OBC Reservation : ಒಬಿಸಿ ಮೀಸಲಾತಿಯಲ್ಲಿ ಸಣ್ಣ ಸಮುದಾಯಕ್ಕೆ ಅನ್ಯಾಯ: ನ್ಯಾ. ಭಕ್ತವತ್ಸಲ ಅಸಮಾಧಾನ - Vistara News

ಕರ್ನಾಟಕ

OBC Reservation : ಒಬಿಸಿ ಮೀಸಲಾತಿಯಲ್ಲಿ ಸಣ್ಣ ಸಮುದಾಯಕ್ಕೆ ಅನ್ಯಾಯ: ನ್ಯಾ. ಭಕ್ತವತ್ಸಲ ಅಸಮಾಧಾನ

OBC Reservation : ಎ, ಬಿ, ಸಿ ವರ್ಗಗಳ ಜತೆಗೆ ಡಿ ವರ್ಗವನ್ನು ರಚಿಸುವಂತೆ ನಾವು ವರದಿಯಲ್ಲಿ ಶಿಫಾರಸು ಮಾಡಿದ್ದೆವು. ಹೀಗೆ ಮಾಡುವುದರಿಂದ ಅತಿ ಹಿಂದುಳಿದ ಸಣ್ಣ ಸಮುದಾಯಗಳಿಗೆ ಅನುಕೂಲವಾಗಲಿದೆ. 749 ಜನರಿಗೆ ಒಂದು ಹಣ್ಣು ಕೊಟ್ಟು ತೆಗೆದುಕೊಳ್ಳಿ ಅಂದರೆ ಯಾರು ತೆಗೆದುಕೊಳ್ಳಬೇಕು ಎಂದು ನಿವೃತ್ತ ನ್ಯಾಯಮೂರ್ತಿ ಭಕ್ತವತ್ಸಲ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

OBC Reservation and vidhana soudha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನ್ಯಾ. ಭಕ್ತವತ್ಸಲ ವರದಿಯನ್ನು (Justice Bhaktavatsala Report) ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ಗುರುವಾರ (ಅಕ್ಟೋಬರ್‌ 5) ಕೆಲವೊಂದು ಬದಲಾವಣೆಗಳೊಂದಿಗೆ ಅನುಮೋದನೆ ನೀಡಿದೆ. ಇದರಿಂದ ಹಿಂದುಳಿದ ವರ್ಗಗಳಿಗೆ ರಾಜಕೀಯ ಬಲ (Political strength) ಬರಲಿದೆ ಎಂದೇ ಭಾವಿಸಲಾಗಿತ್ತು. ಆದರೆ, ರಾಜ್ಯ ಸರ್ಕಾರ ಹಿಂದುಳಿದ ವರ್ಗಕ್ಕೆ ರಾಜಕೀಯವಾಗಿ ಈ ಒಪ್ಪಿಗೆ ಸೂಚಿಸಿರುವ ಮೀಸಲಾತಿ (OBC Reservation) ನಿರ್ಧಾರದ ಬಗ್ಗೆ ಸ್ವತಃ ಹೈಕೋರ್ಟ್‌‌ ನಿವೃತ್ತ ನ್ಯಾಯಮೂರ್ತಿ ಭಕ್ತವತ್ಸಲ ಅಸಮಾಧಾನವನ್ನು ಹೊರಹಾಕಿದ್ದಾರೆ. ಒಬಿಸಿಯ ಸಣ್ಣ ಸಮುದಾಯಗಳಿಗೆ ಸರ್ಕಾರ ಅನ್ಯಾಯ ಮಾಡಿದೆ ಎಂದು ಹೇಳಿದ್ದಾರೆ. 749 ಜನರಿಗೆ ಒಂದು ಹಣ್ಣು ಕೊಟ್ಟು ತೆಗೆದುಕೊಳ್ಳಿ ಅಂದರೆ ಯಾರು ತೆಗೆದುಕೊಳ್ಳಬೇಕು? ಎಂದು ಪ್ರಶ್ನೆ ಮಾಡಿದ್ದಾರೆ.

ವಿಸ್ತಾರ ನ್ಯೂಸ್‌ ಜತೆ ಈ ಬಗ್ಗೆ ಮಾತನಾಡಿದ ಹೈಕೋರ್ಟ್‌‌ ನಿವೃತ್ತ ನ್ಯಾಯಮೂರ್ತಿ ಭಕ್ತವತ್ಸಲ, ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಮೇರೆಗೆ ಈ ಸಮಿತಿ ರಚನೆ ಆಗಿತ್ತು. ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ಕೊಡುವ ಸಂಬಂಧ ಈ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ನಮ್ಮ ಸಮಿತಿಯು ಐದು ಶಿಫಾರಸುಗಳನ್ನು ನೀಡಿತ್ತು. ಹಿಂದಿನ ಸರ್ಕಾರ ನಾಲ್ಕು ಶಿಫಾರಸುಗಳನ್ನು ಅಂಗೀಕಾರ ಮಾಡಿತ್ತು. 30-30 ತಿಂಗಳ ಅಧ್ಯಕ್ಷ-ಉಪಾಧ್ಯಕ್ಷರಿಗೆ ಅಧಿಕಾರ ಕೊಡುವುದನ್ನು ಆ ಸರ್ಕಾರ ಒಪ್ಪಿರಲಿಲ್ಲ. ಬಳಿಕ ಸಪ್ಲಿಮೆಂಟರಿ ರಿಪೋರ್ಟ್‌ ಸಹ ಈಗಿನ ಸರ್ಕಾರಕ್ಕೆ ನೀಡಿದ್ದೆವು. ಹಾಲಿ ಸರ್ಕಾರ ಮೂರು ಶಿಫಾರಸುಗಳನ್ನು ಮಾತ್ರವೇ ಒಪ್ಪಿಕೊಂಡಿದೆ ಎಂದು ತಿಳಿಸಿದರು.

ಇದನ್ನೂ ಓದಿ: Ration Card : ಪಡಿತರ ಚೀಟಿ ಅಪ್ಡೇಟ್‌ ಶುರು; 6 ವರ್ಷದ ಒಳಗಿನ, ನಂತರದ ಮಕ್ಕಳ ಸೇರ್ಪಡೆಗೆ ಯಾವ ದಾಖಲೆ ಬೇಕು?

