ಕರ್ನಾಟಕ
Mahila Yakshagana: ಯಕ್ಷಗಾನ ಮಹಿಳಾ ತಂಡ ದೇಶದೆಲ್ಲೆಡೆ ಕಲೆ ಪಸರಿಸುತ್ತಿರುವುದು ಅಭಿಮಾನದ ಸಂಗತಿ: ಯು.ಟಿ.ಖಾದರ್
Mahila Yakshagana: ಕರ್ನಾಟಕ ಮಹಿಳಾ ಯಕ್ಷಗಾನ ಸಂಸ್ಥೆ ಹೆಣ್ಣುಮಕ್ಕಳಿಗೆ ಯಕ್ಷಗಾನ ಕಲಿಸುತ್ತಾ 25 ವರ್ಷ ಸಾಗಿ ಬಂದಿರುವುದು ಸ್ತುತ್ಯರ್ಹ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮೆಚ್ಚುಗೆ ವ್ಯಕ್ತಪಡಿಸಿದರು.
ಬೆಂಗಳೂರು: ಯಕ್ಷಗಾನ (Mahila Yakshagana) ಕರಾವಳಿ ಭಾಗದ ಕಣ್ಣಿದ್ದಂತೆ. ಈ ಕಲೆಯಲ್ಲಿ ಮಹಿಳೆಯರು ತೊಡಗುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.
ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಆಯೋಜಿಸಿದ್ದ ಕರ್ನಾಟಕ ಮಹಿಳಾ ಯಕ್ಷಗಾನ (ಯಕ್ಷಗಾನ ಮಹಿಳಾ ತಂಡ) ಸಂಸ್ಥೆಯ ಬೆಳ್ಳಿ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿ, ಯಕ್ಷಗಾನದಲ್ಲಿ ಮಹಿಳಾ ತಂಡ ತೊಡಗಿಸಿಕೊಂಡಿರುವುದಲ್ಲದೆ, ಕಲೆಯನ್ನು ದೇಶದೆಲ್ಲೆಡೆ ಪಸರಿಸುತ್ತಿರುವುದು ಅಭಿಮಾನದ ಸಂಗತಿ. ಹೆಣ್ಣುಮಕ್ಕಳಿಗೆ ಯಕ್ಷಗಾನ ಕಲಿಸುತ್ತಾ 25 ವರ್ಷ ಸಾಗಿ ಬಂದಿರುವುದು ಸ್ತುತ್ಯರ್ಹ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕನ್ನಡಪ್ರಭ ಮತ್ತು ಏಷಿಯಾನೆಟ್ ಸುವರ್ಣ ಪ್ರಧಾನ ಸಂಪಾದಕ ರವಿ ಹೆಗಡೆಯವರು ಯಕ್ಷಗಾನ ತಂಡದ ಕೊಡುಗೆಯನ್ನು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಮೀಡಿಯಾ ಅಲೂಮ್ನಿ ಅಸೋಸಿಯೇಷನ್ ಅವರ ವತಿಯಿಂದ ಚಿಂತನ-ಮಂಥನ ಕಾರ್ಯಕ್ರಮ ನಡೆಯಿತು. ನಂತರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಕೋಟ ಶಿವರಾಮ ಕಾರಂತರು ನಿರ್ದೇಶಿಸಿದ ಯಕ್ಷಗಾನ ಬ್ಯಾಲೆ ಪ್ರದರ್ಶನ ಎಲ್ಲರ ಮನಸೂರೆಗೊಳಿಸಿತು. ತಂಡದ ಗುರುಗಳಾದ ಶ್ರೀನಿವಾಸ ಸಾಸ್ತಾನ ಅವರಿಗೆ ಮಹಿಳಾ ತಂಡದಿಂದ ಗುರುವಂದನೆ ಆಕರ್ಷಕವಾಗಿ ಮೂಡಿಬಂತು.
ಕನ್ನಡ ಭಾಷೆಯಲ್ಲೇ ನಡೆಯುವ ಯಕ್ಷಗಾನವನ್ನು ವಿಶೇಷವಾಗಿ ಸಂಸ್ಥೆಯ ಮಕ್ಕಳಿಂದ ಆಂಗ್ಲಭಾಷೆಯಲ್ಲಿ ಕಂಸವಧೆ ಎನ್ನುವ ಯಕ್ಷಗಾನ, ತೆಂಕುತಿಟ್ಟಿನಲ್ಲಿ ಖ್ಯಾತ ಮಹಿಳಾ ಭಾಗವತರಾದ ಅಮೃತಾ ಅಡಿಗ ಇವರ ಸಿರಿಕಂಠದಲ್ಲಿ ‘ಸುದರ್ಶನ ವಿಜಯ’ ಪ್ರಸಂಗ, ಬಡಗುತಿಟ್ಟಿನ ಖ್ಯಾತ ಮಹಿಳಾ ಭಾಗವತರಾದ ಚಿಂತನಾ ಹೆಗಡೆ ಇವರ ಸಿರಿಕಂಠದಲ್ಲಿ ‘ವೀರ ಅಭಿಮನ್ಯು’ ಯಕ್ಷಗಾನ ಯಕ್ಷಪ್ರೇಮಿಗಳನ್ನು ರಂಜಿಸಿತು. ಎಲ್ಲಾ ಕಾರ್ಯಕ್ರಮ ಮಹಿಳೆಯರಿಂದ ನಡೆದದ್ದು ವಿಶೇಷ ಆಕರ್ಷಣೆಯಾಗಿತ್ತು.
