ಮನದ ಮಾತು With HPK | ನಾನು ಹಳ್ಳಿಯವನು, ನನ್ನ ಮಾತೇ ಹಾಗೆ; ಪ್ರೀತಿ ಮಾಡದವರು ಮನುಷ್ಯರೇ ಅಲ್ಲ: ಸಿದ್ದರಾಮಯ್ಯ ಮತ್ತೇನು ಹೇಳಿದರು? Vistara News
Connect with us

ಕರ್ನಾಟಕ

ಮನದ ಮಾತು With HPK | ನಾನು ಹಳ್ಳಿಯವನು, ನನ್ನ ಮಾತೇ ಹಾಗೆ; ಪ್ರೀತಿ ಮಾಡದವರು ಮನುಷ್ಯರೇ ಅಲ್ಲ: ಸಿದ್ದರಾಮಯ್ಯ ಮತ್ತೇನು ಹೇಳಿದರು?

ವಿಸ್ತಾರ ನ್ಯೂಸ್ ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆ ಅವರು ನಡೆಸಿರುವ ವಿಶೇಷ ಸಂದರ್ಶನದಲ್ಲಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬದುಕಿನ ಕತೆಯನ್ನು ಹೃದಯಸ್ಪರ್ಶಿಯಾಗಿ ತೆರೆದಿಟ್ಟಿದ್ದಾರೆ. ಸಿದ್ದರಾಮಯ್ಯ ಅವರ ವಿಸ್ತೃತ ಸಂದರ್ಶನ ಇಲ್ಲಿದೆ, ನೋಡಿ…

VISTARANEWS.COM


on

Koo

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕರ್ನಾಟಕ

Bus Accident: ನಿಂತಿದ್ದ ಲಾರಿಗೆ ಸಾರಿಗೆ ಬಸ್‌ ಡಿಕ್ಕಿ; 32 ಜನರಿಗೆ ಗಾಯ, ಐವರ ಸ್ಥಿತಿ ಗಂಭೀರ

Bus Accident: ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕು ಮಲ್ಲದಗುಡ್ಡದ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿದೆ. ಲಾರಿಗೆ ಇಂಡಿಕೇಟರ್‌ ಹಾಕದೆ ನಿಲ್ಲಿಸಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.

VISTARANEWS.COM


on

Edited by

Bus Accident In Raichur
Koo

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ (Sindhanur) ರಸ್ತೆ ಬದಿ ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್‌ (KSRTC Bus) ಡಿಕ್ಕಿಯಾಗಿದ್ದು (Bus Accident), 32 ಜನ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಸಿಂಧನೂರು ತಾಲೂಕಿನ ಮಲ್ಲದಗುಡ್ಡ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.

ಸಿಂಧನೂರಿನಿಂದ ಅಂಕಲಿಮಠದ ಕಡೆಗೆ ಹೊರಟ್ಟಿದ್ದ ವೇಳೆ ರಸ್ತೆ ಬದಿ ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿಯಾಗಿದೆ. ಬಸ್‌ ಕಂಡಕ್ಟರ್‌ ಸೇರಿ ಐವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಕೂಡಲೇ ಬಳ್ಳಾರಿಯ ವಿಮ್ಸ್‌ಗೆ ದಾಖಲಿಸಲಾಗಿದೆ. ಇನ್ನು ಸಣ್ಣ ಪುಟ್ಟ ಗಾಯಗಳಾದವರಿಗೆ ರಾಯಚೂರಿನ ರಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Bus Accident
ಅಪಘಾತದ ತೀವ್ರತೆಗೆ ಬಸ್‌ ನಜ್ಜುಗುಜ್ಜಾಗಿದೆ

ಇಂಡಿಕೇಟರ್‌ ಹಾಕದಿರುವುದೇ ಕಾರಣ

ರಸ್ತೆ ಬದಿ ನಿಲ್ಲಿಸಿದ ಲಾರಿಗೆ ಚಾಲಕನು ಇಂಡಿಕೇಟರ್‌ ಹಾಕದಿರುವುದೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಲಾರಿ ಚಾಲಕನು ಇಂಡಿಕೇಟರ್‌ ಹಾಕದೆ ಲಾರಿಯನ್ನು ನಿಲ್ಲಿಸಿದ್ದಾನೆ. ಬಸ್‌ ಎದುರಿಗೆ ಲಾರಿ ಬಂದಿದ್ದು, ಸೈಡ್‌ ಕೊಡಲು ಹೋದಾಗ ರಸ್ತೆ ಬದಿ ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಬಸ್‌ ನಜ್ಜುಗುಜ್ಜಾಗಿದೆ. ಸಿಂಧನೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಂದು ವಾರದ ಹಿಂದಷ್ಟೇ ಆಂಧ್ರಪ್ರದೇಶದ ತಿರುಪತಿ ದೇವಸ್ಥಾನಕ್ಕೆ ಹೋಗಿ ಮರಳಿ ಬರುತ್ತಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಒಂದೇ ಕುಟುಂಬದ ಐವರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದರು. ಹಾಗೆಯೇ, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.