ಇನ್ನೊಂದು ವರ್ಗಕ್ಕೆ ಒಕ್ಕಲಿಗ ಮತ್ತು ಲಿಂಗಾಯತರ ಸೇರ್ಪಡೆಗೆ ಹೇಳಿದ್ದೆವು

ಕೆಟಗರಿ ಎ – ಬಿ – ಸಿ ಜತೆಗೆ ಇನ್ನೊಂದು ವರ್ಗ ಸೇರಿಸಿ ಎಂದು ನಾವು ಹೇಳಿದ್ದೆವು. ಮುಸ್ಲಿಂ, ಕೊಡವ, ಬಲಿಜ ಸೇರಿದಂತೆ 749ಕ್ಕೂ ಅಧಿಕ ಸಮುದಾಯಗಳು ಕೆಟಗರಿ ಬಿ ಅಡಿ ಬರುತ್ತವೆ. ಈ ಗುಂಪಿನಲ್ಲಿ ಒಕ್ಕಲಿಗ ಮತ್ತು ಲಿಂಗಾಯತರನ್ನು ಸೇರಿಸುವುದರಿಂದ ಸಣ್ಣ ಸಮುದಾಯಗಳಿಗೆ ಅವಕಾಶ ಸಿಗುತ್ತಿಲ್ಲ. ಹೀಗಾಗಿ ಇನ್ನೊಂದು ವರ್ಗ ಮಾಡುವಂತೆ ಶಿಫಾರಸು ಮಾಡಿದ್ದೆವು. ರಾಜಕೀಯ ಪ್ರಾತಿನಿಧ್ಯಕ್ಕೆ ಲಿಂಗಾಯತ ಮತ್ತು ಒಕ್ಕಲಿಗರನ್ನು ಒಂದು ಗುಂಪಿಗೆ ಸೇರಿಸಿ, ಒಬಿಸಿ ಸಣ್ಣ ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯ ಸಿಗಲು ಇನ್ನೊಂದು ಗುಂಪು ಮಾಡಬೇಕು. ಈ ಮೂಲಕ ಎ, ಬಿ, ಸಿ ವರ್ಗಗಳ ಜತೆಗೆ ಡಿ ವರ್ಗವನ್ನು ರಚಿಸುವಂತೆ ನಾವು ವರದಿಯಲ್ಲಿ ಶಿಫಾರಸು ಮಾಡಿದ್ದೆವು. ಹೀಗೆ ಮಾಡುವುದರಿಂದ ಅತಿ ಹಿಂದುಳಿದ ಸಣ್ಣ ಸಮುದಾಯಗಳಿಗೆ ಅನುಕೂಲವಾಗಲಿದೆ. 749 ಜನರಿಗೆ ಒಂದು ಹಣ್ಣು ಕೊಟ್ಟು ತೆಗೆದುಕೊಳ್ಳಿ ಅಂದರೆ ಯಾರು ತೆಗೆದುಕೊಳ್ಳಬೇಕು ಎಂದು ನಿವೃತ್ತ ನ್ಯಾಯಮೂರ್ತಿ ಭಕ್ತವತ್ಸಲ ಪ್ರಶ್ನೆ ಮಾಡಿದರು.

ಮುಂದಿನ ಚುನಾವಣೆಗೆ ಕೆಟಗರಿಯನ್ನು ಹೆಚ್ಚಿಸಲಿ

ಈ ಸಣ್ಣ ಸಮುದಾಯಗಳಿಗೆ ಅನ್ಯಾಯ ಆಗಬಾರದು ಎಂಬ ಕಾರಣಕ್ಕಾಗಿಯೇ ಇನ್ನೊಂದು ಪ್ರವರ್ಗ ಮಾಡಿ ಎಂದು ಹೇಳಿದ್ದೆವು. ಸರ್ಕಾರ ಯಾಕೆ ಒಪ್ಪಿಲ್ಲ ಅನ್ನೋದು ಗೊತ್ತಿಲ್ಲ. ಅದು ನಮಗೆ ಸಂಬಂಧವೂ ಇಲ್ಲ. ನಮ್ಮ ಕೆಲಸವನ್ನು ನಾವು ಪ್ರಾಮಾಣಿಕವಾಗಿ ಮಾಡಿದ್ದೇವೆ. ಶೇಕಡಾ 33ರಷ್ಟು ರಾಜಕೀಯ ಮೀಸಲಾತಿ ಕೊಡಬೇಕು. ಕೂಡಲೇ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯಲಿ. ಕೆಟಗಿರಿ ಎ, ಬಿ ಅಡಿಯಲ್ಲಿ ಚುನಾವಣೆ ಮಾಡಲಿ. ಆದರೆ ಮುಂದಿನ ಚುನಾವಣೆಗೆ ಕೆಟಗರಿಯನ್ನು ಜಾಸ್ತಿ ಮಾಡಬೇಕು. ಸಣ್ಣ ಸಮುದಾಯಗಳಿಗೆ ಅವಕಾಶ ಕೊಡಬೇಕು. ಇಲ್ಲದಿದ್ದರೆ ಬರೀ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯ ಮಾತ್ರ ಅನುಕೂಲ ಪಡೆಯುತ್ತದೆ. ಎಲ್ಲವನ್ನೂ ಕೆಲ ಸಮುದಾಯಗಳು ಪಡೆಯುವುದರಿಂದ ಇತರೆ ಸಣ್ಣ ಸಮುದಾಯಗಳಿಗೆ ಅನ್ಯಾಯ ಆಗುತ್ತದೆ ಎಂದು ನಿವೃತ್ತ ನ್ಯಾಯಮೂರ್ತಿ ಭಕ್ತವತ್ಸಲ ತಿಳಿಸಿದರು.

30-30 ತಿಂಗಳು ಅಧಿಕಾರ ಹಂಚಿಕೆಯೇ ಸರಿ

30-30 ತಿಂಗಳು ಅಧಿಕಾರ ಕೊಡುವುದರಿಂದ ಯಾರೇ ಆದರೂ ಅಧಿಕಾರ ಪಡೆದುಕೊಂಡವರು ಕೆಲಸ ಮಾಡಲು ಅನುಕೂಲವಾಗುತ್ತದೆ. ಜನರು ಯಾಕೆ ಸರ್ಕಾರಕ್ಕೆ ಐದು ವರ್ಷ ಸಮಯ ಕೊಡುತ್ತಾರೆ? ಅದೇ ರೀತಿ ಸ್ಥಳೀಯ ಸಂಸ್ಥೆಗಳು ಅಧ್ಯಕ್ಷ – ಉಪಾಧ್ಯಕ್ಷರಿಗೂ ಅವಕಾಶ ಕೊಡಬೇಕು. ನಮ್ಮ ಕಮಿಟಿ ರಾಜಕೀಯ ಪ್ರಾತಿನಿಧ್ಯಕ್ಕೆ ಕೊಟ್ಟಿರುವ ರಿಪೋರ್ಟ್‌ನಲ್ಲಿ ಈ ಬಗ್ಗೆ ಉಲ್ಲೇಖಿಸಲಾಗಿದೆ. ಚುನಾವಣೆ ಎದುರಿಸುವುದು ಅಷ್ಟು ಸುಲಭವಿಲ್ಲ. ಹಾಗಾಗಿ ಸಣ್ಣ ಸಮುದಾಯಗಳಿಗೆ ರಾಜಕೀಯ ಅನುಭವ ಪಡೆಯಲು ಇದು ಅಗತ್ಯ. ಪ್ರತಿ ಪಂಚಾಯಿತಿಯಿಂದ ಮಾಹಿತಿ ಪಡೆದಿದ್ದೇವೆ. ಸರ್ಕಾರದ ಅಂದಿನ ಮುಖ್ಯ ಕಾರ್ಯದರ್ಶಿಯವರು ನಮಗೆ ಬಹಳ ಅನುಕೂಲಕರ ಮಾಹಿತಿಯನ್ನು ಕೊಟ್ಟಿದ್ದರು ಎಂದು ನಿವೃತ್ತ ನ್ಯಾಯಮೂರ್ತಿ ಭಕ್ತವತ್ಸಲ ಹೇಳಿದರು.

ಇದನ್ನೂ ಓದಿ : Congress Government : ಸರ್ಕಾರಕ್ಕೆ 140 ದಿನ; 2,50,993 ಕೋಟಿ ರೂ. ಬಜೆಟ್‌ನಲ್ಲಿ ಬಿಡುಗಡೆಯಾಗಿದ್ದು ಬೊಗಸೆಯಷ್ಟು!

ಶೇಕಡಾ 33ರಷ್ಟು ಮೀಸಲಾತಿ ಸರಿಯಿದೆ. ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ – ಉಪಾಧ್ಯಕ್ಷ ಮೀಸಲಾತಿ ನಿಗದಿ ಅಧಿಕಾರವನ್ನು ಸಿಎಂ ಅಡಿಯಲ್ಲಿ ಬರುವ ಡಿಪಿಆರ್‌ಗೆ ಕೊಡಬೇಕು ಎಂದು ನಿವೃತ್ತ ನ್ಯಾಯಮೂರ್ತಿ ಭಕ್ತವತ್ಸಲ ತಿಳಿಸಿದರು.

ರಾಜ್ಯ ಸರ್ಕಾರದಿಂದ ಅನುಮೋದನೆ ಆಗಿದ್ದು ಏನು?

