Mahila Yakshagana: ಯಕ್ಷಗಾನ ಮಹಿಳಾ ತಂಡ ದೇಶದೆಲ್ಲೆಡೆ ಕಲೆ ಪಸರಿಸುತ್ತಿರುವುದು ಅಭಿಮಾನದ ಸಂಗತಿ: ಯು.ಟಿ.‌ಖಾದರ್ Vistara News
Connect with us

ಕರ್ನಾಟಕ

Mahila Yakshagana: ಯಕ್ಷಗಾನ ಮಹಿಳಾ ತಂಡ ದೇಶದೆಲ್ಲೆಡೆ ಕಲೆ ಪಸರಿಸುತ್ತಿರುವುದು ಅಭಿಮಾನದ ಸಂಗತಿ: ಯು.ಟಿ.‌ಖಾದರ್

Mahila Yakshagana: ಕರ್ನಾಟಕ ಮಹಿಳಾ ಯಕ್ಷಗಾನ ಸಂಸ್ಥೆ ಹೆಣ್ಣುಮಕ್ಕಳಿಗೆ ಯಕ್ಷಗಾನ ಕಲಿಸುತ್ತಾ 25 ವರ್ಷ ಸಾಗಿ ಬಂದಿರುವುದು ಸ್ತುತ್ಯರ್ಹ ಎಂದು ವಿಧಾನಸಭಾಧ್ಯಕ್ಷ ಯು.ಟಿ.‌ಖಾದರ್ ಮೆಚ್ಚುಗೆ ವ್ಯಕ್ತಪಡಿಸಿದರು.

VISTARANEWS.COM


on

Karnataka Mahila Yakshagana silver jubilee
Koo

ಬೆಂಗಳೂರು: ಯಕ್ಷಗಾನ (Mahila Yakshagana) ಕರಾವಳಿ ಭಾಗದ‌ ಕಣ್ಣಿದ್ದಂತೆ. ಈ ಕಲೆಯಲ್ಲಿ‌ ಮಹಿಳೆಯರು ತೊಡಗುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.‌ಖಾದರ್ ಹೇಳಿದರು.

ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಆಯೋಜಿಸಿದ್ದ ಕರ್ನಾಟಕ ಮಹಿಳಾ ಯಕ್ಷಗಾನ (ಯಕ್ಷಗಾನ ಮಹಿಳಾ ತಂಡ) ಸಂಸ್ಥೆಯ ಬೆಳ್ಳಿ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿ,‌‌ ಯಕ್ಷಗಾನದಲ್ಲಿ ಮಹಿಳಾ ತಂಡ‌ ತೊಡಗಿಸಿಕೊಂಡಿರುವುದಲ್ಲದೆ, ಕಲೆಯನ್ನು ದೇಶದೆಲ್ಲೆಡೆ ಪಸರಿಸುತ್ತಿರುವುದು ಅಭಿಮಾನದ ಸಂಗತಿ. ಹೆಣ್ಣುಮಕ್ಕಳಿಗೆ ಯಕ್ಷಗಾನ ಕಲಿಸುತ್ತಾ 25 ವರ್ಷ ಸಾಗಿ ಬಂದಿರುವುದು ಸ್ತುತ್ಯರ್ಹ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಯಾಗಿ‌ ಭಾಗವಹಿಸಿದ್ದ ಕನ್ನಡಪ್ರಭ‌ ಮತ್ತು ಏಷಿಯಾನೆಟ್ ಸುವರ್ಣ ಪ್ರಧಾನ ಸಂಪಾದಕ ರವಿ ಹೆಗಡೆಯವರು ಯಕ್ಷಗಾನ ತಂಡದ‌ ಕೊಡುಗೆಯನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಮೀಡಿಯಾ ಅಲೂಮ್ನಿ ಅಸೋಸಿಯೇಷನ್ ಅವರ ವತಿಯಿಂದ ಚಿಂತನ-ಮಂಥನ ಕಾರ್ಯಕ್ರಮ ನಡೆಯಿತು. ನಂತರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಕೋಟ ಶಿವರಾಮ ಕಾರಂತರು ನಿರ್ದೇಶಿಸಿದ ಯಕ್ಷಗಾನ ಬ್ಯಾಲೆ ಪ್ರದರ್ಶನ ಎಲ್ಲರ ಮನಸೂರೆಗೊಳಿಸಿತು. ತಂಡದ ಗುರುಗಳಾದ ಶ್ರೀನಿವಾಸ ಸಾಸ್ತಾನ ಅವರಿಗೆ ಮಹಿಳಾ ತಂಡದಿಂದ‌ ಗುರುವಂದನೆ ಆಕರ್ಷಕವಾಗಿ ‌ಮೂಡಿಬಂತು.

Mahila Yakshagana silver jubilee

ಕನ್ನಡ ಭಾಷೆಯಲ್ಲೇ ನಡೆಯುವ ಯಕ್ಷಗಾನವನ್ನು ವಿಶೇಷವಾಗಿ ಸಂಸ್ಥೆಯ ಮಕ್ಕಳಿಂದ ಆಂಗ್ಲಭಾಷೆಯಲ್ಲಿ ಕಂಸವಧೆ ಎನ್ನುವ ಯಕ್ಷಗಾನ, ತೆಂಕುತಿಟ್ಟಿನಲ್ಲಿ ಖ್ಯಾತ ಮಹಿಳಾ ಭಾಗವತರಾದ ಅಮೃತಾ ಅಡಿಗ ಇವರ ಸಿರಿಕಂಠದಲ್ಲಿ ‘ಸುದರ್ಶನ ವಿಜಯ’ ಪ್ರಸಂಗ, ಬಡಗುತಿಟ್ಟಿನ ಖ್ಯಾತ ಮಹಿಳಾ ಭಾಗವತರಾದ ಚಿಂತನಾ ಹೆಗಡೆ ಇವರ ಸಿರಿಕಂಠದಲ್ಲಿ ‘ವೀರ ಅಭಿಮನ್ಯು’ ಯಕ್ಷಗಾನ ಯಕ್ಷಪ್ರೇಮಿಗಳನ್ನು ರಂಜಿಸಿತು. ಎಲ್ಲಾ ಕಾರ್ಯಕ್ರಮ ಮಹಿಳೆಯರಿಂದ ನಡೆದದ್ದು ವಿಶೇಷ ಆಕರ್ಷಣೆಯಾಗಿತ್ತು.

