Karnataka Election 2023: ಪ್ರಧಾನಿ ಮೋದಿ ಭಾಷಣದಲ್ಲಿ 'ಜೈ ಬಜರಂಗಬಲಿ' ಸಂಚಲನ! - Vistara News

ಕರ್ನಾಟಕ

Karnataka Election 2023: ಪ್ರಧಾನಿ ಮೋದಿ ಭಾಷಣದಲ್ಲಿ ‘ಜೈ ಬಜರಂಗಬಲಿ’ ಸಂಚಲನ!

Karnataka Election 2023: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿ, ಬಿಜೆಪಿಗೆ ಮತ ನೀಡುವಂತೆ ಕೇಳಿಕೊಂಡರು.

VISTARANEWS.COM


on

Jai Bajrangbali Slogan mesmerized in Prime Minister Modi's election speech
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೂಡಬಿದಿರೆ, ದಕ್ಷಿಣ ಕನ್ನಡ: ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಮಾಡುವ ಭರವಸೆಯನ್ನು ಕಾಂಗ್ರೆಸ್ ನೀಡಿದ್ದು, ಬಿಜೆಪಿಗೆ ಚುನಾವಣೆಯಲ್ಲಿ ಅತಿದೊಡ್ಡ ಅಸ್ತ್ರ ನೀಡಿದಂತಾಗಿದೆ. ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರು, ಈ ವಿಷಯವನ್ನು ತಮ್ಮ ಚುನಾವಣಾ ಪ್ರಚಾರ ಸಭೆಗಳಲ್ಲಿ ಪರಿಣಾಮಕಾರಿಯಾಗಿ ಬಳಸಿಕೊಳ್ಳುತ್ತಿದ್ದಾರೆ. ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ ಆಯೋಜಿಸಲಾಗಿದ್ದ ಪ್ರಚಾರ ಸಭೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು, ಜೈ ಬಜರಂಗಬಲಿ ಎಂದು ಘೋಷಣೆ ಮೊಳಗಿಸುವ ಮೂಲಕವೇ ಆರಂಭಿಸಿದರು. ಅಲ್ಲದೇ ತಮ್ಮ ಮಾತನ್ನೂ ಅವರು ಜೈ ಬಜರಂಗಬಲಿ ಎಂದು ಘೋಷಣೆ ಕೂಗುವ ಮೂಲಕವೇ ಪೂರ್ತಿ ಮಾಡಿದರು. ತುಳುವಿನಲ್ಲೂ ಅವರು ಮಾತನಾಡಿ, ಅವಳಿ ಜಿಲ್ಲೆಯ ಸಾಧು, ಸಂತರ ಹೆಸರನ್ನು ಸ್ಮರಿಸುವ ಮೂಲಕ ಜನರ ಮೆಚ್ಚುಗೆ ಕಾರಣವಾದರು(Karnataka Election 2023).

ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಹೊಸ ಮತದಾರರು ಇದ್ದಾರೆ. 18 ವರ್ಷದ ಪೂರೈಸಿದ ಈ ಯುವಕರು ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. ಅವರು ನಮ್ಮ ದೇಶದ ಭವಿಷ್ಯ ಜತೆಗೆ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕಿದೆ. ಹಾಗಾಗಿ, ಹೊಸ ಮತದಾರರು ಕಾಂಗ್ರೆಸ್‌ಗೆ ವೋಟ್ ಮಾಡಿದರೆ, ಭವಿಷ್ಯವೇ ಹೊರಟು ಹೋಗಲಿದೆ. ನಿಮ್ಮ ಭವಿಷ್ಯ ಮತ್ತು ದೇಶದ ಭವಿಷ್ಯ ಉಜ್ವಲವಾಗಬೇಕಾದರೆ ಬಿಜೆಪಿಗೆ ಮತ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ ಪ್ರಧಾನಿ ಮೋದಿ ಭಾಷಣ

ಕಾಂಗ್ರೆಸ್‌ಗೆ ಶಾಂತಿ, ಸಮೃದ್ಧಿಯೇ ಬೇಕಾಗಿಲ್ಲ. ಅದು ಅಶಾಂತಿಯನ್ನು ಹುಟ್ಟು ಹಾಕುತ್ತದೆ. ಉಗ್ರರನ್ನು ಪೋಷಣೆ ಮಾಡುತ್ತದೆ. ತುಷ್ಟಿಕರಣ ನೀತಿಯನ್ನು ಅನುಸರಿಸುತ್ತಿದೆ. ಈ ಹಿಂದೆ ಕಾಂಗ್ರೆಸ್ ಆಡಳಿತದಲ್ಲಿದ್ದಾಗ, ದೇಶಕ್ಕೆ ಆತಂಕವನ್ನು ಉಂಟು ಮಾಡಿದವರ ಪ್ರಕರಣಗಳನ್ನು ವಾಪಸ್ ಪಡೆದುಕೊಂಡಿತು. ಅಷ್ಟೇ ಅಲ್ಲೇ ಅವರನ್ನು ಸುಮ್ಮನೆ ಬಿಟ್ಟು ಬಿಟ್ಟಿತು ಎಂದು ವಾಗ್ದಾಳಿ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ರಾಜಸ್ಥಾನದಲ್ಲಿ ನಡೆದ ಬಾಂಬ್ ಸ್ಫೋಟದ ಆರೋಪಿಗಳಿಗೆ ಶಿಕ್ಷೆ ಕೊಡಿಸುವಲ್ಲಿ ಅಲ್ಲಿನ ಕಾಂಗ್ರೆಸ್ ಸರ್ಕರ ವಿಫಲವಾಗಿರುವ ಉದಾಹರಣೆಯನ್ನು ನೀಡಿದರು.

