ಕನ್ನಡ ಅಭಿವೃದ್ಧಿ ವಿಧೇಯಕ ಜಾರಿಯಲ್ಲಿ ಕಸಾಪ ಅಧ್ಯಕ್ಷರನ್ನು ಕೈಬಿಟ್ಟಿರುವುದು ಸರಿಯಲ್ಲ: ಮಹೇಶ ಜೋಶಿ - Vistara News

ಕ ಸಾ ಪ

ಕನ್ನಡ ಅಭಿವೃದ್ಧಿ ವಿಧೇಯಕ ಜಾರಿಯಲ್ಲಿ ಕಸಾಪ ಅಧ್ಯಕ್ಷರನ್ನು ಕೈಬಿಟ್ಟಿರುವುದು ಸರಿಯಲ್ಲ: ಮಹೇಶ ಜೋಶಿ

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022”ರ ಜಾರಿ ಸಮಿತಿಗಳಲ್ಲಿ ಕಸಾಪ ರಾಜ್ಯ ಹಾಗೂ ಜಿಲ್ಲಾ ಘಟಕಗಳ ಅಧ್ಯಕ್ಷರನ್ನು ಸೇರ್ಪಡೆಗೊಳಿಸಬೇಕು ಎಂದು ಸರ್ಕಾರಕ್ಕೆ ಕಸಾಪ ಅಧ್ಯಕ್ಷ ಮಹೇಶ ಜೋಶಿ ಆಗ್ರಹಿಸಿದ್ದಾರೆ.

VISTARANEWS.COM


on

ಮಹೇಶ ಜೋಶಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: “ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨”ರ ಜಾರಿಯಲ್ಲಿ ಪ್ರಾಧಿಕಾರದ, ರಾಜ್ಯಮಟ್ಟದ ಹಾಗೂ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ರಾಜ್ಯ ಹಾಗೂ ಜಿಲ್ಲಾ ಘಟಕಗಳ ಅಧ್ಯಕ್ಷರನ್ನು ಕೈಬಿಟ್ಟಿರುವುದು ಸರಿಯಲ್ಲ. ಈ ವಿಧೇಯಕದಲ್ಲಿ ಈ ಎಲ್ಲರನ್ನು ಮತ್ತೆ ಸೇರ್ಪಡೆಗೊಳಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಒತ್ತಾಯಿಸಿದ್ದಾರೆ.

ಈ ಬಗ್ಗೆ ಪತ್ರ ಬರೆದಿರುವ ಅವರು, ನ್ಯಾಯಮೂರ್ತಿ ಎಸ್.ಆರ್. ಬನ್ನೂರಮಠ ಅವರ ನೇತೃತ್ವದ ಕರ್ನಾಟಕ ಕಾನೂನು ಆಯೋಗವು ತನ್ನ ೫೭ನೇ ವರದಿಯಲ್ಲಿ “ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨” ಅನ್ನು ಸರ್ಕಾರಕ್ಕೆ ಸಲ್ಲಿಸಿ, ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡಿಗರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಉತ್ತಮ ಅವಕಾಶಗಳನ್ನು ಒದಗಿಸುವುದಕ್ಕಾಗಿ ಉಪಬಂಧ ಕಲ್ಪಿಸುವ ಒಂದು ವಿಧೇಯಕ ಎಂದು ಸ್ಪಷ್ಟವಾಗಿ ನಮೂದಿಸಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | JDS ಪಕ್ಷದ ಕೆಲಸವನ್ನು ನಿರ್ಲಕ್ಷ್ಯ ಮಾಡುವ ಪದಾಧಿಕಾರಿಗಳಿಗೆ ಕುಮಾರಸ್ವಾಮಿ ಎಚ್ಚರಿಕೆ