ಇದನ್ನೂ ಓದಿ | P.S. Sreedharan Pillai : ಗೋವಾ ರಾಜ್ಯಪಾಲರ ಕಥಾ ಸಂಕಲನದ ಕನ್ನಡ ಅನುವಾದ ಬಿಡುಗಡೆ

ಸಭಾ ಕಾರ್ಯಕ್ರಮದಲ್ಲಿ ದೂರದರ್ಶನ, ಆಕಾಶವಾಣಿಯ ನಿರ್ದೇಶಕರಾದ ನಿರ್ಮಲ ಎಲಿಗಾರ್, ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷರಾದ ಡಾ. ತೇಜಸ್ವಿನಿ ಅನಂತ್ ಕುಮಾರ್, ಹಿರಿಯ ಪತ್ರಕರ್ತ ಡಾ.ಈಶ್ವರ್ ದೈತೋಟ, ದಕ್ಷಿಣ ಕನ್ನಡ ಸಂಘದ ಅಧ್ಯಕ್ಷರಾದ ರಾಮಚಂದ್ರ ಉಪಾಧ್ಯ, ವಿಕಾಸ್ ಗ್ಲೋಬಲ್ ಸೋಲ್ಯುಷನ್ಸ್‌ನ ಅಧ್ಯಕ್ಷರಾದ ಡಿ.ವಿ ವೆಂಕಟಾಚಲಪತಿ, ಜಿ. ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ 14 ಯಕ್ಷಗಾನ ಗುರುಗಳಿಗೆ ‘ಕರ್ನಾಟಕ ಯಕ್ಷ ಗುರು ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಸಂಸ್ಥೆಯ ಸ್ಥಾಪಕರಾದ ಗೌರಿ.ಕೆ ಸ್ವಾಗತಿಸಿದರು, ಸುಪ್ರೀತಾ ಗೌತಮ್ ಮತ್ತು ಚೈತ್ರ ಕೋಟ ಕಾರ್ಯಕ್ರಮ ನಿರೂಪಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Cauvery Protest: ಕಾವೇರಿ ಕಿಚ್ಚು: ಮಂಡ್ಯ ಬಂದ್‌; ಹೆದ್ದಾರಿಯಲ್ಲಿ ಉರುಳುಸೇವೆ, ರೈತರ ಜತೆ ಸೇರಿದ ಬಿಜೆಪಿ, ಜೆಡಿಎಸ್

ಇಂದಿನ ಹೋರಾಟಕ್ಕೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಾಥ್ ನೀಡಲಿದ್ದಾರೆ. ಇಂದಿನ ರೈತರ ಹೋರಾಟದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ.

VISTARANEWS.COM


on

Edited by

mandya bundh
Koo

ಮಂಡ್ಯ: ಮಂಡ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾವೇರಿ ಕಿಚ್ಚು (Cauvery Dispute)‌ ಕಾವೇರಿದ್ದು, ಇಂದು ಮಂಡ್ಯ ಪೂರ್ತಿ ಬಂದ್‌ (Mandya Bundh) ಆಗಿದೆ. ವರ್ತಕರು ಸ್ವಯಂಪ್ರೇರಿತರಾಗಿ ಬಂದ್‌ ಮಾಡಿದ್ದಾರೆ. ಪ್ರತಿಭಟನಾಕಾರರು (Cauvery protest) ಮುಂಜಾನೆಯಿಂದಲೇ ಹೆದ್ದಾರಿಯಲ್ಲಿ ಮಲಗಿ, ಕಬ್ಬಿನ ಜಲ್ಲೆ ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಇಂದಿನ ಹೋರಾಟಕ್ಕೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಾಥ್ ನೀಡಲಿದ್ದಾರೆ. ಇಂದಿನ ರೈತರ ಹೋರಾಟದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಸಿ.ಟಿ ರವಿ ಹಾಗೂ ಮಧ್ಯಾಹ್ನ 12ಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗಮಿಸಿ ಮಂಡ್ಯದಲ್ಲಿ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಹೋರಾಟದಲ್ಲಿ ಭಾಗಿಗಳಾಗಲಿದ್ದಾರೆ.

ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಲ್ಲಿ ರೈತರ ಪ್ರತಿಭಟನೆ ಹಲವು ದಿನಗಳಿಂದ ನಡೆಯುತ್ತಿದೆ. ಇಂದು ಮಂಡ್ಯ ಬಂದ್‌ಗೆ ಕರೆ ನೀಡಲಾಗಿದೆ. ಮಂಡ್ಯದ ಸಂಜಯ ವೃತ್ತದಲ್ಲಿ ಟೀ ತಯಾರಿಸಿ ಪ್ರತಿಭಟನೆಯನ್ನು ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ಆಯೋಜಿಸಿದ್ದಾರೆ. ಕಾವೇರಿ ವಿಚಾರದಲ್ಲಿ ಸುಪ್ರಿಂ ಕೋರ್ಟ್‌ ನೀಡಿರುವ ತೀರ್ಪಿನ ಪ್ರತಿಯಿಂದ ಟೀ ತಯಾರಿಸಿ ಪ್ರತಿಭಟನೆ ನಡೆಯಲಿದೆ. ಹಾಗೆಯೇ ಕಿವಿಗೆ ಹೂ ಮುಡಿದು, ಪಟ್ಟೆ ಪಟ್ಟೆ ಚಡ್ಡಿ ಧರಿಸಿಯೂ ಪ್ರತಿಭಟನೆಗೆ ನಿರ್ಧರಿಸಲಾಗಿದೆ.

