I deserve more than Eshwarappa son Give me ticket ask Ayanur Manjunath Karnataka Election 2023 updates Karnataka Election 2023: ಈಶ್ವರಪ್ಪ ಮಗನಿಗಿಂತ ನಾನೇ ಅರ್ಹ; ನನಗೇ ಟಿಕೆಟ್‌ ಕೊಡಿ: ಆಯನೂರು ಮಂಜುನಾಥ್‌ Vistara News

ಕರ್ನಾಟಕ

Karnataka Election 2023: ಈಶ್ವರಪ್ಪ ಮಗನಿಗಿಂತ ನಾನೇ ಅರ್ಹ; ನನಗೇ ಟಿಕೆಟ್‌ ಕೊಡಿ: ಆಯನೂರು ಮಂಜುನಾಥ್‌

Ayanur Manjunath: ಕರ್ನಾಟಕ ವಿಧಾನಸಭಾ ಚುನಾವಣೆ ಹೊತ್ತಿನಲ್ಲಿ ರಾಜಕೀಯ ಪಕ್ಷಗಳಲ್ಲಿ ಟಿಕೆಟ್‌ ಆಕಾಂಕ್ಷಿಗಳ ಸಂಖ್ಯೆ ಹೆಚ್ಚುತ್ತಲಿವೆ. ಈಗ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಟಿಕೆಟ್‌ ಮೇಲೆ ಕಣ್ಣಿಟ್ಟಿರುವ ಎಂಎಲ್‌ಸಿ ಆಯನೂರು ಮಂಜುನಾಥ್‌ ಅವರು ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಹರಿಹಾಯ್ದಿದ್ದಾರೆ.

VISTARANEWS.COM


on

Ayanur manjunath
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ಅವರಿಗೆ ನನಗಿಂತ ಹೆಚ್ಚು ಅವಕಾಶವನ್ನು ಪಕ್ಷ ಕೊಟ್ಟಿದೆ. ಸತತವಾಗಿ 32 ವರ್ಷಗಳ ಕಾಲ ಈಶ್ವರಪ್ಪ ಅವರಿಗೆ ಅವಕಾಶ ಕೊಡಲಾಗಿದೆ. ಅವರ ಬಗ್ಗೆ ನಾನು ಯಾವುದೇ ಟೀಕೆ ಮಾಡಲಾರೆ. ನನಗಿಂತ ಅನೇಕ ಜನರು ಅರ್ಹರು ಇದ್ದಾರೆ. ಆದರೆ, ಅವರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) ತಮ್ಮ ಬದಲು ಮಗನಿಗೆ ಟಿಕೆಟ್ ಕೊಡಬೇಕು ಎಂದು ಹೇಳಿದಾಗ ನಾನು ಕೇಳಿದ್ದೇನೆ. ಅವರ ಮಗನಿಗಿಂತ ಹೆಚ್ಚು ಅರ್ಹತೆ ನನಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇರೆಯವರಂತೆ ಲಜ್ಜೆ, ನಾಚಿಕೆ ಬಿಡದೆ ಸಾರ್ವಜನಿಕ ಕ್ಷೇತ್ರದಲ್ಲಿ ಇದ್ದೇನೆ. ಒಂದೇ ಒಂದು ಆಪಾದನೆ ನನ್ನ ಮೇಲೆ ಇಲ್ಲ. ಈಗ ನಾನು ನಂತರ ನನ್ನ ಸಂತತಿ ಅನ್ನೋದು ಸರಿಯಲ್ಲ. ಅದನ್ನು ಖಂಡಿಸಿ ನಾನು ರಂಗ ಪ್ರವೇಶ ಮಾಡಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: Vastu Tips : ಕಚೇರಿಯ ವಾಸ್ತು ಹೀಗಿದ್ದರೆ ಯಶಸ್ಸು ಖಚಿತವಂತೆ!

ಸೀಟ್‌ ಕೇಳಿದರೆ ಇಷ್ಟು ಸಿಟ್ಟಾ?

ಸೀಟ್ ಕೇಳಿದರೆ ಇಷ್ಟೊಂದು ಆಕ್ರೋಶ ವ್ಯಕ್ತಪಡಿಸುತ್ತಾರಾ? ಅದೂ ಕೆಳಮಟ್ಟದ ಪ್ರತಿಕ್ರಿಯೆಯನ್ನು ನೀಡುತ್ತಾರಾ? ಸೀಟ್ ಕೇಳುವ ಅರ್ಹತೆ ನನಗೆ ಇಲ್ಲವೇ? ಕಾಂಗ್ರೆಸ್ ಗಟ್ಟಿ ನೆಲ ಹೊಸನಗರದಲ್ಲಿ ಬಿಜೆಪಿ ಧ್ವಜ ಹಾರಿಸಿದ ಹೆಮ್ಮೆ ನನಗಿದೆ. ಬಂಗಾರಪ್ಪ ವಿರುದ್ಧ ಗೆಲುವು ಸಾಧಿಸಿದ ಹೆಮ್ಮೆ ನನಗಿದೆ. ಸವಾಲು ಇದ್ದಲ್ಲಿ ಹೋರಾಡಿ ಗೆದ್ದು ಬಂದಿದ್ದೇನೆ. ಯಾವುದೇ ಆಯಕಟ್ಟಿನ ಸುರಕ್ಷಿತ ಸ್ಥಳ ನೋಡಿ ನಾನಿಲ್ಲ. ಗೂಟ ಹೊಡೆದುಕೊಂಡು ಕೂತಿಲ್ಲ ಎಂದು ಈಶ್ವರಪ್ಪ ಅವರ ಹೆಸರು ಹೇಳದೆ ತಿವಿದರು.

ನನಗೇ ಟಿಕೆಟ್‌ ಸಿಗಲಿದೆ

ನಾನು ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದೇನೆ. ಟಿಕೆಟ್ ಕೊಡುವ ಅಧಿಕಾರ ಇರುವ ಪಕ್ಷದ ಎಲ್ಲರನ್ನೂ ನಾನು ಭೇಟಿಯಾಗಿದ್ದೇನೆ. ನನಗೆ ಟಿಕೆಟ್ ಕೊಡುತ್ತಾರೆ ಎಂಬ ವಿಶ್ವಾಸ ನನಗೆ ಇದೆ. ಮೋದಿಯ ಆಶಯಕ್ಕೆ ತಕ್ಕಂತೆ ಮಾತನಾಡುವ ನನಗೆ ಟಿಕೆಟ್ ಸಿಗಲಿದೆ. ನನಗಲ್ಲದೆ ಬೇರೆಯವರಿಗೆ ಟಿಕೆಟ್ ಕೊಟ್ಟರೆ ತಾತ್ವಿಕವಾಗಿ ವಿರೋಧಿಸುತ್ತೇನೆ. ಚುಕ್ಕೆ ರಹಿತ ನನ್ನನ್ನು ಪಕ್ಷ ಗುರುತಿಸುತ್ತದೆ. ಕಪ್ಪು ಚುಕ್ಕೆ ಹೊಂದಿದವರನ್ನಲ್ಲ ಅನ್ನುವ ಭರವಸೆ ಇದೆ. ಟೀಕೆ ಮಾಡುವವರು ಬಿಜೆಪಿ ಅನುಯಾಯಿಗಳು ಅಲ್ಲ. ಅವರು ಯಾರದ್ದೋ ಅನುಯಾಯಿಗಳು ಅನ್ನಿಸುತ್ತದೆ. ಇನ್ನೊಬ್ಬರಿಗೆ ಎಂಎಲ್ಸಿ ಕೊಟ್ಟು ಮಂತ್ರಿ ಮಾಡಲಿ. ನನಗೆ ಯಾವುದೇ ಅಭ್ಯಂತರವಿಲ್ಲ ಎಂದು ಹೇಳಿದರು.

ನನ್ನ ಫ್ಲೆಕ್ಸ್‌ ಗಮನ ಸೆಳೆದಿದೆ

ನಾನು ಹಾಕಿರುವ ಫ್ಲೆಕ್ಸ್ ನಿರೀಕ್ಷೆಗೆ ಮೀರಿ ಎಲ್ಲರ ಗಮನ ಸೆಳೆದಿದೆ. ಅದನ್ನು ನೋಡಿ ಹಲವರು ಕಮೆಂಟ್ ಮಾಡಿದ್ದಾರೆ. ಅದನ್ನು ಸ್ವಾಗತ ಮಾಡಿ ಶಿವಮೊಗ್ಗದಲ್ಲಿ ಶಾಂತಿ ಬೇಕು ಅಂತ ಹೇಳಿದ್ದಾರೆ. ನನ್ನ ಮಾತು ಸರಿಯಾಗಿದೆ ಎಂಬುದು ಜನರ ಪ್ರತಿಕ್ರಿಯೆಯಿಂದ ಗೊತ್ತಾಗಿದೆ. ನಾನು ಸರಿಯಾದ ಹೆಜ್ಜೆ ಇಟ್ಟಿದ್ದೇನೆ ಎಂಬುದು ತಿಳಿದಿದೆ. ಜನರ ನಾಡಿಮಿಡಿತದ ಧ್ವನಿಯಾಗಿ ರಾಜ್ಯದ ಗಮನ ಸೆಳೆದಿದೆ. ಆದರೆ, ಅದು ಯಾರ ವಿರುದ್ಧವೂ ಆಗಿರಲಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್ ಹೇಳಿದರು.