ಕರ್ನಾಟಕ ಕಾನೂನು ಆಯೋಗವು ಸರ್ಕಾರಕ್ಕೆ ಸಲ್ಲಿಸಿದ್ದ “ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨”ರ ಕಲಂ-೭ರಲ್ಲಿ ‘ಅಧಿಕೃತ ಭಾಷೆಯ ಅನುಷ್ಠಾನಕ್ಕಾಗಿ ಕಾರ್ಯವ್ಯವಸ್ಥೆ’ ಶೀರ್ಷಿಕೆಯಡಿಯಲ್ಲಿ ಒಂದು ರಾಜ್ಯಮಟ್ಟದ ಸಮಿತಿ ಇರತಕ್ಕದ್ದು ಎಂದು ಉಲ್ಲೇಖಿಸಿ, ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರನ್ನು ರಾಜ್ಯಮಟ್ಟದ ಸಮಿತಿಯ ಸದಸ್ಯರನ್ನಾಗಿಯೂ ಹಾಗೂ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರನ್ನು ‘ಜಿಲ್ಲಾ ಮಟ್ಟದ ಸದಸ್ಯರಾಗಿ ಸೇರ್ಪಡಿಸಿ, ವಿಧೇಯಕ ಜಾರಿಗೆ ತರಲು ಮುಂದಿನ ಕ್ರಮಕ್ಕಾಗಿ ಸರ್ಕಾರಕ್ಕೆ ಸಲ್ಲಿಸಿತ್ತು. ಆದರೆ ಸೆ.೨೨ರಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಅವರು ಅಧಿವೇಶನದಲ್ಲಿ ಮಂಡಿಸಿದಾಗ, ರಾಜ್ಯಮಟ್ಟದ ಸಮಿತಿಯಲ್ಲಿ ಅಧ್ಯಕ್ಷರನ್ನು ಹಾಗೂ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರನ್ನು ಜಾರಿ ಪ್ರಾಧಿಕಾರದಿಂದ ಕೈಬಿಡಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಸರ್ಕಾರದ ಈ ಕ್ರಮ ಸಮಗ್ರ ಕನ್ನಡಿಗರ ಏಕೈಕ ಪ್ರಾತಿನಿಧಿಕ ಹಾಗೂ ಎಲ್ಲ ಕನ್ನಡ ಸಂಘ-ಸಂಸ್ಥೆಗಳ ಮಾತೃ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಸಮಸ್ತ ಕನ್ನಡಿಗರಿಗೆ ಮಾಡಿರುವ ಘೋರ ಅನ್ಯಾಯ ಮತ್ತು ಅಕ್ಷಮ್ಯ ಅಪರಾಧವಾಗಿದೆ. ಇದು ಕನ್ನಡ ವಿರೋಧಿಗಳ ಕುತಂತ್ರ ಹಾಗೂ ಕನ್ನಡಿಗರನ್ನು ಪ್ರತಿನಿಧಿಸುವ ಕನ್ನಡ ಸಾಹಿತ್ಯ ಪರಿಷತ್‌ಗೆ ಮಾತ್ರವಲ್ಲ, ಎಲ್ಲ ಕನ್ನಡಿಗರಿಗೆ ತೋರುತ್ತಿರುವ ಅಸಡ್ಡೆ, ಅಸಹನೆ, ತಾತ್ಸಾರ ಹಾಗೂ ಬೇಜವಾಬ್ದಾರಿತನವನ್ನು ಎತ್ತಿ ತೋರಿಸುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್‌ ಅನ್ನು ಈ ವಿಧೇಯಕದಿಂದ ಕೈಬಿಡುವ ಮೂಲಕ ಸರ್ಕಾರವು ಕನ್ನಡ ವಿರೋಧಿ ಧೋರಣೆ ತೋರುತ್ತಿದೆ ಎಂದು ಸಮಗ್ರ ಕನ್ನಡಿಗರು ಅದರಲ್ಲೂ, ಸಾಹಿತಿಗಳು, ಸಂಘಟಕರು, ಕನ್ನಡಪರ ಹೋರಾಟಗಾರರು ಖಂಡಿಸುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ತವರು ಜಿಲ್ಲೆ ಹಾವೇರಿಯಲ್ಲಿ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜರುಗುತ್ತಿದ್ದು, ಸಮ್ಮೇಳನದ ಸಂದರ್ಭದಲ್ಲಿ ಈ ವಿಚಾರವನ್ನೇ ಮುಂದಿಟ್ಟುಕೊಂಡು ಪ್ರತಿಭಟನೆ, ಘೋಷಣೆ ಮುಂತಾದ ಅಹಿತಕರ ಘಟನೆಗಳು ನಡೆಯುವ ಎಲ್ಲ ಸಾಧ್ಯತೆಗಳು ಹೆಚ್ಚಾಗುವಂತೆ ಕಾಣುತ್ತಿವೆ. ಹೀಗಾಗಿ ವಿಧೇಯಕ ಜಾರಿಯಲಿ ಕೈಬಿಟ್ಟಿರುವ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳನ್ನು ಮತ್ತೆ ಸೇರ್ಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ | ಅರ್ಕಾವತಿ ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ಸಿದ್ದರಾಮಯ್ಯ ಜೈಲು ಸೇರಲಿದ್ದಾರೆ: ನಳಿನ್‌ ಕುಮಾರ್ ಕಟೀಲ್‌

His Masters Voice (HMV) ಅಂದರೆ, ಸರ್ಕಾರದ ಧ್ವನಿಯಾಗುವುದೇ ಹೊರತು, ಕನ್ನಡದ ಧ್ವನಿಯಾಗುವುದಿಲ್ಲ. ಜತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನು ಸಮಿತಿಯ ಉಪಾಧ್ಯಕ್ಷರನ್ನಾಗಿಸಿ, ಸಚಿವ ಸ್ಥಾನಮಾನ ಹೊಂದಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಸಮಿತಿಗೆ ಕೇವಲ ಸದಸ್ಯರನ್ನಾಗಿಸಿರುವುದು ಕನ್ನಡಿಗರಿಗೆ ಮಾಡಿದ ಅವಮಾನವಾಗಿದೆ ಹಾಗೂ ಅಧಿಕಾರಶಾಹಿ ಧೋರಣೆಯಿಂದ ಸರ್ಕಾರವನ್ನು ಶರಣಾಗತಿ ಮಾಡುವಂತೆ ಕಂಡುಬರುತ್ತಿರುವುದು, ಕನ್ನಡವನ್ನು ವ್ಯವಸ್ಥಿತವಾಗಿ ಹತ್ತಿಕ್ಕಲು ಅಧಿಕಾರಿಗಳು ಸರ್ಕಾರವನ್ನು ತಪ್ಪು ದಾರಿಗೆ ಎಳೆದು ತರುವ ಕುತಂತ್ರವಾಗಿದೆ. ವಿಧೇಯಕದಿಂದ ಕನ್ನಡದ ಅಸ್ಮಿತೆಯ ಪ್ರತೀಕವಾಗಿರುವ ಕನ್ನಡ ಸಾಹಿತ್ಯ ಪರಿಷತ್ತನ್ನು ಹೊರಗಿಟ್ಟಿರುವುದು ಚಳವಳಿಯ ರೂಪದಲ್ಲೂ ಸಹ ಹೊರಹೊಮ್ಮುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಪರಿಸ್ಥಿತಿ ಕೈ ಮೀರಿ ಹೋಗುವುದಕ್ಕಿಂತ ಮುಂಚೆ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಕ್ರಮಕೈಗೊಳ್ಳಬೇಕು. ಕನ್ನಡ ಭಾಷೆಯ ಅಭಿವೃದ್ಧಿ ಕುರಿತು ಆಳವಾಗಿ ಅಧ್ಯಯನ ನಡೆಸಿ, ಚರ್ಚಿಸಿ, ಸಿದ್ಧಪಡಿಸಲಾದ ಈ ವಿಧೇಯಕವನ್ನು ಜಾರಿ ಮಾಡಲೇಬೇಕಾದ ಅನಿವಾರ್ಯತೆ ಸರ್ಕಾರಕ್ಕೆ ಇದೆ. ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ಜರುಗಲಿರುವ ಅಧಿವೇಶನದಲ್ಲಿ ವಿಧೇಯಕವನ್ನು ಸರ್ಕಾರ ಜಾರಿಗೊಳಿಸಬೇಕು ಎಂದು ಸಮಸ್ತ ಕನ್ನಡಿಗರ ಪರವಾಗಿ ಕನ್ನಡ ಸಾಹಿತ್ಯ ಪರಿಷತ್ತು ಆಗ್ರಹಪೂರ್ವಕವಾಗಿ ಒತ್ತಾಯಿಸುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಅ.೧೨ ರಂದು ಚಿಂತನಾ ಗೋಷ್ಠಿ
ಅ.೧೨ ರಂದು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨ ಕುರಿತಂತೆ “ಚಿಂತನಾ ಗೋಷ್ಠಿ”ಯನ್ನು ಪರಿಷತ್ತು ಏರ್ಪಡಿಸಿದ್ದು, ಸಾಹಿತ್ಯ, ಶಿಕ್ಷಣ, ಉದ್ಯೋಗ, ಕೈಗಾರಿಕಾ, ನ್ಯಾಯಾಂಗ ಸೇರಿದಂತೆ ಪ್ರಮುಖ ಕ್ಷೇತ್ರಗಳ ಪರಿಣತರನ್ನು ಈ ಗೋಷ್ಠಿಗೆ ಆಹ್ವಾನ ಮಾಡಿದ್ದೇವೆ. ಅಂದು ಸಭೆಯಲ್ಲಿ ಚರ್ಚೆಯಾದ ನಂತರ, ಕೈಗೊಂಡ ಮಹತ್ವದ ನಿರ್ಣಯಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಮಹೇಶ ಜೋಶಿ ತಿಳಿಸಿದ್ದಾರೆ.

