Invest Karnataka 2022 | Industry4.0 ಗೆ ಭಾರತ ಫುಲ್‌ ರೆಡಿ, ಯುವಜನತೆಗೆ ಭರ್ಜರಿ ಅವಕಾಶ ಎಂದ ಮೋದಿ - Vistara News

ಇನ್ವೆಸ್ಟ್ ಕರ್ನಾಟಕ

Invest Karnataka 2022 | Industry4.0 ಗೆ ಭಾರತ ಫುಲ್‌ ರೆಡಿ, ಯುವಜನತೆಗೆ ಭರ್ಜರಿ ಅವಕಾಶ ಎಂದ ಮೋದಿ

Invest Karnataka 2022 | ದೇಶವು ನಾಲ್ಕನೇ ಕೈಗಾರಿಕಾ ಕ್ರಾಂತಿಗೆ ದೊಡ್ಡ ಮಟ್ಟದಲ್ಲಿ ಸಿದ್ಧಗೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಸಿದ್ಧತೆ ಹೇಗೆ ಎಂಬ ಬಗ್ಗೆಯೂ ವಿವರಿಸಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಾಲ್ಕನೇ ಕೈಗಾರಿಕಾ ಕ್ರಾಂತಿಗೆ (Industry4.0) ಭಾರತ ಸರ್ವ ರೀತಿಯಲ್ಲೂ ಸಜ್ಜಾಗಿದೆ. ಈ ಜಾಗತಿಕ ವಿದ್ಯಮಾನದಲ್ಲಿ ಭಾರತದ ಪಾತ್ರ ಅತ್ಯಂತ ಮಹತ್ವದಾಗಿದ್ದು, ಇದು ದೇಶದ ಯುವಜನತೆಗೆ ಅವಕಾಶಗಳ ಹೆಬ್ಬಾಗಿಲನ್ನೇ ತೆರೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಬುಧವಾರ ಆರಂಭಗೊಂಡ ಮೂರು ದಿನಗಳ ಇನ್ವೆಸ್ಟ್‌ ಕರ್ನಾಟಕ-೨೦೨೨ (invest karnataka 2022) ಕಾರ್ಯಕ್ರಮದಲ್ಲಿ ವರ್ಚ್ಯುವಲ್‌ ಆಗಿ ಭಾಗವಹಿಸಿ ಮಾತನಾಡಿದ ಮೋದಿ ಅವರು, ಇಂಡಸ್ಟ್ರಿ ೪.೦ಗೆ ಭಾರತ ಹೇಗೆ ಸಿದ್ಧಗೊಳ್ಳುತ್ತಿದೆ ಎಂದು ಎಳೆಎಳೆಯಾಗಿ ವಿವರಿಸಿದರು.

ಇಂಡಸ್ಟ್ರಿ ೪.೦ನಲ್ಲಿ ಯುವಜನರಿಗೆ ಅತ್ಯಧಿಕ ಅವಕಾಶ ಸಿಗಲಿದೆ. ೧೦೦ಕ್ಕೂ ಅಧಿಕ ಸ್ಟಾರ್ಟಪ್‌ಗಳು ಯುನಿಕಾರ್ನ್‌ಗಳಾಗಿವೆ. ೮೦೦೦೦ಕ್ಕೂ ಹೆಚ್ಚು ಸ್ಟಾರ್ಟಪ್‌ಗಳು ಕಾರ್ಯಾಚರಿಸುತ್ತಿವೆ. ಇದು ಯುವಕರಿಗೆ ಅತಿ ಹೆಚ್ಚು ಆವಕಾಶಗಳನ್ನು ಒದಗಿಸಿದೆ. ಜತೆಗೆ ಭಾರತದ ಯುವಕರ ಶಕ್ತಿಯನ್ನು ಹೆಚ್ಚಿಸಲು ಶಿಕ್ಷಣ ಕ್ಷೇತ್ರದಲ್ಲೂ ಭಾರಿ ಬದಲಾವಣೆ ಮಾಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.

ಮುಕ್ತ ವ್ಯಾಪಾರದ ಮೂಲಕ ಸಿದ್ಧತೆ
ಕಳೆದ ಕೆಲವು ತಿಂಗಳಲ್ಲಿ ಹಲವು ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲಾಗಿದೆ. ಜಾಗತಿಕವಾಗಿ ಹಲವು ದೇಶಗಳ ಜತೆಗೆ ಒಡಂಬಡಿಕೆ ಮಾಡಿಕೊಂಡಿರುವುದು ಇಂಡಸ್ಟ್ರಿ ೪.೦ಗೆ ನಮ್ಮ ಸಿದ್ಧತೆಯನ್ನು ತೋರಿಸಿದೆ. ಇದನ್ನು ಜಗತ್ತು ಗಮನಿಸಿದೆ ಎಂದರು.

ಮೂಲಭೂತ ಸೌಕರ್ಯ ವರ್ಧನೆ
ಒಂದು ಕಡೆ ಬಾಹ್ಯವಾಗಿ ಈ ರೀತಿ ಸಿದ್ಧತೆಗಳನ್ನು ನಡೆಸುತ್ತಿದ್ದರೆ ದೇಶದಲ್ಲಿ ಆಂತರಿಕವಾಗಿಯೂ ದೊಡ್ಡ ಮಟ್ಟದಲ್ಲಿ ವ್ಯವಸ್ಥೆಗಳು ನಡೆಯುತ್ತಿವೆ. ಪಿಎಂ ಗತಿಶಕ್ತಿ ಯೋಜನೆಯಡಿ ಮೂಲಭೂತ ಸೌಲಭ್ಯವನ್ನು ಹೆಚ್ಚಿಸಲಾಗಿದೆ. ಇಲ್ಲಿ ಮೂಲಭೂತ ಸೌಕರ್ಯ ವ್ಯವಸ್ಥೆಯನ್ನು ಮೂರು ಆಯಾಮಗಳಲ್ಲಿ ಅಭಿವೃದ್ಧಿಪಡಿಸಲಾಗಿದೆ. ಒಂದು ಅಭಿವೃದ್ಧಿ ಮೂಲಸೌಕರ್ಯ, ಎರಡನೆಯದು ಒಂದಕ್ಕೊಂದು ಪೂರಕವಾಗಿರುವ ಹೊಂದಾಣಿಕೆಯ ಮೂಲ ಸೌಕರ್ಯ, ಮೂರನೆಯದು ವಿಶ್ವ ದರ್ಜೆಯ ಮೂಲ ಸೌಕರ್ಯ ಎಂದು ಅವರು ವಿವರಿಸಿದರು. ದೇಶದಲ್ಲಿ ಲಾಜಿಸ್ಟಿಕ್ಸ್‌ ವ್ಯವಸ್ಥೆಗಾಗಿಯೇ ಹೊಸ ನಿಯಮ ರೂಪಿಸಿದ್ದನ್ನು ನೆನಪಿಸಿದರು.

ಇದನ್ನೂ ಓದಿ | Invest Karnataka 2022 | ಉದ್ಯೋಗ ಸೃಷ್ಟಿಯಲ್ಲಿ ಮುಂಚೂಣಿಯಲ್ಲಿ ಕರ್ನಾಟಕ: ಕೇಂದ್ರ ವಿತ್ತ ಸಚಿವೆ ನಿರ್ಮಲಾ

ಯಾವುದೆಲ್ಲ ಬದಲಾವಣೆ?
ಹೂಡಿಕೆ ಮತ್ತು ಮಾನವ ಸಂಪನ್ಮೂಲದ ಅಭಿವೃದ್ಧಿಯನ್ನು ಜತೆಜತೆಯಾಗಿ ನಡೆಸಲು ನಾವು ಬದ್ಧರಾಗಿದ್ದೇವೆ. ಆರೋಗ್ಯ ಮತ್ತು ಶಿಕ್ಷಣದ ಮೇಲೂ ನಾವು ಗಮನ ಹರಿಸಿದ್ದೇವೆ. ಒಂದು ಕಡೆ ನಮ್ಮಲ್ಲಿ ಎಫ್‌ಡಿಐ ಹೆಚ್ಚಾಗುತ್ತಿದೆ, ಆಸ್ಪತ್ರೆಗಳನ್ನೂ ಹೆಚ್ಚಿಸುತ್ತಿದ್ದೇವೆ. ವೆಲ್‌ನೆಸ್‌ ಸೆಂಟರ್‌ಗಳನ್ನು ಹೆಚ್ಚಿಸಿದ್ದೇವೆ ಎಂದರು.

