ICC World Cup 2023 : ಟೀಂ ಇಂಡಿಯಾಕ್ಕೆ All the best ಎಂದ ಫ್ಯಾನ್ಸ್‌; ಇಲ್ಲಿದೆ ಅಭಿಮಾನದ ಝಲಕ್ - Vistara News

ಉತ್ತರ ಕನ್ನಡ

ICC World Cup 2023 : ಟೀಂ ಇಂಡಿಯಾಕ್ಕೆ All the best ಎಂದ ಫ್ಯಾನ್ಸ್‌; ಇಲ್ಲಿದೆ ಅಭಿಮಾನದ ಝಲಕ್

ICC World Cup 2023 : ಭಾನುವಾರ ಮುಂಜಾನೆಯಿಂದಲೇ ಟೀಂ ಇಂಡಿಯಾ ಗೆಲುವಿಗಾಗಿ ವಿಶೇಷ ಪ್ರಾರ್ಥನೆಗಳನ್ನು ಮಾಡಲಾಗುತ್ತಿದೆ. ಕೆಲವರು ದೇವರ ಮೊರೆ ಹೋದರೆ, ಮತ್ತೆ ಕೆಲವರು ಹೋಮ-ಹವನ, ಡ್ಯಾನ್ಸ್‌, ರನ್ನಿಂಗ್‌ ಇತ್ಯಾದಿಗಳ ಮೂಲಕ ಭಾರತ ತಂಡದ ಆಟಗಾರರಿಗೆ ಶುಭ ಕೋರಿದ್ದಾರೆ.

VISTARANEWS.COM


on

ICC World Cup 2023 All the best for Team India says fans
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕ್ರಿಕೆಟ್‌ ವಿಶ್ವ ಕಪ್‌ ಹಬ್ಬ ಕೊನೇ ಘಟಕ್ಕೆ ಬಂದಿದೆ. ಇಡೀ ವಿಶ್ವವೇ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ವಿಶ್ವಕಪ್‌ ಫೈನಲ್‌ (ICC World Cup 2023) ಪಂದ್ಯದ ಮೇಲೆ ಕಣ್ಣಿಟ್ಟಿದೆ. ದೇಶದ ಕ್ರಿಕೆಟ್‌ ಫ್ಯಾನ್ಸ್‌ ಟೀಂ ಇಂಡಿಯಾ ಗೆಲುವಿಗೆ ಒಕ್ಕೊರಲಿನ ಪ್ರಾರ್ಥನೆಯನ್ನು ಮಾಡುತ್ತಿದ್ದಾರೆ. “ಈ ಬಾರಿ ಕಪ್‌ ನಮ್ದೇ” ಎಂಬ ವಿಶ್ವಾಸದಲ್ಲಿ ಜೈಕಾರಗಳು ಮೊಳಗುತ್ತಿವೆ. ಈ ಎಲ್ಲದರ ಮಧ್ಯೆ ಭಾನುವಾರ (ನ. 19) ಮುಂಜಾನೆಯಿಂದಲೇ ಟೀಂ ಇಂಡಿಯಾ ಗೆಲುವಿಗಾಗಿ ವಿಶೇಷ ಪ್ರಾರ್ಥನೆಗಳನ್ನು ಮಾಡಲಾಗುತ್ತಿದೆ. ಕೆಲವರು ದೇವರ ಮೊರೆ ಹೋದರೆ, ಮತ್ತೆ ಕೆಲವರು ಹೋಮ-ಹವನ, ಡ್ಯಾನ್ಸ್‌, ರನ್ನಿಂಗ್‌ ಇತ್ಯಾದಿಗಳ ಮೂಲಕ ಭಾರತ ತಂಡದ ಆಟಗಾರರಿಗೆ ಶುಭ ಕೋರಿದ್ದಾರೆ. ಗೆಲುವಿಗಾಗಿ ಪ್ರಾರ್ಥಿಸಿದ್ದಾರೆ. ಅಲ್ಲದೆ, ಸಿಎಂ ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಹಿತ ಇನ್ನೂ ಹಲವರು ಟೀಂ ಇಂಡಿಯಾಕ್ಕೆ All the best ಹೇಳಿದ್ದಾರೆ.

12 ವರ್ಷಗಳ ಬಳಿಕ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಫೈನಲ್‌ ಪ್ರವೇಶಿಸಿರುವ ಭಾರತ ತಂಡವು (Indian Cricket Team) ಮೂರನೇ ಬಾರಿ ಏಕದಿನ ವಿಶ್ವಕಪ್‌ ಎತ್ತಿಹಿಡಿಯುವ ತವಕದಲ್ಲಿದೆ. ಭಾರತ ಗೆದ್ದು ಬೀಗಲಿ, ವಿಶ್ವಕಪ್‌ ರೋಹಿತ್‌ ಪಡೆಯ ಪಾಲಾಗಲಿ ದೇಶಾದ್ಯಂತ ಶತಕೋಟಿ ಭಾರತೀಯರು ಪ್ರಾರ್ಥನೆಯಲ್ಲಿ ತೊಡಗಿದ್ದಾರೆ. ಅತ್ತ ಆಸ್ಟ್ರೇಲಿಯಾ ಕೂಡ ಗೆಲುವು ಸಾಧಿಸುವ ಮೂಲಕ ಕ್ರಿಕೆಟ್‌ನಲ್ಲಿ ತಾನೇ ಅಧಿಪತಿ ಎಂಬುದನ್ನು ಸಾಬೀತುಪಡಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಇದೆಲ್ಲ ಕಾರಣಗಳಿಂದಾಗಿ ವಿಶ್ವಕಪ್‌ ಫೈನಲ್‌ ಪಂದ್ಯವು ಎಲ್ಲರನ್ನೂ ತುದಿ ಕಾಲಿನಲ್ಲಿ ನಿಲ್ಲಿಸಿದೆ.

