Siddaramaiah : ಕುಟುಂಬದ ಜತೆ ಮಾತನಾಡಿದ್ದೇನೆ; ಬಾದಾಮಿ, ಕೋಲಾರ, ವರುಣ ಮೂರರಲ್ಲಿ ಒಂದು ನನ್ನ ಆಯ್ಕೆ ಎಂದ ಸಿದ್ದರಾಮಯ್ಯ - Vistara News

ಕರ್ನಾಟಕ

Siddaramaiah : ಕುಟುಂಬದ ಜತೆ ಮಾತನಾಡಿದ್ದೇನೆ; ಬಾದಾಮಿ, ಕೋಲಾರ, ವರುಣ ಮೂರರಲ್ಲಿ ಒಂದು ನನ್ನ ಆಯ್ಕೆ ಎಂದ ಸಿದ್ದರಾಮಯ್ಯ

ನಾನು ಮೂರು ಕ್ಷೇತ್ರಗಳನ್ನು ಆಯ್ಕೆ ಮಾಡಿದ್ದೇನೆ. ಅದರಲ್ಲಿ ಒಂದನ್ನು ಹೈಕಮಾಂಡ್‌ ಆಯ್ಕೆ ಮಾಡಲಿದೆ. ಯುಗಾದಿ ದಿನವೇ ಘೋಷಣೆ ಆಗಲೂಬಹುದು ಎಂದಿದ್ದಾರೆ.

VISTARANEWS.COM


on

siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬಹುದು ಎಂಬ ಬಗ್ಗೆ ಕುಟುಂಬದೊಂದಿಗೆ ಚರ್ಚೆ ನಡೆಸಿದ್ದೇನೆ. ಬಾದಾಮಿ, ಕೋಲಾರ ಮತ್ತು ವರುಣ ನನ್ನ ಆಯ್ಕೆ. ಆದರೆ, ನಾನು ಎಲ್ಲಿ ಸ್ಪರ್ಧೆ ಮಾಡಬೇಕು ಎಂಬುದನ್ನು ಹೈಕಮಾಂಡ್‌ ತೀರ್ಮಾನ ಮಾಡಲಿದೆ ಎಂದು ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದರು.

ಮಂಗಳವಾರ ಕೋಲಾರದ ಕಾಂಗ್ರೆಸ್‌ ಮುಖಂಡರು ಮನೆಗೆ ಮುತ್ತಿಗೆ ಹಾಕಿದಾಗ ಕುಟುಂಬದೊಂದಿಗೆ ಚರ್ಚಿಸಿ ಹೇಳುವುದಾಗಿ ಹೇಳಿದ್ದ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು. ತಾವು ಮೂರು ಕ್ಷೇತ್ರಗಳನ್ನು ಆಯ್ಕೆ ಮಾಡಿದ್ದರೂ ವರುಣ ಕ್ಷೇತ್ರಕ್ಕೆ ಡಾ.ಯತೀಂದ್ರ ಸಿದ್ದರಾಮಯ್ಯ ಅವರೇ ಅಭ್ಯರ್ಥಿ ಎಂದು ಕೂಡಾ ಅವರು ಸ್ಪಷ್ಟಪಡಿಸಿದರು. ವರುಣದಿಂದ ಯತೀಂದ್ರಗೆ ಕ್ಲಿಯರ್ ಆಗಿದೆ ಎಂದರು. ಹಾಗಿದ್ದರೆ ಅವರು ವರುಣದ ಆಯ್ಕೆಯನ್ನು ಕೈ ಬಿಟ್ಟಿದ್ದಾರಾ ಎನ್ನುವುದು ಸ್ಪಷ್ಟವಿಲ್ಲ.

ʻʻನಾನು ಎಲ್ಲಿ ಸ್ಪರ್ಧಿಸಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೈಕಮಾಂಡ್ ತೀರ್ಮಾನ ಮಾಡಿದರೆ ನಾಳೆಯೇ ಗೊಂದಲಕ್ಕೆ ತೆರೆ ಬೀಳಬಹುದುʼʼ ಎಂದು ಹೇಳಿದರು ಸಿದ್ದರಾಮಯ್ಯ.

ಕ್ಷೇತ್ರ ಹುಡುಕಾಟದ ಬಗ್ಗೆ ಅನುಕಂಪದಿಂದ ಮಾತನಾಡಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೆ ತಿರುಗೇಟು ನೀಡಿದ ಅವರು, ʻʻಹೆಚ್ಚು ಕ್ಷೇತ್ರಗಳು ಇರೋದು ಸಮಸ್ಯೆ ಆಗಿರೋದು. ನಾಳೆ ಒಂದೇ ಹೆಸರು ಇರುವ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ. ಅದರಲ್ಲಿ ನನ್ನ ಹೆಸರು ಇರುತ್ತೋ ಇಲ್ಲವೋ ಗೊತ್ತಿಲ್ಲ.
ಹೈಕಮಾಂಡ್ ನಿರ್ಧಾರವೇ ನನ್ನ ನಿರ್ಧಾರʼʼ ಎಮದರು.

ʻʻನಾನು ಎಲ್ಲೇ ಸ್ಪರ್ಧೆ ನಡೆಸಿದರೂ ಗೆಲ್ಲುವ ವಿಶ್ವಾಸ ಇದೆ. ನಾನು ಕ್ಷೇತ್ರಗಳನ್ನು ಹುಡುಕುತ್ತಿಲ್ಲ. ನನ್ನನ್ನು ಕ್ಷೇತ್ರಕ್ಕೆ ಕರೆಯುವವರ ಸಂಖ್ಯೆ ಹೆಚ್ಚಾಗಿದೆ ಅಷ್ಟೆ. ನಾನು ಕ್ಷೇತ್ರ ಹುಡುಕುತ್ತಿದ್ದೇನೆ ಎಂಬುದೆಲ್ಲ ತಪ್ಪು ಗ್ರಹಿಕೆʼʼ ಎಂದರು ಸಿದ್ದರಾಮಯ್ಯ.

ಈ ವಾರ ಮತ್ತೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನದ ಬಗ್ಗೆ ಪ್ರತಿಕ್ರಿಯಿಸಿದ ಅವರು, ʻʻಅಡುಗೆ ಮಾಡಿದ್ದು ನಾವು ಅದನ್ನು ಬಡಿಸಲು ಈಗ ಪ್ರಧಾನಿ ಬರುತ್ತಿದ್ದಾರೆ ಅಷ್ಟೆ. ಬೆಕ್ಕು ಕಣ್ಣು ಮುಚ್ಚಿಕೊಂಡು ಹಾಲು ಕುಡಿದರೆ ಜಗತ್ತೆ ಕಣ್ಣು ಮುಚ್ಚಿಕೊಂಡಂತೆ ಆಗುವುದಿಲ್ಲ. ಪ್ರಧಾನಿ ಮಾತುಗಳೆನ್ನೆಲ್ಲ ಜನ ನಂಬುವುದಿಲ್ಲ. ದಶಪಥ ರಸ್ತೆ ಮಾಡಿದ್ದು ನಾವು, ಐಐಟಿಗೆ ಜಾಗ ಕೊಟ್ಟು ಗುದ್ದಲಿ ಪೂಜೆ ಮಾಡಿದ್ದು ನಾನು. ಇವರು ಈಗ ಬರಿ ಉದ್ಘಾಟನೆಗೆ ಬರುತ್ತಿದ್ದಾರೆ. ಇದು ಜನರಿಗೆ ಅರ್ಥವಾಗುತ್ತದೆ ಬಿಡಿʼʼ ಎಂದರು.