ಇದನ್ನೂ ಓದಿ: Google service down : ಗೂಗಲ್‌ ಸೇವೆಯಲ್ಲಿ ವ್ಯತ್ಯಯ, ಯೂಟ್ಯೂಬ್‌, ಡ್ರೈವ್‌, ಜಿಮೇಲ್‌ಗೆ ಅಡಚಣೆ, ಬಳಕೆದಾರರ ಪರದಾಟ

ಬೇರೆಯವರಿಗೆ ಟಿಕೆಟ್‌ ಕೊಟ್ಟರೆ ನನ್ನ ವಿರೋಧ

ನಿತ್ಯಸಮಂಗಲಿಯ ನಾಯಕನಾಗಲು ತಯಾರಿದ್ದೇನೆ

ಶಿವಮೊಗ್ಗ ಶಾಂತಿಯಿಂದ ಇರಬೇಕು. ಕೆಲವರ ಹಿತಾಸಕ್ತಿಗಾಗಿ ಶಿವಮೊಗ್ಗ ಸ್ಪಂದಿಸದಿರಲಿ. ಆ ಆಶಯವನ್ನು ಬ್ಯಾನರ್‌ನಲ್ಲಿ ವ್ಯಕ್ತಪಡಿಸಿದ್ದೇನೆ. ಕೆಲವರು ನನ್ನ ಶುಭಾಶಯಕ್ಕೆ ಟೀಕೆಯನ್ನೂ ಮಾಡಿದ್ದಾರೆ. ನನ್ನ ನಿಲುವನ್ನು ವಿರೋಧಿಸಿದವರೂ ಇದ್ದಾರೆ. ಕೆಲವರು ಅದನ್ನು ಮನೋರಂಜನೆಯಾಗಿ ನೋಡಿದ್ದಾರೆ. ನಾನು ಅಧಿಕಾರದ ನಿತ್ಯ ಸುಮಂಗಲಿ ಅಂದಿದ್ದಾರೆ. ಸತ್ಯ ಹೇಳಿದವನನ್ನು ಅಷ್ಟೊಂದು ಕೀಳು ಮಟ್ಟಕ್ಕೆ ಇಳಿಸುವುದೇ? ನಿತ್ಯ ಸುಮಂಗಲಿ ಆಗಲು, ನಿತ್ಯಸಮಂಗಲಿಯ ನಾಯಕನಾಗಲು ತಯಾರಿದ್ದೇನೆ. ಯಾರೋ ನಾಯಕನನ್ನು ಮೆಚ್ಚಿಸಲು ಶ್ವಾನದ ಬಾಲದಂತೆ ಅಲ್ಲಾಡಿಸುತ್ತಿದ್ದಾರೆ ಎಂದು ಆಯನೂರು ಮಂಜುನಾಥ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಿಕೆಟ್‌ ವಿಚಾರವಾಗಿ ಆಯನೂರು ಮಂಜುನಾಥ್‌ ಹೇಳಿದ್ದೇನು?

ಶಿವಮೊಗ್ಗ ಏರ್ಪೋರ್ಟ್‌ ನಾನು ಬಿತ್ತಿದ್ದ ಬೀಜ

ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಬಗ್ಗೆ ನಾನು ಕನಸನ್ನು ಕಂಡಿದ್ದೆ. ಇದು ನಾನು ಬಿತ್ತಿದ್ದ ಬೀಜ. ಅನಂತ್ ಕುಮಾರ್ ಸಚಿವರಾಗಿದ್ದಾಗ ಇದಕ್ಕೆ ಚಾಲನೆ ಸಿಕ್ಕಿತು. ಆದರೆ ಸರ್ಕಾರ ಅಧಿಕಾರ ಕಳೆದುಕೊಂಡಿತ್ತು. ನನ್ನ ವೇಗಕ್ಕೆ ತಡೆಯೊಡ್ಡಿತು. ವಿಐಎಸ್ಎಲ್ ಸೇಲ್ ಆಡಳಿತಕ್ಕೆ ಒಳಪಟ್ಟಿದ್ದು ನಾನು ಸಂಸದನಾಗಿದ್ದಾಗ. ನನ್ನ ಬಗ್ಗೆ ಗೊತ್ತಿಲ್ಲದವರು ಬಿಸ್ಕೆಟ್‌ಗಾಗಿ ಮಾತನಾಡುತ್ತಿದ್ದಾರೆ. ನನ್ನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಬಿಂಬಿಸಬೇಡಿ. ಪ್ರಧಾನಿ ನರೇಂದ್ರ ಮೋದಿ ಜಿಂದಾಬಾದ್ ಅಂದರೆ ಸಾಲದು. ಅವರ ಹೇಳಿಕೆ ವಿರುದ್ಧವಾಗಿ ನಡೆದುಕೊಳ್ಳುವುದು ತಪ್ಪಲ್ಲವೇ? ಎಲ್ಲ ಬಾಂಧವರೂ ಒಟ್ಟಾಗಿ ಇರಬೇಕು ಅಂತ ಮೋದಿ ಹೇಳಿದ್ದಾರೆ. ಸರಸಂಘ ಚಾಲಕರು ಕೂಡ ಅದನ್ನೇ ಹೇಳಿದ್ದಾರೆ. ಅದರ ವಿರುದ್ಧವಾಗಿ ಶಿವಮೊಗ್ಗದಲ್ಲಿ ನಡೆಸಿಕೊಂಡಾಗ ಖಂಡಿಸಿದ್ದೇನೆ. ಸಾಮಾಜಿಕ ಜಾಲತಾಣದ ದಾಳಿಯನ್ನು ನಾನು ಎದುರಿಸುತ್ತೇನೆ ಎಂದು ಆಯನೂರು ಮಂಜುನಾಥ್‌ ಹೇಳಿದರು.

ಜಾತಿ ಜಾತಿಗಳ ಮೆರವಣಿಗೆ ಆಗಬಾರದು. ಸಚಿವರೇ ಹೋಗಿ ಮನವಿ ಕೊಡುವುದು. ಸರ್ಕಾರವೇ ಮನವಿ ಪಡೆಯುವುದು. ಇದು ಸಂವಿಧಾನ ವಿರೋಧಿ ಅಲ್ಲವೇ? ಈ ಬಗ್ಗೆ ಸದನದಲ್ಲಿ ನಾನು ಹೇಳಿದ್ದೇನೆ. ಅಂದು ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದರು. ಅಂದಿನ ಗೃಹ ಮಂತ್ರಿ, ಇಂದಿನ ಸಿಎಂ ನನ್ನ ಮಾತನ್ನು ಪುರಸ್ಕರಿಸಿದ್ದರು. ನಾನು ಗುಂಪು ಕಟ್ಟಿಕೊಂಡಿಲ್ಲ. ಹೀಗಾಗಿ ಏಕಾಂಗಿ ಸುದ್ದಿಗೋಷ್ಠಿ ಮಾಡಿದ್ದೇನೆ. ಮೋದಿ, ಸರಸಂಘಚಾಲಕರ ಆಶಯವನ್ನು ಪ್ರತಿಪಾದಿಸಿದ್ದೇನೆ ಎಂದು ಆಯನೂರು ಮಂಜುನಾಥ್ ಹೇಳಿದರು.

