜ್ಜನನ ಕೊಲೆ ಗೌನಿಪಲ್ಲಿಯ ಜನರ ಮನ ಕಲಕಿದೆ.

VISTARANEWS.COM


on

Edited by

Murder case in Kolara
ಕೊಲೆಯಾದ ವೆಂಕಟರಾಯಪ್ಪ ಮತ್ತು ಹಂತಕ ಶಂಕರಪ್ಪ
Koo

ಕೋಲಾರ: ಕುಡಿತದ ಮತ್ತು ಹಾಗೂ ದುರಂಹಕಾರ ಸೇರಿಕೊಂಡರೆ ಒಬ್ಬ ಮನುಷ್ಯ ಅದೆಷ್ಟು ಕ್ರೂರಿಯಾಗಬಲ್ಲ ಎನ್ನುವುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಇದೆ. ಕುಡಿತದ ಮತ್ತಿನಲ್ಲಿದ್ದ (Alcoholic) ಆತ ಮೂತ್ರ (Urination) ಮಾಡುವಾಗ ಇನ್ನೊಬ್ಬನ ಮೇಲೆ ಸಿಡಿಸಿದ. ಅದನ್ನು ಪ್ರಶ್ನೆ ಮಾಡಿದ್ದಕ್ಕೆ ಆತನ ಮೇಲೆ ಹಲ್ಲೆ ಮಾಡಿದ್ದು ಮಾತ್ರವಲ್ಲ, ಮನೆಗೇ ನುಗ್ಗಿ ಕೊಲೆ (Murder Case) ಮಾಡಿದ್ದಾನೆ.

ಇಂಥಹುದೊಂದು ಭಯಾನಕ ಘಟನೆ ನಡೆದಿರುವುದು ಕೋಲಾರ ಜಿಲ್ಲೆಯ (Kolara News) ಶ್ರೀನಿವಾಸಪುರ ತಾಲ್ಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ. ಮಂಗಳವಾರ ಸಂಜೆ ಇಬ್ಬರು ವ್ಯಕ್ತಿಗಳ ನಡುವಿನ ಒಂದು ಕ್ಷುಲ್ಲಕ ಜಗಳ ಸಾವಿನಲ್ಲಿ ಅಂತ್ಯಗೊಂಡಿದೆ.

ಗೌನಿಪಲ್ಲಿ ತರಕಾರಿ ವ್ಯಾಪಾರ ಮಾಡುತ್ತಾ ಎಲ್ಲರ ಜತೆ ಒಳ್ಳೆಯತನದಿಂದ ಬೆರೆಯುತ್ತಾ ಜನಮನ್ನಣೆ ಪಡೆದಿದ್ದ ಸಂಸಾವಂದಿಗ ವೆಂಕಟರಾಯಪ್ಪ ಅವರೇ ಪ್ರಾಣ ಕಳೆದುಕೊಂಡ ದುರ್ದೈವಿ. ಅವರಿಗೆ ವಯಸ್ಸು 55. ಅವರ ಮೇಲೆ ಮೂತ್ರ ಸಿಡಿಸಿದ್ದಲ್ಲದೆ ಪ್ರಶ್ನೆ ಮಾಡಿದ್ದಕ್ಕೆ ಕೊಂದೇ ಹಾಕಿದವನ ಹೆಸರು ಶಂಕರಪ್ಪ. ಸುಮಾರು 45 ವರ್ಷದ ಇವನು ಸದಾ ಕುಡಿದ ಮತ್ತಿನಲ್ಲೇ ಇರುತ್ತಾನೆ, ಸದಾ ಜಗಳ, ಹೊಡೆದಾಟಗಳೇ ಇವನ ಐಡೆಂಟಿಟಿ ಎನ್ನುತ್ತಾರೆ ಗೌನಿಪಲ್ಲಿ ಜನ.

trader murder at kolara gounipalli

ಮಂಗಳವಾರ ಸಂಜೆ ಏನಾಯಿತು?