ಮೆಟ್ರೋ ರೈಲುಗಳ ಸಂಚಾರ ಐದರಿಂದ ೨೦ಕ್ಕೇರಿದೆ. ಒಂದು ಕಡೆ ಹೆದ್ದಾರಿಗಳನ್ನೂ ನಿರ್ಮನಿಸುತ್ತಿದ್ದೇವೆ, ಇನ್ನೊಂದು ಕಡೆ ಸಾರ್ವಜನಿಕರಿಗೆ ಶೌಚಾಲಯ ಮತ್ತು ನೀರಿನ ವ್ಯವಸ್ಥೆ ಮಾಡಿದ್ದೇವೆ. ಒಂದು ಕಡೆದ ಮೆಟ್ರೋ ಸಂಪರ್ಕಗಳು ಹೆಚ್ಚಿದ್ದರೆ, ಇನ್ನೊಂದು ಕಡೆ ಸ್ಮಾರ್ಟ್‌ ಸ್ಕೂಲ್‌ಗಳನ್ನೂ ಸಜ್ಜುಗೊಳಿಸಿದ್ದೇವೆ ಎಂದರು.

ಭಾರತ ಈಗ ಔಷಧ ಮತ್ತು ಲಸಿಕೆ ಪೂರೈಕೆಯಲ್ಲಿ ದೊಡ್ಡ ಮಟ್ಟದ ಸಾಧನೆ ಮಾಡಿದೆ. ಭಾರತದ ಅರ್ಥ ವ್ಯವಸ್ಥೆ ತುಂಬ ಬಲಶಾಲಿಯಾಗುತ್ತಿದೆ ಎಂದು ಅವರು ಹೇಳಿದರು.

ಕೆಂಪು ಪಟ್ಟಿಯಿಂದ ಕೆಂಪು ಹಾಸಿನವರೆಗೆ
ದೇಶದಲ್ಲಿ ಈಗ ಔದ್ಯಮಿಕ ಕ್ಷೇತ್ರದ ಹೂಡಿಕೆಗೆ ಸಂಬಂಧಿಸಿ ಕೆಂಪು ಪಟ್ಟಿ ಎಂಬ ಮಾತೇ ಇಲ್ಲ. ನಾವು ಕೆಂಪು ಹಾಸನ್ನು ಹಾಸಿದ್ದೇವೆ. ದೇಶವನ್ನು ನಾನಾ ಆಯಾಮಗಳಲ್ಲಿ ಹೂಡಿಕೆಗೆ ಸಜ್ಜುಗೊಳಿಸಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಔದ್ಯಮಿಕ ಅಭಿವೃದ್ಧಿಗೆ ಇರುವ ಎಲ್ಲ ಅಡೆತಡೆಗಳನ್ನು ನಿವಾರಿಸಿದ್ದೇವೆ ಎಂದು ಹೇಳಿದರು.

ಹೂಡಿಕೆಯ ಹಾದಿಗೆ ಕಾಯಕಲ್ಪ
ʻʻದೇಶವನ್ನು ನಾವು ಹೂಡಿಕೆಗಾಗಿ ಸಿದ್ಧಗೊಳಿಸಿದ್ದೇವೆ. ಬ್ಯಾಂಕಿಂಗ್‌ ವ್ಯವಸ್ಥೆಯನ್ನು ಗಟ್ಟಿಗೊಳಿಸಿದ್ದೇವೆ, ಡಿಜಿಟಲ್‌ ಕ್ರಾಂತಿಗೆ ವ್ಯವಸ್ಥೆ ಮಾಡಿದ್ದೇವೆ. ೧೫ಕ್ಕೂ ಅಧಿಕ ಅನಗತ್ಯ ಕಾನೂನುಗಳನ್ನು ರದ್ದುಗೊಳಿಸಿದ್ದೇವೆ. ಕಾರ್ಪೊರೇಟ್‌ ತೆರಿಗೆಯನ್ನು ಕಡಿಮೆ ಮಾಡಿದೆವು. ಪಾರದರ್ಶಕತೆಯನ್ನು ಹೆಚ್ಚಿಸಿದೆವು, ಹೊಸ ಹೊಸ ಸೆಕ್ಟರ್‌ಗಳನ್ನು ತೆರೆದೆವು. ಮೂಲ ಸೌಕರ್ಯ ಕ್ಷೇತ್ರದಲ್ಲಿ ಸಾಕಷ್ಟು ವ್ಯವಸ್ಥೆ ಮಾಡಿದೆವು. ಈ ಮೂಲಕ ಹೂಡಿಕೆಗೆ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಸಜ್ಜುಗೊಳಿಸಿದ್ದೇವೆʼʼ ಎಂದು ಮೋದಿ ಹೇಳಿದರು.

೮೪ ಬಿಲಿಯನ್‌ ಡಾಲರ್‌ ನೇರ ವಿದೇಶಿ ಹೂಡಿಕೆ
ʻʻ೨೧ನೇ ಶತಮಾನದಲ್ಲಿ ದೇಶದ ಅಭಿವೃದ್ಧಿಯ ಗತಿಯೇ ಬದಲಾಗಿದೆ. ನಾವು ಶರವೇಗದಲ್ಲಿ ಮುಂದಕ್ಕೆ ಸಾಗುತ್ತಲೇ ಇದ್ದೇವೆ. ಕಳೆದ ವರ್ಷ ದೇಶದಲ್ಲಿ ೮೪ ಬಿಲಿಯನ್‌ ಡಾಲರ್‌ ನೇರ ವಿದೇಶಿ ಹೂಡಿಕೆ ಆಗಿದೆ. ಇದೊಂದು ದಾಖಲೆ. ಇಡೀ ವಿಶ್ವವೇ ಹಲವು ಸಂಕಷ್ಟಗಳಲ್ಲಿ ಬಳಲುತ್ತಿದ್ದರೆ ಭಾರತ ಭದ್ರವಾಗಿದೆʼʼ ಎಂದು ಮೋದಿ ಹೆಮ್ಮೆಯಿಂದ ಹೇಳಿದರು.

ʻʻಕೋವಿಡ್‌, ಯುದ್ಧದಲ್ಲಿ ಇಡೀ ವಿಶ್ವ ಸಿಕ್ಕಿಬಿದ್ದಿದೆ. ಎಲ್ಲ ಕಡೆ ಹಲವಾರು ರೀತಿಯ ಅತಂತ್ರ ಸ್ಥಿತಿ ಇದೆ. ಭಾರತದಲ್ಲೂ ಯುದ್ಧ, ಕೊರೊನಾದ ಪ್ರಭಾವ ಇತ್ತು. ಇಷ್ಟಿದ್ದರೂ ನಾವು ಎಲ್ಲವನ್ನೂ ಮೆಟ್ಟಿನಿಲ್ಲಲು ಶಕ್ತರಾದೆವು. ಹೀಗಾಗಿ ಇಡೀ ಜಗತ್ತು ನಮ್ಮ ಕಡೆಗೆ ಆಸೆ ಕಣ್ಣುಗಳಿಂದ ನೋಡುತ್ತಿದೆ. ಇದಕ್ಕೆಲ್ಲ ಕಾರಣ ಭಾರತೀಯ ಅರ್ಥ ವ್ಯವಸ್ಥೆ ಮೂಲ ನೆಲೆಗಟ್ಟು ಗಟ್ಟಿಯಾಗಿದೆ ಎಂದು ಜಗತ್ತಿಗೆ ಗೊತ್ತಿದೆ. ಜಗತ್ತಿನೊಂದಿಗೆ ಸೇರಿಕೊಂಡು ಮತ್ತು ಜಗತ್ತಿನ ಅಭಿವೃದ್ಧಿಗಾಗಿ ಶ್ರಮಿಸುವವರು ನಾವು ಎನ್ನುವುದು ಎಲ್ಲರಿಗೂ ಅರ್ಥವಾಗಿದೆʼʼ ಎಂದು ಪ್ರಧಾನಿ ಮೋದಿ ಹೇಳಿದರು.