ಮಂಡ್ಯ ಬಂದ್ ಹಿನ್ನೆಲೆಯಲ್ಲಿ ಪೊಲೀಸರು ಅಲರ್ಟ್ ಆಗಿದ್ದು, ಭದ್ರತೆಗಾಗಿ 6 ಡಿಎಆರ್, 4 ಕೆ ಎಸ್ ಆರ್ ಪಿ ತುಕಡಿ ಜೊತೆಗೆ 200 ಜನ ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾವಹಿಸಿದ್ದಾರೆ.

ಬೆಳಗೆಯಿಂದ ಕಾರ್ಯ ನಿರ್ವಹಿಸ್ತಿದ್ದ ಪೆಟ್ರೋಲ್ ಬಂಕ್‌ಗಳನ್ನು ಬೆಂಬಲ ನೀಡುವಂತೆ ಹಿತ ರಕ್ಷಣಾ ಸಮಿತಿ ಸದಸ್ಯರು ಬಂದ್ ಮಾಡಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ರ್ಯಾಪಿಡ್ ಆಕ್ಸನ್ ಪೋರ್ಸ್ ಆಗಮಿಸಿದ್ದು, ಮಂಡ್ಯದ ಸಂಜಯ ವೃತ್ತದಲ್ಲಿ ನಿಯೋಜಿಸಲಾಗಿದೆ. ಬೆಳವಣಿಗೆಗಳ ಮೇಲೆ ಭದ್ರತಾ ಸಿಬ್ಬಂದಿ ನಿಗಾ ವಹಿಸಿದ್ದಾರೆ. ಪ್ರತಿಭಟನೆ ತೀವ್ರಗೊಂಡಿದ್ದು, ಹೆದ್ದಾರಿಯಲ್ಲೇ ಮಲಗಿ ಪ್ರತಿಭಟಿಸುತ್ತಿದ್ದಾರೆ.

ಮದ್ದೂರು ಪಟ್ಟಣದಲ್ಲಿಯೂ ಬಹುತೇಕ ಎಲ್ಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ಸ್ವಯಂ ಪ್ರೇರಿತರಾಗಿ ಬಂದ್‌ಗೆ ಸಹಕರಿಸಲು ವರ್ತಕರು ನಿರ್ಧರಿಸಿದ್ದಾರೆ. ಮಂಡ್ಯ ಬಂದ್ ಹಿನ್ನೆಲೆಯಲ್ಲಿ ಮೆಡಿಕಲ್ ಶಾಪ್, ಹಾಲಿನ ಮಳಿಗೆಗಳು, ಹೋಟೆಲ್ ಸೇರಿ ಅತ್ಯಗತ್ಯ ಸೇವೆಗಳು ಮಾತ್ರ ಲಭ್ಯವಿವೆ. ಕೆ. ಗುರುಶಾಂತಪ್ಪ ಸಾರ್ವಜನಿಕ ಆಸ್ಪತ್ರೆಯಲ್ಲಿ ಎಂದಿನಂತೆ ಸೇವೆ ಲಭ್ಯವಿದೆ.

“ಇಂದು ಮಂಡ್ಯ ರೈತ ಹಿತ ರಕ್ಷಣಾ ಸಮಿತಿ ಬಂದ್‌ಗೆ ಕರೆ ನೀಡಿದೆ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುಗಡೆ ಮಾಡಬಾರದು. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ತನಕ ಮಂಡ್ಯ ಸಂಪೂರ್ಣ ಬಂದ್ ಮಾಡಲಾಗುವುದು. ಬಂದ್‌ಗೆ ಸ್ವಯಂಪ್ರೇರಿತವಾಗಿ ಸಾರ್ವಜನಿಕರು ಬೆಂಬಲ ನೀಡಿದ್ದಾರೆʼʼ ಎಂದು ಜೆಡಿಎಸ್ ಮುಖಂಡ ಶ್ರೀಕಂಠೇ ಗೌಡ ಹೇಳಿದ್ದಾರೆ.

ಇದನ್ನೂ ಓದಿ: Cauvery Protest : ಮಂಡ್ಯದಲ್ಲಿ ಬೆಳಗ್ಗಿನಿಂದಲೇ ಜಲಾಕ್ರೋಶ; ತಮಿಳುನಾಡಿಗಷ್ಟೇ ಅಲ್ಲ ಬೆಂಗಳೂರಿಗೂ ನೀರು ಬಿಡಬೇಡಿ!

Continue Reading

ಕರ್ನಾಟಕ

Halashri Swameeji : ಹಾಲಶ್ರೀ ಇನ್ನೊಂದು ದೋಖಾ; ಶಿರಹಟ್ಟಿ ಬಿಜೆಪಿ ಟಿಕೆಟ್‌ ಕೊಡಿಸೋದಾಗಿ ಪಿಡಿಒಗೆ ಕೋಟಿ ವಂಚನೆ!

Halashri Swameeji : ಹಾಲಶ್ರೀ ಸ್ವಾಮೀಜಿಯ ಇನ್ನೊಂದು ದೋಖಾ ಬಯಲಾಗಿದೆ. ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಕೊಡಿಸುವುದಾಗಿ ಅವರು ಪಿಡಿಒ ಒಬ್ಬರಿಗೆ ವಂಚನೆ ಮಾಡಲಾದ ಬಗ್ಗೆ ದೂರು ದಾಖಲಾಗಿದೆ. ಹಾಗಿದ್ದರೆ ಈ ಕೋಟಿ ಕುಳ ಪಿಡಿಒ ಯಾರು?