ಮಂಗಳವಾರ ಸಂಜೆಯ ಹೊತ್ತಿಗೆ ವೆಂಕಟರಾಯಪ್ಪ ಅವರು ತಮ್ಮ ವ್ಯಾಪಾರ ನಡುವೆ ಮೂತ್ರ ಬರುತ್ತದೆ ಎಂದು ಸಂತೆ ಮೈದಾನದ ಕೊನೆಗೆ ಹೋದರು. ಆಗ ಅವರ ಹಿಂದೆಯೇ ಶಂಕರಪ್ಪ ಕೂಡಾ ಬಂದಿದ್ದ. ಅವರಿಬ್ಬರೂ ಹತ್ತಿರ ಹತ್ತಿರ ನಿಂತೇ ಮೂತ್ರ ಮಾಡಿದ್ದರು. ಈ ವೇಳೆ ಕುಡಿತದ ಮತ್ತಿನಲ್ಲಿದ್ದ ಮನೋಹರ ಬೇಕು ಎಂತಲೇ ವೆಂಕಟರಾಯಪ್ಪ ಅವರ ಮೇಲೆಯೇ ಮೂತ್ರ ಸಿಡಿಸಿದ್ದ.

ವೆಂಕಟರಾಯಪ್ಪ ಅವರು ಇದನ್ನು ಪ್ರಶ್ನೆ ಮಾಡಿದ್ದಾರೆ. ನೀನು ಮಾಡಿದ್ದು ಸರಿಯಾ ಎಂದು ಕೇಳಿದ್ದಾರೆ. ಆದರೆ, ಶಂಕರಪ್ಪ ತನ್ನ ತಪ್ಪನ್ನು ಒಪ್ಪಿಕೊಳ್ಳುವ ಬದಲು ಅವರ ಮೇಲೆಯೇ ಎಗರಾಡಿದ್ದಾನೆ. ನಾನು, ನನ್ನ ಮೂತ್ರ ಎಲ್ಲಿ ಬೇಕಾದರೂ ಮಾಡುತ್ತೇನೆ, ನೀನು ಯಾರು ಕೇಳುವುದಕ್ಕೆ ಎಂದೆಲ್ಲ ಗಲಾಟೆ ಮಾಡಿದ್ದಾನೆ.

Murder case in Kolara man kills for questioning urinating on him

ಇವನ ಬಳಿ ಮಾತನಾಡುವುದು ಬೇಡ ಎಂದು ವೆಂಕಟರಾಯಪ್ಪ ತನ್ನ ಅಂಗಡಿ ಕಡೆಗೆ ಬಂದಿದ್ದಾರೆ. ಆದರೆ, ಮನೋಹರ ಅವರನ್ನು ಬೆನ್ನಟ್ಟಿಕೊಂಡೇ ಬಂದು ನನ್ನನ್ನು ಪ್ರಶ್ನೆ ಮಾಡುತ್ತೀಯಾ ಎಂದು ಕೇಳಿ ಹಲ್ಲೆ ಮಾಡಿದ್ದಾನೆ. ಆಗ ಗೌನಿಪಲ್ಲಿ ಸಂತೆ ಮೈದಾನದಲ್ಲಿದ್ದವರು ಮತ್ತು ವ್ಯಾಪಾರಿಗಳು ಸೇರಿ ಜಗಳ ಬಿಡಿಸಿದ್ದಾರೆ.

ವೆಂಕಟರಾಯಪ್ಪ ಅವರ ಮೇಲೆ ಹಲ್ಲೆ ಮಾಡಿದ್ದರಿಂದ ಸಿಟ್ಟುಕೊಂಡ ವ್ಯಾಪಾರಿಗಳೆಲ್ಲ ಸೇರಿ ಈ ಗುಂಡ್ರುಗೋವಿ ಶಂಕರಪ್ಪನನ್ನು ಚೆನ್ನಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಬುದ್ಧಿ ಮಾತೂ ಹೇಳಿದ್ದಾರೆ. ಅಲ್ಲಿಗೆ ಅದು ಮುಕ್ತಾಯಗೊಂಡಿದೆ.

ಮನೆಗೇ ಬಂದು ಬಾಗಿಲು ಬಡಿದ ಕಿರಾತಕ

ರಾತ್ರಿಯಾಗುತ್ತಿದ್ದಂತೆಯೇ ವೆಂಕಟರಾಯಪ್ಪ ಅವರು ವ್ಯಾಪಾರ ಮುಗಿಸಿ ಮನೆಗೆ ತೆರಳಿದ್ದಾರೆ. ಸ್ವಲ್ಪ ಹೊತ್ತಿಗೆ ಮನೆಯ ಬಾಗಿಲು ಬಡಿಯಿತು. ಯಾರೆಂದು ಬಾಗಿಲು ತೆರೆದು ನೋಡಿದರೆ ಶಂಕರಪ್ಪ ನಿಂತಿದ್ದ. ಏನು ಎಂದು ಕೇಳಲೂ ಅವಕಾಶವಿಲ್ಲದಂತೆ ಶಂಕರಪ್ಪ ಮನೆಯೊಳಗೆ ನುಗ್ಗಿದ್ದ.