ಇದನ್ನೂ ಓದಿ Invest Karnataka 2022 | ಓ ಮೈ ಗಾಡ್‌, ಕಾಂತಾರ ಯಶಸ್ಸು ಅದ್ಭುತ ಎಂದು ಹಾಡಿ ಹೊಗಳಿದ ಸಚಿವ ಪಿಯೂಷ್‌ ಗೋಯೆಲ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Cow Smuggling : ಗೋವು ಸಾಗಿಸುತ್ತಿದ್ದವರಿಂದ ಹಿಂದೂಪರ ಸಂಘಟನೆ ಕಾರ್ಯಕರ್ತರ ಮೇಲೆ ಗಂಭೀರ ಹಲ್ಲೆ

Cow Smuggling : ಟಂ ಟಂ‌ ಹಾಗೂ ಪಿಕ್ ವಾಹನದ ಮೂಲಕ ಸಾಗಿಸಲಾಗುತ್ತಿದ್ದ ಗೋವುಗಳನ್ನು ಹಿಂದೂಪರ ಸಂಘಟನೆ ಕಾರ್ಯಕರ್ತರು ತಡೆದಿದ್ದಾರೆ. ಈ ವೇಳೆ ಅವರ ಮೇಲೆ ಕಲ್ಲುಗಳನ್ನು ತೂರಿದ್ದಾರೆ. ಘಟನೆಯಲ್ಲಿ ರಮೇಶ್ ದೇಸಾಯಿ, ಹಾಗೂ ಮಹಾದೇವ್ ಎನ್ನುವರಿಗೆ ಗಾಯವಾಗಿದೆ. ಅವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ. ನೀಡಲಾಗುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ.

VISTARANEWS.COM


on

cow smuuggling
Koo

ಕಲಬುರಗಿ: ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಆರು ಗೋವುಗಳ ರಕ್ಷಣೆ ಮಾಡಲು(Cow Smuggling) ಮುಂದಾದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ಹಲ್ಲೆ ನಡೆದ ಪ್ರಕರಣ ಗುರುವಾರ ರಾತ್ರಿ ನಡೆದಿದೆ. ಗೋವುಗಳನ್ನು ಸಾಗಿಸುತ್ತಿದ್ದನ್ನು ತಡೆದಿದ್ದಕ್ಕೆ‌ 30ರಿಂದ 35 ಮುಸ್ಲಿಂ ಯುವಕರು ಹಿಂದೂ ಕಾರ್ಯಕರ್ತರ ಮೇಲೆ ಕಲ್ಲು ತೂರಾಟ ಮಾಡಿ ಗಾಯಗೊಳಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕಲಬುರಗಿ ನಗರದ ಖಾದ್ರಿ ಚೌಕ್ ಬಳಿ ಘಟನೆ. ನಡೆದಿದ್ದು, ರಾಮ ಸೇನೆ ಕಾರ್ಯಕರ್ತರು ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಕಲ್ಲು ತೂರಾಟ ನಡೆದಿದೆ ಎಂಬುದಾಗಿ ದೂರಿನಲ್ಲಿ ದಾಖಲಾಗಿದೆ. ಬಕ್ರಿದ್ ಹಬ್ಬದ ಹಿನ್ನಲೆಯಲ್ಲಿ ಖಾದ್ರಿ ಚೌಕ್ ಬಳಿ‌ ಕಸಾಯಿ ಖಾನೆಗೆ‌ ಗೋವುಗಳನ್ನು ಸಾಗಿಸುತ್ತಿದ್ದರು. ಆಳಂದ ಕಾಲೋನಿ ಬಳಿ ಒಂದು ಟಂ ಟಂ‌ ಹಾಗೂ ಪಿಕ್ ವಾಹನದ ಮೂಲಕ ಸಾಗಿಸಲಾಗುತ್ತಿದ್ದ ಗೋವುಗಳನ್ನು ಹಿಂದೂಪರ ಸಂಘಟನೆ ಕಾರ್ಯಕರ್ತರು ತಡೆದಿದ್ದಾರೆ. ಈ ವೇಳೆ ಅವರ ಮೇಲೆ ಕಲ್ಲುಗಳನ್ನು ತೂರಿದ್ದಾರೆ. ಘಟನೆಯಲ್ಲಿ ರಮೇಶ್ ದೇಸಾಯಿ, ಹಾಗೂ ಮಹಾದೇವ್ ಎನ್ನುವರಿಗೆ ಗಾಯವಾಗಿದೆ. ಅವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ. ನೀಡಲಾಗುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಚೌಕ್ ಪೊಲೀಸ್ ಠಾಣಾವ್ಯಾಪ್ತಿ ಪ್ರಕರಣ ದಾಖಲಾಗಿದೆ.

ಧಾರವಾಡದಲ್ಲೂ ಹಲ್ಲೆ, ಪ್ರತಿಭಟನೆ

ಗೋವು ಸಾಗಿಸುತ್ತಿದ್ದನ್ನು ಪ್ರಶ್ನಿಸಿದ ಬಜರಂಗ ದಳ ಕಾರ್ಯಕರ್ತನ ಮೇಲೆ ಮುಸ್ಲಿಮರು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಘಟನೆ ಬಳಿಕೆ ಇಲ್ಲಿನ ಉಪನಗರ ಠಾಣೆಗೆ ಹಿಂದೂಪರ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಸೋಮಶೇಖರ ಚೆನ್ನಶೆಟ್ಟಿ ಹಲ್ಲೆಗೊಳಗಾದ ಯುವಕ. ಗೋ ರಕ್ಷಣೆ ಮಾಡಲು ಹೋದಾಗ ಆತನ ಮೇಲೆ ಹಲ್ಲೆ ನಡೆಸಲಾಗಿದೆ. ನಗರದ ಹಳೆ ಎಪಿಎಂಸಿ ಬಳಿ ಘಟನೆ ನಡೆದಿದ್ದು, ಪ್ರಾಣಿ ರಕ್ಷಕನೂ ಆಗಿರೋ ಸೋಮಶೇಖರನ ಮೇಲಿನ ಹಲ್ಲೆಯನ್ನು ಖಂಡಿಸಲಾಗಿದೆ. ಉರಗ ರಕ್ಷಕನೂ ಆಗಿರೋ ಸೋಮಶೇಖರ ಮೇಲೆ ಹಲ್ಲೆ ಮಾಡಿರುವುದು ತಪ್ಪು ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಇದನ್ನೂ ಓದಿ: Road Accident : ಚಿತ್ರದುರ್ಗದಲ್ಲಿ ಭೀಕರ ಅಪಘಾತ; ಇಬ್ಬರು ಮಕ್ಕಳು ಸೇರಿ ಸ್ಥಳದಲ್ಲೇ ನಾಲ್ಕು ಮಂದಿ ಸಾವು

ಪ್ರತಿಭಟನೆ ಬಳಿಕ ವಿಧಾನ ಸಭೆ ವಿಪಕ್ಷ ಉಪನಾಯಕರ ಅರವಿಂದ ಬೆಲ್ಲದ್ ಮಾತನಾಡಿ, ಶಾಂತ ಧಾರವಾಡದಲ್ಲಿ ಇವತ್ತು ಇನ್ನೊಂದು ದುರ್ಘಟನೆ ಆಗಿದೆ. ಬಕ್ರೀದ್ ಸಮಯದಲ್ಲಿ ಹಸುಗಳನ್ನು ಕಡಿಯಲು ಉದ್ದೇಶಿಸಿದ್ದರು. ಇಂತಿಷ್ಟು ವಯಸ್ಸಾದ್ರೆ ಮಾತ್ರ ವಧೆ ಮಾಡುವ ಅವಕಾಶವಿದೆ. ಆದರೆ, ಚಿಕ್ಕವಯಸ್ಸಿನ ಹಸು ಸಾಗಿಸುತ್ತಿರುವ ಬಗ್ಗೆ ಪ್ರಶ್ನಿಸಿದ್ದಕ್ಕೆ ಯುವಕ ಹಲ್ಲೆ ಮಾಡಿದ್ದಾರೆ.