ಇದನ್ನೂ ಓದಿ | P.S. Sreedharan Pillai : ಗೋವಾ ರಾಜ್ಯಪಾಲರ ಕಥಾ ಸಂಕಲನದ ಕನ್ನಡ ಅನುವಾದ ಬಿಡುಗಡೆ
ಸಭಾ ಕಾರ್ಯಕ್ರಮದಲ್ಲಿ ದೂರದರ್ಶನ, ಆಕಾಶವಾಣಿಯ ನಿರ್ದೇಶಕರಾದ ನಿರ್ಮಲ ಎಲಿಗಾರ್, ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷರಾದ ಡಾ. ತೇಜಸ್ವಿನಿ ಅನಂತ್ ಕುಮಾರ್, ಹಿರಿಯ ಪತ್ರಕರ್ತ ಡಾ.ಈಶ್ವರ್ ದೈತೋಟ, ದಕ್ಷಿಣ ಕನ್ನಡ ಸಂಘದ ಅಧ್ಯಕ್ಷರಾದ ರಾಮಚಂದ್ರ ಉಪಾಧ್ಯ, ವಿಕಾಸ್ ಗ್ಲೋಬಲ್ ಸೋಲ್ಯುಷನ್ಸ್ನ ಅಧ್ಯಕ್ಷರಾದ ಡಿ.ವಿ ವೆಂಕಟಾಚಲಪತಿ, ಜಿ. ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ 14 ಯಕ್ಷಗಾನ ಗುರುಗಳಿಗೆ ‘ಕರ್ನಾಟಕ ಯಕ್ಷ ಗುರು ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಸಂಸ್ಥೆಯ ಸ್ಥಾಪಕರಾದ ಗೌರಿ.ಕೆ ಸ್ವಾಗತಿಸಿದರು, ಸುಪ್ರೀತಾ ಗೌತಮ್ ಮತ್ತು ಚೈತ್ರ ಕೋಟ ಕಾರ್ಯಕ್ರಮ ನಿರೂಪಿಸಿದರು.
ಕರ್ನಾಟಕ
Cauvery Protest: ಕಾವೇರಿ ಕಿಚ್ಚು: ಮಂಡ್ಯ ಬಂದ್; ಹೆದ್ದಾರಿಯಲ್ಲಿ ಉರುಳುಸೇವೆ, ರೈತರ ಜತೆ ಸೇರಿದ ಬಿಜೆಪಿ, ಜೆಡಿಎಸ್
ಇಂದಿನ ಹೋರಾಟಕ್ಕೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಾಥ್ ನೀಡಲಿದ್ದಾರೆ. ಇಂದಿನ ರೈತರ ಹೋರಾಟದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ.
ಮಂಡ್ಯ: ಮಂಡ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾವೇರಿ ಕಿಚ್ಚು (Cauvery Dispute) ಕಾವೇರಿದ್ದು, ಇಂದು ಮಂಡ್ಯ ಪೂರ್ತಿ ಬಂದ್ (Mandya Bundh) ಆಗಿದೆ. ವರ್ತಕರು ಸ್ವಯಂಪ್ರೇರಿತರಾಗಿ ಬಂದ್ ಮಾಡಿದ್ದಾರೆ. ಪ್ರತಿಭಟನಾಕಾರರು (Cauvery protest) ಮುಂಜಾನೆಯಿಂದಲೇ ಹೆದ್ದಾರಿಯಲ್ಲಿ ಮಲಗಿ, ಕಬ್ಬಿನ ಜಲ್ಲೆ ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಇಂದಿನ ಹೋರಾಟಕ್ಕೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಾಥ್ ನೀಡಲಿದ್ದಾರೆ. ಇಂದಿನ ರೈತರ ಹೋರಾಟದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಸಿ.ಟಿ ರವಿ ಹಾಗೂ ಮಧ್ಯಾಹ್ನ 12ಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗಮಿಸಿ ಮಂಡ್ಯದಲ್ಲಿ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಹೋರಾಟದಲ್ಲಿ ಭಾಗಿಗಳಾಗಲಿದ್ದಾರೆ.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಲ್ಲಿ ರೈತರ ಪ್ರತಿಭಟನೆ ಹಲವು ದಿನಗಳಿಂದ ನಡೆಯುತ್ತಿದೆ. ಇಂದು ಮಂಡ್ಯ ಬಂದ್ಗೆ ಕರೆ ನೀಡಲಾಗಿದೆ. ಮಂಡ್ಯದ ಸಂಜಯ ವೃತ್ತದಲ್ಲಿ ಟೀ ತಯಾರಿಸಿ ಪ್ರತಿಭಟನೆಯನ್ನು ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ಆಯೋಜಿಸಿದ್ದಾರೆ. ಕಾವೇರಿ ವಿಚಾರದಲ್ಲಿ ಸುಪ್ರಿಂ ಕೋರ್ಟ್ ನೀಡಿರುವ ತೀರ್ಪಿನ ಪ್ರತಿಯಿಂದ ಟೀ ತಯಾರಿಸಿ ಪ್ರತಿಭಟನೆ ನಡೆಯಲಿದೆ. ಹಾಗೆಯೇ ಕಿವಿಗೆ ಹೂ ಮುಡಿದು, ಪಟ್ಟೆ ಪಟ್ಟೆ ಚಡ್ಡಿ ಧರಿಸಿಯೂ ಪ್ರತಿಭಟನೆಗೆ ನಿರ್ಧರಿಸಲಾಗಿದೆ.