ಇದನ್ನೂ ಓದಿ | ರಾಜಕೀಯದ ಆಟ ಬಿಟ್ಟು ನಂಜನಗೂಡಿನಲ್ಲಿ ಮಕ್ಕಳ ಜತೆ ವಾಲಿಬಾಲ್‌ ಆಡಿದ ಡಿಕೆಶಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ ಸಾ ಪ

ಕನ್ನಡಿಗರು ಯುದ್ಧ ಟ್ಯಾಂಕರ್ ಇದ್ದಂಗೆ, ಎದುರಿಗೆ ಬಂದ್ರೆ ಅಪ್ಪಚ್ಚಿ: ಟಿ.ಎ. ನಾರಾಯಣ ಗೌಡ

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕರವೇ ಸಂಸ್ಥಾಪಕ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡರಿಗೆ ಮಂಗಳವಾರ ಸಂಜೆ ಪ್ರತಿಷ್ಠಿತ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼ ಪ್ರದಾನ ಮಾಡಲಾಯಿತು.

VISTARANEWS.COM


on

Kuvempu Sirigannada Endowment Award to TA Narayana Gowda
Koo

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡ (TA Narayana Gowda) ಅವರಿಗೆ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ‘ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ’ದಲ್ಲಿ ಮಂಗಳವಾರ ಪ್ರತಿಷ್ಠಿತ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼ ಪ್ರದಾನ ಮಾಡಲಾಯಿತು.

ಈ ವೇಳೆ ಮಾತನಾಡಿದ ಕರವೇ ಸಂಸ್ಥಾಪಕ ಅಧ್ಯಕ್ಷ ಟಿ.ಎ. ನಾರಾಯಣ ಗೌಡ ಅವರು, ನಾನು ಹೋರಾಟದ ಹಾದಿಯಲ್ಲಿ ಬರಲು ರಾಷ್ಟ್ರಕವಿ ಕುವೆಂಪು ಅವರ ಸಾಹಿತ್ಯ ಹಾಗೂ ಡಾ. ರಾಜಕುಮಾರ್‌ ಅವರ ಚಿತ್ರಗಳು ಕಾರಣ. ಕುವೆಂಪು ಅವರು ಕರ್ನಾಟಕ ರಕ್ಷಣಾ ವೇದಿಕೆಯ ಬಹುದೊಡ್ಡ ಆದರ್ಶವಾಗಿದ್ದಾರೆ. ಅವರ ಸಾಹಿತ್ಯ, ವಿಚಾರಧಾರೆಗಳನ್ನು ನಮ್ಮ ಕಾರ್ಯಕರ್ತರೊಂದಿಗೆ ಹಂಚಿಕೊಳ್ಳುತ್ತೇವೆ ಎಂದು ತಿಳಿಸಿದರು.

