inside story mtb nagaraju asked ticket for sonInside Story: ಬರಗಾಲದಲ್ಲಿ ಎರಡು ಬೆಳೆ ತೆಗೆಯೋ ಎಂಟಿಬಿ ಐಡಿಯಾಕ್ಕೆ ಹೌಹಾರಿದ ಯಡಿಯೂರಪ್ಪ!: ರೋಲ್ಸ್ ರಾಯ್ಸ್ ಏರಿ ಹೊರಟ ನಾಗರಾಜು - Vistara News

ಕರ್ನಾಟಕ

Inside Story: ಬರಗಾಲದಲ್ಲಿ ಎರಡು ಬೆಳೆ ತೆಗೆಯೋ ಎಂಟಿಬಿ ಐಡಿಯಾಕ್ಕೆ ಹೌಹಾರಿದ ಯಡಿಯೂರಪ್ಪ!: ರೋಲ್ಸ್ ರಾಯ್ಸ್ ಏರಿ ಹೊರಟ ನಾಗರಾಜು

ನನಗೆ ಈ ಬಾರಿ ಎಂಎಲ್‌ಎ ಟಿಕೆಟ್ ಬೇಡ, ಕ್ಷೇತ್ರ ತ್ಯಾಗ ಮಾಡ್ತೇನೆ ಎಂಬ ಎಂಟಿಬಿ ನಾಗರಾಜು ವೈಯಕ್ತಿಕ ಲೆಕ್ಕಾಚಾರ ಬೇರೆಯೇ ಇದೆ!

VISTARANEWS.COM


on

inside-story-mtb-nagaraju-asked-ticket-for-son
ಪ್ರಾತಿನಿಧಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳಲ್ಲಿ ಹೊಸಕೋಟೆಯ ಎಂಟಿಬಿ ನಾಗರಾಜ್ ಸಿರಿವಂತರಲ್ಲಿ ಸಿರಿವಂತರು. ಅವರ ಘೋಷಿತ ಆಸ್ತಿಯೇ 1,224 ಕೋಟಿ ರೂಪಾಯಿ. ಹೀಗಿರುವ ನಾಗರಾಜು ವ್ಯವಹಾರದಲ್ಲಿ ಬಹಳ ಚಾಣಾಕ್ಷ.

ದೇವರ ಜಾತ್ರೆಯಲ್ಲಿ ಬಾಯಿಗೆ ನಿಂಬೆ ಹಣ್ಣು ಇಟ್ಟುಕೊಂಡು ಸ್ಟೆಪ್ ಹಾಕುವ ನಾಗರಾಜು ಹಣಕಾಸಿನ ವಿಚಾರದಲ್ಲಿ ಒಂದೊಂದು ಸ್ಟೆಪ್ಪನ್ನೂ ಲೆಕ್ಕಾಚಾರ ಮಾಡಿಯೇ ಇಡೋದು. ಆದರೆ ಏಕೋ 2019ರಲ್ಲಿ ಅದೃಷ್ಟ ಕೈ ಕೊಟ್ಟಿತು.
ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿಯಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ನಾಗರಾಜು ವಿರುದ್ಧ, ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡರ ಮಗ ಶರತ್ ಬಚ್ಚೇಗೌಡ ಬಂಡಾಯ ನಿಂತು ಗೆದ್ದುಬಿಟ್ಟರು. ಈಗ ಶರತ್ ಬಚ್ಚೇಗೌಡ ಕಾಂಗ್ರೆಸ್‌ನಲ್ಲಿದ್ದಾರೆ.

ಉಪ ಚುನಾವಣೆಯಲ್ಲಿ ಸೋತ ಎಂಟಿಬಿಯವರನ್ನು ವಿಧಾನ ಪರಿಷತ್ ಸದಸ್ಯರಾಗಿ ಮಾಡಿ ಸಚಿವ ಸ್ಥಾನ ನೀಡಿದ್ದು ಬಿ.ಎಸ್. ಯಡಿಯೂರಪ್ಪ. ಯಡಿಯೂರಪ್ಪ ಅವರನ್ನು ನಂಬಿದರೆ ಕೈಬಿಡಲ್ಲ ಎನ್ನೋ ಮಾತನ್ನು ಅವರು ಉಳಿಸಿಕೊಂಡಿದ್ದರು. ಎಂಟಿಬಿ ಅವಧಿ 2026ರ ಜೂನ್ 30ರವರೆಗೂ, ಅಂದರೆ ಇನ್ನೂ ಮೂರು ವರ್ಷ ಇದೆ.
ಈ ಬಾರಿ ಹೊಸಕೋಟೆಯಿಂದ ಯಾರನ್ನಾದರೂ ಅಭ್ಯರ್ಥಿ ಮಾಡೋಣ, ಹಾಗೊಂದು ವೇಳೆ ಪರಿಷತ್‌ಗೆ ರಾಜೀನಾಮೆ ಕೊಡಿಸಿ ಎಂಟಿಬಿಗೇ ಟಿಕೆಟ್ ಕೊಡಿಸೋಣ ಅನ್ನೋ ಲೆಕ್ಕಾಚಾರದಲ್ಲಿ ಬಿಜೆಪಿ ನಾಯಕರಿದ್ದರು. ಅದೇನೊ ಉಪಚುನಾವಣೆಯಾಗಿತ್ತು, ಬಂಡಾಯ ಅಭ್ಯರ್ಥಿಗೆ ಕಾಂಗ್ರೆಸ್ ಬೆಂಬಲ ನೀಡಿ ಶರತ್ ಗೆದ್ದುಬಿಟ್ಟರು. ಆದರೆ ಈ ಬಾರಿ ಶರತ್ ಕಾಂಗ್ರೆಸ್ ನಿಂದಲೇ ಸ್ಪರ್ಧಿಸಬಹುದು. ನಾಗರಾಜು ಹೇಗಿದ್ದರೂ ಹಣ ಇರುವ ಮನುಷ್ಯ, ಗೆದ್ದುಕೊಂಡು ಬರ್ತಾರೆ ಎನ್ನೊ ಚಿಂತನೆ ಇತ್ತು.