ಸೋಮಶೇಖರ್ ಚನ್ನಶಟ್ಟಿ ಎಲ್ಲ ಪ್ರಾಣಿ, ಜೀವಿಗಳ ರಕ್ಷಣೆ ಮಾಡುತ್ತಾರೆ. ಪ್ರಾಣಿ ಪಕ್ಷಿಗಳಿಗೆ ತೊಂದರೆಯಾದರೆ ಚಿಕಿತ್ಸೆ ಕೊಡಿಸುತ್ತಾರೆ. ಬೇಫಾರಿ ಎಂಬ ಕಸಾಯಿಖಾನೆ ಮಾಲೀಕ ಹಲ್ಲೆ ಮಾಡಿದ್ದಾನೆ. ಅವನ ಜೊತೆಗೆ 50-60 ಜನ ಸೇರಿ ಹಲ್ಲೆ ಮಾಡಿದ್ದಾರೆ. ಕಿವಿ ಕತ್ತರಿಸುವಂತೆ ಹೊಡೆದಿದ್ದಾರೆ. ಘಟನೆ ಆಗಿ ಮೂರುವರೆ ಗಂಟೆಯಾದರೂ ಪೊಲೀಸರಿಂದ ಯಾವುದೇ ಕ್ರಮ ಆಗಿರಲಿಲ್ಲ. ಹೀಗಾಗಿ ಠಾಣೆಗೆ ಮುತ್ತಿಗೆ ಹಾಕಲಾಗಿದೆ. ಈಗ ಪೊಲೀಸ್ ಆಯುಕ್ತರು ಕ್ರಮದ ಭರವಸೆ ನೀಡಿದ್ದಾರೆ. ಅರ್ಧ ತಾಸಿನಲ್ಲಿ ಎಫ್.ಐಆರ್ ಮಾಡುತ್ತೇವೆ ಎಂದಿದ್ದಾರೆ. ಹೀಗಾಗಿ ಈಗ ಪ್ರತಿಭಟನೆ ವಾಪಸ್ ಪಡೆಯುತ್ತಿದ್ದೇವೆ ಎಂದು ಹೇಳಿದ್ದಾಎ.

ಹು-ಧಾ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಹೇಳಿಕೆ ನೀಡಿ, ಜಾನುವಾರು ವಿಚಾರವಾಗಿ ಎರಡು ಕೋಮಿನವರ ಮಧ್ಯೆ ಗಲಾಟೆಯಾಗಿದೆ. ಒಂದು ಕೋಮಿನವರು ದೂರು ಕೊಟ್ಟಿದ್ದಾರೆ. ಗಂಭೀರ ಹಲ್ಲೆಯ ದೂರು ಕೊಟ್ಟಿದ್ದಾರೆ. ಇದರ ಪ್ರಕಾರ ಎಫ್​ಐಆರ್​ ದಾಖಲಿಸಲಾಗಿದೆ. ದೂರಿನಲ್ಲಿ ಇಬ್ಬರು ಮತ್ತು ಒಂದಷ್ಟು ಹತ್ತು ಜನರು ಹಲ್ಲೆ ಮಾಡಿದ್ದಾರೆಂದು ತಿಳಿಸಿದ್ದಾರೆ. ಹಲ್ಲೆಯಾದ ಏರಿಯಾದಲ್ಲಿ ಸಿಸಿಟಿವಿಗಳಿವೆ. ಅದು ಎಪಿಎಂಸಿ ಯಾರ್ಡ್ ಇದೆ. ಅದನ್ನೆಲ್ಲ‌ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

Continue Reading

ಇನ್ವೆಸ್ಟ್ ಕರ್ನಾಟಕ

Suicide Case : ಹೊಟ್ಟೆನೋವು ತಾಳಲಾರದೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ

Suicide Case : ಹಲವು ಸಮಯದಿಂದ ಕಾಡುತ್ತಿದ್ದ ಹೊಟ್ಟೆ ನೋವನ್ನು ತಾಳಲಾರದೆ ಶಿಕ್ಷಕರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆಯ ಚನ್ನಗಿರಿ ಬಳಿ ಘಟನೆ ನಡೆದಿದೆ.

VISTARANEWS.COM


on

Dalit Woman Raped In Uttar Pradesh
Koo

ದಾವಣಗೆರೆ: ಕೆಲವೊಮ್ಮೆ ಕೆಲವು ಆರೋಗ್ಯ ಸಮಸ್ಯೆಗಳು ಎಷ್ಟು ತೀವ್ರವಾಗಿರುತ್ತವೆ ಎಂದರೆ ಇದರಿಂದ ಮುಕ್ತಿ ಸಿಗಬೇಕು ಎಂದರೆ ಸಾವೇ ದಾರಿ (Suicide Case) ಅನಿಸಿಬಿಡುತ್ತದೆ. ಬೇರೆ ದಾರಿಗಳನ್ನು ಕಂಡುಕೊಳ್ಳುವ ವ್ಯವಧಾನ, ಹಣಕಾಸಿನ ವ್ಯವಸ್ಥೆಗಳೂ ಕೆಲವೊಮ್ಮೆ ಕೈಕೊಟ್ಟಿರುತ್ತವೆ. ದಾವಣಗೆರೆ ಜಿಲ್ಲೆಯ (Davanagere News) ಚನ್ನಗಿರಿ ತಾಲೂಕಿನ ಈ ಶಿಕ್ಷಕನಿಗೆ ಅದೇನಾಗಿತ್ತೋ ಗೊತ್ತಿಲ್ಲ. ಆದರೆ, ದೀರ್ಘ ಕಾಲದಿಂದ ಕಾಡುತ್ತಿದ್ದ ಹೊಟ್ಟೆ ನೋವು (Stomach Pain) ತಾಳಲಾರದೆ ಅವರು ಕೆರೆಗೆ ಹಾರಿ ಅತ್ಮಹತ್ಯೆ (Teacher suicide) ಮಾಡಿಕೊಂಡಿದ್ದಾರೆ.

ಚನ್ನಗಿರಿ ತಾಲೂಕಿನ ಹಿರೇಉಡ ಗ್ರಾಮದ ನಿವಾಸಿ ಶಿಕ್ಷಕರಾಗಿರುವ ಕೃಷ್ಣ ನಾಯ್ಕ್ (42) ಅವರು ಹೆದ್ದಾರಿ ಪಕ್ಕದಲ್ಲಿರುವ ಕೆರೆಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ.

ಮೈಸೂರಿನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿದ್ದ ಕೃಷ್ಣ ನಾಯ್ಕ್ ಅವರು ಅನೇಕ ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ನಾಲ್ಕು ದಿನದ ಹಿಂದೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಕೃಷ್ಣ ನಾಯ್ಕ್ ಅವರು ಬಳಿಕ ಮನೆಗೆ ಬಂದಿದ್ದರು.