ಇದನ್ನೂ ಓದಿ Karnataka Elections : ಹೆಂಡ್ತಿ, ಮಗನ ಜತೆ ಕೇಳಿ ಹೇಳ್ತೇನೆ; ಕೋಲಾರದ ಜನರಿಗೆ ಸಿದ್ದರಾಮಯ್ಯ ಸಮಾಧಾನ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರವಾಸ

Belagavi Tour: ಬೆಳಗಾವಿಗೆ ಭೇಟಿ ನೀಡಿದಾಗ ಈ ಸ್ಥಳಗಳನ್ನು ನೋಡಲು ಮರೆಯಬೇಡಿ

ಕುಂದಾನಗರಿ ಬೆಳಗಾವಿಯಲ್ಲಿ ಅತ್ಯಾಕರ್ಷಕ ಹಲವು ತಾಣಗಳಿದ್ದು, ಪ್ರವಾಸಿಗರು ಇಲ್ಲಿಗೆ ಭೇಟಿ ನೀಡದೇ ಇದ್ದರೆ ಬೆಳಗಾವಿ ಪ್ರವಾಸ (Belagavi Tour) ಅಪೂರ್ಣವಾಗುವುದು. ನೀವು ಬೆಳಗಾವಿಗೆ ಭೇಟಿ ನೀಡಿದಾಗ ಮರೆಯದೆ ಈ ಸ್ಥಳಗಳನ್ನು ನೋಡಿ ಬನ್ನಿ. ಬೆಳಗಾವಿಯ ಪ್ರಮುಖ ಸ್ಥಳಗಳ ಕಿರು ಪರಿಚಯ ಇಲ್ಲಿದೆ.

VISTARANEWS.COM


on

By

Belagavi Tour
Koo

ಜಲಪಾತಗಳಿಂದ (waterfalls) ಹಿಡಿದು ಪ್ರಾಚೀನ ಕೋಟೆಗಳವರೆಗೆ (ancient forts) ಬೆಳಗಾವಿಯಲ್ಲಿ ಪ್ರವಾಸಿಗರು (Belagavi Tour) ಮಿಸ್ ಮಾಡಿಕೊಳ್ಳಲೇಬಾರದ ಒಂಬತ್ತು ಆಕರ್ಷಕ ಪ್ರವಾಸಿ (Tourist place) ತಾಣಗಳಿವೆ.

ರಜೆಯಲ್ಲಿ ಬೆಳಗಾವಿಯತ್ತ ಹೊರಟರೆ ರಮಣೀಯ ಮತ್ತು ಪಾರಂಪರಿಕ ತಾಣಗಳಿಗೆ ಭೇಟಿ ನೀಡಲು ಮರೆಯದಿರಿ.
ಪ್ರವಾಸಿ ತಾಣಗಳಿಗೆ ಹೋಗಿ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ, ವಿಡಿಯೋಗಳನ್ನು ಹಂಚಿಕೊಂಡು ಎಲ್ಲರ ಮೆಚ್ಚುಗೆ ಪಡೆಯಬೇಕು ಎನ್ನುವ ಯೋಚನೆ ಇದ್ದರೆ ಕೂಡಲೇ ಬ್ಯಾಗ್ ಪ್ಯಾಕ್ ಮಾಡಿ ಬೆಳಗಾವಿಯತ್ತ ಪ್ರವಾಸ ಹೊರಡಲು ತಯಾರಾಗಿ. ಎಲ್ಲರ ಮನ ಸೆಳೆಯುವ ಹಲವಾರು ಸುಪ್ರಸಿದ್ದ ತಾಣಗಳು ಇಲ್ಲಿವೆ.

ಬೆಳಗಾವಿ ಕೋಟೆ

12ನೇ ಶತಮಾನದ ಬೆಳಗಾವಿ ಕೋಟೆ ಮರಗಳಿಂದ ಸುತ್ತುವರಿದಿದ್ದು, ಕಮಾನಿನ ಗೇಟ್‌ವೇಗಳ ಮೂಲಕ ಹೆಜ್ಜೆ ಹಾಕುತ್ತ ಸಾಗುವಾಗ ಎತ್ತರದ ಗೋಡೆಗಳ ಮೇಲೆ ವಿವಿಧ ಆಡಳಿತಗಾರರು ಹೋರಾಡಿದ ಭೀಕರ ಯುದ್ಧಗಳ ಚಿತ್ರಣ ಮನದಲ್ಲಿ ಮೂಡುವುದು. ಸಂಕೀರ್ಣವಾದ ಕೆತ್ತನೆಗಳೊಂದಿಗೆ ಅರಮನೆ, ಮಸೀದಿ ಮತ್ತು ದೇವಾಲಯಗಳ ಕುಸಿಯುತ್ತಿರುವ ಅವಶೇಷಗಳನ್ನು ಕಿರಿದಾದ ಮಾರ್ಗಗಳನ್ನು ಸುತ್ತಾಡುವಾಗ ಫೋಟೋ, ವಿಡಿಯೋ ಮಾಡಲು ಮರೆಯದಿರಿ. ಇಲ್ಲಿಯೇ ಚಿಕ್ಕ ವಸ್ತುಸಂಗ್ರಹಾಲಯಕ್ಕೂ ಭೇಟಿ ನೀಡಿ ಸುಂದರ ನೆನಪುಗಳನ್ನು ಮನದ ಜೋಳಿಗೆಯಲ್ಲಿ ತುಂಬಿಕೊಳ್ಳಿ.

ಬೆಳಗಾವಿ ನಗರದ ಬಹುಭಾಗವನ್ನು ಈ ಕೋಟೆ ಆವರಿಸಿದೆ ಇಲ್ಲಿ ಪ್ರವೇಶಿಸಲು ಯಾವುದೇ ಪ್ರವೇಶ ಶುಲ್ಕಗಳಿಲ್ಲ.