ಆದರೆ ಶನಿವಾರ ದಿಢೀರನೆ ಬಿ.ಎಸ್. ಯಡಿಯೂರಪ್ಪ ಮನೆಗೆ ಹೋದ ಎಂಟಿಬಿ, ಅಚ್ಚರಿಯ ನಿರ್ಧಾರ ಪ್ರಕಟಿಸಿದ್ದಾರೆ. ಅವತ್ತು ಸಂಜೆಯೇ ನವದೆಹಲಿಯಲ್ಲಿ ಟಿಕೆಟ್ ಆಯ್ಕೆ ಸಮಿತಿ ಸಭೆಗೆ ಹೊರಡುವ ತರಾತುರಿಯಲ್ಲಿದ್ದ ಬಿ.ಎಸ್. ಯಡಿಯೂರಪ್ಪ ಮಾತನಾಡಿಸಿದ್ದಾರೆ. ಈ ಬಾರಿ ನನಗೆ ಟಿಕೆಟ್ ಬೇಡ. ನನ್ನ ಮಗನಿಗೆ ಕೊಟ್ಟುಬಿಡಿ. ನಾನು ಕ್ಷೇತ್ರ ತ್ಯಾಗ ಮಾಡಿಬಿಡುತ್ತೇನೆ ಎಂದು ಹೇಳಿದ್ದಾರೆ.

ಇದೇನು ಹೊಸ ವರಸೆ ಎಂದವರೇ ಯಡಿಯೂರಪ್ಪ ತಮ್ಮ ಜೆರ್ಸಿಯ ಜೇಬಿನಲ್ಲಿದ್ದ ಚೀಟಿಯನ್ನು ಹೊರಗೆ ತೆಗೆದಿದ್ದಾರೆ. ನೋಡಿದರೆ ಹೊಸಕೋಟೆಗೆ ಎಂಟಿಬಿ ನಾಗರಾಜ್ ಹೆಸರನ್ನೇ ಬರೆದುಕೊಂಡದ್ದಿದೆ. ಅದ್ಯಾಕಪ್ಪ ಈಗ ನಿರ್ಧಾರ ಬದಲಾಯಿಸಿದೇ ಎಂದು ಬಿಎಸ್ವೈ ಕೇಳಿದ್ದಾರೆ.
ಶರತ್ ಯುವಕರಿದ್ದಾರೆ, ಈಗ ಕ್ಷೇತ್ರದಲ್ಲಿ ಯುವಕರ ಹವಾ ಜೋರಾಗಿದೆ. ನನ್ನ ಮಗನೂ ಯುವಕನಿದ್ದಾನೆ. ಅವನು ನಿಂತರೆ ಗೆಲ್ಲೋ ಸಾಧ್ಯತೆ ಹೆಚ್ಚು. ಹಾಗಾಗಿ ಅವನಿಗೇ ಟಿಕೆಟ್ ಕೊಟ್ಟುಬಿಡಿ ಎಂದಿದ್ದಾರೆ. ಪ್ರಾರಂಭದಲ್ಲಿ ಹೌದು ಎನ್ನುವಂತೆ ತಲೆಯಾಡಿಸಿದ ಯಡಿಯೂರಪ್ಪ, ಇವತ್ತು ಡೆಲ್ಲಿಗೆ ಹೋಗ್ತಾ ಇದ್ದೀನಿ. ಅಲ್ಲಿ ಈ ವಿಚಾರ ಪ್ರಸ್ತಾಪ ಮಾಡ್ತೀನಿ, ಏನಾಗುತ್ತೆ ನೋಡೋಣ ಎಂದು ಹೇಳಿ ಕಳಿಸಿದ್ದಾರೆ. ಹೊರಗೆ ಬಂದ ಎಂಟಿಬಿ ಕಪ್ಪು ಕೂಲಿಂಗ್ ಗ್ಲಾಸ್ ಏರಿಸಿಕೊಂಡು, ಅವತ್ತಿನ್ನೂ ಗ್ಯಾರೇಜ್‌ನಿಂದ ಹೊರಕ್ಕೆ ತಂದಿದ್ದ ರೋಲ್ಸ್ ರಾಯ್ಸ್ ಕಾರಿನಲ್ಲಿ ಹೊರಟುಬಿಟ್ಟಿದ್ದಾರೆ.

ಆಗಲೇ ಹೇಳಿದಂತೆ ಎಂಟಿಬಿ ಪಕ್ಕಾ ವ್ಯವಹಾರಸ್ಥ. 2019ರಲ್ಲಿ ಉಪಚುನಾವಣೆಗೆ ನಿಂತಾಗ ಎಂಟಿಬಿ ಅಣ್ಣ ಪಿಳ್ಳಣ್ಣ ಅವರೇ ವಾಗ್ದಾಳಿ ನಡೆಸಿದ್ದರು. ಈ ಹಿಂದೆಲ್ಲ, ನನ್ನ ಎದೆಯಲ್ಲಿ ಸಿದ್ದರಾಮಯ್ಯ ಇದ್ದಾರೆ ಎನ್ನುತ್ತಿದ್ದ. ಆಮೇಲೆ, ಕ್ಷೇತ್ರದ ಜನರೇ ನನ್ನ ಎದೆಯಲ್ಲಿದ್ದಾರೆ ಎಂದ. ಈಗ ನೋಡಿದರೆ ಯಡಿಯೂರಪ್ಪ ಮಾತ್ರ ನನ್ನ ಹೃದಯದಲ್ಲಿದ್ದಾರೆ ಎನ್ನುತ್ತಿದ್ದಾನೆ. ಅವನಿಗೆ ಯಾವ ಅಂಜಿಕೆಯೂ ಇಲ್ಲ. ಒಂದು ರೂಪಾಯಿಯನ್ನೂ ಬಿಡಲ್ಲ. ಕುರಿ ಕಡಿಯೋನು ಬೇಕಾದರೆ ಒಂದು ನಿಮಿಷ ಯೋಚನೆ ಮಾಡ್ತಾನೆ. ಆದರೆ ಇವನು ಮಾತ್ರ ಯೋಚನೇನೂ ಮಾಡಲ್ಲ. ಇವನ ಹತ್ತಿರ ಹುಷಾರಾಗಿರಪ್ಪ ಅಂತ 95 ವರ್ಷ ಬದುಕಿದ್ದ ನಮ್ಮ ತಂದೆ ಹೇಳ್ತಾ ಇದ್ದರು ಎಂದಿದ್ದರು!