ಒಟ್ಟಾರೆ 50ರಷ್ಟು ಮೀಸಲಾತಿ ಮೀರದಂತೆ ಶೇಕಡಾ 33ರಷ್ಟು ರಾಜಕೀಯ ಮೀಸಲಾತಿ ನೀಡುವುದು. ಬಿಬಿಎಂಪಿ ಮೇಯರ್ ಹಾಗೂ ಉಪ ಮೇಯರ್ (BBMP Mayor and Deputy Mayor) ಸ್ಥಾನಕ್ಕೆ ಮೀಸಲಾತಿ ನೀಡುವುದು ಹಾಗೂ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಿರ್ವಹಣೆ ಅಧಿಕಾರವನ್ನು ಡಿಪಿಆರ್ ಅಡಿಯಲ್ಲಿ ತರುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.

ಇದರಿಂದ ರಾಜಕೀಯವಾಗಿ ಏನು ಲಾಭ?

  • ಸ್ಥಳೀಯ ಸಂಸ್ಥೆಗಳ ನಗರ ಹಾಗೂ ಗ್ರಾಮೀಣ ಚುನಾವಣೆಗಳಲ್ಲಿ ಎಸ್‌ಸಿ-ಎಸ್‌ಟಿ ಮೀಸಲು ಜತೆಗೆ ಒಬಿಸಿ ವರ್ಗಕ್ಕೂ ಮೀಸಲಾತಿಯನ್ನು ಇನ್ನು ಮುಂದೆ ಕಲ್ಪಿಸಬೇಕಿದೆ
  • ಒಟ್ಟಾರೆ ಗರಿಷ್ಠ ಶೇ.33ರಷ್ಟು ಸ್ಥಾನಗಳು ಹಿಂದುಳಿದ ವರ್ಗಗಳಿಗೆ ಮೀಸಲಾತಿ ಒದಗಿಸಲು ಅವಕಾಶ ಸಿಗಲಿದೆ.
  • ಶೇ.50ರ ಮೀಸಲು ಮಿತಿಯಲ್ಲಿ ಎಸ್‌ಸಿ-ಎಸ್‌ಟಿ ಮೀಸಲನ್ನು ಹೆಚ್ಚು ಪಡೆಯುವ ಕಡೆ ಕನಿಷ್ಠ ಶೇ.23ರವರೆಗಾದರೂ ಒಬಿಸಿಗೆ ಅವಕಾಶ ಸಿಗುವ ಸಾಧ್ಯತೆ ಇದೆ

ಯಾವೆಲ್ಲ ಕ್ಷೇತ್ರಗಳಲ್ಲಿ ಒಬಿಸಿಗೆ ಮಾನ್ಯತೆ?

  • 6022 ಗ್ರಾಮ ಪಂಚಾಯಿತಿಗಳು
  • 31 ಜಿಲ್ಲಾ ಪಂಚಾಯಿತಿ, 240 ತಾಲೂಕು ಪಂಚಾಯಿತಿ
  • 10 ಮಹಾನಗರ ಪಾಲಿಕೆ, 61 ನಗರಸಭೆ
  • 124 ಪುರಸಭೆ, 115 ಪಟ್ಟಣ ಪಂಚಾಯಿತಿ
  • ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ

ಈ ಕ್ಷೇತ್ರಗಳಲ್ಲಿ ಒಬಿಸಿ ಸಮುದಾಯದವರಿಗೆ ಚುನಾವಣೆಯಲ್ಲಿ ಹೆಚ್ಚಿನ ಮೀಸಲಾತಿ ದೊರೆಯುತ್ತದೆ. ಇದರಿಂದ ರಾಜಕೀಯ ಪ್ರಾತಿನಿಧ್ಯ ಸಿಗುತ್ತಿಲ್ಲ ಎಂಬ ಕೂಗು ನಿವಾರಣೆಯಾಗಲಿದೆ.

ಬಿಬಿಎಂಪಿ ಮೇಯರ್ ಅಥವಾ ಉಪ ಮೇಯರ್ ಆಗಬಹುದು

ಈಗ ಈ ಮೀಸಲಾತಿ ಕಲ್ಪಿಸಿರುವುದರಿಂದ ಬಿಬಿಎಂಪಿ ಮೇಯರ್‌ ಇಲ್ಲವೇ ಉಪ ಮೇಯರ್‌ ಆಗಿ ಹಿಂದುಳಿದ ವರ್ಗದವರಿಗೆ ಅವಕಾಶ ಕಲ್ಪಿಸಬೇಕಾಗುತ್ತದೆ. ಇದರಿಂದ ಮಹಾಪೌರರಾಗಿಯೂ ಪ್ರಾತಿನಿಧ್ಯ ಪಡೆಯುವ ಅವಕಾಶ ಒಬಿಸಿಯವರಿಗೆ ಲಭ್ಯವಾಗಲಿದೆ.

ಯಾವುದಕ್ಕೆ ಸಿಕ್ಕಿಲ್ಲ ಸರ್ಕಾರದ ಒಪ್ಪಿಗೆ?

2027-28ರಲ್ಲಿ ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮುನ್ನ ಹಿಂದುಳಿದ ವರ್ಗಗಳ ಕೆಟಗರಿ ಎ ಮತ್ತು ಬಿ ಜತೆಗೆ ಅಲ್ಪಸಂಖ್ಯಾತರು ಸೇರಿದಂತೆ ಇತರ ಹಿಂದುಳಿದ ವರ್ಗದವರಿಗಾಗಿ ಪರಿಣಾಮಕಾರಿಯಾದ ರಾಜಕೀಯ ಮೀಸಲು ವ್ಯವಸ್ಥೆ ಕಲ್ಪಿಸಲು ಎರಡು ಹೆಚ್ಚುವರಿ ಕೆಟಗರಿಗಳನ್ನು ಸೇರಿಸಿ ಹಿಂದುಳಿದ ವರ್ಗಗಳ ಮರು ವರ್ಗೀಕರಣ ಮಾಡಲು ಕ್ರಮ ಕೈಗೊಳ್ಳಬೇಕೆಂಬ ಶಿಫಾರಸನ್ನು ಸಚಿವ ಸಂಪುಟ ಒಪ್ಪಿಲ್ಲ.

ಬಿಬಿಎಂಪಿ ಕಾಯ್ದೆ 2020ರಂತೆ ಮೇಯರ್ ಮತ್ತು ಉಪಮೇಯ‌ರ್‌ ಸ್ಥಾನಗಳಿಗೆ 30 ತಿಂಗಳು ಕಾಲಾವಧಿ ನಿಗದಿ ಪಡಿಸುವ ವ್ಯವಸ್ಥೆಯನ್ನು ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ ವಿಸ್ತರಿಸಲು ಕರ್ನಾಟಕ ಮುನ್ಸಿಪಲ್ ಕಾಯ್ದೆಯ ಕಲಂ 10ಕ್ಕೆ ತಿದ್ದುಪಡಿ ತರುವುದು ಸೂಕ್ತ ಎಂದು ನ್ಯಾ. ಭಕ್ತವತ್ಸಲ ಆಯೋಗವು ವರದಿಯಲ್ಲಿ ಶಿಫಾರಸು ಮಾಡಿತ್ತು. ಅದನ್ನೂ ಸಹ ತಿರಸ್ಕರಿಸಲಾಗಿದೆ.