ಗುರುವಾರ ಮುಂಜಾನೆ ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದ ಜನರಿಗೆ ಹೆದ್ದಾರಿ ಪಕ್ಕದ ಹೊಂಡದ ನೀರಿನಲ್ಲಿ ಕೃಷ್ಣನಾಯ್ಕ್ ಮೃತದೇಹ ಕಂಡಿತು. ಕೂಡಲೇ ಸಾರ್ವಜನಿಕರು ಚನ್ನಗಿರಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

ಬಸ್ಸಿನಿಂದ ಇಳಿಯುತ್ತಿದ್ದ ಮಹಿಳೆಗೆ ಗುದ್ದಿ ಸಾಯಿಸಿದ ಲಾರಿ

ಚಿತ್ರದುರ್ಗ: ಬಸ್‌ನಿಂದ ಕೆಳಗಿಳಿಯುವ ವೇಳೆ ಮಹಿಳೆಯೊಬ್ಬರಿಗೆ ಲಾರಿ ಡಿಕ್ಕಿಯಾಗಿದ್ದು, ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಿತ್ರದುರ್ಗದ ಹಿರಿಯೂರಿನ ಹೊರವಲಯದ ಎನ್‌ಎಚ್ 4 ರಸ್ತೆಯ ಮದ್ದೇರಹಳ್ಳ ಬಳಿ ಘಟನೆ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್‌ ಪಂಚರ್‌ ಆಗಿದ್ದ ಹಿನ್ನೆಲೆಯಲ್ಲಿ, ಎಲ್ಲರನ್ನು ಕೆಳಗಿಳಿಸಲಾಗುತ್ತಿತ್ತು. ಈ ವೇಳೆ ಮಲ್ಲಮ್ಮ ಎಂಬ ಮಹಿಳೆ ಕೆಳಗಿಳಿಯುತ್ತಿದ್ದಾಗ, ರಭಸವಾಗಿ ಬಂದ ಲಾರಿ ಗುದ್ದಿದೆ. ಲಾರಿ ಹೊಡೆದ ರಭಸಕ್ಕೆ ಮಲ್ಲಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ ಸವಾರನನ್ನು ಸಾಯಿಸಿ ಅಂಗಡಿಗೆ ನುಗ್ಗಿದ ಲಾರಿ

ಬೆಂಗಳೂರು: ನಗರದ ಬ್ಯಾಡರಹಳ್ಳಿ ಬಳಿ ಗೂಡ್ಸ್ ಲಾರಿ ಬೈಕ್‌ ಸವಾರನಿಗೆ ಡಿಕ್ಕಿ ಹೊಡೆದು ಸಾಯಿಸಿದ್ದು, ಘಟನೆಯ ಬಳಿಕ ಚಾಲಕ ಪರಾರಿಯಾಗಿದ್ದಾನೆ. ಇದು ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ.

ವೇಗವಾಗಿ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿದ ಪರಿಣಾಮ ಲಾರಿ ಡಿವೈಡರ್ ಮೇಲೆ ಹತ್ತಿ ಅಂಗಡಿಯೊಳಗೆ ನುಗ್ಗಿತ್ತು. ಅಂಗಡಿಗೆ ಅಪ್ಪಳಿಸುವ ಮುನ್ನ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿ ರಭಸಕ್ಕೆ ಬೈಕ್ ಸವಾರ 10 ಅಡಿಯಷ್ಟು ದೂರ ಹಾರಿ ಬಿದ್ದಿದ್ದು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಹಾಗೂ ಕ್ಲೀನರ್ ಲಾರಿಯಿಂದ ಇಳಿದು ಪರಾರಿಯಾಗಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ತಲೆಮರೆಸಿಕೊಂಡಿರುವ ಚಾಲಕನಿಗಾಗಿ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸರು ತಲಾಶೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : Human Sacrifice: ತನ್ನ ತಾಯ್ತನಕ್ಕಾಗಿ 4 ವರ್ಷದ ಮಗನನ್ನು ನರಬಲಿ ಕೊಟ್ಟ ಮಲತಾಯಿ, ಮಾತೃಕುಲಕ್ಕೆ ಈಕೆ ಕಳಂಕ

Continue Reading

ಇನ್ವೆಸ್ಟ್ ಕರ್ನಾಟಕ

Karnataka Industries: ಕೈಗಾರಿಕಾ ಇಲಾಖೆಗೆ ಅರಣ್ಯ ಸೇವೆ ಅಧಿಕಾರಿ ನೇಮಕ: ಉದ್ಯಮಿಗಳಿಗೆ ಸರ್ಕಾರದ ಭರವಸೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಬೆಳವಣಿಗೆ ಉತ್ತೇಜಿಸಲು ಸರ್ಕಾರ ಆಯ್ದ 7 ವಲಯಗಳಲ್ಲಿ ವಿಷನ್ ಗ್ರೂಪ್‌ಗಳನ್ನು ರಚಿಸಲಾಗುವುದು ಎಂದು ಎಂ.ಬಿ. ಪಾಟೀಲ್‌ ಘೋಷಣೆ ಮಾಡಿದರು.

VISTARANEWS.COM


on

MB Patil meeting industrialists
Koo

ಬೆಂಗಳೂರು: ಕೈಗಾರಿಕೆಗಳ ಸ್ಥಾಪನೆಗೆ ಶೀಘ್ರ ಅನುಮತಿ ಸಿಗುವ ಹಾಗೆ ಮಾಡಲು ಭಾರೀ ಮತ್ತು ಮಧ್ಯಮ ಕೈಗಾರಿಕೆ ಇಲಾಖೆಯಲ್ಲೇ ಭಾರತೀಯ ಅರಣ್ಯ ಸೇವೆಯ ಅಧಿಕಾರಿಯನ್ನು ನಿಯೋಜಿಸಲು ಸರ್ಕಾರ ನಿರ್ಧರಿಸಿದೆ. ಖಾಸಗಿ ಹೋಟೆಲಿನಲ್ಲಿ ರಾಜ್ಯದ ಪ್ರಮುಖ ಕೈಗಾರಿಕೋದ್ಯಮಿಗಳೊಂದಿಗೆ ಸೋಮವಾರ ಸಂಜೆ ವಿಚಾರ ವಿನಿಮಯ ಸಂದರ್ಭದಲ್ಲಿ ಭಾರಿ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್‌ ಈ ಭರವಸೆ ನೀಡಿದ್ದಾರೆ.

ಪಿಸಿಸಿಎಫ್‌ ದರ್ಜೆಯ ಐಎಫ್‌ಎಸ್‌ ಅಧಿಕಾರಿಯನ್ನು ನೇಮಕ ಮಾಡುವುದರಿಂದ ಪರಿಸರ ಸಂಬಂಧಿ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ಸಿಗಲಿದೆ. ಈ ಹಿಂದೆ ತಾವು ನೀರಾವರಿ ಸಚಿವರಾಗಿದ್ದಾಗ ಆ ಇಲಾಖೆಯಲ್ಲಿನ ಪರಿಸರ ಸಂಬಂಧಿ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ಪಿಸಿಸಿಎಫ್ ದರ್ಜೆಯ ಅಧಿಕಾರಿಯನ್ನು ನೇಮಿಸಿ ಪರಿಹಾರ ಕೊಂಡುಕೊಳ್ಳಲಾಗಿತ್ತು. ಅದೇ ಮಾದರಿಯನ್ನು ಇಲ್ಲಿಯೂ ಅನುಸರಿಸಲಾಗುತ್ತದೆ ಎಂದು ಉದ್ಯಮಿಗಳ ಗಮನಕ್ಕೆ ಎಂ.ಬಿ. ಪಾಟೀಲ್‌ ತಂದಿದ್ದಾರೆ. ಇದಕ್ಕೆ ಉದ್ಯಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಲಯವಾರು 7 ವಿಷನ್ ಗ್ರೂಪ್‌ ರಚನೆ
ರಾಜ್ಯದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಬೆಳವಣಿಗೆ ಉತ್ತೇಜಿಸಲು ಸರ್ಕಾರ ಆಯ್ದ 7 ವಲಯಗಳಲ್ಲಿ ವಿಷನ್ ಗ್ರೂಪ್ ಗಳನ್ನು (ದೂರದರ್ಶಿ ತಂಡಗಳು) ರಚಿಸಲಿದೆ ಎಂದು ಸಚಿವ ಎಂ.ಬಿ.ಪಾಟೀಲ ಘೋಷಣೆ ಮಾಡಿದರು.