VISTARANEWS.COM


on

Edited by

Sanjay and Halashri
ಪಿಡಿಒ ಸಂಜಯ್‌ ಮತ್ತು ಹಾಲಶ್ರೀ ಸ್ವಾಮೀಜಿ
Koo

ಗದಗ: ಉದ್ಯಮಿ ಗೋವಿಂದ ಪೂಜಾರಿ (Govinda Poojari) ಅವರಿಗೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ (Bynduru BJP ticket) ಕೊಡಿಸುವುದಾಗಿ ಚೈತ್ರಾ ಕುಂದಾಪುರ (Chaitra Kundapura) ಗ್ಯಾಂಗ್‌ ಐದು ಕೋಟಿ ರೂ. ವಂಚಿಸಿದ ಪ್ರಕರಣ ಜಗಜ್ಜಾಹೀರಾಗಿದೆ. ಈ ಪ್ರಕರಣದ ಮೂರನೇ ಆರೋಪಿ ಹಿರೇಹಡಗಲಿ ಮಠದ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿ (Halashri swameeji) ಈಗ ಇನ್ನೊಂದು ದೋಖಾ ಮಾಡಿದ ಮಾಹಿತಿ ಬಯಲಾಗಿದೆ. ಅವರು ಶಿರಹಟ್ಟಿ ವಿಧಾನಸಭಾ ಕ್ಷೇತ್ರದ (Shirahatti BJP Ticket) ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO-Panchayat development officer) ಒಬ್ಬರಿಂದ 1 ಕೋಟಿ ರೂ. ಪಡೆದು ವಂಚಿಸಿದ್ದಾರೆ ಎಂದು ಮುಂಡರಗಿ ಠಾಣೆಯಲ್ಲಿ (Mundargi Station) ಪ್ರಕರಣ ದಾಖಲಾಗಿದೆ.

ಶಿರಹಟ್ಟಿ ತಾಲೂಕಿನ ರಣತೂರು ಗ್ರಾಮ ಪಂಚಾಯ್ತಿ ಪಿಡಿಒ ಆಗಿದ್ದ ಸಂಜಯ್‌ ಚಡವಾಳ (Sanjay Chadavala) ಅವರಿಗೇ ಈ ವಂಚನೆ ನಡೆದಿರುವುದು. ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಜಯ್‌ ಅವರು ಹಾಲಶ್ರೀ ಅವರ ಜನಪ್ರಿಯತೆ, ಬಿಜೆಪಿ ನಾಯಕರ ಒಡನಾಟ ಕಂಡು ಅವರ ಮೂಲಕ ಟಿಕೆಟ್‌ ಪಡೆಯಬಹುದು ಎಂದು ಭಾವಿಸಿದ್ದರು. ಮಾತುಕತೆಯ ವೇಳೆ ಒಂದು ಕೋಟಿ ರೂ.ಗೆ ಡೀಲ್‌ ಆಗಿತ್ತು. ಸಂಜಯ್‌ ಒಂದು ಕೋಟಿ ರೂ. ಹಣವನ್ನು ಹಾಲಶ್ರೀ ಅವರಿಗೆ ನೀಡಿದ್ದರು ಎನ್ನಲಾಗಿದೆ.

sanjay Halashi case

ಆದರೆ, ಶಿರಹಟ್ಟಿ ಟಿಕೆಟ್‌ ಕೊಡಿಸುವಲ್ಲಿ ಹಾಲಶ್ರೀ ವಿಫಲರಾಗಿದ್ದರು. ಅದಾದ ಬಳಿಕ ಸಂಜಯ್‌ ತನ್ನ ಹಣ ವಾಪಸ್‌ ಕೊಡಬೇಕು ಎಂದು ಹಾಲಶ್ರೀ ಬೆನ್ನು ಬಿದ್ದಿದ್ದರು. ಆದರೆ, ಹಾಲಶ್ರೀ ದಿನ ದೂಡುತ್ತಲೇ ಇದ್ದರು. ಈ ನಡುವೆ, ಗೋವಿಂದ ಪೂಜಾರಿ ಪ್ರಕರಣ ಎದ್ದುಬಂದಿತ್ತು. ಸೆಪ್ಟೆಂಬರ್‌ 8ರಂದು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಹಾಲಶ್ರೀ ತಮ್ಮ ಇನ್ನಷ್ಟು ಅಕ್ರಮಗಳು ಬಯಲಿಗೆ ಬರುವುದು ಬೇಡ ಎಂದು ಸಂಜಯ್‌ ಅವರಿಗೆ ಕರೆ ಮಾಡಿ ಹಣ ತೆಗೆದುಕೊಂಡು ಹೋಗುವಂತೆ ತಿಳಿಸಿದ್ದರು.

ಸಂಜಯ್‌ ಅವರು ಒಂದೆರಡು ದಿನ ಬಿಟ್ಟು ಹಣಕ್ಕಾಗಿ ಮಠಕ್ಕೆ ತೆರಳಿದರೆ ಅಷ್ಟು ಹೊತ್ತಿಗೆ ಹಾಲಶ್ರೀ ಮಠದಿಂದಲೇ ನಾಪತ್ತೆಯಾಗಿದ್ದರು. ಈ ವೇಳೆ ಸಂಜಯ್‌ ಅವರು ಹಾಲಶ್ರೀ ಚಾಲಕನ ಸಂಪರ್ಕ ಮಾಡಿದ್ದರು ಆಗ ಚಾಲಕ ಹಿರೇಹಡಗಲಿ‌ ಮಠದಿಂದ ಮೈಸೂರಿನತ್ತ ತೆರಳಿ ಆಗಿತ್ತು.