ಕಮಲ್ ಬಸ್ತಿ

ಕೋಟೆಯ ಗೋಡೆಗಳ ಒಳಗಿರುವ ಕಮಲ್ ಬಸ್ತಿ ಜೈನ ದೇವಾಲಯ 12ನೇ ಶತಮಾನದ ಸೊಗಸಾದ ವಾಸ್ತುಶಿಲ್ಪಗಳಲ್ಲಿ ಒಂದಾಗಿದೆ. ಬೆಳಗಾವಿಯ ಕಿರೀಟದಲ್ಲಿ ವೈಭವದಿಂದ ಮಿನುಗುತ್ತಿರುವ ಈ ಪ್ರತಿಷ್ಠಿತ ದೇವಾಲಯದಲ್ಲಿ ಪ್ರಾಚೀನ ಕಥೆಗಳು ಅನುರಣಿಸುತ್ತಿರುವಂತೆ ಭಾಸವಾಗುವುದು. ಬಹು-ಪದರದ ಅಲಂಕೃತ ಛಾವಣಿಗಳು, ಕಲ್ಲಿನ ಸ್ತಂಭಗಳನ್ನು ಒಳಗೊಂಡಿರುವ ಪೌರಾಣಿಕ ವ್ಯಕ್ತಿಗಳನ್ನು ಇಲ್ಲಿ ಕಾಣಬಹುದು.

ಇಲ್ಲಿ 40 ಸಮಾನ ಅಂತರದಲ್ಲಿ ಕೆತ್ತಿದ ಕಂಬಗಳು, ಗುಮ್ಮಟಗಳು ಆಕರ್ಷಣೀಯವಾಗಿದೆ. ರಟ್ಟ ರಾಜವಂಶದ ಕುಶಲಕರ್ಮಿಗಳು ಇದನ್ನು ನಿರ್ಮಿಸಿದ್ದಾರೆ. ಇಲ್ಲಿಗೆ ಪ್ರವೇಶಿಸಲು ಯಾವುದೇ ಪ್ರವೇಶ ಶುಲ್ಕಗಳಿಲ್ಲ.


ಗೋಕಾಕ್ ಜಲಪಾತ

ಹಸಿರು ಕಾಡುಗಳ ನಡುವೆ ಸುಮಾರು 157 ಮೀಟರ್‌ ಎತ್ತರದಿಂದ ಧುಮುಕುವ ಗೋಕಾಕ್ ಜಲಪಾತ ಬೃಹತ್ ಪ್ರಮಾಣದ ಜಲರಾಶಿಯನ್ನು ಹೊಂದಿದೆ. ನದಿಯಲ್ಲಿ ದೋಣಿ ಸವಾರಿ ಮಾಡಿ ತಂಗಾಳಿಯಲ್ಲಿ ಆನಂದಿಸಬಹದು. ಮಳೆ, ಚಳಿಗಾಲದಲ್ಲಿ ಇಲ್ಲಿಗೆ ಭೇಟಿ ನೀಡಲು ಉತ್ತಮ ಸಮಯ. ಟ್ರೆಕ್ಕಿಂಗ್ ಮಾಡಲು ಅವಕಾಶವಿದೆ. ಯಾವುದೇ ಶುಲ್ಕವಿಲ್ಲ.


ಕಿತ್ತೂರು ಕೋಟೆ

16 ನೇ ಶತಮಾನದಲ್ಲಿ ನಿರ್ಮಿಸಲಾದ ಭವ್ಯವಾದ ಕಿತ್ತೂರು ಕೋಟೆಯ ಅವಶೇಷಗಳನ್ನು ಇಲ್ಲಿ ಕಾಣಬಹುದು. ಹಳ್ಳಿಗಾಡಿನ ದೋಣಿಗಳ ಮೇಲೆ ಸೊಂಪಾದ ಕಾಡುಗಳಿಂದ ರಚಿಸಲಾದ ಶಾಂತವಾದ ಸರೋವರದ ನೀರಿನಲ್ಲಿ ಪೆಡಲ್ ಮಾಡಿ ಹಳೆಯ ಅರಮನೆಯ ಹಾದಿಗಳಲ್ಲಿ ಸುತ್ತಾಡಿ, ಸ್ವಾತಂತ್ರ್ಯ ಹೋರಾಟಗಾರ್ತಿ ರಾಣಿ ಚನ್ನಮ್ಮ ನನ್ನು ನೆನಪಿಸಿಕೊಳ್ಳಬಹುದು. ಚೆನ್ನಮ್ಮ ತನ್ನ ಅಂತಿಮ ದಿನಗಳನ್ನು ಕಳೆದ ಜೈಲು ಕೊಠಡಿಯ ಒಂದು ನೋಟ ಅಥವಾ 1967 ರಲ್ಲಿ ನಿರ್ಮಿಸಲಾದ ಕಿತ್ತೂರಿನ ಸರೋವರದ ಇತಿಹಾವನ್ನು ಇಲ್ಲಿ ಕಾಣಬಹುದು.

ಪ್ರಾದೇಶಿಕ ಆಡಳಿತಗಾರರಾದ ದೇಸಾಯಿ ಕುಟುಂಬ ಇದನ್ನು ನಿರ್ಮಿಸಿದ್ದು, ಇಲ್ಲಿ ಅರಮನೆ, ಮ್ಯೂಸಿಯಂ, ದೇವಸ್ಥಾನ, ಸರೋವರವನ್ನು ವೀಕ್ಷಿಸಬಹುದು. ಕನಿಷ್ಠ ಪ್ರವೇಶ ಶುಲ್ಕವಿದೆ.

ಶಿವಗಿರಿ ಬೆಟ್ಟ

ಒಂದು ಬದಿಯಲ್ಲಿ ಪಶ್ಚಿಮ ಘಟ್ಟದ ಇಳಿಜಾರು ಮತ್ತು ಇನ್ನೊಂದೆಡೆ ಹತ್ತಿ ಉಣ್ಣೆಯ ಮೋಡಗಳು ತೇಲುತ್ತಿರುವ ವಿಸ್ತಾರವಾದ ಬೆಳಗಾವಿ ನಗರವನ್ನು ನೋಡುವಾಗ ಉಸಿರು ಬಿಗಿ ಹಿಡಿದ ಅನುಭವ. ಹಸಿರು ಶಿವಗಿರಿ ಗಿರಿಧಾಮದ ಮೇಲಿನ ವೈಮಾನಿಕ ನೋಟವು ಪ್ರವಾಸಿಗರನ್ನು ವಿಸ್ಮಯಗೊಳಿಸುವುದು. ಜಾಂಬೋಟಿ ಜಲಪಾತ, ಉದ್ಯಾನಗಳು ಇಲ್ಲಿನ ಆಕರ್ಷಣೆ. ಖಾಸಗಿ ಟ್ಯಾಕ್ಸಿ ಮೂಲಕ ಬೆಳಗಾವಿಯಿಂದ 30 ಕಿ.ಮೀ. ದೂರದಲ್ಲಿರುವ ಶಿವಗಿರಿ ಬೆಟ್ಟ ತಲುಪಲು ಯಾವುದೇ ಪ್ರವೇಶ ಶುಲ್ಕಗಳಿಲ್ಲ. ಇಲ್ಲಿ ಸುಂದರವಾದ ಸೂರ್ಯಾಸ್ತದ ದೃಶ್ಯಗಳನ್ನು ಕಣ್ತುಂಬಿಕೊಳ್ಳಿ.