ಉದ್ಯಮಿಗಳು, ಉನ್ನತಾಧಿಕಾರಿಗಳು ಮತ್ತು ಶಿಕ್ಷಣ ತಜ್ಞರು ಇರುವ ಈ ವಿಷನ್ ಗ್ರೂಪ್ ಗಳು ಸೂಕ್ತ ಮಾರ್ಗದರ್ಶನ ನೀಡಲಿವೆ. ಏರೋಸ್ಪೇಸ್‌ ಮತ್ತು ರಕ್ಷಣೆ, ಮಷೀನ್‌ ಟೂಲ್ಸ್, ಇಎಸ್‌ಡಿಎಂ, ಫಾರ್ಮಾ, ಕಬ್ಬಿಣ-ಉಕ್ಕು-ಸಿಮೆಂಟ್‌ ಉತ್ಪಾದನಾ ಕ್ಷೇತ್ರಗಳನ್ನೊಳಗೊಂಡ ಕೋರ್‌ ಮ್ಯಾನುಫ್ಯಾಕ್ಚರಿಂಗ್‌, ಸ್ಟಾರ್ಟಪ್ಸ್‌ (ಐ.ಟಿ‌.ಯೇತರ) ಮತ್ತು ಆಟೋ/ವಿದ್ಯುತ್‌ಚಾಲಿತ ಇವು ಹೊಸದಾಗಿ ವಿಷನ್ ಗ್ರೂಪ್ ರಚನೆಯಾಗಲಿರುವ ವಲಯಗಳಾಗಿವೆ.

ರಾಜ್ಯದಲ್ಲಿ ಈ ವಲಯಗಳಿಗಾಗಿ ವಿಷನ್ ಗ್ರೂಪ್‌ಗಳು ರಚನೆಯಾಗುತ್ತಿರುವುದು ಇದೇ ಮೊದಲು. ಇದಕ್ಕೆ ಮುಂಚೆ ಒಟ್ಟಾರೆ ಉದ್ಯಮದ ಅಭಿವೃದ್ಧಿಗೆ ವಿಷನ್ ಗ್ರೂಪ್ ಇತ್ತು. ಆದರೆ ಇದು ವಲಯವಾರು ಮಟ್ಟದಲ್ಲಿ ಇರಲಿಲ್ಲ. ಮೇಲೆ ತಿಳಿಸಿದ ವಲಯಗಳ ಜೊತೆಗೆ ಭವಿಷ್ಯದ ಸಂಚಾರ ವ್ಯವಸ್ಥೆ, ಗ್ರೀನ್‌ ಹೈಡ್ರೋಜನ್, ಆಹಾರ ಸಂಸ್ಕರಣೆ, ಜವಳಿ, ಉಗ್ರಾಣ ಮತ್ತು ಲಾಜಿಸ್ಟಿಕ್ಸ್‌ ಗಳನ್ನು ಆದ್ಯತೆಯ ವಲಯಗಳೆಂದು ಗುರುತಿಸಲಾಗಿದೆ ಎಂದು ಎಂ.ಬಿ. ಪಾಟೀಲ್‌ ಹೇಳಿದರು.

ವಿದ್ಯುತ್‌ಚಾಲಿತ ವಾಹನ ತಯಾರಿಕೆ ಕ್ಷೇತ್ರದಲ್ಲಿ ಈಗಾಗಲೇ 40 ಸಾವಿರ ಕೋಟಿ ರೂ. ಹೂಡಿಕೆಯಾಗಿದೆ. ದೇಶದ ಪ್ರಪ್ರಥಮ ಗ್ರೀನ್‌ ಹೈಡ್ರೋಜನ್‌ ಕ್ಲಸ್ಟರ್ ಮಂಗಳೂರಿನಲ್ಲಿ ತಲೆಯೆತ್ತಲಿದ್ದು, ಆಸಕ್ತ ಉದ್ಯಮಿಗಳು ಇದಕ್ಕೆ 2.8 ಲಕ್ಷ ಕೋಟಿ ರೂ. ಹೂಡಿಕೆ ಮಾಡುವುದು ಈಗಾಗಲೇ ಖಾತ್ರಿಗೊಂಡಿದೆ. ಇದಕ್ಕೆ ಬೇಕಿರುವ ಭೂಮಿ, ನೀರು ಮತ್ತಿತರ ಮೂಲಸೌಕರ್ಯ ಒದಗಿಸಲು ಸರ್ಕಾರ ಒತ್ತು ನೀಡಲಿದೆ.

ಏರೋಸ್ಪೇಸ್‌ ಮತ್ತು ರಕ್ಷಣಾ ಕ್ಷೇತ್ರಕ್ಕೆ ಉತ್ತೇಜನ ನೀಡಲು ದೇವನಹಳ್ಳಿಯ ಆರ್‌ & ಡಿ ಪಾರ್ಕ್‌ನಲ್ಲಿ ಕರ್ನಾಟಕ ಏರೋಸ್ಪೇಸ್‌ ತಂತ್ರಜ್ಞಾನ ಕೇಂದ್ರ ತೆರೆಯಲು ಯೋಜಿಸಲಾಗಿದೆ. ಜತೆಗೆ, ಸರ್ಕಾರವು ರಾಜ್ಯದಲ್ಲಿ 2.5 ಲಕ್ಷ ಕೋಟಿ ರೂ. ಹೂಡಿಕೆಗೆ ಇರುವ ಅವಕಾಶಗಳನ್ನು ಸಮರ್ಥ ರೀತಿಯಲ್ಲಿ ಬಳಸಿಕೊಳ್ಳಲಿದೆ.

ಸಭೆಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕಿ ಗೀತಾಂಜಲಿ ಕಿರ್ಲೋಸ್ಕರ್, ಟಾಟಾ ಮೋಟಾರ್‍ಸ್‌ನ ಸುಶಾಂತ್‌ ನಾಯಕ್‌, ಟೆಕ್ಸಾಸ್‌ ಇನ್‌ಸ್ಟ್ರುಮೆಂಟ್ಸ್‌ನ ರಾಜೀವ್‌ ಕುಶೂ, ಫಾಕ್ಸ್‌ಕಾನ್‌ ಕಂಪನಿಯ ಉನ್ನತಾಧಿಕಾರಿ ವಿನ್ಸೆಂಟ್‌, ಏಷ್ಯನ್‌ ಪೇಂಟ್ಸ್‌ನ ಅಮಿತ್‌ ಕುಮಾರ್‌ ಸಿಂಗ್‌ ಸೇರಿದಂತೆ 30ಕ್ಕೂ ಹೆಚ್ಚು ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಉದ್ಯಮ ವಲಯದ ಸಂಘಟನೆಗಳಾದ ಸಿಐಐ, ಎಫ್‌ಐಸಿಸಿಐ, ಎಫ್‌ಕೆಸಿಸಿಐ, ಬಿಸಿಐಸಿ, ಕಾಸಿಯಾ, ಲಘು ಉದ್ಯೋಗ ಭಾರತಿ, ಎಲೆಕ್ಟ್ರಾನಿಕ್‌ ಸಿಟಿ ಇಂಡಸ್ಟ್ರೀಸ್‌ ಅಸೋಸಿಯೇಷನ್‌, ಐಎಂಟಿಎಂಎ, ಅವೇಕ್‌, ಅಸೋಚಂ ಮುಂತಾದವುಗಳೂ ಭಾಗವಹಿಸಿದ್ದವು. ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್‌ ಕೃಷ್ಣ, ಕೆಐಎಡಿಬಿ ಸಿಇಒ ಗಿರೀಶ್ ಮುಂತಾದವರು ಉಪಸ್ಥಿತರಿದ್ದರು.

ಉದ್ಯಮಸ್ನೇಹಿ ವಾತಾವರಣ
ಒಟ್ಟಾರೆ ಉದ್ಯಮ ಸ್ನೇಹಿ ವಾತಾವರಣ ನಿರ್ಮಿಸಲು ಪೂರಕವಾದ ಕ್ರಮಗಳನ್ನು ವಹಿಸಲಾಗುವುದು. ಹೆಸರಿಗಷ್ಟೇ ಇರುವ ಏಕಗವಾಕ್ಷಿ ಯೋಜನೆಗೆ ನಿಜ ಅರ್ಥದಲ್ಲಿ ಬದಲಾವಣೆ ತಂದು ಅನಗತ್ಯ‌ ಅಡಚಣೆಗಳನ್ನು ನಿರ್ಮೂಲನೆ ಮಾಡಲಾಗುವುದು. ಬಹುಗವಾಕ್ಷಿಗೆ ಅವಕಾಶ ಇಲ್ಲದಂತೆ‌ ತ್ವರಿತವಾಗಿ ಅನುಮತಿಗಳು ಸಿಗುವ ಹಾಗೆ ಮಾಡಲಾಗುವುದು. ಕೈಗಾರಿಕೆ ಬೆಳವಣಿಗೆಗೆ ಸಂಬಂಧಿಸಿದಂತೆ ಸಲಹೆ ಸೂಚನೆಗಳನ್ನು ತೆರೆದ ಮನಸ್ಸಿನಿಂದ ಪರಿಶೀಲಿಸಲಾಗುವುದು ಎಂದು ಉದ್ಯಮಿಗಳ ಪ್ರಶ್ನೆಗೆ ಸಚಿವ ಎಂ.ಬಿ. ಪಾಟೀಲ ಉತ್ತರಿಸಿದರು.