ಮಂಡ್ಯ ಬಂದ್ ಹಿನ್ನೆಲೆಯಲ್ಲಿ ಪೊಲೀಸರು ಅಲರ್ಟ್ ಆಗಿದ್ದು, ಭದ್ರತೆಗಾಗಿ 6 ಡಿಎಆರ್, 4 ಕೆ ಎಸ್ ಆರ್ ಪಿ ತುಕಡಿ ಜೊತೆಗೆ 200 ಜನ ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾವಹಿಸಿದ್ದಾರೆ.
ಬೆಳಗೆಯಿಂದ ಕಾರ್ಯ ನಿರ್ವಹಿಸ್ತಿದ್ದ ಪೆಟ್ರೋಲ್ ಬಂಕ್ಗಳನ್ನು ಬೆಂಬಲ ನೀಡುವಂತೆ ಹಿತ ರಕ್ಷಣಾ ಸಮಿತಿ ಸದಸ್ಯರು ಬಂದ್ ಮಾಡಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ರ್ಯಾಪಿಡ್ ಆಕ್ಸನ್ ಪೋರ್ಸ್ ಆಗಮಿಸಿದ್ದು, ಮಂಡ್ಯದ ಸಂಜಯ ವೃತ್ತದಲ್ಲಿ ನಿಯೋಜಿಸಲಾಗಿದೆ. ಬೆಳವಣಿಗೆಗಳ ಮೇಲೆ ಭದ್ರತಾ ಸಿಬ್ಬಂದಿ ನಿಗಾ ವಹಿಸಿದ್ದಾರೆ. ಪ್ರತಿಭಟನೆ ತೀವ್ರಗೊಂಡಿದ್ದು, ಹೆದ್ದಾರಿಯಲ್ಲೇ ಮಲಗಿ ಪ್ರತಿಭಟಿಸುತ್ತಿದ್ದಾರೆ.
ಮದ್ದೂರು ಪಟ್ಟಣದಲ್ಲಿಯೂ ಬಹುತೇಕ ಎಲ್ಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ಸ್ವಯಂ ಪ್ರೇರಿತರಾಗಿ ಬಂದ್ಗೆ ಸಹಕರಿಸಲು ವರ್ತಕರು ನಿರ್ಧರಿಸಿದ್ದಾರೆ. ಮಂಡ್ಯ ಬಂದ್ ಹಿನ್ನೆಲೆಯಲ್ಲಿ ಮೆಡಿಕಲ್ ಶಾಪ್, ಹಾಲಿನ ಮಳಿಗೆಗಳು, ಹೋಟೆಲ್ ಸೇರಿ ಅತ್ಯಗತ್ಯ ಸೇವೆಗಳು ಮಾತ್ರ ಲಭ್ಯವಿವೆ. ಕೆ. ಗುರುಶಾಂತಪ್ಪ ಸಾರ್ವಜನಿಕ ಆಸ್ಪತ್ರೆಯಲ್ಲಿ ಎಂದಿನಂತೆ ಸೇವೆ ಲಭ್ಯವಿದೆ.
“ಇಂದು ಮಂಡ್ಯ ರೈತ ಹಿತ ರಕ್ಷಣಾ ಸಮಿತಿ ಬಂದ್ಗೆ ಕರೆ ನೀಡಿದೆ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುಗಡೆ ಮಾಡಬಾರದು. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ತನಕ ಮಂಡ್ಯ ಸಂಪೂರ್ಣ ಬಂದ್ ಮಾಡಲಾಗುವುದು. ಬಂದ್ಗೆ ಸ್ವಯಂಪ್ರೇರಿತವಾಗಿ ಸಾರ್ವಜನಿಕರು ಬೆಂಬಲ ನೀಡಿದ್ದಾರೆʼʼ ಎಂದು ಜೆಡಿಎಸ್ ಮುಖಂಡ ಶ್ರೀಕಂಠೇ ಗೌಡ ಹೇಳಿದ್ದಾರೆ.
ಇದನ್ನೂ ಓದಿ: Cauvery Protest : ಮಂಡ್ಯದಲ್ಲಿ ಬೆಳಗ್ಗಿನಿಂದಲೇ ಜಲಾಕ್ರೋಶ; ತಮಿಳುನಾಡಿಗಷ್ಟೇ ಅಲ್ಲ ಬೆಂಗಳೂರಿಗೂ ನೀರು ಬಿಡಬೇಡಿ!