ಇದನ್ನೂ ಓದಿ: Accident Case : ಚಲಿಸುತ್ತಿದ್ದಾಗಲೇ ಸುಟ್ಟು ಕರಕಲಾದ ಕಾರು; ಬೈಕ್‌ಗೆ ಬಸ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

ತೆಲಂಗಾಣದ ಸೂರ್ಯಪೇಠ ಜಿಲ್ಲೆಯ ಮಠಮಪಲ್ಲಿಯಲ್ಲಿ ನಡೆದ ಅಪಘಾತದಲ್ಲಿ ಈ ಸಾವು ಸಂಭವಿಸಿದೆ. ಅಥಣಿಯ ಕುಟುಂಬದವರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಹಾಗೂ ಲಾರಿ ನಡುವೆ ನಡೆದಿರುವ ಭೀಕರ ಅಪಘಾತ ಇದಾಗಿದೆ.

Continue Reading

ಬೆಂಗಳೂರು

World Heart Day: ಹೃದಯ ಆರೋಗ್ಯ ಜಾಗೃತಿಗಾಗಿ ಸಾಗರ್ ಆಸ್ಪತ್ರೆಯಿಂದ ‌ಸೈಕ್ಲೋಥಾನ್; 500 ಮಂದಿ ಭಾಗಿ

World Heart Day: ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯಲ್ಲಿ ಸಾಗರ್ ಆಸ್ಪತ್ರೆಯಿಂದ ಸೈಕ್ಲೋಥಾನ್ ಆಯೋಜಿಸಲಾಗಿತ್ತು. ಸೈಕ್ಲೋಥಾನ್ ಮೂಲಕ ಸಾರ್ವಜನಿಕರಿಗೆ ಹೃದಯ ಆರೋಗ್ಯ ಜಾಗೃತಿ ಮೂಡಿಸಲಾಯಿತು.

VISTARANEWS.COM


on

Edited by

cyclothon in Bangalore
Koo

ಬೆಂಗಳೂರು: ಆರೋಗ್ಯ ಕ್ಷೇತ್ರದಲ್ಲಿ ಉತ್ಕೃಷ್ಟತೆಗೆ ಹೆಸರಾಗಿರುವ ಸಾಗರ್ ಆಸ್ಪತ್ರೆಯಿಂದ ವಿಶ್ವ ಹೃದಯ ದಿನ (World Heart Day) ಹಿನ್ನೆಲೆಯಲ್ಲಿ ಹೃದಯ ಆರೋಗ್ಯ ಜಾಗೃತಿಗಾಗಿ ನಗರದ ಕುಮಾರಸ್ವಾಮಿ ಬಡಾವಣೆಯಲ್ಲಿ ಸೈಕ್ಲೋಥಾನ್ ಆಯೋಜಿಸಲಾಗಿತ್ತು. ಸುಮಾರು 500 ಸೈಕಲ್ ಸವಾರರು ಭಾಗವಹಿಸಿದ್ದ ಸೈಕ್ಲೋಥಾನ್‌ಗೆ ತಜ್ಞ ವೈದ್ಯ ಡಾ.ಡಬ್ಲ್ಯು.ಡಿ. ಮೋಹನ್ ಅವರು ಚಾಲನೆ ನೀಡಿದರು.

ನಂತರ ಖ್ಯಾತ ನಟಿ ಪೂಜಾ ಗಾಂಧಿ ಅವರು ಸಿಪಿಆರ್‌ ತರಬೇತಿ ‌ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹೃದಯದ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಸಾಗರ್ ಆಸ್ಪತ್ರೆಯ ನಿರಂತರ ಪ್ರಯತ್ನ ಶ್ಲಾಘನೀಯ. ಹೃದಯ ಸಂಬಂಧಿ ಆರೋಗ್ಯ ಸಮಸ್ಯೆಗಳ ಆತಂಕಕಾರಿ ಹೆಚ್ಚಳದ ಹಿನ್ನೆಲೆಯಲ್ಲಿ, ಜನರಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದು ತಿಳಿಸಿದರು.

Prizes for cyclothon winners

ಸಿಪಿಆರ್ ತರಬೇತಿ

ಬನಶಂಕರಿಯ ಸಾಗರ್ ಹಾಸ್ಪಿಟಲ್ಸ್‌ನಲ್ಲಿ ತುರ್ತು ಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಸುಹಾಸ್ ಮತ್ತು ತಂಡ ಜೀವ ಉಳಿಸುವ ವಿಶೇಷ ಸಿಪಿಆರ್ ಬಗ್ಗೆ ತರಬೇತಿ ನೀಡಿದರು. ತುರ್ತು ಸಂದರ್ಭದಲ್ಲಿ ‌ಜೀವ ಉಳಿಸಲು ಇದು ಸಹಾಯಕ.

ಬಿಎಸ್‌ಕೆಯ ಸಾಗರ್ ಹಾಸ್ಪಿಟಲ್ಸ್‌ನ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ.ಕಿಶೋರ್ ಕೆಎಸ್ ಹಾಗೂ ಸಮಾಲೋಚಕ ಹೃದ್ರೋಗ ತಜ್ಞ ಡಾ.ಬಿ.ಕೆ.ರಘುನಂದನ್ ಆರೋಗ್ಯಕರ ಹೃದಯಕ್ಕಾಗಿ ಸಲಹೆಗಳನ್ನು ನೀಡಿದರು.