ಇದನ್ನೂ ಓದಿ: VISTARA TOP 10 NEWS : ಗ್ಯಾರಂಟಿಗೆ ಪ್ರತಿಯಾಗಿ ಮೋದಿಯ ನಾರಿಶಕ್ತಿ ಅಸ್ತ್ರ, ಕಟಕ್‌ನಲ್ಲಿ ಸಿಕ್ಕಿಬಿದ್ದ ಹಾಲಶ್ರೀ ಕಳಚಿದರು ಕಾವಿವಸ್ತ್ರ!

ಈ ನಡುವೆ, ಹಾಲಶ್ರೀ ಕಾರು ಚಾಲಕ ಸಿಸಿಬಿ ಬಲೆಗೆ ಬಿದ್ದಿದ್ದ. ಈ ನಡುವೆ ಕಾರು ಚಾಲಕ ಮತ್ತು ಪಿಡಿಒ ಸಂಜಯ್‌ ನಡೆದಿರುವ ಮಾತುಕತೆ, ಫೋನ್‌ ಕಾಲ್‌ ಬೆನ್ನು ಹತ್ತಿ ಪಿಡಿಒ ಸಂಜಯ್‌ನನ್ನು ವಿಚಾರಣೆ ನಡೆಸಿದ್ದರು. ಆಗ ಹಾಲಶ್ರೀಯ ಇನ್ನೊಂದು ಹಗರಣ ಬೆಳಕಿಗೆ ಬಂದಿದೆ. ಸಿಸಿಬಿ ವಿಚಾರಣೆಯ ಬಳಿಕ ಸಂಜಯ್‌ ಈಗ ಮುಂಡರಗಿ ಠಾಣೆಗೆ ದೂರು ನೀಡಿದ್ದಾರೆ.

Sanjay PDO Yatnal fan

ಯಾರೀ ಕೋಟಿ ಕುಳ ಸಂಜಯ್‌, ದೂರಿನಲ್ಲೇನಿದೆ?

ಸಂಜಯ್ ಚವಡಾಳ ಶಿರಹಟ್ಟಿ ತಾಲೂಕಿನ ಹೆಬ್ಬಾಳ ಗ್ರಾಮದವರು. ಎಸ್ ಸಿ (ಮಾದಿಗ) ಸಮುದಾಯಕ್ಕೆ ಸೇರಿದವರು. ಎಸ್ ಸಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸುವ ಆಸಕ್ತಿಹೊಂದಿದ್ದ ಸಂಜಯ್ ಅರುಂಧತಿ ಫೌಂಡೇಷನ್ ಹೆಸರಲ್ಲಿ ಸಾಮಾಜಿಕ‌ ಸೇವೆ ಮಾಡುತ್ತಿದ್ದರು. ಒಬ್ಬ ಪಿಡಿಒ ಆಗಿ ಕೋಟಿಗಟ್ಟಲೆ ಹಣ ಕೊಟ್ಟು ಟಿಕೆಟ್‌ ಪಡೆಯುವಷ್ಟು ಗಟ್ಟಿ ಕುಳಾನಾ ಎನ್ನುವ ಪ್ರಶ್ನೆಗೆ ಸಂಪೂರ್ಣ ವಿಚಾರಣೆ ಬಳಿಕವೇ ಉತ್ತರ ಸಿಗಬೇಕಾಗಿದೆ. ಅವರ ಘನಾಂದಾರಿ ಕೆಲಸಗಳಿಗಾಗಿ ಅವರು ಕರ್ತವ್ಯ ಲೋಪದ ಆರೋಪದಲ್ಲಿ ಸದ್ಯ ಅಮಾನತುಗೊಂಡಿದ್ದಾರೆ.

ಇದನ್ನೂ ಓದಿ: Halashri Swameeji: ಹಾಲ ಮಠದ ಚರಿತ್ರೆಯಲ್ಲಿ ಕಪ್ಪು ಚುಕ್ಕೆ; ಕರ್ನಾಟಕದ ಯೋಗಿಯಾಗುವ ಕನಸು ಹೊತ್ತಿದ್ದ ಹಾಲಶ್ರೀ!

ಹಾಲಶ್ರೀಯಿಂದ ತನಗೂ ಕೋಟಿ ರೂಪಾಯಿ ವಂಚನೆ ಆಗಿರುವ ಬಗ್ಗೆ ಸಿಸಿಬಿ ವಿಚಾರಣೆಯಲ್ಲಿ ಹೇಳಿಕೊಂಡಿರುವ ಸಂಜಯ್‌ ಶಿರಹಟ್ಟಿ ಮೀಸಲು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎಂದು ಜನರ ಮುಂದೆ ಬಿಂಬಿಸಿಕೊಂಡಿದ್ದರು. ಟಿಕೆಟ್‌ ಸಿಕ್ಕೇ ಸಿಗುತ್ತದೆ ಎಂದು ಹೇಳಿಕೊಂಡಿದ್ದರು.

Sanjay Halashri Case

ಸೆಪ್ಟೆಂಬರ್ 19 ನೇ ತಾರೀಕು ಮಧ್ಯರಾತ್ರಿ ಠಾಣೆ ಬಂದು ಸಂಜಯ್‌ ದೂರು ನೀಡಿದ್ದು ಅದರಲ್ಲಿ ಚುನಾವಣೆ ಮುಂಚಿತವಾಗಿ 1 ಕೋಟಿ ರೂಪಾಯಿ ಹಣವನ್ನು ಶ್ರೀಗಳಿಗೆ ನೀಡಿದ್ದಾಗಿ ಹೇಳಿದ್ದಾರೆ. ಮೂರು ಕಂತುಗಳಲ್ಲಿ ಹಣ ನೀಡಿದ್ದಾಗಿ ದೂರಿನಲ್ಲಿ‌ ದಾಖಲಿಸಿದದಾರೆ. ಆದರೆ, ಸೂಕ್ತ ದಾಖಲೆ ಇಲ್ಲದ ಹಿನ್ನೆಲೆಯಲ್ಲಿ ಕೇವಲ ಎನ್ ಸಿಆರ್‌ ದಾಖಲಿಸಿ ಕಳುಹಿಸಿರುವ ಮುಂಡರಗಿ ಪೊಲೀಸರು, ದಾಖಲೆ ತೆಗೆದುಕೊಂಡು ಬರುವಂತೆ ಸೂಚಿಸಿದ್ದಾರೆ.