ಇದನ್ನೂ ಓದಿ: ICC World Cup 2023 : ಕಳೆದ 10 ಪಂದ್ಯಗಳಲ್ಲಿ ಭಾರತದ ಬೌಲರ್​ಗಳ ಪರಾಕ್ರಮ ಈ ರೀತಿ ಇತ್ತು

ಡ್ಯಾನ್ಸ್ ಮೂಲಕ ಶುಭಹಾರೈಸಿದ ವಿದ್ಯಾರ್ಥಿಗಳು

ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದಲ್ಲಿ ಸ್ಟಾರ್ ಚಾಯ್ಸ್ ಡ್ಯಾನ್ಸ್ ಅಕಾಡೆಮಿ ವಿದ್ಯಾರ್ಥಿಗಳಿಂದ ಟೀಂ ಇಂಡಿಯಾಕ್ಕೆ ವಿಶೇಷ ರೀತಿಯಲ್ಲಿ ಶುಭ ಹಾರೈಕೆ ವ್ಯಕ್ತವಾಗಿದೆ. ಡ್ಯಾನ್ಸ್ ಮೂಲಕ ಮಕ್ಕಳು ಶುಭ ಹಾರೈಸಿದ್ದಾರೆ. 20ಕ್ಕೂ ಅಧಿಕ ಮಕ್ಕಳು ಕಡಲತೀರದಲ್ಲಿ ಡ್ಯಾನ್ಸ್ ಮಾಡಿದ್ದಾರೆ. ಇದಕ್ಕೂ ಮುಂಚೆ ಕಡಲತೀರದಲ್ಲಿ ತ್ರಿವರ್ಣ ಧ್ವಜ‌ ಹಿಡಿದು ಮೆರವಣಿಗೆ ನಡೆಸಿದ್ದಾರೆ. ಭಾರತ ತಂಡದ ಪರ ಘೋಷಣೆ ಕೂಗಿದ್ದಾರೆ.

ICC World Cup 2023 All the best for Team India says fans

ದಾವಣಗೆರೆಯಲ್ಲಿ ಮಕ್ಕಳಿಂದ ಪೂಜೆ ಸಲ್ಲಿಕೆ

ದಾವಣಗೆರೆಯ ಐತಿಹಾಸಿಕ‌ ಶಾಮನೂರು ಆಂಜನೇಯ ದೇವಸ್ಥಾನದಲ್ಲಿ ಶಾಲಾ ಮಕ್ಕಳು, ಪಾಲಕರು, ಶಿಕ್ಷಕರು ವಿಶೇಷ ಪೂಜೆ ಸಲ್ಲಿಸಿ ಟೀಂ ಇಂಡಿಯಾ ಗೆಲುವಿಗೆ ಪ್ರಾರ್ಥಿಸಿದರು. ಈ ಸಲ ವಿಶ್ವಕಪ್ ನಮ್ಮದೇ.. ನಮ್ಮದೇ ಎಂದು ಘೋಷಣೆ ಹಾಕಿದರು.

ICC World Cup 2023 All the best for Team India says fans

ಹಾಸನದಲ್ಲಿ ರನ್ನಿಂಗ್ ಮಾಡಿ ಜಯಘೋಷ

ಹಾಸನ ನಗರದ ಪ್ರಮುಖ ಬೀದಿಗಳಲ್ಲಿ ರನ್ನಿಂಗ್ ಮಾಡಿ ಜಯಘೋಷ ವ್ಯಕ್ತಪಡಿಸಿದ್ದಾರೆ. ಟೀಂ ಇಂಡಿಯಾ ಜರ್ಸಿ ಧರಿಸಿ ಹತ್ತಾರು ಅಭಿಮಾನಿಗಳು ಶುಭ ಕೋರಿದ್ದಾರೆ. ಸುಮಾರು 10 ಕಿ.ಮೀ. ಜಾಗಿಂಗ್ ಮಾಡಿ ಭಾರತದ ಪರ ಜಯ ಘೋಷ ಕೂಗಿ ಶುಭಾಶಯವನ್ನು ಸಲ್ಲಿಸಲಾಗಿದೆ. ಜಿಲ್ಲಾ ಕ್ರೀಡಾಂಗಣ, ಎನ್.ಆರ್ ವೃತ್ತ, ಡಿ.ಸಿ ಕಚೇರಿ, ಶಂಕರಮಠ ರಸ್ತೆ ಮೂಲಕ ರನ್ನಿಂಗ್ ಮಾಡಲಾಗಿದೆ.

ICC World Cup 2023 All the best for Team India says fans

ಕೇರಳದಲ್ಲಿ ಅಯ್ಯಪ್ಪ ಭಕ್ತರಿಂದ ವಿಶೇಷ ಪೂಜೆ

ಕೇರಳದ ಗುರುವಾಯೂರು ಕೃಷ್ಣ ಚೋಟಾನಿಕೆರೆ ಭಗವತಿ ದೇವಾಲಯದಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಅಯ್ಯಪ್ಪ ಭಕ್ತರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಟೀಂ ಇಂಡಿಯಾದ ಪೋಸ್ಟರ್ ಹಿಡಿದು ಪೂಜೆ ಸಲ್ಲಿಸಿದ್ದಾರೆ. ಭಾರತ ತಂಡ ಗೆದ್ದು ಮಿಂಚಲಿ ಎಂದು ಶುಭ ಹಾರೈಸಿದ್ದಾರೆ.

ICC World Cup 2023 All the best for Team India says fans

ಕಲಬುರಗಿಯಲ್ಲಿ ರಂಗೋಲಿ ಬಿಡಿಸಿದ ಅಭಿಮಾನಿಗಳು!

ಕಲಬುರಗಿ ನಗರದ ಶೆಟ್ಟಿ ಕಾಂಪ್ಲೆಕ್ಸ್‌ ಬಳಿ‌ ಇರುವ ಸ್ಥಂಭ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಅಭಿಮಾನಿಗಳಿಂದ ಹೋಮ ನಡೆಸಲಾಗಿದೆ. ಹಿಂದೂ ಜಾಗೃತಿ ಸೇನೆ‌ ಜಿಲ್ಲಾ ಘಟಕದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಗಿದೆ. ಮನೆ ಮುಂದೆಯೂ ರಂಗೋಲಿ ಬಿಡಿಸಿ ಶುಭಕೋರಲಾಗಿದೆ.