ಸಾಗರ್ ಗ್ರೂಪ್ ಆಫ್ ಹಾಸ್ಪಿಟಲ್ಸ್ ಅಧ್ಯಕ್ಷೆ ಎಂ.ಎಸ್.ಇಶಿಕಾ ಮುಲ್ತಾನಿ, ಅವರು ವಿಶ್ವ ಹೃದಯ ದಿನದಂದು ಸಾರ್ವಜನಿಕರಲ್ಲಿ ಹೃದಯ ಸ್ವಾಸ್ಥ್ಯದ ಜಾಗೃತಿಗಾಗಿ ಸೈಕ್ಲೋಥಾನ್ ಅನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕೆ ನಮಗೆ ಹೆಮ್ಮೆಯಿದೆ ಎಂದರು.

Pooja Gandhi distributes prizes

ಇದನ್ನೂ ಓದಿ | Baking soda side effects: ಅಡುಗೆಯಲ್ಲಿ ಸೋಡಾ ಬಳಸಿದರೆ ಉಂಟಾಗುವ ಸೈಡ್ ಎಫೆಕ್ಟ್ ಏನೇನು?

ಸಾಗರ್ ಆಸ್ಪತ್ರೆ ಸಮೂಹವು ದಶಕಗಳಿಂದ ರೋಗಿಗಳಿಗೆ ಗುಣಮಟ್ಟದ ಮತ್ತು ಸರಿಯಾದ ಆರೈಕೆಯನ್ನು ನೀಡಲು ಬದ್ಧವಾಗಿರುವ ಪ್ರಮುಖ ಆರೋಗ್ಯ ಸಂಸ್ಥೆಯಾಗಿದೆ. ಅತ್ಯಾಧುನಿಕ ವೈದ್ಯಕೀಯ ತಂತ್ರಜ್ಞಾನ ಮತ್ತು ನುರಿತ ವೈದ್ಯರ ತಂಡವನ್ನು ಹೊಂದಿದ್ದು, ಸಮುದಾಯಕ್ಕೆ ಸಮಗ್ರ ಆರೋಗ್ಯ ಸೇವೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ.

ಸೈಕ್ಲೋಥಾನ್‌ನಲ್ಲಿ ಭಾಗವಹಿಸಿದ್ದ ಸೈಕಲ್‌ ಸವಾರರು.

Continue Reading

ಕರ್ನಾಟಕ

VISTARA TOP 10 NEWS : ಸೆ. 26ಕ್ಕೆ ಬೆಂಗಳೂರು ಬಂದ್‌ಗೆ ಕರೆ, ಚೈತ್ರಾ ಕುಂದಾಪುರ ಟೀಮ್‌ ಪರಪ್ಪನ ಅಗ್ರಹಾರದಲ್ಲಿ ಸೆರೆ

VISTARA TOP 10 NEWS : ಕಾವೇರಿ ಹೋರಾಟದ ಕಿಚ್ಚು ಹೊತ್ತಿ ಉರಿಯುತ್ತಿದೆ. ಮಂಡ್ಯ ಬಂದ್‌ ಯಶಸ್ವಿಯಾಗಿದೆ. ಬೆಂಗಳೂರು ಬಂದ್‌ ರೆಡಿಯಾಗಿದೆ. ಚೈತ್ರಾ ಕುಂದಾಪುರ ಟೀಮ್‌ ಪರಪ್ಪನ ಅಗ್ರಹಾರ ತಲುಪಿದೆ. ಹೀಗೆ ದಿನ ವಿಶೇಷ ಬೆಳವಣಿಗೆಗಳ ಸುತ್ತು ನೋಟವೇ ವಿಸ್ತಾರ ಟಾಪ್‌ 10 ನ್ಯೂಸ್‌

VISTARANEWS.COM


on

Edited by

Vistara Top 10 News 2309
Koo

1.ರಾಜಧಾನಿಯಲ್ಲಿ ತೀವ್ರಗೊಂಡ ಕಾವೇರಿ ಹೋರಾಟ: ಸೆ.26ಕ್ಕೆ ಬೆಂಗಳೂರು ಬಂದ್‌ಗೆ ಕರೆ
ಕಾವೇರಿ ನೀರಿನ ಉಳಿವಿಗಾಗಿ ಸೆಪ್ಟೆಂಬರ್‌ 26ರಂದು (ಮಂಗಳವಾರ) ಬೆಂಗಳೂರು ಬಂದ್‌ಗೆ (Bangalore bandh on September 26) ಕರೆ ನೀಡಲಾಗಿದೆ. ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಶನಿವಾರ ನಡೆದ ಸಮಾಲೋಚನಾ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಪೂರಕ ಸುದ್ದಿ: ಸೆ. 26ರಬಂದ್‌ಗೆ ಭಾರಿ ಬೆಂಬಲ; ಏನಿರುತ್ತೆ? ಏನಿರಲ್ಲ?; ಕರ್ನಾಟಕ ಬಂದ್‌ಗೂ ಪ್ಲ್ಯಾನಿಂಗ್