ಇಂತಹ ವ್ಯವಹಾರಸ್ಥ ಎಂಟಿಬಿ ನಾಗರಾಜು ಪ್ಲ್ಯಾನ್ ಬೇರೆಯೇ ಇದೆ. ಈಗ ಹೇಗಿದ್ದರೂ ಇನ್ನೂ ಮೂರು ವರ್ಷ ಪರಿಷತ್ ಅವಧಿ ಇದೆ. ಶರತ್ ಎದುರು ಈಗಾಗಲೆ ಒಂದು ಸಾರಿ ಸೋತಾಗಿದೆ. ಈಗ ಮತ್ತೆ ಎಲೆಕ್ಷನ್ ನಿಲ್ಲಬೇಕೆಂದರೆ, ಪರಿಷತ್‌ಗೆ ರಾಜೀನಾಮೆ ನೀಡಿ ಎಂದು ಪಕ್ಷ ಹೇಳುತ್ತದೆ. ಇಲ್ಲಿ ಮತ್ತೆ ಸೋತರೆ ಅತ್ತ ಪರಿಷತ್ತೂ ಇಲ್ಲ, ಇಲ್ಲಿ ಎಂಎಲ್ಎನೂ ಇಲ್ಲ. ಅದರ ಬದಲು ಮಗನನ್ನು ಕಣಕ್ಕೆ ಇಳಿಸಿದರೆ, ಭರ್ಜರಿ ಪ್ರಚಾರ ಮಾಡಬಹುದು. ಹಾಗೊಂದು ವೇಳೆ ಗೆದ್ದರೆ ಮಗನ ರಾಜಕೀಯ ಬದುಕು ಸೆಟಲ್ ಆಗುತ್ತದೆ. ಒಂದೇ ಮನೆಯಲ್ಲಿ ಇಬ್ಬರೂ ಶಾಸಕರಾಗುತ್ತೀವಿ. ಮಗನೇನಾದರೂ ಸೋತರೂ ತೊಂದರೆ ಇಲ್ಲ, ಹೇಗಿದ್ದರೂ ಇನ್ನೂ ಮೂರು ವರ್ಷ ಪರಿಷತ್ ಇದ್ದೇ ಇರುತ್ತದೆ ಎಂಬ ಲೆಕ್ಕಾಚಾರ ಎಂಟಿಬಿಯವರದ್ದು. ಇದೆಲ್ಲ ಸ್ವ ಲೆಕ್ಕಾಚಾರದ ಕತೆ ಹೇಳೋದು ಬಿಟ್ಟು, ಏನೊ ಕ್ಷೇತ್ರ ತ್ಯಾಗ ಮಾಡೋ ರೀತಿಯಲ್ಲಿ ಪೋಸ್ ಕೊಡುತ್ತಿದ್ದಾರೆ ಎಂಬ ಮಾತು ಬಿಜೆಪಿ ಪಡಸಾಲೆಯಲ್ಲಿ ಕೇಳಿಬರುತ್ತಿದೆ.

ಇದನ್ನೂ ಓದಿ: Modi In Karnataka | ಯಾಕಿಷ್ಟು ಸಣಕಲಾಗಿದ್ದೀರಾ?: ಎಂಟಿಬಿ ನಾಗರಾಜ್‌ಗೆ ಮೋದಿ ಪ್ರಶ್ನೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Namma Metro: ಹಸಿರು ಮಾರ್ಗದಲ್ಲಿ ಇಂದಿನಿಂದ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

Namma Metro: ನಾಗಸಂದ್ರದಿಂದ ಮಾದಾವರ (BIEC)ವರೆಗಿನ ರೀಚ್-3ರ ವಿಸ್ತೃತ ಮಾರ್ಗದಲ್ಲಿ ಸಿಗ್ನಲಿಂಗ್ ಪರೀಕ್ಷೆಗಳನ್ನು ನಡೆಸಬೇಕಾಗಿರುವುದರಿಂದ, ಪೀಣ್ಯ ಇಂಡಸ್ಟ್ರಿ ಹಾಗೂ ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸಮಯದಲ್ಲಿ ವ್ಯತ್ಯಯ ವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ.

VISTARANEWS.COM


on

Namma Metro
Koo

ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ಆ. 13ರಿಂದ 15ರವರೆಗೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್‌) ತಿಳಿಸಿದೆ.

ನಾಗಸಂದ್ರದಿಂದ ಮಾದಾವರ (BIEC)ವರೆಗಿನ ರೀಚ್-3ರ ವಿಸ್ತೃತ ಮಾರ್ಗದಲ್ಲಿ ಸಿಗ್ನಲಿಂಗ್ ಪರೀಕ್ಷೆಗಳನ್ನು ನಡೆಸಬೇಕಾಗಿರುವುದರಿಂದ, ಪೀಣ್ಯ ಇಂಡಸ್ಟ್ರಿ ಹಾಗೂ ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸಮಯದಲ್ಲಿ ವ್ಯತ್ಯಯ ವಾಗಲಿದ್ದು, ಇದರ ವಿವರ ಈ ಕೆಳಕಂಡಂತಿವೆ.

  1. ಆ. 13ರಂದು ಕೊನೆಯ ರೈಲು ಸೇವೆ ರಾತ್ರಿ 11ಕ್ಕೆ ಬದಲಾಗಿ 10 ಗಂಟೆಯವರೆಗೆ.
  2. ಆ. 14ರಂದು ಬೆಳಗ್ಗೆ 5ಕ್ಕೆ ಬದಲಾಗಿ 6ಕ್ಕೆ ಪ್ರಾರಂಭ ಮತ್ತು ಕೊನೆಯ ರೈಲು ಸೇವೆ ರಾತ್ರಿ 11ಕ್ಕೆ ಬದಲಾಗಿ 10 ಗಂಟೆಯವರೆಗೆ.
  3. ಆ. 15ರಂದು ಬೆಳಗ್ಗೆ 5ಕ್ಕೆ ಬದಲಾಗಿ 6ಕ್ಕೆ ಪ್ರಾರಂಭ

ನಾಗಸಂದ್ರ ನಿಲ್ದಾಣದಿಂದ ಆ.13 ಮತ್ತು 14 ರಂದು ಕೊನೆಯ ರೈಲು ಸೇವೆಯು ರಾತ್ರಿ 11.05 ಗಂಟೆಯ ಬದಲಾಗಿ 10.00 ಗಂಟೆಗೆ ಕೊನೆಗೊಳ್ಳುತ್ತದೆ. ಆ.14 ಮತ್ತು 15ರಂದು ನಾಗಸಂದ್ರದಿಂದ ಮೊದಲ ರೈಲು ಸೇವೆಯು ಬೆಳಗ್ಗೆ 5ಕ್ಕೆ ಬದಲಾಗಿ 6ಕ್ಕೆ ಪ್ರಾರಂಭವಾಗುತ್ತದೆ.