ICC World Cup 2023 All the best for Team India says fans

ಯಾದಗಿರಿಯಲ್ಲಿ ಶಾಲಾ ಮಕ್ಕಳಿಂದ ಶುಭ ಹಾರೈಕೆ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಲ್ಲದೇವನಹಳ್ಳಿಯ ಶ್ರೀ ಖಾಸ್ಗತೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು ಬ್ಯಾಟ್ ಹಿಡಿದು ಭಾರತ ತಂಡಕ್ಕೆ ಶುಭ ಹಾರೈಸಿದ್ದಾರೆ. ಗೆದ್ದು ಬಾ ಭಾರತ್ ಎಂದು ಮಕ್ಕಳು ಘೋಷಣೆ ಕೂಗಿದ್ದಾರೆ.

ಬೆಳಗಾವಿಯಲ್ಲಿ ಮುತ್ತೈದೆಯರಿಗೆ ಉಡಿ ತುಂಬಿದ ಮಹಿಳೆಯರು

ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಗಣೇಶ ದೇವಸ್ಥಾನದಲ್ಲಿ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯವನ್ನು ಆಯೋಜಿಸಲಾಗಿತ್ತು. ಆ ಮೂಲಕ ಟೀಂ ಇಂಡಿಯಾ ಗೆದ್ದು ಬೀಗಲಿ ಎಂದು ಶುಭ ಹಾರೈಸಲಾಗಿದೆ. ತಂಡದ ಪ್ರಮುಖ ಆಟಗಾರರ ಭಾವಚಿತ್ರಗಳನ್ನು ಪ್ರದರ್ಶಿಸಿ ಮಹಿಳೆಯರು ಸಂಭ್ರಮಪಟ್ಟಿದ್ದಾರೆ.

ICC World Cup 2023 All the best for Team India says fans

ಸಿಎಂ ಸಿದ್ದರಾಮಯ್ಯರಿಂದ ಶುಭಾಶಯ

ಇಂದು ಕ್ರಿಕೆಟ್ ಪಂದ್ಯಾವಳಿಯನ್ನು ವೀಕ್ಷಣೆ ಮಾಡುತ್ತೇನೆ. ಭಾರತ ಗೆಲ್ಲಬೇಕೆಂದು ಶುಭ ಕೋರುತ್ತೇನೆ. ಟೀಂ ಇಂಡಿಯಾದವರು ಒಳ್ಳೆಯ ಫಾರ್ಮ್‌ನಲ್ಲಿದ್ದಾರೆ. ಅವರು ಗೆದ್ದೇ ಗೆಲ್ಲುತ್ತಾರೆ. ಎಲ್ಲ ಆಟಗಾರರು ನನ್ನ ಫೆವರಿಟ್ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಟೀಮ್ ಇಂಡಿಯಾಗೆ ಶುಭ ಕೋರಿದ ಆರ್ ಅಶೋಕ್

ಪ್ರತಿಯೊಬ್ಬರೂ ಈಗಾಗಲೇ ಪೂಜೆ, ಹೋಮಗಳನ್ನು ಮಾಡುತ್ತಿದ್ದಾರೆ. ಎಲ್ಲರೂ ಭಾರತ ಗೆಲ್ಲಲಿ ಅಂತ ಪ್ರಾರ್ಥನೆ ಮಾಡುತ್ತಿದ್ದಾರೆ. ನಾವು ಕೂಡ ಎಲ್ಲರ ರೀತಿ ಜೈ ಹೋ ಅಂತ ಭಾರತ ಪರವಾಗಿ ಘೋಷಣೆ ಕೂಗುತ್ತೇವೆ. ಟೀಮ್ ವರ್ಕ್ ಮತ್ತಷ್ಟು ಹೆಚ್ಚು ಗೆಲುವನ್ನು ತಂದು ಕೊಡಲಿದೆ. ಹಿಂದೆ ಕಪಿಲ್ ದೇವ್ ಆಟ ನಮಗೆ ನೆನಪಾಗುತ್ತದೆ. ಭಾರತ ಗೆಲ್ಲಲಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ICC World Cup 2023 : ಫೈನಲ್​ ಪಂದ್ಯದವರೆಗೆ ಭಾರತ ತಂಡದ ಬ್ಯಾಟರ್​ಗಳ ಪ್ರದರ್ಶನ ಹೀಗಿತ್ತು

ಭಾರತ ತಂಡಕ್ಕೆ ಆಲ್ ದಿ‌ ಬೆಸ್ಟ್ ಹೇಳಿದ ಬಿ ವೈ ವಿಜಯೇಂದ್ರ

ಇಡೀ ದೇಶ ಭಾರತ ಗೆಲ್ಲಬೇಕೆಂದು ಪೂಜೆ ಸಲ್ಲಿಸುತ್ತಿದೆ. ಇವತ್ತಿನ ಫೈನಲ್ ಸಹ ಭಾರತಕ್ಕೆ ಉತ್ತಮ ಗೆಲುವು ಸಿಗಲಿ. ಆಲ್ ದ ಬೆಸ್ಟ್ ಅಂತ ಈ ಸಂದರ್ಭದಲ್ಲಿ ಭಾರತ ತಂಡಕ್ಕೆ ಶುಭ ಕೋರುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bhatkal News: ಭಟ್ಕಳದ ಕಡವಿನಕಟ್ಟೆ ಹೊಳೆಯಲ್ಲಿ ಮುಳುಗಿ ಇಬ್ಬರ ಸಾವು

Bhatkal News: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆ ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿದ್ದಾರೆ. 15ಕ್ಕೂ ಹೆಚ್ಚು ಜನ ಹೊಳೆಯಲ್ಲಿ ಸ್ನಾನ ಮಾಡಲು ತೆರಳಿದ್ದಾಗ ಘಟನೆ ನಡೆದಿದೆ.

VISTARANEWS.COM


on

Bhatkal News
Koo

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ (Bhatkal News) ಕಡವಿನಕಟ್ಟೆ ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವುದು ಶುಕ್ರವಾರ ನಡೆದಿದೆ. ಹೊಳೆಯಲ್ಲಿ ಸ್ನಾನ ಮಾಡಲು ಹೋಗಿದ್ದಾಗ ದುರ್ಘಟನೆ ನಡೆದಿದೆ. ಸೂರಜ್ ನಾಯ್ಕ (17), ಪಾರ್ವತಿ ಶಂಕರ ನಾಯ್ಕ (35) ಮೃತರು.