ಶಿವಮೊಗ್ಗ ಏರ್ಪೋರ್ಟ್‌ ಬಗ್ಗೆ ಆಯನೂರು ಮಾತು

ಇದನ್ನೂ ಓದಿ: Shravanabelagola Swameeji : ಶ್ರೀಗಳ ನಿಧನಕ್ಕೆ ಹೃದಯಾಘಾತ ಕಾರಣವಲ್ಲ, ನಿಜವಾದ ಕಾರಣ ಹೇಳಿದ ಜಿಲ್ಲಾಧಿಕಾರಿ

ಧರ್ಮ ಮೀರುವವನು ಅಚ್ಛಾ ಮುಸಲ್ಮಾನನೂ ಅಲ್ಲ, ಹಿಂದುವೂ ಅಲ್ಲ

ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಬುಧವಾರ ಕರೆ ಮಾಡಿದ್ದರು. ಅದೇನು ಮಾತುಕತೆ ‌ನಡೆದಿದೆ ಎಂಬುದು ಇಲ್ಲಿ ಬೇಡ. ನಾನು ನನಗೆ ಟಿಕೆಟ್ ಕೇಳಿದ್ದೇನೆ, ನನ್ನ ಮಗನಿಗಲ್ಲ. ಆಜಾನ್ ಕೂಗಲು ಒಂದು ಜಾಗವಿದೆ. ಅದಕ್ಕೂ ಒಂದು ನೀತಿ ನಿಯಮ ಇದೆ. ಡಿಸಿ ಕಚೇರಿಯಲ್ಲಿ ಆಜಾನ್ ಕೂಗಿದ್ದೂ ಹರಕುಬಾಯಿ. ಧರ್ಮ ಮೀರಿ ಹೋಗುವವನು ಅಚ್ಛಾ ಮುಸಲ್ಮಾನನೂ ಅಲ್ಲ, ಹಿಂದುವೂ ಅಲ್ಲ. ಅವನೊಬ್ಬ ಕಚ್ಚಾ ಮನುಷ್ಯ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Actress Ramya: ಹುಟ್ಟುಹಬ್ಬದಂದು ನಾಯಿಮರಿಗಳೊಂದಿಗೆ ಕಾಲಕಳೆದ ಮೋಹಕ ತಾರೆ ರಮ್ಯಾ

Actress Ramya: ಸ್ಯಾಂಡಲ್‌ವುಡ್‌ ಕ್ವೀನ್ ನಟಿ ರಮ್ಯಾ ಅವರು 41ನೇ ವಸಂತಕ್ಕೆ ಕಾಲಿಟ್ಟಿದ್ದು, ಅಭಿಮಾನಿಗಳು ತಮ್ಮ ನೆಚ್ಚಿನ ನಟಿಗೆ ಸಾಮಾಜಿಕ ಜಾಲತಾಣಗಳಲ್ಲಿ ಜನ್ಮದಿನದ ಶುಭಾಶಯಗಳನ್ನು ಕೋರುತ್ತಿದ್ದಾರೆ.

VISTARANEWS.COM


on

Actress Ramya
Koo

ಬೆಂಗಳೂರು: ಮೋಹಕ ತಾರೆ, ಸ್ಯಾಂಡಲ್‌ವುಡ್‌ ಕ್ವೀನ್ ನಟಿ ರಮ್ಯಾ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 41ನೇ ವಸಂತಕ್ಕೆ ಕಾಲಿಟ್ಟಿರುವ ತಮ್ಮ ನೆಚ್ಚಿನ ನಟಿಗೆ (Actress Ramya) ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಶಯ ಕೋರುತ್ತಿದ್ದಾರೆ. ಮತ್ತೊಂದೆಡೆ ರಮ್ಯಾ ಜನುಮದಿನವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದು, ತಮಗೆ ಇಷ್ಟವಾದವರ ಜತೆ ಕಾಲ ಕಳೆದ ವಿಡಿಯೊವೊಂದನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನಟಿ ರಮ್ಯಾ ಅವರಿಗೆ ಶ್ವಾನಗಳೆಂದರೆ ಬಹಳ ಪ್ರೀತಿ. ಮನೆಯಲ್ಲಿ ಹಲವು ನಾಯಿಗಳನ್ನು ಅವರು ಸಾಕಿದ್ದಾರೆ. ಹೀಗಾಗಿ ಬರ್ತ್‌ಡೇ ದಿನ ಮುದ್ದಾದ ನಾಯಿ ಮರಿಗಳ ಜತೆ ಅವರು ಕಾಲಕಳೆದಿದ್ದು, ಆ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. “ನಿಮ್ಮ ಶುಭಾಶಯಗಳು ನನ್ನ ಮನಸ್ಸಿಗೆ ಸಂತೋಷ ನೀಡಿದಂತೆ ಈ ವಿಡಿಯೊ ನಿಮ್ಮ ಮನಸ್ಸಿಗೆ ಮುದ ನೀಡುವ ಭರವಸೆ ಇದೆ” ಎಂದು ಕ್ಯಾಪ್ಷನ್ ಬರೆದುಕೊಂಡಿದ್ದಾರೆ.

ಶ್ವಾನ ಪ್ರೇಮಿಯಾಗಿರುವ ರಮ್ಯಾ ಅವರು ಬೀದಿ ನಾಯಿಗಳ ಸಂರಕ್ಷಣೆಗಾಗಿ ಕೆಲಸ ಮಾಡುವ ಸಂಘ-ಸಂಸ್ಥೆಗಳ ಜತೆಗೂ ಗುರುತಿಸಿಕೊಂಡಿದ್ದಾರೆ. ಇವರ ಶ್ವಾನಗಳೆಂದರೆ ಅದೆಷ್ಟು ಇಷ್ಟವೆಂದರೆ, ಒಮ್ಮೆ ತಮ್ಮ ಮುದ್ದಿನ ನಾಯಿ ನಾಪತ್ತೆಯಾಗಿದ್ದರಿಂದ ಉತ್ತರ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣಾ ಪ್ರಚಾರ ಕಾರ್ಯ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್‌ ಆಗಿದ್ದರು. ನಂತರ ನಾಯಿ ಹುಡುಕಿಕೊಟ್ಟವರಿಗೆ ಸೂಕ್ತ ಬಹುಮಾನ ನೀಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದರೆ. ಆದರೆ, ಕಾಣೆಯಾಗಿದ್ದ ನಾಯಿ ʼಚಾಂಪ್‌ʼ ಮೃತಪಟ್ಟಿತ್ತು. ಇದರಿಂದ ಅವರು ಬಹಳ ಬೇಸರಗೊಂಡಿದ್ದರು.

ಇದನ್ನೂ ಓದಿ | Darshan: ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌; ‘ಕಾಟೇರ’ ಬಿಡುಗಡೆ ದಿನಾಂಕ ಘೋಷಣೆ

ರಾಜಕೀಯಕ್ಕೆ ಎಂಟ್ರಿ ನೀಡಿದ್ದರಿಂದ ಚಿತ್ರರಂಗದಿಂದ ದೂರವಾಗಿದ್ದ ನಟಿ ರಮ್ಯಾ ಅವರು ಈಗ ಮತ್ತೆ ಚಿತ್ರರಂಗಕ್ಕೆ ಮರಳಿ ಎರಡನೇ ಇನಿಂಗ್ಸ್‌ ಆರಂಭಿಸಿದ್ದಾರೆ. ‘ಆ್ಯಪಲ್ ಬಾಕ್ಸ್’ ಹೆಸರಿನ ಸ್ವಂತ ನಿರ್ಮಾಣ ಸಂಸ್ಥೆ ಪ್ರಾರಂಭಿಸಿ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ನಿರ್ಮಿಸಿದ್ದಾರೆ. ಈ ಚಿತ್ರಕ್ಕೆ ಅವರೇ ನಾಯಕಿ ಎಂದು ಮೊದಲು ಹೇಳಲಾಗಿತ್ತು. ಆದರೆ, ನಂತರ ಅವರ ಸ್ಥಾನಕ್ಕೆ ನಟಿ ಸಿರಿ ರವಿಕುಮಾರ್‌ ಆಯ್ಕೆಯಾಗಿದ್ದರು. ಇದಕ್ಕೂ ಮೊದಲು ‘ಹಾಸ್ಟೆಲ್ ಹುಡುಗರು’ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿಯೂ ನಟಿಸಿದ್ದರು. ಇದೀಗ ಡಾಲಿ ಧನಂಜಯ್ ನಟನೆಯ ‘ಉತ್ತರಕಾಂಡ’ ಸಿನಿಮಾದಲ್ಲಿಯೂ ರಮ್ಯಾ ನಟಿಸಿದ್ದಾರೆ. ಈ ಚಿತ್ರದಲ್ಲಿ ಶಿವರಾಜ್ ಕುಮಾರ್ ಅವರು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉದ್ಯೋಗ

ಜೀವನ ಪ್ರಮಾಣ ಪತ್ರ ಇನ್ನೂ ಸಲ್ಲಿಸಿಲ್ಲವೇ? ನಾಳೆಯೇ ಕೊನೇ ದಿನ! ಇಲ್ದಿದ್ರೆ ಸಿಗಲ್ಲ ಪೆನ್ಶನ್

ನಿವೃತ್ತ ಸರ್ಕಾರಿ ನೌಕರರು ಪಿಂಚಣಿ ಪಡೆಯಲು ಕಡ್ಡಾಯವಾಗಿ ಜೀವನ ಪ್ರಮಾಣ ಪತ್ರ ಸಲ್ಲಿಸಬೇಕು. ಇದಕ್ಕೆ ನವೆಂಬರ್‌ 30 ಕೊನೆಯ ದಿನವಾಗಿದ್ದು, ಗಡುವಿನೊಳಗೆ ಸಲ್ಲಿಸದಿದ್ದರೆ ಪಿಂಚಣಿ ಸ್ಥಗಿತವಾಗಲಿದೆ.