ಇದನ್ನೂ ಓದಿ: Cauvery Dispute : ಮೇಕೆದಾಟು ಯೋಜನೆ ಜಾರಿಗೆ ಸರ್ಕಾರ ಸರ್ವ ಸಿದ್ಧತೆ; ಡಿ.ಕೆ. ಶಿವಕುಮಾರ್‌

ಸುಪ್ರೀಂ ಕೋರ್ಟ್‌ ಸೂಚನೆ ಮೇರೆಗೆ ಈ ಕ್ರಮ

ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡುವ ಸಂಬಂಧ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಕೆ. ಭಕ್ತವತ್ಸಲ ನೇತೃತ್ವದ ಆಯೋಗ ಈ ವರದಿಯನ್ನು ನೀಡಿತ್ತು. ಆಯಾ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯವನ್ನು ಖಚಿತಪಡಿಸಿದ ಬಳಿಕವೇ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಇದರನ್ವಯ ಆಯೋಗವನ್ನು ರಚನೆ ಮಾಡಿ ಅಧ್ಯಯನ ನಡೆಸಿ ವರದಿಯನ್ನು ಪಡೆಯಲಾಗಿತ್ತು. ಈಗ ಕೆಲವೊಂದು ತಿದ್ದುಪಡಿಯೊಂದಿಗೆ ವರದಿ ಅಂಗೀಕಾರಗೊಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi : ಇಂದು, ನಾಳೆ ರಾಜ್ಯದಲ್ಲಿ ಮೋದಿಯಿಂದ ಅಬ್ಬರದ ಪ್ರಚಾರ; ಬಹಿರಂಗ ಭಾಷಣದ ವಿವರ ಇಲ್ಲಿದೆ

Narendra Modi: ನರೇಂದ್ರ ಮೋದಿ ಅವರು ಶನಿವಾರ (ಏಪ್ರಿಲ್‌ 27) ರಾತ್ರಿ 10 ಗಂಟೆಗೆ ಬೆಳಗಾವಿಗೆ ಆಗಮಿಸಿದ್ದಾರೆ. ಕುಂದಾ ನಗರಿಯಲ್ಲಿಯೇ ಐಟಿಸಿ ವೆಲ್​ಕಮ್​ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶನಿವಾರ ರಾತ್ರಿ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲು ಲೋಕಸಭೆ ಕ್ಷೇತ್ರದ ವ್ಯಾಪ್ತಿಯ 15 ಮಂದಿಗೆ ಸ್ವಾಗತ ಕೋರಲು ಅವಕಾಶ ನೀಡಲಾಗಿತ್ತು.

VISTARANEWS.COM


on

Narendra modi
Koo

ಬೆಂಗಳೂರು: ಕರ್ನಾಟಕದ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಎರಡನೇ ಹಂತದ ಮತದಾನವು ಮೇ 7ರಂದು ನಡೆಯಲಿದೆ. ಉತ್ತರ ಕರ್ನಾಟಕ ಪ್ರದೇಶದ 14 ಕ್ಷೇತ್ರಗಳಿಗೆ ಈ ಹಂತದಲ್ಲಿ ಚುನಾವಣೆ ನಡೆಯಲಿದೆ. ಹೀಗಾಗಿ ಬಿಜೆಪಿ, ಕಾಂಗ್ರೆಸ್‌ ಸೇರಿ ಎಲ್ಲ ಪಕ್ಷಗಳು ಉತ್ತರ ಕರ್ನಾಟಕ ಭಾಗದ ಕಡೆ ಹೆಚ್ಚು ಒತ್ತು ಕೊಡುತ್ತಿವೆ. ಪಕ್ಷಗಳ ಬಹುತೇಕ ನಾಯಕರು ಉತ್ತರ ಕರ್ನಾಟಕದಲ್ಲಿಯೇ ಬೀಡುಬಿಟ್ಟಿದ್ದಾರೆ. ಎರಡನೇ ಹಂತದ 14 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ರಣತಂತ್ರ ರೂಪಿಸುತ್ತಿದ್ದಾರೆ. ಈ ಹಿನ್ನೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಭಾನುವಾರ (ಏಪ್ರಿಲ್‌ 28) ಹಾಗೂ ಸೋಮವಾರ (ಏಪ್ರಿಲ್‌ 29) ರಾಜ್ಯದಲ್ಲಿ ನರೇಂದ್ರ ಮೋದಿ (Narendra Modi) ಅವರು ಅಬ್ಬರದ ಪ್ರಚಾರ ಕೈಗೊಳ್ಳಲಿದ್ದಾರೆ.

ನರೇಂದ್ರ ಮೋದಿ ಅವರು ಶನಿವಾರ (ಏಪ್ರಿಲ್‌ 27) ರಾತ್ರಿ 10 ಗಂಟೆಗೆ ಬೆಳಗಾವಿಗೆ ಆಗಮಿಸಿದ್ದಾರೆ. ಕುಂದಾ ನಗರಿಯಲ್ಲಿಯೇ ಐಟಿಸಿ ವೆಲ್​ಕಮ್​ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶನಿವಾರ ರಾತ್ರಿ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲು ಲೋಕಸಭೆ ಕ್ಷೇತ್ರದ ವ್ಯಾಪ್ತಿಯ 15 ಮಂದಿಗೆ ಸ್ವಾಗತ ಕೋರಲು ಅವಕಾಶ ನೀಡಲಾಗಿತ್ತು. ಬಾಳೇಶ್ ಚವ್ವನ್ನವರ್, ರಾಜೇಶ್ವರಿ ಒಡೆಯರ್, ಸುಭಾಷ್ ಸಣ್ಣ ವೀರಪ್ಪನವರ್ ಸೇರಿ ಬೆಳಗಾವಿಯ 15 ಹಲವು ಸಮುದಾಯಗಳ ಮುಖಂಡರಿಗೆ ಮೋದಿ ಅವರನ್ನು ಸ್ವಾಗತಿಸಲು ಅವಕಾಶ ಮಾಡಿಕೊಡಲಾತ್ತು.

ಏಪ್ರಿಲ್‌ 28ರಂದು ಎಲ್ಲೆಲ್ಲಿ ರ‍್ಯಾಲಿ?

ಏಪ್ರಿಲ್‌ 28ರಂದು ಬೆಳಗಾವಿಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಸಮಾವೇಶದಲ್ಲಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಇಲ್ಲಿ ಜಗದೀಶ್‌ ಶೆಟ್ಟರ್‌ ಪರ ಮತಯಾಚಿಸಲಿರುವ ಅವರು ಬಳಿಕ 12 ಗಂಟೆಗೆ ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ. ಇನ್ನು ಮಧ್ಯಾಹ್ನ 2 ಗಂಟೆಗೆ ದಾವಣಗೆರೆಯ ಹೈಸ್ಕೂಲ್‌ ಗ್ರೌಂಡ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸಂಜೆ 4 ಗಂಟೆಗೆ ಬಳ್ಳಾರಿಯ ಸಮಾವೇಶದ ಮೂಲಕ ಇಡೀ ದಿನದ ಪ್ರಚಾರಕ್ಕೆ ತೆರೆ ಎಳೆಯಲಿದ್ದಾರೆ.

ಇದನ್ನೂ ಓದಿ: Modi in Karnataka: ಬೆಳಗಾವಿ ಹೋಟೆಲ್‌ನಲ್ಲಿ 36 ಬಗೆಯ ಭಕ್ಷ್ಯ ಭೋಜನ ಇದ್ರೂ ಎಳನೀರು ಮಾತ್ರ ಸೇವಿಸಿದ ಮೋದಿ!

ಏಪ್ರಿಲ್‌ 29ರಂದು ಒಂದೇ ಸಮಾವೇಶ

ಬಳ್ಳಾರಿಯಲ್ಲಿ ಪ್ರಚಾರ ಮುಗಿಸುವ ನರೇಂದ್ರ ಮೋದಿ ಅವರು ಏಪ್ರಿಲ್‌ 29ರಂದು ಬಾಗಲಕೋಟೆಯಲ್ಲಿ ನಡೆಯುವ ಒಂದೇ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಅವರು ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಕರ್ನಾಟಕದಲ್ಲಿ 2ನೇ ಹಂತದ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸುವ ಮೂಲಕ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಬಿಜೆಪಿ ಇಷ್ಟೆಲ್ಲ ಪ್ಲಾನ್‌ ಮಾಡಿದೆ. ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ಮೋದಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅಲ್ಲದೆ, ಯುವ ಸಮುದಾಯಕ್ಕೆ ಮೋದಿ ಅಚ್ಚುಮೆಚ್ಚು. ಇಂತಹ ಯುವ ವರ್ಗದ ಮತಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಸೆಳೆಯಲು ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ.