ಇದನ್ನೂ ಓದಿ: Aero India 2023: ಭಾರತದ ರಕ್ಷಣಾ ರಫ್ತು 2024ರಲ್ಲಿ 500 ಕೋಟಿ ಡಾಲರ್‌ ಗುರಿ: ಹೂಡಿಕೆದಾರರಿಗೆ ಸುವರ್ಣಾವಕಾಶ ಎಂದ ಪ್ರಧಾನಿ ಮೋದಿ

Continue Reading

ಇನ್ವೆಸ್ಟ್ ಕರ್ನಾಟಕ

Karnataka Election : ಬಿಜೆಪಿ ಶೀಘ್ರದಲ್ಲೇ ಕೋಮು ಗಲಭೆ ಮಾಡಿಸಲಿದೆ: ಸಂಸದ ಡಿ.ಕೆ. ಸುರೇಶ್‌ ಹೇಳಿಕೆ

ಕರ್ನಾಟಕ ಚುನಾವಣೆ (Karnataka Election) ಸಮಯದಲ್ಲಿ ರಾಜ್ಯದಲ್ಲಿ ಕೋಮುಗಲಭೆಗಳನ್ನು ಬಿಜೆಪಿ ಸೃಷ್ಟಿ ಮಾಡುವ ಸಾಧ್ಯತೆಯಿದೆ ಎಂದು ಸಂಸದ ಡಿ.ಕೆ. ಸುರೇಶ್‌ ಹೇಳಿಕೆ ನೀಡಿದ್ದಾರೆ.

VISTARANEWS.COM


on

r ashok will defeated if dk suresh contests from padmanabhanagar
Koo

ಬೆಂಗಳೂರು: ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಕೋಮುಗಲಭೆಯನ್ನು ನಡೆಸಲು ಬಿಜೆಪಿಯು ತಯಾರಿ ನಡೆಸುತ್ತಿದೆ ಎಂದು ಕಾಂಗ್ರೆಸ್‌ ಸಂಸದ ಡಿ.ಕೆ. ಸುರೇಶ್‌ ತಿಳಿಸಿದ್ದಾರೆ. ಸಿ.ಟಿ. ರವಿ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ. ಸುರೇಶ್‌, ಚುನಾವಣೆಯಲ್ಲಿ ಗೆಲ್ಲುವುದಕ್ಕೋಸ್ಕರ (Karnataka Election) ಬಿಜೆಪಿಯವರು ಏನು ಬೇಕಾದರೂ ಮಾಡುತ್ತಾರೆ ಎಂದರು.

ಸಿ.ಟಿ. ರವಿಯವರು ನಮ್ಮ ಸರ್ವೆ ವಿಚಾರದಲ್ಲಿ ವ್ಯಂಗ್ಯ ಮಾಡಿದ್ದಾರೆ ಎಂದ ಡಿ.ಕೆ. ಸುರೇಶ್‌, ಬಿಜೆಪಿ ಪಕ್ಷ ಶೀಘ್ರದಲ್ಲೇ ಕೋಮು ಗಲಭೆ ಮಾಡಿಸಲು ಸಿದ್ದವಾದಂತೆ ಕಾಣುತ್ತಿದೆ. ಕರಾವಳಿ ಬೆಂಗಳೂರು ಬೇರೆ ಕಡೆ ಕೋಮು ಗಲಭೆ ಮಾಡಿಸಲು ಸಿದ್ದತೆ ಮಾಡಿಕೊಂಡಂತೆ ಕಾಣ್ತಿದೆ. ರಾಜ್ಯದಲ್ಲಿ ಅಶಾಂತಿ ಮೂಡಿಸಲು ಸಿಟಿ ರವಿ ಪಾಕಿಸ್ತಾನ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಪದೇ ಪದೇ ಪಾಕಿಸ್ತಾನ ವಿಚಾರ ತರುವಂತಹ ಸಿಟಿ ರವಿ ವಿರುದ್ದ ಕ್ರಮ ಆಗಬೇಕು. ಬಿಜೆಪಿಯವರು ನೀಚರು, ಅವರು ಯಾವ ಹಂತಕ್ಕೆ ಬೇಕಾದರೂ ಹೋಗ್ತಾರೆ.

ರಾಜ್ಯದ ಬಗ್ಗೆ ಅವರ ಗಮನ ಇಲ್ಲ, ಅವರ ನಂಟು ಇರುವುದೆಲ್ಲ ಪಾಕಿಸ್ತಾನದ ವಿಚಾರಕ್ಕೆ ಮಾತ್ರ. ಮೋದಿ ಯಾಕೆ ಬರ್ತಾ ಇದಾರೆ ರಾಜ್ಯಕ್ಕೆ? ಅವರ ಮನ್ ಕಿ ಬಾತ್ ನಲ್ಲಿ ಭ್ರಷ್ಟಾಚಾರ ಕಾಣಸ್ತಾ ಇಲ್ವಾ? ಬಿಜೆಪಿಯವರಿಗೆ ನಾಚಿಕೆ ಆಗಬೇಕು, ಅವರ ಪಕ್ಷದ ನಾಯಕರನ್ನು ಕಂಟ್ರೋಲ್ ಮಾಡಲು ಆಗದವರು ಡಿಕೆಶಿವಕುಮಾರ್ ಬಗ್ಗೆ ಮಾತನಾಡ್ತಾರಾ? ಡಿ.ಕೆ. ಶಿವಕುಮಾರ್ ಬಗ್ಗೆ ಮಾತನಾಡೋ ಯಾವ ಹಕ್ಕಿದೆ ಅವರಿಗೆ. ಪಾಕಿಸ್ತಾನ ಬೇಕಿದ್ದರೆ ಇವರು ಸೇರಿಸಿಕೊಳ್ಳಲಿ. ಪಾಕಿಸ್ತಾನದ ಹೆಸರಿಟ್ಟುಕೊಂಡು ರಾಜಕಾರಣ ಮಾಡುವುದು ನಿಮ್ಮ ಪದ್ದತಿ. ಬಿಜೆಪಿಯವರು ಏನು ಬೇಕಾದರೂ ಮಾಡ್ತಾರೆ. ರಾಜಕಾರಣಕ್ಕಾಗಿ ಕೊಲೆಗಳನ್ನು ಮಾಡಿಸ್ತಾರೆ, ಯಾರನ್ನು ಬೇಕಾದರೂ ಹೊಡಿತಾರೆ, ಯಾವ ಆಪರೇಷನ್ ಬೇಕಾದರೂ ಮಾಡ್ತಾರೆ ಎಂದರು.

ಡಾ. ಜಿ. ಪರಮೇಶ್ವರ್‌ ಅಸಮಧಾನ ವಿಚಾರ ಕುರಿತು ಪ್ರತಿಕ್ರಿಯಿಸಿ, ಪರಮೇಶ್ವರ್ ಅಸಮಧಾನವೆಲ್ಲ ಏನೂ ಇಲ್ಲ. ಒಟ್ಟಾಗಿ ಕೆಲಸ ಮಾಡ್ತಾ ಇದ್ದಾರೆ. ರಾಜೀನಾಮೆ ಕೊಟ್ಟ ಬಗ್ಗೆ ಮಾಹಿತಿ ಇಲ್ಲ. ಡಿ. ಕೆ. ಶಿವಕುಮಾರ್, ಪರಮೇಶ್ವರ್ ಒಂದೆ ನಾಣ್ಯದ ಮುಖಗಳು ಎಂದರು.