VISTARANEWS.COM


on

life certificate
Koo

ಬೆಂಗಳೂರು: ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಿ ಉದ್ಯೋಗದಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಪಿಂಚಣಿ ಪಡೆಯುತ್ತಿರುವ ಪಿಂಚಣಿದಾರರು ಜೀವನ ಪ್ರಮಾಣಪತ್ರ (Jeevan Pramaan Patra) ಸಲ್ಲಿಸಲು ನವೆಂಬರ್‌ 30 ಕೊನೆಯ ದಿನವಾಗಿದೆ. ಒಂದು ವೇಳೆ ಗಡುವಿನೊಳಗೆ ಲೈಫ್‌ ಸರ್ಟಿಫಿಕೇಟ್ ( Life Certificate) ಸಲ್ಲಿಸದಿದ್ದರೆ ಪಿಂಚಣಿ ಸ್ಥಗಿತವಾಗಲಿದೆ.

ಪಿಂಚಣಿ ಪಡೆಯುತ್ತಿರುವ ಪ್ರತಿಯೊಬ್ಬರೂ ಪ್ರತಿ ವರ್ಷ ತಾವು ಜೀವಂತ ಇರುವ ಬಗ್ಗೆ ‘ಲೈಫ್‌ ಸರ್ಟಿಫೀಕೇಟ್’ ಅನ್ನು ಬ್ಯಾಂಕ್‌ ಅಥವಾ ಅಂಚೆ ಕಚೇರಿಗೆ ಸಲ್ಲಿಸಬೇಕು. ನವೆಂಬರ್ 30ರೊಳಗೆ ಪಿಂಚಣಿದಾರರು ಜೀವನ ಪ್ರಮಾಣ ಪತ್ರ ಸಲ್ಲಿಕೆ ಮಾಡದಿದ್ದರೆ ಪಿಂಚಣಿ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ. ಜತೆಗೆ ಮುಂಬರುವ ತಿಂಗಳ ಪಿಂಚಣಿ ಬರುವುದಿಲ್ಲ. ಬಳಿಕ, ಪ್ರಮಾಣ ಪತ್ರ ನೀಡಿ ಖಾತೆಯನ್ನು ಮತ್ತೆ ಸಕ್ರಿಯಗೊಳಿಸಿಸಬೇಕು. ನಂತರ ಮುಂಬರುವ ಪಿಂಚಣಿಯಲ್ಲಿ ಹಳೆಯ ಬಾಕಿ ಸೇರಿಸಿ ಪಿಂಚಣಿ ಹಣ ಖಾತೆಗೆ ಜಮೆ ಆಗುತ್ತದೆ.

ಇದನ್ನೂ ಓದಿ | SSC Recruitment 2023 : ಅರೆಸೇನಾಪಡೆಗಳ 75 ಸಾವಿರವಲ್ಲ 26 ಸಾವಿರ ಹುದ್ದೆಗಳಿಗೆ ನೇಮಕ; ಕನ್ನಡದಲ್ಲಿಯೂ ನಡೆಯುತ್ತೆ ಪರೀಕ್ಷೆ!

ಏನಿದು ಜೀವನ ಪ್ರಮಾಣಪತ್ರ?

ಪಿಂಚಣಿ ಪಡೆಯುವವರು ಮೃತಪಟ್ಟ ಬಳಿಕವೂ ಅವರ ಖಾತೆಗೆ ಪಿಂಚಣಿ ಹಣ ಜಮೆಯಾಗುತ್ತಿತ್ತು. ಹಾಗಾಗಿ, ಇದನ್ನು ತಪ್ಪಿಸಲು ಫಲಾನುಭವಿಗಳು ಪ್ರತಿ ವರ್ಷ ತಾವು ಬದುಕಿರುವ ಬಗ್ಗೆ ಒಂದು ಪ್ರಮಾಣಪತ್ರ ಸಲ್ಲಿಕೆ ಮಾಡುವುದು ಕಡ್ಡಾಯ ಮಾಡಲಾಗಿದೆ. ಈ ಪ್ರಮಾಣ ಪತ್ರವನ್ನು ಪಿಂಚಣಿದಾರರು ಪೆನ್ಷನ್ ಡಿಸ್ಬರ್ಸಿಂಗ್ ಏಜೆನ್ಸಿ (ಪಿಡಿಎ) ಅಥವಾ ಪಿಂಚಣಿ ವಿತರಿಸುವ ಸಂಸ್ಥೆಗಳಲ್ಲಿ (ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್‌) ತೆರಳಿ ಲೈಫ್ ಸರ್ಟಿಫಿಕೇಟ್ ಸಲ್ಲಿಸಬೇಕು. ಡಿಜಿಟಲ್ ಜೀವನ ಪ್ರಮಾಣಪತ್ರ ಯೋಜನೆಯನ್ನು ಕೇಂದ್ರ ಸರ್ಕಾರ 2014ರಲ್ಲಿ ಜಾರಿ ಮಾಡಿತ್ತು.

Continue Reading

ಕರ್ನಾಟಕ

ಬಾಯ್‌ಫ್ರೆಂಡ್‌ ಮೊಬೈಲ್‌ ತೆರೆದಾಗ ಅವಳಿಗೆ ಕಂಡಿದ್ದು 13000 ಹುಡುಗಿಯರ ನಗ್ನಲೋಕ!

ಬೆಂಗಳೂರಿನ ಬಿಪಿಒ ಉದ್ಯೋಗಿಯೊಬ್ಬ ತನ್ನ ಕಚೇರಿಯ ಹುಡುಗಿಯರೂ ಸೇರಿದಂತೆ ನೂರಾರು ಹುಡುಗಿಯರ 13000 ಫೋಟೊಗಳನ್ನು ಮೊಬೈಲ್‌ನಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದಾನೆ. ಯಾಕಿದು?

VISTARANEWS.COM


on

BPO Employee Bangalore Nude Photos
Koo

ಬೆಂಗಳೂರು: ಅವಳು ಬೆಂಗಳೂರಿನ ಬಿಪಿಒ ಕಂಪನಿಯಲ್ಲಿ (BPO Company in Bangalore) ಉದ್ಯೋಗಿ. ವಯಸ್ಸು 22 ವರ್ಷ. ಅವಳಿಗೊಬ್ಬ ಬಾಯ್‌ಫ್ರೆಂಡ್ (Boy friend). ಇನ್ನೂ 25 ವರ್ಷ. ಕೇವಲ ನಾಲ್ಕು ತಿಂಗಳ ಹಿಂದಷ್ಟೇ ಪರಿಚಯವಾಗಿದ್ದ ಅವರು ಆಗಲೇ ಪ್ರೀತಿ-ಪ್ರೇಮ-ಪ್ರಣಯ (Love and sex relationship) ಅಂತ ಸ್ವಲ್ಪ ಸ್ವಲ್ಪ ಎಲ್ಲೆ ಮೀರಿದ್ದರು. ಅವರಿಬ್ಬರ ನಡುವಿನ ಆತ್ಮೀಯ ಕ್ಷಣಗಳನ್ನು ಆ ಹುಡುಗ ಸೆರೆ ಹಿಡಿದಿದ್ದ. ಅದೊಂದು ದಿನ ಅವನು ಕಣ್ಣಂಚಿನಲ್ಲಿ ಇಲ್ಲದಾಗ ಅವನ ಮೊಬೈಲ್‌ ತೆಗೆದು ತಮ್ಮ ಇಂಟಿಮೇಟ್‌ ಕ್ಷಣಗಳ (Intemate moments) ಚಿತ್ರ ವಿಡಿಯೊಗಳನ್ನು ಡಿಲೀಟ್‌ ಮಾಡಲು ಮುಂದಾದಳು. ಅದು ಹೇಗೋ ಸಂಪಾದಿಸಿಕೊಂಡಿದ್ದ ಲಾಕಿಂಗ್‌ ಪಾಸ್‌ವರ್ಡ್‌ ಬಳಸಿ ಅವನು ಮೊಬೈಲ್‌ನ ಗ್ಯಾಲರಿ (Mobile Photo Gallery) ಓಪನ್‌ ಮಾಡಿದರೆ.. ಬೆಚ್ಚಿ ಬೀಳುವ ಸರದಿ ಅವಳದಾಗಿತ್ತು. ಯಾಕೆಂದರೆ, ಅಲ್ಲಿ ಅವಳೊಬ್ಬಳ ಫೋಟೊ, ವಿಡಿಯೊ ಮಾತ್ರ ಇದ್ದಿದ್ದಲ್ಲ. ಸುಮಾರು 13000 ಹುಡುಗಿಯರ ಸೆಕ್ಸೀ, ರೊಮ್ಯಾಂಟಿಕ್‌ ಫೋಟೊಗಳು ಅಲ್ಲಿದ್ದವು. ಮಾತ್ರವಲ್ಲ, ಅವರಿಬ್ಬರು ಕೆಲಸ ಮಾಡುವ ಅದೇ ಬಿಪಿಒ ಕಂಪನಿಯ ಹಲವು ಹುಡುಗಿಯರ ಮಾದಕ ಚಿತ್ರಗಳ ಸಂಪುಟವೂ ಅಲ್ಲಿ ತೆರೆದುಕೊಂಡಿತ್ತು!