ಕರ್ನಾಟಕ
Halashri Swameeji : ಹಾಲಶ್ರೀ ಇನ್ನೊಂದು ದೋಖಾ; ಶಿರಹಟ್ಟಿ ಬಿಜೆಪಿ ಟಿಕೆಟ್ ಕೊಡಿಸೋದಾಗಿ ಪಿಡಿಒಗೆ ಕೋಟಿ ವಂಚನೆ!
Halashri Swameeji : ಹಾಲಶ್ರೀ ಸ್ವಾಮೀಜಿಯ ಇನ್ನೊಂದು ದೋಖಾ ಬಯಲಾಗಿದೆ. ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ಅವರು ಪಿಡಿಒ ಒಬ್ಬರಿಗೆ ವಂಚನೆ ಮಾಡಲಾದ ಬಗ್ಗೆ ದೂರು ದಾಖಲಾಗಿದೆ. ಹಾಗಿದ್ದರೆ ಈ ಕೋಟಿ ಕುಳ ಪಿಡಿಒ ಯಾರು?
ಗದಗ: ಉದ್ಯಮಿ ಗೋವಿಂದ ಪೂಜಾರಿ (Govinda Poojari) ಅವರಿಗೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ (Bynduru BJP ticket) ಕೊಡಿಸುವುದಾಗಿ ಚೈತ್ರಾ ಕುಂದಾಪುರ (Chaitra Kundapura) ಗ್ಯಾಂಗ್ ಐದು ಕೋಟಿ ರೂ. ವಂಚಿಸಿದ ಪ್ರಕರಣ ಜಗಜ್ಜಾಹೀರಾಗಿದೆ. ಈ ಪ್ರಕರಣದ ಮೂರನೇ ಆರೋಪಿ ಹಿರೇಹಡಗಲಿ ಮಠದ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿ (Halashri swameeji) ಈಗ ಇನ್ನೊಂದು ದೋಖಾ ಮಾಡಿದ ಮಾಹಿತಿ ಬಯಲಾಗಿದೆ. ಅವರು ಶಿರಹಟ್ಟಿ ವಿಧಾನಸಭಾ ಕ್ಷೇತ್ರದ (Shirahatti BJP Ticket) ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO-Panchayat development officer) ಒಬ್ಬರಿಂದ 1 ಕೋಟಿ ರೂ. ಪಡೆದು ವಂಚಿಸಿದ್ದಾರೆ ಎಂದು ಮುಂಡರಗಿ ಠಾಣೆಯಲ್ಲಿ (Mundargi Station) ಪ್ರಕರಣ ದಾಖಲಾಗಿದೆ.
ಶಿರಹಟ್ಟಿ ತಾಲೂಕಿನ ರಣತೂರು ಗ್ರಾಮ ಪಂಚಾಯ್ತಿ ಪಿಡಿಒ ಆಗಿದ್ದ ಸಂಜಯ್ ಚಡವಾಳ (Sanjay Chadavala) ಅವರಿಗೇ ಈ ವಂಚನೆ ನಡೆದಿರುವುದು. ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಜಯ್ ಅವರು ಹಾಲಶ್ರೀ ಅವರ ಜನಪ್ರಿಯತೆ, ಬಿಜೆಪಿ ನಾಯಕರ ಒಡನಾಟ ಕಂಡು ಅವರ ಮೂಲಕ ಟಿಕೆಟ್ ಪಡೆಯಬಹುದು ಎಂದು ಭಾವಿಸಿದ್ದರು. ಮಾತುಕತೆಯ ವೇಳೆ ಒಂದು ಕೋಟಿ ರೂ.ಗೆ ಡೀಲ್ ಆಗಿತ್ತು. ಸಂಜಯ್ ಒಂದು ಕೋಟಿ ರೂ. ಹಣವನ್ನು ಹಾಲಶ್ರೀ ಅವರಿಗೆ ನೀಡಿದ್ದರು ಎನ್ನಲಾಗಿದೆ.
ಆದರೆ, ಶಿರಹಟ್ಟಿ ಟಿಕೆಟ್ ಕೊಡಿಸುವಲ್ಲಿ ಹಾಲಶ್ರೀ ವಿಫಲರಾಗಿದ್ದರು. ಅದಾದ ಬಳಿಕ ಸಂಜಯ್ ತನ್ನ ಹಣ ವಾಪಸ್ ಕೊಡಬೇಕು ಎಂದು ಹಾಲಶ್ರೀ ಬೆನ್ನು ಬಿದ್ದಿದ್ದರು. ಆದರೆ, ಹಾಲಶ್ರೀ ದಿನ ದೂಡುತ್ತಲೇ ಇದ್ದರು. ಈ ನಡುವೆ, ಗೋವಿಂದ ಪೂಜಾರಿ ಪ್ರಕರಣ ಎದ್ದುಬಂದಿತ್ತು. ಸೆಪ್ಟೆಂಬರ್ 8ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಹಾಲಶ್ರೀ ತಮ್ಮ ಇನ್ನಷ್ಟು ಅಕ್ರಮಗಳು ಬಯಲಿಗೆ ಬರುವುದು ಬೇಡ ಎಂದು ಸಂಜಯ್ ಅವರಿಗೆ ಕರೆ ಮಾಡಿ ಹಣ ತೆಗೆದುಕೊಂಡು ಹೋಗುವಂತೆ ತಿಳಿಸಿದ್ದರು.