Continue Reading

ಬೆಂಗಳೂರು

Swiggy fined: ಐಸ್‌ ಕ್ರೀಂ ಡೆಲಿವರಿ ಮಾಡಲು ವಿಫಲ; ಸ್ವಿಗ್ಗಿಗೆ 5000 ರೂ. ದಂಡ ವಿಧಿಸಿದ ಕೋರ್ಟ್!

Swiggy fined: ಸೇವೆಯಲ್ಲಿ ನ್ಯೂನ್ಯತೆ ಮತ್ತು ಮೋಸದ ವ್ಯಾಪಾರ ಮಾಡಿದ ಕಾರಣ ಗ್ರಾಹಕನಿಗೆ 5000 ರೂ ಪರಿಹಾರ ನೀಡಲು ಸ್ವಿಗ್ಗಿ ಸಂಸ್ಥೆಗೆ ಗ್ರಾಹಕ ನ್ಯಾಯಾಲಯ ಸೂಚಿಸಿದೆ.

VISTARANEWS.COM


on

Swiggy fined
Koo

ಬೆಂಗಳೂರು: ಐಸ್‌ ಕ್ರೀಂ ಡೆಲಿವರಿ ಮಾಡಲು ವಿಫಲವಾದ ಸ್ವಿಗ್ಗಿ ಸಂಸ್ಥೆಗೆ (Swiggy fined), ಗ್ರಾಹಕ ನ್ಯಾಯಾಲಯವು ವ್ಯಾಜ್ಯ ವೆಚ್ಚ ಸೇರಿ 5000 ರೂ. ದಂಡ ವಿಧಿಸಿದೆ. 2023ರಲ್ಲಿ ಗ್ರಾಹಕರೊಬ್ಬರು ಸ್ವಿಗ್ಗಿ ಆ್ಯಪ್‌ ಮೂಲಕ ಐಸ್‌ ಕ್ರೀಂ ಬುಕ್‌ ಮಾಡಿದ್ದರು. ಅದರೆ, ಐಸ್‌ ಕ್ರೀಂ ಡೆಲಿವರಿ ಮಾಡುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಗ್ರಾಹಕರೊಬ್ಬರು ನ್ಯಾಯಾಲಯದ ಮೆಟ್ಟಿಲೇರಿದ್ದರು.

ಆರ್ಡರ್ ಮಾಡಿದ ಉತ್ಪನ್ನವನ್ನು ದೂರುದಾರರಿಗೆ ತಲುಪಿಸದಿದ್ದರೂ ಹಣ ಮರುಪಾವತಿ ಮಾಡಿರಲಿಲ್ಲ. ಸ್ವಿಗ್ಗಿ ಕಡೆಯಿಂದ ತಪ್ಪು ನಡೆದಿದೆ ಎಂದು ದೂರುದಾರರು ಸಾಬೀತುಪಡಿಸಿದ್ದಾರೆ. ಇದು ಮೋಸದ ವ್ಯಾಪಾರವಾಗಿದ್ದು, ಗ್ರಾಹಕನಿಗೆ ವ್ಯಾಜ್ಯ ಶುಲ್ಕ 2000 ರೂ. ಹಾಗೂ ಪರಿಹಾರ 3000 ರೂ. ನೀಡಬೇಕು ಎಂದು ಸ್ವಿಗ್ಗಿ ಸಂಸ್ಥೆಗೆ ಕೋರ್ಟ್‌ ಸೂಚನೆ ನೀಡಿದೆ.

2023ರ ಜನವರಿಯಲ್ಲಿ ನಗರದಲ್ಲಿ ಗ್ರಾಹಕರೊಬ್ಬರು, ಸ್ವಿಗ್ಗಿ ಆ್ಯಪ್‌ ಮೂಲಕ ಚಾಕೋಲೆಟ್‌ ಐಸ್‌ ಕ್ರೀಂ ಅನ್ನು ಆರ್ಡರ್‌ ಮಾಡಿದ್ದರು. ಆದರೆ, ಐಸ್‌ ಕ್ರೀಂ ಡೆಲಿವರಿ ಆಗದಿದ್ದರೂ, ತಲುಪಿದೆ ಎಂದು ಸಂದೇಶ ಬಂದಿತ್ತು. ಇದರಿಂದ ಗ್ರಾಹಕ, ನ್ಯಾಯಾಲಯದ ಮೊರೆ ಹೋಗಿದ್ದರು.

ಸ್ವಿಗ್ಗಿ ಸಂಸ್ಥೆಯು, ತಾವು ಗ್ರಾಹಕರು ಮತ್ತು ಥರ್ಡ್-ಪಾರ್ಟಿ ರೆಸ್ಟೋರೆಂಟ್‌ ಅಥವಾ ವ್ಯಾಪಾರಿಗಳ ನಡುವಿನ ಮಧ್ಯವರ್ತಿಯಾಗಿದ್ದೇವೆ. ಡೆಲಿವರಿ ಬಾಯ್‌ ತಪ್ಪಿಗೆ ತಮ್ಮನ್ನು ಹೊಣೆಗಾರನನ್ನಾಗಿ ಮಾಡಲು ಸಾಧ್ಯವಿಲ್ಲ ಮತ್ತು ಆ ಸಮಯದಲ್ಲಿ ಆರ್ಡರ್ ಅನ್ನು ತಲುಪಿಸಲಾಗಿದೆಯೇ ಎಂದು ಪರಿಶೀಲಿಸಲು ಸಾಧ್ಯವಿಲ್ಲ ಎಂದು ಸಮರ್ಥಿಸಿಕೊಂಡಿತ್ತು.

ಇದನ್ನೂ ಓದಿ | MDH, Everest Spices: ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ಗಳ ಮಾಹಿತಿ ಸಂಗ್ರಹಕ್ಕೆ ಮುಂದಾದ ಅಮೆರಿಕ

ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ವಿಜಯಕುಮಾರ್ ಎಂ ಪಾವಲೆ, ವಿ ಅನುರಾಧಾ ಮತ್ತು ರೇಣುಕಾದೇವಿ ದೇಶಪಾಂಡೆ ಅವರನ್ನೊಳಗೊಂಡ ನ್ಯಾಯಪೀಠ, ಹಣ ಮರುಪಾವತಿಗಾಗಿ ಗ್ರಾಹಕ ನೀಡಿದ ಕಾನೂನು ನೋಟಿಸ್‌ಗೆ ಪ್ರತಿಕ್ರಿಯಿಸುವಲ್ಲಿ ಸ್ವಿಗ್ಗಿ ವಿಫಲವಾಗಿದೆ ಎಂದು ಕೋರ್ಟ್‌ ಗಮನಿಸಿದೆ. ಇನ್ನು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಹೊಣೆಗಾರಿಕೆಯಿಂದ ಮಧ್ಯವರ್ತಿಗಳನ್ನು ರಕ್ಷಿಸಲಾಗಿದೆ ಎಂಬ ಸ್ವಿಗ್ಗಿಯ ವಾದವನ್ನು ತಿರಸ್ಕರಿಸಿರುವ ಕೋರ್ಟ್, ಈ ವಿನಾಯಿತಿ ಕೇವಲ ಮಾಹಿತಿಯ ಪ್ರಸಾರಕ್ಕೆ ಸೀಮಿತವಾಗಿದ್ದು, ಸರಕು ಮತ್ತು ಸೇವೆಗಳ ಮಾರಾಟಕ್ಕೆ ಅನ್ವಯಿಸುವುದಿಲ್ಲ ಎಂದು ತಿಳಿಸಿದೆ.