ಹೀಗೆ ಬೆಚ್ಚಿ ಬಿದ್ದ ಹುಡುಗಿಯ ಹೆಸರು ಸಾನ್ವಿ (ಹೆಸರು ಬದಲಿಸಲಾಗಿದೆ). ವರ್ಷದ ಹಿಂದೆ ಬಿಪಿಒ ಕಂಪನಿಗೆ ಸೇರಿದ್ದಳು. ಆಕೆ ಕೆಲಸ ಮಾಡುತ್ತಿದ್ದ ಕಂಪನಿಗೆ ಐದು ತಿಂಗಳ ಹಿಂದೆ ಬಂದು ಸೇರಿಕೊಂಡವನು ಸಂತೋಷ್‌ ಆದಿತ್ಯ (ಹೆಸರು ಬದಲಿಸಲಾಗಿದೆ). ನೋಡಲು ಚೆನ್ನಾಗಿದ್ದ ಅವನಿಗೂ, ಚೆಲುವಿನ ಖನಿಯಾಗಿದ್ದ ಅವಳಿಗೂ ಆಗಲೇ ಪರಿಚಯವಾಗಿತ್ತು. ಒಂದೇ ತಿಂಗಳಲ್ಲಿ ಅದು ಸಂಬಂಧವಾಗಿ ಪರಿವರ್ತನೆಯಾಯಿತು. ಮನಸು ಮಾತ್ರವಲ್ಲ ದೇಹಗಳೂ ಹತ್ತಿರವಾಗಿ ಆತ್ಮೀಯ ರಸಕ್ಷಣಗಳು ನಡೆದುಹೋದವು. ಈ ರಸಕ್ಷಣಗಳ ನೆನಪು ಶಾಶ್ವತವಾಗಿರಲಿ ಎಂದು ಸಂತೋಷ್‌ ಆದಿತ್ಯ ಕೆಲವೊಮ್ಮೆ ಫೋಟೊ ತೆಗೆದಿದ್ದ, ಕೆಲವೊಮ್ಮೆ ವಿಡಿಯೊ ಮಾಡಿದ್ದ.

BPO Employee representational photo
ಪ್ರಾತಿನಿಧಿಕ ಚಿತ್ರ

ಎಲ್ಲ ಮುಗಿದ ಮೇಲೆ ಸಾನ್ವಿಗೆ ಒಬ್ಬ ಹುಡುಗನ ಮೊಬೈಲ್‌ನಲ್ಲಿ ತನ್ನ ಈ ರೀತಿಯ ಫೋಟೊ/ವಿಡಿಯೊಗಳು ಇರುವುದು ಸರಿಯಲ್ಲ ಎಂಬುದರ ಅರಿವಾಗಿದೆ. ಹಾಗಾಗಿ ಆಕೆ ಆತನಿಗೆ ಅರಿವಿಲ್ಲದೆಯೇ ಆತನ ಮೊಬೈಲ್‌ ತೆರೆದು ಗ್ಯಾಲರಿ ಓಪನ್‌ ಮಾಡಿದ್ದಾಳೆ. ಆಗ ಅವಳಿಗೆ ಕಂಡಿದ್ದು 13 ಸಾವಿರ ಫೋಟೊಗಳು! ಅದರಲ್ಲಿ ಹೆಚ್ಚಿನವರು ಹೆಣ್ಮಕ್ಕಳ ಫೋಟೊಗಳು! ಅದರಲ್ಲೂ ತನ್ನದೇ ಆಫೀಸಿನ ಹೆಣ್ಮಕ್ಕಳ ಫೋಟೊಗಳು ಹೆಚ್ಚಾಗಿದ್ದವು. ಅವರ ಜತೆಗೆ ಇದ್ದದ್ದು ಕೂಡಾ ಅದೇ ಇಂಟಿಮೇಟ್‌ ಕ್ಷಣಗಳು.

ಇದನ್ನು ನೋಡಿದ ಸಾನ್ವಿ ಬೆಚ್ಚಿ ಬಿದ್ದಿದ್ದಾಳೆ. ಅಷ್ಟೂ ಹುಡುಗಿಯರ ಫೋಟೊ/ವಿಡಿಯೊಗಳ ನಡುವೆ ಆಕೆಯದ್ದು ಕಾಣಿಸಲೇ ಇಲ್ಲ! ಇದೆಲ್ಲ ನಡೆದದ್ದು ಸುಮಾರು 10 ದಿನಗಳ ಹಿಂದೆ. ಇದನ್ನು ನೋಡಿದ ಸಾನ್ವಿ ಸುಮ್ಮನಿರಲಿಲ್ಲ.

ಮೊದಲು ಸಂತೋಷ್‌ ಜತೆಗೆ ಬ್ರೇಕಪ್‌ ಮಾಡಿಕೊಂಡಿದ್ದಾಳೆ. ನಂತರ ನವೆಂಬರ್‌ 20ರಂದು ಆಕೆ ತನ್ನ ಕಚೇರಿಯ ಸೀನಿಯರ್‌ಗಳಿಗೆ ಈ ವಿಚಾರ ತಿಳಿಸಿದ್ದಾಳೆ. ಸಂತೋಷ್‌ನ ಫೋನ್‌ನಲ್ಲಿ 13000ಕ್ಕೂ ಹೆಚ್ಚು ನಗ್ನ ಫೋಟೊಗಳಿವೆ. ಇವುಗಳಲ್ಲಿ ಕೆಲವು ನಮ್ಮ ಕಚೇರಿಯಲ್ಲೇ ಕೆಲಸ ಮಾಡುವ ಹುಡುಗಿಯರು, ಹೆಂಗಸರದ್ದೂ ಇದೆ. ಹೀಗಾಗಿ ಅವರಿಗೆ ಯಾರಿಗೂ ಮುಂದೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ವಿಚಾರವನ್ನು ಗಮನಕ್ಕೆ ತರುತ್ತಿರುವುದಾಗಿ ಹೇಳಿದ್ದಾಳೆ.

ವರದಿಗಳ ಪ್ರಕಾರ ಈ ಚಿತ್ರಗಳಲ್ಲಿ ಕೆಲವು ಒರಿಜಿನಲ್‌ ಆಗಿವೆ. ಅದರ ಜತೆಗೆ ಕೆಲವು ಚಿತ್ರಗಳು ನಕಲಿಯಾಗಿರಬಹುದು ಎನ್ನಲಾಗಿದೆ. ಅಂದರೆ ಕಚೇರಿಯ ಕೆಲವು ಮಹಿಳೆಯರ ಯುವತಿಯರ ಫೋಟೊಗಳನ್ನು ಆತ ನಗ್ನ ಚಿತ್ರಗಳಿಗೆ ಜೋಡಿಸಿ ಆನಂದಿಸಿರಬಹುದು ಎಂದು ಕೂಡಾ ಹೇಳಲಾಗುತ್ತಿದೆ.