ಕನ್ನಡದ ಶತ್ರುಗಳಿಗೆ ಒಂದು ಮಾತು ಹೇಳುತ್ತಿರುತ್ತೇನೆ. ಕನ್ನಡದ ನಾಡು, ನುಡಿ ವಿಚಾರದಲ್ಲಿ ನಾನು ಯುದ್ಧ ಟ್ಯಾಂಕರ್‌ ಇದ್ದ ಹಾಗೆ, ಅಡ್ಡಿ ಬರಬೇಡಿ ಅಪ್ಪಚ್ಚಿ ಆಗಿಬಿಡುತ್ತೀರಾ ಎಂದು ಕುವೆಂಪು ಅವರು ಹೇಳುತ್ತಿದ್ದರು. ಕುವೆಂಪು ಪದ್ಯ ʼಮನುಜ ಮತ ವಿಶ್ವಪಥʼ ನನ್ನ ಅಚ್ಚುಮೆಚ್ಚಿನದ್ದಾಗಿದೆ. ಸಿಲುಕದಿರಿ ಮತವೆಂಬ ಮೋಹದಜ್ಞಾನಕ್ಕೆ, ಮತಿಯಿಂದ ದುಡಿಯಿರೈ ಲೋಕಹಿತಕೆ, ಆ ಮತದ ಈ ಮತದ ಹಳೆ ಮತದ ಸಹವಾಸ ಸಾಕಿನ್ನು ಸೇರಿರೈ ಮನುಜ ಮತಕೆ; ಓ ಬನ್ನಿ ಸೋದರರೇ ವಿಶ್ವಪಥಕ್ಕೆ! ಎಂಬ ಅವರ ಪದ್ಯದ ನುಡಿಗಳು ನನಗೆ ಬಹಳ ಇಷ್ಟ. ಇಂತಹ ರೋಮಾಂಚನಕಾರಿ ಪದ್ಯಗಳ ನುಡಿಗಳು ನನ್ನಂತಹವರಿಗೆ ಹೋರಾಟದ ಕಿಚ್ಚು ತುಂಬಿವೆ ಎಂದು ಹೇಳಿದರು.

ದಲಿತ, ರೈತ, ಕಮ್ಯುನಿಸ್ಟ್‌ ಸೇರಿ ಎಲ್ಲ ಚಳವಳಿಗೆ ಆದರ್ಶ ಎಂದು ಯಾರಾದರೂ ಇದ್ದರೆ ಅದು ಕುವೆಂಪು ಅವರು ಮಾತ್ರ. ಅವರು ಎಲ್ಲ ಹೋರಾಟಗಾರರಿಗೆ ಸ್ಫೂರ್ತಿ. ಕನ್ನಡಕ್ಕೆ ಪ್ರಥಮ ಜ್ಞಾನಪೀಠ ಪ್ರಶಸ್ತಿ ದೊರಕಿಸಿಕೊಟ್ಟ ಅಂತಹ ಮಹಾಕವಿಯ ಹೆಸರಿನ ಪ್ರಶಸ್ತಿಯನ್ನು ನಾನು ಸ್ವೀಕರಿಸಿರುವುದು ನನ್ನ ಜೀವನದಲ್ಲಿ ಎಂದಿಗೂ ಮರೆಯಲಾರಂದತಹ, ಸುವರ್ಣ ಅಕ್ಷರಗಳಲ್ಲಿ ಬರೆದಿಡುವ ಗಳಿಗೆಯಾಗಿದೆ. ಈ ಪ್ರಶಸ್ತಿಯನ್ನು ನನಗೆ ಜನ್ಮ ಕೊಟ್ಟ ತಂದೆ-ತಾಯಿ ಅರ್ಪಿಸುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ | ಮಾನವೀಯ ಮೌಲ್ಯದ ಮೇರು ಸಂತ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ

ನಾರಾಯಣ ಗೌಡ ಅವರಿಗೆ ಅವರೇ ಹೋಲಿಕೆ: ಕೋಡಿಮಠ ಶ್ರೀ

ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಮಾತನಾಡಿ, ನಮ್ಮ ಕನ್ನಡನಾಡಿನಲ್ಲಿ ಅನೇಕ ಸಾಹಿತಿಗಳು, ವೀರರು, ಶೂರರು, ಹೋರಾಟಗಾರರು, ಧೀರರು ಆಗಿ ಹೋಗಿದ್ದಾರೆ. ಅಂತಹವರಲ್ಲಿ ನಮ್ಮ ನಾರಾಯಣ ಗೌಡರು ಕೂಡ ಒಬ್ಬರು. ಅವರ ತಂದೆಯವರು ಕೂಡ ಬಹಳ ವಿನಯವಂತರು. ಅದೇ ಗುಣ ನಮ್ಮ ನಾರಾಯಣ ಗೌಡರಲ್ಲಿದೆ. ಆದರೆ, ಸ್ವಲ್ಪ ವ್ಯತ್ಯಾಸವಾದರೆ ಆತ ಹುಲಿಯಾಗುತ್ತಾನೆ. ನಮ್ಮ ದೃಷ್ಟಿಯಲ್ಲಿ ವಾರಿಧಿ ವಾರಿಧಿಯೇ, ಆಕಾಶ, ಆಕಾಶವೇ. ಸಮುದ್ರ ಮತ್ತು ಆಕಾಶವನ್ನು ಹೋಲಿಕೆ ಮಾಡಲು ಆಗಲ್ಲ. ಹೀಗಾಗಿ ನಾರಾಯಣ ಗೌಡ ಅವರಿಗೆ ಅವರೇ ಹೋಲಿಕೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕನ್ನಡ ನೆಲ, ಜಲಕ್ಕಾಗಿ ಹೋರಾಟ ಮಾಡಿದ ಡಾ. ರಾಜಕುಮಾರ್‌ ಅವರನ್ನು ಬಿಟ್ಟರೆ ನಮ್ಮ ನಾರಾಯಣಗೌಡರೇ ಅಂತಹ ಸ್ಥಾನ ಪಡೆದಿದ್ದಾರೆ. ಇನ್ನು ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ತಾವು ಮಾಡಿದ ಒಳ್ಳೆ ಕೆಲಸಗಳನ್ನು ಮುಂದುವರಿಸಲು ನಾರಾಯಣಗೌಡರ ರೂಪದಲ್ಲಿ ಕೆಂಪೇಗೌಡರೇ ಬಂದಿದ್ದಾರೆ. ನಾಡು, ನುಡಿ, ಜಲದ ರಕ್ಷಣೆಗೆ ನಾರಾಯಣ ಗೌಡರು ಕಟಿಬದ್ಧರಾಗಿದ್ದು, ಅವರಿಗೆ ಎಲ್ಲ ದೈವಗಳ ಆಶೀರ್ವಾದ ಇರುತ್ತದೆ ತಿಳಿಸಿದರು.