ಆದಾಗ್ಯೂ ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಆ.13 ಮತ್ತು 14ರಂದು ರಾತ್ರಿ 11.12 ಗಂಟೆಯವರೆಗೆ ಕೊನೆಯ ರೈಲು ಸೇವೆ ಲಭ್ಯವಿರುತ್ತದೆ. ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಮೊದಲ ರೈಲು ಸೇವೆಯು ಆ.14 ಮತ್ತು 15ರಂದು ಬೆಳಗ್ಗೆ 5ಕ್ಕೆ ಪ್ರಾರಂಭವಾಗುತ್ತದೆ. ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಸ್ವಾತಂತ್ರ್ಯೋತ್ಸವದ ಫಲಪುಷ್ಪ ಪ್ರದರ್ಶನಕ್ಕೆ ನಮ್ಮ ಮೆಟ್ರೋ ಸಾಥ್

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಫಲಪುಷ್ಪ ಪ್ರದರ್ಶನಕ್ಕೆ ನಮ್ಮ ಮೆಟ್ರೋ ಸಾಥ್ ನೀಡಿದೆ. ಆಗಸ್ಟ್ 15,17 ಹಾಗೂ 18ರಂದು ಟೋಕನ್ ಬದಲು ರಿಟರ್ನ್ ಜರ್ನಿ ಪೇಪರ್ ಟಿಕೆಟ್ ನೀಡಲು ಬಿಎಂಆರ್‌ಸಿಎಲ್‌ ನಿರ್ಧರಿಸಿದೆ. 30 ರೂ. ರಿಟರ್ನ್ ಟಿಕೆಟ್ ಮೂಲಕ ಯಾವುದೇ ನಿಲ್ದಾಣಕ್ಕೂ ಪ್ರಯಾಣದ ಅನುಕೂಲವಾಗಲಿದೆ. ಪ್ರಯಾಣಿಕರು ಟೋಕನ್ ಬದಲಿಗೆ ಪರ್ಯಾಯ ವ್ಯವಸ್ಥೆ ಬಳಸಲು ಬಿಎಂಆರ್‌ಸಿಎಲ್‌ ಮನವಿ ಮಾಡಿದೆ.

ಲಾಲ್‌ಬಾಗ್ ನಲ್ಲಿ ಆಯೋಜಿಸಲಾಗಿರುವ ತೋಟಗಾರಿಕಾ ಫಲಪುಷ್ಪ ಪ್ರದರ್ಶನದ ಹಿನ್ನಲೆಯಲ್ಲಿ, ನಮ್ಮ ಮೆಟ್ರೋದಿಂದ ಆ. 15, 17 ಮತ್ತು 18ರಂದು ಲಾಲ್‌ಬಾಗ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ತ್ವರಿತ ಪ್ರಯಾಣಕ್ಕಾಗಿ ಬೆಳಗ್ಗೆ 10 ರಿಂದ ರಾತ್ರಿ 8ರವರೆಗೆ ಟೋಕನ್‌ಗಳ ಬದಲಿಗೆ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು 30 ರೂ.ಗೆ ವಿತರಿಸಲಾಗುತ್ತದೆ.

ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳು ಖರೀದಿಸಿದ ದಿನದಂದು ಲಾಲ್‌ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಮಾನ್ಯವಾಗಿರುತ್ತದೆ. ಸಾರ್ವಜನಿಕರು ಟೋಕನ್, ಕಾರ್ಡ್, ಕ್ಯೂಆರ್ ಟಿಕೆಟ್‌ಗಳ ಮೂಲಕ ಲಾಲ್‌ಬಾಗ್ ನಿಲ್ದಾಣಕ್ಕೆ ಪ್ರಯಾಣಿಸಬಹುದು ಹಾಗೂ ಲಾಲ್‌ಬಾಗ್ ಮೆಟ್ರೋ ನಿಲ್ದಾಣದಿಂದ ಹಿಂತಿರುಗಲು ಟೋಕನ್‌ಗಳ ಬದಲಿಗೆ ಪೇಪರ್ ಟಿಕೆಟ್, ಕಾರ್ಡ್, ಮತ್ತು ಕ್ಯೂಆರ್ ಟಿಕೆಟ್ ಮೂಲಕ ಮಾತ್ರ ಪ್ರಯಾಣಿಸಬಹುದು. ಮೇಲಿನ ದಿನಾಂಕಗಳಲ್ಲಿ ಮತ್ತು ಅವಧಿಯಲ್ಲಿ ಲಾಲ್‌ಬಾಗ್ ಮೆಟ್ರೋ ನಿಲ್ದಾಣದಲ್ಲಿ ಟೋಕನ್‌ಗಳನ್ನು ನೀಡಲಾಗುವುದಿಲ್ಲ. ಟಿಕೆಟ್‌ಗಳನ್ನು ಖರೀದಿಸಲು ಕಾಯುವ ಸಮಯವನ್ನು ತಪ್ಪಿಸಲು ಪ್ರಯಾಣಿಕರು ತಮ್ಮ ಪ್ರಯಾಣಕ್ಕೆ ಮುಂಚಿತವಾಗಿ ಕ್ಯೂಆರ್ ಟಿಕೆಟ್‌ಗಳನ್ನು ಖರೀದಿಸಬೇಕು ಎಂದು ಬಿಎಂಆರ್‌ಸಿಎಲ್‌ ಮನವಿ ಮಾಡಿದೆ.

Continue Reading

ಪ್ರಮುಖ ಸುದ್ದಿ

IISc Bangalore: ರಾಷ್ಟ್ರೀಯ ರ‍್ಯಾಂಕಿಂಗ್‌ನಲ್ಲಿ ಬೆಂಗಳೂರಿನ ಐಐಎಸ್‌ಸಿ; ರಾಜ್ಯದ ಹಲವು ಸಂಸ್ಥೆಗಳಿಗೆ ಗರಿ

IISc Bangalore: ರಾಷ್ಟ್ರೀಯ ರ‍್ಯಾಂಕಿಂಗ್‌ನಲ್ಲಿ ಬೆಂಗಳೂರಿನ ಐಐಎಸ್‌ಸಿ; ರಾಜ್ಯದ ಹಲವು ಸಂಸ್ಥೆಗಳಿಗೆ ಗರಿಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಬೆಂಗಳೂರು) ದೇಶದ ಅತ್ಯುತ್ತಮ ವಿಶ್ವವಿದ್ಯಾನಿಲಯ ಎಂದು ಶ್ರೇಯಾಂಕ ಪಡೆದಿದೆ. ದೇಶದ ಟಾಪ್‌ ಐದು ರಿಸರ್ಚ್‌ ಇನ್‌ಸ್ಟಿಟ್ಯೂಟ್‌ಗಳಲ್ಲಿ ಐಐಎಸ್‌ಸಿ ಅಗ್ರಸ್ಥಾನದಲ್ಲಿದೆ.