ಮನೆಯಲ್ಲಿ ವೆಂಕಟರಾಯಪ್ಪ ಅವರ ಪುತ್ರ ಮನೋಹರ, ಪತ್ನಿ ಮತ್ತು ಇತರರು ಇದ್ದರು. ಅವರೆಲ್ಲ ಏನಾಗುತ್ತಿದೆ ಎಂದು ನೋಡನೋಡುತ್ತಿದ್ದಂತೆಯೇ ಶಂಕರಪ್ಪ ವೆಂಕಟರಾಯಪ್ಪರನ್ನು ನೆಲಕ್ಕೆ ಕೆಡವಿ ಹಾಕಿ ಎದೆಗೆ ಗುದ್ದತೊಡಗಿದ್ದಾನೆ. ಜತೆಗೆ ಮೂತ್ರ ಮಾಡುವ ವಿಷಯದಲ್ಲಿ ಜಗಳ ಮಾಡುತ್ತೀಯಾ ಎಂದು ಮೂತ್ರ ಮಾಡುವ ಜಾಗಕ್ಕೂ ಹೊಡೆದಿದ್ದಾನೆ. 55 ವರ್ಷದ ಸಜ್ಜನ ಹಿರಿಯ ಜೀವ ವೆಂಕಟರಾಯಪ್ಪ ಅವರು ಶಂಕರಪ್ಪನ ಹೊಡೆತಗಳಿಗೆ ತತ್ತರಿಸಿ ಹೋಗಿದ್ದಾರೆ. ಸ್ವಲ್ಪ ಹೊತ್ತು ಹಾಗೆಯೇ ಹೊಡೆದ ಶಂಕರಪ್ಪ ಮನೆಯವರನ್ನು ಹೆದರಿಸಿ ಹೊರಗೆ ಹೋಗಿದ್ದಾನೆ.

Murder case in Kolara man kills for questioning urinating on him

ಎದೆಗೆ, ಮರ್ಮಾಂಗಕ್ಕೆ ಗುದ್ದಿದ್ದ ಧೂರ್ತ

ಅದಾದ ಕೂಡಲೇ ಮನೆಯವರು ವೆಂಕಟರಾಯಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾದರು. ಆದರೆ, ಎದೆಗೆ, ಮರ್ಮಾಂಗಕ್ಕೆ ಬಿದ್ದ ಹೊಡೆತಗಳಿಂದ ತತ್ತರಿಸಿ ಜರ್ಜರಿತರಾಗಿದ್ದ ವೆಂಕಟರಾಯಪ್ಪ ಅವರು ಶ್ರೀನಿವಾಸಪುರ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದರು.

ಇದನ್ನೂ ಓದಿ: Instagram fight: ಇನ್‌ಸ್ಟಾಗ್ರಾಂನಲ್ಲಿ ಬೈದ ಎಂದು 16ರ ಬಾಲಕನನ್ನು ತಲ್ವಾರ್‌ನಿಂದ ಕಡಿದು ಕೊಂದ ಸ್ನೇಹಿತರು!

ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ. ಗೌನಿಪಲ್ಲಿಯ ವ್ಯಾಪಾರಸ್ಥರು, ನಾಗರಿಕರು ವೆಂಕಟರಾಯಪ್ಪ ಅವರ ಸಾವಿಗೆ ಕಂಬನಿ ಮಿಡಿದಿದ್ದಾರೆ.

ಅಂದ ಹಾಗೆ, ವೆಂಕಟರಾಯಪ್ಪ ಅವರಿಗೂ ಶಂಕರಪ್ಪ ಅವರಿಗೂ ಮುಖ ಪರಿಚಯ ಇಲ್ಲವೇ ಇಲ್ಲ. ಅವರಿಬ್ಬರು ಹಿಂದೆಂದು ಮುಖಾಮುಖಿ ಆಗಿರಲೇ ಇಲ್ಲ. ಯಾರೆಂದು ಗೊತ್ತೇ ಇಲ್ಲ. ಕೇವಲ ಒಂದು ಮೂತ್ರದ ಸಿಡಿತದಿಂದ ಒಂದು ಮನೆಯ ಬೆಳಕು ಆರಿತು. ಹೀಗೆ ಕೊಲೆ ಮಾಡಿದ ಧೂರ್ತನಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಜನರು ಒತ್ತಾಯಿಸಿದ್ದಾರೆ.