ಕಸಾಪ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹುಕ್ಕೇರಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ವಿದ್ವಾಂಸರಾದ ಪಂಪ ನಾಗರಾಜಯ್ಯ, ನ್ಯಾಯಮೂರ್ತಿ ಅರಳಿ ನಾಗರಾಜ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಟಿ.ಎ. ನಾರಾಯಣ ಗೌಡರು ಸ್ವೀಕರಿಸಿದ ಮೊಟ್ಟ ಮೊದಲ ಪ್ರಶಸ್ತಿ

ಕನ್ನಡಕ್ಕೆ ಸದಾ ಮಿಡಿವ ಚೈತನ್ಯದ ಚಿಲುಮೆ, ನಾಡಿನ ಅಪರೂಪದ ಕನ್ನಡ ಸೇನಾನಿ, ಕನ್ನಡ ನೆಲ, ಜಲ, ಕನ್ನಡಿಗರ ನೆಮ್ಮದಿಯ ಬದುಕಿಗಾಗಿ ಕಳೆದ 35 ವರ್ಷಗಳಿಂದ ಹೋರಾಟ ನಡೆಸುತ್ತಿರುವ ಟಿ.ಎ. ನಾರಾಯಣ ಗೌಡರು ಇದುವರೆಗೂ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಯಾವುದೇ ಪುರಸ್ಕಾರವನ್ನೂ ಸ್ವೀಕರಿಸಿಲ್ಲ. ಆದರೆ, ಕನ್ನಡ ಸಾಹಿತ್ಯ ಪರಿಷತ್ತಿನ ಮೇಲಿನ ಅಭಿಮಾನ ಮತ್ತು ಕುವೆಂಪು ಅವರ ಸಾಹಿತ್ಯ, ವರನಟ ರಾಜಕುಮಾರ್ ಅವರ ಸಿನಿಮಾಗಳ ಪ್ರೇರಣೆಯಿಂದ ಹೋರಾಟಕ್ಕೆ ಬಂದ ಹಿನ್ನೆಲೆ ತಮ್ಮ ಜೀವನದ ಮೊಟ್ಟ ಮೊದಲ ಪ್ರಶಸ್ತಿಯಾಗಿ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

Continue Reading

ಕ ಸಾ ಪ

ಡಿ. 26ರಂದು ಟಿ.ಎ. ನಾರಾಯಣ ಗೌಡರಿಗೆ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼ ಪ್ರದಾನ

ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಡಿ.26 ರಂದು ಸಂಜೆ 5.30ಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡ ಅವರಿಗೆ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

VISTARANEWS.COM


on

TA Narayana Gowda
Koo

ಬೆಂಗಳೂರು: ನಾಡಿನ ಅಪರೂಪದ ಕನ್ನಡ ಸೇನಾನಿ, ಕನ್ನಡಕ್ಕೆ ಸದಾ ಮಿಡಿವ ಚೈತನ್ಯದ ಚಿಲುಮೆ, ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡ (TA Narayana Gowda) ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼಗೆ ಆಯ್ಕೆಯಾಗಿದ್ದಾರೆ. ಇವರಿಗೆ ಡಿಸೆಂಬರ್ 26 ರಂದು ಸಂಜೆ 5.30ಕ್ಕೆ ನಗರದ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ‘ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ’ದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಕನ್ನಡ ನೆಲ, ಜಲ, ಕನ್ನಡಿಗರ ನೆಮ್ಮದಿಯ ಬದುಕಿಗಾಗಿ ಕಳೆದ 35 ವರ್ಷಗಳಿಂದ ಹೋರಾಟ ನಡೆಸುತ್ತಿರುವ ಟಿ.ಎ. ನಾರಾಯಣ ಗೌಡರು ಇದುವರೆಗೂ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಯಾವುದೇ ಪುರಸ್ಕಾರವನ್ನೂ ಸ್ವೀಕರಿಸಿಲ್ಲ. ಆದರೆ, ಕನ್ನಡ ಸಾಹಿತ್ಯ ಪರಿಷತ್ತಿನ ಮೇಲಿನ ಅಭಿಮಾನ ಮತ್ತು ಕುವೆಂಪು ಅವರ ಸಾಹಿತ್ಯ, ವರನಟ ರಾಜಕುಮಾರ್ ಅವರ ಸಿನಿಮಾಗಳ ಪ್ರೇರಣೆಯಿಂದ ಹೋರಾಟಕ್ಕೆ ಬಂದ ಹಿನ್ನೆಲೆಯಿಂದ ತಮ್ಮ ಜೀವನದ ಮೊಟ್ಟ ಮೊದಲ ಪ್ರಶಸ್ತಿಯಾಗಿ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಯನ್ನು ಸ್ವೀಕರಿಸುತ್ತಿದ್ದಾರೆ.

ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿಯವರು ವಹಿಸಲಿದ್ದು, ಡಾ.ಹಂಪನಾಗರಾಜಯ್ಯನವರು ಉದ್ಘಾಟಿಸಲಿದ್ದಾರೆ. ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ನ್ಯಾಯಮೂರ್ತಿ ಅರಳಿ ನಾಗರಾಜ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡರು ಅಭಿನಂದನಾ ನುಡಿಗಳನ್ನು ಆಡಲಿದ್ದಾರೆ. ಕೋಡಿ ಮಠದ ಶ್ರೀಗಳಾದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿ ಮತ್ತು ಹುಕ್ಕೇರಿಯ ಶ್ರೀ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಕರ್ನಾಟಕ ಜನಪದ ಸೇವಾಟ್ರಸ್ಟ್‌ ಸಹಕಾರದೊಂದಿಗೆ ಈ ಕಾರ್ಯಕ್ರಮವನ್ನು ಕಸಾಪ ಹಮ್ಮಿಕೊಂಡಿದೆ.