2. ರೈತ ಸಂಘಟನೆಗಳು ಕರೆ ನೀಡಿದ್ದ ಮಂಡ್ಯ ಬಂದ್‌ ಸಕ್ಸಸ್‌‌‌‌: ರಾಜ್ಯಾದ್ಯಂತ ವ್ಯಾಪಿಸಿದ ಜ್ವಾಲೆ
ರಾಜ್ಯದಲ್ಲಿ ಮಳೆ ಇಲ್ಲದೆ ಸಂಕಷ್ಟ ಕಾಲ ಬಂದಿದ್ದರೂ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ (Cauvery protest) ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕರೆ ನೀಡಿದ್ದ ಮಂಡ್ಯ ಬಂದ್‌ (Mandya bandh) ಯಶಸ್ವಿಯಾಯಿತು. ಕಾವೇರಿ ಹೋರಾಟಕ್ಕೆ ರಾಜ್ಯದ ಎಲ್ಲ ಕಡೆಗಳಲ್ಲೂ ಬೆಂಬಲ ವ್ಯಕ್ತವಾಗಿದ್ದು, ಸಂಘಟನೆಗಳು ಪ್ರತಿಭಟನೆ, ಜಾಥಾಗಳನ್ನು ನಡೆಸಿದವು. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಪೂರಕ ಸುದ್ದಿ: ನಾನು ಹೇಳಿದ ಹಾಗೆ ಮಾಡ್ತೀರಾ?; ಕಾವೇರಿ ಬಿಕ್ಕಟ್ಟು ಪರಿಹಾರಕ್ಕೆ ಕುಮಾರಸ್ವಾಮಿ 3 ಸಲಹೆಗಳು

3. ಕಾಂಗ್ರೆಸ್‌ನಲ್ಲಿ ನಿಲ್ಲದ ಡಿಸಿಎಂ ರಗಳೆ- ಮೂರಲ್ಲ, ಐವರು ಡಿಸಿಎಂ ಬೇಕೆಂದ ರಾಯರೆಡ್ಡಿ
ರಾಜ್ಯದಲ್ಲಿ ಇನ್ನೂ ಮೂರು ಹೊಸ ಡಿಸಿಎಂ ಸ್ಥಾನಗಳನ್ನು ಸೃಷ್ಟಿಸಬೇಕು ಬೇಡಿಕೆಯ ನಡುವೆಯೇ ಶಾಸಕ ಬಸವರಾಜ ರಾಯರೆಡ್ಡಿ (MLA Basavaraja Rayareddy) ಇದನ್ನೂ ಮೀರಿಸಿ ಹೊಸದಾಗಿ ಐದು ಉಪಮುಖ್ಯಮಂತ್ರಿಗಳು ಬೇಕು ಎಂಬ ಅಭಿಪ್ರಾಯ ಮಂಡಿಸಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಪೂರಕ ಸುದ್ದಿ: ದೇವೇಗೌಡರ ತುಮಕೂರು ಸ್ಪರ್ಧೆಗೆ ಬಿಜೆಪಿ ಸಂಸದರ ವಿರೋಧ

4. ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್‌ನ ಏಳು ಮಂದಿ ಪರಪ್ಪನ ಅಗ್ರಹಾರ ಜೈಲಿಗೆ, 14 ದಿನ ನ್ಯಾಯಾಂಗ ಸೆರೆ
ಉದ್ಯಮಿ ಗೋವಿಂದ ಪೂಜಾರಿ ಅವರಿಗೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ ಏಳು ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲು ಕೋರ್ಟ್‌ ಆದೇಶಿಸಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಪೂರಕ ಸುದ್ದಿ: ವಂಚಕಿ ಚೈತ್ರಾ ಜತೆಗೆ ಕುಂದಾಪುರದ ಹೆಸರು ಬಳಸಬೇಡಿ; ಕೋರ್ಟ್ ತಾತ್ಕಾಲಿಕ ನಿರ್ಬಂಧ

5. ವಿಸ್ತಾರ ಅಂಕಣ: ಮಣ್ಣು ಬರೀ ಮಣ್ಣಲ್ಲ, ಅದು ನಮ್ಮ ಭಾವಕೋಶ, ನಾವು ಮಣ್ಣಿನ ಮಕ್ಕಳು!
ಪ್ರತಿ ಭಾರತೀಯನೂ, ಈ ದೇಶ ನನ್ನದು, ನಾನು ನನ್ನ ಕರ್ತವ್ಯ ನಿರ್ವಹಿಸಿದರೆ ಮಾತ್ರ ದೇಶ ಏಳಿಗೆ ಆಗುತ್ತದೆ ಎಂದು ಭಾವಿಸಬೇಕು. ಆಗ ವಿಶ್ವದ ಯಾವ ಶಕ್ತಿಯೂ ಭಾರತದ ಬೆಳವಣಿಗೆಯನ್ನು ತಡೆಯಲು ಆಗುವುದಿಲ್ಲ ಎನ್ನುತ್ತಾರೆ ವಿಸ್ತಾರ ನ್ಯೂಸ್‌ನ ಪ್ರಧಾನ ಸಂಪಾದಕರಾದ ಹರಿಪ್ರಕಾಶ್‌ ಕೋಣೆಮನೆ ತಮ್ಮ ವಿಸ್ತಾರ ಅಂಕಣದಲ್ಲಿ