ಇದನ್ನೂ ಓದಿ: Karnataka Election: ಭ್ರಷ್ಟಾಚಾರ ವಿರುದ್ಧ ಹೋರಾಡುತ್ತಿರುವ ನನಗೆ ಕಾಂಗ್ರೆಸ್ ಧಮ್ಕಿ ಹಾಕುತ್ತಿದೆ; ಪ್ರಧಾನಿ ನರೇಂದ್ರ ಮೋದಿ

ಬಿಜೆಪಿಯು ಕರ್ನಾಟಕವನ್ನು ದೇಶದ ನಂಬರ್ 1 ರಾಜ್ಯವನ್ನಾಗಿ ಮಾಡಲು ಹೊರಟಿದೆ. ಎಲ್ಲ ಕ್ಷೇತ್ರಗಳಲ್ಲಿ ಕರ್ನಾಟಕವನ್ನು ನಂಬರ್ ಒನ್ ಮಾಡುವುದು ಬಿಜೆಪಿಯ ಪ್ರಯತ್ನವಾಗಿದೆ. ಆದರೆ, ಕಾಂಗ್ರೆಸ್ ಏನು ಮಾಡಲು ಹೊರಟಿದೆ ಅಂದರೆ, ದಿಲ್ಲಿಯಲ್ಲಿರುವ ರಾಜ ಕುಟುಂಬಕ್ಕೆ ಕರ್ನಾಟಕವನ್ನು ನಂ.1 ಎಟಿಎಂ ಮಾಡಲು ಹೊರಟಿದೆ. ಎಲ್ಲ ಯೋಜನೆಗಳಲ್ಲಿ ಶೇ.85ರಷ್ಟು ಕಮಿಷನ್ ಕಾಂಗ್ರೆಸ್ ಹೊಡೆಯಲಿದೆ. ಕರ್ನಾಟಕವನ್ನು ಹತ್ತು ವರ್ಷಗಳ ಹಿಂದಕ್ಕೆ ಒಯ್ಯಲಿದೆ. ಹಾಗಾಗಿ, ಕಾಂಗ್ರೆಸ್ ಬಗ್ಗೆ ಕರ್ನಾಟಕದ ಜನರು ಎಚ್ಚರದಿಂದ ಇರಬೇಕು ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Lok Sabha Election 2024: ಮತ ಹಾಕಿಸಿಕೊಳ್ಳಲು ಚುನಾವಣಾಧಿಕಾರಿಗಳು ಮನೆಗೆ ಬಂದಾಗಲೇ 98ರ ವೃದ್ಧೆ ಸಾವು!

Lok Sabha Election 2024: ಪಾರ್ವತಮ್ಮ ಅವರಿಂದ ಮತ ಹಾಕಿಸಿಕೊಳ್ಳಲು ಚುನಾವಣಾ ಅಧಿಕಾರಿಗಳು ಮತಪೆಟ್ಟಿಗೆ ಸಹಿತ ಅವರ ನಿವಾಸಕ್ಕೆ ಧಾವಿಸಿದ್ದರು. ಈ ವೇಳೆ ಅಧಿಕಾರಿಗಳು ಮತ ಚಲಾವಣೆ ಮಾಡಿಸಲು ತಯಾರಿ ನಡೆಸಿಕೊಳ್ಳುತ್ತಿದ್ದರು. ಆದರೆ, ಅಷ್ಟರಲ್ಲಿ ಪಾರ್ವತಮ್ಮ ಅವರು ವಯೋಸಹಜವಾಗಿ ನಿಧನರಾಗಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಮತ ಚಲಾವಣೆ ಮಾಡಬೇಕು ಎಂಬ ಅವರ ಕೊನೇ ಆಸೆ ಕೊನೆಗೂ ಈಡೇರಲೇ ಇಲ್ಲ.

VISTARANEWS.COM


on

Lok Sabha Election 2024 vote for better future and 98 year old woman dies when returning officer arrives at home to cast her vote
Koo

ಕೊಪ್ಪಳ: ಲೋಕಸಭಾ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನಕ್ಕೆ (First phase of polling) ಕರ್ನಾಟಕವು ಸಜ್ಜಾಗಿದೆ. ಮತದಾರರು ಸಹ ತಮ್ಮ ನೆಚ್ಚಿನ ಅಭ್ಯರ್ಥಿ, ಪಕ್ಷವನ್ನು ಆಯ್ಕೆ ಮಾಡಲು ನಿರ್ಧಾರ ಮಾಡಿದ್ದಾರೆ. ಇದೇ ರೀತಿ ಕೊಪ್ಪಳ ಜಿಲ್ಲೆಯಲ್ಲಿ ವೃದ್ಧೆಯೊಬ್ಬರು ಮತದಾನ ಮಾಡಲು ಕಾತರರಾಗಿದ್ದರು. ಈ ಸಂಬಂಧ ಮನೆಯಲ್ಲೇ ಮತದಾನ ಮಾಡಲು ನೋಂದಾಯಿಸಿಕೊಂಡಿದ್ದರು. ವಿಪರ್ಯಾಸವೆಂದರೆ ಚುನಾವಣಾಧಿಕಾರಿಗಳು ಮತ ಹಾಕಿಸಿಕೊಳ್ಳಲು ಮನೆಗೆ ಬಂದಾಗಲೇ ಅವರು ಅಸುನೀಗಿದ್ದಾರೆ.

ಕೊಪ್ಪಳ ತಾಲೂಕಿನ ಹಲಗೇರಿ ಗ್ರಾಮದ ಪಾರ್ವತಮ್ಮ ಸಜ್ಜನ (98) ಮೃತ ವೃದ್ಧೆಯಾಗಿದ್ದಾರೆ. ಇವರು ಪ್ರತಿ ಚುನಾವಣೆಗೂ ತಪ್ಪದೇ ಮತ ಚಲಾವಣೆ ಮಾಡುತ್ತಿದ್ದರು. ಈ ಬಾರಿಯೂ ಮತ ಚಲಾಯಿಸಬೇಕು ಎಂದು ಉತ್ಸಾಹವನ್ನು ತೋರಿದ್ದರು. ಇದಕ್ಕಾಗಿಯೇ ಅವರು ಮನೆಯಲ್ಲಿ ಮತದಾನ ಮಾಡಲು ನೋಂದಾಯಿಸಿಕೊಂಡಿದ್ದರು.

Lok Sabha Election 2024 98 year old woman dies when returning officer arrives at home to cast her vote

ಪಾರ್ವತಮ್ಮ ಅವರಿಂದ ಮತ ಹಾಕಿಸಿಕೊಳ್ಳಲು ಚುನಾವಣಾ ಅಧಿಕಾರಿಗಳು ಮತಪೆಟ್ಟಿಗೆ ಸಹಿತ ಅವರ ನಿವಾಸಕ್ಕೆ ಧಾವಿಸಿದ್ದರು. ಈ ವೇಳೆ ಅಧಿಕಾರಿಗಳು ಮತ ಚಲಾವಣೆ ಮಾಡಿಸಲು ತಯಾರಿ ನಡೆಸಿಕೊಳ್ಳುತ್ತಿದ್ದರು. ಆದರೆ, ಅಷ್ಟರಲ್ಲಿ ಪಾರ್ವತಮ್ಮ ಅವರು ವಯೋಸಹಜವಾಗಿ ನಿಧನರಾಗಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಮತ ಚಲಾವಣೆ ಮಾಡಬೇಕು ಎಂಬ ಅವರ ಕೊನೇ ಆಸೆ ಕೊನೆಗೂ ಈಡೇರಲೇ ಇಲ್ಲ.

ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

ವಿದ್ಯುನ್ಮಾನ ಮತಯಂತ್ರಗಳ (EVM- ಇವಿಎಂ) ಕುರಿತು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಕಾನೂನು ಹೋರಾಟದ ನಡುವೆಯೇ ಲೋಕಸಭೆ ಚುನಾವಣೆ (Lok Sabha Election 2024) ಮೊದಲ ಹಂತದ ಮತದಾನ (1st phase Voting) ನಡೆಯುತ್ತಿದೆ. ಇವಿಎಂಗಳಲ್ಲಿ ಚಲಾವಣೆಯಾದ 100% ಮತಗಳನ್ನೂ ವಿವಿಪ್ಯಾಟ್ (VVPAT) ವ್ಯವಸ್ಥೆಯ ಮೂಲಕ ಪರಿಶೀಲಿಸುವ ವ್ಯವಸ್ಥೆ ಜಾರಿ ಮಾಡಬೇಕು (VVPAT Verification) ಎಂದು ಅರ್ಜಿದಾರರು ಕೋರಿದ್ದಾರೆ. ಈ ಸಂದರ್ಭದಲ್ಲಿ, ಇವಿಎಂ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ, ವಿವಿಪ್ಯಾಟ್‌ ಮೂಲಕ ಅದರ ಪರಿಶೀಲನೆ ಹೇಗೆ, ಎಂಬುದನ್ನು ವಿವರವಾಗಿ ತಿಳಿಯೋಣ.

ಕೋರ್ಟ್‌ನಲ್ಲಿ ನಡೆಸದ ವಾದವಿವಾದಗಳ ಸಮಯದಲ್ಲಿ, ಬ್ಯಾಲೆಟ್ ವೋಟಿಂಗ್ ಸಿಸ್ಟಮ್‌ಗೆ ಹಿಂತಿರುಗಲು ಸಲಹೆಗಳು ಬಂದಿವೆ. ಅರ್ಜಿದಾರರು ಯುರೋಪಿಯನ್ ರಾಷ್ಟ್ರಗಳ ಉದಾಹರಣೆ ತೋರಿಸಿದ್ದಾರೆ. ಆದರೆ, “ಪಶ್ಚಿಮ ಬಂಗಾಳದ ಜನಸಂಖ್ಯೆಯೇ ಜರ್ಮನಿಗಿಂತ ಹೆಚ್ಚಿರುವುದನ್ನು ಗಮನಿಸಿ. ಇಂತಹ ಹೋಲಿಕೆಗಳನ್ನು ಮಾಡಬೇಡಿ” ಎಂದು ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ. ನಿನ್ನೆ, ಭಾರತೀಯ ಚುನಾವಣಾ ಆಯೋಗದ ವಕೀಲರು ಇವಿಎಂ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ರೀತಿಯ ಟ್ಯಾಂಪರಿಂಗ್ ವಿರುದ್ಧ ಹೇಗೆ ದೋಷರಹಿತವಾಗಿದೆ ಎಂಬುದನ್ನು ವಿವರಿಸಿದರು.

ಇವಿಎಂ ಕೆಲಸ ಮಾಡುವುದು ಹೇಗೆ?

EVM ಎರಡು ಘಟಕಗಳನ್ನು ಹೊಂದಿದೆ- ನಿಯಂತ್ರಣ ಘಟಕ ಮತ್ತು ಮತದಾನ ಘಟಕ. ಇವುಗಳನ್ನು ಕೇಬಲ್ ಮೂಲಕ ಸಂಪರ್ಕಿಸಲಾಗಿದೆ. ಇವಿಎಂ ನಿಯಂತ್ರಣ ಘಟಕವು ಪೋಲಿಂಗ್ ಆಫೀಸರ್‌ ಬಳಿ ಇರುತ್ತದೆ. ಮತಯಂತ್ರ ಸಾಮಾನ್ಯವಾಗಿ ಮತದಾರನ ಖಾಸಗಿತನಕ್ಕಾಗಿ ಮುಚ್ಚಿದ ಆವರಣದೊಳಗೆ ಇರುತ್ತದೆ.

ಮತಗಟ್ಟೆಯಲ್ಲಿ, ಮತಗಟ್ಟೆ ಅಧಿಕಾರಿಯು ನಿಮ್ಮ ಗುರುತನ್ನು ಪರಿಶೀಲಿಸುತ್ತಾರೆ. ನಂತರ ನೀವು ಮತ ​​ಚಲಾಯಿಸಲು ಅನುವು ಮಾಡಿಕೊಡುವ ಬ್ಯಾಲೆಟ್ ಬಟನ್ ಅನ್ನು ಒತ್ತುತ್ತಾರೆ. ಬ್ಯಾಲೆಟ್ ಯೂನಿಟ್‌ನಲ್ಲಿ ಅಭ್ಯರ್ಥಿಗಳ ಹೆಸರುಗಳು ಮತ್ತು ಚಿಹ್ನೆಗಳು ಅವುಗಳ ಪಕ್ಕದಲ್ಲಿ ನೀಲಿ ಬಟನ್‌ಗಳಿರುತ್ತವೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತಬೇಕು.