ಇದನ್ನೂ ಓದಿ | Raja Marga Column : ಸಾವಿರದ ಹಾಡುಗಳ ಅಮರ ಕವಿ ಶೈಲೇಂದ್ರ; ಎಲ್ಲ 900 ಹಾಡು ಸೂಪರ್‌ಹಿಟ್

ಕಾರ್ಯಕ್ರಮಕ್ಕೂ ಮುನ್ನಾ ಸಂಜೆ 4:30ಕ್ಕೆ ಖ್ಯಾತ ಗಾಯಕರಾದ ಡಾ.ಶಮಿತಾ ಮಲ್ನಾಡ್ ಮತ್ತು ಆನಂದ ಮಾದಲಗೆರೆಯವರ ತಂಡದಿಂದ ಗೀತ ಗಾಯನ ಕಾರ್ಯಕ್ರಮವಿದ್ದು, ದಿವ್ಯಾ ಆಲೂರು ಜೊತೆಯಲ್ಲಿ ಟಿ. ತಿಮ್ಮೇಶ್ ಈ ಕಾರ್ಯಕ್ರಮದ ನಿರೂಪಣೆಯನ್ನು ಮಾಡಲಿದ್ದಾರೆ. ಕಸಾಪ ಗೌರವ ಕಾರ್ಯದರ್ಶಿಗಳಾದ ನೇ ಭ ರಾಮಲಿಂಗಶೆಟ್ಟಿ ಮತ್ತು ಡಾ ಪದ್ಮಿನಿ ನಾಗರಾಜು ಹಾಗೂ ಕೋಶಾಧ್ಯಕ್ಷರಾದ ಬಿ. ಎಂ. ಪಟೇಲ್ ಪಾಂಡು ಮತ್ತಿತರರು ಉಪಸ್ಥಿತರಿರಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ ಸಾ ಪ

HD Deve Gowda: ಎಚ್.ಡಿ. ದೇವೇಗೌಡರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ

HD Deve Gowda: ಬೆಂಗಳೂರಿನ ನಿವಾಸದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರಿಗೆ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

VISTARANEWS.COM


on

Ex PM HD Devegowda
Koo

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ (HD Deve Gowda) ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಬಹುಮುಖ್ಯ ದತ್ತಿ ಪ್ರಶಸ್ತಿಯಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಯನ್ನು ಸೋಮವಾರ ಪ್ರದಾನ ಮಾಡಲಾಯಿತು. ಮಾಜಿ ಪ್ರಧಾನಿಗಳ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ ಹಾಗೂ ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಈ ವೇಳೆ ಮಾತನಾಡಿದ ನ್ಯಾ. ಎಂ.ಎನ್. ವೆಂಕಟಾಚಲಯ್ಯ ಅವರು, ನಾಡಿನ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ ಮೈಸೂರು ಸಂಸ್ಥಾನದ ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನ ಪ್ರಶಸ್ತಿ ದೇಶದ ಮೊದಲ ಕನ್ನಡಿಗ ಪ್ರಧಾನಮಂತ್ರಿ, ರಾಜಕೀಯ ಮುತ್ಸದ್ಧಿ ಮತ್ತು ದೂರದೃಷ್ಟಿಯ ಆಡಳಿತಗಾರ ದೇವೇಗೌಡರಿಗೆ ಸಂದಿರುವುದು ನನಗೆ ಬಹಳ ಸಂತಸ ಉಂಟು ಮಾಡಿದೆ. ಅತ್ಯುನ್ನತ ಸಾಧಕರಿಗೆ ಪ್ರಶಸ್ತಿ ಸಂದಿದೆ ಎಂದು ಹೇಳಿದರು.

ನಾಡೋಜ ಮಹೇಶ್ ಜೋಶಿ ಅವರು ಮಾತನಾಡಿ, ರಾಜ್ಯ, ದೇಶಕ್ಕೆ ಮಹಾನ್ ಕೊಡುಗೆ ನೀಡಿದ ದೇವೇಗೌಡರಿಗೆ ನಾಲ್ವಡಿ ಪ್ರಶಸ್ತಿ ನೀಡುತ್ತಿರುವುದು ಆ ಪ್ರಶಸ್ತಿಯ ಗೌರವವನ್ನು ಮತ್ತಷ್ಟು ಹೆಚ್ಚಿಸಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಅಭಿವೃದ್ಧಿಯ ಹರಿಕಾರರಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅಜರಾಮರರಾದರೆ, ದೇವೇಗೌಡರು ಸ್ವಾತಂತ್ರೋತ್ತರ ಭಾರತದಲ್ಲಿ ಆರು ದಶಕಗಳ ತಮ್ಮ ಸುದೀರ್ಘ ರಾಜಕೀಯ ಬದುಕಿನಲ್ಲಿ ನಾಡು, ದೇಶದ ಅಭಿವೃದ್ಧಿಗೆ ಆವಿಸ್ಮರಣೀಯ ಕೊಡುಗೆ ನೀಡಿದ್ದಾರೆ ಎಂದರು.

ಮಾಜಿ ಪ್ರಧಾನಿ ಸಂತಸ

ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಯನ್ನು ಸಂತೋಷದಿಂದ ಸ್ವೀಕಾರ ಮಾಡಿದ್ದೇನೆ. ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಬೇಕಿತ್ತು. ಅನಾರೋಗ್ಯದ ಕಾರಣಕ್ಕೆ ವೈದ್ಯರ ಸಲಹೆಯ ಮೇರೆಗೆ ನಾನು ಆ ಕಾರ್ಯಕ್ರಮಕ್ಕೆ ಹಾಜರಾಗುವುದು ಕಷ್ಟ ಸಾಧ್ಯವಿತ್ತು. ಹೀಗಾಗಿ ನ್ಯಾ. ಎಂ.ಎನ್. ವೆಂಕಟಾಚಲಯ್ಯ, ನಾಡೋಜ ಮಹೇಶ್ ಜೋಶಿ ಅವರು ನನ್ನ ಮನೆಗೇ ಬಂದು ಪ್ರಶಸ್ತಿ ನೀಡಿದ್ದಾರೆ. ಇವರಿಬ್ಬರಿಗೂ ನಾನು ಕೃತಜ್ಞನಾಗಿದ್ದೇನೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು.