ದೂರು ನೀಡಿದ ಬಳಿಕ ಸಂಜಯ್‌ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಸಂಜಯ್‌. ಒಟ್ಟಿನಲ್ಲಿ ಹಾಲಶ್ರೀ ಮಾಡಿಕೊಂಡಿರುವ ಭಾನಗಡಿ ಒಂದೆರಡಲ್ಲ!

Continue Reading

ಶಿವಮೊಗ್ಗ

Communal Tension: ಗಣಪತಿ ವಿಸರ್ಜನೆ ವೇಳೆ ಮಸೀದಿ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಪ್ರತಿಭಟನೆ

ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿರುವ ಮಸೀದಿ ಮುಂದೆ ಸಾಗುತ್ತಿದ್ದ ಗಣಪತಿ ಮೆರವಣಿಗೆಯ ವೇಳೆ ಕೆಲ ಯುವಕರು ಪಟಾಕಿ ಹಚ್ಚಿದರು. ಮಸೀದಿ ಎದುರು‌ ಪಟಾಕಿ ಹಚ್ಚಿದ್ದಕ್ಕೆ ಇನ್ನೊಂದು ಕೋಮಿನ ಯುವಕರು ಆಕ್ರೋಶ ವ್ಯಕ್ತಪಡಿಸಿದರು.

VISTARANEWS.COM


on

Edited by

holehonnur tension
Koo

ಶಿವಮೊಗ್ಗ: ಗಣಪತಿ ವಿಸರ್ಜನೆ (Ganesh immersion) ಮೆರವಣಿಗೆ ವೇಳೆ ಮಸೀದಿ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೋಮು ಉದ್ವಿಗ್ನತೆ (Communal Tension) ಸೃಷ್ಟಿಯಾಗಿ ಪ್ರತಿಭಟನೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ (Shivamogga news) ಹೊಳೆಹೊನ್ನೂರಿನಲ್ಲಿ‌ ನಿನ್ನೆ ರಾತ್ರಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನಲ್ಲಿ ಗಲಾಟೆ ಸೃಷ್ಟಿಯಾಯಿತು. ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿರುವ ಮಸೀದಿ ಮುಂದೆ ಸಾಗುತ್ತಿದ್ದ ಗಣಪತಿ ಮೆರವಣಿಗೆಯ ವೇಳೆ ಕೆಲ ಯುವಕರು ಪಟಾಕಿ ಹಚ್ಚಿದರು. ಮಸೀದಿ ಎದುರು‌ ಪಟಾಕಿ ಹಚ್ಚಿದ್ದಕ್ಕೆ ಇನ್ನೊಂದು ಕೋಮಿನ ಯುವಕರು ಆಕ್ರೋಶ ವ್ಯಕ್ತಪಡಿಸಿದರು.

ಈ ಘಟನೆ ಖಂಡಿಸಿ‌ ಯುವಕರು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಅಡಿಷನಲ್ ಎಸ್‌ಪಿ ಅನಿಲ್ ಭೂಮರೆಡ್ಡಿ, ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದ ಪೂರ್ಯನಾಯ್ಕ ಭೇಟಿ ನೀಡಿ, ಪ್ರತಿಭಟನಾಕಾರರ ಜೊತೆ ಮಾತುಕತೆ ನಡೆಸಿದರು. ಮಸೀದಿ ಎದುರು ಪಟಾಕಿ ಹಚ್ಚಿ ಅಶಾಂತಿಗೆ ಕಾರಣರಾದವರ ಬಂಧನಕ್ಕೆ ಮುಸ್ಲಿಂ ಮುಖಂಡರು ಆಗ್ರಹಿಸಿದರು. ನಂತರ ಶಾಸಕಿ, ಅಡಿಷನಲ್ ಎಸ್‌ಪಿ ಪ್ರತಿಭಟನಾಕಾರರ ಮನವೊಲಿಸಿದರು.

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಡಿಜೆ ಸದ್ದಿಗೆ ಯುವಕ ಸಾವು

ವಿಜಯನಗರ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಹೃದಯಾಘಾತದಿಂದ (Heart Attack) ಯುವಕ ಮೃತಪಟ್ಟಿರುವ ಘಟನೆ ಹಗರಿಬೊಮ್ಮನಹಳ್ಳಿ ಪಟ್ಟಣದ ಭೋವಿ ಕಾಲನಿಯಲ್ಲಿ ಶುಕ್ರವಾರ ನಡೆದಿದೆ. ಮೆರವಣಿಗೆ ವೇಳೆ ಡಿಜೆ ಸದ್ದಿಗೆ ನೂರಾರು ಯುವಕರು ಕುಣಿಯುತ್ತಿದ್ದರು. ಈ ವೇಳೆ ಯುವಕನಿಗೆ ಹೃದಯಾಘಾತವಾಗಿದೆ.

ಜಮೀರ್ ಪಿಂಜಾರ (22) ಮೃತ ಯುವಕ. ಮೆರವಣಿಗೆಯಲ್ಲಿ ಏಕಾಏಕಿ ಯುವಕ ಕುಸಿದು ಬಿದ್ದ ಹಿನ್ನೆಲೆಯಲ್ಲಿ ತಕ್ಷಣವೇ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಹೃದಯಾಘಾತದಿಂದ ಯುವಕ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಅತಿಯಾಗಿ ಮದ್ಯ ಸೇವನೆ ಮಾಡಿದ್ದರಿಂದ ಯುವಕ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಸಾವಿನ ಖಚಿತ ಮಾಹಿತಿ ಲಭ್ಯವಾಗಲಿದೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಇನ್ನೂ ಪ್ರಕರಣ ದಾಖಲಾಗಿಲ್ಲ.