ಮತದಾನ ಪ್ರಕ್ರಿಯೆ

ಮತಗಟ್ಟೆ ಅಧಿಕಾರಿಯ ನಿಯಂತ್ರಣ ಘಟಕವು ಬಹು ಬಟನ್‌ಗಳನ್ನು ಹೊಂದಿದೆ. ಅವುಗಳಲ್ಲಿ ಒಂದು ʼballot’ ಎಂಬ ಶೀರ್ಷಿಕೆಯಿದು. ಒಮ್ಮೆ ಅಧಿಕಾರಿಯು ಈ ಗುಂಡಿಯನ್ನು ಒತ್ತಿದರೆ, ʼಬ್ಯುಸಿ’ ಎಂಬ ಶೀರ್ಷಿಕೆಯ ಕೆಂಪು ದೀಪವು ಬೆಳಗುತ್ತದೆ. ಒಂದು ಮತವನ್ನು ದಾಖಲಿಸಲು ನಿಯಂತ್ರಣ ಘಟಕ ಸಿದ್ಧವಾಗಿದೆ ಎಂದು ಇದು ಸೂಚಿಸುತ್ತದೆ. ಮತದಾರ ಇರುವ ಬ್ಯಾಲೆಟ್ ಯೂನಿಟ್‌ನಲ್ಲಿ ಹಸಿರು ದೀಪ ಆನ್ ಆಗಿದ್ದು, ಮತದಾನಕ್ಕೆ ಯಂತ್ರ ಸಿದ್ಧವಾಗಿದೆ ಎಂದು ಸಂಕೇತಿಸುತ್ತದೆ. ನಂತರ ಮತದಾರನು ತನ್ನ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತುತ್ತಾನೆ. ಬ್ಯಾಲೆಟ್ ಯೂನಿಟ್ ದೃಷ್ಟಿಹೀನ ಮತದಾರರಿಗೆ ಬ್ರೈಲ್ ಲಿಪಿಯನ್ನು ಸಹ ಹೊಂದಿದೆ.

ಮತದಾರರು ಮತದಾನ ಮಾಡಿದ ನಂತರ, ನಿಯಂತ್ರಣ ಘಟಕವು ಬೀಪ್ ಧ್ವನಿಯನ್ನು ಹೊರಸೂಸುತ್ತದೆ. ಇದು ಮತದಾನ ಪೂರ್ಣಗೊಂಡಿದೆ ಎಂದು ಸೂಚಿಸುತ್ತದೆ. ನಿಯಂತ್ರಣ ಘಟಕವು ಎಲ್‌ಇಡಿ ಪರದೆ ಮತ್ತು ಬಟನ್‌ಗಳನ್ನು ಹೊಂದಿದ್ದು, ಅದರಲ್ಲಿ ದಾಖಲಾಗಿರುವ ಒಟ್ಟು ಮತಗಳ ಸಂಖ್ಯೆಯನ್ನು ನೋಡಲು ಬಳಸಬಹುದು. ಎಲ್ಲಾ ಮತಗಳು ದಾಖಲಾದ ನಂತರ, ಮತಗಟ್ಟೆ ಅಧಿಕಾರಿಯು ನಿಯಂತ್ರಣ ಘಟಕದ ಬದಿಯಲ್ಲಿರುವ ಗುಂಡಿಯನ್ನು ಒತ್ತಿ, ಯಂತ್ರವನ್ನು ಮುಚ್ಚುತ್ತಾರೆ. ಎಣಿಕೆಯ ದಿನದಂದು, ಪ್ರತಿ ಅಭ್ಯರ್ಥಿ ಪಡೆದ ಒಟ್ಟು ಮತಗಳನ್ನು ನೋಡಲು ʼresult’ ಶೀರ್ಷಿಕೆಯ ಬಟನ್ ಅನ್ನು ಬಳಸಲಾಗುತ್ತದೆ. ನಿಯಂತ್ರಣ ಘಟಕದಿಂದ ಎಲ್ಲಾ ಡೇಟಾವನ್ನು ಅಳಿಸಲು ಬಳಸಬಹುದಾದ ʼclear’ ಬಟನ್ ಕೂಡ ಇದೆ.

VVPAT ಎಂದರೇನು?

VVPAT ಎಂದರೆ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್. ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಮತ್ತು ಮತದಾರ ಚಲಾಯಿಸಿದ ಅಭ್ಯರ್ಥಿಗೇ ಆ ಮತ ಹೋಗಿದೆಯೇ ಎಂದು ನೋಡಲು ಅವಕಾಶವಿರುವ ಯಂತ್ರ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒಮ್ಮೆ ಒತ್ತಿದರೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‌ಗೆ ಸಂಪರ್ಕಗೊಂಡಿರುವ VVPAT, ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುವ ಕಾಗದದ ಸ್ಲಿಪ್ ಅನ್ನು ಉತ್ಪಾದಿಸುತ್ತದೆ. ಅದರ ನಂತರ, ಪೇಪರ್ ಸ್ಲಿಪ್ VVPAT ಯಂತ್ರದಲ್ಲಿರುವ ಡ್ರಾಪ್ ಬಾಕ್ಸ್‌ಗೆ ಬೀಳುತ್ತದೆ.

ಪ್ರಸ್ತುತ, ಪ್ರತಿ ಅಸೆಂಬ್ಲಿ ವಿಭಾಗದಲ್ಲಿಯೂ 5 ವಿವಿಪ್ಯಾಟ್ ಯಂತ್ರಗಳಲ್ಲಿ ದಾಖಲಾದ ಮತಗಳನ್ನು ಇವಿಎಂಗಳೊಂದಿಗೆ ಕ್ರಾಸ್-ಚೆಕ್ ಮಾಡಲಾಗುತ್ತದೆ. 100 ಶೇಕಡ ಇವಿಎಂಗಳಲ್ಲಿ ದಾಖಲಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಕ್ರಾಸ್ ಚೆಕ್ ಮಾಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಬಯಸಿವೆ. ವಿವಿಪ್ಯಾಟ್‌ನಲ್ಲಿ ಏಳು ಸೆಕೆಂಡ್ ಲೈಟ್ ಆನ್ ಆಗಿದ್ದು, ಮತದಾರರು ತಮ್ಮ ಮತವನ್ನು ಸರಿಯಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಬಹುದು ಎಂದು ಅರ್ಜಿದಾರರು ಕೋರಿದ್ದಾರೆ. ಪೇಪರ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಸಲಹೆಯಾಗಿದೆ. ಚುನಾವಣಾ ಆಯೋಗ ಇದನ್ನು ವಿರೋಧಿಸಿದೆ. ಇದು ಮತದಾನದ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ದುರ್ಬಳಕೆಯಾಗಬಹುದು ಎಂದು ಹೇಳಿದೆ.