ಇದನ್ನೂ ಓದಿ | CM Siddaramaiah : ಪ್ರಧಾನಿ ರಾಜಕೀಯ ಭಾಷಣ ಸುಳ್ಳಿನ ಕಂತೆ; ಇಂದು ದೇಶವೇ ದಿವಾಳಿಯಾಗಿದೆ ಎಂದ ಸಿದ್ದರಾಮಯ್ಯ

ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ವಿವಿಧ ಪದಾಧಿಕಾರಿಗಳು, ಕನ್ನಡದ ಕಟ್ಟಾಳುಗಳು ಹಾಜರಿದ್ದು, ಮಾಜಿ ಪ್ರಧಾನಿಗಳಿಗೆ ಶುಭ ಕೋರಿದರು.

Continue Reading

ಕ ಸಾ ಪ

ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ನಾ. ಡಿಸೋಜ ಹಾಗೂ ದು. ಸರಸ್ವತಿ ಆಯ್ಕೆ

Kannada sahitya parishat: ಸಂಚಲನ ಬಳಗದವರು ಆಶಯದಂತೆ ಒಬ್ಬ ಕನ್ನಡ ಕ್ರೈಸ್ತ ಸಾಧಕರಿಗೆ ಹಾಗೂ ಇನ್ನೊಬ್ಬರು ಕನ್ನಡ ಪರ ಹೋರಾಟಗಾರಿಗೆ ಫಾದರ್‌ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

VISTARANEWS.COM


on

By

DSouza and Du Saraswati
ಸಾಮಾಜಿಕ ಹೋರಾಟಗಾರ್ತಿ ದು. ಸರಸ್ವತಿ ಮತ್ತು ಹಿರಿಯ ಸಾಹಿತಿ ನಾ. ಡಿಸೋಜ
Koo

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು‌ (Kannada Sahitya Parishat) 2023ನೇ ಸಾಲಿನ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ ಹಿರಿಯ ಸಾಹಿತಿ ನಾ. ಡಿಸೋಜ ಹಾಗೂ ಸಾಮಾಜಿಕ ಹೋರಾಟಗಾರ್ತಿ ದು. ಸರಸ್ವತಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ (Dr. Nadoja Mahesh Joshi) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಬಾರಿ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ, ಪರಿಷತ್ತಿನ ಪಂಪ ಸಭಾಭವನದಲ್ಲಿ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ನೇತೃತ್ವದಲ್ಲಿ ಆಯ್ಕೆ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ದತ್ತಿ ದಾನಿಗಳ ಆಶಯದಂತೆ ಪ್ರತಿ ವರ್ಷ ಇಬ್ಬರು ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಒಬ್ಬರು ಕನ್ನಡ ಕ್ರೈಸ್ತ ಸಾಧಕರಿಗೆ ಮತ್ತು ಇನ್ನೊಬ್ಬರು ಕನ್ನಡ ಜನಪರ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದವರನ್ನು ಆಯ್ಕೆ ಮಾಡಲಾಗುತ್ತದೆ.

ಅದರಂತೆ ಈ ಬಾರಿಯ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ ಹಿರಿಯ ಕಥೆಗಾರ, ಸಾಹಿತಿಗಳಾಗಿರುವ ಕ್ರೈಸ್ತ ಧರ್ಮಕ್ಕೆ ಸೇರಿದ ಶಿವಮೊಗ್ಗದ ಸಾಗರದ ನಾ. ಡಿಸೋಜ ಹಾಗೂ ಕನ್ನಡ ಪರ ಹೋರಾಟಗಾರ್ತಿ, ರಂಗಕರ್ಮಿ ಬೆಂಗಳೂರಿನ ದು. ಸರಸ್ವತಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ ಹತ್ತು ಸಾವಿರ ರೂ.ನಗದು, ಫಲ ತಾಂಬೂಲ ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

ಈ ಸಂಬಂಧ ಮಾತನಾಡಿರುವ ಅವರು ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಯನ್ನು ಸಂಚಲನ ಬಳಗದವರು 2017ರಲ್ಲಿ ಈ ದತ್ತಿ ನಿಧಿ ಸ್ಥಾಪಿಸಿದ್ದರು. ಇದುವರೆಗೆ 12 ಜನರಿಗೆ ಕನ್ನಡ ಸಾಹಿತ್ಯ ಪರಿಷತ್ತು ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರದಾನ ಮಾಡಲಾಗಿದೆ. ಪ್ರಸ್ತುತ ದತ್ತಿ ಪ್ರಶಸ್ತಿಯನ್ನು ದತ್ತಿ ದಾನಿಗಳು ಆಶಯದಂತೆ ಒಬ್ಬ ಕನ್ನಡ ಕ್ರೈಸ್ತ ಸಾಧಕರಿಗೆ ಹಾಗೂ ಇನ್ನೊಬ್ಬರು ಕನ್ನಡ ಪರ ಹೋರಾಟಗಾರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

ಇದನ್ನೂ ಓದಿ: ಕನ್ನಡ ಚಳುವಳಿ ವೀರಸೇನಾನಿ ಮ. ರಾಮಮೂರ್ತಿ ದತ್ತಿ ಪ್ರಶಸ್ತಿಗೆ ಜಿ.ಕೆ. ಸತ್ಯ ಆಯ್ಕೆ