ಸಿದ್ಧೇಶ್ವರ ದೇವಸ್ಥಾನ

12 ನೇ ಶತಮಾನದ ಕಲ್ಲಿನ ಕೆತ್ತನೆಯ ಐತಿಹಾಸಿಕ ಸಿದ್ಧೇಶ್ವರ ದೇವಾಲಯ ಶಿವನಿಗೆ ಸಮರ್ಪಿತವಾಗಿದೆ. ಶ್ರೀಗಂಧದ ಕಮಾನುಗಳು ಪೂಜ್ಯ ಲಿಂಗವನ್ನು ಹೊಂದಿರುವ ಒಳಗಿನ ಗರ್ಭಗುಡಿಯೊಳಗೆ ಸಂಜೆಯ ಆರತಿಗೆ ಹಾಜರಾಗಿ. ದೇವಾಲಯದ ಶಬ್ದಗಳು ಮತ್ತು ಪ್ರಜ್ವಲಿಸುವ ದೀಪಗಳು ಮನಸ್ಸಿಗೆ ಶಾಂತಿ ತುಂಬುವುದು. ಕಪ್ಪು ಕಲ್ಲಿನ ನೆಲದ ಮೇಲೆ ಕುಳಿತು ಧ್ಯಾನ ಮಾಡುವಾಗ ದೇಹದೊಳಗೆ ಶಕ್ತಿ ಸಂಚಾರವಾದ ಅನುಭವ ಕೊಡುವುದು.
ರಟ್ಟ ರಾಜವಂಶದ ದೊರೆ ಸಿದ್ಧರಸ ನಿರ್ಮಿಸಿರುವ ಈ ದೇವಾಲಯ ನಗರ ಕೇಂದ್ರದಿಂದ 5 ಕಿ.ಮೀ. ದೂರದಲ್ಲಿದೆ.

ರೇಷ್ಮೆ ಸೀರೆ ಖರೀದಿಸಿ

ಕಾರ್ಪೊರೇಷನ್ ವೃತ್ತದ ಬಳಿಯಿರುವ ಅಂಗಡಿಗಳಾದ್ಯಂತ ಸಾಂಪ್ರದಾಯಿಕ ನೇಯ್ಗೆ, ಮುದ್ರಣಗಳು ಮತ್ತು ಕರಕುಶಲತೆಯನ್ನು ಕಾಣಬಹುದು. ಕೈಗೆಟುಕುವ ದರದಲ್ಲಿ ರೇಷ್ಮೆ ಸೀರೆಗಳನ್ನು ಖರೀದಿ ಮಾಡಬಹುದು. ಇಲ್ಲಿ ಚಂದೇರಿ ರೇಷ್ಮೆ ಸೀರೆಗಳು, ಕೈಮಗ್ಗದ ಕಾಟನ್ ಕುರ್ತಿಗಳು ಖರೀದಿ ಮಾಡಲು ಮರೆಯದಿರಿ.

ಇದನ್ನೂ ಓದಿ: South Indian Monsoon Destinations: ದಕ್ಷಿಣ ಭಾರತದ ಈ 6 ಸ್ಥಳಗಳಲ್ಲಿ ಮಳೆಗಾಲದಲ್ಲಿ ಚಾರಣ ಮಾಡಲೇಬೇಕು!


ಮಿಲಿಟರಿ ಮಹಾದೇವ ದೇವಸ್ಥಾನ

ಶಿವನಿಗೆ ಸಮರ್ಪಿತವಾಗಿರುವ ಇನ್ನೊಂದು ದೇಗುಲ ಮಿಲಿಟರಿ ಮಹಾದೇವ ದೇವಾಲಯ. ಕಲ್ಲಿನ ಮಾರ್ಗದಲ್ಲಿ ದೇವಾಲಯವನ್ನು ತಲುಪಬೇಕಾದರೆ ಅರ್ಧ ದಿನವನ್ನು ಟ್ರೆಕ್ಕಿಂಗ್ ನಲ್ಲಿ ಕಳೆಯಬೇಕು. ಮರಾಠ ದೊರೆ ಸಾರ್ಜೆಂಟ್ ಧೂಳಪ್ಪ ಇದನ್ನು ನಿರ್ಮಿಸಿದ್ದು, ಮುಂಜಾನೆ ಮತ್ತು ಸಂಜೆ ವೇಳೆ ಇಲ್ಲಿಗೆ ಭೇಟಿ ನೀಡಲು ಸೂಕ್ತ ಸಮಯವಾಗಿದೆ.

Continue Reading

ಕರ್ನಾಟಕ

KSET Results 2024:‌ ಕೆ-ಸೆಟ್‌ ಪರೀಕ್ಷೆ ಫಲಿತಾಂಶ; ಅಂಕಪಟ್ಟಿ ಡೌನ್‌ಲೋಡ್‌ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ

KSET Results 2024: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 1,17,703 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ರಾಜ್ಯದ 7 ಕೇಂದ್ರಗಳಲ್ಲಿ ಜನವರಿ 13ರಂದು ನಡೆದ ಪರೀಕ್ಷೆಗೆ 95,201 ಜನ ಹಾಜರಾಗಿದ್ದರು. ಆದರೆ, ಪರೀಕ್ಷೆಯಲ್ಲಿ 3,398 ಪುರುಷರು ಹಾಗೂ 3,180 ಮಹಿಳೆಯರು ಸೇರಿ ಒಟ್ಟು 6,675 ತೇರ್ಗಡೆ ಹೊಂದಿದ್ದಾರೆ. ಫಲಿತಾಂಶ ವೀಕ್ಷಣೆ ಹೇಗೆ ಎಂಬುದು ಸೇರಿ ವಿವಿಧ ಮಾಹಿತಿ ಇಲ್ಲಿದೆ.