ಇದನ್ನೂ ಓದಿ: Gold Rate Today: ಬಂಗಾರದ ಮಾರುಕಟ್ಟೆಯಲ್ಲಿ ದರ ಇಂದು ತುಸು ಇಳಿಕೆ; 24Kಗೆ ಎಷ್ಟಿದೆ ನೋಡಿ

ಸಮಯ ಉಳಿಕೆ

ಚುನಾವಣಾ ಆಯೋಗದ ಪ್ರಕಾರ ಇವಿಎಂ ವ್ಯವಸ್ಥೆ ಫೂಲ್ ಪ್ರೂಫ್ ಆಗಿದೆ. ಇದು ಮತ ಎಣಿಕೆ ಸಮಯವನ್ನು ಉಳಿಸುತ್ತದೆ, ಟ್ಯಾಂಪರ್ ಪ್ರೂಫ್ ಮತ್ತು ಬಳಕೆದಾರ ಸ್ನೇಹಿಯಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಇವಿಎಂಗಳು ಹಗುರವಾಗಿವೆ ಮತ್ತು ಸದೃಢವಾಗಿವೆ- ಮತಗಟ್ಟೆ ಅಧಿಕಾರಿಗಳು ದೂರದ ಕುಗ್ರಾಮಗಳು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು ಟ್ರೆಕ್ಕಿಂಗ್‌ ಮಾಡಬೇಕಾದ ದೇಶದಲ್ಲಿ ಇದು ನಿರ್ಣಾಯಕವಾಗಿದೆ.

ಎಲ್ಲರ ಸಮ್ಮುಖದಲ್ಲಿ ಪರಿಶೀಲನೆ

ಇವಿಎಂಗಳಿಗೆ ವಿದ್ಯುತ್ ಅಗತ್ಯವಿಲ್ಲ ಮತ್ತು ಬ್ಯಾಟರಿ/ಪವರ್ ಪ್ಯಾಕ್‌ ಇದರೊಂದಿಗೆ ಬರುತ್ತದೆ. ಸ್ಥಿರವಾದ ವಿದ್ಯುತ್ ಸರಬರಾಜನ್ನು ಹೊಂದಿರದ ಪ್ರದೇಶಗಳಲ್ಲಿ ಮತದಾನವನ್ನು ಸಕ್ರಿಯಗೊಳಿಸಲು ಇದು ಮತ್ತೊಂದು ನಿರ್ಣಾಯಕ ವೈಶಿಷ್ಟ್ಯ. ಪ್ರತಿ ಚುನಾವಣೆಗೂ ಮುನ್ನ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೊದಲ ಹಂತದ ತಪಾಸಣೆ (ಎಫ್‌ಎಲ್‌ಸಿ) ನಡೆಸಲಾಗುತ್ತದೆ. ಈ ಪರಿಶೀಲನೆಯ ಸಮಯದಲ್ಲಿ, ಇವಿಎಂಗಳಲ್ಲಿನ ಡೇಟಾವನ್ನು ಅಳಿಸಲಾಗುತ್ತದೆ ಮತ್ತು ವಿವಿಧ ಘಟಕಗಳ ಕಾರ್ಯವನ್ನು ಪ್ರದರ್ಶಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಸಲಾಗುತ್ತದೆ.

Continue Reading

ಚಾಮರಾಜನಗರ

Road Accident : ಶಾಸಕ ಎಆರ್ ಕೃಷ್ಣಮೂರ್ತಿ ಕಾರು ಅಪಘಾತ; ಚಲಿಸುತ್ತಿದ್ದಾಗಲೇ ಕಾರ್‌ ಟೈರ್‌ ಸ್ಫೋಟ

Road Accident : ಬುಧವಾರ ತಡರಾತ್ರಿ ಚಾಮರಾಜನಗರದಿಂದ ಮೈಸೂರಿನ ಮನೆಗೆ ಹೋಗುವಾಗ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರ ಕಾರು ಅಪಘಾತವಾಗಿದೆ. ಚಲಿಸುತ್ತಿದ್ದಾಗಲೇ ಕಾರಿನ ಟೈರ್‌ ಸ್ಫೋಟಗೊಂಡು ಕಾರು ಅಪಘಾತಕ್ಕೀಡಾಗಿದೆ. ಇತ್ತ ತುಮಕೂರಿನಲ್ಲಿ ಲಾರಿಯ ಹಿಂಬದಿಗೆ ಬುಲೆರೋ ವಾಹನ ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ.

VISTARANEWS.COM


on

By

Road Accident in Chamarajanagar
Koo

ಚಾಮರಾಜನಗರ/ತುಮಕೂರು: ಪ್ರತ್ಯೇಕ ಕಡೆಗಳಲ್ಲಿ ರಸ್ತೆ ಅಪಘಾತಗಳು (Road Accident) ಸಂಭವಿಸಿವೆ. ಮೈಸೂರಿನ ಹೊರವಲಯದ ನಾಡನಹಳ್ಳಿಯಲ್ಲಿ ಶಾಸಕ ಎಆರ್ ಕೃಷ್ಣಮೂರ್ತಿ (MLA A R Krishnamurthy) ಅವರ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್‌ ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Road Accident

ಕೊಳ್ಳೆಗಾಲದ ಕಾಂಗ್ರೆಸ್ ಶಾಸಕ ಎಆರ್ ಕೃಷ್ಣಮೂರ್ತಿ ಬುಧವಾರ ತಡರಾತ್ರಿ ಚಾಮರಾಜನಗರದಿಂದ ಮೈಸೂರಿನ ಮನೆಗೆ ಹೋಗುವ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದಾಗಲೇ ಕಾರಿನ ಟೈರ್ ಸ್ಫೋಟಗೊಂಡಿದೆ. ಪರಿಣಾಮ ಚಾಲಕನ ನಿಯಂತ್ರಣಕ್ಕೆ ಸಿಗದೇ ಕಾರು ರಸ್ತೆ ಬಿಟ್ಟು ಪಕ್ಕಕ್ಕೆ ಇಳಿದಿದೆ.