ಮೃತರು ಭಟ್ಕಳದ ಕಂಡೆಕೋಡ್ಲು ನಿವಾಸಿಗಳಾಗಿದ್ದಾರೆ. ಮೃತ ಸೂರಜ್ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದಾನೆ. 15ಕ್ಕೂ ಹೆಚ್ಚು ಜನ ಹೊಳೆಯಲ್ಲಿ ಸ್ನಾನ ಮಾಡಲು ತೆರಳಿದ್ದಾಗ ಘಟನೆ ನಡೆದಿದೆ.

ಇದನ್ನೂ ಓದಿ | Bomb Blast: ಚೆಂಡೆಂದು ಭಾವಿಸಿ ಬಾಂಬ್‌ ಎತ್ತಿಕೊಂಡ ಮದರಸಾ ವಿದ್ಯಾರ್ಥಿ; ಸ್ಫೋಟಕ್ಕೆ ಮೌಲಾನಾ ಸಾವು

ನಮಾಜ್‌ ಮುಗಿಸಿ ಈಜಲು ಹೋದ ಮೂವರು ನೀರುಪಾಲು; ಐವರು ಪ್ರಾಣಾಪಾಯದಿಂದ ಪಾರು

Drowned in water

ರಾಮನಗರ: ಈಜಲು ಹೋಗಿ‌ದ್ದ ಮೂವರು (Drowned In water) ನೀರುಪಾಲಾಗಿದ್ದಾರೆ. ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ಘಟನೆ ನಡೆದಿದೆ. ಬಂಡೆಯ ಮೇಲಿನ ನೀರಿನ ಹೊಂಡದಲ್ಲಿ ಈಜಲು ಹೋದ ಶಾಬಾಜ್ (14), ಸುಲ್ತಾನ್ (13), ರಿಹಾನ್ ಖಾನ್ (16) ಮೃತಪಟ್ಟಿದ್ದಾರೆ.

ಶಾಬಾಜ್ ಹಾಗೂ ರಿಯಾನ್ ಖಾನ್ ಸಹೋದರರಾಗಿದ್ದು, ಮೃತರೆಲ್ಲರೂ ರಾಮನಗರ ಟೌನ್‌ನ ಸುಲ್ತಾನ್ ನಗರದವರು. ಒಟ್ಟು 8 ಯುವಕರ ತಂಡ ನಮಾಜ್ ಮುಗಿಸಿದ ಈಜಲು ಹೊಂಡಕ್ಕೆ ಇಳಿದಿದ್ದರು. ಈ ವೇಳೆ ಮೂವರು ನೀರುಪಾಲಾದರೆ, ಐವರು ಸಾವಿನ ದವಡೆಯಿಂದ ಬಚಾವ್‌ ಆಗಿದ್ದಾರೆ.

ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: KSRTC Bus : ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ

ಹಾಸನದಲ್ಲಿ ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಬಾಲಕರು (Drowned in water) ನೀರುಪಾಲಾಗಿದ್ದರು. ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿದ್ದ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿತ್ತು.

ಜೀವನ್ (13), ಸಾತ್ವಿಕ್ (11), ವಿಶ್ವ (12), ಪೃಥ್ವಿ (12) ಮೃತ ದುರ್ದೈವಿಗಳು. ಮೃತ ಮಕ್ಕಳು ಮುತ್ತಿಗೆ ಗ್ರಾಮದವರು. ಶಾಲೆಗೆ ರಜೆ ಇರುವುದರಿಂದ ಐವರು ಗೆಳೆಯರಲು ಈಜಲು ಹೊಳೆಗೆ ಹೋಗಿದ್ದರು. ಹೊಳೆಗೆ ಇಳಿದಾಗ ನೀರಿನಿಂದ ಹೊರಬರಲು ಆಗದೆ ನಾಲ್ವರು ನೀರುಪಾಲಾಗಿದ್ದರು. ಮತ್ತೊರ್ವ ಬದುಕುಳಿದಿದ್ದಾನೆ.

Drowned in water 4 boys death

ಇದನ್ನೂ ಓದಿ: Murder Case : ಚಾಕುವಿನಿಂದ ಇರಿದು ಯುವಕನ ಕೊಲೆ; ಹಂತಕರಿಗಾಗಿ ಪೊಲೀಸರ ಹುಡುಕಾಟ

ಈಜಲು ತೆರಳಿದ್ದ ಐವರು ಬಾಲಕರಲ್ಲಿ, ನಾಲ್ವರು‌ ಮುಳುಗಡೆ ಆಗುತ್ತಿದ್ದರು. ಇತ್ತ ಬದುಕುಳಿದ ಓರ್ವ ಬಾಲಕ ಓಡಿ ಹೋಗಿ ಸಮೀಪದಲ್ಲಿದ್ದವರಿಗೆ ಸುದ್ದಿ ತಿಳಿಸಿದ್ದ. ಆದರೆ ಕೆರೆ ಬಳಿ ಬಂದು ನೋಡುವಷ್ಟರಲ್ಲಿ ನಾಲ್ವರು ಬಾಲಕರು ಮುಳುಗಿದ್ದರು.

ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದರು. ನೀರಲ್ಲಿ ಕೊಚ್ಚಿ ಹೋಗಿದ್ದ ಮೃತದೇಹಗಳನ್ನು ಅಗ್ನಿಶಾಮಕದಳದ ಸಿಬ್ಬಂದಿ ಶೋಧಕಾರ್ಯ ನಡೆಸಿ ಮೇಲೆತ್ತಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

Karnataka Weather : ತುಮಕೂರಿನಲ್ಲಿ ಸಿಡಿಲಿಗೆ ಜಾನುವಾರೊಂದು ಬಲಿಯಾಗಿದ್ದು, ನಾಲ್ಕು ಜಾನುವಾರುಗಳಿಗೆ ಸುಟ್ಟ ಗಾಯಗಳಾಗಿವೆ. ಚಿಕ್ಕಮಗಳೂರಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ರಾಯಚೂರು, ವಿಜಯಪುರ ಸೇರಿದಂತೆ ಹಲವೆಡೆ ಮಳೆಯು ಅವಾಂತರವನ್ನೇ (Rain News) ಸೃಷ್ಟಿಸಿದೆ.