BPO sex case

ಮತ್ತೊಬ್ಬ ಸಿಬ್ಬಂದಿಯಿಂದ ಪೊಲೀಸರಿಗೆ ದೂರು

ಸಂತೋಷ್‌ನ ಈ ವಿಕೃತಿಯನ್ನು ಅರ್ಥ ಮಾಡಿಕೊಂಡ ಬೆಳ್ಳಂದೂರು ಮೂಲದ ಬಿಪಿಒ ಕಂಪನಿಯ ಉದ್ಯೋಗಿಯಾಗಿರುವ ಸುಚಿತ್ರಾ (ಹೆಸರು ಬದಲಿಸಲಾಗಿದೆ) ಅವರು ಸಂತೋಷ್‌ ವಿರುದ್ಧ ನವೆಂಬರ್‌ 23ರಂದು ಸೈಬರ್‌ ಕ್ರೈಂ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಅವನು ಇದುವರೆಗೆ ಈ ಕಚೇರಿಯಲ್ಲಿ ಯಾವ ಮಹಿಳೆಯರಿಗೂ ತೊಂದರೆ ಮಾಡಿಲ್ಲ. ಆದರೆ, ಈ ರೀತಿ ಫೋಟೊಗಳು ಇವೆ ಎಂದಾಗ ಅದು ಹೆಣ್ಮಕ್ಕಳಿಗೆ ಆತಂಕ ಆಗಿಯೇ ಆಗುತ್ತದೆ. ಆತ ಯಾಕೆ ಈ ರೀತಿಯಾಗಿ ಫೋಟೊಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದಾನೆ? ಅವನ ಉದ್ದೇಶವೇನು ಎನ್ನುವುದು ಗೊತ್ತಿಲ್ಲ. ಒಂದು ವೇಳೆ ಇಂಥ ಫೋಟೊಗಳು ಒಂದು ವೇಳೆ ಸೋರಿಕೆಯಾದರೆ ಹೆಣ್ಮಕ್ಕಳು ತುಂಬ ಖಿನ್ನತೆಗೆ ಒಳಗಾಗಬಹುದು. ಹೀಗಾಗಿ ಪ್ರಕರಣದ ಗಂಭೀರತೆಯನ್ನು ಆಧರಿಸಿ ಪೊಲೀಸರಿಗೆ ವಿವರಿಸಿದ್ದೇವೆ ಎಂದು ಕಂಪನಿಯ ವಕ್ತಾರರು ಹೇಳಿದ್ದಾರೆ ಎನ್ನಲಾಗಿದೆ.

ಈ ನಡುವೆ ಕಂಪನಿ ಇನ್ನೊಂದು ಸ್ಪಷ್ಟೀಕರಣವನ್ನು ನೀಡಿದೆ. ಅದೇನೆಂದರೆ, ಸಂತೋಷ್‌ ಫೋಟೊಗಳನ್ನು ಮಾರ್ಫ್‌ ಮಾಡಲು ಕಂಪನಿಯ ಯಾವುದೇ ಸಾಧನಗಳನ್ನು ಬಳಸಿಕೊಂಡಿಲ್ಲ ಎಂಬುದು. ಈ ಮೂಲಕ ಆತನ ಇಂಥ ಕುಕೃತ್ಯಗಳಿಗೂ ಕಂಪನಿಗೂ ಸಂಬಂಧವಿಲ್ಲ ಎಂದು ಹೇಳಿಕೊಂಡಿದೆ.

ಇದೇವೇಳೆ ಪೊಲೀಸರು ತಕ್ಷಣವೇ ಕ್ರಮ ಕೈಗೊಂಡು ಸಂತೋಷ್‌ನನ್ನು ಆತನ ಕಚೇರಿಯಿಂದಲೇ ಬಂಧಿಸಿ ಕರೆದೊಯ್ದಿದ್ದಾರೆ. ಆತನ ಮೊಬೈಲ್‌ ಮತ್ತು ಅದರಲ್ಲಿರುವ ಚಿತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಇಷ್ಟೊಂದು ಸಂಖ್ಯೆಯ ನಗ್ನ ಚಿತ್ರಗಳನ್ನು ಸಂಗ್ರಹಿಸುವ ಆತನ ಉದ್ದೇಶವೇನು ಎನ್ನುವ ಬಗ್ಗೆ ಅವರು ತನಿಖೆ ನಡೆಸಲಿದ್ದಾರೆ.

ಮೊಬೈಲ್‌ನಲ್ಲಿರುವ ಚಿತ್ರಗಳ ಪೈಕಿ ಕೆಲವು ಮಾರ್ಫ್‌ ಮಾಡಿದ ನಕಲಿ ಫೋಟಗಳು, ಕೆಲವು ನಿಜವಾಗಿಯೂ ಮಹಿಳೆಯರದ್ದೇ ಫೋಟೊಗಳು. ಅವನು ಈ ಫೋಟೊಗಳನ್ನು ಹೇಗೆ ತೆಗೆದುಕೊಂಡ, ಕೇವಲ ಐದೇ ತಿಂಗಳಲ್ಲಿ ಇಂಥ ಫೋಟೊಗಳನ್ನು ತೆಗೆಸಿಕೊಳ್ಳುವಷ್ಟು ಆತ್ಮೀಯತೆ ಹೇಗೆ ಬೆಳೆಯಿತು? ಆತ ಯಾರಿಗಾದರೂ ಈ ಫೋಟೋ ಬಳಸಿ ಬ್ಲ್ಯಾಕ್‌ ಮೇಲ್‌ ಮಾಡಿದ್ದಾನಾ? ಯಾರಿಗಾದರೂ ಕಳುಹಿಸಿದ್ದಾನಾ? ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಜತೆಗೆ ಆತನ ಸಂಪರ್ಕಗಳ ಮೇಲೂ ಕಣ್ಣಿಡಲಿದ್ದಾರೆ.

Continue Reading

ಕರ್ನಾಟಕ

108 Ambulance : ನಾಳೆ 262 ಆಂಬ್ಯುಲೆನ್ಸ್‌ಗೆ ಸಿಎಂ ಚಾಲನೆ; 108 ಆಧುನೀಕರಣಕ್ಕೆ ಕ್ರಮ: ದಿನೇಶ್ ಗುಂಡೂರಾವ್‌

108 Ambulance : ಸಿಎಂ ಸಿದ್ದರಾಮಯ್ಯ ಅವರು 262 ಹೊಸ ಆಂಬ್ಯುಲೆನ್ಸ್‌ಗಳಿಗೆ ಚಾಲನೆ ನೀಡುತ್ತಿದ್ದಾರೆ. ಇದರಲ್ಲಿ 157 ಬೇಸಿಕ್ ಲೈಫ್ ಸಪೋರ್ಟ್ ಆಂಬ್ಯುಲೆನ್ಸ್‌ಗಳು ಇದ್ದರೆ, 105 ಸುಧಾರಿತ ಲೈಫ್ ಸಪೋರ್ಟ್ ಆಂಬ್ಯುಲೆನ್ಸ್‌ಗಳಿವೆ ಎಂದು ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದ್ದಾರೆ.

VISTARANEWS.COM


on

CM Siddaramaiah and Dinesh Gudurao
Koo

ಬೆಂಗಳೂರು: ಕಳೆದ ಆರು ತಿಂಗಳಲ್ಲಿ ತುರ್ತಾಗಿ ಜನ ಸಾಮಾನ್ಯರಿಗೆ ಆಗಬೇಕಾದ ಅನೇಕ ಯೋಜನೆಗಳನ್ನು ಮಾಡಿದ್ದೇವೆ. ನಾಳೆ ಬೆಳಗ್ಗೆ ನೂತನ 262 ಆಂಬ್ಯುಲೆನ್ಸ್‌ಗಳಿಗೆ (108 Ambulance) ಸಿಎಂ ಸಿದ್ದರಾಮಯ್ಯ (CM Siddaramaiah) ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದರು.

ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದಿನೇಶ್‌ ಗುಂಡೂರಾವ್‌, 108 ಆಂಬ್ಯುಲೆನ್ಸ್‌ ಸೇವೆಯಲ್ಲಿ ಬಹಳಷ್ಟು ಸುಧಾರಣೆ ಆಗಬೇಕಿದೆ ಎಂಬುದನ್ನು ನಾನು ಒಪ್ಪುತ್ತೇನೆ. ಈ ವ್ಯವಸ್ಥೆಯನ್ನು ಇನ್ನೂ ಆಧುನೀಕರಣಗೊಳಿಸಿ ಜಾರಿಗೆ ತರಲು ಕ್ರಮ ವಹಿಸುತ್ತೇವೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರು 262 ಹೊಸ ಆಂಬ್ಯುಲೆನ್ಸ್‌ಗಳಿಗೆ ಚಾಲನೆ ನೀಡುತ್ತಿದ್ದಾರೆ. ಇದರಲ್ಲಿ 157 ಬೇಸಿಕ್ ಲೈಫ್ ಸಪೋರ್ಟ್ ಆಂಬ್ಯುಲೆನ್ಸ್‌ಗಳು ಇದ್ದರೆ, 105 ಸುಧಾರಿತ ಲೈಫ್ ಸಪೋರ್ಟ್ ಆಂಬ್ಯುಲೆನ್ಸ್‌ಗಳಿವೆ ಎಂದು ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದರು.