VISTARANEWS.COM


on

KSET Results 2024
Koo

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (KSET Results 2024) ಫಲಿತಾಂಶ ಪ್ರಕಟಿಸಿದೆ. ಕಳೆದ ಜನವರಿ 13ರಂದು ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಒಟ್ಟು 41 ವಿಷಯಗಳಿಗೆ ನಡೆದ ಪರೀಕ್ಷೆಯಲ್ಲಿ ಒಟ್ಟು 6,675 ಅಭ್ಯರ್ಥಿಗಳು ತೇರ್ಗಡೆ ಹೊಂದಿದ್ದು, ಅವರೆಲ್ಲರ ನೋಂದಣಿ ಸಂಖ್ಯೆ, ಅಂಕಪಟ್ಟಿಯನ್ನು ಕೆಇಎ ವೆಬ್‌ಸೈಟ್‌ನಲ್ಲಿ (KEA Website) ಪ್ರಕಟಿಸಲಾಗಿದೆ. ಇನ್ನು, ಫಲಿತಾಂಶ ಪರಿಶೀಲಿಸುವುದು ಹೇಗೆ? ಅಂಕಪಟ್ಟಿಯನ್ನು ಡೌನ್‌ಲೋಡ್‌ ಮಾಡಿಕೊಳ್ಳುವುದು ಹೇಗೆ ಎಂಬುದರ ಮಾಹಿತಿ ಇಲ್ಲಿದೆ.

ಫಲಿತಾಂಶವನ್ನು ಹೀಗೆ ಚೆಕ್‌ ಮಾಡಿ

  1. ಮೊದಲು ಕೆಇಎ ಅಧಿಕೃತ ವೆಬ್‌ಸೈಟ್‌ ಆಗಿರುವ https://cetonline.karnataka.gov.in/KEA ಗೆ ಭೇಟಿ ನೀಡಿ
  2. ಮುಖಪುಟದಲ್ಲಿ ಕಾಣಿಸುವ KSET ಫಲಿತಾಂಶ ಎಂಬ ಆಯ್ಕೆ ಮೇಲೆ ಕ್ಲಿಕ್‌ ಮಾಡಿ
  3. ಕೆ-ಸೆಟ್‌ ನೋಂದಣಿ ಸಂಖ್ಯೆ ಹಾಗೂ ಜನ್ಮದಿನಾಂಕವನ್ನು ನಮೂದಿಸಿ
  4. ಕೆ-ಸೆಟ್ ಫಲಿತಾಂಶವನ್ನು ಪರದೆ ಮೇಲೆ ಪ್ರದರ್ಶಿಸಲಾಗುತ್ತದೆ
  5. ಕೊನೆಯ ಹಂತದಲ್ಲಿ ಫಲಿತಾಂಶವನ್ನು ವೀಕ್ಷಿಸುವ ಜತೆಗೆ ಡೌನ್‌ಲೋಡ್‌, ಪ್ರಿಂಟೌಟ್‌ ತೆಗೆದುಕೊಳ್ಳಬಹುದು

1,17,703 ಅಭ್ಯರ್ಥಿಗಳ ನೋಂದಣಿ

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 1,17,703 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ರಾಜ್ಯದ 7 ಕೇಂದ್ರಗಳಲ್ಲಿ ಜನವರಿ 13ರಂದು ನಡೆದ ಪರೀಕ್ಷೆಗೆ 95,201 ಜನ ಹಾಜರಾಗಿದ್ದರು. ಆದರೆ, ಪರೀಕ್ಷೆಯಲ್ಲಿ 3,398 ಪುರುಷರು ಹಾಗೂ 3,180 ಮಹಿಳೆಯರು ಸೇರಿ ಒಟ್ಟು 6,675 ತೇರ್ಗಡೆ ಹೊಂದಿದ್ದಾರೆ. ಇವರಲ್ಲಿ 97 ತೃತೀಯ ಲಿಂಗಿಗಳು ಹಾಗೂ 350 ಅಭ್ಯರ್ಥಿಗಳು ವಿಶೇಷ ಚೇತನರಾಗಿದ್ದಾರೆ ಎಂಬುದಾಗಿ ಕೆಇಎ ತಿಳಿಸಿದೆ.

ಎಷ್ಟು ಅಂಕ ಪಡೆದರೆ ತೇರ್ಗಡೆ?

ಸಾಮಾನ್ಯ ವರ್ಗದ ಅಭ್ಯರ್ಥಿಗಳು ಪೇಪರ್‌ 1 ಹಾಗೂ 2 ಸೇರಿ ಒಟ್ಟು 200 ಅಂಕಗಳಲ್ಲಿ ಶೇ.40ರಷ್ಟು ಅಂಕ ಪಡೆಯಬೇಕು. Cat-I, IIA, IIB, IIIA, IIIB, ಎಸ್‌ಸಿ, ಎಸ್‌ಟಿ, ವಿಶೇಷ ಚೇತನರು ಎರಡೂ ಪರೀಕ್ಷೆಗಳ ಒಟ್ಟು 200 ಅಂಕಗಳ ಪೈಕಿ ಶೇ.35ರಷ್ಟು ಅಂಕಗಳನ್ನು ಪಡೆಯಬೇಕು. ಆಗ ಅವರು ಕೆ-ಸೆಟ್‌ನಲ್ಲಿ ತೇರ್ಗಡೆ ಹೊಂದಿದಂತಾಗುತ್ತದೆ.

ಇದನ್ನೂ ಓದಿ: COMEDK UGET Result 2024: ಕಾಮೆಡ್‌ ಕೆ ಫಲಿತಾಂಶ ಪ್ರಕಟ; ಬೆಂಗಳೂರಿನ ಬಾಲಸತ್ಯ ಸರವಣನ್ ಫಸ್ಟ್‌ ರ‍್ಯಾಂಕ್‌

Continue Reading

ಬಳ್ಳಾರಿ

MLC Election: ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆ; ಬಳ್ಳಾರಿ ಜಿಲ್ಲೆಯಲ್ಲಿ 24,183 ಪದವೀಧರ ಮತದಾರರು

MLC Election: ವಿಧಾನಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧ ಅಂತಿಮ ಮತದಾರರ ಪಟ್ಟಿ ಅನ್ವಯ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 24,183 ಪದವೀಧರ ಮತದಾರರಿದ್ದಾರೆ ಎಂದು ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ. 91-ಕಂಪ್ಲಿ, 92-ಸಿರುಗುಪ್ಪ, 93-ಬಳ್ಳಾರಿ ಗ್ರಾಮೀಣ, 94-ಬಳ್ಳಾರಿ ನಗರ, 95-ಸಂಡೂರು ವಿಧಾನಸಭಾ ಕ್ಷೇತ್ರ ಒಳಗೊಂಡಂತೆ 14,981 ಪುರುಷರು, 9,198 ಮಹಿಳೆಯರು ಮತ್ತು 4 ಜನ ಇತರೆ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 24,183 ಪದವೀಧರ ಮತದಾರರಿದ್ದಾರೆ.