ಸೇವೆಯಲ್ಲಿ ನ್ಯೂನ್ಯತೆ ಮತ್ತು ಮೋಸದ ವ್ಯಾಪಾರ ಮಾಡಿದ ಕಾರಣ ಐಸ್‌ ಕ್ರೀಂಗೆ ನೀಡಿದ್ದ 187 ರೂ. ಮಾತ್ರವಲ್ಲದೇ ವ್ಯಾಜ್ಯ ವೆಚ್ಚ ಹಾಗೂ ಪರಿಹಾರ ಸೇರಿ 5000 ರೂ.ಗಳನ್ನು ಗ್ರಾಹಕನಿಗೆ ನೀಡಲು ಸ್ವಿಗ್ಗಿ ಸಂಸ್ಥೆಗೆ ಸೂಚಿಸಲಾಗಿದೆ.

Continue Reading

ಕರ್ನಾಟಕ

Modi in Karnataka: ಬೆಳಗಾವಿ ಹೋಟೆಲ್‌ನಲ್ಲಿ 36 ಬಗೆಯ ಭಕ್ಷ್ಯ ಭೋಜನ ಇದ್ರೂ ಎಳನೀರು ಮಾತ್ರ ಸೇವಿಸಿದ ಮೋದಿ!

Modi in Karnataka: ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಆಗಮಿಸಿರುವ ಪ್ರಧಾನಿ ಮೋದಿ ಅವರು ಶನಿವಾರ ರಾತ್ರಿ ಬೆಳಗಾವಿಯ ಕಾಕತಿ ಬಳಿಯ ಐಟಿಸಿ ವೆಲ್‌ಕಮ್‌ ಹೋಟೆಲ್‌ನಲ್ಲಿ ವಾಸ್ತವ್ಯ ಮಾಡಿದ್ದಾರೆ.

VISTARANEWS.COM


on

Koo

ಬೆಳಗಾವಿ: ಎರಡು ದಿನಗಳ ಚುನಾವಣೆ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ (Modi in Karnataka) ಅವರು ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ಶನಿವಾರ ರಾತ್ರಿ ವಾಸ್ತವ್ಯ ಹೂಡಿದ್ದಾರೆ. ಅವರಿಗಾಗಿ 36 ವಿಧದ ಭಕ್ಷ್ಯ ಭೋಜನಗಳನ್ನು ಸಿದ್ಧಪಡಿಸಲಾಗಿತ್ತು. ಆದರೆ, ಮೋದಿ ಅವರು ಎಳನೀರು ಮಾತ್ರ ಸೇವಿಸಿ ನಿದ್ರೆಗೆ ಜಾರಿದ್ದಾರೆ.

ಬೆಳಗಾವಿಯ ಕಾಕತಿ ಬಳಿಯ ಐಟಿಸಿ ವೆಲ್‌ಕಮ್‌ ಹೋಟೆಲ್‌ನಲ್ಲಿ ಪ್ರಧಾನಿ ಮೋದಿ ಅವರು ವಾಸ್ತವ್ಯವಿದ್ದು, ಅವರಿಗಾಗಿ ಜೋಳದ ರೊಟ್ಟಿ, ರಾಗಿ ಮುದ್ದೆ, ಟೊಮ್ಯಾಟೊ ಸಾರು ಸೇರಿ 36 ಖಾದ್ಯಗಳನ್ನು ಹೋಟೆಲ್ ಸಿಬ್ಬಂದಿ ತಯಾರಿಸಿದ್ದರು. ಆದರೆ ರಾತ್ರಿ ಭೋಜನ ತಿರಸ್ಕರಿಸಿರುವ ಪ್ರಧಾನಿ ಅವರು ಎಳನೀರು ಮಾತ್ರ ಸೇವಿಸಿ ನಿದ್ರೆಗೆ ಜಾರಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ | Lok Sabha Election : ಎನ್​ಡಿಎಗೆ ಶುಭ ಶಕುನ : 2ನೇ ಹಂತದ ಮತದಾನದ ಬಳಿಕ ಪ್ರಧಾನಿ ಮೋದಿ ಪ್ರತಿಕ್ರಿಯೆ ಹೀಗಿತ್ತು

ಇನ್ನು ಪ್ರಧಾನಿ ಮೋದಿ ಅವರು ಐಟಿಸಿ ವೆಲ್‌ಕಮ್ ಹೋಟೆಲ್‌ಗೆ ಆಗಮಿಸುವ ವೇಳೆ ರಸ್ತೆ ಇಕ್ಕೆಲಗಳಲ್ಲಿ ನೂರಾರು ಅಭಿಮಾನಿಗಳು ಜಮಾಯಿಸಿ ಮೋದಿ ಪರ ಜೈಕಾರಗಳನ್ನು ಕೂಗಿದರು. ಈ ವೇಳೆ ಮೋದಿ ಅವರು ಮುಗುಳ್ನಗುತ್ತಾ ಜನರತ್ತ ಕೈಬೀಸಿ ಹೋಟೆಲ್‌ನೊಳಗೆ ಹೋದರು.

ಪ್ರಧಾನಿಗೆ ಕಾರ್ಯಕರ್ತರು ಸೇರಿ ಗಣ್ಯರ ಸ್ವಾಗತ

ಲೋಕಸಭಾ ಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ ಅವರಿಗೆ ಬಿಜೆಪಿ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌, ಸಂಸದ ಅಣ್ಣಾಸಾಬ್ ಜೊಲ್ಲೆ, ಶಾಸಕಿ ಶಶಿಕಲಾ ‌ಜೊಲ್ಲೆ ಸೇರಿ ಗಣ್ಯರು ಸ್ವಾಗತ ಕೋರಿದರು.

ಮೋದಿ ಅವರನ್ನು ಸ್ವಾಗತಿಸಲು ಬಿಜೆಪಿ ನಾಯಕರ ಜತೆಗೆ ಲೋಕಸಭೆ ಕ್ಷೇತ್ರದ ವ್ಯಾಪ್ತಿಯ 15 ಕಾರ್ಯಕರ್ತರಿಗೆ ಅವಕಾಶ ನೀಡಲಾಗಿತ್ತು. ಬಾಳೇಶ್ ಚವ್ವನ್ನವರ್, ರಾಜೇಶ್ವರಿ ಒಡೆಯರ್, ಸುಭಾಷ್ ಸಣ್ಣ ವೀರಪ್ಪನವರ್ ಸೇರಿ ಬೆಳಗಾವಿಯ 15 ಹಲವು ಸಮುದಾಯಗಳ ಮುಖಂಡರು ಮೋದಿ ಅವರನ್ನು ಸ್ವಾಗತಿಸಿದರು.

ಬೆಳಗಾವಿ, ಶಿರಸಿ, ಬಳ್ಳಾರಿಯಲ್ಲಿ ಭಾನುವಾರ ಪ್ರಚಾರ

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಎರಡನೇ ಹಂತದ ಮತದಾನವು ಮೇ 7ರಂದು ನಡೆಯಲಿದ್ದು, ಬಿಜೆಪಿ, ಕಾಂಗ್ರೆಸ್‌ ಸೇರಿ ಎಲ್ಲ ಪಕ್ಷಗಳು ಉತ್ತರ ಕರ್ನಾಟಕ ಭಾಗದ ಕಡೆ ಹೆಚ್ಚು ಒತ್ತು ಕೊಡುತ್ತಿವೆ. ಪಕ್ಷಗಳ ಬಹುತೇಕ ನಾಯಕರು ಉತ್ತರ ಕರ್ನಾಟಕದಲ್ಲಿಯೇ ಬೀಡುಬಿಟ್ಟಿದ್ದಾರೆ. ಎರಡನೇ ಹಂತದ 14 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ರಣತಂತ್ರ ರೂಪಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಭಾನುವಾರ (ಏಪ್ರಿಲ್‌ 28) ಹಾಗೂ ಸೋಮವಾರ (ಏಪ್ರಿಲ್‌ 29) ರಾಜ್ಯದಲ್ಲಿ ನರೇಂದ್ರ ಮೋದಿ (Narendra Modi) ಅವರು ಅಬ್ಬರದ ಪ್ರಚಾರ ಕೈಗೊಳ್ಳಲಿದ್ದಾರೆ.