Continue Reading
Advertisement
HD Kumaraswamy Press meet vs congress government
ಕರ್ನಾಟಕ4 mins ago

BJP JDS alliance : ಸೆಕ್ಯುಲರಿಸಂ ಅನ್ನು ನಾಶ ಮಾಡಿದ್ದೇ ಕಾಂಗ್ರೆಸ್‌: ಎಚ್.ಡಿ. ಕುಮಾರಸ್ವಾಮಿ ಕಿಡಿ

ODI AUS
Live News22 mins ago

ind vs Aus : ಮೂರನೇ ಏಕ ದಿನ ಪಂದ್ಯ; ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದಿಂದ ಬ್ಯಾಟಿಂಗ್ ಆಯ್ಕೆ

Madhya Pradesh Rape News
ಕ್ರೈಂ35 mins ago

ಲೈಂಗಿಕ ದೌರ್ಜನ್ಯ; ರಕ್ತಸಿಕ್ತ ಬಾಲಕಿ ಮನೆಮನೆಗೆ ತೆರಳಿ ಗೋಳಾಡಿದರೂ ಸಹಾಯ ಮಾಡದ ನಿರ್ದಯಿಗಳು!

CM siddaramaiah at Chamarajanagar
ಕರ್ನಾಟಕ45 mins ago

CM Siddaramaiah: CWRC ಆದೇಶಕ್ಕೆ ಆಕ್ಷೇಪಣೆ ಸಲ್ಲಿಸಲು ನಿರ್ಧಾರ ಎಂದ ಸಿದ್ದರಾಮಯ್ಯ

Google
EXPLAINER46 mins ago

ವಿಸ್ತಾರ Explainer: Google Birthday: ಗೂಗಲ್‌ನ 25 ವರ್ಷದ ಇತಿಹಾಸ ಹೇಗಿತ್ತು? ಒಂದು ನೋಟ ಇಲ್ಲಿದೆ

HD DeveGowda HD Kumaraswamy and PM Narendra Modi on BJP JDS alliance
ಕರ್ನಾಟಕ55 mins ago

BJP JDS alliance : ವಿಜಯದಶಮಿ ನಂತರ ಜೆಡಿಎಸ್‌ ಸೀಟು ಹಂಚಿಕೆ ಅಂತಿಮ ಮಾತುಕತೆ!

Nayanthara Vignesh Shivan twin
South Cinema1 hour ago

Actress Nayanthara: ನಯನತಾರಾ -ವಿಘ್ನೇಶ್ ಶಿವನ್ ಅವಳಿ ಮಕ್ಕಳ ಮೊದಲ ಬರ್ತ್‌ಡೇ; ಕ್ಯೂಟ್‌ ಫೋಟೊಸ್ ಔಟ್‌!

Murder case in Kolara
ಕರ್ನಾಟಕ1 hour ago

Murder Case : ಕುಡಿದ ಮತ್ತಿನಲ್ಲಿ ಮೂತ್ರ ಸಿಡಿಸಿದ; ಪ್ರಶ್ನೆ ಮಾಡಿದ ವ್ಯಾಪಾರಿಯ ಮನೆಗೆ ನುಗ್ಗಿ ಕೊಂದ ಕಿರಾತಕ!

Team India
ಕ್ರಿಕೆಟ್1 hour ago

World Cup 2023 : ಭಾರತ ವಿರುದ್ಧ ಗೆದ್ದವರು ವಿಶ್ವ ಕಪ್​ ಗೆಲ್ತಾರೆ; ಪಾಕ್​ ತಂಡ ಮಾಜಿ ಆಟಗಾರನ ಭವಿಷ್ಯ

ದೇಶ1 hour ago

Stadium row: ಕ್ರೀಡಾಂಗಣದಲ್ಲಿ ನಾಯಿ ಜತೆ ವಾಕಿಂಗ್‌ ಮಾಡಿದ್ದ ಅಧಿಕಾರಿಗೆ ಕಡ್ಡಾಯ ನಿವೃತ್ತಿ ಶಿಕ್ಷೆ!

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

bangalore bandh
ಕರ್ನಾಟಕ1 day ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

dina bhavishya
ಪ್ರಮುಖ ಸುದ್ದಿ9 hours ago

Dina Bhavishya : ನಿಮಗೆ ಆಗದವರು ಪಿತೂರಿ ಮಾಡ್ಬಹುದು ಎಚ್ಚರ!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ2 days ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ2 days ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ2 days ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ2 days ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ3 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

ಟ್ರೆಂಡಿಂಗ್‌