ಸಂಜಯ್ ಅವರು ಒಂದೆರಡು ದಿನ ಬಿಟ್ಟು ಹಣಕ್ಕಾಗಿ ಮಠಕ್ಕೆ ತೆರಳಿದರೆ ಅಷ್ಟು ಹೊತ್ತಿಗೆ ಹಾಲಶ್ರೀ ಮಠದಿಂದಲೇ ನಾಪತ್ತೆಯಾಗಿದ್ದರು. ಈ ವೇಳೆ ಸಂಜಯ್ ಅವರು ಹಾಲಶ್ರೀ ಚಾಲಕನ ಸಂಪರ್ಕ ಮಾಡಿದ್ದರು ಆಗ ಚಾಲಕ ಹಿರೇಹಡಗಲಿ ಮಠದಿಂದ ಮೈಸೂರಿನತ್ತ ತೆರಳಿ ಆಗಿತ್ತು.
ಈ ನಡುವೆ, ಹಾಲಶ್ರೀ ಕಾರು ಚಾಲಕ ಸಿಸಿಬಿ ಬಲೆಗೆ ಬಿದ್ದಿದ್ದ. ಈ ನಡುವೆ ಕಾರು ಚಾಲಕ ಮತ್ತು ಪಿಡಿಒ ಸಂಜಯ್ ನಡೆದಿರುವ ಮಾತುಕತೆ, ಫೋನ್ ಕಾಲ್ ಬೆನ್ನು ಹತ್ತಿ ಪಿಡಿಒ ಸಂಜಯ್ನನ್ನು ವಿಚಾರಣೆ ನಡೆಸಿದ್ದರು. ಆಗ ಹಾಲಶ್ರೀಯ ಇನ್ನೊಂದು ಹಗರಣ ಬೆಳಕಿಗೆ ಬಂದಿದೆ. ಸಿಸಿಬಿ ವಿಚಾರಣೆಯ ಬಳಿಕ ಸಂಜಯ್ ಈಗ ಮುಂಡರಗಿ ಠಾಣೆಗೆ ದೂರು ನೀಡಿದ್ದಾರೆ.
ಯಾರೀ ಕೋಟಿ ಕುಳ ಸಂಜಯ್, ದೂರಿನಲ್ಲೇನಿದೆ?
ಸಂಜಯ್ ಚವಡಾಳ ಶಿರಹಟ್ಟಿ ತಾಲೂಕಿನ ಹೆಬ್ಬಾಳ ಗ್ರಾಮದವರು. ಎಸ್ ಸಿ (ಮಾದಿಗ) ಸಮುದಾಯಕ್ಕೆ ಸೇರಿದವರು. ಎಸ್ ಸಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸುವ ಆಸಕ್ತಿಹೊಂದಿದ್ದ ಸಂಜಯ್ ಅರುಂಧತಿ ಫೌಂಡೇಷನ್ ಹೆಸರಲ್ಲಿ ಸಾಮಾಜಿಕ ಸೇವೆ ಮಾಡುತ್ತಿದ್ದರು. ಒಬ್ಬ ಪಿಡಿಒ ಆಗಿ ಕೋಟಿಗಟ್ಟಲೆ ಹಣ ಕೊಟ್ಟು ಟಿಕೆಟ್ ಪಡೆಯುವಷ್ಟು ಗಟ್ಟಿ ಕುಳಾನಾ ಎನ್ನುವ ಪ್ರಶ್ನೆಗೆ ಸಂಪೂರ್ಣ ವಿಚಾರಣೆ ಬಳಿಕವೇ ಉತ್ತರ ಸಿಗಬೇಕಾಗಿದೆ. ಅವರ ಘನಾಂದಾರಿ ಕೆಲಸಗಳಿಗಾಗಿ ಅವರು ಕರ್ತವ್ಯ ಲೋಪದ ಆರೋಪದಲ್ಲಿ ಸದ್ಯ ಅಮಾನತುಗೊಂಡಿದ್ದಾರೆ.
ಇದನ್ನೂ ಓದಿ: Halashri Swameeji: ಹಾಲ ಮಠದ ಚರಿತ್ರೆಯಲ್ಲಿ ಕಪ್ಪು ಚುಕ್ಕೆ; ಕರ್ನಾಟಕದ ಯೋಗಿಯಾಗುವ ಕನಸು ಹೊತ್ತಿದ್ದ ಹಾಲಶ್ರೀ!
ಹಾಲಶ್ರೀಯಿಂದ ತನಗೂ ಕೋಟಿ ರೂಪಾಯಿ ವಂಚನೆ ಆಗಿರುವ ಬಗ್ಗೆ ಸಿಸಿಬಿ ವಿಚಾರಣೆಯಲ್ಲಿ ಹೇಳಿಕೊಂಡಿರುವ ಸಂಜಯ್ ಶಿರಹಟ್ಟಿ ಮೀಸಲು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎಂದು ಜನರ ಮುಂದೆ ಬಿಂಬಿಸಿಕೊಂಡಿದ್ದರು. ಟಿಕೆಟ್ ಸಿಕ್ಕೇ ಸಿಗುತ್ತದೆ ಎಂದು ಹೇಳಿಕೊಂಡಿದ್ದರು.