ಪೂರ್ಣ ಲೇಖನ ಓದಲು ಈ ಲಿಂಕ್‌ ಕ್ಲಿಕ್‌ ಮಾಡಿ

6 ಲೋಕ ಸಮರ ಹೊತ್ತಲ್ಲೇ ವಾರಾಣಸಿಯಲ್ಲಿ ಅಭಿವೃದ್ಧಿ ಪರ್ವ: ಕ್ರಿಕೆಟ್‌ ಸ್ಟೇಡಿಯಂಗೆ ಮೋದಿ ಶಂಕುಸ್ಥಾಪನೆ
ವಾರಾಣಸಿಯಲ್ಲಿ ನಿರ್ಮಿಸಲಾಗುತ್ತಿರುವ ಶಿವನ ಮಾದರಿಯ ಕ್ರಿಕೆಟ್ ಸ್ಟೇಡಿಯಂಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು. 330 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುವ ಸ್ಟೇಡಿಯಂ ಶಿವನಿಗೆ ಸಮರ್ಪಣೆ ಎಂದಿದೆ ಬಿಸಿಸಿಐ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಪೂರಕ ಸುದ್ದಿ: ವಾರಾಣಸಿ ಕ್ರಿಕೆಟ್‌ ಸ್ಟೇಡಿಯಂ ಶಿವಮಯ; ಹೀಗಿರಲಿದೆ ಇದರ ವೈಭವ, ವೈಶಿಷ್ಟ್ಯ

7. ಭಾರತದ ಬೆನ್ನಿಗೆ ನಿಂತ ಅಮೆರಿಕ: ಆನೆ ಜತೆ ಇರುವೆ ಕಾಳಗಕ್ಕೆ ಇಳಿದಿದೆ ಅಂತ ಕೆನಡಾಗೆ ವ್ಯಂಗ್ಯ
ಭಾರತ ಹಾಗೂ ಕೆನಡಾ ನಡುವಿನ ಬಿಕ್ಕಟ್ಟು (India Canada Row) ದಿನೇದಿನೆ ಉಲ್ಬಣವಾಗುತ್ತಿರುವ ಕಾರಣ ಅಮೆರಿಕ ಮಧ್ಯಪ್ರವೇಶಿಸಲು ಯತ್ನಿಸುತ್ತಿದೆ. ಜತೆಗೆ “ಕೆನಡಾ ಭಾರತದ ಜತೆ ಸಂಘರ್ಷಕ್ಕೆ ಇಳಿದಿದೆ ಎಂದರೆ, ಅದು ಇರುವೆಯೊಂದು ಆನೆಯ ಜತೆ ಕಾಳಗಕ್ಕೆ ಇಳಿದಂತೆ” ಎಂದು ಗೇಲಿ ಮಾಡಿದೆ. ಪೂರ್ಣ ವರದಿಗೆ ಲಿಂಕ್‌ ಕ್ಲಿಕ್‌ ಮಾಡಿ

ಪೂರಕ ವರದಿ: ಭಾರತದಿಂದಲೇ G20 ಶೃಂಗಸಭೆ ಯಶಸ್ವಿ ಎಂದ ಬ್ರೆಜಿಲ್;‌ ಕೆನಡಾ ಆರೋಪಕ್ಕೆ ಏನೆಂದಿತು?

8. ಸುಂದರ ಆಟಗಾರ ಶುಭಮನ್​ ಗಿಲ್​ ಜತೆಗಿನ ಪ್ರೀತಿಗೆ ಕ್ಲ್ಯಾರಿಟಿ ನೀಡಿದ ಸಾರಾ ತೆಂಡೂಲ್ಕರ್
ಮುಂಬಯಿ:  ಸಾರಾ ತೆಂಡೂಲ್ಕರ್ ಮತ್ತು ಶುಭಮನ್​ ಗಿಲ್​ ಇಬ್ಬರು ಕದ್ದು ಮುಚ್ಚಿ ಡೇಟಿಂಗ್(sara tendulkar and shubman gill relationship)​ ನಡೆಸುತ್ತಿದ್ದಾರೆ ಎಂಬ ಸುದ್ದಿ ಈಗಾಗಲೇ ಹಲವು ಬಾರಿ ಕೇಳಿಬಂದಿದೆ. ಇದೀಗ ಸಾರಾ ಅವರು ಮಾಡಿರುವ ಟ್ವೀಟ್​ ಈ ಜೋಡಿ ನಿಜವಾಗಿಯೂ ಪ್ರೀತಿಸುತ್ತಿರುವುದು ಖಚಿತ ಎಂಬ ಸುಳಿವು ನೀಡಿದಂತಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

9. ಮಗಳ ವಯಸ್ಸಿನ ನಟಿಯ ಜತೆ ರೊಮ್ಯಾನ್ಸ್ ಮಾಡಲಾರೆ ಎಂದ ವಿಜಯ್ ಸೇತುಪತಿ!
 ವಿಜಯ್ ಸೇತುಪತಿ ತಮಿಳು ಮಾತ್ರವಲ್ಲದೆ, ತೆಲುಗು ಮತ್ತು ಮಲಯಾಳಂ ಭಾಷೆಯ ಸಿನಿಮಾಗಳಲ್ಲೂ ಬ್ಯುಸಿ. ಇಷ್ಟೊಂದು ಜನಪ್ರಿಯತೆ ಪಡೆದಿರುವ ವಿಜಯ್‌ ಸೇತುಪತಿ ಅವರು ನಟಿ ಕೃತಿ ಶೆಟ್ಟಿ (Krithi Shetty) ಜತೆ ನಾಯಕನಾಗಿ ನಟಿಸಲು ನಿರಾಕರಿಸಿದ್ದಾರೆ. ಮಗಳ ಪಾತ್ರ ಮಾಡಿದ ನಟಿ ಜತೆ ರೊಮ್ಯಾನ್ಸ್ ಮಾಡಲಾರೆʼ ಎಂದು ನಟ ಹೇಳಿದ್ದಾರಂತೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