219 ಡಯಾಲಿಸಿಸ್‌ ಕೇಂದ್ರಗಳಾಗಿ ಹೆಚ್ಚಳ

ಡಯಾಲಿಸಿಸ್ ವ್ಯವಸ್ಥೆ ಕೂಡ ಸರಿ ಇರಲಿಲ್ಲ. ಹಿಂದೆ ಕೊಟ್ಟ ಏಜೆನ್ಸಿಗಳ ನಿರ್ವಹಣೆ ಸರಿಯಾಗಿ ಆಗುತ್ತಿರಲಿಲ್ಲ. ಹಾಗಾಗಿ ಈಗ ನಾಲ್ಕು ಡಿವಿಷನ್‌ಗಳಲ್ಲಿ ಟೆಂಡರ್ ಕರೆಯಲಾಗಿದೆ. ಬೆಂಗಳೂರು ಡಿವಿಷನ್ -250, ಮೈಸೂರು ಡಿವಿಷನ್ – 225, ಬೆಳಗಾವಿ ಡಿವಿಷನ್ – 201, ಕಲಬುರಗಿ ಡಿವಿಷನ್ – 125 ಡಯಾಲಿಸಿಸ್‌ ಕೇಂದ್ರಗಳಿಗೆ ಟೆಂಡರ್‌ ಕರೆಯಲಾಗಿದೆ. ಈ ಹಿಂದೆ 173 ಡಯಾಲಿಸಿಸ್ ಕೇಂದ್ರಗಳು ಇದ್ದವು. ಈಗ ಅವುಗಳನ್ನು 219ಕ್ಕೆ ಹೆಚ್ಚಳ ಮಾಡಿಸಿದ್ದೇವೆ. ಅಲ್ಲದೆ, ರಾಜ್ಯಾದ್ಯಂತ ಏಕ ಬಳಕೆಯ ಡಯಾಲಿಸಿಸ್ ಯಂತ್ರಗಳ ಅಳವಡಿಕೆಗೆ ಕ್ರಮ ವಹಿಸಲಾಗುತ್ತಿದೆ ಎಂದು ದಿನೇಶ್‌ ಗುಂಡೂರಾವ್‌ ಹೇಳಿದರು.

800 ಸಿಂಗಲ್ ಯೂಸ್ಡ್‌ ಯಂತ್ರಗಳ ಅಳವಡಿಕೆ

ಒಟ್ಟು 800 ಸಿಂಗಲ್ ಯೂಸ್ಡ್‌ ಯಂತ್ರಗಳನ್ನು ಅಳವಡಿಸಲು ಕ್ರಮವಹಿಸಲಾಗಿದೆ. ಪಿಪಿಪಿ ಮಾಡೆಲ್‌ನಲ್ಲಿ ಈ ಯಂತ್ರಗಳ ಅಳವಡಿಕೆಯನ್ನು ಮಾಡಲಾಗುವುದು. ಡಿಸೆಂಬರ್ ಅಂತ್ಯ ಅಥವಾ ಜನವರಿ ತಿಂಗಳಲ್ಲಿ ಏಕ ಬಳಕೆಯ ಡಯಾಲಿಸಿಸ್‌ ಯಂತ್ರಗಳು ಸೇವೆಗೆ ಲಭ್ಯವಾಗಲಿವೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.

ಮಗು ಸಾವಿನ ವರದಿಯನ್ನು ತರಿಸಿಕೊಳ್ಳುವೆ

ಹಾಸನ ಭಾಗದ ಮಗುವಿಗೆ ನಿಮ್ಹಾನ್ಸ್‌ನಲ್ಲಿ ಚಿಕಿತ್ಸೆ ಸಿಗದೆ ಮೃತಪಟ್ಟ ವಿಚಾರದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವ ದಿನೇಶ್‌ ಗುಂಡೂರಾವ್‌, ನಿಮ್ಹಾನ್ಸ್‌ನಲ್ಲಿ ಸಮಸ್ಯೆ ಇದೆ. ಅಲ್ಲಿ ಜನಜಂಗುಳಿ ಕೂಡ ಇದೆ. ಒತ್ತಡದ ನಡುವೆಯೂ ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡುತ್ತಿದ್ದಾರೆ. ಅವರ ಮೇಲಿನ ಒತ್ತಡವನ್ನು ನಾವು ಕಡಿಮೆ ಮಾಡಬೇಕು. ಈಗ ಮಗು ಮೃತಪಟ್ಟಿರುವ ಪ್ರಕರಣದ ಬಗ್ಗೆ ಮಾಹಿತಿಯನ್ನು ತರಿಸಿಕೊಳ್ಳುತ್ತೇನೆ ಎಂದು ಹೇಳಿದರು.

ಭ್ರೂಣ ಹತ್ಯೆ ಕೇಸ್‌ ನಮಗೆ ಅವಮಾನ

ರಾಜ್ಯದಲ್ಲಿ ಭ್ರೂಣ ಹತ್ಯೆ ವಿಚಾರವಾಗಿ ನಾನು ಇಂದು ಸಭೆ ನಡೆಸಿದ್ದೇನೆ. ಭ್ರೂಣ ಹತ್ಯೆಯನ್ನು ಒಪ್ಪುವಂಥದ್ದಲ್ಲ. ಇಷ್ಟು ದೊಡ್ಡದಾಗಿ ನಡೆಯುತ್ತಿರುವುದು ಅತ್ಯಂತ ನೋವಿನ ಸಂಗತಿ. ಇದು ನಮಗೆ ಅವಮಾನ ಮತ್ತು ಮುಖಭಂಗವಾಗುವಂತಹ ವಿಷಯ. ಇದರ ಬಗ್ಗೆ ಅಧಿಕಾರಿಗಳ ಜತೆ ಮಾತನಾಡಿದ್ದೇನೆ. ಅಲ್ಲಿಗೆ ಹೋಗಿ ಪರಿಶೀಲನೆ ಮಾಡುವಂತೆ ಸೂಚಿಸಿದ್ದೇನೆ. ಸ್ಥಳೀಯ ಮಟ್ಟದಲ್ಲಿ ಪ್ರತಿ ತಿಂಗಳು ಒಂದು ಮೀಟಿಂಗ್ ಮಾಡಬೇಕು. ಪ್ರತಿ ಮೂರು ತಿಂಗಳಿಗೆ ಕಮಿಷನರ್ ಸಭೆ ಮಾಡಬೇಕು ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.

ಈಗ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಪೊಲೀಸರು, ಅಧಿಕಾರಿಗಳು ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ. ಮಂಡ್ಯದಲ್ಲಿ ಆದ ಘಟನೆ ಪರಿಶೀಲನೆ ನಡೆಸಲು ನಮ್ಮ ಅಧಿಕಾರಿಗಳು ಹೋಗಿದ್ದಾರೆ. ಮಂಡ್ಯ ಡಿಎಚ್ಒ ಸ್ಥಳಕ್ಕೆ ತಡವಾಗಿ ಹೋಗಿದ್ದರ ಬಗ್ಗೆ ಮಾಹಿತಿ ಪಡೆದು ಸೂಕ್ತ ಕ್ರಮವನ್ನು ತೆಗೆದುಕೊಳ್ಳುತ್ತೇವೆ ಎಂದು ದಿನೇಶ್‌ ಗುಂಡೂರಾವ್‌ ಹೇಳಿದರು.

ಭ್ರೂಣ ಹತ್ಯೆ ತಡೆಗೆ ಆ್ಯಕ್ಷನ್‌ ಪ್ಲ್ಯಾನ್

ಈ ಪ್ರಕರಣವು ಆರು ತಿಂಗಳಿಂದ ನಡೆಯುತ್ತಿದೆ ಎಂದು ಹೇಳುತ್ತಿದ್ದೀರಲ್ಲ? ಎಂದು ಪತ್ರಕರ್ತರಿಗೆ ಪ್ರಶ್ನೆ ಮಾಡಿದ ದಿನೇಶ್‌ ಗುಂಡೂರಾವ್‌, ಇದು ಇಪ್ಪುತ್ತು ವರ್ಷಗಳಿಂದ ನಡೆಯುತ್ತಿರಬಹುದು? ಮಹಿಳೆಯರ ಅನುಪಾತ ಜಾಸ್ತಿ ಆಗುತ್ತಿಲ್ಲ, ಬದಲಾಗಿ ಕಡಿಮೆಯೇ ಆಗುತ್ತಿದೆ. ಇದನ್ನು ಗಮನಿಸಿದರೆ ಭ್ರೂಣ ಹತ್ಯೆ ಜಾಸ್ತಿ ಆಗುತ್ತಿದೆ ಎಂದು ಅನ್ನಿಸುತ್ತಿದೆ. ಇದೊಂದು ಸಾಮಾಜಿಕ ಪಿಡುಗು, ಬರೀ ಮಂಡ್ಯದಲ್ಲಷ್ಟೇ ಅಲ್ಲ, ಇಡೀ ರಾಜ್ಯದಲ್ಲಿ ನಡೆಯುತ್ತಿದೆ. ಇದು ಸರಿಯಲ್ಲ. ಈ ಬಗ್ಗೆ ನಾವು ಜಾಗೃತಿ ಮೂಡಿಸಬೇಕು. ಇದನ್ನು ತಡೆಯಲು ನಾವು ಬೇರೆ ಬೇರೆ ರೀತಿಯಲ್ಲಿ ಕ್ರಮವನ್ನು ತೆಗೆದುಕೊಳ್ಳುತ್ತೇವೆ. ಈ ಜಾಲವನ್ನು ಪೊಲೀಸರು ಭೇದಿಸಿದ್ದರಿಂದ ನಮ್ಮ ಕಣ್ಣು ತೆರದಂತಾಗಿದೆ. ಇದರ ಬಗ್ಗೆ ಒಂದು ಆ್ಯಕ್ಷನ್‌ ಪ್ಲಾನ್ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಇದನ್ನೂ ಓದಿ: Congress Karnataka : ಮೊದಲ ಶಾಸಕರಿಗೆ ನಿಗಮ – ಮಂಡಳಿ ಸ್ಥಾನ ಇಲ್ಲವೆಂದ ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ನಿಮೋನಿಯಾ ಆತಂಕ ಬೇಡ