Road Accident in Chamarajnagar

ಇದನ್ನೂ ಓದಿ: IPL 2024: ಸಿಕ್ಸರ್​ನಿಂದ ಗಾಯಗೊಂಡ ಕ್ಯಾಮೆರಮನ್​ಗೆ ವಿಡಿಯೊ ಮೂಲಕ ಕ್ಷಮೆ ಕೇಳಿದ ರಿಷಭ್​ ಪಂತ್​​

ಲಾರಿಯ ಹಿಂಬದಿಗೆ ಬುಲೆರೋ ವಾಹನ ಡಿಕ್ಕಿ, ಇಬ್ಬರು ಸಾವು

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲಾರಿಯ ಹಿಂಬದಿಗೆ ಬುಲೆರೋ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮುಂದೆ ಸಾಗುತ್ತಿದ್ದ ಅಶೋಕ ಲೇಲ್ಯಾಂಡ್ ಲಾರಿಗೆ ಹಿಂಬದಿಯಿಂದ ಬೊಲೆರೋ ವಾಹನ ಡಿಕ್ಕಿಯಾಗಿದೆ. ಪರಿಣಾಮ ಬೊಲೆರೋ ವಾಹನದಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಉಮೇಶ್ ನಾಗಪ್ಪ ಹಾಗೂ ಸಂತೋಷ್ ಸುರೇಶ್ ಮೃತ ದುರ್ದೈವಿ. ಮೃತರು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿಯವರು ಎನ್ನಲಾಗಿದೆ.

Road Accident in Tumkur

ದ್ರಾಕ್ಷಿ ತುಂಬಿಸಿಕೊಂಡು ಬೆಂಗಳೂರು ಕಡೆ ಬರುವಾಗ ಈ ಭೀಕರ ಅಪಘಾತ ಸಂಭವಿಸಿದೆ. ಬೊಲೆರೋ ವಾಹನ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರು ಶಿರಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿನ್ನದ ದರ

Gold Rate Today: ಬಂಗಾರದ ಮಾರುಕಟ್ಟೆಯಲ್ಲಿ ದರ ಇಂದು ತುಸು ಇಳಿಕೆ; 24Kಗೆ ಎಷ್ಟಿದೆ ನೋಡಿ

Gold Rate Today: ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹35 ಹಾಗೂ ₹38 ಇಳಿಕೆಯಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ದರ (Gold Price Today) ಏರುತ್ತಲೇ ಇದ್ದುದು ಕಳೆದ ವಾರದಿಂದ ತುಸು ಇಳಿಕೆ ಕಾಣುತ್ತಿದೆ.

VISTARANEWS.COM


on

gold rate today 34
Koo

ಬೆಂಗಳೂರು: ಚಿನ್ನದ ಬೆಲೆಯಲ್ಲಿ ಗುರುವಾರ ತುಸು ಇಳಿಕೆ ಕಂಡುಬಂದಿದೆ. ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹35 ಹಾಗೂ ₹38 ಇಳಿಕೆಯಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ದರ (Gold Price Today) ಏರುತ್ತಲೇ ಇದ್ದುದು ಕಳೆದ ವಾರದಿಂದ ತುಸು ಇಳಿಕೆ ಕಾಣುತ್ತಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,625ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,000 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,250 ಮತ್ತು ₹6,62,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,227 ಆಗಿದ್ದರೆ, ಎಂಟು ಗ್ರಾಂ ಬೆಲೆ ₹57,816 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,270 ಮತ್ತು ₹7,22,700 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹82.50, ಎಂಟು ಗ್ರಾಂ ₹660 ಮತ್ತು 10 ಗ್ರಾಂ ₹825ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,250 ಮತ್ತು 1 ಕಿಲೋಗ್ರಾಂಗೆ ₹82,500 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ66,40072,420
ಮುಂಬಯಿ66,250 72,270
ಬೆಂಗಳೂರು66,250 72,270
ಚೆನ್ನೈ67,10073,200

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಚಿನ್ನ ಕೊಳ್ಳೋಕೆ ಇಂದು ಸುಸಮಯ! 24 ಕ್ಯಾರಟ್‌ ಬಂಗಾರಕ್ಕೆ ₹1530 ಇಳಿಕೆ!

Continue Reading

Lok Sabha Election 2024

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

ಏಪ್ರಿಲ್‌ 26ರಂದು‌ ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಯ ಮತದಾನ (Lok Sabha Election 2024) ನಡೆಯಲಿದೆ. ಈ ನಿಟ್ಟಿನಲ್ಲಿ ಸಾರ್ವತ್ರಿಕ ರಜೆ ಇರಲಿದ್ದು, ಮತದಾನವನ್ನು ಮತದಾರರು ತಪ್ಪಿಸಬಾರೆಂದು ಪ್ರವಾಸಿ ತಾಣಗಳ ಪ್ರವೇಶಕ್ಕೆ ನಿಷೇದ ಹೇರಲಾಗಿದೆ. ಗುರುವಾರ ಸಂಜೆಯಿಂದಲೇ ನಂದಿ ಬೆಟ್ಟ ಕ್ಲೋಸ್‌ ಆಗಲಿದ್ದು, ಬನ್ನೇರುಘಟ್ಟ ಉದ್ಯಾನವನಕ್ಕೂ (Bannerghatta National Park) ನಿಷೇಧಿಸಲಾಗಿದೆ.

VISTARANEWS.COM


on

By

Lok sabha election 2024
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಲೋಕಸಭೆ ಚುನಾವಣೆ (Lok sabha Election 2024) ಹಿನ್ನೆಲೆಯಲ್ಲಿ ಶೇ 100ಕ್ಕೆ 100ರಷ್ಟು ಮತದಾನ (Voting) ಆಗಬೇಕೆಂದು, ಚುನಾವಣಾ ಆಯೋಗ ನಾನಾ ಕಸರತ್ತುಗಳನ್ನು ಮಾಡುತ್ತಿದೆ. ಸದ್ಯ ಚುನಾವಣಾ ಆಯೋಗಕ್ಕೆ ಸಾಥ್‌ ನೀಡಿರುವ ನಂದಿ ಹಿಲ್ಸ್‌ (Nandi hills) ಮತ್ತು ಬನ್ನೇರುಘಟ್ಟ ಜೈವಿಕ ಉದ್ಯಾನವನ (Bannerghatta National Park) ಆಡಳಿತ ಮಂಡಳಿ ಮತದಾನದ ದಿನದಂದು ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಿದೆ.