ಸೆಪ್ಟೆಂಬರ್ 19 ನೇ ತಾರೀಕು ಮಧ್ಯರಾತ್ರಿ ಠಾಣೆ ಬಂದು ಸಂಜಯ್ ದೂರು ನೀಡಿದ್ದು ಅದರಲ್ಲಿ ಚುನಾವಣೆ ಮುಂಚಿತವಾಗಿ 1 ಕೋಟಿ ರೂಪಾಯಿ ಹಣವನ್ನು ಶ್ರೀಗಳಿಗೆ ನೀಡಿದ್ದಾಗಿ ಹೇಳಿದ್ದಾರೆ. ಮೂರು ಕಂತುಗಳಲ್ಲಿ ಹಣ ನೀಡಿದ್ದಾಗಿ ದೂರಿನಲ್ಲಿ ದಾಖಲಿಸಿದದಾರೆ. ಆದರೆ, ಸೂಕ್ತ ದಾಖಲೆ ಇಲ್ಲದ ಹಿನ್ನೆಲೆಯಲ್ಲಿ ಕೇವಲ ಎನ್ ಸಿಆರ್ ದಾಖಲಿಸಿ ಕಳುಹಿಸಿರುವ ಮುಂಡರಗಿ ಪೊಲೀಸರು, ದಾಖಲೆ ತೆಗೆದುಕೊಂಡು ಬರುವಂತೆ ಸೂಚಿಸಿದ್ದಾರೆ.
ದೂರು ನೀಡಿದ ಬಳಿಕ ಸಂಜಯ್ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಸಂಜಯ್. ಒಟ್ಟಿನಲ್ಲಿ ಹಾಲಶ್ರೀ ಮಾಡಿಕೊಂಡಿರುವ ಭಾನಗಡಿ ಒಂದೆರಡಲ್ಲ!
ಶಿವಮೊಗ್ಗ
Communal Tension: ಗಣಪತಿ ವಿಸರ್ಜನೆ ವೇಳೆ ಮಸೀದಿ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಪ್ರತಿಭಟನೆ
ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿರುವ ಮಸೀದಿ ಮುಂದೆ ಸಾಗುತ್ತಿದ್ದ ಗಣಪತಿ ಮೆರವಣಿಗೆಯ ವೇಳೆ ಕೆಲ ಯುವಕರು ಪಟಾಕಿ ಹಚ್ಚಿದರು. ಮಸೀದಿ ಎದುರು ಪಟಾಕಿ ಹಚ್ಚಿದ್ದಕ್ಕೆ ಇನ್ನೊಂದು ಕೋಮಿನ ಯುವಕರು ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗ: ಗಣಪತಿ ವಿಸರ್ಜನೆ (Ganesh immersion) ಮೆರವಣಿಗೆ ವೇಳೆ ಮಸೀದಿ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೋಮು ಉದ್ವಿಗ್ನತೆ (Communal Tension) ಸೃಷ್ಟಿಯಾಗಿ ಪ್ರತಿಭಟನೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ (Shivamogga news) ಹೊಳೆಹೊನ್ನೂರಿನಲ್ಲಿ ನಿನ್ನೆ ರಾತ್ರಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನಲ್ಲಿ ಗಲಾಟೆ ಸೃಷ್ಟಿಯಾಯಿತು. ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿರುವ ಮಸೀದಿ ಮುಂದೆ ಸಾಗುತ್ತಿದ್ದ ಗಣಪತಿ ಮೆರವಣಿಗೆಯ ವೇಳೆ ಕೆಲ ಯುವಕರು ಪಟಾಕಿ ಹಚ್ಚಿದರು. ಮಸೀದಿ ಎದುರು ಪಟಾಕಿ ಹಚ್ಚಿದ್ದಕ್ಕೆ ಇನ್ನೊಂದು ಕೋಮಿನ ಯುವಕರು ಆಕ್ರೋಶ ವ್ಯಕ್ತಪಡಿಸಿದರು.
ಈ ಘಟನೆ ಖಂಡಿಸಿ ಯುವಕರು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಅಡಿಷನಲ್ ಎಸ್ಪಿ ಅನಿಲ್ ಭೂಮರೆಡ್ಡಿ, ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದ ಪೂರ್ಯನಾಯ್ಕ ಭೇಟಿ ನೀಡಿ, ಪ್ರತಿಭಟನಾಕಾರರ ಜೊತೆ ಮಾತುಕತೆ ನಡೆಸಿದರು. ಮಸೀದಿ ಎದುರು ಪಟಾಕಿ ಹಚ್ಚಿ ಅಶಾಂತಿಗೆ ಕಾರಣರಾದವರ ಬಂಧನಕ್ಕೆ ಮುಸ್ಲಿಂ ಮುಖಂಡರು ಆಗ್ರಹಿಸಿದರು. ನಂತರ ಶಾಸಕಿ, ಅಡಿಷನಲ್ ಎಸ್ಪಿ ಪ್ರತಿಭಟನಾಕಾರರ ಮನವೊಲಿಸಿದರು.
ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಡಿಜೆ ಸದ್ದಿಗೆ ಯುವಕ ಸಾವು
ವಿಜಯನಗರ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಹೃದಯಾಘಾತದಿಂದ (Heart Attack) ಯುವಕ ಮೃತಪಟ್ಟಿರುವ ಘಟನೆ ಹಗರಿಬೊಮ್ಮನಹಳ್ಳಿ ಪಟ್ಟಣದ ಭೋವಿ ಕಾಲನಿಯಲ್ಲಿ ಶುಕ್ರವಾರ ನಡೆದಿದೆ. ಮೆರವಣಿಗೆ ವೇಳೆ ಡಿಜೆ ಸದ್ದಿಗೆ ನೂರಾರು ಯುವಕರು ಕುಣಿಯುತ್ತಿದ್ದರು. ಈ ವೇಳೆ ಯುವಕನಿಗೆ ಹೃದಯಾಘಾತವಾಗಿದೆ.
ಜಮೀರ್ ಪಿಂಜಾರ (22) ಮೃತ ಯುವಕ. ಮೆರವಣಿಗೆಯಲ್ಲಿ ಏಕಾಏಕಿ ಯುವಕ ಕುಸಿದು ಬಿದ್ದ ಹಿನ್ನೆಲೆಯಲ್ಲಿ ತಕ್ಷಣವೇ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಹೃದಯಾಘಾತದಿಂದ ಯುವಕ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಅತಿಯಾಗಿ ಮದ್ಯ ಸೇವನೆ ಮಾಡಿದ್ದರಿಂದ ಯುವಕ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಸಾವಿನ ಖಚಿತ ಮಾಹಿತಿ ಲಭ್ಯವಾಗಲಿದೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಇನ್ನೂ ಪ್ರಕರಣ ದಾಖಲಾಗಿಲ್ಲ.
ಇದನ್ನೂ ಓದಿ: Shivamogga News: ಶಿವಮೊಗ್ಗದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗಲಾಟೆ
ಶಿವಮೊಗ್ಗ
Shivamogga News: ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಮಾನತಿಗೆ ಶಾಸಕ ಗೋಪಾಲಕೃಷ್ಣ ಸೂಚನೆ
Shivamogga News: ರಿಪ್ಪನ್ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶುಕ್ರವಾರ ಶಾಸಕ ಗೋಪಾಲಕೃಷ್ಣ ಬೇಳೂರು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ರಿಪ್ಪನ್ಪೇಟೆ: ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ (Primary Health Centre) ವೈದ್ಯಾಧಿಕಾರಿ ಡಾ.ಅನಿಲ್ಕುಮಾರ್ ಸರಿಯಾಗಿ ಕರ್ತವ್ಯಕ್ಕೆ (Duty) ಹಾಜರಾಗುತ್ತಿಲ್ಲ ಎಂದು ಸಾರ್ವಜನಿಕರ ದೂರಿನನ್ವಯ ಶುಕ್ರವಾರ ಶಾಸಕ ಗೋಪಾಲಕೃಷ್ಣ ಬೇಳೂರು ಆಸ್ಪತ್ರೆಗೆ ದಿಢೀರ್ ಭೇಟಿ (Surprise Visit) ನೀಡಿದರು.
ಆಸ್ಪತ್ರೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, ಭೇಟಿ ನೀಡಿದ ಸಂದರ್ಭದಲ್ಲಿಯೂ ವೈದ್ಯಾಧಿಕಾರಿ ಗೈರಾಗಿರುವುದನ್ನು ಕಂಡು ಕೂಡಲೇ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ದೂರವಾಣಿ ಮೂಲಕ ಇಲ್ಲಿನ ವೈದ್ಯಾಧಿಕಾರಿಯನ್ನು ಅಮಾನತು ಪಡಿಸಿ, ವರದಿ ನೀಡುವಂತೆ ಅವರು ಸೂಚಿಸಿದರು.
ಇದನ್ನೂ ಓದಿ: Sirsi News:ಅಕ್ರಮ ದಾಸ್ತಾನು ಮಾಡಿದ್ದ 64.950 ಕೆಜಿ ತೂಕದ ಶ್ರೀಗಂಧ ವಶ
ಪ್ರಾಥಮಿಕ ಆರೋಗ್ಯ ಕೇಂದ್ರದ ಹಲವು ಸಮಸ್ಯೆಗಳ ಕುರಿತು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮತ್ತು ಸಾರ್ವಜನಿಕರಿಂದ ಸಾಕಷ್ಟು ದೂರುಗಳನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಆಲಿಸಿದರು.
ಆಸ್ಪತ್ರೆಯಲ್ಲಿ ಫಾರ್ಮಾಸಿಸ್ಟ್ ಕರ್ತವ್ಯಕ್ಕೆ ಸರಿಯಾಗಿ ಹಾಜರಾಗುತ್ತಿಲ್ಲ, ಇದರಿಂದ ಸರಿಯಾಗಿ ಔಷಧಿ ವಿತರಣೆಯಾಗದೇ ರೋಗಿಗಳು ಖಾಸಗಿ ಮೆಡಿಕಲ್ಗಳಿಗೆ ಚೀಟಿ ಹಿಡಿದು ಹೋಗುವಂತಾಗಿದೆ ಎಂದು ಸಾರ್ವಜನಿಕರು ದೂರಿದರು, ಆಗ ಶಾಸಕರು ಈ ಬಗ್ಗೆ ಸಂಬಂಧಿಸಿದ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ದೂರವಾಣಿ ಮೂಲಕ ಸ್ಥಳೀಯ ಅಸ್ಪತ್ರೆಯ ಫಾರ್ಮಾಸಿಸ್ಟ್ ಸರಿಯಾಗಿ ಕೆಲಸಕ್ಕೆ ಬಾರದಿರುವುದರ ಬಗ್ಗೆ ಅವರ ಮೇಲೆ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು.
ಇದನ್ನೂ ಓದಿ: Shivamogga News: ವಿಶ್ವ ಹಿಂದೂ ಮಹಾಸಭಾ ಗಣಪತಿ ಉತ್ಸವ ಸಮಿತಿಯಿಂದ ಸೆ.23ರಿಂದ ಸೊರಬದಲ್ಲಿ ಕಾರ್ಯಕ್ರಮ
ಈ ಸಂದರ್ಭದಲ್ಲಿ ಡಾ.ಅಂಜನಪ್ಪ, ಸಿಬ್ಬಂದಿಗಳಾದ ಗಾಯಿತ್ರಿ, ಜಿ.ಪಂ.ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ತಾ.ಪಂ. ಮಾಜಿ ಸದಸ್ಯ ಚಂದ್ರು ಮೌಳಿಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ,ಕೆಂಚನಾಲ ಗ್ರಾ.ಪಂ. ಅಧ್ಯಕ್ಷೆ ಉಭೇದುಲ್ಲಾ ಷರೀಫ್, ಆಶೀಫ್, ಗಣಪತಿ, ಉಂಡಗೋಡು ನಾಗಪ್ಪ, ಶ್ರೀಧರ್, ರಮೆಶ್ ಪ್ಯಾನ್ಸಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
-
ಪ್ರಮುಖ ಸುದ್ದಿ23 hours ago
Lina Mukherjee: ಇಸ್ಲಾಮಿಕ್ ದೇಶದಲ್ಲಿ ಹಂದಿ ಮಾಂಸ ತಿಂದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು ಶಿಕ್ಷೆ!
-
ಪ್ರಮುಖ ಸುದ್ದಿ15 hours ago
Ipsos poll Survey: ಟ್ರುಡೋ ಜನಪ್ರಿಯತೆ ಕುಸಿತ, ಕೆನಡಾ ಪಿಎಂ ಆಗಲು ಪ್ರತಿಪಕ್ಷ ನಾಯಕನೇ ಬೆಸ್ಟ್!
-
ಉಡುಪಿ21 hours ago
FB Profile Deleted: 20ಕ್ಕೂ ಅಧಿಕ ಹಿಂದು ಜಾಗರಣ ವೇದಿಕೆ ನಾಯಕರ ಫೇಸ್ ಬುಕ್ ಪ್ರೊಫೈಲ್ ಏಕಕಾಲದಲ್ಲಿ ಡಿಲೀಟ್!
-
ಸುವಚನ5 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಗ್ಯಾಜೆಟ್ಸ್17 hours ago
YouTube: ಯುಟ್ಯೂಬ್ ವಿಡಿಯೋ ಮಾಡುವುದು ಇನ್ನೂ ಸುಲಭ! ಹೊಸ ಎಡಿಟಿಂಗ್ ಆ್ಯಪ್ ಲಾಂಚ್
-
ಕ್ರೈಂ16 hours ago
Assault Case : ಕೈ ತಾಗಿದ್ದಕ್ಕೆ ಯುವಕರ ಮಧ್ಯೆ ಕಿರಿಕ್; ಖಾನಾಪುರದಲ್ಲಿ ಬಿಗುವಿನ ವಾತಾವರಣ
-
ದೇಶ16 hours ago
Prisoners Escape: ವ್ಯಾನ್ನಿಂದ ಜಿಗಿದು ಇಬ್ಬರು ಕೈದಿಗಳು ಪರಾರಿ; ಕತ್ತೆ ಕಾಯುತ್ತಿದ್ದ ಪೊಲೀಸರು!
-
ಉಡುಪಿ13 hours ago
Dr HS Shetty : ಯಶಸ್ವೀ ಉದ್ಯಮಿ ಡಾ. ಎಚ್.ಎಸ್ ಶೆಟ್ಟಿ ಅವರಿಗೆ ಹುಟ್ಟೂರ ಸನ್ಮಾನ; ಸಾಧನೆ, ಸೇವೆಯ ವಿಸ್ತಾರಕ್ಕೆ ನಮಿಸಿದ ಜನ