VISTARANEWS.COM


on

By

karnataka weather Forecast
Koo

ತುಮಕೂರು/ ಚಿಕ್ಕಮಗಳೂರು: ರಾಜ್ಯದ ಹಲವೆಡೆ ಮಳೆಯು (Karnataka Weather) ಅಬ್ಬರಿಸುತ್ತಿದ್ದು, ಅವಾಂತರವನ್ನೇ ಸೃಷ್ಟಿ ಮಾಡಿದೆ. ತುಮಕೂರಲ್ಲಿ ಸಿಡಿಲಿಗೆ ಹಸುವೊಂದು ಬಲಿಯಾಗಿದ್ದು, ನಾಲ್ಕು ಜಾನುವಾರುಗಳಿಗೆ ಸುಟ್ಟ ಗಾಯವಾಗಿವೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರಂಗಸಮುದ್ರ ಗ್ರಾಮದಲ್ಲಿ ಘಟನೆ ನಡೆದಿದೆ.

ಕರಿಯಪ್ಪ ಎಂಬುವರಿಗೆ ಸೇರಿದ ಜಾನುವಾರುಗಳನ್ನು ತೋಟದಲ್ಲಿದ್ದ ಗುಡಿಸಿಲಿನ ಕೊಟ್ಟಿಗೆಯಲ್ಲಿ ಕಟ್ಟಿದ್ದರು. ಆದರೆ ಸಿಡಿಲು ಬಡಿದು ಕೊಟ್ಟಿಗೆ ಹೊತ್ತಿ ಉರಿದಿದೆ. ಈ ವೇಳೆ ಬೆಂಕಿ ನಂದಿಸಲು ಹೋದ ಮಹಾಲಿಂಗನಿಗೂ ಗಾಯವಾಗಿದೆ. ಕರಿಯಪ್ಪ ಹಾಗೂ ಆತನ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಡಿಲು ಬಡಿದ ಪರಿಣಾಮ ಗುಡಿಸಲು ಭಸ್ಮವಾಗಿದೆ. ಅರಸಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Karnataka Weather Forecast

ಚಿಕ್ಕಮಗಳೂರಲ್ಲಿ ಮಳೆ ಅವಾಂತರ

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿತ್ತು. ಇದರಿಂದಾಗಿ ಮೇಲ್ಪಾಲ್, ಕೊಪ್ಪ, ಬಾಳೆಹೊನ್ನೂರು ರಸ್ತೆ ಸಂಪರ್ಕ ಕಡಿತವಾಗಿದೆ. ಎನ್‌ಆರ್ ಪುರ ತಾಲೂಕಿನ ಅರಳಿ ಕೊಪ್ಪ ತಿರುವಿನಲ್ಲಿ ಘಟನೆ ನಡೆದಿದೆ. ರಸ್ತೆಗೆ ಮರ ಬಿದ್ದ ಕಾರಣಕ್ಕೆ ಮಾರ್ಗ ಬಂದ್‌ ಆಗಿದ್ದು, ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಬದಲಿ ಮಾರ್ಗದಲ್ಲಿ ಸುತ್ತಾಡಿ ಸಂಚರಿಸುವಂತಾಯಿತು.

ಇತ್ತ ಭಾರಿ ಗಾಳಿ ಮಳೆಗೆ ಚಿಕ್ಕಮಗಳೂರು ತಾಲೂಕಿನ ಗಾಳಿಹಳ್ಳಿ, ತಿಮ್ಮನಹಳ್ಳಿ ಗ್ರಾಮಗಳು ತತ್ತರಿಸಿ ಹೋಗಿವೆ. ರಸ್ತೆಯ ಮೇಲೆ ನದಿಯಂತೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಸಂಚಾರ ಸ್ಥಗಿತವಾಗಿತ್ತು.

ಇದನ್ನೂ ಓದಿ: Murder case : ಬಯಲು ಶೌಚಾಲಯಕ್ಕೆ ಹೋದ ಬಾಲಕನ ದೊಣ್ಣೆಯಿಂದ ಹೊಡೆದು ಕೊಂದರು

Karnataka Weather Forecast

ರಾಯಚೂರಿನಲ್ಲಿ ಮಳೆಗೆ ಕೊಚ್ಚಿ ಹೋದ ರಸ್ತೆ

ರಾಯಚೂರಿನಲ್ಲಿ ಗುರುವಾರ ರಾತ್ರಿ ಸುರಿದ ಮಳೆಗೆ ರಸ್ತೆಯೇ ಕೊಚ್ಚಿ ಹೋಗಿದೆ. ರಾಯಚೂರು ಗ್ರಾಮೀಣ ತಾಲೂಕಿನ ಬಿ ಯದ್ಲಾಪುರ ಗ್ರಾಮದಲ್ಲಿ ಹಳ್ಳದ ನೀರಿನ ರಭಸಕ್ಕೆ ರಸ್ತೆ ಕೊಚ್ಚಿ ಹೋಗಿದೆ. ಸದ್ಯ ಬಿ ಯದ್ಲಾಪುರ ಮತ್ತು ಗಿಲ್ಲೆಸಗೂರು ಕ್ಯಾಂಪ್ ನಡುವಿನ ಸಂಪರ್ಕ ಕಡಿತವಾಗಿದೆ. ರಸ್ತೆ ಕಡಿತವಾಗಿದ್ದರಿಂದ ರಾಯಚೂರು ಮತ್ತು ಮಂತ್ರಾಲಯಕ್ಕೆ ತೆರಳುವವರಿಗೆ, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪರದಾಡಬೇಕಾಯಿತು.