ಇದನ್ನೂ ಓದಿ: Shivamogga News: ಶಿವಮೊಗ್ಗದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗಲಾಟೆ

Continue Reading

ಶಿವಮೊಗ್ಗ

Shivamogga News: ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಮಾನತಿಗೆ ಶಾಸಕ ಗೋಪಾಲಕೃಷ್ಣ ಸೂಚನೆ

Shivamogga News: ರಿಪ್ಪನ್‌ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶುಕ್ರವಾರ ಶಾಸಕ ಗೋಪಾಲಕೃಷ್ಣ ಬೇಳೂರು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

VISTARANEWS.COM


on

Edited by

MLA Gopalakrishna Belur surprise visit to Ripponpet Primary Health Centre
ರಿಪ್ಪನ್‌ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶುಕ್ರವಾರ ಶಾಸಕ ಗೋಪಾಲಕೃಷ್ಣ ಬೇಳೂರು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
Koo

ರಿಪ್ಪನ್‌ಪೇಟೆ: ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ (Primary Health Centre) ವೈದ್ಯಾಧಿಕಾರಿ ಡಾ.ಅನಿಲ್‌ಕುಮಾರ್ ಸರಿಯಾಗಿ ಕರ್ತವ್ಯಕ್ಕೆ (Duty) ಹಾಜರಾಗುತ್ತಿಲ್ಲ ಎಂದು ಸಾರ್ವಜನಿಕರ ದೂರಿನನ್ವಯ ಶುಕ್ರವಾರ ಶಾಸಕ ಗೋಪಾಲಕೃಷ್ಣ ಬೇಳೂರು ಆಸ್ಪತ್ರೆಗೆ ದಿಢೀರ್ ಭೇಟಿ (Surprise Visit) ನೀಡಿದರು.

ಆಸ್ಪತ್ರೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, ಭೇಟಿ ನೀಡಿದ ಸಂದರ್ಭದಲ್ಲಿಯೂ ವೈದ್ಯಾಧಿಕಾರಿ ಗೈರಾಗಿರುವುದನ್ನು ಕಂಡು ಕೂಡಲೇ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ದೂರವಾಣಿ ಮೂಲಕ ಇಲ್ಲಿನ ವೈದ್ಯಾಧಿಕಾರಿಯನ್ನು ಅಮಾನತು ಪಡಿಸಿ, ವರದಿ ನೀಡುವಂತೆ ಅವರು ಸೂಚಿಸಿದರು.

ಇದನ್ನೂ ಓದಿ: Sirsi News:ಅಕ್ರಮ ದಾಸ್ತಾನು ಮಾಡಿದ್ದ 64.950 ಕೆಜಿ ತೂಕದ ಶ್ರೀಗಂಧ ವಶ

ಪ್ರಾಥಮಿಕ ಆರೋಗ್ಯ ಕೇಂದ್ರದ ಹಲವು ಸಮಸ್ಯೆಗಳ ಕುರಿತು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮತ್ತು ಸಾರ್ವಜನಿಕರಿಂದ ಸಾಕಷ್ಟು ದೂರುಗಳನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಆಲಿಸಿದರು.

ಆಸ್ಪತ್ರೆಯಲ್ಲಿ ಫಾರ್ಮಾಸಿಸ್ಟ್ ಕರ್ತವ್ಯಕ್ಕೆ ಸರಿಯಾಗಿ ಹಾಜರಾಗುತ್ತಿಲ್ಲ, ಇದರಿಂದ ಸರಿಯಾಗಿ ಔಷಧಿ ವಿತರಣೆಯಾಗದೇ ರೋಗಿಗಳು ಖಾಸಗಿ ಮೆಡಿಕಲ್‌ಗಳಿಗೆ ಚೀಟಿ ಹಿಡಿದು ಹೋಗುವಂತಾಗಿದೆ ಎಂದು ಸಾರ್ವಜನಿಕರು ದೂರಿದರು, ಆಗ ಶಾಸಕರು ಈ ಬಗ್ಗೆ ಸಂಬಂಧಿಸಿದ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ದೂರವಾಣಿ ಮೂಲಕ ಸ್ಥಳೀಯ ಅಸ್ಪತ್ರೆಯ ಫಾರ್ಮಾಸಿಸ್ಟ್ ಸರಿಯಾಗಿ ಕೆಲಸಕ್ಕೆ ಬಾರದಿರುವುದರ ಬಗ್ಗೆ ಅವರ ಮೇಲೆ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು.

ಇದನ್ನೂ ಓದಿ: Shivamogga News: ವಿಶ್ವ ಹಿಂದೂ ಮಹಾಸಭಾ ಗಣಪತಿ ಉತ್ಸವ ಸಮಿತಿಯಿಂದ ಸೆ.23ರಿಂದ ಸೊರಬದಲ್ಲಿ ಕಾರ್ಯಕ್ರಮ

ಈ ಸಂದರ್ಭದಲ್ಲಿ ಡಾ.ಅಂಜನಪ್ಪ, ಸಿಬ್ಬಂದಿಗಳಾದ ಗಾಯಿತ್ರಿ, ಜಿ.ಪಂ.ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ತಾ.ಪಂ. ಮಾಜಿ ಸದಸ್ಯ ಚಂದ್ರು ಮೌಳಿಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ,ಕೆಂಚನಾಲ ಗ್ರಾ.ಪಂ. ಅಧ್ಯಕ್ಷೆ ಉಭೇದುಲ್ಲಾ ಷರೀಫ್‌, ಆಶೀಫ್, ಗಣಪತಿ, ಉಂಡಗೋಡು ನಾಗಪ್ಪ, ಶ್ರೀಧರ್, ರಮೆಶ್ ಪ್ಯಾನ್ಸಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Continue Reading
Advertisement
Kamal Haasan And Udhayanidhi Stalin
ದೇಶ12 mins ago