VISTARANEWS.COM


on

MLC Election North East Graduate Constituency Election 2024 total 24 183 graduate voters in the district
Koo

ಬಳ್ಳಾರಿ: ವಿಧಾನಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಗೆ (MLC Election) ಸಂಬಂಧ ಅಂತಿಮ ಮತದಾರರ ಪಟ್ಟಿ ಅನ್ವಯ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 24,183 ಪದವೀಧರ ಮತದಾರರಿದ್ದಾರೆ ಎಂದು ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

ಕ್ಷೇತ್ರವಾರು ಮತದಾರರ ವಿವರ

91-ಕಂಪ್ಲಿ, 92-ಸಿರುಗುಪ್ಪ, 93-ಬಳ್ಳಾರಿ ಗ್ರಾಮೀಣ, 94-ಬಳ್ಳಾರಿ ನಗರ, 95-ಸಂಡೂರು ವಿಧಾನಸಭಾ ಕ್ಷೇತ್ರ ಒಳಗೊಂಡಂತೆ 14,981 ಪುರುಷರು, 9,198 ಮಹಿಳೆಯರು ಮತ್ತು 4 ಜನ ಇತರೆ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 24,183 ಪದವೀಧರ ಮತದಾರರಿದ್ದಾರೆ.

ಇದನ್ನೂ ಓದಿ: Delhi Temperature: ದೆಹಲಿಯಲ್ಲಿ 52 ಡಿಗ್ರಿ ಸೆಲ್ಸಿಯಸ್‌ ತಾಪಮಾನ; ದೇಶದಲ್ಲೇ ಇದುವರೆಗಿನ ಗರಿಷ್ಠ ಟೆಂಪರೇಚರ್!

ಕಂಪ್ಲಿ ಕ್ಷೇತ್ರದಲ್ಲಿ 2,568 ಪುರುಷರು, 1,170 ಮಹಿಳೆಯರು ಸೇರಿ ಒಟ್ಟು 3,738 ಪದವೀಧರ ಮತದಾರರು. ಸಿರುಗುಪ್ಪ ಕ್ಷೇತ್ರದಲ್ಲಿ 2,522 ಪುರುಷರು, 921 ಮಹಿಳೆಯರು ಸೇರಿ ಒಟ್ಟು 3,443 ಪದವೀಧರ ಮತದಾರರು. ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ 3,098 ಪುರುಷರು, 2,030 ಮಹಿಳೆಯರು ಮತ್ತು 01 ಇತರೆ ಸೇರಿ ಒಟ್ಟು 5,129 ಪದವೀಧರ ಮತದಾರರಿದ್ದಾರೆ.

ಬಳ್ಳಾರಿ ನಗರ ಕ್ಷೇತ್ರದಲ್ಲಿ 4,552 ಪುರುಷರು, 3,681 ಮಹಿಳೆಯರು ಮತ್ತು 02 ಇತರೆ ಸೇರಿ ಒಟ್ಟು 8,235 ಪದವೀಧರ ಮತದಾರರು. ಸಂಡೂರು ಕ್ಷೇತ್ರದಲ್ಲಿ 2,241 ಪುರುಷರು, 1,396 ಮಹಿಳೆಯರು ಮತ್ತು 01 ಇತರೆ ಸೇರಿ ಒಟ್ಟು 3,638 ಪದವೀಧರ ಮತದಾರರಿದ್ದಾರೆ.

24 ಮತಗಟ್ಟೆ ಕೇಂದ್ರಗಳು

ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ ಸಂಬಂಧಿಸಿದಂತೆ, ಜಿಲ್ಲೆಯಲ್ಲಿ ಒಟ್ಟು 24 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಕಂಪ್ಲಿ ಕ್ಷೇತ್ರ
ಕಂಪ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಕಂಪ್ಲಿ ಪಟ್ಟಣದ ಪುರಸಭೆ ಕಚೇರಿಯಲ್ಲಿ 02 ಮತಗಟ್ಟೆ ಕೇಂದ್ರಗಳು, ಕುರುಗೋಡು ಪಟ್ಟಣದ ಅಂಗನವಾಡಿ ಕೇಂದ್ರ ಮತ್ತು ಕೋಳೂರು ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿ ಸೇರಿ ಒಟ್ಟು 04 ಮತಗಟ್ಟೆ ಕೇಂದ್ರಗಳು.

ಸಿರುಗುಪ್ಪ ಕ್ಷೇತ್ರ
ಸಿರುಗುಪ್ಪ ಕ್ಷೇತ್ರ ವ್ಯಾಪ್ತಿಯಲ್ಲಿ ಹಚ್ಚೋಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ, ಸಿರುಗುಪ್ಪ ಪಟ್ಟಣದ ಸರ್ಕಾರಿ ಪ್ರೌಢಶಾಲೆ, ತೆಕ್ಕಲಕೋಟೆಯ ಸರ್ಕಾರಿ ಪದವಿಪೂರ್ವ ಕಾಲೇಜು ಮತ್ತು ಕರೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಸೇರಿ 04 ಮತಗಟ್ಟೆ ಕೇಂದ್ರಗಳು.

ಬಳ್ಳಾರಿ ಗ್ರಾಮೀಣ ಕ್ಷೇತ್ರ
ಬಳ್ಳಾರಿ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯಲ್ಲಿ ಮೋಕಾದ ಗ್ರಾಮ ಪಂಚಾಯಿತಿ ಕಚೇರಿ, ಬಳ್ಳಾರಿಯ ಕೌಲ್‍ಬಜಾರ್‌ನ ಸೆಂಟ್ ಜೋಸೆಫ್ ಪ್ರೌಢಶಾಲೆಯ 4ನೇ ತರಗತಿ ಕೊಠಡಿ, 5 ನೇ ತರಗತಿ ಕೊಠಡಿ ಹಾಗೂ 6ನೇ ತರಗತಿ ಕೊಠಡಿ ಮತ್ತು ರೂಪನಗುಡಿ ಗ್ರಾಮ ಪಂಚಾಯಿತಿ ಕಚೇರಿ ಸೇರಿ 05 ಮತಗಟ್ಟೆ ಕೇಂದ್ರಗಳು.

ಬಳ್ಳಾರಿ ನಗರ ಕ್ಷೇತ್ರ
ಬಳ್ಳಾರಿ ನಗರ ಕ್ಷೇತ್ರದಲ್ಲಿ ಬಳ್ಳಾರಿ ನಗರದ ಅಂಬಲಿಬಾಗ್‍ನ ಅಂಚೆ ಕಚೇರಿ ಹತ್ತಿರದ ಸರ್ಕಾರಿ ಬಾಲಕೀಯರ ಕಾಲೇಜಿನ ಕೊಠಡಿ ಸಂಖ್ಯೆ 42, ಕೊಠಡಿ ಸಂಖ್ಯೆ 43, ಕೊಠಡಿ ಸಂಖ್ಯೆ 44, ಎಸ್.ಎನ್.ಪೇಟೆ ಮುಖ್ಯ ರಸ್ತೆಯ ಎಸ್‍ಎಸ್‍ಎ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕೊಠಡಿ ಸಂಖ್ಯೆ 01, ಕೊಠಡಿ ಸಂಖ್ಯೆ 02, ಗಾಂಧಿನಗರದ ಬಾಲಭಾರತಿ ಇಂಗ್ಲೀಷ್ ಮಾಧ್ಯಮ ಶಾಲೆಯ ಕೊಠಡಿ ಸಂಖ್ಯೆ 01, ಕೊಠಡಿ ಸಂಖ್ಯೆ 02 ಸೇರಿ ಒಟ್ಟು 07 ಮತಗಟ್ಟೆ ಕೇಂದ್ರಗಳು.