VISTARANEWS.COM


on

IISc Bangalore
Koo

ಹೊಸದಿಲ್ಲಿ: ಕೇಂದ್ರ ಪ್ರಕಟಿಸಿರುವ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (Indian Institute of Science, IISC Bangalore) ದೇಶದ ಅತ್ಯುತ್ತಮ ಯೂನಿವರ್ಸಿಟಿ (Best University) ಎಂಬ ಹೆಗ್ಗಳಿಕೆಯನ್ನು ಪಡೆದಿದೆ. ಇಂದು ಕೇಂದ್ರ ಶಿಕ್ಷಣ ಸಚಿವಾಲಯ ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಚೌಕಟ್ಟು (NIRF) 2024 ಅನ್ನು ಪ್ರಕಟಿಸಿದ್ದು, ಇದರಲ್ಲಿನ ವಿವಿಧ ವಿಭಾಗಗಳಲ್ಲಿ ಬೆಂಗಳೂರಿನ ಹಲವು ಸಂಸ್ಥೆಗಳು ಸ್ಥಾನ ಪಡೆದಿವೆ.

ರ‍್ಯಾಂಕಿಂಗ್‌ಗಳ ಒಂಬತ್ತನೇ ಆವೃತ್ತಿಯನ್ನು ಪ್ರಕಟಿಸಲಾಗಿದ್ದು, ಇದನ್ನು ಅಧಿಕೃತ NIRF ವೆಬ್‌ಸೈಟ್ nirfindia.orgನಲ್ಲಿ ನೋಡಬಹುದು. NIRF ಶ್ರೇಯಾಂಕವು ವಿಶ್ವವಿದ್ಯಾಲಯಗಳು, ಕಾಲೇಜುಗಳು, ಸಂಶೋಧನಾ ಸಂಸ್ಥೆಗಳು ಮತ್ತು ಎಂಜಿನಿಯರಿಂಗ್, ನಿರ್ವಹಣೆ ಮತ್ತು ವೈದ್ಯಕೀಯ ಶಿಕ್ಷಣದಂತಹ ವಿವಿಧ ವಿಶೇಷ ಕ್ಷೇತ್ರಗಳನ್ನು ಒಳಗೊಂಡಂತೆ 13 ವಿಭಾಗಗಳನ್ನು ಒಳಗೊಂಡಿದೆ.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಬೆಂಗಳೂರು) ದೇಶದ ಅತ್ಯುತ್ತಮ ವಿಶ್ವವಿದ್ಯಾನಿಲಯ ಎಂದು ಶ್ರೇಯಾಂಕ ಪಡೆದಿದೆ. ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ದೆಹಲಿ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ನಂತರದ ಸ್ಥಾನಗಳಲ್ಲಿವೆ. ದೇಶದ ಟಾಪ್‌ ಐದು ರಿಸರ್ಚ್‌ ಇನ್‌ಸ್ಟಿಟ್ಯೂಟ್‌ಗಳಲ್ಲಿ ಐಐಎಸ್‌ಸಿ ಅಗ್ರಸ್ಥಾನದಲ್ಲಿದೆ. ಟಾಪ್‌ ಟೆನ್‌ ಸಂಸ್ಥೆಗಳ ಪಟ್ಟಿಯಲ್ಲಿಯೂ ಐಐಟಿ ಮದ್ರಾಸ್‌ ನಂತರ ಐಐಎಸ್‌ಸಿ ಬೆಂಗಳೂರು 2ನೇ ಸ್ಥಾನದಲ್ಲಿದೆ. ನಾವೀನ್ಯತೆಯ ವಿಭಾಗದಲ್ಲಿಯೂ ಐಐಎಸ್‌ಸಿ 4ನೇ ಸ್ಥಾನದಲ್ಲಿದೆ.

ಮ್ಯಾನೇಜ್‌ಮೆಂಟ್‌ ರ‍್ಯಾಂಕಿಂಗ್‌ನಲ್ಲಿ ಐಐಎಂ ಬೆಂಗಳೂರು 2ನೇ ಸ್ಥಾನದಲ್ಲಿದೆ. ದೇಶದ ಟಾಪ್‌ 5 ಮೆಡಿಕಲ್‌ ಕಾಲೇಜುಗಳಲ್ಲಿ ಬೆಂಗಳೂರಿನ ನಿಮ್ಹಾನ್ಸ್‌ 4ನೇ ಸ್ಥಾನದಲ್ಲಿದೆ. ಟಾಪ್‌ ಕಾನೂನು ಕಾಲೇಜುಗಳಲ್ಲಿ ಬೆಂಗಳೂರಿನ ನ್ಯಾಷನಲ್‌ ಲಾ ಸ್ಕೂಲ್‌ ಆಫ್‌ ಇಂಡಿಯಾ ಯೂನಿವರ್ಸಿಟಿ ಮೊದಲ ಸ್ಥಾನದಲ್ಲಿದೆ.

ಮೈಸೂರು ಅರಸರ ಅಧಿಕಾರ ಮೊಟಕು ಮಾಡಲು ಮುಂದಾದ ಕಾಯಿದೆಗೆ ಹೈಕೋರ್ಟ್‌ ಮಧ್ಯಂತರ ತಡೆ

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟ (Mysore Chamundi Hill) ಹಾಗೂ ಚಾಮುಂಡೇಶ್ವರಿ ದೇವಾಲಯದ (Chamundeshwari Temple) ದೇವಸ್ಥಾನದ ಅಭಿವೃದ್ಧಿ ಹಾಗೂ ನಿರ್ವಹಣೆಯಲ್ಲಿ ರಾಜಮನೆತನದವರ (Mysore dynasty) ಅಧಿಕಾರ ಮೊಟಕುಗೊಳಿಸುವ ‘ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯಿದೆ-2024’ ಜಾರಿಗೊಳಿಸದಂತೆ ರಾಜ್ಯ ಸರ್ಕಾರಕ್ಕೆ (Karnataka Govt) ನಿರ್ದೇಶಿಸಿ ಹೈಕೋರ್ಟ್‌ (Karnataka High Court) ಮಧ್ಯಂತರ ಆದೇಶ ನೀಡಿದೆ.

ರಾಜ್ಯ ಸರ್ಕಾರ ಜಾರಿ ಮಾಡಿರುವ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ-2024ರ ಹಲವು ಸೆಕ್ಷನ್‌ಗಳನ್ನು ಪ್ರಶ್ನಿಸಿ ಮೈಸೂರು ಒಡೆಯರ್‌ ವಂಶಸ್ಥೆ ಪ್ರಮೋದಾದೇವಿ ಒಡೆಯರ್‌ (Pramodadevi wadiyer) ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಪೀಠ, ಕಾಯಿದೆಯನ್ನು ಆ.22ರವರೆಗೆ ಜಾರಿಗೊಳಿಸದಂತೆ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಮೈಸೂರು ಅರಮನೆ ಮುಜರಾಯಿ ಸಂಸ್ಥೆಯ ಮುಖ್ಯಸ್ಥರೂ ಆದ ಜಿಲ್ಲಾಧಿಕಾರಿಗೆ ನೋಟಿಸ್‌ ಜಾರಿ ಮಾಡಿದೆ.