Karnataka Weather Forecast

ವಿಜಯಪುರದಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಮರ

ವಿಜಯಪುರ ನಗರದ ನಾಲಬಂದ್ ಗಲ್ಲಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ತೆಂಗಿನ ಮರವೊಂದು ಹೊತ್ತಿ ಉರಿದಿದೆ. ಭಾರಿ ಮಳೆಯಿಂದಾಗಿ ತೆಂಗಿನ ಗರಿಯು ವಿದ್ಯುತ್ ಕಂಬದ ಮೇಲೆ ಬಿದ್ದಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಡೀ ತೆಂಗಿನ ಮರದಲ್ಲಿ ಬೆಂಕಿ ಆವರಿಸಿತ್ತು. ಇದರಿಂದಾಗಿ ಕೆಲಕಾಲ ಆತಂಕ ಉಂಟಾಗಿತ್ತು. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರು, ಕೊಪ್ಪಳದಲ್ಲಿ ಮಳೆಗೆ ತುಂಬಿ ಹರಿದ ಹಳ್ಳ ಕೊಳ್ಳಗಳು

ಚಿಕ್ಕಮಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಹರಿದವು. ಕಳಸಾಪುರ, ಬೆಳವಾಡಿ, ಕೆ.ಬಿ ಹಾಳ್, ಈಶ್ವರ ಹಳ್ಳಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ತುಂಗ, ಭದ್ರಾ ನದಿಗಳ ನೀರಿನ ಮಟ್ಟದಲ್ಲಿ ಏರಿಕೆ ಆಗಿದೆ. ಕುದುರೆಮುಖ ಪರ್ವತ ಶ್ರೇಣಿಯಲ್ಲಿ ಭಾರಿ ಮಳೆ ಹಿನ್ನೆಲೆ ತುಂಗಾ ಹಾಗೂ ಭದ್ರಾ ನದಿಗಳ ನೀರಿನ ಮಟ್ಟದಲ್ಲಿ ಅಲ್ಪ ಪ್ರಮಾಣದ ಏರಿಕೆ ಆಗಿದೆ.

ಕೊಪ್ಪಳದಲ್ಲೂ ಭಾರಿ ಮಳೆಯಾಗುತ್ತಿದ್ದು, ಹಳ್ಳ- ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದಲ್ಲಿ ಬ್ರಿಡ್ಜ್ ಮುಳುಗಡೆಗೆ ಕೆಲವೇ ಅಡಿಗಳು ಬಾಕಿ ಇದೆ. ಲಕ್ಷ್ಮೀ ಕ್ಯಾಂಪ್-ಗುಂಡೂರು ರಸ್ತೆ ಸಂಪರ್ಕ ಸೇತುವೆ‌ ಇದಾಗಿದೆ. ಇನ್ನೂ ಬ್ರಿಡ್ಜ್ ಮೇಲೆ ನಿಂತು ತುಂಬಿ ಹರಿಯುತ್ತಿರುವ ಹಳ್ಳವನ್ನು ಕಣ್ತುಂಬಿಕೊಂಡರು.

ರಾಯಚೂರಿನಲ್ಲಿ ವಾಹನ ಸವಾರರ ಪರದಾಟ

ರಾಯಚೂರಲ್ಲಿ ರಾತ್ರಿ ಸುರಿದ ಮಳೆಗೆ ವಾಹನ ಸವಾರರು ಪರದಾಡಿದರು. ಗುರುವಾರ ರಾತ್ರಿ ಸುರಿದ ಮಳೆಯಿಂದಾಗಿ ರೈಲ್ವೆ ಬಿಡ್ಜ್ ಕೆಳಗೆ ನೀರು ನಿಂತು, ತಗ್ಗು ಗುಂಡಿ ತಪ್ಪಿಸಿ ವಾಹನ ಚಲಾಯಿಸಲು ಸವಾರರು ಹರಸಾಹಸ ಪಟ್ಟರು. ರಾಯಚೂರು-ಹೈದ್ರಬಾದ್ ಮಾರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. 2 ಬದಿಯಲ್ಲಿ ಕಿಲೋ ಮೀಟರ್ ಗಟ್ಟಲೆ ಸಾಲುಗಟ್ಟಿ ವಾಹನಗಳು ನಿಂತಿದ್ದವು. ಮಳೆ ನೀರು ಹರಿದು ಹೋಗಲು ಸಮರ್ಪಕ ವ್ಯವಸ್ಥೆ ಇಲ್ಲದೆ ಇರುವುದೇ ಈ ಅವಾಂತರಕ್ಕೆ ಕಾರಣ ಎನ್ನಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Rain News : ರಾಜ್ಯಾದ್ಯಂತ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಬಿಸಿಲಿನಿಂದ ಕಂಗೆಟ್ಟ ಜನತೆಗೆ ಮಳೆಯು ತತ್ತರಿಸುವಂತೆ ಮಾಡಿದೆ. ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು : ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕ ಕಡೆಯಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು (Rain News) ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉಳಿದ ಉಳಿದ ಭಾಗಗಳಲ್ಲಿ ಹಗುರ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಅನುಕ್ರಮವಾಗಿ 33 ಮತ್ತು 23 ಡಿ.ಸೆ ಇರಲಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇತರ ಪ್ರದೇಶಗಳಲ್ಲಿ ಸಣ್ಣ ಪ್ರಮಾಣದಲ್ಲಿ ಇರಲಿದೆ. ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಇಲ್ಲೆಲ್ಲ ಭಯಂಕರ ಮಳೆ

ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ಗುಡುಗು ಮತ್ತು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇದನ್ನೂ ಓದಿ: Murder Case : ತಂಗಿಯನ್ನು ಬೈಕ್‌ನಲ್ಲಿ ಸುತ್ತಾಡಿಸುತ್ತಿದ್ದವನನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ

ಕೊಟ್ಟೂರು ಬಸ್ ಸ್ಟ್ಯಾಂಡ್‌ನಲ್ಲಿ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

ವಿಜಯನಗರದ ಕೊಟ್ಟೂರು ಪಟ್ಟಣದಲ್ಲಿ ಸುರಿದ ಭಾರಿ ಮಳೆಗೆ (Heavy Rain) ಕೊಟ್ಟೂರು ಬಸ್ ನಿಲ್ದಾಣ ಸಂಪೂರ್ಣ ಜಲಾವೃತ ಆಗಿತ್ತು. ಈ ವೇಳೆ ಬಸ್ ನಿಲ್ದಾಣ ಬಳಿಯ ದೊಡ್ಡ ಚರಂಡಿಗೆ ರಭಸವಾಗಿ ಮಳೆ ನೀರು ಹರಿದು ಹೋಗುತ್ತಿತ್ತು. ಅದೇ ಚರಂಡಿ ಪಕ್ಕದಲ್ಲಿ ನಿಧಾನವಾಗಿ ನಡೆದುಕೊಂಡು ಬರುವಾಗ ತಾಯಿ -ಮಗ ಇಬ್ಬರು ಆಯ ತಪ್ಪಿ ಬಿದ್ದಿದ್ದಾರೆ. ಒಂದು ಕೈಯಲ್ಲಿ ಮಗ, ಇನ್ನೊಂದು ಕೈಯಲ್ಲಿ ಲಗೇಜ್‌ ಹಿಡಿದು ಬರುವಾಗ ಬಿದ್ದಿದ್ದರು.