ರಾಮನಗರ ಜಿಲ್ಲೆ ರಾಜಕಾರಣದಲ್ಲಿ ಡಿ.ಕೆ. ಸಹೋದರರು ಹಾಗೂ ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ ನಡುವೆ ವಾಗ್ಯುದ್ಧ ಮುಂದುವರಿದಿದೆ. ಕಾಂಗ್ರೆಸ್‌ ಪಕ್ಷದ ಕುರಿತು ಅಶ್ವತ್ಥನಾರಾಯಣ ಟೀಕೆ ಮಾಡಿರುವ ಕುರಿತು ಖಾರವಾಗಿ ಪ್ರತಿಕ್ರಿಯೆ ನೀಡಿರುವ ಡಿ.ಕೆ. ಸುರೇಶ್‌, ಕೆಲಸ ನೋಡೋಕೆ ಹೇಳಿ ಅವನಿಗೆ. ಅವನ ಬಗ್ಗೆ ಇನ್ನೊಂದು ದಿನ ಮಾತಾಡ್ತೀನಿ ಎಂದು ಏಕವಚನದಲ್ಲೇ ಹರಿಹಾಯ್ದಿದ್ದಾರೆ.

ಇದನ್ನೂ ಓದಿ : Karnataka Election: ಪ್ರಜಾಧ್ವನಿಗೆ ಇರುವುದು ಎರಡೇ ಬಸ್‌; 4 ಇದ್ದಿದ್ರೆ ನಾನೂ ಸಾರಥಿ ಆಗ್ತಿದ್ದೆ: ಡಾ.ಜಿ.ಪರಮೇಶ್ವರ್‌

ಚುನಾವಣೆಗೆ ಕಾಂಗ್ರೆಸ್‌ ಸಿದ್ಧತೆ ಕುರಿತು ಪ್ರತಿಕ್ರಿಯೆ ನೀಡಿದ ಡಿ.ಕೆ. ಸುರೇಶ್‌, ಈಗಾಗಲೇ ಚುನಾವಣೆಗೆ ಕಾಂಗ್ರೆಸ್ ಪಕ್ಷ ಎಲ್ಲ ರೀತಿಯ ಸಿದ್ದತೆ ಮಾಡಿಕೊಂಡಿದೆ. ಚುನಾವಣಾ ಸಮಿತಿ ಕೂಡ ಸಭೆ ಸೇರಿ ರಾಜ್ಯದ ವರಿಷ್ಟರಿಗೆ ನಮ್ಮ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಕೇಂದ್ರದ ಸ್ಕ್ರೀನಿಂಗ್ ಕಮೀಟಿ ಮುಂದೆ ಆದಷ್ಟು ಬೇಗ ಕಳಿಸುತ್ತೇವೆ. ಕ್ಷೇತ್ರದಲ್ಲಿ ಎಲ್ಲರನ್ನೂ ಒಗ್ಗಟ್ಟಾಗಿ ತೆಗೆದುಕೊಂಡು ಹೋಗಲು ಅನುಕೂಲ ಆಗಲಿದೆ. ಯಾವ ಶಿಫಾರಸುಗಳನ್ನು ಮಾಡಿದ್ದೇವೆ ಎಲ್ಲವೂ ಸ್ಕ್ರೀನಿಂಗ್ ಕಮಿಟಿ ಮುಂದೆ ಹೋಗಿ ನಿರ್ಧಾರ ಆಗಲಿದೆ ಎಂದರು.

ಬಿಜೆಪಿಯು ಭ್ರಮೆಯಲ್ಲಿ ರಾಜ್ಯವನ್ನು ಇಟ್ಟಿದೆ. ಸುಳ್ಳು ಆಶ್ವಾಸನೆ, ಸುಳ್ಳು ಭರವಸೆಗಳೆಲ್ಲವೂ ಕೂಡ ಹುಸಿಯಾಗಿದೆ. ಹಳ್ಳಿಗಳ ಮಟ್ಟದಲ್ಲಿ ಜನರು ಬಿಜೆಪಿಯಿಂದ ಬದಲಾವಣೆ ಬಯಸಿದ್ದಾರೆ. ಬಿಜೆಪಿ ಸರ್ಕಾರ ತೊಲಗಬೇಕು ಅಂತ ಜನ ಬಯಸ್ತಾ ಇದ್ದಾರೆ. ಪಕ್ಷದ ಅಧ್ಯಕ್ಷರು ಎಲ್ಲ ಕಡೆಯಿಂದಲೂ ಸರ್ವೆ ಮಾಡಿಸಿದ್ದಾರೆ ಎಂದರು.

Continue Reading
Advertisement
Empty Stomach Foods
ಆರೋಗ್ಯ27 mins ago

Empty Stomach Foods: ಬೆಳಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಈ ಆಹಾರಗಳನ್ನು ತಿನ್ನಬೇಡಿ!

karnataka weather Forecast
ಮಳೆ57 mins ago

Karnataka Weather : ಕರಾವಳಿ, ಮಲೆನಾಡಿಗೆ ಗುಡುಗು ಸಹಿತ ಭಾರಿ ಮಳೆ; 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Menopausal Weight Gain
ಆರೋಗ್ಯ1 hour ago

Menopausal Weight Gain: ಋತುಚಕ್ರ ನಿಂತ ಬಳಿಕ ತೂಕ ಹೆಚ್ಚುವುದನ್ನು ತಡೆಯಬಹುದೇ?

Vastu Tips
ಧಾರ್ಮಿಕ2 hours ago

Vastu Tips: ತಿಳಿದಿರಲಿ, ಕನ್ನಡಿಯೂ ನುಡಿಯುತ್ತದೆ ನಮ್ಮ ಭವಿಷ್ಯ!

Virat kohli
ಪ್ರಮುಖ ಸುದ್ದಿ2 hours ago

Virat Kohli : ಐಸಿಸಿ ಟೂರ್ನಿಯಲ್ಲಿ ಗರಿಷ್ಠ ರನ್ ಬಾರಿಸಿ ವಿಶೇಷ ಮೈಲುಗಲ್ಲು ಸ್ಥಾಪಿಸಿದ ವಿರಾಟ್​ ಕೊಹ್ಲಿ

Dina bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರು ಮಡದಿಯ ಪ್ರೀತಿಗೆ ಸೋಲುವಿರಿ; ಮನೆಯಲ್ಲಿ ಸಂತೋಷದ ದಿನ

NEET UG
ಪ್ರಮುಖ ಸುದ್ದಿ7 hours ago

NEET UG : ನೀಟ್​ ಪರೀಕ್ಷೆ ಅಕ್ರಮಗಳ ತನಿಖೆ ಹೊಣೆ ಸಿಬಿಐಗೆ ಒಪ್ಪಿಸಿದ ಕೇಂದ್ರ ಸರ್ಕಾರ

T20 world cup 2024
ಪ್ರಮುಖ ಸುದ್ದಿ8 hours ago

T20 World Cup 2024 : ಬಾಂಗ್ಲಾದೇಶ ವಿರುದ್ಧ ಭಾರತಕ್ಕೆಭರ್ಜರಿ 50 ರನ್​ಗಳ ಭರ್ಜರಿ ಗೆಲುವು

Mangalya chain was stolen by pretending to be a police in Shira
ಕರ್ನಾಟಕ8 hours ago

Theft Case: ಶಿರಾದಲ್ಲಿ ಪೊಲೀಸರಂತೆ ನಟಿಸಿ ಮಹಿಳೆಯ ಮಾಂಗಲ್ಯ ಕಳವು!

Union Minister Pralhad Joshi statement
ಕರ್ನಾಟಕ8 hours ago

Pralhad Joshi: ಕೇವಲ ಶೇ.0.1 ಮತ ಗಳಿಕೆ ಹೆಚ್ವಿದ್ದಕ್ಕೇ ಕಾಂಗ್ರೆಸ್ ಗೆದ್ದ ಭ್ರಮೆಯಲ್ಲಿದೆ; ಪ್ರಲ್ಹಾದ್ ಜೋಶಿ ಗೇಲಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ2 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ3 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು6 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು6 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ7 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ7 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ7 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