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯಿದೆಯ ಪ್ರಕಾರ, ಚಾಮುಂಡೇಶ್ವರಿ ಬೆಟ್ಟದ ಅಭಿವೃದ್ಧಿ, ದೇವಸ್ಥಾನದ ಆಡಳಿತ ನಿರ್ವಹಣೆ, ಪೂಜಾ ಕೈಂಕರ್ಯ ನಡೆಸಲು ಪ್ರಾಧಿಕಾರದ ರಚನೆ ಮಾಡಲಾಗುತ್ತದೆ. ಆ ಪ್ರಾಧಿಕಾರದ ರಚನೆಯ ಸಂಪೂರ್ಣ ಅಧಿಕಾರ ಸರ್ಕಾರಕ್ಕೆ ಸೇರಿರುತ್ತದೆ. ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಲಿದ್ದಾರೆ. ಪದಾಧಿಕಾರಿಗಳಾಗಿ ಸ್ಥಳೀಯ ಶಾಸಕರು, ಸಚಿವರು, ಸಂಸದರು ಹಾಗೂ ಅಧಿಕಾರಿಗಳು ಇರಲಿದ್ದಾರೆ.

ಇದನ್ನೂ ಓದಿ: NIRF 2024 Rank: ದೇಶದಲ್ಲೇ ಮದ್ರಾಸ್ ಐಐಟಿ ಬೆಸ್ಟ್; ಬೆಂಗಳೂರಿನ ಐಐಎಸ್‌ಸಿ ನೆಕ್ಸ್ಟ್;‌ ಇಲ್ಲಿದೆ ಪೂರ್ಣ ಪಟ್ಟಿ

Continue Reading

ಕರ್ನಾಟಕ

Bengaluru Power Cut: ಬೆಂಗಳೂರಿನಲ್ಲಿ ಇಂದು ಪವರ್‌ ಕಟ್‌- ಈ ಪ್ರದೇಶಗಳಲ್ಲಿ ಕರೆಂಟ್‌ ಇರೋದಿಲ್ಲ

Bengaluru Power Cut: ಬೆಂಗಳೂರು ನಗರದ ಹಲವೆಡೆ ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಇನ್ನು ಈ ಬಗ್ಗೆ ಬೆಸ್ಕಾಂ ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ಮಾಹಿತಿ ನೀಡಿದ್ದಾರೆ.

VISTARANEWS.COM


on

Bengaluru Power Cut
Koo

ಬೆಂಗಳೂರು: ನಗರದ 66/11 ಕೆ.ವಿ ‘ಬಾಣಸವಾಡಿ’ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru Power Cut) ನಗರದ ಹಲವೆಡೆ ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಇನ್ನು ಈ ಬಗ್ಗೆ ಬೆಸ್ಕಾಂ(BESCOM) ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ಮಾಹಿತಿ ನೀಡಿದ್ದಾರೆ.

ಯಾವ್ಯಾವ ಸ್ಥಳಗಳಲ್ಲಿ ವಿದ್ಯುತ್‌ ವ್ಯತ್ಯಯ?

ಯಾವ ಯಾವ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂಬುದನ್ನು ನೋಡೋದಾದರೆ, ನಗರದ ಹೊರಮಾವು ಪಿ & ಟಿ ಲೇಔಟ್, ನಿಸರ್ಗ ಕಾಲೋನಿ, ನಂದನಂ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್‌ಗ್ರೋವ್, ದೇವಮತ ಶಾಲೆ, ಅಮರ್‌ ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ, ಎಚ್.ಆರ್.ಬಿ.ಆರ್. ಲೇಔಟ್, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲ್ಯು.ಎಸ್. ಎಸ್.ಬಿ ವಾಟರ್‌ ಟ್ಯಾಂಕ್, ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯ ಎನ್‌ಕ್ಲೇವ್,

ಪ್ರಕೃತಿ ಲೇಔಟ್ ಹೊಯ್ಸಳನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥ ನಗರ ರಸ್ತೆ, ಎನ್.ಆರ್.ಐ ಲೇಔಟ್, ರಿಚಸ್‌ಗಾರ್ಡನ್, ಸುಂದರಾಂಜನೇಯ ದೇವಸ್ಥಾನ, ಡಬಲ್ ರಸ್ತೆ, ಪುಣ್ಯಭೂಮಿ ಲೇಔಟ್, ಸಮದ್ ಲೇಔಟ್, ಯಾಸಿನ್‌ನಗರ, ಪಿ.ಎನ್.ಎಸ್. ಲೇಔಟ್, ಕುಳ್ಳಪ್ಪ ಸರ್ಕಲ್, 5ನೇ ಮುಖ್ಯರಸ್ತೆ, ಎಚ್.ಬಿ.ಆರ್. 2ನೇ ಬ್ಲಾಕ್, ರಾಜ್‌ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣ ರಸ್ತೆ, ನೆಹರು ರಸ್ತೆ, 80 ಅಡಿ ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ, ಸಿ.ಎಂ.ಆರ್. ರಸ್ತೆ, ನಂಜುಂಡಪ್ಪ ರಸ್ತೆ, ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿ ನಗರ ಮುಖ್ಯ ರಸ್ತೆ, ಕೃಷ್ಣರೆಡ್ಡಿ ಲೇಔಟ್, ಗೋಪಾಲರೆಡ್ಡಿ ಲೇಔಟ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಓ.ಎಂ.ಬಿ.ಆರ್. 2ನೇ, 5ನೇ, 6ನೇ ಕ್ರಾಸ್, 100 ಅಡಿರಸ್ತೆ ಬಾಣಸವಾಡಿ, ಗ್ರೀನ್ ಪಾರ್ಕ್ ಲೇಔಟ್ ಫ್ಲವರ್‌ ಗಾರ್ಡನ್, ಎಂ.ಎಂ.ಗಾರ್ಡನ್, ದಿವ್ಯಉನ್ನತಿ ಲೇಔಟ್, ಪ್ರಕೃತಿ ಟೌನ್‌ಶಿಪ್, ಮಲ್ಲಪ್ಪ ಲೇಔಟ್ ಮತ್ತು ಸುತ್ತಲಿನ ಪ್ರದೇಶ, ಬೈರತಿ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂ ಎನ್‌ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿ ಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್‌ ಅವೆನ್ಯೂ ಲೇಔಟ್, ನಂಜಪ್ಪ ಗಾರ್ಡನ್, ಸಿ.ಎನ್.ಆರ್. ಲೇಔಟ್, ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪ ರಸ್ತೆ, ಮುನೆಗೌಡ ರಸ್ತೆ, ಸತ್ಯಮೂರ್ತಿ ರಸ್ತೆ, ಜೆ.ವಿ.ಶೆಟ್ಟಿ ರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗುಳ್ಳಪ್ಪ ರಸ್ತೆ, ಕಮ್ಮನಹಳ್ಳಿ, ಸಂಪಣ್ಣ ರಸ್ತೆ ಎ.ಡಿ.ಎಂ.ಸಿ. ಮಿಲಿಟರಿ, ಬಂಜಾರ ಲೇಔಟ್, ಎನ್.ಪಿ.ಎಸ್., ಬೆಥೆಲ್‌ ಲೇಔಟ್, ಸಮೃದ್ಧಿ ಲೇಔಟ್, ವಾಟರ್‌ ಟ್ಯಾಂಕ್, ಕಲ್ಕೆರೆ, ಜಯಂತಿನಗರ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.