ಲೋಕಸಭಾ ಚುನಾವಣೆ (Lok Sabha Election 2024) ಸಂಬಂಧ ರಾಜಕೀಯ ಪಕ್ಷಗಳಂತೆ ಚುನಾವಣಾ ಆಯೋಗವೂ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇನ್ನು ಕರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ಮತದಾನ ನಡೆಯುವ (Voting Day) ಆ ಎರಡು ದಿನವೂ ಸಾರ್ವತ್ರಿಕ ರಜೆಯನ್ನು (Government Holiday) ಘೋಷಿಸಲಾಗಿದೆ. ಸರ್ಕಾರಿ ನೌಕರರಿಗೆ ವೇತನ ಸಹಿತ ರಜೆಯನ್ನು (Paid leave) ಘೋಷಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.

ಏಪ್ರಿಲ್ 26 ರಂದು ಅಂದರೆ ನಾಳೆ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. 2ನೇ ಹಂತದ ಮತದಾನವು ಮೇ 7ರಂದು ನಡೆಯಲಿದೆ. ಈ ದಿನಗಳಂದು ಎಲ್ಲ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಎಲ್ಲ ವ್ಯಾವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಕಾಯಂ ಆಗಿ ಹಾಗೂ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ.

ರಜೆ ಸಿಕ್ಕ ಖುಷಿಯಲ್ಲಿ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗದೆ ಪ್ರವಾಸಕ್ಕೆ ತೆರಳುವ ಸಾಧ್ಯತೆ ಇದೆ. ಹೀಗಾಗಿ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಝೂ, ಸಫಾರಿ ಮತ್ತು ಚಿಟ್ಟೆ ಪಾರ್ಕ್ ಪ್ರವಾಸಿಗರ ವೀಕ್ಷಣೆಗೆ ಲಭ್ಯವಿರುವುದಿಲ್ಲ. ಏಪ್ರಿಲ್‌ 26ರಂದು ಮತದಾನ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ರಜೆ ಘೋಷಿಸಲಾಗಿದೆ. ಲೋಕಸಭಾ ಚುನಾವಣೆಯ ಮತದಾನದಲ್ಲಿ ಜನರು ಸಕ್ರಿಯವಾಗಿ ಭಾಗಿಯಾಗಲೆಂದು ರಜೆ ಘೋಷಣೆ ಮಾಡಲಾಗಿದೆ.

ಮತದಾನದ ಪ್ರಮಾಣ ಹೆಚ್ಚಳ ಮಾಡುವ ದೃಷ್ಟಿಯಿಂದ ಏಪ್ರಿಲ್‌ 26ರಂದು ಬನ್ನೇರುಘಟ್ಟ ಪಾರ್ಕ್‌ ರಜೆ ಇರಲಿದೆ. 26 ಬದಲಾಗಿ ಏಪ್ರಿಲ್‌ 30ರಂದು ಪಾರ್ಕ್‌ ತೆರೆಯಲಿದೆ. ಬನ್ನೇರುಘಟ್ಟ ಪಾರ್ಕ್‌ ಪ್ರತಿ ಮಂಗಳವಾರ ರಜೆ ಇರುತ್ತಿತ್ತು. ಆದರೆ 26ರ ರಜೆಯನ್ನು ಸರಿದೂಗಿಸುವ ಸಲುವಾಗಿ ಏಪ್ರಿಲ್‌ 30ರಂದು ಪ್ರವಾಸಿಗರ ವೀಕ್ಷಣೆಗೆ ಲಭ್ಯ ಇರಲಿದೆ.

ಇದನ್ನೂ ಓದಿ: Voter ID: ವೋಟರ್‌ ಐಡಿ ಕಾರ್ಡ್‌ ಸಿಕ್ಕಿಲ್ಲವೆ? ಡೋಂಟ್‌ ವರಿ. ಈ 12 ದಾಖಲೆಗಳಲ್ಲಿ ಒಂದಿದ್ದರೆ ಸಾಕು!

ಏ.25ರ ಸಂಜೆಯಿಂದಲೇ ನಂದಿ ಬೆಟ್ಟ ಕ್ಲೋಸ್‌

ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು (ಏ.25) ಸಂಜೆ ಐದು ಗಂಟೆಯಿಂದ‌ ನಂದಿ ಬೆಟ್ಟಕ್ಕೆ ನಿಷೇಧ ಹೇರಲಾಗಿದೆ. ನಂದಿಗಿರಿಧಾಮ ನಿಷೇಧ ಏರಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶ ಹೊರಡಿಸಿದ್ದಾರೆ.

ಗುರುವಾರ ಸಂಜೆ 5 ಗಂಟೆಯಿಂದ ಶುಕ್ರವಾರ ಸಂಜೆ 7 ಗಂಟೆವರೆಗೂ ನಂದಿ ಹಿಲ್ಸ್ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧವಿದೆ. ಮತದಾನಕ್ಕೆಂದು ರಜೆ ಜತೆಗೆ ವೀಕೆಂಡ್ ಇರುವುದರಿಂದ ಮತದಾನ ಬಿಟ್ಟು ನಂದಿ ಹಿಲ್ಸ್‌ಗೆ ಮೋಜು ಮಸ್ತಿ ಮಾಡಲು ಪ್ರವಾಸಿಗರ ದಂಡು ಬರುತ್ತದೆ. ಇದನ್ನೂ ತಪ್ಪಿಸಲು ವಿಶ್ವವಿಖ್ಯಾತ ನಂದಿಗಿರಿಧಾಮದ ಪ್ರವೇಶ ಬಂದ್‌ ಮಾಡಲಾಗುತ್ತಿದೆ.

ಏಪ್ರಿಲ್‌ 26ರಂದು ಮತದಾನ ನಡೆಯುವ ಕ್ಷೇತ್ರಗಳು: ದಕ್ಷಿಣ ಕರ್ನಾಟಕ

1.ಉಡುಪಿ-ಚಿಕ್ಕಮಗಳೂರು (ಸಾಮಾನ್ಯ)
2.ಹಾಸನ (ಸಾಮಾನ್ಯ)
3.ದಕ್ಷಿಣ ಕನ್ನಡ (ಸಾಮಾನ್ಯ)
4.ಚಿತ್ರದುರ್ಗ (ಪರಿಶಿಷ್ಟ ಜಾತಿ ಮೀಸಲು)
5. ತುಮಕೂರು (ಸಾಮಾನ್ಯ)
6.ಮಂಡ್ಯ (ಸಾಮಾನ್ಯ)
7.ಮೈಸೂರು-ಕೊಡಗು (ಸಾಮಾನ್ಯ)
8.ಚಾಮರಾಜನಗರ (ಪರಿಶಿಷ್ಟ ಜಾತಿ ಮೀಸಲು)
9. ಬೆಂಗಳೂರು ಗ್ರಾಮಾಂತರ (ಸಾಮಾನ್ಯ)
10 ಬೆಂಗಳೂರು ಉತ್ತರ (ಸಾಮಾನ್ಯ)
11. ಬೆಂಗಳೂರು ಕೇಂದ್ರ (ಸಾಮಾನ್ಯ)
12. ಬೆಂಗಳೂರು ದಕ್ಷಿಣ (ಸಾಮಾನ್ಯ)
13.ಚಿಕ್ಕಬಳ್ಳಾಪುರ (ಸಾಮಾನ್ಯ)
14.ಕೋಲಾರ (ಪರಿಶಿಷ್ಟ ಜಾತಿ ಮೀಸಲು)