10. ಸಿಲ್ಕ್‌ ಸ್ಮಿತಾ ಶವದ ಮೇಲೆ ನಡೆದಿತ್ತಂತೆ ಸಾಮೂಹಿಕ ಅತ್ಯಾಚಾರ: ನಟಿಯ ಪುಣ್ಯತಿಥಿಯಂದೇ ಹೊರಬಿತ್ತು ಸತ್ಯ
ಸಿಲ್ಕ್‌ ಸ್ಮಿತಾ (Silk Smitha) ಎಂಬ ಅಪ್ಸರೆಯಂಥ ನಟಿ ಬದುಕಿನಲ್ಲಿ ಏನೆಲ್ಲ ಅನುಭವಿಸಿದರು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ, ಅವರು ಮೃತಪಟ್ಟ ಬಳಿಕ ಅವರ ಶವದ ಮೇಲೆ ಅತ್ಯಾಚಾರ ಮಾಡಲಾಗಿತ್ತು ಎನ್ನುವ ಭಯಾನಕ ಸುದ್ದಿ ಮತ್ತೊಮ್ಮೆ ವೈರಲ್‌ ಆಗಿದೆ. ಏನಿದು ಪೈಶಾಚಿಕ ಕೃತ್ಯ? ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Gangavathi News: ಆನೆಗೊಂದಿ ಜಯತೀರ್ಥ-ರಘುವರ್ಯರ ವೃಂದಾವನ ವಿವಾದ; ರಾಯರ ಮಠದ ಪರ ಹೈಕೋರ್ಟ್ ತೀರ್ಪು

ಹೈಕೋರ್ಟ್‌ನ ದ್ವಿ ಸದಸ್ಯ ಪೀಠದ ಆದೇಶದಿಂದಾಗಿ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದ ಅನುಯಾಯಿಗಳಿಗೆ ಆನೆಗೊಂದಿಯ ಜಯತೀರ್ಥರ ವೃಂದಾವನಕ್ಕೆ ಪೂಜೆ ಸಲ್ಲಿಸುವ ಅವಕಾಶ ನೀಡಿದಂತಾಗಿದೆ.

VISTARANEWS.COM


on

Edited by

Anegondi Vrindavana
Koo

ಗಂಗಾವತಿ (ಕೊಪ್ಪಳ): ಮಾಧ್ವ ಸಂಪ್ರದಾಯದ ಪ್ರಮುಖ ಧಾರ್ಮಿಕ ತಾಣವಾದ ಗಂಗಾವತಿ (Gangavathi News) ತಾಲೂಕಿನ ಆನೆಗೊಂದಿಯ ನವ ವೃಂದಾವನ ಗಡ್ಡೆಯಲ್ಲಿನ ವಿವಾದಿತ ಜಯತೀರ್ಥ-ರಘುವರ್ಯರ ವೃಂದಾವನದ ಪೂಜೆಯ ಸಂಬಂಧ ಈ ಹಿಂದೆ ಧಾರವಾಡದ ಏಕಸದಸ್ಯ ಪೀಠವು ನೀಡಿದ್ದ ಪೂಜೆಯ ನಿರ್ಬಂಧದ ತೀರ್ಪನ್ನು ದ್ವಿ ಸದಸ್ಯ ಪೀಠ ತಳ್ಳಿ ಹಾಕಿದೆ. ಇದರಿಂದ ಮಂತ್ರಾಲಯದ ರಾಘವೇಂದ್ರ ಸ್ವಾಮೀಜಿಗಳ ಮಠದ ಅನುಯಾಯಿಗಳಿಗೆ ಈ ಮೊದಲಿನಂತೆ, ಜಯತೀರ್ಥರ ವೃಂದಾವನಕ್ಕೆ ಪೂಜೆ ಸಲ್ಲಿಸುವ ಅವಕಾಶ ದೊರೆತಂತಾಗಿದೆ.

ಧಾರವಾಡದ ಹೈಕೋರ್ಟ್‌ನ ಆದೇಶ ಹೊರ ಬೀಳುತ್ತಿದ್ದಂತೆಯೆ ಸಂಭ್ರಮಿಸಿದ ಅನುಯಾಯಿಗಳು, ಆನೆಗೊಂದಿ ರಾಯರಮಠದ ಅರ್ಚಕರ ನೇತೃತ್ವದಲ್ಲಿ ತುಂಗಭದ್ರಾ ನದಿಯ ದಡದಲ್ಲಿರುವ ನವವೃಂದಾವನ ಗಡ್ಡೆಗೆ ತೆರಳಿ ಜಯತೀರ್ಥರ ವೃಂದಾವನಕ್ಕೆ ಶೇಷವಸ್ತ್ರ ಅಲಂಕಾರ ಮಾಡಿ, ವಿಶೇಷ ಪೂಜೆ ಮಾಡಿ ಸಂತಸ ವ್ಯಕ್ತಪಡಿಸಿದರು.