ವಿದ್ಯುತ್ ಸಂಬಂಧಿತ ದೂರುಗಳಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಸಂಪರ್ಕಿಸಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Karnataka Rain : ಧಾರಾಕಾರ ಮಳೆಗೆ ಕೆರೆಯಂತಾದ ಬೆಂಗಳೂರು-ಹೊಸೂರು ಹೈವೆ; ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ

Continue Reading

ಪ್ರಮುಖ ಸುದ್ದಿ

Chamundi Hill: ಚಾಮುಂಡಿ ಬೆಟ್ಟದಲ್ಲಿ ಮೈಸೂರು ಅರಸರ ಅಧಿಕಾರ ಮೊಟಕು ಮಾಡಲು ಮುಂದಾದ ಕಾಯಿದೆಗೆ ಹೈಕೋರ್ಟ್‌ ಮಧ್ಯಂತರ ತಡೆ

Chamundi Hill: ರಾಜ್ಯ ಸರ್ಕಾರ ಜಾರಿ ಮಾಡಿರುವ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ-2024ರ ಹಲವು ಸೆಕ್ಷನ್‌ಗಳನ್ನು ಪ್ರಶ್ನಿಸಿ ಮೈಸೂರು ಒಡೆಯರ್‌ ವಂಶಸ್ಥೆ ಪ್ರಮೋದಾದೇವಿ ಒಡೆಯರ್‌ (Pramodadevi wadiyer) ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಪೀಠ, ಕಾಯಿದೆಯನ್ನು ಆ.22ರವರೆಗೆ ಜಾರಿಗೊಳಿಸದಂತೆ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.

VISTARANEWS.COM


on

chamundi hill mysore high court
Koo

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟ (Mysore Chamundi Hill) ಹಾಗೂ ಚಾಮುಂಡೇಶ್ವರಿ ದೇವಾಲಯದ (Chamundeshwari Temple) ದೇವಸ್ಥಾನದ ಅಭಿವೃದ್ಧಿ ಹಾಗೂ ನಿರ್ವಹಣೆಯಲ್ಲಿ ರಾಜಮನೆತನದವರ (Mysore dynasty) ಅಧಿಕಾರ ಮೊಟಕುಗೊಳಿಸುವ ‘ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯಿದೆ-2024’ ಜಾರಿಗೊಳಿಸದಂತೆ ರಾಜ್ಯ ಸರ್ಕಾರಕ್ಕೆ (Karnataka Govt) ನಿರ್ದೇಶಿಸಿ ಹೈಕೋರ್ಟ್‌ (Karnataka High Court) ಮಧ್ಯಂತರ ಆದೇಶ ನೀಡಿದೆ.

ರಾಜ್ಯ ಸರ್ಕಾರ ಜಾರಿ ಮಾಡಿರುವ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ-2024ರ ಹಲವು ಸೆಕ್ಷನ್‌ಗಳನ್ನು ಪ್ರಶ್ನಿಸಿ ಮೈಸೂರು ಒಡೆಯರ್‌ ವಂಶಸ್ಥೆ ಪ್ರಮೋದಾದೇವಿ ಒಡೆಯರ್‌ (Pramodadevi wadiyer) ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಪೀಠ, ಕಾಯಿದೆಯನ್ನು ಆ.22ರವರೆಗೆ ಜಾರಿಗೊಳಿಸದಂತೆ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಮೈಸೂರು ಅರಮನೆ ಮುಜರಾಯಿ ಸಂಸ್ಥೆಯ ಮುಖ್ಯಸ್ಥರೂ ಆದ ಜಿಲ್ಲಾಧಿಕಾರಿಗೆ ನೋಟಿಸ್‌ ಜಾರಿ ಮಾಡಿದೆ.

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯಿದೆಯ ಪ್ರಕಾರ, ಚಾಮುಂಡೇಶ್ವರಿ ಬೆಟ್ಟದ ಅಭಿವೃದ್ಧಿ, ದೇವಸ್ಥಾನದ ಆಡಳಿತ ನಿರ್ವಹಣೆ, ಪೂಜಾ ಕೈಂಕರ್ಯ ನಡೆಸಲು ಪ್ರಾಧಿಕಾರದ ರಚನೆ ಮಾಡಲಾಗುತ್ತದೆ. ಆ ಪ್ರಾಧಿಕಾರದ ರಚನೆಯ ಸಂಪೂರ್ಣ ಅಧಿಕಾರ ಸರ್ಕಾರಕ್ಕೆ ಸೇರಿರುತ್ತದೆ. ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಲಿದ್ದಾರೆ. ಪದಾಧಿಕಾರಿಗಳಾಗಿ ಸ್ಥಳೀಯ ಶಾಸಕರು, ಸಚಿವರು, ಸಂಸದರು ಹಾಗೂ ಅಧಿಕಾರಿಗಳು ಇರಲಿದ್ದಾರೆ.