ಏಪ್ರಿಲ್‌ 28ರಂದು ಎಲ್ಲೆಲ್ಲಿ ರ‍್ಯಾಲಿ?

ಏಪ್ರಿಲ್‌ 28ರಂದು ಬೆಳಗಾವಿಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಸಮಾವೇಶದಲ್ಲಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಇಲ್ಲಿ ಜಗದೀಶ್‌ ಶೆಟ್ಟರ್‌ ಪರ ಮತಯಾಚಿಸಲಿರುವ ಅವರು ಬಳಿಕ 12 ಗಂಟೆಗೆ ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ. ಇನ್ನು ಮಧ್ಯಾಹ್ನ 2 ಗಂಟೆಗೆ ದಾವಣಗೆರೆಯ ಹೈಸ್ಕೂಲ್‌ ಗ್ರೌಂಡ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸಂಜೆ 4 ಗಂಟೆಗೆ ಬಳ್ಳಾರಿಯ ಸಮಾವೇಶದ ಮೂಲಕ ಇಡೀ ದಿನದ ಪ್ರಚಾರಕ್ಕೆ ತೆರೆ ಎಳೆಯಲಿದ್ದಾರೆ.

ಇದನ್ನೂ ಓದಿ: Zameer Ahmed Khan‌: ಸಚಿವ ಜಮೀರ್ ಅಹ್ಮದ್ ರೋಷಾವೇಶದ ಭಾಷಣಕ್ಕೆ ಗಾಜು ಪೀಸ್‌ ಪೀಸ್; ಇಲ್ಲಿದೆ ವಿಡಿಯೊ

ಏಪ್ರಿಲ್‌ 29ರಂದು ಒಂದೇ ಸಮಾವೇಶ

ಬಳ್ಳಾರಿಯಲ್ಲಿ ಪ್ರಚಾರ ಮುಗಿಸುವ ನರೇಂದ್ರ ಮೋದಿ ಅವರು ಏಪ್ರಿಲ್‌ 29ರಂದು ಬಾಗಲಕೋಟೆಯಲ್ಲಿ ನಡೆಯುವ ಒಂದೇ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಅವರು ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಕರ್ನಾಟಕದಲ್ಲಿ 2ನೇ ಹಂತದ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸುವ ಮೂಲಕ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಬಿಜೆಪಿ ಇಷ್ಟೆಲ್ಲ ಪ್ಲಾನ್‌ ಮಾಡಿದೆ. ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ಮೋದಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅಲ್ಲದೆ, ಯುವ ಸಮುದಾಯಕ್ಕೆ ಮೋದಿ ಅಚ್ಚುಮೆಚ್ಚು. ಇಂತಹ ಯುವ ವರ್ಗದ ಮತಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಸೆಳೆಯಲು ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ.

Continue Reading

ಪ್ರಮುಖ ಸುದ್ದಿ

Hassan Pen Drive Case: ಎಸ್‌ಐಟಿ ತನಿಖೆ ಆದೇಶಕ್ಕೂ ಮುನ್ನವೇ ವಿದೇಶಕ್ಕೆ ತೆರಳಿದ ಪ್ರಜ್ವಲ್ ರೇವಣ್ಣ!

Hassan Pen Drive Case: ಹಾಸನದ ಅಶ್ಲೀಲ ವಿಡಿಯೊ ತುಣುಕು ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆಗೆ ಆದೇಶ ಹೊರಡಿಸಿದೆ. ಇದಕ್ಕೂ ಮೊದಲೇ ಸಂಸದ ವಿದೇಶಕ್ಕೆ ಹೋಗಿದ್ದಾರೆ.

VISTARANEWS.COM


on

Hassan Pen Drive Case
Koo

ದೇವನಹಳ್ಳಿ: ಹಾಸನದ ಅಶ್ಲೀಲ ವಿಡಿಯೊ ತುಣುಕು ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ಶನಿವಾರ ರಾತ್ರಿ ಎಸ್‌ಐಟಿ ರಚನೆಗೆ ಆದೇಶ ಹೊರಡಿಸಿದೆ. ಆದರೆ, ಇದಕ್ಕೂ ಮೊದಲೇ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Hassan Pen Drive Case) ಅವರು ವಿದೇಶಕ್ಕೆ ಹೋಗಿರುವುದು ಕಂಡುಬಂದಿದೆ. ಶನಿವಾರ ಮುಂಜಾನೆ ಮೂರು ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆ.

LH 755 ಲುಫ್ತಾನ್ಸಾ (Lufthansa airlines) ಏರ್‌ಲೈನ್ಸ್ ಮೂಲಕ ಕೆಐಎಎಲ್‌ನಿಂದ ಜರ್ಮನಿಯ ಫ್ರಾಂಕ್ ಫರ್ಟ್‌ಗೆ ಪ್ರಜ್ವಲ್‌ ರೇವಣ್ಣ ಅವರು ಹೋಗಿದ್ದಾರೆ ಎಂದು ತಿಳಿದುಬಂದಿದೆ. ಸರ್ಕಾರವು ಎಸ್‌ಐಟಿ ತನಿಖೆಗೆ ಆದೇಶ ಮಾಡುವ ಮುಂಚೆಯೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿದ್ದಾರೆ.

ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರು ಸ್ಪರ್ಧಿಸಿರುವ ಹಾಸನ ಸೇರಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆದಿತ್ತು. ಚುನಾವಣೆ ಮುಗಿದ ಹಿನ್ನೆಲೆಯಲ್ಲಿ ಅವರು ವಿದೇಶಕ್ಕೆ ಹೋಗಿರಬಹುದು ಎನ್ನಲಾಗುತ್ತಿದೆ.

ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ

ಬೆಂಗಳೂರು: ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಪ್ರಕರಣದ ತನಿಖೆಗೆ ಸರ್ಕಾರ ಎಸ್​ಐಟಿ ತಂಡ ರಚಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹಲವಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲಾಗಿರುವ ಪೆನ್​ಡ್ರೈವ್ (Hasan pen drive cas) ಒಂದು ಬಹಿರಂಗಗೊಂಡಿದೆ. ಅದರ ಬಗ್ಗೆ ತನಿಖೆ ನಡೆಸುವುದಾಗಿ ಅವರು ಹೇಳಿದ್ದಾರೆ. ಈ ಕುರಿತು ಸಿಎಂ ಶನಿವಾರ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ.

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರದಿಂದ ತೀರ್ಮಾನ ಮಾಡಲಾಗಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ ಎಂದು ಸಿಎಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಮಧ್ಯೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಚಲನ ಮೂಡಿಸಿದ್ದ ಪೆನ್​ ಡ್ರೈವ್ ಪ್ರಕರಣ

ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್​ ರೇವಣ್ಣ ಸೇರಿದೆ ಎನ್ನಲಾದ ರಾಸಲೀಲೆಯ ಫೋಟೋ ಮತ್ತು ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಕೆಲವು ದಿನಗಳ ಹಿಂದೆ ಬಹಿರಂಗೊಂಡಿತ್ತು. ಏಕಾಏಕಿ ಈ ಪೆನ್ ಡ್ರೈವ್ ಬಗ್ಗೆ ಚರ್ಚೆ ಆರಂಭವಾಗಿದ್ದು ಈ ಕುರಿತು ಸಾಕಷ್ಟು ಊಹಾಪೋಹಗಳು ಎದ್ದಿವೆ. ವಿಡಿಯೋಗಳನ್ನು ಅತ್ಯಾಧುನಿಕ ಡೀಪ್ ಫೇಕ್ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಪ್ರತಿಪಾದಿಸಲಾಗುತ್ತಿದೆ. ವಿಡಿಯೊ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ.