Lok Sabha Election 2024 Karnataka declares 2 day general holiday
Lok Sabha Election 2024 Karnataka declares 2 day general holiday

ಮೇ 7ರಂದು ಚುನಾವಣೆ ನಡೆಯಲಿರುವ ಕ್ಷೇತ್ರಗಳು: ಉತ್ತರ ಕರ್ನಾಟಕ

1.ಚಿಕ್ಕೋಡಿ (ಸಾಮಾನ್ಯ)
2.ಬೆಳಗಾವಿ (ಸಾಮಾನ್ಯ)
3.ಬಾಗಲಕೋಟೆ (ಸಾಮಾನ್ಯ)
4.ಬಿಜಾಪುರ (ಪರಿಶಿಷ್ಟ ಜಾತಿ ಮೀಸಲು)
5.ಕಲಬುರಗಿ (ಪರಿಶಿಷ್ಟ ಜಾತಿ ಮೀಸಲು)
6.ರಾಯಚೂರು(ಪರಿಶಿಷ್ಟ ಪಂಗಡ ಮೀಸಲು)
7.ಬೀದರ್ (ಸಾಮಾನ್ಯ)
8.ಕೊಪ್ಪಳ (ಸಾಮಾನ್ಯ)
9.ಬಳ್ಳಾರಿ (ಪರಿಶಿಷ್ಟ ಪಂಗಡ ಮೀಸಲು)
10. ಹಾವೇರಿ (ಸಾಮಾನ್ಯ)
11. ಧಾರವಾಡ (ಸಾಮಾನ್ಯ)
12.ಉತ್ತರ ಕನ್ನಡ (ಸಾಮಾನ್ಯ)
13.ದಾವಣಗೆರೆ (ಸಾಮಾನ್ಯ)
14.ಶಿವಮೊಗ್ಗ (ಸಾಮಾನ್ಯ)

Lok Sabha Election 2024 Karnataka declares 2 day general holiday

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Aircraft Crash
ದೇಶ3 mins ago

Aircraft Crash: ಭಾರತೀಯ ವಾಯುಪಡೆಯ ವಿಮಾನ ಪತನ; ಭಾಗಗಳು ಸುಟ್ಟು ಭಸ್ಮ

Lok Sabha Election 2024 vote for better future and 98 year old woman dies when returning officer arrives at home to cast her vote
ಪ್ರಮುಖ ಸುದ್ದಿ14 mins ago

Lok Sabha Election 2024: ಮತ ಹಾಕಿಸಿಕೊಳ್ಳಲು ಚುನಾವಣಾಧಿಕಾರಿಗಳು ಮನೆಗೆ ಬಂದಾಗಲೇ 98ರ ವೃದ್ಧೆ ಸಾವು!

Horlicks Label
ದೇಶ17 mins ago

Horlicks Label: ಹಾರ್ಲಿಕ್ಸ್‌ ಇನ್ನು ಹೆಲ್ತ್‌ ಡ್ರಿಂಕ್ಸ್‌ ಅಲ್ಲ ಎಂದ ಹಿಂದುಸ್ತಾನ್‌ ಯುನಿಲಿವರ್;‌ ಕಾರಣ ಏನು?

Salaar Movie In star suvarna
ಕಿರುತೆರೆ18 mins ago

Salaar Movie: ಕಿರುತೆರೆಗೆ ಬಂದೇ ಬಿಡ್ತು ಬ್ಲಾಕ್ ಬಸ್ಟರ್ ಸಿನಿಮಾ ‘ಸಲಾರ್’!

Ranbir Kapoor trainer shares transformation Of Ranbir
ಬಾಲಿವುಡ್20 mins ago

Ranbir Kapoor: ಸಖತ್ ಫಿಟ್ ಆ್ಯಂಡ್ ಫೈನ್​ ಆದ ರಣಬೀರ್! ಫೋಟೊ ಶೇರ್‌ ಮಾಡಿದ ಟ್ರೈನರ್‌!

Road Accident in Chamarajanagar
ಚಾಮರಾಜನಗರ29 mins ago

Road Accident : ಶಾಸಕ ಎಆರ್ ಕೃಷ್ಣಮೂರ್ತಿ ಕಾರು ಅಪಘಾತ; ಚಲಿಸುತ್ತಿದ್ದಾಗಲೇ ಕಾರ್‌ ಟೈರ್‌ ಸ್ಫೋಟ

IPL 2024
ಕ್ರೀಡೆ45 mins ago

IPL 2024: ಸಿಕ್ಸರ್​ನಿಂದ ಗಾಯಗೊಂಡ ಕ್ಯಾಮೆರಮನ್​ಗೆ ವಿಡಿಯೊ ಮೂಲಕ ಕ್ಷಮೆ ಕೇಳಿದ ರಿಷಭ್​ ಪಂತ್​​

gold rate today 34
ಚಿನ್ನದ ದರ49 mins ago

Gold Rate Today: ಬಂಗಾರದ ಮಾರುಕಟ್ಟೆಯಲ್ಲಿ ದರ ಇಂದು ತುಸು ಇಳಿಕೆ; 24Kಗೆ ಎಷ್ಟಿದೆ ನೋಡಿ

Lok sabha election 2024
Lok Sabha Election 20241 hour ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

leopard Attack
ಕ್ರೀಡೆ1 hour ago

leopard Attack: ಚಿರತೆ ದಾಳಿ; ಜಿಂಬಾಬ್ವೆ ಮಾಜಿ ಕ್ರಿಕೆಟಿಗನಿಗೆ ತೀವ್ರ ಗಾಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ5 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20245 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