ಸಂಡೂರು ಕ್ಷೇತ್ರ
ಸಂಡೂರು ಕ್ಷೇತ್ರ ವ್ಯಾಪ್ತಿಯಲ್ಲಿ ತೋರಣಗಲ್ಲು ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿ ಸಂಖ್ಯೆ 01, ಕೊಠಡಿ ಸಂಖ್ಯೆ 02, ಸಂಡೂರು ಪಟ್ಟಣದ ತಾಲ್ಲೂಕು ಕಚೇರಿ ಮತ್ತು ಚೋರನೂರು ಹೋಬಳಿಯ ನಾಡಕಚೇರಿ ಕಾರ್ಯಾಲಯ ಸೇರಿ ಒಟ್ಟು 04 ಮತಗಟ್ಟೆ ಕೇಂದ್ರಗಳು.‌

ಇದನ್ನೂ ಓದಿ:Tamarind Fruit Benefits: ಜೀರ್ಣಶಕ್ತಿ ಹೆಚ್ಚಿಸಿ ತೂಕ ಇಳಿಸಲು ಹುಣಸೇ ಹಣ್ಣು ಸುಲಭದ ಉಪಾಯ!

ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆಗೆ ಜೂನ್ 03 ರಂದು ಮತದಾನ ನಡೆಯಲಿದ್ದು, ಈಗಾಗಲೇ ನೋಂದಾಯಿಸಿಕೊಂಡಿರುವ ಎಲ್ಲಾ ಅರ್ಹ ಮತದಾರರು ಅಂದು ತಪ್ಪದೇ ಮತಗಟ್ಟೆ ಕೇಂದ್ರಗಳಿಗೆ ತೆರಳಿ ಮತದಾನ ಮಾಡಬೇಕು ಎಂದು ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಉತ್ತರ ಕನ್ನಡ

Lok Sabha Election 2024: ಮತ ಎಣಿಕೆ ಕಾರ್ಯ ಎಚ್ಚರಿಕೆಯಿಂದ ನಿರ್ವಹಿಸಲು ಡಿಸಿ ಗಂಗೂಬಾಯಿ ಮಾನಕರ್ ಸೂಚನೆ

Lok Sabha Election 2024: ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿ ತಮಗೆ ನಿಗದಿಪಡಿಸಿದ ಅವಧಿಗೆ ಸರಿಯಾಗಿ ಮತ ಎಣಿಕೆ ಕೇಂದ್ರಕ್ಕೆ ಹಾಜರಾಗಿ, ತಮ್ಮ ಟೇಬಲ್ ಬಳಿ ಕರ್ತವ್ಯ ನಿರ್ವಹಿಸುವಂತೆ ಹಾಗೂ ಪ್ರತಿ ಹಂತದ ಮತ ಎಣಿಕೆಯ ವಿವರಗಳನ್ನು ಕೇಂದ್ರದಲ್ಲಿ ಹಾಜರಿರುವ ಅಭ್ಯರ್ಥಿಗಳು ಮತ್ತು ಅವರ ಏಜೆಂಟರ್‌ಗಳಿಗೆ ಯಾವುದೇ ಗೊಂದಲಕ್ಕೆ ಒಳಗಾಗದಂತೆ ತಿಳಿಸುವುದರ ಮೂಲಕ ಸಕಾಲದಲ್ಲಿ ನಿಖರ ಫಲಿತಾಂಶ ನೀಡಲು ಅನುಕೂಲವಾಗುವಂತೆ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

VISTARANEWS.COM


on

Uttara Kannada DC Gangubai Manakar spoke in Vote counting training program at Kumta
Koo

ಕಾರವಾರ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಗೆ (Lok Sabha Election 2024) ಸಂಬಂಧಿಸಿದಂತೆ ಜೂ. 4ರಂದು ನಡೆಯುವ ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ, ಮತ ಎಣಿಕೆ ಸಂದರ್ಭದಲ್ಲಿ ಮತಗಳ ಎಣಿಕೆಯಲ್ಲಿ ಯಾವುದೇ ತಪ್ಪುಗಳಾಗದಂತೆ ತಮ್ಮ ಕರ್ತವ್ಯವನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸಬೇಕು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.

ಕುಮಟಾದ ಹಾಲಕ್ಕಿ ಒಕ್ಕಲಿಗರ ಸಮುದಾಯ ಭವನದಲ್ಲಿ ಮಂಗಳವಾರ ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿ ಮತ್ತು ಸಿಬ್ಬಂದಿಗೆ ಆಯೋಜಿಸಿದ್ದ ಮತ ಎಣಿಕೆ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಚುನಾವಣೆಯ ಅತ್ಯಂತ ಪ್ರಮುಖ ಮತ್ತು ಅಂತಿಮ ಹಂತವಾದ ಮತ ಎಣಿಕೆ ಕಾರ್ಯವು ಇಡೀ ಚುನಾವಣೆ ಪ್ರಕ್ರಿಯೆಯ ಮಹತ್ವದ ಘಟ್ಟವಾಗಿದೆ, ಮತ ಎಣಿಕೆ ಸಿಬ್ಬಂದಿ ಯಾವುದೇ ಗೊಂದಲ, ಆತುರ, ಒತ್ತಡಗಳಿಗೆ ಒಳಗಾಗದೇ, ನಿಖರವಾದ ಫಲಿತಾಂಶವನ್ನು ನೀಡಲು ಅನುಕೂಲವಾಗುವಂತೆ ಅತ್ಯಂತ ಜವಾಬ್ದಾರಿಯುತವಾಗಿ ಮತ ಎಣಿಕೆ ಕಾರ್ಯವನ್ನು ನಿರ್ವಹಿಸುವಂತೆ ತಿಳಿಸಿದರು.