ದೇವಸ್ಥಾನಕ್ಕೆ ಅರ್ಚಕರನ್ನು ನೇಮಕ ಮಾಡುವ ಅಧಿಕಾರವನ್ನು ಸರ್ಕಾರ ಹೊಂದಿರುತ್ತದೆ. ಪ್ರಾಧಿಕಾರದ ತೀರ್ಮಾನಗಳನ್ನು ಜಾರಿ ಮಾಡುವ ಹೊಣೆ ಕಾರ್ಯದರ್ಶಿಗೆ ನೀಡಲಾಗಿದೆ. ಆ ಮೂಲಕ ದೇವಸ್ಥಾನದ ನಿರ್ವಹಣೆ, ಜವಾಬ್ದಾರಿಗಳಲ್ಲಿ ಮೈಸೂರು ರಾಜಮನೆತನದವರು ಹೊಂದಿದ್ದ ಅಧಿಕಾರವನ್ನು ಮೊಟಕುಗೊಳಿಸಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಚಾಮುಂಡೇಶ್ವರಿಯು ಮೈಸೂರು ರಾಜಮನೆತನದ ದೇವತೆ. ಮೈಸೂರು ಮಹಾರಾಜರು ದೇವಸ್ಥಾನದ ಅಭಿವೃದ್ಧಿ, ನಿರ್ವಹಣೆ ಮತ್ತು ಪೂಜಾ ಕಾರ್ಯಗಳಲ್ಲಿ ಸದಾ ಪಾಲುದಾರರಾಗಿದ್ದಾರೆ. ಬೆಟ್ಟ ಹಾಗೂ ದೇವಸ್ಥಾನದ ಅಭಿವೃದ್ಧಿಗೆ ಅಪಾರವಾಗಿ ಶ್ರಮಿಸಿದ್ದಾರೆ. ದೇವಸ್ಥಾನಕ್ಕೆ ತಮ್ಮ ಅಮೂಲ್ಯ ಹಾಗೂ ಬೆಳೆಬಾಳುವ ಆಭರಣ, ಭೂಮಿ ನೀಡಿದ್ದಾರೆ. ಹೀಗಿದ್ದರೂ, ದೇವಸ್ಥಾನದ ಆಡಳಿತದಿಂದ ರಾಜಮನೆತನದವರು ಹೊಂದಿರುವ ಅಧಿಕಾರ ಮೊಟಕುಗೊಳಿಸಲು ಸರ್ಕಾರ ಈ ಕಾಯಿದೆ ರೂಪಿಸಿ ಜಾರಿಗೆ ತರಲು ಉದ್ದೇಶಿಸಿದೆ. ಆದ್ದರಿಂದ ಕಾಯಿದೆಯನ್ನು ಸಂವಿಧಾನಬಾಹಿರ ಹಾಗೂ ಅಕ್ರಮ ಎಂಬುದಾಗಿ ಘೋಷಿಸಬೇಕು ಎಂದು ಪ್ರಮೋದಾ ದೇವಿ ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ.

ಇದನ್ನೂ ಓದಿ: Ram Charan: ಮೈಸೂರಿನ ಚಾಮುಂಡೇಶ್ವರಿ ದರ್ಶನ ಪಡೆದ ರಾಮ್​ ಚರಣ್​!

Continue Reading
Advertisement
Namma Metro
ಪ್ರಮುಖ ಸುದ್ದಿ5 mins ago

Namma Metro: ಹಸಿರು ಮಾರ್ಗದಲ್ಲಿ ಇಂದಿನಿಂದ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

Vinesh Phogat
ಕ್ರೀಡೆ10 mins ago

Vinesh Phogat: ಇಂದು ವಿನೇಶ್ ಫೋಗಟ್ ಬೆಳ್ಳಿ ಪದಕದ ತೀರ್ಪು ಪ್ರಕಟ

Gowri Movie
ಸ್ಯಾಂಡಲ್ ವುಡ್17 mins ago

Gowri Movie: ʼಗೌರಿʼ ಚಿತ್ರದ ಅದ್ಧೂರಿ ಪ್ರೀ ರಿಲೀಸ್ ಇವೆಂಟ್‌; ರಿಯಲ್‌ ಸ್ಟಾರ್‌ ಉಪೇಂದ್ರ ಸಾಥ್‌

IISc Bangalore
ಪ್ರಮುಖ ಸುದ್ದಿ41 mins ago

IISc Bangalore: ರಾಷ್ಟ್ರೀಯ ರ‍್ಯಾಂಕಿಂಗ್‌ನಲ್ಲಿ ಬೆಂಗಳೂರಿನ ಐಐಎಸ್‌ಸಿ; ರಾಜ್ಯದ ಹಲವು ಸಂಸ್ಥೆಗಳಿಗೆ ಗರಿ

Sheikh Hasina
ವಿದೇಶ44 mins ago

ಶೇಖ್‌ ಹಸೀನಾ ಭಾರತದಲ್ಲಿ ಆಶ್ರಯ ಪಡೆದಿರುವುದು ದ್ವಿಪಕ್ಷೀಯ ಸಂಬಂಧದ ಮೇಲೆ ಪರಿಣಾಮ ಬೀರುತ್ತಾ? ಬಾಂಗ್ಲಾದೇಶ ಹೇಳಿದ್ದೇನು?

Bengaluru Power Cut
ಕರ್ನಾಟಕ1 hour ago

Bengaluru Power Cut: ಬೆಂಗಳೂರಿನಲ್ಲಿ ಇಂದು ಪವರ್‌ ಕಟ್‌- ಈ ಪ್ರದೇಶಗಳಲ್ಲಿ ಕರೆಂಟ್‌ ಇರೋದಿಲ್ಲ

chamundi hill mysore high court
ಪ್ರಮುಖ ಸುದ್ದಿ1 hour ago

Chamundi Hill: ಚಾಮುಂಡಿ ಬೆಟ್ಟದಲ್ಲಿ ಮೈಸೂರು ಅರಸರ ಅಧಿಕಾರ ಮೊಟಕು ಮಾಡಲು ಮುಂದಾದ ಕಾಯಿದೆಗೆ ಹೈಕೋರ್ಟ್‌ ಮಧ್ಯಂತರ ತಡೆ

Ceramic Cookware
ಆರೋಗ್ಯ2 hours ago

Ceramic Cookware: ಪಿಂಗಾಣಿ ಪಾತ್ರೆಗಳನ್ನು ಅಡುಗೆಗೆ ಬಳಸಿದರೆ ಏನಾಗುತ್ತದೆ?

CM Siddaramaiah 1
ಪ್ರಮುಖ ಸುದ್ದಿ2 hours ago

CM Siddaramaiah: ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಮೇಲೆ ಪ್ರಕರಣ, ಇಂದು ಕೋರ್ಟ್‌ ತೀರ್ಮಾನ

karnataka weather forecast
ಮಳೆ3 hours ago

Karnataka Weather : ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ; ಈ ನಾಲ್ಕು ಜಿಲ್ಲೆಗಳಿಗೆ ಎಚ್ಚರಿಕೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು7 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ7 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