ನಿತ್ಯ ಬದುಕಿನಲ್ಲಿ ಕನ್ನಡ ನಾಡು- ನುಡಿಯ ಕುರಿತು ಅಪಾರ ಗೌರವ ಹೊಂದಿರುವ ಹಿರಿಯ ಸಾಧಕರಿಗೆ ಕನ್ನಡ ಸಾಹಿತ್ಯ ಪರಿಷತ್ತು ಅಭಿನಂದಿಸುತ್ತದೆ. ಪ್ರಶಸ್ತಿ ಪುರಸ್ಕಾರ ಪಡೆದ ಇಬ್ಬರೂ ತಮ್ಮ ಕ್ಷೇತ್ರದಲ್ಲಿ ನಿರಂತರ ಸೇವೆ ಮಾಡುತ್ತಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿ ಪುರಸ್ಕೃತರಿಂದ, ಕನ್ನಡ ನಾಡಿನ ನೆಲಮೂಲ ಸಂಸ್ಕೃತಿಯನ್ನು ಉಳಿಸಿ- ಬೆಳೆಸುವಲ್ಲಿ ನಿರಂತರ ಪ್ರಯತ್ನ ಮುಂದುವರಿಯಲಿದೆ ಎಂದು ತಿಳಿಸಿದರು.

ಈ ಆಯ್ಕೆ ಸಮಿತಿಯಲ್ಲಿ ದತ್ತಿ ದಾನಿಗಳಾದ ಸಂಚಲನ ಬಳಗದವರ ಪರವಾಗಿ ರೀಟಾ ರೀನಿ ಹಾಗೂ ರಫಾಯಲ್ ರಾಜ್ ಸೇರಿ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ.ಪಟೇಲ್ ಪಾಂಡು ಅವರು ಉಪಸ್ಥಿತರಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
ಪ್ರಮುಖ ಸುದ್ದಿ1 min ago

SSLC Result 2024: ಎಸ್‌ಎಸ್‌ಎಲ್‌ಸಿ ಸಾಧಕರನ್ನು ಸನ್ಮಾನಿಸಿ, ಪ್ರೋತ್ಸಾಹ ಧನ ಘೋಷಿಸಿದ ಸಿಎಂ, ಡಿಸಿಎಂ

IPL 2024
ಕ್ರಿಕೆಟ್5 mins ago

IPL 2024 : ಲಕ್ನೊ ವಿರುದ್ಧ 19 ರನ್ ವಿಜಯ, ಗೆಲುವಿನೊಂದಿಗೆ ಐಪಿಎಲ್​ ಅಭಿಯಾನ ಮುಗಿಸಿದ ಡೆಲ್ಲಿ

Team India
ಪ್ರಮುಖ ಸುದ್ದಿ57 mins ago

Team India : ದ್ರಾವಿಡ್​ ಬಳಿಕ ಇವರೇ ಆಗ್ತಾರೆ ಭಾರತ ತಂಡದ ಕೋಚ್​​

Victoria Hospital
ಕರ್ನಾಟಕ1 hour ago

Victoria Hospital: ವಿಕ್ಟೋರಿಯಾ ಆಸ್ಪತ್ರೆಯಿಂದ ವಜಾಗೊಂಡಿದ್ದ 55 ಸಿಬ್ಬಂದಿ ಮರು ನೇಮಕ

KL Rahul
ಕ್ರೀಡೆ1 hour ago

KL Rahul : ಗಲಾಟೆ ಚಾಪ್ಟರ್ ಕ್ಲೋಸ್​​; ಕೆ. ಎಲ್​ ರಾಹುಲ್​ ಹಿಡಿದ ಕ್ಯಾಚ್​ಗೆ ಮೆಚ್ಚಿ ಚಪ್ಪಾಳೆ ತಟ್ಟಿದ ಗೋಯೆಂಕಾ

Prajwal Revanna Case
ಕರ್ನಾಟಕ2 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

Bank Loan Fraud
ಪ್ರಮುಖ ಸುದ್ದಿ3 hours ago

Bank Loan Fraud : 34,000 ಕೋಟಿ ರೂ. ಬ್ಯಾಂಕ್​​ ವಂಚನೆ, ಡಿಎಚ್​​ಎಫ್ಎಲ್​​​ ಮಾಜಿ ನಿರ್ದೇಶಕನ ಬಂಧನ

Shri Raghaveshwar Bharati Swamiji spoke in Bhava Ramayana Ramavataran Certificate Course and Short Term Courses Class
ಉತ್ತರ ಕನ್ನಡ3 hours ago

Uttara Kannada News: ಬದುಕಿನ ಪುರುಷಾರ್ಥಗಳ ಸಾಧನೆಗೆ ರಾಮಾಯಣ ಸಾಧನ; ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ

Swati Maliwal
ಪ್ರಮುಖ ಸುದ್ದಿ3 hours ago

Swati Maliwal : ಸ್ವಾತಿ ಮಾಲಿವಾಲ್​​ ಮೇಲೆ ಕೇಜ್ರಿವಾಲ್ ಸಹಾಯಕನಿಂದ ಹಲ್ಲೆ; ಆಪ್​​ನಿಂದ ತಪ್ಪೊಪ್ಪಿಗೆ

Karnataka weather Man from Siddapura killed in lightning Heavy rain warning for four more days
ಕರ್ನಾಟಕ3 hours ago

Karnataka weather: ಸಿಡಿಲಿಗೆ ಸಿದ್ದಾಪುರದ ವ್ಯಕ್ತಿ ಬಲಿ; ಇನ್ನೂ ನಾಲ್ಕು ದಿನ ಇದೆ ಭಾರಿ ಮಳೆ ಎಚ್ಚರಿಕೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ2 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

HD Revanna Released first reaction after release will be acquitted of all charges
ರಾಜಕೀಯ5 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20247 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202410 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ11 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು12 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ19 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ1 day ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ1 day ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

ಟ್ರೆಂಡಿಂಗ್‌