ಇದನ್ನೂ ಓದಿ: Zameer Ahmed Khan‌: ಸಚಿವ ಜಮೀರ್ ಅಹ್ಮದ್ ರೋಷಾವೇಶದ ಭಾಷಣಕ್ಕೆ ಗಾಜು ಪೀಸ್‌ ಪೀಸ್; ಇಲ್ಲಿದೆ ವಿಡಿಯೊ

ಚುನಾವಣೆಯ ಪ್ರಚಾರದ ಭರಾಟೆ ಆರಂಭವಾಗಿ ಕೊನೇ ಹಂತದಲ್ಲಿ ರಾಸಲೀಲೆಯ ವಿಡಿಯೋಗಳು ಬಹಿರಂಗಗೊಂಡಿವೆ. ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದರು. ಇದೀಗ ಸಿಎಂ ತನಿಖೆಗೆ ಆದೇಶ ನೀಡಿದ್ದಾರೆ.

ಮಹಿಳಾ ಆಯೋಗದ ಪತ್ರ ಇಲ್ಲಿದೆ

ಈ ಪೆನ್‌ಡ್ರೈನಲ್ಲಿ ಸಾವಿರಾರು ವಿಡಿಯೋಗಳಿವೆ ಎನ್ನಲಾಗುತ್ತಿದೆ. ಪ್ರಜ್ವಲ್​ ಅವರು ತನ್ನ ಬಳಿ ಸಹಾಯ ಕೇಳಿಕೊಂಡು ಬರುವ ಮಹಿಳೆಯರನ್ನು ತನ್ನ ಲೈಂಗಿಕ ತೃಷೆಗೆ ಬಳಸಿಕೊಳ್ಳುತ್ತಿದ್ದರು ಎಂಬುದಾಗಿ ಹೇಳಲಾಗುತ್ತಿದೆ. ಅಲ್ಲದೆ, ಲೈಂಗಿಕ ಕ್ರಿಯೆಯ ವಿಡಿಯೊಗಳನ್ನು ಮಾಡಿಟ್ಟುಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ. ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ವಿಡಿಯೋ ತುಣುಕುಗಳಲ್ಲಿ ಕೆಲವು ಸಂಘಟನೆಗಳಿಗೆ ಸೇರಿದ ಮಹಿಳೆಯರು, ಅಭ್ಯರ್ಥಿಯ ಪಕ್ಷದ ಮುಖಂಡರ ಪತ್ನಿಯರು ಇದ್ದಾರೆ. ಮನೆ ಕೆಲಸದ ಮಹಿಳೆಯರೂ ಇದ್ದಾರೆ ಎಂಬ ಚರ್ಚೆ ಬಿರುಸಿನಿಂದ ನಡೆದಿದೆ.

ಈ ಹಿಂದೆ ಹಾಸನದ ವಕೀಲ ದೇವರಾಜೇಗೌಡ ಎಂಬುವವರು ಅಭ್ಯರ್ಥಿಯ ಹಲವು ಅಶ್ಲೀಲ ವಿಡಿಯೋಗಳು ತಮ್ಮ ಬಳಿ ಇವೆ ಎಂದು ಹೇಳಿಕೆ ನೀಡಿದ್ದರು. ಆ ವಿಡಿಯೋಗಳನ್ನು ತಾವು ಬಹಿರಂಗಗೊಳಿಸಿಲ್ಲ ಎಂದು ಸ್ಪಷ್ಟನೆಯನ್ನೂ ನೀಡಿದ್ದಾರೆ.

Continue Reading
Advertisement
Narendra modi
ದೇಶ37 seconds ago

Narendra Modi : ಇಂದು, ನಾಳೆ ರಾಜ್ಯದಲ್ಲಿ ಮೋದಿಯಿಂದ ಅಬ್ಬರದ ಪ್ರಚಾರ; ಬಹಿರಂಗ ಭಾಷಣದ ವಿವರ ಇಲ್ಲಿದೆ

Summer Food Tips
ಆರೋಗ್ಯ24 mins ago

Summer Food Tips: ಬೇಸಿಗೆಯಲ್ಲಿ ಈ 8 ಆಹಾರಗಳಿಂದ ದೂರ ಇರಿ!

Dina Bhavishya
ಭವಿಷ್ಯ1 hour ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Swiggy fined
ಬೆಂಗಳೂರು6 hours ago

Swiggy fined: ಐಸ್‌ ಕ್ರೀಂ ಡೆಲಿವರಿ ಮಾಡಲು ವಿಫಲ; ಸ್ವಿಗ್ಗಿಗೆ 5000 ರೂ. ದಂಡ ವಿಧಿಸಿದ ಕೋರ್ಟ್!

Vistara Editorial
ಪ್ರಮುಖ ಸುದ್ದಿ7 hours ago

ವಿಸ್ತಾರ ಸಂಪಾದಕೀಯ: ಭಾರತದ ಉತ್ಪನ್ನಗಳ ರಫ್ತಿಗೆ ಕುಖ್ಯಾತಿ ಅಂಟದಿರಲಿ

ಕರ್ನಾಟಕ7 hours ago

Modi in Karnataka: ಬೆಳಗಾವಿ ಹೋಟೆಲ್‌ನಲ್ಲಿ 36 ಬಗೆಯ ಭಕ್ಷ್ಯ ಭೋಜನ ಇದ್ರೂ ಎಳನೀರು ಮಾತ್ರ ಸೇವಿಸಿದ ಮೋದಿ!

IPL 2024
ಪ್ರಮುಖ ಸುದ್ದಿ7 hours ago

IPL 2024 : ಲಕ್ನೊ ವಿರುದ್ಧ ರಾಜಸ್ಥಾನ್​ಗೆ 7 ವಿಕೆಟ್​ ಭರ್ಜರಿ ಜಯ, ಪ್ಲೇಆಫ್​ ಹೊಸ್ತಿಲಲ್ಲಿ ಸಂಜು ಬಳಗ

CBI Raid
ದೇಶ7 hours ago

CBI Raid: ಸಂದೇಶ್‌ಖಾಲಿ ಟಿಎಂಸಿ ನಾಯಕನ ಆಪ್ತನ ಮನೆಯಿಂದ ವಶಪಡಿಸಿಕೊಂಡ ಶಸ್ತ್ರಾಸ್ತ್ರದ ಮೂಲ ಪತ್ತೆ

Hassan Pen Drive Case
ಪ್ರಮುಖ ಸುದ್ದಿ7 hours ago

Hassan Pen Drive Case: ಎಸ್‌ಐಟಿ ತನಿಖೆ ಆದೇಶಕ್ಕೂ ಮುನ್ನವೇ ವಿದೇಶಕ್ಕೆ ತೆರಳಿದ ಪ್ರಜ್ವಲ್ ರೇವಣ್ಣ!

KL Rahul
ಕ್ರಿಕೆಟ್7 hours ago

KL Rahul : ಐಪಿಎಲ್​ನಲ್ಲಿ ಆರಂಭಿಕನಾಗಿ 4000 ರನ್ ಪೂರೈಸಿದ ಕೆಎಲ್ ರಾಹುಲ್; ಈ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 hour ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202414 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ18 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ3 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ3 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

ಟ್ರೆಂಡಿಂಗ್‌