ಇದನ್ನೂ ಓದಿ: Money Guide: ಮೇ 31ರೊಳಗೆ ಪ್ಯಾನ್‌-ಆಧಾರ್‌ ಲಿಂಕ್‌ ಆಗದಿದ್ದರೆ ಟಿಡಿಎಸ್ ದುಪ್ಪಟ್ಟು ಕಡಿತ; ಹೀಗೆ ಲಿಂಕ್‌ ಮಾಡಿ

ಹಿಂದೆ ಎಷ್ಟೇ ಬಾರಿ ಮತ ಎಣಿಕೆಯ ಕರ್ತವ್ಯ ನಿರ್ವಹಿಸಿದ್ದರೂ ಕೂಡಾ, ಪ್ರತಿಯೊಂದು ಚುನಾವಣೆ ಮತ್ತು ಮತ ಎಣಿಕೆ ಕಾರ್ಯವು ಒಂದಕ್ಕಿಂತ ವಿಭಿನ್ನವಾಗಿದ್ದು, ಸಿಬ್ಬಂದಿ ಮತ ಎಣಿಕೆ ಕಾರ್ಯವನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸಬೇಕು. ಎಣಿಕೆಯ ಸಂದರ್ಭದಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೇ, ಮತಗಳನ್ನು ಸ್ಪಷ್ಟವಾಗಿ ಕ್ರೋಡಿಕರಿಸಿ, ಅಭ್ಯಥಿಗಳು ಮತ್ತು ಅವರ ಏಜೆಂಟರುಗಳಿಂದ ಯಾವುದೇ ಆಕ್ಷೇಪಣೆಗಳು ಬಾರದಂತೆ ಎಚ್ಚರವಹಿಸುವಂತೆ ಹಾಗೂ ಯಾವುದೇ ರೀತಿಯ ಗೊಂದಲಗಳು ಕಂಡುಬಂದಲ್ಲಿ ತಕ್ಷಣ ಆಯಾ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳ ಗಮನಕ್ಕೆ ತರುವಂತೆ ತಿಳಿಸಿದರು.

ಮತ ಎಣಿಕೆ ಕಾರ್ಯದ ಕುರಿತಂತೆ ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳನ್ನು ಎಲ್ಲಾ ಸಿಬ್ಬಂದಿ ಚಾಚೂ ತಪ್ಪದೇ ಪಾಲಿಸುವಂತೆ ತಿಳಿಸಿದ ಅವರು, ಇವಿಎಂಗಳಲ್ಲಿನ ಮತ ಎಣಿಕೆ ಮತ್ತು ಪೋಸ್ಟಲ್ ಬ್ಯಾಲೆಟ್‌ಗಳ ಎಣಿಕೆಯ ಕುರಿತಂತೆ ಯಾವುದೇ ಗೊಂದಲಗಳಿದ್ದಲ್ಲಿ ತರಬೇತಿ ಸಮಯದಲ್ಲಿ ಬಗೆಹರಿಸಿಕೊಳ್ಳುವಂತೆ ತಿಳಿಸಿದರು.

ಇದನ್ನೂ ಓದಿ: World Digestive Health Day: ಜೀರ್ಣಕ್ರಿಯೆಯಲ್ಲಿ ತೊಡಕು ಅನಾರೋಗ್ಯಕ್ಕೆ ದಾರಿ; ಈ ಸಲಹೆ ಪಾಲಿಸಿ

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಇದ್ದರು.

Continue Reading
Advertisement
Belagavi Tour
ಪ್ರವಾಸ31 seconds ago

Belagavi Tour: ಬೆಳಗಾವಿಗೆ ಭೇಟಿ ನೀಡಿದಾಗ ಈ ಸ್ಥಳಗಳನ್ನು ನೋಡಲು ಮರೆಯಬೇಡಿ

AUS vs NAM
ಕ್ರೀಡೆ13 mins ago

AUS vs NAM: ನಮೀಬಿಯಾ ವಿರುದ್ಧ ಅಭ್ಯಾಸ ಪಂದ್ಯವಾಡಿದ ಆಸೀಸ್​ ತಂಡದ ಕೋಚಿಂಗ್​ ಸಿಬ್ಬಂದಿ

Dream Of Retired Couple
ಪ್ರವಾಸ16 mins ago

Dream Of Retired Couple: ನಿರಂತರ ಮೂರೂವರೆ ವರ್ಷಗಳ ನೌಕಾಯಾನಕ್ಕಾಗಿ ತಮ್ಮದೆಲ್ಲವನ್ನೂ ಮಾರಿದ ದಂಪತಿ!

KSET Results 2024
ಕರ್ನಾಟಕ23 mins ago

KSET Results 2024:‌ ಕೆ-ಸೆಟ್‌ ಪರೀಕ್ಷೆ ಫಲಿತಾಂಶ; ಅಂಕಪಟ್ಟಿ ಡೌನ್‌ಲೋಡ್‌ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ

MLC Election North East Graduate Constituency Election 2024 total 24 183 graduate voters in the district
ಬಳ್ಳಾರಿ23 mins ago

MLC Election: ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆ; ಬಳ್ಳಾರಿ ಜಿಲ್ಲೆಯಲ್ಲಿ 24,183 ಪದವೀಧರ ಮತದಾರರು

Uttara Kannada DC Gangubai Manakar spoke in Vote counting training program at Kumta
ಉತ್ತರ ಕನ್ನಡ25 mins ago

Lok Sabha Election 2024: ಮತ ಎಣಿಕೆ ಕಾರ್ಯ ಎಚ್ಚರಿಕೆಯಿಂದ ನಿರ್ವಹಿಸಲು ಡಿಸಿ ಗಂಗೂಬಾಯಿ ಮಾನಕರ್ ಸೂಚನೆ

LinkedIns Tips for Graduates in the Job Search
ಕರ್ನಾಟಕ27 mins ago

LinkedIn: ಉದ್ಯೋಗ ಹುಡುಕಾಟದಲ್ಲಿರುವ ಪದವೀಧರರಿಗೆ ಲಿಂಕ್ಡ್‌ಇನ್‌ ಸಲಹೆಗಳು ಪ್ರಕಟ; ಏನೇನಿವೆ ತಪ್ಪದೇ ಓದಿ

Star Fashion
ಫ್ಯಾಷನ್34 mins ago

Star Fashion: ಏನಿದು ನಟಿ ಶ್ರೀ ಲೀಲಾ ಧರಿಸಿ ಮಿಂಚಿದ್ದ ಘರಾರ ಡ್ರೆಸ್?

bitcoin scam
ಪ್ರಮುಖ ಸುದ್ದಿ44 mins ago

Bitcoin Scam: ಬಿಟ್ ಕಾಯಿನ್ ಪ್ರಕರಣದಲ್ಲಿ ಮತ್ತೊಬ್ಬ ಇನ್‌ಸ್ಪೆಕ್ಟರ್‌ನನ್ನು ಬಂಧಿಸಿದ ಎಸ್ಐಟಿ

Dinesh Karthik
ಕ್ರೀಡೆ1 hour ago

Dinesh Karthik: ಪ್ಯಾರಿಸ್​ನಲ್ಲಿ ನೀರಜ್​ಗೆ ತೀವ್ರ ಪೈಪೋಟಿ ನೀಡಲು ಮುಂದಾದರೇ ದಿನೇಶ್​ ಕಾರ್ತಿಕ್​?; ಜಾವೆಲಿನ್​ ಅಭ್ಯಾಸದ ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ24 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ7 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