ಉತ್ತರ ಚೀನಾದ ಮಕ್ಕಳಲ್ಲಿ ನಿಮೋನಿಯಾ ಕಾಣಿಸಿಕೊಂಡಿರುವ ಬಗ್ಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ನಿಮೋನಿಯಾ ಬಗ್ಗೆ ಡಬ್ಲ್ಯೂಎಚ್‌ಒ ಗೈಡ್‌ಲೈನ್ಸ್‌ ಅನ್ನು ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರ ಕೂಡ ಗೈಡ್‌ಲೈನ್ಸ್ ಬಿಡುಗಡೆ ಮಾಡಿದೆ. ನಾವು ಪ್ರಾಥಮಿಕ ಹಂತದಲ್ಲಿಯೇ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳುತ್ತೇವೆ. ಟೆಸ್ಟ್‌ಗಳನ್ನು ಹೆಚ್ಚಾಗಿ ಮಾಡಿ ಎಂದು ಹೇಳಿದ್ದೇನೆ. ಈಗ ಇದರಿಂದ ಆತಂಕ ಪಡಬೇಕಿಲ್ಲ. ನಮ್ಮ ರಾಜ್ಯದಲ್ಲಿ ಆ ರೀತಿಯ ಸೋಂಕು ಪತ್ತೆ ಆಗಿಲ್ಲ. ಕೆಮ್ಮು ಜ್ವರ ಬಂದಾಗ ಟೆಸ್ಟ್ ಮಾಡಿಸಿ ಎಂದು ಹೇಳಿದ್ದೇನೆ ಎಂಬುದಾಗಿ ತಿಳಿಸಿದರು.

Continue Reading
Advertisement
peace accord between Manipur oldest armed group UNLF and Government
ದೇಶ7 mins ago

ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಮಣಿಪುರದ ಹಳೆ ಬಂಡುಕೋರ ಗುಂಪು ಯುಎನ್ಎಲ್ಎಫ್!

Gauvarav Yatra
ದೇಶ22 mins ago

Indian Railways : ಭಾರತ ಗೌರವ ಯಾತ್ರಾ ರೈಲಿನಲ್ಲಿ ಕಲುಷಿತ ಆಹಾರ ಸೇವಿಸಿ 90 ಮಂದಿ ಅಸ್ವಸ್ಥ

Actress Ramya
ಕರ್ನಾಟಕ24 mins ago

Actress Ramya: ಹುಟ್ಟುಹಬ್ಬದಂದು ನಾಯಿಮರಿಗಳೊಂದಿಗೆ ಕಾಲಕಳೆದ ಮೋಹಕ ತಾರೆ ರಮ್ಯಾ

fight between Couple in air and Lufthansa flight was diverted to Delhi and Viral News
ದೇಶ35 mins ago

ಗಂಡ-ಹೆಂಡತಿ ಜಗಳ ವಿಮಾನ ಹತ್ತಿದ್ರೂ ಮುಗಿಲಿಲ್ಲ! ಆ ಮೇಲೆ ಏನಾಯ್ತು?

life certificate
ಉದ್ಯೋಗ47 mins ago

ಜೀವನ ಪ್ರಮಾಣ ಪತ್ರ ಇನ್ನೂ ಸಲ್ಲಿಸಿಲ್ಲವೇ? ನಾಳೆಯೇ ಕೊನೇ ದಿನ! ಇಲ್ದಿದ್ರೆ ಸಿಗಲ್ಲ ಪೆನ್ಶನ್

pain
ಆರೋಗ್ಯ58 mins ago

Home Remedies: ಚಳಿಗಾಲದಲ್ಲಿ ಪಾದ ನೋವೇ? ಇಲ್ಲಿದೆ ಮನೆಮದ್ದು

BPO Employee Bangalore Nude Photos
ಕರ್ನಾಟಕ1 hour ago

ಬಾಯ್‌ಫ್ರೆಂಡ್‌ ಮೊಬೈಲ್‌ ತೆರೆದಾಗ ಅವಳಿಗೆ ಕಂಡಿದ್ದು 13000 ಹುಡುಗಿಯರ ನಗ್ನಲೋಕ!

Finger Ring
ಫ್ಯಾಷನ್1 hour ago

Cocktail finger ring : ಬ್ರೈಡಲ್‌ ಜ್ಯುವೆಲರಿ ಫ್ಯಾಷನ್‌ನಲ್ಲಿ ಎಥ್ನಿಕ್‌ ಕಾಕ್‌ಟೈಲ್‌ ಉಂಗುರಗಳ ಕಲರವ

siri bbk
ಕಿರುತೆರೆ2 hours ago

BBK SEASON 10: ಸ್ಪರ್ಧಿಗಳ ಕಾಲಿಗೆ ಹಗ್ಗ; ಕಣ್ಣೀರಿಟ್ಟ ಸಿರಿ

Mandya Ramesh
ಕಿರುತೆರೆ2 hours ago

Mandya Ramesh: ಶೂಟಿಂಗ್ ವೇಳೆ ಮಂಡ್ಯ ರಮೇಶ್‌ಗೆ ಗಾಯ; ಆಸ್ಪತ್ರೆಗೆ ದಾಖಲು

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ4 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ6 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Dina Bhavishya
ಪ್ರಮುಖ ಸುದ್ದಿ15 hours ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜಿಲ್ಲಾ ಮಟ್ಟದ ಸಮಸ್ಯೆ ಬೆಂಗಳೂರಿಗೆ ಬಂದರೆ ಸಹಿಸಲ್ಲ; ಸಿಎಂ ಖಡಕ್‌ ಎಚ್ಚರಿಕೆ

CM Janatha Darshana solved mysore citizens problem
ಕರ್ನಾಟಕ2 days ago

Janatha Darshan : ಮಾಲೀಕನ ಮನೆ ಹರಾಜು; ಲೀಸ್‌ ದುಡ್ಡಿಗೆ ಯಾರು ಗ್ಯಾರಂಟಿ? ಕಂಗೆಟ್ಟ ಕುಟುಂಬಕ್ಕೆ ಸಿಎಂ ರಕ್ಷಣೆ!

Shivajingar School building collapses The children escaped unhurt
ಕರ್ನಾಟಕ2 days ago

Building collapse : ಏಕಾಏಕಿ ಕುಸಿದು ಬಿದ್ದ ಶಾಲಾ ಕಟ್ಟಡ; ಪ್ರಾಣಾಪಾಯದಿಂದ ಚಿಣ್ಣರು ಪಾರು

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಿಎಂಗೆ ದೂರು ನೀಡಬೇಕೇ? ಜನತಾ ದರ್ಶನಕ್ಕೆ ಹೋಗಬೇಕಿಲ್ಲ; ಈ ನಂಬರ್‌ಗೆ ಕರೆ ಮಾಡಿ!

read your daily horoscope predictions for november 27 2023
ಪ್ರಮುಖ ಸುದ್ದಿ3 days ago

Dina Bhavishya: ನಿಮ್ಮನ್ನು ಉರುಳಿಸಲು ಪಿತೂರಿ ಮಾಡ್ತಾರೆ ಹುಷಾರ್‌!

Danger Influenza People are suffering from the flu
ಆರೋಗ್ಯ3 days ago

Viral fever: ಡೆಡ್ಲಿ ಚೀನಾ ವೈರಸ್‌; ಮಕ್ಕಳಿಗೆ ಇದರಿಂದ ಅಪಾಯ ಇದೆಯಾ?

ಟ್ರೆಂಡಿಂಗ್‌