ಇದನ್ನೂ ಓದಿ | Chaitra Kundapura : ವಂಚಕಿ ಚೈತ್ರಾ ಜತೆಗೆ ಕುಂದಾಪುರದ ಹೆಸರು ಬಳಸಬೇಡಿ; ತಾತ್ಕಾಲಿಕ ನಿರ್ಬಂಧ ವಿಧಿಸಿದ ಕೋರ್ಟ್‌

ಏನಿದು ವಿವಾದ?

ಗಂಗಾವತಿ ತಾಲೂಕಿನ ಆನೆಗೊಂದಿ ಬಳಿಯ ತುಂಗಭದ್ರಾ ನದಿ ತಟದಲ್ಲಿರುವ ನವವೃಂದಾವನ ಗಡ್ಡೆಯಲ್ಲಿ ಮಾಧ್ವ ಮತ ಪ್ರಚಾರಕರ ಒಂಭತ್ತು ಯತಿಗಳ ಭೌತಿಕ ಸಮಾಧಿಗಳಿವೆ. ಈ ಪೈಕಿ ಒಂದು ಸಮಾಧಿ (ವೃಂದಾವನ) ವಿವಾದದ ಕೇಂದ್ರ ಬಿಂದುವಾಗಿದೆ.

ರಾಯರಮಠದ ಅನುಯಾಯಿಗಳು ಅದನ್ನು ಜಯತೀರ್ಥರದ್ದು ಎಂದು, ಉತ್ತರಾಧಿ ಮಠದ ಅನುಯಾಯಿಗಳು ಅದೇ ವೃಂದಾವನವನ್ನು ರಘುವರ್ಯ ತೀರ್ಥರದ್ದು ಎಂದು ವಾದಿಸುತ್ತಿರುವುದು ವಿವಾದಕ್ಕೆ ಕಾರಣವಾಗಿದ್ದು, ಕಾನೂನು ತೊಡಕಾಗಿ ಪರಿಣಾಮಿಸಿದೆ.

ನ್ಯಾಯಾಲಯದಲ್ಲಿ ಪ್ರಕರಣ

ರಘುವರ್ಯ ತೀರ್ಥರ ವೃಂದಾವನವನ್ನು ರಾಯರಮಠದವರು, ಜಯತೀರ್ಥರದ್ದು ಎಂದು ವಾದಿಸುತ್ತಿದ್ದು ಮತ್ತು ಅದಕ್ಕೆ ಧಾರ್ಮಿಕ ಕಾರ್ಯಗಳನ್ನು ಹಮ್ಮಿಕೊಳ್ಳುವ ಮೂಲಕ ಯತಿ ಪರಂಪರೆಗೆ ಅಪಚಾರ ಮಾಡುತ್ತಿದ್ದಾರೆ. ಇದಕ್ಕೆ ತಡೆ ನೀಡುವಂತೆ ಕೋರಿ ಈ ಸಂಬಂಧ ಉತ್ತರಾಧಿ ಮಠದ ಅನುಯಾಯಿಗಳು ಧಾರವಾಡದ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.

ಮನವಿ ಪುರಸ್ಕರಿಸಿದ್ದ ಧಾರವಾಡದ ಹೈಕೋರ್ಟ್‌ ಶಂಕರ್ ಮುಗುದುಮ್ ಅವರಿದ್ದ ಏಕಸದಸ್ಯ ಪೀಠ, ವಿವಾದಿತ ವೃಂದಾವನಕ್ಕೆ ಯಾವುದೇ ಪೂಜೆ-ಪುನಸ್ಕಾರ ಮಾಡದಂತೆ ರಾಯರ ಮಠದ ಅನುಯಾಯಿಗಳಿಗೆ ನಿಬಂರ್ಧ ಹೇರಿ ಸೆ.11ರಂದು ಆದೇಶ ನೀಡಿತ್ತು.

ಇದನ್ನು ಪ್ರಶ್ನಿಸಿ ರಾಯರಮಠದ ಪರವಾಗಿ ವಕೀಲರಾದ ಪ್ರಭುಲಿಂಗ ನಾವದಗಿ ಮತ್ತು ಶಿವಪ್ರಸಾದ ಶಾಂತನಗೌಡ ಮೇಲ್ಮನವಿ ಸಲ್ಲಿಸಿದ್ದರು. ಮನವಿ ಆಲಿಸಿದ ಧಾರವಾಡದ ಹೈಕೋರ್ಟ್‌ನ ನ್ಯಾಯಾಧೀಶರಾದ ಕೃಷ್ಣಕುಮಾರ್ ಹಾಗೂ ಬಸವರಾಜ್ ಅವರಿದ್ದ ದ್ವಿ ಸದಸ್ಯ ನ್ಯಾಯಪೀಠವು, ಈ ಹಿಂದೆ ಮಾಡಿದ್ದ ಆದೇಶವನ್ನು ತಳ್ಳಿ ಹಾಕಿದೆ.