ಈ ಸಂದರ್ಭದಲ್ಲಿ ಆಚೆ – ಇಚೆ ಹೆಜ್ಜೆ ಇಟ್ಟಿದ್ದರೂ ಚರಂಡಿ ನೀರಲ್ಲಿ ಕೊಚ್ಚಿ ಹೋಗುತ್ತಿದ್ದರು. ಕೊಟ್ಟೂರು ಬಸ್ ನಿಲ್ದಾಣದಲ್ಲಿ ತಾಯಿ – ಮಗುವಿನ ಪರದಾಟದ ವಿಡಿಯೋ ಅಲ್ಲಿದ್ದ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿತ್ತು.

Karnataka Weather Forecast

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯೇ ಸರ್ಕಾರಿ ಆಸ್ಪತ್ರೆ ಇದೆ. ನೂರಾರು ಜನರು ಇದೇ ಮಾರ್ಗದಲ್ಲಿ ಓಡಾಡುತ್ತಾರೆ. ಬಾಯ್ತೆರೆದಿರುವ ದೊಡ್ಡ ಚರಂಡಿ ಬಲಿಗಾಗಿ ಕಾಯುತ್ತಿದೆ. ಇದನ್ನೂ ಮುಚ್ಚಿಸಿಬೇಕಿದ್ದ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದರು.

ಇತ್ತ ಕೊಟ್ಟೂರು ಬಸ್ ನಿಲ್ದಾಣದಲ್ಲಿ ಮಳೆಯಿಂದ ಅವಾಂತರದ ಸುದ್ದಿ ಪ್ರಸಾರ ಆಗುತ್ತಿದ್ದಂತೆ ಸ್ಥಳಕ್ಕೆ ಹಗರಿಬೊಮ್ಮನಹಳ್ಳಿ ಶಾಸಕ ನೇಮಿರಾಜ್ ನಾಯಕ್, ವಿಜಯನಗರ ಡಿಸಿ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಬಸ್ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳ ವೀಕ್ಷಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Lok Sabha Election 2024: 2.5 ಲಕ್ಷ ಮತಗಳ ಅಂತರದಿಂದ ಕಾಗೇರಿ ಗೆಲುವು: ಬಿಜೆಪಿ ಜಿಲ್ಲಾಧ್ಯಕ್ಷರ ವಿಶ್ವಾಸ

Lok Sabha Election 2024: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯ ಉತ್ತರ ಕನ್ನಡ ಕ್ಷೇತ್ರದ ಅವಲೋಕನ ಸಭೆ ಇಂದು ನಡೆಸಲಾಗಿದ್ದು, ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು 2.5 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

VISTARANEWS.COM


on

BJP district president N S Hegde pressmeet in Yallapur
Koo

ಯಲ್ಲಾಪುರ: ಲೋಕಸಭಾ ಚುನಾವಣೆಗೆ (Lok Sabha Election 2024) ಸಂಬಂಧಿಸಿದಂತೆ ಬಿಜೆಪಿಯ ಉತ್ತರ ಕನ್ನಡ ಕ್ಷೇತ್ರದ ಅವಲೋಕನ ಸಭೆ ಇಂದು ನಡೆಸಲಾಗಿದ್ದು, ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು 2.5 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಮಧ್ಯಾಹ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಪ್ರತಿ ಬೂತ್‌ನಿಂದ ಮತಗಳಿಕೆಯ ಕುರಿತು ಮಾಹಿತಿ ಪಡೆಯಲಾಗಿದ್ದು, ಪ್ರತಿ ಬೂತ್‌ನಲ್ಲಿ ಬಿಜೆಪಿಗೆ ಮುನ್ನಡೆ ದೊರೆತಿರುವ ಕುರಿತು ಬೂತ್‌ ಅಧ್ಯಕ್ಷರುಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದಲ್ಲಿನ ಶಾಸಕರು, ಮಾಜಿ ಶಾಸಕರುಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಉತ್ತಮ ಅಂತರದ ಮುನ್ನಡೆ ದೊರಕುವುದಾಗಿ ತಿಳಿಸಿದ್ದಾರೆ. ಏಪ್ರಿಲ್ 28ರಂದು ಕಳೆದ ಒಂದು ವರ್ಷದಲ್ಲಿ ಜಿಲ್ಲೆಗೆ ಎರಡನೇ ಬಾರಿ ಪ್ರಧಾನಮಂತ್ರಿ ಮೋದಿಜಿಯವರು ಆಗಮಿಸಿದ ಕಾರ್ಯಕ್ರಮ ಉತ್ತಮ ರೀತಿಯಲ್ಲಿ ಸಂಘಟಸಿದ್ದು, ಅದಕ್ಕೂ ಸಹ ಕೇಂದ್ರದಿಂದ ಪ್ರಶಂಸನೆ ದೊರೆತಿದೆ ಎಂದರು.

ಇದನ್ನೂ ಓದಿ: Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ

ಕ್ಷೇತ್ರದಲ್ಲಿ ಚುನಾವಣೆಯ ದೃಷ್ಟಿಯಿಂದ ಕಾರ್ಯನಿರ್ವಹಿಸಿದ ಸಮಿತಿಗಳಿಗೆ, ಪದಾಧಿಕಾರಿಗಳಿಗೆ ಹಾಗೂ ಕಾರ್ಯಕರ್ತರುಗಳಿಗೆ ಮೇ 27ರೊಳಗೆ ಪ್ರತಿ ಮಂಡಲದಲ್ಲಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಖುದ್ದು ಪ್ರವಾಸ ಮಾಡಿ, ಅಭಿನಂದನೆ ಸಲ್ಲಿಸಲಿದ್ದಾರೆ ಎಂದು ಅವರು ತಿಳಿಸಿದರು.

ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್‌ ಕೋಣೆಮನೆ ಮಾತನಾಡಿ, ಬರದಿಂದ ಕಂಗಾಲಾದ ರೈತರಿಗೆ ಕೇಂದ್ರ ಸರ್ಕಾರದಿಂದ ಸಮಯಕ್ಕೆ ಸರಿಯಾಗಿ ಬೆಳೆ ಪರಿಹಾರ ಧನ ಬಿಡುಗಡೆಯಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ಸುಮಾರು 41 ಕೋಟಿ ಪರಿಹಾರ ದೊರೆತಿದ್ದು, ಈ ಪೈಕಿ ಮುಖ್ಯ ಆಹಾರ ಬೆಳೆ ಬೆಳೆಯುವ ಯಲ್ಲಾಪುರ, ಮುಂಡಗೋಡ ಭಾಗದ ರೈತರಿಗೆ ಸಿಂಹಪಾಲು ಸಿಕ್ಕಿರುವುದು ಸಂತಸದ ಸಂಗತಿಯಾಗಿದೆ. ಕೇಂದ್ರ ಸರ್ಕಾರದ ಯೋಜನೆಯಡಿ, ಯಾವುದೇ ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ, ಬ್ಯಾಂಕ್‌ ಮೂಲಕ ನೇರವಾಗಿ ರೈತರಿಗೆ ಈ ಪರಿಹಾರ ಧನ ದೊರಕುವಂತೆ ಮಾಡಿರುವ ಪ್ರಧಾನಮಂತ್ರಿ ಹಾಗೂ ಕೇಂದ್ರ ಕೃಷಿ ಮಂತ್ರಿಗಳಿಗೆ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಧನ್ಯವಾದಗಳನ್ನು ಸಲ್ಲಿಸ ಬಯಸುತ್ತೇವೆ ಎಂದರು.

ಇದನ್ನೂ ಓದಿ: Reliance Retail: ರಿಲಯನ್ಸ್‌ ರಿಟೇಲ್‌ನಲ್ಲಿ ಎಎಸ್‌ಒಎಸ್‌ ಬ್ರ್ಯಾಂಡ್‌ನ ಉತ್ಪನ್ನಗಳು ಈಗ ಲಭ್ಯ

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗಜಾನನ ಗುನಗಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ, ಮಂಡಲಾಧ್ಯಕ್ಷ ಪ್ರಸಾದ ಹೆಗಡೆ, ಮಾಜಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಗಾಂವ್ಕರ್‌ ಪ್ರಮುಖರಾದ ಉಮೇಶ ಭಾಗ್ವತ್‌ ಉಪಸ್ಥಿತರಿದ್ದರು.

Continue Reading
Advertisement
Kanhaiya Kumar
ದೇಶ26 mins ago

Kanhaiya Kumar: ಪ್ರಚಾರದ ವೇಳೆ ಕಾಂಗ್ರೆಸ್‌ ಅಭ್ಯರ್ಥಿ ಕನ್ಹಯ್ಯ ಕುಮಾರ್‌ ಮೇಲೆ ಹಲ್ಲೆ; ವಿಡಿಯೊ ಇಲ್ಲಿದೆ

Murder Case
ಬೆಂಗಳೂರು28 mins ago

Murder Case: ಯಲಹಂಕದಲ್ಲಿ ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ

Siddaramaiah
ಸಂಪಾದಕೀಯ33 mins ago

ವಿಸ್ತಾರ ಸಂಪಾದಕೀಯ: ಗ್ರೇಸ್‌ ಮಾರ್ಕ್ಸ್‌ ಅಲ್ಲ, ಗುಣಮಟ್ಟದ ಶಿಕ್ಷಣವೇ ಫಲಿತಾಂಶಕ್ಕೆ ದಾರಿ

Pavithra Jayaram
ಸಿನಿಮಾ38 mins ago

ನಟಿ ಪವಿತ್ರ ಜಯರಾಮ್‌ ಸಾವಿನ ಬೆನ್ನಲ್ಲೇ ಪ್ರಿಯತಮ ಚಂದ್ರಕಾಂತ್ ಆತ್ಮಹತ್ಯೆ; ಖಿನ್ನತೆಗೆ ನಟ ಬಲಿ?

Rohit Sharma
ಕ್ರೀಡೆ44 mins ago

Rohit Sharma : ಆಡಿಯೊ ಬಂದ್ ಮಾಡಪ್ಪ; ಕ್ಯಾಮೆರಾಮನ್​ಗೆ ಕೈಮುಗಿದು ಬೇಡಿಕೊಂಡ ರೋಹಿತ್​ ಶರ್ಮಾ

Road Accident
ಪ್ರಮುಖ ಸುದ್ದಿ1 hour ago

Road Accident: ಕೊಪ್ಪಳ ಬಳಿ ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿಯಾಗಿ ಮೂವರ ದುರ್ಮರಣ; 20ಕ್ಕೂ ಹೆಚ್ಚು ಮಂದಿಗೆ ಗಾಯ

Virat Kohli
ಕ್ರೀಡೆ2 hours ago

Virat kohli : ಪಾಕಿಸ್ತಾನಕ್ಕೆ ಬರುವೆ ಎಂದು ಅಲ್ಲಿನ ಪರ್ವತಾರೋಹಿಗೆ ಭರವಸೆ ಕೊಟ್ಟಿದ್ದ ವಿರಾಟ್​ ಕೊಹ್ಲಿ! ಇಲ್ಲಿದೆ ವಿಡಿಯೊ

Narendra modi
ದೇಶ2 hours ago

Narendra Modi: ಕಾಂಗ್ರೆಸ್‌ ಗೆದ್ದರೆ ಬುಲ್ಡೋಜರ್‌ನಿಂದ ರಾಮಮಂದಿರ ನೆಲಸಮ ಎಂದ ಮೋದಿ!

ಕರ್ನಾಟಕ2 hours ago

Rain News: ಮುಧೋಳದಲ್ಲಿ ಸಿಡಿಲಿಗೆ ಬಾಲಕಿ ಬಲಿ; ಚನ್ನರಾಯಪಟ್ಟಣ, ಗುಂಡ್ಲುಪೇಟೆ ಸೇರಿ ವಿವಿಧೆಡೆ ವರುಣಾರ್ಭಟ

dilip Kumar
ಪ್ರಮುಖ ಸುದ್ದಿ2 hours ago

Milind Kumar : ಆರ್​ಸಿಬಿಯ ಮಾಜಿ ಆಟಗಾರ ಕ್ರಿಕೆಟ್​ನಿಂದ ನಿವೃತ್ತಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ4 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ18 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ19 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