Kamal Haasan: ಸನಾತನ ಧರ್ಮದ ವಿಷಯದಲ್ಲಿ ‘ಮಗು’ ಉದಯನಿಧಿ ಮೇಲೆ ದಾಳಿ ಎಂದ ಕಮಲ್‌ ಹಾಸನ್

mandya bundh
ಕರ್ನಾಟಕ26 mins ago

Cauvery Protest: ಕಾವೇರಿ ಕಿಚ್ಚು: ಮಂಡ್ಯ ಬಂದ್‌; ಹೆದ್ದಾರಿಯಲ್ಲಿ ಉರುಳುಸೇವೆ, ರೈತರ ಜತೆ ಸೇರಿದ ಬಿಜೆಪಿ, ಜೆಡಿಎಸ್

Sanjay and Halashri
ಕರ್ನಾಟಕ38 mins ago

Halashri Swameeji : ಹಾಲಶ್ರೀ ಇನ್ನೊಂದು ದೋಖಾ; ಶಿರಹಟ್ಟಿ ಬಿಜೆಪಿ ಟಿಕೆಟ್‌ ಕೊಡಿಸೋದಾಗಿ ಪಿಡಿಒಗೆ ಕೋಟಿ ವಂಚನೆ!

narendra modi justi Trudeau
ದೇಶ47 mins ago

India Canada Row: ನಿಜ್ಜರ್‌ ಹತ್ಯೆ ಕುರಿತು ಭಾರತಕ್ಕೆ ನಂಬಲರ್ಹ ಮಾಹಿತಿ ನೀಡಿದ್ದೇವೆ; ಕೆನಡಾ ಹೊಸ ರಾಗ

Hardeep Singh Nijjar
ದೇಶ1 hour ago

India Canada Row: ನಿಜ್ಜರ್‌ ಧಾರ್ಮಿಕ ನಾಯಕನಲ್ಲ, 200 ಜನರ ಕೊಲೆಗಾರ; ಕೆನಡಾಗೆ ಭಾರತ ಪ್ರತ್ಯುತ್ತರ

holehonnur tension
ಶಿವಮೊಗ್ಗ1 hour ago

Communal Tension: ಗಣಪತಿ ವಿಸರ್ಜನೆ ವೇಳೆ ಮಸೀದಿ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಪ್ರತಿಭಟನೆ

Team india Record
ಕ್ರಿಕೆಟ್2 hours ago

ind vs aus : 21ನೇ ಶತಮಾನದಲ್ಲಿ ಭಾರತ ಕ್ರಿಕೆಟ್​ ತಂಡದ ವಿಶೇಷ ದಾಖಲೆ, ಮೊಹಾಲಿ ಕ್ರೀಡಾಂಗಣವೇ ಸಾಕ್ಷಿ

life tips
ಲೈಫ್‌ಸ್ಟೈಲ್2 hours ago

Life Tips: ಹೇಗೇ ಇದ್ದರೂ ಬದುಕು ಸುಂದರವಾಗಿ ಕಾಣಬೇಕೆಂದರೆ ಇಲ್ಲಿದೆ ಕೀಲಿಕೈ!

Amitabh Bachchan in Paa Movie
ಅಂಕಣ2 hours ago

Raja Marga Column : ಅಪ್ಪಾ ಪಾ!! ಅಮಿತಾಭ್ ಬಚ್ಚನ್ ಬದ್ಧತೆ, ಪ್ರಯೋಗಶೀಲತೆಗೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕಾ?

Dengue Fever foods
ಆರೋಗ್ಯ2 hours ago

Dengue Fever foods: ಡೆಂಗ್ಯು ಜ್ವರ ಬಂದಾಗ ಯಾವೆಲ್ಲ ಆಹಾರ ಸೇವನೆ ಬಹಳ ಮುಖ್ಯ ಗೊತ್ತೇ?

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ7 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ2 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina bhavishya
ಪ್ರಮುಖ ಸುದ್ದಿ5 hours ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

dina bhavishya
ಪ್ರಮುಖ ಸುದ್ದಿ5 days ago

Dina Bhavishya : ಆಪ್ತರೊಂದಿಗೆ ಜಗಳವಾದೀತು ಹುಷಾರ್‌!

Dina Bhavishya
ಪ್ರಮುಖ ಸುದ್ದಿ6 days ago

Dina Bhavishya : ಈ ರಾಶಿಯವರು ಇಂದು ಮುಟ್ಟಿದ್ದೆಲ್ಲಾ ಚಿನ್ನ!

Ramalinga Reddy
ಕರ್ನಾಟಕ7 days ago

ಇನ್ಮುಂದೆ ಹೇಗಂದ್ರೆ ಹಾಗೆ ದೇವಸ್ಥಾನ ಕಟ್ಟೋ ಹಾಗಿಲ್ಲ! ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

Bannerghatta Park
ಆರೋಗ್ಯ7 days ago

Nipah Virus : ನಿಫಾ ವೈರಸ್‌ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್

Villagers exclude menstruating women
ಕರ್ನಾಟಕ7 days ago

Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ!

dina bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ!

Kadri temple is the target for Shariq NIA reveals
ಕರ್ನಾಟಕ1 week ago

ಮಂಗಳೂರು ಸ್ಫೋಟ : ಶಾರಿಕ್‌ಗೆ ಕದ್ರಿ ದೇವಸ್ಥಾನವೇ ಟಾರ್ಗೆಟ್; ರಿವೀಲ್ ಮಾಡಿದ ಎನ್ಐಎ

ಟ್ರೆಂಡಿಂಗ್‌