ಇದನ್ನೂ ಓದಿ | Vinay Kulkarni: ಧಾರವಾಡ ಪ್ರವೇಶಕ್ಕೆ ವಿನಯ್ ಕುಲಕರ್ಣಿಗೆ ಮತ್ತೆ ಅನುಮತಿ ನಿರಾಕರಿಸಿದ ಹೈಕೋರ್ಟ್

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆನೆಗೊಂದಿ ರಾಯರಮಠದ ವ್ಯವಸ್ಥಾಪಕ ಈಡಪನೂರು ಸುಮಂತ ಕುಲಕರ್ಣಿ ಅವರು, ನ್ಯಾಯಪೀಠದ ಆದೇಶದಿಂದಾಗಿ ಸತ್ಯಕ್ಕೆ ಜಯ ಸಂಧಂತಾಗಿದೆ. ಜಯತೀರ್ಥರ ಮೂಲಕ ವೃಂದಾವನ ಆನೆಗೊಂದಿಯಲ್ಲಿಯೇ ಇದೆ ಎಂಬುವುದಕ್ಕೆ ಸಾಕ್ಷಿ ಸಿಕ್ಕಂತಾಗಿದ್ದು, ದೈನಿಕ ಧಾರ್ಮಿಕ ಕಾರ್ಯ ನಡೆಯುತ್ತವೆ ಎಂದಿದ್ದಾರೆ.

Continue Reading
Advertisement
Bus Accident In Raichur
ಕರ್ನಾಟಕ13 mins ago

Bus Accident: ನಿಂತಿದ್ದ ಲಾರಿಗೆ ಸಾರಿಗೆ ಬಸ್‌ ಡಿಕ್ಕಿ; 32 ಜನರಿಗೆ ಗಾಯ, ಐವರ ಸ್ಥಿತಿ ಗಂಭೀರ

DUSU Election Result
ದೇಶ44 mins ago

DUSU Election: ದೆಹಲಿ ವಿವಿಯಲ್ಲಿ ಎಬಿವಿಪಿ ದರ್ಬಾರ್;‌ ಚುನಾವಣೆಯಲ್ಲಿ ಭಾರಿ ಗೆಲುವು, ದೇಶ ಮೊದಲು ಎಂದ ಬಿಜೆಪಿ

fruits and cold cough
ಆರೋಗ್ಯ1 hour ago

Health Tips: ಶೀತ, ನೆಗಡಿಯಾದಾಗ ಈ ಎಲ್ಲ ಹಣ್ಣುಗಳಿಂದ ದೂರವಿರುವುದು ಒಳ್ಳೆಯದು!

new kannada book yabli
ಕಲೆ/ಸಾಹಿತ್ಯ2 hours ago

Sunday Read: ಹೊಸ ಪುಸ್ತಕ: ಯಾಬ್ಲಿ: ಯಥಾಪ್ರಕಾರ

cryptocurrency fraud
ಅಂಕಣ2 hours ago

ಸೈಬರ್‌ ಸೇಫ್ಟಿ ಅಂಕಣ: ಅಳಿವಿನ ಅಂಚಿನಲ್ಲಿ ಝಣ ಝಣ ಕಾಂಚಾಣ!

pak human right
ಕ್ರಿಕೆಟ್2 hours ago

ವಿಸ್ತಾರ ಸಂಪಾದಕೀಯ: ಮಾನವ ಹಕ್ಕುಗಳ ಪ್ರಶ್ನೆ; ಪಾಕ್‌ ಮೊದಲು ತನ್ನ ಹುಳುಕು ಸರಿಪಡಿಸಿಕೊಳ್ಳಲಿ

dina bhavishya
ಪ್ರಮುಖ ಸುದ್ದಿ3 hours ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Sphoorti Salu
ಸುವಚನ3 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Narendra Modi
ದೇಶ8 hours ago

Narendra Modi : ವಾರಾಣಸಿಯಲ್ಲಿ ಪ್ರಧಾನಿ ಮೋದಿ ಭದ್ರತೆ ಉಲ್ಲಂಘನೆಗೆ ಯತ್ನಿಸಿದ ವ್ಯಕ್ತಿ ಬಂಧನ

cyclothon in Bangalore
ಬೆಂಗಳೂರು8 hours ago

World Heart Day: ಹೃದಯ ಆರೋಗ್ಯ ಜಾಗೃತಿಗಾಗಿ ಸಾಗರ್ ಆಸ್ಪತ್ರೆಯಿಂದ ‌ಸೈಕ್ಲೋಥಾನ್; 500 ಮಂದಿ ಭಾಗಿ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ7 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ2 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

dina bhavishya
ಪ್ರಮುಖ ಸುದ್ದಿ3 hours ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

dina bhavishya
ಪ್ರಮುಖ ಸುದ್ದಿ6 days ago

Dina Bhavishya : ಆಪ್ತರೊಂದಿಗೆ ಜಗಳವಾದೀತು ಹುಷಾರ್‌!

Dina Bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ರಾಶಿಯವರು ಇಂದು ಮುಟ್ಟಿದ್ದೆಲ್ಲಾ ಚಿನ್ನ!

Ramalinga Reddy
ಕರ್ನಾಟಕ1 week ago

ಇನ್ಮುಂದೆ ಹೇಗಂದ್ರೆ ಹಾಗೆ ದೇವಸ್ಥಾನ ಕಟ್ಟೋ ಹಾಗಿಲ್ಲ! ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

Bannerghatta Park
ಆರೋಗ್ಯ1 week ago

Nipah Virus : ನಿಫಾ ವೈರಸ್‌ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್

Villagers exclude menstruating women
ಕರ್ನಾಟಕ1 week ago

Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ!

dina bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ!

ಟ್ರೆಂಡಿಂಗ್‌